Murder Case: ಅತ್ತಿಗೆಯನ್ನು ಮನೆ ಬಿಡಿಸಿದವನು ಅಣ್ಣನನ್ನೂ ದೊಣ್ಣೆಯಲ್ಲಿ ಹೊಡೆದು ಕೊಂದ - Vistara News

ಕ್ರೈಂ

Murder Case: ಅತ್ತಿಗೆಯನ್ನು ಮನೆ ಬಿಡಿಸಿದವನು ಅಣ್ಣನನ್ನೂ ದೊಣ್ಣೆಯಲ್ಲಿ ಹೊಡೆದು ಕೊಂದ

Murder Case: ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣತಮ್ಮಂದಿರ ಗಲಾಟೆ ನಡೆಯುತ್ತಿತ್ತು. ಅಣ್ಣನ ಪತ್ನಿ ಮನೆ ಬಿಟ್ಟು ಹೋಗಿದ್ದು, ಅದಕ್ಕೆ ತಮ್ಮ ಕಾರಣವೆಂದು ಅಣ್ಣನಿಗೆ ಸಿಟ್ಟಿತ್ತು.

VISTARANEWS.COM


on

manjunath murder case udupi crime
ಕೊಲೆಯಾದ ಮಂಜುನಾಥ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ತಮ್ಮನೊಬ್ಬ ಸ್ವಂತ ಅಣ್ಣನನ್ನು ದೊಣ್ಣೆಯಿಂದ ಹೊಡೆದು ಹೊಡೆದೇ ಕೊಲೆ ಮಾಡಿದ (Murder Case) ಬರ್ಬರ ಘಟನೆ ಉಡುಪಿ (Udupi news, Udupi crime) ಜಿಲ್ಲೆಯಲ್ಲಿ ನಡೆದಿದೆ. ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ಘಟನೆ ನಡೆದಿದೆ.

ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತ ಅಣ್ಣ. ಕೊಲೆ ಆರೋಪಿ ತಮ್ಮ ವಿಶ್ವನಾಥನನ್ನು (30) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ, ಒಂದೇ ಮನೆಯಲ್ಲಿ ವಾಸವಾಗಿದ್ದು, ಇವರಿಬ್ಬರೂ ಆಗಾಗ ಗಲಾಟೆ ಮಾಡುತ್ತಿದ್ದರು.

ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣತಮ್ಮಂದಿರ ಗಲಾಟೆ ನಡೆಯುತ್ತಿತ್ತು. ಅಣ್ಣನ ಪತ್ನಿ ಮನೆ ಬಿಟ್ಟು ಹೋಗಿದ್ದು, ಅದಕ್ಕೆ ತಮ್ಮ ಕಾರಣವೆಂದು ಅಣ್ಣನಿಗೆ ಸಿಟ್ಟಿತ್ತು. ಜಗಳದ ವೇಳೆ ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಅಣ್ಣ ದೂಷಿಸಿದ್ದ. ಇದರಿಂದ ಕೋಪಗೊಂಡ ತಮ್ಮ ವಿಶ್ವನಾಥ ದೊಣ್ಣೆಯಿಂದ ತಲೆಗೆ ಹೊಡೆದು ಅಣ್ಣನ ಕೊಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದಿ ಕಾಮಣ್ಣರಿಗೆ ಧರ್ಮದೇಟು

ಕೊಪ್ಪಳ: ರಸ್ತೆಯಲ್ಲಿ ಓಡಾಡುವ ಮಹಿಳೆಯರನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು (Misbehaviour) ಕೊಟ್ಟಿದ್ದಾರೆ. ಕೊಪ್ಪಳದ (Koppala News) ಕನಕಗಿರಿ ಪಟ್ಟಣದ 5ನೇ ವಾರ್ಡ್‌ನಲ್ಲಿ ಘಟನೆ ನಡೆದಿದೆ.

ಕಾಲೇಜು ಯುವತಿಯರಿಗೆ, ಮಹಿಳೆಯರನ್ನು ಹಿಂಬಾಲಿಸಿ ಹಲವು ದಿನಗಳಿಂದ ಕಿರಿಕಿರಿ ಉಂಟು ಮಾಡುತ್ತಿದ್ದ. ಹಲವು ದಿನಗಳಿಂದ ಈತನ ಕಾಟವನ್ನು ಸಹಿಸಿಕೊಂಡು ಬಂದಿದ್ದರು. ಆದರೆ ದಿನ ಕಳೆದಂತೆ ಈತನ ಹುಚ್ಚಾಟ ವಿಪರೀತಗೊಂಡಿತ್ತು. ಇದರಿಂದ ಬೇಸತ್ತ ಮಹಿಳೆಯರು ಈ ವಿಚಾರವನ್ನು ಮನೆಯವರಿಗೆ ಹೇಳಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸಿಟ್ಟಾದ ಜನರು ಯುವಕನನ್ನು ಹಿಡಿದು, ವಿದ್ಯುತ್‌ ಕಂಬಕ್ಕೆ ಕಟ್ಟಿ, ದೊಣ್ಣೆಯಿಂದ ಥಳಿಸಿದ್ದಾರೆ.

ಪೊಲೀಸ್‌ ಠಾಣೆಗೆ ನುಗ್ಗಿ ಎಎಸ್‌ಐಗೆ ಹೊಡೆದ ಮಹಿಳೆ; ಇಬ್ಬರು ಆಸ್ಪತ್ರೆ ಪಾಲು

ಬೆಂಗಳೂರು: ಪ್ರಾಪರ್ಟಿ ವಿಚಾರದಲ್ಲಿ ನ್ಯಾಯ ಸಿಗಲಿಲ್ಲ ಎಂದು ಸಿಟ್ಟಾದ ಮಹಿಳೆಯೊಬ್ಬರು ಪೊಲೀಸ್ ಮೇಲೆ ಹಲ್ಲೆ (Assault Case)‌ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ಶನಿವಾರ ಮಧ್ಯಾಹ್ನ ಬೆಂಗಳೂರಿನ (Bengaluru News) ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಅಶ್ವಿನಿ ಎಂಬಾಕೆ ಎಎಸ್ಐ ನಾಗರಾಜು ಮೇಲೆ ಹಲ್ಲೆ ನಡೆಸಿದ್ದಾರೆ. ಹಲವು ದಿನಗಳಿಂದ ಗಂಗಮ್ಮನ ಗುಡಿ ಪೊಲೀಸ್ ಠಾಣೆಗೆ ಅಶ್ವಿನಿ ಬಂದು ಹೋಗುತ್ತಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ಅಶ್ವಿನಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದರು ಎನ್ನಲಾಗಿದೆ.ಆದರೆ ತನ್ನ ಸಮಸ್ಯೆಗೆ ನ್ಯಾಯ ಸಿಗುತ್ತಿಲ್ಲವೆಂಬ ಸಿಟ್ಟಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮಾನಸಿಕ ಅಸ್ವಸ್ಥತೆಯಾಗಿರುವ ಅಶ್ವಿನಿ ಕಳೆದ 15 ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ನಿನ್ನೆ ಠಾಣೆಗೆ ಬಂದ ಅಶ್ವಿನಿ ಎಎಸ್‌ಐ ನಾಗರಾಜು ಜತೆ ಮಾತುಕತೆ ನಡೆಸಿದ್ದಾಳೆ. ಈ ವೇಳೆ ಏಕಾಏಕಿ ಸಿಟ್ಟಾಗಿ ಕೈಗೆ ಸಿಕ್ಕ ವಸ್ತುವಿನಿಂದ ನಾಗರಾಜು ಮೇಲೆ ಹಲ್ಲೆ ನಡೆಸಿದ್ದಾಳೆ.

ಸದ್ಯ ಹಲ್ಲೆಗೊಳಗಾದ ಎಎಸ್ಐ ನಾಗರಾಜು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಅಶ್ವಿನಿಗೂ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಈ ಘಟನೆ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ:Assault Case : ಶಿವಮೊಗ್ಗದಲ್ಲಿ ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಪುಂಡರಿಂದ ಹಲ್ಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Physical Abuse: ಕಪಿಲ್‌ ಶರ್ಮಾ ಶೋನಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

Physical Abuse: ಮುಂಬೈನ ನಲಾಸೊಪರದಲ್ಲಿ ಕಾಸ್ಟಿಂಗ್‌ ಏಜೆಂಟ್‌ ಆಗಿರುವ ಆನಂದ್‌ ಸಿಂಗ್‌ ಎಂಬುವನು ಮೇ 20ರಂದು ಮಹಿಳೆಯನ್ನು ಆಡಿಷನ್‌ಗೆ ಮನೆಗೆ ಕರೆದಿದ್ದಾನೆ. ದೇಶಾದ್ಯಂತ ಖ್ಯಾತಿ ಗಳಿಸಿರುವ ದಿ ಕಪಿಲ್‌ ಶೋನಲ್ಲಿ ಚಾನ್ಸ್‌ ಸಿಗುತ್ತದೆ ಎಂಬ ಆಸೆಯಿಂದ ಮಹಿಳೆಯು ವ್ಯಕ್ತಿ ಹೇಳಿದ ಜಾಗಕ್ಕೆ ತೆರಳಿದ್ದಾರೆ. ಅಲ್ಲಿ, ಆನಂದ್‌ ಸಿಂಗ್‌ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

The Kapil Sharma Show
ಸಾಂದರ್ಭಿಕ ಚಿತ್ರ.
Koo

ಮುಂಬೈ: ಸಿನಿಮಾಗಳಲ್ಲಿ ನಟಿಸಲು ಚಾನ್ಸ್‌ ಕೊಡಿಸುತ್ತೇನೆ, ನನಗೆ ಆ ಹೀರೊ ಪರಿಚಯ ಇದ್ದಾನೆ, ಸೀರಿಯಲ್‌, ಕಾಮಿಡಿ ಶೋಗಳಲ್ಲಿ ಅವಕಾಶ ಕೊಡಿಸುತ್ತೇನೆ ಎಂದು ನಂಬಿಸಿ ಯುವತಿಯರಿಗೆ ಮೋಸ ಮಾಡುವ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಮುಂಬೈನಲ್ಲಿ (Mumbai) ಖ್ಯಾತ ದಿ ಕಪಿಲ್‌ ಶರ್ಮಾ ಶೋನಲ್ಲಿ (The Kapil Sharma Show) ಚಾನ್ಸ್‌ ಕೊಡಿಸುವುದಾಗಿ ನಂಬಿಸಿದ ವ್ಯಕ್ತಿಯು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯು ದೂರು ದಾಖಲಿಸಿದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮುಂಬೈನ ನಲಾಸೊಪರದಲ್ಲಿ ಕಾಸ್ಟಿಂಗ್‌ ಏಜೆಂಟ್‌ ಆಗಿರುವ ಆನಂದ್‌ ಸಿಂಗ್‌ ಎಂಬುವನು ಮೇ 20ರಂದು ಮಹಿಳೆಯನ್ನು ಆಡಿಷನ್‌ಗೆ ಮನೆಗೆ ಕರೆದಿದ್ದಾನೆ. ದೇಶಾದ್ಯಂತ ಖ್ಯಾತಿ ಗಳಿಸಿರುವ ದಿ ಕಪಿಲ್‌ ಶೋನಲ್ಲಿ ಚಾನ್ಸ್‌ ಸಿಗುತ್ತದೆ ಎಂಬ ಆಸೆಯಿಂದ ಮಹಿಳೆಯು ವ್ಯಕ್ತಿ ಹೇಳಿದ ಜಾಗಕ್ಕೆ ತೆರಳಿದ್ದಾರೆ. ಅಲ್ಲಿ, ಆನಂದ್‌ ಸಿಂಗ್‌ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Physical Abuse

ಮಹಿಳೆಯು ತಾನು ಹೇಳಿದ ಜಾಗಕ್ಕೆ ಬರುತ್ತಲೇ ಆನಂದ್‌ ಸಿಂಗ್‌ ಆಡಿಷನ್‌ ತೆಗೆದುಕೊಳ್ಳುವ ನಾಟಕವಾಡಿದ್ದಾನೆ. ಮಹಿಳೆಯು ಆಡಿಷನ್‌ ನೀಡುವಾಗಲೇ ಅವರ ಮೈ ಮುಟ್ಟಿದ್ದಾನೆ. ಇನ್ನೂ ಹತ್ತಿರ ಬನ್ನಿ ಎಂಬುದಾಗಿ ಹೇಳಿದ್ದಾನೆ. ಈತನ ಕುತಂತ್ರ ಅರಿತ ಮಹಿಳೆಯು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ, ಆನಂದ್‌ ಸಿಂಗ್‌ ಇನ್ನಷ್ಟು ಕುಪಿತನಾಗಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಕುರಿತು ಬೇರೆ ಯಾರಿಗಾದರೂ ಹೇಳಿದರೆ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

“ಕಪಿಲ್‌ ಶರ್ಮಾ ಜತೆಗೆ ನಂಟಿದೆ, ಆತನ ಪರಿಚಯವಿದೆ. ದಿ ಕಪಿಲ್‌ ಶರ್ಮಾ ಶೋನಲ್ಲಿ ಚಾನ್ಸ್‌ ಕೊಡಿಸುತ್ತೇನೆ ಎಂಬುದಾಗಿ ನಂಬಿಸಿದ. ಮನೆಗೆ ಹೋದ ಬಳಿಕ ಚೆನ್ನಾಗಿಯೇ ಮಾತನಾಡಿಸಿದ ಆತ, ಬಳಿಕ ನನ್ನ ಹತ್ತಿರ ಬಂದು ಮುಟ್ಟಲು ಶುರುಮಾಡಿದ. ಆಗ ನಾನು ಪ್ರತಿರೋಧ ಒಡ್ಡಿದೆ. ಅಷ್ಟಾದರೂ ಕೇಳದೆ ಆತ ಅತ್ಯಾಚಾರ ಎಸಗಿದ” ಎಂಬುದಾಗಿ ಮಹಿಳೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಪಿಲ್‌ ಶರ್ಮಾ ಅವರು ನಡೆಸಿಕೊಡುತ್ತಿದ್ದ ದಿ ಕಪಿಲ್‌ ಶರ್ಮಾ ಶೋ ದೇಶಾದ್ಯಂತ ಖ್ಯಾತಿಯಾಗಿದೆ. ಇತ್ತೀಚೆಗೆ, ನೆಟ್‌ಫ್ಲಿಕ್ಸ್‌ನಲ್ಲಿ ಶೋ ಪ್ರಸಾರವಾಗಿತ್ತು.

ಇದನ್ನೂ ಓದಿ: Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

Continue Reading

ಕರ್ನಾಟಕ

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Rain News: ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ಅವಘಡ ನಡೆದಿದೆ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ.

VISTARANEWS.COM


on

Rain News
Koo

ಯಾದಗಿರಿ: ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ನಡೆದಿದೆ. ಬಾಲಕಿ ಮನಸ್ವಿ ತಿಪ್ಪಣ್ಣ ಯಾದವ್ ಮೃತ ಬಾಲಕಿ. ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ.

ಜಮೀನಿನ ಶೀಟ್‌ ಮನೆಯಲ್ಲಿ ಪೋಷಕರ ಜತೆ ಬಾಲಕಿ ವಾಸವಾಗಿದ್ದಳು. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮನೆ ಶೀಟ್‌ ಮೇಲೆ ಇಟ್ಟಿದ್ದ ಕಲ್ಲು ಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಸ್ಥಳದಲ್ಲಿ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರು ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರುಣನ ಅಬ್ಬರಕ್ಕೆ ಕೆರೆಯಂತಾದ ಗುರುಮಠಕಲ್‌

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುಮಠಕಲ್ ಹಾಗೂ ಯಾದಗಿರಿ ನಗರದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದ. ಭಾರಿ ಮಳೆಗೆ ಗುರುಮಠಕಲ್ ರಸ್ತೆ ಮೇಲೆ ನೀರು ಹರಿದು ಕೆರೆಯಂತಾಗಿತ್ತು. ಇತ್ತ ಬಿರುಗಾಳಿ ಸಹಿತ ಭಾರಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಯಾದಗಿರಿ ತಾಲೂಕಿನ ಗಣಾಪುರ ಸಮೀಪದ ಯಾದಗಿರಿ-ಗುರುಮಠಕಲ್ ರಸ್ತೆ ಮಾರ್ಗದಲ್ಲಿ ಮರಗಳು ಧರೆಗುರುಳಿತ್ತು.

ಯಾದಗಿರಿಯ ಗಣಾಪುರ ಸಮೀಪದ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಮರಗಳು ಬಿದ್ದಿತ್ತು. ಗುರುಮಠಕಲ್-ಯಾದಗಿರಿ ರಾಜ್ಯ ಹೆದ್ದಾರಿಯಲ್ಲಿ ಮರಗಳು ಉರುಳಿ ಬಿದ್ದಿತ್ತು. ಹೀಗಾಗಿ ಸ್ಥಳೀಯರು ಹಾಗೂ ಸವಾರರಿಂದಲೇ ರಸ್ತೆ ಮೇಲೆ ಬಿದ್ದಿದ್ದ ಮರಗಳ ತೆರವು ಮಾಡಲಾಯಿತು. ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡರು. ರಸ್ತೆ ಮೇಲೆ ಮರಗಳು ಬಿದ್ದ ಕಾರಣದಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.

Continue Reading

ಕರ್ನಾಟಕ

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Shivamogga News: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಯುವಕನೊಬ್ಬ ಲಾಂಗ್‌ ಹಿಡಿದು ಹುಚ್ಚಾಟ ಮೆರೆದಿದ್ದಾನೆ.

VISTARANEWS.COM


on

Shivamogga News
Koo

ಶಿವಮೊಗ್ಗ: ಹೆದ್ದಾರಿಯಲ್ಲೇ ಯುವಕನೊಬ್ಬ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಘಟನೆ ಶಿವಮೊಗ್ಗ (Shivamogga News) ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಲಾಂಗ್‌ ಕಸಿದುಕೊಂಡು ಮನಸೋ ಇಚ್ಛೆ ಥಳಿಸಿರುವ ಸ್ಥಳೀಯರು, ನಂತರ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಲಾಂಗ್ ಹಿಡಿದು ಹುಚ್ಚಾಟ ಮೆರೆದ ಸಮೀರ್ ಎಂಬ ಯುವಕನನ್ನು ಆನಂದಪುರ ಪೊಲೀಸ್‌ ಠಾಣೆಗೆ ಸ್ಥಳೀಯರು ಒಪ್ಪಿಸಿದ್ದಾರೆ. ಯುವಕನ ಪುಂಡಾಟದ ದೃಶ್ಯ ಮೊಬೈಲ್‌ನಲ್ಲಿ ಕಾರು ಚಾಲಕರೊಬ್ಬರು ಸೆರೆಹಿಡಿದಿದ್ದಾರೆ.

ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

theft Case

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ಇದನ್ನೂ ಓದಿ: Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ದೇಶ

FIR Filed: ದೇಗುಲದಲ್ಲಿ ಸ್ತ್ರೀಯರು ಬಟ್ಟೆ ಬದಲಿಸೋ ಜಾಗದಲ್ಲಿ ಸಿಸಿಟಿವಿ ಇಟ್ಟ ಅರ್ಚಕ; ಕೀಚಕ ಕೃತ್ಯಕ್ಕೆ ಬಿತ್ತು ಕೇಸ್!

ಮಹಿಳೆಯರ ಬಟ್ಟೆ ಬದಲಾಯಿಸುವ, ಚಾವಣಿಯಿಲ್ಲದ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ಆರೋಪದ ಮೇರೆಗೆ ಮುರಾದನಗರ ಗಂಗಾ ಕಾಲುವೆಯ ಬಳಿ ಇರುವ ದೇವಾಲಯದ ಅರ್ಚಕರ ವಿರುದ್ಧ ಪ್ರಕರಣ (FIR Filed) ದಾಖಲಾಗಿದೆ.

VISTARANEWS.COM


on

By

FIR Filed
Koo

ಘಾಜಿಯಾಬಾದ್: ಮಹಿಳೆಯರ ಬಟ್ಟೆ ಬದಲಾಯಿಸುವ, ಚಾವಣಿಯಿಲ್ಲದ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾ (CCTV camera) ಅಳವಡಿಸಿದ ಆರೋಪದ ಮೇರೆಗೆ ಘಾಜಿಯಾಬಾದ್ ನ (Ghaziabad) ದೇವಸ್ಥಾನದ (temple) ಅರ್ಚಕರೊಬ್ಬರ ವಿರುದ್ಧ ನಗರ ಪೊಲೀಸರು ಪ್ರಕರಣ (FIR Filed) ದಾಖಲಿಸಿದ್ದಾರೆ. ಮುರಾದ್‌ನಗರ (Muradnagar) ಗಂಗಾ ಕಾಲುವೆಯ (Ganga canal) ಬಳಿ ಇರುವ ದೇವಾಲಯದ ಅರ್ಚಕರ ವಿರುದ್ಧ ಪ್ರಕರಣ ದಾಖಲಾಗಿದೆ. ಭಕ್ತರು ಸಾಮಾನ್ಯವಾಗಿ ಕಾಲುವೆಯಲ್ಲಿ ಸ್ನಾನ ಮಾಡಿ ಅನಂತರ ದೇವಾಲಯಕ್ಕೆ ಪ್ರಾರ್ಥನೆ ಸಲ್ಲಿಸಲು ಬರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 21ರಂದು ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಹೋಗಿದ್ದ ಮಹಿಳೆ ಮತ್ತು ಅವರ ಮಗಳು ಚಾವಣಿಯಿಲ್ಲದ ಸ್ನಾನಗೃಹದತ್ತ ಸಿಸಿಟಿವಿ ಕ್ಯಾಮೆರಾ ತೋರಿಸುತ್ತಿರುವುದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.‌ ಮೇಲ್ಭಾಗದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯ ಮೇಲೆ ಕೇಂದ್ರೀಕೃತವಾಗಿರುವುದನ್ನು ಮಹಿಳೆ ಗಮನಿಸಿದ್ದಾಳೆ ಎಂದು ಪೊಲೀಸ್ ಉಪ ಆಯುಕ್ತ (ಗ್ರಾಮೀಣ) ವಿವೇಕ್ ಚಂದ್ರ ಯಾದವ್ ತಿಳಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದ ಡಿಸ್‌ಪ್ಲೇಯು ಅರ್ಚಕರ ಮೊಬೈಲ್ ಫೋನ್‌ಗೆ ಲಿಂಕ್ ಮಾಡಲ್ಪಟ್ಟಿದೆ. ಅದರಲ್ಲಿ ಅವರು ಮಹಿಳೆಯರು ಬಟ್ಟೆ ಬದಲಾಯಿಸುವುದನ್ನು ವೀಕ್ಷಿಸುತ್ತಾರೆ ಎಂದು ಡಿಸಿಪಿ ಹೇಳಿದರು. ಕ್ಯಾಮೆರಾವನ್ನು ಗಮನಿಸಿದ ಮಹಿಳೆ ತಕ್ಷಣ ಅರ್ಚಕ ಮಹಂತ್ ಗೋಸ್ವಾಮಿ ಅವರನ್ನು ಸಂಪರ್ಕಿಸಿ ಸಿಸಿಟಿವಿ ಕ್ಯಾಮೆರಾದ ಬಗ್ಗೆ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಂತ್ ಮಹಿಳೆಯ ಮೇಲೆ ನಿಂದಿಸಲು ಪ್ರಾರಂಭಿಸಿದರು ಮತ್ತು ಕ್ಯಾಮೆರಾದ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು ಎಂದು ಡಿಸಿಪಿ ಯಾದವ್ ಹೇಳಿದ್ದಾರೆ.

ದೂರು ಪಡೆದ ಅನಂತರ ಮುರಾದನಗರ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ. ಅರ್ಚಕನನ್ನು ಬಂಧಿಸಲು ಪೊಲೀಸ್ ತಂಡ ದೇವಸ್ಥಾನಕ್ಕೆ ಬಂದಾಗ ಆತ ಅಲ್ಲಿ ಇರಲಿಲ್ಲ ಎಂದು ಡಿಸಿಪಿ ತಿಳಿಸಿದರು. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಮೇಲೆ ಕ್ರಿಮಿನಲ್ ಹಲ್ಲೆ), 354 ಸಿ (ಖಾಸಗಿ ಕೃತ್ಯದಲ್ಲಿ ತೊಡಗಿರುವ ಮಹಿಳೆಯರ ಚಿತ್ರವನ್ನು ವೀಕ್ಷಿಸುವುದು ಅಥವಾ ಸೆರೆಹಿಡಿಯುವುದು), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅರ್ಚಕನನ್ನು ಬಂಧಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Continue Reading
Advertisement
Snake
ಕರ್ನಾಟಕ4 hours ago

Snake: ಸ್ಟ್ಯಾಂಡ್‌ನಲ್ಲಿಟ್ಟಿದ್ದ ಚಪ್ಪಲಿಯೊಳಗೆ ಕೂತಿದ್ದ ಬುಸ್‌ ಬುಸ್‌ ನಾಗಪ್ಪ; ಸ್ವಲ್ಪ ಹುಷಾರಾಗಿರ‍್ರಪ್ಪ! Video ಇಲ್ಲಿದೆ

Varanasi
ದೇಶ5 hours ago

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Virat kohli
ಕ್ರೀಡೆ5 hours ago

Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

IPL 2024 Final
ಪ್ರಮುಖ ಸುದ್ದಿ6 hours ago

IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

The Kapil Sharma Show
ದೇಶ6 hours ago

Physical Abuse: ಕಪಿಲ್‌ ಶರ್ಮಾ ಶೋನಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

IPL 2024
ಕ್ರೀಡೆ6 hours ago

IPL 2024 Final : ಐಪಿಎಲ್ ಫೈನಲ್​​ನಲ್ಲಿ ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​

Hardik Pandya
ಕ್ರೀಡೆ7 hours ago

Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

Rain News
ಕರ್ನಾಟಕ7 hours ago

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Phalody Satta Bazar
ದೇಶ7 hours ago

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Shivamogga News
ಕರ್ನಾಟಕ8 hours ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು12 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌