ಲಿವ್‌ ಇನ್‌ ಸಂಬಂಧ ಬ್ರೇಕಪ್‌ ಆದರೂ ಯುವತಿಗೆ ಜೀವನಾಂಶ ನೀಡಬೇಕು; ಕೋರ್ಟ್‌ ಆದೇಶ! - Vistara News

ದೇಶ

ಲಿವ್‌ ಇನ್‌ ಸಂಬಂಧ ಬ್ರೇಕಪ್‌ ಆದರೂ ಯುವತಿಗೆ ಜೀವನಾಂಶ ನೀಡಬೇಕು; ಕೋರ್ಟ್‌ ಆದೇಶ!

ಲಿವ್‌ ಇನ್‌ ಸಂಬಂಧಗಳು ಇತ್ತೀಚೆಗೆ ಹೆಚ್ಚಿನ ಅಪರಾಧಗಳಿಗೆ ಕಾರಣವಾಗುತ್ತಿವೆ. ಲಿವ್‌ ಇನ್‌ ಪಾರ್ಟ್‌ನರ್‌ ಆಗಿರುವ ಯುವತಿಯನ್ನೇ ಕೊಲೆ ಮಾಡಿದ ಪ್ರಕರಣಗಳು ಸುದ್ದಿಯಾಗಿವೆ. ಇದರ ಬೆನ್ನಲ್ಲೇ, ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿರುವ ವ್ಯಕ್ತಿಯು ಬ್ರೇಕಪ್‌ ಆದ ಬಳಿಕ ಮಹಿಳೆಗೆ ಮಾಸಿಕ ಜೀವನಾಂಶ ನೀಡಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್‌ ಆದೇಶಿಸಿದೆ.

VISTARANEWS.COM


on

Live In Relationship
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್‌: ಗಂಡ-ಹೆಂಡತಿ ವಿಚ್ಛೇದನ (Divorce) ಪಡೆದ ನಂತರ, ಗಂಡನು ಹೆಂಡತಿಗೆ ಮಾಸಿಕವಾಗಿ ಇಂತಿಷ್ಟು ಜೀವನಾಂಶ ಕೊಡಬೇಕು ಎಂಬುದಾಗಿ ಕೋರ್ಟ್‌ ಆದೇಶಿಸುತ್ತದೆ. ಅದರಂತೆ ಮಾಜಿ ಗಂಡನು ಮಾಜಿ ಹೆಂಡತಿಗೆ ಮಾಸಿಕವಾಗಿ ಜೀವನಾಂಶ ನೀಡುತ್ತಾನೆ. ಆದರೆ, ಲಿವ್‌ ಇನ್‌ ರಿಲೇಷನ್‌ಶಿಪ್‌ (Live In Relationship) ಸಂಬಂಧದಲ್ಲಿದ್ದು, ಬ್ರೇಕ್‌ ಆದ ಬಳಿಕ ಯುವಕನು ಮಾಜಿ ಪ್ರೇಯಸಿಗೆ ಜೀವನಾಂಶ ನೀಡಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್‌ (Madhya Pradesh High Court) ಆದೇಶಿಸಿದೆ. ಇದು ಈಗ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿರುವವರಲ್ಲಿ ಆತಂಕ ಮೂಡಿಸಿದೆ.

ಹೌದು, ವ್ಯಕ್ತಿಯೊಬ್ಬರು ಲಿವ್‌ ಇನ್‌ ರಿಲೇಷನ್‌ಶಿಪ್‌ ಬ್ರೇಕಪ್‌ ಆದ ಬಳಿಕವೂ ಮಹಿಳೆಗೆ ಮಾಸಿಕ 1,500 ರೂ. ಜೀವನಾಂಶ ನೀಡಬೇಕು ಎಂದು ಅಧೀನ ನ್ಯಾಯಾಲಯ ನೀಡಿದ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು. ಈಗ ಹೈಕೋರ್ಟ್‌ ಕೂಡ ಮಾಸಿಕ 1,500 ರೂ. ನೀಡಬೇಕು ಎಂಬುದಾಗಿ ವ್ಯಕ್ತಿಗೆ ಆದೇಶಿಸಿದೆ. ಇದು ಈಗ ವ್ಯಕ್ತಿಗೆ ಲಿವ್‌ ಇನ್‌ ಸಂಬಂಧ ಬ್ರೇಕಪ್‌ ಆದ ದುಃಖಕ್ಕಿಂತ ಪರಿಹಾರ ನೀಡಬೇಕು ಎಂಬ ತೀರ್ಪೇ ಜಾಸ್ತಿ ದುಃಖ ತಂದಿದೆ ಎಂದು ಹೇಳಲಾಗುತ್ತಿದೆ.

Court Order

ಜೀವನಾಂಶ ಯಾವಾಗ ಕೊಡಬೇಕು?

“ಯಾವುದೇ ಒಬ್ಬ ವ್ಯಕ್ತಿಯು ಇನ್ನೊಬ್ಬ ಮಹಿಳೆಯ ಜತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದು, ಇಬ್ಬರೂ ಲೈಂಗಿಕ ಸಂಪರ್ಕ ಹೊಂದಿದ್ದರೆ ಆಗ ವ್ಯಕ್ತಿಯು ಬ್ರೇಕಪ್‌ ಬಳಿಕ ಜೀವನಾಂಶ ಕೊಡಬೇಕು” ಎಂದು ಸ್ಪಷ್ಟಪಡಿಸಿತು. ಅದರಲ್ಲೂ, ಮಧ್ಯಪ್ರದೇಶ ವ್ಯಕ್ತಿಯ ಪ್ರಕರಣದಲ್ಲಿ ಅಧೀನ ನ್ಯಾಯಾಲಯದ ವಿಶೇಷ ಪ್ರಸ್ತಾಪವನ್ನು ಹೈಕೋರ್ಟ್‌ ಗಮನ ಸೆಳೆಯಿತು. “ಇಬ್ಬರೂ ಗಂಡ-ಹೆಂಡತಿ ರೀತಿಯೇ ಹಲವು ವರ್ಷಗಳಿಂದ ವಾಸಿಸುತ್ತಿದ್ದಾರೆ. ಇಬ್ಬರೂ ಸಂಬಂಧದಲ್ಲಿದ್ದಾಗ ಮಗು ಕೂಡ ಜನಿಸಿದೆ. ಹಾಗಾಗಿ, ಪರಿಹಾರ ನೀಡಬೇಕು” ಎಂಬುದಾಗಿ ಕೋರ್ಟ್‌ ತಿಳಿಸಿದೆ.

ಲಿವ್‌ ಇನ್‌ ಸಂಬಂಧದ ಕುರಿತು ಮಧ್ಯಪ್ರದೇಶ ಹೈಕೋರ್ಟ್‌ ನೀಡಿದ ತೀರ್ಪು ಈಗ ಜನರಿಂದ ಮೆಚ್ಚುಗೆಗೆ ವ್ಯಕ್ತವಾಗಿದೆ. ಮದುವೆಯಾಗದೆ, ಇಬ್ಬರೂ ಒಟ್ಟಿಗೆ ವಾಸಿಸುವ ವೇಳೆ ಲೈಂಗಿಕ ಸಂಪರ್ಕ ಸಾಧಿಸಿ, ನಂತರ ಇಬ್ಬರೂ ಬೇರೆಯಾದಾಗ ಮಹಿಳೆಗೆ ಮಾಸಿಕ ಜೀವನಾಂಶ ಕೊಡುವುದು ಹೆಣ್ಣುಮಕ್ಕಳ ಹಕ್ಕುಗಳ ರಕ್ಷಣೆ ಮಾಡಿದಂತೆ ಎಂಬುದಾಗಿ ವಿಶ್ಲೇಷಿಸಲಾಗಿದೆ. ಮತ್ತೊಂದು ಗಮನಾರ್ಹ ಸಂಗತಿ ಎಂದರೆ, ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ರೂಪಿಸಲಾಗಿದ್ದು, ಅದರಲ್ಲಿ ಮದುವೆ, ವಿಚ್ಛೇದನದ ಜತೆಗೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿರುವವರು ಕೂಡ ನೋಂದಣಿ ಮಾಡಿಕೊಳ್ಳಬೇಕು ಎಂಬ ನಿಯಮ ರೂಪಿಸಿದೆ.

ಇದನ್ನೂ ಓದಿ: ಲಿವ್‌ ಇನ್‌ ಪಾರ್ಟ್‌ನರ್‌ನನ್ನೇ ಕೊಂದು ಪೊಲೀಸರಿಗೆ ಕರೆ ಮಾಡಿದಳು ಕೊಲೆಗಾತಿ! ಮುಂದೇನಾಯ್ತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Job Alert: ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ನಿಮಗೊಂದು ಗುಡ್‌ನ್ಯೂಸ್‌. ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಕಾರ್ಯಾನುಭ ಇದ್ದವರೂ ಅರ್ಜಿ ಸಲ್ಲಿಸಬಹುದು (Tcs Recruitment 2024). ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ (Job Alert).

ಹುದ್ದೆಗಳ ವಿವರ

ವೈರ್‌ಲೈನ್‌ – ವೈರ್‌ಲೆಸ್ ನೆಟ್‌ವರ್ಕ್‌ ಸೆಕ್ಯೂರಿಟಿ, ಆಪರೇಷನ್ ಎನೇಬಲ್ಮೆಂಟ್ -ಹ್ಯೂಮನ್ ರಿಸೋರ್ಸ್, ಇಪಿ ಡ್ರೈವ್
ಆಪರೇಷನ್‌ ಸ್ಪೆಷಲಿಸ್ಟ್‌, ಎಂಎಫ್‌ಜಿ ಇಯು ಡ್ರೈವ್, ಎನ್‌ಜಿಎಂ ಎಪಿಎಸಿ ಬಿಎಫ್‌ಎಸ್‌, ಕಸ್ಟಮರ್ ಸರ್ವೀಸ್, ಆ್ಯಕ್ಟಿವ್ ಡೈರೆಕ್ಟರಿ ಡೈರೆಕ್ಟರಿ, ಎಸ್‌ಸಿಸಿಎಂ, ವಿಂಡೋಸ್ ಅಡ್ಮಿನ್, ಜಾವ ಡೆವಲಪರ್, ಪಬ್ಲಿಕ್ ಕ್ಲೌಡ್ ಎಡಬ್ಲ್ಯೂಎಸ್ ಅಡ್ಮಿನ್, ಬ್ಯಾಕಪ್ ಅಡ್ಮಿನ್, ಸ್ಟೋರೇಜ್ ಅಡ್ಮಿನ್, DevOps Admin, ಮಿಡಲ್‌ವೇರ್ ಅಡ್ಮಿನ್, ಓಪೆನ್‌ಶಿಫ್ಟ್‌ ಅಡ್ಮಿನ್, ನೆಟ್‌ವರ್ಕ್ ಅಡ್ಮಿನ್, ಡಾಟಾಬೇಸ್ ಅಡ್ಮಿನ್, ಇಎಲ್‌ಕೆ ಅಡ್ಮಿನ್, ಸೆಕ್ಯೂರಿಟಿ ಎಸ್‌ಎಂಇ, ಟೀಮ್‌ ಸೆಂಟರ್, ಲಿನಕ್ಸ್‌ ಅಡ್ಮಿನ್,
ಮೆಕ್ಯಾನಿಕಲ್ ಡಿಸೈನ್, ಸರ್ವೀಸ್‌ನೌ ಡೆವಲಪರ್, ಓಪೆನ್‌ಸ್ಟಾಕ್‌ ಅಡ್ಮಿನ್, ನೆಟ್‌ವರ್ಕ್‌ ಟೆಸ್ಕಿಂಗ್ ಆ್ಯಂಡ್‌ ಆಟೋಮೇಷನ್, ಪ್ರೋಗ್ರೆಸ್ ಡಾಟಾಬೇಸ್ ಅಡ್ಮಿನಿಸ್ಟ್ರೇಟರ್, ಜಾವ ಫುಲ್‌ಸ್ಟಾಕ್ ಡೆವಲಪರ್ ಮುಂತಾಹ ಹುದ್ದೆಗಳು ಖಾಲಿ ಇವೆ.

ಗಮನಿಸಿ, ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತು ಕಾರ್ಯಾನುಭವ ನಿಗದಿ ಪಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಹುಡುಕುತ್ತಿರುವ ಆಸಕ್ತ ಹುದ್ದೆ ಸಿಕ್ಕಲ್ಲಿ ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ಈ ಹುದ್ದೆಯ ಕುರಿತು ಅರ್ಹತೆ, ರೋಲ್ ಕರ್ತವ್ಯ, ಅನುಭವ, ಇತರ ವಿವರಗಳು ಇರುತ್ತವೆ. ಓದಿಕೊಳ್ಳಿ.
  • ನಂತರ ‘Apply’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಮೂಲಕ ಸೈನ್‌ ಇನ್ ಆಗಿ, ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading

ದೇಶ

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

Lok Sabha Election 2024: ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಒಂದೆಡೆ ಲೋಕಸಭೆ ಚುನಾವಣೆ(Lok Sabha Election 2024)ಯ ಕಾವು ಹೆಚ್ಚಾಗ್ತಿದೆ. ಮತ್ತೊಂದೆಡೆ ನಾಯಕರು ಮಾಡುತ್ತಿರುವ ಎಡವಟ್ಟುಗಳೂ ದಿನಕ್ಕೊಂದು ಘಟನೆಯಂತೆ ಕಣ್ಣಮುಂದೆ ಬರುತ್ತಿರುತ್ತವೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶ(Andra Pradesh)ದಲ್ಲಿ ಮತದಾನಕ್ಕಾಗಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನೋರ್ವ ಕಪಾಳಮೋಕ್ಷ(Slapped) ಮಾಡಿದ ವಿಚಾರ ಬಹಳ ಸುದ್ದಿಯಾಗಿತ್ತು. ಇದೀಗ ಮತ್ತೋರ್ವ ಶಾಸಕ ವಿವಿಪ್ಯಾಟ್‌(VVPAT) ಅನ್ನೇ ಎತ್ತಿ ನೆಲಕ್ಕೆ ಬಡಿಯುವ ಮೂಲಕ ಎಲ್ಲರನ್ನು ಆಘಾತಕ್ಕೊಳಪಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral video) ಆಗುತ್ತಿದೆ

ಘಟನೆ ವಿವರ:

ಆಂಧ್ರಪ್ರದೇಶದ ಪಲ್ವೈ ಗೇಟ್‌ ಮತಗಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳಿಗೆ ನಡೆದ ಮತದಾನದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಂದು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆದಿದ್ದು, ಅನೇಕ ಕಡೆಗಳಲ್ಲಿ ಹಿಂಸಾಚಾರ, ಅನುಚಿತ ಘಟನೆಗಳು ವರದಿಯಾಗಿದ್ದವು.

ಟಡಿಎಂ ಖಂಡನೆ:

ಇನ್ನು ವಿಡಿಯೋ ವೈರಲ್‌ ಆಗುತ್ತಿದ್ದಂತೆ ತೆಲುಗು ದೇಶಂ ಪಕ್ಷದ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಲು ಖಚಿತ ಎಂಬುದು ಮನವರಿಕೆ ಅಗುತ್ತಿದ್ದಂತೆ YSRCP ಮುಖಂಡರು ಈ ರೀತಿ ದಾಂದಲೆ ಎಬ್ಬಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಉತ್ರ ನಾರಾ ಲೋಕೇಶ್‌ ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದು, YSRCP ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮತಯಂತ್ರವನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು. ಸೋಲಿನ ಭಯದಿಂದ ಹೀಗೆಲ್ಲ ವರ್ತಿಸುತ್ತಿದ್ದಾರೆ. ಜೂ.4ರಂದು ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ:ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

ಒಂದಲ್ಲ.. ಎರಡಲ್ಲಾ.. ಬರೋಬ್ಬರಿ 7ಮತಯಂತ್ರ ಧ್ವಂಸ

ಇನ್ನು ಈ ಬಗ್ಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ್ದು, ಶಾಸಕ ರೆಡ್ಡಿ ಬರೋಬ್ಬರಿ 7 ಮತಗಟ್ಟೆಗಳಲ್ಲಿ ಮತಯಂತ್ರಗಳನ್ನು ಧ್ವಂಸಗೊಳಿಸುರುವ ವಿಡಿಯೋ ನಮಗೆ ಸಿಕ್ಕಿದೆ. ಎಲ್ಲಾ ಮತಗಟ್ಟೆಗಳ ವಿಡಿಯೋಗಳನ್ನು ಜಿಲ್ಲಾ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್‌ ಕುಮಾರ್‌ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

ರಾಜಮಾರ್ಗ ಅಂಕಣ: ರನ್ ವೇಯಲ್ಲಿ ಓಡಲು ತೊಡಗಿದ ವಿಮಾನ ನಿಯಂತ್ರಣಕ್ಕೆ ಬರಲಿಲ್ಲ. ರನ್ ವೇ ಪೂರ್ತಿ ಓಡಿದ ನಂತರವೂ ವೇಗ ಕಡಿಮೆ ಆಗಲಿಲ್ಲ. ಅಪಾಯದ ಗೆರೆ ದಾಟಿ ಓಡಿದ ವಿಮಾನ ಮುಂದೆ ಇರುವ ಕೆಂಜಾರು ಎಂಬ ಜಾಗದ ಕಂದಕದಲ್ಲಿ ಉರುಳಿ ಬಿದ್ದು ಎರಡು ಭಾಗವಾಯಿತು. ಕ್ಷಣ ಮಾತ್ರದಲ್ಲಿ ಇಂಜಿನ್ ಟ್ಯಾಂಕ್ ಬೆಂಕಿ ಹಿಡಿದು ವಿಮಾನ ಹೊತ್ತಿ ಉರಿಯಲು ಆರಂಭವಾಯಿತು.

VISTARANEWS.COM


on

rajamarga column mangalore flight crash 1
Koo
Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ (Mangalore Airport) 14 ವರ್ಷಗಳ ಹಿಂದೆ ಇದೇ ದಿನ (2010 ಮೇ 22) ನಡೆದ ಆ ಒಂದು ದುರ್ಘಟನೆಯು (Mangalore flight crash) ದೇಶದಾದ್ಯಂತ ಉಂಟುಮಾಡಿದ ನೋವಿನ ಅಲೆಗಳನ್ನು ಈಗ ಕಲ್ಪನೆ ಮಾಡಲೂ ಭಯವಾಗುತ್ತದೆ! ದಕ್ಷಿಣ ಭಾರತದ ಅತೀ ದೊಡ್ಡ ವಿಮಾನ ದುರಂತವದು.

ಅಂದು ಮೇ 22, 2010 ಮಧ್ಯರಾತ್ರಿ…

ದುಬೈಯಿಂದ ಹೊರಟ ಭಾರತದ ವೈಭವದ ಬೋಯಿಂಗ್ 737-800 ವಿಮಾನದಲ್ಲಿ 166 ಪ್ರಯಾಣಿಕರಿದ್ದರು. ಅದರಲ್ಲಿ ಎಲ್ಲ ಪ್ರಾಯದವರೂ ಇದ್ದರು. ಹೆಚ್ಚಿನವರು ಕರ್ನಾಟಕ ಮತ್ತು ಕೇರಳದವರು. ನೂರಾರು ಕನಸುಗಳನ್ನು ಹೊತ್ತು ತಮ್ಮ ತಾಯ್ನೆಲಕ್ಕೆ ಹೊರಟವರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮುಂಜಾನೆ ಸೂರ್ಯೋದಯಕ್ಕೆ ಮೊದಲು ಅವರು ಮಂಗಳೂರು ತಲುಪಿ ತಮ್ಮ ತಮ್ಮ ಊರಿಗೆ ಟ್ಯಾಕ್ಸಿ ಏರಬೇಕಾಗಿತ್ತು. ಆದರೆ ವಿಧಿಯ ಆಟ ಬೇರೆಯೇ ಇತ್ತು.

ಟೇಬಲ್ ಟಾಪ್ ರನ್ ವೇ…

ಮುಂಜಾನೆ ಆರು ಘಂಟೆಯ ಹೊತ್ತಿಗೆ ಜನರು ಕಣ್ಣುಜ್ಜಿ ಹೊರಗೆ ನೋಡಲು ತೊಡಗಿದಾಗ ವಿಮಾನ ಬಜಪೆ ವಿಮಾನ ನಿಲ್ದಾಣದ ರನ್ ವೇ ಸ್ಪರ್ಶ ಮಾಡಿ ಓಡತೊಡಗಿತ್ತು. ಅದು ಟೇಬಲ್ ಟಾಪ್ ರನ್ ವೇ. ಅಂದರೆ ಎತ್ತರದ ಪರ್ವತದ ಮೇಲೆ ಸಮತಟ್ಟು ಮಾಡಿ ನಿರ್ಮಿಸಿದ್ದ ರನ್ ವೇ. ವಿಮಾನದ ಕ್ಯಾಪ್ಟನ್ ಗ್ಲುಸಿಕಾ (Glusica) ಮತ್ತು ಫಸ್ಟ್ ಆಫೀಸರ್ ಹರಿಂದರ್ ಸಿಂಘ್ ಅಹ್ಲುವಾಲಿಯಾ ಇಬ್ಬರೂ ಅನುಭವಿಗಳು. ಅದರಲ್ಲಿ ಕ್ಯಾಪ್ಟನ್ ಗ್ಲುಸಿಕಾ ಅದೇ ರನ್ ವೇ ಮೇಲೆ ಹಿಂದೆ 16 ಬಾರಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ದಾಖಲೆ ಹೊಂದಿದ್ದರು. 2448 ಮೀಟರ್ ಉದ್ದವಾದ ರನ್ ವೇಯಲ್ಲಿ ವಿಮಾನವನ್ನು ನಿಯಂತ್ರಣಕ್ಕೆ ತಂದು ನಿಲ್ಲಿಸುವುದು ಕಷ್ಟ ಆಗಿರಲಿಲ್ಲ. ವಾತಾವರಣವೂ ಪೂರಕವಾಗಿತ್ತು. ಬಜಪೇ ವಿಮಾನ ನಿಲ್ದಾಣದಿಂದ ಪೂರಕ ಸಂಕೇತಗಳು ದೊರೆಯುತ್ತಿದ್ದವು.

ಕಣ್ಣು ಮುಚ್ಚಿ ತೆರೆಯುವ ಒಳಗೆ..

ಈ ಬಾರಿ ರನ್ ವೇಯಲ್ಲಿ ಓಡಲು ತೊಡಗಿದ ವಿಮಾನ ನಿಯಂತ್ರಣಕ್ಕೆ ಬರಲಿಲ್ಲ. ರನ್ ವೇ ಪೂರ್ತಿ ಓಡಿದ ನಂತರವೂ ವೇಗ ಕಡಿಮೆ ಆಗಲಿಲ್ಲ. ಅಪಾಯದ ಗೆರೆ ದಾಟಿ ಓಡಿದ ವಿಮಾನ ಮುಂದೆ ಇರುವ ಕೆಂಜಾರು ಎಂಬ ಜಾಗದ ಕಂದಕದಲ್ಲಿ ಉರುಳಿ ಬಿದ್ದು ಎರಡು ಭಾಗವಾಯಿತು. ಕ್ಷಣ ಮಾತ್ರದಲ್ಲಿ ಇಂಜಿನ್ ಟ್ಯಾಂಕ್ ಬೆಂಕಿ ಹಿಡಿದು ವಿಮಾನ ಹೊತ್ತಿ ಉರಿಯಲು ಆರಂಭವಾಯಿತು. ಆಕಾಶದ ಎತ್ತರಕ್ಕೆ ಬೆಂಕಿ ಮತ್ತು ಹೊಗೆ ಏರುತ್ತಾ ಹೋದಂತೆ ಒಳಗಿದ್ದ ಪ್ರಯಾಣಿಕರಿಗೆ ಏನಾಗ್ತಾ ಇದೆ ಎಂದು ಅರಿವಾಗುವ ಮೊದಲೇ ಇಡೀ ವಿಮಾನ ಸುಟ್ಟು ಹೋಯಿತು. ಸಣ್ಣಗೆ ಮಳೆ ಸುರಿಯುತ್ತಿದ್ದರೂ ವಿಮಾನದ ಬೆಂಕಿ ಆರಲಿಲ್ಲ.

ರೆಸ್ಕ್ಯೂ ಆಪರೇಶನ್ ಆರಂಭ.

ಸುದ್ದಿ ಕಾಳ್ಗಿಚ್ಚಿನಂತೆ ಹರಡಿ ಮಂಗಳೂರಿನಿಂದ ಅಗ್ನಿ ಶಾಮಕ ವಾಹನಗಳು, ಆಂಬ್ಯುಲೆನ್ಸಗಳು ಸ್ಥಳಕ್ಕೆ ಧಾವಿಸಿ ಬಂದವು. ದೊಡ್ಡ ಸಂಖ್ಯೆಯಲ್ಲಿ ಸಾರ್ವಜನಿಕರು ಜೀವದ ಹಂಗು ತೊರೆದು ಸ್ಥಳಕ್ಕೆ ಧಾವಿಸಿದರು. ಬೆಂಕಿ ಆರಿಸುವ ಪ್ರಯತ್ನವು ಹಲವು ಘಂಟೆ ನಡೆಯಿತು. ವಿಮಾನದಿಂದ ಸುಟ್ಟು ಕರಕಲಾದ ಶವಗಳನ್ನು ಹೊರಗೆ ತೆಗೆಯುವುದೇ ಕಷ್ಟ ಆಯಿತು. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂದು ಸುಟ್ಟು ಹೋದವರ ಸಂಖ್ಯೆಯೇ 158!

ವಿಮಾನದಲ್ಲಿ ಇದ್ದ ಪ್ರಯಾಣಿಕರ ಸಂಖ್ಯೆ 166. ಆರು ಜನ ಕ್ರೂ (Crew) ಸದಸ್ಯರು ಬೇರೆ ಇದ್ದರು. ಅಂದು ಬದುಕಿ ಉಳಿದವರ ಸಂಖ್ಯೆ 8 ಮಾತ್ರ. ತೀವ್ರವಾಗಿ ಗಾಯಗೊಂಡವರ ಸಂಖ್ಯೆ 8. ಅಂದರೆ 158 ಜನರು ಸುಟ್ಟು ಕರಕಲಾಗಿ ಹೋಗಿದ್ದರು! ಕ್ರೂ (Crew) ಸದಸ್ಯರೂ ಬೂದಿ ಆಗಿದ್ದರು. ಶವಗಳನ್ನು ಗುರುತು ಹಿಡಿಯುವುದು ತುಂಬಾನೇ ಕಷ್ಟ ಆಯಿತು. ಒಂದೊಂದು ಶವವನ್ನು ಎತ್ತಿ ಆಂಬುಲೆನ್ಸಗೆ ಸಾಗಿಸುವಾಗ ಜನರ ಆಕ್ರಂದನ ಹೃದಯ ವಿದ್ರಾವಕ ಆಗಿತ್ತು.

ಆಸ್ಪತ್ರೆಗೆ ಧಾವಿಸಿ ತಮ್ಮವರನ್ನು ಶವಗಳ ರಾಶಿಯಲ್ಲಿ ಹುಡುಕುತ್ತಾ ಅಳುವವರ ದೃಶ್ಯವು ನಿಜಕ್ಕೂ ಕರುಣಾಜನಕ ಆಗಿತ್ತು. ಅದರಲ್ಲಿಯೂ 12 ಶವಗಳ ಗುರುತು ಹಿಡಿಯುವುದೇ ಕಷ್ಟವಾಗಿ ಅವುಗಳನ್ನು ಮುಂದೆ ಕೂಳೂರಿನ ಫಲ್ಗುಣಿ ನದಿ ತೀರದಲ್ಲಿ ಸಾಮೂಹಿಕವಾಗಿ ಸಂಸ್ಕಾರ ಮಾಡಲಾಯಿತು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

ಪೈಲಟ್ ನಿದ್ದೆ ರೆಕಾರ್ಡ್ ಆಗಿತ್ತು!

ಇಂತಹ ಅಪಘಾತಗಳು ನಡೆದಾಗ ಗಂಭೀರವಾದ ವಿಚಾರಣೆಗಳು ನಡೆಯುತ್ತವೆ. ಕಾಕ್‌ಪಿಟ್ ರೆಕಾರ್ಡರ್‌ನಲ್ಲಿ ಪೈಲಟ್ ಕ್ಯಾಪ್ಟನ್ ಗ್ಲುಸಿಕಾ ಅವರ ನಿದ್ದೆ ರೆಕಾರ್ಡ್ ಆಗಿತ್ತು. ಅಂದರೆ 55 ವರ್ಷ ಪ್ರಾಯದ ಆತನು ಸುಮಾರು ಹೊತ್ತು ವಿಮಾನದ ಹಾರಾಟದ ಅವಧಿಯಲ್ಲಿ ಮಲಗಿದ್ದು ನಿಚ್ಚಳವಾಯಿತು! ಇದೇ ಅಪಘಾತಕ್ಕೆ ಕಾರಣ ಎಂದು ಧೃಡವಾಗಿತ್ತು.

ಮುಂದೆ ಏನಾಯಿತು?

ರಾಜ್ಯ ಮತ್ತು ಕೇಂದ್ರ ಸರಕಾರಗಳು ಮೃತರಾದವರಿಗೆ ಪರಿಹಾರ ಕೊಟ್ಟವು. ವಿಮಾನ ಯಾನ ಸಂಸ್ಥೆ ಮತ್ತು ಖಾಸಗಿ ವಿಮಾ ಕಂಪೆನಿಗಳು ಪರಿಹಾರಗಳನ್ನು ನೀಡಿದವು. ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ದುರಂತದ ಸ್ಮಾರಕವನ್ನು ನಿರ್ಮಾಣ ಮಾಡಿ ಮೃತರಾದವರಿಗೆ ಶ್ರದ್ಧಾಂಜಲಿ ಕೊಟ್ಟಿತ್ತು. ಆದರೆ ತಮ್ಮವರನ್ನು ಕಳೆದುಕೊಂಡು ಇಂದಿಗೂ ರೋಧಿಸುತ್ತಿರುವ, ನೋವು ಪಡುತ್ತಿರುವ ಮಂದಿಗೆ ಈ ದುರಂತವು ಮರೆತು ಹೋಗುವುದು ಹೇಗೆ? ಅಂದು ಮಡಿದ ನೂರಾರು ಮಂದಿಗೆ ಒಂದು ಹನಿ ಕಣ್ಣೀರು ಸುರಿಸಿ ಶ್ರದ್ಧಾಂಜಲಿ ಕೊಡೋಣ ಅಲ್ಲವೇ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

Continue Reading

ದೇಶ

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

ರಾಜಸ್ಥಾನದ ಜೈಪುರದಲ್ಲಿ ಮಹಿಳೆಯೊಬ್ಬರು ತಮ್ಮ 22 ವರ್ಷದ ಮಗಳನ್ನೇ ಕೊಂದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಓದುವುದು ಬಿಟ್ಟು, ಮೂರು ಹೊತ್ತೂ ಮೊಬೈಲ್‌ನಲ್ಲಿಯೇ ಮುಳುಗಿರುತ್ತಿದ್ದ ಮಗಳ ಗೀಳನ್ನು ಸಹಿಸದೆ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರಾಡ್‌ನಿಂದ ಬಿದ್ದ ಪೆಟ್ಟಿನಿಂದಾಗಿ ಯುವತಿಯು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

VISTARANEWS.COM


on

Mobile
Koo

ಜೈಪುರ: ಮಕ್ಕಳಿಂದ ಹಿಡಿದು ಹಿರಿಯರವರೆಗೆ, ಅಕ್ಷರಸ್ಥರಿಂದ ಹಿಡಿದು, ಅನಕ್ಷರಸ್ಥರವರೆಗೆ ಬಹುತೇಕ ಮಂದಿ ದಿನದ ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲಿಯೇ (Mobile Addiction) ಕಳೆಯುತ್ತಾರೆ. ಅದರಲ್ಲೂ, ಶಾಲೆ-ಕಾಲೇಜುಗಳಿಗೆ ತೆರಳುವ ಮಕ್ಕಳು ಮೂರು ಹೊತ್ತೂ ಮೊಬೈಲ್‌ನಲ್ಲಿಯೇ ಮುಳುಗಿರುವುದನ್ನು ಕಂಡು ಪೋಷಕರು ಅಸಮಾಧಾನ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಇಷ್ಟಾದರೂ ಮಕ್ಕಳು ಮೊಬೈಲ್‌ನಲ್ಲೇ ತಲ್ಲೀನರಾಗಿರುತ್ತಾರೆ. ಹೀಗೆ, ರಾಜಸ್ಥಾನದಲ್ಲಿ (Rajasthan) ಮೂರು ಹೊತ್ತೂ ಮೊಬೈಲ್‌ ಹಿಡಿದುಕೊಂಡೇ ಕೂತಿರುತ್ತಿದ್ದನ್ನು ಸಹಿಸದ ಮಹಿಳೆಯೊಬ್ಬರು ತಮ್ಮ 22 ವರ್ಷದ ಮಗಳನ್ನೇ ಕೊಂದು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ರಾಜಸ್ಥಾನದ ಜೈಪುರದಲ್ಲಿ ಸೀತಾ ದೇವಿ ಎಂಬ ಮಹಿಳೆಯು ತಮ್ಮ ಮಗಳನ್ನೇ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ನಿಕಿತಾ (22) ಮೃತ ಯುವತಿ. ನಿಕಿತಾ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಳು. ಪರೀಕ್ಷೆಗೆ ಓದು, ಮೊಬೈಲ್‌ ನೋಡುವುದು ಬಿಡು. ಮೂರು ಹೊತ್ತೂ ಮೊಬೈಲ್‌ ಹಿಡಿದರೆ ಪರೀಕ್ಷೆಯಲ್ಲಿ ಹೇಗೆ ತೇರ್ಗಡೆಯಾಗ್ತೀಯಾ ಎಂಬುದಾಗಿ ಸೀತಾ ದೇವಿ ಗದರಿದ್ದಾರೆ. ಇದರಿಂದ ಕುಪಿತಗೊಂಡ ನಿಕಿತಾ, ತಾಯಿಗೆ ಎದುರು ಉತ್ತರ ಕೊಟ್ಟಿದ್ದಾಳೆ. ಆಗ ಇಬ್ಬರ ಮಧ್ಯೆ ಜಗಳ ನಡೆದಿದೆ ಎನ್ನಲಾಗಿದೆ.

Mobile

ರಾಡ್‌ನಿಂದ ಹೊಡೆದಾಡಿಕೊಂಡರು

ಮೂರು ಹೊತ್ತೂ ಮೊಬೈಲ್‌ ನೋಡಬೇಡ ಎಂದಿದ್ದಕ್ಕೆ ನಿಕಿತಾ ರೇಗಿದ್ದಾಳೆ. ಇದರಿಂದ ಸೀತಾ ದೇವಿ ಅವರಿಗೆ ಸಿಟ್ಟು ಬಂದಿದೆ. ಪಕ್ಕದಲ್ಲಿದ್ದ ರಾಡ್‌ ತೆಗೆದುಕೊಂಡು ಮಗಳಿಗೆ ಹೊಡೆದಿದ್ದಾರೆ. ತಾಯಿ ಎಂಬುದನ್ನೂ ಲೆಕ್ಕಿಸದ ಮಗಳು ಕೂಡ ರಾಡ್‌ನಿಂದ ತಾಯಿ ಮೇಲೆ ಹಲ್ಲೆ ನಡೆಸಿದ್ದಾಳೆ. ಇಬ್ಬರೂ ರಾಡ್‌ಗಳಿಂದ ಬಡಿದಾಡಿಕೊಂಡಿದ್ದಾರೆ. ಜೈಪುರದ ಮುಂಡಿಯಾರಮ್ಸಾರ್‌ ಎಂಬ ಗ್ರಾಮದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರೂ ಗಾಯಗೊಂಡ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ನಿಕಿತಾ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ. ಸೀತಾ ದೇವಿ ವಿರುದ್ಧ ಕೊಲೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಧುನಿಕ ಕಾಲಘಟ್ಟದಲ್ಲಿ ಮೊಬೈಲ್‌ ಎಲ್ಲರಿಗೂ ಅವಿಭಾಜ್ಯ ಅಂಗವೇ ಆಗಿದೆ. ಅದರಲ್ಲೂ, ವಿದ್ಯಾರ್ಥಿಗಳಿಗೆ ಮೊಬೈಲ್‌ ಅಚ್ಚುಮೆಚ್ಚಾಗಿದೆ. ಹಾಗೆಯೇ, ಇದು ಶಿಕ್ಷಣಕ್ಕೂ ಅನುಕೂಲ ಕಲ್ಪಿಸಿದೆ. ಆದರೆ, ಮಕ್ಕಳು ಯಾವಾಗಲೂ ಮೊಬೈಲ್‌ ಬಳಸುತ್ತಿದ್ದರೆ, ಅದು ಗೀಳಾಗಿ ಬದಲಾಗಿದ್ದರೆ, ಪೋಷಕರು ಅದರ ಕುರಿತು ಮಕ್ಕಳೊಂದಿಗೆ ಸಮಾಧಾನದಿಂದ ಜಾಗೃತಿ ಮೂಡಿಸಬೇಕು. ಅತಿಯಾಗಿ ಮೊಬೈಲ್‌ ಬಳಸುವುದರಿಂದ ಶಿಕ್ಷಣದ ಮೇಲೆ ಬೀರುವ ಪರಿಣಾಮದ ಮೇಲೆ ತಿಳಿಹೇಳಬೇಕು. ಸಮಾಧಾನದಿಂದ ತಿಳಿಹೇಳದೆ, ಬೈಯುವುದು, ಹೊಡೆಯುವುದು ಮಾಡಿದರೆ ಹಿಂಸೆ, ದುಃಖಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಜೈಪುರದ ಪ್ರಕರಣವೇ ಸಾಕ್ಷಿಯಾಗಿದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Continue Reading
Advertisement
Drone Prathap Helping People To Get Eye Surgery on Birthday
ಸಿನಿಮಾ6 mins ago

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Job Alert
ಉದ್ಯೋಗ28 mins ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ39 mins ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Lok Sabha Election 2024
ದೇಶ1 hour ago

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

rajamarga column mangalore flight crash 1
ಅಂಕಣ1 hour ago

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

food poisoning savadatthi
ಬೆಳಗಾವಿ1 hour ago

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

nanna desha nanna dani column ambedkar jinnah
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ2 hours ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ3 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು20 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು21 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌