Sadguru Jaggi Vasudev: ಸದ್ಗುರು ಆರೋಗ್ಯದ ಬಗ್ಗೆ ಮಗಳು ರಾಧೆ ಹೇಳಿದ್ದೇನು? - Vistara News

ಪ್ರಮುಖ ಸುದ್ದಿ

Sadguru Jaggi Vasudev: ಸದ್ಗುರು ಆರೋಗ್ಯದ ಬಗ್ಗೆ ಮಗಳು ರಾಧೆ ಹೇಳಿದ್ದೇನು?

ನಿನ್ನೆ ಮೆದುಳಿನಲ್ಲಿ ಮಾರಕ ರಕ್ತಸ್ರಾವವನ್ನು ಅನುಭವಿಸಿದ ನಂತರ ಸದ್ಗುರು (Sadguru Jaggi Vasudev) ದಿಲ್ಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

VISTARANEWS.COM


on

Sadguru Jaggi Vasudev radhe jaggi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ನಿನ್ನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮೆದುಳಿನ ತುರ್ತು ಶಸ್ತ್ರಚಿಕಿತ್ಸೆಗೆ (Brain Surgery) ಒಳಗಾಗಿರುವ ಆಧ್ಯಾತ್ಮಿಕ ನಾಯಕ (spiritual leader) ಸದ್ಗುರು ಜಗ್ಗಿ ವಾಸುದೇವ್ (Sadguru Jaggi Vasudev) ಅವರ ಆರೋಗ್ಯದ (Sadguru Health updates) ಬಗ್ಗೆ ಮಹತ್ವದ ಸಂದೇಶವನ್ನು ಅವರ ಪುತ್ರಿ ರಾಧೆ ಜಗ್ಗಿ (Radhe Jaggi) ಇನ್‌ಸ್ಟಾಗ್ರಾಮ್‌ನಲ್ಲಿ (instagram) ನೀಡಿದ್ದಾರೆ.

ಸದ್ಗುರು (Sadguru Jaggi Vasudev) ಆರೋಗ್ಯವಾಗಿದ್ದಾರೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಧೆ ಹೇಳಿದ್ದಾರೆ. “ಆರೋಗ್ಯ ವಿಚಾರಿಸುತ್ತಿರುವವರಿಗೆ: ಸದ್ಗುರುಗಳು ಚೆನ್ನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ರಾಧೆ ಜಗ್ಗಿ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಬುಧವಾರ ತಮ್ಮ ತಂದೆಯ ಆರೋಗ್ಯದ ಕುರಿತು ಅಪ್‌ಡೇಟ್ ಹಂಚಿಕೊಂಡಿದ್ದಾರೆ.

ನಿನ್ನೆ ಮೆದುಳಿನಲ್ಲಿ ಮಾರಕ ರಕ್ತಸ್ರಾವವನ್ನು ಅನುಭವಿಸಿದ ನಂತರ ಸದ್ಗುರು ದಿಲ್ಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ರಾಧೆ ಅವರ ಅಪ್‌ಡೇಟ್‌ಗೂ ಮುನ್ನ ಸದ್ಗುರು ತಮ್ಮ ಆಸ್ಪತ್ರೆಯ ಹಾಸಿಗೆಯಿಂದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದ ವೀಡಿಯೊ ವೈರಲ್‌ ಆಗಿತ್ತು.

“ಅಪೋಲೋ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕರು ಸಮಸ್ಯೆ ಹುಡುಕೋಣ ಎಂದು ನನ್ನ ತಲೆಬುರುಡೆಯನ್ನು ತೆರೆದರು. ಆದರೆ ಏನೂ ಕಂಡುಬರಲಿಲ್ಲ- ಅದು ಸಂಪೂರ್ಣವಾಗಿ ಖಾಲಿಯಾಗಿತ್ತು. ಆದ್ದರಿಂದ ಅವರು ಅದನ್ನು ಬಿಟ್ಟುಕೊಟ್ಟು ಮತ್ತೆ ಹೊಲಿಗೆ ಹಾಕಿದರು. ನಾನು ಈಗ ದೆಹಲಿಯಲ್ಲಿ ನಾನು ತೇಪೆಹಾಕಿದ ತಲೆಬುರುಡೆಯೊಂದಿಗೆ ಇದ್ದೇನೆ, ಆದರೆ ಮೆದುಳು ಯಾವುದೇ ಹಾನಿಗೊಳಗಾಗಿಲ್ಲ” ಎಂದು ಸದ್ಗುರು ವಿನೋದಮಯವಾಗಿ ಅದರಲ್ಲಿ ಹೇಳಿದ್ದರು.

ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಸದ್ಗರುವಿನೊಂದಿಗೆ ಮಾತನಾಡಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. “ಸದ್ಗುರು ಅವರೊಂದಿಗೆ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದೇನೆ” ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೋದಿಯವರ ಸಂದೇಶಕ್ಕೆ ಪ್ರತಿಕ್ರಿಯಿಸಿದ ಸದ್ಗುರು, “ಪ್ರೀತಿಯ ಪ್ರಧಾನ ಮಂತ್ರಿಜೀ, ನನ್ನ ಬಗ್ಗೆ ಕಳವಳ ಪಡಬೇಡಿ. ನಿಮಗೆ ಮುನ್ನಡೆಸಲು ಒಂದು ದೇಶವೇ ಇದೆ. ನಿಮ್ಮ ಕಾಳಜಿಯಿಂದ ನನ್ನ ಹೃದಯತುಂಬಿದೆ. ನಾನು ಚೇತರಿಕೆಯ ಹಾದಿಯಲ್ಲಿದ್ದೇನೆ. ಧನ್ಯವಾದ” ಎಂದಿದ್ದಾರೆ.

ಆಸ್ಪತ್ರೆ ನೀಡಿದ ಮಾಹಿತಿ

ದೆಹಲಿಯ ಇಂದ್ರಪ್ರಸ್ಥ ಅಪೋಲೋ ಹಾಸ್ಪಿಟಲ್ಸ್‌ನ ಹಿರಿಯ ಸಲಹೆಗಾರ, ನರರೋಗ ತಜ್ಞ ಡಾ. ವಿನಿತ್ ಸೂರಿ ಅವರ ಬಳಿ ಮಾರ್ಚ್ 15ರ ಮಧ್ಯಾಹ್ನ 3:45ರ ಸುಮಾರಿಗೆ ಸದ್ಗುರು ತೀವ್ರ ತಲೆನೋವಿನ ಕಾರಣ ಸಮಾಲೋಚಿಸಿದ್ದರು. ವಿನಿತ್ ಸೂರಿ ಅವರು ತಕ್ಷಣವೇ ಇದು ಸಬ್-ಡ್ಯೂರಲ್ ಹೆಮಟೋಮಾ ಇರಬಹುದು ಎಂದು ಶಂಕಿಸಿದ್ದರು. ತುರ್ತು MRI ಸ್ಕ್ಯಾನ್‌ಗೆ ಸಲಹೆ ನೀಡಿದ್ದರು. ಅದೇ ದಿನ ಸಂಜೆ 4:30ಕ್ಕೆ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಸದ್ಗುರು ಮೆದುಳಿನ ಎಂಆರ್‌ಐ ಮಾಡಿಸಿಕೊಂಡರು. ಮೆದುಳಿನಲ್ಲಿ ಭಾರೀ ರಕ್ತಸ್ರಾವ ಕಂಡುಬಂದಿತ್ತು.

24-48 ಗಂಟೆಗಳ ಅವಧಿಯ ಒಂದು ತಾಜಾ ರಕ್ತಸ್ರಾವದ ಜೊತೆಗೆ, 3-4 ವಾರಗಳ ಅವಧಿಯ ಹಿಂದಿನ ದೀರ್ಘಕಾಲದ ರಕ್ತಸ್ರಾವದ ಗುರುತೂ ಇತ್ತು. ಸದ್ಗುರುಗಳಿಗೆ ತಕ್ಷಣವೇ ಆಸ್ಪತ್ರೆಗೆ ಸೇರಲು ಸಲಹೆ ನೀಡಲಾಯಿತು. ಆದರೆ ಅವರು ಮಾರ್ಚ್ 15ರಂದು ಸಂಜೆ 6 ಗಂಟೆಗೆ ಮತ್ತು ಮಾರ್ಚ್ 16ರಂದು ಇಂಡಿಯಾ ಟುಡೇ ಸಮಾವೇಶದಲ್ಲಿ ಭಾಗವಹಿಸಲಿದ್ದರು.

ಡಾ. ಸೂರಿ ಅವರ ಪ್ರಕಾರ, ಸದ್ಗುರು “ನನ್ನ ಕಳೆದ 40 ವರ್ಷಗಳಲ್ಲಿ ನಾನು ಒಂದೇ ಒಂದು ಸಭೆಯನ್ನು ತಪ್ಪಿಸಿಲ್ಲ” ಎಂದು ಹೇಳಿದರು. ತೀವ್ರವಾದ ನೋವಿನ ನಡುವೆಯೂ ಅವರು ನೋವು ನಿವಾರಕಗಳ ಬೆಂಬಲದಿಂದ ಸಭೆಯಲ್ಲಿ ಭಾಗವಹಿಸಿದರು.

ಮಾರ್ಚ್ 17ರಂದು ಸದ್ಗುರುವಿಗೆ ಎಡಗಾಲಿನ ಊತ, ಪ್ರಜ್ಞೆಯಲ್ಲಿ ಕುಸಿತ, ಪುನರಾವರ್ತಿತ ವಾಂತಿ ಕಂಡುಬಂತು. ತಲೆನೋವು ತೀವ್ರವಾಗಿ ಉಲ್ಬಣಗೊಂಡಿತು. ಅಂತಿಮವಾಗಿ ಡಾ. ವಿನಿತ್ ಸೂರಿ ಅವರ ಆರೈಕೆಯಲ್ಲಿ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. “ಇದೀಗ ನೀವು ಸರ್ಜರಿ ನಿರ್ವಹಿಸುವ ಸಮಯ” ಎಂದು ಸದ್ಗುರು ಹೇಳಿದರು.

ಮೆದುಳಿನ ಊತ ಮಾರಣಾಂತಿಕವಾಗಿ ಬೆಳೆದುದನ್ನು ತುರ್ತು CT ಮುಖ್ಯಸ್ಥರು ಖಚಿತಪಡಿಸಿದರು. ಡಾ. ವಿನಿತ್ ಸೂರಿ, ಡಾ. ಪ್ರಣವ್ ಕುಮಾರ್, ಡಾ. ಸುಧೀರ್ ತ್ಯಾಗಿ ಮತ್ತು ಡಾ. ಎಸ್ ಚಟರ್ಜಿ ಅವರನ್ನೊಳಗೊಂಡ ವೈದ್ಯರ ತಂಡವು ಸದ್ಗುರುಗಳ ಸರ್ಜರಿ ನಿರ್ವಹಿಸಿತು. ತಲೆಬುರುಡೆಯಲ್ಲಿನ ರಕ್ತಸ್ರಾವವನ್ನು ತೆಗೆದುಹಾಕಲು ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆಯ ನಂತರ ಸದ್ಗುರುಗಳನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ವೈದ್ಯರ ಪ್ರಕಾರ ಸದ್ಗುರು ಆರೋಗ್ಯದಲ್ಲಿ ಸ್ಥಿರವಾದ ಪ್ರಗತಿಯನ್ನು ತೋರಿಸಿದ್ದಾರೆ. ಅವರ ಮೆದುಳು, ದೇಹ ಮತ್ತು ಪ್ರಮುಖ ಆರೋಗ್ಯ ಸೂಚಿಗಳು ಸುಧಾರಿಸಿವೆ.

ಇದನ್ನೂ ಓದಿ: Sadguru Jaggi Vasudev: ಆಸ್ಪತ್ರೆ ಬೆಡ್‌ನಲ್ಲಿ ಸದ್ಗುರು; ದಿಗ್ಭ್ರಾಂತರಾದ ಕಂಗನಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Terrorist Arrested: ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ ಸೆರೆಯಾಗಿದೆ. ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

VISTARANEWS.COM


on

Terrorist Arrested
Koo

ಬೆಂಗಳೂರು: ನಗರದ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಎನ್‌ಐಎ ಬಂಧಿಸಿದೆ. 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ (Terrorist Arrested) ಸೆರೆಯಾಗಿದೆ.

ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿ ಇರುವ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ.

ಇನ್ನು ಕೊಲಂಬೋದಲ್ಲಿರುವ ಪಾಕಿಸ್ತಾನಿ ಹೈ ಕಮೀಷನ್‌ನಲ್ಲಿ ಉದ್ಯೋಗಿಯಾಗಿರುವವನ ಜತೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರ, ಪಾಕಿಸ್ತಾನಿ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿಯ ಆಣತಿ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ. ಜತೆಗೆ ಪಾಕಿಸ್ತಾನಿ ಬೇಹುಗಾರರಿಗೆ ನೂರುದ್ದೀನ್ ಹಣ ಸಹಾಯ ಮಾಡುತ್ತಿದ್ದ. ಸದ್ಯ ಮೈಸೂರಿನಲ್ಲಿ ವಶಕ್ಕೆ ಪಡೆದ ಶಂಕಿತನಿಂದ ಒಂದು ಡ್ರೋನ್, ಮೊಬೈಲ್, ಲ್ಯಾಪ್ ಟಾಪ್, ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಬೇಹುಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ನೂರುದ್ದೀನ್ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) 5 ಲಕ್ಷ ಬಹುಮಾನ ಘೋಷಿಸಿತ್ತು. 2023ರ ಆಗಸ್ಟ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಚೆನ್ನೈನ NIA ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದಾಗ ನೂರುದ್ದೀನ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ | Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಶ್ರೀಲಂಕಾದ ಪ್ರಜೆ ಮುಹಮ್ಮದ್‌ ಸಕೀರ್‌ ಹುಸೇನ್ ಮತ್ತು ಕೊಲಂಬೋದಲ್ಲಿನ ಪಾಕಿಸ್ತಾನ ಹೈಕಮೀಷನ್‌ ಕಚೇರಿ ಉದ್ಯೋಗಿ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೈರ್ ಸಿದ್ದಿಕ್ ಸೇರಿ ಚೆನ್ನೈನ ಯುಎಸ್ ಕಾನ್ಸುಲೇಟ್‌ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಆ ಸಂದರ್ಭದಲ್ಲಿ ಆರೋಪಿ ನೂರುದ್ದೀನ್‌, ಪಾಕಿಸ್ತಾನಿ ಪ್ರಜೆಯ ಆದೇಶದ ಮೇರೆಗೆ ನಕಲಿ ನೋಟುಗಳನ್ನು ಪೂರೈಸುವ ಮೂಲಕ ದೇಶ ವಿರೋಧಿ ಬೇಹುಗಾರಿಕೆ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುತ್ತಿದ್ದ ಎಂದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ.

ನೂರುದ್ದೀನ್ ತಲೆಮರೆಸಿಕೊಂಡ ನಂತರ ಸ್ಥಗಿತಗೊಂಡಿದ್ದ ಆತನ ವಿರುದ್ಧದ ವಿಚಾರಣೆ ಈಗ ಪುನರಾರಂಭವಾಗಲಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.

Continue Reading

ದೇಶ

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

Monsoon 2024: ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ.

VISTARANEWS.COM


on

Monsoon 2024
Koo

ನವದೆಹಲಿ: ದೇಶಾದ್ಯಂತ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ (Karnataka) ವರುಣ ಕೃಪೆ ತೋರಿದ ಕಾರಣ (Rain News) ಬಿಸಿಲಿನಿಂದ ಕಂಗೆಟ್ಟಿದ್ದ ಜನ ನಿಟ್ಟುಸಿರು ಬಿಡುವಂತಾಗಿದೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ. ಬಿತ್ತನೆ ಮಾಡಲು ರೈತರು ಜಮೀನನ್ನು ಹದಗೊಳಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ರೈತರಿಗೆ ಹವಾಮಾನ ಇಲಾಖೆಯು (Met Department) ಸಿಹಿ ಸುದ್ದಿ ನೀಡಿದೆ. ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆಯು ದೇಶದ ಕೃಷಿಯ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ, ಈ ಬಾರಿ ವಾಡಿಕೆಗಿಂತ ಒಂದು ದಿನ ಮೊದಲೇ ಅಂದರೆ, ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

monsoon rain

ರಾಜ್ಯದಲ್ಲಿ ನಾಳೆಯೂ ಭರ್ಜರಿ ಮಳೆ

ಮೇ 16ರಂದು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಮೇ 16ರಂದು ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (50-60 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ. ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಮೇಲೆ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇಲ್ಲ.

ಇದನ್ನೂ ಓದಿ: Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Continue Reading

ಕ್ರೀಡೆ

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

DP Manu: ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇಲ್ಲಿ ತೋರಿದ ಪ್ರದರ್ಶನವು ಇಂದು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

VISTARANEWS.COM


on

DP Manu
Koo

ಬೆಂಗಳೂರು: ಬುಧವಾರ ನಡೆದ ಫೆಡರೇಷನ್ ಕಪ್‌ನಲ್ಲಿ(Federation Cup 2024) ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಅವರಿಗೆ ಬೆವರಿಳಿಸುಂತೆ ಮಾಡಿ ಸಣ್ಣ ಅಂತರದಿಂದ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕ ಗೆದ್ದ ಡಿ.ಪಿ ಮನು(DP Manu) ಅಪ್ಪಟ ಕನ್ನಡಿಗ. ಇವರ ಪೂರ್ಣ ಹೆಸರು ದೇವರಕೇಶವಿ ಪ್ರಕಾಶ ಮನು (ಡಿ.ಪಿ. ಮನು ಎಂದೇ ಖ್ಯಾತಿ). ಈಗಾಗಲೇ ಇವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಇದೇ ರೀತಿಯ ಪ್ರದರ್ಶನ ತೋರಿದರೆ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಇನ್ನೂ ಉತ್ತಮ ಸಾಧನೆ ಮಾಡುವುದರಲ್ಲಿ ಎರಡು ಮಾತಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. 

ಡಿ.ಪಿ. ಮನು ಹಿನ್ನೆಲೆ


ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ತಂದೆ ಪ್ರಕಾಶ ಹಾಗೂ ತಾಯಿ ಸುಜಾತಾ. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇದೇ ವೇಳೆ ಮನು ಅವರು ಅಂತಾರಾಜ್ಯ, ಜೂನಿಯರ್‌ ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡರು. ಆಳ್ವಾಸ್‌ ಕಾಲೇಜಿನಲ್ಲಿ ಅವರು ಪಡೆದ ತರಬೇತಿ, ನೀಡಿದ ಪ್ರದರ್ಶನವು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

ಕಳೆದ ವರ್ಷ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಮನು (84.14 ಮೀ.) 6ನೇ ಸ್ಥಾನ ಪಡೆದು ಭಾರೀ ಸಂಚಲನ ಮೂಡಿಸಿದ್ದರು. ಅಲ್ಲದೆ 2023ರಲ್ಲಿ ನಡೆದ ಏಶ್ಯನ್​ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆದ ಫೆಡರೇಷನ್ ಕಪ್‌ನಲ್ಲಿ (82.06 ಮೀ) ಬೆಳ್ಳಿ ಗೆದ್ದಿದ್ದಾರೆ. ಮೂರನೇ ಸುತ್ತಿನ ವರೆಗೂ ಅಗ್ರಸ್ಥಾನ ಕಾಯ್ದುಕೊಂಡು ಅನುಭವಿ ನೀರಜ್​ಗೆ ಒಂದು ಕ್ಷಣ ಬೆವರಿಳಿಸುವಂತೆ ಮಾಡಿದ್ದು ನಿಜಕ್ಕೂ ಸಣ್ಣ ಮಾತಲ್ಲ. ನೀರಜ್​ ಗೆಲುವಿನ ಅಂತರ 82.27 ಮೀ.

ಇದನ್ನೂ ಓದಿ Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

ಕಾಶಿನಾಥ ನಾಯ್ಕ್ ಗರಡಿಯಲ್ಲಿ ಬೆಳೆದ ಪ್ರತಿಭೆ


ಮನು ಅವರು ಕಾಶಿನಾಥ ನಾಯ್ಕ್​ ಅವರ ಗರಡಿಯಲ್ಲಿ ಬೆಳೆದು ಬಂದ ಪ್ರತಿಭೆ. 2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಅವರ ಪರಿಚಯವಾಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು. ಇದೀಗ ವಿಶ್ವ ಚಾಂಪಿಯನ್​ ನೀರಜ್​ಗೆ ತೀವ್ರ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾರೆ. ನೀರಜ್​ ಕೂಡ ಕಾಶಿನಾಥ ನಾಯ್ಕ್ ಮಾರ್ಗದರ್ಶನದಲ್ಲೇ ಬೆಳೆದು ಬಂದ ಪ್ರತಿಭೆಯಾಗಿದ್ದಾರೆ. ಒಟ್ಟಿನಲ್ಲಿ ಕನ್ನಡಿಗರೊಬ್ಬರು ಜಾವೆಲಿನ್‌ ಥ್ರೋ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು, ಅವರು ಒಲಿಂಪಿಕ್ಸ್‌ಗೂ ಆಯ್ಕೆಯಾಗಲಿ, ಅಲ್ಲೂ ರಾಜ್ಯ, ದೇಶದ ಘನತೆ ಹೆಚ್ಚಿಸಲಿ ಎಂದು ಆಶಿಸೋಣ.


ಮನು ಮಾಡಿದ ಸಾಧನೆಗಳು

  1. 1. 2023ರ ಜುಲೈನಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಬೆಳ್ಳಿ

    2. 2023ರಲ್ಲಿ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ 6ನೇ ಸ್ಥಾನ
  2. 3. 2024ರಲ್ಲಿ ನಡೆದ ಫೆಡರೇಷನ್ ಕಪ್‌ನಲ್ಲಿ ಬೆಳ್ಳಿ ಪದಕ

    4. 2022ರ ಜೂನ್‌ನಲ್ಲಿ ನಡೆದ ರಾಷ್ಟ್ರೀಯ ಅಂತಾರಾಜ್ಯ ಹಿರಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಚಿನ್ನದ ಪದಕ
  3. 5. 2023ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಚಿನ್ನ
  4. 6. 2022ರ ಏಪ್ರಿಲ್‌ನಲ್ಲಿ ಕೇರಳದ ತಿರುವನಂಪುರಂನಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಬಂಗಾರದ ಪದಕ
  5. 7. 2022ರ ಆಗಸ್ಟ್‌ನಲ್ಲಿ ನಡೆದ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಐದನೇ ಸ್ಥಾನಕ್ಕೆ ತೃಪ್ತಿ
  6. 8. 2022ರ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ನಡೆದ ಇಂಡಿಯನ್‌ ನ್ಯಾಷನಲ್‌ ಗೇಮ್ಸ್‌ನಲ್ಲಿ ಚಿನ್ನ

Continue Reading

ವಿದೇಶ

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Robert Fico: ರಾಬರ್ಟ್‌ ಫಿಕೊ ಅವರ ಹೊಟ್ಟೆಗೆ ಗುಂಡು ತಗುಲಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೇ ಅಲ್ಲ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕಾರಣ ಬ್ಯಾನ್ಸ್‌ಕಾ ಬಿಸ್ಟ್ರಿಕಾ ಆಸ್ಪತ್ರೆಗೆ ಹೆಲಿಕಾಪ್ಟರ್‌ ಮೂಲಕ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

VISTARANEWS.COM


on

Robert Fico
Koo

ಬ್ರಾಟಿಸ್ಲಾವಾ: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ (Robert Fico) ಅವರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಂಡ್ಲೋವಾದಲ್ಲಿ (Handlova) ಸರ್ಕಾರಿ ಸಭೆಯೊಂದರಲ್ಲಿ ಪಾಲ್ಗೊಂಡು ಹೊರಬರುತ್ತಿರುವಾಗಲೇ ದುಷ್ಕರ್ಮಿಯು ಗುಂಡಿನ ದಾಳಿ ದಾಳಿ ನಡೆಸಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿಯು ರಾಬರ್ಟ್‌ ಫಿಕೊ ಅವರನ್ನು ರಕ್ಷಣೆ ಮಾಡಿದ್ದಾರೆ. ಇದಾದ ಬಳಿಕ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಬರ್ಟ್‌ ಫಿಕೊ ಅವರ ಹೊಟ್ಟೆಗೆ ಗುಂಡು ತಗುಲಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೇ ಅಲ್ಲ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕಾರಣ ಬ್ಯಾನ್ಸ್‌ಕಾ ಬಿಸ್ಟ್ರಿಕಾ ಆಸ್ಪತ್ರೆಗೆ ಹೆಲಿಕಾಪ್ಟರ್‌ ಮೂಲಕ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆದಾಗ್ಯೂ, ದಾಳಿ ಮಾಡಿರುವ ದುಷ್ಕರ್ಮಿ ಯಾರು? ಆತನ ಹೆಸರೇನು? ಯಾವ ಸಂಘಟನೆಗೆ ಸೇರಿದವನು? ದಾಳಿ ಮಾಡಿದ್ದೇಕೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಭೀಕರ ದಾಳಿಯ ವಿಡಿಯೊ ಇಲ್ಲಿದೆ

59 ವರ್ಷದ ರಾಬರ್ಟ್‌ ಫಿಕೊ ಅವರ ಮೇಲೆ ನಾಲ್ಕು ಗುಂಡು ಹಾರಿಸಲಾಗಿದೆ. ಒಂದು ಗುಂಡು ಅವರ ಹೊಟ್ಟೆಗೆ ತಗುಲಿದ ಕಾರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ರಾಬರ್ಟ್‌ ಫಿಕೊ ಶೀಘ್ರವೇ ಗುಣಮುಖರಾಗಲಿ ಎಂದು ಜನ ಪ್ರಾರ್ಥಿಸುತ್ತಿದ್ದಾರೆ. ದಾಳಿಯನ್ನು ಸ್ಲೊವಾಕಿಯಾ ಸರ್ಕಾರವೂ ದೃಢಪಡಿಸಿದೆ. “ರಾಬರ್ಟ್‌ ಫಿಕೊ ಅವರ ಮೇಲೆ ದಾಳಿ ನಡೆದಿರುವ ವಿಚಾರ ತಿಳಿದು ಬೇಸರವಾಯಿತು. ಅವರು ಶೀಘ್ರವೇ ಗುಣಮುಖರಾಗಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಸ್ಲೊವಾಕಿಯಾ ಅಧ್ಯಕ್ಷೆ ಜುಜಾನ ಕ್ಯಾಪುಟೋವಾ ಪೋಸ್ಟ್‌ ಮಾಡಿದ್ದಾರೆ.

ದಾಳಿ ಮಾಡಿದ ಆರೋಪಿಯ ಬಂಧನ.

ರಷ್ಯಾ ಪರ ನಿಲುವು ತಾಳಿದ್ದಕ್ಕೇ ದಾಳಿ?

ರಾಬರ್ಟ್‌ ಫಿಕೊ ಅವರು ರಷ್ಯಾ ಪರವಾಗಿ ನಿಲುವು ತಾಳಿ, ಉಕ್ರೇನ್‌ಅನ್ನು ವಿರೋಧಿಸಿದ್ದೇ ದಾಳಿ ನಡೆಸಲು ಕಾರಣ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, “ಉಕ್ರೇನ್‌ನಲ್ಲಿ 2022ರಿಂದ ಅಲ್ಲ, 2014ರಿಂದಲೂ ಯುದ್ಧ ನಡೆದಿದೆ. ಉಕ್ರೇನ್‌ನಲ್ಲಿರುವ ರಷ್ಯಾ ನಾಗರಿಕರನ್ನು ಭೀಕರವಾಗಿ ಕೊಲೆ ಮಾಡಿದ ಬಳಿಕ ಯುದ್ಧ ಆರಂಭವಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಉಕ್ರೇನ್‌ ಮೇಲೆ ರಷ್ಯಾ ದಾಳಿ ಮಾಡುತ್ತಲೇ ಇದೆ. ಇದಕ್ಕೆ ರಷ್ಯನ್ನರನ್ನು ಉಕ್ರೇನ್‌ ಕೊಂದಿದ್ದೇ ಕಾರಣ. ಉಕ್ರೇನ್‌ನಲ್ಲಿ ಆ ದೇಶದ ಸೇನೆ ವಿರುದ್ಧ ರಷ್ಯಾ ಪರವಾಗಿ ಅಮೆರಿಕವೂ ದಾಳಿ ಮಾಡುತ್ತಿದೆ” ಎಂದಿದ್ದರು. ಇದೇ ಕಾರಣಕ್ಕೆ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಇಬ್ಬರು ಶೂಟರ್‌ಗಳ ಬಂಧನ

Continue Reading
Advertisement
Terrorist Arrested
ಕರ್ನಾಟಕ3 mins ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ10 mins ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ16 mins ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ56 mins ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ1 hour ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ1 hour ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ2 hours ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ2 hours ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest2 hours ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ2 hours ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ14 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ17 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌