Nenapirali Prem: ’ಅಪ್ಪಾ ಐ ಲವ್ ಯೂ’ ಎಂದ  ಲವ್ಲಿ ಸ್ಟಾರ್ ಪ್ರೇಮ್! - Vistara News

ಸ್ಯಾಂಡಲ್ ವುಡ್

Nenapirali Prem: ’ಅಪ್ಪಾ ಐ ಲವ್ ಯೂ’ ಎಂದ  ಲವ್ಲಿ ಸ್ಟಾರ್ ಪ್ರೇಮ್!

Nenapirali Prem: ಸ್ಟಾರ್ ಪ್ರೇಮ್ ಹಾಗೂ ಟಗರು ಪುಟ್ಟಿ ಖ್ಯಾತಿಯ ಮಾನ್ವಿತ್ ಕಾಮತ್ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿರುವ ʻಅಪ್ಪಾ ಐ ಲವ್ ಯುʼ ಸಿನಿಮಾದ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

VISTARANEWS.COM


on

Nenapirali Prem appa I love You Film poster
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಹಳ ದಿನಗಳ ಬಳಿಕ ʻಲವ್ಲಿ ಸ್ಟಾರ್ ಪ್ರೇಮ್ʼ (Nenapirali Prem) ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ ಸಿನಿಮಾವೊಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ (manvita kamath) ಕೂಡ ನಟಿಸುತ್ತಿದ್ದಾರೆ. ಈ ಜೋಡಿ ಇದೇ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದೆ. ಆ ಸಿನಿಮಾದ ಹೆಸರು ‘ಅಪ್ಪಾ ಐ ಲವ್ ಯೂ’.

ಅಥರ್ವ್ ಆರ್ಯ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ‘ಅಪ್ಪಾ ಐ ಲವ್ ಯೂ’ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಏಪ್ರಿಲ್ 12ಕ್ಕೆ ಅಥರ್ವ್ ಎರಡನೇ ಪ್ರಯತ್ನಕ್ಕೆ ತೆರೆಗೆ ಬರುತ್ತಿದೆ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ. ಈ ಸಿನಿಮಾದಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದಾರೆ.

ಪ್ರೇಮ್ ಹಾಗೂ ಮಾನ್ವಿತಾ ಕಾಮತ್ ಜತೆಗೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್ ರಾವ್ , ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.

‘ಅಪ್ಪಾ ಐ ಲವ್ ಯೂ’ ಸಿನಿಮಾಗೆ (Nenapirali Prem) ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್‌ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, ಕೆ. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ. K.R.S ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ.

ಇದನ್ನೂ ಓದಿ: Dolly Dhananjay: ಸೂರ್ಯಕಾಂತಿ ನಾನು ಎಂದು ಕುಣಿದ ಲವ್ಲಿಸ್ಟಾರ್ ಪುತ್ರಿ!

ಸಿನಿಮಾ ಬಗ್ಗೆ ಈ ಮೊದಲು ಸಾಂಗ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರೇಮ್‌ ಮಾತನಾಡಿ ʻʻನೆನಪಿರಲಿ ಪ್ರೇಮ್ ಮಾತನಾಡಿ, ʻʻಸಿನಿಮಾದಲ್ಲಿ 22 ವರ್ಷ ಪೂರೈಸಿದ್ದೇನೆ ಅಂದರೆ ಅದು ನಮ್ಮ ತಂದೆಯಿಂದ ಎಂದು ಹೆಮ್ಮೆಯಿಂದ ಹೇಳಲು ಇಷ್ಟಪಡುತ್ತೇನೆ. ಕಾರಣ ಏನೆಂದರೆ ಸಿನಿಮಾ ಹೀರೊ ಆಗಬೇಕು ಎಂದು ಕನಸು ಕಟ್ಟಿಕೊಂಡಾಗ ಗಾಂಧಿನಗರದಲ್ಲಿ ಫೋಟೋ ಇಟ್ಟುಕೊಂಡು ತಿರುಗಾಡುತ್ತಿದ್ದೆ. ಮದುವೆ ಆಗಿತ್ತು. ಆಗ ತಾನೇ ಮಗಳು ಹುಟ್ಟಿದ್ದಳು. ಆಗ ಕಷ್ಟದಲ್ಲಿ ಇದ್ದೆ. ಕೆಲಸ ಮಾಡು ಎಂದು ಎಲ್ಲರು ಹೇಳುವವರು. ಆಗ ನಮ್ಮ‌ತಂದೆ ಬಳಿ ಕೆಲಸ ಹೋಗುತ್ತೇನೆ ಎಂದೆ. ನನ್ನ ತಂದೆ ಹೇಳಿದ‌ ಒಂದು ಮಾತು ನಾನು ಸ್ಟಾರ್ ಆಗಿ ಇಲ್ಲಿ ನಿಂತಿದ್ದೇನೆ. ತಬಲನಾಣಿ ಸಿನಿಮಾರಂಗದಲ್ಲಿ ಆದ ಛಾಪೂ ಮೂಡಿಸಿದ್ದಾರೆ. ಹೆಮ್ಮೆಯಾಗುತ್ತದೆ ಈಗ ಸ್ನೇಹಿತರ ಜೊತೆಗೂಡಿ ಅವರು ನಿರ್ಮಾಪಕ ಆಗಿದ್ದಾರೆ. ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ಮೊದಲ ಪ್ರೊಡಕ್ಷನ್ ನಲ್ಲಿ ಹೊಸಬರಿಗೆ ಅವಕಾಶ ಕೊಟ್ಟಿದ್ದಾರೆ. ಅಥರ್ವ ಆರ್ಯ ಮೊದಲ ಸಿನಿಮಾದಲ್ಲಿ ಅದ್ಭುತ ಕಂಟೆಂಟ್ ತೆಗೆದುಕೊಂಡು ಬಂದಿದ್ದಾರೆ. ನಮಗೆಲ್ಲರಿಗೂ ಅವಕಾಶ ಕೊಟ್ಟಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿʼʼ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada New Movie: ಹಳ್ಳಿಗಳನ್ನು ಉಳಿಸುವ ಹುಡುಗರ ಕಥೆ ʻಸಂಭವಾಮಿ ಯುಗೇ ಯುಗೇʼ: ಇದೇ ಜೂನ್‌ 21ಕ್ಕೆ ತೆರೆಗೆ!

Kannada New Movie: ನಾಯಕನ ತಂಗಿಯ ಪಾತ್ರ ಮಾಡಿರುವ ಮಧುರಾಗೌಡ ಮಾತನಾಡಿ ಈ ಚಿತ್ರದಲ್ಲಿ ಸುಧಾರಾಣಿ ಅವರ ಮಗಳಾಗಿ ನಟಿಸಿದ್ದು ನನ್ನ ಅದೃಷ್ಟ ಎಂದುʼʼ ತನ್ನ‌ ಪಾತ್ರದ ಕುರಿತು ಹೇಳಿಕೊಂಡರು. ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆ, ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಉಳಿದಂತೆ ಕಲಾವಿದರಾದ ಬಲ ರಾಜವಾಡಿ, ಪುನೀತ್, ಅಶ್ವಿನ್‌ಹಾಸನ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದು ತಮ್ಮ ಪಾತ್ರಗಳ‌ ಕುರಿತು ಮಾತನಾಡಿದರು.

VISTARANEWS.COM


on

Sambhavami Yuge Yuge in june 21st Release
Koo

ಬೆಂಗಳೂರು: ಆಧುನಿಕತೆಯ ಸೋಗಿನಲ್ಲಿ (Kannada New Movie) ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ʻಸಂಭವಾಮಿ ಯುಗೇ ಯುಗೇʼ. ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವು ಇದೇ ತಿಂಗಳು 21ರಂದು ಬಿಡುಗಡೆಯಾಗಲಿದೆ.

ಜಯ್ ಶೆಟ್ಟಿ – ನಿಶಾ ರಜಪೂತ್ ಹಾಗೂ ಮಧುರಾಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಅರಮನೆಗಳ ನಗರ ಮೈಸೂರಿಗೆ ಭೇಟಿಕೊಟ್ಟು ಮಾಧ್ಯಮಗಳ ಜತೆ ಮಾತನಾಡಿತು.
ತಮ್ಮ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಕುರಿತಂತೆ ಮಾತನಾಡಿದ ಚೇತನ್ ಚಂದ್ರಶೇಖರ್ ಶೆಟ್ಟಿ, ʻನಾನು ಕಳೆದ ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದು, ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದೇನೆ. ಫ್ಯಾಮಿಲಿ ಆಡಿಯನ್ಸ್ ಕೂತು ನೋಡುವಂಥ ವಿಭಿನ್ನ ಕಮರ್ಷಿಯಲ್ ಕಾನ್ಸೆಪ್ಟ್ ಇರುವ ಈ ಚಿತ್ರಕ್ಕೆ ಚಿತ್ರದಲ್ಲಿ ಕೃಷ್ಣನ ಪಾತ್ರ ಹಾಗೂ ಅರ್ಜುನನನ್ನು ಹೋಲುವ ಪಾತ್ರಗಳೂ ಇವೆ. ಮಂಡ್ಯ, ಚನ್ನಪಟ್ಟಣ, ರಾಮನಗರ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಈಗಾಗಲೇ ಚಿತ್ರದ ಟೀಸರ್, ಸಾಂಗ್ಸ್ ವೈರಲ್ ಆಗಿದ್ದು, ಸದ್ಯದಲ್ಲೇ ಟ್ರೈಲರ್ ಬಿಡುಗʼʼ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

ʻʻಹಳ್ಳಿಯ ಹುಡುಗರು ವಿದ್ಯಾವಂತರಾದ ಮೇಲೆ, ಕೆಲಸದ ನಿಮಿತ್ತ ಪಟ್ಟಣಕ್ಕೆ ಅಂತ ಹೋದವರು ಅಲ್ಲೇ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು ? ನಮ್ಮ ಹಳ್ಳಿಗಳು ಉಳಿಯುವುದಾದರೂ ಹೇಗೆ ?, ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲೆಸಬೇಕು, ಹಳ್ಳಿಗಳನ್ನು ಬೆಳೆಸಬೇಕು ಎಂಬ ಕಥಾಹಂದರದ ಮೇಲೆ ಈ ಚಿತ್ರ ಮಾಡಿದ್ದೇವೆ. ಜೂನ್ 21ಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ. ಕಮರ್ಷಿಯಲ್ ಚಿತ್ರವಾದರೂ, ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವಂಥ ಹಲವಾರು ಅಂಶಗಳು ನಮ್ಮ ಚಿತ್ರದಲ್ಲಿವೆʼʼ ಎಂದು ಹೇಳಿದರು.

ನಾಯಕಿ ನಿಶಾ ರಜಪೂತ್ ಮಾತನಾಡಿ ʻʻನಾನು ಬಿಜಾಪುರದವಳಾದರೂ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಈ ಚಿತ್ರದಲ್ಲಿ ಸ್ವಾತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು, ನಾಯಕನ ತಂಗಿಯ ಪಾತ್ರ ಮಾಡಿರುವ ಮಧುರಾಗೌಡ ಮಾತನಾಡಿ ಈ ಚಿತ್ರದಲ್ಲಿ ಸುಧಾರಾಣಿ ಅವರ ಮಗಳಾಗಿ ನಟಿಸಿದ್ದು ನನ್ನ ಅದೃಷ್ಟ ಎಂದುʼʼ ತನ್ನ‌ ಪಾತ್ರದ ಕುರಿತು ಹೇಳಿಕೊಂಡರು. ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆ, ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಉಳಿದಂತೆ ಕಲಾವಿದರಾದ ಬಲ ರಾಜವಾಡಿ, ಪುನೀತ್, ಅಶ್ವಿನ್‌ಹಾಸನ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದು ತಮ್ಮ ಪಾತ್ರಗಳ‌ ಕುರಿತು ಮಾತನಾಡಿದರು.

Continue Reading

ಸ್ಯಾಂಡಲ್ ವುಡ್

Yuva Rajkumar: ಸತ್ಯವಾಗಿಯೂ ʻಯುವʼ ಡಿವೋರ್ಸ್‌ ವಿಚಾರ ನಮಗೆ ಗೊತ್ತಿಲ್ಲ ಎಂದ ಶಿವಣ್ಣ!

Yuva Rajkumar: ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇತ್ತು ಎಂದು ಮೂಲ ತಿಳಿಸಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇದ್ದರೂ, ಪುನೀತ್‌ ರಾಜ್ ಕುಮಾರ್ ಮುಂದೆ ನಿಂತು ಮದುವೆ ಮಾಡಿಸಿದ್ದರು ಎನ್ನಲಾಗಿದೆ. 2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು.

VISTARANEWS.COM


on

Yuva Rajkumar divorce reaction by shiva Rajkumar
Koo

ಶಿವಮೊಗ್ಗ: ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಜೋಡಿ ಡಿವೋರ್ಸ್ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದೆ. ರಾಜ್​ಕುಮಾರ್ ಕುಟುಂಬದ ಕುಡಿ ಯುವ ರಾಜ್‌ಕುಮಾರ್‌ (Yuva Rajkumar) ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಇದೀಗ ನಟ ಶಿವರಾಜ್‌ಕುಮಾರ್‌ ಈ ವಿಷಯದ ಬಗ್ಗೆ ʻʻಸತ್ಯವಾಗಿಯೂ ನನಗೆ ಈ ಬಗ್ಗೆ ಗೊತ್ತಿಲ್ಲ. ಅದು ಅವರ ಬದುಕು, ಪೂರ್ತಿ ವಿಚಾರ ಏನು ಎಂದು ಗೊತ್ತಾದ ಮೇಲೆ ಮಾತನಾಡುತ್ತೇವೆʼʼಎಂದಿದ್ದಾರೆ.

ಶಿವಣ್ಣ ಮಾತನಾಡಿ ʻಯುವ ಡಿವೋರ್ಸ್‌ ಕುರಿತಾಗಿ ನಮಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ. ಬೇಸರ ಇದೆ, ಗೊತ್ತಿದ್ದು ಮಾತಾನಾಡಬೇಕು. ನೀವು ಹೇಳಿದ ಮೇಲೆ ಈ ವಿಚಾರ ಗೊತ್ತಾಗಿದ್ದು. ಗೊತ್ತಿಲ್ಲದೇ ಏನೂ ಮಾತಾನಾಡಬಾರದು. ಅದು ಅವರ ಬದುಕು. ಮನೆಗೆ ಹೋಗಿ ಈ ಬಗ್ಗೆ ಯುವ ಜತೆ ಮಾತನಾಡುತ್ತೇವೆʼʼಎಂದು ಹೇಳಿಕೆ ನೀಡಿದ್ದಾರೆ. ಗೀತಾ ಶಿವರಾಜ್ ಕುಮಾರ್ ಮಾತನಾಡಿ ʻʻಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದುʼʼಎಂದರು.

ಇದನ್ನೂ ಓದಿ: Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇತ್ತು ಎಂದು ಮೂಲ ತಿಳಿಸಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇದ್ದರೂ, ಪುನೀತ್‌ ರಾಜ್ ಕುಮಾರ್ ಮುಂದೆ ನಿಂತು ಮದುವೆ ಮಾಡಿಸಿದ್ದರು ಎನ್ನಲಾಗಿದೆ. 2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್‌ ಪುನೀತ್‌ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕಳೆದ ಆರೇಳು ತಿಂಗಳಿಂದ ದೊಡ್ಮನೆಯಿಂದ ದೂರಾಗಿದ್ದರು ಶ್ರೀದೇವಿ ಭೈರಪ್ಪ.

ವರ್ಷದಿಂದ ದಂಪತಿ ದೂರವೇ ಇದ್ದರು

ಕಳೆದೊಂದು ವರ್ಷದಿಂದ ದಂಪತಿ ದೂರವೇ ಇದ್ದರು ಎನ್ನಲಾಗಿದೆ. ಸದ್ಯ ಅಮೆರಿಕಾದಲ್ಲಿ ಶ್ರೀದೇವಿ ಉನ್ನತ ಶಿಕ್ಷಣಕ್ಕಾಗಿ ವಾಸಿಸುತ್ತಿದ್ದಾರೆ. ಯುವ ಡಿವೋರ್ಸ್ ನೋಟಿಸ್​ಗೆ ಶ್ರೀದೇವಿ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ಇನ್ನೂ ನೀಡಿಲ್ಲ. ʻಯುವ ವಿಚ್ಚೇದನಕ್ಕೆ ಅರ್ಜಿ ಹಾಕಿರೋದು ನಿಜ. ಇನ್ನೂ ವಿಚ್ಛೇದನ ಸಿಕ್ಕಿಲ್ಲ. ಸದ್ಯಕ್ಕೆ ಶ್ರೀದೇವಿ ಅಮೆರಿಕಾದಲ್ಲಿದ್ದಾರೆʼʼಎಂದು ರಾಜ್ ಕುಟುಂಬದ ಆಪ್ತ ಮೂಲ ಮಾಹಿತಿ ನೀಡಿದೆ.

ಮಾನಸಿಕವಾಗಿ ಟಾರ್ಚರ್

ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ ಯುವ. 2019 ಮೇ 26ರಂದು ಅದ್ಧೂರಿಯಾಗಿ ಯುವ ಕಲ್ಯಾಣೋತ್ಸವ ನಡೆದಿತ್ತು. ತೆಲುಗು, ತಮಿಳು ಸಿನಿಮಾ ತಾರೆಯರು ಭಾಗಿ ಆಗಿ ಶುಭ ಕೋರಿದ್ದರು. ಸದ್ಯ ಯುವ ಡಿವೋರ್ಸ್ ಸುದ್ದಿ ಕೇಳಿ ದೊಡ್ಮನೆ ಅಭಿಮಾನಿಗಳು ಶಾಕ್ ಆಗಿದ್ದಾರೆ.

ʻಯುವʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಯುವ ರಾಜ್‌ಕುಮಾರ್ (Yuva Rajkumar) ಎಂಟ್ರಿ ಕೊಟ್ಟಿದ್ದರು. ವರನಟ ಡಾ. ರಾಜ್‌ ಕುಮಾರ್‌ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗದಲ್ಲಿ ಮಿಂಚಿದ್ದರು. ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ʼಯುವʼ ಚಿತ್ರಕ್ಕೆ ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್​ರಾಮ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಯುವ ರಾಜ್​ಕುಮಾರ್ ಜತೆಗೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿದ್ದರು. . ಎಲೆಕ್ಷನ್ ಅಬ್ಬರದ ಮಧ್ಯೆಯೂ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆದಿತ್ತು. ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿತ್ತು. ಸದ್ಯ ʼಯುವʼ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ..

Continue Reading

ಸ್ಯಾಂಡಲ್ ವುಡ್

Yuva Rajkumar: ರಾಘಣ್ಣ ದಂಪತಿ ವಿರೋಧದ ನಡುವೆಯೂ ಯುವನಿ​ಗೆ ಮದ್ವೆ ಮಾಡಿಸಿದ್ದು ‘ಅಪ್ಪು’!

Yuva Rajkumar: ಕಳೆದೊಂದು ವರ್ಷದಿಂದ ದಂಪತಿ ದೂರವೇ ಇದ್ದರು ಎನ್ನಲಾಗಿದೆ. ಸದ್ಯ ಅಮೆರಿಕಾದಲ್ಲಿ ಶ್ರೀದೇವಿ ಉನ್ನತ ಶಿಕ್ಷಣಕ್ಕಾಗಿ ವಾಸಿಸುತ್ತಿದ್ದಾರೆ. ಯುವ ಡಿವೋರ್ಸ್ ನೋಟಿಸ್​ಗೆ ಶ್ರೀದೇವಿ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ಇನ್ನೂ ನೀಡಿಲ್ಲ. ʻಯುವ ವಿಚ್ಚೇದನಕ್ಕೆ ಅರ್ಜಿ ಹಾಕಿರೋದು ನಿಜ. ಇನ್ನೂ ವಿಚ್ಛೇದನ ಸಿಕ್ಕಿಲ್ಲ. ಸದ್ಯಕ್ಕೆ ಶ್ರೀದೇವಿ ಅಮೆರಿಕಾದಲ್ಲಿದ್ದಾರೆʼʼಎಂದು ರಾಜ್ ಕುಟುಂಬದ ಆಪ್ತ ಮೂಲ ಮಾಹಿತಿ ನೀಡಿದೆ.

VISTARANEWS.COM


on

Yuva Rajkumar Allegation of cruelty against wife
Koo

ಬೆಂಗಳೂರು: ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಜೋಡಿ ಡಿವೋರ್ಸ್ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದೆ. ರಾಜ್​ಕುಮಾರ್ ಕುಟುಂಬದ ಕುಡಿ ಯುವ ರಾಜ್‌ಕುಮಾರ್‌ (Yuva Rajkumar) ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಲಾಗಿದೆ. ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇತ್ತು ಎಂದು ಮೂಲ ತಿಳಿಸಿದೆ.

ಪುನೀತ್‌ ರಾಜ್ ಕುಮಾರ್ ಮುಂದೆ ನಿಂತು ಮದುವೆ ಮಾಡಿಸಿದ್ದರು

ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇದ್ದರೂ, ಪುನೀತ್‌ ರಾಜ್ ಕುಮಾರ್ ಮುಂದೆ ನಿಂತು ಮದುವೆ ಮಾಡಿಸಿದ್ದರು ಎನ್ನಲಾಗಿದೆ. 2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್‌ ಪುನೀತ್‌ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕಳೆದ ಆರೇಳು ತಿಂಗಳಿಂದ ದೊಡ್ಮನೆಯಿಂದ ದೂರಾಗಿದ್ದರು ಶ್ರೀದೇವಿ ಭೈರಪ್ಪ.

ಇದನ್ನೂ ಓದಿ: Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

ವರ್ಷದಿಂದ ದಂಪತಿ ದೂರವೇ ಇದ್ದರು

ಕಳೆದೊಂದು ವರ್ಷದಿಂದ ದಂಪತಿ ದೂರವೇ ಇದ್ದರು ಎನ್ನಲಾಗಿದೆ. ಸದ್ಯ ಅಮೆರಿಕಾದಲ್ಲಿ ಶ್ರೀದೇವಿ ಉನ್ನತ ಶಿಕ್ಷಣಕ್ಕಾಗಿ ವಾಸಿಸುತ್ತಿದ್ದಾರೆ. ಯುವ ಡಿವೋರ್ಸ್ ನೋಟಿಸ್​ಗೆ ಶ್ರೀದೇವಿ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ಇನ್ನೂ ನೀಡಿಲ್ಲ. ʻಯುವ ವಿಚ್ಚೇದನಕ್ಕೆ ಅರ್ಜಿ ಹಾಕಿರೋದು ನಿಜ. ಇನ್ನೂ ವಿಚ್ಛೇದನ ಸಿಕ್ಕಿಲ್ಲ. ಸದ್ಯಕ್ಕೆ ಶ್ರೀದೇವಿ ಅಮೆರಿಕಾದಲ್ಲಿದ್ದಾರೆʼʼಎಂದು ರಾಜ್ ಕುಟುಂಬದ ಆಪ್ತ ಮೂಲ ಮಾಹಿತಿ ನೀಡಿದೆ.

ಮಾನಸಿಕವಾಗಿ ಟಾರ್ಚರ್

ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ ಯುವ. 2019 ಮೇ 26ರಂದು ಅದ್ಧೂರಿಯಾಗಿ ಯುವ ಕಲ್ಯಾಣೋತ್ಸವ ನಡೆದಿತ್ತು. ತೆಲುಗು, ತಮಿಳು ಸಿನಿಮಾ ತಾರೆಯರು ಭಾಗಿ ಆಗಿ ಶುಭ ಕೋರಿದ್ದರು. ಸದ್ಯ ಯುವ ಡಿವೋರ್ಸ್ ಸುದ್ದಿ ಕೇಳಿ ದೊಡ್ಮನೆ ಅಭಿಮಾನಿಗಳು ಶಾಕ್ ಆಗಿದ್ದಾರೆ.

ʻಯುವʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಯುವ ರಾಜ್‌ಕುಮಾರ್ (Yuva Rajkumar) ಎಂಟ್ರಿ ಕೊಟ್ಟಿದ್ದರು. ವರನಟ ಡಾ. ರಾಜ್‌ ಕುಮಾರ್‌ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗದಲ್ಲಿ ಮಿಂಚಿದ್ದರು. ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ʼಯುವʼ ಚಿತ್ರಕ್ಕೆ ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್​ರಾಮ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಯುವ ರಾಜ್​ಕುಮಾರ್ ಜತೆಗೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿದ್ದರು. . ಎಲೆಕ್ಷನ್ ಅಬ್ಬರದ ಮಧ್ಯೆಯೂ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆದಿತ್ತು. ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿತ್ತು. ಸದ್ಯ ʼಯುವʼ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ..

Continue Reading

ಸ್ಯಾಂಡಲ್ ವುಡ್

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Yuva Rajkumar: ಯುವ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ.

VISTARANEWS.COM


on

Yuva Rajkumar son of raghavendra Rajkumar yuva divorce
Koo

ಬೆಂಗಳೂರು: ವರನಟ ಡಾ. ರಾಜ್‌ ಕುಮಾರ್‌ (Yuva Rajkumar) ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌ ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್​ 6ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಹೆಂಡತಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಎದುರಿಸುತ್ತಿದ್ದೆ ಎಂದು ಯುವ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಯುವ ಕೇಸ್ ಕೂಡ ದಾಖಲು ಮಾಡಿದ್ದಾರೆ.

ಯುವರಾಜ್​ ಕುಮಾರ್​ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ. ಸದ್ಯಕ್ಕೆ ಅಮೆರಿಕಾದಲ್ಲಿ ಶ್ರೀದೇವಿ ನೆಲೆಸಿದ್ದಾರೆ. ಶಾಂತಿನಗರ ಫ್ಯಾಮಿಲಿ ಕೋರ್ಟ್‌ನಲ್ಲಿ ಇದೇ ತಿಂಗಳು 6ನೇ ತಾರೀಕು ವಿಚ್ಛೇದನ ಅರ್ಜಿ ಸಲ್ಲಿಸಿದ್ದರು ಯುವರಾಜ್.

ಇದನ್ನೂ ಓದಿ: Yuva Rajkumar: ಯುವ ಅಭಿಮಾನಿಗಳಿಗೆ ನಿರಾಸೆ; ಹುಟ್ಟುಹಬ್ಬ ಆಚರಣೆಗೆ ಬ್ರೇಕ್‌

2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು.ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್‌ ಪುನೀತ್‌ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

ಇನ್ನೂ ಅಚ್ಚರಿ ಅಂದರೆ ನಿವೇದಿತಾ ಹಾಗೂ ಚಂದನ್‌ ಕೂಡ ಇದೇ ಕೋರ್ಟ್‌ನಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಇದೀಗ ಮತ್ತೊಂದು ಜೋಡಿ ಕೂಡ ವೈವಾಹಿಕ ಜೀವನಕ್ಕೆ ಫುಲ್‌ಸ್ಟಾಪ್‌ ಇಡಲು ಮುಂದಾಗಿದೆ.

ʻಯುವʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಯುವ ರಾಜ್‌ಕುಮಾರ್ (Yuva Rajkumar) ಎಂಟ್ರಿ ಕೊಟ್ಟಿದ್ದರು. ವರನಟ ಡಾ. ರಾಜ್‌ ಕುಮಾರ್‌ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗದಲ್ಲಿ ಮಿಂಚಿದ್ದರು. ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ʼಯುವʼ ಚಿತ್ರಕ್ಕೆ ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್​ರಾಮ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಯುವ ರಾಜ್​ಕುಮಾರ್ ಜತೆಗೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿದ್ದರು. . ಎಲೆಕ್ಷನ್ ಅಬ್ಬರದ ಮಧ್ಯೆಯೂ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆದಿತ್ತು. ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿತ್ತು. ಸದ್ಯ ʼಯುವʼ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

Continue Reading
Advertisement
Karnataka weather Forecast
ಮಳೆ10 mins ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

IND vs PAK
ಕ್ರೀಡೆ25 mins ago

IND vs PAK : ಭಾರತ ವಿರುದ್ಧ ಸೋಲುವುದಕ್ಕಾಗಿ ಮ್ಯಾಚ್ ಫಿಕ್ಸಿಂಗ್ ಮಾಡಿದ ಪಾಕ್​ ಆಟಗಾರ; ಆರೋಪ

Tshering Tobgay
ದೇಶ26 mins ago

Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

Sambhavami Yuge Yuge in june 21st Release
ಸಿನಿಮಾ40 mins ago

Kannada New Movie: ಹಳ್ಳಿಗಳನ್ನು ಉಳಿಸುವ ಹುಡುಗರ ಕಥೆ ʻಸಂಭವಾಮಿ ಯುಗೇ ಯುಗೇʼ: ಇದೇ ಜೂನ್‌ 21ಕ್ಕೆ ತೆರೆಗೆ!

Prajwal Revanna Case
ಪ್ರಮುಖ ಸುದ್ದಿ53 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Noor Malabika Das
ಸಿನಿಮಾ60 mins ago

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Yuva Rajkumar divorce reaction by shiva Rajkumar
ಸ್ಯಾಂಡಲ್ ವುಡ್1 hour ago

Yuva Rajkumar: ಸತ್ಯವಾಗಿಯೂ ʻಯುವʼ ಡಿವೋರ್ಸ್‌ ವಿಚಾರ ನಮಗೆ ಗೊತ್ತಿಲ್ಲ ಎಂದ ಶಿವಣ್ಣ!

Self Harming
ರಾಯಚೂರು1 hour ago

Self Harming : ಮಾನಸಿಕ ಖಿನ್ನತೆ; ಮಗಳ ಜತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Narendra Modi 3.20
ಪ್ರಮುಖ ಸುದ್ದಿ2 hours ago

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Election Results 2024
ಕರ್ನಾಟಕ2 hours ago

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 mins ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌