Raksha Ramaiah: ಸಿದ್ದಗಂಗಾ ಮಠಕ್ಕೆ ರಕ್ಷಾ ರಾಮಯ್ಯ ಭೇಟಿ; ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ - Vistara News

ಚಿಕ್ಕಬಳ್ಳಾಪುರ

Raksha Ramaiah: ಸಿದ್ದಗಂಗಾ ಮಠಕ್ಕೆ ರಕ್ಷಾ ರಾಮಯ್ಯ ಭೇಟಿ; ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ

Raksha Ramaiah: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಡಾ. ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.

VISTARANEWS.COM


on

Raksha Ramaiah
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಡಾ. ಸಿದ್ದಲಿಂಗ ಸ್ವಾಮೀಜಿ ಅವರಿಂದ ಕಾಂಗ್ರೆಸ್‌ ಯುವ ನಾಯಕ ರಕ್ಷಾ ರಾಮಯ್ಯ ಆಶೀರ್ವಾದ ಪಡೆದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ (Raksha Ramaiah) ಅವರು ಅನ್ನ, ಅಕ್ಷರ ದಾಸೋಹದ ಕೇಂದ್ರವಾದ ಸಿದ್ದಗಂಗಾ ಮಠಕ್ಕೆ ಮಂಗಳವಾರ ಭೇಟಿ ನೀಡಿದ್ದರು. ಈ ವೇಳೆ ಕಾಯಕಯೋಗಿ. ತ್ರಿವಿಧ ದಾಸೋಹಿಗಳಾದ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಿದ್ದಗಂಗಾ ಮಠದ ಡಾ. ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಸಿದ್ದಗಂಗಾ ಮಠದ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಯೋಗ ಕ್ಷೇಮ ವಿಚಾರಿಸಿದ ರಕ್ಷಾ ರಾಮಯ್ಯ ಅವರು, ವಿದ್ಯಾರ್ಥಿಗಳು ಖುಷಿ ಜೊತೆಗೆ ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು. ಈ ವೇಳೆ ಹೊಸಕೋಟೆ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ | Lok Sabha Election 2024: ಚಿಕ್ಕಬಳ್ಳಾಪುರದಲ್ಲಿ ಮೈತ್ರಿಗೆ ಹಿನ್ನಡೆ; ಜೆಡಿಎಸ್‌ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆ

ಮೊಯ್ಲಿ, ಶಿವಶಂಕರ್‌ ರೆಡ್ಡಿ, ಸುಬ್ಬಾರೆಡ್ಡಿ ಸಾರಥ್ಯದಲ್ಲಿ ಎಲೆಕ್ಷನ್‌: ರಕ್ಷಾ ರಾಮಯ್ಯ

Lok Sabha Election 2024 Raksha Ramayya receives B form from DK Shivakumar and Seetharama presence

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಸ್.‌ ರಕ್ಷಾ ರಾಮಯ್ಯ (MS Raksha Ramayya) ಅವರು ಶನಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar), ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ (M Veerappa Moily) ಅವರನ್ನು ಭೇಟಿ ಮಾಡಿದರು. ಅಲ್ಲದೆ, ಕೆಪಿಸಿಸಿ ಅಧ್ಯಕ್ಷರಿಂದ ಬಿ. ಫಾರಂ ಪಡೆದರು. ಇದೇ ವೇಳೆ ಜಿಲ್ಲೆಯ ಎಲ್ಲ ನಾಯಕರನ್ನೊಳಗೊಂಡು, ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸುವುದಾಗಿ ಹೇಳಿದ್ದಾರೆ.

ಈ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಕ್ಷಾ ರಾಮಯ್ಯ ಅವರಿಗೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವಂತೆ ಶುಭ ಹಾರೈಸಿದ್ದಾರೆ.

ಚುನಾವಣಾ ಕಾರ್ಯತಂತ್ರ ಬಗ್ಗೆ ಚರ್ಚೆ

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ರಕ್ಷಾ ರಾಮಯ್ಯ ಅವರಿಗೆ ಬಿ ಫಾರಂ ವಿತರಿಸಿದರು. ಅಲ್ಲದೆ, ಈ ಚುನಾವಣೆಯಲ್ಲಿ ಎಲ್ಲ ಸವಾಲುಗಳನ್ನು ಎದುರಿಸಿ ಗೆದ್ದು ಬರುವಂತೆ ಶುಭ ಹಾರೈಸಿದರು. ಎಲ್ಲ ಸಂದರ್ಭದಲ್ಲಿಯೂ ಬೆನ್ನಿಗೆ ನಿಲ್ಲುವುದಾಗಿ ಭರವಸೆ ನೀಡಿದರು. ಈ ವೇಳೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಆರ್.‌ ಸೀತಾರಾಂ ಜತೆ ಈ ನಾಯಕರನ್ನು ಭೇಟಿ ಮಾಡಿ ಚುನಾವಣಾ ಕಾರ್ಯತಂತ್ರ ಕುರಿತು ರಕ್ಷಾ ರಾಮಯ್ಯ ಚರ್ಚಿಸಿದರು. ಚುನಾವಣೆಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಸಾಮೂಹಿಕ ಹೋರಾಟದ ಮೂಲಕ ಗೆಲುವು ಸಾಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರು ಸಲಹೆ ನೀಡಿದರು.

ಹಿರಿಯ ನಾಯಕರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ರಕ್ಷಾ ರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಡಾ.ಎಂ. ವೀರಪ್ಪ ಮೊಯ್ಲಿ ಹಾಗೂ ಪಕ್ಷದ ಹಿರಿಯ ಮುಖಂಡರಾದ ಶಿವಶಂಕರ ರೆಡ್ಡಿ ಸೇರಿದಂತೆ ಎಲ್ಲರ ನಾಯಕತ್ವದಡಿ ಚುನಾವಣೆ ಎದುರಿಸುತ್ತಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇನೆ. ಶಾಸಕರಾದ ಸುಬ್ಬಾರೆಡ್ಡಿ ಅವರು ಟಿಕೆಟ್‌ ಘೋಷಣೆಯಾದ ನಂತರ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದು, ಎಲ್ಲಿಯೂ ಅಸಮಾಧಾನವಿಲ್ಲ. ಅಸಮಾಧಾನದ ಪ್ರಶ್ನೆ ಉದ್ಭವಾಗುವುದಿಲ್ಲ. ಹೈಕಮಾಂಡ್‌ ಟಿಕೆಟ್‌ ಹಂಚಿಕೆಮಾಡಿದ್ದು, ಪಕ್ಷದ ಪ್ರಮುಖ ನಾಯಕರು ಪ್ರಚಾರದ ಪ್ರತಿಯೊಂದು ಹಂತದಲ್ಲೂ ನಮ್ಮೊಂದಿಗೆ ಇರಲಿದ್ದಾರೆ ಎಂದು ಹೇಳಿದರು.

ಹಿರಿಯರ ಆಶೀರ್ವಾದ ಪಡೆದು ಪ್ರಚಾರ

ಕಾಂಗ್ರೆಸ್‌ ಪಕ್ಷ ಸಾಗರವಿದ್ದಂತೆ. ನಮ್ಮಲ್ಲಿ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಏನೇ ಆದರೂ ವೀರಪ್ಪ ಮೊಯ್ಲಿ ಮತ್ತು ಶಿವಶಂಕರ ರೆಡ್ಡಿ ಅವರ ಆಶೀರ್ವಾದ ಪಡೆದು ಪ್ರಚಾರ ನಡೆಸುತ್ತೇವೆ. ಕಾಂಗ್ರೆಸ್‌ ಪಕ್ಷಕ್ಕೆ ಸಕಾರಾತ್ಮಕವಾದ ಪ್ರತಿಕ್ರಿಯೆ ಇದೆ. ಯುವ ಸಮೂಹದವರು ಕೇಂದ್ರ ಸರ್ಕಾರದ ಬಗ್ಗೆ ಭ್ರಮನಿರಸನಗೊಂಡಿದ್ದು, ರೋಸಿ ಹೋಗಿದ್ದಾರೆ. ಯುವ ಕೇಂದ್ರಿತ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ. ಬದಲಾವಣೆಗಾಗಿ ಯುವ ಸಮೂಹ ಕಾತರದಿಂದ ಕಾಯುತ್ತಿದ್ದು, ಸಕಾರಾತ್ಮಕ ವಾತಾವರಣ ನಿರ್ಮಾಣವಾಗಿದೆ ಎಂದು ರಕ್ಷಾ ರಾಮಯ್ಯ ಹೇಳಿದರು.

ಕಾಂಗ್ರೆಸ್‌ನಿಂದ ಯುವ ಜನರಿಗೆ ಟಿಕೆಟ್‌

ಪ್ರತಿಸ್ಪರ್ಧಿ ಡಾ. ಕೆ. ಸುಧಾಕರ್‌ ಅವರ ವಿರುದ್ಧ ನಮ್ಮ ಹೋರಾಟ ಅತ್ಯಂತ ರಚನಾತ್ಮಕವಾಗಿರುತ್ತದೆ. ನಮ್ಮ ಒಳ್ಳೆಯತನ, ನಮ್ಮ ಕೆಲಸಗಳು, ನಮ್ಮ ಗುರಿ, ಪಕ್ಷದ ಸಿದ್ಧಾಂತ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತೇವೆ. ಕಾಂಗ್ರೆಸ್‌ ಪಕ್ಷ ಈ ಬಾರಿ ಯುವ ಸಮೂಹಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಇದು ತಮಗೆ ಸಂತಸ ತಂದಿದೆ. ಯುವ ಜನಾಂಗ ಈ ಬಾರಿ ಕಾಂಗ್ರೆಸ್‌ ಪಕ್ಷವನ್ನು ಕೈ ಹಿಡಿಯಲಿದೆ. ರಾಜ್ಯದಲ್ಲಿ ಶೇ. 32 ರಿಂದ 35 ರಷ್ಟು ಯುವ ಜನಾಂಗಕ್ಕೆ ಸ್ಪರ್ಧಿಸಲು ಟಿಕೆಟ್‌ ದೊರೆತಿದ್ದು, ಕರ್ನಾಟಕದಲ್ಲಿ ಇದು ಉತ್ತಮ ಬೆಳವಣಿಗೆ ಎಂದು ರಕ್ಷಾ ರಾಮಯ್ಯ ತಿಳಿಸಿದರು.

ನಮ್ಮ ಹಿರಿಯ ನಾಯಕರು ತಮಗೆ ಆಶೀರ್ವಾದ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ 29 ದಿನಗಳು ಮಾತ್ರ ಬಾಕಿ ಉಳಿದಿವೆ. ಪ್ರತಿಯೊಂದು ಗಂಟೆಯೂ ಇಲ್ಲಿ ಮುಖ್ಯವಾಗಿದೆ. ಹೀಗಾಗಿ ಗಂಟೆ ಗಂಟೆಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಚುನಾವಣೆಯನ್ನು ಎದುರಿಸುತ್ತೇವೆ. ಯುವ ಸಮುದಾಯ, ಮಹಿಳೆಯರು ಒಳಗೊಂಡಂತೆ ಎಲ್ಲ ವರ್ಗದ ಜನರ ಜತೆಗೂಡಿ ಪ್ರಚಾರ ಹಮ್ಮಿಕೊಳ್ಳಲಾಗುವುದು. ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಯಕ್ರಮಗಳು, ಪಕ್ಷದ ರಾಷ್ಟ್ರೀಯ ವಿಚಾರಗಳ ಆಧಾರದ ಮೇಲೆ ಪ್ರಚಾರ ಹಮ್ಮಿಕೊಳ್ಳಲಾಗುವುದು ಎಂದು ರಕ್ಷಾ ರಾಮಯ್ಯ ತಿಳಿಸಿದರು.

ಇದನ್ನೂ ಓದಿ | Lok Sabha Election 2024: ಜೆಡಿಎಸ್‌ ಕಟ್ಟಿದ್ದೇ ನಾನು; ನನ್ನನ್ನೇ ಮಿಸ್ಟರ್‌ ದೇವೇಗೌಡ ಉಚ್ಚಾಟಿಸಿದ್ರು: ಸಿಎಂ ಸಿದ್ದರಾಮಯ್ಯ

Raksharamaiah meet CM Siddaramaiah

ಮುಂದಿನ ಗುರಿ, ಯೋಜನೆಯನ್ನು ತೆರೆದಿಟ್ಟ ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ ಕ್ಷೇತ್ರದ ಸಮಸ್ಯೆಗಳನ್ನು ನಿವಾರಿಸುವುದು ನಮ್ಮ ಆದ್ಯತೆಯಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪ್ರಸ್ತುತ ಶೇ. 82 ರಿಂದ 85ರಷ್ಟು ಸಾರಕ್ಷತೆಯಿದೆ. ಬರುವ ದಿನಗಳಲ್ಲಿ ಶೇ. 100ರಷ್ಟು ಸಾಕ್ಷರತಾ ಜಿಲ್ಲೆಯನ್ನಾಗಿ ಮಾಡಲು ಒತ್ತು ನೀಡಲಾಗುವುದು. ಪ್ಲೋರೈಡ್‌ ಯುಕ್ತ ನೀರಿನಿಂದಾಗಿ ಕ್ಯಾನ್ಸರ್‌ ಮತ್ತಿತರೆ ಗಂಭೀರ ಆರೋಗ್ಯ ಸಮಸ್ಯೆಗಳು ಸಹ ಕಾಣಿಸಿಕೊಂಡಿದ್ದು, ಈ ಸಮಸ್ಯೆ ನಿವಾರಣೆ ನಮ್ಮ ಗುರಿಯಾಗಿದೆ. ಯುವ ಸಬಲೀಕರಣಕ್ಕೆ ಒತ್ತು ನೀಡಲಾಗುವುದು ಎಂದು ರಕ್ಷಾ ರಾಮಯ್ಯ ಅವರು ತಮ್ಮ ಮುಂದಿನ ಗುರಿಯನ್ನು ತೆರೆದಿಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Karnataka Weather Forecast : ದಕ್ಷಿಣ ಒಳನಾಡಿನ ಕೆಲವಡೆ ಮಳೆಯು ಹಿಂದೆ ಸರಿದಿದ್ದು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ವೈಲೆಂಟ್‌ ಆಗಿರಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕೆಲವಡೆ ಗುಡುಗು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಎಷ್ಟು ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!

ಚಾರಣ ಪ್ರಿಯರಿಗೆ ಮಳೆಗಾಲ ಹತ್ತಿರ ಬರುತ್ತಿದ್ದಂತೆ ಸುಗ್ಗಿ. ಒಂದೆರಡು ಮಳೆ ಬರುತ್ತಿದ್ದಂತೆ ಚಿಗುರುವ ಬೆಟ್ಟಗಳು ಹಸಿರಾಗಿ ನಳನಳಿಸಲು ಆರಂಭಿಸುತ್ತವೆ. ಹಸಿರ ಸ್ವರ್ಗದಲ್ಲಿ ನಡೆಯುತ್ತಾ ನೆಲಕ್ಕೆ ಮುತ್ತಿಕ್ಕುವ ಮಂಜಿನ ಹನಿಗಳು, ಮೋಡಗಳ ಜೊತೆ ಹೆಜ್ಜೆ ಹಾಕುತ್ತಾ ಸಾಗುವುದು ಪ್ರಕೃತಿ ಪ್ರಿಯರಿಗೆ ದೈವಿಕ ಅನುಭೂತಿ ನೀಡುವ ಕ್ಷಣಗಳಲ್ಲಿ ಒಂದು. ಅದಕ್ಕಾಗಿಯೇ, ಮಳೆಗಾಲ ಹತ್ತಿರ ಬರುತ್ತಿದ್ದಂತೆ ಈ ಚಾರಣಿಗರೆಲ್ಲ ತಮ್ಮ ಅನುಕೂಲಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಂಡು ಒಂದಲ್ಲ ಒಂದು ಚಾರಣಕ್ಕೆ ತಯಾರಾಗುತ್ತಾರೆ. ಹಿಮಾಲಯದ ಚಾರಣ ಕನಸಾದರೂ, ಹತ್ತಿರದಲ್ಲೇ ಸಿಗುವ ಕಡಿಮೆ ಅವಧಿಯಲ್ಲಿ ಮಾಡಿ ಬರಬಹುದಾದ ಚಾರಣಗಳು ಇಂತಹ ಸಂದರ್ಭ ನೆಮ್ಮದಿಯ ಅನುಭವ ನೀಡುತ್ತವೆ. ಬನ್ನಿ, ದಕ್ಷಿಣ ಭಾರತದಲ್ಲಿ ಮಳೆಗಾಲ ಸಮೀಪಿಸುತ್ತಿದ್ದಂತೆ ಮಾಡಬಹುದಾದ ಚಾರಣಗಳು (South Indian monsoon destinations) ಇಲ್ಲಿವೆ.

Meesapulimala trek, Kerala

ಮೀಸಪುಲಿಮಲ ಚಾರಣ, ಕೇರಳ

ಕೇರಳದ ಇಡುಕ್ಕಿ ಜಿಲ್ಲೆಯಲ್ಲಿರುವ ಈ ಚಾರಣ ಅತ್ಯಂತ ಸುಂದರ ಚಾರಣಗಳಲ್ಲಿ ಒಂದು. ದಕ್ಷಿಣ ಭಾರತದಲ್ಲಿ ರೋಡೋಡೆಂಡ್ರಾನ್‌ ಅರಳಿರುವುದನ್ನು ನೋಡಬೇಕಾದರೆ ಈ ಚಾರಣ ಮಾಡಬೇಕು. ಅಣ್ಣಾಮಲೈ ಹಾಗೂ ಪಳನಿ ಪರ್ವತ ಪ್ರದೇಶಗಳ ನಡುವೆ ಇರುವ ಈ ಪ್ರದೇಶದಲ್ಲಿ ಮೋಡಗಳನ್ನು ನೀವು ಮುಟ್ಟಬಹುದು. ಅತ್ಯಂತ ಚಂದದ ಹುಲ್ಲುಗಾವಲ ಮಧ್ಯದಲ್ಲಿ ಮಾಡುವ ಈ ಚಾರಣ ಸುಮಾರು ೧೮ ಕಿಮೀಗಳ ಅತ್ಯಂತ ಸುಮಧುರ ಅನುಭವ ನೀಡಬಹುದಾದದ್ದೇ ಆಗಿದೆ.

kudremukh

ಕುದುರೆಮುಖ ಚಾರಣ

ಕುದುರೇಮುಖ ಬೆಟ್ಟಗಳ ಚಾರಣಕ್ಕೆ ಇಂಥದ್ದೇ ಎಂಬ ಸಮಯ ಇಲ್ಲದಿದ್ದರೂ ಮಳೆಗಾಲ ಅತ್ಯಂತ ಸೂಕ್ತ. ಮಳೆಗಾಲದಲ್ಲಿ ಈ ಬೆಟ್ಟದ ಸಾಲುಗಳು ಈಗಷ್ಟೇ ಮಿಂದೆದ್ದು ಹಸಿರು ಸೀರೆಯುಟ್ಟ ನವತರುಣಿಯಂತೆ ಶೋಭಿಸುತ್ತದೆ. ಸುಮಾರು ೨೦ ಕಿಮೀ ಅಂತರದ ಈ ಚಾರಣ ಶೋಲಾ ಕಾಡುಗಳ ಮದ್ಯದಿಂದ ಹಾದುಹೋಗಬೇಕಾಗುತ್ತದೆ. ಮಂಜು ಕವಿದ, ಮೋಡಗಳು ದಿನವಿಡೀ ಬೆಟ್ಟ ಚುಂಬಿಸುವ ಈ ಚಾರಣದ ಹಾದಿಯೇ ಒಂದು ಸುಮಧುರ ಅನುಭೂತಿ. ಚಾಋಣ ಪ್ರಿಯರಾರೂ ಈ ಚಾರಣವನ್ನು ಮಿಸ್‌ ಮಾಡಲು ಬಯಸುವುದಿಲ್ಲ.

Nagalapuram trek, Andhra Pradesh

ನಾಗಲಾಪುರಂ ಚಾರಣ, ಆಂಧ್ರಪ್ರದೇಶ

ಚಿತ್ತೂರು ಜಿಲ್ಲೆಯಲ್ಲಿರುವ ನಾಗಲಾಪುರಂ ಅತ್ಯಂತ ಸುಂದರ ತಾಣ. ಈ ಜಾಗ ಜಲಪಾತಗಳದದ್ದೇ ಕಾರುಬಾರು. ಚಾರಣದುದ್ದಕ್ಕೂ ಸಿಗುವ ಬಗೆಬಗೆಯ ಜಲಪಾತಗಳು ಚಾರಣಿಗರ ಮನೋಲ್ಲಾಸ ಹೆಚ್ಚಿಸುತ್ತದೆ. ದಣಿವು ಆರಿಸುತ್ತದೆ. 12 ಕಿಮೀ ದೂರದ ಈ ಚಾರಣ ಮಳೆಗಾಲದಲ್ಲಷ್ಟೇ ಅತ್ಯಂತ ಸೊಗಸಾದ ಅನುಭವ ನೀಡುತ್ತದೆ.

Kodachadri trek

ಕೊಡಚಾದ್ರಿ ಚಾರಣ

ಚಾರಣದ ಹುಚ್ಚು ಹತ್ತಿಸಿಕೊಂಡ ಮಂದಿ ಆರಂಭದ ದಿನಗಳಲ್ಲಿ ಮಾಡಬಹುದಾದ, ಮತ್ತಷ್ಟು ಚಾರಣದ ಹುಚ್ಚನ್ನು ಹತ್ತಿಸಿಕೊಳ್ಳಬಹುದಾದ ಎಲ್ಲ ಲಕ್ಷಣಗಳ್ನೂ ಹೊಂದಿದ ತಾಣ. ಮಳೆಗಾಲದಲ್ಲಿ ಈ ಜಾಗದ ಸೌಂದರ್ಯ ಸವಿಯಲು ಎರಡು ಕಣ್ಣು ಸಾಲದು. ಕೊಲ್ಲೂರಿನ ಮೂಕಾಂಬಿಕಾ ಸನ್ನಿಧಿಯಿಂದ ಮಾಡಬಹುದಾದ ಈ ಚಾರಣ ಮೂಕಾಂಬಿಕಾ ರಕ್ಷಿತಾರಣ್ಯದ ಒಳಗೆಯೇ ಇದೆ. ಆದಿ ಶಂಕರರು ಧ್ಯಾನ ಮಾಡಿದ ಸ್ಥಳದವರೆಗೆ ಚಾರಣ ಮಾಡಿ ಧ್ಯಾನವನ್ನೂ ಮಾಡಿ, ಮೋಡಗಳನ್ನು ಬೊಗಸೆ ತುಂಬಾ ಹಿಡಿದು ಮರಳಬಹುದು.

Chembara Peak Trek, Wayanad

ಚೆಂಬಾರ ಪೀಕ್‌ ಚಾರಣ, ವಯನಾಡು

ವಯನಾಡಿನ ಚೆಂಬಾರ ಪೀಕ್‌ ಚಾರಣ ಕೂಡಾ ಮಳೆಗಾಲದ ಅದ್ಭುತಗಳಲ್ಲಿ ಒಂದು. ದಟ್ಟಾರಣ್ಯದ ಮಧ್ಯದಲ್ಲಿರುವ ಈ ಚಾರಣಕ್ಕೆ ಅರಣ್ಯಾಧಿಕಾರಿಗಳ ಅನುಮತಿ ಬೇಕು. ಸರಳವಾದ, ಆದರೆ ಮನಮೋಹಕ ದೃಶ್ಯಗಳನ್ನು ಅನುಭವಗಳನ್ನು ಕಣ್ತುಂಬಿಕೊಳ್ಳಬಹುದಾದ ನಾಲ್ಕೈದು ಗಂಟೆಗಳಲ್ಲಿ ಮುಗಿಸಬಹುದಾದ ಚಾರಣವಿದು. ಆರಂಭಿಕ ಚಾರಣಿಗರಿಗೆ ಬೆಸ್ಟ್‌.

Ombattu gudda trek

ಒಂಭತ್ತು ಗುಡ್ಡ ಚಾರಣ

ಏಳೆಂಟು ಗಂಟೆಗಳ ಈ ಚಾರಣ ಸ್ವಲ್ಪ ಸವಾಲೇ ಆದರೂ, ಅತ್ಯಂತ ಸುಂದರ ಚಾರಣಗಳಲ್ಲಿ ಒಂದು. ಹಾಸನ ಹಾಗೂ ಚಿಕ್ಕಮಗಳೂರಿನ ಸರಹದ್ದಿನಲ್ಲಿ ಬರುವ ಈ ಸ್ಥಳದಲ್ಲಿ ಬಗೆಬಗೆಯ ಸಸ್ಯವೈವಿಧ್ಯವನ್ನೂ ಕಣ್ತುಂಬಿಕೊಳ್ಳಬಹುದು. ರೋಮಾಂಚಕ ಹಾಗೂ ನಿಗೂಢವಾದ ಅನುಭವಗಳನ್ನು ನೀಡಬಲ್ಲ ಈ ಚಾರಣದಲ್ಲಿ ಈ ಅನುಭವಗಳನ್ನು ಪಡೆಯಲು ಮಳೆಗಾಲದಲ್ಲೇ ಚಾರಣ ಮಾಡಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

Karnataka Rain : ರಾಜ್ಯಾದ್ಯಂತ ಮಳೆಯು ಚುರುಕುಗೊಂಡಿದ್ದು ಸಾಕಷ್ಟು ಅವಾಂತರವನ್ನು ಸೃಷ್ಟಿಸಿದೆ. ಮಂಗಳೂರಲ್ಲಿ ಭಾರಿ ಮಳೆಗೆ ರಾಜಕಾಲುವೆ ತುಂಬಿ ಹರಿದಿದ್ದು, ರಸ್ತೆ ಕಾಣದೆ ಆಟೋ ಚಾಲಕ ಕಾಲುವೆಗೆ ಉರುಳಿ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮನೆಯ ಚಾವಣಿ ಕುಸಿದು ಬಿದ್ದರೆ, ನಂಜನಗೂಡಲ್ಲಿ ಮನೆಗಳು ಜಲಾವೃತಗೊಂಡಿದೆ. ತುಮಕೂರಿನಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

VISTARANEWS.COM


on

By

Karnataka Rain
Koo

ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ಭಾರಿ ಮಳೆಗೆ (Karnataka Rain) ರಾಜಕಾಲುವೆಗೆ ಆಟೋ ಉರುಳಿದ್ದು, ಚಾಲಕ ದಾರುಣವಾಗಿ ಮೃತಪಟ್ಟಿದ್ದಾರೆ. ಚಾಲಕ ದೀಪಕ್ (40) ದುರ್ಮರಣ ಹೊಂದಿದವರು. ಶುಕ್ರವಾರ ರಾತ್ರಿ ಸುರಿದ ಮಳೆಗೆ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿತ್ತು. ರಾತ್ರಿ ವೇಳೆ ಅದೇ ರಸ್ತೆಯಲ್ಲಿ ಬಂದ ಚಾಲಕ ದೀಪಕ್‌ ಆಟೋ ಸಮೇತ ರಾಜಕಾಲುವೆ ಉರುಳಿ ಬಿದ್ದಿದ್ದಾರೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿದ್ದ ಕಾರಣ ಈ ಅವಘಡ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ದೀಪಕ್‌ ಬಲಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಜಕಾಲುವೆಗೆ ತಡೆಗೋಡೆ ನಿರ್ಮಿಸದೇ ಇರುವುದೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಮಳೆಗೆ ನೆಲಕ್ಕೆ ಬಿದ್ದ ಮನೆಯ ಚಾವಣಿ

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಸಮೀಪದ ನರಗನಹಳ್ಳಿಯಲ್ಲಿ ರಾತ್ರಿ ಸುರಿದ ಮಳೆಗೆ ಏಕಾಏಕಿ ಮನೆ ಚಾವಣಿ ನೆಲಕ್ಕೆ ಬಿದ್ದಿತ್ತು. ಅದೃಷ್ಟವಶಾತ್ ತಾಯಿ-ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗುಡುಗು ಸಹಿತ ಮಳೆಯ ರಭಸಕ್ಕೆ ಸೀಟು ಪುಡಿ ಪುಡಿಯಾಗಿದೆ. ತಾಯಿ-ಮಗು ಮಲಗಿದ್ದ ಪಕ್ಕದಲ್ಲೇ ಮನೆ ಮೇಲಿನ ಸೀಟು ಬಿದ್ದಿದೆ. ಆನಂದಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದು ಬಿದ್ದಿದ್ದು, ರಾತ್ರಿಯಿಡೀ ಪಕ್ಕದ ಮನೆಯಲ್ಲಿ ವಾಸ ಮಾಡುವಂತಾಯಿತು. ಮನೆ ಕಳೆದುಕೊಂಡ ಕುಟುಂಬ ಕಂಗಲಾಗಿತ್ತು. ಇತ್ತ ಮನೆ ಕುಸಿದರೂ ಸ್ಥಳಕ್ಕೆ ಬಾರದ ಪಂಚಾಯಿತಿ ಸಿಬ್ಬಂದಿ ತಾಲೂಕು ಆಡಳಿತದ ವಿರುದ್ದ ಸ್ಥಳೀಯರು ಕಿಡಿಕಾರಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮಳೆಯ ಅವಾಂತರಕ್ಕೆ 16 ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ತೂಬಗೆರೆ ಹೋಬಳಿಯಲ್ಲಿ ಸಾಕಷ್ಟು ಹಾನಿಯಾಗಿದೆ. ಬುಡ ಸಮೇತ ಮರಗಳು ರಸ್ತೆಗೆ ಬಿದ್ದಿವೆ. ಅಮದಾಜು 80ಕ್ಕೂ ಹೆಚ್ಚು ಮರಗಳು ಧರಗೆ ಉರುಳಿವೆ. ತೂಬಗೆರೆ ಹೋಬಳಿಯಲ್ಲಿ ವಿದ್ಯುತ್ ಕಂಬ ಬಿದ್ದ ಕಾರಣ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಬೆಸ್ಕಾಂ ಸಿಬ್ಬಂದಿ ಬೆಳಗ್ಗೆಯಿಂದಲೂ ಕಂಬಗಳನ್ನು ಸರಿಪಡಿಸುತ್ತಿದ್ದಾರೆ. ಮಳೆಯ ಅವಾಂತರಕ್ಕೆ ವಿದ್ಯುತ್ ಇಲ್ಲದೆ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಇಷ್ಟೆಲ್ಲಾ ಆದರೂ ಕೂಡ ತಾಲೂಕು ಆಡಳಿತ ಸ್ಪಂದಿಸುತ್ತಿಲ್ಲ. ತಹಸೀಲ್ದಾರ್, ಇಓ ಯಾರೂ ಕೂಡ ಭೇಟಿ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆ

ಚಿಕ್ಕಮಗಳೂರಿನ ತರೀಕೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ಕಲ್ಲತ್ತಿಗರಿ ಜಲಪಾತ ಮೈದುಂಬಿ ಹರಿಯುತ್ತಿದೆ. ಮೊನ್ನೆವರೆಗೂ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು. ರಾತ್ರಿ ಸುರಿದ ಒಂದೇ ಮಳೆಗೆ ಕಲ್ಲತ್ತಿಗರಿ ಜಲಪಾತ ಧುಮ್ಮಿಕ್ಕುತ್ತಿದೆ. ಕೆಮ್ಮಣ್ಣುಗುಂಡಿ ಗುಡ್ಡಗಾಡು ತಪ್ಪಲ್ಲಿನಲ್ಲಿ ಭಾರೀ ಮಳೆ ಹಿನ್ನೆಲೆ ಜಲಪಾತ ನೋಡಲು ಪ್ರವಾಸಿಗರ ದಂಡು ಬರುತ್ತಿದೆ.

ತರೀಕೆರೆ ತಾಲೂಕಿನ ತ್ಯಾಗದಬಾಗಿ ಗ್ರಾಮದಲ್ಲಿ ಇದ್ದಕ್ಕಿದ್ದಂತೆ ಹಳ್ಳ ಬಂದಿದ್ದರಿಂದ ಇಟಾಚಿ ಮುಳುಗಿದೆ. ತ್ಯಾಗದ ಬಾಗಿ ಗ್ರಾಮದಲ್ಲಿ ಸೇತುವೆ ಇಕ್ಕೆಲಗಳನ್ನು ಕ್ಲೀನ್ ಮಾಡುವಾಗ ಈ ಘಟನೆ ನಡೆದಿದೆ. ಕೆಮ್ಮಣ್ಣುಗುಂಡಿ-ಕಲ್ಲತ್ತಿಗರಿ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಇದ್ದಕ್ಕಿದ್ದಂತೆ ಹಳ್ಳದಲ್ಲಿ ನೀರು ಹೆಚ್ಚಾಗಿ ಇಟಾಚಿ ಮುಳುಗಿದೆ. ಕಾರ್ಮಿಕರಿದ್ದರು ಇಟಾಚಿ ಮೇಲೆ ತರಲು ಸಾಧ್ಯವಾಗಿಲ್ಲ. ಇಟಾಚಿ ಬಿಟ್ಡು ಮೇಲೆ ಬಂದು ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ. ಮಳೆ ಕಡಿಮೆ ಆಗುವವರೆಗೂ ಹಳ್ಳದಲ್ಲೇ ಇಟಾಚಿ ಲಾಕ್ ಆಗಲಿದೆ.

ಇದನ್ನೂ ಓದಿ: Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

ಮಳೆಗೆ ಸೋರುತಿಹುದು ಕೆಎಸ್‌ಆರ್‌ಟಿಸಿ ಬಸ್ಸಿನ ಮಾಳಿಗೆ

ಕೊಡಗು ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು, ಕೆಎಸ್‌ಆರ್‌ಟಿಸಿ ಬಸ್ಸಿನ ಮಾಳಿಗೆ ಸೋರುತ್ತಿದೆ. ಮಳೆಯಿಂದಾಗಿ ಬಸ್‌‌ನೊಳಗೆ ಇರುವ ಪ್ರಯಾಣಿಕರ ಮೇಲೆ ನೀರು ಬೀಳುವ ವಿಡಿಯೊ ವೈರಲ್‌ ಆಗಿದೆ. ಮೈಸೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಬಸ್ ಇದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಯಾವ ಡಿಪೋ ಬಸ್ ಎಂಬ ಬಗ್ಗೆ ಮಾಹಿತಿ‌ ಲಭ್ಯವಿಲ್ಲ.

ಧಾರಾಕಾರ ಮಳೆಗೆ ಜಲಾವೃತಗೊಂಡು ನಂಜನಗೂಡು ಮನೆಗಳು

ಮೈಸೂರು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು, ನಂಜನಗೂಡಿನಲ್ಲಿ ಮನೆಗಳು ಜಲಾವೃತಗೊಂಡಿವೆ. ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ದಿನಸಿ, ಗೃಹೋಪಯೋಗಿ ವಸ್ತುಗಳು ನಾಶವಾಗಿವೆ. ನಂಜನಗೂಡಿನ ಅಶೋಕಪುರಂ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ ಮನೆಗಳಿಗೆ ಕಲುಷಿತ ನೀರು ನುಗ್ಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ತುಮಕೂರಿನಲ್ಲಿ ಧರೆಗುರುಳಿದ ಮರಗಳು, ವಿದ್ಯುತ್‌ ಕಂಬಗಳು

ಗಾಳಿ ಮಳೆ ಅಬ್ಬರಕ್ಕೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ. ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತಗೊಳಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಇನ್ನೂ ರಸ್ತೆಗೆ ಮರ ಬಿದ್ದು ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಕೊರಟಗೆರೆ ಮುಖ್ಯರಸ್ತೆಗೆ ಮರ ಬಿದ್ದ ಹಿನ್ನೆಲೆ ಸಂಚಾರಕ್ಕೆ ತೊಂದರೆಯಾಗಿದ್ದು, ಬಳಿಕ ಜೆಸಿಬಿ ಸಹಾಯದಿಂದ ಮರವನ್ನು ತೆರವುಗೊಳಿಸಲಾಯಿತು.

ಯಾದಗಿರಿಯಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ಮನೆ

ತಡರಾತ್ರಿ ಬಿರುಗಾಳಿ ಸಹಿತ ಮಳೆ ಆಗಿದ್ದು, ಸಿಡಿಲು ಬಡಿದು ಮನೆಯೊಂದು ಹೊತ್ತಿ ಉರಿದಿದೆ. ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಿಂಗನಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪತ್ರಾಸ್ ಮನೆಗೆ ಸಿಡಿಲು ಹೊಡೆದು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದರು. ಅಂದಾಜು ಐದು ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ, ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಳಿ ಮಳೆಗೆ ಎರಡು ದಿನದಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕರೆಂಟ್ ಸಮಸ್ಯೆಯಿಂದ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಯಾದಗಿರಿಯ ಹೊಸಳ್ಳಿ, ಹೊಸಳ್ಳಿ ತಾಂಡಾ ಹಾಗೂ ತಡಿಬಿಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಕಳೆದ ಎರಡು ದಿನಗಳಿಂದ ಕರೆಂಟ್ ಸಮಸ್ಯೆಯಿಂದ ಬೋರ್‌ವೆಲ್‌ಗಳಲ್ಲಿ ನೀರು ಬಂದಿಲ್ಲ. ಇದರಿಂದಾಗಿ ಗ್ರಾಮದ ಸಮೀಪದ ಪೆಟ್ರೋಲ್ ಬಂಕ್ ಬಳಿಯ ಬೋರ್‌ವೆಲ್‌ನಿಂದ ನೀರನ್ನು ತಂದು ಬಳಸುತ್ತಿದ್ದಾರೆ. ಸರತಿ ಸಾಲಿನಲ್ಲಿ ಬಿಂದಿಗೆಯಿಟ್ಟು ನೀರಿಗಾಗಿ ಕಾದು ಕೂರುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

ಮಂಡ್ಯದಲ್ಲಿ ಧಾರಾಕಾರ ಮಳೆ ಕರೆಂಟ್‌ ಕಟ್‌

ಮಂಡ್ಯ ಜಿಲ್ಲೆ ಕೆಆರ್‌ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಧಾರಾಕಾರ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿದೆ. ವರುಣನ ಅಬ್ಬರಕ್ಕೆ ವಿದ್ಯುತ್ ತಂತಿ ಹಾಗೂ ಮರಗಳು ಧರೆಗುರುಳಿವೆ. ಹೆಗ್ಗಡಹಳ್ಳಿ ಗ್ರಾಮದಲ್ಲಿ 5ಕ್ಕೂ ಹೆಚ್ಚು ಮನೆಗಳಲ್ಲಿ ಚಾವಣಿ ಹಾರಿಹೋಗಿವೆ. ಬಿರುಗಾಳಿಗೆ ಮನೆಗಳ ಮೇಲೆ ವಿದ್ಯುತ್ ಕಂಬ ಉರುಳಿದ್ದು, ಬೇರು ಸಮೇತ ಮರ ಧರೆಗುರುಳಿದ ಪರಿಣಾಮ ಗ್ರಾಮದ ಸಂಚಾರ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದ ಕಾರಣ ವಿದ್ಯುತ್ ಇಲ್ಲದೆ ಜನರು ಕಂಗಾಲಾಗಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರ ಮನವಿ ಮಾಡಿದ್ದಾರೆ.

ಕೋಡಿ ಬಿದ್ದ ಮಲ್ಲಾಪುರ ಕೆರೆ

ಚಿತ್ರದುರ್ಗದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮಲ್ಲಾಪುರ ಕೆರೆ ಕೋಡಿ ಬಿದ್ದಿದೆ. ಕೋಡಿ ಬಿದ್ದ ಪರಿಣಾಮ ಕೆಲ ಮನೆಗಳಿಗೆ ನೀರು ನುಗ್ಗಿದೆ. ನಗರಸಭೆ ಅಧಿಕಾರಿಗಳು ಕೆರೆಯಲ್ಲಿದ್ದ ಕಸ ತೆಗೆಯುತ್ತಿದ್ದಾರೆ. ಕಸದಿಂದ ಸೇತುವೆ ಕೆಳಗೆ ಕೆರೆ ನೀರು ನಿಂತಿದೆ. ಹಂತ ಹಂತವಾಗಿ ಕಸ ತೆರವು ಮಾಡುತ್ತಿದ್ದರೆ ಇತ್ತ ಕೆರೆ ನೀರಿನಲ್ಲಿ ಮೀನು ಹಿಡಿಯಲು ಸ್ಥಳೀಯರು ಮುಂದಾದರು.

ಹಾಸನದಲ್ಲಿ ಮಳೆಗೆ ಬೆಳೆ ಹಾನಿ

ಹಾಸನ ಜಿಲ್ಲೆಯಲ್ಲಿ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಬೇಲೂರು ತಾಲೂಕಿನ ಹಳೆಬೀಡು ಹೋಬಳಿಯಲ್ಲಿ ಗಾಳಿ ಮಳೆಗೆ ಬೆಳೆಯು ನಾಶವಾಗಿದೆ. ಬಾಳೆ, ಅಡಿಕೆ, ತೆಂಗು ಬೆಳೆ ‌ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಕ್ಯಾತಲಾಪುರ ಗ್ರಾಮದಲ್ಲಿ ಬಾಳೆ, ಅಡಿಕೆ, ತೆಂಗು ಬೆಳೆ ಧರೆಗುರುಳಿದೆ. ಫಸಲಿಗೆ ಬಂದಿದ್ದ ತೆಂಗು, ಬಾಳೆ, ಅಡಿಕೆ ಬೆಳೆ ಸಂಪೂರ್ಣ ನಾಶವಾಗಿದ್ದು, ಸೂಕ್ತ ಪರಿಹಾರಕ್ಕಾಗಿ ಗ್ರಾಮದ ರೈತ ಶಿವಮೂರ್ತಿ ಒತ್ತಾಯಿಸಿದ್ದಾರೆ.

ಇತ್ತ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಸಮೀಪದ ಸೂಪ್ಪನಹಳ್ಳಿ ಗ್ರಾಮದಲ್ಲಿ ಗಾಳಿ- ಮಳೆಗೆ ವಾಸದ ಮನೆಯ ಚಾವಣಿ ಕುಸಿದಿದೆ. ಸೂಪ್ಪನಹಳ್ಳಿ ಗ್ರಾಮದ ರುದ್ರೇಶ್ ಎಂಬುವವರಿಗೆ ಸೇರಿದ ಮನೆಯು ಭಾರಿ ಗಾಳಿಗೆ ಮನೆಯ ಚಾವಣಿ ಶೀಟ್‌ ಹಾರಿ ಹೋಗಿದೆ. 200 ಮೀಟರ್ ದೂರಕ್ಕೆ ಹಾರಿ ಬಿದ್ದಿದ್ದು, ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳೆಲ್ಲವೂ ನೀರುಪಾಲಾಗಿದೆ. ಸೂಕ್ತ ಪರಿಹಾರಕ್ಕೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಮೇ 25ರಂದು ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ (Rain News) ಇದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Karnataka Weather Forecast : ಮಳೆ ಅವಾಂತರವು ಮುಂದುವರಿದಿದೆ. ನಿರಂತರ ಮಳೆಗೆ (Rain News) ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ನೀರು ಸೋರುತ್ತಿರುವ ಕಾರಣಕ್ಕೆ ಚಾಲಕನೊಬ್ಬ ಕೈಯಲ್ಲಿ ಛತ್ರಿ ಹಿಡಿದು ಚಲಾಯಿಸಿದ್ದಾರೆ. ಇತ್ತ ವ್ಯಾಪಕ ಮಳೆಗೆ ಮಾಳಿಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ಮಕ್ಕಳಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Karnataka Weather Forecast
Koo

ಧಾರವಾಡ/ದಾವಣಗೆರೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆ (Rain News) ಬಂದರು ಕಷ್ಟ ಬಾರದೆ ಇದ್ದರೂ ನಷ್ಟ ಎನ್ನುವಂತಾಗಿದೆ. ಮಳೆಯಿಂದಾಗಿ (karnataka Weather Forecast) ಅವಾಂತರವೇ ಸೃಷ್ಟಿಯಾಗಿದ್ದು, ಸಾವು-ನೋವು ಸಂಭವಿಸಿದೆ. ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಇದಾಗಿದ್ದು, ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಚಾಲಕ ಛತ್ರಿ ಹಿಡಿದ ದೃಶ್ಯವನ್ನು ನಿರ್ವಾಹಕಿ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ.

karnataka Weather Forecast

ದಾವಣಗೆರೆಯಲ್ಲಿ ಕುಸಿದು ಬಿದ್ದ ಮಾಳಿಗೆ ಮನೆ

ಭಾರಿ ಮಳೆಗೆ ಮಾಳಿಗೆ ಮನೆಯೊಂದು ಕುಸಿದು ಬಿದ್ದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದ ಮಾಳಿಗೆ ಮನೆ ಕುಸಿದಿದೆ. ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲಾ ಎಂಬುವರಿಗೆ ಸೇರಿದ ಮಾಳಿಗೆ ಮನೆಯಲ್ಲಿ ಮಕ್ಕಳು ಪಾರಾಗಿದ್ದು, ಸನಾವುಲ್ಲಾ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಹಾಸನದಲ್ಲಿ ಮಳೆ ಗಾಳಿಗೆ ರಸ್ತೆಗೆ ಬಿದ್ದ ಮರ

ಹಾಸನ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಒಂದು ಕಾರು ಜಖಂ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಾಸನ ನಗರದ ಹೌಸಿಂಗ್ ಬೋರ್ಡ್‌ ಬಡಾವಣೆಯಲ್ಲಿ ಈ ಘಟೆನೆ ನಡೆದಿದೆ. ಇತ್ತ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಧರೆಗುರುಳಿದ 50 ವರ್ಷದ ಅರಳಿ ಮರ

ಬಿರುಗಾಳಿ ಸಹಿತ‌ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಳಿಕಟ್ಟೆಯಲ್ಲಿದ್ದ 50 ವರ್ಷಗಳಿಗೂ ಹಳೆಯ ಅರಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಯಾರು ಇಲ್ಲದ ಕಾರಣಕ್ಕೆ ಅಪಾಯವೊಂದು ತಪ್ಪಿದೆ. ಇಶಾ ಫೌಂಡೇಶನ್ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬಿರುಗಾಳಿಗೆ ಜಾಹೀರಾತು ಫಲಕಗಳು ನೆಲಕ್ಕೆ ಬಿದ್ದಿವೆ. ಚಿಕನ್ ಹಾಗೂ ಚಾಟ್ಸ್ ಅಂಗಡಿ ಮೇಲೆ ಫಲಕ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka weather Forecast
ಮಳೆ13 mins ago

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Protein Powder
ಆರೋಗ್ಯ43 mins ago

Protein Powder: ಫಿಟ್‌ನೆಸ್‌ಗಾಗಿ ಪ್ರೊಟೀನ್‌ ಪುಡಿಗಳ ಸೇವನೆ ಮಾಡುತ್ತೀರಾ? ಹಾಗಿದ್ದರೆ ಎಚ್ಚರ!

Dina Bhavishya
ಭವಿಷ್ಯ2 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು

Fire Accident
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

election commission
ಪ್ರಮುಖ ಸುದ್ದಿ7 hours ago

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Fire Accident
ಪ್ರಮುಖ ಸುದ್ದಿ7 hours ago

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Virat kohli
ಪ್ರಮುಖ ಸುದ್ದಿ7 hours ago

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Union Minister Pralhad Joshi latest statement about channagiri case
ಕರ್ನಾಟಕ7 hours ago

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

childrens summer camp closing ceremony at yallapur
ಉತ್ತರ ಕನ್ನಡ8 hours ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ8 hours ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ14 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌