ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾಗಿ ಕ್ಷಮೆ ಕೇಳಲು ಸಿದ್ಧ ಎಂದ ಅಧೀರ್‌ ಚೌಧರಿ - Vistara News

ದೇಶ

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾಗಿ ಕ್ಷಮೆ ಕೇಳಲು ಸಿದ್ಧ ಎಂದ ಅಧೀರ್‌ ಚೌಧರಿ

ಅಧೀರ್‌ ಚೌಧರಿ ತಾವು ಆಡಿದ ಒಂದು ಮಾತಿನಿಂದ ಬಿಜೆಪಿಯ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ನನಗೆ ಏನು ಶಿಕ್ಷೆ ಕೊಟ್ಟರೂ ಅನುಭವಿಸುತ್ತೇನೆ, ಸೋನಿಯಾ ಗಾಂಧಿಯನ್ನು ಈ ವಿವಾದಕ್ಕೆ ಎಳೆಯಬೇಡಿ ಎಂದಿದ್ದಾರೆ.

VISTARANEWS.COM


on

Ranjan Chowdhury
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದ್ರೌಪದಿ ಮುರ್ಮುರಿಗೆ ರಾಷ್ಟ್ರಪತ್ನಿ ಎಂದು ಹೇಳಿದ ಕಾಂಗ್ರೆಸ್‌ ನಾಯಕ ಅಧೀರ್‌ ಚೌಧರಿ ಈಗ ಪ್ರತಿಪಕ್ಷಗಳ ಹೋರಾಟಕ್ಕೆ ಸ್ವಲ್ಪ ಮಣಿದಂತೆ ಇದೆ. ʼಇದು ನನ್ನ ಬಾಯ್ತಪ್ಪಿನಿಂದ ಆದ ಎಡವಟ್ಟು. ದ್ರೌಪದಿ ಮುರ್ಮು ಅವರಿಗೆ ನೋಯಿಸುವ ಉದ್ದೇಶ ನನಗಿರಲಿಲ್ಲ. ನಿಜ ಹೇಳಬೇಕು ಎಂದರೆ ನನ್ನ ಭಾಷೆ ಬೆಂಗಾಳಿ. ಹಿಂದಿ ಮಾತನಾಡಲು ನನಗೆ ಕಷ್ಟ. ಹಾಗಾಗಿ ಕೆಲವು ಶಬ್ದಗಳನ್ನು ಹೇಳುವಾಗ ನಾನು ತಪ್ಪು ಮಾಡುತ್ತಿರುತ್ತೇನೆʼ ಎಂದು ಹೇಳಿದ್ದಾರೆ. ಅಲ್ಲದೆ, ʼಈ ವಿವಾದದಲ್ಲಿ ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ಹೆಸರನ್ನು ಎಳೆಯಬೇಡಿ. ಅವರು ಯಾಕೆ ಕ್ಷಮೆ ಕೇಳಬೇಕು?ʼ ಎಂದೂ ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಧೀರ್‌ ಚೌಧರಿ, ʼನಾನು ದ್ರೌಪದಿ ಮುರ್ಮುಗೆ ಅವಮಾನ ಮಾಡಬೇಕು ಎಂದು ಎಂದಿಗೂ ಯೋಚಿಸಲಿಲ್ಲ. ಹಾಗೊಮ್ಮೆ ನನ್ನ ಮಾತಿನಿಂದ ದ್ರೌಪದಿ ಮುರ್ಮುರಿಗೆ ನೋವಾಗಿದ್ದರೆ, ನಾನು ಅವರನ್ನು ಭೇಟಿಯಾಗಿ ಕ್ಷಮೆ ಕೇಳುತೇನೆ. ನನ್ನ ತಪ್ಪೇ ಎಂದಾದರೆ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ಆದರೆ ಯಾವ ಕಾರಣಕ್ಕೂ ಸೋನಿಯಾ ಗಾಂಧಿ ಹೆಸರು ಎಳೆದು ತರಬೇಡಿʼ ಎಂದು ಹೇಳಿದ್ದಾರೆ.

ದ್ರೌಪದಿ ಮುರ್ಮುರಿಗೆ ಅಧೀರ್‌ ರಂಜನ್‌ ಚೌಧರಿ ರಾಷ್ಟ್ರಪತ್ನಿ ಎಂದು ಸಂಬೋಧಿಸಿದ್ದಕ್ಕೆ ಬಿಜೆಪಿಯವರು ಇಂದು ಲೋಕಸಭೆಯಲ್ಲಿ ದೊಡ್ಡಮಟ್ಟದ ಗಲಾಟೆ ಸೃಷ್ಟಿಸಿದ್ದಾರೆ. ಸೋನಿಯಾ ಗಾಂಧಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಕಾಂಗ್ರೆಸ್‌ಗೆ ಮಹಿಳೆಯರ ಬಗ್ಗೆ ಗೌರವ ಇಲ್ಲ, ಒಬ್ಬ ಆದಿವಾಸಿ ಹೆಣ್ಣುಮಗಳನ್ನು ಅವಹೇಳ ಮಾಡುವುದು ಸರಿಯಲ್ಲ ಎಂದೆಲ್ಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಸೋನಿಯಾ ಗಾಂಧಿ ಮತ್ತು ಸ್ಮೃತಿ ಇರಾನಿ ನಡುವೆ ಮಾತಿನ ಚಕಮಕಿ ನಡೆದು, ʼನೀವು ನನ್ನ ಬಳಿ ಮಾತನಾಡಲೇಬೇಡಿʼ ಎಂದು ಸೋನಿಯಾ ಗಾಂಧಿ, ಸ್ಮೃತಿ ಇರಾನಿಗೆ ಖಡಕ್‌ ಆಗಿ ಹೇಳಿದ್ದಾರೆ.

ಭಾರತದ ರಾಷ್ಟ್ರಪತಿ ಯಾರೇ ಆಗಿರಲಿ, ಅವರು ಬ್ರಾಹ್ಮಣರೇ ಆಗಲಿ, ಬುಡಕಟ್ಟು ಜನಾಂಗದವರೇ ಆಗಿರಲಿ ರಾಷ್ಟ್ರಪತಿ ರಾಷ್ಟ್ರಪತಿಯೇ..ಅದು ಈ ದೇಶದ ಅತ್ಯುನ್ನತ ಘನತೆ ಮತ್ತು ಗೌರವದ ಹುದ್ದೆ. ನಿನ್ನೆ ನಾನು ಮಾಧ್ಯಮಗಳೊಂದಿಗೆ ಮಾತನಾಡುತ್ತ, ʼನಾವು ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾಗಲು ರಾಷ್ಟ್ರಪತಿ ಭವನಕ್ಕೆ ಹೋಗುತ್ತೇವೆʼ ಎಂದು ಹೇಳುತ್ತಿದ್ದೆ. ಆಗ ಒಂದು ಬಾರಿ ನನ್ನ ಬಾಯಿಂದ ರಾಷ್ಟ್ರಪತ್ನಿ ಎಂಬ ಪದ ಹೊರಬಿತ್ತು. ಅದು ಖಂಡಿತವಾಗಿಯೂ ಉದ್ದೇಶಪೂರ್ವಕವಾಗಿ ಹೇಳಿದ್ದಲ್ಲ ಎಂದೂ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ದ್ರೌಪದಿ ಮುರ್ಮುಗೆ ರಾಷ್ಟ್ರಪತ್ನಿ ಎಂದ ಕಾಂಗ್ರೆಸ್‌ ನಾಯಕ ಅಧೀರ್‌ ಚೌಧರಿ; ಬಿಜೆಪಿ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Job Alert: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್ 27 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ನಾಳೆ (ಜೂನ್‌ 30)ವರೆಗೆ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್ 27 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ನಾಳೆ (ಜೂನ್‌ 30)ವರೆಗೆ ಅವಕಾಶ ಕಲ್ಪಿಸಲಾಗಿದೆ (Job Alert).

ರಾಜ್ಯದ ಅಭ್ಯರ್ಥಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ.

ಕಳೆದ ಬಾರಿ 8,622 ಹುದ್ದೆಗಳಿಗೆ ನೇಮಕ ನಡೆಸಿದ ಐಬಿಪಿಎಸ್ ಈ ಬಾರಿ 9,995 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ. ರಾಜ್ಯದ ಎರಡು ಬ್ಯಾಂಕುಗಳಲ್ಲಿ 586 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಒಟ್ಟು 200 ಹುದ್ದೆಗಳು ಮತ್ತು ಆಫೀಸರ್ ಸ್ಟೇಲ್-1-386 ಹುದ್ದೆಗಳಿವೆ. ಕಳೆದ ಬಾರಿ ರಾಜ್ಯದ ಈ ಎರಡೂ ಬ್ಯಾಂಕ್‌ಗಳಲ್ಲಿ 807 ಹುದ್ದೆಗಳಿಗೆ ನೇಮಕ ನಡೆದಿತ್ತು.

ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿರುವ ಖಾಲಿ ಇರುವ ಹುದ್ದೆಗಳ ಮೀಸಲಾತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್)
ಬ್ಯಾಂಕ್ಎಸ್​ ಸಿ(SC)ಎಸ್​ಟಿ(ST)ಒಬಿಸಿ (NCL)*EWS*ಸಾಮಾನ್ಯTOTAL
ಕರ್ನಾಟಕ ಗ್ರಾಮೀಣ ಬ್ಯಾಂಕ್167271040100
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್167271040100
ಆಫೀಸರ್ ಸ್ಕೇಲ್-I
ಕರ್ನಾಟಕ ಗ್ರಾಮೀಣ ಬ್ಯಾಂಕ್43217729116286
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್157271041100
EWS-ಆರ್ಥಿಕ ವಾಗಿ ಹಿಂದುಳಿದ ವರ್ಗ   *NCL- ಕೆನೆ ಪದರ ಹೊರತಾದ

ಈಗ ನಿಗದಿಪಡಿಸಿರುವ ಹುದ್ದೆಗಳ ಸಂಖ್ಯೆಗಳು ಹೆಚ್ಚಾಗಲೂಬಹುದು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಮೀಸಲಿಟ್ಟ ಹುದ್ದೆಗಳ ಸಂಖ್ಯೆ ಏರಿಕೆಯಾಗಲೂಬಹುದು. ಆದ್ದರಿಂದ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನಿರಾಶರಾಗಬೇಕಾಗಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಜೂನ್ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಯೋಮಿತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ 18 ರಿಂದ 28 ವರ್ಷಗಳು. ಆಫೀಸರ್ ಸ್ಕೇಲ್-I ಹುದ್ದೆಗೆ 18 ರಿಂದ 30 ವರ್ಷಗಳು.  ಎಸ್​.ಸಿ ಮತ್ತು ಎಸ್​.ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆ ಇದೆ. 

ಶೈಕ್ಷಣಿಕ ಅರ್ಹತೆ ಮತ್ತು ಅನುಭವಗಳೇನಿರಬೇಕು?

Group“B”-ಆಫೀಸ್ ಅಸಿಸ್ಟೆಂಟ್​ ಹುದ್ದೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಭಾಷೆ ತಿಳಿದಿರುವುದು ಅವಶ್ಯಕ. ಕಂಪ್ಯೂಟರ್​ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ.

Group“A”-Officers-ಆಫೀಸರ್ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ)

ಯಾವುದೇ ವಿಷಯದಲ್ಲಿ ಪದವಿ. ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಅಥವಾ ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವವರಿಗೆ ಆದ್ಯತೆ. ಆದರೆ ಸ್ಥಳೀಯ ಭಾಷೆ ತಿಳಿದಿರಬೇಕಾದುದು ಅವಶ್ಯಕ. ಕಂಪ್ಯೂಟರ್ ನಿರ್ವಹಣಾ ಜ್ಞಾನ ಕಡ್ಡಾಯ.

ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಟೇಲ್-1ಕ್ಕೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿರುವುದು ಅವಶ್ಯ. 8ನೇ ತರಗತಿಯವರೆಗೆ ಅಥವಾ ಅದಕ್ಕೂ ಮೇಲ್ಪಟ್ಟು ಸ್ಥಳೀಯ ಭಾಷೆಯ ಮಾಧ್ಯಮದಲ್ಲಿ ಓದಿದವವರನ್ನು ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಪಡೆದ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಯು ಸ್ಥಳೀಯ ಭಾಷೆಯನ್ನು ಸರಿಯಾಗಿ ತಿಳಿದಿಲ್ಲ ಎಂಬುದು ಆಯ್ಕೆಯ ಸಂದರ್ಭದಲ್ಲಿ ಗಮನಕ್ಕೆ ಬಂದಲ್ಲಿ, ಅಂತಹ ಅಭ್ಯರ್ಥಿಗಳಿಗೆ ಭಾಷೆಯನ್ನು ಕಲಿತುಕೊಳ್ಳಲು 6 ತಿಂಗಳ ಕಾಲಾವಕಾಶ ನೀಡಲಾಗುತ್ತದೆ.

ಇತ್ತ ಗಮನಿಸಿ

ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆ, ಎರಡಕ್ಕೂ ಅರ್ಜಿ ಸಲ್ಲಿಸಬಹುದು.

ಕ್ರೆಡಿಟ್ ಇತಿಹಾಸ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಬ್ಯಾಂಕ್ ​ಖಾತೆ ಹೊಂದಿದ್ದರೆ, ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು ಮತ್ತು ಬ್ಯಾಂಕ್ ಹುದ್ದೆಗೆ ನೇಮಕವಾಗುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್  ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತಪಡಿಸಿ ಕೊಳ್ಳಬೇಕು.
  • ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದಿದ್ದರೆ, ಮೊದಲು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ NOC ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್​ಸಿ/ಎಸ್​ಟಿ/ ಅಂಗವಿಕಲರು / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಆನ್​ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಪರೀಕ್ಷಾ ಪೂರ್ವ ತರಬೇತಿ(PRE-EXAMINATION TRAINING (PET)

ಎಸ್ಸಿ/ಎಸ್ಟಿ/ ಅಲ್ಪಸಂಖ್ಯಾತ ಅಭ್ಯರ್ಥಿಗಳು / ಮಾಜಿ ಸೈನಿಕರು / ವಿಶೇಷಚೇತನ ಅಭ್ಯರ್ಥಿಗಳಿಗೆ ಐಬಿಪಿಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ತರಬೇತಿ ಪಡೆಯಬಹುದು. ಈ ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ಇದರ ಖರ್ಚು ಮೆಚ್ಚಗಳನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಧಾರವಾಡದಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು,ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಮುಖ್ಯ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ(ಮಂಗಳೂರು ಹೊರತು ಪಡಿಸಿ)

ಈ ಬಾರಿಯ ಬದಲಾವಣೆಗಳೇನು?

ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ಅಭ್ಯರ್ಥಿಗಳು ತರುವ ಗುರುತಿನ ಪತ್ರದ (ಐಡಿ ಪ್ರೂಫ್​) ಸಂಖ್ಯೆ ನೀಡುವುದು ಕಡ್ಡಾಯ. ಆ ಸಂಖ್ಯೆ ಅಭ್ಯರ್ಥಿ ಸಲ್ಲಿಸಿದ ಅರ್ಜಿಯಲ್ಲಿರುವ ಹೆಸರಿನೊಂದಿಗೆ ಹೊಂದಾಣಿಕೆಯಾಗಬೇಕು. ಈ ಬಾರಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಸ್ಥಳದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಿಗೆ, ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳಬೇಕು. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನೂ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

  • ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಎರಡಕ್ಕೂ ಅರ್ಜಿ ಸಲ್ಲಿಸಬಹುದು.ಆದರೆ ಆಫೀಸರ್ ಕೇಡರ್​ನಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು.
  • ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯು ತನ್ನ ಕೈ ಬರಹದ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿ   ಅರ್ಜಿಯೊಂದಿಗೆ ಅಪ್ ಲೋಡ್ ಮಾಡಬೇಕು. ಕ್ಯಾಪಿಟಲ್ ಲೆಟರ್ಸ್​ನಲ್ಲಿ ಬರೆದ ಡಿಕ್ಲರೇಷನ್ ಮತ್ತು ಸಹಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
  • ಅರ್ಜಿ ಸಲ್ಲಿಕೆ, ಅಧಿಸೂಚನೆ ಕುರಿತ ಹೆಚ್ಚಿನ ಮಾಹಿತಿಗಾಗಿ www.ibps.in/ಜಾಲತಾಣಕ್ಕೆ ಭೇಟಿ ನೀಡಿ.
  • ನೀವು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಹೊಂದಿರಬೇಕಾಗಿರುವುದು ಕಡ್ಡಾಯ. ಆದ್ದರಿಂದ ಇ-ಮೇಲ್ ಅಕೌಂಟ್ ಇಲ್ಲದಿದ್ದರೆ ಅರ್ಜಿ ಸಲ್ಲಿಸುವ ಮುನ್ನವೇ ಕ್ರಿಯೇಟ್ ಮಾಡಿಕೊಳ್ಳಿ. ಹಾಗೆಯೇ ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ಐ.ಡಿ.ಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ.
  • ಅರ್ಜಿ ಸಲ್ಲಿಸುವಾಗ ಒಂದೇ ಬಾರಿಗೆ ಎಲ್ಲ ಮಾಹಿತಿಯನ್ನು ತುಂಬಬೇಕೆಂಬ ನಿಯಮವೇನಿಲ್ಲ. ಡೇಟಾ ಸೇವ್ ಮಾಡಿ ಎಲ್ಲ ಮಾಹಿತಿಯನ್ನು ತುಂಬಿದ ನಂತರವೇ final submit ಬಟನ್ ಒತ್ತಿ.

ಇತ್ತ ಗಮನಿಸಿ

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 27, 2024
  • ಪೂರ್ವಭಾವಿ ಪರೀಕ್ಷೆ ತರಬೇತಿಗೆ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳುವುದು: ಜುಲೈ
  • ಪೂರ್ವಭಾವಿ ಪರೀಕ್ಷೆಗೆ ತರಬೇತಿ: ಜುಲೈ 22-27
  • ಪೂರ್ವಭಾವಿ ಪರೀಕ್ಷೆಗೆ ಪ್ರವೇಶಪತ್ರ ಲಭ್ಯ ಜುಲೈ/ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆ: ಆಗಸ್ಟ್, 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಆಗಸ್ಟ್/ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆ ನಡೆಯುವುದು ಸೆಪ್ಟೆಂಬರ್ / ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಫಲಿತಾಂಶ ಅಕ್ಟೋಬರ್, 2024
  • ಸಂದರ್ಶನ ನಡೆಯುವುದು: ನವೆಂಬರ್, 2024
  • ನೇಮಕ ಶಿಫಾರಸು: ಜನವರಿ, 2025

ಆಯ್ಕೆ ಹೇಗೆ?

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ​ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಪರೀಕ್ಷೆ(ಪೂರ್ವ ಭಾವಿ/ ಮುಖ್ಯ ಪರೀಕ್ಷೆ/ ಸಂದರ್ಶನ-ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ) ನಡೆಸಲಾಗುತ್ತದೆ. ಪರೀಕ್ಷೆಯ ಸ್ವರೂಪ ಹೇಗಿರುತ್ತದೆ ಎಂಬ ವಿವರಣೆ ಇಲ್ಲಿದೆ.

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪ ಸ್ )/ ಸ್ಕೇಲ್–I ಅಧಿಕಾರಿ ಪೂರ್ವ ಭಾವಿ ಪರೀಕ್ಷೆ:

ಕ್ರ.ಸಂ.ಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ
1ತಾರ್ಕಿಕ  ಪರೀಕ್ಷೆ (Reasoning)    ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದರೊಂದು ಭಾಷೆಯ ಆಯ್ಕೆ4040      ಸಂಯೋಜಿತ ಸಮಯ;45 ನಿಮಿಷಗಳು
2ಸಂಖ್ಯಾತ್ಮಕ ಸಾಮರ್ಥ್ಯ  (Numerical Ability)/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ (Quantitative Aptitude)  40  40
 ಒಟ್ಟು 8080 

ಮುಖ್ಯ ಪರೀಕ್ಷೆ

(ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ )/ಸ್ಕೇಲ್–I ಅಧಿಕಾರಿ):

ಕ್ರ .ಸಂಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ  
1ತಾರ್ಕಿಕ ಪರೀಕ್ಷೆಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050    2 ಗಂಟೆಗಳ ಸಂಯೋಜಿತ ಸಮಯ
2ಕಂಪ್ಯೂಟರ್ ಜ್ಞಾನ4020
3ಸಾಮಾನ್ಯ ಅರಿವು (General Awareness)4040
4a*ಆಂಗ್ಲ ಭಾಷೆಇಂಗ್ಲಿಷ್4040
5b*ಹಿಂದಿ ಭಾಷೆಹಿಂದಿ4040
6ಸಂಖ್ಯಾತ್ಮಕ ಸಾಮರ್ಥ್ಯ/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಟೆಸ್ಟ್ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050
 ಒಟ್ಟು 200200 
(*ಅಭ್ಯರ್ಥಿಗಳು 4 a ಅಥವಾ 4 b ಆಯ್ಕೆ ಮಾಡಬಹುದು)

ಕರ್ನಾಟಕದ ಅಭ್ಯರ್ಥಿಗಳು ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದ ರೊಂದು ಭಾಷೆಯ ಆಯ್ಕೆ ಮಾಡಿಕೊಳ್ಳಬಹುದು. ಆನ್ಲೈ ನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆಯನ್ನು ಆಯ್ಕೆ ಮಾಡಿಕೊಂಡಿರಬೇಕು. ಅದೇ ಭಾಷೆಯಲ್ಲೇ ಪರೀಕ್ಷೆ ಬರೆಯಬೇಕು (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ).

ಗಮನಿಸಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ ) ಪರೀಕ್ಷೆ ಬರೆಯುವವರು ಗಣಿತಕ್ಕೆ ಸಂಬಂಧಿಸಿದಂತೆ ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆ ಬರೆಯಬೇಕು ಹಾಗೂ ಅಧಿಕಾರಿ ಸ್ಕೇಲ್-I ಹುದ್ದೆಗಾಗಿ ಪರೀಕ್ಷೆ ಬರೆಯುವವರು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆ ಬರೆಯಬೇಕು.

ಕ್ಲಿಷ್ಟತೆಯ ಮಟ್ಟ

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಸಂಭವನೀಯತೆ, ಕ್ರಮಪಲ್ಲಟನೆ ಮತ್ತು ಸಂಯೋಜನೆ, ಡೇಟಾ ಸಮರ್ಪಕತೆ ಸರಾಸರಿ, ಶೇಕಡಾವಾರು, ಗುಣಾಕಾರ, ಭಾಗಾಕಾರ, ವರ್ಗ ಮೂಲಗಳು, A.P, G.P ಸೇರಿದಂತೆ ಸಂಖ್ಯಾ ಲೆಕ್ಕಾಚಾರದ ಪ್ರಶ್ನೆಗಳ ವಿಷಯದ ಮೇಲೆ ಪ್ರಶ್ನೆಗಳಿರುತ್ತವೆ. ಸರಳ ಮತ್ತು ಚಕ್ರ ಬಡ್ಡಿ, ಲಾಭ/ನಷ್ಟ ಕುರಿತ ಪ್ರಶ್ನೆಗಳೂ ಇರುತ್ತವೆ. ಕೆಲಸದ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳು ಉದಾ: 3 ಜನರು ಒಂದು ಕೆಲಸವನ್ನು 5 ದಿನಗಳಲ್ಲಿ ಮಾಡಿದರೆ 7 ಜನರು ಆ ಕೆಲಸವನ್ನು ಮಾಡಲು ಎಷ್ಟು ಸಮಯ ತೆಗೆದುಕೊಳ್ಳುತ್ತಾರೆ ಇಂಥವೂ ಇರುತ್ತವೆ.

ಇದನ್ನೂ ಓದಿ: Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

ಋಣಾತ್ಮಕ ಮೌಲ್ಯಮಾಪನ ಇದೆ

ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಲ್ಲಿಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.ಎಲ್ಲ ಹಂತದ ಋಣಾತ್ಮಕ ಮೌಲ್ಯಮಾಪನದಲ್ಲೂ ಇದೇ ನಿಯಮ ಅನ್ವಯಿಸುತ್ತದೆ.

ಆಯ್ಕೆ ವಿಧಾನ

ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ.

  • ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ-ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಗಳನ್ನು ಮಾತ್ರ  ಅಂತಿಮ ಮೆರಿಟ್ ಪಟ್ಟಿಗಾಗಿ ಪರಿಗಣಿಸಲಾಗುತ್ತದೆ. ಈ ಹುದ್ದೆಯ ನೇಮಕ ಪ್ರಕ್ರಿಯೆಯಲ್ಲಿ ಸಂದರ್ಶನ ಇರುವುದಿಲ್ಲ.
  • ಅಧಿಕಾರಿಗಳ ಹುದ್ದೆಗೆ ಸ್ಕೇಲ್-I ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕವನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಸಂದರ್ಶನ

ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ (ಸ್ಕೇಲ್ I) ಆಫೀಸರ್ಸ್ ಸ್ಕೇಲ್-I ಹುದ್ದೆಗೆ ಮುಖ್ಯ ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ನಿಗದಿಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಸಾಮಾನ್ಯ ವರ್ಗಕ್ಕೆ ಶೇ40. ಎಸ್.ಸಿ/ಎಸ್.ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 35.

ಇದನ್ನೂ ಓದಿ: Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ದೇಶ

Amarnath Yatra: ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ

Amarnath Yatra: ಪವಿತ್ರ ಅಮರನಾಥ ಯಾತ್ರೆ 2024 ಆರಂಭವಾಗಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು “ಬುಮ್ ಬುಮ್ ಭೋಲೆ”, “ಜೈ ಬಾಬಾ ಬುರ್ಫಾನಿ” ಹಾಗೂ “ಹರ್ ಹರ್ ಮಹಾದೇವ್” ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು ಶಿಬಿರದಿಂದ ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿರುವ ಪವಿತ್ರ ದೇವಾಲಯದತ್ತ ಹೆಜ್ಜೆ ಹಾಕಿದೆ.

VISTARANEWS.COM


on

Amarnath Yatra
Koo

ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ(Amarnath Yatra)ಗೆ ಇಂದು (ಜೂನ್‌ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು “ಬುಮ್ ಬುಮ್ ಭೋಲೆ”, “ಜೈ ಬಾಬಾ ಬುರ್ಫಾನಿ” ಹಾಗೂ “ಹರ್ ಹರ್ ಮಹಾದೇವ್” ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು ಶಿಬಿರದಿಂದ ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿರುವ ಪವಿತ್ರ ದೇವಾಲಯದತ್ತ ಹೆಜ್ಜೆ ಹಾಕಿದೆ.

4,603 ಯಾತ್ರಾರ್ಥಿಗಳ ತಂಡ

4,603 ಯಾತ್ರಾರ್ಥಿಗಳನ್ನು ಒಳಗೊಂಡ ಮೊದಲ ಬ್ಯಾಚ್ ಶುಕ್ರವಾರ ಬಿಗಿ ಭದ್ರತೆಗಳ ನಡುವೆ ಕಾಶ್ಮೀರ ಕಣಿವೆಯನ್ನು ತಲುಪಿತ್ತು. ಈ ವರ್ಷದ 52 ದಿನಗಳ ಸುದೀರ್ಘ ತೀರ್ಥಯಾತ್ರೆ ಆಗಸ್ಟ್ 19ರಂದು ಕೊನೆಗೊಳ್ಳಲಿದೆ. ಅಮರನಾಥ ಯಾತ್ರೆಗೆ ಆನ್‌ಲೈನ್‌ ನೋಂದಣಿ ಏಪ್ರಿಲ್ 15ರಂದು ಶ್ರೀ ಅಮರನಾಥ ದೇವಾಲಯ ಮಂಡಳಿಯ (SASB) ವೆಬ್‌ಸೈಟ್‌ ಮತ್ತು ಪೋರ್ಟಲ್‌ನಲ್ಲಿ ಪ್ರಾರಂಭವಾಗಿದ್ದು, ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದೆ.

ಬಿಗಿ ಭದ್ರತೆ

ಸುಗಮ ಯಾತ್ರೆಯನ್ನು ಖಚಿತಪಡಿಸಿಕೊಳ್ಳಲು ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಚೆಕ್ ಪಾಯಿಂಟ್‌ ಸ್ಥಾಪನೆ ಸೇರಿದಂತೆ ಸಮಗ್ರ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ವರದಿಗಳ ಪ್ರಕಾರ ಈ ವರ್ಷದ ಯಾತ್ರೆಗೆ 3.50 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ. ದೇವಾಲಯಕ್ಕೆ ತೆರಳುವ ಎರಡು ಮಾರ್ಗಗಳಲ್ಲಿ 125 ಅಡುಗೆಮನೆಗಳನ್ನು ಸ್ಥಾಪಿಸಲಾಗಿದೆ ಮತ್ತು 6,000ಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ.

ಪ್ರತಿವರ್ಷ ಅಮರನಾಥ ಯಾತ್ರೆಯು ಲಕ್ಷಾಂತರ ಭಕ್ತರು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಜುಲೈ-ಆಗಸ್ಟ್‌ (ಹಿಂದೂ ಕ್ಯಾಲೆಂಡರ್‌ನಲ್ಲಿ ಶ್ರಾವಣ ಮಾಸ)ನಲ್ಲಿ ಈ ಯಾತ್ರೆ ನಡೆಯುತ್ತದೆ. ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 141 ಕಿ.ಮೀ. ದೂರದಲ್ಲಿರುವ ಅಮರನಾಥ ಪವಿತ್ರ ಗುಹೆಯು ಲಡಾರ್ ಕಣಿವೆಯಲ್ಲಿದೆ. ಇದು ಹಿಮನದಿಗಳು ಮತ್ತು ಹಿಮದಿಂದ ಆವೃತವಾದ ಪರ್ವತಗಳಿಂದ ಕೂಡಿದೆ. ಹಿಮಾಲಯದ ಅಮರನಾಥ ಯಾತ್ರೆ ಬಹಳ ಹಳೆಯದು ಮತ್ತು ಪವಿತ್ರವಾದದ್ದು. ಇಲ್ಲಿ ಸುಮಾರು 5,000 ವರ್ಷಗಳಷ್ಟು ಹಳೆಯದಾದ ಶಿವಲಿಂಗವಿದೆ. 

ಉಗ್ರ ಕರಿನೆರಳು

ಈ ಬಾರಿ ಅಮರನಾಥ ಯಾತ್ರೆ ಗುರಿಯಾಗಿಸಿ ವಿಧ್ವಂಸಕ ಕೃತ್ಯ ಎಸಗಲು ಪಾಕಿಸ್ತಾನ ಭಾರೀ ಸಂಚು ರೂಪಿಸಿರುವುದು ಬಯಲಾಗಿದೆ. ಲಷ್ಕರ್‌ ಉಗ್ರ ಸಂಘಟನೆ(Lashkar Terrorists) ಮುಖ್ಯಸ್ಥ ಅಬ್ದುಲ್‌ ರೆಹಮಾನ್‌ ಮಕ್ಕಿ ಲಾಹೋರ್‌ ಮತ್ತು ಬಹವಾಲ್‌ಪುರದಲ್ಲಿ ಅತಿ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ಹಂಚುವ ಬಗ್ಗೆ ಮಹತ್ವ ಸಭೆ ನಡೆಸಿದ್ದಾನೆ. ಅಮರನಾಥ್‌ ಯಾತ್ರೆ ಸಂದರ್ಭದಲ್ಲಿ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಅಮೆರಿಕ ನಿರ್ಮಿತ ಶಸ್ತ್ರಾಸ್ತಗಳನ್ನು ಪೂರೈಕೆ ಮಾಡುವುದೇ ಈ ಸಭೆಯ ಪ್ರಮುಖ ಉದ್ದೇಶವಾಗಿತ್ತು ಎಂದು ತಿಳಿದು ಬಂದಿದ್ದು, ಈ ನಿಟ್ಟಿನಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ದಾಳಿಗಳನ್ನು ಮತ್ತು ಕದನ ವಿರಾಮ ಉಲ್ಲಂಘನೆಗಳನ್ನು ತಡೆಯಲು ಭಾರತದ ಸರ್ಕಾರವು ಮುಂದಾಗಿದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: Amarnath Yatra: ಆಗಸ್ಟ್‌ನಲ್ಲಿ ಪಾಕ್‌ ನಡೆಸುತ್ತಾ ಡೆಡ್ಲಿ ಅಟ್ಯಾಕ್‌? ಎರಡೆರಡು ಉಗ್ರ ಸಂಘಟನೆಗಳಿಂದ ದೊಡ್ಡ ಪ್ಲ್ಯಾನ್‌!

Continue Reading

ಪ್ರವಾಸ

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Assam Tour: ಪ್ರಕೃತಿ, ಸಂಸ್ಕೃತಿ ಮತ್ತು ಸಾಹಸವು ಪರಸ್ಪರ ಸಾಮರಸ್ಯದಿಂದ ಹೇಗೆ ಸಹಬಾಳ್ವೆ ನಡೆಸಬಹುದು ಎಂಬುದರ ಸಂಕೇತವೇ ಪೆಲ್ಲಿಂಗ್. ವಿಸ್ಮಯ-ಸ್ಫೂರ್ತಿದಾಯಕ ಹಲವು ತಾಣಗಳು, ಆಳವಾಗಿ ಬೇರೂರಿರುವ ಸಂಪ್ರದಾಯ ಮತ್ತು ಸ್ನೇಹಪರ ದಾರಿಗಳು ಪೆಲ್ಲಿಂಗ್‌ ಪ್ರವಾಸವನ್ನು (Pelling Tour) ಶಾಶ್ವತವಾಗಿ ನನಪಿನಲ್ಲಿ ಉಳಿಯುವಂತೆ ಮಾಡುತ್ತದೆ.

VISTARANEWS.COM


on

By

Assam Tour
Koo

ಆಕರ್ಷಕ ಪರಿಸರ, ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು (Assam Tour) ಹೊಂದಿರುವ ಪುಟ್ಟ ಗ್ರಾಮ ಪೆಲ್ಲಿಂಗ್ (Pelling Tour) ಹಿಮಾಲಯದ (himalaya) ಇಳಿಜಾರಿನಲ್ಲಿದೆ. ತನ್ನ ಸೌಂದರ್ಯದಿಂದಲೇ ಸಿಕ್ಕಿಂಗೆ (sikkim) ಬರುವ ಪ್ರವಾಸಿಗರನ್ನು (tourist) ತನ್ನತ್ತ ಸೆಳೆಯುತ್ತದೆ. ಪ್ರಕೃತಿಯ ಮಡಿಲಲ್ಲಿ ಮನ ಶಾಂತಿಯನ್ನು ಹುಡುಕುವವರಿಗೆ ಇದು ಸೂಕ್ತ ಸ್ಥಳವಾಗಿದೆ. ಪೆಲ್ಲಿಂಗ್ನಲ್ಲಿ ಅತ್ಯಂತ ಆಸಕ್ತಿದಾಯಕ ಹಲವಾರು ತಾಣಗಳಿವೆ. ಈ ತಾಣಗಳು ನಿಮ್ಮ ಪ್ರವಾಸದ ಅನುಭವ1ವನ್ನು ರೋಮಾಂಚಕಗೊಳಿಸುವುದು ಮಾತ್ರವಲ್ಲ ಸ್ಮರಣೀಯಗೊಳಿಸುತ್ತದೆ.

ಕಾಂಚನಜುಂಗಾ

ಪ್ರಪಂಚದ ಮೂರನೇ ಅತೀ ಎತ್ತರದ ಶಿಖರವಾದ ಕಾಂಚನಜುಂಗಾವನ್ನು ಪೆಲ್ಲಿಂಗ್‌ನಿಂದ ಅತ್ಯಂತ ಹತ್ತಿರದಿಂದ ನೋಡಬಹುದು. ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದಲ್ಲಿ ಪರ್ವತವು ಗುಲಾಬಿ ಬಣ್ಣಕ್ಕೆ ತಿರುಗುವುದು ಕಣ್ಣಿಗೆ ಹಬ್ಬವನ್ನು ಉಂಟು ಮಾಡುತ್ತದೆ. ಹಚ್ಚ ಹಸಿರಿನ ಕಾಡುಗಳ ನಡುವೆ ಹರಿಯುವ ಜಲಪಾತಗಳು ತನ್ನ ಸೌಂದರ್ಯದಿಂದ ಮೋಡಿಮಾಡುವುದು ಮಾತ್ರವಲ್ಲ ಎಲ್ಲರನ್ನೂ ಬೆರಗುಗೊಳಿಸುತ್ತದೆ.

ಸಾಂಸ್ಕೃತಿಕ ವೈಭವ

ಲೆಪ್ಚಾಗಳು, ಭುಟಿಯಾಗಳು ಮತ್ತು ನೇಪಾಳಿಗಳು ಸೇರಿದಂತೆ ವಿವಿಧ ಸಮುದಾಯಗಳ ಜನರು ಪೆಲ್ಲಿಂಗ್‌ನಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ ಇಲ್ಲಿ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯ ಸಂಗಮವಾಗಿದೆ. ಇಲ್ಲಿನ ಜನರು ತಮ್ಮ ಧಾರ್ಮಿಕತೆ ಮತ್ತು ಅವರಲ್ಲಿ ಐಕ್ಯತೆಯನ್ನು ತೋರಿಸಲು ಆಚರಿಸುವ ಬುಮ್ಚು ಹಬ್ಬದ ಸಂದರ್ಭದಲ್ಲಿ ಪಾಂಗ್ಟೋಡ್ ಚಾಮ್ ನೃತ್ಯ ಕಣ್ಣಿಗೆ ಹಬ್ಬವನ್ನು ಉಂಟು ಮಾಡುತ್ತದೆ. ಈ ವೇಳೆ ಸಿಕ್ಕಿಮರ ಆತಿಥ್ಯವನ್ನು ಅನುಭವಿಸಬಹುದು.


ಸಾಹಸ ಪ್ರಿಯರಿಗಾಗಿ ಸಾಕಷ್ಟು ಅವಕಾಶ

ಜೀವನದಲ್ಲಿ ರೋಮಾಂಚನವನ್ನು ಬಯಸುವವರಿಗೆ ಪೆಲ್ಲಿಂಗ್‌ನಲ್ಲಿ ಸಾಕಷ್ಟು ಉತ್ಸಾಹ ತುಂಬುವ ತಾಣಗಳಿವೆ. ಯುಕ್ಸೋಮ್ ಅಥವಾ ಖೆಚಿಯೋಪಾಲ್ರಿ ಸರೋವರವಿರುವ ಹತ್ತಿರದ ಹಳ್ಳಿಗಳಿಗೆ ಪಾದಯಾತ್ರೆ ಮಾಡುವಾಗ ವಿವಿಧ ಜಾತಿಯ ಪ್ರಾಣಿಗಳನ್ನು ಕಣ್ತುಂಬಿಕೊಳ್ಳಬಹುದು. ಸಾಹಸ ಪ್ರಿಯ ಪ್ರವಾಸಿಗರು ಪ್ಯಾರಾಗ್ಲೈಡಿಂಗ್, ರಿವರ್ ರಾಫ್ಟಿಂಗ್ ಅಥವಾ ಮೌಂಟೇನ್ ಬೈಕಿಂಗ್‌ನಂತಹ ಚಟುವಟಿಕೆಗಳನ್ನು ನಡೆಸಬಹುದು.

ಆಧ್ಯಾತ್ಮಿಕ ಧಾಮ

ಪೆಲ್ಲಿಂಗ್ ಸುತ್ತಮುತ್ತ ಇರುವ ಅನೇಕ ಹಳೆಯ ಮಠಗಳಲ್ಲಿ ಪೆಮಯಾಂಗಟ್ಸ್ ಮಠವು ಒಂದಾಗಿದೆ. ಸಂಕೀರ್ಣವಾದ ಧಾರ್ಮಿಕ ಕಲಾಕೃತಿಗಳು ಮತ್ತು ಶಿಲ್ಪಗಳನ್ನು ಹೊಂದಿರುವ ಇದು ಸಂದರ್ಶಕರನ್ನು ಮೋಡಿ ಮಾಡುತ್ತದೆ. ಮನ ಶಾಂತಿ ಬಯಸುವವರು ಇಲ್ಲಿ ಸನ್ಯಾಸಿಗಳಂತೆ ಜೀವನ ನಡೆಸಬಹುದು.

ಸುಸ್ಥಿರ ಪ್ರವಾಸೋದ್ಯಮ

ಪೆಲ್ಲಿಂಗ್ ಸುಸ್ಥಿರ ಪ್ರವಾಸೋದ್ಯಮಕ್ಕೆ ಮೀಸಲಾಗಿದೆ. ಪರಿಸರ ಸ್ನೇಹಿ ಯೋಜನೆಗಳಿಗೆ ಇದು ಒತ್ತು ನೀಡುತ್ತದೆ. ಸ್ಥಳೀಯ ಜನರ ಜೀವನೋಪಾಯವನ್ನು ಬೆಂಬಲಿಸುವ ಜೊತೆಗೆ ಜವಾಬ್ದಾರಿಯುತ ಪ್ರಯಾಣವನ್ನು ಪ್ರೋತ್ಸಾಹಿಸುವ ಹಲವಾರು ಸಮುದಾಯ ಆಧಾರಿತ ಪ್ರವಾಸೋದ್ಯಮಗಳಿಗೆ ಇಲ್ಲಿ ಅವಕಾಶ ನೀಡಲಾಗಿದೆ.


ಸ್ಥಳೀಯ ಖಾದ್ಯಗಳನ್ನು ಸವಿಯಬಹುದು

ಸಿಕ್ಕಿಮೀಸ್ ಪಾಕಪದ್ಧತಿ ಬಾಯಲ್ಲಿ ನೀರುಣಿಸುತ್ತದೆ. ವಿಶಿಷ್ಟವಾದ ರುಚಿ ಮತ್ತು ಪದಾರ್ಥಗಳನ್ನು ಇದು ಒಳಗೊಂಡಿದೆ. ಸ್ಥಳೀಯ ಆಹಾರಗಳಾದ ಮೊಮೊಸ್, ತುಕ್ಪಾ ಮತ್ತು ಗುಂಡ್ರುಕ್ ಹಾಗೂ ಟಿಬೆಟಿಯನ್ನರು ಮತ್ತು ನೇಪಾಳಿಗಳ ಭಕ್ಷ್ಯಗಳನ್ನು ಸವಿಯಬಹುದು. ಸಾವಯವ ಹಣ್ಣು, ತರಕಾರಿಗಳ ಅಧಿಕೃತ ಪಾಕವಿಧಾನಗಳನ್ನು ಆನಂದಿಸಬಹುದು.

ಇದನ್ನೂ ಓದಿ: Baby Moon: ಹನಿಮೂನ್‌ನಂತೆ ಬೇಬಿಮೂನ್; ಜನಪ್ರಿಯವಾಗುತ್ತಿರುವ ಹೊಸ ಟ್ರೆಂಡ್!

ಹಕ್ಕಿಗಳ ಕಲರವ

ಪೆಲ್ಲಿಂಗ್ ಸುತ್ತಮುತ್ತ ನಿತ್ಯಹರಿದ್ವರ್ಣ ಪರಿಸರದ ನಡುವೆ ಹಲವಾರು ಪಿಕ್ನಿಕ್ ತಾಣಗಳಿವೆ. ಮೋಡಿ ಮಾಡುವ ಚಿಲಿಪಿಲಿ ಹಕ್ಕಿಗಳ ಕಲರವವನ್ನು ಕೇಳಿ ಆನಂದಿಸುತ್ತಾ ಆಧುನಿಕ ಒತ್ತಡದ ಬದುಕಿನಿಂದ ದೂರವಾಗಿ ಮನಃಶಾಂತಿಯನ್ನು ಆನಂದಿಸಬಹುದು.

ವರ್ಷ ಪೂರ್ತಿ ವಿಶಿಷ್ಟ ಅನುಭವ

ಪೆಲ್ಲಿಂಗ್ ನಲ್ಲಿ ವರ್ಷ ಪೂರ್ತಿ ವಿಭಿನ್ನ ಋತುಗಳನ್ನು ಇಲ್ಲಿ ಆನಂದಿಸಬಹುದು. ವಸಂತಕಾಲದಲ್ಲಿ ಆಕಾಶವು ಸ್ಪಷ್ಟವಾಗಿರುವಾಗ ಪ್ರವಾಸಿಗರು ಪ್ರಕೃತಿಯ ನಡುವೆ ಹೆಜ್ಜೆ ಹಾಕಬಹುದು. ಆಕರ್ಷಕ ಛಾಯಾಚಿತ್ರಗಳನ್ನು ತೆಗೆದುಕೊಳ್ಳಬಹುದು. ಮಳೆಗಾಲದಲ್ಲಿ ಪ್ರಕೃತಿ ಪ್ರಿಯರು ಇಲ್ಲಿ ಅದ್ಭುತ ನೋಟಗಳನ್ನು ಕಣ್ತುಂಬಿಕೊಳ್ಳಬಹುದು. ಶರತ್ಕಾಲ ಮತ್ತು ಚಳಿಗಾಲದಲ್ಲಿ ಪ್ರವಾಸಿಗರು ಹಿಮಾಲಯದ ಸೌಂದರ್ಯವನ್ನು ಕಣ್ಮನದಲ್ಲಿ ತುಂಬಿಕೊಳ್ಳಬಹುದು.

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

Rahul Gandhi: 10 ವರ್ಷಗಳ ಬಳಿಕ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವು ಕಾಂಗ್ರೆಸ್‌ಗೆ ಲಭಿಸಿದ್ದು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯಲು ರಾಹುಲ್‌ ಗಾಂಧಿ ಅವರು ಸಜ್ಜಾಗಿದ್ದಾರೆ. ಇನ್ನು ಪ್ರತಿಪಕ್ಷ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಸಿಗುವ ಸಂಬಳ ಎಷ್ಟು? ಅವರಿಗೆ ಇರುವ ವಿಶೇಷ ಅಧಿಕಾರಗಳು ಯಾವವು? ಸವಲತ್ತುಗಳು ಏನೇನು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ (Leader Of The Opposition) ಆಯ್ಕೆಯಾಗಿದ್ದಾರೆ. ಕಳೆದ ಎರಡು (2014, 2019) ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವೂ ಪ್ರತಿಪಕ್ಷವಾಗುವಷ್ಟು ಸೀಟುಗಳನ್ನು ಗೆದ್ದಿರದ ಕಾರಣ ಪ್ರತಿಪಕ್ಷ ನಾಯಕರೇ ಇರಲಿಲ್ಲ. ಆದರೆ, ಕಳೆದ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳನ್ನು ಗೆದ್ದಿದ್ದು, ಈಗ ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇವರು ಆಡಳಿತಾರೂಢ ಪಕ್ಷಕ್ಕೆ ಸೆಡ್ಡು ಹೊಡೆಯುವ ಜತೆಗೆ ಹಲವು ಅಧಿಕಾರಗಳು ಹಾಗೂ ಸವಲತ್ತುಗಳನ್ನು ಪಡೆಯಲಿದ್ದಾರೆ. ಅವುಗಳ ಕುರಿತ ಮಾಹಿತಿ ಹೀಗಿದೆ…

ರಾಹುಲ್‌ ಗಾಂಧಿ ಸಂಬಳ ಎಷ್ಟು?

ರಾಹುಲ್‌ ಗಾಂಧಿ ಅವರು ಸಂಸದನಾಗಿ ಪಡೆಯುವ ಸಂಬಳದ ಜತೆಗೆ ಪ್ರತಿಪಕ್ಷ ನಾಯಕರೂ ಆಗಿರುವ ಕಾರಣ ಅವರಿಗೆ ಮಾಸಿಕ 3.3 ಲಕ್ಷ ರೂ. ಸಂಬಳ ಸಿಗಲಿದೆ. ಅಲ್ಲದೆ, ಕ್ಯಾಬಿನೆಟ್‌ ದರ್ಜೆಯ ಸಚಿವರಿಗೆ ಸಿಗುವ ಸವಲತ್ತುಗಳು, ಭದ್ರತೆ (ಝಡ್‌ ಪ್ಲಸ್‌) ಸಿಗಲಿದೆ. ಕ್ಯಾಬಿನೆಟ್‌ ಸಚಿವರೊಬ್ಬರಿಗೆ ಸಿಗುವ ಬಂಗಲೆಯೇ ರಾಹುಲ್‌ ಗಾಂಧಿ ಅವರಿಗೂ ನೀಡಲಾಗುತ್ತದೆ. ಇದರ ಜತೆಗೆ ಹಲವು ಭತ್ಯೆಗಳು ಕೂಡ ರಾಹುಲ್‌ ಗಾಂಧಿ ಅವರಿಗೆ ಸಿಗಲಿವೆ.

Rahul Gandhi

ಅವರ ಅಧಿಕಾರ ವ್ಯಾಪ್ತಿ ಹೇಗಿರಲಿದೆ?

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಹಲವು ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ. ಜಂಟಿ ಸಂಸದೀಯ ಸಮಿತಿಗಳು, ಪಬ್ಲಿಕ್‌ ಅಕೌಂಟ್ಸ್‌ ಸಮಿತಿ ಸದಸ್ಯರಾಗಿರುತ್ತಾರೆ. ಹಾಗೆಯೇ, ಸಿಬಿಐ ನಿರ್ದೇಶಕ, ಮುಖ್ಯ ಚುನಾವಣಾ ಆಯುಕ್ತರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಚೀಫ್‌ ವಿಜಿಲನ್ಸ್‌ ಕಮಿಷನರ್‌, ಕೇಂದ್ರೀಯ ಮಾಹಿತಿ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡುವಾಗ ರಾಹುಲ್‌ ಗಾಂಧಿ ಅವರು ಕೂಡ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಸದನದ ಮುಂದಿನ ಸಾಲಿನಲ್ಲಿರುವ ಆಸನದಲ್ಲಿ ಕುಳಿತುಕೊಳ್ಳಲಿದ್ದಾರೆ. ಹಾಗೆಯೇ, ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾತನಾಡುವಾಗ ಕೂಡ ಅವರಿಗೆ ಮುಂದಿನ ಸಾಲಿನಲ್ಲಿಯೇ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಲೋಕಸಭೆಯ ಒಟ್ಟು ಕ್ಷೇತ್ರಗಳ ಶೇ.10ರಷ್ಟು ಅಂದರೆ 55 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಪಕ್ಷವು ಅಧಿಕೃತ ಪ್ರತಿಪಕ್ಷ ಸ್ಥಾನವನ್ನು ಪಡೆಯುತ್ತದೆ. ಆ ಪಕ್ಷದ ನಾಯಕ ಪ್ರತಿಪಕ್ಷ ನಾಯಕರಾಗುತ್ತಾರೆ. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 44 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇತ್ತು. ಈ ಬಾರಿ 99 ಕ್ಷೇತ್ರಗಳನ್ನು ಗೆದ್ದಿರುವ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

Continue Reading
Advertisement
Job Alert
ಉದ್ಯೋಗ18 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್22 mins ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ23 mins ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ23 mins ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ26 mins ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್35 mins ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ51 mins ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ53 mins ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ53 mins ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Kannada New Movie niveditha Shivarajkumar frefly cinema sudharani join
ಸಿನಿಮಾ1 hour ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌