Mandya News: ದೇಶದ ಭವಿಷ್ಯಕ್ಕೆ ಬುನಾದಿ ‌ಹಾಕಿದ್ದು ಕಾಂಗ್ರೆಸ್: ಚಲುವರಾಯಸ್ವಾಮಿ - Vistara News

ಮಂಡ್ಯ

Mandya News: ದೇಶದ ಭವಿಷ್ಯಕ್ಕೆ ಬುನಾದಿ ‌ಹಾಕಿದ್ದು ಕಾಂಗ್ರೆಸ್: ಚಲುವರಾಯಸ್ವಾಮಿ

Mandya News: ಕೃಷ್ಣರಾಜನಗರದ ರೇಡಿಯೋ ಮೈದಾನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶ ಜರುಗಿತು.

VISTARANEWS.COM


on

Congress workers convention
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೆ.ಆರ್‌.ಪೇಟೆ: ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಪಕ್ಷ ಕಾಂಗ್ರೆಸ್ (Congress). ಹಲವು ಕಾಂಗ್ರೆಸ್ ನಾಯಕರು ದೇಶಕ್ಕಾಗಿ ಪ್ರಾಣ ತೆತ್ತಿದ್ದಾರೆ. ಭವ್ಯ ಇತಿಹಾಸ ಇರುವ ಪಕ್ಷ ಕಾಂಗ್ರೆಸ್. ಆದರೆ ಬಿಜೆಪಿಗೆ ಯಾವುದೇ ಇತಿಹಾಸ ಇಲ್ಲ. ದೇಶದ ಭವಿಷ್ಯಕ್ಕೆ ಬುನಾದಿ ‌ಹಾಕಿದ್ದು ಕಾಂಗ್ರೆಸ್ ಎಂದು ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (Mandya News) ಹೇಳಿದರು.

ಕೃಷ್ಣರಾಜನಗರದ ರೇಡಿಯೋ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಗ್ಯಾರಂಟಿ ಇಲ್ಲದಿದ್ದರೆ ಈ ಬರಗಾಲದಲ್ಲಿ ಜನ ಏನು ಮಾಡಬೇಕಿತ್ತು. ನಮ್ಮ ಗ್ಯಾರಂಟಿ ಬಂದಿದೆ. ಮೋದಿ ಗ್ಯಾರಂಟಿ ಎಲ್ಲಿ? ಬರಗಾಲದಲ್ಲಿ ಹಣ ಬಿಡುಗಡೆ ಮಾಡದವರು ರೈತರಿಗೆ ಏನು ಕೊಡ್ತಾರೆ. ನಮ್ಮ ತೆರಿಗೆ ಪಾಲು ನಮಗೆ ಕೊಡ್ತಿಲ್ಲ. ಬಿಜೆಪಿ ಜತೆ ಸೇರಿದವರಿಗೆ ಏತಕ್ಕೆ ವೋಟ್ ಹಾಕಬೇಕು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Vastu Tips: ಬಾತ್‌ರೂಮ್‌ನ ವಾಸ್ತು ದೋಷ ಆರ್ಥಿಕ ನಷ್ಟಕ್ಕೂ ಕಾರಣವಾಗಬಹುದು; ನಿವಾರಣೆಗೆ ಇಲ್ಲಿದೆ ಟಿಪ್ಸ್‌

ಶಾಸಕ ರವಿಶಂಕರ್ ಮಾತನಾಡಿ, ಪ್ರತಿ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಸುದ್ದಿಯಲ್ಲಿರುತ್ತೆ. ಸರ್ಕಾರದ ಮಟ್ಟದಲ್ಲಿ ಅನುದಾನ ತಂದು ಮೂಲಭೂತ ಸೌಕರ್ಯ ಕಲ್ಪಿಸಲು ನಿಮ್ಮ ಆಶೀರ್ವಾದ ಕಾರಣ. ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದಂತೆ ಲೋಕಸಭಾ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಎಂದು ತಿಳಿಸಿದರು.

ಕೆ.ಆರ್. ನಗರದ ಅಭಿವೃದ್ಧಿಗಾಗಿ ನಮ್ಮ ಸರ್ಕಾರ 10 ತಿಂಗಳಲ್ಲಿ 200 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ. ಏತನೀರಾವರಿ ಯೋಜನೆ ಘೋಷಣೆ ಮಾಡಿದೆ. ಸಾರ್ವಜನಿಕ ಆಸ್ಪತ್ರೆಗೆ 1 ಕೋಟಿ, ಯುವಕರಿಗೆ ಕ್ರೀಡಾ ಚಟುವಟಿಕೆಗಾಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ 2 ಕೋಟಿ, ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ 30 ಕೋಟಿ, ಒಳಚರಂಡಿ ಕಾಮಗಾರಿಗೆ 20 ಕೋಟಿ ರೂ. ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನೂರಾರು ಕೋಟಿ ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿ, ಜನ ಸೇವೆ ಮಾಡಲೆಂದು ಬಂದಿದ್ದು ನನ್ನನ್ನು ಬೆಂಬಲಿಸಿ ಆಶೀರ್ವದಿಸಬೇಕು. ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಯೋಜನೆಗಳನ್ನು ಸ್ಮರಿಸಿಕೊಂಡು ನನಗೆ ಮತನೀಡಿ ಎಂದರು.

ಶಾಸಕ ನರೇಂದ್ರಸ್ವಾಮಿ, ವಿಧಾನಪರಿಷತ್ ಸದಸ್ಯ ಮಧು ಮಾದೇಗೌಡ ಮಾತನಾಡಿದರು.

ಇದನ್ನೂ ಓದಿ: Money Guide: ಮೊಬೈಲ್‌ನಲ್ಲಿಯೇ ಪಿಎಫ್‌ ಮೊತ್ತ ಪರಿಶೀಲಿಸಬೇಕೆ?; ಜಸ್ಟ್‌ ಹೀಗೆ ಮಾಡಿ ಸಾಕು

ಸಮಾವೇಶದಲ್ಲಿ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಕೆಪಿಸಿಸಿ ಕಾರ್ಯಕಾರಣಿ ಸದಸ್ಯ ದೊಡ್ಡಸ್ವಾಮೇಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು ಹಾಗೂ ಇತರರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Hanuman Flag: ಕೆರಗೋಡು ಹನುಮಧ್ವಜ ಪ್ರಕರಣದ 3 ಹೋರಾಟಗಾರರ ಮೇಲೆ ರೌಡಿಶೀಟ್

Hanuman Flag: ಕೆರಗೋಡು ಹನುಮಧ್ವಜ ಹೋರಾಟ ದೇಶಾದ್ಯಂತ ಬಾರೀ ಸುದ್ದಿ ಮಾಡಿತ್ತು. ಹನುಮಧ್ವಜ ಹೋರಾಟದ ಸಂದರ್ಭ ಐಪಿಸಿ ಸೆಕ್ಷನ್ 143, 341, 353, 149ರ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿತ್ತು. ಅನ್ಯಕೋಮಿನವರನ್ನು ಹೆದರಿಸುವುದು, ಬೆದರಿಸುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಕೊಟ್ಟು ನೋಟಿಸ್ ಜಾರಿ ಮಾಡಲಾಗಿದೆ.

VISTARANEWS.COM


on

hanuman flag keragodu mandya
Koo

ಮಂಡ್ಯ: ಕೆರಗೋಡು ಧ್ವಜಸ್ತಂಭ (Keragodu) ಹೋರಾಟ ಪ್ರಕರಣದಲ್ಲಿ, ಹನುಮಧ್ವಜ (Hanuman Flag) ಹಾರಾಡಿಸುವ ಕುರಿತು ಹೋರಾಟ ಮಾಡಿದವರ ಮೇಲೆ ರೌಡಿ ಶೀಟರ್ (Rowdy Sheet) ಅಸ್ತ್ರ ಬಳಸಲು ಗೃಹ ಇಲಾಖೆ (Home ministry) ಮುಂದಾಗಿದೆ.

ಧ್ವಜಸ್ತಂಭದಲ್ಲಿ ಹನುಮ ನೆಡಲು ಹೋರಾಟ ನಡೆಸಿದ್ದ ಮೂವರಿಗೆ ಮಂಡ್ಯದ ಕೆರಗೋಡು ಪೊಲೀಸರಿಂದ ರೌಡಿ ಶೀಟರ್ ತೆರೆಯುವ ನೋಟಿಸ್ ಜಾರಿ ಮಾಡಲಾಗಿದೆ. ಬಾಲಕೃಷ್ಣ @ ಚಿಕ್ಕಬಳ್ಳಿ ಬಾಲು, ಕಾರ್ತಿಕ್ ಮತ್ತು ಹರೀಶ್‌ಗೆ ಈ ಕುರಿತು ನೋಟೀಸ್ ನೀಡಲಾಗಿದೆ.

ಕೆರಗೋಡಿನಲ್ಲಿ ಹನುಮಧ್ವಜಕ್ಕಾಗಿ ಈ ಮೂವರು ಹೋರಾಟ ನಡೆಸಿದ್ದರು. ಕೆರಗೋಡು ಹನುಮಧ್ವಜ ಹೋರಾಟ ದೇಶಾದ್ಯಂತ ಬಾರೀ ಸುದ್ದಿ ಮಾಡಿತ್ತು. ಹನುಮಧ್ವಜ ಹೋರಾಟದ ಸಂದರ್ಭ ಐಪಿಸಿ ಸೆಕ್ಷನ್ 143, 341, 353, 149ರ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿತ್ತು. ಅನ್ಯಕೋಮಿನವರನ್ನು ಹೆದರಿಸುವುದು, ಬೆದರಿಸುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಕೊಟ್ಟು ನೋಟಿಸ್ ಜಾರಿ ಮಾಡಲಾಗಿದೆ.

7 ದಿನಗಳ ಒಳಗೆ ಕೆರಗೋಡು ಪೊಲೀಸ್ ಠಾಣೆಗೆ ಹಾಜರಾಗಿ ನೋಟಿಸ್‌ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ. ನೋಟಿಸ್ ಬಳಿಕ ಹನುಮಧ್ವಜ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂಪರ ಕಾರ್ಯಕರ್ತರನ್ನು ಹೀಗೆ ಹತ್ತಿಕ್ಕಲಾಗುತ್ತಿದೆ ಎಂದು ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಏನಿದು ಮಂಡ್ಯದ ಹನುಮಧ್ವಜ ಕೇಸ್?‌

ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಾಗಿ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಲು ಗ್ರಾಮಸ್ಥರು ನಿರ್ಧರಿಸಿದ್ದರು. ಧ್ವಜ ಹಾರಿಸಲು ನಿಶ್ಚಯಿಸಿದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದರಿಂದ ಅನುಮತಿ ಕೋರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೆ, ಗ್ರಾಮ ಪಂಚಾಯಿತಿ “ರಾಷ್ಟ್ರ ಧ್ವಜ ಮತ್ತು ನಾಡಧ್ವಜ” ಹೊರತುಪಡಿಸಿ ಯಾವುದೇ ಧಾರ್ಮಿಕ/ ರಾಜಕೀಯ ಧ್ವಜವನ್ನು ಹಾರಿಸುವಂತಿಲ್ಲವೆಂದು ಅನುಮತಿಯನ್ನು ನಿರಾಕರಣೆ ಮಾಡಿತ್ತು.

ಆದರೂ ಗ್ರಾಮಸ್ಥರು ಮತ್ತು ಹಿಂದು ಕಾರ್ಯಕರ್ತರು ಹನುಮ ಧ್ವಜ ಹಾರಿಸಿದ್ದರು. ಇದ್ದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೆ ಈ ವಿಚಾರ ಮತ್ತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ಬಂದಿದೆ. ಅಲ್ಲಿ 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಗ್ರಾಮ ಪಂಚಾಯತ್​ ಸದಸ್ಯರು ನಡಾವಳಿ ರಚಿಸಿ, ವಿವಾದವನ್ನು ಇತ್ಯರ್ಥ ಪಡಿಸಿದ್ದರು.

ಆದರೆ, ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಲಾಗಿದೆ, ಇದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಮೌಖಿಕ ಆದೇಶವನ್ನು ಹೊರಡಿಸಿತ್ತು. ಹೀಗಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಅವರು ತೆರವುಗೊಳಿಸಲು ಮುಂದಾದರು. ಇದಕ್ಕೆ ಗ್ರಾಮಸ್ಥರು ಅಡ್ಡಿಪಡಿಸಿ ಪ್ರತಿಭಟಿಸಿದ್ದರು. ಹೀಗಾಗಿ ಅಲ್ಲಿಂದ ನಿರ್ಗಮಿಸಿದ್ದ ಅಧಿಕಾರಿಗಳು ಶನಿವಾರ (ಜ.27) ರಾತ್ರಿ ಪುನಃ ಬಂದು ಹನುಮಧ್ವಜ ತೆರವಿಗೆ ಮುಂದಾದರು. ಮುಂಜಾನೆ 3 ಗಂಟೆ ಹೊತ್ತಿಗೆ ಮಂಡ್ಯ ಎಸಿ ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಬಿರಾದರ್ ನೇತೃತ್ವದಲ್ಲಿ ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರಿಗೆ ವಿಷಯ ತಿಳಿದು ಬಂದು ಪ್ರತಿಭಟನೆ ನಡೆಸಿದ್ದರು. ಆದರೂ ಹನುಮಧ್ವಜ ತೆರವು ಮಾಡಲಾಗಿತ್ತು.

ನಂತರ ಈ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಕೈಜೋಡಿಸಿದ್ದವು. ಕೆರಗೋಡು ಹಾಗೂ ಮಂಡ್ಯದಲ್ಲಿ ಹನುಮಧ್ವಜ ಮರು ಸ್ಥಾಪನೆಗೆ ಆಗ್ರಹಿಸಿ ಪಾದಯಾತ್ರೆ ನಡೆದಿತ್ತು. ಫೆ.7ರಂದು ಮಂಡ್ಯ ಬಂದ್‌ಗೆ ಕರೆ ನೀಡಲಾಗಿತ್ತು. ಕೆರಗೋಡು ಗ್ರಾಮದಲ್ಲಿ ಮನೆಮನೆ ಮೇಲೆ ಹನುಮಧ್ವಜ ಹಾರಿಸಿ ಪ್ರತಿಭಟಿಸಲಾಗಿತ್ತು.

ಇದನ್ನೂ ಓದಿ: Hanuman Flag: ಹನುಮಧ್ವಜ ವಿವಾದ; ಇಂದು ಮಂಡ್ಯ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ; ಬೈಕ್‌ ರ್‍ಯಾಲಿ

Continue Reading

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

Karnataka Rains : ನಿನ್ನೆ ಸೋಮವಾರ ಸುರಿದ ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿದೆ. ಬಿರುಗಾಳಿ ಮಳೆಗೆ ಮರ ಬಿದ್ದು ಒಬ್ಬನ ಪ್ರಾಣಪಕ್ಷಿ ಹಾರಿಹೋದರೆ, ಮತ್ತೊಬ್ಬ ಬೆನ್ನು ಮೂಳೆಯನ್ನು ಮುರಿದುಕೊಂಡಿದ್ದಾರೆ.

VISTARANEWS.COM


on

By

karnataka rains
Koo

ಬೆಂಗಳೂರು/ಮಂಡ್ಯ: ಜಸ್ಟ್‌ ಅರ್ಧ ಗಂಟೆ ಸುರಿದ ಭಾರಿ ಗಾಳಿ ಮಳೆಗೆ (Karnataka Rains) ಸಾವು-ನೋವುಗಳು ಸಂಭವಿಸಿವೆ. ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿಯೊಬ್ಬರು ಬಲಿಯಾದರೆ, ಬೆಂಗಳೂರಲ್ಲಿ ಟೆಕ್ಕಿಯ ಬೆನ್ನು ಮೂಳೆ ಮುರಿದಿದೆ.

ಸೋಮವಾರ ಬೆಂಗಳೂರಲ್ಲಿ ಸುರಿದ ಮಳೆಗೆ ಟೆಕ್ಕಿಯೊಬ್ಬರು ಬೆನ್ನು ಮೂಳೆ ಮುರಿದುಕೊಂಡಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಗಾಳಿಗೆ ಮರದ ಕೊಂಬೆ ಮೈ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಬೆನ್ನು ಮೂಳೆ ಮುರಿದಿದೆ. ಬೆಂಗಳೂರಿನ ಸಿ.ವಿ ರಾಮನ್ ನಗರದ ನಾಗವಾರಪಾಳ್ಯದ 2ನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಐಟಿ ಕಂಪನಿ ಉದ್ಯೋಗಿಯಾಗಿ ರವಿಕುಮಾರ್ (26) ಎಚ್‌ಎಎಲ್‌ನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರ ಬಿದ್ದಿರುವ ಹಿನ್ನೆಲೆಯಲ್ಲಿ ಸ್ಪೈನ್ ಕಾರ್ಡ್ ಮುರಿದುಕೊಂಡಿದ್ದಾರೆ. ಬಿಬಿಎಂಪಿ ಉಸ್ತುವಾರಿಯಲ್ಲಿ ಗಾಯಾಳು ರವಿಕುಮಾರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮಂಡ್ಯದಲ್ಲಿ ಬಿರುಗಾಳಿ ಮಳೆ ಎಫೆಕ್ಟ್‌ಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಾರಿನ ಮೇಲೆ ಬೃಹತ್ ಮರ ಬಿದ್ದಿದ್ದು, ಅದರೊಳಗೆ ಇದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ಕಾರ್ತಿಕ್ ಮೃತ ದುರ್ದೈವಿ. ಮಂಡ್ಯ ನಗರದ ನೆಹರು ನಗರದಲ್ಲಿ ದುರ್ಘಟನೆ ನಡೆದಿದೆ.

ಕಾರ್ತಿಕ್ ಮಂಡ್ಯ ನಗರದ ಖಾಸಗಿ ನರ್ಸಿಂಗ್ ಹೋಮ್‌ಗೆ ಬಂದಿದ್ದರು. ಈ ವೇಳೆ ಮಳೆ ಬಂದ ಕಾರಣಕ್ಕೆ ಮರದ ಕೆಳಗೆ ಕಾರ್ ಪಾರ್ಕ್ ಮಾಡಿ ಕುಳಿತಿದ್ದರು. ಆದರೆ ಜೋರಾಗಿ ಬೀಸಿದ ಬಿರುಗಾಳಿಗೆ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದು ಜಖಂಗೊಂಡಿತ್ತು. ಪರಿಣಾಮ ಕಾರೊಳಗೆ ಸಿಲುಕಿದ ಕಾರ್ತಿಕ್‌ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದರು. ಇನ್ನೂ ಘಟನೆಯಲ್ಲಿ ಹಲವು ಬೈಕ್‌ಗಳು ಜಖಂಗೊಂಡಿದ್ದವು. ಸ್ಥಳಕ್ಕೆ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.

ಇದನ್ನೂ ಓದಿ: Theft Case : ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

ಧರೆಗೆ ಬಿದ್ದ ಮರಗಳು, ವಿದ್ಯುತ್‌ ಕಂಬಗಳು

ಮಂಡ್ಯ ನಗರ ಸೇರಿದಂತೆ ಹಲವೆಡೆ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ರಸ್ತೆ ಮಧ್ಯೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿತ್ತು. ಹೆದ್ದಾರಿ ಸೇರಿದಂತೆ ನಗರದ ಹಲವೆಡೆ ಸಂಚಾರ ಅಸ್ತವ್ಯಸ್ತವಾಗಿತ್ತು. ಮಂಡ್ಯ ನಗರ ಸೇರಿದಂತೆ ಹಲವೆಡೆ ರಾತ್ರಿ ಪೂರ್ತಿ ವಿದ್ಯುತ್ ಸ್ಥಗಿತವಾಗಿತ್ತು. ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಮೇಲೆ ಮರಗಳು, ವಿದ್ಯುತ್ ಕಂಬಗಳು ಬಿದ್ದಿತ್ತು. ಪರಿಣಾಮ ಬೈಕ್‌ಗಳು, ಕಾರು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿತ್ತು. ಇನ್ನೂ ಮುರಿದು ಬಿದ್ದ ಮರಗಳು, ವಿದ್ಯುತ್ ಕಂಬಗಳನ್ನು ತೆರವುಗೊಳಿಸಲು ನಗರಸಭೆ ಪೌರಕಾರ್ಮಿಕರು, ಚೆಸ್ಕಾಂ ಸಿಬ್ಬಂದಿಯಿಂದ ಹರಸಾಹಸ ಪಡಬೇಕಾಯಿತು.

ಮಳೆಯ ಅವಾಂತರಕ್ಕೆ ರಾಜಾಜಿನಗರದ ತಿಮ್ಮಯ್ಯ ರಸ್ತೆಯಲ್ಲಿ ಕಾರು, 2 ಸ್ಕೂಟರ್ ಜಖಂಗೊಂಡಿತ್ತು. ರಾತ್ರಿ ಬಿದ್ದ ಮರವನ್ನು ಮರು ದಿನ ಬೆಳಗ್ಗೆಯಾದರೂ ತೆರವು ಮಾಡದ ಪಾಲಿಕೆ ಸಿಬ್ಬಂದಿ ವಿರುದ್ಧ ಕಿಡಿಕಾರಿದರು. ರಸ್ತೆಯಲ್ಲಿ ಓಡಾಡಲು ಜನರು ಪರದಾಡಬೇಕಾಯಿತು. ಎಚ್‌ಎಎಲ್ ವಿಮಾನ ನಿಲ್ದಾಣ ರಸ್ತೆ ರಾಜೇಶ್ವರಿ ಚಿತ್ರಮಂದಿರ ಬಳಿ ಮರಗಳು ಧರೆಗುರಳಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಲ್ಲೇಶ್ವರಂ ಚಿತ್ತಾಪುರ ಮಠದ ಬಳಿಯೂ ಬೃಹತ್‌ ಮರವು ಅಪ್ಪಳಿಸಿದ್ದು, ಆ ಮಾರ್ಗದ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಇನ್ನೂ ಮಳೆ ಗಾಳಿಗೆ ನಗರದ 15 ಬೃಹತ್ ಗಾತ್ರದ ಮರ ಧರೆಗುರುಳಿವೆ ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gurpatwant Singh Pannun
ವಿದೇಶ7 mins ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

Sangeeth Sivan dies Riteish Deshmukh Tusshar Kapoor pay tribute
ಮಾಲಿವುಡ್13 mins ago

Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

SRH vs LSG
ಕ್ರೀಡೆ30 mins ago

SRH vs LSG: ಬಿರುಸಿನ ಅರ್ಧಶತಕ ಬಾರಿಸಿ ಗೇಲ್​, ನರೈನ್​ ದಾಖಲೆ ಮುರಿದ ಟ್ರಾವಿಸ್ ಹೆಡ್​

bagalakote unrest
ಕ್ರೈಂ40 mins ago

Bagalakote Unrest: ಹಿಂದೂ ಯುವಕ- ಮುಸ್ಲಿಂ ಯುವತಿ ನವದಂಪತಿ ರಕ್ಷಣೆಗೆ ನಿಂತ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ಲಾಠಿಚಾರ್ಜ್‌

Do You Know
ಲೈಫ್‌ಸ್ಟೈಲ್50 mins ago

Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

hd revanna jailed prajwal revanna case
ಕ್ರೈಂ1 hour ago

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

Nijjar Killling
ವಿದೇಶ1 hour ago

Nijjar Killing: ಒಂದೇ ದಿನದಲ್ಲಿ ಸ್ಟೂಡೆಂಟ್‌ ವೀಸಾ ಪಡೆದು ಕೆನಡಾಕ್ಕೆ ಬಂದಿದ್ನಂತೆ ನಿಜ್ಜರ್‌ ಹಂತಕ

Maldives
ದೇಶ1 hour ago

Maldives: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ ಆಗಮಿಸಿದ ಮಾಲ್ಡೀವ್ಸ್ ಸಚಿವ ಮೂಸಾ ಜಮೀರ್

SSLC Exam Result 2024 to be declared tomorrow Here are the details
ಶಿಕ್ಷಣ2 hours ago

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Cooking Oils
ಆಹಾರ/ಅಡುಗೆ2 hours ago

Cooking Oils: ಭಾರತೀಯ ಅಡುಗೆ ಶೈಲಿಗೆ ಯೋಗ್ಯವಾದ 7 ಅಡುಗೆ ಎಣ್ಣೆಗಳಿವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌