HD Kumaraswamy: ಹಾರ್ಟ್‌ ಆಪರೇಷನ್‌ ಬಳಿಕ ಎಚ್‌ಡಿಕೆ ಮೊದಲ ಮಾತು; ಮಂಡ್ಯ, ಸಿಎಂ ಬಗ್ಗೆ ಹೇಳಿದ್ದೇನು? - Vistara News

Lok Sabha Election 2024

HD Kumaraswamy: ಹಾರ್ಟ್‌ ಆಪರೇಷನ್‌ ಬಳಿಕ ಎಚ್‌ಡಿಕೆ ಮೊದಲ ಮಾತು; ಮಂಡ್ಯ, ಸಿಎಂ ಬಗ್ಗೆ ಹೇಳಿದ್ದೇನು?

HD Kumaraswamy: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆ ಬಳಿಕ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಇನ್ನು ಮೂರ್ನಾಲ್ಕು ದಿನದಲ್ಲೇ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಯುವುದಾಗಿ ಹೇಳಿದ್ದಾರೆ.

VISTARANEWS.COM


on

HD Kumaraswamy first words after heart surgery and Attack on CM Siddaramaiah. also told that Mandya Lok Sabha constituency candidate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚೆನ್ನೈನಲ್ಲಿ ಹೃದಯ ಶಸ್ತ್ರಚಿಕಿತ್ಸೆ (Heart Surgery) ಮಾಡಿಸಿಕೊಂಡ ಬಳಿಕ ಬೆಂಗಳೂರಿಗೆ ಬಂದಿಳಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಮ್ಮ ಆರೋಗ್ಯ ಹಾಗೂ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡಿದ್ದಾರೆ. ನನ್ನನ್ನು ಭಗವಂತ ಕಾಪಾಡಿದ್ದಾನೆ. ಎರಡು ಬಾರಿ ನಡೆದಿದ್ದ ಆಪರೇಷನ್‌ನಲ್ಲಿ ಲೋಪದೋಷ ಆಗಿತ್ತು. ಈಗ ಮೂರನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಆಗಿದೆ ಎಂದು ಹೇಳಿದರು. ಅಲ್ಲದೆ, ಮಂಡ್ಯ ಲೋಕಸಭಾ ಕ್ಷೇತ್ರದ (Mandya Lok Sabha constituency) ಅಭ್ಯರ್ಥಿಯನ್ನು ಇನ್ನು ಮೂರ್ನಾಲ್ಕು ದಿನದಲ್ಲಿ ಅಂತಿಮ ಮಾಡುತ್ತೇನೆ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯ (CM Siddaramaiah) ಅವರದ್ದು ಡ್ರಾಮಾ ಎಂದು ಇದೇ ವೇಳೆ ಕಿಡಿಕಾರಿದರು.

ಚೆನ್ನೈನಿಂದ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಇಂದು ಜಗತ್ತು ಹಲವು ರೀತಿಯಲ್ಲಿ ತಾಂತ್ರಿಕವಾಗಿ ಮುಂದುವರಿದಿದೆ. ನನ್ನ ಆರೋಗ್ಯದ ಬಗ್ಗೆ ನಾಡಿನಾದ್ಯಂತ ಅಭಿಮಾನಿ ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ. ವೈದ್ಯರು ಸುದೀರ್ಘವಾಗಿ ಚರ್ಚೆ ಮಾಡಿದ್ದಾರೆ. ವೈದ್ಯರು ಸಾಯಿಬಾಬಾ ಭಕ್ತರು. ಸಾಯಿಬಾಬನಿಗೆ ಪೂಜೆ ಸಲ್ಲಿಸಿ ಬಂದು ಆಪರೇಷನ್‌ ಮಾಡಿದ್ದಾರೆ. ಈ ಮೂಲಕ ಹಂಗೇರಿಯಾದ ಮತ್ತೊಬ್ಬ ವೈದ್ಯರು ನನಗೆ ಮರುಜನ್ಮ ನೀಡಿದ್ದಾರೆ ಎಂದು ತಿಳಿಸಿದರು.

4 ದಿನ ರೆಸ್ಟ್‌, ಆಮೇಲೆ ಪ್ರಚಾರ

ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ ಪಕ್ಷ ಗೆಲುವು ಸಾಧಿಸಬೇಕು. ಇದಕ್ಕಾಗಿ ನನ್ನ ಕೈಲಾದ ರೀತಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಮೂರ್ನಾಲ್ಕು ದಿನಗಳ ಕಾಲ ರೆಸ್ಟ್ ಮಾಡುತ್ತೇನೆ. ಮಂಡ್ಯ ಅಭ್ಯರ್ಥಿ ಮೂರ್ನಾಲ್ಕು ದಿನದಲ್ಲಿ ಫೈನಲ್ ಆಗತ್ತದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಈಗ ಸಿಎಂ ಸಿದ್ದರಾಮಯ್ಯ ಅವರು “ನಮ್ಮ ದುಡ್ಡು ನಮ್ಮ ತೆರಿಗೆ” ಎಂದು ಹೇಳುತ್ತಿರುವುದು ಡ್ರಾಮಾ. ಇದನ್ನೆಲ್ಲ ಬಿಟ್ಟು ಕೆಲಸ ಮಾಡಬೇಕು. ರಾಜಕೀಯ ಮಾಡುವುದಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದರು.

ಜೆಪಿ ನಗರ ನಿವಾಸದತ್ತ ಎಚ್‌ಡಿಕೆ

ಎಚ್ಎಎಲ್‌ನಿಂದ ನೇರವಾಗಿ ಎಚ್.ಡಿ. ಕುಮಾರಸ್ವಾಮಿ ಅವರು ನೇರವಾಗಿ ತಮ್ಮ ಜೆಪಿ ನಗರದ ನಿವಾಸಕ್ಕೆ ತೆರಳಿದರು. ಅಲ್ಲೀಗ ಅವರು ಮೂರ್ನಾಲ್ಕು ದಿನ ವಿಶ್ರಾಂತಿಯನ್ನು ತೆಗೆದುಕೊಳ್ಳಲಿದ್ದಾರೆ. ಬಳಿಕ ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯನವರೇ ಇದೋ ನೋಡಿ ನಿಮ್ಮ ವೈಫಲ್ಯಗಳ ಪಟ್ಟಿ ಎಂದ ಬಿ.ವೈ. ವಿಜಯೇಂದ್ರ

ಮಂಡ್ಯಕ್ಕೆ ಎಚ್‌ಡಿಕೆ ಅಭ್ಯರ್ಥಿ?

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದೇ ಹೇಳಲಾಗುತ್ತಿದೆ. ಈ ವರೆಗೆ ಅಲ್ಲಿ ಜೆಡಿಎಸ್‌ ಮುಖಂಡ, ಮಾಜಿ ಸಚಿವ ಸಿ.ಎಸ್.‌ ಪುಟ್ಟರಾಜು ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಸಂಬಂಧ ಅವರು ಪ್ರಚಾರದಲ್ಲಿಯೂ ನಿರತರಾಗಿದ್ದರು. ಆದರೆ, ಬದಲಾದ ಸನ್ನಿವೇಶದಲ್ಲಿ ಎಚ್‌ಡಿಕೆ ಮಂಡ್ಯದ ಅಭ್ಯರ್ಥಿ ಎಂದು ಪುಟ್ಟರಾಜು ಅವರೇ ಮೂರ್ನಾಲ್ಕು ದಿನದ ಹಿಂದೆ ಮಂಡ್ಯದಲ್ಲಿ ಹೇಳಿದ್ದರು. ಹೀಗಾಗಿ ಕುಮಾರಸ್ವಾಮಿ ಅವರೇ ಈ ಬಾರಿ ಮಂಡ್ಯದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Narendra Modi: ಬಿಹಾರದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಇದೇ ವೇಳೆ ಅವರು ಮೀಸಲಾತಿ ವಿಷಯ ಪ್ರಸ್ತಾಪಿಸಿದರು. “ಡಾ.ಬಿ.ಆರ್.ಅಂಬೇಡ್ಕರ್ ಅವರು ಇರದಿದ್ದರೆ ಮೀಸಲಾತಿ ಜಾರಿಗೊಳಿಸಲು ಜವಾಹರ ಲಾಲ್‌ ನೆಹರು ಬಿಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

VISTARANEWS.COM


on

Narendra Modi
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾಂಗ್ರೆಸ್‌ ವಿರುದ್ಧ ಪ್ರತಿ ರ‍್ಯಾಲಿಯಲ್ಲೂ ವಾಗ್ದಾಳಿ, ಆರೋಪ, ಟೀಕೆ, ವ್ಯಂಗ್ಯ ಮಾಡುತ್ತಿದ್ದಾರೆ. ಈಗ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಜವಾಹರ ಲಾಲ್‌ ನೆಹರು (Jawaharlal Nehru) ಅವರನ್ನು ಪ್ರಸ್ತಾಪಿಸಿ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮೋತಿಹರಿಯಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, “ಅಂಬೇಡ್ಕರ್‌ ಅವರು ಇರದಿದ್ದರೆ ಜವಾಹರ ಲಾಲ್‌ ನೆಹರು ಅವರು ಮೀಸಲಾತಿ ಜಾರಿಗೊಳಿಸಲು ಬಿಡುತ್ತಿರಲಿಲ್ಲ” ಎಂದಿದ್ದಾರೆ.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (OBC) ಮೀಸಲಾತಿ ನೀಡಲು ಜವಾಹರಲಾಲ್‌ ನೆಹರು ಅವರಿಗೆ ಸುತಾರಾಂ ಇಷ್ಟವಿರಲಿಲ್ಲ. ಇದೇ ಕಾರಣಕ್ಕಾಗಿ ಆಗಿನ ಮುಖ್ಯಮಂತ್ರಿಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿ ಪತ್ರ ಬರೆದಿದ್ದರು. ಹಾಗೊಂದು ವೇಳೆ, ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಇರದಿದ್ದರೆ, ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಮೀಸಲಾತಿ ನೀಡಲು ಜವಾಹರ ಲಾಲ್‌ ನೆಹರು ಅವರು ಬಿಡುತ್ತಿರಲಿಲ್ಲ” ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್‌ನಿಂದ ಆಯ್ಕೆಯಾದ ಪ್ರಧಾನಿಗಳು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ದ್ರೋಹ ಎಸಗಿದರು. ಇಂದಿರಾ ಗಾಂಧಿ ಆಗಲಿ, ರಾಜೀವ್‌ ಗಾಂಧಿ ಇರಲಿ, ಇವರೆಲ್ಲ ಮೀಸಲಾತಿಯನ್ನು ವಿರೋಧಿಸಿದವರೇ. ಕಾಂಗ್ರೆಸ್‌ನಿಂದ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ಎಂದಿಗೂ ಗೌರವ ಸಿಕ್ಕಿಲ್ಲ. ಇಂತಹ ಕಾಂಗ್ರೆಸ್‌ ನಾಯಕರು ಈಗ, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸುತ್ತದೆ. ಮೀಸಲಾತಿಯನ್ನು ಕಿತ್ತು ಎಸೆಯಲಾಗುತ್ತಿದೆ ಎಂಬುದಾಗಿ ಸುಳ್ಳು ಹರಡುತ್ತಿದ್ದಾರೆ” ಎಂದು ಹೇಳಿದರು.

“ತುಳಿತಕ್ಕೊಳಗಾದ ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಬಿಜೆಪಿಯು ಬದ್ಧವಾಗಿದೆ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಸಮುದಾಯದವರ ಹಕ್ಕುಗಳನ್ನು ಎನ್‌ಡಿಎ ಸರ್ಕಾರವು ರಕ್ಷಿಸುತ್ತಿದೆ. ಆದರೆ, ಇಂಡಿಯಾ ಒಕ್ಕೂಟವು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಹೊರಟಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ಅಂಬೇಡ್ಕರ್‌ ಅವರೂ ವಿರೋಧಿಸಿದ್ದರು. ಆದರೆ, ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ದ್ರೋಹ ಎಸಗುತ್ತಿವೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

Continue Reading

ದೇಶ

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ ಎಂಬುದಾಗಿ ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ಅವರು ಕ್ಷಮೆಯಾಚಿಸುವ ಜತೆಗೆ ಮೂರು ದಿನ ಉಪವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಆ ಮೂಲಕ ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅವರು ಮುಂದಾಗಿದ್ದಾರೆ.

VISTARANEWS.COM


on

Sambit Patra
Koo

ಭುವನೇಶ್ವರ: “ಒಡಿಶಾದಲ್ಲಿರುವ ಐತಿಹಾಸಿಕ ಪುರಿ ಜಗನ್ನಾಥನೇ (Lord Jagannath) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭಕ್ತ” ಎಂಬುದಾಗಿ ಬಿಜೆಪಿ ನಾಯಕ, ಪುರಿ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿವಾದ ಉಂಟಾದ ಬೆನ್ನಲ್ಲೇ, “ಸಂಬಿತ್‌ ಪಾತ್ರಾ ಅವರು ತಮ್ಮ ಹೇಳಿಕೆ ಕುರಿತಂತೆ ಕ್ಷಮೆ ಕೇಳಿದ್ದಾರೆ. ಹಾಗೆಯೇ, ಅಂತಹ ಹೇಳಿಕೆ ನೀಡಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಕೂಡ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎನ್‌ಐ ಸುದ್ದಿ ಸಂಸ್ಥೆ ಜತೆ ಮಾತನಾಡಿರುವ ಹಾಗೂ ವಿಡಿಯೊ ಹೇಳಿಕೆ ಕೂಡ ಬಿಡುಗಡೆ ಮಾಡಿರುವ ಸಂಬಿತ್‌ ಪಾತ್ರಾ ಅವರು, ಮೊದಲು ಕ್ಷಮೆಯಾಚಿಸಿದ್ದಾರೆ. “ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾದರೆ ಕ್ಷಮೆ ಕೇಳುತ್ತೇನೆ. ಅಲ್ಲದೆ, ಪ್ರಾಯಶ್ಚಿತ್ತವಾಗಿ ನಾನು ಮೂರು ದಿನ ಉಪವಾಸ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದರು. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದರು

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದರು. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.

ಇದನ್ನೂ ಓದಿ: Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Continue Reading

ದೇಶ

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Prashant Kishor: ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ಪ್ರಶಾಂತ್‌ ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದು ಹಂತಗಳ ಮತದಾನ ಮುಕ್ತಾಯಗೊಂಡಿದೆ. ಐದು ಹಂತಗಳಲ್ಲಿಯೇ ಬಿಜೆಪಿಗೆ 300 ಸೀಟುಗಳು ಬರಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅತ್ತ, ಇಂಡಿಯಾ ಒಕ್ಕೂಟವೂ ಗೆಲುವು ನಮ್ಮದೇ ಎಂದು ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ, ಚುನಾವಣೆ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲೆ ಜನ ಸಿಟ್ಟಾಗಿದ್ದಾರೆ ಎಂಬುದು ಎಲ್ಲೂ ಕೇಳಿಲ್ಲ, ನೋಡಿಲ್ಲ. ಹಾಗಾಗಿ, ಅವರೇ ಪ್ರಧಾನಿಯಾಗುವುದು ನಿಶ್ಚಿತ” ಎಂದಿದ್ದಾರೆ.

ಬರ್ಖಾ ದತ್‌ ಅವರೊಂದಿಗೆ ನಡೆದ ಮಾತುಕತೆ ವೇಳೆ ಪ್ರಶಾಂತ್‌ ಕಿಶೋರ್‌ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. “ಚುನಾವಣೆ ಫಲಿತಾಂಶದ ಕುರಿತು ನಾವು ಮಾತನಾಡುವಾಗ ಸಾಮಾನ್ಯ ಸಂಗತಿಗಳನ್ನು ಪರಿಗಣಿಸಿದರೆ ಸಾಕು ಒಂದು ಅಂದಾಜು ಸಿಗುತ್ತದೆ. ಕೇಂದ್ರ ಸರ್ಕಾರದ ವಿರುದ್ಧ ಅಂತಹ ಅಲೆ ಇಲ್ಲ. ನರೇಂದ್ರ ಮೋದಿ ಅವರ ಬಗ್ಗೆ ಜನರಿಗೆ ಈಗಲೂ ವಿಶ್ವಾಸವಿದೆ. ಜನರು ಮೋದಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರಬಹುದು, ಒಂದಷ್ಟು ಭರವಸೆಗಳು ಈಡೇರಿದೆ ಇರಬಹುದು. ಆದರೆ, ಮೋದಿ ಜನರಿಗೆ ಖಂಡಿತವಾಗಿಯೂ ಸಿಟ್ಟಿಲ್ಲ” ಎಂದಿದ್ದಾರೆ.

ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

Continue Reading

ದೇಶ

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

Abhijit Gangopadhyay: ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

VISTARANEWS.COM


on

Abhijit Gangopadhyay
Koo

ನವದೆಹಲಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಹೈಕೋರ್ಟ್ ನ್ಯಾಯಾಧೀಶ ಮತ್ತು ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ(Abhijit Gangopadhyay) ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಕ್ಕೆ ಚುನಾವಣಾ ಆಯೋಗ(Election Commission of India) ತಡೆಯೊಡ್ಡಿದೆ. ಒಬ್ಬ ವ್ಯಕ್ತಿಯ ವೈಯಕ್ತಿಕ ಬದುಕಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

ಇಸಿ ತನ್ನ ನೋಟಿಸ್‌ನಲ್ಲಿ ಗಂಗೋಪಾಧ್ಯಾಯ ಅವರ ಹೇಳಿಕೆಯು ಅಸಮರ್ಪಕ, ನ್ಯಾಯಸಮ್ಮತವಲ್ಲ. ಘನತೆಯನ್ನು ಮೀರಿ, ಕೆಟ್ಟ ಅಭಿರುಚಿಯಿಂದ ಹೇಳಿಕೆ ನೀಡಲಾಗಿದೆ ಮತ್ತು ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಇಸಿ ಹೇಳಿತ್ತು.

ಗಂಗೋಪಾಧ್ಯಾಯ ಅವರು ತಮ್ಮ ತೀರ್ಪುಗಳಿಂದ ಜನಪ್ರಿಯರಾದವರು. ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಮೇ 25 ರಂದು ಮತದಾನ ನಡೆಯಲಿರುವ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಂಗೋಪಾಧ್ಯಾಯ ಅವರನ್ನು ಕಣಕ್ಕಿಳಿಸಲಾಗಿದೆ.

ನಕಲಿ ವಿಡಿಯೋ ಎಂದ ಬಿಜೆಪಿ

ಇನ್ನು ಈ ತೃಣಮೂಲ ಕಾಂಗ್ರೆಸ್‌ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಬಿಜೆಪಿ ಇದೊಂದು ನಕಲಿ ವಿಡಿಯೋ ಎಂದು ಹೇಳಿದೆ. ಪಕ್ಷದ ಘನತೆಗೆ ಚ್ಯುತಿ ತರುವ ಉದ್ದೇಶದಿಂದ ಟಿಎಂಸಿ ಈ ರೀತಿ ನಕಲಿ ವಿಡಿಯೋ ಬಿಡುಗಡೆ ಮಾಡಿದೆ. ಇದರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ವಕ್ತಾರ ಸಾಮಿಕ್‌ ಭಟ್ಟಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ:Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!!

Continue Reading
Advertisement
Virat kohli
ಪ್ರಮುಖ ಸುದ್ದಿ4 mins ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ23 mins ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ32 mins ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

IPL 2024
ಕ್ರೀಡೆ41 mins ago

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

Road Accident
ಶಿವಮೊಗ್ಗ50 mins ago

Road Accident: ಮರಕ್ಕೆ ಬಸ್‌ ಡಿಕ್ಕಿಯಾಗಿ ಹಲವರಿಗೆ ಗಾಯ; ಆಟೋ ಪಲ್ಟಿಯಾಗಿ ಚಾಲಕ ಸಾವು

Dwayne Bravo
ಪ್ರಮುಖ ಸುದ್ದಿ1 hour ago

Dwayne Bravo : ಅಫಘಾನಿಸ್ತಾನ ತಂಡದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಡ್ವೇನ್ ಬ್ರಾವೊ

Narendra Modi
ಪ್ರಮುಖ ಸುದ್ದಿ1 hour ago

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Self Harming
ಕರ್ನಾಟಕ2 hours ago

Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

HD Kumaraswamy attack on DK Shivakumar and he gives reason for Devaraje Gowda fears for his life in jail
ರಾಜಕೀಯ2 hours ago

HD Kumaraswamy: ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

Wedding Fashion
ಫ್ಯಾಷನ್2 hours ago

Wedding Fashion: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾಗಿವೆ ಈ ಮಿರಮಿರ ಮಿನುಗುವ ಲೆಹೆಂಗಾಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು8 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು9 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌