ಜಯನಗರದಲ್ಲಿ ಮಹಿಳೆಯ ಕೊಲೆ; ಇಸ್ಲಾಂ ಸ್ವೀಕರಿಸಿ, ಹಿಂದು ಧರ್ಮಕ್ಕೆ ಮರಳಿದ್ದ ವ್ಯಕ್ತಿ ಕೊಂದಿದ್ದೇಕೆ? - Vistara News

ಕ್ರೈಂ

ಜಯನಗರದಲ್ಲಿ ಮಹಿಳೆಯ ಕೊಲೆ; ಇಸ್ಲಾಂ ಸ್ವೀಕರಿಸಿ, ಹಿಂದು ಧರ್ಮಕ್ಕೆ ಮರಳಿದ್ದ ವ್ಯಕ್ತಿ ಕೊಂದಿದ್ದೇಕೆ?

ಬೆಂಗಳೂರಿನ ಜಯನಗರದಲ್ಲಿ ಕೋಲ್ಕೊತಾ ಮೂಲದ ಫರೀದಾ ಖಾನ್‌ ಎಂಬ ಮಹಿಳೆಯ ಕೊಲೆಯ ಹಿಂದೆ ಭೀಕರ ಸತ್ಯ ಅಡಗಿದೆ. ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ ಗಿರೀಶ್‌ ಮತ್ತೆ ಹಿಂದು ಧರ್ಮ ಸ್ವೀಕರಿಸಿದ್ದ. ಆತನು ಮದುವೆಯಾಗು ಎಂಬುದಾಗಿ ಫರೀದಾ ಖಾನ್‌ ಎದುರು ಪ್ರಸ್ತಾಪಿಸಿದಾಗ ಆಕೆಯು ಇದನ್ನು ನಿರಾಕರಿಸಿದ್ದಾರೆ. ಆಗ ರೊಚ್ಚಿಗೆದ್ದ ಗಿರೀಶ್‌, ಫರೀದಾ ಖಾನ್‌ ಅವರನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ (Bengaluru) ಜಯನಗರದಲ್ಲಿ ಫರೀದಾ ಖಾನ್‌ (42) ಎಂಬ ಮಹಿಳೆಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಓಯೋ ರೂಮ್‌ಗೆ (Oyo Room) ಕರೆದಕೊಂಡು ಹೋಗಿ, ಬಳಿಕ ಶಾಲಿನಿ ಗ್ರೌಂಡ್‌ನಲ್ಲಿ ಫರೀದಾ ಖಾನ್‌ ಅವರನ್ನು ಕೊಲೆ ಮಾಡಿದ ಆರೋಪಿ ಗಿರೀಶ್‌ ಇದಕ್ಕೂ ಮೊದಲು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು, ಬಳಿಕ ಹಿಂದು ಧರ್ಮಕ್ಕೆ ಮರಳಿದ್ದ. ಈತನನ್ನು ಮದುವೆಯಾಗಲು ಫರೀದಾ ಖಾನ್‌ (Farida Khan) ಒಪ್ಪದ ಕಾರಣ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

2011ರಲ್ಲಿ ಇಸ್ಲಾಂಗೆ ಮತಾಂತರ

ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ 32 ವರ್ಷದ ಗಿರೀಶ್‌ 2011ರಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ. ಹಿಂದು ಧರ್ಮದ ಮೂರ್ತಿ ಪೂಜೆ ಆಚರಣೆ ವಿರೋಧಿಸಿ ಈತನು ಇಸ್ಲಾಂಗೆ ಮತಾಂತರಗೊಂಡು ರಿಹಾನ್‌ ಎಂಬುದಾಗಿ ಹೆಸರು ಬದಲಾಯಿಸಿಕೊಂಡಿದ್ದ. ಆದರೆ, ಈತನು ಮತಾಂತರಗೊಂಡಿದ್ದ ಕಾರಣ ತಂಗಿಗೆ ವರ ಸಿಕ್ಕಿರಲಿಲ್ಲ. ಹಾಗಾಗಿ, ಈತನು ಮತ್ತೆ ಹಿಂದು ಧರ್ಮಕ್ಕೆ ಮರಳಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

20 ಬಾರಿ ಇರಿದು ಕೊಂದಿದ್ದೇಕೆ?

ಇಸ್ಲಾಂ ಧರ್ಮದಿಂದ ಘರ್‌ ವಾಪ್ಸಿಯಾಗಿದ್ದ ಗಿರೀಶ್‌ ಹಾಗೂ ಕೋಲ್ಕೊತಾ ಮೂಲದ ಫರೀದಾ ಖಾನ್‌ ಮಧ್ಯೆ 2022ರಲ್ಲಿ ಪರಿಚಯವಾಗಿರುತ್ತದೆ. ಕೋಲ್ಕೊತಾದಿಂದ ಬೆಂಗಳೂರಿಗೆ ಬಂದು, ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಫರೀದಾ ಖಾನ್‌ ಹಾಗೂ ಗಿರೀಶ್‌ ಮಧ್ಯೆ ಪ್ರೇಮಾಂಕುರವಾಗಿರುತ್ತದೆ. ಇಬ್ಬರ ಮಧ್ಯೆ ಪ್ರೀತಿ ಮೂಡಿ, ಮದುವೆಯಾಗಲು ತೀರ್ಮಾನಿಸಿದರೂ ಸುಮಾರು 20 ಬಾರಿ ಚಾಕು ಇರಿದು ಫರೀದಾ ಖಾನ್‌ ಅವರನ್ನು ಗಿರೀಶ್‌ ಕೊಂದಿರುವುದು ಭೀಕರವಾಗಿದೆ.

Murder Case

ಪಿಜಿಯಲ್ಲಿ ತಂಗಿದ್ದ ಫರೀದಾ ಖಾನ್‌ ಮಾರ್ಚ್‌ 6ರಂದು ಕೋಲ್ಕೊತಾಗೆ ತೆರಳಿದ್ದಾರೆ. ಆಸ್ಪತ್ರೆಗೆ ಹೋಗಬೇಕು ಎಂಬದಾಗಿ ಹೇಳಿ ಅವರು ಕೋಲ್ಕೊತಾಗೆ ಹೋಗಿದ್ದರು. ಈಗಾಗಲೇ ಮದುವೆಯಾಗಿ, ಪತಿ ತೀರಿಕೊಂಡಿರುವ ಕಾರಣ ಏಕಾಂಗಿಯಾಗಿದ್ದ ಫರೀದಾ ಖಾನ್‌ ಬರುವಾಗ ಮಗಳನ್ನು ಕೂಡ ಕರೆದುಕೊಂಡು ಬಂದಿದ್ದರು. ಫರೀದಾ ಖಾನ್‌ ಬೆಂಗಳೂರಿಗೆ ಬಂದಾಗ ಆಕೆ ಸುಳ್ಳು ಹೇಳಿ ಕೋಲ್ಕೊತಾಗೆ ಹೋಗಿರುವುದು ಗೊತ್ತಾಗಿತ್ತು.

ರೀಮಾ ರಾಯ್‌ ಎಂಬ ಮಹಿಳೆ ಜತೆ ಫರೀದಾ ಖಾನ್‌ ಕೋಲ್ಕೊತಾಗೆ ಬೇರೆ ಕಾರಣಕ್ಕೆ ಹೋಗಿದ್ದಾರೆ ಎಂಬುದು ಗಿರೀಶ್‌ಗೆ ಗೊತ್ತಾಗಿದೆ. ರೀಮಾ ರಾಯ್‌ ಪತಿ ಕರೆ ಮಾಡಿ ಗಿರೀಶ್‌ಗೆ ಮಾಹಿತಿ ನೀಡಿದ್ದಾನೆ. ಇದೇ ವಿಚಾರಕ್ಕಾಗಿ ಫರೀದಾ ಖಾನ್‌ ಹಾಗೂ ಗಿರೀಶ್‌ ಮಧ್ಯೆ ಜಗಳವಾಗಿದೆ. ಪ್ರೀತಿಸುತ್ತಿದ್ದಾಕೆ ಮೋಸ ಮಾಡಿದಳು ಎಂದು ಆತನು ಸೇಡು ತೀರಿಸಿಕೊಳ್ಳಲು ಪ್ಲಾನ್ ಮಾಡಿದ್ದಾನೆ.

ಇದನ್ನೂ ಓದಿ: Murder case : ತಲಘಟ್ಟಪುರದಲ್ಲಿ ಚಾಕು ಇರಿದು ವ್ಯಕ್ತಿ ಹತ್ಯೆ; ಕೊಲೆಗಾರ ಎಸ್ಕೇಪ್‌

ಏನದು ಕೊಲೆ ಪ್ಲಾನ್?‌

ಮಾರ್ಚ್‌ 28ರಂದು ಗಿರೀಶ್‌ ಬರ್ತ್‌ಡೇ ಇದ್ದು, ಪಾರ್ಟಿ ಆಯೋಜಿಸಿದ್ದಾನೆ. ಜಗಳ ಎಲ್ಲ ಬಿಟ್ಟು ಮಾರ್ಚ್‌ 29ರಂದು ಫರೀದಾ ಖಾನ್‌ ಹಾಗೂ ಗಿರೀಶ್‌ ಪಾರ್ಟಿ ಮಾಡಿದ್ದಾರೆ. ಜೆಪಿ ನಗರದ ಓಯೋ ರೂಮ್‌ನಲ್ಲಿ ಇಬ್ಬರೂ ರಾತ್ರಿ ಕಳೆದು, ಮಾರ್ಚ್‌ 30ರಂದು ಫರೀದಾ ಖಾನ್‌ ಅವರನ್ನು ಶಾಲಿನಿ ಗ್ರೌಂಡ್ಸ್‌ಗೆ ಕರೆದುಕೊಂಡು ಬಂದಿದ್ದಾನೆ. ಆಗ, ನನ್ನನ್ನು ಮದುವೆಯಾಗು ಎಂದು ಗಿರೀಶ್‌ ಆಕೆಯನ್ನು ಕೇಳಿದ್ದಾನೆ. ಇದನ್ನು ಫರೀದಾ ಖಾನ್‌ ನಿರಾಕರಿಸಿದ್ದಾರೆ. ಆಗ ಇನ್ನಷ್ಟು ರೊಚ್ಚಿಗೆದ್ದ ಗಿರೀಶ್‌, ಫರೀದಾ ಖಾನ್‌ ಅವರಿಗೆ 20 ಬಾರಿ ಚಾಕು ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

Assault Case : ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

Assault Case : ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿತ್ತು. ಗಾಯಾಳು ತಂದೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಲು ಆಂಬ್ಯುಲೆನ್ಸ್‌ನಲ್ಲಿ ಚಾಲಕ ಇರಲಿಲ್ಲ. ಹೀಗಾಗಿ ಮಗನೊಬ್ಬ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಘಟನೆ ನಡೆದಿದೆ.

VISTARANEWS.COM


on

By

Assault Case
Koo

ಚಿಕ್ಕೋಡಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ (Assault Case) ನಡೆದಿತ್ತು. ಘಟನೆಯಲ್ಲಿ ಗಾಯಗೊಂಡ ತಂದೆಯನ್ನು ಕಾಪಾಡಲು ಸದಲಗಾ ಸರ್ಕಾರಿ ಆಸ್ಪತ್ರೆಯಿಂದ ಚಿಕ್ಕೋಡಿವರೆಗೂ ಮಗನೇ ಸರ್ಕಾರಿ ಆಂಬ್ಯುಲೆನ್ಸ್‌ ಓಡಿಸಿಕೊಂಡು ಬಂದಿದ್ದಾನೆ.

ಸದಲಗಾ ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್‌ನಲ್ಲಿ ಚಾಲಕ ಇಲ್ಲದ ಹಿನ್ನೆಲೆಯಲ್ಲಿ ಯುವಕನೇ ಆಂಬ್ಯುಲೆನ್ಸ್‌ ಚಲಾಯಿಸಿಕೊಂಡು ಬಂದು ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಇದು ಹಾಳಾದ ಆರೋಗ್ಯ ಇಲಾಖೆ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜನವಾಡ ಗ್ರಾಮದ ಸಿದ್ದು ಪೂಜಾರಿಗೆ ಆತನ ಪತ್ನಿ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆಯಲ್ಲಿ ಸಿದ್ದು ಪೂಜಾರಿ ಕಿವಿ ಕಟ್ ಆಗಿತ್ತು, ಜತೆಗೆ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಗಾಯಗೊಂಡ ತಂದೆಯನ್ನು ಕೂಡಲೇ ಬೈಕ್ ಮೇಲೆ ಕೂರಿಸಿಕೊಂಡ ಮಗ ಮಾಳು ಪೂಜಾರಿ ಸದಲಗಾ ಸರ್ಕಾರಿ ಕರೆದುಕೊಂಡು ಹೋಗಿದ್ದ.

ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಆಂಬ್ಯುಲೆನ್ಸ್‌ ಕೊಡಿ ಎಂದಿದ್ದಕ್ಕೆ ಆಸ್ಪತ್ರೆ ವೈದ್ಯರು ಚಾಲಕ ಇಲ್ಲ, ನೀವೇ ಆಂಬ್ಯುಲೆನ್ಸ್‌ ತೆದುಕೊಂಡು ಹೋಗಿ ಎಂದಿದ್ದಾರೆ. ಹೀಗಾಗಿ ಮಾಳು ಪೂಜಾರಿ ಗಾಯಾಳು ತಂದೆಯನ್ನು ಸರ್ಕಾರಿ ಆಂಬ್ಯುಲೆನ್ಸ್‌ ವಾಹನವನ್ನು ತಾನೇ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿದ್ದಾನೆ.

ಇದನ್ನೂ ಓದಿ: Chikkamagaluru Tragedy : ಬಾಯ್ಲರ್‌ ಶಾಖಕ್ಕೆ ಸುಟ್ಟು ಕರಕಲಾದ ಯುವಕ; ಸಿಲ್ವರ್ ಮರವೇರಿದಾಗ ಕರೆಂಟ್‌ ಶಾಕ್‌ಗೆ ಕಾರ್ಮಿಕ ಸಾವು

ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಸ್ಥಳ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ (Chikkalluru Siddappaji Temple) ಪೂಜೆ ವಿಚಾರಕ್ಕೆ ತ್ರಿಶೂಲಗಳಲ್ಲಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಮೂವರು ಅರ್ಚಕರಿಗೆ ಗಂಭೀರ ಗಾಯವಾಗಿದೆ. ಚಿಕ್ಕಲೂರು ದೇವಸ್ಥಾನದ ಅರ್ಚಕ ಶಂಕರಪ್ಪ (65), ಶಿವಕುಮಾರಸ್ವಾಮಿ (40) ಹಾಗೂ ನಂಜುಂಡಸ್ವಾಮಿ (32) ಗಂಭೀರ ಗಾಯಗೊಂಡವರು.

ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ಹೋಗಿ, ಸಿದ್ದಪ್ಪಾಜಿ ದೇವಸ್ಥಾನದ ಬೆತ್ತ ಮತ್ತು ತ್ರಿಶೂಲಗಳನ್ನು ಹಿಡಿದುಕೊಂಡು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.

ಸದ್ಯ ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ನೀಡುವ ವಿಚಾರಕ್ಕೆ ಅರ್ಚಕರ ಗುಂಪಿನ ನಡುವೆ ಗಲಾಟೆ ನಡೆದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಮಗಳೂರು

Chikkamagaluru Tragedy : ಬಾಯ್ಲರ್‌ ಶಾಖಕ್ಕೆ ಸುಟ್ಟು ಕರಕಲಾದ ಯುವಕ; ಸಿಲ್ವರ್ ಮರವೇರಿದಾಗ ಕರೆಂಟ್‌ ಶಾಕ್‌ಗೆ ಕಾರ್ಮಿಕ ಸಾವು

Chikkamagaluru Tragedy : ಚಿಕ್ಕಮಗಳೂರಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ದುರಂತಕ್ಕೆ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ. ಬ್ಲಾಯರ್‌ ರಿಪೇರಿ ಮಾಡುವಾಗ ಶಾಖ ಹೊರ ಬಂದಿದ್ದು ಕಾರ್ಮಿಕ ಸುಟ್ಟು ಕರಕಲಾದರೆ, ಸಿಲ್ವರ್ ಮರಕ್ಕೆ ಮರಗಸಿ ಮಾಡುವಾಗ ಕರೆಂಟ್‌ ಶಾಕ್‌ನಿಂದ ಮತ್ತೊಬ್ಬ ಕಾರ್ಮಿಕ ಪ್ರಾಣಬಿಟ್ಟಿದ್ದಾನೆ.

VISTARANEWS.COM


on

By

Chikkamagaluru Tragedy
ಮೃತ ಉದಯ್‌ ಹಾಗೂ ಮರದಲ್ಲೇ ಹೆಣವಾದ ಚಂದ್ರಪ್ಪ
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ದುರಂತ ಸಂಭವಿಸಿದ್ದು ಕಾರ್ಮಿಕರಿಬ್ಬರು ದಾರುಣವಾಗಿ (Chikkamagaluru Tragedy) ಮೃತಪಟ್ಟಿದ್ದಾರೆ. ಕಾರ್ಮಿಕನೊಬ್ಬ ಬಾಯ್ಲರ್ ರಿಪೇರಿ ಮಾಡುವಾಗ ಏಕಾಏಕಿ ಶಾಖವು ಹೊರಹೊಮ್ಮಿದೆ. ಪರಿಣಾಮ ರಿಪೇರಿ ಮಾಡುತ್ತಿದ್ದ ಕಾರ್ಮಿಕನ ದೇಹ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ನಗರದ ಹೊರವಲಯದ ಕುರುಬರಹಳ್ಳಿ ಬಳಿ ಇರುವ ವಿದ್ಯಾ ಕಾಫಿ ಕ್ಯುರಿಂಗ್‌ನಲ್ಲಿ ಘಟನೆ ನಡೆದಿದೆ.

ಉದಯ್ (27) ಮೃತ ದುರ್ದೈವಿ. ಮಡಿಕೇರಿಯ ಕುಶಾಲನಗರ ಮೂಲದ ಉದಯ್ ಬಾಯ್ಲರ್ ಸರಿಪಡಿಸುವಾಗ ಏಕಾಏಕಿ 340 ಡಿ.ಸೆ ಶಾಖ ಹೊರ ಬಂದಿದೆ. ಶಾಖದ ತೀವ್ರತೆಗೆ ಉದಯ್‌ ದೇಹ ಸುಟ್ಟು ಕರಕಲಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸದ್ಯ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಲಾಗಿದೆ.

ಶವಗಾರದ ಬಳಿ ಮಗನನ್ನು ಕಳೆದುಕೊಂಡ ತಾಯಿಯ ಕಣ್ಣೀರು ಹಾಕುತ್ತಿದ್ದ ದೃಶ್ಯ ಕಂಡು ಬಂತು. ವಿಷಯ ತಿಳಿಯುತ್ತಿದ್ದಂತೆ ಶವಗಾರದ ಬಳಿ ಕಾಫಿ ಕ್ಯುರಿಂಗ್ ಕಾರ್ಮಿಕರು ಜಮಾಯಿಸಿದ್ದರು. ಸದ್ಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ವಿದ್ಯುತ್ ಶಾಕ್‌ನಿಂದ ಮರದಲ್ಲೇ ಕಾರ್ಮಿಕ ಸಾವು

ಸಿಲ್ವರ್ ಮರಕ್ಕೆ ಮರಗಸಿ ಮಾಡುವಾಗ ಕಾರ್ಮಿಕರೊಬ್ಬರು ವಿದ್ಯುತ್‌ ಶಾಕ್‌ನಿಂದ ಮೃತಪಟ್ಟಿದ್ದಾರೆ. ಚಂದ್ರಪ್ಪ (45) ಮೃತ ದುರ್ದೈವಿ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಿಲ್ವರ್ ಮರದ ಅಡ್ಡ ಕೊಂಬೆಗಳನ್ನು ಕಡಿಯುವಾಗ ಘಟನೆ ನಡೆದಿದೆ.

ಮರ ನೇರವಾಗಿ ಬೆಳೆಯಲೆಂದು ಸಿಲ್ವರ್ ಮರಕ್ಕೆ ಮರಗಸಿ ಮಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಚಂದ್ರಪ್ಪ ಮರವೇರಿ ಮರಗಸಿ ಮಾಡುತ್ತಿದ್ದರು. ಈ ವೇಳೆ ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಸ್ಪರ್ಶವಾಗಿದೆ. ಈ ವೇಳೆ ಮರದಲ್ಲೆ ವಿದ್ಯುತ್‌ ಪ್ರವಹಿಸಿ ಚಂದ್ರಪ್ಪ ಮೃತಪಟ್ಟಿದ್ದಾರೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣದಲ್ಲಿ ಸುಮಾರು 80 ಕೋಟಿ ಹಣ ಅಕ್ರಮ ವರ್ಗಾವಣೆಯಾಗಿದೆ. ಯಾವ ಕಂಪೆನಿಗೆ ಎಷ್ಟು ಹಣ ವರ್ಗಾವಣೆಯಾಗಿದೆ ಎಂಬ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣದಲ್ಲಿ (Valmiki Corporation Scam) ಭ್ರಷ್ಟಾಚಾರ ಆರೋಪಗಳು ಕೇಳಿಬಂದಿರುವುದರಿಂದ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ. ಹೀಗಾಗಿ ಅವ್ಯವಹಾರದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಈ ನಡುವೆ ಹಗರಣದಲ್ಲಿ ಒಟ್ಟು 16 ಕಂಪನಿಗಳಿಗೆ ಸುಮಾರು 80 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಆಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ತಲೆ ದಂಡ ಬಹುತೇಕ ಫಿಕ್ಸ್‌ ಎನ್ನಲಾಗುತ್ತಿದೆ. ಎಸ್‌ಐಟಿ ವರದಿ ಬಳಿಕವೂ ಸಿಬಿಐ ಎಂಟ್ರಿ ಬಹುತೇಕ ಖಚಿತ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ದೂರಿನ ಅನ್ವಯ ಸಿಬಿಐ ಎಂಟ್ರಿ ಸಾಧ್ಯತೆ ಇದೆ. ಇನ್ನು ಪ್ರಕರಣದಲ್ಲಿ ಐಟಿ ಕಂಪನಿಗಳು, ಸೆಕ್ಯೂರಿಟಿ ಏಜೆನ್ಸಿಗಳು, ಡಿಟೆಕ್ಟಿವ್ ಕಂಪನಿಗಳು ಹಾಗೂ ಎಂಟು ಜನರ ವೈಯಕ್ತಿಕ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಒಟ್ಟು 16 ಕಂಪನಿಗಳಿಗೆ 79.30 ಕೋಟಿ ವರ್ಗಾವಣೆಯಾಗಿದೆ ಎನ್ನಲಾಗಿದೆ.

ಐದು ಹಂತದಲ್ಲಿ ಹಣ ವರ್ಗಾವಣೆ

ಮಾರ್ಚ್ 6

ಮೊದಲ ಹಣ ವರ್ಗಾವಣೆ ಮಾರ್ಚ್ 6ರಂದು ನಡೆದಿದೆ. ನಾಲ್ಕು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ 20 ಕೋಟಿಯನ್ನು ಅಧಿಕಾರಿಗಳು ವರ್ಗಾಯಿಸಿದ್ದಾರೆ.

ಮಾರ್ಚ್ 11

ಎರಡನೇ ಹಣ ವರ್ಗಾವಣೆ ನಡೆದಿರೋದು ಮಾರ್ಚ್ 11 ರಂದು. ಎರಡು ಕಂಪನಿಗಳಿಗೆ 9 ಕೋಟಿ 60 ಲಕ್ಷ ವರ್ಗಾವಣೆ ಮಾಡಲಾಗಿದೆ.

ಮಾರ್ಚ್ 30

ಮೂರನೇ ವರ್ಗಾವಣೆ ಮಾರ್ಚ್ 30ರಂದು ನಡೆದಿದೆ. ಬರೋಬ್ಬರಿ 40.10 ಕೋಟಿ ಮೊತ್ತ ವರ್ಗಾವಣೆ ಮಾಡಲಾಗಿದೆ ಒಟ್ಟು ಎಂಟು ಕಂಪನಿಗಳಿಗೆ ನಾಲ್ಕು ಕೋಟಿ 10 ಲಕ್ಷ ವರ್ಗಾವಣೆ ಆಗಿದೆ.

ಏಪ್ರಿಲ್ 23

ನಾಲ್ಕನೇ ಹಣ ವರ್ಗಾವಣೆ ಏಪ್ರಿಲ್ 2ರಂದು ಆಗಿದೆ. ಒಂದು ಕಂಪನಿಯ ಅಕೌಂಟ್‌ಗೆ 4.50 ಕೋಟಿ ವರ್ಗಾವಣೆ ಮಾಡಲಾಗಿದೆ

ಮೇ 6

ಐದನೇ ಹಣ ವರ್ಗಾವಣೆ ಮೇ 6 ರಂದು ನಡೆದಿದೆ. 5.10 ಕೋಟಿ ವರ್ಗಾವಣೆ ಮಾಡಲಾಗಿದೆ. ಒಂದು ಕಂಪನಿಯ ಅಕೌಂಟ್‌ಗೆ ಹಣ ವರ್ಗಾವಣೆ ಆಗಿದೆ.

ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ?

  1. ಟಾಲೆನ್ ಕ್ಯೂ ಸಾಫ್ಟ್‌ವೇರ್ ಇಂಡಿಯಾ ಪ್ರೈ. ಲಿ. – 5,10,00,000 ರೂ
  2. ಸಿಸ್ಟಮ್ ಅಂಡ್ ಸರ್ವೀಸ್ ಕಂಪೆನಿ – 4,55,00,000 ರೂ
  3. ರಾಮ್ ಎಂಟರ್‌ಪ್ರೈಸಸ್ – 5,07,00,000 ರೂ.
  4. ಸ್ಕಿಲ್ ಮ್ಯಾಪ್ ಟ್ರೈನಿಂಗ್ ಅಂಡ್ ಸರ್ವಿಸಸ್ ಪ್ರೈ. ಲಿ. – 4,84,00,000 ರೂ.
  5. ಸ್ವಾಪ್‌ ಡಿಸೈನ್ ಪ್ರೈ. ಲಿ – 5,15,00,000 ರೂ.
  6. ಜಿ.ಎನ್ ಇಂಡಸ್ಟ್ರೀಸ್ – 4,42,00,000 ರೂ.
  7. ನಾವೆಲ್ ಸೆಕ್ಯುರಿಟಿ ಸರ್ವಿಸಸ್ ಪ್ರೈ. ಲಿ. – 4,56,00,000 ರೂ.
  8. ಸುಜಲ್ ಎಂಟರ್‌ಪ್ರೈಸಸ್ – 5,63,00000 ರೂ.
  9. ಗ್ರಾಬ್ ಎ ಗ್ರಬ್ ಸರ್ವಿಸಸ್ ಪ್ರೈ. ಲಿ. – 5,88,00,000 ರೂ.
  10. V6 ಬ್ಯುಸಿನೆಸ್ ಸರ್ವಿಸಸ್ – 4,50,01,500 ರೂ.
  11. ನಿತ್ಯಾ ಸೆಕ್ಯುರಿಟಿ ಸರ್ವಿಸಸ್ – 4,47,50,000 ರೂ.
  12. ವೋಲ್ಟಾ ಟೆಕ್ನಾಲಜಿ ಸರ್ವಿಸಸ್ – 5,12,50,000 ರೂ.
  13. ಅಕಾರ್ಡ್ ಬ್ಯುಸಿನೆಸ್ ಸರ್ವಿಸಸ್ – 5,46,85,000 ರೂ.
  14. ಹ್ಯಾಪಿಯಸ್ಟ್ ಮೈಂಡ್ಸ್ ಟೆಕ್ನಾಲಜಿ ಲಿಮಿಟೆಡ್ – 4,53,15,000 ರೂ.
  15. ಮ್ಯಾನ್ಹು ಎಂಟರ್‌ಪ್ರೈಸಸ್ – 5,01,50,000 ರೂ.
  16. ವೈ.ಎಂ ಎಂಟರ್‌ಪ್ರೈಸಸ್ – 4,98,50,000 ರೂ.

ಎಂಡಿ, ಲೆಕ್ಕಾಧಿಕಾರಿ ಬಂಧನ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಎಸ್ಐಟಿ ಅಧಿಕಾರಿಗಳು ನಿಗಮದ ಅಧಿಕಾರಿಗಳನ್ನು ಬಂಧಿಸಿದ್ದಾರೆ. ವ್ಯವಸ್ಥಾಪಕ ನಿರ್ದೇಶಕ ಜೆ. ಜಿ. ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರುಶುರಾಮ್‌ ಜಿ. ದುರ್ಗಣ್ಣನವರ್ ಬಂಧಿತರು. ಹಗರಣ ಬೆಳಕಿಗೆ ಬಂದ ನಂತರ ಮೇ 30ರಂದು ಇಬ್ಬರನ್ನೂ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿದ್ದ ಇಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.

ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ

ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬ್ಯಾಂಕ್‌ಗಳಿಗೆ ವರ್ಗಾವಣೆ ಆಗಿರುವ ಮಾಹಿತಿ ಬಿಡುಗಡೆ ಮಾಡಿದ ಬಿಜೆಪಿ, ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದೆ.

ಎಕ್ಸ್‌ ವೇದಿಕೆಯಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಭ್ರಷ್ಟಾತಿ ಭ್ರಷ್ಟ ಕಾಂಗ್ರೆಸ್‌ ಸರ್ಕಾರ ತಮ್ಮ ಭ್ರಷ್ಟ ಸಚಿವರನ್ನು ಕಾಪಾಡಿಕೊಳ್ಳಲು ಇದೀಗ ಬೃಹನ್ನಳೆ ನಾಟಕ ಆರಂಭಿಸಿದೆ. ಪರಿಶಿಷ್ಟ ಪಂಗಡಕ್ಕೆ ಸೇರಬೇಕಾಗಿದ್ದ ಅಷ್ಟೊಂದು ಕೋಟಿ ಹಣ ಮುಖ್ಯಮಂತ್ರಿ ಹಾಗೂ ಸಚಿವರ ಸೂಚನೆ ಇಲ್ಲದೆ ತೆಲಂಗಾಣದ ಯಾವುದೋ ಕಂಪೆನಿಗೆ ವರ್ಗಾವಣೆ ಆಗಲು ಹೇಗೆ ಸಾಧ್ಯ? ಸಿಎಂ ಸಿದ್ದರಾಮಯ್ಯನವರೇ, ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತೆ ನೀವು ಕೂಡ ಅದೇ ಕೆಲಸ ಮಾಡುತ್ತಿದ್ದೀರಿ. ಮೊದಲು ಆ ಕೆಲಸ ಬಿಡಿ ಈ ಹಗರಣದಲ್ಲಿ ನಿಮಗೆ ಸಿಕ್ಕಿರುವ ಪಾಲೆಷ್ಟು ಹೇಳಿ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ | ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಆತ್ಮಹತ್ಯೆ, 87 ಕೋಟಿ ರೂ. ಹಗರಣ; ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ಆರೋಪಿ ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯುವ ಬದಲು, ಅಕ್ರಮ ಹಣ ವರ್ಗಾವಣೆ ಸಂಬಂಧ ಬ್ಯಾಂಕ್‌ಗಳ ಮೇಲೆ ಮತ್ತು ಅಧಿಕಾರಿಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಕ್ರಮ ಹಣ ವರ್ಗಾವಣೆ ಸಂಬಂಧ CBI ಗೆ ದೂರು ದಾಖಲಿಸಿದ್ದರೂ, ಸಿದ್ದರಾಮಯ್ಯ ಸರ್ಕಾರ ಮಾತ್ರ SIT, CID ತನಿಖೆ ಎಂದು ಕಾಲಹರಣ ಮಾಡಿ #ATMSarkaraಕ್ಕೆ ಕ್ಲೀನ್ ಚಿಟ್ ಕೊಟ್ಟಕೊಳ್ಳುವ ವಿಫಲ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದೆ.

Continue Reading

ಬಾಲಿವುಡ್

Salman Khan: ಸಲ್ಮಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು; ನಾಲ್ವರ ಬಂಧನ

Salman Khan: ಪೊಲೀಸ್ ಮೂಲಗಳ ಪ್ರಕಾರ, ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಕೆನಡಾ ಮೂಲದ ಸೋದರಸಂಬಂಧಿ ಅನ್ಮೋಲ್ ಬಿಷ್ಣೋಯ್ ಮತ್ತು ಸಹವರ್ತಿ ಗೋಲ್ಡಿ ಬ್ರಾರ್ ಜತೆಗೆ ಪಾಕಿಸ್ತಾನಿ ಶಸ್ತ್ರಾಸ್ತ್ರ ವ್ಯಾಪಾರಿಯಿಂದ AK-47, M-16 ಮತ್ತು ಇತರ ಉನ್ನತ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಕಾರಿನ ಮೇಲೆ ದಾಳಿ ಮಾಡುವುದು ಮತ್ತು ತೋಟದ ಮನೆಯ ಮೇಲೆ ಅಟ್ಯಾಕ್‌ ಮಾಡುವುದು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್‌ ಆಗಿತ್ತು ಎನ್ನಲಾಗಿದೆ.

VISTARANEWS.COM


on

Salman Khan Cops arrest 4 with alleged links to Bishnoi gang
Koo

ಬೆಂಗಳೂರು: ಮಹಾರಾಷ್ಟ್ರದ ಪನ್ವೇಲ್‌ನಲ್ಲಿ (Maharashtra’s Panvel) ನಟ ಸಲ್ಮಾನ್ ಖಾನ್ (Salman Khan) ಅವರ ಕಾರಿನ ಮೇಲೆ ಅಟ್ಯಾಕ್‌ ಮಾಡಲು ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ನೊಂದಿಗೆ ನಂಟು ಹೊಂದಿರುವ ನಾಲ್ವರು ವ್ಯಕ್ತಿಗಳನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಹಾರಾಷ್ಟ್ರದ ಪನ್ವೇಲ್‌ನಲ್ಲಿ ಪಾಕಿಸ್ತಾನಿ ಶಸ್ತ್ರಾಸ್ತ್ರ ಪೂರೈಕೆದಾರರಿಂದ ಶಸ್ತ್ರಾಸ್ತ್ರ ಪಡೆದು ಸಲ್ಮಾನ್‌ ಖಾನ್‌ ಕಾರಿನ ಮೇಲೆ ದಾಳಿ ಮಾಡಲು ಈ ತಂಡ ಸಂಚು ರೂಪಿಸಿತ್ತು ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಕೆನಡಾ ಮೂಲದ ಸೋದರಸಂಬಂಧಿ ಅನ್ಮೋಲ್ ಬಿಷ್ಣೋಯ್ ಮತ್ತು ಸಹವರ್ತಿ ಗೋಲ್ಡಿ ಬ್ರಾರ್ ಜತೆಗೆ ಪಾಕಿಸ್ತಾನಿ ಶಸ್ತ್ರಾಸ್ತ್ರ ವ್ಯಾಪಾರಿಯಿಂದ AK-47, M-16 ಮತ್ತು ಇತರ ಉನ್ನತ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಖಾನ್ ಅವರ ಕಾರಿನ ಮೇಲೆ ದಾಳಿ ಮಾಡುವುದು ಮತ್ತು ತೋಟದ ಮನೆಯ ಮೇಲೆ ಅಟ್ಯಾಕ್‌ ಮಾಡುವುದು ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್‌ ಆಗಿತ್ತು ಎನ್ನಲಾಗಿದೆ.

ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಬಿಷ್ಣೋಯ್, ಸಂಪತ್ ನೆಹ್ರಾ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಸಲ್ಮಾನ್‌ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಬಳಿಕ, ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದರು. ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಲ್ಲಿ ಬಂಧಿಸಲಾಗಿತ್ತು. ಅನುಜ್ ಥಾಪನ್ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಪಂಜಾಬ್‌ನಲ್ಲಿ ಏಪ್ರಿಲ್ 26 ರಂದು ಬಂಧಿಸಲಾಗಿತ್ತು. ಒಟ್ಟಾರೆಯಾಗಿ, ಆರು ಮಂದಿಯನ್ನು ಬಂಧಿಸಲಾಗಿತ್ತು ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದ

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

Continue Reading
Advertisement
bhavani revanna SIT team
ಪ್ರಮುಖ ಸುದ್ದಿ4 mins ago

Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

Valmiki Corporation Scam
ಪ್ರಮುಖ ಸುದ್ದಿ7 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

Assault Case
ಬೆಳಗಾವಿ33 mins ago

Assault Case : ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

Actor Jaggesh talk about body shame
ಸ್ಯಾಂಡಲ್ ವುಡ್51 mins ago

Actor Jaggesh: ಬಾಲ್ಯದಲ್ಲಿ ನನ್ನನ್ನು ಕರಿಯ ಎಂದು ಗೇಲಿ ಮಾಡುತ್ತಿದ್ದರು, ಆದರೆ ನಾನು…; ಜಗ್ಗೇಶ್‌ ಮನದ ಮಾತು

Modi Meditation
ದೇಶ52 mins ago

Modi Meditation: ಕನ್ಯಾಕುಮಾರಿಯಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿಯಿಂದ ಸೂರ್ಯ ವಂದನೆ; ವಿಡಿಯೊ ನೋಡಿ

Cristiano Ronaldo
ಕ್ರೀಡೆ54 mins ago

Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

Chikkamagaluru Tragedy
ಚಿಕ್ಕಮಗಳೂರು1 hour ago

Chikkamagaluru Tragedy : ಬಾಯ್ಲರ್‌ ಶಾಖಕ್ಕೆ ಸುಟ್ಟು ಕರಕಲಾದ ಯುವಕ; ಸಿಲ್ವರ್ ಮರವೇರಿದಾಗ ಕರೆಂಟ್‌ ಶಾಕ್‌ಗೆ ಕಾರ್ಮಿಕ ಸಾವು

Valmiki Corporation Scam
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

rahul gandhi
ಪ್ರಮುಖ ಸುದ್ದಿ2 hours ago

Rahul Gandhi: ಬಿಜೆಪಿ ಮಾನನಷ್ಟ ಕೇಸ್‌ನಲ್ಲಿ ಸಿಎಂ, ಡಿಸಿಎಂಗೆ ಶರತ್ತುಬದ್ಧ ಜಾಮೀನು; ರಾಹುಲ್‌ ಗಾಂಧಿ ಮೇಲೆ ಕೋರ್ಟ್‌ ಗರಂ

Salman Khan Cops arrest 4 with alleged links to Bishnoi gang
ಬಾಲಿವುಡ್2 hours ago

Salman Khan: ಸಲ್ಮಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿಗೆ ಸಂಚು; ನಾಲ್ವರ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌