Myna Serial Udaya TV: ಕಿರುತೆರೆಗೆ ಎಂಟ್ರಿ ಕೊಟ್ಟ ಚಿತ್ರತಾರೆ ಭವ್ಯಾ! - Vistara News

ಕಿರುತೆರೆ

Myna Serial Udaya TV: ಕಿರುತೆರೆಗೆ ಎಂಟ್ರಿ ಕೊಟ್ಟ ಚಿತ್ರತಾರೆ ಭವ್ಯಾ!

Myna Serial Udaya Tv: 90ರ ದಶಕದ ಬಹುಬೇಡಿಕೆಯ ನಟಿ ಭವ್ಯಾ ʻಮೈನಾʼ ಧಾರಾವಾಹಿಗೆ ಎಂಟ್ರಿ ಕೊಟ್ಟಿದ್ದಾರೆ. ಭವ್ಯಾ ಅವರದು ʻಮೈನಾʼ ಧಾರಾವಾಹಿಯಲ್ಲಿ ಮಹಿಳಾ ಹಾಸ್ಟೆಲ್‌ ಮುಖ್ಯಸ್ಥೆ ಅರುಂಧತಿಯ ಪಾತ್ರ.

VISTARANEWS.COM


on

Myna Serial Udaya Tv bhavya actress entry
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ (Myna Serial Udaya TV) ಪ್ರಸಾರವಾಗುತ್ತಿರುವ ʻಮೈನಾʼ ಧಾರಾವಾಹಿಯಲ್ಲಿ 90ರ ದಶಕದ ಬಹುಬೇಡಿಕೆಯ ನಾಯಕಿ (bhavya actress), ಚಿತ್ರತಾರೆ ʻಭವ್ಯಾʼ ನಟಿಸುತ್ತಿದ್ದಾರೆ. ʻಪ್ರೇಮ ಪರ್ವʼ, ʻಪ್ರಳಯಾಂತಕʼ, ʻನೀ ಬರೆದ ಕಾದಂಬರಿʼ, ʻಕೃಷ್ಣ ನೀ ಬೇಗನೆ ಬಾರೋʼ, ʻಕರುಣಾಮಯಿʼ, ʻಹೃದಯಗೀತೆʼ, ʻಮತ್ತೆ ಹಾಡಿತು ಕೋಗಿಲೆʼ, ʻಸಾಂಗ್ಲಿಯಾನʼ ಇತ್ಯಾದಿ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ವಿಷ್ಣುವರ್ಧನ್‌, ಶಂಕರನಾಗ್‌, ಅಂಬರೀಶ್‌, ರವಿಚಂದ್ರನ್ ಮತ್ತಿತರ ದಿಗ್ಗಜ ಕಲಾವಿದರ ಜತೆ ನಾಯಕಿಯಾಗಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದ ಭವ್ಯಾ, ಟಿವಿ ಧಾರಾವಾಹಿಯಲ್ಲಿ ನಟಿಸುತ್ತಿರುವುದು ಇದೇ ಮೊದಲು.

ಭವ್ಯಾ ಅವರದು ʻಮೈನಾʼ ಧಾರಾವಾಹಿಯಲ್ಲಿ ಮಹಿಳಾ ಹಾಸ್ಟೆಲ್‌ ಮುಖ್ಯಸ್ಥೆ ಅರುಂಧತಿಯ ಪಾತ್ರ. ಕಟ್ಟುನಿಟ್ಟಾದರೂ ತಾಯಿ ಹೃದಯಿ. ಊರು ಬಿಟ್ಟು ಪರವೂರಿಗೆ ಬಂದಿರುವ ಹೆಣ್ಣುಮಕ್ಕಳೇ ಹೆಚ್ಚಿರುವ ಜಾಗದಲ್ಲಿ ಎಲ್ಲರನ್ನೂ ನಿಯಂತ್ರಿಸುತ್ತ ಎಲ್ಲರ ಸಮಸ್ಯೆಗಳಿಗೂ ಸ್ಪಂದಿಸುತ್ತ ಎಲ್ಲರ ಭಾವನೆಗಳಿಗೂ ಬೆಲೆ ಕೊಡುವ ಅಪರೂಪದ ಪಾತ್ರ.

ಇದನ್ನೂ ಓದಿ: Uday Kiran: ದಿವಂಗತ ನಟ ಉದಯ್ ಕಿರಣ್ ಬ್ಲಾಕ್‌ಬಸ್ಟರ್‌ ಹಿಟ್‌ ಸಿನಿಮಾ ರಿ-ರಿಲೀಸ್‌!

ಮೈನಾ ಜೀವನದಲ್ಲಿ ಹಠಾತ್ತನೆ ಬರುವ ಅನಿರೀಕ್ಷಿತ ತಿರುವು ಕಂಗೆಡಿಸಿದಾಗ ಅವಳಿಗೆ ಆಸರೆಯಾಗಿ ನಿಲ್ಲುತ್ತಾಳೆ ಅರುಂಧತಿ. ಹಾಗೆಯೇ ಇವರ ಮಹಿಳಾ ಹಾಸ್ಟೆಲ್‌ನಲ್ಲಿರುವ ಇತರ ನಾಲ್ಕು ಹೆಣ್ಣುಮಕ್ಕಳೂ ʻಮೈನಾʼ ಧಾರಾವಾಹಿಯ ಮಹತ್ವದ ಪಾತ್ರಗಳಾಗಿ ಬರುತ್ತಾರೆ. ಮಹಿಳಾ ಹಾಸ್ಟೆಲ್‌ ಈ ಧಾರಾವಾಹಿಯಲ್ಲಿ ಒಂದು ಬಹುಮುಖ್ಯ ಅಂಗವೇ ಆಗಿದೆ.
ʻಮೈನಾʼ ಧಾರಾವಾಹಿ ಪ್ರತಿದಿನ (ಸೋಮವಾರದಿಂದ ಭಾನುವಾರ) ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದೆ.

ಉದಯ ಟಿವಿಯಲ್ಲಿ ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ‘ಕನ್ಯಾದಾನ’, ‘ಗಂಗೆಗೌ’ರಿ, ‘ಅಣ್ಣತಂಗಿ’, ‘ಶಾಂಭವಿ’, ‘ಸೇವಂತಿ’, ‘ರಾಧಿಕಾ’, ‘ಜನನಿ’, ‘ಗೌರಿಪುರದ ಗಯ್ಯಾಳಿಗಳು’ ಹೀಗೆ ಸಾಕಷ್ಟು ವೈವಿಧ್ಯಮಯ ಧಾರಾವಾಹಿಗಳು ಪ್ರಸಾರ ಆಗುತ್ತಿವೆ. ಇದಕ್ಕೆ ಈಗ ಹೊಸ ಧಾರಾವಾಹಿ ʼಮೈನಾʼ ಸೇರ್ಪಡೆ ಆಗಿದೆ.

ಮೈನಾ ಪಾತ್ರದಲ್ಲಿ ನಟಿ ವಿಜಯಲಕ್ಷ್ಮಿ ನಟಿಸುತ್ತಿದ್ದಾರೆ. ಈ ಹಿಂದೆ ಅವರು ‘ಲಕ್ಷಣ’ ಧಾರಾವಾಹಿಯಲ್ಲಿ ನಕ್ಷತ್ರಾ ಎನ್ನುವ ಪಾತ್ರ ಮಾಡಿದ್ದರು. ಟಿ ಎಸ್ ನಾಗಾಭರಣ, ಅಪೂರ್ವ, ಅಂಜಲಿ, ಮಾನಸಿ ಜೋಶಿ, ಸಚಿನ್, ಸಿದ್ದಾರ್ಥ್, ಪ್ರಭಂಜನ, ಸಾಗರ್, ಹರ್ಷಾರ್ಜುನ್, ಯಶಸ್ವಿನಿ, ಆಶಾ, ಅನುಷಾ ಕುಮಾರಿ, ಮಾಸ್ಟರ್ ಅರುಣ್, ಮಾಸ್ಟರ್ ರಣವೀರ್ ಮುಂತಾದವರು ನಟಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Jyoti Rai: ನೋವಿನ ನಡುವೆಯೂ ಸಹಾಯ ಹಸ್ತ ಚಾಚಿದ ನಟಿ ಜ್ಯೋತಿ ರೈ; ವಿಡಿಯೊ ವೈರಲ್‌ ಮಾಡುವಂತೆ ಸವಾಲು ಹಾಕಿದ್ದೇಕೆ?

Jyoti Rai: ಸದ್ಯ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ನಕಲಿ ಅಶ್ಲೀಲ ವಿಡಿಯೊ ವೈರಲ್‌ ಆಗಿದೆ. ಈ ಬಗ್ಗೆ ನಟಿ ಸೈಬರ್‌ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಈ ಘಟನೆಯಿಂದ ತೀವ್ರವಾಗಿ ನೊಂದುಕೊಂಡಿರುವ ಅವರು ಇದೀಗ ನೋವಿನ ನಡುವೆಯೂ ಹಿರಿಯ ಗಾಯಕ ಮೊಗಿಲಯ್ಯ ಅವರ ಕಷ್ಟಕ್ಕೆ ಸ್ಪಂದಿಸುವ ಮೂಲಕ ಮಾದರಿಯಾಗಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಮೊಗಿಲಯ್ಯ ಅವರಿಗೆ ಜ್ಯೋತಿ ರೈ ಅವರು ಅಕ್ಷಯ ತೃತೀಯದಂದು 50 ಸಾವಿರ ರೂ. ಧನ ಸಹಾಯ ಮಾಡಿದ್ದಾರೆ.

VISTARANEWS.COM


on

Jyoti Rai
Koo

ಹೈದರಾಬಾದ್‌: ಸದ್ಯ ಕಿರುತೆರೆ ನಟಿ, ಬಹುಭಾಷಾ ಕಲಾವಿದೆ, ಕನ್ನಡ ಮೂಲದ ಜ್ಯೋತಿ ರೈ (Jyoti Rai) ಕುರಿತಾದ ಸುದ್ದಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಜ್ಯೋತಿ ರೈ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವುದೇ ಇದಕ್ಕೆ ಕಾರಣ. ಈ ಪ್ರಕರಣದಿಂದ ಆಘಾತಕ್ಕೊಳಗಾದ ಅವರು ತೀವ್ರ ಬೇಸರದ ನಡುವೆಯೂ ಜನಪದ ಗಾಯಕರೊಬ್ಬರಿಗೆ ನೆರವಿನ ಹಸ್ತ ಚಾಚುವ ಮೂಲಕ ಮಾದರಿಯಾಗಿದ್ದಾರೆ.

ತೆಲುಗಿನ ಜನಪ್ರಿಯ ಜನಪದ ಗಾಯಕ ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಗಿಲಯ್ಯ (Darshanam Mogilaiah) ತೀವ್ರ ಬಡತನದಲ್ಲಿದ್ದು, ಜೀವನ ನಿರ್ವಹಣೆಗಾಗಿ ಗಾರೆ ಕೆಲಸ ಮಾಡುತ್ತಿದ್ದರು. ಅವರು ಗಾರೆ ಕೆಲಸ ಮಾಡುತ್ತಿರುವ ಚಿತ್ರಗಳು, ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ತನ್ನ ನೋವನ್ನು ನುಂಗಿ ಜ್ಯೋತಿ ರೈ ಅವರು ಈ ಹಿರಿಯ ಕಲಾವಿದರ ನೆರವಿಗೆ ಧಾವಿಸಿದ್ದಾರೆ.

ಧನ ಸಹಾಯ

ಅಕ್ಷಯ ತೃತೀಯ ದಿನ (ಶುಕ್ರವಾರ)ದಂದು ಜ್ಯೋತಿ ರೈ ಅವರು ಮೊಗಿಲಯ್ಯ ಅವರಿಗೆ 50 ಸಾವಿರ ರೂ. ಧನ ಸಹಾಯ ನೀಡಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ʼʼಅಕ್ಷಯ ತೃತೀಯದ ಪುಣ್ಯ ದಿನದಂದು ಪದ್ಮಶ್ರೀ ಮೊಗಿಲಯ್ಯ ಅವರಿಗೆ ನಾನು 50 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಿದೆ. ಮೊಗಿಲಯ್ಯ ಅಷ್ಟು ಜನಪ್ರಿಯರಾಗಿದ್ದರೂ ತಮ್ಮ ಖಾಸಗಿ ಜೀವನ ಹಾಗೂ ವೃತ್ತಿಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರು ನಡೆಸಿದ ಸುದ್ದಿಗೋಷ್ಠಿಯಿಂದಾಗಿ ಅವರ ಕಷ್ಟಗಳು ನನಗೆ ತಿಳಿದು ಬಂತುʼʼ ಎಂದು ಜ್ಯೋತಿ ರೈ ಹೇಳಿದ್ದಾರೆ.

ಮುಂದುವರಿದು, ʼʼಸದ್ಯಕ್ಕೆ ನಾನು ಸಹ ಕಷ್ಟದ ದಿನಗಳನ್ನು ಕಳೆಯುತ್ತಿದ್ದೇನೆ. ಆದರೆ ಅವರ ಕಷ್ಟ ಕೇಳಿದಾಗ ನನ್ನೊಳಗೆ ಮೂಡಿದ ಬೆಳಕು, ಮೊಗಿಲಯ್ಯ ಅವರನ್ನು ಭೇಟಿಯಾಗಿ ಸಹಾಯ ಮಾಡಲು ಪ್ರೇರೇಪಿಸಿತು. ಹೀಗಾಗಿ ಅವರಿಗೆ ಸಹಾಯ ಮಾಡಿದೆ. ಅವರಿಗೆ ಇನ್ನಷ್ಟು ಸಹಾಯ ಮಾಡುವ ಆಸೆಯಿದೆ. ನನ್ನಿಂದ ಸಾಧ್ಯವಾಗಿದ್ದನ್ನು ನಾನು ಮಾಡಿದ್ದೇನೆ. ಇನ್ಯಾರಿಗಾದರೂ ಮೊಗಿಲಯ್ಯ ಅವರಿಗೆ ಸಹಾಯ ಮಾಡುವ ಇಚ್ಛೆಯಿದ್ದರೆ ಬನ್ನಿ ಎಲ್ಲರೂ ಒಟ್ಟು ಸೇರಿ ನೆರವಾಗೋಣʼʼ ಎಂದು ಕರೆ ನೀಡಿದ್ದಾರೆ.

ಸವಾಲು

ಇದರ ಜತೆಗೆ ತಮ್ಮದು ಎನ್ನಲಾದ ನಕಲಿ ವಿಡಿಯೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ವ್ಯಕ್ತಿಗಳಿಗೆ ಸವಾಲು ಹಾಕಿದ್ದಾರೆ. ʼʼಈ ವಿಡಿಯೊ (ಮೊಗಿಲಯ್ಯ ಅವರಿಗೆ ಆರ್ಥಿಕ ನೆರವು ನೀಡುತ್ತಿರುವ ವಿಡಿಯೊ)ವನ್ನು ವೈರಲ್‌ ಮಾಡುವ ತಾಕತ್ತು ನಿಮ್ಮಲ್ಲಿ ಇದೆಯಾ? ಇದು ನಿಜವಾದುದು. ಈ ಕೆಳಗಿನ ಸಾಲುಗಳು ಕೆಲಸ ಇಲ್ಲದವರಿಗೆ, ಬುದ್ಧಿ ಇಲ್ಲದವರಿಗಾಗಿ. ಜಗತ್ತು ನನ್ನೆಡೆಗೆ ಅಂಧಕಾರವನ್ನು ದೂಡಿದಾಗ ನನ್ನೊಳಗಿನ ನಾನು ಇನ್ನಷ್ಟು ಪ್ರಕಾಶಮಾನವಾಗಿ ಹೊಳೆಯುತ್ತೇನೆ. ನನ್ನೊಳಗಿನ ಬೆಳಕು ಉರಿಯಲು ಇಂತಹ ಕತ್ತಲೇ ಇಂಧನ. ನಿರಾಶಾವಾದದ ಬೂದಿಯಿಂದ ಸಾಧ್ಯತೆಯ ಫೀನಿಕ್ಸ್ ಏಳುತ್ತದೆ. ನಕಾರಾತ್ಮಕ ಶಕ್ತಿಯು ಮೆಟ್ಟಿಲು; ನಾನು ಅದರ ಮೇಲೆ ಹತ್ತಿ ಸಕಾರಾತ್ಮಕತೆಯ ದಿಗಂತದ ಕಡೆಗೆ ಸಾಗುತ್ತೇನೆʼʼ ಎಂದು ಜ್ಯೋತಿ ರೈ ಬರೆದುಕೊಂಡಿದ್ದಾರೆ. ಸದ್ಯ ಅವರ ಈ ಪೋಸ್ಟ್‌ ವೈರಲ್‌ ಆಗಿದೆ. ಅಭಿಮಾನಿಗಳು ಅವರ ಈ ದಿಟ್ಟತನವನ್ನು, ಮಾನವೀಯತೆಯ ಗುಣವನ್ನು ಮೆಚ್ಚಿದ್ದಾರೆ.

ಇದನ್ನೂ ಓದಿ: Jyothi Rai: ಯುಟ್ಯೂಬ್‌ ಸಬ್‌ಸ್ಕ್ರೈಬ್‌ ಮಾಡಿದ್ರೆ ಜ್ಯೋತಿ ರೈ ವಿಡಿಯೊ ಅಪ್‌ಲೋಡ್‌ ಮಾಡ್ತೀನಿ ಎಂದ ಕಿಡಿಗೇಡಿ!

ಇತ್ತೀಚೆಗೆ ಜ್ಯೋತಿ ರೈ ಅವರದ್ದು ಎನ್ನಲಾದ ಮೂರು ಅಶ್ಲೀಲ ವಿಡಿಯೊ ಹಾಗೂ ಕೆಲವು ಫೋಟೊಗಳು ವೈರಲ್ ಆಗಿದ್ದವು. ಬಳಿಕ ನಟಿ ಈ ಬಗ್ಗೆ ಸುದೀರ್ಘವಾಗಿ ಪತ್ರವನ್ನು ಬರೆದು ಸ್ಪಷ್ಟನೆ ನೀಡಿದ್ದರು. ʻʻನಾನು ಅಪರಿಚಿತ ವ್ಯಕ್ತಿಗಳಿಂದ ಕೆಲವು ಸಂದೇಶಗಳನ್ನು ಸ್ವೀಕರಿಸಿ ಆಘಾತಕ್ಕೆ ಒಳಗಾಗಿದ್ದೇನೆ. ಇಂತಹ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ನಾನು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುಟುಂಬದ ಪ್ರತಿಷ್ಠೆ ಅಪಾಯದಲ್ಲಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ, ಸರಿ ಮಾಡಲು ಸಾಧ್ಯವಾದಂತಹ ಡ್ಯಾಮೇಜ್ ಆಗಲಿದೆ. ನಿಮ್ಮ ತನಿಖೆಗೆ ಅನುಕೂಲವಾಗುವಂತೆ ಯೂಸರ್ ಐಡಿಗಳನ್ನು ಪೋಸ್ಟ್‌ ಮಾಡಿದ್ದೇನೆʼʼ ಎಂದು ಹೇಳಿಕೊಂಡಿದ್ದರು. ಜತೆಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಹ ನೀಡಿದ್ದರು.

Continue Reading

ಕಿರುತೆರೆ

Star Suvarna: ಬಹುಮಾನದ ಜತೆಗೆ ಮನೋರಂಜನೆ ಹೊತ್ತು ಬರುತ್ತಿದೆ ʼಸುವರ್ಣ ಗೃಹಮಂತ್ರಿʼ; ಯಾವಾಗ ಪ್ರಸಾರ?

Star Suvarna: ಸದಾ ಹೊಸತನದ ಧಾರಾವಾಹಿ, ಕಾರ್ಯಕ್ರಮ, ರಿಯಾಲಿಟಿ ಶೋ ನೀಡುವ ಮೂಲಕ ಗಮನ ಸೆಳೆಯುವ ಸ್ಟಾರ್‌ ಸುವರ್ಣ ಇದೀಗ ಮತ್ತೊಂದು ವಿಭಿನ್ನ ಕಾನ್ಸೆಪ್ಟ್‌ ಹೊತ್ತು ಬಂದಿದೆ. ಕರುನಾಡಿನ ಗೃಹಿಣಿಯರಿಗಾಗಿ ‘ಸುವರ್ಣ ಗೃಹಮಂತ್ರಿ’ ಎನ್ನುವ ಶೋ ಆರಂಭಿಸಲಿದೆ. ಇದೇ ಮೊದಲ ಬಾರಿಗೆ ಜನಪ್ರಿಯ ನಿರೂಪಕ ಮುರಳಿ ಸ್ಟಾರ್ ಸುವರ್ಣ ವಾಹಿನಿಗೆ ಲಗ್ಗೆಯಿಟ್ಟಿದ್ದು, ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ಸಾರಥಿಯಾಗಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಮುರಳಿ ಅವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆ, ಬೆಳ್ಳಿ-ಬಂಗಾರ ನೀಡಲಿದ್ದಾರೆ. ಈ ಕಾರ್ಯಕ್ರಮ ಮೇ 13ರಿಂದ ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ.

VISTARANEWS.COM


on

Star Suvarna
Koo

ಬೆಂಗಳೂರು: ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ (Star Suvarna) ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು ಇನ್ನಷ್ಟು ದುಪ್ಪಟ್ಟುಗೊಳಿಸಲು ‘ಸುವರ್ಣ ಗೃಹಮಂತ್ರಿ’ (Suvarna GruhaMantri) ಎಂಬ ಹೊಸದೊಂದು ರಿಯಾಲಿಟಿ ಶೋ ಅನ್ನು ಪ್ರಸಾರ ಮಾಡಲು ಸಜ್ಜಾಗಿದೆ.

ಇದೊಂದು ವಿಭಿನ್ನ ರೀತಿಯ ರಿಯಾಲಿಟಿ ಶೋ. ಸಾಮಾನ್ಯವಾಗಿ ಮನೆಯಲ್ಲಿ ಕೆಲಸ ಮಾಡುವ ಗೃಹಿಣಿಯರನ್ನು/ಹೆಣ್ಮಕ್ಕಳನ್ನು ಯಾರೂ ಗುರುತಿಸುವುದಿಲ್ಲ. ಮನೆ ಮಂದಿಯನ್ನು ಅವರು ಎಷ್ಟೇ ಚೆನ್ನಾಗಿ ನೋಡಿಕೊಂಡರೂ ‘ಥ್ಯಾಂಕ್ ಯೂ’ ಕೂಡ ಯಾರೂ ಹೇಳುವುದಿಲ್ಲ. ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ಗಂಡ-ಹೆಂಡತಿಯ ಅನ್ಯೂನ್ಯತೆಯ ಬಗ್ಗೆ ತಿಳಿದು, ಅವರನ್ನು ಸನ್ಮಾನಿಸಿ, ಮಾತುಕತೆ ನಡೆಸಿ ಆಟದ ಜತೆ ರೇಷ್ಮೆ ಸೀರೆ, ಚಿನ್ನ, ಬೆಳ್ಳಿ ಹಾಗೂ ಮತ್ತಷ್ಟು ಬೆಲೆಬಾಳುವ ಬಹುಮಾನಗಳನ್ನು ನೀಡುವುದೇ ʼಸುವರ್ಣ ಗೃಹಮಂತ್ರಿʼ ಕಾರ್ಯಕ್ರಮದ ಕಾನ್ಸೆಪ್ಟ್‌.

ಇನ್ನು ಇದೇ ಮೊದಲ ಬಾರಿಗೆ ಜನಪ್ರಿಯ ನಿರೂಪಕ ಮುರಳಿ ಸ್ಟಾರ್ ಸುವರ್ಣ ವಾಹಿನಿಗೆ ಲಗ್ಗೆಯಿಟ್ಟಿದ್ದು, ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ಸಾರಥಿಯಾಗಿ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಕರ್ನಾಟಕದ ಗೃಹಿಣಿಯರಿಗಾಗಿಯೇ ಸಿದ್ಧವಾಗಿರೋ ಈ ಕಾರ್ಯಕ್ರಮದಲ್ಲಿ ಮುರಳಿ ಅವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆ ಉಡುಗೊರೆಯಾಗಿ ರೇಷ್ಮೆ ಸೀರೆ, ಬೆಳ್ಳಿ-ಬಂಗಾರ ನೀಡಲಿದ್ದಾರೆ. ಈ ಮೂಲಕ ಮನೆ ಗೃಹಿಣಿಯನ್ನು ಹಾರೈಸಿ, ರಾಣಿ ಸೀಟಿನಲ್ಲಿ ಕೂರಿಸಿ ಗೌರವಿಸಲಿದ್ದಾರೆ. ಅಷ್ಟೇ ಅಲ್ಲದೆ ಅವರ ಮನೆಗೆ ಬಂದಿರುವ ಆಪ್ತ ಸಂಬಂಧಿಕರಿಗೆ ಹಾಗೂ ಸ್ನೇಹಿತರನ್ನೂ ಆಟವನ್ನು ಆಡಿಸಿ ಬಹುಮಾನಗಳನ್ನು ನೀಡಲಿದ್ದಾರೆ.

ಸದ್ಯ ‘ಸುವರ್ಣ ಗೃಹಮಂತ್ರಿ’ಯ ಪ್ರೋಮೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ವೀಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಈ ಕಾರ್ಯಕ್ರಮದಲ್ಲಿ ಬಹುಮಾನಗಳ ಮಹಾ ಮಳೆಯೇ ಸುರಿಯಲಿದ್ದು ಪ್ರೇಕ್ಷಕರಿಗೆ ಮನೋರಂಜನೆ ಸಿಗುವುದಂತು ಖಚಿತ.

ಯಾವಾಗ ಪ್ರಸಾರ?

ಕರುನಾಡಿನ ಗೃಹಿಣಿಯರನ್ನು ಸಂಭ್ರಮಿಸಲು ರಾಣಿ ಸೀಟಿನೊಂದಿಗೆ ನಿಮ್ಮನೆಗೆ ಬರುತ್ತಿರುವ ಹೊಸ ಶೋ ‘ಸುವರ್ಣ ಗೃಹಮಂತ್ರಿ’ ಇದೇ ಸೋಮವಾರ(ಮೇ 13)ದಿಂದ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಮನೋರಂಜನೆ ಜತೆಗೆ ಬಹುಮಾನ ಗೆಲ್ಲಲು ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ವೀಕ್ಷಿಸಿ.

ಇದನ್ನೂ ಓದಿ: Suvarna Superstar: ʻಸುವರ್ಣ ಸೂಪರ್ ಸ್ಟಾರ್‌ʼಗೆ 1000 ಸಂಚಿಕೆಗಳ ಸಂಭ್ರಮ!

Continue Reading

ಕಿರುತೆರೆ

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Kannada Serials TRP: ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ.‘ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಲಕ್ಷ್ಮೀ ನಿವಾಸಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

VISTARANEWS.COM


on

Kannada Serials TRP Puttakkana makkalu TOP one
Koo

ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

‘ಲಕ್ಷ್ಮೀ ನಿವಾಸ’ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ಪುಟ್ಟಕ್ಕನ ಮಕ್ಕಳು ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿಗೆ ಈ ಬಾರಿ ಮೂರನೇ ಸ್ಥಾನ ಸಿಕ್ಕಿದೆ. ಎರಡೂ ಧಾರಾವಾಹಿಗಳಿಗೆ ಸಮಾನ ಬೇಡಿಕೆ ಸೃಷ್ಟಿ ಆಗಿದೆ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಐದನೇ ಸ್ಥಾನದಲ್ಲಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

ಅಮೃತಧಾರೆ

ಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ತಮ್ಮ ಜೀವಾ ಈಗಾಗಲೇ ಕೆಲಸ ಕಳೆದುಕೊಂಡಿರುವ ವಿಚಾರ ಗೌತಮ್‌ಗೆ ಗೊತ್ತಾಗಿದೆ. ಫುಡ್‌ ಡೆಲವರಿ ಬಾಯ್‌ ಆಗಿ ಕೆಲಸ ಮಾಡುತ್ತಿರುವ ವಿಚಾರ ಗೊತ್ತಾಗಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ಐದನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.ಐದನೇ ಸ್ಥಾನದಲ್ಲಿ ಕಲರ್ಸ್ ಕನ್ನಡ ವಾಹಿನಿಯ ‘ರಾಮಾಚಾರಿ’ ಧಾರಾವಾಹಿ ಇದೆ.

Continue Reading

ಕಿರುತೆರೆ

Kendasampige Serial: `ಕೆಂಡಸಂಪಿಗೆ’ ಧಾರಾವಾಹಿಗೆ ಕಾವ್ಯ ಶೈವ ಗುಡ್‌ ಬೈ; ಬದಲಾದ ಸುಮನಾ ಪಾತ್ರಧಾರಿ ಯಾರು?

Kendasampige Serial: ಕಥಾನಾಯಕಿ ಸುಮನಾ ಪಾತ್ರಕ್ಕೆ ನಟಿ ಕಾವ್ಯ ಶೈವ ಬಣ್ಣ ಹಚ್ಚಿದ್ದರು. ಇದೀಗ ಸುಮನಾ ಪಾತ್ರಕ್ಕೆ ಬೇರೊಬ್ಬ ನಟಿ ಎಂಟ್ರಿ ಕೊಟ್ಟಿದ್ದಾರೆ. ‘ಕೆಂಡಸಂಪಿಗೆ’ ಧಾರಾವಾಹಿಯಿಂದ ಕಾವ್ಯ ಶೈವ ಹೊರಬಂದಿದ್ದು ಯಾಕೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ಕಾತ್ಯಾಯಿನಿ ಆಗಿ ನಟಿ ಚೈತ್ರಾ ರಾವ್ ಸಚಿನ್, ತೀರ್ಥಂಕರ್ ಪ್ರಸಾದ್ ಆಗಿ ನಟ ಆಕಾಶ್, ಸಾಧನಾ ಆಗಿ ನಟಿ ಅಮೃತಾ ರಾಮಮೂರ್ತಿ, ಕೇಶವ್ ಪ್ರಸಾದ್ ಆಗಿ ನಟ ದೊಡ್ಡಣ್ಣ, ಪದ್ಮ ಆಗಿ ನಟಿ ಜ್ಯೋತಿ ಬಂಟ್ವಾಳ ಅಭಿನಯಿಸುತ್ತಿದ್ದಾರೆ.

VISTARANEWS.COM


on

Kendasampige Serial Madhumitha Entry
Koo

ಕಲರ್ಸ್‌ ಕನ್ನಡ ವಾಹಿನಿಯ ಟಾಪ್‌ ಧಾರಾವಾಹಿಗಳಲ್ಲಿ ‘ಕೆಂಡಸಂಪಿಗೆ’ ಕೂಡ (Kendasampige Serial) ಒಂದು. ಇದೀಗ ಈ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ್ದ  ನಟಿ ಕಾವ್ಯ ಶೈವ (Kavya Shaiva) ಹೊರ ಬಂದಿದ್ದಾರೆ.

ಕಥಾನಾಯಕಿ ಸುಮನಾ ಪಾತ್ರಕ್ಕೆ ನಟಿ ಕಾವ್ಯ ಶೈವ ಬಣ್ಣ ಹಚ್ಚಿದ್ದರು. ಇದೀಗ ಸುಮನಾ ಪಾತ್ರಕ್ಕೆ ಬೇರೊಬ್ಬ ನಟಿ ಎಂಟ್ರಿ ಕೊಟ್ಟಿದ್ದಾರೆ.

ಧಾರಾವಾಹಿಯಲ್ಲಿ ಸುಮನಾಳ ಕಿಡ್ನ್ಯಾಪ್‌ನಿಂದ ‘ಕೆಂಡಸಂಪಿಗೆ’ ಸೀರಿಯಲ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಮಧ್ಯೆ ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ಈ ದೊಡ್ಡ ಬದಲಾವಣೆಯಾಗಿದೆ.

ಇದನ್ನೂ ಓದಿ: Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ಇದೀಗ ಸುಮನಾ ಪಾತ್ರಕ್ಕಾಗಿ ಬಣ್ಣ ಹಚ್ಚಿರುವವರು ಮಧುಮಿತ (Madhumitha).

ಈ ಮುಂಚೆ ಮಧುಮಿತ ‘ಜೇನುಗೂಡು’ ಸೀರಿಯಲ್‌ನಲ್ಲಿ ಅಭಿನಯಿಸಿದ್ದರು.‘ಯುವರತ್ನ’ ಚಿತ್ರದಲ್ಲಿ ಸಮೀರಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಮಧುಮಿತ ಅವರು ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘’ ಒಳ್ಳೆಯ ಕೆಲಸಗಳಿಗೆ ಸಮಯ ಹಿಡಿಯುತ್ತದೆ ಎಂಬುದು ನಿಜಕ್ಕೂ ಸತ್ಯ. ತುಂಬಾ ಧನ್ಯವಾದಗಳು ವಿಶ್ವಕ್ಕೆ. ನಾನು ಬಯಸಿದ್ದನ್ನು ನೀವು ನನಗೆ ನೀಡಿದ್ದೀರಿ. ಈ ಯೋಜನೆಯ ಭಾಗವಾಗಿರಲು ತುಂಬ ಸಂತಸವಾಗುತ್ತಿದೆ. ನನಗೆ ಈ ಅವಕಾಶವನ್ನು ನೀಡಿದ ಕಲರ್ಸ್‌ ಕನ್ನಡದವರಿಗೆ ತುಂಬಾ ಧನ್ಯವಾದಗಳು. ಸುಮನಾ ಆಗಿ ಸೈನ್ ಇನ್ ಮಾಡಲು ನಿಮ್ಮೆಲ್ಲರ ಆಶೀರ್ವಾದ ಬೇಕು. ಇಲ್ಲಿಗೆ ತಲುಪಲು ನನಗೆ ಸಹಾಯ ಮಾಡಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ರಾಯರಿದ್ದಾರೆʼʼ ಎಂದು ನಟಿ ಮಧುಮಿತ ಸೋಷಿಯಲ್ ಮೀಡಿಯಾದ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

Continue Reading
Advertisement
Devarajegowda
ಕರ್ನಾಟಕ40 mins ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ40 mins ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ1 hour ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ1 hour ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Rain News
ಮಳೆ1 hour ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

ICMR Dietary Guidelines
ಆರೋಗ್ಯ2 hours ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Dwarka Tour
ಪ್ರವಾಸ2 hours ago

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

Narendra Modi
ದೇಶ2 hours ago

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

IPL 2024
ಪ್ರಮುಖ ಸುದ್ದಿ2 hours ago

IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

7th Pay Commission
ನೌಕರರ ಕಾರ್ನರ್3 hours ago

7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು6 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ16 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌