Oldest Billionaire: ಎಲ್‌ಐಸಿಯಲ್ಲಿ ಏಜೆಂಟ್ ಈಗ ಭಾರತದ ಹಿರಿಯ ಬಿಲಿಯನೇರ್ - Vistara News

ವಾಣಿಜ್ಯ

Oldest Billionaire: ಎಲ್‌ಐಸಿಯಲ್ಲಿ ಏಜೆಂಟ್ ಈಗ ಭಾರತದ ಹಿರಿಯ ಬಿಲಿಯನೇರ್

Oldest Billionaire: ಫೋರ್ಬ್ಸ್ ಬಿಲಿಯನೇರ್‌ಗಳ 2024ರ ಪಟ್ಟಿಯಲ್ಲಿ ಭಾರತದ ದಾಖಲೆಯ 200 ಮಂದಿ ಶ್ರೀಮಂತರು ಸೇರ್ಪಡೆಯಾಗಿದ್ದು, ಇದರಲ್ಲಿ ಪಂಜಾಬ್ ನ ಲಚ್ಮನ್ ದಾಸ್ ಮಿತ್ತಲ್ ಅವರು ಭಾರತದ ಅತ್ಯಂತ ಹಿರಿಯ ಬಿಲಿಯನೇರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಲ್ ಐಸಿ ಏಜೆಂಟ್ ಆಗಿದ್ದವರು ಬಿಲಿಯನೇರ್ ಆಗಿದ್ದೇ ಒಂದು ರೋಚಕ ಪಯಣವಾಗಿತ್ತು.

VISTARANEWS.COM


on

Oldest Billionaire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಂಜಾಬ್: ಫೋರ್ಬ್ಸ್ ಬಿಲಿಯನೇರ್‌ಗಳ 2024ರ ಪಟ್ಟಿಯಲ್ಲಿ (Forbes Billionaires List) ಈ ಬಾರಿ ಭಾರತದ (india) ಸುಮಾರು 200 ಮಂದಿ ಅತ್ಯಂತ ಶ್ರೀಮಂತರು ಎಂಬ ಖ್ಯಾತಿಗೆ ಪಡೆದಿದ್ದು, ಇವರಲ್ಲಿ 93 ವರ್ಷದ ಪಂಜಾಬ್ (punjab) ನ ಲಚ್ಮನ್ ದಾಸ್ ಮಿತ್ತಲ್ (Lachhman Das Mittal) ಅವರು ಭಾರತದ ಅತ್ಯಂತ ಹಿರಿಯ ಬಿಲಿಯನೇರ್ (oldest billionaire) ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಹೀಂದ್ರಾ ಮತ್ತು ಮಹೀಂದ್ರಾ ಗುಂಪಿನ ( Mahindra & Mahindra group) ಮಾಜಿ ಅಧ್ಯಕ್ಷರಾದ ಕೇಶುಬ್ ಮಹೀಂದ್ರ (Keshub Mahindra) ಅವರು 2023ರ ಏಪ್ರಿಲ್ 12ರಂದು ತಮ್ಮ 99 ನೇ ವಯಸ್ಸಿನಲ್ಲಿ ನಿಧನರಾಗುವವರೆಗೂ ಭಾರತದ ಅತ್ಯಂತ ಹಿರಿಯ ಬಿಲಿಯನೇರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದರು.

ಯಾರು ಲಚ್ಮನ್ ದಾಸ್ ಮಿತ್ತಲ್ ?

1931ರಲ್ಲಿ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಜನಿಸಿದ ಲಚ್ಮನ್ ದಾಸ್ ಮಿತ್ತಲ್ ಎಲ್‌ಐಸಿಯಲ್ಲಿ ವಿಮಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು.
ಉರ್ದುವಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ಮೊದಲ ಸ್ಥಾನ ಪಡೆದು ತೇರ್ಗಡೆಯಾಗಿದ್ದರು. ಬಳಿಕ ಅವರು ಮಾರುತಿ ಉದ್ಯೋಗ್‌ನಲ್ಲಿ ಡೀಲರ್‌ಶಿಪ್‌ಗಾಗಿ ಅರ್ಜಿ ಸಲ್ಲಿಸಿದ್ದು, ಅದನ್ನು ತಿರಸ್ಕರಿಸಲಾಗಿತ್ತು.

ಇದನ್ನೂ ಓದಿ: Youngest Billionaire: 19 ವರ್ಷದ ವಿದ್ಯಾರ್ಥಿನಿ ವಿಶ್ವದ ಕಿರಿಯ ಬಿಲಿಯನೇರ್ ಆಗಿದ್ದು ಹೇಗೆ? ಇಲ್ಲಿದೆ ಮನಿ ಸೀಕ್ರೆಟ್​​

ವ್ಯಾಪಾರ ಕ್ಷೇತ್ರಕ್ಕೆ ಕಾಲಿರಿಸಿದ ಅವರು, ಇಂಟರ್ನ್ಯಾಷನಲ್ ಟ್ರಾಕ್ಟರ್ಸ್ ಲಿಮಿಟೆಡ್ (ITL) ಅನ್ನು ಸ್ಥಾಪಿಸಿದರು. 1990ರಲ್ಲಿ ಅಂದರೆ ಅವರ 60 ನೇ ಇಳಿ ವಯಸ್ಸಿನಲ್ಲಿ ಸೋನಾಲಿಕಾ ಟ್ರಾಕ್ಟರ್‌ಗಳನ್ನು ಪ್ರಾರಂಭಿಸಿದರು. ಸೋನಾಲಿಕಾ ಗ್ರೂಪ್ ಇಂದು ಜಾಗತಿಕವಾಗಿ ಕಾರ್ಯನಿರ್ವಹಿಸುತ್ತಿದೆ. ಐದು ದೇಶಗಳಲ್ಲಿ ಕೈಗಾರಿಕೆಗಳು ಮತ್ತು 120 ಕ್ಕೂ ಹೆಚ್ಚು ದೇಶಗಳಲ್ಲಿ ಮಾರುಕಟ್ಟೆಗಳನ್ನು ಹೊಂದಿದೆ.

ಪ್ರಸ್ತುತ ಮಿತ್ತಲ್ ಅವರು ಕಂಪೆನಿಯ ಚಟುವಟಿಕೆಗಳಲ್ಲಿ ನೇರವಾಗಿ ತೊಡಗಿಸಿಕೊಂಡಿಲ್ಲ. ಆದರೆ ಅವರ ಕುಟುಂಬವು ಪ್ರಮುಖ ಪಾತ್ರ ವಹಿಸುತ್ತದೆ. ಅವರ ಹಿರಿಯ ಮಗ ಅಮೃತ್ ಸಾಗರ್ ಕಂಪೆನಿಯ ಉಪಾಧ್ಯಕ್ಷರಾಗಿದ್ದರೆ, ಅವರ ಕಿರಿಯ ಮಗ ದೀಪಕ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಮೊಮ್ಮಕ್ಕಳಾದ ಸುಶಾಂತ್ ಮತ್ತು ರಾಮನ್ ಕೂಡ ಕಂಪೆನಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ.

ಮಿತ್ತಲ್ ಅವರ ಪುತ್ರಿ ಉಷಾ ಸಂಗವಾನ್ ಅವರು ಸರ್ಕಾರಿ ಸ್ವಾಮ್ಯದ ಜೀವ ವಿಮಾ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮದ ಮೊದಲ ಮಹಿಳಾ ವ್ಯವಸ್ಥಾಪಕ ನಿರ್ದೇಶಕರಾಗಿದ್ದು ನಿವೃತ್ತಿ ಹೊಂದಿದ್ದಾರೆ.

ಭಾರತದಲ್ಲಿ 200 ಬಿಲಿಯನೇರ್ ಗಳು

ಭಾರತದ 200 ಬಿಲಿಯನೇರ್‌ಗಳು ಫೋರ್ಬ್ಸ್‌ನ 2024ರ ವಿಶ್ವದ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸೇರಿದ್ದು, ಇವರು ಒಟ್ಟು 954 ಶತಕೋಟಿ ಡಾಲರ್ ಮೌಲ್ಯದ ಸಂಪತ್ತನ್ನು ಹೊಂದಿದ್ದಾರೆ. ಭಾರತವು ಈ ವರ್ಷ ದಾಖಲೆಯ 200 ಅತಿ ಶ್ರೀಮಂತರನ್ನು ಹೊಂದಿರುವ ಕಾರಣದಿಂದ ಜಾಗತಿಕವಾಗಿ ಭಾರತ ಮೂರನೇ ಸ್ಥಾನದಲ್ಲಿದೆ.

ಮುಖೇಶ್ ಅಂಬಾನಿ ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿದ್ದು, ಇವರ ಸಂಪತ್ತು 116 ಬಿಲಿಯನ್ ಡಾಲರ್, ಗೌತಮ್ ಅದಾನಿ 17ನೇ ಶ್ರೀಮಂತ ವ್ಯಕ್ತಿಯಾಗಿದ್ದು ಇವರ ಸಂಪತ್ತಿನ ಒಟ್ಟು ಮೌಲ್ಯ 84 ಬಿಲಿಯನ್ ಡಾಲರ್ . ರಿಲಯನ್ಸ್ ಇಂಡಸ್ಟ್ರೀಸ್ ಸಂಘಟಿತ ಷೇರುಗಳ ಬೆಳವಣಿಗೆಯೊಂದಿಗೆ ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯವು 83 ಬಿಲಿಯನ್‌ ಡಾಲರ್ ನಿಂದ 116 ಶತಕೋಟಿ ಡಾಲರ್‌ಗೆ ಏರಿದ್ದು, ಅವರು ಪಟ್ಟಿಯಲ್ಲಿನ ವಿಶೇಷ 100 ಶತಕೋಟಿ ಡಾಲರ್ ಕ್ಲಬ್‌ಗೆ ಪ್ರವೇಶಿಸಿದ ಮೊದಲ ಏಷ್ಯದ ಶ್ರೀಮಂತ ವ್ಯಕ್ತಿ ಆಗಿದ್ದಾರೆ ಎಂದು ಫೋರ್ಬ್ಸ್ ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ.

ಮೂಲಸೌಕರ್ಯ ಮತ್ತು ಸರಕುಗಳ ಉದ್ಯಮಿ ಗೌತಮ್ ಅದಾನಿ ಅವರು ಭಾರತದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಯುಎಸ್ ಆಧಾರಿತ ಕಿರು-ಮಾರಾಟಗಾರ ಹಿಂಡೆನ್‌ಬರ್ಗ್ ರಿಸರ್ಚ್‌ನಿಂದ ವಂಚನೆಯ ಆರೋಪದ ಬಳಿಕ ಅದಾನಿ ಗ್ರೂಪ್‌ನ ಷೇರುಗಳು ಕಳೆದ ವರ್ಷ ಕುಸಿತಕಂಡಿತ್ತು ಆದರೂ ಅದರಿಂದ ಶೀಘ್ರವಾಗಿ ಅವರು ಚೇತರಿಸಿಕೊಂಡರು. ಹೀಗಾಗಿ ಈ ಬಾರಿ ಅದಾನಿ 84 ಶತಕೋಟಿ ಸಂಪತ್ತಿನೊಂದಿಗೆ ಜಾಗತಿಕವಾಗಿ 17ನೇ ಶ್ರೀಮಂತ ವ್ಯಕ್ತಿಯಾಗಿ ಮರಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

Gold Rate Today: ಶನಿವಾರ ಒಂದೇ ದಿನ ಗ್ರಾಂ ಚಿನ್ನದ ಬೆಲೆಯು 67 ರೂಪಾಯಿ ಜಾಸ್ತಿಯಾಗಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಭಾನುವಾರ ಇನ್ನಷ್ಟು ಏರಿಕೆಯಾಗುವ ಭೀತಿ ಇತ್ತು. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆ ಕಂಡರೆ, ಎರಡು ಬಾರಿ ಮಾತ್ರ ಇಳಿಕೆ ಕಂಡಿತ್ತು. ಭಾನುವಾರ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ ಬೆಳ್ಳಿಯ ಬೆಲೆಯು 90.30 ರೂ. ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶನಿವಾರ (ಜೂನ್‌ 15) ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಭಾನುವಾರ (ಜೂನ್‌ 16) ಯಥಾಸ್ಥಿತಿ ಕಾಯ್ದುಕೊಂಡಿರುವುದು ಗ್ರಾಹಕರಿಗೆ ತುಸು ರಿಲೀಫ್‌ ತಂದಿದೆ. ಬೆಂಗಳೂರಿನಲ್ಲಿ ಇಂದು (Gold Rate Today) 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 6,650 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,255 ರೂ. ಇದೆ. ಚಿನ್ನದ ಬೆಲೆ ಏರಿಕೆ ಕಾಣದ ಹಿನ್ನೆಲೆಯಲ್ಲಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾನುವಾರ ಚಿನ್ನ ಖರೀದಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಒಂದೇ ದಿನ ಗ್ರಾಂ ಚಿನ್ನದ ಬೆಲೆಯು 67 ರೂಪಾಯಿ ಜಾಸ್ತಿಯಾಗಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಭಾನುವಾರ ಇನ್ನಷ್ಟು ಏರಿಕೆಯಾಗುವ ಭೀತಿ ಇತ್ತು. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆ ಕಂಡರೆ, ಎರಡು ಬಾರಿ ಮಾತ್ರ ಇಳಿಕೆ ಕಂಡಿತ್ತು. ಇನ್ನು ನಾಲ್ಕು ಬಾರಿ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ. ಭಾನುವಾರ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ ಬೆಳ್ಳಿಯ ಬೆಲೆಯು 90.30 ರೂ. ಇದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,665 ₹ 7,270
ಮುಂಬೈ₹ 6,650 ₹ 7,255
ಬೆಂಗಳೂರು₹ 6,650₹ 7,255
ಚೆನ್ನೈ₹ 6,705 ₹ 7,315

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Gold Rate Today

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Continue Reading

ವಾಣಿಜ್ಯ

Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

Tata Motors: ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿರುವ ಟಾಟಾ ಮೋಟಾರ್ಸ್ ಭಾರತದ ನಂ. 1 ಎಸ್‌ಯುವಿ ಟಾಟಾ ನೆಕ್ಸಾನ್ ತನ್ನ 7ನೇ ವರ್ಷದ ವಾರ್ಷಿಕೋತ್ಸವದಂದು 7 ಲಕ್ಷ ವಾಹನ ಮಾರಾಟದ ಸಂಭ್ರಮಾಚರಣೆ ಮಾಡುತ್ತಿದ್ದು, ಈ ಪ್ರಯುಕ್ತ ರೂ.1 ಲಕ್ಷವರೆಗಿನ ಪ್ರಯೋಜನಗಳನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ.

VISTARANEWS.COM


on

Tata Motors SUV Tata Nexon 7th Anniversary Benefit up to Rs 1 lakh for customers
Koo

ಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿರುವ ಟಾಟಾ ಮೋಟಾರ್ಸ್ (Tata Motors) ಭಾರತದ ನಂ. 1 ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವದಂದು 7 ಲಕ್ಷ ಯುನಿಟ್ ಮಾರಾಟದ ಸಂಭ್ರಮಾಚರಣೆ ಮಾಡುತ್ತಿದೆ.

2017ರಲ್ಲಿ ಬಿಡುಗಡೆಯಾದ ನೆಕ್ಸಾನ್ 2021 ರಿಂದ 2023 ರವರೆಗೆ ಸತತ ಮೂರು ವರ್ಷಗಳಲ್ಲಿ ಮೂರು ಬಾರಿ ಭಾರತದ ಅತಿ ಹೆಚ್ಚು ಮಾರಾಟವಾದ ಎಸ್‌ಯುವಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. 2018ರಲ್ಲಿ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಗಳಿಸಿದ ಭಾರತದ ಮೊದಲ ವಾಹನ ಎಂಬ ಖ್ಯಾತಿಯನ್ನು ನೆಕ್ಸಾನ್ ಹೊಂದಿದೆ. ಆ ಮೂಲಕ ಎಲ್ಲಾ ಭಾರತೀಯ ಆಟೋಮೊಬೈಲ್‌ಗಳಿಗೆ ಅನುಸರಿಸಲು ಹೊಸ ಮಾನದಂಡವನ್ನು ಹಾಕಿಕೊಟ್ಟಿದೆ. ಅಂದಿನಿಂದ ಇಂದಿನವರೆಗೂ ಅದರ ಗೆಲುವಿನ ಓಟ ಮುಂದುವರಿದಿದೆ.

ಇದನ್ನೂ ಓದಿ: ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ಫೆಬ್ರವರಿ 2024ರಲ್ಲಿ, ಹೊಸ ಜನರೇಷನ್‌ನ ನೆಕ್ಸಾನ್ 2022ರ ಹೆಚ್ಚಿನ ಪ್ರೋಟೋಕಾಲ್ ಪ್ರಕಾರ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ನೆಕ್ಸಾನ್.ಇವಿ ಕೂಡ ಅದೇ ದಾರಿಯಲ್ಲಿ ಸಾಗಿದ್ದು, ಇದೇ ತಿಂಗಳಲ್ಲಿ ಭಾರತ್- ಎನ್‌ಸಿಎಪಿಯಿಂದ ಪ್ರತಿಷ್ಠಿತ 5-ಸ್ಟಾರ್ ರೇಟಿಂಗ್ ಅನ್ನು ಗಳಿಸಿದೆ.

41 ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದಿರುವ ನೆಕ್ಸಾನ್‌ನ ಅತ್ಯದ್ಭುತ ಕಾರ್ಯಕ್ಷಮತೆಯು ಗಮನ ಸೆಳೆಯುತ್ತದೆ ಮತ್ತು ಅದರಿಂದಲೇ ಮಾರಾಟ ಹೆಚ್ಚಿದೆ. ಕಳೆದ ಎರಡು ವರ್ಷಗಳಲ್ಲಿ (2022 ಮತ್ತು 2023) 3 ಲಕ್ಷಕ್ಕೂ ಹೆಚ್ಚು ನೆಕ್ಸಾನ್ ಯುನಿಟ್‌ಗಳು ಮಾರಾಟವಾಗಿವೆ. ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ಎಂಬ ಬಹು ಪವರ್‌ಟ್ರೇನ್‌ಗಳಲ್ಲಿ ಲಭ್ಯವಿರುವ ನೆಕ್ಸಾನ್, ಸಮಯದ ಜತೆಗೆ ದೃಢವಾಗಿ ಬೆಳವಣಿಗೆ ಹೊಂದಿದೆ. ಸೆಗ್ಮೆಂಟಿನಲ್ಲಿ ಅತಿ ಆಕರ್ಷಕವಾದ ಅದರ ವಿನ್ಯಾಸ, ವಿಭಾಗದಲ್ಲಿಯೇ ಅತ್ಯುತ್ತಮ ಅನ್ನಿಸುವ ಫೀಚರ್‌ಗಳು ಮತ್ತು ಟೆಕ್ ಫಾರ್ವರ್ಡ್ ಗುಣಗಳಿಂದಾಗಿ ನೆಕ್ಸಾನ್ ನಿಷ್ಠಾವಂತ ಅಭಿಮಾನಿಗಳನ್ನು ಹೊಂದಿದೆ.

ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್‌ನ ಮುಖ್ಯ ವಾಣಿಜ್ಯ ಅಧಿಕಾರಿ ವಿವೇಕ್ ಶ್ರೀವತ್ಸ ಈ ಕುರಿತು ಮಾತನಾಡಿ, 2017 ರಲ್ಲಿ ಬಿಡುಗಡೆ ಆದಾಗಿನಿಂದಲೂ ನೆಕ್ಸಾನ್ ವಿನ್ಯಾಸ, ಸುರಕ್ಷತೆ, ಸೌಕರ್ಯ ಮತ್ತು ಚಾಲನಾ ಅನುಭವದ ವಿಚಾರದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ. ಕಳೆದ ಏಳು ವರ್ಷಗಳಲ್ಲಿ ದೊಡ್ಡದಾಗಿ ವಿಸ್ತಾರಗೊಂಡಿರುವ ನೆಕ್ಸಾನ್‌ನ ಗ್ರಾಹಕರ ಅಚಲವಾದ ಬೆಂಬಲ ಮತ್ತು ಪ್ರೀತಿಯಿಂದಾಗಿ ನೆಕ್ಸಾನ್ ಉದ್ಯಮದಲ್ಲಿ ಐಕಾನಿಕ್ ಬ್ರ್ಯಾಂಡ್ ಆಗಿ ರೂಪುಗೊಂಡಿದೆ.

ಪವರ್‌ಟ್ರೇನ್‌ಗಳು ಮತ್ತು ವೇರಿಯಂಟ್‌ಗಳ ವಿವಿಧ ಆಯ್ಕೆಗಳ ಮೂಲಕ ಗ್ರಾಹಕರ ಅಗತ್ಯ ಮತ್ತು ಆಸಕ್ತಿಗೆ ತಕ್ಕಂತೆ ನೆಕ್ಸಾನ್ ಅನ್ನು ಒದಗಿಸಲಾಗುತ್ತಿದೆ ಎಂಬುದನ್ನು ನಾವು ಖಚಿತಪಡಿಸಿಕೊಂಡಿದ್ದೇವೆ. 7 ವರ್ಷಗಳಲ್ಲಿ 7 ಲಕ್ಷ ವಾಹನ ಮಾರಾಟ ಮಾಡಿರುವ ಮಹತ್ವದ ಸಾಧನೆಯನ್ನು ಆಚರಿಸಲು ಮತ್ತು ಬೆಳೆಯುತ್ತಿರುವ ನೆಕ್ಸಾನ್ ಕುಟುಂಬಕ್ಕೆ ನಮ್ಮ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾವು ಅಸ್ತಿತ್ವದಲ್ಲಿರುವ ಮತ್ತು ಹೊಸ ಗ್ರಾಹಕರಿಗೆ ಹಲವು ಉತ್ತಮ ಪ್ರಯೋಜನಗಳನ್ನು ಒದಗಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ದೇಶಾದ್ಯಂತ ಇರುವ ಎಲ್ಲಾ ಟಾಟಾ ಮೋಟಾರ್ಸ್ ಪ್ರಯಾಣಿಕ ವಾಹನಗಳ ವಿತರಕರು ಮತ್ತು ಶೋರೂಮ್‌ಗಳು ನೆಕ್ಸಾನ್ ಗೆಲುವನ್ನು ಸಂಭ್ರಮಿಸಲು ಹಲವಾರು ವಿಶೇಷ ಕಾರ್ಯಕ್ರಮಗಳು ಮತ್ತು ಗ್ರಾಹಕರ ಸಭೆಗಳನ್ನು ಆಯೋಜಿಸುತ್ತಿವೆ. ಹೊಸ ನೆಕ್ಸಾನ್ ಅನ್ನು ಬುಕಿಂಗ್ ಮಾಡುವವರಿಗೆ, ಜತೆಗೆ ತಮ್ಮ ಹೊಸ ನೆಕ್ಸಾನ್ ಅನ್ನು ಬುಕಿಂಗ್ ಮಾಡಿ ಡೆಲಿವರಿಗಾಗಿ ಕಾಯುತ್ತಿರುವ ಗ್ರಾಹಕರಿಗೆ ಅಥವಾ ತಮ್ಮ ಅಸ್ತಿತ್ವದಲ್ಲಿರುವ ನೆಕ್ಸಾನ್ ಅನ್ನು ಅದರ ಹೊಸ ಅವತಾರಕ್ಕೆ ಅಪ್‌ಗ್ರೇಡ್ ಮಾಡಲು ಬಯಸುಸುವವರಿಗೆ 1 ಲಕ್ಷ ರೂ.ವರೆಗಿನ (ಮಾಡೆಲ್ ಮತ್ತು ವೇರಿಯಂಟ್ ಅನ್ನು ಆಧರಿಸಿ) ಪ್ರಯೋಜನಗಳನ್ನು ಒದಗಿಸಲಾಗುತ್ತಿದೆ. ಭಾರತದ ನಂ. 1 ಎಸ್‌ಯುವಿಯನ್ನು ತಮ್ಮದಾಗಿಸಿಕೊಳ್ಳಲು ಇದು ಸಕಾಲವಾಗಿದೆ.

ಅತ್ಯಾಧುನಿಕ ಕನೆಕ್ಟಿವಿಟಿ, ಅಪ್‌ಗ್ರೇಡ್ ಮಾಡಿದ ಸುರಕ್ಷತಾ ಫೀಚರ್‌ಗಳು ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರುವ ನೆಕ್ಸಾನ್ ಅತ್ಯುತ್ತಮ ಕಾರ್ಯಕ್ಷಣತೆ ಪ್ರದರ್ಶಿಸಲು ಸನ್ನದ್ಧವಾಗಿದೆ ಮತ್ತು ಗ್ರಾಹಕರಿಗೆ ವಿಶಿಷ್ಟ ಅನುಭವವನ್ನು ನೀಡುತ್ತದೆ. ಜತೆಗೆ ಈ ಸೆಗ್ಮೆಂಟಿನಲ್ಲಿ ಇದು ಮುಂಚೂಣಿಯಲ್ಲಿ ನಿಂತಿದೆ. ಆಧುನಿಕ ಮತ್ತು ಪ್ರೀಮಿಯಂ ವಿನ್ಯಾಸವನ್ನು ಹೊಂದಿರುವ ಈ ಎಸ್‌ಯುವಿ ಯಾವಾಗಲೂ ರಸ್ತೆಯಲ್ಲಿ ಘನತೆಯಿಂದ ಕಾಣಿಸಿಕೊಳ್ಳುತ್ತದೆ ಮತ್ತು ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ನೀಡುತ್ತದೆ. ಗ್ರಾಹಕರು ಮತ್ತು ಅಭಿಮಾನಿಗಳ ಅತ್ಯುತ್ಸಾಹದ ಪ್ರತಿಕ್ರಿಯೆಯು ನೆಕ್ಸಾನ್ ಅನ್ನು ಭಾರತೀಯ ಆಟೋ ಉದ್ಯಮದ ಸ್ಪರ್ಧಾತ್ಮಕ ವಿಭಾಗದ ನಾಯಕನನ್ನಾಗಿ ಮಾಡಿದೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ಜೂನ್ 30 ರವರೆಗೆ ಮಾಡಿದ ಬುಕಿಂಗ್‌ಗಳಿಗೆ ಮಾತ್ರ ಈ ಸೀಮಿತ ಅವಧಿಯ ಪ್ರಯೋಜನಗಳು ಲಭ್ಯವಿರುತ್ತವೆ. ನಿಯಮಗಳು ಮತ್ತು ಷರತ್ತುಗಳು ಅನ್ವಯಿಸುತ್ತವೆ ಎಂದು ತಿಳಿಸಿದೆ.

Continue Reading

ಮನಿ-ಗೈಡ್

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

ಅತ್ಯಾಕರ್ಷಕ ಬಡ್ಡಿ ದರದೊಂದಿಗೆ ಅಂಚೆ ಇಲಾಖೆ ಒದಗಿಸಿರುವ ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಹೂಡಿಕೆ (Money Guide) ಮಾಡಬಹುದು. ಖಾತ್ರಿ ಮರುಪಾವತಿ ನೀಡುವ ಯೋಜನೆ ಇದಾಗಿದ್ದು, ಇದರಲ್ಲಿ ಹೂಡಿಕೆ ಮಾಡುವುದರಿಂದ ಏನು ಲಾಭ, ಸಿಗುವ ಬಡ್ಡಿ ದರ ಎಷ್ಟಿದೆ ಗೊತ್ತೇ? ಹಿರಿಯ ನಾಗರಿಕರಿಗೆ ಉಪಯುಕ್ತವಾದ ಮಾಹಿತಿ ಇಲ್ಲಿದೆ.

VISTARANEWS.COM


on

By

Money Guide
Koo

ಹಿರಿಯ ನಾಗರಿಕರ (Senior Citizen) ಉಳಿತಾಯ ಯೋಜನೆಯು (SCSS) 60 ವರ್ಷಕ್ಕಿಂತ ಮೇಲ್ಪಟ್ಟವರು ಹೂಡಿಕೆ (Money Guide) ಮಾಡಬಹುದಾದ ಖಾತ್ರಿ ಮರುಪಾವತಿ (guaranteed return) ನೀಡುವ ಯೋಜನೆಯಾಗಿದೆ. ಇದರಲ್ಲಿ ಜಂಟಿ ಖಾತೆಯನ್ನು ಸಂಗಾತಿಯೊಂದಿಗೆ ಮಾತ್ರ ತೆರೆಯಬಹುದು.

ಅಂಚೆ ಇಲಾಖೆಯು (post office) ಈ ಸಣ್ಣ ಉಳಿತಾಯ ಯೋಜನೆಗೆ (small savings scheme) ವಾರ್ಷಿಕ ಶೇ. ಶೇ. 8.2 ಬಡ್ಡಿ ದರವನ್ನು (interest rate) ನೀಡುತ್ತಿದೆ. ನೀವು ಈ ಯೋಜನೆಯನ್ನು 5 ವರ್ಷಗಳವರೆಗೆ ತೆರೆಯಬಹುದು. ಆದರೆ ಮೆಚ್ಯೂರಿಟಿಯ ದಿನಾಂಕದಿಂದ ಮುಂದಿನ 3 ವರ್ಷಗಳವರೆಗೆ ಇದನ್ನು ವಿಸ್ತರಿಸಬಹುದು.

ಎಷ್ಟು ಹೂಡಿಕೆ ಮಾಡಬಹುದು?

ಒಂದು ಬಾರಿಯ ಮೊತ್ತದ ಹೂಡಿಕೆಯನ್ನು ಮಾಡಬೇಕು. ಇದರಲ್ಲಿ ಕನಿಷ್ಠ 1,000 ರೂ. ನಿಂದ ಗರಿಷ್ಠ 30 ಲಕ್ಷ ರೂ. ವರೆಗೆ ಹೂಡಿಕೆ ಮಾಡಲು ಅವಕಾಶವಿದೆ. ಇದರಲ್ಲಿ ಮಾಡಿದ ಠೇವಣಿಗಳ ಮೇಲೆ ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ಪಡೆಯಬಹುದು.

ಬಡ್ಡಿ ದರ

ತ್ರೈಮಾಸಿಕ ಆಧಾರದಲ್ಲಿ ಬಡ್ಡಿಯನ್ನು ಪಾವತಿಸಲಾಗುತ್ತದೆ. ಠೇವಣಿ ಮಾಡಿದ ದಿನಾಂಕದಿಂದ ಮಾರ್ಚ್ 31, ಜೂನ್ 30, ಸೆಪ್ಟೆಂಬರ್ 30, ಡಿಸೆಂಬರ್ 31ರಂದು ಬಡ್ಡಿಯನ್ನು ಪಾವತಿಸಲಾಗುತ್ತದೆ. ಯಾವುದೇ ತ್ರೈಮಾಸಿಕದಲ್ಲಿ ಬಡ್ಡಿಯನ್ನು ಕ್ಲೈಮ್ ಮಾಡದಿದ್ದರೆ ಹೆಚ್ಚುವರಿ ಬಡ್ಡಿಯನ್ನು ಗಳಿಸಲು ಸಾಧ್ಯವಾಗುವುದಿಲ್ಲ. ಉಳಿತಾಯ ಖಾತೆಗೆ ಸ್ವಯಂ ಕ್ರೆಡಿಟ್ ಮೂಲಕ ಬಡ್ಡಿಯನ್ನು ಡ್ರಾ ಮಾಡಬಹುದು.


ಬಡ್ಡಿಗೆ ತೆರಿಗೆ

ಎಲ್ಲಾ ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಖಾತೆಗಳಲ್ಲಿನ ಒಟ್ಟು ಬಡ್ಡಿಯು 50,000 ರೂ. ಗಳನ್ನು ಮೀರಿದರೆ ಬಡ್ಡಿಗೆ ತೆರಿಗೆ ವಿಧಿಸಲಾಗುತ್ತದೆ. ಅನಂತರ ಬಡ್ಡಿಯ ಮೇಲೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಫಾರ್ಮ್ 15 ಜಿ /15ಹೆಚ್ ಅನ್ನು ಸಲ್ಲಿಸಿದರೆ ಮತ್ತು ಸಂಚಿತ ಬಡ್ಡಿಯು 50,000 ರೂ. ಗಿಂತ ಹೆಚ್ಚಿಲ್ಲದಿದ್ದರೆ ಯಾವುದೇ ಟಿಡಿಎಸ್ ಅನ್ನು ಕಡಿತಗೊಳಿಸಲಾಗುವುದಿಲ್ಲ.

ಎಷ್ಟು ಲಾಭ?

ಪ್ರಸ್ತುತ ಪೋಸ್ಟ್ ಆಫೀಸ್ ಎಸ್‌ಸಿಎಸ್‌ಎಸ್‌ನಲ್ಲಿ ತಲಾ 1 ಲಕ್ಷ, 2 ಲಕ್ಷ, 5 ಲಕ್ಷ ಮತ್ತು 10 ಲಕ್ಷ ರೂ. ಹೂಡಿಕೆ ಮಾಡಿದರೆ ಎಷ್ಟು ಲಾಭ ಸಿಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ. ಯೋಜನೆಯ ಒಟ್ಟು ಅವಧಿಯು 5 ವರ್ಷಗಳು ಮತ್ತು ಬಡ್ಡಿ ದರವು ವಾರ್ಷಿಕ ಶೇ. 8.2. ಗಳಾದರೆ 1 ಲಕ್ಷ ರೂ. ಹೂಡಿಕೆ ಮಾಡಿದರೆ ಒಟ್ಟು ಬಡ್ಡಿ 41,000, 2,050 ತ್ರೈಮಾಸಿಕ ಬಡ್ಡಿ ಹಾಗೂ ಐದು ವರ್ಷಗಳಲ್ಲಿ ಮುಕ್ತಾಯದ ಮೊತ್ತ 1,41,000 ರೂ. ಅನ್ನು ಪಡೆಯಬಹುದು. ಅದೇ ರೀತಿ 2 ಲಕ್ಷ ರೂ. ಹೂಡಿಕೆ ಮಾಡಿದರೆ 82,000, 4,100, 2,82,000, 3 ಲಕ್ಷ ಹೂಡಿಕೆ ಮಾಡಿದರೆ 1,23,000, 6,150, 4,23,000, 4 ಲಕ್ಷ ಹೂಡಿಕೆ ಮಾಡಿದರೆ 1,64,000, 8,200, 5,64,000, 5 ಲಕ್ಷ ರೂ. ಹೂಡಿಕೆ ಮಾಡಿದರೆ 2,05,000, 10,250, 7,05,000, 10 ಲಕ್ಷ ರೂ. ಹೂಡಿಕೆ ಮಾಡಿದರೆ 4,10,000, 20500, 14,10,000, 20 ಲಕ್ಷ ರೂ. ಹೂಡಿಕೆ ಮಾಡಿದರೆ 8,20,000, 41,000, 28,20,000, 30 ಲಕ್ಷ ಹೂಡಿಕೆ ಮಾಡಿದರೆ 12,30,000, 61,500, 42,30,000 ಪಡೆಯಬಹುದು.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

ಅಕಾಲಿಕ ಮುಚ್ಚುವಿಕೆ

ಹಿರಿಯ ನಾಗರಿಕರ ಉಳಿತಾಯ ಯೋಜನೆಯನ್ನು ಯಾವುದೇ ಸಮಯದಲ್ಲಿ ಅಕಾಲಿಕವಾಗಿ ಮುಚ್ಚಬಹುದು. ಆದರೂ ಖಾತೆಯನ್ನು ತೆರೆಯುವ 1 ವರ್ಷದ ಮೊದಲು ಮುಚ್ಚಿದ್ದರೆ ಯಾವುದೇ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ. ಅಂಚೆ ಕಚೇರಿಯು ಒಟ್ಟು ಮೊತ್ತದಿಂದ ಪಾವತಿಸಿದ ಬಡ್ಡಿಯನ್ನು ಸಹ ಪಡೆಯುತ್ತದೆ. 1 ವರ್ಷದಿಂದ 2 ವರ್ಷಗಳ ಅವಧಿಯಲ್ಲಿ ಖಾತೆಯನ್ನು ಮುಚ್ಚಿದ್ದರೆ, ಮೊತ್ತದ ಶೇ. 1.5ರಷ್ಟನ್ನು ಕಡಿತಗೊಳಿಸಿದ ಅನಂತರ ಮೂಲ ಮೊತ್ತವನ್ನು ಪಾವತಿಸಲಾಗುತ್ತದೆ.

Continue Reading

ವಾಣಿಜ್ಯ

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

PMAY: ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರ ಸ್ವಂತ ಸೂರಿನ ಕನಸು ನನಸು ಮಾಡಲೆಂದೇ ಸರ್ಕಾರ ಜಾರಿಗೆ ತಂದ ಯೋಜನೆ ಪಿಎಂಎವೈ (ಪ್ರಧಾನ ಮಂತ್ರಿ ಆವಾಸ್ ಯೋಜನೆ). ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ.

VISTARANEWS.COM


on

PMAY
Koo

ಬೆಂಗಳೂರು: ಸ್ವಂತ ಮನೆ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಆದರೆ ಈ ದುಬಾರಿ ದುನಿಯಾದಲ್ಲಿ ಸ್ವಂತದ್ದೊಂದು ಸೂರು ಕಟ್ಟಿಕೊಳ್ಳುವ ಆಸೆ ದುಬಾರಿಯೇ ಸರಿ. ಅದರಲ್ಲಿಯೂ ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರಂತೂ ಇದಕ್ಕಾಗಿ ಜೀವಮಾನವಿಡೀ ದುಡಿದಿದ್ದನ್ನು ಮೀಸಲಿಡಬೇಕಾದ ಸ್ಥಿತಿ ಇದೆ. ಆದರೆ ಗೊತ್ತಿರಲಿ ಇಂತಹವರಿಗೆಂದೇ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana-PMAY) ಜಾರಿಗೆ ತಂದಿದೆ. ಅಂದರೆ ಕೇಂದ್ರ ಸರ್ಕಾರ ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ (How To Apply For PMAY).

ಏನಿದು ಯೋಜನೆ?

ದೇಶದ ಎಲ್ಲರಿಗೂ ಸೂರು ಒದಗಿಸಬೇಕು ಎನ್ನುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2015-16ರಲ್ಲಿ ಈ ಯೋಜನೆಯನ್ನು ಪರಿಚಯಿಸಿದೆ. ಈ ಮೂಲಕ ನಗರ ಮತ್ತು ಗ್ರಾಮೀಣದ ಪ್ರದೇಶದ ಬಡ ಜನರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿರುವ ಮನೆ ನಿರ್ಮಿಸಿ ಕೊಡಲಾಗುತ್ತದೆ. ಈ ಯೋಜನೆಯಡಿ ವಾರ್ಷಿಕ ಶೇ. 6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. 10 ವರ್ಷಗಳಲ್ಲಿ ಈ ಯೋಜನೆ ಮೂಲಕ ಸುಮಾರು 4.21 ಮನೆಗಳನ್ನು ನಿರ್ಮಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರ 3 ಕೋಟಿ ಮನೆಗಳನ್ನು ನಿರ್ಮಿಸಿ ಕೊಡುವ ತೀರ್ಮಾನವನ್ನು ಈಗಾಗಲೇ ಪ್ರಕಟಿಸಿದೆ. ಮೊದಲ ಸಂಪುಟ ಸಭೆಯಲ್ಲಿಯೇ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮನೆಯಲ್ಲಿ ಏನಿರಲಿದೆ?

ಸರ್ಕಾರ ನಿರ್ಮಿಸಿ ಕೊಡುವ ಈ ಮನೆ ಅಗತ್ಯ ಮೂಲ ಸೌಕರ್ಯಗಳನ್ನು ಒಳಗೊಂಡಿರುತ್ತದೆ. ಶೌಚಾಲಯ, ಎಲ್‌ಪಿಜಿ ಕನೆಕ್ಷನ್‌, ವಿದ್ಯುತ್‌ ಸಂಪರ್ಕ ಮತ್ತು ನೀರಿನ ಸೌಲಭ್ಯ ಹೊಂದಿರುತ್ತದೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ನಗರ ಮತ್ತು ಗ್ರಾಮೀಣ ಎನ್ನುವ ಎರಡು ವಿಧವಿದೆ.

ಈ ಯೋಜನೆಯನ್ನು ಫಲಾನುಭವಿಗಳ ವಾರ್ಷಿಕ ಆದಾಯದ ಆಧಾರದಲ್ಲಿ 4 ವರ್ಗಗಳನ್ನಾಗಿ ವಿಂಗಡಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ವರ್ಗ (EWS)- 3 ಲಕ್ಷ ರೂ.ವರೆಗೆ ಆದಾಯ
ಕಡಿಮೆ ಆದಾಯದ ಗುಂಪು (LIG): 3 ಲಕ್ಷ ರೂ.- 6 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-1): 6 ಲಕ್ಷ ರೂ.- 12 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-2): 12 ಲಕ್ಷ ರೂ.- 18 ರೂ. ಆದಾಯ

ಯಾರೆಲ್ಲ ಅರ್ಹರು?

  • ಫಲಾನುಭವಿ ಭಾರತದ ನಿವಾಸಿಯಾಗಿರಬೇಕು.
  • ಫಲಾನುಭವಿ ಶಾಶ್ವತ ಮನೆ ಹೊಂದಿರಬಾರದು.
  • ಫಲಾನುಭವಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
  • ಫಲಾನುಭವಿಯ ಹೆಸರು ಪಡಿತರ ಚೀಟಿ ಅಥವಾ ಪಿಬಿಎಲ್ ಪಟ್ಟಿಯಲ್ಲಿರಬೇಕು.
  • ಫಲಾನುಭವಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿರಬೇಕು. ಅಲ್ಲದೆ ಯಾವುದೇ ಮಾನ್ಯ ಗುರುತಿನ ಚೀಟಿಯನ್ನು ಹೊಂದಿರಬೇಕು (ಅಧಾರ್‌ ಕಾರ್ಡ್‌, ಲೈಸನ್ಸ್‌ ಇತ್ಯಾದಿ).
  • ಫಲಾನುಭವಿಯ ಕುಟುಂಬದವರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.

ಯೋಜನೆ ವೈಶಿಷ್ಟ್ಯ

  • ಈ ಯೋಜನೆ ದೇಶದ ಎಲ್ಲ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯವಾಗುತ್ತದೆ
  • ಈ ಯೋಜನೆಯಡಿ, ಎಲ್ಲ ಫಲಾನುಭವಿಗಳಿಗೆ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ಲಭ್ಯ.
  • ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮೀಸಲು.
  • ಗೃಹ ನಿರ್ಮಾಣದಲ್ಲಿ ಸುಸ್ಥಿರ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಕೆ.
  • ಮನೆ ಅಗತ್ಯ ಮೂಲ ಸೌಕರ್ಯ ಹೊಂದಿದ್ದು, ಹೆಚ್ಚುವರಿ ಕಾಮಗಾರಿ ಬೇಕಾದರೆ ಕೈಗೊಳ್ಳಬಹುದಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://pmaymis.gov.in/ಗೆ ಭೇಟಿ ನೀಡಿ
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಹೋಮ್‌ಪೇಜ್‌ನಲ್ಲಿ ಕಂಡು ಬರುವ PM Awas Yojana ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.

ಆಫ್‌ಲೈನ್‌ ಮೂಲಕವೂ ನೀವು ಅರ್ಜಿ ಸಲ್ಲಿಬಹುದು. ಇದಕ್ಕಾಗಿ ನೀವು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (Common Service Center) ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ 1800-11-3377, 1800-11-3388 ನಂಬರ್‌ಗೆ ಕರೆ ಮಾಡಿ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ.
  • ಅರ್ಜಿದಾರರ ಫೋಟೊ
  • ಫಲಾನುಭವಿಯ ಜಾಬ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಸಂಖ್ಯೆ.
  • ಬ್ಯಾಂಕ್ ಪಾಸ್‌ಬುಕ್.
  • ಸ್ವಚ್ಛ ಭಾರತ್ ಮಿಷನ್ (SBM) ನೋಂದಣಿ ಸಂಖ್ಯೆ.
  • ಮೊಬೈಲ್ ನಂಬರ್.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Continue Reading
Advertisement
World War 3
ಪ್ರಮುಖ ಸುದ್ದಿ2 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ4 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ4 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ5 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ5 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ6 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ6 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ7 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ7 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ7 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ7 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ8 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ13 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌