Namma Metro : ಇಂದಿನಿಂದ 1 ವರ್ಷ ಬನ್ನೇರುಘಟ್ಟ ಮುಖ್ಯರಸ್ತೆಯ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ ರಸ್ತೆ ಬಂದ್‌ - Vistara News

ಬೆಂಗಳೂರು

Namma Metro : ಇಂದಿನಿಂದ 1 ವರ್ಷ ಬನ್ನೇರುಘಟ್ಟ ಮುಖ್ಯರಸ್ತೆಯ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ ರಸ್ತೆ ಬಂದ್‌

Lakkasandra Metro: ಲಕ್ಕಸಂದ್ರ ಮೆಟ್ರೋ ಕಾಮಗಾರಿ (Namma Metro) ಹಿನ್ನೆಲೆಯಲ್ಲಿ ಇಂದಿನಿಂದ (ಏ.1) ಮೈಕೋ ಸಿಗ್ನಲ್‌ನಿಂದ (Myco signal) ಆನೆಪಾಳ್ಯ ಜಂಕ್ಷನ್‌ವರೆಗೆ ವಾಹನಗಳ ಸಂಚಾರ ಇರುವುದಿಲ್ಲ.

VISTARANEWS.COM


on

Namma Metro Traffic advise
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬನ್ನೇರುಘಟ್ಟ ಮುಖ್ಯ ರಸ್ತೆಯ ಮೈಕೋ ಸಿಗ್ನಲ್‌ನಿಂದ (Myco signal) ಆನೆಪಾಳ್ಯ ಜಂಕ್ಷನ್‌ವರೆಗೆ (Anepalya junction) 1 ವರ್ಷ ವಾಹನ ಸಂಚಾರವನ್ನು ನಿಷೇಧ (No vehicular movement) ಮಾಡಲಾಗಿದೆ. ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ (Lakkasandra Metro) ಕಾಮಗಾರಿಯನ್ನು ಬಿಎಂಆರ್‌ಸಿಎಲ್‌ (BMRCL) ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗವನ್ನು ಮತ್ತು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ಏಪ್ರಿಲ್‌ 1ರಿಂದ ಮುಂದಿನ ಒಂದು ವರ್ಷ ಬಂದ್ ಮಾಡಲಾಗುತ್ತಿದೆ. ವಾಹನ ಸವಾರರ ಅನುಕೂಲಕ್ಕಾಗಿ ಬಿಎಂಆರ್​ಸಿಎಲ್ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.

Namma Metro traffic

ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯನ್ನು ನಮ್ಮ ಮೆಟ್ರೋ (Namma Metro) ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರ ನಿರ್ಬಂಧ (Traffic restrictions) ಮಾಡಲಾಗುತ್ತಿದೆ. ಏಪ್ರಿಲ್‌ 1 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುತ್ತದೆ. ಈ ಬಗ್ಗೆ ಬಿಎಂಆರ್‌ಸಿಎಲ್‌ ಪ್ರಕಟಣೆ (BMRTC) ಹೊರಡಿಸಿದೆ.

ಕಾಮಗಾರಿ ನಿರ್ಮಾಣಕ್ಕೆ ಅನುಕೂಲವಾಗುವಂತೆ ಸಂಚಾರ ನಿರ್ಬಂಧವಾಗಿರುವ ಕಾರಣಕ್ಕೆ ಪರ್ಯಾಯ ಮಾರ್ಗ ಬಳಸುವಂತೆ ಬಿಎಂಆರ್‌ಸಿಎಲ್‌ ವಿನಂತಿ ಮಾಡಿದೆ. ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್‌ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್‌ ಕಡೆಗೆ ಹೋಗಬೇಕಾದರೆ ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಭೋಷ್‌ ಲಿಂಕ್‌ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್‌ ತಲುಪಿ ಎಡಕ್ಕೆ ತಿರುಗಿಕೊಳ್ಳಬೇಕು.

ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್‌ ಗಾರ್ಡನ್‌ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು.

ಇದನ್ನೂ ಓದಿ: Acid Attack : ಆಸ್ತಿ ವಿಚಾರಕ್ಕೆ ಯುವಕನಿಗೆ ಆ್ಯಸಿಡ್‌ ಎರಚಿದ ಸಂಬಂಧಿಕರು; ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಫೈಟಿಂಗ್‌

Namma Metro : ನಮ್ಮ ಮೆಟ್ರೋ 3ನೇ ಹಂತಕ್ಕೆ ಸಂಪುಟ ಒಪ್ಪಿಗೆ; ಜೆ.ಪಿ. ನಗರದಿಂದ ಹೆಬ್ಬಾಳಕ್ಕೆ ನೇರ ಸಂಪರ್ಕ

ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ‌, ಟ್ರಾಫಿಕ್‌ ಸಂಕಷ್ಟಗಳಿಗೆ ಪರಿಹಾರ ರೂಪವಾಗಿ ಬಂದಿರುವ ನಮ್ಮ ಮೆಟ್ರೋದ (Namma Metro) ಮೂರನೇ ಹಂತದ (Namma Metro Third Phase) ಯೋಜನೆಯ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ (Cabinet Meeting) ನೀಡಿದೆ. ಬೆಂಗಳೂರಿನ ಜೆ.ಪಿ. ನಗರದಿಂದ ಹೆಬ್ಬಾಳವನ್ನು (JP Nagar to Hebbala) ಸಂಪರ್ಕಿಸುವ ಸುಮಾರು 44 ಕಿ.ಮೀ. ಉದ್ದದ ಹೊರ ವರ್ತುಲ ಮೆಟ್ರೋ ರಿಂಗ್‌ ರೋಡ್‌ ಇದಾಗಿದೆ. ಈ ಯೋಜನೆಯನ್ನು ಸುಮಾರು 15,611 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮೆಟ್ರೋ ಮೂರನೇ ಹಂತ ಹಲವು ಪ್ರಮುಖ ಭಾಗಗಳನ್ನು ಸಂಪರ್ಕಿಸುತ್ತದೆ. ಹೆಬ್ಬಾಳ – ಗೊರುಗುಂಟೆಪಾಳ್ಯ-ಕನಕಪುರ ರಸ್ತೆ – ಜೆಪಿ ನಗರ ಮೆಟ್ರೋ ನಿಲ್ದಾಣಗಳು ಇದರಲ್ಲಿ ಬರಲಿವೆ. ಇದಕ್ಕೆ ಬೇಕಾಗುವ ಖರ್ಚಿನ ಮೊತ್ತದಲ್ಲಿ ಶೇ. 15-16 ಭಾಗವನ್ನು ಕೇಂದ್ರ ಸರ್ಕಾರ ನೀಡುತ್ತದೆ. ಉಳಿದ ಶೇ. 85 ಭಾಗವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಸಂಪುಟ ಸಭೆಯ ಬಳಿಕ ವಿವರ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Namma Metro Phase 3

ಏನಿದು ಮೆಟ್ರೋ ಮೂರನೇ ಹಂತದ ಯೋಜನೆ, ಯಾವ್ಯಾಗ ಭಾಗವನ್ನು ಸಂಪರ್ಕಿಸುತ್ತದೆ

ಮೆಟ್ರೋ ಮೂರನೇ ಹಂತ ಒಟ್ಟು 81 ಕಿಮೀ. ಉದ್ದದ ಮೂರು ಕಾರಿಡಾರ್‌ಗಳನ್ನು ಒಳಗೊಂಡ ಯೋಜನೆಯಾಗಿದೆ.
ಕಾರಿಡಾರ್‌ – 1 : ಜೆ.ಪಿ. ನಗರ 4ನೇ ಹಂತದಿಂದ ಕೆಂಪಾಪುರವರೆಗಿನ 32.15 ಕಿ.ಮೀ.: 22 ನಿಲ್ದಾಣಗಳು
ಕಾರಿಡಾರ್‌ – 2: ಹೊಸ ಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೆ 12 ಕಿ.ಮೀ.: 9 ನಿಲ್ದಾಣಗಳು
ಕಾರಿಡಾರ್‌ – 3: ಸರ್ಜಾಪುರದಿಂದ ಹೆಬ್ಬಾಳವರೆಗೆ 37 ಕಿ. ಮೀ. ಅಂತರ ಹೊಂದಿದೆ.

ರಾಜ್ಯ ಸಚಿವ ಸಂಪುಟವು ಸದ್ಯಕ್ಕೆ ಮೊದಲ ಎರಡು ಕಾರಿಡಾರ್‌ಗಳಿಗೆ ಅನುಮತಿಯನ್ನು ನೀಡಿದೆ.

ಉದ್ದೇಶಿತ ಕಾರಿಡಾರ್‌ – 1ರ ಅಡಿ ಜೆ.ಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ 32.15 ಕಿ. ಮೀ. ಮಾರ್ಗದಲ್ಲಿ 22 ನಿಲ್ದಾಣಗಳು ಬರಲಿವೆ ಮತ್ತು ಕಾರಿಡಾರ್‌ – 2ರಲ್ಲಿ ಹೊಸ ಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೂ 12. ಕಿ. ಮೀ. ಮಾರ್ಗದಲ್ಲಿ 9 ನಿಲ್ದಾಣಗಳು ಬರಲಿವೆ. ಈ ಯೋಜನೆ ಉಪ ನಗರ ರೈಲು, ಬಸ್‌ ಡಿಪೋಗಳೂ ಸೇರಿದಂತೆ 9 ಕಡೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಸುಮನ ಹಳ್ಳಿ ಜಂಕ್ಷನ್‌ ಇಂಟರ್‌ಚೇಂಜ್‌ ನಿಲ್ದಾಣವಾಗಿ ಕಾರ್ಯ ನಿರ್ವಹಿಸಲಿದೆ.

ಹೆಬ್ಬಾಳದಲ್ಲಿ ಕೊನೆಗೊಳ್ಳುವ ಕಾರಿಡಾರ್‌ – 1 ಏರ್‌ಪೋರ್ಟ್‌ ಲೈನ್‌ನ (ನೀಲಿ ಮಾರ್ಗ) ಹಂತ – 2 ಮಾರ್ಗದೊಂದಿಗೆ ಸಂಪರ್ಕ ಬೆಸೆಯಲಿದೆ. ಇದು ಕೆ. ಆರ್‌. ಪುರದಿಂದ ಹೆಬ್ಬಾಳ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಲಿದೆ. ಜೆ. ಪಿ. ನಗರದ ನಿಲ್ದಾಣವು ಹಸಿರು ಮಾರ್ಗದ ಜೆ. ಪಿ. ನಗರ ನಿಲ್ದಾಣ, ಕಾಮಾಕ್ಯ ಮೆಟ್ರೋ ನಿಲ್ದಾಣ ಹಾಗೂ ನೇರಳೆ ಮಾರ್ಗದ ಮೈಸೂರು ರಸ್ತೆ ನಿಲ್ದಾಣ, ಸುಮನಹಳ್ಳಿ ಕ್ರಾಸ್‌ ಎರಡೂ ಹೊಸ ಕಾರಿಡಾರ್‌ಗಳಿಗೆ ಸಂಪರ್ಕ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ : Namma Metro : ಹಳಿಯಲ್ಲಿ ಯುವಕನ ಹುಚ್ಚಾಟ; 27 ನಿಮಿಷ ಮೆಟ್ರೋ ಸಂಚಾರ ಸ್ಥಗಿತ

ಕಾರಿಡಾರ್‌ ಒಂದರಲ್ಲಿ ಬರುವ ನಿಲ್ದಾಣಗಳು ಇವು

ಜೆ.ಪಿ. ನಗರ-ಹೆಬ್ಬಾಳ ಮಾರ್ಗ: ಜೆ.ಪಿ. ನಗರ 4ನೇ ಹಂತ, ಜೆ.ಪಿ ನಗರ 5ನೇ ಹಂತ, ಜೆ.ಪಿ ನಗರ, ಕದಿರೇನ ಹಳ್ಳಿ, ಕಾಮಾಕ್ಯ ಬಸ್‌ ನಿಲ್ದಾಣ, ಹೊಸಕೆರೆ ಹಳ್ಳಿ ಕ್ರಾಸ್‌, ಪಿಇಎಸ್‌ ಕಾಲೇಜು, ಮೈಸೂರು ರಸ್ತೆ ನಾಗರಬಾವಿ ವೃತ್ತ, ವಿನಾಯಕ ಲೇಔಟ್‌, ಅಂಬೇಡ್ಕರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌, ಬಿಡಿಎ ಕಾಂಪ್ಲೆಕ್ಸ್‌, ಸುಮನಹಳ್ಳಿ ಕ್ರಾಸ್‌, ಚೌಡೇಶ್ವರಿ ನಗರ, ಫ್ರೀಡಂ ಫೈಟರ್‌ ಕ್ರಾಸ್‌, ಕಂಠೀರವ ಸ್ಟೇಡಿಯಂ, ಪೀಣ್ಯ, ಬಾಹುಬಲಿ ನಗರ, ಬಿಇಎಲ್‌ ವೃತ್ತ, ಪಟೇಲಪ್ಪ ಲೇಔಟ್‌, ಹೆಬ್ಬಾಳ, ಕೆಂಪಾಪುರ

ಕಾರಿಡಾರ್‌ -2ರಲ್ಲಿ ಬರುವ ಮೆಟ್ರೋ ನಿಲ್ದಾಣಗಳು ಇವು

ಹೊಸಹಳ್ಳಿ-ಕಡಬಗೆರೆ ಮಾರ್ಗ: ಹೊಸ ಹಳ್ಳಿ, ಕೆಎಚ್‌ಬಿ ಕಾಲೋನಿ, ವಿನಾಯಕ ನಗರ, ಸುಮನ ಹಳ್ಳಿ ಕ್ರಾಸ್‌, ಸುಂಕದ ಕಟ್ಟೆ, ಹೇರೋ ಹಳ್ಳಿ, ಬ್ಯಾಡರ ಹಳ್ಳಿ, ಫಾರೆಸ್ಟ್‌ ಗೇಟ್‌, ಕಡಬಗೆರೆ

ಕಾರಿಡಾರ್‌ -3ರಲ್ಲಿ ಬರುವ ಮೆಟ್ರೋ ನಿಲ್ದಾಣಗಳು

ಸರ್ಜಾಪುರದಿಂದ ಹೆಬ್ಬಾಳವರೆಗಿನ ಈ ಮೆಟ್ರೋ ಮಾರ್ಗವು 37 ಕಿ.ಮೀ. ಅಂತರ ಹೊಂದಿದೆ. ಇದರಲ್ಲಿ 18.60 ಎತ್ತರಿಸಿದ ಮಾರ್ಗವಾದರೆ, 16.80 ಕಿ. ಮೀ. ಭೂಗತ ಮಾರ್ಗವನ್ನು ಹೊಂದಿದೆ. ಈ ಯೋಜನೆಗೆ ಒಟ್ಟು 15 ಸಾವಿರ ಕೋಟಿ ಅಂದಾಜು ಮೊತ್ತ ನಿಗದಿಪಡಿಸಲಾಗಿದೆ. ಇದು ಈ ಸಂಪುಟ ಒಪ್ಪಿಗೆ ನೀಡಿದ ಯೋಜನೆಯಲ್ಲಿ ಸೇರಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Self Harming: ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್‌ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ

Self Harming: ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್‌ ಅಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

self harming gym trainer
Koo

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ (Video Call) ಮಾಡಿ ಹೆದರಿಸಲು ಹೋದ ಜಿಮ್‌ ಟ್ರೈನರ್‌ (Gym Trainer), ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು (hanging) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ (Self Harming) ಮಾಡಿಕೊಂಡ ದುರ್ದೈವಿ.

ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್‌ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.

ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.

ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್‌ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್‌ ಅಲ್ಲೇ ಮೃತಪಟ್ಟಿದ್ದಾನೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ತನ್ನ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಅಂಜಲಿ ಎಂಬಾಕೆಯನ್ನು ಇರಿದು ಬರ್ಬರವಾಗಿ ಕೊಲೆ (Anjali Murder Case) ಮಾಡಿದ ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಹುಬ್ಬಳ್ಳಿ: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ (Anjali Murder Case) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

ಕೊಲೆ ಪ್ರಕರಣಕ್ಕೂ ಮೊದಲೇ ಅಂಜಲಿ ಅಜ್ಜಿ, ಬೆಂಡಿಗೇರಿ ಪೊಲೀಸ್ ಠಾಣೆಗೆ ಬಂದು ಬೆದರಿಕೆ ಇದೆ ಎಂದು ದೂರು ನೀಡಿದ್ದರು. ದೂರು ನೀಡಿದರೂ ಪೊಲೀಸರು ನಿರ್ಲಕ್ಷ್ಯ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಚಂದ್ರಶೇಖರ್‌ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಅವರನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಅಮಾನತು ಮಾಡಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ. ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ | B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Continue Reading

ಬೆಂಗಳೂರು

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

MLC Election: ಮತದಾರರಿಗೆ ಹಂಚಲು ಪ್ಯಾಕ್ ಮಾಡಿ ಇಟ್ಟಿದ್ದ ಗಿಫ್ಟ್ ಐಟಂಗಳು ಎರಡು ಕಡೆ ಪತ್ತೆಯಾಗಿವೆ. ಜೆಪಿ ನಗರದಲ್ಲಿ ಹಾಗೂ ಆನೆಕಲ್‌ನಲ್ಲಿ ಇವುಗಳನ್ನು ಶೇಖರಿಸಿಡಲಾಗಿದೆ. ಮತದಾರರಿಗೆ ಕೊರಿಯರ್ ಮೂಲಕ ಹಂಚಲು ರೆಡಿಯಾಗಿದ್ದ ಗಿಫ್ಟ್ ಕಿಟ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಅವರ ಭಾವಚಿತ್ರ, ಶುಭಾಶಯ ಮತ್ತು ವಿವರಗಳಿವೆ.

VISTARANEWS.COM


on

mlc election congress candidate gift boxes
Koo

ಆನೇಕಲ್: ಮತದಾರರಿಗೆ (voters) ಹಂಚಲು ತಂದಿದ್ದ ಗಿಫ್ಟ್ ಬಾಕ್ಸ್‌ಗಳು (Gift box) ಗೋದಾಮಿನಲ್ಲಿ ಪತ್ತೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿಯ (Congress Candidate) ಕಡೆಯವರು ವಿಧಾನ ಪರಿಷತ್‌ ಚುನಾವಣೆಯ (MLC Election) ಬೆಂಗಳೂರು ಪದವೀಧರ ಕ್ಷೇತ್ರದ (graduates constituency) ಮತದಾರರಿಗೆ ವಿತರಿಸಲು ಇವುಗಳನ್ನು ತರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮತದಾರರಿಗೆ ಹಂಚಲು ಪ್ಯಾಕ್ ಮಾಡಿ ಇಟ್ಟಿದ್ದ ಗಿಫ್ಟ್ ಐಟಂಗಳು ಎರಡು ಕಡೆ ಪತ್ತೆಯಾಗಿವೆ. ಜೆಪಿ ನಗರದಲ್ಲಿ ಹಾಗೂ ಆನೆಕಲ್‌ನಲ್ಲಿ ಇವುಗಳನ್ನು ಶೇಖರಿಸಿಡಲಾಗಿದೆ. ಮತದಾರರಿಗೆ ಕೊರಿಯರ್ ಮೂಲಕ ಹಂಚಲು ರೆಡಿಯಾಗಿದ್ದ ಗಿಫ್ಟ್ ಕಿಟ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಅವರ ಭಾವಚಿತ್ರ, ಶುಭಾಶಯ ಮತ್ತು ವಿವರಗಳಿವೆ. ದುಬಾರಿ ಬೆಲೆಯ ಕಿಚನ್‌ ಸೆಟ್‌ಗಳು ಇವುಗಳಲ್ಲಿವೆ. ಅವುಗಳ ಮೇಲೆ RG ಎಂಬ ಪ್ರಿಂಟ್ ಹೊಂದಿವೆ. ಆನೇಕಲ್ ತಾಲ್ಲೂಕಿನ ತಿರುಮಗೊಂಡನಹಳ್ಳಿಯ ಡಿಟಿಡಿಸಿ ಗೋದಾಮಿನಲ್ಲಿಯೂ ಸಾವಿರಾರು ಗಿಫ್ಟ್ ಬಾಕ್ಸ್‌ಗಳು ಕಂಡುಬಂದಿವೆ.

ಸುಳಿವಿನ ಮೇರೆಗೆ ಬಿಜೆಪಿ ಕಾರ್ಯಕರ್ತರು ಗೋದಾಮಿನ ಮೇಲೆ ದಾಳಿ ನಡೆಸಿ ಇದನ್ನು ಪತ್ತೆ ಹಚ್ಚಿದ್ದಾರೆ. ದಾಳಿ ವೇಳೆ ಸಾವಿರಾರು ಗಿಫ್ಟ್ ಬಾಕ್ಸ್‌ಗಳು ಕಂಡುಬಂದಿವೆ. ಜಯನಗರದಲ್ಲಿ ರಾತ್ರಿ ಪತ್ತೆಯಾಗಿರುವ ಗಿಫ್ಟ್ ಸೆಟ್‌ಗಳ ಜೊತೆಗೆ ಇದು ಸಾಮ್ಯತೆ ಹೊಂದಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ದಾಳಿ ನಡೆಸಿರುವ ಬಿಜೆಪಿ ಕಾರ್ಯಕರ್ತರು ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ಹಾಗೂ ದೂರು ನೀಡಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌, ನಿಂಗರಾಜೇಗೌಡ ಬಂಡಾಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಫೈನಲ್ ಆಗಿದೆ. ವಿವೇಕಾನಂದ.ಕೆ ಅವರ ಹೆಸರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಇ.ಸಿ.ನಿಂಗರಾಜೇಗೌಡ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಟಿಕೆಟ್‌ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ಅಸಮಾಧಾನಗೊಂಡಿರುವ ಡಾ.ಇ.ಸಿ.ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಂಬಲಿಗರ ಜತೆ, ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ ಅವರು ಬಿ ಫಾರ್ಮ್ ಇಲ್ಲದೆ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಳೆ ವರಿಷ್ಠರ ಜತೆ ಚರ್ಚೆ ಮಾಡಿ ಮತ್ತೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಡಾ‌.ಇ.ಸಿ.ನಿಂಗರಾಜೇಗೌಡ ಹೇಳಿದ್ದಾರೆ.

ಜೆಡಿಎಸ್‌ನಿಂದ ವಿವೇಕಾನಂದಗೆ ಜೆಡಿಎಸ್ ವರಿಷ್ಠರು ಬಿ ಫಾರ್ಮ್ ನೀಡಿದ್ದರಿಂದ ಉಂಟಾದ ಗೊಂದಲದ ನಡುವೆಯೂ ಬಿಜೆಪಿಯಿಂದ ಡಾ.ಇ.ಸಿ.ನಿಂಗರಾಜೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ.ಇ.ಸಿ.ನಿಂಗರಾಜೇಗೌಡ, ಶಾಸ್ತ್ರ ಸಂಪ್ರದಾಯ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಇಂದು ದಿನ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಸಿದ್ದೇನೆ. ನಾಳೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ನನಗೆ ಸಂಪೂರ್ಣವಾದ ನಂಬಿಕೆ ಇದೆ. ನಾಳೆ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ಬಿಜೆಪಿ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ನನ್ನನ್ನು ಫೈನಲ್ ಮಾಡಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಬರಲ್ಲ. ರಾಜ್ಯ ಬಿಜೆಪಿ ನಾಯಕರು ಕರೆದಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ತೆರಳುತ್ತಿದ್ದೇನೆ. ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

ಜೆಡಿಎಸ್‌ನಲ್ಲೂ ಬಂಡಾಯ?

ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್‌ಗಾಗಿ ಜೆಡಿಎಸ್‌ನಲ್ಲಿ ವಿವೇಕಾನಂದ.ಕೆ ಹಾಗೂ ಕೆ.ಟಿ ಶ್ರೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ.ಕೆ ಅವರಿಗೆ ಜೆಡಿಎಸ್‌ ಮಣೆ ಹಾಕಿರುವುದರಿಂದ ಕೆ.ಟಿ ಶ್ರೀಕಂಠೇಗೌಡ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ನಾನು ಮತ್ತೊಮ್ಮೆ ನಿಮ್ಮ ಬಳಿಗೆ ಮತಯಾಚನೆ ಮಾಡಲು ಬರುತ್ತಿದ್ದು, ನನ್ನ ಎಲ್ಲಾ ಶಿಕ್ಷಕ ವೃಂದದವರ ಕುಂದು ಕೊರತೆಗಳನ್ನು ಪರಿಷತ್ತಿನಲ್ಲಿ ಎಲ್ಲರ ಮುಂದೆ ಇಟ್ಟು ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ. ಮೇ 16ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.

Continue Reading

ಕ್ರೈಂ

Student Self harming: ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

Student Self harming: ಆತ್ಮಹತ್ಯೆ ಮಾಡಿಕೊಂಡ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಟಾಪರ್ಸ್ ಆಗಿದ್ದು, ಇನ್ನಷ್ಟು ಅಂಕ ಗಳಿಸುವಂತೆ ಒತ್ತಡಕ್ಕೊಳಗಾಗಿರಬಹುದು ಎಂದು ಶಂಕಿಸಲಾಗಿದೆ. ಈ ಆತ್ಮಹತ್ಯೆ ಸರಣಿಯ ಬಗ್ಗೆ ಆಕ್ರೋಶ ಹೆಚ್ಚಾಗಿದ್ದು, ಪ್ರತಿಷ್ಠಿತ ಕಾಲೇಜಿನ ವಿರುದ್ಧ ಕೆಲ ಪೋಷಕರು ತಿರುಗಿ ಬಿದ್ದಿದ್ದಾರೆ. ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿರುವ ಹಲವರು, ಸೂಸೈಡ್ ಪ್ರಕರಣಗಳ ಹಿಂದಿನ ರಹಸ್ಯ ಭೇದಿಸಲು ಒತ್ತಾಯಿಸಿದ್ದಾರೆ.

VISTARANEWS.COM


on

pes students self harming
ಆತ್ಮಹತ್ಯೆ ಮಾಡಿಕೊಂಡ ಸೂರ್ಯ, ರಾಹುಲ್‌, ಆದಿತ್ಯ
Koo

ಬೆಂಗಳೂರು: ನಿನ್ನೆ ರಾಜಧಾನಿಯ (Bengaluru) ಪ್ರತಿಷ್ಠಿತ ಪಿಇಎಸ್‌ ಎಂಜಿನಿಯರಿಂಗ್‌ (PES university) ಕಾಲೇಜಿನ ವಿದ್ಯಾರ್ಥಿ ರಾಹುಲ್‌ ಆತ್ಮಹತ್ಯೆಯೊಂದಿಗೆ, ಈ ಕಾಲೇಜಿನಲ್ಲಿ ಒಂದು ವರ್ಷದ ಅಂತರದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ (Student Self harming) ಮಾಡಿಕೊಂಡಂತಾಗಿದೆ. ಇವು ನಾಲ್ಕೂ ಕೂಡ ವಿಚಿತ್ರ ಸಾಮ್ಯತೆ ಹೊಂದಿವೆ. ನಾಲ್ವರೂ ಪಿಇಎಸ್‌ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಎಲ್ಲರೂ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು (Engineering Students) ಹಾಗೂ ಅಭ್ಯಾಸದಲ್ಲಿ ಟಾಪರ್‌ಗಳೇ (Toppers) ಆಗಿದ್ದಾರೆ.

ಇತ್ತ, ವಿದ್ಯಾರ್ಥಿಗಳ ಪೋಷಕರು ಕಾಲೇಜಿನ ಆಡಳಿತ ಮಂಡಳಿಯವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಒಂದು ವರ್ಷದಲ್ಲಿ 4 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಪರಿಸ್ಥಿತಿಯ ಗಂಭೀರತೆಯನ್ನು ಪೊಲೀಸರ ಹಾಗೂ ಸರ್ಕಾರದ ಗಮನಕ್ಕೆ ತರಲು ಪಿಇಎಸ್ ಯೂನಿವರ್ಸಿಟಿ ವಿರುದ್ಧ ಮೇ 18ಕ್ಕೆ ಪ್ರತಿಭಟನೆ ಪೋಷಕರಿಂದ ಫ್ರೀಡ್ಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಒಂದೇ ವರ್ಷದ ಅಂತರದಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಮೂವರೂ ಒಂದೇ ಕಟ್ಟಡದ, 6ನೇ ಅಂತಸ್ತಿನಿಂದಲೇ ಬಿದ್ದು ಮೃತಪಟ್ಟಿದ್ದಾರೆ. 2023ರ ಜುಲೈನಲ್ಲಿ ಹೊಸಕೆರೆಹಳ್ಳಿ ಪಿಇಎಸ್ ಕಾಲೇಜಿನಲ್ಲಿ ಆದಿತ್ಯ ಪ್ರಭು ಎಂಬಾತ ಜೀವಹಾನಿ ಮಾಡಿಕೊಂಡಿದ್ದ. ಇದರ ನಂತರ, ಎಲೆಕ್ಟ್ರಾನಿಕ್‌ ಸಿಟಿಯ ಪಿಇಎಸ್‌ ಯೂನಿವರ್ಸಿಟಿ ಕಟ್ಟಡದಲ್ಲಿ ದುರಂತಗಳು ಸಂಭವಿಸಿವೆ. 2023ರ ಅಕ್ಟೋಬರ್‌ನಲ್ಲಿ ‌ಸೂರ್ಯ (21), 2024ರ ಜನವರಿ 29ರಂದು ವಿಗ್ನೇಶ್ (20), ನಿನ್ನೆ ರಾಹುಲ್ (21) ಸುಸೈಡ್‌ ಮಾಡಿಕೊಂಡಿದ್ದಾರೆ. ಪೊಲೀಸ್ ಇಲಾಖೆಯಿಂದ ಇವುಗಳ ತನಿಖೆ ನಡೆಯುತ್ತಿದೆ.

ಆತ್ಮಹತ್ಯೆ ಮಾಡಿಕೊಂಡ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಟಾಪರ್ಸ್ ಆಗಿದ್ದು, ಇನ್ನಷ್ಟು ಅಂಕ ಗಳಿಸುವಂತೆ ಒತ್ತಡಕ್ಕೊಳಗಾಗಿರಬಹುದು ಎಂದು ಶಂಕಿಸಲಾಗಿದೆ. ಈ ಆತ್ಮಹತ್ಯೆ ಸರಣಿಯ ಬಗ್ಗೆ ಆಕ್ರೋಶ ಹೆಚ್ಚಾಗಿದ್ದು, ಪ್ರತಿಷ್ಠಿತ ಕಾಲೇಜಿನ ವಿರುದ್ಧ ಕೆಲ ಪೋಷಕರು ತಿರುಗಿ ಬಿದ್ದಿದ್ದಾರೆ.

ಸೋಶಿಯಲ್ ಮೀಡಿಯಾಗಳಲ್ಲಿ ಈ ಬಗ್ಗೆ ಆಕ್ರೋಶ ಕಂಡುಬಂದಿದೆ. ಈ ಕಾಲೇಜಿನಲ್ಲಿ ಏನಾಗುತ್ತಿದೆ, ಇಷ್ಟು ಆತ್ಮಹತ್ಯೆಗಳು ಸಂಭವಿಸಿದರೂ ಕಾರಣ ಯಾಕೆ ಪತ್ತೆಯಾಗುತ್ತಿಲ್ಲ, ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿರುವ ಹಲವರು, ಸೂಸೈಡ್ ಪ್ರಕರಣಗಳ ಹಿಂದಿನ ರಹಸ್ಯ ಭೇದಿಸಲು ಒತ್ತಾಯಿಸಿದ್ದಾರೆ.

ಈ ಹಿಂದೆ, ಪಿಇಎಸ್ ಯೂನಿವರ್ಸಿಟಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಯ ಕುರಿತು ಏಪ್ರಿಲ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಪತ್ರ ಬರೆದಿತ್ತು. ವಿದ್ಯಾರ್ಥಿಗಳ ಸರಣಿ ಸಾವಿನ ಬಗ್ಗೆ ತನಿಖೆ ನಡೆಸಿ, ತಡೆಗಟ್ಟಲು ಸೂಕ್ತ ಕ್ರಮವಹಿಸಲು ಕೇಂದ್ರ ಸಚಿವಾಲಯ ಸೂಚನೆ ನೀಡಿತ್ತು. 2024 ಏಪ್ರಿಲ್ 1ರಂದು ಕೇಂದ್ರ ಶಿಕ್ಷಣ ಸಚಿವಾಲಯ ಪತ್ರ ಬರೆದ ಒಂದು ತಿಂಗಳಲ್ಲೇ ಮತ್ತೊಬ್ಬ ವಿದ್ಯಾರ್ಥಿಯ ಸಾವು ಸಂಭವಿಸಿದೆ.

ನಿನ್ನೆಯ ಘಟನೆ

ನಿನ್ನೆ ಕರಸಾಲ ರಾಹುಲ್‌ ಎಂಬ ವಿದ್ಯಾರ್ಥಿ ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ (Electronic city) ಪಿಇಎಸ್ ಯೂನಿವರ್ಸಿಟಿಯ ಕಟ್ಟಡದಿಂದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಪರೀಕ್ಷೆಗೆ (Exam) ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದ ಈತ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈತ ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ವಿಧ್ಯಾರ್ಥಿ. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ.

ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್‌ನಿಂದ 4 ಕಿಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಪರೀಕ್ಷೆ 8.30ಕ್ಕೆ ಆರಂಭವಾಗಲಿದ್ದ ಕಾರಣ 7.30ರ ಸುಮಾರಿಗೆ ಮನೆಯಿಂದ ಹೊರಟಿದ್ದ. ಆತನ ತಾಯಿ ಕಾಲೇಜು ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ. ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.‌

ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

woman murder case kengeri

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ (Strangle) ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Continue Reading

ಕರ್ನಾಟಕ

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

Karnataka Weather: ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

VISTARANEWS.COM


on

Koo

ಬೆಂಗಳೂರು: ಮೇ 16 ರಂದು ರಾಜ್ಯದ ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (50-60 ಕಿ.ಮೀ) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುರುವಾರ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ (Karnataka Weather) ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ.

ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ, ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading
Advertisement
A Movie Re-ReleaseActress Chandni relives memories
ಸ್ಯಾಂಡಲ್ ವುಡ್5 mins ago

A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

Sunil Chhetri
ಕ್ರೀಡೆ21 mins ago

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Aishwarya Rai Injured heads to Cannes Film Festival with daughter
ಬಾಲಿವುಡ್29 mins ago

Cannes 2024: ಐಶ್ವರ್ಯಾ ರೈ ಕೈಗೆ ಪೆಟ್ಟು: ಮಗಳ ಜತೆ ಕಾನ್ ಫಿಲ್ಮ್ ಫೆಸ್ಟಿವಲ್‌ನತ್ತ ಹೊರಟ ನಟಿ!

Robert Fico
ವಿದೇಶ31 mins ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ ನಡೆಸಿದ್ದು ಓರ್ವ ಕವಿ; ಯಾಕೀ ದ್ವೇಷ?

self harming gym trainer
ಕ್ರೈಂ36 mins ago

Self Harming: ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್‌ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ

GT vs SRH
ಕ್ರೀಡೆ46 mins ago

GT vs SRH: ಇಂದು ಲ್ಯಾವೆಂಡರ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಗುಜರಾತ್​ ತಂಡ; ಇದರ ಉದ್ದೇಶವೇನು?

mlc election congress candidate gift boxes
ಬೆಂಗಳೂರು1 hour ago

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

Pakistan
ವಿದೇಶ1 hour ago

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Kangana Ranaut's Emergency gets postponed again
ಬಾಲಿವುಡ್1 hour ago

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

T20 World Cup 2024
ಕ್ರೀಡೆ1 hour ago

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌