Chariot Falls: ಸಾವಿರಾರು ಭಕ್ತರ ನಡುವೆ ಧರೆಗುರುಳಿದ 120 ಅಡಿ ಎತ್ತರದ ತೇರು! ಭಯಾನಕ ವಿಡಿಯೋ - Vistara News

ಕರ್ನಾಟಕ

Chariot Falls: ಸಾವಿರಾರು ಭಕ್ತರ ನಡುವೆ ಧರೆಗುರುಳಿದ 120 ಅಡಿ ಎತ್ತರದ ತೇರು! ಭಯಾನಕ ವಿಡಿಯೋ

Chariot Falls: ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ಬರುತ್ತಿದ್ದ ತೇರನ್ನು ಎತ್ತುಗಳು ಮತ್ತು ಟ್ರಾಕ್ಟರ್‌ಗಳ ನೆರವಿನಿಂದ ಎಳೆದು ತರಲಾಗುತ್ತಿತ್ತು. ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಈ ತೇರು ಬ್ಯಾಲೆನ್ಸ್‌ ಕಳೆದುಕೊಂಡು ಉರುಳಿಬಿದ್ದಿದೆ.

VISTARANEWS.COM


on

chariot falls anekal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್‌: ಸಾವಿರಾರು ಭಕ್ತರ (Devotees) ನಡುವೆ ಸಾಗಿಬರುತ್ತಿದ್ದ 120 ಅಡಿ ಎತ್ತರದ ತೇರು (Chariot), ಬ್ಯಾಲೆನ್ಸ್‌ ತಪ್ಪಿ ಧರೆಗೆ (Chariot Falls) ಉರುಳಿದೆ. ನೋಡನೋಡುತ್ತಿದ್ದಂತೆ ಭಯಾನಕವಾಗಿ ಕೆಳಗುರುಳಿದ ಈ ತೇರಿನ ಕೆಳಗೆ ಅದೃಷ್ಟವಶಾತ್‌ ಯಾರೂ ಸಿಕ್ಕಿಹಾಕಿಕೊಂಡಿಲ್ಲ; ಸಾವುನೋವು ಸಂಭವಿಸಿಲ್ಲ. ಈ ಭಯಾನಕ ದೃಶ್ಯದ ವಿಡಿಯೋ (Viral video) ದೊರೆತಿದೆ.

ಬೆಂಗಳೂರು ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಹೀಲಲಿಗೆ ಗ್ರಾಮದ ಕುರ್ಜು (ತೇರು) ಅನ್ನು ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ (Huskuru Madduramma fair) ಒಯ್ಯಲಾಗುತ್ತಿತ್ತು. ಹತ್ತಾರು ಊರುಗಳಿಂದ ಹುಸ್ಕೂರಿನ ಮದ್ದೂರಮ್ಮ ಜಾತ್ರೆಗೆ ಕುರ್ಜುಗಳು ಬರುತ್ತವೆ.

ಹೀಗೆ ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ಬರುತ್ತಿದ್ದ ತೇರನ್ನು ಎತ್ತುಗಳು ಮತ್ತು ಟ್ರಾಕ್ಟರ್‌ಗಳ ನೆರವಿನಿಂದ ಎಳೆದು ತರಲಾಗುತ್ತಿತ್ತು. ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಈ ತೇರು ಬ್ಯಾಲೆನ್ಸ್‌ ಕಳೆದುಕೊಂಡು ಉರುಳಿಬಿದ್ದಿದೆ.

ತೇರು 120 ಅಡಿಗೂ ಹೆಚ್ಚು ಎತ್ತರವಿದ್ದು ವಾಲಿ ಬೀಳತೊಡಗಿದಾಗ ಭಕ್ತರು ಭಯಗೊಂಡು ಕಾಲು ಕಿತ್ತರು. ಆದರೆ ತೇರು ಯಾರಿಗೂ ಪರಚಿದ ಗಾಯವನ್ನೂ ಮಾಡದೆ ನೆಲಕ್ಕುರುಳಿತು. ತೇರಿನ ಸಮೀಪವೇ ನಡೆದು ಬರುತ್ತಿದ್ದ ಭಕ್ತರು ಕೊಂಚದರಲ್ಲಿ ಬಚಾವ್‌ ಆದರು. ಆದರಲ್ಲೂ ಪುಟ್ಟ ಬಾಲಕಿಯೊಬ್ಬಳು ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾಳೆ. ತೇರನ್ನು ಎಳೆಯುತ್ತಿದ್ದ ಟ್ರಾಕ್ಟರ್‌ನಲ್ಲಿದ್ದವರು ಜಿಗಿದು ಬದುಕಿಕೊಂಡರು. ಎತ್ತುಗಳು ಓಡಿಹೋಗಿ ಪ್ರಾಣ ಉಳಿಸಿಕೊಂಡವು.

ಹನುಮಾನ್‌ ಚಾಲೀಸಾ ಗಲಾಟೆ; ಹಲ್ಲೆಗೊಳಗಾದ ಮುಕೇಶ್‌ ವಿರುದ್ಧವೇ ಎಫ್‌ಐಆರ್‌

ಬೆಂಗಳೂರು: ಬೆಂಗಳೂರಿನ (Bangalore News) ನಗರ್ತ ಪೇಟೆಯ ಅಂಗಡಿಯಲ್ಲಿ ಹನುಮಾನ್‌ ಚಾಲೀಸಾ (Hanuman Chalisa) ಶ್ಲೋಕ ಹಾಕಿದ ಎಂಬ ಕಾರಣಕ್ಕಾಗಿ ಹಿಂದು ವ್ಯಾಪಾರಿಯೊಬ್ಬನ (Attack on Hindu Trader) ಮೇಲೆ ಹಲ್ಲೆ ನಡೆಸಿದ್ದಕ್ಕೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದು ರಾಜಕೀಯ ಸ್ವರೂಪ ಪಡೆದು ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಬಿಜೆಪಿಯ ನಾಯಕರು ಪ್ರತಿಭಟಿಸಿದ್ದರು. ಇದೀಗ ಹನುಮಾನ್ ಚಾಲೀಸಾ ಗಲಾಟೆಗೆ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ. ಹಲ್ಲೆಗೊಳಗಾಗಿ ದೂರು ಕೊಟ್ಟಿದ್ದ ಮುಕೇಶ್‌ ವಿರುದ್ಧವೇ ಪ್ರತಿದೂರು ದಾಖಲಾಗಿದೆ. ಇದಕ್ಕೆ ಬಿಜೆಪಿ ಆಕ್ರೋಶ ಹೊರಹಾಕಿದೆ.

ಹಲ್ಲೆಗೊಳಗಾದ ಮುಖೇಶ್ ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ, ಹೀಗಾಗಿ ಅಸಲಿ ಸಂಗತಿ ಆ ದಿನ ಹೇಳಿರಲಿಲ್ಲ ಎಂದಿದ್ದಾನೆ. ಪಿಎಸ್‌ಐ ಭಗವಂತಯ್ಯ ಅವರ ಮುಂದೆ ಮುಂದುವರಿದ ಹೇಳಿಕೆ ನೀಡಿರುವ ಮುಕೇಶ್, ಹನುಮಾನ್ ಚಾಲೀಸಾ ಹಾಕಿದಕ್ಕೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದಾನೆ.

ಪ್ರತಿ ದೂರು

ಬಂಧಿತರ ಪೈಕಿ ಸುಲೇಮಾನ್ ತಾಯಿ ಈ ಹಿಂದೆಯೇ ದೂರು ನೀಡಿದ್ದರು. ನ್ಯಾಯಾಲಯದ ಅನುಮತಿ ಮೇರೆಗೆ ಎನ್‌ಸಿಆರ್ ಈಗ ಎಫ್‌ಐಆರ್ ಆಗಿ ಬದಲಾಗಿದೆ. ಅದರಲ್ಲಿ ಸುಲೇಮಾನ್ ತಾಯಿ ಹಲವು ಆರೋಪಗಳನ್ನು ಮಾಡಿದ್ದಾರೆ. ಆ ಪ್ರಕಾರ ಮೊಬೈಲ್ ಅಂಗಡಿಯ ಪಕ್ಕದಲ್ಲಿಯೇ ಮಸೀದಿ ಇದೆ. ರಂಜಾನ್‌ ಇರುವುದರಿಂದ ಮೂರು ಸಾವಿರಕ್ಕೂ ಹೆಚ್ಚಿ ಮುಸಲ್ಮಾನರು ನಮಾಜ್ ಮಾಡುತ್ತಾರೆ. ಇದನ್ನು ನನ್ನ ಮಗ ಸುಲೇಮಾನ್ ಹಾಗು ಆತನ ಸ್ನೇಹಿತರು ಕೇಳಲು ಹೋದಾಗ ಮುಕೇಶ್‌ ಹಲ್ಲೆ ನಡೆಸಿದ್ದಾನೆ. ಹೀಗಾಗಿ ಮುಕೇಶ್ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇತ್ತ ಮುಕೇಶ್ ಕೂಡ ಗಂಭೀರ ಆರೋಪ ಮಾಡಿ ಮುಂದುವರಿದ ಹೇಳಿಕೆ ನೀಡಿದ್ದಾನೆ. ಈ ಹಿಂದೆ ಮುಕೇಶ್ ಕೊಟ್ಟ ದೂರಿನ ಅನ್ವಯ ಏಳು ಜನರನ್ನು ಪೊಲೀಸರು ಬಂಧಿಸಿದ್ದರು. ಮುಂದೆ ಸುಲೇಮಾನ್‌ ತಾಯಿ ಝಬೀನ್ ನೀಡಿರುವ ದೂರಿನ ಅನ್ವಯವಾಗಿ ಮುಕೇಶ್‌ ಬಂಧನವಾಗುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಪರಸ್ಪರ ದೂರು ಪ್ರತಿದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸರು ಯಾವ ರೀತಿ ಪ್ರಕರಣವನ್ನು ಇತ್ಯರ್ಥ ಮಾಡುತ್ತಾರೆ ಕಾದುನೋಡಬೇಕು.

ಇದನ್ನೂ ಓದಿ: Car Accident: ಅಪಘಾತದಲ್ಲಿ ಗಾಯಗೊಂಡ ಪಾಕ್​ ತಂಡದ ಇಬ್ಬರು ಆಟಗಾರ್ತಿಯರು; ಆಸ್ಪತ್ರೆಗೆ ದಾಖಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Karnataka Weather: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದಲ್ಲಿ ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಾರುತಗಳು (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು

Continue Reading

ಕರ್ನಾಟಕ

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Self Harming: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದದ ಮನೆಯಲ್ಲೇ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
Koo

ಕಾರವಾರ: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್‌ ಗಲ್ಲಿಯಲ್ಲಿ ನಡೆದಿದೆ.

ಬೆಳಗಾವಿಯ ಲೋಂಡಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷ 5ನೇ ತರಗತಿಗೆ ವಿದ್ಯಾರ್ಥಿ ಹೋಗಬೇಕಿದ್ದ. ಇನ್ನೆರಡು ದಿನಗಳಲ್ಲಿ ಶಾಲೆ ಆರಂಭವಾಗಲಿತ್ತು. ಆದರೆ, ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಿದ್ದ ವಿದ್ಯಾರ್ಥಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಯಿ ಗೋವಾದಲ್ಲಿ ಕೆಲಸಕ್ಕೆ ಹೋಗಿದ್ದು, ತಂದೆ ಮಲಗಿದ್ದ ವೇಳೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದ ಮೇಘಾಂಜಲಿ ಕಲ್ಯಾಣ ಮಂಟಪ ಸಮೀಪದ ಕನಕದಾಸ ವೃತ್ತದಲ್ಲಿ ನಡೆದಿದೆ. ಉಮೇಶ್( 51) ಮೃತ ದುರ್ದೈವಿ.

ತಂದೆ-ಮಗ ಬೈಕ್‌ನಲ್ಲಿ ಅರಳುಮಲ್ಲಿಗೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದರು. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಹಿನ್ನೆಲೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಕೊನೆಯುಸಿರೆದಿದ್ದಾರೆ. ಅದೃಷ್ಟವಶಾತ್ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ

ನಾಪತ್ತೆಯಾಗಿದ್ದ ಯುವ ಶವವಾಗಿ ಪತ್ತೆ

ತುಮಕೂರು: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯಿರುವ ಲಕ್ಷ್ಮೀಪುರದಲ್ಲಿ ನಡೆದಿದೆ. ಪ್ರದೀಪ್ (30) ಮೃತ ದುರ್ದೈವಿ.

ಲಕ್ಷ್ಮೀಪುರ ಬಳಿಯಿರುವ ಉಲ್ಲಾಳಬೆಟ್ಟದ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಹುಲಿಯೂರುದುರ್ಗ ಬಳಿಯ ಮೂದನಹಳ್ಳಿ ಗ್ರಾಮದ ಪ್ರದೀಪ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಕುಡಿತದ ದಾಸನಾಗಿದ್ದರಿಂದ ಆಗಾಗ ಪತ್ನಿ ಹಾಗೂ ತಾಯಿ ಜೊತೆ ಗಲಾಟೆ ಮಾಡುತ್ತಿದ್ದ. ಈತನ ಕಿರುಕುಳಕ್ಕೆ ಬೇಸತ್ತು ಒಂದು ತಿಂಗಳ ಹಿಂದೆ ಪತ್ನಿ ಹಾಗೂ ತಾಯಿ ಮನೆ ಬಿಟ್ಟು ತವರು ಮನೆಗೆ ಹೋಗಿದ್ದರು. ಹೀಗಾಗಿ ಪ್ರದೀಪ್ ಮನೆಯಲ್ಲಿ ಒಬ್ಬನೇ ಇದ್ದ.

ಕಳೆದ ಮೂರು ದಿನಗಳ ಹಿಂದೆ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದ ಪ್ರದೀಪ್‌, ಬುಧವಾರ ಸಂಜೆ ಉಲ್ಲಾಳಬೆಟ್ಟದ ಅರಣ್ಯ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಮೃತದೇಹ ನೋಡಿ ಹುಲಿಯೂರುದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಪತ್ತೆಯಾದ ಜಾಗದಲ್ಲಿ ಮದ್ಯದ ಬಾಟಲ್ ಹಾಗೂ ಚಾಕು ಪತ್ತೆಯಾಗಿದೆ. ಪ್ರದೀಪ್ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಹುಬ್ಬಳ್ಳಿ

Hubballi Train: ಪ್ರಯಾಣಿಕರೇ ಗಮನಿಸಿ; ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯ ಬದಲಾಗಿದೆ

Hubballi Train: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಪರಿಷ್ಕರಿಸಲಾಗಿದ್ದು, ಈ ರೈಲುಗಳ ಬದಲಾವಣೆಯು ಯಾವ ದಿನಾಂಕದಿಂದ ಜಾರಿ ಬರಲಿದೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

Timing change of 5 trains arriving at Sri Siddharooda Swamiji Railway Station Hubballi
ಸಾಂದರ್ಭಿಕ ಚಿತ್ರ.
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಪರಿಷ್ಕರಿಸಲಾಗಿದ್ದು, ಈ ರೈಲುಗಳ (Hubballi Train) ಬದಲಾವಣೆಯು ಯಾವ ದಿನಾಂಕದಿಂದ ಜಾರಿ ಬರಲಿದೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಜೂನ್ 21ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16532 ಕೆಎಸ್ಆರ್ ಬೆಂಗಳೂರು-ಅಜ್ಮೀರ್ ಗರೀಬ್ ನವಾಜ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

ಇದನ್ನೂ ಓದಿ: LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

ಜೂ.22ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16506 ಕೆಎಸ್ಆರ್ ಬೆಂಗಳೂರು-ಗಾಂಧಿ ಧಾಮ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

ಜೂ. 23 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16534 ಕೆಎಸ್ಆರ್ ಬೆಂಗಳೂರು-ಜೋಧಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

ಜೂ.24 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16508 ಕೆಎಸ್ಆರ್ ಬೆಂಗಳೂರು-ಜೋಧಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

ಇದನ್ನೂ ಓದಿ: KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

ಜೂ.25 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16210 ಮೈಸೂರು-ಅಜ್ಮೀರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ ಎಂದು ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದೆ.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Valmiki Corporation Scam: 88 ಕೋಟಿ ರೂ. ದುರುಪಯೋಗ ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದ್ದು, ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

VISTARANEWS.COM


on

Valmiki corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ (Valmiki Corporation Scam) ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ಇದೀಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ, ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

ವಾಲ್ಮೀಕಿ ನಿಗಮದ ಪ್ರಭಾರ ಎಂಡಿಯಾಗಿ ಡಾ. ಕೆ. ಆರ್. ರಾಜ್ ಕುಮಾರ್ ನೇಮಕ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 88 ಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ MD ಜೆ. ಜೆ. ಪದ್ಮನಾಭ ಅವರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದ ಬೆನ್ನಲ್ಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಪ್ರಭಾರರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Continue Reading
Advertisement
Karnataka Weather
ಕರ್ನಾಟಕ3 mins ago

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Hair Growth Tips
ಆರೋಗ್ಯ18 mins ago

Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!

Dina Bhavishya
ಭವಿಷ್ಯ1 hour ago

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

Girlfriend
ದೇಶ6 hours ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ7 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ8 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

T20 World Cup 2024
ಕ್ರೀಡೆ8 hours ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

Self Harming
ಕರ್ನಾಟಕ9 hours ago

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Rudram II
ದೇಶ9 hours ago

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Chahal-Dhanashree
ಕ್ರೀಡೆ9 hours ago

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌