Lok Sabha Election 2024: ಕಾಂಗ್ರೆಸ್‌ಗೆ ಚಿಕ್ಕಬಳ್ಳಾಪುರ ಟೆನ್ಶನ್‌; ಟಿಕೆಟ್‌ ಸಿಗದಿದ್ದರೆ ಪಕ್ಷ ತೊರೆಯುವ ಎಚ್ಚರಿಕೆ ಕೊಟ್ಟ ಶಿವಶಂಕರ ರೆಡ್ಡಿ! - Vistara News

Lok Sabha Election 2024

Lok Sabha Election 2024: ಕಾಂಗ್ರೆಸ್‌ಗೆ ಚಿಕ್ಕಬಳ್ಳಾಪುರ ಟೆನ್ಶನ್‌; ಟಿಕೆಟ್‌ ಸಿಗದಿದ್ದರೆ ಪಕ್ಷ ತೊರೆಯುವ ಎಚ್ಚರಿಕೆ ಕೊಟ್ಟ ಶಿವಶಂಕರ ರೆಡ್ಡಿ!

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಎಂ.ಆರ್.‌ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಅವರಿಗೆ ಬಹುತೇಕ ಟಿಕೆಟ್‌ ಫಿಕ್ಸ್‌ ಎನ್ನಲಾಗಿದೆ. ಇದು ಈ ಕ್ಷೇತ್ರದ ಪ್ರಮುಖ ಟಿಕೆಟ್‌ ಆಕಾಂಕ್ಷಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಶಿವಶಂಕರ ರೆಡ್ಡಿ ಅವರನ್ನು ಕೆರಳಿಸಿದೆ. ಈ ಕಾರಣದಿಂದ ಟಿಕೆಟ್‌ಗೆ ಲಾಬಿ ಮಾಡಲಾಗುತ್ತಿದೆ. ಆದರೆ, ಶಿವಶಂಕರ ರೆಡ್ಡಿ ಅವರು ರಕ್ಷಾ ರಾಮಯ್ಯ ಮೇಲೆ ಕಿಡಿಕಾರಿದ್ದು, ತಮಗೆ ಈ ಕ್ಷೇತ್ರದ ಟಿಕೆಟ್‌ ಸಿಗದೇ ಹೋದಲ್ಲಿ ಪಕ್ಷವನ್ನೇ ತೊರೆಯುತ್ತೇನೆ ಎಂದು ಬಹಿರಂಗ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಭೆ ನಡೆಸಲಿದ್ದು, ಯಾವ ರೀತಿ ಮನವೊಲಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

Chikkaballapura lok sabha constituency congress ticket aspirants Sivasankar Reddy Veerappa Moily and Raksha Ramayya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಬಣ ರಾಜಕೀಯ ತಲೆನೋವು ತಂದಿಟ್ಟಿದೆ. ಸದ್ಯ ಕೋಲಾರ ಲೋಕಸಭಾ ಕ್ಷೇತ್ರದ (Kolar Lok Sabha constituency) ಸಮಸ್ಯೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಬಗೆಹರಿಸಲಾಗಿದೆ. ಈಗ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದತ್ತ ಸಮಸ್ಯೆಗೆ ದೃಷ್ಟಿ ಹಾಯಿಸಿದ್ದಾರೆ. ಈ ನಡುವೆ ಈ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಎನ್.ಎಚ್.‌ ಶಿವಶಂಕರರೆಡ್ಡಿ ಖಡಕ್‌ ಎಚ್ಚರಿಕೆಯನ್ನು ನೀಡಿದ್ದು, ತಮಗೆ ಟಿಕೆಟ್‌ ಕೊಡದಿದ್ದರೆ ಪಕ್ಷವನ್ನೇ ತೊರೆಯುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ, ಪೈಪೋಟಿಯಲ್ಲಿರುವ ರಕ್ಷಾ ರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಚಿಕ್ಕಬಳ್ಳಾಪುರ ಸಮಸ್ಯೆ ಬಗ್ಗೆ ಅಲ್ಲಿನ ಜನಪ್ರತಿನಿಧಿಗಳು, ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಆದರೆ, ಮಾಜಿ ಸಚಿವ ಎಂ.ಆರ್.‌ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಅವರಿಗೆ ಬಹುತೇಕ ಟಿಕೆಟ್‌ ಫಿಕ್ಸ್‌ ಎನ್ನಲಾಗಿದೆ. ಇದು ಈ ಕ್ಷೇತ್ರದ ಪ್ರಮುಖ ಟಿಕೆಟ್‌ ಆಕಾಂಕ್ಷಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಶಿವಶಂಕರ ರೆಡ್ಡಿ ಅವರನ್ನು ಕೆರಳಿಸಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್‌ಗಾಗಿ ಭಾರಿ ಲಾಭಿ

ಕಾಂಗ್ರೆಸ್‌ ಪಕ್ಷಕ್ಕೆ ಕೋಲಾರದೊಂದಿಗೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ಕೂಡ ಒತ್ತಡ ಸೃಷ್ಟಿಸಿದೆ. ರಕ್ಷಾ ರಾಮಯ್ಯ ಮತ್ತು ಶಿವಶಂಕರ ರೆಡ್ಡಿ ನಡುವೆ ಟಿಕೆಟ್‌ಗಾಗಿ ಕಾದಾಟವಿದೆ. ಈ ನಡುವೆ ಮಾಜಿ ಸಿಎಂ ವೀರಪ್ಪ ಮೊಯಿಲಿ ಕೂಡ ಆಕಾಂಕ್ಷಿಯಾಗಿದ್ದಾರೆ. ಈ ಕ್ಷೇತ್ರದ ಮಾಜಿ ಸಂಸದರೂ ಆದ ಮೊಯಿಲಿ ತಮಗೇ ಟಿಕೆಟ್‌ ನೀಡುವಂತೆ ದಿಲ್ಲಿಯಲ್ಲಿ ಸೋನಿಯಾ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

ರಕ್ಷಾ ರಾಮಯ್ಯ ಅವರಿಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಹೀಗಾಗಿ ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಟಿಕೆಟ್ ಕೊಡಬೇಡಿ. ಜಿಲ್ಲಾ ಸಮಿತಿ ಕಳುಹಿಸಿದ ವೀರಪ್ಪ ಮೊಯ್ಲಿ ಇಲ್ಲವೇ, ಶಿವಶಂಕರರೆಡ್ಡಿ ಹೆಸರು ಅಂತಿಮ ಮಾಡುವಂತೆ ಸ್ಥಳೀಯ ನಾಯಕರು ಒತ್ತಾಯಿಸಿದ್ದಾರೆ.

ಆದರೆ, ಹೈಕಮಾಂಡ್‌ ಈಗಾಗಲೇ ರಕ್ಷಾ ರಾಮಯ್ಯ ಹೆಸರು ಅಂತಿಮ ಮಾಡಿದೆ. ಅಧಿಕೃತ ಘೋಷಣೆ ಒಂದೇ ಬಾಕಿಯಾಗಿದೆ. ಆದರೆ ಇದನ್ನು ವಿರೋಧಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಪತ್ರ ಬರೆದಿದ್ದು, ನಿಮ್ಮ ನಿರ್ಧಾರ ಪುನರ್ ಪರಿಶೀಲನೆ ಮಾಡಿ ಎಂದಿದ್ದಾರೆ. ತಮ್ಮ ಮನವಿಗೆ ಮಣಿಯದಿದ್ದರೆ ಕೋಲಾರದ ಮಾದರಿಯಲ್ಲಿ ಸಾಮೂಹಿಕ ರಾಜೀನಾಮೆ ನೀಡಬೇಕಾಗುತ್ತದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಪಕ್ಷ ತೊರೆಯುವ ಎಚ್ಚರಿಕೆ ನೀಡಿದ ಶಿವಶಂಕರ ರೆಡ್ಡಿ

ವಿಸ್ತಾರ ನ್ಯೂಸ್‌ಗೆ ಶಿವಶಂಕರರೆಡ್ಡಿ ಪ್ರತಿಕ್ರಿಯೆ ನೀಡಿ, ನಾನು ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಜಿಲ್ಲಾ ಸಮಿತಿ ಶಿಫಾರಸು ಮಾಡುವಾಗ ನನ್ನ ಹೆಸರು ಕಳಿಸಿದ್ದಾರೆ. ನನ್ನ ಮತ್ತು ವೀರಪ್ಪ ಮೊಯ್ಲಿ ಹೆಸರನ್ನು ಶಿಫಾರಸು ಮಾಡಿದ್ದರು. ವೀರಪ್ಪ ಮೊಯ್ಲಿ ಅವರು ವಯಸ್ಸು ಆಗಿದೆ ಅಂತ ಹಿಂದೆ ಸರಿದಿದ್ದಾರೆ. ಹೀಗಾಗಿ ನಾನು ಆಕಾಂಕ್ಷಿ ಅಂತ ಹೇಳಿದ್ದೇನೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೂ ಹೇಳಿದ್ದೇನೆ. ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯದವರಿಗೆ ಟಿಕೆಟ್‌ ನೀಡಿದ್ದಾರೆ. ಕಾಂಗ್ರೆಸ್‌ನಲ್ಲೂ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್ ಕೊಡಬೇಕು. ಇಲ್ಲದಿದ್ದರೆ ಬಿಜೆಪಿಗೆ ಲಾಭವಾಗುತ್ತದೆ. ಎರಡು ಬಿರಿಯಾನಿ ಹಂಚಿದರೆ ಸಂಘಟನೆ ಆಗಲ್ಲ ಎಂದು ರಕ್ಷಾ ರಾಮಯ್ಯ ಅವರಿಗೆ ಪರೋಕ್ಷ ಟಾಂಗ್‌ ನೀಡಿದ್ದಾರೆ.

ನಮ್ಮನ್ನು ಪಕ್ಷ ಪರಿಗಣಿಸಿದರೆ ನಾವು ಪಕ್ಷದಲ್ಲಿ ಇರುತ್ತೇವೆ. ಹಣಬಲ ಮಾತ್ರ ಅಂದರೆ ನಮ್ಮ ಜನಬಲದ ಶಕ್ತಿ ತೋರಿಸಬೇಕಾಗುತ್ತದೆ. ಒಕ್ಕಲಿಗ ಸಮುದಾಯಕ್ಕೆ ಬಿಟ್ಟು ಬೇರೆ ಸಮುದಾಯಕ್ಕೆ ಟಿಕೆಟ್ ಕೊಟ್ಟರೆ ಗೆಲ್ಲೋದಿಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾನು ಪಕ್ಷದಲ್ಲಿ ಇರಲ್ಲ ಎಂದು ಶಿವಶಂಕರ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Narendra Modi: ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ ಎಂದು ಅರವಿಂದ್‌ ಕೇಜ್ರಿವಾಲ್‌ ಅವರು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಇದನ್ನೇ ಹೇಳಿದ್ದಾರೆ.

VISTARANEWS.COM


on

Narendra Modi
Koo

ಹೈದರಾಬಾದ್: ಅಬಕಾರಿ ನೀತಿ ಜಾರಿ ಹಗರಣದಲ್ಲಿ ಜೈಲುಪಾಲಾಗಿ, ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿ ಹೊರಬರುತ್ತಲೇ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ.

“ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನಾನೊಂದು ವಿಷಯ ತಿಳಿಸುತ್ತೇನೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಾರೆ ಹಾಗೂ ಮೂರನೇ ಅವಧಿಯನ್ನು ಅವರು ಪೂರ್ಣಗೊಳಿಸುತ್ತಾರೆ. ಇಂಡಿಯಾ ಒಕ್ಕೂಟವೂ ಅಷ್ಟೇ, ಮೋದಿ ಅವರಿಗೆ 75 ವರ್ಷ ತುಂಬುತ್ತದೆ ಎಂಬ ಖುಷಿ ಬೇಡ. 75 ವರ್ಷ ದಾಟಿದ ನಂತರ ಎಲ್ಲೂ ಪ್ರಧಾನಿಯಾಗಬಾರದು ಎಂಬ ನಿಯಮಗಳು ಬಿಜೆಪಿ ಸಂವಿಧಾನದಲ್ಲಿ ಪ್ರಸ್ತಾಪಿಸಿಲ್ಲ. ಹಾಗಾಗಿ, ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುವುದು ನಿಶ್ಚಿತ” ಎಂದು ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‌ನಡ್ಡಾ ಕೂಡ ಪ್ರತಿಕ್ರಿಯೆ

ಅರವಿಂದ್‌ ಕೇಜ್ರಿವಾಲ್‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. “ನರೇಂದ್ರ ಮೋದಿ ಅವರನ್ನು ಸೋಲಿಸಲಾಗದವರು ಈಗ ವಯಸ್ಸಿನ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಆದರೆ, ಪ್ರಧಾನಿಯಾಗಿ ಮುಂದುವರಿಯಲು ವಯಸ್ಸಿನ ಮಿತಿ ಕುರಿತು ಬಿಜೆಪಿ ಸಂವಿಧಾನದಲ್ಲಿ ಉಲ್ಲೇಖವಾಗಿಲ್ಲ. ನರೇಂದ್ರ ಮೋದಿ ಅವರೇ ನಮ್ಮ ನಾಯಕ ಹಾಗೂ ಭವಿಷ್ಯದಲ್ಲೂ ಅವರೇ ನಾಯಕರಾಗಿ ಇರಲಿದ್ದಾರೆ” ಎಂದಿದ್ದಾರೆ.

ಕೇಜ್ರಿವಾಲ್‌ ನಡೆಸಿದ ವಾಗ್ದಾಳಿ ಹೀಗಿತ್ತು…

ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್‌, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. “ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Lok Sabha Election: ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಕರ್ನಾಟಕ ಸೇರಿ ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೂರನೇ ಹಂತದ ಮತದಾನವು ಮೇ 7ರಂದು ನಡೆದಿದ್ದು, ಮತದಾನ ಪ್ರಮಾಣದ (Voter Turnout) ಕುರಿತು ಚುನಾವಣೆ ಆಯೋಗವು ನಿಖರ ಮಾಹಿತಿ ಒದಗಿಸಿದೆ. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ ಎಂಬುದಾಗಿ ಚುನಾವಣೆ ಆಯೋಗವು (Election Commission) ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ

ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಪಶ್ಚಿಮ ಬಂಗಾಳ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿಯೇ ಮತದಾನ ನಡೆದಿತ್ತು.

ರಾಜ್ಯವಾರು ಮತದಾನ ಪ್ರಮಾಣ

ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಇದು ಕೂಡ 2019ರ ಲೋಕಸಭೆ ಚುನಾವಣೆಗಿಂತ ಕಡಿಮೆ ಪ್ರಮಾಣದ ಮತದಾನವಾಗಿದೆ ಎಂದು ತಿಳಿದುಬಂದಿದೆ. ಏಪ್ರಿಲ್‌ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದ್ದು, ಇದುವರೆಗೆ ಮೂರು ಹಂತಗಳ ಮತದಾನ ಮುಕ್ತಾಯವಾಗಿದೆ. ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ಜಿಲ್ಲಾವಾರು ಮತದಾನ ಪ್ರಮಾಣ

ಮೇ 13ರಂದು 4ನೇ ಹಂತದ ಮತದಾನ

ಮೇ 13ರಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. 10 ರಾಜ್ಯಗಳ 96 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Navneet Rana:15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: ಬಿಜೆಪಿ ನಾಯಕಿ ನವನೀತ್‌ ರಾಣಾ(Navneet Rana) ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ(Asaduddin Owaisi) ನಡುವಿನ ವಾಕ್ಸಮರ ಮುಂದುವರೆದಿದೆ. 15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮನನ್ನು ನಾನು ಮಾತ್ರ ನಿಯಂತ್ರಿಸಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಹೋದರ ಅಸಾದುದ್ದೀನ್‌ ಓವೈಸಿ ಹೇಳುತ್ತಿದ್ದಾರೆ. ಇದು ಒಳ್ಳೆಯ ವಿಚಾರ. ಇದು ನಿಮಗೆ ಅರ್ಥ ಆಗಿದ್ದು ಒಳ್ಳೆಯದ್ದಾಯಿತು. ಇಲ್ಲದಿದರೆ ರಾಮ ಭಕ್ತರು ಮತ್ತು ಮೋದಿಯವರ ಸಿಂಹಗಳು ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನೆ ಮೂಡಿಸಿದೆ.

‍ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಓವೈಸಿ ನಾನು ಇಲ್ಲೇ ನಿಂತಿದ್ದೇನೆ ಅದೇನು ಮಾಡುತ್ತೀರೋ ಮಾಡಿ ಎಂದು ಟಾಂಗ್‌ ಕೊಟ್ಟಿದ್ದರು. ಮಹಾರಾಷ್ಟ್ರದಿಂದ ಬಂದ ಎಂಪಿ ಸಾಹೇಬರು ಇಲ್ಲಿ ನಮ್ಮ ವಿರುದ್ಧ ಏನೇನೋ ಮಾತನಾಡುತ್ತಿದ್ದಾರೆ. ನನ್ನ ತಮ್ಮ ಅಕ್ಬರುದ್ದೀನ್‌ ಓವೈಸಿ ಪರಿಸ್ಥಿತಿಯನ್ನು ಅವನದ್ದೇ ರೀತಿಯಲ್ಲಿ ತಿಳಿಗೊಳಿಸಲು ಮುಂದಾಗಿದ್ದ. ಆದರೆ ನಾನೇ ಅವನನ್ನು ತಡೆದು ನಿಲ್ಲಿಸಿದೆ ಎಂದು ಹೇಳಿದ್ದರು.

Continue Reading

ದೇಶ

Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Arvind Kejriwal: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು. ಜತೆಗೆ ತಾಯಿ ಅವರನ್ನು ಹೂ ಮಾಲೆ ಹಾಕಿ ಮನೆಯೊಳಗೆ ಬರಮಾಡಿಕೊಂಡರು. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ (ED) ಬಂಧಿಸಲ್ಪಟ್ಟ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme court) ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಏಳು ಹಂತದ ಲೋಕಸಭೆ ಚುನಾವಣೆಯ (Lok Sabha Election 2024) ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿದೆ. ಹೀಗಾಗಿ ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು. ಜತೆಗೆ ತಾಯಿ ಅವರನ್ನು ಹೂ ಮಾಲೆ ಹಾಕಿ ಮನೆಯೊಳಗೆ ಬರಮಾಡಿಕೊಂಡರು. ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral Video).

ತಿಹಾರ್‌ ಜೈಲಿನಿಂದ ಕೇಜ್ರಿವಾಲ್‌ ಶುಕ್ರವಾರ ಸಂಜೆ ಸುಮಾರು 7 ಗಂಟೆಗೆ ಹೊರ ಬಂದರು. ನೆರೆದಿದ್ದ ಸಾವಿರಾರು ಕಾರ್ಯಕರ್ತರು ಜಯಘೋಷದೊಂದಿಗೆ ಅವರನ್ನು ಸ್ವಾಗತಿಸಿದರು. ಕೇಜ್ರಿವಾಲ್‌ ಮನೆಗೆ ಆಗಮಿಸುತ್ತಿದ್ದಂತೆ ಆಪ್‌ ಸಂಸದ ಸಂಜಯ್‌ ಸಿಂಗ್‌ ಎದುರುಗೊಂಡರು. ಜತೆಗೆ ಅರವಿಂದ್ ಕೇಜ್ರಿವಾಲ್ ಅವರ ತಾಯಿ ಮತ್ತು ಪತ್ನಿ ಆರತಿ ಬೆಳಗಿ, ಹಾರ ಹಾಕಿ ಮನೆಗೆ ಸ್ವಾಗತಿಸಿದರು.

ಬಾಗಿಲ್ಲೇ ಕಾದು ನಿಂತಿದ್ದ ತಾಯಿ

ಮಗನ ಬರುವಿಕೆಗಾಗಿ ಕೇಜ್ರಿವಾಲ್‌ ಅವರ ತಾಯಿ ಮನೆ ಬಾಗಿಲ ಬಳಿಯಲ್ಲೇ ಹೂ ಹಾರ ಹಿಡಿದು ಕಾದು ನಿಂತಿದ್ದರು. ಸಂಬಂಧಿಕರು ಆರತಿ ಎತ್ತಿದರು. ಒಳ ಬರುತ್ತಲೇ ಕೇಜ್ರಿವಾಲ್‌ ತಮ್ಮ ತಾಯಿ, ತಂದೆಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದರು. ಕೇಜ್ರಿವಾಲ್ ಅವರ ತಂದೆ ಮಗನನ್ನು ತಬ್ಬಿಕೊಂಡರು. ಮಗನ ಬೆನ್ನನ್ನು ಆತ್ಮೀಯವಾಗಿ ತಟ್ಟಿದರು.

ದೇವಸ್ಥಾನಕ್ಕೆ ಭೇಟಿ ನೀಡಿದ ಕೇಜ್ರಿವಾಲ್‌

ಅರವಿಂದ್‌ ಕೇಜ್ರಿವಾಲ್‌ ಇಂದು (ಶನಿವಾರ) ದೆಹಲಿಯ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಲೋಕಸಭಾ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಿದರು. ಈ ವೇಳೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಅವರೊಂದಿಗಿದ್ದರು.

ಷರತ್ತು ಅನ್ವಯ

ಜಾಮೀನು ನೀಡುವ ಮೊದಲು ನ್ಯಾಯಾಲಯ ಯಾವುದೇ ಕಡತಗಳಿಗೆ ಸಹಿ ಹಾಕಬಾರದು ಎಂಬುದು ಸೇರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹಲವು ಷರತ್ತುಗಳನ್ನು ವಿಧಿಸಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಕೇಜ್ರಿವಾಲ್‌, “ನಾನು ನಿಮಗೆಲ್ಲ ಧನ್ಯವಾದ ಹೇಳಲು ಬಯಸುತ್ತೇನೆ. ನೀವೆಲ್ಲರೂ ನನಗೆ ಆಶೀರ್ವಾದ ಮಾಡಿದ್ದೀರಿ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೂ ನಾನು ಧನ್ಯವಾದ ತಿಳಿಸುತ್ತೇನೆ. ಅವರಿಂದಾಗಿಯೇ ನಾನು ಈಗ ಜೈಲಿನಿಂದ ಬಿಡುಗಡೆಯಾಗಿದ್ದೇನೆ. ಸರ್ವಾಧಿಕಾರದಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಹೋರಾಡೋಣ” ಎಂದು ಹೇಳಿದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. 

ಇದನ್ನೂ ಓದಿ: Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

Continue Reading
Advertisement
International Nurses’s Day
ಆರೋಗ್ಯ11 mins ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ11 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ4 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ5 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ6 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು6 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು7 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್7 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ8 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ8 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು14 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌