Narendra Modi: ಕಾಂಗ್ರೆಸ್‌ ಪ್ರಣಾಳಿಕೆ ಮುಸ್ಲಿಂ ಲೀಗ್‌ ಚಿಂತನೆಯ ಪ್ರತಿಬಿಂಬ; ಮೋದಿ ವಾಗ್ದಾಳಿ - Vistara News

Lok Sabha Election 2024

Narendra Modi: ಕಾಂಗ್ರೆಸ್‌ ಪ್ರಣಾಳಿಕೆ ಮುಸ್ಲಿಂ ಲೀಗ್‌ ಚಿಂತನೆಯ ಪ್ರತಿಬಿಂಬ; ಮೋದಿ ವಾಗ್ದಾಳಿ

Narendra Modi: ಕಾಂಗ್ರೆಸ್‌ ಹೊರ ತಂದಿರುವ ಪ್ರಣಾಳಿಕೆ ವಿರುದ್ಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ʼʼಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ದಶಕಗಳ ಹಿಂದಿನದು. ಈಗ ಉಳಿದುಕೊಂಡಿರುವ ಪಕ್ಷವು ಭಾರತದ ನಿರೀಕ್ಷೆಗಳನ್ನು ಈಡೇರಿಸುವಂಥದ್ದಲ್ಲ. ಇತ್ತೀಚೆಗೆ ಬಿಡುಗಡೆಯಾದ ಕಾಂಗ್ರೆಸ್‌ ಪ್ರಣಾಳಿಕೆಯಿಂದ ಇದು ಸ್ಪಷ್ಟವಾಗಿದೆ. ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆʼʼ ಎಂರು ದು ಅವರು ಪ್ರದೇಶದ ಸಹರಾನ್‌ಪುರದಲ್ಲಿ ಚುನಾವಣಾ ರ‍್ಯಾಲಿ ಟೀಕಿಸಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಲೋಕಸಭಾ ಚುನಾವಣೆ (Lok Sabha Election)ಗೆ ಇನ್ನು ಕೆಲವೇ ದಿನಗಳು ಬಾಕಿ. ಹೀಗಾಗಿ ರಾಜಕೀಯ ಪಕ್ಷಗಳು ಪ್ರಚಾರ, ಪ್ರಣಾಳಿಕೆ ಬಿಡುಗಡೆ ಮುಂತಾದ ಬಿರುಸಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಶನಿವಾರ (ಏಪ್ರಿಲ್‌ 6) ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ʼʼಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ದಶಕಗಳ ಹಿಂದಿನದು. ಈಗ ಉಳಿದುಕೊಂಡಿರುವ ಪಕ್ಷವು ಭಾರತದ ನಿರೀಕ್ಷೆಗಳನ್ನು ಈಡೇರಿಸುವಂಥದ್ದಲ್ಲ. ಇತ್ತೀಚೆಗೆ ಬಿಡುಗಡೆಯಾದ ಕಾಂಗ್ರೆಸ್‌ ಪ್ರಣಾಳಿಕೆಯಿಂದ ಇದು ಸ್ಪಷ್ಟವಾಗಿದೆ. ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆʼʼ ಎಂದು ಅವರು ಟೀಕಿಸಿದ್ದಾರೆ.

ʼʼಕಾಂಗ್ರೆಸ್‌ ಪ್ರಣಾಳಿಕೆ ಸುಳ್ಳಿನ ಕಂತೆಯಾಗಿದ್ದು, ಪ್ರತಿಯೊಂದು ಪುಟವೂ ಭಾರತವನ್ನು ಒಡೆಯುವ ಪ್ರಯತ್ನದಂತಿದೆ. ಈ ಮುಸ್ಲಿಂ ಲೀಗ್ ಪ್ರಣಾಳಿಕೆಯ ಉಳಿದ ಭಾಗಗಳಲ್ಲಿ ಎಡಪಂಥೀಯ ಧೋರಣೆ ಪ್ರಾಬಲ್ಯ ಸಾಧಿಸಿದೆʼʼ ಎಂದು ಹೇಳಿದ್ದಾರೆ. ʼʼಬಿಜೆಪಿ ಸರ್ಕಾರ ಯಾವುದೇ ತಾರತಮ್ಯವಿಲ್ಲದೆ ಕೆಲಸ ಮಾಡುತ್ತಿದೆ. ಸರ್ಕಾರದ ಯೋಜನೆಗಳು ಪ್ರತಿಯೊಂದು ವರ್ಗ, ಪ್ರತಿ ಜಾತಿ ಮತ್ತು ಎಲ್ಲರಿಗೂ ತಲುಪಬೇಕು ಎಂಬುದು ನಮ್ಮ ಆಲೋಚನೆ” ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.

ದೇಶಕ್ಕಾಗಿ ಮುಡಿಪು

ʼʼನನ್ನ ಪ್ರತಿ ಕ್ಷಣವನ್ನು ದೇಶಕ್ಕಾಗಿ, ಜನರ ಸೇವೆಗಾಗಿ ಸಮರ್ಪಿಸಿದ್ದೇನೆ. ನಿಮ್ಮ ಕನಸುಗಳನ್ನು ಈಡೇರಿಸುವುದೇ ನನ್ನ ಆದ್ಯತೆʼʼ ಎಂದು ಅವರು ವಾಗ್ದಾನ ನೀಡಿದ್ದಾರೆ. ʼʼಬಡವರಿಗೆ ಬಿಜೆಪಿ ಪಡಿತರ ನೀಡಿದೆ. ಇದನ್ನು ಮುಂದಿನ 5 ವರ್ಷ ಕೂಡ ಮುಂದುವರಿಸುವುದಾಗಿ ನಾವು ಭರವಸೆ ನೀಡುತ್ತೇವೆ. ಎಲ್ಲ ಬಡವರಿಗೆ ಮನೆ, ಗ್ಯಾಸ್ ಸಂಪರ್ಕ ನೀಡಲಾಗಿದ್ದು, ಎಲ್ಲ ಮನೆಗಳಿಗೂ ನಲ್ಲಿ ನೀರು ನೀಡುತ್ತಿದ್ದೇವೆ. ಅಷ್ಟೇ ಅಲ್ಲ, ನಾವು ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ತಂದಿದ್ದೇವೆ. ಮುಸ್ಲಿಂ ಮಹಿಳೆಯರು ಮಾತ್ರವಲ್ಲ, ಇಡೀ ಮುಸ್ಲಿಂ ಸಮುದಾಯವೂ ಸಹ ಇದನ್ನು ಸ್ವಾಗತಿಸಿದೆʼʼ ಎಂದು ಮೋದಿ ಅಭಿಪ್ರಾಯಪಟ್ಟರು.

“ನನ್ನ ಧೈರ್ಯಶಾಲಿ ಹೆಣ್ಣು ಮಕ್ಕಳಿಗೆ ಈ ಹಿಂದೆ ಸೈನ್ಯಕ್ಕೆ ಸೇರಲು ಸಾಧ್ಯವಾಗಿರಲಿಲ್ಲ. ನಾನು ಅದಕ್ಕೆ ಅವಕಾಶ ಮಾಡಿಕೊಟ್ಟೆ. ಸೈನಿಕ ಶಾಲೆಗಳ ಬಾಗಿಲು ತೆರೆದೆ. ನಾವು ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆಯನ್ನು ಖಚಿತಪಡಿಸಿದ್ದೇವೆ ಮತ್ತು ಶಾಸಕಾಂಗಗಳಲ್ಲಿ ನಮ್ಮ ತಾಯಂದಿರು ಮತ್ತು ಹೆಣ್ಣುಮಕ್ಕಳಿಗೆ ಮೀಸಲಾತಿಗಾಗಿ ಕಾನೂನನ್ನು ಅಂಗೀಕರಿಸಿದ್ದೇವೆ. ಸೈಕಲ್ ಸವಾರಿ ಮಾಡಲು ಸಾಧ್ಯವಾಗದ ನಮ್ಮ ಹಳ್ಳಿಗಳಲ್ಲಿ ಮಹಿಳೆಯರು ಈಗ ಡ್ರೋನ್‌ಗಳನ್ನು ಹಾರಿಸುತ್ತಿದ್ದಾರೆ ಮತ್ತು ಇಸ್ರೋ ಯೋಜನೆಗಳನ್ನು ಸಹ ಮಹಿಳೆಯರು ನಿರ್ವಹಿಸುತ್ತಿದ್ದಾರೆ ಎಂಬ ಬಗ್ಗೆ ನನಗೆ ಹೆಮ್ಮೆ ಇದೆ” ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಪ್ರಕಟ; ಉದ್ಯೋಗ, 1 ಲಕ್ಷ ರೂ. ಸೇರಿ ಏನೆಲ್ಲ ಗ್ಯಾರಂಟಿ?

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಏನಿದೆ?

ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಇದೇ ಮಾದರಿಯಲ್ಲಿ ಪ್ರಣಾಳಿಕೆ ಘೋಷಿಸಿದೆ. ಪಂಚ ನ್ಯಾಯ ತತ್ವದಲ್ಲಿ ಯುವಕರಿಗಾಗಿ ಯುವ ನ್ಯಾಯ, ಮಹಿಳೆಯರಿಗೆ ನಾರಿ ನ್ಯಾಯ, ರೈತರಿಗಾಗಿ ಕಿಸಾನ್‌ ನ್ಯಾಯ, ಕಾರ್ಮಿಕರಿಗಾಗಿ ಶ್ರಮಿಕ್‌ ನ್ಯಾಯ ಹಾಗೂ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯ ನೀಡುವ ಹಿಸ್ಸೇದಾರಿ ನ್ಯಾಯ ಎಂಬ ಐದು ಘೋಷಣೆಗಳನ್ನು ಕಾಂಗ್ರೆಸ್‌ ಮಾಡಿದೆ. ಅಷ್ಟೇ ಅಲ್ಲ, ಧಾರ್ಮಿಕ ಹಾಗೂ ಭಾಷಾ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ವಿಶೇಷ ಕೊಡುಗೆಗಳನ್ನು ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Lok Sabha Election Result 2024 Live: ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಲಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ನರೇಂದ್ರ ಮೋದಿ ಹ್ಯಾಟ್ರಿಕ್‌ ಬಾರಿಸುವರೋ ಇಲ್ಲವೇ ಇಂಡಿಯಾ ಒಕ್ಕೂಟ ಮುನ್ನಡೆ ಪಡೆಯುವುದೋ ಎಂಬ ಚರ್ಚೆ, ನಿರೀಕ್ಷೆ, ಕುತೂಹಲ ಹೆಚ್ಚಾಗಿದೆ. ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.

VISTARANEWS.COM


on

Lok Sabha Election Result 2024 Live
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆ ಫಲಿತಾಂಶಕ್ಕೆ (Lok Sabha Election Result 2024 Live) ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ (ಜೂನ್‌ 4) ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಪ್ರತಿಕ್ಷಣದ ಮಾಹಿತಿಯು ಇಲ್ಲಿ ಲಭ್ಯವಾಗಲಿದೆ.

ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Continue Reading

ಪ್ರಮುಖ ಸುದ್ದಿ

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

Bagalkot Lok Sabha Constituency: ಬಿಜೆಪಿಯ ಪಿ.ಸಿ. ಗದ್ದಿಗೌಡರ್‌ ಅವರು 2004ರಿಂದಲೂ ಬಾಗಲಕೋಟೆಯ ಸಂಸದರಾಗಿದ್ದಾರೆ. ಇವರು ಈಗ ಸತತ ಐದನೇ ಬಾರಿಗೆ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಇನ್ನು, ಸಂಯುಕ್ತಾ ಪಾಟೀಲ್‌ ಅವರು ಯುವ ನಾಯಕಿಯಾಗಿದ್ದು, ತಂದೆ ಶಿವಾನಂದ್‌ ಪಾಟೀಲ್‌ ಅವರ ಬಲದಿಂದ ಗೆಲುವು ಸಾಧಿಸುವ ಛಲದೊಂದಿಗೆ ಮುನ್ನುಗ್ಗಿದ್ದಾರೆ. ಇಲ್ಲಿ ಅನುಭವ ವರ್ಸಸ್‌ ಉತ್ಸಾಹ ಎಂಬಂತಾಗಿದೆ.

VISTARANEWS.COM


on

Bagalkot Lok Sabha Constituency
Koo

ಬಾಗಲಕೋಟೆ: 2004ರಿಂದಲೂ ಬಾಗಲಕೋಟೆ ಲೋಕಸಭೇ ಕ್ಷೇತ್ರವು (Bagalkot Lok Sabha Constituency) ಬಿಜೆಪಿಯ ಭದ್ರಕೋಟೆಯಾಗಿದ್ದು, ಸತತ ಐದನೇ ಬಾರಿಗೆ ಗೆಲ್ಲುವ ಉತ್ಸಾಹದೊಂದಿಗೆ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ (PC Gaddigoudar) ಕಣಕ್ಕಿಳಿದಿದ್ದಾರೆ. ಇನ್ನು, ಕಾಂಗ್ರೆಸ್‌ನಿಂದ ಯುವ ನಾಯಕಿ, ಸಚಿವ ಶಿವಾನಂದ್‌ ಪಾಟೀಲ್‌ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ (Samyukta Patil) ಅವರು ಸ್ಪರ್ಧಿಸಿದ್ದು, ಅನುಭವಿ ವರ್ಸಸ್‌ ಯುವ ನಾಯಕಿ ನಡುವಿನ ಸಮರಕ್ಕೆ ಕ್ಷೇತ್ರ ಸಾಕ್ಷಿಯಾಗಿದೆ. ಹಾಗಾಗಿ, ಸಹಜವಾಗಿಯೇ ಫಲಿತಾಂಶದ ಮೇಲೆ ಎಲ್ಲರ ಗಮನವಿದೆ.

ಪಿ.ಸಿ.ಗದ್ದಿಗೌಡರ್‌ ಅವರು 2004ರಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿಯ ಪತಾಕೆ ಹಾರಿಸಿದ್ದು, ಅದಾದ ನಂತರ ಅವರು ತಿರುಗಿ ನೋಡಿಲ್ಲ. ಕ್ಷೇತ್ರದ ಜನರ ಜತೆ ಒಡನಾಟ, ಅಭಿವೃದ್ಧಿ ಯೋಜನೆಗಳು, ಸರಳತೆಯಿಂದ ಮನೆಮಾತಾಗಿರುವ ಇವರಿಗೆ ನರೇಂದ್ರ ಮೋದಿ ಅವರ ಅಲೆಯ ಕೃಪಾಕಟಾಕ್ಷವೂ ಇದೆ. ಅದರಲ್ಲೂ, ಸಂಯುಕ್ತಾ ಪಾಟೀಲ್‌ ಅವರು ಹೊರಗಿನವರು ಎಂಬ ಭಾವನೆ ಜನರಲ್ಲಿರುವುದು ಕೂಡ ಗದ್ದಿಗೌಡರ್‌ ಅವರಿಗೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮತ್ತೊಂದೆಡೆ, ಸಂಯುಕ್ತಾ ಪಾಟೀಲ್‌ ಅವರು ಬಾಗಲಕೋಟೆ ಕ್ಷೇತ್ರದ ಆಡಳಿತ ವಿರೋಧಿ ಅಲೆ, ತಂದೆ ಶಿವಾನಂದ್‌ ಪಾಟೀಲರ ಬಲವಿದೆ. ಪ್ರಚಾರದ ವೇಳೆ ಯುವಕರು, ಅದರಲ್ಲೂ, ಯುವತಿಯರನ್ನು ಸೆಳೆಯುವಲ್ಲಿ ಸಂಯುಕ್ತಾ ಪಾಟೀಲ್‌ ಅವರು ಯಶಸ್ವಿಯಾಗಿದ್ದಾರೆ. ಹೊರಗಿನವಳು ಎಂಬ ಮನೋಭಾವವನ್ನು ತೊಡೆದುಹಾಕಿ, ನಾನೂ ನಿಮ್ಮ ಮನೆಮಗಳು ಎಂಬ ಭಾವನೆಯು ಜನರಲ್ಲಿ ಮೂಡುವಂತೆ ಮಾಡಿದ್ದಾರೆ. ಆ ಮೂಲಕ, ಬಾಗಲಕೋಟೆಯಲ್ಲಿ ಸಂಯುಕ್ತಾ ಪಾಟೀಲ್‌ ಅವರು ಪಿ.ಸಿ.ಗದ್ದಿಗೌಡರ್‌ ಅವರಿಗೆ ತೀವ್ರ ಪೈಪೋಟಿ ನೀಡಿದ್ದಾರೆ.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ್‌ ಅವರ ವಿರುದ್ಧ 1.68 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ಅಲೆಯನ್ನು ಸದ್ಬಳಕೆ ಮಾಡಿಕೊಂಡಿದ್ದ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ನ ಅಜಯ್‌ ಕುಮಾರ್‌ ಸರನಾಯ್ಕ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಬಾರಿಸಿದ್ದರು.

ಇದನ್ನೂ ಓದಿ: Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

Continue Reading

ಧಾರವಾಡ

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Dharwad Lok Sabha Constituency: ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ಅವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿ, ಐದನೇ ಬಾರಿಗೆ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಇವರಿಗೆ ಹೊಸಮುಖವಾದ ವಿನೋದ್ ಅಸೂಟಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆಯೊಡ್ಡಿದ್ದಾರೆ. ತೀವ್ರ ಪೈಪೋಟಿ, ಪ್ರತಿಷ್ಠೆಯ ಕಣವಾದಲ್ಲಿ ಧಾರವಾಡದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

VISTARANEWS.COM


on

Dharwad Lok Sabha Constituency
Koo

ಧಾರವಾಡ: ಪೇಡಾಗಳಿಗೆ ಹೆಸರುವಾಸಿಯಾಗಿರುವ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ (Dharwad Lok Sabha Constituency) ಸತತ ನಾಲ್ಕು ಚುನಾವಣೆಗಳಲ್ಲಿ ಗೆಲುವು ಸಾಧಿಸಿ, ಐದನೇ ಬಾರಿಗೆ ಗೆದ್ದು ದಾಖಲೆ ಸೃಷ್ಟಿಸಲು ಹಂಬಲಿಸುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರಿಗೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವಿನೋದ್‌ ಅಸೂಟಿ (Vinod Asooti) ಅವರು ಸವಾಲೊಡ್ಡಿದ್ದಾರೆ. ಹಾಗಾಗಿ, ಈ ಬಾರಿ ಧಾರವಾಡ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಕದನ ಏರ್ಪಟ್ಟಿದ್ದು, ವಿಜಯದ ಮಾಲೆ ಯಾರ ಕೊರಳಿಗೆ ಎಂಬ ಕುತೂಹಲ ಹೆಚ್ಚಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಲೆ, ಧಾರವಾಡ ಕ್ಷೇತ್ರದಲ್ಲಿ ಪ್ರಬಲ ಸಮುದಾಯಗಳ ಬೆಂಬಲ, ಕೇಂದ್ರ ಸಚಿವರಾಗಿ ಕ್ಷೇತ್ರಕ್ಕೆ ತಂದಿರುವ ಅಭಿವೃದ್ಧಿ ಯೋಜನೆಗಳು, ವಂದೇ ಭಾರತ್‌ ರೈಲು ಸೇರಿ ಹಲವು ಮೂಲ ಸೌಕರ್ಯಗಳು ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗುವ ಲಕ್ಷಣಗಳಿವೆ. ಕಳೆದ ನಾಲ್ಕು ಬಾರಿ ಗೆದ್ದು, ಕ್ಷೇತ್ರದ ಜನರ ಬೆಂಬಲ, ವಿಶ್ವಾಸ ಗಳಿಸಿರುವ ಪ್ರಲ್ಹಾದ್‌ ಜೋಶಿ ಅವರು ಸತತ ಐದನೇ ಬಾರಿಗೆ ಜಯಿಸುವ ವಿಶ್ವಾಸದಲ್ಲಿದ್ದಾರೆ. ‌

Pralhad Joshi

ಗದಗ ಜಿಲ್ಲೆ ಶಿರಹಟ್ಟಿಯ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಅವರ ವಿರೋಧದಿಂದಾಗಿ ಪ್ರಲ್ಹಾದ್‌ ಜೋಶಿ ಅವರಿಗೆ ತುಸು ಹಿನ್ನಡೆಯುಂಟಾಗಿತ್ತು. ಪಕ್ಷೇತರರಾಗಿ ದಿಂಗಾಲೇಶ್ವರ ಸ್ವಾಮೀಜಿ ಅವರು ಕಣಕ್ಕೂ ಇಳಿದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರು ಚುನಾವಣೆಯಿಂದ ಹಿಂದೆ ಸರಿದರೂ ಅವರ ಬೆಂಬಲವು ಕಾಂಗ್ರೆಸ್‌ ಅಭ್ಯರ್ಥಿಗಿದೆ. ಇದು ಜೋಶಿ ಅವರಿಗೆ ಹಿನ್ನಡೆ ತಂದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.

ಖಾತೆ ತೆರೆಯುವರೇ ವಿನೋದ್?

2018ರಲ್ಲಿ ನವಲಗುಂದ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ವಿನೋದ್ ಅಸೂಟಿಯವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈ ಬಾರಿ ಕಾಂಗ್ರೆಸ್‌ ಲಿಂಗಾಯತರ ಬದಲು ಕುರುಬ ಸಮುದಾಯದ ವಿನೋದ್ ಅಸೂಟಿ ಅವರಿಗೆ ಟಿಕೆಟ್‌ ನೀಡಿದೆ. ಇದು ಕ್ಷೇತ್ರದಲ್ಲಿ ಹಿಂದುಳಿದವರ ಮತ ಸೆಳೆಯಲು ಕಾರಣವಾಗಲಿದೆ ಎಂಬುದು ಪಕ್ಷದ ರಣತಂತ್ರವಾಗಿದೆ. ಗ್ಯಾರಂಟಿ ಯೋಜನೆಗಳಂತೂ ಸಕಾರಾತ್ಮಕ ಪ್ರಭಾವವನ್ನೇ ಬೀರಿವೆ.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪ್ರಲ್ಹಾದ್‌ ಜೋಶಿ ಅವರು ಕಾಂಗ್ರೆಸ್‌ನ ವಿನಯ್‌ ಕುಲಕರ್ಣಿ ಅವರ ವಿರುದ್ಧ 2.05 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲೂ ಪ್ರಲ್ಹಾದ್‌ ಜೋಶಿ ಅವರೇ ಜಯಿಸಿದ್ದರು. ಇವರು ವಿನಯ್‌ ಕುಲಕರ್ಣಿ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರಗಿಂದ ಜಯಭೇರಿ ಬಾರಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದ್ದರು. ನರೇಂದ್ರ ಮೋದಿ ಅವರ ಅಲೆಯೂ ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗಿತ್ತು.

ಇದನ್ನೂ ಓದಿ: Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Continue Reading

ವಿಜಯಪುರ

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

Vijaypur Lok Sabha Constituency: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ನಾಲ್ಕನೇ ಬಾರಿಗೆ ವಿಜಯ ಪತಾಕೆ ಹಾರಿಸಲು ರಮೇಶ್‌ ಜಿಗಜಿಣಗಿ ಸಜ್ಜಾಗಿದ್ದಾರೆ. ಇವರಿಗೆ ಪ್ರಬಲ ಬಲಗೈ ಸಮಾಜದ ಮುಖಂಡ ಪ್ರೊ. ರಾಜು ಆಲಗೂರ ಅವರು ಸೆಡ್ಡು ಹೊಡೆದಿದ್ದು, ಗೆಲುವು ಯಾರಿಗೆ ಸಿಗಲಿದೆ ಎಂಬುದಕ್ಕೆ ಇನ್ನೂ ಕೆಲವು ಗಂಟೆ ಕಾಯಲಬೇಕಿದೆ. ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿತ್ತು.

VISTARANEWS.COM


on

Vijaypur Lok Sabha Constituency
Koo

ವಿಜಯಪುರ: ಗುಮ್ಮಟಗಳಿಗೆ ಪ್ರಸಿದ್ಧವಾದ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಎದುರಾಗಿದೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ (Vijaypur Lok Sabha Constituency) ಬಿಜೆಪಿಯಿಂದ ಸತತ ನಾಲ್ಕನೇ ಬಾರಿಗೆ ರಮೇಶ್‌ ಜಿಗಜಿಣಗಿ (Ramesh Jigajinagi) ಕಣಕ್ಕಿಳಿದಿದ್ದರೆ, ಪ್ರಯೋಗಕ್ಕೆ ಮುಂದಾಗಿರುವ ಕಾಂಗ್ರೆಸ್‌, ಬಲಗೈ ಸಮಾಜದ ಪ್ರೊ.ರಾಜು ಆಲಗೂರ (Raju Algur) ಅವರನ್ನು ಕಣಕ್ಕಿಳಿಸಿದೆ. ಹಾಗಾಗಿ, ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಯಾರು ಗೆಲುವಿನ ಮಾಲೆಗೆ ಕೊರಳೊಡ್ಡಲಿದ್ದಾರೆ ಎಂಬ ಕುತೂಹಲ ಜಾಸ್ತಿಯಾಗಿದೆ.

ಜಿಗಜಿಣಗಿಗೆ ತೀವ್ರ ಪೈಪೋಟಿ

ರಮೇಶ್‌ ಜಿಗಜಿಣಗಿ ಅವರು ಕಳೆದ ಮೂರು ಚುನಾವಣೆಗಳಲ್ಲಿ ಗೆಲುವು ಸಾಧಿಸಿ ವಿಜಯಪುರ ಕ್ಷೇತ್ರದ ಜನರ ನಾಡಿಮಿಡಿತವನ್ನು ಅರಿತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ ಎಂಬುದಾಗಿ ಹೇಳುತ್ತ ಪ್ರಚಾರ ಮಾಡಿರುವ ಅವರಿಗೆ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದವರ ಮತಗಳ ಬೆಂಬಲ ಇದೆ. ನರೇಂದ್ರ ಮೋದಿ ಅವರ ಅಲೆ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರೊಂದಿಗಿನ ಮುನಿಸು ಶಮನವಾಗಿರುವುದು ರಮೇಶ್‌ ಜಿಗಜಿಣಗಿ ಅವರಿಗೆ ಪ್ಲಸ್‌ ಪಾಯಿಂಟ್‌ ಆಗಿದೆ.

Mp Ramesh Jigajinagi

ಆದರೆ, ಸತತ ಮೂರು ಬಾರಿ ಇವರೇ ಸಂಸದರಾಗಿದ್ದು, ಕ್ಷೇತ್ರದ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ ಎಂಬ ಕೊರಗು ಜನರಲ್ಲಿದೆ. ಆಡಳಿತ ವಿರೋಧಿ ಅಲೆಯೂ ತುಸು ಹೆಚ್ಚೇ ಇದೆ. ಅವರು ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿ ಅನುಕಂಪ ಗಿಟ್ಟಿಸಿಕೊಳ್ಳಲು ಮುಂದಾಗಿದ್ದು ಕೂಡ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿರುವುದೂ ಜಿಗಜಿಣಗಿ ಅವರಿಗೆ ಹಿನ್ನಡೆ ತರಲಿದೆ ಎಂದೇ ಹೇಳಲಾಗುತ್ತಿದೆ.

ಫಲ ಕೊಡುವುದೇ ಕಾಂಗ್ರೆಸ್‌ ಪ್ರಯೋಗ?

ಕಳೆದ ಮೂರು ಚುನಾವಣೆಗಳಲ್ಲೂ ಬಂಜಾರ ಸಮುದಾಯದ ಅಭ್ಯರ್ಥಿಗೆ ಟಿಕೆಟ್‌ ನೀಡಿದ್ದ ಕಾಂಗ್ರೆಸ್‌ ಈ ಬಾರಿ ಬಲಗೈ ಸಮಾಜದ ಪ್ರೊ. ರಾಜು ಆಲಗೂರ ಅವರಿಗೆ ಟಿಕೆಟ್‌ ನೀಡುವ ಮೂಲಕ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಕ್ಷೇತ್ರದಲ್ಲಿರುವ ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡಿರುವ ರಾಜು ಆಲಗೂರ ಅವರಿಗೆ ಸಚಿವ ಎಂ.ಬಿ.ಪಾಟೀಲ್‌ ಅವರ ಬೆಂಬಲ, ಸಹಕಾರ ಇದೆ. ಗ್ಯಾರಂಟಿ ಯೋಜನೆಗಳನ್ನೂ ಕ್ಷೇತ್ರದ ಜನ ಮೆಚ್ಚಿಕೊಂಡಿದ್ದಾರೆ. ಹಾಗಾಗಿ, ಚುನಾವಣೆ ಫಲಿತಾಂಶವು ಹೆಚ್ಚಿನ ಕುತೂಹಲ ಕೆರಳಿಸಿದೆ.

2019, 2014ರ ಫಲಿತಾಂಶ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ರಮೇಶ್‌ ಜಿಗಜಿಣಗಿ ಅವರು ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಇವರು ತಮ್ಮ ಪ್ರತಿಸ್ಪರ್ಧಿ ಸುನೀತಾ ದೇವಾನಂದ ಚೌಹಾಣ್‌ ಅವರ ವಿರುದ್ಧ 2.58 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಆದರೂ, ರಮೇಶ್‌ ಜಿಗಜಿಣಗಿ ಅವರು ಕಾಂಗ್ರೆಸ್‌ನ ಪ್ರಕಾಶ್‌ ರಾಥೋಡ್‌ ಅವರ ವಿರುದ್ಧ 69 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Continue Reading
Advertisement
K Kavitha
ದೇಶ1 min ago

K Kavitha: ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ ಜುಲೈ 3ರವರೆಗೆ ವಿಸ್ತರಣೆ; ಸಾಕ್ಷ್ಯ ನಾಶದ ಆರೋಪ

MS Dhoni Europe Trip
ಕ್ರೀಡೆ11 mins ago

MS Dhoni Europe Trip: ಐಪಿಎಲ್​ ಮುಗಿಸಿ ಕುಟುಂಬದ ಜತೆ ಯುರೋಪ್​ಗೆ ಪ್ರವಾಸ ಹೋದ ಧೋನಿ

Lok Sabha Election Result 2024 Live
ದೇಶ46 mins ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Job Alert
ಉದ್ಯೋಗ55 mins ago

Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Viral News
ವೈರಲ್ ನ್ಯೂಸ್55 mins ago

Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

Grantha Lokarpane and award ceremony on June 5 in Bengaluru
ಬೆಂಗಳೂರು59 mins ago

Book Release: ಬೆಂಗಳೂರಿನಲ್ಲಿ ಜೂ. 5ರಂದು ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ

Valmiki Corporation Scam
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಿಎಂ ಸಿದ್ದರಾಮಯಯ್ಯ ನೇರ ಹೊಣೆ ಎಂದ ಎಚ್‌ಡಿಕೆ

T20 World Cup 2024 Prize Money
ಕ್ರೀಡೆ1 hour ago

T20 World Cup 2024 Prize Money: ದಾಖಲೆಯ ಬಹುಮಾನ ಮೊತ್ತ ಘೋಷಿಸಿದ ಐಸಿಸಿ

Bagalkot Lok Sabha Constituency
ಪ್ರಮುಖ ಸುದ್ದಿ2 hours ago

Bagalkot Lok Sabha Constituency: ಬಿಜೆಪಿಯ ಭದ್ರಕೋಟೆ ಭೇದಿಸುವರೇ ಸಂಯುಕ್ತಾ ಪಾಟೀಲ್?

karnataka weather Forecast Putur rain
ಮಳೆ2 hours ago

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌