Chandan Shetty Movie : ಚಿತ್ರೀಕರಣ ಮುಗಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು! - Vistara News

ಸಿನಿಮಾ

Chandan Shetty Movie : ಚಿತ್ರೀಕರಣ ಮುಗಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು!

Chandan Shetty Movie : ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಚಂದನ್‌ ಶೆಟ್ಟಿ ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳುಗಟ್ಟಲೆ ಶ್ರಮ ವಹಿಸಿ ತಯಾರಿ ನಡೆಸಿದ್ದಾರೆ.

VISTARANEWS.COM


on

Chandan Shetty Movie Vidyarthi Vidyarthiniyare
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅರುಣ್ ಅಮುಕ್ತ ನಿರ್ದೇಶನದ, ಚಂದನ್ ಶೆಟ್ಟಿ (Chandan Shetty Movie) ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರವೀಗ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಂದು ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ.

ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ಬಂದಿದ್ದಾರೆ. ಈ ಪತ್ರಿಕಾ ಗೋಷ್ಠಿಯನ್ನೂ ಕೂಡಾ ಅದರ ಭಾಗವೆಂಬಂಥಾ ಫೀಲ್ ಹುಟ್ಟಿಸುವಂತೆ ಚಿತ್ರತಂಡ ಆಯೋಜಿಸಿದ್ದು ವಿಶೇಷ.

Chandan Shetty Movie Vidyarthi Vidyarthiniyare1

ವಿದ್ಯಾರ್ಥಿ ವಿದ್ಯಾರ್ಥಿನಿಯರೇ (Vidyarthi Vidyarthiniyare) ಚಿತ್ರದಲ್ಲಿ ಪಾತ್ರಗಳನ್ನು ನಿರ್ವಹಿಸಿರುವ ಪ್ರಶಾಂತ್ ಸಂಬರ್ಗಿ (Prashanth Sambargi), ಹಿರಿಯ ನಟಿ ಭವ್ಯಾ, ಸುನೀಲ್ ಪುರಾಣಿಕ್, ರಘು ರಾಮನಕೊಪ್ಪ ಮುಂತಾದವರು ಈ ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಅವರೆಲ್ಲರೂ ಸಿನಿಮಾದ ಬಗ್ಗೆ, ಚಿತ್ರತಂಡ ಮತ್ತು ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ಈ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರೇ (Vidyarthi Vidyarthiniyare) ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಕೊಳ್ಳುವಂತೆ ಮಾಡಿದ್ದಾರೆ. ಇದೇ ವೇದಿಕೆಯಲ್ಲಿ ಪಾತ್ರಗಳನ್ನು ಪರಿಚಯಿಸುವ ವಿಡಿಯೊ ಮತ್ತು ತಾಂತ್ರಿಕ ವರ್ಗವನ್ನು ಪರಿಚಯಿಸುವ ವೀಟಿಯನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರದರ್ಶಿಸಲಾಯಿತು.

ನಿರ್ದೇಶಕ ಅರುಣ್ ಅಮುಕ್ತ (Director Arun Amukta) ಪಕ್ಕಾ ಪ್ಲಾನ್ ಮಾಡಿಕೊಂಡು, ಅಂದುಕೊಂಡಂತೆಯೇ ಚಿತ್ರೀಕರಣ ಮುಗಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಅವ್ಯಾಹತವಾಗಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದು ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಜಿ. ಕಶ್ಯಪ್ ಮಾಹಿತಿ ನೀಡಿದರು.

ಕುಂಬಳ ಕಾಯಿ ಒಡೆದಾದ ನಂತರದಲ್ಲೀಗ ಬಿರುಸಿನಿಂದ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯಗಳಿಗೆ ಚಾಲನೆ ಸಿಕ್ಕಿದೆ. ಜೂನ್ ಹೊತ್ತಿಗೆಲ್ಲ ಎಲ್ಲ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡು, ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲಿಯೇ ಈ ಸಿನಿಮಾ ಬಿಡುಗಡೆಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Chandan Shetty Movie Vidyarthi Vidyarthiniyare1

ಇದನ್ನೂ ಓದಿ : Savarkar Movie Collection: ಬಾಲಿವುಡ್‌ ಚಿತ್ರ ‘ಸ್ವತಂತ್ರ ವೀರ್ ಸಾವರ್ಕರ್’ನ ಕಲೆಕ್ಷನ್‌ನಲ್ಲಿ ಚೇತರಿಕೆ; ಮೂರು ದಿನಗಳ ಗಳಿಕೆ ಎಷ್ಟು?

Chandan Shetty Movie : ಭಿನ್ನ ಶೇಟ್‌ಗಳಲ್ಲಿ ರ‍್ಯಾಪರ್‌ ಚಂದನ್‌ ಶೆಟ್ಟಿ

ರ‍್ಯಾಪರ್‌ ಚಂದನ್ ಶೆಟ್ಟಿ ಇದೀಗ ನಾಯಕ ನಟನಾಗಿಯೂ ರೂಪಾಂತರಗೊಂಡಿದ್ದಾರೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಂತೂ ಅವರದ್ದು ಭಿನ್ನ ಶೇಡ್‌ಗಳನ್ನು ಹೊಂದಿರುವ ಪಾತ್ರವಂತೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳುಗಟ್ಟಲೆ ಶ್ರಮ ವಹಿಸಿ ತಯಾರಿ ನಡೆಸಿದ್ದಾರೆ. ಆ ಮೂರೂ ಶೇಡುಗಳ ಒಂದಕ್ಕೊಂದು ತದ್ವಿರುದ್ಧ ದಿಕ್ಕಿನವುಗಳು. ಚಂದನ್ ಅಸಲೀ ವ್ಯಕ್ತಿತ್ವಕ್ಕೆ ವಿರುದ್ಧವಾಗಿರುವ ಆ ಪಾತ್ರಗಳನ್ನು ನಿಭಾಯಿಸುವುದು ಸವಾಲಾಗಿತ್ತಂತೆ. ಆದರೆ, ಅವಿರತವಾದ ಶ್ರಮದಿಂದ, ಅದೆಲ್ಲದಕ್ಕೂ ನ್ಯಾಯ ಸಲ್ಲಿಸಿದ ಖುಷಿ ಚಂದನ್ ಅವರಲ್ಲಿದೆ. ಆ ಬಗ್ಗೆ ಚಿತ್ರತಂಡದಲ್ಲೂ ಒಂದು ಮೆಚ್ಚುಗೆ ಇದ್ದೇ ಇದೆ.

ಅರುಣ್ ಅಮುಕ್ತ ಪಾಲಿಗಿದು ಮಹತ್ವಾಕಾಂಕ್ಷೆಯ ಚಿತ್ರ. ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

Kalki 2898 AD: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ ಕೂಡ ಒಂದು. ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಪ್ಯಾನ್‌ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿರುವ ಈ ಸಿನಿಮಾದ ಕನ್ನಡ ಮತ್ತು ಹಿಂದಿ ಅವತರಣಿಕೆಯ ತಮ್ಮ ಪಾತ್ರಕ್ಕೆ ನಾಯಕಿ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ. ಮೂಲತಃ ಕರ್ನಾಟಕವರಾದ ದೀಪಿಕಾ 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಬಳಿಕ ಕನ್ನಡತ್ತ ಮುಖ ಮಾಡಿರಲಿಲ್ಲ. ಈದೀಗ ಅವರು ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ಎನ್ನುವ ವಿಚಾರ ತಿಳಿದು ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

VISTARANEWS.COM


on

Kalki 2898 AD
Koo

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ (Kalki 2898 AD) ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರ ಬಿದ್ದಿದ್ದು, ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಜೂನ್‌ 27ರಂದು ಬಿಡುಗಡೆ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Kalki 2898 – AD: ʻಪ್ರಾಜೆಕ್ಟ್‌ ಕೆʼ ಸಿನಿಮಾ ಟೈಟಲ್‌ ರಿವೀಲ್‌; ಪ್ರಭಾಸ್‌, ದೀಪಿಕಾ, ಅಮಿತಾಭ್‌ ಲುಕ್‌ ಔಟ್‌!

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

Continue Reading

ಕರ್ನಾಟಕ

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Vidyarthi Vidyarthiniyare Movie: ರ‍್ಯಾಪರ್ ಚಂದನ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದೆ. ಕಾಲೇಜು ಹುಡುಗ, ಹುಡುಗಿಯರ ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ.

VISTARANEWS.COM


on

Vidyarthi Vidyarthiniyare Movie
Koo

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Movie) ಚಿತ್ರವು ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿದ್ದು, ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್‌ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ಧುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡುತ್ತದೆ. ಸೈಡ್ ಬಿ ಟ್ರೈಲರ್‌ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ!

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜು ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೂ ಇದು ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೈಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ‍್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿ ಇಲ್ಲಿ ಎಲ್ಲವೂ ಇದೆ. ಅದರ ಜೊತೆ ಜೊತೆಗೇ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೈಲರ್.

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡ ಈ ಟ್ರೈಲರಿನಲ್ಲಿ ಸಾಕ್ಷಿಗಳಿವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಈ ಸೈಡ್ ಎ ಟ್ರೈಲರ್ ಸಾರ್ಥಕಗೊಳಿಸಿದೆ.

ಇದನ್ನೂ ಓದಿ | Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ. ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

Latest

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

ಅಮೀರಾ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡ ಗಾಯಕ 115 ಸೆಂ.ಮೀ. ಎತ್ತರದ ಅಬ್ದು ರೋಝಿಕ್ (Abdu Rozik) ತಮ್ಮ ಎತ್ತರ ತಮ್ಮಿಬ್ಬರ ಸಂಬಂಧದ ನಡುವೆ ಎಂದಿಗೂ ಬರುವುದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

By

Abdu Rozik
Koo

ಸಾಮಾಜಿಕ ಜಾಲತಾಣದಲ್ಲಿ (social media) ಸಕ್ರಿಯರಾಗಿರುವ ಮತ್ತು ಬಿಗ್ ಬಾಸ್ 16 (Bigg Boss 16) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಇತ್ತೀಚೆಗಷ್ಟೇ ಅಮಿರಾ ಅವರೊಂದಿಗೆ ಮದುವೆ ನಿಶ್ಚಿತಾರ್ಥವನ್ನು (engagement) ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಮುಂದಿನ ಜುಲೈನಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್ ನಟ (Bollywood actor) ಸಲ್ಮಾನ್ ಖಾನ್ (Salman Khan) ಪಾಲ್ಗೊಳ್ಳಲಿದ್ದಾರೆ ಎಂದು ಅಬ್ದು ತಿಳಿಸಿದ್ದಾರೆ.

20 ವರ್ಷದ ಗಾಯಕ (singer) ಅಬ್ದು ರೋಝಿಕ್ ಅವರು ಅಮೀರಾ ಅವರನ್ನು ಆಹಾರ ಉತ್ಸವದಲ್ಲಿ ಭೇಟಿಯಾಗಿದ್ದರು. ಮೊದಲ ನೋಟದಲ್ಲೇ ಇಬ್ಬರಿಗೂ ಪ್ರೀತಿಯಾಗಿತ್ತು ಎಂದು ಅಬ್ದು ತಿಳಿಸಿದರು.

ಅಬ್ದು ಅವರ ನಿಶ್ಚಿತಾರ್ಥವು ಯಾವುದೇ ಪ್ರಚಾರವಲ್ಲ ಎಂದು ಅಬ್ದು ಸ್ಪಷ್ಟಪಡಿಸಿದ್ದು, ನನ್ನಂತಹ ಸಣ್ಣ ವ್ಯಕ್ತಿ ಪ್ರೀತಿಯನ್ನು ಕಂಡುಕೊಂಡಿದ್ದಾನೆ ಎಂದು ಜನರು ನಂಬಲು ಕಷ್ಟವಾಗಬಹುದು ಎಂದು ತಿಳಿಸಿದರು.
ಅಮೀರಾಗಿಂತ ಚಿಕ್ಕವನಾಗಿರುವ ತನ್ನ ಎತ್ತರದ ವ್ಯತ್ಯಾಸವು ನಮ್ಮ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.


ಅಬ್ದು ಅವರು 115 ಸೆಂ ಮತ್ತು ಅಮೀರಾ 155 ಸೆಂ.ಮೀ. ಎತ್ತರವಿದ್ದಾರೆ. ಅವರಿಬ್ಬರೂ ಕಡಿಮೆ ಎತ್ತರದಿಂದಾಗಿ ತಮ್ಮ ಸಂಗಾತಿಯನ್ನು ಹುಡುಕುವ ಬಗ್ಗೆ ಚಿಂತಿತರಾಗಿದ್ದರು. ಆದರೆ ಅಮೀರಾ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಕೃತಜ್ಞರಾಗಿರುತ್ತೇನೆ. ಅಮೀರಾ ತನಗಿಂತ ಎತ್ತರವಾಗಿದ್ದರೂ ಅದು ನಮ್ಮ ಸಂಬಂಧದ ನಡುವೆ ಎಂದಿಗೂ ಬಂದಿಲ್ಲ ಎಂದು ತಿಳಿಸಿದರು.


ಕೆಲವು ದಿನಗಳ ಹಿಂದೆ ಅಬ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ಅಮೀರಾ ಅವರ ಮುಖವನ್ನು ಬಹಿರಂಗಪಡಿಸಲಿಲ್ಲ, ಆದರೆ ಹೃದಯದ ಆಕಾರದ ವಜ್ರದ ಉಂಗುರದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

ಸುದ್ದಿಯನ್ನು ಹಂಚಿಕೊಂಡ ಅವರು, “ಜುಲೈ 7 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸುವುದಾಗಿ ಹೇಳಿದ್ದು, ನನ್ನನ್ನು ಗೌರವಿಸುವ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂದು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

Continue Reading

ಸಿನಿಮಾ

Song Release: ‘ಇದು ನಮ್ ಶಾಲೆ’ ಚಿತ್ರದ ಹಾಡಿನ ಅನಾವರಣ

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ. ಸುರೇಶ್ ಅವರು ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ “ಇದು ನಮ್ ಶಾಲೆ” ಚಿತ್ರದ ಹಾಡನ್ನು (Song Release) ಇತ್ತೀಚೆಗೆ ಅನಾವರಣಗೊಳಿಸಿದರು.

VISTARANEWS.COM


on

By

Song Release
Koo

ಬೆಂಗಳೂರು: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ ಮೊದಲ “ಇದು ನಮ್ ಶಾಲೆ” ಚಿತ್ರದ ಹಾಡುಗಳ ಬಿಡುಗಡೆ (Song Release) ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಮೊದಲ ಹಾಡನ್ನು ಖ್ಯಾತ ಐಪಿಎಸ್ ಅಧಿಕಾರಿ (IPS officer) ರವಿ ಡಿ. ಚನ್ನಣ್ಣವರ್ (Ravi D. Channannavar) ಹಾಗೂ ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Board of Film Commerce) ಅಧ್ಯಕ್ಷರಾದ ಎನ್.ಎಂ. ಸುರೇಶ್ (N.M. Suresh) ಅವರು ಅನಾವರಣಗೊಳಿಸಿದರು.

ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಅನ್ನೂ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.

ಕಾರ್ಯಕ್ರಮದ ವೇಳೆ ಮಾತನಾಡಿದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್, ಇದು ಖಾಸಗಿ ಹಾಗೂ ಸರ್ಕಾರಿ ಶಾಲೆಯ ಸುತ್ತಲಿನ ಕಥೆ ಎಂದು ತಿಳಿಸಿದರು.

ನಾನು ಕೂಡ ಸರ್ಕಾರಿ ಶಾಲೆಯಲ್ಲೇ ಕಲಿತು ಐಪಿಎಸ್ ಅಧಿಕಾರಿ ಆಗಿದ್ದೇನೆ. ಸಿನಿಮಾ ಮೂಲಕ ಒಳ್ಳೆಯ ವಿಷಯಗಳನ್ನು ಹೇಳಿದಾಗ ಜನರಿಗೆ ಬೇಗ ತಲಪುತ್ತದೆ. ನನಗೆ ಡಾ| ರಾಜಕುಮಾರ್ ಎಂದರೆ ಪಂಚಪ್ರಾಣ. ಸುದೀಪ್ ಅಭಿನಯದ ಚಿತ್ರಗಳ ಗೆದ್ದೆ ಗೆಲುವೆ ಒಂದು ದಿನ, ಅರಳುವ ಹೂವುಗಳೆ ಹಾಗೂ ಶಿವರಾಜಕುಮಾರ್ ಅವರ ಓಂ ಚಿತ್ರದ ಹೇ ದಿನಕರ ಹಾಡುಗಳು ನನಗೆ ಸ್ಪೂರ್ತಿ.. ಕಾಲೇಜು ದಿನಗಳಲ್ಲಿ ಈ ಹಾಡುಗಳನ್ನು ಕೇಳಿ ಬೆಳೆದವನು ನಾನು ಎಂದು ಹೇಳಿ ಚಿತ್ರತಂಡಕ್ಕೆ ಶುಭ ಹಾರೈಸಿದರು.


ನಿರ್ದೇಶಕ ಕೃಷ್ಣ ಬೆಳ್ತಂಗಡಿ ಮಾತನಾಡಿ, ಸಿನಿಮಾ, ರಾಜಕೀಯ ಸೇರಿದಂತೆ ಅನೇಕ ವಿಭಾಗಗಳಲ್ಲಿ ಪತ್ರಕರ್ತನಾಗಿ ಕಾರ್ಯ ನಿರ್ವಹಿಸರುವ ನಾನು, “ಬಣ್ಣದಕೊಡೆ” ಚಿತ್ರದ ಮೂಲಕ ನಿರ್ದೇಶಕನಾದೆ. “ಇದು ನಮ್ ಶಾಲೆ” ನನ್ನ ನಿರ್ದೇಶನದ ಮೂರನೇ ಚಿತ್ರ. ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆಯ ಕುರಿತಾದ ಚಿತ್ರ. ಖಾಸಗಿ ಶಾಲೆ ಹಾಗೂ ಸರ್ಕಾರಿ ಶಾಲೆಗಳ ಬಗ್ಗೆ ತಿಳಿಸಿ ಕೊಡುವ ಚಿತ್ರ. ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ ಸೆನ್ಸರ್ ಕೂಡಾ ಆಗಿದ್ದು, ಬಿಡುಗಡೆಯ ಹೊಸ್ತಿಲಿನಲ್ಲಿದೆ‌. ಅರಸೀಕೆರೆ, ಜೇನುಕಲ್, ಗೀಜಿಹಳ್ಳಿ ಹಾಗೂ ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆದಿದೆ‌ ಎಂದು ತಿಳಿಸಿದರು.

ರವಿ ಆಚಾರ್ ಚಿತ್ರ ನಿರ್ಮಾಣ ಮಾಡಿದ್ದು, ಅರಸೀಕೆರೆ ಉಮೇಶ್ ಅವರ ಸಹಕಾರ ಚಿತ್ರಕ್ಕಿದೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದೆ. ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ ಎಂದರು.


ಇದನ್ನೂ ಓದಿ: Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

ಶಂಕರ್ ಭಟ್, ಪೂಜಾ ಸುಮನ್, ಈಶ್ವರ್ ದಲ, ಮಲ್ಲಿಕಾರ್ಜುನ್ ತುಮಕೂರು, ಶಿವಲಿಂಗೇಗೌಡ ಮಂಡ್ಯ, ಮುರಳಿಕೃಷ್ಣ, ಬಸವರಾಜ್, ವಾಣಿ ಗೌಡ, ರಾಜು ನಾಯಕ್, ಮಾಸ್ಟರ್ ರಾಮು, ಗಂಗಾ ರವಿ, ಕಲಾ ಉಮೇಶ್ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಜನಪ್ರಿಯ ಶಾಸಕರಾದ ಶಿವಲಿಂಗೇಗೌಡರು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸಿದ್ದಾರೆ ಎಂದು ಅವರು ತಿಳಿಸಿದರು.

ನಿರ್ಮಾಪಕರಾದ ರವಿ ಆಚಾರ್, ಕಾರ್ಯಕಾರಿ ನಿರ್ಮಾಪಕರಾದ ಅರಸೀಕೆರೆ ಉಮೇಶ್ ಹಾಗೂ ಸಂಗೀತ ನಿರ್ದೇಶಕ ಹಿತನ್ ಹಾಸನ್ “ಇದು ನಮ್ ಶಾಲೆ” ಚಿತ್ರದ ಕುರಿತು ಮಾತನಾಡಿದರು.

Continue Reading
Advertisement
Prajwal Revanna Case Devaraje Gowda
ಕ್ರೈಂ13 mins ago

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Federation Cup
ಕ್ರೀಡೆ19 mins ago

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Israel-Hamas Conflict
ವಿದೇಶ26 mins ago

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

IPL 2024 Points Table
ಕ್ರೀಡೆ44 mins ago

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

jayanagar murder case
ಕ್ರೈಂ48 mins ago

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Viral News
ದೇಶ1 hour ago

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

HD Revanna Bail
ಪ್ರಮುಖ ಸುದ್ದಿ2 hours ago

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Kalki 2898 AD
ಸಿನಿಮಾ2 hours ago

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

mumbai hoarding collapse
ಪ್ರಮುಖ ಸುದ್ದಿ2 hours ago

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Vertigo Problem
ಆರೋಗ್ಯ3 hours ago

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ15 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ15 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ15 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ16 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ16 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ22 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌