Lok Sabha Election 2024: ಮೋದಿ, ಅಮಿತ್‌ ಶಾ ಅಲ್ಲ, ಬ್ರಹ್ಮ ಬಂದು ಹೇಳಿದ್ರೂ ನನ್ನ ಸ್ಪರ್ಧೆ ಖಚಿತ: ಕೆ.ಎಸ್‌. ಈಶ್ವರಪ್ಪ - Vistara News

ಕರ್ನಾಟಕ

Lok Sabha Election 2024: ಮೋದಿ, ಅಮಿತ್‌ ಶಾ ಅಲ್ಲ, ಬ್ರಹ್ಮ ಬಂದು ಹೇಳಿದ್ರೂ ನನ್ನ ಸ್ಪರ್ಧೆ ಖಚಿತ: ಕೆ.ಎಸ್‌. ಈಶ್ವರಪ್ಪ

Lok Sabha Election 2024: ದೆಹಲಿಗೆ ಆಗಮಿಸುವಂತೆ ಅಮಿತ್‌ ಶಾ ಕರೆ ಮಾಡಿದ್ದಾರೆ, ಅಲ್ಲಿಗೆ ಬಂದು ಭೇಟಿಯಾಗುವುದಾಗಿ ಹೇಳಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾರೂ ಪ್ರಧಾನಿ ಆಗೋಕೆ ಸಾಧ್ಯವಿಲ್ಲ. ನಾನು ಬಂಡಾಯವಾಗಿ ಸ್ಪರ್ಧಿಸಿ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

VISTARANEWS.COM


on

KS Eshwarappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಪುತ್ರನಿಗೆ ಲೋಕಸಭಾ ಚುನಾವಣೆಯ (Lok Sabha Election 2024) ಬಿಜೆಪಿ ಟಿಕೆಟ್‌ ಸಿಗದ ಹಿನ್ನೆಲೆಯಲ್ಲೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಮನವೊಲಿಸಲು ಬಿಜೆಪಿ ಹೈಕಮಾಂಡ್‌ ಪ್ರಯತ್ನಿಸುತ್ತಿದೆ. ಆದರೂ, ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆ ಖಚಿತ ಎಂದು ಈಶ್ವರಪ್ಪ ಅವರು ಹೇಳುತ್ತಿರುವುದರಿಂದ ದೆಹಲಿಗೆ ಬರಲು ಅಮಿತ್‌ ಶಾ ಬುಲಾವ್‌ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ದೆಹಲಿಗೆ ಆಗಮಿಸುವಂತೆ ಅಮಿತ್‌ ಶಾ ಕರೆ ಮಾಡಿದ್ದಾರೆ, ಅಲ್ಲಿಗೆ ಬಂದು ಭೇಟಿಯಾಗುವುದಾಗಿ ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್‌.ಈಶ್ವರಪ್ಪ ಅವರು, ಗೃಹ ಮಂತ್ರಿ ಅಮಿತ್ ಶಾ ದೂರವಾಣಿ ಮೂಲಕ ನನ್ನ ಸಂಪರ್ಕ ಮಾಡಿದ್ದರು. ನೀವು ಇಷ್ಟು ಹಿರಿಯರಿದ್ದೀರಿ, ಯಾಕೆ ಚುನಾವಣೆಗೆ‌ ನಿಂತಿದ್ದೀರಾ ಅಂತ ಕೇಳಿದರು. ಅಪ್ಪ-ಮಕ್ಕಳ ವ್ಯವಸ್ಥೆ ಮುಕ್ತಿಗೊಳಿಸುವ ನಿಟ್ಟಿನಲ್ಲಿ ಚುನಾವಣೆಗೆ ನಿಂತಿದ್ದೇನೆ ಅಂತ ಹೇಳಿದ್ದೀನಿ. ಹಿಂದುತ್ವ ಪರ ಹೋರಾಟ ಮಾಡಿದ್ದೇ ತಪ್ಪಾ ಅಂತ ಅವರನ್ನು ಕೇಳಿದ್ದೇನೆ. ಆಗ ನಾನು ನಿಮ್ಮ ಬಳಿ ಬಂದು ಮಾತಾನಾಡಿದರೂ ಪ್ರಯೋಜನ ಆಗಿಲ್ಲ ಎಂದು ನಾಳೆ ದೆಹಲಿಗೆ ಬನ್ನಿ ಎಂದು ಅಮಿತ್‌ ಶಾ ಹೇಳಿದರು. ಅದಕ್ಕೆ ಬರುತ್ತೇನೆ ಅಂತ ಹೇಳಿರುವುದಾಗಿ ತಿಳಿಸಿದರು.

ಇದನ್ನೂ ಓದಿ | ‌Lok Sabha Election 2024: ಡಿ.ಕೆ.ಸುರೇಶ್‌ದು ಸ್ವಾರ್ಥ, ಸುಲಿಗೆ, ಕೆಡುಕು ರಾಜಕಾರಣ ಎಂದ ಜೆಡಿಎಸ್!

ನಾನು ಚುನಾವಣೆಯಿಂದ ಹಿಂದೆ ಸರಿಯಲ್ಲ ಅಂತ ಹೇಳಿದ್ದೀನಿ, ನಿಮ್ಮ ಮಗನ ಭವಿಷ್ಯ ಬಗ್ಗೆ ಯೋಚನೆ ಮಾಡಿ ಅಂತ ಅವರು ಹೇಳಿದರು. ನಾಳೆ ರಾತ್ರಿ ದೆಹಲಿಗೆ ಹೋಗುತ್ತೇನೆ. ನನ್ನ ವಿಚಾರ ಅವರಿಗೆ ಒಪ್ಪಿಸಿ ಬರುತ್ತೇನೆ. ಅಮಿತ್ ಶಾಗೆ ಗೌರವ ಕೊಟ್ಟು ದೆಹಲಿಗೆ ಹೋಗ್ತೇನೆ. ದೊಡ್ಡವರು ಕರೆದಾಗ ಸೊಕ್ಕು ಮಾಡಬೇಕಾ? ಹಾಗಾಗಿ ಹೋಗುತ್ತಿದ್ದೇನೆ. ನಾಳೆ ಬೆಳಗ್ಗೆಯೇ ರಾಜ್ಯಾಧ್ಯಕ್ಷ ಬದಲಾವಣೆ ಮಾಡಿದರೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿದರು.

ಕೆಲ ಕಾಂಗ್ರೆಸ್‌ನವರು ನನಗೆ ಸಪೋರ್ಟ್ ಮಾಡುತ್ತೇವೆ ಎಂದಿದ್ದಾರೆ. ನನ್ನ ವಿಚಾರ ಸರಿ ಇದ್ದರೆ ನನಗೆ ಬೆಂಬಲ ಕೊಡಿ ಅಂತ ಹೇಳಿದ್ದೀನಿ. ರಂಗ ಅಂತಾ ಹೋದ ಮೇಲೆ, ಸಿಂಗ ನಾ ಹತ್ತಿರ ಹೋಗ್ಲಾ? ನಾನು ಚುನಾವಣೆ ನಿಂತ ಮೇಲೆ ಕಾರ್ಯಕರ್ತರ ಗೌರವ ಹೆಚ್ಚಾಗಿದೆ. ನಾನು ಗೆದ್ದರೂ ಬಿಜೆಪಿಗೆ ಹೋಗುತ್ತೇನೆ ಎಂದು ತಿಳಿಸಿದರು.

ಅಮಿತ್ ಶಾ ತಡವಾಗಿ ಕರೆ ಮಾಡಿದ್ದಾರೆ ಅಂತ ನನಗೆ ಅನ್ನಿಸಿಲ್ಲ, ನಾನು ಚುನಾವಣೆಗೆ ಇಳಿಯಬೇಕಾದರೆ ಯೋಚನೆ ಮಾಡಿಯೇ ನಿಂತಿರುವುದು. ಮೋದಿ ದೇವರು ಸಿಕ್ಕಿದರೂ ಕಾಲಿಗೆ ಬಿದ್ದು, ನಾನೇ ನಿಮ್ಮನ್ನು ಪ್ರಧಾನಿ ಮಾಡುವೆ ಎಂದು ಹೇಳಿ ಬರುತ್ತೇನೆ. ಬ್ರಹ್ಮ ಬಂದು ಹೇಳಿದರೂ ಚುನಾವಣೆಗೆ ನಿಲ್ಲುವೆ ಎಂದು ಹೇಳಿದರು.

ಇದನ್ನೂ ಓದಿ | Lok Sabha Election 2024: ಜೆಡಿಎಸ್‌ ಕಟ್ಟಿದ್ದೇ ನಾನು; ನನ್ನನ್ನೇ ಮಿಸ್ಟರ್‌ ದೇವೇಗೌಡ ಉಚ್ಚಾಟಿಸಿದ್ರು: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಹೇಳೋದೆಲ್ಲ ಬೊಗಳೆ… ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾರೂ ಪ್ರಧಾನಿ ಆಗೋಕೆ ಸಾಧ್ಯವಿಲ್ಲ. ರಾಜ್ಯದಲ್ಲಿ 28ಕ್ಕೆ 27 ಬಿಜೆಪಿ ಗೆದ್ದು, ಜತೆಗೆ ನಾನೂ ಗೆದ್ದು ಮೋದಿಗೆ ಬೆಂಬಲ ಕೊಡುತ್ತೇನೆ. ಸಿಎಂ ಸೀಟು ಈಗಾಗಲೇ ಅಲುಗಾಡಿದೆ ಎಂದು ಟೀಕಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

Govt Employees Association: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಂಘದ ಚುನಾವಣೆ ನಡೆಸಲಿ ಪದಾಧಿಕಾರಿಗಳು ತೀರ್ಮಾನಿಸಿದ್ದಾರೆ.

VISTARANEWS.COM


on

Govt Employees Association
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Govt Employees Association) ಚುನಾವಣೆ ನಡೆಸಲು ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ. 2024-2029ನೇ ಸಾಲಿನ ಅವಧಿಗೆ ಎಲ್ಲಾ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಂಘದ ಬೈಲಾ ನಿಯಮ 47ರ ರೀತ್ಯಾ ಕರಡು ಮತದಾರರ ಪಟ್ಟಿ ಹೊರತುಪಡಿಸಿ, ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸೂಚನೆ ನೀಡಲಾಗಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಾಗ ಸಂಘದ ಬೈಲಾ ನಿಯಮದನ್ವಯ ಅರ್ಹರಿರುವ ಸಂಘದ ಸದಸ್ಯರ ಹೆಸರಗಳನ್ನೊಳಗೊಂಡ ಕರಡು ಮತದಾರರ ಪಟ್ಟಿಯನ್ನು ನಿಗದಿತ ದಿನಾಂಕದೊಳಗೆ ಸಿದ್ಧಪಡಿಸಿ ಹೊರಡಿಸಲಾದ ಮತದಾರರ ಪಟ್ಟಿಯನ್ನು ರಾಜ್ಯ ಸಂಘಕ್ಕೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಕರಡು ಮತದಾರರ ಪಟ್ಟಿಯನ್ನು ಹೊರಡಿಸಿದ ನಂತರ ಸಂಘದ ಸದಸ್ಯರಿಂದ ಮನವಿ, ಆಕ್ಷೇಪಣೆಗಳಿಗೆ ಮುಕ್ತ ಅವಕಾಶ ನೀಡಬೇಕು ಹಾಗೂ ಈ ಕುರಿತು ವ್ಯಾಪಕ ಪ್ರಚಾರ ಮಾಡಬೇಕು. ಯಾವುದೇ ಕಾರಣಕ್ಕೂ ನಿಗದಿತ ಅವಧಿಯ ವಿಸ್ತರಣೆಗೆ ಅವಕಾಶವಿರುವುದಿಲ್ಲ. ತಪ್ಪಿದಲ್ಲಿ ಸಂಬಂಧಿಸಿದ ಶಾಖೆಗಳೇ ಹೊಣೆ. ಈ ಸಂಬಂಧ ತಮ್ಮ ಶಾಖೆಗಳಲ್ಲಿ ಕಾರ್ಯಕಾರಿ ಸಮಿತಿ ಸಭೆಗಳನ್ನು ಸಂಘದ ಬೈಲಾ ರೀತ್ಯಾ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ | Old Students Association: ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ, ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಆದೇಶ

ಮತದಾರರ ಪಟ್ಟಿ ಪರಿಷ್ಕರಣೆಗೆ ನೋಂದಣಿ

  • ತಾಲೂಕು ಶಾಖೆಗಳ ಮತ ಕ್ಷೇತ್ರಗಳು ಜೂನ್ 8 ರಿಂದ 30ರ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಜುಲೈ 1ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಬೇಕು. ಈ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜುಲೈ 2ರಿಂದ 10ರವರೆಗೆ ಅವಕಾಶ ನೀಡಲಾಗಿದೆ.
  • ಯೋಜನಾ ಶಾಖೆಗಳ ಮತಕ್ಷೇತ್ರಗಳು ಜೂನ್ 8 ರಿಂದ 30ರ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಜುಲೈ 1ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಬೇಕು. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜುಲೈ 2ರಿಂದ 10ರವರೆಗೆ ಅವಕಾಶ.
  • ಜಿಲ್ಲಾ ಶಾಖೆಗಳ ಮತ ಕ್ಷೇತ್ರಗಳು ಜೂನ್ 8 ರಿಂದ 30ರ ತನಕ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಕರಡು ಮತದಾರರ ಪಟ್ಟಿಯನ್ನು ಜುಲೈ 1ರಂದು ಪ್ರಕಟಿಸಬೇಕು. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜುಲೈ 2ರಿಂದ 10ರವರೆಗೆ ಅವಕಾಶ.
  • ಬೆಂಗಳೂರು ನಗರ ರಾಜ್ಯ ಪರಿಷತ್ ಮತ ಕ್ಷೇತ್ರಗಳು ಜೂನ್ 8ರಿಂದ 30ರ ತನಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸಬೇಕು. ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನಾಂಕ ಜುಲೈ 1. ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ಅವಧಿ ಜುಲೈ 2ರಿಂದ 10 ಆಗಿದೆ.

Continue Reading

ಪ್ರಮುಖ ಸುದ್ದಿ

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

‌Prajwal Revanna Case: ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿದೆ.

VISTARANEWS.COM


on

prajwal revanna case
Koo

ಬೆಂಗಳೂರು: ಅತ್ಯಾಚಾರ (Physical Abuse) ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ (‌Prajwal Revanna Case) ಪ್ರಕರಣದಲ್ಲಿ ಎಸ್‌ಐಟಿ (SIT) ತನಿಖೆ ತೀವ್ರಗೊಳಿಸಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಪ್ರಜ್ವಲ್‌ ಮನೆ ತಪಾಸಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಂಶಯಾಸ್ಪದ ಕಲೆಗಳುಳ್ಳ ಬೆಡ್‌ಶೀಟ್‌ ಪತ್ತೆಯಾಗಿದೆ.

ಮೇ 29ರಂದು ಬಸವನಗುಡಿಯಲ್ಲಿರುವ ಪ್ರಜ್ವಲ್ ಮನೆಯನ್ನು ಕೋರ್ಟ್‌ನಲ್ಲಿ ಸರ್ಚ್ ವಾರೆಂಟ್ ಪಡೆದು ಎಸ್ಐಟಿ ಶೋಧಕ್ಕೊಳಪಡಿಸಿತ್ತು. ಪ್ರಜ್ವಲ್‌ ಆಗಮನಕ್ಕೂ ಒಂದು ದಿನ ಮೊದಲೇ ನಡೆಸಲಾದ ಈ ತಪಾಸಣೆಯ ವೇಳೆ ಅನುಮಾನದ ಹಿನ್ನೆಲೆಯಲ್ಲಿ ಹಾಗೂ ಹೆಚ್ಚಿನ ಪರೀಕ್ಷೆಗಾಗಿ ಕೆಲವು ವಸ್ತುಗಳನ್ನು ಕೊಂಡೊಯ್ಯಲಾಗಿದೆ. ಶೋಧದ ವೇಳೆ ಪತ್ತೆಯಾದ ವಸ್ತುಗಳ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿದೆ.

ಸಿಂಗಲ್ ಕಾಟ್ ಹಾಸಿಗೆ ಮೇಲೆಯೂ ಅಲ್ಲಲ್ಲಿ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಮೇಲ್ವಾಸು ಕಂಡುಬಂದಿದೆ. ಜೊತೆಗೆ ಒಂದು ಗ್ರೇ ಕಲರ್ ಅದರ ಮೇಲೆ ಸಿಲ್ವರ್ ಕಲರ್ ಡಿಜೈನ್ ಉಳ್ಳ ವಾಲ್ ಪೇಪರ್ ತುಂಡು ದೊರೆತಿದೆ. ಸದ್ಯ ಎಸ್ಐಟಿ ಅಧಿಕಾರಿಗಳು ಈ ಸೊತ್ತುಗಳನ್ನ ವಶಪಡಿಸಿಕೊಂಡು ಜಪ್ತಿ ಮಾಡಿದ್ದಾರೆ. ಜಪ್ತಿಪಡಿಸಿದ ವಸ್ತುಗಳನ್ನು ತಜ್ಞರ ಪರೀಕ್ಷೆಗೆ ರವಾನಿಸಿದ್ದಾರೆ.

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂಬಂಧ ಮಹತ್ವದ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ‌ ಪಾಲ್ಗೊಂಡಿರಬಹುದಾದ ಕೃತ್ಯದ ಸಂಬಂಧ ತಾಂತ್ರಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಸಂಗ್ರಹ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಮೊದಲ ಆರೋಪಿಯಾಗಿದ್ದು, ಜೈಲಿಗೆ ಹೋಗಿ ಈಗ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಪ್ರಕರಣದಲ್ಲಿ ಬೇಕಾಗಿರುವ ಭವಾನಿ ರೇವಣ್ಣ (Bhavani Revanna) ಇನ್ನೂ ಎಸ್‌ಐಟಿ ಕೈಗೆ ಸಿಕ್ಕಿಲ್ಲ.

ಪುರುಷತ್ವ ಪರೀಕ್ಷೆಗೆ ಕೋರ್ಟ್‌ ಸಮ್ಮತಿ

ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna case ) ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ ನೀಡಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ ಕಾದಿದ್ದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಪೊಲೀಸರ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ತನಿಖೆಗೆ ಅಸಹಕಾರ ನೀಡುತ್ತಿದ್ದರು. ಹೀಗಾಗಿ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ನಡೆಯುತ್ತಿರಲಿಲ್ಲ. ಮಂಗಳವಾರ ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಪ್ರಜ್ವಲ್​ಗೆ ಹಾಸನದ ಜನರು ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಅದೇ ರೀತಿ ಪ್ರಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

Continue Reading

ಪ್ರಮುಖ ಸುದ್ದಿ

Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

Lakshmi Hebbalkar : ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ʼಗೋ ಬ್ಯಾಕ್ʼ‌ ಅಭಿಯಾನ ಸೃಷ್ಟಿಯಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಜಿಲ್ಲಾ ಉಸ್ತುವಾರಿಗಳೇ ಕಾರಣ ಎಂಬುದಾಗಿ ಕಾಂಗ್ರೆಸ್​ ಆರೋಪಿಸಿದೆ. ಜಿಲ್ಲೆಯಲ್ಲಿ ಸಮಸ್ಯೆ ಉಂಟಾದಾಗ ಬರುವುದಿಲ್ಲ. ಹಾಗಿದ್ದ ಮೇಲೆ ಉಸ್ತುವಾರಿಯಾಗಿರುವ ಅಗತ್ಯವೇನು ಎಂಬುದಾಗಿ ಕಾಂಗ್ರೆಸ್​ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

VISTARANEWS.COM


on

Lakshmi Hebbalkar
Koo

ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪ್ರತಿಸ್ಪರ್ಧಿ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ 2.5 ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲು ಕಂಡಿದ್ದಾರೆ. ಅವರ ಸೋಲಿನ ಬಳಿಕ ಉಡುಪಿಯ ಕಾಂಗ್ರೆಸ್​ ಘಟಕಕ್ಕೆ ನಿರಾಸೆಯಾಗಿದೆ. ಪ್ರಮುಖವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಆಕ್ರೋಶ ವ್ಯಕ್ತಗೊಂಡಿದೆ.

ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ʼಗೋ ಬ್ಯಾಕ್ʼ‌ ಅಭಿಯಾನ ಸೃಷ್ಟಿಯಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಜಿಲ್ಲಾ ಉಸ್ತುವಾರಿಗಳೇ ಕಾರಣ ಎಂಬುದಾಗಿ ಕಾಂಗ್ರೆಸ್​ ಆರೋಪಿಸಿದೆ. ಜಿಲ್ಲೆಯಲ್ಲಿ ಸಮಸ್ಯೆ ಉಂಟಾದಾಗ ಬರುವುದಿಲ್ಲ. ಹಾಗಿದ್ದ ಮೇಲೆ ಉಸ್ತುವಾರಿಯಾಗಿರುವ ಅಗತ್ಯವೇನು ಎಂಬುದಾಗಿ ಕಾಂಗ್ರೆಸ್​ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್​ ಉಸ್ತುವಾರಿ ಸಚಿವರನ್ನ ಬದಲಿಸುವಂತೆ ಕಾರ್ಯಕರ್ತರ ಒತ್ತಾಯ ಮಾಡಿದ್ದಾರೆ.

ಈ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಬ್ಯುಸಿಯಾಗಿದ್ದರು. ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್​ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ, ಜಗದೀಶ್​ ಶೆಟ್ಟರ್ ವಿರುದ್ಧ ಸೋತಿದ್ದಾರೆ.

ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಕಾಂಗ್ರೆಸ್ ಕಾರ್ಯಕರ್ತರು!

ಕ್ಕಬಳ್ಳಾಪುರ: ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ(Karnataka election results 2024) ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತ ಲೀಡ್‌ ಪಡೆದರೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಸುದ್ದಿ ವೈರಲ್‌ ಆದ ಬೆನ್ನಲ್ಲೇ ಇದೀಗ ಸ್ವಪಕ್ಷದ ಶಾಸಕನ ವಿರುದ್ಧವೇ ಕಾಂಗ್ರೆಸ್‌ ತಿರುಗಿಬಿದ್ದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆಗ್ರಹಿಸಿರುವುದು ಕಂಡುಬಂದಿದೆ.

ಹೌದು, ಈ ಹಿಂದೆ ನಡೆದ ಕಾಂಗ್ರೆಸ್‌ ಸಭೆಯಲ್ಲಿ “ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್‌ ಅವರಿಗೆ ಒಂದೇ ಒಂದು ಮತದ ಲೀಡ್‌ ಸಿಕ್ಕರೂ ರಾಜಕೀಯ ನಿವೃತ್ತಿ ಪಡೆಯುವೆ” ಎಂದು ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಆ ಹೇಳಿಕೆಯೇ ಅವರಿಗೆ ತಲೆನೋವು ತಂದಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧವೇ ಸ್ವಪಕ್ಷದ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೋಲಲು ಶಾಸಕ ಪ್ರದೀಪ್ ಈಶ್ವರ್ ಕಾರಣ. ಅವರು ಆಡಿದ ಮಾತುಗಳೇ ರಕ್ಷಾರಾಮಯ್ಯ ಸೋಲಿಗೆ ಕಾರಣವಾಗಿದೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Prajwal Revanna case : ಪ್ರಜ್ವಲ್​ನ ಪುರುಷತ್ವ ಸಾಮರ್ಥ್ಯ ಪರೀಕ್ಷೆ ನಡೆಸಲು ಕೋರ್ಟ್​ ಸಮ್ಮತಿ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ ಪುತ್ರ ಜಗದೀಶ್ ಪ್ರತಿಕ್ರಿಯಿಸಿ, ಪ್ರದೀಪ್ ಈಶ್ವರ್ ಮಾತುಗಳಿಂದಲೇ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳು ಒಂದಾದವು. ಪಕ್ಷ ಕಟ್ಟಿ ಬೆಳಸಿದೆವು, ಅದರೆ ಪ್ರದೀಪ್ ಈಶ್ವರ್ ಬಂದು ಹಾಳು ಮಾಡಿದರು. ದಯವಿಟ್ಟು ಕೊಟ್ಟ ಮಾತಿನಂತೆ ನಡೆದುಕೊಳ್ಳಿ, ಇಲ್ಲವೆಂದರೆ ಮಾತು ಕಡಿಮೆ ಮಾಡಿ ಎಂದು ಕಿಡಿಕಾರಿದ್ದಾರೆ.

Continue Reading

ಪ್ರಮುಖ ಸುದ್ದಿ

Pradeep Eshwar: ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಸ್ವಪಕ್ಷದ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು!

Pradeep Eshwar: ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೋಲಲು ಶಾಸಕ ಪ್ರದೀಪ್ ಈಶ್ವರ್ ಕಾರಣ. ಅವರು ಆಡಿದ ಮಾತುಗಳೇ ರಕ್ಷಾರಾಮಯ್ಯ ಸೋಲಿಗೆ ಕಾರಣವಾಗಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಕಿಡಿಕಾರಿದ್ದಾರೆ.

VISTARANEWS.COM


on

Pradeep Eshwar
Koo

ಚಿಕ್ಕಬಳ್ಳಾಪುರ: ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ(Karnataka election results 2024) ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತ ಲೀಡ್‌ ಪಡೆದರೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದರು. ಈ ಸುದ್ದಿ ವೈರಲ್‌ ಆದ ಬೆನ್ನಲ್ಲೇ ಇದೀಗ ಸ್ವಪಕ್ಷದ ಶಾಸಕನ ವಿರುದ್ಧವೇ ಕಾಂಗ್ರೆಸ್‌ ಕಾರ್ಯಕರ್ತರು ಕೂಡ ತಿರುಗಿಬಿದ್ದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿರುವುದು ಕಂಡುಬಂದಿದೆ.

ಹೌದು, ಈ ಹಿಂದೆ ನಡೆದಿದ್ದ ಕಾಂಗ್ರೆಸ್‌ ಸಭೆಯಲ್ಲಿ “ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್‌ ಅವರಿಗೆ ಒಂದೇ ಒಂದು ಮತದ ಲೀಡ್‌ ಸಿಕ್ಕರೂ ರಾಜಕೀಯ ನಿವೃತ್ತಿ ಪಡೆಯುವೆ” ಎಂದು ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಆ ಹೇಳಿಕೆಯೇ ಅವರಿಗೆ ತಲೆನೋವು ತಂದಿದೆ.

ರಾಜೀನಾಮೆ ನೀಡಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಿ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧವೇ ಸ್ವಪಕ್ಷದ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೋಲಲು ಶಾಸಕ ಪ್ರದೀಪ್ ಈಶ್ವರ್ ಕಾರಣ. ಅವರು ಆಡಿದ ಮಾತುಗಳೇ ರಕ್ಷಾರಾಮಯ್ಯ ಸೋಲಿಗೆ ಕಾರಣವಾಗಿದೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ ಪುತ್ರ ಜಗದೀಶ್ ಪ್ರತಿಕ್ರಿಯಿಸಿ, ಪ್ರದೀಪ್ ಈಶ್ವರ್ ಮಾತುಗಳಿಂದಲೇ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳು ಒಂದಾದವು. ಪಕ್ಷ ಕಟ್ಟಿ ಬೆಳಸಿದೆವು, ಅದರೆ ಪ್ರದೀಪ್ ಈಶ್ವರ್ ಬಂದು ಹಾಳು ಮಾಡಿದರು. ದಯವಿಟ್ಟು ಕೊಟ್ಟ ಮಾತಿನಂತೆ ನಡೆದುಕೊಳ್ಳಿ, ಇಲ್ಲವೆಂದರೆ ಮಾತು ಕಡಿಮೆ ಮಾಡಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | Chikballapur Election Result 2024 : ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್​ಗೆ ಭರ್ಜರಿ ಗೆಲುವು

ಸುಧಾಕರ್‌ ಭರ್ಜರಿ ಗೆಲುವು; ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರ ಒತ್ತಾಯ

ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಪೋಸ್ಟರ್. ‌

ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್‌ ಭರ್ಜರಿ ಗೆಲುವು ದಾಖಲಿಸಿದ್ದರಿಂದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿದೆ. ಈ ಹಿಂದೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ (Karnataka election results 2024) ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಹೀಗಾಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ (Chikballapur Election Result 2024) ಬಿಜೆಪಿಯ ಡಾ.ಕೆ. ಸುಧಾಕರ್ (​Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್‌ ಈಶ್ವರ್‌ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

“ನನ್ನ ಮಾತಿಗೆ ನಾನು ಬದ್ಧ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಮತಗಳನ್ನು ಪಡೆದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು, ಶಾಸಕ ಸ್ಥಾನಕ್ಕೆ ಜೂನ್‌ 5ರಂದು ಬೆಳಗ್ಗೆ 5ಗಂಟೆಗೆ ರಾಜೀನಾಮೆ ನೀಡಲಿದ್ದೇನೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಿನ್ನಡೆಗೆ ನಾನೇ ನೇರ ಹೊಣೆ ಎಂದು” ಶಾಸಕ ಪ್ರದೀಪ್‌ ಈಶ್ವರ್‌ ಅವರು ಹೇಳಿದಂತಿರುವ ಪೋಸ್ಟರ್‌ ವೈರಲ್‌ ಮಾಡಲಾಗಿದೆ. ಆದರೆ, ಇದು ಶಾಸಕ ಪ್ರದೀಪ್‌ ಈಶ್ವರ್‌ ಅವರ ಅಧಿಕೃತ ಪೋಸ್ಟರ್‌ ಅಲ್ಲ. ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ | Kolar Election Result 2024 : ಕೋಲಾರದಲ್ಲಿ ಜೆಡಿಎಸ್​​, ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬುಗೆ ಗೆಲುವು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಕಾಂಗ್ರೆಸ್​ನ ಎಂ.ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.53.74ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿ ಹಾಲಿ ಸಂಸದ ಬಚ್ಚೇಗೌಡರ ಬದಲಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿದ್ದ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ಬಿಜೆಪಿ ಲೋಕಸಭಾ ಚುನಾವಣಾ ಟಿಕೆಟ್‌ ನೀಡಿತ್ತು. ಇದೀಗ ಸುಧಾಕರ್‌ ಅವರು ಭಾರಿ ಅಂತರರಿಂದ ಗೆಲುವು ದಾಖಲಿಸಿದ್ದು, ಕಾರ್ಯಕರ್ತರರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

Continue Reading
Advertisement
Govt Employees Association
ಕರ್ನಾಟಕ26 mins ago

Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

pm narendra modi resignation
ಪ್ರಮುಖ ಸುದ್ದಿ33 mins ago

PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

India vs Ireland
ಕ್ರೀಡೆ40 mins ago

India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Uttarkashi Trekking Tragedy
ಪ್ರಮುಖ ಸುದ್ದಿ59 mins ago

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

Election Results 2024
Lok Sabha Election 20241 hour ago

Election Results 2024: ಎನ್‌ಡಿಎಗೆ ಬೆಂಬಲ ನೀಡುವುದಾಗಿ ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು; ಬಿಜೆಪಿಗೆ ಬಿಗ್‌ ರಿಲೀಫ್‌

Election Results 2024
ಪ್ರಮುಖ ಸುದ್ದಿ1 hour ago

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

prajwal revanna case
ಪ್ರಮುಖ ಸುದ್ದಿ2 hours ago

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

Odisha Assembly election 2024
ದೇಶ2 hours ago

Odisha Assembly Result 2024: ಬಿಜೆಡಿಗೆ ಆಘಾತಕಾರಿ ಸೋಲು; ಒಡಿಶಾ ಸಿಎಂ ರಾಜೀನಾಮೆ

Election results 2024
Lok Sabha Election 20242 hours ago

Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Lakshmi Hebbalkar
ಪ್ರಮುಖ ಸುದ್ದಿ2 hours ago

Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌