Nalin Kumar Kateel: ಟಿಕೆಟ್‌ ಕೈತಪ್ಪಿದ ನಳಿನ್‌ ಕುಮಾರ್ ಕಟೀಲ್‌ಗೆ ಕೇರಳ ಸಹ ಉಸ್ತುವಾರಿ, ಇನ್ನಷ್ಟು ಬಿಜೆಪಿ ಪ್ರಭಾರಿಗಳ ನೇಮಕ - Vistara News

Lok Sabha Election 2024

Nalin Kumar Kateel: ಟಿಕೆಟ್‌ ಕೈತಪ್ಪಿದ ನಳಿನ್‌ ಕುಮಾರ್ ಕಟೀಲ್‌ಗೆ ಕೇರಳ ಸಹ ಉಸ್ತುವಾರಿ, ಇನ್ನಷ್ಟು ಬಿಜೆಪಿ ಪ್ರಭಾರಿಗಳ ನೇಮಕ

Nalin Kumar Kateel: ತೆಲಂಗಾಣ ಪ್ರಭಾರಿಯಾಗಿ ಅಭಯ್ ಪಾಟೀಲ್, ಮಹಾರಾಷ್ಟ್ರ ಸಹ ಪ್ರಭಾರಿಯಾಗಿ ನಿರ್ಮಲ್‌ಕುಮಾರ್ ಸುರಾನಾ ಅವರ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.

VISTARANEWS.COM


on

Nalin Kumar Kateel Congress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಗೆ (Lok Sabha Election 2024) ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳ ನೇಮಕ ಮಾಡಿ ಬಿಜೆಪಿ ಹೈಕಮಾಂಡ್‌ (BJP) ಆದೇಶ ಹೊರಡಿಸಿದೆ. ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಅವರನ್ನು ಕೇರಳ ರಾಜ್ಯದ ಸಹ ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರವನ್ನು ಕಳೆದ ಮೂರು ಅವಧಿಯಿಂದ ಬಿಜೆಪಿ ಸಂಸದರಾಗಿ ನಳಿನ್‌ ಕುಮಾರ್‌ ಕಟೀಲ್‌ ಪ್ರತಿನಿಧಿಸಿದ್ದರು. ಈ ಬಾರಿ ಪಕ್ಷದ ಆಂತರಿಕ ವಿರೋಧದಿಂದಾಗಿ ದಕ್ಷಿಣ ಕನ್ನಡದ ಟಿಕೆಟ್‌ ಕೈತಪ್ಪಿದ್ದು, ರಾಜ್ಯಾಧ್ಯಕ್ಷ ಹುದ್ದೆಯೂ ಕೈಬಿಟ್ಟಿದೆ. ಆದರೆ ಮತ್ತೊಂದು ಜವಾಬ್ದಾರಿ ಕೊಡಲಾಗಿದೆ.

ತೆಲಂಗಾಣ ಪ್ರಭಾರಿಯಾಗಿ ಅಭಯ್ ಪಾಟೀಲ್, ಮಹಾರಾಷ್ಟ್ರ ಸಹ ಪ್ರಭಾರಿಯಾಗಿ ನಿರ್ಮಲ್‌ಕುಮಾರ್ ಸುರಾನಾ ಅವರ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.

440 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ

ಬಿಜೆಪಿ ಈ ಬಾರಿ ಸುಮಾರು 440 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಈಗಾಗಲೇ 402 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಮೂಲಕ ತಾನು ಸ್ಪರ್ಧೆ ಮಾಡುವ ಸುಮಾರು 90ರಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಘೋಷಣೆ ಮಾಡಿದಂತಾಗಿದೆ. 2019ರಂತೆ ಈ ಬಾರಿಯೂ ಬಿಜೆಪಿ ಭಾರೀ ಪ್ರಮಾಣದಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದೆ. ಈಗಾಗಲೇ 303 ಹಾಲಿ ಸಂಸದರ ಪೈಕಿ 100 ಮಂದಿಗೆ ಖೊಕ್ ನೀಡಿದೆ. ಈ ಮೂಲಕ ಕ್ಷೇತ್ರದಲ್ಲಿರಬಹುದಾದ ಆಡಳಿತ ವಿರೋಧಿ ಅಲೆಗೆ ಮದ್ದರೆದಿದೆ. ಹಾಗೂ ಕೆಲಸ ಮಾಡದ ಸಂಸದರಿಗೆ ಜೊತೆಗೆ 75 ವರ್ಷ ಮೇಲ್ಪಟ್ಟ ಹಲವು ಮಂದಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ.

ಬಿಜೆಪಿ ಈ ಬಾರಿ ತನ್ನ ಮಿತ್ರಪಕ್ಷಗಳ ಜೊತೆಗೆ 400 ಕ್ಷೇತ್ರ ಗೆಲ್ಲುವ ಗುರಿ ಹಾಕಿಕೊಂಡಿದ್ದು, ಬಿಜೆಪಿಯೊಂದೇ 370 ಕ್ಷೇತ್ರಗಳನ್ನು ಏಕಾಂಗಿಯಾಗಿ ಗೆಲ್ಲಲು ಪ್ಲ್ಯಾನ್ ಮಾಡಿಕೊಂಡಿದೆ. ಹೀಗಾಗಿ ಆದಷ್ಟು ಬೇಗ ಅಭ್ಯರ್ಥಿಗಳ ಘೋಷಣೆ ಮಾಡುವ ಲೆಕ್ಕಾಚಾರವನ್ನು ಅನುಷ್ಠಾನ ಮಾಡಿ ಮುಗಿಸಿದೆ. ಈ ಮೂಲಕ ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಪ್ರಚಾರ ಮಾಡಲು ಕಾಲಾವಕಾಶ ಸಿಕ್ಕಂತಾಗಿದೆ. ಬಿಜೆಪಿ ಕಳೆದ ಬಾರಿ ಅಂದರೆ 2019ರಲ್ಲಿ ಶೇ.70ರಷ್ಟಿದ್ದ ಪ್ರಚಾರದ ಪ್ರಮಾಣವನ್ನು ಈ ಬಾರಿ ಶೇ .83ಕ್ಕೆ ಏರಿಸುವ ಗುರಿ ಇಟ್ಟುಕೊಂಡಿದೆ.

ಈ ಬಾರಿಯ ಟಿಕೆಟ್ ಹಂಚಿಕೆಯಲ್ಲಿ ಕೇಸರಿ ಪಡೆ ಹಲವು ಘಟಾನುಘಟಿಗಳಿಗೆ ಟಿಕೆಟ್ ತಪ್ಪಿಸಿದೆ. ಈ ಪೈಕಿ ಪ್ರಮುಖರೆಂದರೆ ಘಾಜಿಯಾಬಾದ್‌ನ ಜನರಲ್ ವಿ.ಕೆ ಸಿಂಗ್, ಬಕ್ಸರ್‌ನ ಅಶ್ವಿನಿ ಚೌಬೆ, ನವದೆಹಲಿಯ ಮೀನಾಕ್ಷಿ ಲೇಖಿ, ಕರ್ನಾಟಕದ ಸದಾನಂದಗೌಡ ಹಾಗೂ ಅನಂತ್ ಕುಮಾರ್ ಹೆಗಡೆಯವರಂತಹ ದೊಡ್ಡ ನಾಯಕರು, ಕೇಂದ್ರ ಮಂತ್ರಿಗಳು ಸೇರಿದ್ದಾರೆ. ಹಾಗೇ ವಿವಾದಾತ್ಮಕ ನಾಯಕರಾದ ಸಾಧ್ವಿ ಪ್ರಜ್ಞಾ ಠಾಕೂರ್, ರಮೇಶ್ ಬಿಧುರಿ ಮತ್ತು ಪ್ರವೇಶ್ ವರ್ಮಾ ಅವರನ್ನು ಕೈಬಿಟ್ಟಿದೆ.

ಈ ಬಾರಿ ಟಿಕೆಟ್ ದೊರೆಯದ ನಾಯಕರನ್ನು ಪ್ರಚಾರಕ್ಕೆ ತೊಡಗಿಸಿಕೊಂಡು ಪಕ್ಷದ ಗೆಲುವಿಗೆ ಕೈ ಜೋಡಿಸುವಂತೆ ಬಿಜೆಪಿ ಹೈಕಮಾಂಡ್ ಹಾಲಿ ಸಂಸದರಿಗೆ ಸೂಚನೆ ನೀಡಿದೆ. ತನ್ನ ಹಲವು ಹಳೆಯ ಮಿತ್ರರನ್ನು ಮೈತ್ರಿಕೂಟಕ್ಕೆ ಸೇರಿಸಿಕೊಂಡಿದ್ದು, ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಹಾಗೂ ಜನಸೇನೆ ಜೊತೆ ಮೈತ್ರಿ ಮಾಡಿಕೊಂಡಿದೆ. ಆಂಧ್ರಪ್ರದೇಶದಲ್ಲಿ ಬಿಜೆಪಿ 6 ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದೆ.

ಒಡಿಶಾದಲ್ಲಿ ಬಿಜೆಪಿ ಹಾಗೂ ಬಿಜೆಡಿ ಮೈತ್ರಿ ಮಾತುಕತೆ ಮುರಿದುಬಿದ್ದಿದ್ದು, ಬಿಜೆಪಿ ಎಲ್ಲಾ 21 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಪಂಜಾಬ್‌ನಲ್ಲೂ ಅಕಾಲಿದಳ ಹಾಗೂ ಬಿಜೆಪಿ ಮೈತ್ರಿ ಮುರಿದುಬಿದ್ದಿದ್ದು, ಎಲ್ಲಾ 13 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿ ಪಂಜಾಬ್ ಬಿಜೆಪಿ ರಾಜ್ಯಾಧ್ಯಕ್ಷ ಸುನಿಲ್ ಜಾಖರ್ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿರುವ ಬಿಜೆಪಿ 27 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಈ ಪೈಕಿ 23 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಇದುವರೆಗೂ ಭಾರತೀಯ ಜನತಾ ಪಕ್ಷ, 402 ಅಭ್ಯರ್ಥಿಗಳನ್ನು ಘೋಷಿಸಿದೆ. ಮೊದಲ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರ ಹೆಸರನ್ನ ಘೋಷಿಸಿತ್ತು. ಕಾಂಗ್ರೆಸ್ ಇದುವರೆಗೂ 193 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ: ಬಿಜೆಪಿ ಕಟ್ಟಿದವರೇ ಇಂದು ಮೂಲೆಗುಂಪು; ‘ಕಮಲ’ ನಾಯಕರ ಮೇಲೆ ಉಕ್ಕಿತು ಡಿಕೆಶಿ ಮಮತೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇಬ್ಬರೂ ನಾಯಕರ ವಿರುದ್ಧ ಸಾರ್ವಜನಿಕವಾಗಿಯೂ ಆಕ್ರೋಶ ವ್ಯಕ್ತವಾಗುತ್ತದೆ. ಹಾಗಾಗಿ, ಕಾಂಗ್ರೆಸ್‌ ಪಕ್ಷವು ಇಬ್ಬರ ಹೇಳಿಕೆಗಳಿಂದಲೂ ಅಂತರ ಕಾಪಾಡಿಕೊಳ್ಳುವ ಮೂಲಕ ಮುಜುಗರದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ.

VISTARANEWS.COM


on

Sam Pitroda
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಡಿದು, ಸ್ಥಳೀಯ ಪಕ್ಷದ ನಾಯಕನವರೆಗೆ ಭಾಷಣಗಳು, ಹೇಳಿಕೆಗಳು, ಆರೋಪ, ಟೀಕೆ, ವ್ಯಂಗ್ಯಗಳು ಮೊನಚಾಗಿವೆ. ಆದರೆ, ಕಾಂಗ್ರೆಸ್‌ನ ಕೆಲ ನಾಯಕರು ನೀಡುತ್ತಿರುವ ಹೇಳಿಕೆಗಳು ಆ ಪಕ್ಷಕ್ಕೇ ಮುಳುವಾಗುತ್ತಿವೆ. ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇದೇ ಕಾರಣಕ್ಕಾಗಿ, ಇಬ್ಬರೂ ನಾಯಕರ ಹೇಳಿಕೆಗಳಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

ಸ್ಯಾಮ್‌ ಪಿತ್ರೋಡಾ ಅವಾಂತರಗಳು

“ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಕಸಿದು, ಹಂಚಿಕೆ ಮಾಡುತ್ತದೆ. ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕುತ್ತದೆ” ಎಂಬುದಾಗಿ ನರೇಂದ್ರ ಮೋದಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸುವ ಭರದಲ್ಲಿ, ಸ್ಯಾಮ್‌ ಪಿತ್ರೋಡಾ ಅವರು ಅಮೆರಿಕದ ಉದಾಹರಣೆ ಕೊಟ್ಟರು. “ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಅಪ್ಪನ ಆಸ್ತಿಯಲ್ಲಿ ಶೇ.55ರಷ್ಟು ಆಸ್ತಿಯನ್ನು ಸರ್ಕಾರಕ್ಕೆ ಕೊಡಬೇಕು” ಎಂಬುದಾಗಿ ಹೇಳಿದ್ದು ವಿವಾದಕ್ಕೆ ಕಾರಣವಾಯಿತು.

“ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಒಬ್ಬನು 100 ಮಿಲಿಯನ್ USD ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಅವನು ಸತ್ತಾಗ ಕೇವಲ 45 ಪ್ರತಿಶತವನ್ನು ತನ್ನ ಮಕ್ಕಳಿಗೆ ವರ್ಗಾಯಿಸಬಹುದು. 55 ಪ್ರತಿಶತವನ್ನು ಸರ್ಕಾರವು ಹೊಂದುತ್ತದೆ. ಅದು ಆಸಕ್ತಿದಾಯಕ ಕಾನೂನು. ನಿಮ್ಮ ಪೀಳಿಗೆಯಲ್ಲಿ ನೀವು ಸಂಪತ್ತನ್ನು ಸಂಪಾದಿಸಿದ್ದೀರಿ. ಮತ್ತು ನೀವು ಈಗ ಹೋಗುವಾಗ, ನಿಮ್ಮ ಸಂಪತ್ತನ್ನು ಸಾರ್ವಜನಿಕರಿಗೆ ಬಿಡಬೇಕು. ಎಲ್ಲವನ್ನೂ ಅಲ್ಲ, ಅದರಲ್ಲಿ ಅರ್ಧದಷ್ಟು, ಇದು ನ್ಯಾಯೋಚಿತವಾಗಿದೆ” ಎಂದು ಪಿತ್ರೋಡಾ ಹೇಳಿದ್ದರು. ಇನ್ನು, ಅವರು ದಕ್ಷಿಣ ಭಾರತೀಯರು ಆಫ್ರಿಕಾದವರಂತೆ ಇದ್ದಾರೆ ಎಂದು ವರ್ಣ ಭೇದದ ಹೇಳಿಕೆಗಳಿಂದಾಗಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ

ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುವ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರೀಗ ಪಾಕಿಸ್ತಾನದ ಪರವಾಗಿ ಮಾತನಾಡಿದ್ದಾರೆ. ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದು ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ, ಮಣಿಶಂಕರ್‌ ಅಯ್ಯರ್‌ ಅವರ ಹೇಳಿಕೆಯಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದಾರೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading

ದೇಶ

Kantilal Bhuria: ಒಬ್ಬನಿಗೆ ಇಬ್ಬರು ಹೆಂಡತಿಯರು ಇದ್ದರೆ ಕಾಂಗ್ರೆಸ್‌ನಿಂದ 2 ಲಕ್ಷ ರೂ. ಎಂದ ಕೈ ನಾಯಕ; ಬಿಜೆಪಿ ಟೀಕೆ

Kantilal Bhuria: ಮಹಾಲಕ್ಷ್ಮೀ ಯೋಜನೆ ಅಡಿಯಲ್ಲಿ ಒಬ್ಬ ಮಹಿಳೆಯು ವರ್ಷಕ್ಕೆ 1 ಲಕ್ಷ ರೂ. ಪಡೆಯಲಿದ್ದಾರೆ. ನೇರವಾಗಿ ಅವರ ಖಾತೆಗೆ ಹಣ ಜಮೆಯಾಗಲಿದೆ. ಇನ್ನು, ಒಬ್ಬ ವ್ಯಕ್ತಿಗೆ ಇಬ್ಬರು ಹೆಂಡತಿಯರು ಇದ್ದರೆ, ಅವರಿಗೆ ಎರಡು ಲಕ್ಷ ರೂ. ಸಿಗಲಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಕಾಂತಿಲಾಲ್‌ ಭುರಿಯಾ ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Kantilal Bhuria
Koo

ಭೋಪಾಲ್‌: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ಹಣಕಾಸು ನೆರವು ಸೇರಿ ಪಂಚ ನ್ಯಾಯಗಳ ತತ್ವದಲ್ಲಿ ಕಾಂಗ್ರೆಸ್‌ ಪ್ರಾಣಾಳಿಕೆ ಬಿಡುಗಡೆ ಮಾಡಿದೆ. ಒಂದೊಂದು ನ್ಯಾಯ ತತ್ವವೂ ಐದೈದು ಭರವಸೆ ಹೊಂದಿದೆ. ಅಲ್ಲಿಗೆ ಕಾಂಗ್ರೆಸ್‌ 25 ಭರವಸೆಗಳನ್ನು ನೀಡಿದಂತಾಗಿದೆ. ಇನ್ನು, ಇದೇ ಪ್ರಣಾಳಿಕೆಯ ಭರವಸೆಯನ್ನು ಇಟ್ಟುಕೊಂಡು ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಕಾಂತಿಲಾಲ್‌ ಭುರಿಯಾ (Kantilal Bhuria) ನೀಡಿರುವ ಹೇಳಿಕೆಯು ಟೀಕೆಗೆ ಕಾರಣವಾಗಿದೆ. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಒಬ್ಬ ವ್ಯಕ್ತಿಗೆ ಇಬ್ಬರು ಹೆಂಡತಿಯರು ಇದ್ದರೆ, ಆ ಕುಟುಂಬಕ್ಕೆ 2 ಲಕ್ಷ ರೂ. ನೀಡಲಾಗುವುದು” ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಕಾಂತಿಲಾಲ್‌ ಭುರಿಯಾ, “ದೇಶದ ಮಹಿಳೆಯರಿಗಾಗಿ ಕಾಂಗ್ರೆಸ್‌ ಭರ್ಜರಿ ಘೋಷಣೆ ಮಾಡಿದೆ. ಮಹಾಲಕ್ಷ್ಮೀ ಯೋಜನೆ ಅಡಿಯಲ್ಲಿ ಒಬ್ಬ ಮಹಿಳೆಯು ವರ್ಷಕ್ಕೆ 1 ಲಕ್ಷ ರೂ. ಪಡೆಯಲಿದ್ದಾರೆ. ನೇರವಾಗಿ ಅವರ ಖಾತೆಗೆ ಹಣ ಜಮೆಯಾಗಲಿದೆ. ಇನ್ನು, ಒಬ್ಬ ವ್ಯಕ್ತಿಗೆ ಇಬ್ಬರು ಹೆಂಡತಿಯರು ಇದ್ದರೆ, ಅವರಿಗೆ ಎರಡು ಲಕ್ಷ ರೂ. ಸಿಗಲಿದೆ” ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿಯು ತಿರುಗೇಟು ನೀಡಿದೆ.

ಕಾಂತಿಲಾಲ್‌ ಭುರಿಯಾ ಹೇಳಿಕೆಗೆ ಬಿಜೆಪಿ ವಕ್ತಾರ ನರೇಂದ್ರ ಸಲುಜಾ ತಿರುಗೇಟು ನೀಡಿದ್ದಾರೆ. “ಇಂತಹ ಹೇಳಿಕೆ ನೀಡಿರುವ ಕಾಂತಿಲಾಲ್‌ ಭುರಿಯಾ ವಿರುದ್ಧ ಚುನಾವಣೆ ಆಯೋಗವು ಕ್ರಮ ತೆಗೆದುಕೊಳ್ಳಬೇಕು. ದೇಶದ ನಾಯಕ, ಎರಡೆರಡು ಮದುವೆ, ಬೆತ್ತಲೆ ಸೇರಿ ಹಲವು ವಿಷಯಗಳ ಕುರಿತು ಇವರು ನೀಡಿದ ಹೇಳಿಕೆಗಳು ಆಕ್ಷೇಪಾರ್ಹವಾಗಿವೆ” ಎಂದು ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕಾಂತಿಲಾಲ್‌ ಭುರಿಯಾ ಅವರು ಮಧ್ಯಪ್ರದೇಶದ ರತ್ಲಾಮ್‌ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದಾರೆ. ಇವರು ಮಧ್ಯಪ್ರದೇಶ ಅರಣ್ಯ ಸಚಿವ ನಾಗರ್‌ ಸಿಂಗ್‌ ಚೌಹಾಣ್‌ ಅವರ ಪತ್ನಿ, ಬಿಜೆಪಿಯ ಅನಿತಾ ಚೌಹಾಣ್‌ ಅವರನ್ನು ಎದುರಿಸುತ್ತಿದ್ದಾರೆ. ಇವರು ಭಾಷಣ ಮಾಡುವ ವೇಳೆ ವೇದಿಕೆ ಮೇಲೆ ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್‌ ಸಿಂಗ್‌, ರಾಜ್ಯ ಘಟಕದ ಅಧ್ಯಕ್ಷ ಜೀತು ಪಟ್ವಾರಿ ಸೇರಿ ಹಲವರು ಇದ್ದರು.

ಪಂಚ ನ್ಯಾಯ ತತ್ವದಲ್ಲಿ ಯುವಕರಿಗಾಗಿ ಯುವ ನ್ಯಾಯ, ಮಹಿಳೆಯರಿಗೆ ನಾರಿ ನ್ಯಾಯ, ರೈತರಿಗಾಗಿ ಕಿಸಾನ್‌ ನ್ಯಾಯ, ಕಾರ್ಮಿಕರಿಗಾಗಿ ಶ್ರಮಿಕ್‌ ನ್ಯಾಯ ಹಾಗೂ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯ ನೀಡುವ ಹಿಸ್ಸೇದಾರಿ ನ್ಯಾಯ ಎಂಬ ಐದು ಘೋಷಣೆಗಳನ್ನು ಕಾಂಗ್ರೆಸ್‌ ಮಾಡಿದೆ.

ಇದನ್ನೂ ಓದಿ: Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

Continue Reading

ದೇಶ

Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Rahul Gandhi: ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಸ್ಪರ್ಧಿಸುತ್ತಿರುವ ಕನೌಜ್‌ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ರಾಹುಲ್‌ ಗಾಂಧಿ, ಒಬ್ಬ ವ್ಯಕ್ತಿ ಭಯಗೊಂಡಾಗ ಮಾತ್ರ ತನ್ನ ರಕ್ಷಣೆಗೆ ಇನ್ನೊಬ್ಬರ ಹೆಸರು ಹೇಳುತ್ತಾನೆ. ಅದೇ ರೀತಿ ಇಂಡಿಯಾ ಒಕ್ಕೂಟದಿಂದಾಗಿ ತಮ್ಮ ಸೋಲು ಖಚಿತ ಎಂದು ಅನಿಸಿದಾಗ ಪ್ರಧಾನಿ ಮೋದಿ ತನ್ನ ಇಬ್ಬರು ಸ್ನೇಹಿತರ ಹೆಸರನ್ನು ಎತ್ತಿದ್ದಾರೆ. ಕಾಪಾಡಿ.. ಕಾಪಾಡಿ. ಇಂಡಿಯಾ ಒಕ್ಕೂಟ ನನ್ನನ್ನು ಸೋಲಿಸುತ್ತಾರೆ ಅಂತಾ ಅದಾನಿ ಅಂಬಾನಿಯತ್ತ ಓಡುತ್ತಾರೆ.

VISTARANEWS.COM


on

Rahul gandhi
Koo

ಉತ್ತರಪ್ರದೇಶ: ಲೋಕಸಭಾ ಚುನಾವಣೆ(Lok Sabha Election 2024)ಗಾಗಿ ಕಾಂಗ್ರೆಸ್‌ಗೆ ಅಂಬಾನಿ ಹಾಗೂ ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ ಸಂದಾಯವಾಗಿದೆ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi)ಗೆ ಇದೀಗ ರಾಹುಲ್‌ ಗಾಂಧಿ(Rahul Gandhi) ತಿರುಗೇಟು ಕೊಟ್ಟಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂಬಾನಿ ಅದಾನಿಯ ಹೆದರಿ ಎಲ್ಲೂ ಪ್ರಸ್ತಾಪಿಸಿಯೇ ಇರಲಿಲ್ಲ. ಇದೀಗ ತಾವು ಸೋಲುತ್ತೇವೆ ಎಂಬುದು ಖಚಿತವಾಗಿರುವುದರಿಂದ ಈ ಉದ್ಯಮಿಗಳ ಹೆಸರು ಎತ್ತಿದ್ದಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ

ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಸ್ಪರ್ಧಿಸುತ್ತಿರುವ ಕನೌಜ್‌ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಒಬ್ಬ ವ್ಯಕ್ತಿ ಭಯಗೊಂಡಾಗ ಮಾತ್ರ ತನ್ನ ರಕ್ಷಣೆಗೆ ಇನ್ನೊಬ್ಬರ ಹೆಸರು ಹೇಳುತ್ತಾನೆ. ಅದೇ ರೀತಿ ಇಂಡಿಯಾ ಒಕ್ಕೂಟದಿಂದಾಗಿ ತಮ್ಮ ಸೋಲು ಖಚಿತ ಎಂದು ಅನಿಸಿದಾಗ ಪ್ರಧಾನಿ ಮೋದಿ ತನ್ನ ಇಬ್ಬರು ಸ್ನೇಹಿತರ ಹೆಸರನ್ನು ಎತ್ತಿದ್ದಾರೆ. ಕಾಪಾಡಿ.. ಕಾಪಾಡಿ. ಇಂಡಿಯಾ ಒಕ್ಕೂಟ ನನ್ನನ್ನು ಸೋಲಿಸುತ್ತಾರೆ ಅಂತಾ ಅದಾನಿ ಅಂಬಾನಿಯತ್ತ ಓಡುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೇ ಗೊತ್ತಿದೆ ಅದಾನಿ-ಅಂಬಾನಿಯವರು ಟೆಂಪೋಗಟ್ಟಲೇ ಹಣ ಕಳಿಸುತ್ತಾ ಅಂತಾ. ಅವರಿಗೆ ವೈಯಕ್ತಿಕವಾಗಿ ಇದರ ಅನುಭವ ಇದೆ. ಪ್ರಧಾನಿ ಮೋದಿ ಕೇವಲ 22ಉದ್ಯಮಿಗಳಿಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಬಿಜೆಪಿ, ನರೇಂದ್ರ ಮೋದಿ ಮತ್ತು ಅಮಿತ್‌ ಶಾ ನಿಮ್ಮನ್ನು ಈ ವಿಚಾರದಿಂದ ಬೇರೆಡೆ ಸೆಳೆಯಲು ಯತ್ನಿಸುತ್ತಾರೆ. ನೀವು ಅದರ ಕಡೆ ವಿಚಲಿತರಾಗಬೇಡಿ ಎಂದು ರಾಹುಲ್‌ ಗಾಂಧಿ ಜನರಲ್ಲಿ ಮನವಿ ಮಾಡಿದರು.

ಮೋದಿ ಹೇಳಿದ್ದೇನು?

ತೆಲಂಗಾಣದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ರಾಹುಲ್‌ ಗಾಂಧಿ ಅವರಿಗೆ ತಿರುಗೇಟು ನೀಡಿದರು. “ಕಾಂಗ್ರೆಸ್‌ ಮಹಾರಾಜ (ರಾಹುಲ್‌ ಗಾಂಧಿ) ಈಗ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರ ಬಗ್ಗೆ ಮಾತನಾಡುತ್ತಿಲ್ಲ. ಏಕೆಂದರೆ, ಚುನಾವಣೆಗಾಗಿ ಉದ್ಯಮಿಗಳಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ. ಇದೇ ಕಾರಣಕ್ಕಾಗಿ ರಾಹುಲ್‌ ಗಾಂಧಿ ಅವರು ಅಂಬಾನಿ, ಅದಾನಿ ಬಗ್ಗೆ ಈಗ ಮಾತನಾಡುತ್ತಿಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ:Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

ಕಳೆದ ಐದು ವರ್ಷಗಳಿಂದ ರಾಹುಲ್‌ ಗಾಂಧಿ ಅವರು ನಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರು. ರಾಫೆಲ್‌ ವಿಚಾರವಾಗಿ ಮಾಡಿದ ಆರೋಪವು ನೆಲಕಚ್ಚಿತು. ಅದಾದ ಬಳಿಕ ಐವರು ಉದ್ಯಮಿಗಳು, ಐವರು ಉದ್ಯಮಿಗಳು ಎಂದು ಪರೋಕ್ಷ ಆರೋಪ ಶುರುವಿಟ್ಟುಕೊಂಡರು. ಅದಾದ ಬಳಿಕ ಅಂಬಾನಿ-ಅದಾನಿ ಎಂದು ನೇರವಾಗಿ ಆರೋಪ ಮಾಡಿದರು. ಆದರೆ, ಚುನಾವಣೆ ಘೋಷಣೆಯಾಗುತ್ತಲೇ ರಾಹುಲ್‌ ಗಾಂಧಿ ಅವರು ಅಂಬಾನಿ ಹಾಗೂ ಅದಾನಿ ಹೆಸರೇ ಎತ್ತುತ್ತಿಲ್ಲ. ರಾಹುಲ್‌ ಗಾಂಧಿ ಏಕೆ ಈಗ ರಾತ್ರೋರಾತ್ರಿ ಬದಲಾದರು? ಏಕೆ ಅವರು ಅಂಬಾನಿ-ಅದಾನಿ ಹೆಸರು ಹೇಳುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

Continue Reading

ದೇಶ

ಹೈದರಾಬಾದ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

ಹಿಂದು ಧರ್ಮದ ಕುರಿತು ಪ್ರಖರವಾಗಿ ಮಾತನಾಡುವ, ಹೈದರಾಬಾದ್‌ನಲ್ಲಿ ಎಐಎಂಐಎಂ ಪಕ್ಷದ ವೈಫಲ್ಯಗಳನ್ನು ತೋರಿಸುವ ಛಾತಿ ಹೊಂದಿರುವ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಹಿಂದು ಫೈರ್‌ ಬ್ರ್ಯಾಂಡ್‌ ಎನಿಸಿದ್ದಾರೆ. ಇವರಿಗೆ ಅಚ್ಚರಿಯ ರೀತಿಯಲ್ಲಿ ಬಿಜೆಪಿಯು ಹೈದರಾಬಾದ್‌ ಲೋಕಸಭೆ ಕ್ಷೇತ್ರದಿಂದ ಟಿಕೆಟ್‌ ನೀಡಿದೆ. ಹಾಗಾಗಿ, ಈ ಬಾರಿ ಹೈದರಾಬಾದ್‌ನಲ್ಲಿ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಅಸಾದುದ್ದೀನ್‌ ಓವೈಸಿ ಅವರಿಗೆ ತೀವ್ರ ಪೈಪೋಟಿ ನೀಡುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

VISTARANEWS.COM


on

Madhavi Latha
Koo

ಹೈದರಾಬಾದ್:‌ ತೆಲಂಗಾಣದ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಚುನಾವಣೆ (Lok Sabha Election) ರಣಕಣವು ಈ ಬಾರಿ ಭಾರಿ ಕುತೂಹಲದಿಂದ ಕೂಡಿದೆ. ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಓವೈಸಿ (Asaduddin Owaisi) ವಿರುದ್ಧ ಬಿಜೆಪಿಯಿಂದ ಹಿಂದು ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ (Madhavi Latha) ಕಣಕ್ಕಿಳಿದಿದ್ದಾರೆ. ಪ್ರಖರ ಹಿಂದುತ್ವವಾದಿಯೂ ಆಗಿರುವ ಮಾಧವಿ ಲತಾ ಅವರು ಈಗ ಮುಸ್ಲಿಮರ ಮತಗಳನ್ನೂ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ಹೈದರಾಬಾದ್‌ನಲ್ಲಿರುವ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ಮುಸ್ಲಿಂ ಗಲ್ಲಿಗಲ್ಲಿಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಹೌದು, ಹೈದರಾಬಾದ್ ಲೋಕಸಭೆ ಕ್ಷೇತ್ರದಲ್ಲಿ ಶೇ.52ರಷ್ಟು ಮುಸ್ಲಿಮರ ಮತಗಳಿದ್ದರೆ, ಶೇ.48ರಷ್ಟು ಹಿಂದು ಮತದಾರರಿದ್ದಾರೆ. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಅಸಾದುದ್ದೀನ್‌ ಓವೈಸಿಗೆ ಮತ ನೀಡಲಿದ್ದಾರೆ. ಮುಸ್ಲಿಮರ ಮತಗಳಿಲ್ಲದೆ ಗೆಲುವು ಸಾಧಿಸುವುದು ಕಷ್ಟಸಾಧ್ಯ ಎಂಬುದನ್ನು ಅರಿತ ಮಾಧವಿ ಲತಾ ಅವರು ಹೈದರಾಬಾದ್‌ನ ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ನಡೆಸುವ ಮೂಲಕ ಅವರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದಾರೆ. ಮೇ 13ರಂದು ಹೈದರಾಬಾದ್‌ನಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಅವರು ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ.

221 ಕೋಟಿ ರೂ. ಆಸ್ತಿಯ ಒಡತಿ

ಕೊಂಪೆಲ್ಲಾ ಮಾಧವಿ ಲತಾ ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 221.37 ಕೋಟಿ ರೂ. ಎಂಬುದಾಗಿ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ಮಾಧವಿ ಲತಾ ಮತ್ತು ಅವರ ಪತಿ ಕೊಂಪೆಲ್ಲಾ ವಿಶ್ವನಾಥ್ ಇಬ್ಬರೂ ವ್ಯಾಪಾರಿಗಳು. ಅವರ ಮೂವರು ಅವಲಂಬಿತ ಮಕ್ಕಳು, 165.46 ಕೋಟಿ ರೂಪಾಯಿಗಳ ಚರ ಆಸ್ತಿಯನ್ನು ಹೊಂದಿದ್ದಾರೆ ಮತ್ತು ಮಾಧವಿ ಲತಾ ದಂಪತಿ 55.91 ಕೋಟಿ ರೂಪಾಯಿಗಳ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ. ತೆಲಂಗಾಣದ ಅವಳಿ ನಗರವಾದ ಸಿಕಂದರಾಬಾದ್‌ನಲ್ಲಿ ನೆಲೆಸಿರುವ 49 ವರ್ಷದ ಮಾಧವಿ ಲತಾ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡರು. ಮೊದಲ ಬಾರಿಗೆ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ.

ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಾಧವಿ ಲತಾ ಅವರು ಬಹುಮುಖ ಪ್ರತಿಭೆ ಎನಿಸಿದ್ದಾರೆ. ವಿರಿಂಚಿ ಆಸ್ಪತ್ರೆಯ ಅಧ್ಯಕ್ಷೆಯಾಗಿರುವ ಇವರು ಉದ್ಯಮದ ಜತೆಗೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಬೋಧನೆ, ಆರೋಗ್ಯ ಸೇವೆ ಹಾಗೂ ಆಹಾರ ವಿತರಣೆಯ ಮೂಲಕ ಇವರು ಜನಮಾನಸದಲ್ಲಿ ಜಾಗ ಪಡೆದಿದ್ದಾರೆ. ಭರತನಾಟ್ಯ ಪ್ರವೀಣೆಯೂ ಆಗಿರುವ ಇವರು ಹಿಂದು ಧರ್ಮದ ಕುರಿತು ಮಾಡುವ ಭಾಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ಇವರಿಗೆ ಹೆಚ್ಚು ಅಭಿಮಾನಿಗಳನ್ನು ನೀಡಿದೆ.

ತ್ರಿವಳಿ ತಲಾಕ್‌ ವಿರುದ್ಧ ಹೋರಾಟ

ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿದ್ದ ತ್ರಿವಳಿ ತಲಾಕ್‌ ವಿರುದ್ಧ ಮಾಧವಿ ಲತಾ ಅವರು ಹೋರಾಟ ನಡೆಸಿದ್ದರು. ಅದರಲ್ಲೂ, ಕೇಂದ್ರ ಸರ್ಕಾರವು ತ್ರಿವಳಿ ತಲಾಕ್‌ಅನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ ಬಳಿಕ ಅಸಾದುದ್ದೀನ್‌ ಓವೈಸಿ ಅವರು ಇದನ್ನು ಅಸಾಂವಿಧಾನಿಕ ಎಂದು ಕರೆದಿದ್ದರು. ಆಗ, ತ್ರಿವಳಿ ತಲಾಕ್‌ ಕುರಿತು ಜನರಿಗೆ ತಿಳಿವಳಿಕೆ, ಜಾಗೃತಿ ಮೂಡಿಸುವ ಕುರಿತು ಮಾಧವಿ ಲತಾ ಅವರು ಅಭಿಯಾನ ಆರಂಭಿಸಿದ್ದರು. ಆಗಲೇ ಅಸಾದುದ್ದೀನ್‌ ಓವೈಸಿ ಅವರಿಗೆ ಮಾಧವಿ ಲತಾ ಸೆಡ್ಡು ಹೊಡೆದಿದ್ದರು.

ಇದನ್ನೂ ಓದಿ: Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Continue Reading
Advertisement
888 rupees postpaid plan with 15 OTT applications for JioFiber AirFiber customers
ತಂತ್ರಜ್ಞಾನ29 mins ago

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Prajwal Revanna case SIT to issue Red Corner Notice against Prajwal
ಕ್ರೈಂ35 mins ago

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ; ಯಾವ ದೇಶದಲ್ಲಿದ್ದರೂ ಅರೆಸ್ಟ್‌ ಮಾಡಲು ಸಿದ್ಧತೆ?

IPL 2024
ಕ್ರೀಡೆ47 mins ago

IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

US
ಪ್ರಮುಖ ಸುದ್ದಿ52 mins ago

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

Prajwal Revanna case Three FIRs against Prajwal Wanted list in all three
ಕ್ರೈಂ57 mins ago

Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

Prajwal Revanna Case
ಪ್ರಮುಖ ಸುದ್ದಿ59 mins ago

Prajwal Revanna Case: ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

Prajwal Revanna case Another rape case filed against Prajwal
ಕ್ರೈಂ1 hour ago

Prajwal Revanna case: ಪ್ರಜ್ವಲ್‌ ಮೇಲೆ ಮತ್ತೊಂದು ಅತ್ಯಾಚಾರ ಕೇಸ್‌; ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

IPL 2024
ಕ್ರೀಡೆ2 hours ago

IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Dr C N Manjunath
ಕರ್ನಾಟಕ2 hours ago

Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

Murder Case
ಕರ್ನಾಟಕ2 hours ago

Murder Case: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ; ಮನೆ ಬಾಡಿಗೆ ಕೇಳುವ ನೆಪದಲ್ಲಿ ಕೃತ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ8 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ10 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ11 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ18 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 day ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌