Lok Sabha Election 2024: ಕೋಲಾರದಲ್ಲಿ ಕಾಂಗ್ರೆಸ್‌ ಅಚ್ಚರಿ ಅಭ್ಯರ್ಥಿ? ಪ್ರಜಾಧ್ವನಿ ಯಾತ್ರೆಯೂ ಮುಂದೂಡಿಕೆ - Vistara News

Lok Sabha Election 2024

Lok Sabha Election 2024: ಕೋಲಾರದಲ್ಲಿ ಕಾಂಗ್ರೆಸ್‌ ಅಚ್ಚರಿ ಅಭ್ಯರ್ಥಿ? ಪ್ರಜಾಧ್ವನಿ ಯಾತ್ರೆಯೂ ಮುಂದೂಡಿಕೆ

Lok Sabha Election 2024: ಎರಡು ಬಣಗಳಿಗೂ ಒಪ್ಪಿಗೆ ಆಗುವ ಮೂರು ಹೆಸರುಗಳನ್ನು ಶಿಫಾರಸು ಮಾಡಲಾಗುತ್ತಿದೆ. ಅದರಲ್ಲಿ ಕೆ.ವಿ ಗೌತಮ್ ಹೆಸರು ಪ್ರಮುಖವಾಗಿದೆ.

VISTARANEWS.COM


on

kolar kv gautam ramesh kumar kh muniyappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಕೋಲಾರದಲ್ಲಿ (Kolar) ಲೋಕಸಭೆ ಚುನಾವಣೆ (Lok Sabha Election 2024) ಸ್ಪರ್ಧೆಗೆ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಕೂತಿರುವ ಹಿನ್ನೆಲೆಯಲ್ಲಿ, ಉಭಯ ಬಣಗಳ ತಿಕ್ಕಾಟದಿಂದ ಬೇಸತ್ತಿರುವ ಹೈಕಮಾಂಡ್‌ ಅಚ್ಚರಿ ಅಭ್ಯರ್ಥಿಯನ್ನು ಮುನ್ನೆಲೆಗೆ ತರಲಿದೆ ಎನ್ನಲಾಗಿದೆ.

ಟಿಕೆಟ್ ಆಯ್ಕೆ ಕಗ್ಗಂಟು ಇಂದು ಬಗೆಹರಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಕಠಿಣ ನಿರ್ಧಾರ ಮಾಡಿದ್ದು, ಕೆ.ವಿ ಗೌತಮ್ ಎಂಬುವವರ ಹೆಸರು ಶಿಫಾರಸು ಮಾಡಲು ಚಿಂತಿಸಿದ್ದಾರೆ. ಕೆ.ವಿ ಗೌತಮ್ ಸದ್ಯ ಬೆಂಗಳೂರು ಕೇಂದ್ರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದಾರೆ.

ಕೋಲಾರದಲ್ಲಿ ಪ್ರಾತಿನಿಧ್ಯಕ್ಕಾಗಿ ರಮೇಶ್ ಕುಮಾರ್ (Ramesh Kumar) ಬಣ ಹಾಗೂ ಸಚಿವ ಕೆ.ಎಚ್ ಮುನಿಯಪ್ಪ‌ (KH Muniyappa) ಟೀಮ್‌ ನಡುವೆ ಜಿದ್ದಾಜಿದ್ದಿ ಇದೆ. ಹೀಗಾಗಿ ಎರಡು ಬಣಗಳಿಗೂ ಒಪ್ಪಿಗೆ ಆಗುವ ಮೂರು ಹೆಸರುಗಳನ್ನು ಶಿಫಾರಸು ಮಾಡಲಾಗುತ್ತಿದೆ. ಅದರಲ್ಲಿ ಕೆ.ವಿ ಗೌತಮ್ ಹೆಸರು ಪ್ರಮುಖವಾಗಿದೆ.

ಟಿಕೆಟ್‌ ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಕೊಡಬೇಕು ಎಂದು ಮುನಿಯ್ಪ ಪಟ್ಟು ಹಿಡಿದಿದ್ದರು. ಮುನಿಯಪ್ಪ‌ ಕುಟುಂಬಕ್ಕೆ ಟಿಕೆಟ್ ಬೇಡ ಎಂದು ರಮೇಶ್ ಕುಮಾರ್, ಎಂಸಿ ಸುಧಾಕರ್ ಟೀಮ್‌ ಪಟ್ಟು ಬಿಗಿಮಾಡಿದೆ. ಸಿ.ಎಂ ಮುನಿಯಪ್ಪ ಅವರನ್ನು ಅಭ್ಯರ್ಥಿ ಮಾಡಿ ಎಂದು ರಮೇಶ್ ಕುಮಾರ್ ಬಣ ಹೇಳುತ್ತಿದೆ. ಉಭಯ ಬಣಗಳ ಬಡಿದಾಟಕ್ಕೆ ಬ್ರೇಕ್ ಹಾಕಲು ಅಚ್ಚರಿ ಹೆಸರು ಶಿಫಾರಸು ಮಾಡಲು ನಾಯಕರು ಮುಂದಾಗಿದ್ದಾರೆ. ಸದ್ಯ ಉಭಯ ಬಣಗಳು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿವೆ.

ತಮ್ಮ ಆಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಮುನಿಯಪ್ಪ ಲಾಬಿ ಮುಂದುವರಿದಿದ್ದು, ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತನಾಡಿದ್ದಾರೆ. ಒತ್ತಡಕ್ಕೆ ಮಣಿದು ಟಿಕೆಟ್ ತಪ್ಪಿಸಿದರೆ ತಪ್ಪು ಸಂದೇಶ ಹೋಗುತ್ತದೆ ಎಂದಿದ್ದಾರೆ.

ಪ್ರಚಾರ ಪ್ರಜಾಧ್ವನಿ ಯಾತ್ರೆ ಮುಂದೂಡಿಕೆ

ಕೋಲಾರ ಸಮಸ್ಯೆ ಬಗೆಹರಿದಿದ್ದರೆ ಇಂದು ಕೋಲಾರದ ಕುರುಡುಮಲೆಯಿಂದಲೇ ಕಾಂಗ್ರೆಸ್ ಪ್ರಚಾರ ಆರಂಭಿಸಬೇಕಿತ್ತು. ಕೋಲಾರ ಅಭ್ಯರ್ಥಿ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಪ್ರಚಾರ ಮುಂದೂಡಿಕೆ ಮಾಡಲಾಗಿದೆ. ಹೀಗಾಗಿ ಉಳಿದಿರುವ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಹೈಕಮಾಂಡ್‌ ಇಂದು ಬಿಡುಗಡೆ ಮಾಡಲೇಬೇಕಿದೆ.

ಸದ್ಯ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳು

ಚಿಕ್ಕಬಳ್ಳಾಪುರ- ರಕ್ಷರಾಮಯ್ಯ
ಚಾಮರಾಜನಗರ – ಸುನಿಲ್ ಬೋಸ್
ಬಳ್ಳಾರಿ – ತುಕಾರಾಂ
ಕೋಲಾರ – ಚಿಕ್ಕಪೆದ್ದಣ್ಣ/ಕೆ.ವಿ ಗೌತಮ್/ ಸಿ.ಎಂ ಮುನಿಯಪ್ಪ/ಎಲ್ ಹನುಮಂತಯ್ಯ

ಇದನ್ನೂ ಓದಿ: Lok Sabha Election 2024: ಕೋಲಾರ ಕಾಂಗ್ರೆಸ್‌ ಗಲಾಟೆಗೆ ಸಿಎಂ, ಡಿಸಿಎಂ ಟ್ರೀಟ್ಮೆಂಟ್‌! ತಣ್ಣಗಾದ ರಮೇಶ್‌ ಕುಮಾರ್‌, ಮುನಿಯಪ್ಪ ಬಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Reservation Row: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದ ನೆಹರೂ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

VISTARANEWS.COM


on

Reservation Row
Koo

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ (Reservation Row). ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಈ ವರದಿಯು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿಯ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು ಎನ್ನುವುದಕ್ಕೆ ಸಾಕ್ಷಿ ಒದಗಿಸುತ್ತದೆʼʼ ಎಂದು ಅಮಿತ್ ಮಾಳವೀಯ ಹೇಳಿದ್ದಾರೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ್ದ ನೆಹರೂ, ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದರು ಎನ್ನುವುದನ್ನು ಆರ್ಕೈವಲ್ ಪತ್ರಿಕೆಯು ವರದಿ ಮಾಡಿತ್ತು. ಇದನ್ನು ಮಾಳವೀಯ ಉಲ್ಲೇಖಿಸಿದ್ದಾರೆ.

ಇದನ್ನು ಪೋಸ್ಟ್‌ ಮಾಡಿ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸಬಲೀಕರಣವನ್ನು ಕಾಂಗ್ರೆಸ್ ಐತಿಹಾಸಿಕವಾಗಿ ವಿರೋಧಿಸಿದೆ ಎಂದು ಮಾಳವೀಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪ್ರತಿಪಾದಿಸಿದ್ದಾರೆ. “ಕಾಂಗ್ರೆಸ್ ಯಾವಾಗಲೂ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಗಳ ಸಬಲೀಕರಣದ ವಿರುದ್ಧವಾಗಿದೆ. ಆದರೆ ಮೀಸಲಾತಿಯ ಸಾಂವಿಧಾನಿಕ ನಿಬಂಧನೆಗಳನ್ನು ಯಾರೂ ಹಾಳು ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೋಡಿಕೊಳ್ಳುತ್ತದೆʼʼ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಬಹುದೊಡ್ಡ ಹಿನ್ನಡೆ ಎದುರಾದಂತಾಗಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಪ್ರಸ್ತುತ ಜಾರಿಯಲ್ಲಿರುವ ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಹೆಚ್ಚಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದರು. “ಇಂದು ಮೀಸಲಾತಿಗೆ ಶೇ. 50ರಷ್ಟು ಮಿತಿ ಇದೆ. ನಾವು ಈ ಮಿತಿಯನ್ನು ತೆಗೆದು ಹಾಕುತ್ತೇವೆ. ಬಡವರಿಗೆ ಮೀಸಲಾತಿ ಮಿತಿಯನ್ನು ಹೆಚ್ಚಿಸುತ್ತೇವೆ ” ಎಂದು ರಾಬರೇಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್‌ ಗಾಂಧಿ ಘೋಷಿಸಿದ್ದರು.

ಪ್ರಣಾಳಿಕೆಯಲ್ಲಿಯೂ ಘೋಷಣೆ

2024ರ ಲೋಕಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ, ಎಸ್‌ಟಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯ ಶೇ. 50ರಷ್ಟು ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಇತ್ತ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಇರುವವರೆಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊನೆಗೊಳ್ಳುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಲ್ಲದೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ʼನಾರಿ ಶಕ್ತಿ ವಂದನ್ ಅಧಿನಿಯಮ್ʼ ಅನ್ನು ಜಾರಿಗೆ ತರುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕಲ್ಯಾಣ ಯೋಜನೆಗಳು ತಲುಪುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದೂ ಬಿಜೆಪಿ ಹೇಳಿದೆ.

ಇದನ್ನೂ ಓದಿ: ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು.

VISTARANEWS.COM


on

Sam Pitroda
Koo

ಕಳೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಮ್ಮ ಹೇಳಿಕೆಗಳ ಮೂಲಕ ಹಾನಿಯೆಸಗುವ ಮಣಿಶಂಕರ ಅಯ್ಯರ್‌ ಮುಂತಾದವರ ಪರಂಪರೆಯನ್ನು ಕಾಂಗ್ರೆಸ್‌ ಪಕ್ಷದ ಭಾರತೀಯ ಸಾಗರೋತ್ತರ ವಿಭಾಗದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಮುಂದುವರಿಸುತ್ತಿರುವಂತಿದೆ. ದೇಶದ ವೈವಿಧ್ಯತೆಯ ಬಗ್ಗೆ ಮಾತನಾಡುವಾಗ ರಾಷ್ಟ್ರದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿ ಸ್ಯಾಮ್‌ ಪಿತ್ರೋಡಾ ವಿವಾದ ಹುಟ್ಟುಹಾಕಿದ್ದಾರೆ. “ಭಾರತದಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು” ಎಂದು ಪಿತ್ರೋಡಾ ಹೇಳಿದ್ದಾರೆ.

ಸಹಜವಾಗಿಯೇ ಈ ಮಾತು ವಿವಾದ ಹುಟ್ಟುಹಾಕಿದೆ. ಇಂಥ ಅವಕಾಶವನ್ನು ಎಂದೂ ಕಳೆದುಕೊಳ್ಳದ ಪ್ರಧಾನಮಂತ್ರಿ ನರೇಂದ್ರ ಮೋದಿ, “ಕಪ್ಪು ಚರ್ಮ ಇರುವ ಭಾರತೀಯರು ಆಫ್ರಿಕಾದವರು ಎಂದು ಈ ʼತತ್ವಜ್ಞಾನಿ ಅಂಕಲ್‌ʼ ಹೇಳಿದ್ದಾರೆ. ಇದರರ್ಥ, ನೀವು ದೇಶದ ಹಲವಾರು ಜನರನ್ನು ಅವರ ಚರ್ಮದ ಬಣ್ಣದ ಆಧಾರದ ಮೇಲೆ ನಿಂದಿಸುತ್ತಿದ್ದೀರಿ. ಚರ್ಮದ ಬಣ್ಣದ ಆಧಾರದ ಮೇಲೆ ಭಾರತೀಯರಿಗೆ ಮಾಡುವ ಅವಮಾನವನ್ನು ಈ ದೇಶ ಸಹಿಸುವುದಿಲ್ಲ” ಎಂದು ಪಿತ್ರೋಡಾ ಮೇಲೆ ಹರಿಹಾಯ್ದಿದ್ದಾರೆ. “ಆದಿವಾಸಿ ಕುಟುಂಬದ ಮಗಳಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಪದವಿಯ ಸ್ಪರ್ಧೆಯ ವೇಳೆ ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸಿತು ಎಂದು ನಾನು ತುಂಬಾ ಯೋಚಿಸುತ್ತಿದ್ದೆ. ಇಂದು ನನಗೆ ಅದರ ಕಾರಣ ತಿಳಿಯಿತು. ಅಮೆರಿಕದಲ್ಲಿರುವ ‘ಶೆಹಜಾದಾ’ನ ಅಂಕಲ್‌ ಹಾಗೂ ಫಿಲಾಸಫಿ ಮಾರ್ಗದರ್ಶಕ (ಪಿತ್ರೋಡಾ) ಈ ‘ಶೆಹಜಾದಾ’ಗೆ ಕ್ರಿಕೆಟ್‌ನ ಮೂರನೇ ಅಂಪೈರ್‌ನಂತೆ ಸಲಹೆ ನೀಡುತ್ತಾರೆ” ಎಂದು ಕುಟುಕಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು, “ಸ್ಯಾಮ್ ಭಾಯ್, ನಾನು ಈಶಾನ್ಯದಿಂದ ಬಂದವನು ಮತ್ತು ನಾನು ಭಾರತೀಯನಂತೆ ಕಾಣುತ್ತೇನೆ. ನಮ್ಮ ದೇಶದ ಬಗ್ಗೆ ಸ್ವಲ್ಪ ತಿಳಿವಳಿಕೆ ಬೆಳೆಸಿಕೊಳ್ಳಿ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು. ಕಾಂಗ್ರೆಸ್‌ ಪಕ್ಷ ಈ ಹೇಳಿಕೆಯಿಂದ ಉಂಟಾದ ಕೋಲಾಹಲದಿಂದ ಬೆಚ್ಚಿಬಿದ್ದು, ಪಿತ್ರೋಡಾ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು.

ಪಿತ್ರೋಡಾ ಅವರು ತಮ್ಮ ಮಾತನ್ನು ವಿಶ್ಲೇಷಣೆ ಎಂದುಕೊಂಡಿರುವಂತಿದೆ. ಆದರೆ ವಿಶ್ಲೇಷಣೆಗೂ ಜನಾಂಗೀಯ ನಿಂದನೆಗೂ ಅವರು ವ್ಯತ್ಯಾಸ ಗುರುತಿಸಿಕೊಳ್ಳಬೇಕಿದೆ. ದಕ್ಷಿಣ ಭಾರತೀಯರು ತುಸು ಕಪ್ಪಗಿದ್ದಾರೆ ಸರಿ; ಅಷ್ಟಕ್ಕೇ ಅವರು ಆಫ್ರಿಕನ್ನರಿಗೆ ಸಮವೋ? ಭಾರತದಲ್ಲಿ ಅತಿ ಹೆಚ್ಚಿನ ತೆರಿಗೆ ಉತ್ಪತ್ತಿಯಾಗುವುದು, ಜಿಡಿಪಿಗೆ ಹೆಚ್ಚಿನ ಕೊಡುಗೆ ನೀಡುವವರು ದಕ್ಷಿಣ ಭಾರತೀಯರು. ಇಲ್ಲಿನ ಸಂಸ್ಕೃತಿ ಅಲ್ಲಿಗಿಂತ ವಿಭಿನ್ನ. ಪೂರ್ವಭಾಗದವರು ಚೀನೀಯರಂತೆ ಕಾಣುತ್ತಾರೆ ಎನ್ನುವ ಮೂಲಕ, ʼಅರುಣಾಚಲ ನಮ್ಮದುʼ ಎನ್ನುತ್ತಿರುವ ಚೀನಾಕ್ಕೆ ಪಿತ್ರೋಡಾ ಸಹಾಯ ಮಾಡುತ್ತಿರುವಂತಿದೆ. ಭೌಗೋಳಿಕ ಹಾಗೂ ಸಾಂಸ್ಕೃತಿಕ ಭಿನ್ನತೆಗಳು ಪ್ರತಿ ದೇಶದಲ್ಲೂ ಇದ್ದೇ ಇರುತ್ತವೆ. ಭಾರತ ವಿಶಾಲ ದೇಶವಾದುದರಿಂದ ಇಲ್ಲಿ ಹೆಚ್ಚಿನ ವೈವಿಧ್ಯವಿದೆ. ಆ ಕಾರಣಕ್ಕೇ ಇದು ಸಾಂಸ್ಕೃತಿಕವಾಗಿ ಶ್ರೀಮಂತವೂ ಆಗಿದೆ. ಇದು ಭಾರತದ ಶಕ್ತಿಯೇ ಹೊರತು, ಇನ್ನೊಂದರ ನಕಲು ಅಲ್ಲ. ನಾವು ನಮ್ಮನ್ನು ಬೇರೆ ದೇಶಗಳಿಗೆ ಚರ್ಮದ ಬಣ್ಣದಿಂದ ಹೋಲಿಸಿಕೊಳ್ಳಬೇಕಿಲ್ಲ. ಬೇಕಿದ್ದರೆ ಭೂತಾನಿನ ಆನಂದದ ಸ್ವಭಾವದ ಸೂಚ್ಯಂಕಕ್ಕೆ, ಜಪಾನಿನ ಪರಿಶ್ರಮದ ಗುಣಕ್ಕೆ, ಕೆರಿಬಿಯನ್ನರ ದೈಹಿಕ ಬಲಕ್ಕೆ ಹೋಲಿಸಿಕೊಳ್ಳೋಣ.

ಈ ಹಿಂದೆ ಮಣಿಶಂಕರ ಅಯ್ಯರ್‌ ಮುಂತಾದವರು ಹೀಗೆ ʼಸೆಲ್ಫ್‌ ಗೋಲ್‌ʼ ಅಥವಾ ʼಆತ್ಮಹತ್ಯಾ ದಾಳಿʼ ಮಾಡಿಕೊಳ್ಳುತ್ತಿದ್ದರು. ಇಂಥವರು ಸ್ವತಃ ತಮ್ಮ ಪಕ್ಷಕ್ಕೇ ತಮ್ಮ ಹೇಳಿಕೆಗಳಿಂದ ಗಂಡಾಂತರ ತಂದೊಡ್ಡುತ್ತಿರುತ್ತಾರೆ. 2017ರಲ್ಲಿ ಮಣಿಶಂಕರ ಅಯ್ಯರ್‌ ಅವರು ಮೋದಿಯವರನ್ನು ʼನೀಚʼ ಎಂದು ಕರೆದಿದ್ದರು. ಇತ್ತೀಚೆಗೆ ಅವರು ಪಾಕಿಸ್ತಾನದಲ್ಲಿ ನಿಂತು “ಭಾರತದ ಮೂರನೇ ಎರಡು ಭಾಗ ಜನ ಪಾಕ್‌ನತ್ತ ಬರಲು ಸಿದ್ಧರಿದ್ದಾರೆ” ಎಂದಿದ್ದರು. 2007ರಲ್ಲಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ʼಸಾವಿನ ಸರದಾರʼ ಎಂದು ಕರೆದಿದ್ದರು. ಇತ್ತೀಚೆಗೆ ಗುಜರಾತ್‌ ಚುನಾವಣೆ ಸಂದರ್ಭ ಮೋದಿಯವರಿಗೆ ಮಲ್ಲಿಕಾರ್ಜುನ ಖರ್ಗೆಯವರು ʼರಾವಣʼ ಎಂದಿದ್ದರು. ಆದರೆ ಇಂಥ ಹೇಳಿಕೆಗಳೆಲ್ಲ ಹೇಳಿದವರಿಗೇ ತಿರುಮಂತ್ರವಾಗಿ, ನಿಂದಿಸಲ್ಪಟ್ಟವರು ಭಾರಿ ಬಹುಮತದಿಂದ ಗೆದ್ದಿದ್ದರು. ಮತದಾರರ ಮನಶ್ಶಾಸ್ತ್ರ ಅರ್ಥ ಮಾಡಿಕೊಳ್ಳದ ಜನನಾಯಕರು ಇಂಥ ಮಾತುಗಳನ್ನು ಬಳಸುತ್ತಾರೆ. ನಂತರ ನಾಲಿಗೆ ಕಚ್ಚಿಕೊಳ್ಳುತ್ತಾರೆ. ಇದು ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವುದಲ್ಲದೆ, ಅವರ ಚಾರಿತ್ರ್ಯವನ್ನೂ ಹರಾಜಿಗಿಡುತ್ತದೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading

ಕರ್ನಾಟಕ

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

Vistara Gramadani: ಹಾಗೆ ನೋಡಿದರೆ, ಹೆಚ್ಚು ಓದಿದದವರು ನಾಗರಿಕತೆಯಲ್ಲಿ ಮುಂದಿದ್ದೇವೆ ಅಂತ ಭ್ರಮಿಸುವ ನಗರವಾಸಿಗಳು ಮತದಾನದಂತಹ ಕರ್ತವ್ಯದಲ್ಲಿ ಗ್ರಾಮೀಣ ಪ್ರದೇಶದವರಿಗಿಂತ ಪರ್ಸಂಟೇಜಿನಲ್ಲಿ ಮುಂದಿರಬೇಕಿತ್ತು. ಆದರೆ, ವಾಸ್ತವವಾಗಿ ಮತದಾನ ಇರಲಿ, PUC ಪಲಿತಾಂಶ ಇರಲಿ, ಒಟ್ಟಾರೆ ಆರೋಗ್ಯ ನೆಮ್ಮದಿಗಳ ವಿಚಾರವೇ ಇರಲಿ… ಗ್ರಾಮೀಣ ಪ್ರದೇಶದಲ್ಲೇ ಪರ್ಸಂಟೇಜ್ ಜಾಸ್ತಿ.

VISTARANEWS.COM


on

ವಿಸ್ತಾರ ಗ್ರಾಮದನಿ Vistara Gramadaani
ವಿಜಯಪುರ ಲೋಕಸಭಾ ಕ್ಷೇತ್ರದ ನಿಡಗುಂದಿ ತಾಲೂಕಿನ ಹೆಬ್ಬಾಳ, ಯಲಗೂರ, ಬೀರಲದಿನ್ನಿ ಹಾಗೂ ಬಳಬಟ್ಟಿ ಗ್ರಾಮದಲ್ಲಿ ಮಂಗಳವಾರ ನರೇಗಾ ಯೋಜನೆಯಡಿ ನೋಂದಾಯಿತ 256 ಕೂಲಿಕಾರರು ತಮ್ಮ ಹಕ್ಕು ಚಲಾಯಿಸಿ, ನರೇಗಾ ಕೆಲಸಕ್ಕೆ ಹಾಜರಾಗಿ ಇತರರಿಗೆ ಮಾದರಿ ಆಗಿದ್ದಾರೆ.
Koo
Aravind Sigadal

| ಅರವಿಂದ ಸಿಗದಾಳ್, ಮೇಲುಕೊಪ್ಪ
ಪ್ರತೀ ವರ್ಷ ಬಹುತೇಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಮರುದಿನ ಪತ್ರಿಕೆಗಳಲ್ಲಿ ಕಾಣುವ ಸಾಮಾನ್ಯ ಹೆಡ್ಡಿಂಗ್‌: ‘ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ’ ಅಥವಾ ‘ಕನ್ನಡ ಮಾಧ್ಯಮದ ವಿದ್ಯಾರ್ಥಿಗಳೇ ಮುಂದೆ’ ಅಥವಾ ‘ಹೆಣ್ಮಕ್ಳೇ ಸ್ಟ್ರಾಂಗು ಗುರು’ ಇತ್ಯಾದಿ. ಅದರಲ್ಲೂ ‘ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ’ ಎಂಬುದು ಒಂದು ವಿಶೇಷವಾದ ವಿಚಾರ. ಹಾಗೆಯೇ ಮತದಾನ ಸಂದರ್ಭಗಳಲ್ಲೂ ಇದೇ ವಿಶೇಷ ಕಾಣುತ್ತೇವೆ. ಗ್ರಾಮೀಣ ಪ್ರದೇಶಗಳಲ್ಲಿ ಯಾವಾಗಲೂ ಅತಿ ಹೆಚ್ಚು ಮತದಾನ ನಡೆಯುತ್ತದೆ. ಸ್ವೀಪ್ (SVEEP Systematic Voters’ Education and Electoral Participation) ಜಾಗೃತಿ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದವರನ್ನು (Vistara Gramadani) ತಲುಪದೇ ಇದ್ದರೂ ಮತದಾನ ಮಾತ್ರ ನಗರ ಪ್ರದೇಶಗಳಿಗಿಂತ ಹಳ್ಳಿಗಳಲ್ಲಿ ಹೆಚ್ಚು.

ನಗರಗಳಿಗಿಂತ ಹಳ್ಳಿ, ಪಟ್ಟಣಗಳಲ್ಲಿ ಶೇಕಡಾವಾರು ಓಟ್ ಜಾಸ್ತಿ ಕಾರಣವೇನು?

ಹೌದು, ಹಳ್ಳಿ ಪಟ್ಟಣಗಳಲ್ಲಿ ಮತದಾನ ಹೆಚ್ಚು. ಹಳ್ಳಿ ಪಟ್ಟಣಗಳ ಕೆಲವು ಬೂತ್‌ಗಳಲ್ಲಿ 100% ಮತದಾನ ಆಗಿದ್ದೂ ಇದೆ. ಸಾಮಾನ್ಯವಾಗಿ ಹಳ್ಳಿಗಳ ಬೂತ್‌ಗಳಲ್ಲಿ 80-90% ಮತದಾನ ‘ಗ್ಯಾರಂಟಿ’. ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಹೆಚ್ಚಾಗಲು ಹಲವರು ಕಾರಣಗಳಿವೆ.

  1. ಹಳ್ಳಿಗಳಲ್ಲಿ ಹೆಚ್ಚಿನ ಮತದಾರರು ಕೇವಲ ಮತದಾರರಾಗಿ ಇರುವುದಿಲ್ಲ. ಯಾವುದೋ ಪಕ್ಷಗಳ ವ್ಯಕ್ತಿಗಳ ಬೆಂಬಲಿತ ವ್ಯಕ್ತಿಗಳಾಗಿರುತ್ತಾರೆ.
  2. ಪಕ್ಷಗಳ ಬೂತ್ ಕಾರ್ಯಕರ್ತರೊಂದಿಗೆ ಎಲ್ಲಾ ಮತದಾರರ ಸಂಪರ್ಕ ಇರುತ್ತದೆ. ಮತ ಹಾಕಿಲ್ಲ ಅಂದರೆ, ಮತ ಹಾಕದಿರುವ ವಿಚಾರ ಇಡೀ ಹಳ್ಳಿಗೆ ಗೊತ್ತಾಗುತ್ತದೆ. ‘ಮತ ಹಾಕದೆ ಸುದ್ದಿ ಆಗುವುದು ಬೇಡ’ ಎಂಬ ಕಾರಣಕ್ಕೆ ಹಳ್ಳಿಗಳಲ್ಲಿ ಮತದಾನ ಮಾಡುವವರೂ ಇದ್ದಾರೆ.
  3. ಹಳ್ಳಿ ಪಟ್ಟಣಗಳಲ್ಲಿ ಮತದಾರರಿಗೆ ರಾಜಕೀಯದಾಟದಲ್ಲಿ ಆಸಕ್ತಿ ಜಾಸ್ತಿ. ದೊಡ್ಡ ನಗರಗಳಲ್ಲಿ ಹೆಚ್ಚಿನ ಜನರಿಗೆ, ಅದರಲ್ಲೂ ದೊಡ್ಡ ಸಂಬಳದ ದೊಡ್ಡ ಹುದ್ದೆಯಲ್ಲಿ ಇರುವವರಿಗೆ ರಾಜಕೀಯ ಆಸಕ್ತಿ ವಿಷಯ ಆಗಿರುವುದಿಲ್ಲ. ಒಂದು ರೀತಿಯಲ್ಲಿ ನಗರವಾಸಿಗಳಿಗೆ ರಾಜಕೀಯ ಒಂದು ಜಿಗುಪ್ಸೆ.
  4. ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಜನರು ಸರ್ಕಾರಿ ಇಲಾಖೆಗಳಿಂದ ಫಲಾನುಭವಿ ಆಗಿರುತ್ತಾರೆ ಅಥವಾ ಯಾವುದಾದರೂ ಕೆಲಸಗಳು ಇಲಾಖೆಗಳಿಂದ ಬಾಕಿ ಉಳಿದಿರುತ್ತವೆ. ಆಗಿರುವ ಕೆಲಸ ಅಥವಾ ಆಗಬೇಕಿರುವ ಕೆಲಸದ ಹಿಂದೆ ಓಡಾಡುವವರು ಪಕ್ಷ ಪ್ರತಿನಿಧಿಗಳಾಗಿರುತ್ತಾರೆ ಮತ್ತು ಆ ಪ್ರತಿನಿಧಿಗಳು ಮತದಾನ ಸಂದರ್ಭದಲ್ಲಿ ಮತದಾರರನ್ನು ಮತದಾರ ಪ್ರಕ್ರಿಯೆಗೆ ತೊಡಗುವಂತೆ ಪ್ರಭಾವ ಬೀರಿರುತ್ತಾರೆ.
  5. ಜಾತ್ರೆ, ಊರಿನ ಹಬ್ಬಗಳಂತೆ ಎಲೆಕ್ಷನ್ ಕೂಡ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ ಒಂದು ಉತ್ಸವ ಇದ್ದಂತೆ, ಹೆಚ್ಚಿನವರು ಉತ್ಸಾಹದಿಂದಲೇ ಭಾಗವಹಿಸುತ್ತಾರೆ. ಹಳ್ಳಿಯ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳು ನಡೆಯುವಾಗ, ಭೇಟಿಯಾದ ಸಂದರ್ಭಗಳಲ್ಲಿ ರಾಜಕೀಯ ವಿಚಾರಗಳು ಚರ್ಚೆಯ ಒಂದು ಸಬ್ಜೆಕ್ಟ್ ಆಗಿರುತ್ತದೆ. ಇದರ ಪ್ರಭಾವ, ಮತದಾನ ಹೆಚ್ಚಲು ಪರೋಕ್ವ ಕಾರಣಗಳಲ್ಲಿ ಒಂದಾಗಿರುತ್ತದೆ.
  6. ದೊಡ್ಡ ನಗರಗಳಲ್ಲಿ ವೃತ್ತಿಯಲ್ಲಿ ಇರುವವರು, ಚುನಾವಣೆಯ ರಜೆಯಲ್ಲಿ ಊರಿಗೆ ಬಂದಿರುವುದರಿಂದ ಮತ್ತು ಕುಟುಂಬದವರು ಮತದಾನ ಮಾಡುವಾಗ ಸಹಜವಾಗಿ ಪ್ರೇರಿತಗೊಂಡು ಮತದಾನಕ್ಕೆ ಮುಂದಾಗುತ್ತಾರೆ. ನಗರದಲ್ಲೇ ಹುಟ್ಟಿ ಬೆಳೆದವರು ರಜೆ ಸಿಕ್ಕಿದರೆ ಗಿರಿಧಾಮದ ತುದಿಗೆ ಜಾಲಿ ಪಿಕ್‌ನಿಕ್ ಹೋಗುವವರೇ ಹೆಚ್ಚು!
  7. ದೊಡ್ಡ ನಗರದ ಜನರು ಹಣ, ವೃತ್ತಿ, ಐಷಾರಾಮಿ ಜೀವನಕ್ಕೆ ಕೊಟ್ಟ ಪ್ರಾಧಾನ್ಯತೆಯನ್ನು ಜೀವನದ ಅಗತ್ಯದ ಪ್ರಮುಖ ವಿಚಾರಗಳಲ್ಲಿ ಕೊಡುವುದಿಲ್ಲ. ಅದು ಅಡುಗೆ ಮನೆಯ ಕೆಲಸವಿರಬಹುದು, ಸಾಮಾಜಿಕ ಚಟುವಟಿಕೆಗಳಿರಬಹುದು, ರಾಜಕೀಯವಿರಬಹುದು. ಹಳ್ಳಿಗಳಲ್ಲಿ ಆ ರೀತಿ ವಾತಾವರಣ ಇರುವುದಿಲ್ಲ.
  8. ಹಳ್ಳಿಗಳ ಜನಗಳ ಮಧ್ಯೆ ಒಂದು ಸ್ನೇಹ ಸಂಬಂಧ ಅಥವಾ ಬಾಂಧವ್ಯದ ಸಂಬಂಧ ಗಟ್ಟಿ ಇರುತ್ತದೆ. ಅದರ ಪರಿಣಾಮ, ಎಲ್ಲಾ ವಿಚಾರಗಳಂತೆ ರಾಜಕೀಯ ಸಂವಹನವೂ ನಡೆಯುತ್ತಿರುತ್ತದೆ. ಮತದಾನಕ್ಕೆ ಆ ಸಂವಹನ ಪ್ರೇರಣೆಯೂ ಆಗಿರುತ್ತದೆ.
  9. ಹಳ್ಳಿಗಳ ಜನರಲ್ಲಿ ರಾಜಕೀಯದ ಆಗುಹೋಗುಗಳ ಅರಿವು, ತಿಳಿವಳಿಕೆ ಹೆಚ್ಚು. ರಾಜಕಾರಣಿಗಳು/ಪಕ್ಷಗಳು ಮಾಡಿದ ಸಾಧನೆಗಳು ಅಥವಾ ನಿಷ್ಕ್ರಿಯತೆ ಬಗ್ಗೆ ಹಳ್ಳಿಯ ಸಾಮಾನ್ಯ ಪ್ರಜೆಗೆ ಇರುವ ಜ್ಞಾನ, ಪರಿಚಯ ದೊಡ್ಡ ನಗರವಾಸಿಗಳಿಗೆ ಇರುವುದಿಲ್ಲ. ನಗರ ನಿವಾಸಿಗಳಲ್ಲಿ ಅನೇಕರಿಗೆ ತಮ್ಮ MLA ಯಾರು? ಕಾರ್ಪೋರೇಟರ್ ಯಾರು ಅಂತಾನೇ ಗೊತ್ತಿರುವುದಿಲ್ಲ. ಹಳ್ಳಿಯ ಸಾಮಾನ್ಯರಿಗೂ MLA ಯಾರು ಅಂತ ಕೇಳಿದರೆ, ಕಳೆದ ಮೂರು ಬಾರಿಯ MLA ಗಳ ಪೂರ್ಣ ವಿವರ ಕೊಡುವಷ್ಟು ಮಾಹಿತಿ ಅವರ ಬಳಿ ಇರುತ್ತದೆ. ಇಂತಹ ಅರಿವು ಹಳ್ಳಿಗಳಲ್ಲಿ ಜನರನ್ನು ಮತಗಟ್ಟೆಗೆ ಬರುವಂತೆ ಮಾಡುತ್ತವೆ.
  10. ಹಳ್ಳಿಯ ಮತದಾರರು ನಗರದ ನಿವಾಸಿಗಳಷ್ಟು ಸೋಮಾರಿಗಳಲ್ಲ! ನಿರಾಶಾವಾದಿಗಳಲ್ಲ! ಸಾಮಾನ್ಯವಾಗಿ, ನಗರದವರಿಗಿಂತ ಹಳ್ಳಿಗರು ಹೆಚ್ಚು ಶ್ರಮಿಕರಾಗಿರುವುದರಿಂದ, ಮಾನಸಿಕ ಮತ್ತು ದೈಹಿಕ ಆರೋಗ್ಯದ ವಿಚಾರದಲ್ಲಿ, ಗಟ್ಟಿತನದಲ್ಲಿ ಹಳ್ಳಿಗರು ಒಂದು ಹೆಜ್ಜೆ ಮುಂದೆ ಇರ್ತಾರೆ. ಸರದಿಯಲ್ಲಿ ಅರ್ಧ ಗಂಟೆ ಮತದಾನಕ್ಕೆ ನಿಲ್ಲಬೇಕಾದರೆ, ಅದನ್ನೂ ಕೂಡ ಸಂಭ್ರಮಿಸುತ್ತಾರೆ. ನಗರದವರಂತೆ ಅಸಹನೆ, ಚಡಪಡಿಕೆ ಹಳ್ಳಿಗರಲ್ಲಿ ಕಡಿಮೆ.

ಹಾಗೆ ನೋಡಿದರೆ, ಹೆಚ್ಚು ಓದಿದದವರು ನಾಗರಿಕತೆಯಲ್ಲಿ ಮುಂದಿದ್ದೇವೆ ಅಂತ ಭ್ರಮಿಸುವ ನಗರವಾಸಿಗಳು ಮತದಾನದಂತಹ ಕರ್ತವ್ಯದಲ್ಲಿ ಗ್ರಾಮೀಣ ಪ್ರದೇಶದವರಿಗಿಂತ ಪರ್ಸಂಟೇಜಿನಲ್ಲಿ ಮುಂದಿರಬೇಕಿತ್ತು. ಆದರೆ, ವಾಸ್ತವವಾಗಿ ಮತದಾನ ಇರಲಿ, ಪಿಯುಸಿ ಪರೀಕ್ಷೆ ಫಲಿತಾಂಶ ಇರಲಿ, ಒಟ್ಟಾರೆ ಆರೋಗ್ಯ ನೆಮ್ಮದಿಗಳ ವಿಚಾರವೇ ಇರಲಿ… ಗ್ರಾಮೀಣ ಪ್ರದೇಶದಲ್ಲೇ ಪರ್ಸಂಟೇಜ್ ಜಾಸ್ತಿ.

ಇದನ್ನೂ ಓದಿ | Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

ನಗರದಲ್ಲಿ ಯಾವುದೇ ಕಾರಣವಿಲ್ಲದೆ ಮತದಾನದಿಂದ ತಪ್ಪಿಸಿಕೊಳ್ಳುವ, ವಿವೇಕ ರಹಿತರಾಗಿ ಮತದಾನ ಕರ್ತವ್ಯ ಮಾಡದ ನಾಗರಿಕರಿಗೆ ಧಿಕ್ಕಾರ ಹೇಳುವಾಗಲೇ, ಮತದಾನ ಪೂಜೆಯನ್ನು ಶ್ರದ್ಧೆಯಿಂದ ಮಾಡಿದ ಗ್ರಾಮೀಣವಾಸಿ ದೇಶ ಪ್ರೇಮಿಗಳಿಗೆ ಒಂದು ಜೈಕಾರ ಹೇಳೋಣ.

Continue Reading

ಕ್ರೈಂ

BJP Karnataka: ಜೆ.ಪಿ. ನಡ್ಡಾ, ಅಮಿತ್‌ ಮಾಳವೀಯಾಗೆ ರಾಜ್ಯ ಪೊಲೀಸರ ನೋಟಿಸ್‌; 7 ದಿನದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

BJP Karnataka: ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಇದೀಗ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

BJP Karnataka State police issues notices to JP Nadda and Amit Malviya and BY Vijayendra
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡುವ ಸಂಬಂಧ ಬಿಜೆಪಿಯ (BJP Karnataka) ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್‌ ಮಾಡಲಾಗಿದ್ದ ಮೊಟ್ಟೆ ವಿಡಿಯೊ ಈಗ ಮತ್ತೆ ಸುದ್ದಿಯಲ್ಲಿದೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯಾ (Amit Malaveya) ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರಿಗೆ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದು, 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದಾರೆ.

ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಇದೀಗ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

BJP Karnataka State police issues notices to JP Nadda and Amit Malviya and BY Vijayendra

ಸಮುದಾಯಗಳಿಗೆ ಸಂಬಂಧಿಸಿದಂತೆ ಈ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನು ಬೇರೆ ಬೇರೆ ಸಮುದಾಯಗಳಿಗೆ ಹೋಲಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು.

ವಿಡಿಯೊದಲ್ಲಿ ಏನಿದೆ?

ಈ ವಿಡಿಯೊದ ಆರಂಭದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳನ್ನು (ಒಬಿಸಿ) ಮೀಸಲಾತಿಯ ಬುಟ್ಟಿಯಲ್ಲಿರುವ ಮೊಟ್ಟೆಗಳು ಎಂಬಂತೆ ಚಿತ್ರಿಸಲಾಗಿದೆ. ಬಳಿಕ ಈ ಮೀಸಲಾತಿ ಬುಟ್ಟಿಯಲ್ಲಿ ರಾಹುಲ್ ಗಾಂಧಿಯನ್ನು ಹೋಲುವ ಅನಿಮೇಟೆಡ್ ಪಾತ್ರ ಮುಸ್ಲಿಂ ಸಮುದಾಯದ ಮತ್ತೊಂದು ಮೊಟ್ಟೆಯನ್ನು ಇಡುವಂತೆ ತೋರಿಸಲಾಗಿದೆ. ಬಳಿಕ ಮೊಟ್ಟೆ ಬಿರಿದು ಪಕ್ಷಿಗಳು ಜೀವ ತಳೆಯುತ್ತವೆ. ಆಗ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಅವರನ್ನು ಹೋಲುವ ಪಾತ್ರಗಳು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತವೆ. ಬಳಿಕ ಬಲಿಷ್ಠವಾಗುವ ಮುಸ್ಲಿಮರನ್ನು ಹೋಲುವ ಹಕ್ಕಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ಬುಟ್ಟಿಯಿಂದ ಹೊರದಬ್ಬುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

ನೀತಿ ಸಂಹಿತೆಯ ಉಲ್ಲಂಘನೆ

“ಈ ವಿಡಿಯೊದಲ್ಲಿ ಮುಸ್ಲಿಂ ಸಮುದಾಯದವರಿಗೆ ಹೆಚ್ಚಿನ ಹಣವನ್ನು ನೀಡುವಂತೆ ಮತ್ತು ಮುಸ್ಲಿಂ ಸಮುದಾಯವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯವನ್ನು ಹೊರ ಹಾಕುವಂತೆ ಬಿಂಬಿಸಲಾಗಿದೆ” ಎಂದು ರಮೇಶ್ ಬಾಬು ಆರೋಪಿಸಿದ್ದರು. ʼʼಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲ 1989ರ ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವೂ ಹೌದುʼʼ ಎಂದು ಹೇಳಿದ್ದಾರೆ. ಇಂತಹ ವಿಡಿಯೊಗಳು ಸಮುದಾಯಗಳ ನಡುವೆ ದ್ವೇಷ ಹುಟ್ಟು ಹಾಕುವ ಸಾಧ್ಯತೆ ಇದೆ. 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದ ಸಂದರ್ಭದಲ್ಲಿ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

Continue Reading
Advertisement
SSLC Result 2024 what is the reason for most of the students fail in SSLC
ಕರ್ನಾಟಕ11 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Aavesham Releases On OTT Fahadh Faasil Hit Malayalam Film
ಮಾಲಿವುಡ್20 mins ago

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Sslc exam Result 2024
ಶಿಕ್ಷಣ22 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

T20 World Cup 2024
ಕ್ರೀಡೆ28 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

Sunita Williams
ವಿದೇಶ37 mins ago

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Ananya Panday Aditya Roy Kapur parties with Sara Ali Khan
ಬಾಲಿವುಡ್39 mins ago

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

SSLC Result 2024 secret behind 20 percent grace marks
ಕರ್ನಾಟಕ49 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

gold rate today sreeleela
ಚಿನ್ನದ ದರ1 hour ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

SSLC Result 2024 78 schools get zero results in SSLC exams
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

Viral video
ವೈರಲ್ ನ್ಯೂಸ್1 hour ago

Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ11 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ22 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ49 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌