Nirmala Sitharaman: ಮೋದಿ ಸರ್ಕಾರ ಯಾವ ರಾಜ್ಯಕ್ಕೂ ಅನ್ಯಾಯ ಮಾಡಿಲ್ಲ: ನಿರ್ಮಲಾ ಸೀತಾರಾಮನ್‌ - Vistara News

ರಾಜಕೀಯ

Nirmala Sitharaman: ಮೋದಿ ಸರ್ಕಾರ ಯಾವ ರಾಜ್ಯಕ್ಕೂ ಅನ್ಯಾಯ ಮಾಡಿಲ್ಲ: ನಿರ್ಮಲಾ ಸೀತಾರಾಮನ್‌

Nirmala Sitharaman: ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬವಾಗಲು ಕೇಂದ್ರ ಸರ್ಕಾರ ಕಾರಣವಲ್ಲ, ಉನ್ನತಾಧಿಕಾರ ಸಮಿತಿ ಸಭೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅನುಮತಿ ನೀಡದಿರುವುದೇ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

VISTARANEWS.COM


on

Nirmala Sitharaman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ನಮ್ಮ ತೆರಿಗೆ ನಮ್ಮ ಹಕ್ಕು” ಎಂಬ ಘೋಷಣೆ ಚೆನ್ನಾಗಿದೆ.‌ ಚುನಾವಣೆಗೆ ಮುನ್ನಾ ಗ್ಯಾರಂಟಿ ಘೋಷಿಸುವಾಗ ಈ ಮಾತು ನೆನಪಿರಲಿಲ್ಲವೇ? ಕೊಟ್ಟಿರುವ ಭರವಸೆ ಈಡೇರಿಸಲು ಎಲ್ಲಿಂದ ಹಣ ತರುತ್ತಾರೆ? ಇವರ ಘೋಷಣೆ ಸರಿಯಿದೆ, ಆದರೆ ಅದನ್ನು ಹೇಳುತ್ತಿರುವವರ ಉದ್ದೇಶ ಸರಿಯಿಲ್ಲ. ಮೋದಿ ಸರ್ಕಾರ ಯಾವ ರಾಜ್ಯಕ್ಕೂ ಅನ್ಯಾಯ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರು ರಾಜ್ಯದ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ಇಲ್ಲಿನ ಜನರು ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳ ಆರೋಪಗಳಿಗೆ ಕಿವಿಗೊಡುವುದಿಲ್ಲ ಎಂಬ ವಿಶ್ವಾಸವಿದೆ. ಹಣಕಾಸು ಅವ್ಯವಹಾರ ಪ್ರಕರಣಗಳಲ್ಲಿ ಬೇಲ್‌ ಪಡೆದು ಹೊಗಿರುವ ಕಾಂಗ್ರೆಸ್‌ ನಾಯಕರು ತನಿಖಾ ಸಂಸ್ಥೆಗಳ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವುದು ದುರದೃಷ್ಟಕರ ಎಂದು ಕಿಡಿಕಾರಿದ್ದಾರೆ.

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬವಾಗಲು ಕೇಂದ್ರ ಸರ್ಕಾರ ಕಾರಣವಲ್ಲ, ಉನ್ನತಾಧಿಕಾರ ಸಮಿತಿ ಸಭೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅನುಮತಿ ನೀಡದಿರುವುದೇ ಕಾರಣ. ಅಂತರ ಸಚಿವಾಲಯ ಅಧಿಕಾರಿಗಳ ತಂಡ ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿ ಸಲ್ಲಿಸಿದ ವರದಿಯನ್ನು ಕೃಷಿ ಮತ್ತು ಗೃಹ ಸಚಿವಾಲಯಗಳು ಪರಿಶೀಲನೆ ನಡೆಸಿದ್ದವು. ಆದರೆ, ಅಷ್ಟರಲ್ಲೇ ಚುನಾವಣೆ ಘೋಷಣೆಯಾಯಿತು. ಆಯೋಗದ ಅನುಮತಿ ದೊರಕದೇ ಉನ್ನತಾಧಿಕಾರ ಸಮಿತಿ ಸಭೆ ನಡೆಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Smriti Irani: ಕೇರಳದಲ್ಲಿ ಬೆಗ್ಗಿಂಗ್‌, ಕರ್ನಾಟಕದಲ್ಲಿ ಥಗ್ಗಿಂಗ್;‌ ಕಾಂಗ್ರೆಸ್‌ಗೆ ಸ್ಮೃತಿ ಇರಾನಿ ಟಾಂಗ್!‌

ಕರ್ನಾಟಕ ಮಾತ್ರವಲ್ಲ, ತೆಲಂಗಾಣ, ತಮಿಳುನಾಡು ಸೇರಿ ಹಲವು ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿಯಡಿ ನೆರವು ನೀಡುವ ಪ್ರಸ್ತಾವಗಳು ಉನ್ನತಾಧಿಕಾರ ಸಮಿತಿ ಮುಂದಿವೆ. ಚುನಾವಣಾ ಆಯೋಗದ ಅನುಮತಿ ದೊರಕಿದ ಬಳಿಕವೇ ತೀರ್ಮಾನ ಕೈಗೊಳ್ಳಬೇಕಿದೆ. ಕೇಂದ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಕಾಯ್ದೆಯಲ್ಲಿ ಪರಿಹಾರ ವಿತರಣೆ ಅವಕಾಶ ಇಲ್ಲ. ಪರಿಹಾರ, ನೆರವು, ಮಧ್ಯಂತರ ಪರಿಹಾರ ಎಂಬ ಉಲ್ಲೇಖಗಳೇ ಇಲ್ಲ. ಕೇಂದ್ರ ಸರ್ಕಾರ ಇನ್ಸುಟ್ ಸಹಾಯಧನ ಮತ್ತು ಪರಿಸ್ಥಿತಿ ಸುಧಾರಣೆಗೆ ಸಹಾಯಧನವನ್ನು ಮಾತ್ರ ನೀಡುತ್ತದೆ ಎಂದು ತಿಳಿಸಿದರು.

ತುರ್ತು ಪರಿಹಾರ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು. ಇದಕ್ಕಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರವು ವಂತಿಗೆ ನೀಡುತ್ತದೆ. ಕರ್ನಾಟಕಕ್ಕೆ ಎರಡೂ ಕಂತುಗಳ 629 ಕೋಟಿಯನ್ನು ಮುಂಗಡವಾಗಿಯೇ ಬಿಡುಗಡೆ ಮಾಡಲಾಗಿತ್ತು ಎಂದರು.

ಕಾಂಗ್ರೆಸ್ ಸರ್ಕಾರದ ಆರೋಪದಲ್ಲಿ ಹುರುಳಿಲ್ಲ

ಬರ ಪರಿಹಾರ ಕೊಡುವಲ್ಲಿ ಕೇಂದ್ರ ವಿಳಂಬ ಧೋರಣೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಎಲ್ಲ ಅಧಿಕಾರ ಇದೆ. ಆದರೆ ಮೋದಿ ಸರ್ಕಾರ ಯಾವ ರಾಜ್ಯಕ್ಕೂ ಅನ್ಯಾಯ ಮಾಡಿಲ್ಲ. ತೆರಿಗೆ ಪಾಲು, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂಬ ಕಾಂಗ್ರೆಸ್ ಸರ್ಕಾರದ ಆರೋಪದಲ್ಲಿ ಹುರುಳಿಲ್ಲ. ಸುಳ್ಳು ಆರೋಪ ಮಾಡುವುದರಲ್ಲಿ ಕಾಂಗ್ರೆಸ್ ಪಕ್ಷದವರು ನಿಸ್ಸೀಮರು ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಿಗೆ ವಿಶೇಷ ನೆರವು ನೀಡಬೇಕೆಂಬ ಶಿಫಾರಸು 15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ ಮಾತ್ರ ಇತ್ತು. ಅಂತಿಮ ವರದಿಯಲ್ಲಿ ಅಂತಹ ಶಿಫಾರಸು ಇರಲಿಲ್ಲ. ಬೇರೆ ಯಾವ ರಾಜ್ಯಗಳೂ ಅಂತಹ ಬೇಡಿಕೆ ಇಡುತ್ತಿಲ್ಲ. ರಾಜ್ಯಗಳಿಗೆ ಬಂಡವಾಳ ವೆಚ್ಚಕ್ಕೆ ನೆರವು ನೀಡಬೇಕೆಂಬ ಶಿಫಾರಸು ಕೂಡ ಇರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ 50 ವರ್ಷಗಳ ಅವಧಿಗೆ ಬಡ್ಡಿರಹಿತ ಸಾಲ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ನವರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇದೆ, ಕಾಲರಾ ರೋಗ ಹರಡುತ್ತಿದೆ ಎಂಬ ಆತಂಕವಿದೆ. ಜನರಿಗೆ ಅಗತ್ಯ ಇರುವಷ್ಟು ನೀರು ಬೆಂಗಳೂರಿನಲ್ಲಿ ಸಿಗುತ್ತಿಲ್ಲ. ಕಳೆದ ಮೇ ತಿಂಗಳಲ್ಲಿ ಟೆಂಡರ್ ಕರೆದಿದ್ದಾರೆ, ಹಲವು ನೀರಾವರಿ ಯೋಜನೆಗಳನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ ಎಂದು ಅರೋಪಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

ರಾಜಧಾನಿಯಲ್ಲಿ ಉಗ್ರರ ದಾಳಿ ಆಗಿದೆ. ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಮೊಳಗಿವೆ. ನಾವು ಏನು ಮಾಡಿದರೂ ನಡೆಯುತ್ತೆ ಅನ್ನೋ ಭಾವನೆ ಸೃಷ್ಟಿ ಆಗಿದೆ. ಅದರ ಪ್ರತಿಫಲವೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಹಿಂದು ಟೆರರ್ ಅಂತ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಸಚಿವರು, ಆರೋಪಿ ಯಾರೆಂದು ಗೊತ್ತಿಲ್ಲದೇ ಟ್ವೀಟ್ ಮಾಡುತ್ತಾರೆ. ಸಾಕ್ಷಿಯನ್ನ ಕರೆದುಕೊಂಡು ಹೋದರೆ ಅವರೇ ಆರೋಪಿ ಎಂದು ಟ್ವೀಟ್ ಮಾಡುತ್ತಾರೆ ಎಂದು ಕಿಡಿ ಕಾರಿದರು.

ದಾವಣಗೆರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಶ್ಯಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅವರ ಹೇಳಿಕೆ ಖಂಡನೀಯ. ಅಂತಹ ಹೇಳಿಕೆಯನ್ನು ಯಾರೂ ಒಪ್ಪುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ | Karnataka Drought: ಬರ ಪರಿಹಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾಡಿದ ತಪ್ಪುಗಳ ಪಟ್ಟಿಯನ್ನೇ ಇಟ್ಟ ಆರ್.‌ ಅಶೋಕ್!

ರಾಜ್ಯದಲ್ಲಿ ಜಲಜೀವನ್ ಮಿಷನ್ ನಿಲ್ಲಿಸಿದ್ದಾರೆ, ನೀರಾವರಿ ಯೋಜನೆಗಳನ್ನು ಕಳೆದ ವರ್ಷವೇ ನಿಲ್ಲಿಸಿದ್ದಾರೆ.
ಗ್ಯಾರಂಟಿಗಳು ಅಭಿವೃದ್ಧಿಗೆ ಮಾರಕವಾಗಿದ್ದು, ಇದನ್ನು ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಹೇಳಿದ್ದಾರೆ. ಈಗ ದೇಶಕ್ಕೆ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಗ್ಯಾರಂಟಿಗಳನ್ನ ಈಡೇರಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Kangana Ranaut: ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Kangana Ranaut
Koo

ಹಿಮಾಚಲಪ್ರದೇಶ:ಮಂಡಿ(Mandi) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್‌(Kangana Ranaut) ಹಾಗೂ ಬಿಜೆಪಿ ಕಾರ್ಯಕರ್ತರ(BJP Workers) ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಕಲ್ಲು ತೂರಾಟ(Stone Pelting) ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ನೀಡಿದೆ. ನಿನ್ನೆ ಸಂಜೆ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ದೂರಿದೆ.

ನಿನ್ನೆ ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆ ಬಗ್ಗೆ ಸ್ವತಃ ಕಂಗನಾ ಪ್ರತಿಕ್ರಿಯಿಸಿದ್ದು, ನಮ್ಮ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್‌ ಹಿಂಸಾಚಾರ ನಡೆಸುವುದಕ್ಕಾಗಿಯೇ ಪ್ರತಿಭಟನೆ ಹಮ್ಮಿಕೊಂಡಿತ್ತು. ಇಲ್ಲಿನ ಸ್ಥಾನ ಕೈ ತಪ್ಪುವುದು ಅವರಿಗೆ ಖಚಿತವಾಗಿದೆ. ಹೀಗಾಗಿ ಅವರು ಬೀದಿಗಿಳಿದು ಪ್ರೊಟೆಸ್ಟ್‌ ಮಾಡುತ್ತಿದ್ದಾರೆ. ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಇನ್ನು ನಮ್ಮ ಪಕ್ಷದ ಇಬ್ಬರು ಕಾರ್ಯಕರ್ತರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್‌ನ ಈ ವರ್ತನೆ ಅತೀವ ಬೇಸರ ತಂದಿದೆ ಎಂದು ಹೇಳಿದ್ದಾರೆ. ಇನ್ನು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಬಿಜೆಪಿ ಆರೋಪದ ಬಗ್ಗೆ ಕಾಂಗ್ರೆಸ್‌ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Prajwal Revanna Case: ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿರುವ ಎಸ್‌ಐಟಿ, ಈ ಕೂಡಲೇ ಸಂಸದನ ಪಾಸ್‌ ಪೋರ್ಟ್‌ ರದ್ದು ಮಾಡಬೇಕು ಎಂದು ಕೋರಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ | Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

ಪ್ರಜ್ವಲ್‌ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Nikhil Kumaraswamy

ಬೆಂಗಳೂರು: ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ | MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎಸ್ಐಟಿ ತನಿಖೆ ಎದುರಿಸುವುದು ಸೂಕ್ತ. ಘಟ‌ನೆ ಆದ ದಿನವೇ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಬೇಕು ಅಂತ. ಎಸ್‌ಐಟಿ ತನಿಖೆ ಮಾಡುತ್ತಲಿದೆ. ಹೀಗಾಗಿ ಸಂಸದರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಪ್ರಜ್ವಲ್‌ ನನ್ನ ಜತೆಯಂತೂ ಸಂಪರ್ಕದಲ್ಲಿಲ್ಲ ಎಂದು ನಿಖಿಲ್‌ ಹೇಳಿದರು.

Continue Reading

ಪ್ರಮುಖ ಸುದ್ದಿ

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Congress Guarantee: ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

VISTARANEWS.COM


on

Congress Guarantee
Koo

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮೇ 20ಕ್ಕೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಕೈ ನಾಯಕರು ಸ್ಮರಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು (Congress Guarantee) ಜಾರಿ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿ 5 ಕೆಜಿ ಅಕ್ಕಿಯ ಜತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ತಲಾ 170 ರೂ. ನೀಡುವ ʼಅನ್ನಭಾಗ್ಯ ಯೋಜನೆʼ, ಮನೆ ಯಜಮಾನಿಗೆ ಮಾಸಿಕ 2000 ರೂ. ಮಾಸಾಶನ ನೀಡುವ ʼಗೃಹ ಲಕ್ಷ್ಮಿ ಯೋಜನೆʼ, ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್‌ ಒದಗಿಸುವ ʼಗೃಹ ಜ್ಯೋತಿ ಯೋಜನೆʼ, ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ʼಶಕ್ತಿ ಯೋಜನೆʼಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಇನ್ನು ಐದನೇ ಗ್ಯಾರಂಟಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನೀಡುವ ಯುವ ನಿಧಿ ಯೋಜನೆ ಅನುಷ್ಠಾನದ ಹಂತದಲ್ಲಿದೆ.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

ಗ್ಯಾರಂಟಿಗಳಿಗೆ ಆಗಿರುವ ವೆಚ್ಚ

ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಮೇ 19ರವರೆಗೆ ಬಳಕೆಯಾಗಿರುವ ಅನುದಾನದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ 23,098 ಕೋಟಿ ರೂ., ಗೃಹಜ್ಯೋತಿ ಯೋಜನೆಗೆ 10,207 ಕೋಟಿ ರೂ., ಶಕ್ತಿ ಯೋಜನೆಗೆ 4,054 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 7,364 ಕೋಟಿ ರೂ. ಹಾಗೂ ಯುವ ನಿಧಿ ಯೋಜನೆಗೆ 93 ಕೋಟಿ ರೂ. ವೆಚ್ಚವಾಗಿದೆ. ಶಕ್ತಿ ಯೋಜನೆಯಲ್ಲಿ 211.5 ಕೋಟಿ ಟ್ರಿಪ್‌ಗಳಲ್ಲಿ ಮಹಿಳೆಯರು ಸರ್ಕಾರಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.

ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು: ಸಿಎಂ

ಕಾಂಗ್ರೆಸ್‌ ಸರ್ಕಾರ 1 ವರ್ಷದ ಪೂರೈಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದು ತಿಳಿಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು.

ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ ಎಂದು ಹೇಳಿದ್ದಾರೆ.ʼ

ಇದನ್ನೂ ಓದಿ | Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

ಅಭಿವೃದ್ಧಿ ಮತ್ತು ಜನರ ಕಲ್ಯಾಣವನ್ನೇ ಮೂಲಮಂತ್ರವಾಗಿಟ್ಟುಕೊಂಡಿರುವ ನಮ್ಮ ಸರ್ಕಾರವು ಒಂದು ವರ್ಷದ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ನಾಡಿನ ಅಭಿವೃದ್ಧಿಯ ರಥವನ್ನು ಸಮಾನವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ನುಡಿದಂತೆ ನಡೆಯುತ್ತಿರುವ ನಮಗೆ ನಿಮ್ಮ ಬೆಂಬಲ – ಸಹಕಾರ ಮುಂದೆಯೂ ಇರಲಿ ಎಂದು ಆಶಿಸುತ್ತಾ, ಈ ಒಂದು ವರ್ಷದ ಅವಧಿಯಲ್ಲಿ ನಮ್ಮ ಕೆಲವು ಪ್ರಮುಖ ಸಾಧನೆಗಳನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Continue Reading

ರಾಜಕೀಯ

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

BY Vijayendra: ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ. ಮಹಿಳಾ ಸುರಕ್ಷತೆ ಬಗ್ಗೆ ಯಕ್ಷಪ್ರಶ್ನೆ ಮೂಡಿದೆ. ಅಭಿವೃದ್ಧಿ ಇಲ್ಲ. ರೈತರ ವಿಚಾರದಲ್ಲಿ ಕಾಳಜಿ ಇಲ್ಲದಂತಾಗಿದೆ. ಲವ್ ಜಿಹಾದ್ ಹೆಚ್ಚಳ, ಹಿಂದೂ ಕಾರ್ಯಕರ್ತರ ಹತ್ಯೆಯೂ ದಿನೇದಿನೇ ಹೆಚ್ಚಾಗುತ್ತಿದ್ದರೂ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಜನರು ಮಾತನಾಡುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಸರ್ಕಾರ ಬಂದ ಬಳಿಕ‌ ಕಲಬುರಗಿಯಲ್ಲಿ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯ ಹೆಚ್ಚಾಗಿದೆ. 3-4 ತಿಂಗಳಿನಿಂದ 450ಕ್ಕೂ ಹೆಚ್ಚು ಕೊಲೆ ಪ್ರಕರಣಗಳು ನಡೆದಿವೆ ಎಂದು ಆತಂಕ ವ್ಯಕ್ತಪಡಿಸಿದರು.

VISTARANEWS.COM


on

Siddaramaiah government performance is zero says BY Vijayendra
Koo

ಬೆಂಗಳೂರು: ಕಳೆದೊಂದು ವರ್ಷದ ಈ ರಾಜ್ಯ ಸರ್ಕಾರದ (Congress Government) ಸಾಧನೆ ಶೂನ್ಯ. ಇದು ಕೊಲೆಗಡುಕರ ಸರ್ಕಾರವಾಗಿದೆ. ಕರ್ನಾಟಕ ಎಂದರೆ ಕೊಲೆಗಡುಕರ ಸರ್ಕಾರ ಎಂದು ದೇಶದೆಲ್ಲೆಡೆ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಮಾತು ಕೇಳುತ್ತಿದೆ. ಕೊಲೆ ಪ್ರಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದೆ. ಲವ್ ಜಿಹಾದ್ (Love Jihad) ಪ್ರಕರಣದಲ್ಲಿ ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದೆ. ಕೊಲೆಗಡುಕರಿಗೆ ಶಕ್ತಿ ಕೊಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆಯೇ ಎಂಬ ಪ್ರಶ್ನೆಯನ್ನು ಕೇಳುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಕಾರಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ. ಮಹಿಳಾ ಸುರಕ್ಷತೆ ಬಗ್ಗೆ ಯಕ್ಷಪ್ರಶ್ನೆ ಮೂಡಿದೆ. ಅಭಿವೃದ್ಧಿ ಇಲ್ಲ. ರೈತರ ವಿಚಾರದಲ್ಲಿ ಕಾಳಜಿ ಇಲ್ಲದಂತಾಗಿದೆ. ಲವ್ ಜಿಹಾದ್ ಹೆಚ್ಚಳ, ಹಿಂದೂ ಕಾರ್ಯಕರ್ತರ ಹತ್ಯೆಯೂ ದಿನೇದಿನೇ ಹೆಚ್ಚಾಗುತ್ತಿದ್ದರೂ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಜನರು ಮಾತನಾಡುತ್ತಿದ್ದಾರೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ಹುಬ್ಬಳ್ಳಿ ಕಾಲೇಜು ಕ್ಯಾಂಪಸ್‌ನಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ, ಮನೆಗೆ ನುಗ್ಗಿ ಅಂಜಲಿ ಹತ್ಯೆ, ಕೊಡಗಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ, ಕೊಡಗಿನಲ್ಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕಾರು ಹರಿಸಿ ಹತ್ಯೆ ಮಾಡಲಾಗಿದೆ. ಈ ಸರ್ಕಾರ ಬಂದ ಬಳಿಕ‌ ಕಲಬುರಗಿಯಲ್ಲಿ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯ ಹೆಚ್ಚಾಗಿದೆ. 3-4 ತಿಂಗಳಿನಿಂದ 450ಕ್ಕೂ ಹೆಚ್ಚು ಕೊಲೆ ಪ್ರಕರಣಗಳು ನಡೆದಿವೆ. ಇದರಿಂದ ರಾಜ್ಯವೇ ದೇಶದ ಮುಂದೆ ತಲೆ ತಗ್ಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿ.ವೈ. ವಿಜಯೇಂದ್ರ ಅಸಮಾಧಾನ ಹೊರಹಾಕಿದರು.

ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿಟ್ಟ 25 ಸಾವಿರ ಕೋಟಿ ಮೊತ್ತವನ್ನು ಬೇರೆಡೆಗೆ ವರ್ಗಾವಣೆ ಮಾಡಿ ಅನ್ಯಾಯ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಬಿಜೆಪಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಕೊಡುತ್ತಿದ್ದ 4 ಸಾವಿರವನ್ನು ತಡೆ ಹಿಡಿದಿದ್ದಾರೆ ಎಂದರಲ್ಲದೆ, ಪ್ರಕೃತಿ ವಿಕೋಪ ನಿಧಿಯಡಿ ಎಷ್ಟು ಹಣ ನೀಡಿದ್ದೀರಿ ಎಂದು ಪ್ರಶ್ನಿಸಿದರು. ಬರಗಾಲದ ಸಂದರ್ಭದಲ್ಲೂ 7 ತಾಸು ವಿದ್ಯುತ್ ಕೊಡದ ನಿಷ್ಕ್ರಿಯ ಸರ್ಕಾರ ಇಲ್ಲಿದೆ ಎಂದು‌ ಬಿ.ವೈ. ವಿಜಯೇಂದ್ರ ದೂರಿದರು.

ಅಭಿವೃದ್ಧಿ ಎಂದು ಬಿಂಬಿಸುವ ಕೆಲಸ

ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರ್ಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು. ನುಡಿದಂತೆ ನಡೆಯುವ ಸರ್ಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ. ಹೊಗಳುಭಟರು, ಜಾಹೀರಾತಿನ ಮೂಲಕ ತಮ್ಮನ್ನು ತಾವು ಹೊಗಳಿಸಿಕೊಳ್ಳುವುದು ಮತ್ತು ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.‌

ರಾಜ್ಯದ ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಸಾಧನೆ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು ಮಾತನಾಡುತ್ತಿದ್ದಾರೆ. ಮತ್ತೊಂದು ಕಡೆ ಬಿಜೆಪಿ ಜತೆ ಜತೆಗೇ ಈ ನಾಡಿನ ಜನಸಾಮಾನ್ಯರೂ ರಾಜ್ಯ ಸರ್ಕಾರ ಕಳೆದ ಒಂದು ವರ್ಷದಲ್ಲಿ ಏನು ಸಾಧನೆ ಮಾಡಿದೆ ಎಂದು ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ವಿಶ್ಲೇಷಿಸಿದರು.

ಬರಗಾಲದ ವಿಚಾರದಲ್ಲಿ ಸರ್ಕಾರದ ನಡವಳಿಕೆ ಅಕ್ಷಮ್ಯ ಅಪರಾಧ

ಗ್ಯಾರಂಟಿಯನ್ನೇ ಅಭಿವೃದ್ಧಿ ಎಂದು ಬಿಂಬಿಸಲಾಗುತ್ತಿದೆ. ಬರಗಾಲದ ವಿಚಾರದಲ್ಲಿ ಸರ್ಕಾರದ ನಡವಳಿಕೆ ಅಕ್ಷಮ್ಯ ಅಪರಾಧ. ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ ಎಂದು ಹೋರಾಟ ಮಾಡಿದರು. ಆದರೆ, ಚುನಾಯಿತ ಸರ್ಕಾರದ ಜವಾಬ್ದಾರಿ‌ ಏನು? ಮುಖ್ಯಮಂತ್ರಿಗಳ ಹೊಣೆ ನಿಭಾಯಿಸುತ್ತಿದ್ದಾರೆ ಎಂದು ರೈತರಿಗೆ ಯಾವತ್ತೂ ಅನಿಸಿಲ್ಲ ಎಂದು ಬಿ.ವೈ.ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 692ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರವು ಕೃಷಿ ಸಾಲ, ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ನಿಟ್ಟಿನಲ್ಲಿ ಗಂಭೀರವಾದ ಅಥವಾ ಜವಾಬ್ದಾರಿಯುತ ಸ‌ರ್ಕಾರವಾಗಿ ನಡೆದುಕೊಳ್ಳದೆ ಇರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ರೈತರ ಬಗೆಗಿನ ಸರ್ಕಾರದ ಅಸಡ್ಡೆಯ ಧೋರಣೆ ಗೋಚರಿಸಿದೆ. ಸರ್ಕಾರವು ಜವಾಬ್ದಾರಿಯುತವಾಗಿ ನಡೆದುಕೊಂಡಿದೆಯೇ? ತನ್ನ ಹೊಣೆ ನಿಭಾಯಿಸಿದೆಯೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಹೈನುಗಾರಿಕೆ ಪ್ರೋತ್ಸಾಹಧನವನ್ನೂ 8-10 ತಿಂಗಳಿನಿಂದ ನೀಡಿಲ್ಲ. ಗ್ಯಾರಂಟಿಗಳ ಅನುಷ್ಠಾನದ ಆತುರದಲ್ಲಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದು ಅವರು ತಿಳಿಸಿದರು.‌

ಸಿಎಂ ಒಳಗೊಂಡಂತೆ ಸಚಿವರು ಕರ್ನಾಟಕ ಸರ್ಕಾರ, ಕರ್ನಾಟಕದ ಅಭಿವೃದ್ಧಿ ದೇಶಕ್ಕೇ ಮಾದರಿ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಒಬ್ಬರು ಕಾಂಗ್ರೆಸ್ ನಾಯಕರು ಅಸಾಧ್ಯವಾದುದನ್ನು ನಾವು ಸಾಧಿಸಿ ತೋರಿಸಿದ್ದೇವೆ ಎನ್ನುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಈ ಸರ್ಕಾರದ ವೈಫಲ್ಯಗಳನ್ನು ತೆರೆದಿಡುವುದು ನಮ್ಮ ಕರ್ತವ್ಯವೂ ಹೌದು ಎಂದು ನುಡಿದರು.‌

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನ್ನು ಕೇಳಿದರೆ, ಗ್ಯಾರಂಟಿಯೇ ಈ ರಾಜ್ಯದ ಅಭಿವೃದ್ಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಗ್ಯಾರಂಟಿಗೆ ಪ್ರಚಾರ ಕೊಟ್ಟು, ಅದರ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರದ ಜತೆ ಸಂಘರ್ಷದ ಹಾದಿ

ಕೇಂದ್ರ ಸರ್ಕಾರದ ಜತೆ ಸಂಘರ್ಷದ ಹಾದಿಯನ್ನು ತೆಗೆದುಕೊಂಡಿರುವುದೇ ಈ ಸರ್ಕಾರದ ಸಾಧನೆಯಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವುದು, ಗೂಬೆ ಕೂರಿಸುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆದಿಯಾಗಿ ಎಲ್ಲರೂ ಎಲ್ಲ ವಿಚಾರದಲ್ಲೂ ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡು ಕೇಂದ್ರ ಸರ್ಕಾರದತ್ತ ಯಶಸ್ವಿಯಾಗಿ ಬೊಟ್ಟು ಮಾಡುತ್ತಾ ಬಂದಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.

ಬೆಲೆ ಏರಿಕೆಯ ಕೊಡುಗೆಯನ್ನು ರಾಜ್ಯ ಸರಕಾರ ಜನರಿಗೆ ಕೊಟ್ಟಿದೆ. ಸ್ಟ್ಯಾಂಪ್ ಪೇಪರ್ ದರ ಹೆಚ್ಚಳ, ವಿದ್ಯುತ್ ದರ ಏರಿಕೆ, ಪಹಣಿ ಪತ್ರ ಶುಲ್ಕ ಏರಿಕೆ ಮಾಡಿದ್ದಾರೆ. ರೈತರು ಟ್ರಾನ್ಸ್‍ಫಾರ್ಮರ್ ಪಡೆಯಲು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ಇದ್ದಾಗ 25 ಸಾವಿರ ಕಟ್ಟಿದರೆ ಸಾಕಿತ್ತು. ಈಗ ಟಿಸಿ ಪಡೆಯಲು 2.5 ಲಕ್ಷದಿಂದ 3 ಲಕ್ಷ ಖರ್ಚು ಮಾಡಬೇಕಾದ ಪರಿಸ್ಥಿತಿಯನ್ನು ರಾಜ್ಯ ಸರಕಾರ ತಂದಿದೆ. ಇದೊಂದು ನೀಚ ನಿರ್ಧಾರ ಎಂದು ಟೀಕಿಸಿದರು. ಬರಗಾಲದ ಸಂದರ್ಭದಲ್ಲೂ ರಾಜ್ಯ ಸರಕಾರವು ರೈತವಿರೋಧಿ ಎಂದು ಸಾಬೀತಾಗಿದೆ ಎಂದರು.

ಸುಪ್ರೀಂ ಕೋರ್ಟ್ ಆದೇಶವಿದೆ ಎಂದು ಹೇಳಿಕೊಂಡು ತನ್ನ ಬೇಳೆ ಬೇಯಿಸಿಕೊಳ್ಳಲು ತಮಿಳುನಾಡಿಗೆ ಯಥೇಚ್ಛವಾಗಿ ನೀರು ಬಿಟ್ಟಿದ್ದಾರೆ. ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ತಮಿಳುನಾಡಿಗೆ ನೀರು ಬಿಟ್ಟು ಬೆಳೆದು ನಿಂತ ಬೆಳೆಗೆ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿತ್ತು. ಹೋರಾಟ ಮಾಡಿದ ರೈತರನ್ನು ಜೈಲಿಗೆ ಅಟ್ಟುವ ಕೆಲಸ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುವ ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದರು.

ಇದನ್ನೂ ಓದಿ: 2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

ಫಲಿತಾಂಶ ಬಳಿಕ ಹಣೆಬರಹ ಗೊತ್ತಾಗುತ್ತೆ

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಈ ಸರ್ಕಾರದ ಹಣೆಬರಹ ಗೊತ್ತಾಗಲಿದೆ. ಮೋದಿಜೀ ಅವರ ಮೋದಿ ಗ್ಯಾರಂಟಿ ಬಗ್ಗೆ ಜನತೆ ಭರವಸೆ ಇಟ್ಟು ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸರಕಾರವು ಅಭಿವೃದ್ಧಿಯ ಕಡೆ ಗಮನ ಕೊಡಬೇಕು; ಕಾನೂನು- ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಉಪಸ್ಥಿತರಿದ್ದರು.

Continue Reading
Advertisement
cisf soldier death raichur
ಕ್ರೈಂ3 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್9 mins ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್11 mins ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ34 mins ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ46 mins ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್48 mins ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Rohit Sharma
ಕ್ರೀಡೆ48 mins ago

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

corona virus wave in singapore
ಪ್ರಮುಖ ಸುದ್ದಿ1 hour ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

KKR vs SRH
ಕ್ರೀಡೆ1 hour ago

KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌

ISIS Terrorists
ದೇಶ1 hour ago

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌