Ram Charan: ರಾಮ್‌ ಚರಣ್‌ ಜನುಮ ದಿನ ಇಂದು; ಮೆಗಾ ಪ್ರಿನ್ಸ್ ಅಭಿನಯದ ಸೂಪರ್‌ ಹಿಟ್‌ ಸಿನಿಮಾಗಳಿವು - Vistara News

ಸಿನಿಮಾ

Ram Charan: ರಾಮ್‌ ಚರಣ್‌ ಜನುಮ ದಿನ ಇಂದು; ಮೆಗಾ ಪ್ರಿನ್ಸ್ ಅಭಿನಯದ ಸೂಪರ್‌ ಹಿಟ್‌ ಸಿನಿಮಾಗಳಿವು

Ram Charan: ಟಾಲಿವುಡ್‌ನ ಸೂಪರ್‌ ಸ್ಟಾರ್‌ ಚಿರಂಜೀವಿ ಅವರ ಪುತ್ರ ರಾಮ್‌ ಚರಣ್‌. 1985ರಲ್ಲಿ ಜನಿಸಿದ ರಾಮ್‌ ಚರಣ್‌ ಇಂದು (ಮಾರ್ಚ್‌ 27) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಅಭಿನಯಿಸಿದ ಸೂಪರ್‌ ಹಿಟ್‌ ಚಿತ್ರಗಳ ಪಟ್ಟಿ ಇಲ್ಲಿದೆ.

VISTARANEWS.COM


on

ram charan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಟಾಲಿವುಡ್‌ನ ಸಿನಿ ಮಾಂತ್ರಿಕ ಎಸ್‌.ಎಸ್‌.ರಾಜಮೌಳಿ (S.S. Rajamouli) ನಿರ್ದೇಶನದ, 2022ರಲ್ಲಿ ತೆರೆಕಂಡ ಆರ್‌.ಆರ್‌.ಆರ್‌. (RRR) ಚಿತ್ರ ಭಾರತೀಯ ಚಲನಚಿತ್ರೋದ್ಯಮದಲ್ಲಿ ದಾಖಲೆ ಬರೆದಿತ್ತು. ಜತೆಗೆ ಆಸ್ಕರ್‌ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡು ಗಮನ ಸೆಳೆದಿತ್ತು. 1,387 ಕೋಟಿ ರೂ.ಗಿಂತ ಅಧಿಕ ಕಲೆಕ್ಷನ್‌ ಮಾಡಿ ಬಾಕ್ಸ್‌ ಆಫೀಸ್‌ನಲ್ಲಿ ಅಬ್ಬರಿಸಿತ್ತು. ಇದರಲ್ಲಿ ನಾಯಕರಾಗಿ ಜೂನಿಯರ್‌ ಎನ್‌ಟಿಆರ್‌ (N.T. Rama Rao Jr.) ಮತ್ತು ರಾಮ್‌ ಚರಣ್‌ (Ram Charan) ಮೋಡಿ ಮಾಡಿದ್ದರು. ವಿಶೇಷ ಎಂದರೆ ಚಿತ್ರದಲ್ಲಿ ಈ ಇಬ್ಬರು ನಾಯಕರಿಗೂ ಸಮಾನ ಅವಕಾಶ ಲಭಿಸಿತ್ತು. ಜತೆಗೆ ಇಬ್ಬರೂ ಪ್ರೇಕ್ಷಕರ ಗಮನ ಸೆಳೆದಿದ್ದರು. ಈ ಹಿಂದೆ 2009ರಲ್ಲಿ ತೆರೆಕಂಡ ರಾಜಮೌಳಿ ನಿರ್ದೇಶನದ ಮಗಧೀರ ಸಿನಿಮಾದಲ್ಲಿ ಮೋಡಿ ಮಾಡಿದ್ದ ರಾಮ್‌ ಚರಣ್‌ ಮತ್ತೊಮ್ಮೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ್ದರು. ಸದ್ಯ ಬ್ಯಾಕ್‌ ಟು ಬ್ಯಾಕ್‌ ಸಿನಿಮಾದಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್‌ ಚರಣ್‌ ಅವರಿಗೆ ಇಂದು (ಮಾರ್ಚ್‌ 27) ಹುಟ್ಟುಹಬ್ಬದ ಸಂಭ್ರಮ. ಈ ಈ ಹಿನ್ನೆಲೆಯಲ್ಲಿ ಅವರು ಅಭಿನಯಿಸಿರುವ ಟಾಪ್‌ 5 ಚಿತ್ರಗಳ ಕಿರು ಪರಿಚಯ ಇಲ್ಲಿದೆ.

ಆರ್‌.ಆರ್‌.ಆರ್‌. (RRR)

ರೌದ್ರಮ್‌ ರಣಂ ರುಧಿರಂನ ಸಂಕ್ಷಿಪ್ತ ರೂಪವೇ ʼಆರ್‌.ಆರ್‌.ಆರ್‌.ʼ ರಾಜಮೌಳಿ ನಿರ್ದೇಸನದ ಈ ಚಿತ್ರ ಬರೋಬ್ಬರಿ 550 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಡಿ.ವಿ.ವಿ.ದಾನಯ್ಯ ನಿರ್ಮಾಣದ ಈ ಚಿತ್ರ ಅದುವರೆಗಿನ ಅತಿ ಹೆಚ್ಚು ಬಜೆಟ್‌ನ ಭಾರತೀಯ ಚಿತ್ರ ಎನಿಸಿಕೊಂಡಿತ್ತು. ಸ್ವಾತಂತ್ರ್ಯ ಪೂರ್ವ ಕಾಲಘಟ್ಟದ ಕಥೆ ಹೇಳಿದ್ದ ಈ ಚಿತ್ರದಲ್ಲಿ ಸ್ನೇಹಿತರ ಪಾತ್ರದಲ್ಲಿ ಜೂ.ಎನ್‌ಟಿಆರ್‌ ಮತ್ತು ರಾಮ್‌ ಚರಣ್‌ ಕಾಣಿಸಿಕೊಂಡಿದ್ದರು. ಅಲ್ಲುರಿ ಸೀತಾರಾಮ ರಾಜುವಾಗಿ ರಾಮ್‌ ಚರಣ್‌ ಪ್ರೇಕ್ಷಕರ ಗಮನ ಸೆಳೆದಿದ್ದರು. ಅದರಲ್ಲೂ ʼನಾಟು ನಾಟುʼ ಹಾಡಿಗೆ ಭರ್ಜರಿಯಾಗಿ ಸ್ಟೆಪ್‌ ಹಾಕಿದ್ದರು. ಮುಂದೆ ಈ ಹಾಡಿಗೆ ಮಹೋನ್ನತ ಆಸ್ಕರ್‌ ಪ್ರಶಸ್ತಿಯೂ ಲಭಿಸಿತು. ಎಂ.ಎಂ.ಕೀರವಾಣಿ ಸಂಗೀತ ನಿರ್ದೇಶನದ ಈ ಸಿನಿಮಾದಲ್ಲಿ ಅಜಯ್‌ ದೇವಗನ್‌, ಆಲಿಯಾ ಭಟ್‌, ಶ್ರೀಯಾ ಸರಣ್‌, ಸಮುದ್ರ ಖನಿ, ಅಲಿಸನ್ ಡೂಡಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು.

ಮಗಧೀರ (Magadheera)

ರಾಮ್‌ ಚರಣ್‌-ರಾಜಮೌಳಿ ಕಾಂಬಿನೇಷನ್‌ನ ಮತ್ತೊಂದು ಸೂಪರ್‌ ಹಿಟ್‌ ಚಿತ್ರ ʼಮಗಧೀರʼ 2009ರಲ್ಲಿ ತೆರೆ ಕಂಡಿತ್ತು. 40 ಕೋಟಿ ರೂ. ಬಜೆಟ್‌ನ ಈ ಚಿತ್ರ ಆ ಕಾಲದಲ್ಲಿಯೇ 100 ಕೋಟಿ ರೂ. ಗಳಿಸಿತ್ತು. ಪುನರ್ಜನ್ಮದ ಕಥೆ ಹೇಳುವ ಈ ಚಿತ್ರದಲ್ಲಿ ರಾಮ್‌ ಚರಣ್‌ ಅವರು ಹರ್ಷ ಮತ್ತು ಕಾಲ ಭೈರವನಾಗಿ ಮಿಂಚಿದ್ದರು. ನಾಯಕಿಯಾಗಿ ಕಾಜಲ್‌ ಅಗರ್ವಾಲ್‌ ಕೂಡ ಗಮನ ಸೆಳೆದಿದ್ದರು. ದೇವ್‌ ಗಿಲ್‌, ಶ್ರೀಹರಿ, ಸುನಿಲ್‌, ಸೂರ್ಯ, ರಾವ್‌ ರಮೇಶ್‌ ಮತ್ತಿತರರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು.

ರಂಗಸ್ಥಳಂ (Rangasthalam)

ಟಾಲಿವುಡ್‌ ಖ್ಯಾತ ನಿರ್ದೇಶಕ ಸುಕುಮಾರ್‌ ಆ್ಯಕ್ಷನ್‌ ಕಟ್‌ ಹೇಳಿರುವ ಪಕ್ಕಾ ಕಮರ್ಷಿಯಲ್‌ ಚಿತ್ರ ಇದು. 2018ರಲ್ಲಿ ಬಿಡುಗಡೆಯಾದ ಈ ಸಿನಿಮಾ 60 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿ 216 ಕೋಟಿ ರೂ. ಗಳಿಸುವ ಮೂಲಕ ಸೂಪರ್‌ ಹಿಟ್‌ ಎನಿಸಿಕೊಂಡಿತ್ತು. 1980ರ ದಶಕದಲ್ಲಿ ರಂಗಸ್ಥಳಂ ಎನ್ನುವ ಹಳ್ಳಿಯೊಂದರಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೇಳಿತ್ತು. ಪಕ್ಕಾ ಹಳ್ಳಿ ಯುವಕನ ಅವತಾರದಲ್ಲಿ ರಾಮ್‌ ಚರಣ್‌ ಗಮನ ಸೆಳೆದಿದ್ದರು. ನಾಯಕಿಯಾಗಿ ಸಮಂತಾ ನಟಿಸಿದ್ದರು.

ಯೆವಡು (Yevadu)

2014ರಲ್ಲಿ ಬಿಡುಗಡೆಯಾದ ಆ್ಯಕ್ಷನ್‌ ಥ್ರಿಲ್ಲರ್‌ ʼಯೆವಡುʼ ಆ ವರ್ಷದ ಅತೀ ಹೆಚ್ಚು ಗಳಿಕೆ ಕಂಡ ಚಿತ್ರಗಳ ಪೈಕಿ ಒಂದು ಎನಿಸಿಕೊಂಡಿತ್ತು. ವಂಶಿ ಪೈಡಿಪಳ್ಳಿ ನಿರ್ದೇಶನದ ಈ ಚಿತ್ರದಲ್ಲಿ ರಾಮ್‌ ಚರಣ್‌ ಜತೆಗೆ ಅಲ್ಲು ಅರ್ಜುನ್‌, ಶ್ರುತಿ ಹಾಸನ್‌, ಆ್ಯಮಿ ಜಾಕ್ಸನ್‌, ಕಾಜಲ್‌ ಅಗರ್ವಾಲ್‌ ಮತ್ತಿತರರು ನಟಿಸಿದ್ದರು. ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ತಯಾರಾದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ 60 ಕೋಟಿ ರೂ.ಗಿಂತ ಅಧಿಕ ಬಾಚಿಕೊಂಡಿತ್ತು.

ಧ್ರುವ (Dhruva)

2016ರಲ್ಲಿ ರಿಲೀಸ್‌ ಆದ ʼಧ್ರುವʼ ಚಿತ್ರ ಕೂಟ ರಾಮ್‌ ಚರಣ್‌ ಅವರ ಅತ್ಯುತ್ತಮ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿದೆ. ಸುರೇಂದ್ರ ರೆಡ್ಡಿ ನಿರ್ದೇಶನದ ಈ ಸಿನಿಮಾ ತಮಿಳಿನ ಸೂಪರ್‌ ಹಿಟ್‌ ಚಿತ್ರ ʼತನಿ ಒರುವನ್‌ʼನ ರಿಮೇಕ್‌. ಮೂಲ ಚಿತ್ರದಲ್ಲಿ ಜಯಂ ರವಿ, ನಯನತಾರಾ, ಅರವಿಂದ ಸ್ವಾಮಿ ನಟಿಸಿದ್ದರು. ಇಲ್ಲೂ ವಿಲನ್‌ ಪಾತ್ರದಲ್ಲಿ ಅರವಿಂದ ಸ್ವಾಮಿ ಕಾಣಿಸಿಕೊಂಡಿದ್ದರು. ರಾಮ್‌ ಚರಣ್‌ಗೆ ನಾಯಕಿಯಾಗಿ ರಾಕುಲ್‌ ಪ್ರೀತ್‌ ಸಿಂಗ್‌ ಅಭಿನಯಿಸಿದ್ದರು. 50 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ʼಧ್ರುವʼ ಗಳಿಸಿದ್ದು ಬರೋಬ್ಬರಿ 132 ಕೋಟಿ ರೂ. ರಾಮ್‌ ಚರಣ್‌ ಅವರ ಎಎಸ್‌ಪಿ ಕೆ.ಧ್ರುವ ಪಾತ್ರಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗಿತ್ತು.

ಇದನ್ನೂ ಓದಿ: Ram Charan: ‘ಗೇಮ್ ಚೇಂಜರ್’ ರಾಮ್ ಚರಣ್ ಲುಕ್‌ ಲೀಕ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದು ಬಿಳಿ ಬಣ್ಣದ ಧಿರಿಸಿಗೆ ಮ್ಯಾಚಿಂಗ್ ಆಗಿ ಹೈ ಹೀಲ್ಸ್ ಧರಿಸಿದ್ದರು. ಜೊತೆಗೆ ಅವರು ಹಾಕಿದ್ದ ದಪ್ಪನಾದ ವಜ್ರದ ನೆಕ್ಲೇಸ್ ಎಲ್ಲರ ಗಮನ ಅವರತ್ತ ಸೆಳೆಯುವಂತೆ ಮಾಡಿತ್ತು.

VISTARANEWS.COM


on

By

Ranveer Singh
Koo

ಬಹು ದಿನಗಳ ಬಳಿಕ ಮುಂಬಯಿಯ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ದುಬಾರಿ ಮೌಲ್ಯದ ವಜ್ರದ ನೆಕ್ಲೆಸ್ (diamond necklace), ಹೈ ಹೀಲ್ಸ್ ನೊಂದಿಗೆ (high heels) ಬಿಳಿ ಬಣ್ಣದ ದಿರಸಿನಲ್ಲಿ ಜನಮನ ಸೆಳೆದರು. ಬಿಳಿ ಸ್ಯಾಟಿನ್ ಶರ್ಟ್ (white satin shirt) ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ (matching trousers) ರಣವೀರ್ ಸ್ಟೈಲಿಶ್ ಆಗಿ ಕಾಣುತ್ತಿದ್ದರು.

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದರು. ಕೆಲವು ದಿನಗಳ ಬಳಿಕ ನಗರದಲ್ಲಿ ಕಾಣಿಸಿಕೊಂಡ ಅವರು, ಬಿಳಿ ಬಣ್ಣದ ಹೈ ಹೀಲ್ಸ್ ಧರಿಸಿದ್ದು, ಅವರ ದಿರಸಿಗೆ ಮ್ಯಾಚಿಂಗ್ ಆಗಿ ಹೊಳೆಯುತ್ತಿತ್ತು. ದಪ್ಪನಾದ ವಜ್ರದ ನೆಕ್ಲೇಸ್ ಅನ್ನು ಧರಿಸಿದ್ಧ ಅವರು ನಡೆಯುತ್ತಿದ್ದಾಗ ಎಲ್ಲರ ದೃಷ್ಟಿ ಅವರತ್ತ ನೆಟ್ಟಿತ್ತು.

ರಣವೀರ್ ಬಿಳಿ ಸ್ಯಾಟಿನ್ ಶರ್ಟ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕೊಂಚ ಕಪ್ಪಾಗಿ ಕಾಣುತ್ತಿದ್ದರು. ಆದರೆ ಉಬರ್-ಸ್ಟೈಲಿಶ್ ವೈಟ್ ಬೆಲ್ಟ್‌ನೊಂದಿಗೆ ತಮ್ಮ ಧಿರಿಸನ್ನು ಪೂರ್ಣಗೊಳಿಸಿದ ಅವರು ನೀಲಿ ಬಣ್ಣದ ಸನ್ ಗ್ಲಾಸ್ ಧರಿಸಿದ್ದರು. ಆದರೆ ಈ ಸಂದರ್ಭದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು ಅವರು ಧರಿಸಿದ್ದ ಡೈಮಂಡ್ ನೆಕ್ಲೇಸ್.

ಎಷ್ಟು ಮೌಲ್ಯ?

ರಣವೀರ್ ಅವರು ಆಭರಣ ಸಂಗ್ರಹವನ್ನು ಇಷ್ಟಪಡುತ್ತಾರೆ. ಅವರಲ್ಲಿ ಸಾಕಷ್ಟು ಸಂಗ್ರಹವೂ ಇದೆ. ಬಿಳಿ ಬಣ್ಣದ ಸೂಟ್ ನೊಂದಿಗೆ ಅವರು 2 ಕೋಟಿ ರೂಪಾಯಿ ಮೌಲ್ಯದ ಬೆಸ್ಪೋಕ್ ಟಿಫಾನಿ ನೆಕ್ಲೇಸ್ ಅನ್ನು ಧರಿಸಿರುವುದು ಅವರ ಲುಕ್ ಗೆ ಹೆಚ್ಚಿನ ಮೆರುಗು ನೀಡಿತ್ತು. ದಪ್ಪನಾದ ಹೀಲ್ಸ್‌ಗಳನ್ನು ಧರಿಸಿ ಫೋಟೋಗಳಿಗೆ ಪೋಸ್ ನೀಡಿದ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ತಮ್ಮ ಆಭರಣ ಪ್ರೀತಿಯ ಬಗ್ಗೆ ಮಾತನಾಡಿದ ರಣವೀರ್ ಸಿಂಗ್, ವೈಯಕ್ತಿಕ, ಭಾವನಾತ್ಮಕ ಮೌಲ್ಯವನ್ನು ಹೊಂದಿರುವ ಆಭರಣಗಳು ನನ್ನ ನೆಚ್ಚಿನ, ಅತ್ಯಂತ ಪ್ರಿಯವಾದ ತುಣುಕುಗಳಾಗಿವೆ. ಇದರಲ್ಲಿ ಮದುವೆಯ ಉಂಗುರವೂ ಒಂದು. ಇದು ನನ್ನ ಹೆಂಡತಿ ದೀಪಿಕಾ ಪಡುಕೋಣೆ ನನಗೆ ಉಡುಗೊರೆಯಾಗಿ ನೀಡಿರುವುದು. ಇನ್ನೊಂದು ಪ್ಲಾಟಿನಂ ಎಂಗೇಜ್‌ಮೆಂಟ್ ರಿಂಗ್ ಆಗಿದೆ. ತದನಂತರ ಸಹಜವಾಗಿ ನನ್ನ ತಾಯಿಯ ವಜ್ರದ ಕಿವಿಯೋಲೆಗಳು ಮತ್ತು ನನ್ನ ಅಜ್ಜಿಯ ಮುತ್ತುಗಳು ಎಂದು ತಿಳಿಸಿದರು.


ಮೊದಲ ಮಗುವಿನ ನಿರೀಕ್ಷೆ

ಪತ್ನಿ ದೀಪಿಕಾ ಪಡುಕೋಣೆ ಅವರೊಂದಿಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ರಣವೀರ್ ದೀರ್ಘ ಸಮಯದ ಬಳಿಕ ಬುಧವಾರ ಮುಂಬಯಿಗೆ ಮರಳಿದ್ದಾರೆ. ಗರ್ಭಧಾರಣೆಯ ಘೋಷಣೆಯ ಅನಂತರ ದಂಪತಿ ತಮ್ಮ ಸಂಪೂರ್ಣ ಗಮನವನ್ನು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಕೇಂದ್ರೀಕರಿಸಿದ್ದಾರೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ.

ಇದನ್ನೂ ಓದಿ: Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

ಚಿತ್ರೀಕರಣದಲ್ಲೂ ಬ್ಯುಸಿ

ಸದ್ಯ ರಣವೀರ್ ಫರ್ಹಾನ್ ಅಖ್ತರ್ ಅವರ ಡಾನ್ ಫ್ರ್ಯಾಂಚೈಸ್‌ನಲ್ಲಿ ಹೊಸ ಡಾನ್ ಆಗಲು ಸಿದ್ಧರಾಗಿದ್ದಾರೆ. ಇದನ್ನು ಮೊದಲು ಶಾರುಖ್ ಖಾನ್ ಗಾಗಿ ನಿರ್ಮಿಸಲಾಗಿತ್ತು. ಇದಲ್ಲದೇ ರಣವೀರ್ ಹನುಮಾನ್ ನಿರ್ದೇಶಕ ಪ್ರಶಾಂತ್ ವರ್ಮಾ ಅವರ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

Continue Reading

ಬಾಲಿವುಡ್

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Janhvi Kapoor ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ.

VISTARANEWS.COM


on

Janhvi Kapoor Wears Cricket-Themed Dress
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಜಾನ್ವಿ ಕಪೂರ್ ತನ್ನ ಇತ್ತೀಚಿನ ಫ್ಯಾಶನ್ ಸ್ಟೇಟ್‌ಮೆಂಟ್ ಮೂಲಕ ಗಮನ ಸೆಳೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಕ್ರಿಕೆಟ್ ಬಾಲ್‌ನಂತೆ ಕಾಣುವ ಉಡುಪನ್ನು ಧರಿಸಿದ್ದರು. ಇದೀಗ ಈ ಫೋಟೊ, ವಿಡಿಯೊಗಳು ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೊದಲ್ಲಿ, ಜಾಹ್ನವಿ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಒಟ್ಟಾಗಿ ಇರುವುದು ಕಾಣಬಹುದು. ಇದ್ದಕ್ಕಿದ್ದಂತೆ ರಾಜ್‌ಕುಮಾರ್ ರಾವ್ ಅವರು ನಟಿಯನ್ನು ತಿರುಗಿಸಿ ಅವರ ಉಡುಗೆಗೆ ಜೋಡಿಸಲಾದ ಕೆಂಪು ಬಣ್ಣದ ಕ್ರಿಕೆಟ್ ಬಾಲ್‌ಗಳ ಸಾಲನ್ನು ಕ್ಯಾಮೆರಾಗೆ ತೋರಿಸಿದರು. ಜಾಹ್ನವಿ ಕೂಡ ನಗುತ್ತಿದ್ದರು. ಅನೇಕರು ಜಾನ್ವಿ ಕಪೂರ್ ಹೊಸ ಸ್ಟೈಲ್‌ಗೆ ಹೊಗಳಿದ್ದಾರೆ.

ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ಇದನ್ನೂ ಓದಿ: Janhvi Kapoor: ರಾಧಿಕಾ ಮರ್ಚಂಟ್‌ ʻಬ್ರೈಡಲ್‌ ಶವರ್‌ʼ ಪಾರ್ಟಿಯಲ್ಲಿ ನಟಿ ಜಾನ್ವಿ ಕಪೂರ್!

ʻದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading

ಕಿರುತೆರೆ

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Kannada Serials TRP: ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ.‘ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಲಕ್ಷ್ಮೀ ನಿವಾಸಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

VISTARANEWS.COM


on

Kannada Serials TRP Puttakkana makkalu TOP one
Koo

ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

‘ಲಕ್ಷ್ಮೀ ನಿವಾಸ’ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಐದನೇ ಸ್ಥಾನದಲ್ಲಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

ಅಮೃತಧಾರೆ

ಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ತಮ್ಮ ಜೀವಾ ಈಗಾಗಲೇ ಕೆಲಸ ಕಳೆದುಕೊಂಡಿರುವ ವಿಚಾರ ಗೌತಮ್‌ಗೆ ಗೊತ್ತಾಗಿದೆ. ಫುಡ್‌ ಡೆಲವರಿ ಬಾಯ್‌ ಆಗಿ ಕೆಲಸ ಮಾಡುತ್ತಿರುವ ವಿಚಾರ ಗೊತ್ತಾಗಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಐದನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.ಐದನೇ ಸ್ಥಾನದಲ್ಲಿ ಕಲರ್ಸ್ ಕನ್ನಡ ವಾಹಿನಿಯ ‘ರಾಮಾಚಾರಿ’ ಧಾರಾವಾಹಿ ಇದೆ.

Continue Reading

ಮಾಲಿವುಡ್

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Aavesham Releases On OTT: ಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

VISTARANEWS.COM


on

Aavesham Releases On OTT Fahadh Faasil Hit Malayalam Film
Koo

ಬೆಂಗಳೂರು: ಫಹಾದ್ ಫಾಸಿಲ್ (Fahadh Faasil) ಅಭಿನಯದ ಬ್ಲಾಕ್‌ಬಸ್ಟರ್‌ ಮಲಯಾಳಂ ಸಿನಿಮಾ ʻಆವೇಶಂʼ ಒಟಿಟಿಗೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದೆ. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

ʻಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಇದೀಗ ಅಮೆಜಾನ್‌ ಪ್ರೈಂನಲ್ಲಿ ಸಿನಿಮಾ ಸ್ಟ್ರೀಮಿಂಗ್‌ ಆಗುತ್ತಿದೆ. ಡಬ್ಬಿಂಗ್ ಆವೃತ್ತಿಗಳ ಕುರಿತು ಇನ್ನೂ ಯಾವುದೇ ಅಪಡೇಟ್‌ ಬಂದಿಲ್ಲ. ಫ್ರಂಟ್ ರೋ ಅವರ ಟ್ವೀಟ್ ಪ್ರಕಾರ, ಆವೇಶಂನ ಡಿಜಿಟಲ್ ಹಕ್ಕುಗಳು 35 ಕೋಟಿ ರೂಪಾಯಿಗಳಿಗೆ ಮಾರಾಟವಾಗಿವೆ. ಈ ಮೂಲಕ ದುಲ್ಕರ್ ಸಲ್ಮಾನ್ ಅವರ ʻಕಿಂಗ್ ಆಫ್ ಕೋಥಾʼದ ದಾಖಲೆಯನ್ನು ಮುರಿದಿದೆ ಎಂದು ವರದಿಯಾಗಿದೆ. ʻಕಿಂಗ್ ಆಫ್ ಕೋಥಾʼ 32 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು.

ಜಿತು ಮಾಧವನ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಶ್ ವಿದ್ಯಾರ್ಥಿ, ಮನ್ಸೂರ್ ಅಲಿ ಖಾನ್ ಮತ್ತು ಸಜಿನ್ ಗೋಪು ಕೂಡ ನಟಿಸಿದ್ದಾರೆ. ಮಲಯಾಳಂ ಸಿನಿಮಾದ ಪ್ರಮುಖ ಕಥೆ ಬೆಂಗಳೂರಿನಲ್ಲಿ ನಡೆಯುತ್ತದೆ. ಓದಲೆಂದು ಬೆಂಗಳೂರಿಗೆ ಬರುವ ಮೂವರು ಹುಡುಗರು ಅಲ್ಲಿ ಜಗಳದಲ್ಲಿ ಸಿಕ್ಕಿ ಬಿದ್ದು ಸ್ಥಳೀಯ ದರೋಡೆಕೋರನ ನೆರವಿನಿಂದ ಗೆಲುವು ಪಡೆಯಲು ಪ್ರಯತ್ನಿಸುವಂತಹ ಕಥೆ ಹೊಂದಿದೆ. ಆ ಸ್ಥಳೀಯ ದರೋಡೆಕೋರ ಬೇರಾರು ಅಲ್ಲ, ಫಹಾದ್‌ ಫಾಸಿಲ್‌.

ಸಂಪೂರ್ಣ ಬಿಳಿ ಉಡುಗೆಯಲ್ಲಿ, ಚಿನ್ನದ ಸರಗಳೊಂದಿಗೆ, ದಪ್ಪ ಮೀಸೆಯನ್ನು ಹೊಂದಿರುವ ಫಹಾದ್‌ ಪಾತ್ರ ಪ್ರೇಕ್ಷಕರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಫಹಾದ್ ಅವರು ರಂಗಾ ಪಾತ್ರವನ್ನು ಏಕೆ ಆಯ್ಕೆ ಮಾಡಿಕೊಂಡೆ ಎಂಬುದರ ಕುರಿತು ಈ ಮುಂಚೆ ಹೇಳಿಕೊಂಡಿದ್ದರು. ʻʻನಾನು ಈ ಮೊದಲು ಅಂತಹ ಪಾತ್ರಗಳನ್ನು ಮಾಡಿಲ್ಲ. ಆದ್ದರಿಂದ ಈ ಕಥೆ ನನ್ನ ಬಳಿಗೆ ಬಂದಾಗ, ನಾನು ಹೌದು ಎಂದು ಹೇಳಿದೆ. ಈ ಹಿಂದೆ ನಾನು ಮಾಡಿದ್ದ ಪಾತ್ರಗಳಿಗಿಂತ ಭಿನ್ನವಾಗಿ ಇತ್ತು. ಅಲ್ಲದೆ, ನಾನು ಕನ್ನಡ ಮತ್ತು ಮಲಯಾಳಂ ಮಿಶ್ರಿತ ಭಾಷೆ ಮಾತನಾಡಬೇಕು ಎಂದು ಮನೋರಮಾ ಹೇಳಿದ್ದರುʼʼ ಎಂದರು. ಇವು 2024ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ನಾಲ್ಕನೇ ಮಲಯಾಳ ಸಿನಿಮಾವೆಂಬ ಖ್ಯಾತಿಗೆ ಪಾತ್ರವಾಗಿತ್ತು.

ಇದನ್ನೂ ಓದಿ: Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

ಇನ್ನು ಫಹಾದ್‌ ಫಾಸಿಲ್‌ ಹಲವು ಬಹು ನಿರೀಕ್ಷಿತ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಪ್ಯಾನ್‌ ಇಂಡಿಯಾ ಚಿತ್ರ ‌ʼಪುಷ್ಪ 2: ದಿ ರೂಲ್‌ʼ ಸಿನಿಮಾದ ಮುಖ್ಯ ಪಾತ್ರದಲ್ಲಿ ಫಹಾದ್‌ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಈ ಚಿತ್ರದ ಮೊದಲ ಭಾಗ ಸೂಪರ್‌ ಹಿಟ್‌ ಆಗಿತ್ತು. ಅಲ್ಲದೆ ಅಲ್ಲು ಅರ್ಜುನ್‌ ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನೂ ತಂಡು ಕೊಟ್ಟಿತ್ತು. ಕಥೆಗೆ ಟ್ವಿಸ್ಟ್‌ ಕೊಡುವ ಪಾತ್ರದಲ್ಲಿ ಫಹಾದ್‌ ನಟಿಸಿದ್ದರು. ಎರಡನೇ ಭಾಗದಲ್ಲಿನ ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿದೆ.

ಇದರ ಜತೆಗೆ ಹಲವು ವರ್ಷಗಳ ಬಳಿಕ ತೆರೆ ಮೇಲೆ ಒಂದಾಗುತ್ತಿರುವ ಸೂಪರ್‌ ಸ್ಟಾರ್‌ಗಳಾದ ರಜನಿಕಾಂತ್‌- ಅಮಿತಾಭ್‌ ಬಚ್ಚನ್‌ ಅವರ ʼವೆಟ್ಟೈಯನ್‌ʼ ಸಿನಿಮಾದಲ್ಲಿ ಫಹಾದ್‌ ಅಭಿನಯಿಸುತ್ತಿದ್ದಾರೆ. ಇದನ್ನು ಟಿ.ಜೆ.ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ರಾಣಾ ದಗ್ಗುಬಾಟಿ, ಮಂಜು ವಾರಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ ಫಾಹದ್‌ ಮಲಯಾಳಂನ ʼಆವೇಶಮ್‌ʼ, ʼಪಾಟ್ಟುʼ, ʼಹನುಮಾನ್‌ ಗೇರ್‌ʼ ಮತ್ತಿತರ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading
Advertisement
Mureder Case
ಪ್ರಮುಖ ಸುದ್ದಿ42 mins ago

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Akshaya Tritiya Bala Rama Silver Idol gift from Sri Sai Gold Palace in bengaluru
ಬೆಂಗಳೂರು2 hours ago

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

IPL 2024
ಪ್ರಮುಖ ಸುದ್ದಿ3 hours ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ4 hours ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ4 hours ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ5 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ5 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ6 hours ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ6 hours ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ5 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ6 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ7 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ14 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ14 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ14 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು14 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ15 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು16 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌