Vistara News Polling Booth: ವಿಜಯಪುರದಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ ಕದನ ನಿಶ್ಚಿತ; ಅಂತರ ಕೇವಲ 1%! - Vistara News

ಪ್ರಮುಖ ಸುದ್ದಿ

Vistara News Polling Booth: ವಿಜಯಪುರದಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ ಕದನ ನಿಶ್ಚಿತ; ಅಂತರ ಕೇವಲ 1%!

Vistara News Polling Booth: ವಿಸ್ತಾರ ಮತಜಾಗೃತಿಗೆ 12ನೇ ದಿನವೂ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಗುಮ್ಮಟನಗರಿ ವಿಜಯಪುರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷವನ್ನು ಮತದಾರರು ಆಯ್ಕೆ ಮಾಡಿದ್ದಾರೆ, ಯಾರಿಗೆ ಎಷ್ಟು ಮತ ಬಂದಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

vijayapura vistara news polling booth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಶನಿವಾರ (ಮಾ. 23) ನಡೆಸಿದ ಪೋಲಿಂಗ್‌ ಬೂತ್‌ (Vistara news polling booth) ಸಮೀಕ್ಷೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ‌ ಈ ಬಾರಿ ಬಿಜೆಪಿ-ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿ ಕದನ ನಿಶ್ಚಿತ ಎಂಬುವುದು ತಿಳಿದುಬಂದಿದೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಇವುಗಳ ಪೈಕಿ ಒಟ್ಟು 5,788 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಶೇ.49ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇ.48ರಷ್ಟು ಜನರು ಕಾಂಗ್ರೆಸ್‌ ಪರ ಒಲವು ತೋರಿದ್ದಾರೆ. ಉಳಿದಂತೆ ಇತರ ಪಕ್ಷಗಳೀಗೆ ಶೇ. 3 ಮಂದಿ ಬೆಂಬಲ ಸೂಚಿಸಿದ್ದಾರೆ.

ವಿಸ್ತಾರ ನ್ಯೂಸ್‌ ನಡೆಸಿದ ಈ ಸಮೀಕ್ಷೆಗೆ ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ಸಾವಿರಾರು ಕರೆಗಳು ಬಂದಿವೆ. ಅದರಲ್ಲಿ ಸ್ವೀಕರಿಸಿದ ಒಟ್ಟು 5,788 ಕರೆಗಳ ಪೈಕಿ ಬಿಜೆಪಿಗೆ 2,832 ಮತ, ಕಾಂಗ್ರೆಸ್‌ಗೆ 2,772 ಮತ ಬಂದಿವೆ. ಇತರರಿಗೆ 184 ಮತ ಬಂದಿವೆ. ಇದರಿಂದ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಕಠಿಣ ಸ್ಪರ್ಧೆ ಇದ್ದರೂ ಮತ್ತೊಮ್ಮೆ ಬಿಜೆಪಿಯೇ ಜಯಭೇರಿ ಬಾರಿಸಲಿದೆ ಎಂಬುವುದು ಹೆಚ್ಚಿನ ಜನರ ಅಭಿಪ್ರಾಯವಾಗಿದೆ. ಆದರೆ, ಕಾಂಗ್ರೆಸ್‌ ಕೂಡ ತೀವ್ರ ಪೈಪೋಟಿ ನೀಡಿದೆ. ಇದರಿಂದ ಬಿಜೆಪಿಗೆ ಈ ಬಾರಿ ಕ್ಷೇತ್ರದಲ್ಲಿ ಗೆಲುವು ಸುಲಭವಲ್ಲ.

ಕರೆಗಳ ಶೇಕಡಾವಾರು ವಿವರ

ಸ್ವೀಕರಿಸಿದ ಕರೆಗಳು: 5,788
ಬಿಜೆಪಿ : 2,832 (ಶೇ.49)
ಕಾಂಗ್ರೆಸ್ : 2,772 (ಶೇ.48)
ಇತರೆ : 184 (ಶೇ.3)

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ರಮೇಶ್‌ ಜಿಗಜಿಣಗಿ ಕಣಕ್ಕಿಳಿಯುತ್ತಿದ್ದಾರೆ. ಕಾಂಗ್ರೆಸ್‌ನಿಂದ ರಾಜು ಆಲಗೂರು ಸ್ಪರ್ಧೆ ಮಾಡುತ್ತಿದ್ದಾರೆ. ವಿಜಯಪುರ 2009ರಲ್ಲಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟ ನಂತರ ನಡೆದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಹಾಲಿ ಸಂಸದ ರಮೇಶ ಜಿಗಜಿಣಗಿ ಸುಲಭ ಗೆಲುವು ದಾಖಲಿಸಿದ್ದು, ಸತತ 4ನೇ ನಾಲ್ಕನೇ ಬಾರಿ ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿದೆ.

ಇನ್ನು ದಲಿತ ಸಂಘರ್ಷ ಸಮಿತಿ ಮೂಲಕ ಹೋರಾಟ, ಉಪನ್ಯಾಸಕ ವೃತ್ತಿ ಹೀಗೆ ಹಲವಾರು ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಮೊದಲ ಬಾರಿ ಲೋಕಸಭೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಇಲ್ಲಿ ನಡೆದ 17 ಚುನಾವಣೆಗಳಲ್ಲಿ 8 ಬಾರಿ ಕಾಂಗ್ರೆಸ್ ಗೆದ್ದಿದೆ. ಈ ಕ್ಷೇತ್ರ ಒಮ್ಮೆ ಪಕ್ಷೇತರ ಅಭ್ಯರ್ಥಿಯ ಪಾಲಾದರೆ, ಮತ್ತೊಮ್ಮೆ ಸ್ವತಂತ್ರ ಪಕ್ಷದ ಪಾಲಾಗಿತ್ತು. ಆ ನಂತರ ಒಮ್ಮೆ ಜನತಾ ಪಕ್ಷ, ಮತ್ತೊಮ್ಮೆ ಜನತಾ ದಳ ಗೆದ್ದಿದೆ. 1999ರಿಂದ ಬಿಜೆಪಿ ಸತತ ಐದು ಬಾರಿ ಗೆಲುವು ಕಂಡಿದ್ದು, ಇದರಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌ 2 ಬಾರಿ, ಹಾಲಿ ಸಂಸದ ರಮೇಶ್‌ ಜಿಗಜಿಣಗಿ 3 ಬಾರಿ ಜಯಭೇರಿ ಬಾರಿಸಿದ್ದಾರೆ. ಆದರೆ, ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ ಫಲಿತಾಂಶದ ಪ್ರಕಾರ ಈ ಬಾರಿ ಬಿಜೆಪಿ-ಕಾಂಗ್ರೆಸ್‌ ನಡುವಿನ ತೀವ್ರ ಹಣಾಹಣಿಯಲ್ಲಿ ಬಿಜೆಪಿಯೇ ಮುನ್ನಡೆ ಸಾಧಿಸಲಿದೆ ಎಂದು ಮತದಾರರು ಅಭಿಪ್ರಾಯ ಹೊರಹಾಕಿದ್ದಾರೆ.

ಮಾರ್ಚ್‌ 25, ಸೋಮವಾರ ಯಾವ ಕ್ಷೇತ್ರ?

ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಕೊಪ್ಪಳ ಮತ್ತು ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ಬಾಗಲಕೋಟೆ ಕ್ಷೇತ್ರದ ಜನ ಫೋನ್‌ ಮಾಡಿ ಓಟ್‌ ಮಾಡಬಹುದು. ಮಧ್ಯಾಹ್ನ 2 ಮತ್ತು ರಾತ್ರಿ 8 ಗಂಟೆಗೆ ಎರಡೂ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

Vistara news polling booth

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Robert Fico: ರಾಬರ್ಟ್‌ ಫಿಕೊ ಅವರ ಹೊಟ್ಟೆಗೆ ಗುಂಡು ತಗುಲಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೇ ಅಲ್ಲ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕಾರಣ ಬ್ಯಾನ್ಸ್‌ಕಾ ಬಿಸ್ಟ್ರಿಕಾ ಆಸ್ಪತ್ರೆಗೆ ಹೆಲಿಕಾಪ್ಟರ್‌ ಮೂಲಕ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

VISTARANEWS.COM


on

Robert Fico
Koo

ಬ್ರಾಟಿಸ್ಲಾವಾ: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ (Robert Fico) ಅವರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಂಡ್ಲೋವಾದಲ್ಲಿ (Handlova) ಸರ್ಕಾರಿ ಸಭೆಯೊಂದರಲ್ಲಿ ಪಾಲ್ಗೊಂಡು ಹೊರಬರುತ್ತಿರುವಾಗಲೇ ದುಷ್ಕರ್ಮಿಯು ಗುಂಡಿನ ದಾಳಿ ದಾಳಿ ನಡೆಸಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿಯು ರಾಬರ್ಟ್‌ ಫಿಕೊ ಅವರನ್ನು ರಕ್ಷಣೆ ಮಾಡಿದ್ದಾರೆ. ಇದಾದ ಬಳಿಕ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಬರ್ಟ್‌ ಫಿಕೊ ಅವರ ಹೊಟ್ಟೆಗೆ ಗುಂಡು ತಗುಲಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೇ ಅಲ್ಲ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕಾರಣ ಬ್ಯಾನ್ಸ್‌ಕಾ ಬಿಸ್ಟ್ರಿಕಾ ಆಸ್ಪತ್ರೆಗೆ ಹೆಲಿಕಾಪ್ಟರ್‌ ಮೂಲಕ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆದಾಗ್ಯೂ, ದಾಳಿ ಮಾಡಿರುವ ದುಷ್ಕರ್ಮಿ ಯಾರು? ಆತನ ಹೆಸರೇನು? ಯಾವ ಸಂಘಟನೆಗೆ ಸೇರಿದವನು? ದಾಳಿ ಮಾಡಿದ್ದೇಕೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಭೀಕರ ದಾಳಿಯ ವಿಡಿಯೊ ಇಲ್ಲಿದೆ

59 ವರ್ಷದ ರಾಬರ್ಟ್‌ ಫಿಕೊ ಅವರ ಮೇಲೆ ನಾಲ್ಕು ಗುಂಡು ಹಾರಿಸಲಾಗಿದೆ. ಒಂದು ಗುಂಡು ಅವರ ಹೊಟ್ಟೆಗೆ ತಗುಲಿದ ಕಾರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ರಾಬರ್ಟ್‌ ಫಿಕೊ ಶೀಘ್ರವೇ ಗುಣಮುಖರಾಗಲಿ ಎಂದು ಜನ ಪ್ರಾರ್ಥಿಸುತ್ತಿದ್ದಾರೆ. ದಾಳಿಯನ್ನು ಸ್ಲೊವಾಕಿಯಾ ಸರ್ಕಾರವೂ ದೃಢಪಡಿಸಿದೆ. “ರಾಬರ್ಟ್‌ ಫಿಕೊ ಅವರ ಮೇಲೆ ದಾಳಿ ನಡೆದಿರುವ ವಿಚಾರ ತಿಳಿದು ಬೇಸರವಾಯಿತು. ಅವರು ಶೀಘ್ರವೇ ಗುಣಮುಖರಾಗಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಸ್ಲೊವಾಕಿಯಾ ಅಧ್ಯಕ್ಷೆ ಜುಜಾನ ಕ್ಯಾಪುಟೋವಾ ಪೋಸ್ಟ್‌ ಮಾಡಿದ್ದಾರೆ.

ದಾಳಿ ಮಾಡಿದ ಆರೋಪಿಯ ಬಂಧನ.

ರಷ್ಯಾ ಪರ ನಿಲುವು ತಾಳಿದ್ದಕ್ಕೇ ದಾಳಿ?

ರಾಬರ್ಟ್‌ ಫಿಕೊ ಅವರು ರಷ್ಯಾ ಪರವಾಗಿ ನಿಲುವು ತಾಳಿ, ಉಕ್ರೇನ್‌ಅನ್ನು ವಿರೋಧಿಸಿದ್ದೇ ದಾಳಿ ನಡೆಸಲು ಕಾರಣ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, “ಉಕ್ರೇನ್‌ನಲ್ಲಿ 2022ರಿಂದ ಅಲ್ಲ, 2014ರಿಂದಲೂ ಯುದ್ಧ ನಡೆದಿದೆ. ಉಕ್ರೇನ್‌ನಲ್ಲಿರುವ ರಷ್ಯಾ ನಾಗರಿಕರನ್ನು ಭೀಕರವಾಗಿ ಕೊಲೆ ಮಾಡಿದ ಬಳಿಕ ಯುದ್ಧ ಆರಂಭವಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಉಕ್ರೇನ್‌ ಮೇಲೆ ರಷ್ಯಾ ದಾಳಿ ಮಾಡುತ್ತಲೇ ಇದೆ. ಇದಕ್ಕೆ ರಷ್ಯನ್ನರನ್ನು ಉಕ್ರೇನ್‌ ಕೊಂದಿದ್ದೇ ಕಾರಣ. ಉಕ್ರೇನ್‌ನಲ್ಲಿ ಆ ದೇಶದ ಸೇನೆ ವಿರುದ್ಧ ರಷ್ಯಾ ಪರವಾಗಿ ಅಮೆರಿಕವೂ ದಾಳಿ ಮಾಡುತ್ತಿದೆ” ಎಂದಿದ್ದರು. ಇದೇ ಕಾರಣಕ್ಕೆ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಇಬ್ಬರು ಶೂಟರ್‌ಗಳ ಬಂಧನ

Continue Reading

ಕ್ರೀಡೆ

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Federation Cup 2024: ಫೆಡರೇಷನ್ ಕಪ್‌ನಲ್ಲಿ(Federation Cup)ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ, ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಕೊನೆಗೂ ಚಿನ್ನದ ಪದಕ ಗೆದ್ದರು

VISTARANEWS.COM


on

Federation Cup 2024
Koo

ಭುವನೇಶ್ವರ: ಮೂರು ವರ್ಷದ ಬಳಿಕ ತವರಿನಲ್ಲಿ ನಡೆದ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕಿಳಿದ್ದ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ, ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(82.27 ಮೀ.), ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಕೊನೆಗೂ ಚಿನ್ನದ ಪದಕ ಗೆದ್ದರು. ಮನು(82.06 ಮೀ) ಬೆಳ್ಳಿ ಪದಕ್ಕೆ ತೃಪ್ತಿಪಟ್ಟರು. ಮತೋರ್ವ ಪದಕ ಭರವಸೆಯ ಕಿಶೋರ್ ಜೆನಾ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಪದಕ ಗೆಲ್ಲುವಲ್ಲಿ ವಿಫಲರಾದರು. ಉತ್ತಮ್ ಪಾಟೀಲ್(78.39 ಮೀ) ಮೂರನೇ ಸ್ಥಾನ ಪಡೆದರು.

ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ (84.14 ಮೀ.) 6ನೇ ಸ್ಥಾನ ಪಡೆದಿದ್ದ ಮನು ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್​ಗೆ ತೀವ್ರ ಪೈಪೋಟಿ ನೀಡಿದರು. ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲಿ 82 ಮೀ. ದೂರ ಜಾವೆಲಿನ್​​ ಎಸೆದರೆ, ಡಿಪಿ ಮನು 82.06 ಮೀ ದೂರಕ್ಕೆ ಜಾವೆಲಿನ್ ಎಸೆದು ಮೊದಲ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡರು. ದ್ವಿತೀಯ ಸುತ್ತಿನಲ್ಲಿ ಮನು 77.23 ದೂರ ಎಸೆದರು. ಆದರೆ ಇವರ ಪ್ರತಿಸ್ಪರ್ಧಿ ನೀರಜ್​ ಈ ಎಸೆತವನ್ನು ಉದ್ದೇಶಪೂರ್ವಕವಾಗಿ ಫೌಲ್ ಮಾಡಿದರು. ಈ ಥ್ರೋ ಅಷ್ಟು ಉತ್ತಮವಾಗಿರದ ಕಾರಣ ನೀರಜ್​ ಈ ತಂತ್ರ ಬಳಸಿದರು.

ಮೂರನೇ ಎಸೆತದಲ್ಲಿ ಮನು 81.43 ಮೀ. ದೂರ ದಾಖಲಿಸಿದರೆ, ಮತ್ತೆ ಎಡವಿದ ನೀರಜ್​ 81.29 ಮೀ ದಾಖಲಿಸಿ ಹಿನ್ನಡೆಯಲ್ಲೇ ಉಳಿದರು. ಆದರೆ, ನಾಲ್ಕನೇ ಪ್ರಯತ್ನದಲ್ಲಿ ಪುಟಿದೆದ್ದ ನೀರಜ್​ 82.27 ಮೀ ದೂರ ಜಾವೆಲಿನ್​ ಎಸೆದು ಅಗ್ರಸ್ಥಾನವನ್ನು ವಶಪಡಿಸಿಕೊಂಡರು. ಮನು ಈ ಸುತ್ತಿನಲ್ಲಿ 81.47 ಮೀ. ಎಸೆದರು. 28 ವರ್ಷದ ಕಿಶೋರ್ ಜೆನಾ ತಾವೆಸೆದ 4 ಎಸೆತಗಳ ಪೈಲಿ ಮೂರರಲ್ಲಿ ಫೌಲ್ ಆಗಿ ಅತ್ಯಂತ ಕಳಪೆ ಪ್ರದರ್ಶನ ತೋರಿದರು. ಕನಿಷ್ಠ ಮೂರನೇ ಸ್ಥಾನ ಪಡೆಯುವಲ್ಲಿಯೂ ವಿಫಲರಾದರು.

ಉತ್ತಮವಾಗಿ ಆಡುತ್ತಿದ್ದ ಮನು 5ನೇ ಮತ್ತು ಅಂತಿಮ 6 ಸುತ್ತಿನ ಎಸೆತವನ್ನು ಫೌಲ್ ಮಾಡಿದರು. ಅಂತಿಮವಾಗಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದರು. ನೀರಜ್​ ಬಹಳ ಕಷ್ಟಪಟ್ಟು ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಚೋಪ್ರಾ ಅವರು ಈ ಟೂರ್ನಿಯಲ್ಲಿ ಕೊನೆಯ ಬಾರಿಗೆ ಸ್ಪರ್ಧಿಸಿದ್ದು ಮಾರ್ಚ್ 17, 2021 ರಲ್ಲಿ. ಈ ವೇಳೆ ಅವರು 87.80 ಮೀ ಎಸೆಯುವ ಮೂಲಕ ಚಿನ್ನ ಗೆದಿದ್ದರು. ಈ ಬಾರಿ 82.27 ಮೀ. ಎಸೆದರು. ಕಳೆದ ಕೆಲವು ಟೂರ್ನಿಗೆ ಹೋಲಿಸಿದರೆ ನೀರಜ್​ ಅವರ ಕಳಪೆ ಪ್ರದರ್ಶನ ಇದಾಗಿದೆ.

ಕಾಶಿನಾಥ ನಾಯ್ಕ್ ತರಬೇತಿ

2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಎಂಬ ಜಾವೆಲಿನ್‌ ತರಬೇತುದಾರರ ಪರಿಚಯವೂ ಆಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಡಿ.ಪಿ. ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು.

ನೀರಜ್​ ಮತ್ತು ಕಿಶೋರ್​ ಈಗಾಗಲೇ ಪ್ಯಾರಿಸ್​ ಒಲಿಂಪಿಕ್ಸ್​ ಟಿಕೆಟ್​ ಪಡೆದಿದ್ದರು. ಮನು ಭಾರತದ ಮೂರನೇ ಸ್ಫರ್ಧಿಯಾಗಿ ಒಲಿಂಪಿಕ್ಸ್​ ಅರ್ಹತೆ ಪಡೆಲು ಅವರಿಗೆ ಈ ಟೂರ್ನಿಯಲ್ಲಿ 85.50 ಮೀ. ಎಸೆತದ ಮಾನದಂಡ ನೀಡಲಾಗಿತ್ತು. ಆದರೆ ಈ ಗುರಿಯನ್ನು ತಲುಪಲು ಅವರಿಂದ ಸಾಧ್ಯವಾಗಲಿಲ್ಲ.

ಮನು ಮಾಡಿದ ಸಾಧನೆಗಳು

  1. 2022ರ ಜೂನ್‌ನಲ್ಲಿ ನಡೆದ ರಾಷ್ಟ್ರೀಯ ಅಂತಾರಾಜ್ಯ ಹಿರಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಚಿನ್ನದ ಪದಕ
  2. 2023ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಚಿನ್ನ
  3. 2022ರ ಏಪ್ರಿಲ್‌ನಲ್ಲಿ ಕೇರಳದ ತಿರುವನಂಪುರಂನಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಬಂಗಾರದ ಪದಕ
  4. 2022ರ ಆಗಸ್ಟ್‌ನಲ್ಲಿ ನಡೆದ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಐದನೇ ಸ್ಥಾನಕ್ಕೆ ತೃಪ್ತಿ
  5. 2023ರ ಜುಲೈನಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಬೆಳ್ಳಿ
  6. 2022ರ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ನಡೆದ ಇಂಡಿಯನ್‌ ನ್ಯಾಷನಲ್‌ ಗೇಮ್ಸ್‌ನಲ್ಲಿ ಚಿನ್ನ

Continue Reading

ದೇಶ

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

Alamgir Alam: ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆಲಂಗೀರ್‌ ಆಲಂ ಅವರನ್ನು ಕರೆಯಲಾಗಿತ್ತು. ಸತತ ವಿಚಾರಣೆ ನಡೆಸಿದ ಬಳಿಕ ಇ.ಡಿ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿಯೇ ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರು ಜೈಲುಪಾಲಾಗಿದ್ದಾರೆ.

VISTARANEWS.COM


on

Alamgir Alam
Koo

ರಾಂಚಿ: ಜಾರ್ಖಂಡ್‌ ಗ್ರಾಮೀಣ ಅಭಿವೃದ್ಧಿ ಸಚಿವ, ಕಾಂಗ್ರೆಸ್‌ ನಾಯಕ ಆಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಗೆಲಸದವನ ಮನೆಯಲ್ಲಿ ಸುಮಾರು 35 ಕೋಟಿ ರೂ. ಪತ್ತೆಯಾದ ಬೆನ್ನಲ್ಲೇ ಇ.ಡಿ (ED) ಅಧಿಕಾರಿಗಳು ಆಲಂಗೀರ್‌ ಆಲಂ ಅವರನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಸುಮಾರು 10 ಗಂಟೆ ವಿಚಾರಣೆ ನಡೆಸಿದ ಇ.ಡಿ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದರು.

ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಆರೋಪಗಳು ಕೇಳಿಬಂದಿದ್ದು, ಇ.ಡಿ ತನಿಖೆ ನಡೆಸುತ್ತಿದೆ. ಆಲಂಗೀರ್‌ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಹಾಗೂ ಆತನ ಮನೆಯಲ್ಲಿ ಕೆಲಸ ಮಾಡುವ ಜಹಾಂಗೀರ್‌ ಆಲಂ ಅವರನ್ನು ಈಗಾಗಲೇ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಮನೆಗೆಲಸದವನಾದ ಜಹಾಂಗೀರ್‌ ಆಲಂ ಮನೆಯಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿದಾಗ ಸುಮಾರು 35.23 ಕೋಟಿ ರೂ. ಸಿಕ್ಕಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಂಚಿಯ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಜಹಾಂಗೀರ್‌ ಆಲಂ ಮನೆಗೆ ದಾಳಿ ಮಾಡಿದಾಗಂತೂ ನೋಟುಗಳ ರಾಶಿಯೇ ಕಂಡುಬಂದಿತ್ತು. 12ಕ್ಕೂ ಅಧಿಕ ಗಂಟೆಗಳವರೆಗೆ ಅಧಿಕಾರಿಗಳು ನೋಟುಗಳ ರಾಶಿಗಳನ್ನು ಮಷೀನ್‌ ಮೂಲಕ ಎಣಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಆಲಂಗೀರ್‌ ಆಲಂ ಅವರನ್ನು ಕರೆಯಲಾಗಿತ್ತು. ಸತತ ವಿಚಾರಣೆ ನಡೆಸಿದ ಬಳಿಕ ಇ.ಡಿ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿಯೇ ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರು ಜೈಲುಪಾಲಾಗಿದ್ದಾರೆ.

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇ.ಡಿಯು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರನ್ನು ಬಂಧಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ನಕಲಿ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Continue Reading

ರಾಜಕೀಯ

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

Prajwal Revanna Case: ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ (ಟ್ವಿಟರ್‌) ಖಾತೆಗೆ ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಈಗಾಗಲೇ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ? ಯಾವ ಕಾರಣಕ್ಕೆ ಅವರ ಖಾತೆಯಿಂದ ಬ್ಲ್ಯೂ ಟಿಕ್‌ಗೆ ಗೇಟ್‌ಪಾಸ್‌ ಸಿಕ್ಕಿದೆ ಎಂಬುದು ಸದ್ಯದ ಕುತೂಹಲವಾಗಿದೆ.

VISTARANEWS.COM


on

Prajwal Revanna Case Prajwal Revanna loses X recognition in Obscene Video case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading
Advertisement
Davanagere News
ಕರ್ನಾಟಕ4 mins ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ12 mins ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ28 mins ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ42 mins ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ48 mins ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest55 mins ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ1 hour ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ1 hour ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ1 hour ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

SBI Rates
ವಾಣಿಜ್ಯ2 hours ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ13 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ16 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌