Karnataka Weather : 4 ದಿನ ಹೀಟ್‌ವೇವ್‌ ಸ್ಟ್ರೋಕ್‌; ಹವಾಮಾನ ತಜ್ಞರ ವಾರ್ನಿಂಗ್‌ - Vistara News

ಮಳೆ

Karnataka Weather : 4 ದಿನ ಹೀಟ್‌ವೇವ್‌ ಸ್ಟ್ರೋಕ್‌; ಹವಾಮಾನ ತಜ್ಞರ ವಾರ್ನಿಂಗ್‌

Karnataka Weather Forecast : ಏ.2ರಿಂದ 8ರವರೆಗೆ ರಾಜ್ಯ ಹವಾಮಾನದ ಕುರಿತು ಮುನ್ನೆಚ್ಚರಿಕೆ ಹಾಗೂ ಎಚ್ಚರಿಕೆ ಜತೆಗೆ ಸಲಹೆ ಸೂಚನೆಗಳನ್ನು ತಜ್ಞರು ನೀಡಿದ್ದಾರೆ. ಇಂದಿನಿಂದ ಇನ್ನೂ ಮೂರು ದಿನಗಳು ಬಿಸಿಲಿನ ಹೊಡೆತ ಜೋರಾಗಿ ಇರಲಿದೆ. ಏ.6ರಿಂದ ವಿವಿಧೆಡೆ ಲಘು ಮಳೆಯಾಗುವ (Rain News) ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

Karnataka Weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನಗಳು ತಾಪಮಾನ ಏರಿಕೆ ಜತೆಗೆ ಬಿಸಿಲಿನ ಗಾಳಿ (Heat Waves) ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಈ ಸಮಯದಲ್ಲಿ ಸಾರ್ವಜನಿಕರು ಯಾವ ರೀತಿಯ ಸುರಕ್ಷತೆ ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

ಕರ್ನಾಟಕಕ್ಕೆ ಮುಂದಿನ 7 ದಿನಗಳ ಕಾಲ ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು ತಜ್ಞರು ನೀಡಿದ್ದಾರೆ. ಏಪ್ರಿಲ್‌ 2 ರಿಂದ 5ನೇ ತಾರೀಖಿನವರೆಗೆ ರಾಜ್ಯದಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಲಘು ಮಳೆ ಸೂಚನೆ

ಏಪ್ರಿಲ್‌ 6 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ ಸೇರಿ ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದೆಡೆ ಒಣ ಹವೆ ಹೆಚ್ಚಾಗಿರಲಿದೆ.

ಏಪ್ರಿಲ್‌ 7ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಮಂಡ್ಯ ಮತ್ತು ಮೈಸೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉಳಿದ ಕಡೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ.

ಏಪ್ರಿಲ್‌ 8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ ಹಾಗೂ ಕೊಪ್ಪಳ, ರಾಯಚೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಾಸನ, ಶಿವಮೊಗ್ಗ, ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಲಘು ಮಳೆ ಸಂಭವವಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.

ತಾಪಮಾನದ ಎಚ್ಚರಿಕೆ

ಏಪ್ರಿಲ್‌ 2ರಿಂದ 6ರವರೆಗೆ ಬಿಸಿಗಾಳಿ ಬೀಸಲಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ, ಬೆಳಗಾವಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರಲಿದೆ.

ಇದನ್ನೂ ಓದಿ: Fraud Case : ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯಿಂದ 4 ಕೋಟಿ ರೂ. ಪೀಕಿದ ವಂಚಕರು

ಹವಾಮಾನ ತಜ್ಞರ ಹೆಲ್ತ್‌ ಟಿಪ್ಸ್‌

ಹೀಟ್‌ ವೇವ್ಸ್‌ ಅಥವಾ ಶಾಖದ ಅಲೆಯ ಸಮಯದಲ್ಲಿ ಮಾಡಬೇಕಾದದ್ದು ಮತ್ತು ಮಾಡಬಾರದ ಕೆಲಸಗಳ ಕುರಿತು ಹವಾಮಾನ ತಜ್ಞರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಹೀಟ್‌ ವೇವ್ಸ್‌ನಿಂದಾಗಿ ಅತಿಯಾದ ಒತ್ತಡ ಉಂಟಾಗಿ ಇದು ಸಾವಿಗೆ ಕಾರಣವಾಗಬಹುದು.

1.ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

2.ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

3.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

4.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.

5.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

6.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗಿನ ಕೆಲಸ ಮಾಡುವುದನ್ನು ತಪ್ಪಿಸಿ.

7.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ.

8.ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.

9.ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

10.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ

11.ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

12.ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹವನ್ನು ತಂಪಾಗಿ ಇರಲು ಸಹಾಯ ಮಾಡುತ್ತದೆ.

13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.

ಸನ್‌ಸ್ಟ್ರೋಕ್‌ ಚಿಕಿತ್ಸೆಗಾಗಿ ಸಲಹೆಗಳು

-ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ.
-ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
-ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ರೈತರು/ಕೃಷಿ ಕಾರ್ಮಿಕರು

ಹೊಲದಲ್ಲಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿ ಬಳಸಿ. ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಇನ್ನೂ ಪ್ರಯಾಣಿಸುವಾಗ ನಿಮ್ಮೊಂದಿಗೆ ನೀರನ್ನು ಒಯ್ಯಿರಿ. ಕ್ರೀಡಾಪಟು ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದು, ಯೆಲ್ಲೋ ಹಾಗೂ ಆರೆಂಜ್‌ ಆಲರ್ಟ್‌ ನೀಡಲಾಗಿದೆ. ಗಾಳಿ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Coastal Weather: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22 ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆಯಿದೆ.

VISTARANEWS.COM


on

Karnataka weather Forecast
Koo

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ಗುಡುಗು ಸಹಿತ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ (Coastal Weather) ನಿರೀಕ್ಷೆಯಿದೆ.

ಹಲವೆಡೆ ಉತ್ತಮ ಮಳೆ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ಬೆಳಗ್ಗೆ ಮತ್ತು ಸಂಜೆ ಉತ್ತಮ ಮಳೆ ಸುರಿದಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣದಿಂದ ಕೂಡಿತ್ತು. ಮಂಗಳೂರಿನಲ್ಲಿ ಭಾನುವಾರ 32.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಕಡಿಮೆ ಇತ್ತು. 24.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಕಡಿಮೆ ಇತ್ತು.

ಉಡುಪಿಯಲ್ಲಿ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ಭಾನುವಾರ ಬೆಳಗಿನಜಾವದವರೆಗೂ ನಿರಂತರ ಮಳೆ ಸುರಿದಿದೆ. ಇನ್ನು ಉಡುಪಿ, ಮಣಿಪಾಲ, ಮಲ್ಪೆ, ಬ್ರಹ್ಮಾವರ, ಕೋಟ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಕಾಪು, ಶಿರ್ವ, ಪಡುಬಿದ್ರಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಹಲವೆಡೆ ಗಾಳಿ-ಮಳೆಗೆ ಮನೆಗಳಿಗೆ ಹಾನಿ ಸಂಭವಿಸಿದೆ. ವಿದ್ಯುತ್‌ ಕಂಬ, ತಂತಿಗಳಿಗೆ ಹಾನಿ ಸಂಭವಿಸಿದೆ.

ಕೊಡಗಿನಲ್ಲಿ ಉತ್ತಮ ಮಳೆ

ಕೊಡಗಿನ ವಿವಿಧೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ 23ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Heavy Rain: ಶಿರಾ ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ನಗರದ ನಾನಾ ಕಡೆ ಮನೆ, ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹೊಸ ಬಸ್‌ ನಿಲ್ದಾಣದ ರಸ್ತೆ, ಬಾಲಾಜಿ ನಗರ ವೃತ್ತ ಸೇರಿದಂತೆ ವಿವಿಧ ಕಡೆ ತಗ್ಗು ಪ್ರದೇಶಗಳಿಗೆ ಹಾಗೂ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ. ಸ್ಥಳೀಯ 31ನೇ ವಾರ್ಡ್‌ ವ್ಯಾಪ್ತಿಯ ಶಿವಾಜಿನಗರ, ಜಾಜಿಕಟ್ಟೆ ಅಂಗಳ ಸೇರಿದಂತೆ ಸುತ್ತಮುತ್ತಲಿನ ತಗ್ಗು ಪ್ರದೇಶದಲ್ಲಿನ ಕೆಲ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.

VISTARANEWS.COM


on

Due to heavy rain in Shira water entered houses and shops
Koo

ಶಿರಾ: ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, (Heavy Rain) ನಗರದ ನಾನಾ ಕಡೆ ಮನೆ, ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಗರದ ಹೊಸ ಬಸ್‌ ನಿಲ್ದಾಣದ ರಸ್ತೆ, ಬಾಲಾಜಿ ನಗರ ವೃತ್ತ ಸೇರಿದಂತೆ ವಿವಿಧ ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭಾನುವಾರ ಸಂಜೆಯಿಂದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಇಲ್ಲಿನ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿ ಹಾನಿ ಸಂಭವಿಸಿದೆ ಚರಂಡಿಗಳಲ್ಲಿ ಮಳೆ ನೀರು ಸುಗಮವಾಗಿ ಹರಿದು ಹೋಗದ ಕಾರಣ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.

ಇದನ್ನೂ ಓದಿ: IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

ಇನ್ನು ಸ್ಥಳೀಯ 31ನೇ ವಾರ್ಡ್‌ ವ್ಯಾಪ್ತಿಯಲ್ಲಿ ಬರುವ ಶಿವಾಜಿನಗರ, ಜಾಜಿಕಟ್ಟೆ ಅಂಗಳ ಸೇರಿದಂತೆ ಸುತ್ತಮುತ್ತಲಿನ ತಗ್ಗು ಪ್ರದೇಶದಲ್ಲಿ ಕೆಲ ಮನೆಗಳಿಗೆ ಮಳೆ ನೀರು ನುಗ್ಗಿ, ಮನೆಯಲ್ಲಿನ ಆಹಾರ ಪದಾರ್ಥಗಳು, ವಿದ್ಯುತ್‌ ಉಪಕರಣಗಳು ಸೇರಿದಂತೆ ಇತರೆ ವಸ್ತುಗಳು ನೀರು ಪಾಲಾಗಿವೆ.

ಆಕಳು ಕರು ರಕ್ಷಣೆ

ಭಾರೀ ಮಳೆಗೆ ನಗರದ 18ನೇ ವಾರ್ಡ್‌ನ ದೊಡ್ಡಕೆರೆ ಅಂಗಳದ ಬಳಿ ಚರಂಡಿಯಲ್ಲಿ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ ಆಕಳ ಕರುವನ್ನು ಸ್ಥಳೀಯ ಯುವಕರು ರಕ್ಷಿಸಿ, ಚರಂಡಿಯಿಂದ ಹೊರ ತೆಗೆದಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಇದನ್ನೂ ಓದಿ: Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Continue Reading
Advertisement
corona virus wave in singapore
ಪ್ರಮುಖ ಸುದ್ದಿ13 mins ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

KKR vs SRH
ಕ್ರೀಡೆ18 mins ago

KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌

ISIS Terrorists
ದೇಶ20 mins ago

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

Shocking News
ವಿದೇಶ27 mins ago

Shocking News: ಎಚ್‌ಐವಿ ಪಾಸಿಟಿವ್‌ ವಿಚಾರ ಮುಚ್ಚಿಟ್ಟ ಲೈಂಗಿಕ ಕಾರ್ಯಕರ್ತೆ; 211 ಮಂದಿಗೆ ಎದುರಾಯ್ತು ಸಂಕಷ್ಟ

Darshan And Vijayalakshmi Celebrate Wedding Anniversary In Dubai pavitra gowda posted karma status
ಸ್ಯಾಂಡಲ್ ವುಡ್28 mins ago

Actor Darshan: ದುಬೈನಲ್ಲಿ ʻಡಿ ಬಾಸ್‌ʼ ವೆಡ್ದಿಂಗ್‌ ಆ್ಯನಿವರ್ಸರಿ ಸೆಲೆಬ್ರೇಷನ್‌: ಇತ್ತ ಪವಿತ್ರಾ ಗೌಡ ಕರ್ಮದ ಬಗ್ಗೆ ಪಾಠ!

KKR vs SRH:
ಕ್ರೀಡೆ43 mins ago

KKR vs SRH: ಕೆಕೆಆರ್​-ಹೈದರಾಬಾದ್​ ಕ್ವಾಲಿಫೈಯರ್​ ಪಂದ್ಯದ ಹವಾಮಾನ ವರದಿ ಹೇಗಿದೆ?

board exam public exam
ಪ್ರಮುಖ ಸುದ್ದಿ1 hour ago

Board Exam: ಮಕ್ಕಳೇ ನೀವು ಪಾಸ್!‌ 5, 8 ಮತ್ತು 9ನೇ ತರಗತಿಯ ಎಲ್ಲ ಮಕ್ಕಳು ಉತ್ತೀರ್ಣ

Kangana Ranaut
ದೇಶ1 hour ago

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Job Alert
ಉದ್ಯೋಗ2 hours ago

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

belagavi farmer self harming
ಕ್ರೈಂ2 hours ago

Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌