Arun Yogiraj: ಇನ್ನೊಂದು ʼಬಾಲಕ ರಾಮʼ ಮೂರ್ತಿಯೊಂದಿಗೆ ಕಾಣಿಸಿಕೊಂಡ ಶಿಲ್ಪಿ ಅರುಣ್‌ ಯೋಗಿರಾಜ್‌, ಏನಿದರ ವಿಶೇಷ? - Vistara News

ಪ್ರಮುಖ ಸುದ್ದಿ

Arun Yogiraj: ಇನ್ನೊಂದು ʼಬಾಲಕ ರಾಮʼ ಮೂರ್ತಿಯೊಂದಿಗೆ ಕಾಣಿಸಿಕೊಂಡ ಶಿಲ್ಪಿ ಅರುಣ್‌ ಯೋಗಿರಾಜ್‌, ಏನಿದರ ವಿಶೇಷ?

ಮೈಸೂರು ಮೂಲದ ಕಲಾವಿದ ಅರುಣ್‌ ಯೋಗಿರಾಜ್‌ (Arun Yogiraj) ತಾವು ಅಯೋಧ್ಯೆಯಲ್ಲಿ ಬಿಡುವಿನ ವೇಳೆಯಲ್ಲಿ ʻಚಿಕ್ಕ ರಾಮಲಲ್ಲಾ ಮೂರ್ತಿ’ಯನ್ನು ಕೆತ್ತಿರುವುದಾಗಿ ಹಂಚಿಕೊಂಡಿದ್ದಾರೆ.

VISTARANEWS.COM


on

balak ram ayodhya arun yogiraj
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಯೋಧ್ಯೆ ರಾಮಮಂದಿರಕ್ಕಾಗಿ (Ayodhya Ram Mandir) ರಾಮಲಲ್ಲಾ (Ram Lalla) ವಿಗ್ರಹವನ್ನು ರಚಿಸಿದ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರು ʼಬಾಲಕ ರಾಮʼ ದೇವರ (Balak ram) ಚಿಕಣಿ ರೂಪವನ್ನು ಕೂಡ ರಚಿಸಿದ್ದಾರೆ. ಈ ವಿಷಯವನ್ನು ಅವರು ಎಕ್ಸ್‌ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮೈಸೂರು ಮೂಲದ ಕಲಾವಿದ ಅರುಣ್‌ ಯೋಗಿರಾಜ್‌ (Arun Yogiraj) ತಾವು ಅಯೋಧ್ಯೆಯಲ್ಲಿ ಬಿಡುವಿನ ವೇಳೆಯಲ್ಲಿ ʻಚಿಕ್ಕ ರಾಮಲಲ್ಲಾ ಮೂರ್ತಿ’ಯನ್ನು ಕೆತ್ತಿರುವುದಾಗಿ ಹಂಚಿಕೊಂಡಿದ್ದಾರೆ. “ರಾಮ ಲಲ್ಲಾನ ಮುಖ್ಯ ಮೂರ್ತಿಯನ್ನು ಆಯ್ಕೆ ಮಾಡಿದ ನಂತರ ನಾನು ಅಯೋಧ್ಯೆಯಲ್ಲಿ ನನ್ನ ಬಿಡುವಿನ ವೇಳೆಯಲ್ಲಿ ಮತ್ತೊಂದು ಸಣ್ಣ ರಾಮ್ ಲಲ್ಲಾ ಮೂರ್ತಿಯನ್ನು ಕಲ್ಲಿನಲ್ಲಿ ಕೆತ್ತಿದ್ದೇನೆ” ಎಂದು ಯೋಗಿರಾಜ್ ಎಕ್ಸ್‌ನಲ್ಲಿ ಪ್ರಕಟಿಸಿದ್ದು, ಕೈಯಲ್ಲಿ ಅವರು ಈ ವಿಗ್ರಹವನ್ನು ಹಿಡಿದಿರುವ ಪೋಸ್ಟ್‌ ವೈರಲ್ ಆಗಿದೆ.

ಈ ಸಣ್ಣ ವಿಗ್ರಹವು ಮೂಲ ವಿಗ್ರಹದ ಕಪ್ಪು ಕಲ್ಲಿಗಿಂತ ಭಿನ್ನವಾದ, ತುಸು ಬಿಳುಪಾದ ಕಲ್ಲಿನಲ್ಲಿ ಕೆತ್ತಲ್ಪಟ್ಟಿದೆ. ಆದರೆ ʼಬಾಲಕ ರಾಮ’ನ ಶಿಲ್ಪದ ಪಡಿಯಚ್ಚಿನಂತಿದೆ. ಮೂಲ ಮೂರ್ತಿಯ ಎಲ್ಲ ಲಕ್ಷಣಗಳು ಇದರಲ್ಲೂ ಇವೆ. ಆದರೆ ಇದನ್ನು ಒಂದು ಕೈಯಲ್ಲಿ ಹಿಡಿದುಕೊಳ್ಳಬಹುದು.

ಕಳೆದ ತಿಂಗಳು ಅಯೋಧ್ಯೆಯ ದೇವಾಲಯದ ಗರ್ಭಗುಡಿಯೊಳಗೆ ಎಂಟು ಅಡಿ ಎತ್ತರದ ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ಇರಿಸಲಾಗಿರುವ ಬಾಲಕ ರಾಮ ವಿಗ್ರಹದ ಕಣ್ಣುಗಳನ್ನು ಕೆತ್ತಲು ಬಳಸಿದ ವಿಶೇಷ ಉಪಕರಣಗಳ ಚಿತ್ರವನ್ನು ಅರುಣ್‌ ಯೋಗಿರಾಜ್‌ ಹಂಚಿಕೊಂಡಿದ್ದರು. “ನಾನು ಅಯೋಧ್ಯೆಯ ರಾಮ ಲಲ್ಲಾನ ದಿವ್ಯ ಕಣ್ಣುಗಳನ್ನು (ನೇತ್ರೋನ್ಮೀಲನ) ಕೆತ್ತಿದ ಚಿನ್ನದ ಉಳಿ ಹಾಗೂ ಬೆಳ್ಳಿಯ ಸುತ್ತಿಗೆ” ಎಂದು ಅವುಗಳ ಚಿತ್ರವನ್ನು ಹಂಚಿಕೊಳ್ಳುವಾಗ ಯೋಗಿರಾಜ್ ಬರೆದಿದ್ದರು,

ಅರುಣ್‌ ಯೋಗಿರಾಜ್ ಮೈಸೂರಿನವರು ಹಾಗೂ ತಮ್ಮ ಕುಟುಂಬದಲ್ಲಿ ಐದನೇ ತಲೆಮಾರಿನ ಶಿಲ್ಪಿ. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂಬಿಎ ಪದವಿ ಪಡೆದಿದ್ದು, ಖಾಸಗಿ ಕಂಪನಿಯೊಂದರ ಮಾನವ ಸಂಪನ್ಮೂಲ ವಿಭಾಗದಲ್ಲಿ ಆರು ತಿಂಗಳ ಕಾಲ ಕೆಲಸ ಮಾಡಿ ಬಳಿಕ ಶಿಲ್ಪರಚನೆಗೆ ಮರಳಿದ್ದರು.

ಯೋಗಿರಾಜ್ ಅವರು ಈ ಹಿಂದೆ ಕೇದಾರನಾಥದಲ್ಲಿ ಪ್ರತಿಷ್ಠಾಪಿಸಲಾಗಿರುವ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ವಿಗ್ರಹ, ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಕೆತ್ತಿದ್ದರು. ಮೈಸೂರು ಜಿಲ್ಲೆಯ ಚುಂಚನಕಟ್ಟೆಯಲ್ಲಿ 21 ಅಡಿ ಎತ್ತರದ ಹನುಮಾನ್ ಪ್ರತಿಮೆ, 15 ಅಡಿ ಎತ್ತರದ ಡಾ.ಬಿ. ಆರ್ ಅಂಬೇಡ್ಕರ್ ಪ್ರತಿಮೆ, ಮೈಸೂರಿನಲ್ಲಿ ಸ್ವಾಮಿ ರಾಮಕೃಷ್ಣ ಪರಮಹಂಸರ ಬಿಳಿ ಅಮೃತಶಿಲಾ ಪ್ರತಿಮೆ, ಆರು ಅಡಿ ಎತ್ತರದ ಏಕಶಿಲಾ ನಂದಿ, ಆರು ಅಡಿ ಎತ್ತರದ ಬನಶಂಕರಿ ದೇವಿ ಹಾಗೂ ಮೈಸೂರು ರಾಜ ಜಯಚಾಮರಾಜೇಂದ್ರ ಒಡೆಯರ್ ಅವರ 4.5 ಅಡಿ ಎತ್ತರದ ಬಿಳಿ ಅಮೃತ ಶಿಲಾ ಪ್ರತಿಮೆ ಅವರು ಕೆತ್ತಿದ ವಿಗ್ರಹಗಳಲ್ಲಿ ಕೆಲವು.

ಮೈಸೂರು ವಿಶ್ವವಿದ್ಯಾನಿಲಯದ ಭೂ ವಿಜ್ಞಾನ ವಿಭಾಗದ ಯುಜಿಸಿ- ಎಮೆರಿಟಸ್ ಪ್ರಾಧ್ಯಾಪಕರ ಪ್ರಕಾರ, ಈಗ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯನ್ನು ಅಲಂಕರಿಸಿರುವ, ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹದ ಮೂಲ ಶಿಲೆ ಮುನ್ನೂರು ಕೋಟಿ ವರ್ಷಗಳ ಹಿಂದಿನದಾಗಿದೆ.

ಇದನ್ನೂ ಓದಿ: Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

Prajwal Revanna Case: ಕಾರ್ತಿಕ್‌ ರಾಜಾರೋಷವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾನೆ. ಇಷ್ಟಾದರೂ ಆತನಿಗೆ ಏಕೆ ಈವರೆಗೆ ನೋಟಿಸ್‌ ಕೊಡಲಾಗಿಲ್ಲ? ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ. ಜತೆಗೆ ಕೋರ್ಟ್‌ನಲ್ಲಿಯೂ ಮನವಿ ಸಲ್ಲಿಸುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Prajwal Revanna Case SIT not issuing notice to Karthik HDK decides to approach Governor and Court
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡನ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಕಾರ್ತಿಕ್‌ ರಾಜಾರೋಷವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾನೆ. ಇಷ್ಟಾದರೂ ಆತನಿಗೆ ಏಕೆ ಈವರೆಗೆ ನೋಟಿಸ್‌ ಕೊಡಲಾಗಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ಸಂಬಂಧ ಪ್ರಕರಣವನ್ನು ಸಿಬಿಐಗೆ ರಾಜ್ಯಪಾಲರು ಹಾಗೂ ಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ್ದಾಗಿ ಹೇಳಿದ್ದಾರೆ.

ಈ ಬಗ್ಗೆ ವಿಸ್ತಾರ ನ್ಯೂಸ್‌ನೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಗಳಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ಇದು ಯಾವ ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ. ಜತೆಗೆ ಕೋರ್ಟ್‌ನಲ್ಲಿಯೂ ಮನವಿ ಸಲ್ಲಿಸುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಯೂ ಹರಿಹಾಯ್ದಿದ್ದ ಎಚ್‌ಡಿಕೆ

‌ಅಶ್ಲೀಲ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿಯೂ ಹರಿಹಾಯ್ದಿದ್ದರು. ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಶ್ನೆ ಮಾಡಿದ್ದರು.

ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದ್ದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದರು.

ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದ್ದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

Prajwal Revanna Case: ವೀಡಿಯೋ ಕಿಂಗ್‌ಪಿನ್ ಕಾರ್ತಿಕ್ ಜೊತೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಇರುವ ಫೋಟೋಗಳು ವೈರಲ್ ಆಗುತ್ತಿದ್ದು, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಇದನ್ನು ವೈರಲ್‌ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆ ದಿನವೇ ಕಾರ್ತಿಕ್ ಜೊತೆ ಪುಟ್ಟಿ (ಪುಟ್ಟರಾಜ್)‌ ಮನೆಯಲ್ಲಿ ಶ್ರೇಯಸ್ ಊಟ ಮಾಡಿದ್ದಾರೆ ಎನ್ನಲಾದ ಫೋಟೊಗಳು ಇವಾಗಿವೆ.

VISTARANEWS.COM


on

prajwal revanna case puttaraj shreyas patel karthik
ಪುಟ್ಟರಾಜ್‌, ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಜೊತೆಗೆ ಕಾರ್ತಿಕ್
Koo

ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ (Physical Abuse) ಹಾಗೂ ಅಶ್ಲೀಲ ವೀಡಿಯೋ (Prajwal Revanna Case) ಪ್ರಕರಣದ ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌, ಕಾಂಗ್ರೆಸ್‌ ಅಭ್ಯರ್ಥಿ ಜೊತೆಗೆ ಆತ್ಮೀಯ ಒಡನಾಟ ಹೊಂದಿರುವ ಫೋಟೋಗಳು ವೈರಲ್‌ ಆಗಿವೆ. ಈ ಮೂಲಕ, ಪ್ರಕರಣ ವೈರಲ್‌ ಆಗಿರುವುದರ ಹಿಂದಿನ ʼಕೈʼವಾಡ ಖಚಿತವಾಗಿದೆ.

ವೀಡಿಯೋ ಕಿಂಗ್‌ಪಿನ್ ಕಾರ್ತಿಕ್ ಜೊತೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ (Shreyas patel) ಇರುವ ಫೋಟೋಗಳು ವೈರಲ್ (photos viral) ಆಗುತ್ತಿದ್ದು, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಇದನ್ನು ವೈರಲ್‌ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆ ದಿನವೇ ಕಾರ್ತಿಕ್ ಜೊತೆ ಪುಟ್ಟಿ (ಪುಟ್ಟರಾಜ್)‌ ಮನೆಯಲ್ಲಿ ಶ್ರೇಯಸ್ ಊಟ ಮಾಡಿದ್ದಾರೆ ಎನ್ನಲಾದ ಫೋಟೊಗಳು ಇವಾಗಿವೆ.

“ನನಗೆ ಕಾರ್ತಿಕ್ ಪರಿಚಯವೇ ಇಲ್ಲ, ಒಮ್ಮೆ ಮಾತ್ರ ಭೇಟಿಯಾಗಿದ್ದೆ” ಎಂದು ಶ್ರೇಯಸ್ ಹೇಳಿದ್ದರು. ಇದೀಗ ಶ್ರೇಯಸ್ ಜೊತೆಗೆ ಊಟ ಮಾಡುತ್ತಿರುವ ಕಾರ್ತಿಕ್ ಫೋಟೋ ವೈರಲ್ ಆಗಿದೆ. ಇದೇ ಸಂದರ್ಭದಲ್ಲಿ ಕಾರ್ತಿಕ್, ಶ್ರೇಯಸ್, ಪುಟ್ಟಿ ಕೈಕೈ ಹಿಡಿದುಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಅವರಿಗೆ ಪೆನ್‌ಡ್ರೈವ್ ತಲುಪಿಸಿದ್ದು ಇದೇ ಪುಟ್ಟಿ ಎಂದು ವಕೀಲ ದೇವರಾಜೇಗೌಡ ಆರೋಪಿಸಿದ್ದರು.‌

prajwal revanna case puttaraj shreyas patel karthik

ಕಾರ್ತಿಕ್‌ ಮುಟ್ಟದ ಎಸ್‌ಐಟಿಯಿಂದ ತಾರತಮ್ಯ!

ಇದರೊಂದಿಗೆ, ಎಸ್‌ಐಟಿ ಈ ಪ್ರಕರಣದ ತನಿಖೆಯಲ್ಲಿ ತಾರತಮ್ಯ ಎಸಗುತ್ತಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪ ನಿಜ ಎಂದು ಜನರಿಗೆ ಅನಿಸುವಂತಿದೆ. ವಕೀಲ ದೇವರಾಜೇಗೌಡಗೆ ವಿಚಾರಣೆಗೆ ಹಾಜರಾಗಲು ಮೇಲಿಂದ ಮೇಲೆ ನೋಟಿಸ್ ನೀಡಲಾಗುತ್ತಿದೆ. ಆದರೆ ಪ್ರಜ್ವಲ್ ರೇವಣ್ಣ ಮಾಜಿ ಕಾರ್ ಡ್ರೈವರ್ ಕಾರ್ತಿಕ್ ಎಲ್ಲಿ? ಪ್ರಜ್ವಲ್ ರೇವಣ್ಣ ಅವರಿಗೆ ನಡೆಯುತ್ತಿರುವ ತಲಾಶ್ ಕಾರ್ತಿಕ್‌ಗೆ ಯಾಕಿಲ್ಲ? ನಿಷ್ಪಕ್ಷಪಾತ ತನಿಖೆ, ದಕ್ಷ ಅಧಿಕಾರಿಗಳ ತಂಡದಿಂದ ಈ ಜಾಣ ಮೌನವೇಕೆ? ಎಂದು ಎಚ್‌ಡಿಕೆ ಪ್ರಶ್ನಿಸಿದ್ದರು.

ಕಾರ್ತಿಕ್‌ ದೇಶವನ್ನೇ ಬಿಟ್ಟುಹೋಗಿದ್ದು, ಅಧಿಕಾರದಲ್ಲಿರುವ ಪ್ರಭಾವಿಗಳು ಆತ ಹೊರಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದೂ ತಿಳಿಯಲಾಗಿದೆ. ಹೀಗಾಗಿ, ಕುಮಾರಸ್ವಾಮಿಯವರ ಮಾತಿನಂತೆ, ಪ್ರಾಮಾಣಿಕ ತನಿಖೆ ನಡೆಯುತ್ತಿಲ್ಲವೇ ಎಂದು ಭಾವಿಸಲು ಆಸ್ಪದವಾಗಿದೆ. ದೇವರಾಜೇಗೌಡರಿಗೆ ಮೇಲಿಂದ ಮೇಲೆ ನೋಟಿಸ್ ನೀಡಿ, ಕಾರ್ತಿಕ್ ಬಗ್ಗೆ ಚಕಾರ ಎತ್ತದಿರುವುದು ಈ ಅನುಮಾನಕ್ಕೆ ಕಾರಣವಾಗಿದೆ.

“ಎಸ್ಐಟಿಯಲ್ಲಿರುವ ದಕ್ಷರು ಎನ್ನುವ ಅಧಿಕಾರಿಗಳೇ ಕಾರ್ತಿಕ್ ಎಲ್ಲಿ? ಒಂದು ವಿಡಿಯೋ ಮಾಡಿ ಬಿಟ್ಟು ನಾಪತ್ತೆಯಾಗಿರುವ ಕಾರ್ತಿಕ್‌ಗೆ ಶೋಧ ನಡೆಯುತ್ತಿದೆಯಾ? ಕಾರ್ತಿಕ್ ಎಲ್ಲಿ, ಅತನ ವಿಚಾರಣೆ ಯಾವಾಗ, ಆತನ ಬಗ್ಗೆ ಯಾಕೆ ಚರ್ಚೆ ಇಲ್ಲ?” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು.

ಸಂತ್ರಸ್ತೆಯರ ವಿಡಿಯೋ ಮೊದಲು ಇದ್ದಿದ್ದು ಕಾರ್ತಿಕ್ ಬಳಿ ಮಾತ್ರ. ಅದು ವೈರಲ್ ಆಗಲು ಕಾರಣ ಏನು ಅನ್ನುವುದನ್ನು ಪತ್ತೆ ಹಚ್ಚೋದು ಯಾವಾಗ‌? ವಿಡಿಯೋ ವೈರಲ್ ವಿಚಾರವಾಗಿ ನವೀನ್ ಮೇಲೆ ದಾಖಲಾಗಿದ್ದ ಪ್ರಕರಣದ ತನಿಖೆ ಎಲ್ಲಿಗೆ ಬಂತು? ಮೊದಲು ಸಂತ್ರಸ್ತೆಯರ ಮುಖ ಕೂಡ ಬ್ಲರ್ ಮಾಡದೇ ವಿಡಿಯೋ ವೈರಲ್ ಮಾಡಿದವರ ಕಡೆ ಯಾಕೆ ಗಮನ ನೀಡಿಲ್ಲ? ತಮ್ಮ ಪಾಡಿಗೆ ತಾವು ಇರುವ ಸಂತ್ರಸ್ತೆಯರನ್ನೂ ಪೀಡಿಸಿ ತನಿಖೆಗೆ ಕರೆಸಿಕೊಳ್ಳಲು ಮುಂದಾಗಿರುವ ಎಸ್‌ಐಟಿ, ಕಾರ್ತಿಕ್‌ ಹಾಗೂ ನವೀನ್‌ ವಿಚಾರದಲ್ಲಿ ಯಾವುದೇ ಹೆಜ್ಜೆ ಇಟ್ಟಿಲ್ಲ ಯಾಕೆ? ಇತ್ಯಾದಿ ಪ್ರಶ್ನೆಗಳು ಮೂಡಿವೆ.

ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌

ಬೆಂಗಳೂರು: ಲೈಂಗಿಕ ಹಗರಣದ (Pen Drive Case) ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna case) ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್‌ (Blue Corner Notice) ಜಾರಿ ಮಾಡಲು ಎಸ್ಐಟಿ (SIT) ಅಧಿಕಾರಿಗಳು ಮಾಡಿದ್ದ ಮನವಿಗೆ ಸ್ಪಂದಿಸಿರುವ ಸಿಬಿಐ (CBI), ಈ ಕುರಿತು ಇಂಟರ್‌ಪೋಲ್‌ನಿಂದ (Interpol) ಮೂಲಕ 196 ದೇಶಗಳಿಗೆ ಮೆಸೇಜ್‌ ರವಾನೆ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್‌ ಎಲ್ಲಿಯೇ ಕಂಡರೂ, ಯಾವ ದೇಶದಿಂದ ಯಾವ ದೇಶಕ್ಕೆ ಹೋದರೂ ಎಸ್‌ಐಟಿಗೆ ಮಾಹಿತಿ ಸಿಗಲಿದೆ.

ಈ ಸಂಬಂಧ ಎಸ್‌ಐಟಿ ಅಧಿಕಾರಿಗಳಿಗೆ ಇಂಟರ್‌ಪೋಲ್‌ನಿಂದ ಮಾಹಿತಿ ಬಂದಿದೆ. ಹೀಗಾಗಿ ಇನ್ನು ಮುಂದೆ ಎಸ್‌ಐಟಿ ಸಹ ಪ್ರಜ್ವಲ್‌ ವಿರುದ್ಧ ಕಾನೂನು ಸಮರ ಸಾರಲು ಹೆಚ್ಚಿನ ಅನುಕೂಲವಾದಂತೆ ಆಗಲಿದೆ. ಅಲ್ಲದೆ, ಅವರ ಪ್ರತಿ ಚಲನವಲನಗಳು, ಸಂಚಾರದ ಮಾಹಿತಿಗಳು ಲಭ್ಯವಾಗಲಿವೆ.

ಇದನ್ನೂ ಓದಿ: Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Continue Reading

ಕ್ರೈಂ

Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Prajwal Revanna Case: ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರೇವಣ್ಣ ಅವರಿಗೆ ಜೈಲಾಗುತ್ತದೆಯೋ? ಅಥವಾ ಜಾಮೀನು ಸಿಗುತ್ತದೆಯೋ ಎಂಬ ಪ್ರಶ್ನೆ ಎದುರಾಗಿದೆ.

VISTARANEWS.COM


on

Prajwal Revanna Case HD Revanna bail plea to be heard tomorrow Jail or Bela
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ಇಂದು (ಮೇ 8) ವಿಚಾರಣೆಗೆ ಬರಲಿದೆ.

ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ.

ಇನ್ನು ಜಾಮೀನು ಅರ್ಜಿ ವಿಚಾರಣೆ ಸಂಬಂಧ ನ್ಯಾಯಾಲಯ ಸಹ ಒಂದು ಪ್ರಶ್ನೆ ಎತ್ತಿದೆ. ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಮಂಗಳವಾರ ನಡೆದ ವಿಚಾರಣೆ ವೇಳೆ ಪ್ರಶ್ನೆ ಮಾಡಿದೆ. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ವೇಳೆ ರೇವಣ್ಣ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಕ್ಕಿಲ್ಲವಾದರೆ, ಪುನಃ ಕಸ್ಟಡಿಗೆ ನೀಡಲಾಗುತ್ತದೆಯೋ? ಅಥವಾ ನ್ಯಾಯಾಂಗ ಬಂಧನಕ್ಕೊಳಪಟ್ಟು ಪರಪ್ಪನ ಅಗ್ರಹಾರ ಸೇರಲಿದ್ದಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌

ಬೆಂಗಳೂರು: ಲೈಂಗಿಕ ಹಗರಣದ (Pen Drive Case) ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna case) ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್‌ (Blue Corner Notice) ಜಾರಿ ಮಾಡಲು ಎಸ್ಐಟಿ (SIT) ಅಧಿಕಾರಿಗಳು ಮಾಡಿದ್ದ ಮನವಿಗೆ ಸ್ಪಂದಿಸಿರುವ ಸಿಬಿಐ (CBI), ಈ ಕುರಿತು ಇಂಟರ್‌ಪೋಲ್‌ನಿಂದ (Interpol) ಮೂಲಕ 196 ದೇಶಗಳಿಗೆ ಮೆಸೇಜ್‌ ರವಾನೆ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್‌ ಎಲ್ಲಿಯೇ ಕಂಡರೂ, ಯಾವ ದೇಶದಿಂದ ಯಾವ ದೇಶಕ್ಕೆ ಹೋದರೂ ಎಸ್‌ಐಟಿಗೆ ಮಾಹಿತಿ ಸಿಗಲಿದೆ.

ಈ ಸಂಬಂಧ ಎಸ್‌ಐಟಿ ಅಧಿಕಾರಿಗಳಿಗೆ ಇಂಟರ್‌ಪೋಲ್‌ನಿಂದ ಮಾಹಿತಿ ಬಂದಿದೆ. ಹೀಗಾಗಿ ಇನ್ನು ಮುಂದೆ ಎಸ್‌ಐಟಿ ಸಹ ಪ್ರಜ್ವಲ್‌ ವಿರುದ್ಧ ಕಾನೂನು ಸಮರ ಸಾರಲು ಹೆಚ್ಚಿನ ಅನುಕೂಲವಾದಂತೆ ಆಗಲಿದೆ. ಅಲ್ಲದೆ, ಅವರ ಪ್ರತಿ ಚಲನವಲನಗಳು, ಸಂಚಾರದ ಮಾಹಿತಿಗಳು ಲಭ್ಯವಾಗಲಿವೆ.

ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟಿಸ್‌ ಅನ್ನು ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೋಟಿಸ್ ಪಡೆಯಲಿದೆ.

ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

ಬ್ಲೂ ಕಾರ್ನರ್ ನೊಟೀಸ್ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತದೆ. ಯಾವ ದೇಶದಲ್ಲಿ ಇದ್ದಾರೆ, ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಸುಳಿವು ಪಡೆಯಲು ಈ ನೋಟಿಸ್‌ ಮುಖ್ಯವಾಗಿದೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Continue Reading

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನನ್ನ ದೇಶ ನನ್ನ ದನಿ ಅಂಕಣ: ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ.

VISTARANEWS.COM


on

nanna desha nanna dani column
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ ಅಂಕಣ: ಅನುವಾದ ಮತ್ತು ಭಾಷಾಂತರ ಕ್ಷೇತ್ರಗಳ ಮಹತ್ತ್ವವೇ ನಮಗೆ ತಿಳಿಯದು. ಸಾಮಾನ್ಯರಿರಲಿ, ವಿಶ್ವವಿದ್ಯಾಲಯಗಳಲ್ಲಿ ವಿರಾಜಮಾನರಾಗಿರುವ ಬಹುತೇಕ ಪ್ರಭೃತಿಗಳಿಗೂ ತಿಳಿಯದು. ಭಾಷಾಂತರ ಕ್ಷೇತ್ರದ ಆಳ – ಅಗಲಗಳ ಸರಿಯಾದ ಅಂದಾಜೇ ನಮಗಿಲ್ಲ. ಕಳೆದ ಆರೇಳು ದಶಕಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಟ್ಟಹಾಸ, ಅಬ್ಬರಗಳ ಮಹಾಪೂರದಲ್ಲಿ ಭಾರತೀಯ ಭಾಷೆಗಳು ಸೊರಗುತ್ತಿವೆ, ನಿಧಾನವಾಗಿ ನೇಪಥ್ಯಕ್ಕೂ ಸೇರುತ್ತಿವೆ. ಇನ್ನೂ ಹೆಚ್ಚಿನ ದುರಂತವೆಂದರೆ, ನಮ್ಮ ಸೋ ಕಾಲ್ಡ್ ಶಿಕ್ಷಣ ತಜ್ಞರಿಗೆ ಇದರ ಅಂದಾಜೂ ಆಗುತ್ತಿಲ್ಲ. ಇತ್ತೀಚಿನ ಒಂದೆರಡು ದಶಕಗಳಲ್ಲಿ, ಸಂವಾದ – ಚರ್ಚೆ – ಉಪನ್ಯಾಸಮಾಲೆ – ಎಲ್ಲವೂ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಎಂಬಂತಾಗಿವೆ. ಈ ಪಿಡುಗು ಇನ್ನಷ್ಟು ಮುಂದುವರಿದು ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮೊದಲ್ಗೊಂಡು, ಶಾಲಾ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮಗಳನ್ನೂ ಇಂಗ್ಲಿಷ್ ಭಾಷೆ ಆವರಿಸಿಕೊಂಡುಬಿಟ್ಟಿದೆ. ಇನ್ನು ಇಡೀ ದೇಶದ ಬೌದ್ಧಿಕ – ಶೈಕ್ಷಣಿಕ ಕ್ಷೇತ್ರಗಳು, ಇಂಗ್ಲಿಷ್ ಭಾಷೆ – ಇಂಗ್ಲಿಷ್ ಮಾಧ್ಯಮಗಳ ಉಪೋತ್ಪನ್ನಗಳಾಗಿ ಹೋಗಿರುವುದು, ಈ ಎಲ್ಲಾ ಅಪಸವ್ಯಗಳಿಗೆ ಕಲಶವಿಟ್ಟಂತಾಗಿದೆ.

ಪ್ರಾಚೀನ ಭಾರತ, ಅಷ್ಟೇಕೆ, ಪ್ರಾಚೀನ ಜಗತ್ತಿನ ಬಹುಪಾಲು ಆಳರಸರಿಗೆ ಭಾಷಾಂತರ ಕ್ಷೇತ್ರದ ಮಹತ್ತ್ವ ತಿಳಿದಿತ್ತು. ಭಾಷೆಗಳನ್ನು ಯಾರೂ ಸಮಸ್ಯೆಯನ್ನಾಗಿ ಮಾಡಿಕೊಂಡಿರಲಿಲ್ಲ. ಹಿಂದೀ – ತಮಿಳು ಭಾಷೆಗಳನ್ನು ಮತ್ತು ಭಾಷಿಕರನ್ನು ದ್ವೇಷಿಸುವ ನಮ್ಮ ಇಂದಿನ ಯುಗಮಾನದ ಅವಿವೇಕ ಅಂದಿನವರಿಗೆ ಇರಲಿಲ್ಲ. ನಾಲ್ಕೈದು ದಶಕಗಳ ಹಿಂದೆ ಬಂಗಾಳಿ, ತಮಿಳು, ತೆಲುಗು, ಮರಾಠೀ ಮುಂತಾದ ಭಾಷೆಗಳಿಂದ ನೇರವಾಗಿ ಅನುವಾದ ಮಾಡುವವರು ನಮ್ಮಲ್ಲಿಯೇ ಇದ್ದರು. ಈಗ ವಿಚಿತ್ರವೆಂದರೆ, ಭಾರತೀಯ ಭಾಷೆಗಳ ನಡುವಣ ಕೊಡುಕೊಳ್ಳುವಿಕೆಗೂ ಇಂಗ್ಲಿಷ್ ಭಾಷೆಯು ಅನಿವಾರ್ಯ ಮಾಧ್ಯಮ ಎಂಬಂತಾಗುತ್ತಿದೆ. ಇದಕ್ಕಿಂತ ದೊಡ್ಡ ದುರಂತವಿನ್ನೇನು ಇದ್ದೀತು!

ಸಾವಿರಾರು ವರ್ಷಗಳ ನಿಜೇತಿಹಾಸಾಧ್ಯಯನ ನಮ್ಮ ದಿಗ್ಭ್ರಮೆಗೆ ಕಾರಣವಾಗುತ್ತದೆ. ನೋಡಿ, ನಮಗೆ ಯುವಾನ್ ಚ್ವಾಂಗ್ (ಇದು ಸರಿಯಾದ ಉಚ್ಚಾರಣೆ, ಹಿಂದೆ ಹ್ಯೂ ಎನ್ ತ್ಸಾಂಗ್ ಎನ್ನಲಾಗುತ್ತಿತ್ತು) ಫಾಹಿಯಾನ್ ಮಾತ್ರ ಗೊತ್ತು. ಅವರೆಲ್ಲ ಚೀನಾ ದೇಶದಿಂದ ಇಲ್ಲಿಗೆ ಬಂದು ಜ್ಞಾನಸಂಪತ್ತನ್ನು ಅಲ್ಲಿಗೆ ಕೊಂಡೊಯ್ದವರು. ಅವರು, ಅಂತಹವರು ಭಾಷಾಂತರದಿಂದ ಅದ್ಭುತವಾದ ಸಂಪತ್ತನ್ನು ಸಂಗ್ರಹಿಸಿದರು ಮತ್ತು ಅವರ ದೇಶದಲ್ಲಿ ಕಾಪಿಟ್ಟುಕೊಂಡರು. ನಿಜೇತಿಹಾಸದ ಇನ್ನಷ್ಟು ವಿವರಗಳು ಅಕ್ಷರಶಃ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಾಂತರ ಮಾಡಿದ ಭಾರತೀಯ ಮೂಲದ ವಿದ್ವಾಂಸರ ವಿವರಗಳು ಸಹ ದಿಕ್ಸೂಚಿಯಾಗಿವೆ.

ಸಾಮಾನ್ಯ ಯುಗದ ಮೊದಲನೆಯ ಶತಮಾನದಲ್ಲಿ (1st Century of Common Era) ಚೀನಾ ದೇಶದ ಸಮ್ರಾಟ ಮಿಂಗ್-ತಿ ಬೌದ್ಧ ಸಿದ್ಧಾಂತದ ಅಧ್ಯಯನಕ್ಕಾಗಿ 18 ಜನರ ತಂಡವನ್ನು ಭಾರತಕ್ಕೆ ಕಳುಹಿಸಿದ. ಅವರು ಇಲ್ಲಿಂದ ದೊಡ್ಡ ಸಂಖ್ಯೆಯ ಗ್ರಂಥಗಳನ್ನು ಪ್ರತಿ ಮಾಡಿಕೊಂಡು, ಅನುವಾದಿಸಿಕೊಂಡು ತೆಗೆದುಕೊಂಡುಹೋದರು ಮತ್ತು ಕಶ್ಯಪ ಮಾತಂಗ ಮತ್ತು ಧರ್ಮರತ್ನ ಎಂಬ ಬೌದ್ಧ ವಿದ್ವಾಂಸರನ್ನೂ ಕರೆದುಕೊಂಡುಹೋದರು. ಕಶ್ಯಪರು ಆಗ ಗಾಂಧಾರದಲ್ಲಿದ್ದರು (ಗಾಂಧಾರ ಎಂದರೆ ಇಂದಿನ ಆಫಘನಿಸ್ತಾನ. ಅದು ಇಸ್ಲಾಂ ಆಕ್ರಮಣಕ್ಕೆ ಮುಂಚೆ ಸಾವಿರಾರು ವರ್ಷಗಳ ಕಾಲ ಬೌದ್ಧ ಧರ್ಮಕ್ಕೆ ಹೆಸರಾಗಿತ್ತು). ಚೀನಾ ದೇಶದ ತರ್ಕೆಸ್ತಾನ್ ಪ್ರದೇಶದ ಪರ್ವತಗಳನ್ನು ಮತ್ತು ಗೋಬೀ ಮರುಭೂಮಿಯನ್ನು ದಾಟಿಹೋಗಲು ಕಶ್ಯಪರು ಪ್ರಯಾಸಪಡಬೇಕಾಯಿತು. ಆದರೆ, ಅವರ ಆ ಪರಿಶ್ರಮದ ಭೇಟಿಯ ಕಾರಣದಿಂದಲೇ ಅನಂತರದ ಅವಧಿಯಲ್ಲಿ, ಪ್ರಾಚೀನ ಭಾರತದ ವಿಶ್ವವಿದ್ಯಾಲಯಗಳಿಂದ ನೂರಾರು ಜನ ವಿದ್ವಾಂಸರು ಚೀನಾ ದೇಶದಲ್ಲಿಯೇ ಕುಳಿತು ಭಾಷಾಂತರ ಮಾಡುವಂತಹ ವ್ಯವಸ್ಥೆ ಬೆಳೆಯಲು ಸಾಧ್ಯವಾಯಿತು. ಅಗಾಧ ಪ್ರಮಾಣದ ಸಂಸ್ಕೃತ ಗ್ರಂಥಗಳನ್ನು ಅವರೆಲ್ಲ ಪ್ರತಿ ಮಾಡಿಕೊಂಡು ಇಲ್ಲಿಂದ ತೆಗೆದುಕೊಂಡುಹೋದರು. ಹಾಗೆ ಹೋದ ವಿದ್ವಾಂಸರಲ್ಲಿ ಸಂಘವರ್ಮ, ಧರ್ಮಸತ್ಯ, ಧರ್ಮಕಾಲ, ಮಹಾಬಲ, ವಿಘ್ನ, ಧರ್ಮಫಲ, ಕಲಾಸಿವಿ, ಕಲಾರುಚಿ ಮತ್ತು ಲೋಕರುಚಿ ಅವರು ಪ್ರಮುಖರಾದವರು.

nalanda and muslim invaders

ಆಗ ಕಾಶ್ಮೀರವೂ ಪ್ರಾಚೀನ ಭಾರತದ ಬಹಳ ದೊಡ್ಡ ಬೌದ್ಧ ಅಧ್ಯಯನ ಕೇಂದ್ರವಾಗಿತ್ತು. ಕಾಶ್ಮೀರದ ರಾಜವಂಶಕ್ಕೆ ಸೇರಿದ ಗುಣವರ್ಮರು ತಮ್ಮ ಪಾಂಡಿತ್ಯಕ್ಕೇ ಹೆಸರಾಗಿದ್ದರು. ಅವರು ಮೊದಲು ಶ್ರೀಲಂಕಾ ಮತ್ತು ಜಾವಾ ದೇಶಗಳಿಗೆ ಹೋಗಿ ಖ್ಯಾತರಾದರು. ಗುಣವರ್ಮರನ್ನು ಚೀನಾ ದೇಶದ ಚಕ್ರವರ್ತಿ ಆಹ್ವಾನಿಸಿದ. ಅಷ್ಟೇ ಅಲ್ಲ, ನಾಂಕಿಂಗ್ ಎಂಬ ಪಟ್ಟಣಕ್ಕೆ ಹೋಗಿ ಸ್ವತಃ ಗುಣವರ್ಮರನ್ನು ಎದುರುಗೊಂಡ. ಅವರ ಶಿಷ್ಯನೂ ಆದ. ಅವರಿಗಾಗಿ ಒಂದು ಬೌದ್ಧ ದೇವಾಲಯವನ್ನೂ ನಿರ್ಮಿಸಿದ. ಗುಣವರ್ಮರಂತೆಯೇ ಕಾಶ್ಮೀರದಿಂದ ಚೀನಾ ದೇಶಕ್ಕೆ ಹೋದ ವಿದ್ವಾಂಸರೆಂದರೆ ಬುದ್ಧಯಶಸ್, ಧರ್ಮಯಶಸ್, ಧರ್ಮಕ್ಷೇಮ, ಬುದ್ಧಜೀವ ಮತ್ತು ಧರ್ಮಮಿತ್ರ. ಈ ವಿವರಗಳು ಅದೆಷ್ಟು ಸಂತೋಷನೀಡುತ್ತವೆ ಎಂದರೆ, ನೋಡಿ, ದಕ್ಷಿಣ ಭಾರತದಿಂದಲೂ ಹಲವಾರು ವಿದ್ವಾಂಸರು ಚೀನಾ ದೇಶಕ್ಕೆ ಹೋದರು. ಹಾಗೆ ಹೋದ ಧರ್ಮರುಚಿ ಇಪ್ಪತ್ತು ವರ್ಷಗಳ ಕಾಲ (ಸಾಮಾನ್ಯ ಯುಗದ 693ರಿಂದ 713) ಚೀನಾ ದೇಶದಲ್ಲಿದ್ದು, ದಾಖಲೆ ಪ್ರಮಾಣದ ಐವತ್ಮೂರು ಗ್ರಂಥಗಳನ್ನು ಭಾಷಾಂತರಿಸಿದರು. ಚೀನೀ ಭಾಷೆಗೆ ವ್ಯವಸ್ಥಿತವಾದ ವ್ಯಾಕರಣವಿಲ್ಲ, ಒಂದು ಪದವನ್ನು ಒಂದು ಅಕ್ಷರವೋ – ಒಂದು ಚಿಹ್ನೆಯೋ ಪ್ರತಿನಿಧಿಸಿಬಿಡುತ್ತದೆ, ಎನ್ನುವ ಹಿನ್ನೆಲೆಯಲ್ಲಿ ಅತ್ಯಂತ ವ್ಯವಸ್ಥಿತವಾದ ಸಂಸ್ಕೃತ ಮತ್ತು ಇನ್ನಿತರ ಭಾರತೀಯ ಭಾಷೆಗಳಿಂದ ಅನುವಾದಿಸುವುದು ಅದೆಷ್ಟು ಶ್ರಮದಾಯಕ, ಕ್ಲಿಷ್ಟಕರ ಎಂಬುದನ್ನು ನಾವಿಲ್ಲಿ ಅರ್ಥಮಾಡಿಕೊಳ್ಳಬೇಕಿದೆ. ಭಾಷಾಂತರದ ಆಯಾಮವೇ ಹಾಗೆ. ಸಂಸ್ಕೃತಿಗಳ – ರೀತಿನೀತಿಗಳ ವ್ಯತ್ಯಾಸ ಮತ್ತು ಅಂತರಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಬಹಳ ಮುಖ್ಯವಾದ ಅಂಶವೊಂದನ್ನು ಇಲ್ಲಿ ಪ್ರಸ್ತಾಪಿಸಬೇಕಿದೆ. ಜ್ಞಾನದ ಸಂಪತ್ತನ್ನು ವಿವಿಧ ಸಮುದಾಯಗಳಿಗೆ, ಅನೇಕ ದೇಶಗಳಿಗೆ ಹಂಚಲು ನೀಡಲು ಭಾಷಾಂತರದ ಇಂತಹ ಪ್ರಮುಖ ಆಯಾಮಕ್ಕೆ ರಾಜಾಶ್ರಯ ಇತ್ತು, ಇರಬೇಕು ಎನ್ನುವುದನ್ನು ಸಹ ನಾವಿಲ್ಲಿ ಗಮನಿಸಬೇಕಿದೆ. ಭಾರತ, ಚೀನಾ ಮುಂತಾದ ದೇಶಗಳಲ್ಲಿ ಅನೇಕ ರಾಜರು ಪ್ರೋತ್ಸಾಹ ನೀಡಿದುದರಿಂದಲೇ ಜ್ಞಾನ ಪರಂಪರೆ ಮುಂದುವರಿಯಲು ಮತ್ತು ಉಳಿದುಕೊಂಡು ಬರಲು ಸಾಧ್ಯವಾಯಿತು.

ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ. ಹಾಗೆಂದೇ, ಕನಿಷ್ಠ ಎಂಬತ್ತು ಪ್ರತಿಶತ ಅನುವಾದಗಳು ಕಳಪೆ ಗುಣಮಟ್ಟದವಾಗಿಬಿಟ್ಟಿವೆ. ಇನ್ನು ಪ್ರಶಸ್ತಿ, ಸ್ಥಾನಮಾನಗಳನ್ನು ಅನುವಾದಕರು ನಿರೀಕ್ಷಿಸುವಂತೆಯೇ ಇಲ್ಲ. ಒಂದೋ ಎರಡೋ ಕು-ಕವನಗಳನ್ನು ಬರೆದವರು ತಾವು ಬರೆದ ಕವನಗಳಿಗಿಂತ ಹೆಚ್ಚು ಸಂಖ್ಯೆಯ ಪ್ರಶಸ್ತಿಗಳನ್ನು ಗಳಿಸಿಬಿಡುತ್ತಾರೆ. ಕನ್ನಡದಲ್ಲಿ “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ”ವು, ಭಾಷಾಂತರಕ್ಕೆ ಒಳ್ಳೆಯ ಸಂಭಾವನೆಯನ್ನು ಕೊಡುತ್ತಿರುವುದು ಸ್ವಾಗತಾರ್ಹವೇ ಆದರೂ, ಮುಖ್ಯ ವಿಷಯ ಅದಲ್ಲ. ನಮ್ಮ ಪರಂಪರೆಯ ಹಾಗೂ ಅನೇಕ ಪ್ರಮುಖ ಗ್ರಂಥಗಳ ಸಮರ್ಥ ಮತ್ತು ಅಧಿಕೃತ ಅನುವಾದಗಳು ಆಗಬೇಕಿದೆ. ಅದು ಬರಿಯ ಸಂಭಾವನೆಯ ಸಂಗತಿಯನ್ನು ಮೀರಿದುದು. ಕೆಲವು ಗ್ರಂಥಗಳ ಅನುವಾದಕ್ಕೆ ಪ್ರತ್ಯೇಕ ಆದ್ಯತೆಯನ್ನೇ ನೀಡಬೇಕಾಗುತ್ತದೆ ಮತ್ತು ಬರಿಯ ಸಂಭಾವನೆ ಸಾಲದೆಹೋಗುತ್ತದೆ. ಈ ಕಾರ್ಯಕ್ಕೆಂದೇ ಪೂರ್ಣಾವಧಿ ಭಾಷಾಂತರಕಾರರ ನೇಮಕವಾಗಬೇಕಾಗಿದೆ.

ಹಿಂದೆ ರಾಜಾಶ್ರಯ ಇದ್ದ ಹಾಗೆ, ಈಗ ಸರ್ಕಾರೀ ಮತ್ತು ಸೇವಾ ಸಂಸ್ಥೆಗಳು ಪೂರ್ಣಾವಧಿ ಭಾಷಾಂತರಕಾರರನ್ನೇ ನೇಮಿಸಿಕೊಂಡು ಈ ಕಾರ್ಯವನ್ನು ಕೈಗೊಳ್ಳಬೇಕು. ಆಗ ಮಾತ್ರ ನಮ್ಮ ಪರಂಪರೆ ಮತ್ತು ನಿಜ-ಇತಿಹಾಸ ಗ್ರಂಥಗಳನ್ನು ಉಳಿಸಿಕೊಳ್ಳಲು ಸಾಧ್ಯ. ಹಾಗಾದಾಗ ಮಾತ್ರವೇ, ಪರೋಕ್ಷವಾಗಿ ಎಲ್ಲ ಭಾರತೀಯ ಭಾಷೆಗಳನ್ನೂ ಉಳಿಸಲು, ಉಳಿಸಿಕೊಳ್ಳಲು ಸಾಧ್ಯ.

ಅದೆಷ್ಟು ಪ್ರಮಾಣದಲ್ಲಿ ಮಹತ್ತ್ವದ ಗ್ರಂಥಗಳು ಬೇರೆ ಬೇರೆ ಭಾಷೆಗಳಲ್ಲಿ ಬರಬೇಕಾಗಿವೆ ಎಂದರೆ, ಭಾರತಾದ್ಯಂತ ಹತ್ತಾರು ಸಾವಿರ ಪೂರ್ಣಾವಧಿ ಭಾಷಾಂತರಕಾರರ ಅಗತ್ಯವಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಆ ಕರಾಳ ದಿನಗಳನ್ನು ನೆನಪಿಸಿ ಅಂತರಂಗ ಕಲಕುವ ಬುಗುರಿ

ವಿಚಿತ್ರ ನೋಡಿ. ಅಮೆರಿಕಾ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳ ದರೋಡೆಕಾರರಿಗೆ ನಮ್ಮ ಪ್ರಾಚೀನ ಗ್ರಂಥಗಳ ನಿಜ-ಮೌಲ್ಯ ಗೊತ್ತಿತ್ತು. ಈ ಮೂರೂ ದೇಶಗಳ ವಿದ್ವಾಂಸರು ಒಟ್ಟಾಗಿ ಕುಳಿತು, ಸಾಮಾನ್ಯ ಯುಗದ 17 – 18ನೆಯ ಶತಮಾನಗಳಲ್ಲಿ, ನಮ್ಮ “ಸೂರ್ಯ ಸಿದ್ಧಾಂತ” ಗ್ರಂಥವನ್ನು ಅನುವಾದಿಸಿಕೊಂಡು ಹೋದರು. ಖಗೋಳ ಶಾಸ್ತ್ರದ ಆ ಅಮೌಲ್ಯ ಗ್ರಂಥದ ಪ್ರಮುಖ ವೈಜ್ಞಾನಿಕ ಅಂಶಗಳನ್ನು ಅವರು ಬಳಸಿಕೊಂಡರು. ಮೆಕಾಲೆ ಹುಟ್ಟುಹಾಕಿದ ನಮ್ಮ ದೇಶದ ಇಂದಿನ ವಿಕೃತ ಶಿಕ್ಷಣ ವ್ಯವಸ್ಥೆ ಹೇಗಿದೆಯೆಂದರೆ, ಇಂದು ನಮ್ಮ ವಿಶ್ವವಿದ್ಯಾಲಯಗಳ ಮಹಾಶಯರಿಗೆ “ಸೂರ್ಯ ಸಿದ್ಧಾಂತ”ದ ಬಗೆಗೆ ಕೇಳಿದರೆ, ಅವರು “ಅದು ಬೆಕ್ಕೋ – ನಾಯಿಯೋ ಇರಬಹುದು” ಎಂದಾರು. ಕಮ್ಯೂನಿಸ್ಟರು ಅವರ ತಲೆಗೆ ತುಂಬಿರುವಂತೆ, ಪ್ರಾಚೀನ ಭಾರತವೆಂದರೆ ಅವರ ಪಾಲಿಗೆ “ಸತೀ ಸಹಗಮನ, ಅಸ್ಪೃಶ್ಯತೆ, ಜಾತೀಯತೆ, ಮೂಢ ನಂಬಿಕೆಗಳು, ಭೇದಭಾವ, ಶೋಷಣೆ, ಇತ್ಯಾದಿ” ಮಾತ್ರ!

ಅತ್ಯಂತ ನಿರುಪಯುಕ್ತವಾದ ಕೆಮಿಸ್ಟ್ರಿ (ಶಾಲಾ ಕಾಲೇಜುಗಳಲ್ಲಿ ನಾನೂ ಕೆಮಿಸ್ಟ್ರಿ ವಿದ್ಯಾರ್ಥಿಯೇ. ಅದರಿಂದ ಮೂರುಕಾಸಿನ ಪ್ರಯೋಜನವೂ ಇಲ್ಲವೆಂಬುದನ್ನು, ಕಳೆದ ಅರ್ಧ ಶತಮಾನದಲ್ಲಿ ಅರ್ಥ ಮಾಡಿಕೊಂಡಿದ್ದೇನೆ) ಮುಂತಾದವನ್ನು ಕೈಬಿಟ್ಟು, ಆಗಬೇಕಾದ ವಿಭಾಗಗಳಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ಕೊಟ್ಟರೆ, ನಮ್ಮ ವಿಶ್ವವಿದ್ಯಾಲಯಗಳೂ ಅರ್ಥಪೂರ್ಣ ಕೊಡುಗೆ ನೀಡಬಹುದು.

ಇಲ್ಲಿ ಇನ್ನೂ ಒಂದು ಪ್ರಮುಖ ಸಂಗತಿಯನ್ನು ಪ್ರಸ್ತಾಪಿಸಬಹುದು. ಮೇಲೆ ಉಲ್ಲೇಖಿಸಿದ ಉದಾಹರಣೆಗಳು, ಮತಧರ್ಮಗಳ ಶಾಸ್ತ್ರಗ್ರಂಥಗಳ ಅನುವಾದಕ್ಕೆ ಸಂಬಂಧಿಸುತ್ತವೆ, ಅದರ ಹಿಂದೆ ಧರ್ಮಶ್ರದ್ಧೆಯ ಆಯಾಮವಿದೆ ಎಂದು ಕೆಲವರು ಮೂಗು ಮುರಿಯಬಹುದು. ಚೀನಾ ದೇಶದ ಈ ಮೇಲಿನ ಯೋಜನೆಗಳಲ್ಲಿ, ಅವರಿಗೆ ಜೊತೆಜೊತೆಯಲ್ಲಿಯೇ ತರ್ಕಶಾಸ್ತ್ರ, ಔಷಧಶಾಸ್ತ್ರ, ಆಯುರ್ವೇದ ಮುಂತಾದ ಅನೇಕ ಜ್ಞಾನಶಾಖೆಗಳ ಲಾಭವೂ ಆಯಿತು. ನಮ್ಮ ಭಾರತ-ಮೂಲದ ಗಣಿತ, ಅಂಕಿಗಳು, ಕ್ಯಾಲ್ಕುಲಸ್, ಬುದ್ಧಿವಂತರ ಆಟ ಎಂದೇ ಹೆಸರಾದ ಚದುರಂಗದಾಟ (Chess) ಇತ್ಯಾದಿ ಮಹತ್ತ್ವದ ಸಂಗತಿಗಳು ಅರೇಬಿಯಾ ಮೂಲಕ ಯೂರೋಪಿಗೆ ಪರಿಚಯವಾದವು. ಪರೋಕ್ಷವಾಗಿ ಯೂರೋಪಿನಲ್ಲಿ ಆಧುನಿಕ ವಿಜ್ಞಾನದ ವಿಕಾಸ ಸಂಶೋಧನೆಗಳಿಗೆ ಇವೆಲ್ಲಾ ಸಾಧನಗಳಾದವು, ಎಂಬುದನ್ನೂ ನಾವು ಮರೆಯುವಂತಿಲ್ಲ.

ಹೌದು, ಭಾಷಾಂತರ ಕ್ಷೇತ್ರಕ್ಕೆ ಈಗಲಾದರೂ ಆದ್ಯತೆ ದೊರೆಯಬೇಕಿದೆ. ಭಾರತೀಯ ಸಮಾಜದ ಬೌದ್ಧಿಕ ಲೋಕದ ಚುಕ್ಕಾಣಿ ಹಿಡಿದವರು ಈ ನಿಟ್ಟಿನಲ್ಲಿ ತೀವ್ರ ಗಮನ ನೀಡಬೇಕಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

Continue Reading
Advertisement
Palthady Rama krishna achar
ಕರ್ನಾಟಕ11 mins ago

Palthady Ramakrishna Achar: ತುಳು ಸಾಹಿತಿ, ವಿದ್ವಾಂಸ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Actor Darshan devil starring making video release on may 10
ಸಿನಿಮಾ28 mins ago

Actor Darshan: ಮೇ 10ಕ್ಕೆ ಗುಡ್‌ನ್ಯೂಸ್‌ ಕೊಡ್ತಿದ್ದಾರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌! ಏನದು?

Prajwal Revanna Case SIT not issuing notice to Karthik HDK decides to approach Governor and Court
ರಾಜಕೀಯ38 mins ago

Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

Self Harming
ಕ್ರೈಂ43 mins ago

Self Harming: ಅಪ್ಪನಿಗೆ ಗುಡ್ ಬೈ ಹೇಳಿಸಿ ಮಗುವನ್ನು ಕೊಂದ ತಾಯಿ!

Flights cancelled
ದೇಶ46 mins ago

Flights cancelled: 300 ಸಿಬ್ಬಂದಿ ಸಾಮೂಹಿಕ ರಜೆ; 86 ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳು ಕ್ಯಾನ್ಸಲ್‌

prajwal revanna case puttaraj shreyas patel karthik
ಪ್ರಮುಖ ಸುದ್ದಿ1 hour ago

Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

Actor Sathyaraj throwback picture of with veteran actor
ಮಾಲಿವುಡ್1 hour ago

Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

Alia Bhatt Deep Fake Wamiqa Gabbi face replaced
ಬಾಲಿವುಡ್1 hour ago

Alia Bhatt Deep Fake: ಆಲಿಯಾ ಭಟ್‌ ಡೀಪ್‌ಫೇಕ್‌ ವಿಡಿಯೊ ವೈರಲ್‌! ಅಸಲಿ ಮುಖ ಯಾರದ್ದು?

Sindhuri Vs Roopa
ಕರ್ನಾಟಕ1 hour ago

Sindhuri Vs Roopa: ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದತ್ತ ಗಮನ ಹರಿಸಿ; ರೂಪ-ರೋಹಿಣಿಗೆ ಸುಪ್ರೀಂ ಕೋರ್ಟ್‌ ಸಲಹೆ

Puttakkana Makkalu umashree acting praised
ಕಿರುತೆರೆ2 hours ago

Puttakkana Makkalu: ʻಪುಟ್ಟಕ್ಕʼನ ನಟನೆಗೆ ಕೋಟಿ ಕೋಟಿ ನಮನ ಅಂತಿದ್ದಾರೆ ಫ್ಯಾನ್ಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ16 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ19 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ21 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌