Blast in Bengaluru: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಸ್ಲೀಪರ್‌ ಸೆಲ್‌ ಆಗಿದ್ದ ಇಬ್ಬರು ವಶಕ್ಕೆ, ಏನ್‌ ಮಾಡಿದ್ರು? - Vistara News

ಪ್ರಮುಖ ಸುದ್ದಿ

Blast in Bengaluru: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಸ್ಲೀಪರ್‌ ಸೆಲ್‌ ಆಗಿದ್ದ ಇಬ್ಬರು ವಶಕ್ಕೆ, ಏನ್‌ ಮಾಡಿದ್ರು?

Blast in Bengaluru: ಕರ್ನಾಟಕ ಮೂಲದವರೇ ಆಗಿರುವ ಆರೋಪಿಗಳಿಗೆ ಬೆಂಗಳೂರಿನಲ್ಲಿ ಸ್ಲೀಪರ್‌ ಸೆಲ್‌ ಆಗಿ ಕಾರ್ಯನಿರ್ವಹಿಸಿದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Blast-in-Bangalore-Rameshwaram-Cafe-cc-tv
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯನ್ನು ನಡುಗಿಸಿದ್ದ ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟ (Blast in Bengaluru, Rameshwaram cafe Blast) ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಸಂಜೆ ಬೆಂಗಳೂರಿನಲ್ಲಿ ಇವರಿಬ್ಬರನ್ನೂ ಎನ್‌ಐಎ ವಶಕ್ಕೆ ತೆಗೆದುಕೊಂಡಿತು.

ಇವರಿಬ್ಬರೂ ಸ್ಫೋಟದ ಶಂಕಿತ ಆರೋಪಿಗಳೊಂದಿಗೆ ನಿರಂತದ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಈಗಾಗಲೇ ಸ್ಫೋಟದ ಪ್ರಧಾನ ಆರೋಪಿಗಳು ಮುಝಾವೀರ್, ಅಬ್ದುಲ್ ಮತೀನ್ ತಾಹ್ಯಾ ಎಂದು ಗೊತ್ತು ಹಚ್ಚಲಾಗಿದೆ. ಇವರ ಜೊತೆ ಈ ಆರೋಪಿಗಳು ನಿರಂತರ ಸಂಪರ್ಕದಲ್ಲಿದ್ದರು.

ಟೆಕ್ನಿಕಲ್ ಎವಿಡೆನ್ಸ್‌ನ ಹಿನ್ನೆಲೆಯಲ್ಲಿ ಅವರಿಬ್ಬರಿಗೆ ಜೊತೆಯಾಗಿ ಇವರು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಶಂಕೆ ಇದೆ. ಶಂಕಿತ ಆರೋಪಿಗಳಿಗೆ ಇವರು ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲಗಳನ್ನು ಮಾಡಿಕೊಟ್ಟಿರುವ ಶಂಕೆ ಇದೆ.

ಶಂಕಿತರಿಗೆ ಚೆನ್ನೈ ಲಿಂಕ್‌

ಶಂಕಿತನ ಜಾಡು ಹಿಡಿದ ಎನ್‌ಐಎಗೆ ಚೆನ್ನೈ ಲಿಂಕ್ ಸಿಕ್ಕಿದೆ. ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟ ಶಂಕಿತ ತಮಿಳುನಾಡಿಗೇ ಪರಾರಿಯಾಗಿರಬಹುದು ಎಂದು ಕೂಡ ಶಂಕಿಸಲಾಗಿದೆ. ಸ್ಫೋಟಕ್ಕೂ (Blast in Bengaluru) ಮುನ್ನ ಎರಡು ತಿಂಗಳುಗಳ ಕಾಲ ತಮಿಳುನಾಡಿನಲ್ಲಿ ಉಳಿದಿದ್ದುದು ತಿಳಿದುಬಂದಿದೆ.

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕವನ್ನು ಇಟ್ಟಿದ್ದವನ ಜೊತೆ ಮತ್ತೋರ್ವ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಉಳಿದಿದ್ದ ಶಂಕಿತನ ಜೊತೆಗೆ ಈತನೂ ಇದ್ದ. ಸ್ಫೋಟಕ್ಕೆ ಮುನ್ನ ಇವರು ಓಡಾಡಿದ್ದ ಜಾಡನ್ನು ಎನ್‌ಐಎ ಹಿಡಿದಿದೆ. ಎರಡು ತಿಂಗಳು ತಮಿಳುನಾಡಿನ ಲಾಡ್ಜ್‌ನಲ್ಲಿ ಇವರು ಉಳಿದುಕೊಂಡಿರುವುದು ಪತ್ತೆಯಾಗಿದೆ. ಸ್ಫೋಟಕ್ಕೆ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರೇ ಅಥವಾ ಇನ್ನಷ್ಟು ದೊಡ್ಡ ಉಗ್ರ ಕೃತ್ಯದ ತಯಾರಿ ನಡೆಸುತ್ತಿದ್ದರೇ ಎಂಬ ಅಂಶವನ್ನು ತನಿಖೆ ಮಾಡಲಾಗುತ್ತಿದೆ.

ಸ್ಫೋಟಕ ಇಡಲು ಬರುವ ವೇಳೆ ಮುಖ ಮರೆಮಾಚಲು ಧರಿಸಿದ್ದ ಉಗ್ರ ಧರಿಸಿದ್ದ ಟೊಪ್ಪಿಯ ಮೂಲವನ್ನು ಎನ್‌ಐಎ ಪತ್ತೆ ಹಚ್ಚಿದೆ. ಇದು ತಮಿಳುನಾಡಿನ ಮಾಲ್ ಒಂದರಲ್ಲಿ ಖರೀದಿಸಲಾದ ಟೊಪ್ಪಿ.ಯಾಗಿದ್ದು, ಟೊಪ್ಪಿ ಖರೀದಿ ವೇಳೆ ಶಂಕಿತನ ಜೊತೆಗೆ ಮತ್ತೊಬ್ಬನಿದ್ದ. ಖರೀದಿ ವೇಳೆ ಇಬ್ಬರ ಮುಖಚಹರೆ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಿಸಿಟಿವಿ ಫೂಟೇಜ್‌ಗಳನ್ನು ಎನ್‌ಐಎ ಸಂಗ್ರಹಿಸಿದೆ.

ಮತ್ತೊಂದೆಡೆ, ಭಯೋತ್ಪಾದಕ ಎಸೆದುಹೋದ ಕ್ಯಾಪ್‌ನಲ್ಲಿ ಶಂಕಿತನ ಕೂದಲು ದೊರೆತಿದ್ದು, ಅದನ್ನು ಡಿಎನ್‌ಎ ಟೆಸ್ಟ್‌ಗೆ ಒಳಪಡಿಸಲಾಗಿದೆ. ಸದ್ಯ ಸಿಸಿಟಿವಿಗಳನ್ನು ಆಧರಿಸಿದ ನಡೆದಿರುವ ತನಿಖೆಯಲ್ಲಿ ಸಿಕ್ಕಿರುವ ಈ ಮಹತ್ವದ ಲೀಡ್‌ ಎನ್‌ಐಎಯ ಮತ್ತಷ್ಟು ಆಳದ ತನಿಖೆಗೆ ಪೂರಕವಾಗಿದೆ.

ತನಿಖೆಯ ಆರಂಭಿಕ ಹಂತದಲ್ಲಿ ಆತನ ಸರಿಯಾದ ಮುಖಚರ್ಯೆ ಕಾಣುವ ಯಾವ ಚಿತ್ರವೂ ಯಾರ ಕೈಗೂ ಸಿಕ್ಕಿರಲಿಲ್ಲ. ಆತ ಕೆಎಸ್‌ಆರ್ಟಿಸಿ ವೋಲ್ವೋ ಬಸ್‌ನಲ್ಲಿ ಬಂದಿದ್ದು, ಹೋಟೆಲ್‌ ಪ್ರವೇಶ ಮಾಡಿದ್ದು, ಬಿಲ್‌ ಕೌಂಟರ್‌, ರವೆ ಇಡ್ಲಿ ಹಿಡಿದುಕೊಂಡು ಹೋಗುವ, ಬಾಂಬಿಟ್ಟ ಬಳಿಕ ಇಳಿದುಕೊಂಡು ಹೋಗುವ ವಿಡಿಯೊಗಳೆಲ್ಲ ಸಿಸಿಟಿವಿಯಲ್ಲಿ ಸಿಕ್ಕಿದ್ದವು. ಆದರೆ, ಅದೆಲ್ಲದರಲ್ಲಿ ಆತ ಮುಖವನ್ನು ಟೋಪಿಯಿಂದ ಮರೆ ಮಾಚಿದ್ದ. ಮಾಸ್ಕ್‌ ಹಾಕಿಕೊಂಡಿದ್ದ. ಹಾಗಾಗಿ ಆತನ ಮುಖ ಕಾಣುತ್ತಿರಲಿಲ್ಲ.

ಎನ್‌ಐಎ ಆರಂಭಿಕ ಹಂತದಲ್ಲಿ ಆತ ರಾಮೇಶ್ವರಂ ಕೆಫೆಯಲ್ಲಿರುವಾಗ ಸೆರೆ ಹಿಡಿದ ಚಿತ್ರವನ್ನು ಬಿಡುಗಡೆ ಮಾಡಿ ಈ ವ್ಯಕ್ತಿಯ ಮಾಹಿತಿ ಇದ್ದರೆ ದಯವಿಟ್ಟು ತಿಳಿಸಿ ಎಂದು ಹೇಳಿತ್ತು. ಬಳಿಕ ಬಳ್ಳಾರಿ ಬಸ್‌ ನಿಲ್ದಾಣದ ಒಂದು ವಿಡಿಯೊವನ್ನು ಪೋಸ್ಟ್‌ ಮಾಡಿತು. ಆದರೆ, ಅದನ್ನು ಕೆಲವೇ ನಿಮಿಷಗಳಲ್ಲಿ ಜಾಲ ತಾಣದಿಂದ ತೆಗೆದುಹಾಕಿತು.

ನಂತರ ಎನ್‌ಐಎ ನಾಲ್ಕು ಚಿತ್ರಗಳ ಒಂದು ಬಂಚ್‌ ಅನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಂಕಿತ ಆರೋಪಿಯ ಮುಖ ಬಹುತೇಕ ಸ್ಪಷ್ಟವಾಗಿ ಕಾಣಿಸುತ್ತದೆ. ಪೋಟೋದಲ್ಲಿರುವ ವ್ಯಕ್ತಿ ಕಂಡು ಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಪೋನ್ ನಂಬರ್ ಮತ್ತು ಇ ಮೇಲ್ ಐಡಿ ಕೊಟ್ಟು ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಬಳ್ಳಾರಿ ಮೂಲದ ಹಾಗೂ ಶಿವಮೊಗ್ಗ ಮೂಲದ ಕೆಲವು ಉಗ್ರರನ್ನೂ ಎನ್‌ಐಎ ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದು, ಅದು ಹೆಚ್ಚಿನ ಫಲ ನೀಡಿಲ್ಲ.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ ಬಾಂಬರ್‌ ಹೆಸರು ಗೊತ್ತಾಯ್ತು! ತಮಿಳುನಾಡಿನಿಂದಲೇ ಬಂದು ಬಾಂಬ್‌ ಇಟ್ಟ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Maldives anti-India stance: ಭಾರತ ವಿರೋಧಿ ಹೇಳಿಕೆಗಳು ನಮ್ಮ ಸರ್ಕಾರದ ನಿಲುವಲ್ಲ ಎಂದು ನಾವು ಆರಂಭದಲ್ಲಿಯೇ ಹೇಳಿದ್ದೇವೆ. ಅದನ್ನು ಮಾಡಬಾರದಿತ್ತು ಎಂಬುದನ್ನೂ ಅರಿತುಕೊಂಡಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ನಾವು ಸರಿಯಾದ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪು ತಿಳುವಳಿಕೆ ಸೃಷ್ಟಿಯಾಗಿದೆ. ಏನಾಯಿತು ಎಂದು ಮಾಲ್ಡೀವ್ಸ್ ಮತ್ತು ಭಾರತದ ಸರ್ಕಾರಗಳು ಅರ್ಥಮಾಡಿಕೊಂಡಿವೆ” ಎಂದು ಮಾಲ್ಡೀವ್ಸ್ ಸಚಿವರು ಹೇಳಿಕೆ ನೀಡಿದ್ದಾರೆ.

VISTARANEWS.COM


on

Maldives anti-India stance
Koo

ನವ ದೆಹಲಿ: ಭಾರತದ ವಿರುದ್ಧ ನೀಡಿರುವ ಹೇಳಿಕೆ ಬಗ್ಗೆ ಮಾಲ್ಡೀವ್ಸ್ ಪಶ್ಚಾತಾಪ ವ್ಯಕ್ತಪಡಿಸಿದೆ. ಅವಹೇಳನಕಾರಿ ಹೇಳಿಕೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದಾಗಿ ದ್ವೀಪ ರಾಷ್ಟ್ರ ವಿದೇಶಾಂಗ ಸಚಿವ ಮೂಸಾ ಜಮೀರ್ ಗುರುವಾರ ಭರವಸೆ ನೀಡಿದ್ದಾರೆ. ಭಾರತ ಭೇಟಿಯಲ್ಲಿರುವ ಜಮೀರ್, ಮಾಲ್ಡೀವ್ಸ್ ಮತ್ತು ಭಾರತ ಸರ್ಕಾರಗಳು ಆಗಿರುವ ವಿಷಯಗಳನ್ನು ಅರ್ಥಮಾಡಿಕೊಂಡಿವೆ. ಆ ಹಂತವನ್ನು ದಾಟಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

“ಭಾರತ ವಿರೋಧಿ ಹೇಳಿಕೆಗಳು ನಮ್ಮ ಸರ್ಕಾರದ ನಿಲುವಲ್ಲ ಎಂದು ನಾವು ಆರಂಭದಲ್ಲಿಯೇ ಹೇಳಿದ್ದೇವೆ. ಅದನ್ನು ಮಾಡಬಾರದಿತ್ತು ಎಂಬುದನ್ನೂ ಅರಿತುಕೊಂಡಿದ್ದೇವೆ. ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ನಾವು ಸರಿಯಾದ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ತಪ್ಪು ತಿಳುವಳಿಕೆ ಸೃಷ್ಟಿಯಾಗಿದೆ. ಏನಾಯಿತು ಎಂದು ಮಾಲ್ಡೀವ್ಸ್ ಮತ್ತು ಭಾರತದ ಸರ್ಕಾರಗಳು ಅರ್ಥಮಾಡಿಕೊಂಡಿವೆ” ಎಂದು ಮಾಲ್ಡೀವ್ಸ್ ಸಚಿವರು ಹೇಳಿಕೆ ನೀಡಿದ್ದಾರೆ.

ಮಾಜಿ ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರು ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಮೋದಿ ಲಕ್ಷ್ಮ ದ್ವೀಪಕ್ಕೆ ಭೇಟಿ ನೀಡಿದ್ದ ಬಳಿಕ ಅವರು ಈ ಅನಪೇಕ್ಷಿತ ಹೇಳಿಕೆಗಳನ್ನು ಕೊಟ್ಟಿದ್ದರು. ನಂತರ ಉಭಯ ದೇಶಗಳ ನಡುವಿನ ಸಂಬಂಧದ ಹದಗೆಟ್ಟಿತ್ತು.

ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲ್ಡೀವ್ಸ್ ತೊರೆಯಲು ಮೊಹಮ್ಮದ್ ಮುಯಿಝು ಮೇ 10 ರ ಗಡುವನ್ನು ನಿಗದಿಪಡಿಸಿದ ನಂತರ ಸಂಬಂಧಗಳು ಮತ್ತಷ್ಟು ಹಾಳಾಗಿದ್ದವು. ಏತನ್ಮಧ್ಯೆ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮೂಸಾ ಜಮೀರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಭಾರತ-ಮಾಲ್ಡೀವ್ಸ್ ಸಂಬಂಧಗಳ ಅಭಿವೃದ್ಧಿಯು “ಪರಸ್ಪರ ಹಿತಾಸಕ್ತಿಗಳನ್ನು” ಆಧರಿಸಿದೆ ಎಂದು ಒಪ್ಪಿಕೊಂಡಿದ್ದಾರೆ.

ಮಾಲ್ಡೀವ್ಸ್ ಮತ್ತು ಭಾರತದ ನಡುವೆ ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ಸಂಬಂಧ ವೃದ್ಧಿಸುವ ಮತ್ತು ಪರಸ್ಪರ ವಿನಿಮಯ ಹೆಚ್ಚಿಸುವ ಬಗ್ಗೆ ನಾವು ನಮ್ಮ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ ಎಂದು ಜಮೀರ್ ಸಭೆಯ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಪ್ರವಾಸೋದ್ಯಮ ಕುಸಿತದ ಬಗ್ಗೆ ಪ್ರತಿಕ್ರಿಯೆ

ಮಾಲ್ಡೀವ್ಸ್ ಗೆ ಪ್ರಯಾಣಿಸಲು ಬಯಸುವ ಎಲ್ಲಾ ಭಾರತೀಯರಿಗೆ ವೈಯಕ್ತಿಕವಾಗಿ ಮತ್ತು ಮಾಲ್ಡೀವ್ಸ್ ಜನರ ಪರವಾಗಿ ಆತ್ಮೀಯ ಸ್ವಾಗತ ನೀಡಲು ಬಯಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಮಾಲ್ಡೀವ್ಸ್​ಗೆ ಭೇಟಿ ನೀಡುವುದನ್ನು ಮುಂದುವರಿಸಲು ನಾವು ಎಲ್ಲಾ ಭಾರತೀಯ ಪ್ರವಾಸಿಗರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ, ಭಾರತೀಯ ಪ್ರಯಾಣಿಕರು ನಿಜವಾಗಿಯೂ ಮಾಲ್ಡೀವ್ಸ್​​​ಗೆ ಗಮನಾರ್ಹ ಸಂಖ್ಯೆಯಲ್ಲಿ ಆಗಮಿಸಿದರು. ಆ ಪ್ರವೃತ್ತಿ ಮುಂದುವರೆದಿದೆ. ಕಳೆದ ಎರಡು ತಿಂಗಳುಗಳಲ್ಲಿ, ನಾವು 16 ರಿಂದ 17% ಹೆಚ್ಚಳ ಕಂಡಿದ್ದೇವೆ. ಭಾರತೀಯ ಮಾರುಕಟ್ಟೆಗಳಲ್ಲಿ ಇಳಿಕೆ ಕಂಡುಬಂದಿದ್ದರೂ, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

Continue Reading

Latest

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Dog Bite: ಮಾಧ್ಯಮಗಳ ವರದಿಗಳ ಪ್ರಕಾರ, ನಾಯಿಯ ಕಡಿತಕ್ಕೆ ಒಳಗಾಗ ಮಗು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ನಂತರ ನಿವಾಸಿಗಳೆಲ್ಲರೂ ಒಟ್ಟಿಗೆ ಜಮಾಯಿಸಿ ಆ ಸೊಸೈಟಿಯಲ್ಲಿ ವಾಸಿಸುವ ನಾಯಿಗಳಿಗೆ ಆಹಾರ ನೀಡುವವರ ವಿರುದ್ಧ ಪ್ರತಿಭಟಿಸಿದರು. ನಾಯಿಗೆ ಆಹಾರ ಹಾಕುವ ದಂಪತಿ ಸೇರಿ ಹಲವರ ಮೇಲೆ ದೂರು ದಾಖಲಿಸಿದ್ದಾರೆ.

VISTARANEWS.COM


on

Dog bite
Koo

ನವ ದೆಹಲಿ: ನೋಯ್ಡಾದ ಸೆಕ್ಟರ್ -70 ರ (Noida Society) ವಸತಿ ಸೊಸೈಟಿಯಲ್ಲಿ ಬಾಲಕನೊಬ್ಬನಿಗೆ ಬೀದಿ ನಾಯಿಯೊಂದು ಕಚ್ಚಿದ ಪರಿಣಾಮ (Dog Bite) ಕೆರಳಿ ಕೆಂಡವಾದ ಅಪಾರ್ಟ್​ಮೆಂಟ್ ನಿವಾಸಿಗಳು, ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಈ ಘಟನೆಯ ವಿಡಿಯೊ ವೈರಲ್​ ಆಗಿದ್ದು ಪರ- ವಿರೋಧ ಚರ್ಚೆ ಜೋರಾಗಿ ನಡೆದಿದೆ. ಅದಕ್ಕಿಂತಲೂ ಹೆಚ್ಚಾಗಿ ಅಪಾರ್ಟ್​ಮೆಂಟ್​ ಒಳಗೆ ದೊಡ್ಡ ಸಂಖ್ಯೆಯಲ್ಲಿ ಜನರ ಏಕಾಏಕಿ ಜಮಾಯಿಸಿದ್ದು ಕಂಡು ಸಾಕಷ್ಟು ಜನರು ಇಂಥದ್ದು ನಡೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮಗಳ ವರದಿಗಳ ಪ್ರಕಾರ, ನಾಯಿಯ ಕಡಿತಕ್ಕೆ ಒಳಗಾಗ ಮಗು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ನಂತರ ನಿವಾಸಿಗಳೆಲ್ಲರೂ ಒಟ್ಟಿಗೆ ಜಮಾಯಿಸಿ ಆ ಸೊಸೈಟಿಯಲ್ಲಿ ವಾಸಿಸುವ ನಾಯಿಗಳಿಗೆ ಆಹಾರ ನೀಡುವವರ ವಿರುದ್ಧ ಪ್ರತಿಭಟಿಸಿದರು. ನಾಯಿಗೆ ಆಹಾರ ಹಾಕುವ ದಂಪತಿ ಸೇರಿ ಹಲವರ ಮೇಲೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Fireworks Blast : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿಯ ದುರ್ಮರಣ

ಉದ್ರಿಕ್ತ ಗುಂಪು ಶುಭಂ ಮತ್ತು ಸಂಕಲಿತಾ ಎಂಬ ಹೆಸರಿನ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅವರು ಕೂಡ ಪೊಲೀಸ್​ ದೂರು ನೀಡಿದ್ದಾರೆ. ಇದೆ ವೇಳೆ ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರನ್ನು ತಳ್ಳಿದ್ದಾರೆ ಎನ್ನಲಾಗಿದೆ. ಕರ್ತವ್ಯದಲ್ಲಿದ್ದ ಕಾನ್ಸ್​ಟೇಬಲ್​​ಗಳು ಈ ಬಗ್ಗೆ ದೂರು ನೀಡಿದ್ದಾರೆ. ಗಲಾಟೆ ವೇಳೆ ಕೆಲವರು ಸಿಸಿ ಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲು ಸಹ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ದಂಪತಿಯ ಆರೋಪ

ಗಲಾಟೆಯನ್ನು ರೆಕಾರ್ಡ್ ಮಾಡಲು ಮುಂದಾದಾಗ ಅವರಲ್ಲಿ ಒಬ್ಬರು ನನ್ನ ಹೆಂಡತಿಯ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದರು. ಅಲ್ಲದೆ ಅವಳಿಗೆ ಗಾಯ ಮಾಡಿದ್ದಾರೆ ಎಂದು ಶುಭಮ್ ಹೇಳಿದ್ದಾರೆ. ನನ್ನನ್ನು ರಕ್ಷಿಸಲು ಬಂದ ತನ್ನ ಕೆಲವು ಸ್ನೇಹಿತರನ್ನೂ ಎಳೆದಾಡಿದ್ದಾರೆ. ಅದರ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪೀಪಲ್ ಫಾರ್ ಅನಿಮಲ್ಸ್ (ಪಿಎಫ್ಎ) ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ, ಗುಂಪಿನ ವೀಡಿಯೊವನ್ನು ಹಂಚಿಕೊಂಡಿದೆ. “ನೋಯ್ಡಾದ ಸೆಕ್ಟರ್ 70 ರ ಪಾನ್ ಒಯಾಸಿಸ್​ನಲ್ಲಿ ಹಿಂಸಾತ್ಮಕ ಗುಂಪು ನಾಯಿಗಳಿಗೆ ಆಹಾರ ಮತ್ತು ಆರೈಕೆ ಮಾಡುವ ಯುವ ದಂಪತಿ ಮೇಲೆ ದಾಳಿ ಮಾಡಿ ಕಾನೂನು ಉಲ್ಲಂಘಿಸಿದೆ. ಪೊಲೀಸರನ್ನು ಸಹ ತಳ್ಳಲಾಗಿದೆ. ಗಲಭೆಕೋರರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದೆ.

ನಾಯಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಿ ಲಸಿಕೆ ಹಾಕಿದ ಆರೈಕೆದಾರಿಗೆ ಹಲ್ಲೆ ಮಾಡಲಾಗಿದೆ. ಅಶ್ಲೀಲವಾಗಿ ನಿಂದಿಸಲಾಗಿದೆ ಮತ್ತು ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಪ್ರಾಣಿ ಕಲ್ಯಾಣ ಸಂಸ್ಥೆ ಹೇಳಿದೆ.

Continue Reading

ಪ್ರಮುಖ ಸುದ್ದಿ

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Sensex Crash: ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡ ಬೀರಿದೆ.

VISTARANEWS.COM


on

Sensex crash
Koo

ಮುಂಬಯಿ : ಎಫ್ ಐಐ ಹೊರಹರಿವು ಮತ್ತು ಯುಎಸ್ ಬಾಂಡ್ ಹೆಚ್ಚಳದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಗುರುವಾರ ತೀವ್ರ ಕುಸಿತ (Sensex Crash) ಕಂಡಿವೆ. ಬಿಎಸ್ಇ (BSE) ಸೆನ್ಸೆಕ್ಸ್ 1,132 ಪಾಯಿಂಟ್ಸ್ ಕುಸಿದು 72,334 ಕ್ಕೆ ತಲುಪಿದ್ದರೆ, ನಿಫ್ಟಿ 50 370 ಪಾಯಿಂಟ್ಸ್ ಕುಸಿದು 21,932 ಕ್ಕೆ ತಲುಪಿದೆ. ಬಿಎಸ್ಇ ಸೂಚ್ಯಂಕವು ಅಂತಿಮವಾಗಿ 1,062 ಪಾಯಿಂಟ್​​ ಅಂದರೆ ಶೇಕಡಾ 1.45 ರಷ್ಟು ಕುಸಿದು 72,404 ಕ್ಕೆ ಕೊನೆಗೊಂಡಿತು. ನಿಫ್ಟಿ 50 ಕೂಡ 345 ಪಾಯಿಂಟ್ ಅಂದರೆ ಶೇಕಡಾ 1.55 ರಷ್ಟು ಕುಸಿದು 21,958 ಕ್ಕೆ ತಲುಪಿದೆ.

ಮಾರುಕಟ್ಟೆಗಳಲ್ಲಿ, ಬಿಎಸ್ಇ ಮಿಡ್​ಕ್ಯಾಪ್​ ಸೂಚ್ಯಂಕವು ಶೇಕಡಾ 2 ರಷ್ಟು ಕುಸಿದರೆ, ಬಿಎಸ್ಇ ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇಕಡಾ 2.4 ರಷ್ಟು ಕುಸಿದಿದೆ. “ಮಾರುಕಟ್ಟೆಯ ಕುಸಿತಕ್ಕೆ ಮುಖ್ಯವಾಗಿ ಸಾರ್ವತ್ರಿಕ ಚುನಾವಣೆಗಳ ಸುತ್ತಲಿನ ಅನಿಶ್ಚಿತತೆ ಕಾರಣವಾಗಿದೆ. ಈ ಅನಿಶ್ಚಿತತೆಯು ಭಾರತದ ಚಂಚಲತೆಯ ಮಾಪಕವಾದ ಇಂಡಿಯಾ ವಿಐಎಕ್ಸ್ ಅನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಇದು 52 ವಾರಗಳ ಗರಿಷ್ಠ 19 ಕ್ಕೆ ತಲುಪಿದೆ, ಇದು ಮಾರುಕಟ್ಟೆ ಆತಂಕವನ್ನು ಸೂಚಿಸಿದೆ. ಲಾರ್ಜ್ ಕ್ಯಾಪ್ ಕಂಪನಿಗಳ ನಾಲ್ಕನೇ ತ್ರೈಮಾಸಿಕ ಗಳಿಕೆಯ ಇಳಿಕೆಯು ಹೂಡಿಕೆದಾರರ ನಿರಾಸಕ್ತಿಗೆ ಕಾರಣವಾಗಿದೆ ಎಂದು ಷೇರು ಮಾರುಕಟ್ಟೆ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಮೇ ತಿಂಗಳಾದ್ಯಂತ ತಮ್ಮ ಹೂಡಿಕೆಗಳನ್ನು ಸಕ್ರಿಯವಾಗಿ ಮಾರಾಟ ಮಾಡುತ್ತಿದ್ದಾರೆ. ಒಟ್ಟು ಮಾರಾಟ 15,863.14 ಕೋಟಿ ರೂ. ಆಗಿದ್ದು ಇದು ಕೂಡ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಮೇ 8 ರಂದು ವಿದೇಶಿ ಹೂಡಿಕೆದಾರರು 6,669.10 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ. ವಿದೇಶಿ ಬಂಡವಾಳ ಹೂಡಿಕೆದಾರರು 2025ರ ಹಣಕಾಸು ವರ್ಷದಲ್ಲಿ ಇದುವರೆಗೆ 13,747 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ.

ದೇಶೀಯ ಸಾಂಸ್ಥಿಕ ಹೂಡಿಕೆದಾರರಿಂದ (ಡಿಐಐ) ಕಡಿಮೆ ಖರೀದಿ ಚಟುವಟಿಕೆಯು ಮಾರುಕಟ್ಟೆಯ ಚಂಚಲತೆಗೆ ಕಾರಣವಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ, ನಿಫ್ಟಿ ಶೇಕಡಾ 1.5 ರಷ್ಟು ಕುಸಿದರೆ, ಶಾಂಘೈ ಕಾಂಪೊಸಿಟ್ ಶೇಕಡಾ 2.62 ಮತ್ತು ಹ್ಯಾಂಗ್ ಸೆಂಗ್ ಶೇಕಡಾ 8.8 ರಷ್ಟು ಏರಿಕೆಯಾಗಿದೆ. ಚೀನಾ ಮತ್ತು ಹಾಂಗ್ ಕಾಂಗ್ ಮಾರುಕಟ್ಟೆಗಳು ಸುಮಾರು 10 ಪಿಇಗಳೊಂದಿಗೆ ಇಳಿಕೆ ಕಂಡಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಲೋಕ ಸಭಾ ಚುನಾವಣೆಯ ಆರಂಭಿಕ ಮೂರು ಹಂತಗಳಲ್ಲಿ ಕಂಡುಬಂದ ಕಡಿಮೆ ಮತದಾನವು ಮಾರುಕಟ್ಟೆಗಳ ಆತಂಕ ಹೆಚ್ಚಿಸಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಬೆಂಗಳೂರು

R Ashok: ಶಾಂತಿಯ ತೋಟವನ್ನು ಹಾಳುಗೆಡವುತ್ತಿರುವುದು ಬಿಜೆಪಿಯಲ್ಲ, ಕಾಂಗ್ರೆಸ್‌: ಆರ್. ಅಶೋಕ್‌ ಆಕ್ರೋಶ

Bengaluru News: ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಆರೋಪಿಸಿದ್ದಾರೆ.

VISTARANEWS.COM


on

Opposition party leader R Ashok latest statement in bengaluru
Koo

ಬೆಂಗಳೂರು: ಕಾಂಗ್ರೆಸ್‌ ನಾಯಕ ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು 5 ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೇ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಅವರು ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣದ ಗ್ಯಾರಂಟಿಯನ್ನು ನೀಡಿದ್ದಾರೆ. ಹಿಂದೆ ವರ್ಣಭೇದ ನೀತಿಯಿಂದ ಅನೇಕ ಸಾವು ನೋವುಗಳಾಗಿತ್ತು. ನೆಲ್ಸನ್‌ ಮಂಡೇಲ, ಮಹಾತ್ಮ ಗಾಂಧೀಜಿಯಿಂದ ಇದರ ವಿರುದ್ಧ ಹೋರಾಟ ನಡೆದಿತ್ತು. ಆದರೆ ಕಾಂಗ್ರೆಸ್ ಬಣ್ಣದ ಆಧಾರದಲ್ಲಿ ಜನರ ಮನಸ್ಸನ್ನು ಒಡೆದಿದೆ. 5 ಸಾವಿರ ವರ್ಷಗಳ ಇತಿಹಾಸವಿರುವ ನಮ್ಮನ್ನು ಆಫ್ರಿಕಾದವರು ಎಂದಿದ್ದಾರೆ. ಒಕ್ಕಲಿಗರು, ಲಿಂಗಾಯಿತರು, ದಲಿತರಿಗೆ ಕಾಂಗ್ರೆಸ್‌ ಯಾವ ಬಣ್ಣ ಹಚ್ಚುತ್ತದೆ ಎಂದು ಪ್ರಶ್ನೆ ಮಾಡಿದರು.

ಸೋನಿಯಾ ಗಾಂಧಿ ಇಟಲಿಯಿಂದ ಬಂದಿದ್ದರೂ ಅವರನ್ನು ಭಾರತೀಯರೆಂದು ಒಪ್ಪಿಕೊಳ್ಳುವಂತೆ ಕಾಂಗ್ರೆಸ್‌ ನಾಯಕರು ಒತ್ತಾಯಿಸುತ್ತಾರೆ. ಸೋನಿಯಾ ದೇಶದ ಸೊಸೆ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಸೋನಿಯಾ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ವಾಡ್ರಾ ಯಾವ ದೇಶದಿಂದ ಬಂದಿದ್ದಾರೆ ಎಂದು ಮೊದಲು ತಿಳಿಸಬೇಕು. ನುಡಿದಂತೆ ನಡೆಯುವ ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿ ಹೇಳುತ್ತಾರೆ. ಈಗ ಬಿಳಿ ಗ್ಯಾರಂಟಿ, ಕಪ್ಪು ಗ್ಯಾರಂಟಿ, ಚೈನೀಸ್‌ ಗ್ಯಾರಂಟಿ, ಅರಬ್ಬಿ ಗ್ಯಾರಂಟಿ, ಆಫ್ರಿಕಾ ಗ್ಯಾರಂಟಿಯನ್ನು ನೀಡಿದ್ದಾರೆ ಎಂದರು.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

ಮಹಾರಾಷ್ಟ್ರದಲ್ಲಿ ಹುಟ್ಟಿದ ಡಾ. ಬಿ. ಆರ್‌. ಅಂಬೇಡ್ಕರ್‌ ಯಾರು, ಗುಜರಾತ್‌ನಲ್ಲಿ ಹುಟ್ಟಿದ ಗಾಂಧೀಜಿ ಯಾರು, ಬೆಂಗಳೂರು ಕಟ್ಟಿದ ಕೆಂಪೇಗೌಡರು ಯಾರು ಎಂದು ‌ಕಾಂಗ್ರೆಸ್ ಹೇಳಬೇಕು. ಈಗಾಗಲೇ ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ನೋಡುತ್ತಿದೆ. ಮೋದಿ ಎಂದರೆ‌ ಕಪಾಳಕ್ಕೆ ಹೊಡಿ ಎಂದವರು ಪಿತ್ರೋಡಾಗೆ ಹೇಗೆ ಹೊಡೆಯುತ್ತಾರೆ ಎಂದು ಪ್ರಶ್ನೆ ಮಾಡಿದರು.

ಸ್ವಂತ ಮಕ್ಕಳಿಗೆ ಹಕ್ಕಿಲ್ಲ

ಹಿಂದೆ ಬ್ರಿಟಿಷರು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾನೂನು ತಂದು ರಾಜ್ಯಗಳನ್ನು ಕಿತ್ತುಕೊಂಡರು. ಅದೇ ರೀತಿ ಈಗಿನ ಕಾಂಗ್ರೆಸ್ ಸ್ವಂತ ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾನೂನು ತರಲು ಮುಂದಾಗಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಲೂಟಿ ಮಾಡಿದ್ದೇವೆ ಎಂದು ಹೇಳಿದ್ದರು. ಅಂತಹ ಲೂಟಿಯ ಸಂಪತ್ತನ್ನು ನರೇಂದ್ರ ಮೋದಿ ಜನರಿಗೆ ನೀಡಲಿದ್ದಾರೆ ಎಂದರು. ದಕ್ಷಿಣ ಭಾರತದವರು ಆಫ್ರಿಕಾದವರು ಎನ್ನುವುದಾದರೆ ಸಿಎಂ ಸಿದ್ದರಾಮಯ್ಯ ಮೊದಲು ಆಫ್ರಿಕಾಗೆ ಹೋಗಿ ಅಲ್ಲಿ ಸಿಎಂ ಆಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

ಮುಖ್ಯಮಂತ್ರಿಗಳೇ ಉತ್ತರಿಸಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಸಿಲರಿ ನೀರು, ಜ್ಯೂಸ್ ಕುಡಿದುಕೊಂಡು ಎಸಿಯಲ್ಲಿ ಕುಳಿತು ಪ್ರಧಾನಿ ನರೇಂದ್ರ ‌ಮೋದಿಗೆ ಪ್ರಶ್ನೆ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಜನರಿಗೆ ನೀರು ನೀಡಿಲ್ಲ, ಹಾಲಿನ ಪ್ರೋತ್ಸಾಹಧನ ನೀಡಿಲ್ಲ, ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡಿಲ್ಲ, ಬಿಬಿಎಂಪಿ ಗುತ್ತಿಗೆದಾರರಿಗೆ ಬಿಲ್ ಕೊಟ್ಟಿಲ್ಲ, ನೇಹಾ ಹತ್ಯೆಗೆ 120 ದಿನಗಳಲ್ಲಿ ತೀರ್ಪು ಕೊಡುತ್ತೇನೆಂದು ಇನ್ನೂ ತನಿಖೆ ಶುರು ಆಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಒಂದು ದಿನ ರಜೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಎಲ್ಲ ಬಗೆಯ ರಜೆ ಪಡೆದು ಮಜಾ ಮಾಡುತ್ತಿದ್ದಾರೆ. ಸದಾ ಕೆಲಸ ಮಾಡುವ ಮೋದಿ ಹಾಗೂ ಕೆಲಸ ಕಳ್ಳ ಸಿಎಂ ಸಿದ್ದರಾಮಯ್ಯ ಅವರ ನಡುವೆ ಎಲ್ಲಿಯ ಹೋಲಿಕೆ ಎಂದು ಅಶೋಕ್‌ ವ್ಯಂಗ್ಯವಾಡಿದರು‌.

Continue Reading
Advertisement
Maldives anti-India stance
ಪ್ರಮುಖ ಸುದ್ದಿ31 mins ago

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Self Harming Guest lecturer hangs herself to death
ಕರ್ನಾಟಕ52 mins ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ57 mins ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest1 hour ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ2 hours ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ2 hours ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ2 hours ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ2 hours ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

New fashion Trend
ಫ್ಯಾಷನ್2 hours ago

New Fashion Trend: ಕ್ವೀನ್‌ ಲುಕ್‌ ನೀಡುವ ಡಿಸೈನರ್‌ ಪರ್ಲ್ ಶೈಲಿಯ ಹೆಡ್‌ಬ್ಯಾಂಡ್‌

Akshattadigi Amavasya Devotees darshan of Sri Guru Kottureswara Swamy
ವಿಜಯನಗರ2 hours ago

Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ6 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ6 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌