Drowned in Pond : ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು - Vistara News

ಬೆಂಗಳೂರು ಗ್ರಾಮಾಂತರ

Drowned in Pond : ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

Drowned in Pond : ಹೋಳಿ ಆಡಿದ ನಂತರ ಕೈ-ಕಾಲು ತೊಳೆಯಲು ಕೃಷಿ ಹೊಂಡಕ್ಕೆ ಹೋದ ವ್ಯಕ್ತಿ ಕಾಲು ಜಾರಿ ಮೃತಪಟ್ಟಿದ್ದಾರೆ.

VISTARANEWS.COM


on

drowned in pond
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೊಡ್ಡಬಳ್ಳಾಪುರ: ಕಾಲು ಜಾರಿ ಕೃಷಿ ಹೊಂಡಕ್ಕೆ (Drowned in Pond) ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದ ತೋಟದಲ್ಲಿ ಘಟನೆ (Bengaluru Rural) ನಡೆದಿದೆ. ಉಜ್ಜನಿ ಹೊಸಹಳ್ಳಿ ಗ್ರಾಮದ ಸುನೀಲ್ (30) ಮೃತ ದುರ್ದೈವಿ.

ಸುನೀಲ್‌ 2 ತಿಂಗಳ ಹಿಂದಷ್ಟೇ ತೋಟದ ಕೆಲಸಕ್ಕೆ ಸೇರಿಕೊಂಡಿದ್ದ. ತೋಟದಲ್ಲೇ ವಾಸವಿದ್ದ ಸುನೀಲ್‌ ಬಿಹಾರ ಮೂಲದ ಕಾರ್ಮಿಕರ ಜತೆ ಹೋಳಿ ಆಚರಿಸಿದ್ದ. ಹೋಳಿ ಹಬ್ಬ ಆಚರಿಸಿ‌ ಹೊಂಡದಲ್ಲಿ ಕೈ ಕಾಲು ತೊಳೆಯಲು ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಿದ್ದ ರಭಸಕ್ಕೆ ಮುಖಕ್ಕೆ ತೀವ್ರವಾಗಿ ಗಾಯವಾಗಿರುವ ಗುರುತು ಇದೆ.

ಕಾರ್ಮಿಕರು ಕೃಷಿ ಹೊಂಡದ ಬಳಿ ಬಂದಾಗ ಸುನೀಲ್ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಈ ಸಂಬಂಧ ತನಿಖೆಯನ್ನು ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ದೊಡ್ಡಬಳ್ಳಾಪುರ ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Theft Case : ಬ್ಯಾಂಕ್‌ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದಳು; ಕಿಲಾಡಿ ಕಳ್ಳಿ ಖಾಕಿಗೆ ಲಾಕ್‌ ಆಗಿದ್ದೇಗೆ?

ನದಿಯಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಯುವಕ

ಗದಗ: ಅದ್ಧೂರಿಯಾಗಿ ಹೋಳಿ ಹಬ್ಬ (Holli Fest) ಆಚರಿಸಿ ನಂತರ ಸ್ನಾನ‌ ಮಾಡಲೆಂದು ನದಿಗೆ ತೆರಳಿದ ಯುವಕ‌ ನೀರಿನಲ್ಲಿ ಮುಳುಗಿ (Drowned In River) ಮೃತಪಟ್ಟಿದ್ದಾನೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಬ್ಯಾರೇಜ್‌ನಲ್ಲಿ ಘಟನೆ (Gadaga News) ನಡೆದಿದೆ. ಯುವರಾಜ ವಿಶ್ವನಾಥ ಕೊಂಪಿ (23) ಮೃತ ದುರ್ದೈವಿ.

ವಿಜಯನಗರ ಜಿಲ್ಲೆ ಹಿರೇಹಡಗಲಿ‌ ಗ್ರಾಮದ ನಿವಾಸಿಯಾದ ಯುವರಾಜ ಹೋಳಿ ಹಬ್ಬ ಮುಗಿಸಿಕೊಂಡು ಸ್ನೇಹಿತರೊಟ್ಟಿಗೆ ಸ್ನಾನಕ್ಕೆಂದು ನದಿಗೆ ಬಂದಿದ್ದ. ಶಿಂಗಟಾಲೂರು ಏತ ‌ನೀರಾವರಿಯ ಬ್ಯಾರೇಜ್‌ನಲ್ಲಿ ಈಜಲು ತೆರಳಿದಾಗ, ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾನೆ.

ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಮಳೆಯು (Rain news) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದ್ದು, ಸಂರ್ಪಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಮತ್ತೆ ಕೆಲವೆಡೆ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಳನಾಡು ಸೇರಿ ಮಲೆನಾಡು, ಕರಾವಳಿಯಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದೆ. ಧಾರವಾಡದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಸಮಯ (Rain News) ಮಳೆಯಾಗಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಧಾರವಾಡ ಗ್ರಾಮೀಣ ಭಾಗದಲ್ಲೂ ಮಳೆಯು ಅಬ್ಬರಿಸಿದೆ. ಇತ್ತ ಕೊಡಗಿನಲ್ಲಿ ಮತ್ತೆ ಮಳೆಯು ವ್ಯಾಪಿಸಿದೆ. ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯು, ಶುಕ್ರವಾರ ಮಧ್ಯಾಹ್ನದ ನಂತರ ಜಿಲ್ಲೆಯಾದ್ಯಂತ ಅಬ್ಬರಿಸಿದೆ. ಮಳೆಗೆ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಕ್ಕೆ ಹೆಚ್ಚಾದ ಒಳ ಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ.

ಜುಲೈ 6ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಧಾರಾಕಾರ ಮಳೆಗೆ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎರಡು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಬಾರವಾಡ-ಕುನ್ನೂರ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಭೋಜ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತದ ಮನವಿಗೆ ಕ್ಯಾರೇ ಎನ್ನದ ಜನರು ನದಿಯಲ್ಲಿ ಇಳಿದು ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ನದಿ ಬಳಿ ಬಂದೋಬಸ್ತ್ ಸಲುವಾಗಿ ಜಿಲ್ಲಾಡಳಿತದಿಂದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

karnataka Weather Forecast

ಶಿರೂರು ಸಮೀಪ ಗುಡ್ಡ ಕುಸಿಯುವ ಭೀತಿ

ಉಡುಪಿಯ ಶಿರೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಭೀತಿ ಹೆಚ್ಚಾಗಿದೆ. ಬೈಂದೂರು ತಾಲೂಕು, ಶಿರೂರು ಸಮೀಪದಲ್ಲಿ ಗುಡ್ಡ ಜರಿಯುವ ಸಾಧ್ಯತೆ ಇದೆ. ಐಆರ್‌ಬಿ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿ ಶತಶಪಥ ಕಾಮಗಾರಿಯ ವೇಳೆ ಗುಡ್ಡ ಕೊರೆಯಲಾಗಿತ್ತು. ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಗುಡ್ಡ ಜರಿಯುವ ಭೀತಿ ಇದೆ.

ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒತ್ತಿನಣೆಯಲ್ಲಿ ನಿಧಾನವಾಗಿ ಜರಿದು ಗುಡ್ಡ ಬೀಳುತ್ತಿದೆ. ಮಳೆ ಮುಂದುವರೆದರೆ ಸಂಪೂರ್ಣ ಗುಡ್ಡ, ಹೆದ್ದಾರಿ ಮೇಲೆ ಕುಸಿಯುವ ಭೀತಿ ಇದೆ. ಒಂದು ವೇಳೆ ಗುಡ್ಡ ಜರಿದರೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ಸಂಪರ್ಕ ಬಂದ್ ಆಗಲಿದೆ.

ಚಿತ್ರದುರ್ಗದಲ್ಲಿ ಶಾಲೆಗೆ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕಳ್ಳಿಹಟ್ಟಿ ಗೊಲ್ಲರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ಜತೆಗೆ ಶಾಲಾ ಕೊಠಡಿಯಲ್ಲಿ ನೀರು ಸೋರುತ್ತಿದೆ. ಹೀಗಾಗಿ ಶಿಕ್ಷಕರು ಮಕ್ಕಳನ್ನು ಒಂದು ಮೂಲೆಗೆ ಕೂರಿಸಿದ್ದಾರೆ. ನೂತನ ಕಟ್ಟಡ ಅಥವಾ ಬೇರೊಂದು ಕಟ್ಟಡ ಕಟ್ಟಿಸಿಕೊಡುವಂತೆ ಹಲವು ಬಾರಿ ಶಾಲಾ ಸಿಬ್ಬಂದಿ ಮನವಿ ಮಾಡಿದ್ದಾರೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮೌನಕ್ಕೆ ಜಾರಿದ್ದಾರೆ.

ಒತ್ತಿನೆಣೆ ಬೀಚ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರವಾಸಿ ತಾಣ ಒತ್ತಿನೆಣೆ ಬೀಚ್‌ನಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧ ಹೇರಿದೆ. ಅದರಲ್ಲೂ ಎಲ್ಲಾ ಬೀಚ್‌ಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಾಚ್ ಗಾರ್ಡ್ ಸಿಬ್ಬಂದಿ ಕಣ್ಗಾವಲು ಇದೆ. ಆದರೂ ಅಪ್ಪಳಿಸಿ ಬರುವ ಅಲೆಗಳ ಮುಂದೆ ಸೆಲ್ಫಿ ತೆಗೆಯಲು ಪ್ರವಾಸಿಗರು ಯತ್ನಿಸುತ್ತಿದ್ದಾರೆ.

ಅಪಾಯದಲ್ಲಿರುವ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ ಅಪಾಯದಲ್ಲಿದೆ. ಸ್ಥಳೀಯರ ದೂರಿನಂತೆ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದೆ. ಸೇತುವೆಯ ಅಡಿ ಭಾಗದಲ್ಲಿ ತುಂಡು ತುಂಡಾಗಿ ಬೀಮ್‌ಗಳ ಸಿಮೆಂಟ್‌ಗಳು ಬೀಳುತ್ತಿವೆ. ನಿರಂತರ ಅಕ್ರಮ ಮರುಳು ಸಾಗಾಟವೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಪೋಲಿಸ್ ಚೆಕ್ ಪೋಸ್ಟ್ ಇಲ್ಲದಿರುವುದು ಮರಳು ದಂದೆಕೋರರಿಗೆ ವರದಾನವಾಗಿದೆ ಎಂದು ಕಿಡಿಕಾರಿದ್ದಾರೆ. ಬಳ್ಕುಂಜೆ ಭಾಗದಿಂದ ಪಲಿಮಾರು, ಉಡುಪಿ, ನಿಟ್ಟೆ, ಬೆಳ್ಮಣ್, ಕುದುರೆಮುಖ, ಹೆಬ್ರಿ, ಸಾಗರ ಮೊದಲಾದ ಕಡೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

Assault Case : ತುಮಕೂರಿನಲ್ಲಿ ಜಮೀನು ವಿವಾದಕ್ಕೆ ಎರಡು ಕುಟುಂಬಗಳ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ವ್ಯಕ್ತಿಯನ್ನು ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

Assault case
Koo

ತುಮಕೂರು: ಜಮೀನು‌ ವಿವಾದ ಹಿನ್ನೆಲೆಯಲ್ಲಿ (Assault Case) ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿದೆ. ತುಮಕೂರು‌ ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ಘಟನೆ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಾಗೇಗೌಡನಪಾಳ್ಯದ ಮಂಜುನಾಥ್ ಎಂಬಾತನ ತಾಯಿ, ಪತ್ನಿ ಹಾಗೂ ಗಂಗಮ್ಮ, ನಾಗಯ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ.

ಲಕ್ಷ್ಮಣಯ್ಯಗೆ ಸೇರಿದ ಸರ್ವೇ ನಂ.26ರ ಜಮೀನಿನ‌ ವಿಚಾರಕ್ಕೆ ಗಲಾಟೆ ನಡೆದಿದೆ. 1 ಎಕರೆ 10 ಗುಂಟೆಗೆ ಪಹಣಿ ಇದ್ದು, ಸರ್ವೆ ನಂ.26 ರಲ್ಲಿ ಇರುವ 15 ಗುಂಟೆ ಕರಾಬಿನ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಈಗಾಗಲೇ 15 ಗುಂಟೆ ಕರಾಬು ಜಾಗದಲ್ಲಿ ಲಕ್ಷ್ಮಣಯ್ಯ ಉಳುಮೆ ಮಾಡಿಕೊಂಡಿದ್ದಾರೆ.

15 ಗುಂಟೆ ಕರಾಬು ನಮಗೆ ಸೇರಬೇಕೆಂದು ಪಕ್ಕದ ಜಮೀನಿನ ಮಂಜುನಾಥ ಕುಟುಂಬಸ್ಥರಿಂದ ಲಕ್ಷ್ಮಣಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಗಳಕ್ಕೆ ಬಂದ ಮಂಜುನಾಥ್‌ ಕುಟುಂಬಸ್ಥರು, ಲಕ್ಷ್ಮಣಯ್ಯನನ್ನು ಹಿಡಿದು ನೀರಿನಲ್ಲಿ ಮುಳುಗಿಸಿ, ಕುಡುಗೋಲು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದ ಲಕ್ಷ್ಮಣಯ್ಯಗೆ ಗಂಭೀರ ಗಾಯಗೊಂಡಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ದೇವನಹಳ್ಳಿಯ ಶಾಲೆ ಹಿಂಭಾಗ ಶವ ಪತ್ತೆ

ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಂದಿನಿ ಶಾಲೆ ಹಿಂಭಾಗ ಘಟನೆ ನಡೆದಿದೆ. ರಾಜಕಾಲುವೆಯಲ್ಲಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಐದಾರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಧಾರವಾಡದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಮಗನ ಅಳಲು

ತಂದೆಯನ್ನು ಹುಡುಕಿಕೊಡುವಂತೆ ಮಗನೊಬ್ಬ ಎಸ್‌ಪಿ ಕಚೇರಿಗೆ ಆಗಮಿಸಿದ್ದಾನೆ. ಧಾರವಾಡ ಜಿಲ್ಲೆಯ ಮಾರಡಗಿ ಗ್ರಾಮದ ದ್ಯಾಮಪ್ಪ ಹಡಪದ ಕಳೆದ ಮೇ 19ರಂದು ಏಕಾಏಕಿ ಕಾಣೆಯಾಗಿದ್ದರಿ. ಕಳೆದ 50 ದಿನಗಳಿಂದ ತಂದೆ ಕಾಣುತ್ತಿಲ್ಲ ಎಂದು ಮಗ ಪ್ರವೀಣ್‌ ಅಳಲು ತೊಡಿಕೊಂಡಿದ್ದಾರೆ. ಧಾರವಾಡ ಎಸ್‌ಪಿ ಕಚೇರಿಗೆ ಆಗಮಿಸಿ ತಂದೆಯನ್ನು ಹುಡುಕಿಕೊಡುವಂತೆ ಪ್ರವೀಣ್ ಮನವಿ ಮಾಡಿದ್ದಾರೆ. ನಮ್ಮ ತಂದೆಗೆ ಏನಾಗಿದೆ ಅಂತಲೇ ಗೊತ್ತಿಲ್ಲ, ಅವರನ್ನ ಹುಡುಕಿಕೊಡಿ ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Channaptna By Election: ‘ಕುಮಾರಸ್ವಾಮಿ ಅವರು ಚನ್ನಪಟ್ಟಣಕ್ಕೆ ಬಾರದೇ ಇದ್ದರೆ ನಾನು ಸೋಲನ್ನೇ ಕಾಣುತ್ತಿರಲಿಲ್ಲ. ಚನ್ನಪಟ್ಟಣದ ಜನ ನನ್ನನ್ನು ಕೈ ಬಿಡ್ತಿರಲಿಲ್ಲ. ನೀವು ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದು ಎರಡು ಬಾರಿ ಗೆಲ್ಲಿಸಿದೆ. ಹಾಗಾಗಿ ಕುಮಾರಸ್ವಾಮಿ ಅವರೇ ಬಂದು ನಮ್ಮ ಚುನಾವಣೆ ಮಾಡಬೇಕು’ ಎಂದಿದ್ದಾರೆ ಯೋಗೇಶ್ವರ್.‌

VISTARANEWS.COM


on

Channaptna By Election CP Yogeshwar
Koo

ರಾಮನಗರ: ಚನ್ನಪಟ್ಟಣದಲ್ಲಿ ನಡೆಯುವ ಉಪಚುನಾವಣೆಯಲ್ಲಿ (Channaptna By Election) ನಾನೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿದ್ದು, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಕೂಡ ಇದನ್ನು ಅನುಮೋದಿಸಿದ್ದಾರೆ. ಅವರೇ ಅದನ್ನು ಘೋಷಿಸಬೇಕು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwar) ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕಳೆದ ವಾರ ನಾನು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದೆ. ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಹೀಗಾಗಿ ಆದಷ್ಟು ಬೇಗ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಹೆಸರು ಸೂಚಿಸಿ. ಹೆಚ್‌ಡಿಕೆ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ. ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಎಂದು ಅವರನ್ನೇ ಕೇಳಿದ್ದೇನೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿಪಿವೈ ಹೇಳಿದರು.

ಕುಮಾರಸ್ವಾಮಿ ಎನ್‌ಡಿಎ ಮೈತ್ರಿಯಿಂದ ಗೆದ್ದು ಕೇಂದ್ರ ಮಂತ್ರಿಯಾಗಿದ್ದಾರೆ. ಬಹಳ ಎತ್ತರದ ಸ್ಥಾನಕ್ಕೆ ಹೋಗಿದ್ದಾರೆ. ಕುಮಾರಸ್ವಾಮಿ ಅವರು ಚನ್ನಪಟ್ಟಣಕ್ಕೆ ಬಾರದೇ ಇದ್ದರೆ ನಾನು ಸೋಲನ್ನೇ ಕಾಣುತ್ತಿರಲಿಲ್ಲ. ಚನ್ನಪಟ್ಟಣದ ಜನ ನನ್ನನ್ನು ಕೈ ಬಿಡ್ತಿರಲಿಲ್ಲ. ನೀವು ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದು ಎರಡು ಬಾರಿ ಗೆಲ್ಲಿಸಿದೆ. ಹಾಗಾಗಿ ಕುಮಾರಸ್ವಾಮಿ ಅವರೇ ಬಂದು ನಮ್ಮ ಚುನಾವಣೆ ಮಾಡಬೇಕು. ನಾನು ಈ ಬಗ್ಗೆ ಕುಮಾರಸ್ವಾಮಿ ಅವರಲ್ಲಿ ಮನವಿ ಕೂಡಾ ಮಾಡಿದ್ದೇನೆ. ಅದಕ್ಕೆ ಅವರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ತಾಲೂಕಿನ ಜನರ ಆತಂಕ, ಒತ್ತಡ ಹೆಚ್ಚಾಗ್ತಿದೆ. ಹಾಗಾಗಿ ಗೊಂದಲಕ್ಕೆ ಅವಕಾಶ ಕೊಡದೇ ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ಆಗಬೇಕು. ಎಚ್‌ಡಿಕೆ ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತಾರೆ ಎಂದರು ಯೋಗೇಶ್ವರ್.‌

ಮೈತ್ರಿ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಯೋಗೇಶ್ವರ್, ʼಮೈತ್ರಿ ಧರ್ಮ ಪಾಲಿಸಬೇಕು ಅಂತ ಅಂದುಕೊಂಡರೆ ಯಾರೇ ಸ್ಪರ್ಧೆ ಮಾಡಿದರೂ ಸಪೋರ್ಟ್ ಮಾಡಬೇಕು. ಅದರೆ ಪ್ರಬಲ ಅಭ್ಯರ್ಥಿ ಹಾಕುವ ಅನಿವಾರ್ಯತೆ ಇದೆ. ನಾವು ಸೋಲು ಒಪ್ಪಿಕೊಳ್ಳಬಾರದು. ನನ್ನ ರಾಜಕೀಯ ಜೀವನದ ಗ್ರಾಫ್ ಯಾವತ್ತೂ ಕಡಿಮೆ ಆಗಿಲ್ಲ. ಪ್ರತಿ ಚುನಾವಣೆಯಲ್ಲೂ ಐದು ಸಾವಿರ ಮತಗಳು ಹೆಚ್ಚಾಗ್ತಿವೆ. ಜೊತೆಗೆ ಈಗ ನಾವು ಡಬಲ್ ಬ್ಯಾರೆಲ್ ಗನ್. ನಮ್ಮ ಗುರಿ ಫೇಲ್ ಆಗಲ್ಲʼ ಎಂದರು.

ಕಳೆದ ವಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮೂರು ದಿನ ಜನಸ್ಪಂದನಾ ಕಾರ್ಯಕ್ರಮ ಮಾಡಿದ್ದಾರೆ.‌ ಇದು ಉಪಚುನಾವಣೆ ದೃಷ್ಠಿಯಲ್ಲಿ ಮಾಡಿರೋ ಸರ್ಕಾರಿ ಸಂತೆ. ಯಾವುದೇ ಗುರಿ ಇಲ್ಲದೇ, ಯೋಜನೆ ಇಲ್ಲದೇ ಮಾಡಿರೋ ಕಾರ್ಯಕ್ರಮ. ಅಧಿಕಾರಿಗಳನ್ನು ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ. ಕಳೆದ ಒಂದು ಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ, ಬಂದಿದ್ದೇನೆ ಅಂತ ಸುಳ್ಳು ಹೇಳ್ತಿದ್ದಾರೆ. ಜನರಿಗೆ ಮನೆ ಕೊಡ್ತೀನಿ, ಸೈಟ್ ಕೊಡ್ತೀನಿ ಅಂತ ಸುಳ್ಳು ಆಸ್ವಾಸನೆ ಕೊಡ್ತಿದ್ದಾರೆ ಎಂದರು ಯೋಗೇಶ್ವರ್.‌

ಟೌನ್ ವ್ಯಾಪ್ತಿ ಬಿಟ್ಟರೆ ಬಹುತೇಕ ತಾಲೂಕಿನ ಜನತೆಗೆ ಮನೆ ಸಮಸ್ಯೆ ಇಲ್ಲ. ಚುನಾವಣೆ ಸಮಯದಲ್ಲಿ ಮನೆ ಕೊಡುತ್ತೇವೆ ಅನ್ನೋದು ಸುಳ್ಳು. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಒನ್ ಮ್ಯಾನ್ ಶೋ ಮಾಡಿದ್ದಾರೆ. ಎಂಪಿಗೆ ಆಹ್ವಾನ ನೀಡಿಲ್ಲ, ನನಗೆ ಆಹ್ವಾನ ನೀಡಿಲ್ಲ. ಸರ್ಕಾರದ ಪ್ರೋಟೋಕಾಲ್ ಸರಿಯಾಗಿ ಫಾಲೋ ಮಾಡದೇ ಕಾರ್ಯಕ್ರಮ ಮಾಡಿದ್ದಾರೆ. ಕೇವಲ ಚುನಾವಣಾ ತಂತ್ರಕ್ಕೆ ಜನ ಸೇರಿಸಿ ಜಾತ್ರೆ ಮಾಡಿದ್ದಾರೆ ಎಂದರು ಅವರು.

ಕ್ಷೇತ್ರದಲ್ಲಿ ಡಿಕೆಶಿ ಅವರ ಕೊಡುಗೆ ಏನೂ ಇಲ್ಲ. ಚನ್ನಪಟ್ಟಣದಿಂದಲೇ ರಾಜಕೀಯ ಜೀವನ ಆರಂಭಿಸಿದ್ರೂ ಅವರ 40 ವರ್ಷದ ಅವಧಿಯಲ್ಲಿ ಅವರ ಕೊಡುಗೆ ಶೂನ್ಯ. ಕೇವಲ ಚುನಾವಣೆ ಸಂದರ್ಭದಲ್ಲಿ ಬಂದು ಜಾತ್ರೆ ಮಾಡ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ಮುಂದುವರೆದ್ರೆ ಆ ಕಾರ್ಯಕ್ರಮಕ್ಕೆ ಹೋಗಿ ಖಂಡಿಸುತ್ತೇವೆ. ಪ್ರೋಟೋಕಾಲ್ ಫಾಲೋ ಮಾಡದಿದ್ದರೆ ಮೈತ್ರಿ ಪಕ್ಷದ ನಾಯಕರು ತಡೆ ಮಾಡುತ್ತೇವೆ. ಮುಂದಿನ ಕಾರ್ಯಕ್ರಮಗಳಿಗೆ ಪ್ರತಿಭಟನೆ ಮಾಡ್ತೇವೆ ಎಂದರು.

ಅವರ ಸರ್ಕಾರ ಕುಸಿಯುವ ಹಂತ ತಲುಪಿದೆ. ಅವರಲ್ಲೇ ಸಾಕಷ್ಟು ಗೊಂದಲ ಇದೆ. ನೂರೆಂಟು ಹಗರಣಗಳು ಬೆಳಕಿಗೆ ಬರ್ತಿದೆ. ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ನೋಡಿದ್ದೇವೆ. ಉಪಚುನಾವಣೆ ಹೊತ್ತಿಗೆ ಅವರ ಸರ್ಕಾರ ಇರುತ್ತೋ, ಇರಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಸಿ.ಪಿ.ಯೋಗೇಶ್ವರ್ ಟಾಂಗ್ ನೀಡಿದರು.

ಸರ್ಕಾರದ ಹಣದಲ್ಲಿ ಉಪಚುನಾವಣೆ ಮಾಡ್ತಿದ್ದಾರೆ. ಡಿಕೆಶಿ ಕನಕಪುರದಿಂದ ಗೆದ್ದು ರಾಮನಗರ ಉಸ್ತುವಾರಿ ತೆಗೆದುಕೊಂಡಿಲ್ಲ. ಹೋಗಿ ಬೆಂಗಳೂರು ಉಸ್ತುವಾರಿ ತೆಗೆದುಕೊಂಡಿರೋದು ಯಾಕೆ? ಈಗ ಚುನಾವಣೆ ಸಮಯದಲ್ಲಿ ಮಾತ್ರ ಚನ್ನಪಟ್ಟಣ ನೆನಪಾಗಿರೋದಾ? ಚನ್ನಪಟ್ಟಣ ಜನ ಬುದ್ಧಿವಂತರಿದ್ದಾರೆ. ಇಂತಹ ನಾಟಕಗಳಿಗೆ ನಮ್ಮ ಜನ ಉತ್ತರ ಕೊಡ್ತಾರೆ ಎಂದು ಹೇಳಿದರು.

ಇದನ್ನೂ ಓದಿ: HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

Continue Reading

ಮಳೆ

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Karnataka Rain : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯು (Rain Effect) ಅವಾಂತವರವೇ ಸೃಷ್ಟಿಸಿದೆ. ಕಾರವಾರ ಸಮೀಪ ಮಳೆಗೆ ಮನೆಗಳಿಗೆ ಹಾವುಗಳು (snake) ನುಗ್ಗುತ್ತಿವೆ. ಮತ್ತೊಂದು ಕಡೆ ಹೊನ್ನಾವಾರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಮುಂದುವರಿದಿದೆ.

VISTARANEWS.COM


on

By

karnataka rain
Koo

ಕಾರವಾರ/ಉಡುಪಿ: ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡ ಎಂಬಾಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಸುಮಾರು 12 ಅಡಿ ಉದ್ದದ ಹೆಬ್ಬಾವು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದರು.

ಅರಣ್ಯ ಪ್ರದೇಶದ ಸಮೀಪದಲ್ಲಿ ಇದ್ದು, ಮಳೆ ನೀರಿನಲ್ಲಿ ಹರಿದು ಬಂದು ಮನೆಯ ಮೇಲೆ ಹೆಬ್ಬಾವು ಸೇರಿಕೊಂಡಿದೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಗೋಪಾಲ್ ಸುಮಾರು ಒಂದು ಗಂಟೆ ಕಾಲ‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ರಕ್ಷಣೆ ಮಾಡಿದ್ದಾರೆ.

ಭಾರಿ ಮಳೆ-ಗಾಳಿಗೆ ಕುಸಿದು ಬಿದ್ದ ಮನೆ

ಇತ್ತ ಭಾರೀ ಗಾಳಿ ಮಳೆಗೆ ಮನೆಯೊಂದು ಭಾಗಶಃ ಕುಸಿದು ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೊಡ್ನಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಶಿರಸಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ. ಸಂತೋಷ ಜೋಗಿ ಎಂಬುವವರ ಮನೆಯ ಮಣ್ಣಿನ ಗೋಡೆ ನೆನೆದು ಭಾಗಶಃ ಕುಸಿದು ಬಿದ್ದಿದೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಅಂಗಲಾಚಿದ್ದಾರೆ. ಸ್ಥಳಕ್ಕೆ ಪಿಡಿಓ ಪ್ರೀತಿ ಶೆಟ್ಟಿ, ಶಾನುಭೋಗ ಸುಕನ್ಯಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ತಾಲೂಕುಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಾದರೆ ಕಾರವಾರದ ಕದ್ರಾ ಜಲಾಶಯದಿಂದ ನೀರು ಹೊರ ಬರಲಿದೆ. ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯದಲ್ಲಿ ಸುರಕ್ಷಿತ ಮಟ್ಟ ಕಾಯ್ದುಕೊಳ್ಳಲು ಒಳಹರಿವು ಆಧರಿಸಿ ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರದಿಂದಾಗಿ ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ ಬಂದಿದೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳದಿಂದಾಗಿ ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭತ ಸೃಷ್ಟಿಯಾಗಿದೆ. ಭಾರತದ ನಯಾಗಾರ ಫಾಲ್ಸ್ ಎಂದೇ‌ ಖ್ಯಾತವಾಗಿರುವ ಗೋಕಾಕ್ ಜಲಪಾತ, 180 ಅಡಿ ಮೇಲಿಂದ ಧುಮ್ಮಿಕ್ಕುವ ನೀರು, ಜಲಪಾತದ ರಮಣೀಯ ದೃಶ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಇನ್ನೂ ಸೆಲ್ಫಿ, ಜಲಪಾತದ ಫೋಟೊ ತೆಗೆಯಲು ಜಲಪಾತದ ತುದಿಗೆ ಹೋಗಿ ಪ್ರವಾಸಿಗರು ಹುಚ್ಚಾಟದ ಕಾರಣಕ್ಕೆ ನಿಗಾ ಇಡಲು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ‌ನಿಯೋಜನೆ ಮಾಡಲಾಗಿದೆ.

ತುಂಬಿ ಹರಿದ ವಾರಾಹಿ ಮತ್ತು ಕುಬ್ಬಾ ನದಿ

ಪಶ್ಚಿಮಘಟ್ಟದ ತಪ್ಪಲಲ್ಲಿ ಸುರಿದ ಭಾರೀ ಮಳೆ ಎಫೆಕ್ಟ್‌ನಿಂದಾಗಿ ಉಡುಪಿಯ ವಾರಾಹಿ ಮತ್ತು ಕುಬ್ಬಾ ನದಿ ತುಂಬಿ ಹರಿದಿದೆ. ನದಿ ತಟ ಕಂಡ್ಲೂರಿನಲ್ಲಿ ಲಂಗರು ಹಾಕಿದ್ದ ಆರು ನಾಡದೋಣಿಗಳು ನೀರುಪಾಲಾಗಿವೆ. ಹೊಳೆಯ ರಭಸಕ್ಕೆ ಎಲ್ಲಾ ನಾಡದೋಣಿಗಳು ಕೊಚ್ಚಿ ಹೋಗಿವೆ. ಮೀನುಗಾರರು ಕಳೆದ ಎರಡು ದಿನಗಳಿಂದ ಹುಡುಕಾಡುತ್ತಿದ್ದಾರೆ.

ಉಡುಪಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲಿ ಮೂರನೇ ದಿನಕ್ಕೆ ಮುಂದುವರಿದ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳ ಶಾಲಾ- ಕಾಲೇಜು ರಜೆ ನೀಡಲಾಗಿದೆ. ಬೈಂದೂರು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ಶಾಲಾ-ಕಾಲೇಜು ಶುಕ್ರವಾರ ರಜೆ ನೀಡಲಾಗಿತ್ತು.

ಬೈಂದೂರು ತಾಲೂಕು, ಮರವಂತೆ ಬೀಚಿನಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಹೀಗಾಗಿ ಮಳೆಗಾಲ ಮುಗಿಯುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಬೀಚ್ ಬಂದ್ ಮಾಡಲಾಗಿದೆ. ಸೌಪರ್ಣಿಕ ನದಿ ಅರಬ್ಬಿ ಸಮುದ್ರ ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು ಒಂದುವರೆ ಕಿಲೋಮೀಟರ್ ಉದ್ದವಿದ್ದು, ಯಾವುದೇ ತಡೆ ಬೇಲಿ ಇಲ್ಲ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ತೆರಳುವ ಬಹುತೇಕರು ಕಡಲಿಗೆ ಇಳಿಯುವ ಸಾಧ್ಯತೆ ಇದೆ. ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಡಳಿತ ಬೀಚ್ ಕಾವಲು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

ಇಳಿಮುಖವಾದ ನೆರೆ

ಉಡುಪಿಯ ಬೈಂದೂರು ತಾಲೂಕು ನಾವುಂದದಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿತ್ತು. ಇದರಿಂದಾಗಿ 150 ಎಕರೆ ಮುಳುಗಡೆಯಾಗಿ ಕೃಷಿ ಭೂಮಿಯಲ್ಲಿ ಬೆಳೆದ ಭತ್ತ ನಾಶವಾಗಿತ್ತು. ಸದ್ಯ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ಒಮ್ಮೆ ಭತ್ತದ ನಾಟಿ ಮುಗಿಸಿದ್ದ ರೈತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಳೆ ನಿಂತಿರುವುದರಿಂದ ಬಡಾಕೆರೆ ಕೃಷಿಕರು ಮತ್ತೆ ಬತ್ತದ ನಾಟಿ ಮಾಡುತ್ತಿದ್ದಾರೆ.

ಗುಡ್ಡ ಕುಸಿತ; ಮಣ್ಣು ತೆರವು ಕಾರ್ಯಾಚರಣೆ ಆರಂಭ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ಹೊನ್ನಾವರದ ವರ್ನಕೇರಿ ಬಳಿ ನಿನ್ನೆ ಗುರುವಾರ ಮರ ಸಹಿತ ಗುಡ್ಡ ಕುಸಿದಿತ್ತು. ಇದರಿಂದಾಗಿ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ, ಬೆಂಗಳೂರು ಮಾರ್ಗದ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಏಕಮುಖ ಸಂಚಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.

ಇಂದು ಶುಕ್ರವಾರ ಕಲ್ಲುಬಂಡೆ ಸಹಿತ ಕುಸಿತ ಗುಡ್ಡ ರಸ್ತೆಗೆ ಬಿದ್ದಿದೆ. ಹೀಗಾಗಿ ಹಿಟಾಚಿ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಮಣ್ಣು ತೆಗೆದರೂ ಮತ್ತೆ ಗುಡ್ಡ ಕುಸಿಯುತ್ತಿದ್ದು, ಹೊನ್ನಾವರ -ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ಮನೆಗಳು ಜಲಾವೃತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಹಲವು ಮನೆಗಳು ಜಲಾವೃತಗೊಂಡಿದೆ. ನೌಕಾನೆಲೆ ಕಾಂಪೌಂಡ್‌, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ನೀರು ಹರಿದುಹೋಗದೇ ಜಲಾವೃತಗೊಂಡಿದೆ. ಸಮುದ್ರಕ್ಕೆ ನೀರು ಸರಾಗವಾಗಿ ಹರಿದುಹೋಗದ ಪರಿಣಾಮ ಅರಗಾ ಗ್ರಾಮದ ನಿವಾಸಿಗಳು ಆತಂಕಗೊಂಡಿದ್ದಾರೆ. ಮಹಿಳೆಯರು, ಮಕ್ಕಳನ್ನು ಇಟ್ಟುಕೊಂಡು ಆತಂಕದಲ್ಲೇ ಕಾಲಕಳೆಯುವ ಪರಿಸ್ಥಿತಿ ಎದುರಾಗಿದೆ. ಮಳೆ ಹೆಚ್ಚಾದಲ್ಲಿ ಮನೆಗಳಿಗೆ ನೀರು ನುಗ್ಗುವ ಆತಂಕ ಇದೆ. ಪ್ರತಿವರ್ಷ ಮಳೆಗಾಲದಲ್ಲಿ ನೆರೆ ಪರಿಸ್ಥಿತಿಯನ್ನು ಅರಗಾ ಗ್ರಾಮಸ್ಥರು ಎದುರಿಸುತ್ತಿದ್ದಾರೆ. ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೇ ಅವ್ಯವಸ್ಥೆ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Cheating Case
ಪ್ರಮುಖ ಸುದ್ದಿ3 mins ago

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Snake
ವೈರಲ್ ನ್ಯೂಸ್8 mins ago

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

Mohammed Siraj
ಪ್ರಮುಖ ಸುದ್ದಿ34 mins ago

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Akshata Murty
ವಿದೇಶ40 mins ago

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Hardik Pandya
ಪ್ರಮುಖ ಸುದ್ದಿ59 mins ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ2 hours ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ2 hours ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ2 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ3 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ3 hours ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ6 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ8 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ8 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ10 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ12 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು13 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು13 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ18 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌