Lok Sabha Election 2024: ನೀವೆಂಥವರೆಂದು ಗೊತ್ತಿದ್ದೂ ಮಾತನಾಡಿಲ್ಲ, ಘನತೆಯಿಂದ ಮಾತಾಡಿ; ಲಕ್ಷ್ಮಿಗೆ ಮಂಗಳಾ ವಾರ್ನಿಂಗ್‌ - Vistara News

Lok Sabha Election 2024

Lok Sabha Election 2024: ನೀವೆಂಥವರೆಂದು ಗೊತ್ತಿದ್ದೂ ಮಾತನಾಡಿಲ್ಲ, ಘನತೆಯಿಂದ ಮಾತಾಡಿ; ಲಕ್ಷ್ಮಿಗೆ ಮಂಗಳಾ ವಾರ್ನಿಂಗ್‌

Lok Sabha Election 2024: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಜನರ ಮನಸಿನಲ್ಲಿ ಸಂಶಯ ಹುಟ್ಟಿಸುವ ಕ್ಷುಲ್ಲಕ ಹೇಳಿಕೆ ಕೊಡುವ ಬದಲು ಸಚಿವ ಸ್ಥಾನಕ್ಕೆ ಗೌರವ ತರುವ ಮಾತು ಆಡಬೇಕು. ಅಷ್ಟಕ್ಕೂ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಂತೆ ಕೇವಲ ಕ್ಷುಲ್ಲಕ ವಿಷಯದ ರಾಜಕಾರಣ ಮಾಡುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್. ಇನ್ನು ಮುಂದಾದರೂ ರಾಷ್ಟ್ರದ ಅಭಿವೃದ್ಧಿ, ರಾಷ್ಟ್ರೀಯತೆ, ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಜನರ ಬೇಕು– ಬೇಡಿಕೆಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲಿದರೆ ಜನರ ಬದುಕು ಹಸನುಗೊಳಿಸುವ ಕೆಲಸ ಆದೀತು ಎಂದು ಮಂಗಳಾ ಅಂಗಡಿ ತಿರುಗೇಟು ನೀಡಿದ್ದಾರೆ.

VISTARANEWS.COM


on

Lok Sabha Election 2024 Mangala Angadi warns Lakshmi Hebbalkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ವಾಕ್ಸಮರಗಳು ಜೋರಾಗಿವೆ. ಒಮ್ಮೊಮ್ಮೆ ವೈಯಕ್ತಿಕ ಮಟ್ಟಕ್ಕೂ ಇಳಿಯುತ್ತಿದೆ. ಅಲ್ಲದೆ, ಕುಟುಂಬದ ಮೇಲಿನ ಆರೋಪಗಳೂ ಜೋರಾಗುತ್ತಿವೆ. ಈಗ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ (Belagavi Lok Sabha constituency) ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಅಬ್ಬರದ ಪ್ರಚಾರ ಶುರುವಾಗಿದೆ. ಹೀಗೆ ಪ್ರಚಾರ ಭಾಷಣದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಅವರು ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ (Jagadish Shettar) ವಿರುದ್ಧ ಮಾತನಾಡಿದ್ದರು. ಬೀಗರಿಗೆ ಟಿಕೆಟ್‌ ತಪ್ಪಿಸಿದ ಅವರೊಬ್ಬರ ಸ್ವಾರ್ಥ ರಾಜಕಾರಣಿ ಎಂದು ಹೇಳಿದ್ದರು. ಇದಕ್ಕೆ ಈಗ ಸಂಸದೆ ಮಂಗಳಾ ಅಂಗಡಿ (Mangala Angadi) ತಿರುಗೇಟು ನೀಡಿದ್ದು, ಘನತೆಯಿಂದ ರಾಜಕಾರಣ ಮಾಡಿ ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸಿರುವ ಮಂಗಳಾ ಅಂಗಡಿ, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ತಮ್ಮ ಕುಟುಂಬದ ಬಗ್ಗೆ ಅವಮಾನಕಾರಿಯಾಗಿ ಮಾತನಾರುವುದು ಸರಿಯಲ್ಲ. ಈ ರೀತಿ ಕೀಳಾಗಿ ಮಾತನಾಡಬೇಡಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಮಂಗಳಾ ಅಂಗಡಿ ಹೇಳಿದ್ದೇನು?

“ಪಕ್ಷ ಮೊದಲು, ಕುಟುಂಬ ನಂತರ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ನಮ್ಮ ಕುಟುಂಬ ಯಾವತ್ತೂ ಬಿಜೆಪಿ ಸಿದ್ಧಾಂತ ನಂಬಿ ರಾಜಕೀಯ ಮಾಡಿದೆ. ಸುರೇಶ ಅಂಗಡಿ (Suresh Angadi) ಅವರು ಸಹ ಬದುಕಿನುದ್ದಕ್ಕೂ ಬಿಜೆಪಿ ತತ್ವದಂತೆ ಬದುಕಿದ ಧೀಮಂತ ರಾಜಕಾರಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತ್ತು. ಅದನ್ನು ಸಮರ್ಥವಾಗಿ ನಿಭಾಯಿಸಿದ ತೃಪ್ತಿ ಇದೆ. ಈ ಬಾರಿ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದ ತಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ. “ಪಕ್ಷ ಮೊದಲು, ಕುಟುಂಬ ನಂತರ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ನಮ್ಮ ಕುಟುಂಬ ಯಾವತ್ತೂ ಬಿಜೆಪಿ ಸಿದ್ಧಾಂತ ನಂಬಿ ರಾಜಕೀಯ ಮಾಡಿದೆ. ಸುರೇಶ ಅಂಗಡಿ ಅವರು ಸಹ ಬದುಕಿನುದ್ದಕ್ಕೂ ಬಿಜೆಪಿ ತತ್ವದಂತೆ ಬದುಕಿದ ಧೀಮಂತ ರಾಜಕಾರಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತ್ತು. ಅದನ್ನು ಸಮರ್ಥವಾಗಿ ನಿಭಾಯಿಸಿದ ತೃಪ್ತಿ ಇದೆ. ಈ ಬಾರಿ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದ ತಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಜನರ ಮನಸಿನಲ್ಲಿ ಸಂಶಯ ಹುಟ್ಟಿಸುವ ಕ್ಷುಲ್ಲಕ ಹೇಳಿಕೆ ಕೊಡುವ ಬದಲು ಸಚಿವ ಸ್ಥಾನಕ್ಕೆ ಗೌರವ ತರುವ ಮಾತು ಆಡಬೇಕು. ಅಷ್ಟಕ್ಕೂ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯಂತೆ ಕೇವಲ ಕ್ಷುಲ್ಲಕ ವಿಷಯದ ರಾಜಕಾರಣ ಮಾಡುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್. ಇನ್ನು ಮುಂದಾದರೂ ರಾಷ್ಟ್ರದ ಅಭಿವೃದ್ಧಿ, ರಾಷ್ಟ್ರೀಯತೆ, ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಜನರ ಬೇಕು– ಬೇಡಿಕೆಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲಿದರೆ ಜನರ ಬದುಕು ಹಸನುಗೊಳಿಸುವ ಕೆಲಸ ಆದೀತು.

ಇದನ್ನೂ ಓದಿ: Lok Sabha Election 2024: ಸಿ.ಪಿ. ಯೋಗೇಶ್ವರ್‌ ಪುತ್ರಿ ಕಾಂಗ್ರೆಸ್‌ ಸೇರ್ಪಡೆ? ಅಪ್ಪ – ಮಗಳನ್ನು ದೂರ ಮಾಡಲ್ಲವೆಂದ ಡಿಕೆಶಿ

ಟಿಕೆಟ್ ಕಿತ್ತುಕೊಂಡಿದ್ದಾರೆ ಎಂಬ ಕ್ಷುಲ್ಲಕ ಹೇಳಿಕೆಗಳಿಗೆ ನಾನು ಪ್ರಜ್ಞಾವಂತ ಪ್ರಜೆಯಾಗಿ ಉತ್ತರಿಸಲಾರೆ. ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೇ ಸಲ ಶಾಸಕಿ ಆಗುತ್ತಲೇ ಸಚಿವೆಯೂ ಆಗಿದ್ದಾರೆ. ಜಿಲ್ಲೆಯಲ್ಲಿ ನಿಮಗಿಂತ ಹಿರಿಯರಾದ ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ ಅವರಿಂದ ಸಚಿವ ಸ್ಥಾನ ಕಿತ್ತುಕೊಂಡವರು ನೀವು. ಆದರೆ, ಈ ವಿಷಯವನ್ನು ಈವರೆಗೆ ನಾವು ಪ್ರಸ್ತಾಪ ಮಾಡಿರಲಿಲ್ಲ. ಜಿಲ್ಲೆಯ ಜನರಿಗೆ ಈ ವಿಷಯ ಚೆನ್ನಾಗಿ ಗೊತ್ತಿದೆ. ಆದ್ದರಿಂದ ಇನ್ನು ಮುಂದೆ ಲಕ್ಷ್ಮಿ ಅವರು ವೈಯಕ್ತಿಕ ವಿಚಾರ ಬಿಟ್ಟು ಸಮಷ್ಟಿ ಪ್ರಜ್ಞೆಯಿಂದ ರಾಜಕೀಯ ಮಾಡುವುದನ್ನು ರೂಢಿ ಮಾಡಿಕೊಳ್ಳುವುದು ಒಳಿತು” ಎಂದು ಮಂಗಳಾ ಅಂಗಡಿ ಗುಡುಗಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದೇನು?

ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ ಅಭ್ಯರ್ಥಿಯಾಗುವ ಮೂಲಕ ಸ್ವಾರ್ಥ ರಾಜಕಾರಣಿ ಎಂದು ನಿರೂಪಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಅಭ್ಯರ್ಥಿ ವಿರುದ್ಧ ಶನಿವಾರ (ಮಾ. 30) ಕಿಡಿಕಾರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

Narendra Modi: ಇಸ್ಕಾನ್‌, ರಾಮಕೃಷ್ಣ ಮಿಷನ್‌ ಹಾಗೂ ಭಾರತ್‌ ಸೇವಾಶ್ರಮ ಸಂಘದ ವಿರುದ್ಧ ಮಮತಾ ಬ್ಯಾನರ್ಜಿ ಹಲವು ಆರೋಪ ಮಾಡಿದ್ದರು. ಇದಕ್ಕೆ ನರೇಂದ್ರ ಮೋದಿ ತಿರುಗೇಟು ನೀಡಿದ್ದು, “ಮುಸ್ಲಿಮರ ಮತಗಳ ಓಲೈಕೆಗಾಗಿ ಮಮತಾ ಬ್ಯಾನರ್ಜಿ ಅವರು ಹೀಗೆ ಮಾಡುತ್ತಿದ್ದಾರೆ” ಎಂದು ಕುಟುಕಿದ್ದಾರೆ.

VISTARANEWS.COM


on

Narendra Modi
Koo

ಕೋಲ್ಕೊತಾ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಜಾತಿ, ಧರ್ಮ, ಮೀಸಲಾತಿ ಸೇರಿ ಹಲವು ವಿಷಯಗಳು ಚರ್ಚೆಯ ಮುನ್ನೆಲೆಗೆ ಬರುತ್ತಿವೆ. ರಾಜಕೀಯ ನಾಯಕರ ಹೇಳಿಕೆಗಳು ತೀಕ್ಷ್ಣತೆ ಪಡೆದುಕೊಂಡಿವೆ. ಇನ್ನು, ಹಿಂದು ಸಂಘ-ಸಂಸ್ಥೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಹರಿಹಾಯ್ದಿದ್ದಾರೆ. “ಮುಸ್ಲಿಮರ ಮತಗಳಿಗಾಗಿ ಮಮತಾ ಬ್ಯಾನರ್ಜಿ ಅವರು ಹಿಂದು ಸಂಘ-ಸಂಸ್ಥೆಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ” ಎಂದು ಕುಟುಕಿದ್ದಾರೆ.

“ಚುನಾವಣೆ ಸಂದರ್ಭದಲ್ಲಿ ಟಿಎಂಸಿಯು ಜನರಿಗೆ ಬೆದರಿಕೆ ಒಡ್ಡಿತ್ತು. ಈಗ ಅದು ತನ್ನ ಮಿತಿಯನ್ನು ಮೀರಿದೆ. ಇಸ್ಕಾನ್‌, ರಾಮಕೃಷ್ಣ ಮಿಷನ್‌ ಹಾಗೂ ಭಾರತ್‌ ಸೇವಾಶ್ರಮ ಸಂಘವು ಜಗತ್ತಿನಾದ್ಯಂತ ಜನರಿಗೆ ಸೇವೆ ಮಾಡುತ್ತಿವೆ. ನೈತಿಕ ಬೆಂಬಲ, ಮಾರ್ಗದರ್ಶನ ನೀಡುತ್ತಿವೆ. ಆದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯು ಇಂತಹ ಹಿಂದು ಸಂಘ-ಸಂಸ್ಥೆಗಳ ವಿರುದ್ಧ ಬಹಿರಂಗವಾಗಿಯೇ ಮಾತನಾಡುತ್ತಿದ್ದಾರೆ, ಬೆದರಿಕೆ ಒಡ್ಡುತ್ತಿದ್ದಾರೆ. ಮುಸ್ಲಿಮರ ಮತಗಳ ಓಲೈಕೆಗಾಗಿ ಮಮತಾ ಬ್ಯಾನರ್ಜಿ ಅವರು ಹೀಗೆ ಮಾಡುತ್ತಿದ್ದಾರೆ” ಎಂದು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

“ಮಮತಾ ಬ್ಯಾನರ್ಜಿ ಅವರು ಓಲೈಕೆ ರಾಜಕಾರಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮೂಲಭೂತವಾದಿಗಳನ್ನು ಓಲೈಸುವ ದೃಷ್ಟಿಯಿಂದ ಅವರು ಸಾಧು-ಸಂತರ ವಿರುದ್ಧ ಮಾತನಾಡುತ್ತಿದ್ದಾರೆ. ಆದರೆ, ಜನರು ಅಭಿವೃದ್ಧಿಯನ್ನು ನೋಡುತ್ತಾರೆಯೇ ಹೊರತು ಓಲೈಕೆ ರಾಜಕಾರಣಕ್ಕೆ ಮಣೆ ಹಾಕುವುದಿಲ್ಲ. ಪಶ್ಚಿಮ ಬಂಗಾಳದ ಜನರು ಬಿಜೆಪಿಯ ಆಡಳಿತವನ್ನು ಬಯಸುತ್ತಿದ್ದಾರೆ. ಇದು ಮಮತಾ ಬ್ಯಾನರ್ಜಿ ಅವರ ನಿದ್ದೆಗೆಡಿಸಲು ಕಾರಣವಾಗಿದೆ” ಎಂದು ಟೀಕಿಸಿದರು.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಶನಿವಾರ (ಮೇ 18) ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ ಅವರು ಇಸ್ಕಾನ್‌, ರಾಮಕೃಷ್ಣ ಮಿಷನ್‌ ಹಾಗೂ ಭಾರತ್‌ ಸೇವಾಶ್ರಮ ಸಂಘದ ವಿರುದ್ಧ ಆರೋಪ ಮಾಡಿದ್ದರು. “ಮೂರೂ ಸಂಸ್ಥೆಗಳು ದೆಹಲಿಯಿಂದ ಬರುವ ಸೂಚನೆಗಳ ಮೇರೆಗೆ ಕಾರ್ಯನಿರ್ವಹಿಸುತ್ತಿವೆ. ರಾಮಕೃಷ್ಣ ಮಿಷನ್‌ ಅನುಯಾಯಿಗಳ ಒಂದು ವಾಟ್ಸ್‌ಆ್ಯಪ್‌ ಗ್ರೂಪ್‌ ಇದೆ. ಇಂತಹ ಚಟುವಟಿಕೆಗಳಲ್ಲಿ ಸನ್ಯಾಸಿಗಳು ಏಕೆ ಭಾಗಿಯಾಗಬೇಕು? ರಾಮಕೃಷ್ಣ ಮಿಷನ್‌ ಬಗ್ಗೆ ಜನರಿಗೆ ಗೌರವವಿದೆ. ರಾಮಕೃಷ್ಣ ಮಿಷನ್‌ನ ಸನ್ಯಾಸಿಗಳು ಮತದಾನ ಮಾಡುವುದಿಲ್ಲ ಎಂಬುದು ನನಗೆ ಗೊತ್ತಿದೆ. ಆದರೆ, ನೀವೇಕೆ ಬಿಜೆಪಿಗೆ ಮತ ನೀಡಿ ಎಂಬುದಾಗಿ ಬೇರೆಯವರಿಗೆ ಕರೆ ನೀಡುತ್ತೀರಿ? ಎಲ್ಲರೂ ಅಲ್ಲ, ಕೆಲವು ಸನ್ಯಾಸಿಗಳು ಹೀಗೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

“ಭಾರತ ಸೇವಾಶ್ರಮ ಸಂಘದ ಮೇಲೆ ನನಗೆ ಅಪಾರ ಗೌರವ ಇತ್ತು. ಆದರೆ, ತೃಣಮೂಲ ಕಾಂಗ್ರೆಸ್‌ ಏಜೆಂಟ್‌ನನ್ನು ಮತಗಟ್ಟೆ ಒಳಗೆ ಬಿಡುವುದಿಲ್ಲ ಎಂಬುದಗಿ ಒಬ್ಬ ಕಾರ್ತಿಕ ಮಹಾರಾಜ ಹೇಳಿದ್ದಾರೆ ಎಂಬುದಾಗಿ ನಾನು ಕೇಳುತ್ತಲೇ ಇದ್ದೇನೆ. ರಾಜಕೀಯದಲ್ಲ ಹೀಗೆ ಭಾಗಿಯಾದವರನ್ನು ನಾನು ಸನ್ಯಾಸಿ ಎಂಬುದಾಗಿ ಕರೆಯುವುದಿಲ್ಲ. ಹೀಗೆ ರಾಜಕೀಯ ಮಾಡುತ್ತಿರುವವರನ್ನು ನಾನು ಗುರುತಿಸಿದ್ದೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಮಮತಾ ಬ್ಯಾನರ್ಜಿ ಹೇಳಿಕೆಗೆ ಬಿಜೆಪಿಯ ಕೆಲ ನಾಯಕರೂ ಟೀಕಿಸಿದ್ದಾರೆ.

ಮಮತಾ ಬ್ಯಾನರ್ಜಿ ಹೇಳಿಕೆ ವಿರುದ್ಧ ನರೇಂದ್ರ ಮೋದಿ ಟೀಕಿಸುತ್ತಲೇ ಬಿಜೆಪಿ ನಾಯಕ ಅಮಿತ್‌ ಮಾಳವಿಯ ಅವರು ಪೋಸ್ಟ್‌ ಮಾಡಿದ್ದಾರೆ. “ಭಾರತ ಸೇವಾಶ್ರಮ ಸಂಘವು ಮಮತಾ ಬ್ಯಾನರ್ಜಿ ಅವರು ಸಂತರ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸಿ ಹೈಕೋರ್ಟ್‌ ಮೊರೆ ಹೋಗಲಿದ್ದಾರೆ. ಕಾರ್ತಿಕ್‌ ಮಹಾರಾಜ ಅವರು ಎಂದಿಗೂ ಬೂತ್‌ ಏಜೆಂಟ್‌ಗಳ ವಿರುದ್ಧ ಮಾತನಾಡಿಲ್ಲ” ಎಂದು ಮಮತಾ ಆರೋಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Continue Reading

ಕರ್ನಾಟಕ

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Prajwal Revanna Case: ನೀವು ಡಿ.ಕೆ.ಶಿವಕುಮಾರ್‌ ಅವರ ಜತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಎಲ್ಲವನ್ನೂ ಮಾಡುತ್ತಾರೆ. ಜೆಡಿಎಸ್‌ಅನ್ನು ಎನ್‌ಡಿಎಯಿಂದ ಆಚೆಗೆ ಹಾಕಲು ನಾನೇ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇನೆ. ಇನ್ನೇನು ವಿಡಿಯೊಗಳು ಇವೆಯೋ, ಎಲ್ಲವನ್ನೂ ನಮಗೆ ಕೊಡಿ. ದೇವೇಗೌಡ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂಬುದಾಗಿ ದೇವರಾಜೇಗೌಡ ಅವರಿಗೆ ಶಿವರಾಮೇಗೌಡ ಭರವಸೆ ನೀಡಿದ ಆಡಿಯೊ ಈಗ ಸಂಚಲನ ಮೂಡಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಲಭ್ಯವಾಗಿದ್ದು, ಇದು ಈಗ ಸಂಚಲನ ಮೂಡಿಸಿದೆ. ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್.ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಬಯಲಾಗಿದ್ದು, “ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಷ್ಟಕ್ಕೂ, ದೇವೇಗೌಡ ಅವರು ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ಲವಲ್ಲ” ಎಂಬುದಾಗಿ ಶಿವರಾಮೇಗೌಡ ಹೇಳಿದ್ದಾರೆ.

“ನೀವು ಡಿ.ಕೆ.ಶಿವಕುಮಾರ್‌ ಅವರ ಜತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಎಲ್ಲವನ್ನೂ ಮಾಡುತ್ತಾರೆ. ಜೆಡಿಎಸ್‌ಅನ್ನು ಎನ್‌ಡಿಎಯಿಂದ ಆಚೆಗೆ ಹಾಕಲು ನಾನೇ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇನೆ. ಇನ್ನೇನು ವಿಡಿಯೊಗಳು ಇವೆಯೋ, ಎಲ್ಲವನ್ನೂ ನಮಗೆ ಕೊಡಿ. ದೇವೇಗೌಡ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೀವು ಯಾವುದಕ್ಕೂ ಹೆದರಬೇಡಿ. ನಿಮಗೆ ಏನು ಹೆಲ್ಪ್‌ ಬೇಕೋ ಅದನ್ನು ಡಿಕೆಶಿ ಮಾಡುತ್ತಾರೆ” ಎಂಬುದಾಗಿ ಶಿವರಾಮೇಗೌಡ ಭರವಸೆ ನೀಡಿರುವುದು ಆಡಿಯೊದಲ್ಲಿದೆ.

ವಿಡಿಯೊ ಕೊಡಿ ಎಂಬುದಕ್ಕೆ ಉತ್ತರಿಸಿದ ದೇವರಾಜೇಗೌಡ, “ಅಣ್ಣ ಇದು ಹೆಣ್ಣುಮಕ್ಕಳ ಮಾನ ಮರ್ಯಾದೆ ಪ್ರಶ್ನೆ ಅಲ್ಲವೇ? ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಿದ್ದಾರೆ. ಅದಕ್ಕೆ ಶಿವರಾಮೇಗೌಡ, “ನಿನಗೆ ಏನು ಸಹಾಯ ಬೇಕೋ ಅದನ್ನು ಮಾಡುತ್ತಾರೆ. ಅಷ್ಟಕ್ಕೂ, ನೀನೇನೂ ಹಾಸನದಲ್ಲಿ ಪೆನ್‌ಡ್ರೈವ್‌ ಹಂಚಿಲ್ಲ. ಹಂಚಿದರೂ ಅದರಲ್ಲಿ ತಪ್ಪೇನಿಲ್ಲ. ನೀನೊಬ್ಬ ವಕೀಲನಾಗಿ ಹೀಗೆ ಹೆದರಿದರೆ ಹೇಗೆ? ಏನೂ ಆಗುವುದಿಲ್ಲ. ಯಾವ ವಿಡಿಯೊ ಇದೆ ನಮಗೆ ಕೊಡು” ಎಂದಿದ್ದಾರೆ.

ಗೌಡರು ಸೂಸೈಡ್‌ ಮಾಡಿಕೊಂಡಿಲ್ವಲ್ಲ

“ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಬಿಟ್ಟಿದ್ದಾರೆ ಎಂಬುದಾಗಿ ಹೇಳು. ಆ ದೇವೇಗೌಡರ ಮಕ್ಕಳು ಏನೂ ಕಡಿಮೆ ಇಲ್ಲ. ದೇವೇಗೌಡರು ಇಷ್ಟಾದರೂ ಆತ್ಮಹತ್ಯೆ ಮಾಡಕೊಂಡಿಲ್ಲವಲ್ಲ. ಪ್ರಜ್ವಲ್‌ ರೇವಣ್ಣ ಬೆಳೆಯುತ್ತಿದ್ದಾನೆ. ಕುಮಾರಸ್ವಾಮಿ ಅವರಿಗೆ ತಮ್ಮ ಮಗ ಮುಂದೆ ಬರಬೇಕು ಎಂಬ ಆಸೆ ಇದೆ. ಹಾಗಾಗಿ, ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಹಂಚಿದ್ದಾರೆ ಎಂಬುದಾಗಿ ಹೇಳಿ” ಎಂದು ದೇವರಾಜೇಗೌಡ ಅವರಿಗೆ ಶಿವರಾಮೇಗೌಡ ಹೇಳಿರುವುದು ಆಡಿಯೊದಲ್ಲಿ ದಾಖಲಾಗಿದೆ. ಇದು ಈಗ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ನೀಡಿದೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Continue Reading

ದೇಶ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು.

VISTARANEWS.COM


on

Congress Manifesto
Koo

ಗೋವಾ: ಕೈ-ಕಮಲ ಪಾಳಯದಲ್ಲಿ ಪರಸ್ಪರ ವಾಕ್ಸಮರಕ್ಕೆ ಕಾರಣವಾಗಿರುವ ಕಾಂಗ್ರೆಸ್‌ ಪ್ರಣಾಳಿಕೆ (Congress Manifesto) ವಿಚಾರಕ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಪ್ರಣಾಳಿಕೆಯನ್ನು ಟೀಕಿಸಿ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕ ಪೊಲೀಸರು(Congress Police) ಗೋವಾದಲ್ಲಿ ಅರೆಸ್ಟ್‌ ಮಾಡಿದ್ದು, ಬಿಜೆಪಿ ಕಾಂಗ್ರೆಸ್‌ ನಡುವೆ ಮತ್ತೆ ವಾಕ್ಸಮರಕ್ಕೆ ಕಾರಣವಾಗಿದೆ. ವಿನೀತ್‌ ನಾಯ್ಕ್‌ ಎಂಬಾತನನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. ವಿನೀತ್‌ ವಿರುದ್ಧ ಸುಳ್ಳು ಮಾಹಿತಿ ಹರಡಿ ಕೋಮು ಘರ್ಷಣೆ (Communal disturbance)ಗೆ ಕುಮ್ಮಕ್ಕು ನೀಡಿಡ ಆರೋಪ ಕೇಳಿ ಬಂದಿದ್ದು, ಕರ್ನಾಟಕ ಶ್ರೀರಾಮಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಏನಿದು ಪ್ರಕರಣ?

ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಬಲಪಂಥೀಯ ವಿಚಾರಧಾರೆ ಹೊಂದಿರುವ ವಿನೀತ್‌, ಕಾಂಗ್ರೆಸ್‌ ಹಿಂದೂಗಳ ಸಂಪತ್ತನ್ನು ಕಸಿದು ಕೇವಲ ಮುಸ್ಲಿಮರಿಗೆ ಹಂಚಲು ಸಂಚು ರೂಪಿಸಿದೆ. ಕಾಂಗ್ರೆಸ್‌ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲಾ ಹಿಂದೂಗಳನ್ನು ದ್ವೇಷಿಸುತ್ತದೆ. ಎಸ್‌ಸಿ, ಎಸ್‌ಟಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಬಗ್ಗೆ ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್‌ನವರ ಮುಖಕ್ಕೆ ಅವರ ಪ್ರಣಾಳಿಕೆಯನ್ನು ಎಸೆಯಿರಿ ಎಂದು ವಿಡಿಯೋ ಸಮೇತ ಟ್ವೀಟ್‌ ಮಾಡಿದ್ದರು. ಇದಾದ ಬಳಿಕ ಏ. 22 ಮತ್ತು ಏ. 29ರಂದು ವಿನೀತ್‌ ನಾಯ್ಕ್‌ ವಿರುದ್ಧ ದೂರು ದಾಖಲಾಗಿತ್ತು.

ಬೆಂಗಳೂರಿನ ನಿವಾಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತ ಜೆ ಸರವಣನ್ ಅವರು ಏಪ್ರಿಲ್ 29 ರಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಕ್ರೈಂ ಪೊಲೀಸರು ಎಕ್ಸ್ ಬಳಕೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ತಿರುಚಿ ಪೋಸ್ಟ್​ ಮಾಡಲಾಗಿದೆ ಎಂದು ದೂರಲಾಗಿತ್ತು. ಇನ್ನು ವಿನೀತ್‌ ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಅದನ್ನು ಡಿಲೀಟ್‌ ಮಾಡಿದ್ದ.

ಪ್ರಕರಣ ದಾಖಲಿಸಿಕೊಂಡು ವಿನೀತ್‌ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತ್ತೊಂದೆಡೆ ನನ್ನ ತಂದೆಯನ್ನು ಬೆಂಗಳೂರು ಪೊಲೀಸರು ಇದ್ದಕ್ಕಿದ್ದಂತೆ ಬಂಧಿಸಿ ಕರೆದೊಯ್ದಿದ್ದಾರೆ, ಅವರನ್ನು ಬಿಡುಗಡೆ ಮಾಡಿ ಎಂದು ಮಗ ನಾಗೇಶ್​ ನಾಯ್ಕ್​ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ, ಕರ್ನಾಟಕ ಪೊಲೀಸರು ಗೋವಾದಲ್ಲಿ ವಿನೀತ್‌ನನ್ನು ಬಂಧಿಸಿದ್ದಾರೆ. ನಾವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಅವರು ಎಲ್ಲಾ ಕಾನೂನು ಬೆಂಬಲವನ್ನು ನೀಡುತ್ತೇವೆ, ಕಾಂಗ್ರೆಸ್ ಅರಾಜಕತೆಯನ್ನು ಹೊರಹಾಕಿದೆ ಎಂದು ಬರೆದಿದ್ದಾರೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪೋಸ್ಟ್​ ಮಾಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗಿದೆ. ನಾವು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಹೋರಾಡಲು ಸಿದ್ಧರಿದ್ದೇವೆ ಎಂದು ಬರೆದಿದ್ದಾರೆ. ಮತ್ತೊಂದೆಡೆ ಕೇಂದ್ರ ಸಚಿವ ಸ್ಮೃತಿ ಇರಾನಿ ಕೂಡ ವಿನೀತ್‌ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನೂ ಓದಿ:ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Continue Reading

ದೇಶ

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Narendra Modi: ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಗಿದಿದೆ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸೇರಿ ಎಲ್ಲ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

“ನಮ್ಮ ಗುರಿ ತುಂಬ ದೊಡ್ಡದಿದೆ. ಇಷ್ಟೊಂದು ದೊಡ್ಡ ದೇಶದಲ್ಲಿ ಜನರ ಯಾರಿಗೆ ಮತ ಹಾಕಬೇಕು ಎಂಬುದನ್ನು ಸುಲಭವಾಗಿ ತೀರ್ಮಾನಿಸುತ್ತಾರೆ. ಜನರಿಗೆ ಇರುವ ಅನುಭವವು ಅವರು ಸುಲಭವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ದೇಶದ ಜನರಿಗೆ ಎಲ್ಲವೂ ಗೊತ್ತಿದೆ. ಯಾವುದೇ ಪಕ್ಷ, ವ್ಯಕ್ತಿ ಇರಲಿ, ಜನರು ಯಾರನ್ನು ಗೆಲ್ಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಹಾಗಾಗಿಯೇ, ನಾವು ಮುಂದಿನ ದಿನಗಳಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡಿದ್ದೇವೆ. ದೇಶದ ಆಡಳಿತ, ಅಭಿವೃದ್ಧಿಯ ನೀಲನಕ್ಷೆ ನಮ್ಮ ಬಳಿ ಇದೆ” ಎಂದು ಮೋದಿ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

“ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕಾರ್ಯಸೂಚಿಯನ್ನು ಹಾಕಿಕೊಂಡು ಬನ್ನಿ ಎಂಬುದಾಗಿ ನಮ್ಮ ಸಚಿವರಿಗೆ ಸೂಚಿಸಿದ್ದೇನೆ” ಎಂದು ಮೋದಿ ತಿಳಿಸಿದರು.

“ನಮ್ಮ ಮುಂದಿನ ಆಡಳಿತವು ಒಂದು ಪ್ರದೇಶ, ಕೆಲವು ಭಾಗಗಳಿಗೆ ಸೀಮಿತವಾಗಿರುವುದಿಲ್ಲ. ದೊಡ್ಡ ಗುರಿಯನ್ನು ಕ್ಷಿಪ್ರವಾಗಿ ಸಾಧಿಸುವ ಛಲವನ್ನು ನಾವು ಹೊಂದಿದ್ದೇವೆ. ಗುರಿ ದೊಡ್ಡದಾಗಿ ಇಟ್ಟುಕೊಂಡು, ಅದರ ವೇಗಕ್ಕೆ ತಕ್ಕಂತೆ ಮುನ್ನಡೆಯುವುದು ನಮ್ಮ ಉದ್ದೇಶವಾಗಿದೆ. ಗುರಿ, ಉದ್ದೇಶ ಹಾಗೂ ವೇಗದ ಜತೆ ಸಾಗುವುದು ಕೂಡ ಒಂದು ಕೌಶಲವಾಗಿದೆ. ಆ ದಿಸೆಯಲ್ಲಿ ನಾವು ಮಹತ್ವದ ಸಂಗತಿಗಳನ್ನು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Continue Reading
Advertisement
Dangerous Bike Stunt
ಕರ್ನಾಟಕ3 mins ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ48 mins ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ1 hour ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Drowned in Lake
ಕರ್ನಾಟಕ1 hour ago

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Bengaluru Rain
ಕರ್ನಾಟಕ2 hours ago

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Kantara Movie
ಸಿನಿಮಾ2 hours ago

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

SRH vs PBKS
ಕ್ರೀಡೆ2 hours ago

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

Harish Poonja
ಕರ್ನಾಟಕ3 hours ago

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Ebrahim Raisi
ವಿದೇಶ3 hours ago

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

PBKS vs SRH
ಕ್ರೀಡೆ3 hours ago

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ9 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌