Assault Case : ಪದೇಪದೆ ಹಾರ್ನ್‌ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಿರಿಕ್‌; ಯುವಕರಿಗೆ ಚಾಕು ಹಾಕಿದ ಪುಂಡರು - Vistara News

ಬೆಂಗಳೂರು ಗ್ರಾಮಾಂತರ

Assault Case : ಪದೇಪದೆ ಹಾರ್ನ್‌ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಿರಿಕ್‌; ಯುವಕರಿಗೆ ಚಾಕು ಹಾಕಿದ ಪುಂಡರು

Assault Case : ಕ್ಷುಲ್ಲಕ ಕಾರಣಕ್ಕೆ ಪುಂಡಾರಿಗಳು ಚಾಕು ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪದೇಪದೆ ಹಾರ್ನ್‌ ಮಾಡಿ ಕಿರಿಕಿರಿ ಮಾಡಿದನ್ನೂ ಪ್ರಶ್ನಿಸಿದ ಯುವಕರಿಬ್ಬರಿಗೆ ಚಾಕು ಇರಿದಿದ್ದಾರೆ.

VISTARANEWS.COM


on

Assault Case in Anekal
ಹಲ್ಲೆಗೊಳಗಾದ ಕಾರ್ತಿಕ್‌ ಮತ್ತು ಸುನೀಲ್‌.. ಆಸ್ಪತ್ರೆ ಮುಂದೆ ಜಮಾಯಿಸಿದ ಕುಟುಂಬಸ್ಥರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ದಾರಿ ಬಿಡುವಂತೆ ಪದೇ ಪದೆ ಹಾರ್ನ್ ಮಾಡಿದನ್ನು ಪ್ರಶ್ನಿಸಿದ್ದಕ್ಕೆ ಚಾಕು ಇರಿದಿರುವ (Assault case) ಘಟನೆ ಬೆಂಗಳೂರು ಹೊರವಲಯ (Bengaluru rural) ಆನೇಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ (Surya Nagar Police) ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.

ಕಿತ್ತಗಾನಹಳ್ಳಿ ಗ್ರಾಮದ ಸುನೀಲ್ ಹಾಗೂ ಕಾರ್ತಿಕ್ ಚಾಕು ಇರಿತದಿಂದ ಗಾಯಗೊಂಡವರು. ಕಿಶೋರ್, ಶ್ರೀಧರ್, ವಾಲೆಮಂಜ, ಹೇಮಂತ್, ಮನೋಜ್, ತುಕಡಿ ಅಲಿಯಾಸ್‌ ವೆಂಕಟರಾಜು ಎಂಬುವವರು ಹಲ್ಲೆ ನಡೆಸಿದವರು.

ಕಿಶೋರ್‌ ಎಂಬಾತ ಇತ್ತೀಚೆಗೆ ಜೈಲಿನಿಂದ ಬಿಡುಗಡೆ ಆಗಿ ಹೊರಬಂದಿದ್ದ. ಕಿಶೋರ್‌ ಸ್ನೇಹಿತ ಶ್ರೀಧರ್‌ ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ಟಿಟಿ ಚಾಲಕ ಮುಂದೆ ಸಾಗುತ್ತಿದ್ದ ಲಾರಿಗೆ ದಾರಿ ಬಿಡುವಂತೆ ಪದೇ ಪದೆ ಹಾರ್ನ್ ಮಾಡಿದ್ದ. ಟಿಟಿ ವಾಹನದ ಹಿಂದೆ ಬರುತ್ತಿದ್ದ ಬೈಕ್ ಸವಾರ ಅಂಕಿತ್ ಎಂಬಾತ ಇದನ್ನೂ ಪ್ರಶ್ನೆ ಮಾಡಿದ್ದ.

ಇದನ್ನೂ ಓದಿ: Shivamogga News : ಅಧಿಕಾರಿಗಳ ಕಿರುಕುಳ; ಬಸ್‌ನಲ್ಲೇ ವಿಷ ಕುಡಿದು ಒದ್ದಾಡಿದ ಕೆಎಸ್‌ಆರ್‌ಟಿಸಿ ಡ್ರೈವರ್‌

ಆಗ ಟಿಟಿ ವಾಹನದಲ್ಲಿ ಶ್ರೀಧರ್ ಹೊರ ಬಂದು ಅಂಕಿತ್ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದ. ಅಂಕಿತ್‌ ಈ ವಿಚಾರವನ್ನು ಸುನೀಲ್ ಹಾಗೂ ಕಾರ್ತಿಕ್‌ಗೆ ತಿಳಿಸಿದ್ದ. ಅಷ್ಟೊತ್ತಿಗೆ ಶ್ರೀಧರ್‌ ಕೂಡ ತನ್ನ ಪಟಾಲಂ ಕರೆಸಿಕೊಂಡಿದ್ದ.

ಮೊದಲೇ ಎಣ್ಣೆ ಪಾರ್ಟಿ ಮುಗಿಸಿ ಬಂದಿದ್ದ ಕಿಶೋರ್ ಗ್ಯಾಂಗ್‌ ಕ್ಯಾತೆ ತೆಗೆದು ಸುನೀಲ್, ಕಾರ್ತಿಕ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಸುನೀಲ್ ಹಾಗೂ ಕಾರ್ತಿಕ್ ಹೊಟ್ಟೆ, ತೊಡೆ ಭಾಗಕ್ಕೆ ಚಾಕು ಇರಿದು ಎಸ್ಕೇಪ್ ಆಗಿದ್ದಾರೆ. ಸದ್ಯ ಗಾಯಾಳುಗಳನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

‌Rave Party: ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ ತೆಲುಗು ನಟಿ; ಐವರ ಬಂಧನ

‌Rave Party: ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದಾರೆ. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದಾರೆ. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಸದ್ಯ ಫಾರ್ಮ್ ಹೌಸಿನ ಇಂಚಿಂಚನ್ನೂ ಬಿಡದೆ ಜಾಲಾಡುತ್ತಿದ್ದಾರೆ.

VISTARANEWS.COM


on

rave party telugu actress hema
Koo

ಬೆಂಗಳೂರು: ನಿನ್ನೆ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದ ರೇವ್‌ ಪಾರ್ಟಿಯಲ್ಲಿ (Rave party) ತೆಲುಗು ನಟಿ ಹೇಮಾ (telugu actress Hema) ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅಲ್ಲಿ ತಾನಿರಲಿಲ್ಲ ಎಂದು ಹೇಮಾ ವಿಡಿಯೋ ಸಂದೇಶ ಹರಿಬಿಟ್ಟಿದ್ದಾರೆ. ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ.

ಮೂಲಗಳ ಪ್ರಕಾರ, ಮುಜುಗರ ತಪ್ಪಿಸಲು ಅದೇ ಫಾರಂ ಹೌಸ್‌ನಲ್ಲೇ ವಿಡಿಯೋ ಚಿತ್ರೀಕರಿಸಿ ಅವರು ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ. ಸದ್ಯ ನಟಿಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಕಮೋಡ್‌ನಲ್ಲಿ ಫ್ಲಶ್‌ ಮಾಡಿದರು!

ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದಾರೆ. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದಾರೆ. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಸದ್ಯ ಫಾರ್ಮ್ ಹೌಸಿನ ಇಂಚಿಂಚನ್ನೂ ಬಿಡದೆ ಜಾಲಾಡುತ್ತಿದ್ದಾರೆ.

3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಸದ್ಯ ಪೊಲೀಸರು ರೇವ್‌ ಪಾರ್ಟಿಯಲ್ಲಿದ್ದ 101 ಮಂದಿಯನ್ನೂ ಕೂರಿಸಿಕೊಂಡು, ಯಾರ್ಯಾರು ಡ್ರಗ್ಸ್‌ ತೆಗೆದುಕೊಂಡಿದ್ದಾರೆ ಎಂಬುದಕ್ಕೆ ವೈದ್ಯಕೀಯ ಪರೀಕ್ಷೆ ಮಾಡಿಸುತ್ತಿದ್ದಾರೆ. ಮೆಡಿಕಲ್‌ ಟೀಮನ್ನು ಫಾರಂ ಹೌಸ್‌ಗೆ ಕರೆಸಲಾಗಿದ್ದು, ಮೆಡಿಕಲ್‌ ಮುಗಿಯುವವರೆಗೆ ಎಲ್ಲ ಅತಿಥಿಗಳನ್ನೂ ಫಾರಂ ಹೌಸ್‌ ತೊರೆಯದಂತೆ ನಿರ್ಬಂಧಿಸಲಾಗಿದೆ. ಸದ್ಯ 30 ಜನ ಹುಡುಗಿಯರು, 71 ಜನ ಪುರುಷರು ಹೀಗೆ ಒಟ್ಟು 101 ಜನರ ವಿಚಾರಣೆ ನಡೆಯುತ್ತಿದೆ.

ಪಾರ್ಟಿ ಆಯೋಜಕ, ಆರೋಪಿ ವಾಸು ಇದೀಗ ಪೊಲೀಸರಿಂದ ಬಚಾವಾಗಲು ʼನಾನು ಪಾರ್ಟಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆದಿದ್ದೇನೆಂದುʼ ಸುಳ್ಳು ಹೇಳಿಕೆ ನೀಡಿದ್ದಾನೆ. ಆದರೆ ಫಾರ್ಮ್ ಹೌಸ್ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಪಾರ್ಟಿಗೆ ಬಂದವರು ಫಾರ್ಮ್ ಹೌಸ್ ಒಳಗೆ ಹೋಗಬೇಕಾದರೆ ಸೆಕ್ಯೂರಿಟಿಗೆ ಪಾಸ್ ವರ್ಡ್ ಹೇಳಬೇಕಿತ್ತು. ವಾಸು ನೀಡಿದ ಪಾಸ್‌ವರ್ಡ್ ಹೇಳಿದರೆ ಮಾತ್ರ ಒಳಗೆ ಎಂಟ್ರಿಯಾಗಬಹುದಿತ್ತು. ಡ್ರಗ್ ಪಾರ್ಟಿ ಹಿನ್ನೆಲೆಯಲ್ಲಿ ಬೇರೆ ಯಾರಾದರು ಬರದಿರಲಿ ಎಂಬ ಕಾರಣಕ್ಕೆ ವಾಸು ಪಾಸ್‌ವರ್ಡ್ ನೀಡಿದ್ದ.

ಫಾರಂ ಹೌಸ್‌ನಲ್ಲಿ ಸದ್ಯ ಭಾರಿ ಪ್ರಮಾಣದಲ್ಲಿ ಎಂಡಿಎಂಎ, ಕ್ಯಾಪ್ಸೂಲ್, ಕೊಕೇನ್ ಇತ್ಯಾದಿ ಮಾದಕ ವಸ್ತುಗಳು ದೊರೆತಿವೆ. 45 ಗ್ರಾಂನಷ್ಟು ಡ್ರಗ್ ವಶಕ್ಕೆ ಪಡೆಯಲಾಗಿದೆ. 1 ಗ್ರಾಂ ಕೊಕೇನ್‌ಗೆ 8ರಿಂದ 9 ಸಾವಿರ ರೂ. ದರವಿದೆ. ಇಂತಹ ಕೊಕೇನ್ ಭಾರಿ ಪ್ರಮಾಣದಲ್ಲಿ ಪಾರ್ಟಿಯಲ್ಲಿ ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಡ್ರಗ್ಸ್‌ನ ಮೌಲ್ಯ ಪರಿಶೀಲನೆಯನ್ನು ಸಿಸಿಬಿ ನಡೆಸುತ್ತಿದೆ.

ಸ್ಥಳಕ್ಕೆ ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಳೆದಂಡಿ ಆಗಮಿಸಿ ತನಿಖೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದ ವಾಸು ಈ ಹಿಂದೆ ಕೂಡ ಇದೇ ರೀತಿಯ ರೇವ್ ಪಾರ್ಟಿ ಮಾಡಿರುವ ಶಂಕೆ ಇದೆ. ಇನ್ನಷ್ಟು ಡ್ರಗ್ ಪೆಡ್ಲರ್‌ಗಳ ಪತ್ತೆಗೆ ಸಿಸಿಬಿ ಮುಂದಾಗಿದೆ.

ಕಳೆದ ಶುಕ್ರವಾರದಿಂದಲೇ ಪಾರ್ಟಿಗೆ ಸಿದ್ಧತೆ ನಡೆದಿತ್ತು. ಪಾರ್ಟಿಯಲ್ಲಿ ಭಾಗಿಯಾಗಿರುವ ಬಹುತೇಕರು ಆಂಧ್ರ ಮೂಲದ ಉದ್ಯಮಿಗಳು. ಖ್ಯಾತ ಹೋಟೆಲ್‌ಗಳ ಮಾಲೀಕರ ಮಕ್ಕಳು, ತೆಲುಗು ಸಿನಿರಂಗದ ಕಲಾವಿದರು, ಮಾಡೆಲ್‌ಗಳು, ದಕ್ಷಿಣಭಾರತದ ಖ್ಯಾತ ಡಿಜೆಗಳು ಭಾಗಿಯಾಗಿದ್ದಾರೆ. ಆಂಧ್ರ ಮೂಲದವರಾಗಿದ್ದು ಬೆಂಗಳೂರಿನಲ್ಲಿ ಬಿಝಿನೆಸ್ ಹೊಂದಿರುವ ಬಹುತೇಕರು ಇದ್ದರು. ಫಾರಂ ಹೌಸ್‌ನ ಹೊರಗೆ ನಿಂತಿರುವ ವಿಲಾಸಿ ವಾಹನಗಳಲ್ಲಿ ಆಂಧ್ರ ಮೂಲದ ವಾಹನಗಳೇ ಹೆಚ್ಚಿವೆ.

ನಿನ್ನೆ ಸಂಜೆ ಐದು ಗಂಟೆಯಿಂದಲೇ ಪಾರ್ಟಿ ಶುರುವಾಗಿದ್ದು, ಸ್ಥಳೀಯ ಪೊಲೀಸರ ಕರ್ತವ್ಯ ಲೋಪ ಗಮನಿಸಲಾಗಿದೆ. ಡ್ರಗ್ಸ್ ಪಾರ್ಟಿ ನಡೀತಿದ್ರೂ ಪೊಲೀಸರ ಗಮನಕ್ಕೆ ಬಂದಿಲ್ಲ. ಶುಕ್ರವಾರದಿಂದಲೇ ಪಾರ್ಟಿ ಸಿದ್ಧತೆ ನಡೆದಿದೆ. ಭಾರಿ ಪ್ರಮಾಣದಲ್ಲಿ ಡ್ರಗ್ ಸರಬರಾಜು ಆಗಿದೆ. ಡ್ರಗ್ ಪೆಡ್ಲರ್‌ಗಳ ಬಗ್ಗೆ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ಮಾಹಿತಿ ಕಲೆ ಹಾಕುತ್ತಿದೆ.

ತನಿಖೆ ನಡೆಯುತ್ತಿದೆ

“ಬೆಂಗಳೂರು ಹೊರ ವಲಯದಲ್ಲಿ ನೂರು ಜನರನ್ನೊಳಗೊಂಡ ರೇವ್ ಪಾರ್ಟಿ ನಡೆದಿದೆ. ತಪಾಸಣೆ ವೇಳೆ ದೊಡ್ಡ ಪ್ರಮಾಣದಲ್ಲಿ ಮಾದಕವಸ್ತುಗಳು ಪತ್ತೆಯಾಗಿವೆ. ಮಾದಕ ಸೇವನೆ ಬಗ್ಗೆ ತನಿಖೆ ನಡೆಯಲಾಗುತ್ತಿದೆ. ಎಫ್ಎಸ್ಎಲ್ ಹಾಗೂ ಸೋಕೋ ‌ಟೀಂನಿಂದ ತಪಾಸಣೆ ನಡೆಯಲಾಗುತ್ತಿದೆ. ಆಯೋಜಕ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಿ. ಆರ್. ಪಾರ್ಮ್‌ಹೌಸ್‌ನ ಮಾಲೀಕರ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆʼʼ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.‌ಚಂದ್ರಗುಪ್ತಾ ಹೇಳಿಕೆ ಕೊಟ್ಟಿದ್ದಾರೆ.

Continue Reading

ಕ್ರೈಂ

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Rave Party: ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್ ಫಾರ್ಮ್ಸ್ ಹೌಸ್‌ನಲ್ಲಿ ಬರ್ತ್‌ಡೇ ಹೆಸರಿನಲ್ಲಿ ಪಾರ್ಟಿ ನಡೆಯುತ್ತಿತ್ತು. ತಡರಾತ್ರಿ ಎರಡು ಗಂಟೆ ದಾಟಿದರೂ ಪಾರ್ಟಿ ನಡೆಯುತ್ತಿತ್ತು. ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳಿಗೆ ಇದರ ಮಾಹಿತಿ ತಿಳಿದು ದಾಳಿ ಮಾಡಿದ್ದಾರೆ. ಅವಧಿ ಮೀರಿ ಪಾರ್ಟಿ ಮಾಡಲಾಗಿದ್ದು, ಪಾರ್ಟಿಯಲ್ಲಿ ಸಾಕಷ್ಟು ಡ್ರಗ್ಸ್ ಪತ್ತೆಯಾಗಿವೆ.

VISTARANEWS.COM


on

rave party electronic city
Koo

ಬೆಂಗಳೂರು: ಸಿಸಿಬಿ ಪೊಲೀಸರು (CCB Police) ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ (Rave party) ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ (Andhra Pradesh) ತೆಲುಗು ನಟಿಯರನ್ನು ಕರೆಸಿಕೊಂಡು ಪಾರ್ಟಿ ಮಾಡುತ್ತಿದ್ದುದು ಪತ್ತೆಯಾಗಿದೆ. ತೆಲುಗು ನಟಿ (Telugu Actress) ಹೇಮಾ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದುದು ಕಂಡುಬಂದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಫಾರ್ಮ್ ಹೌಸ್ ಒಂದರ ಮೇಲೆ ದಾಳಿ ನಡೆಸಲಾಯಿತು. ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿವೆ. ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿವೆ. ಜೊತೆಗೆ ಪಾರ್ಟಿಯಲ್ಲಿ ಆಂಧ್ರ ಮತ್ತು ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದುದು ತಿಳಿದುಬಂದಿದೆ. ಡ್ರಗ್ಸ್‌ ಬಳಕೆ ಮತ್ತಿತರ ವಿಚಾರಗಳ ಬಗ್ಗೆ ಇವರನ್ನು ಪ್ರಶ್ನಿಸಲಾಗುತ್ತಿದೆ.

ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಕಂಡುಬಂದರು. ಇವರು ಆಹ್ವಾನಿತರಾಗಿ ಪಾರ್ಟಿಯಲ್ಲಿ ಭಾಗವಹಿಸಲು ಬಂದರೇ ಅಥವಾ ದುಡ್ಡು ನೀಡಿ ಕರೆಸಲಾಯಿತೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇವರಲ್ಲಿ ಹಲವರು ತೆಲುಗು ನಟಿಯರು ಎಂದು ಗೊತ್ತಾಗಿದೆ. ಬಂದವರಲ್ಲಿ ಹೆಚ್ಚಿನವರು ಕೂಡ ತೆಲುಗಿನವರು.

ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್ ಫಾರ್ಮ್ಸ್ ಹೌಸ್‌ನಲ್ಲಿ ಬರ್ತ್‌ಡೇ ಹೆಸರಿನಲ್ಲಿ ಪಾರ್ಟಿ ನಡೆಯುತ್ತಿತ್ತು. ತಡರಾತ್ರಿ ಎರಡು ಗಂಟೆ ದಾಟಿದರೂ ಪಾರ್ಟಿ ನಡೆಯುತ್ತಿತ್ತು. ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳಿಗೆ ಇದರ ಮಾಹಿತಿ ತಿಳಿದು ದಾಳಿ ಮಾಡಿದ್ದಾರೆ. ಅವಧಿ ಮೀರಿ ಪಾರ್ಟಿ ಮಾಡಲಾಗಿದ್ದು, ಪಾರ್ಟಿಯಲ್ಲಿ ಸಾಕಷ್ಟು ಡ್ರಗ್ಸ್ ಪತ್ತೆಯಾಗಿವೆ.

ಕಾನ್‌ಕಾರ್ಡ್ ಮಾಲೀಕ ಗೋಪಾಲ ರೆಡ್ಡಿ ಎಂಬವರ ಮಾಲಿಕತ್ವದ ಫಾರ್ಮ್ ಹೌಸ್‌ನಲ್ಲಿ ಇದು ನಡೆದಿದ್ದು, ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಪಾರ್ಟಿಗೆ ಆಂಧ್ರಪ್ರದೇಶದಿಂದ ಫ್ಲೈಟ್‌ನಲ್ಲಿ ಹಲವರನ್ನು ಕರೆಸಿಕೊಂಡಿದ್ದ. ಒಂದು ಬೆಂಜ್ ಕಾರಿನಲ್ಲಿ ಆಂಧ್ರಪ್ರದೇಶದ ಎಂಎಲ್ಎ ಒಬ್ಬರ ಪಾಸ್ ಪತ್ತೆಯಾಗಿದೆ. ಎಂಎಲ್ಎ ಕಾಕನಿ ಗೋವರ್ಧನ ರೆಡ್ಡಿ ಎಂಬವರ ಹೆಸರಿನ ಪಾಸ್ ಕಂಡುಬಂದಿದೆ.

ಪಾರ್ಟಿ ಸ್ಥಳದಲ್ಲಿ ಹದಿನೈದಕ್ಕೂ ಹೆಚ್ಚು ವಿಲಾಸಿ ಕಾರುಗಳು ಪತ್ತೆಯಾಗಿವೆ. ದುಬಾರಿ ಮರ್ಸಿಡಿಸ್‌ ಬೆಂಜ್, ಜಾಗ್ವಾರ್, ಆಡಿ ಕಾರುಗಳಲ್ಲಿ ಕುಬೇರರು ಬಂದಿದ್ದುದು ಗೊತ್ತಾಗಿದೆ. ಸನ್ ಸೆಟ್ ಟು ಸನ್ ರೈಸ್ ಪಾರ್ಟಿ ಎಂದು ಆಯೋಜಿಸಲಾಗಿತ್ತು. ಭಾನುವಾರ ಸಂಜೆ ಐದು ಗಂಟೆಯಿಂದ ಬೆಳಗ್ಗೆ ಆರು ಗಂಟೆ ತನಕ ಪಾರ್ಟಿ ನಡೆಸಲು ಉದ್ದೇಶಿಸಲಾಗಿತ್ತು.

ನಗರದ ಒಳಭಾಗದಲ್ಲಿ ಸಿಸಿಬಿ ಪೊಲೀಸರು ಇಂಥ ಪಾರ್ಟಿಗಳ ಮೇಲೆ ನಿರಂತರ ನಿಗಾ ಇಟ್ಟಿದ್ದು, ದಾಳಿಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ನಗರದ ಹೊರ ವಲಯದಲ್ಲಿ ಕಳ್ಳತನದಿಂದ ಪಾರ್ಟಿ ಆಯೋಜಿಸಲಾಗಿದೆ. ಇಂಥ ಒಂದು ದಿನದ ಪಾರ್ಟಿಗೆ ಮೂವತ್ತರಿಂದ ಐವತ್ತು ಲಕ್ಷ ಖರ್ಚು ಮಾಡಲಾಗುತ್ತದೆ. ಪಾರ್ಟಿಯಲ್ಲಿ ಡಿಜೆಗಳು, ಮಾಡೆಲ್‌ಗಳು ಹಾಗು ಟೆಕ್ಕಿಗಳು ಪತ್ತೆಯಾಗಿದ್ದಾರೆ. ಡಿಜೆಗಳಾದ RABZ, KAYVEE ಮತ್ತು BLOODY MASCARA ಎಂಬವರು ಭಾಗಿಯಾಗಿದ್ದಾರೆ. ಎಲ್ಲರನ್ನೂ ಪ್ರಶ್ನಿಸಲಾಗುತ್ತಿದೆ. ನಾರ್ಕೊಟಿಕ್ಸ್ ಸ್ನಿಫರ್ ಡಾಗ್‌ಗಳಿಂದ ಸ್ಥಳ ಪರಿಶೀಲನೆ ನಡೆಯುತ್ತಿದೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಪೊಲೀಸರು ಎಲ್ಲರನ್ನು ಪ್ರಶ್ನಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Continue Reading
Advertisement
MS Dhoni Bike Riding
ಕ್ರೀಡೆ21 mins ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ40 mins ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ45 mins ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ1 hour ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ1 hour ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ1 hour ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ1 hour ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ2 hours ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ2 hours ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ2 hours ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌