Praeen Nettaru | ಉಡುಪಿ-ದ.ಕ ಗಡಿಯಲ್ಲಿ ಪ್ರಮೋದ್‌ ಮುತಾಲಿಕ್‌ಗೆ ತಡೆ, ಸರಕಾರದ ಮೇಲೆ ಕೆಂಡಾಮಂಡಲ - Vistara News

ಉಡುಪಿ

Praeen Nettaru | ಉಡುಪಿ-ದ.ಕ ಗಡಿಯಲ್ಲಿ ಪ್ರಮೋದ್‌ ಮುತಾಲಿಕ್‌ಗೆ ತಡೆ, ಸರಕಾರದ ಮೇಲೆ ಕೆಂಡಾಮಂಡಲ

Praveen Nettaru | ಸುಳ್ಯ ತಾಲೂಕಿನ ನೆಟ್ಟಾರಿಗೆ ಭೇಟಿ ನೀಡಲು ಹೊರಟಿದ್ದ ಶ್ರೀರಾಮ ಸೇನೆ ನಾಯಕ ಪ್ರಮೋದ್‌ ಮುತಾಲಿಕ್‌ ಅವರನ್ನು ಉಡುಪಿ-ದ.ಕ. ಗಡಿಯಲ್ಲಿ ತಡೆಯಲಾಗಿದೆ. ಅವರು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ನಿರ್ಬಂಧವಿದೆ.

VISTARANEWS.COM


on

pramod muthalik
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೆಜಮಾಡಿ: ಕೊಲೆಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ, ಸುಳ್ಯದ ನೆಟ್ಟಾರಿನ ಪ್ರವೀಣ್‌ ಅವರ ಮನೆಗೆ ಸಾಂತ್ವನ ಹೇಳಲೆಂದು ಹೊರಟಿದ್ದ ಶ್ರೀರಾಮ ಸೇನೆ ರಾಜ್ಯ ಅಧ್ಯಕ್ಷ  ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗಡಿ ಭಾಗದ ಹೆಜಮಾಡಿಯಲ್ಲಿ ತಡೆಯಲಾಗಿದೆ.

ಪ್ರಮೋದ್‌ ಮುತಾಲಿಕ್‌ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಹೀಗಾಗಿ ಮುತಾಲಿಕ್‌ ಅವರು ಹೆಜಮಾಡಿ ಮೂಲಕ ಜಿಲ್ಲೆ ಪ್ರವೇಶಿಸಲು ಮುಂದಾಗುತ್ತಿದ್ದಂತೆಯೇ ಅವರನ್ನು ತಡೆಯಲಾಯಿತು. ಜುಲೈ 28ರಿಂದ ಈ ನಿಷೇಧ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿ ಇರಲಿದೆ.

ಹೆಜಮಾಡಿ ಟೋಲ್‌ ಗೇಟ್‌ ಬಳಿ ಪೊಲೀಸರು ತಡೆಯುತ್ತಿದ್ದಂತೆಯೇ  ಮುತಾಲಿಕ್‌ ಅವರು ಸ್ಥಳದಲ್ಲೇ ಕುಳಿತು ಪ್ರತಿಭಟನೆ ಮಾಡಿದರು. ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಅವಕಾಶ ಕೋರಿದರಾದರೂ ಯಾರೂ ಅವರ ಕರೆಗೆ ಸ್ಪಂದಿಸಲಿಲ್ಲ. ಕೊನೆಗೆ ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಮರಳಿದರು.

ಪ್ರಮೋದ್‌ ಮುತಾಲಿಕ್‌ ಅವರು ಬಂದರೆ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಉಂಟಾದೀತು ಎಂಬ ಆತಂಕದಲ್ಲಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರು ನಿಷೇಧ ವಿಧಿಸಿದ್ದರು. ದ.ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲೂಕಿನ ಯಾವುದೇ ಭಾಗಕ್ಕೂ ಅವರು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳು ಮತ್ತು ಪ್ರಮೋದ್ ಮುತಾಲಿಕ್ ಅವರ ಹಿಂದಿನ ಪ್ರಚೋದನಾಕಾರಿ ಹೇಳಿಕೆಗಳು ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಿರುವುದನ್ನು ಪರಿಗಣಿಸಿ ನಿಷೇಧ ವಿಧಿಸಲಾಗಿತ್ತು.

ಕಾಂಗ್ರೆಸ್‌ನವರು ಮಾಡಿದ್ರೆ ಸರಿ.. ಇವರು..
ಈ ನಡುವೆ, ಬಿಜೆಪಿ ಸರಕಾರ ತಮಗೆ ನಿರ್ಬಂಧ ವಿಧಿಸಿರುವುದನ್ನು ಮುತಾಲಿಕ್‌ ತೀವ್ರವಾಗಿ ಆಕ್ಷೇಪಿಸಿದ್ದಾರೆ. ಹಿಂದೆ ಕಾಂಗ್ರೆಸ್‌ ಸರಕಾರವಿದ್ದಾಗ ನನಗೆ ಹಲವು ಜಿಲ್ಲೆಗಳಿಗೆ ಪ್ರವೇಶ ಮಾಡುವುದನ್ನು ನಿರ್ಬಂಧಿಸಿದ್ದರು. ಅವರು ಮಾಡಿದ್ರೆ ಏನೋ ತುಷ್ಟೀಕರಣಕ್ಕೆ ಮಾಡುತ್ತಿದ್ದಾರೆ, ಸರಿ ಅನ್ನಬಹುದು. ಆದರೆ, ಹಿಂದೂಗಳ ಮತ ಪಡೆದು ಗೆದ್ದ ಬಿಜೆಪಿ ಸರಕಾರ ಹೀಗೆ ಮಾಡಿದರೆ ಏನು ಹೇಳುವುದು. ಧರ್ಮವಿರೋಧಿಗಳು, ಹಿಂದೂ ವಿರೋಧಿಗಳು  ಇವರುʼʼ ಎಂದು ಆಕ್ಷೇಪಿಸಿದರು.

ಬಿಜೆಪಿ ನಾಯಕರು ನಾಲ್ಕು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದಾರೆ. ಆದರೆ, ದಿನದ 24 ಗಂಟೆಯೂ ಪಕ್ಷಕ್ಕಾಗಿ ದುಡಿಯುವ ಪ್ರವೀಣನಂಥವರು ಒಂದು ಮನೆ ಕೂಡಾ ಕಟ್ಟಿಕೊಳ್ಳಲಾಗದ ಸ್ಥಿತಿಯಲ್ಲಿದ್ದಾರೆ ಎಂದು  ವಾಗ್ದಾಳಿ ನಡೆಸಿದರು ಮುತಾಲಿಕ್‌.

ಹಿಂಜಾವೇ ನಾಯಕ ಆಕ್ರೋಶಕ
ಈ ನಡುವೆ, ಪ್ರಮೋದ್‌ ಮುತಾಲಿಕ್‌ ಅವರ ಪ್ರವೇಶಕ್ಕೆ ತಡೆ ಒಡ್ಡಿದ್ದನ್ನು  ಬೆಳ್ತಂಗಡಿಯ ಮಾಜಿ ಹಿಂದೂ ಜಾಗರಣಾ ವೇದಿಕೆ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಆಕ್ಷೇಪಿಸಿದ್ದಾರೆ.

ʻʻನಾವು ಧರ್ಮದ ರಕ್ಷಣೆಗೆ ಮತ ನೀಡಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದೇವೆ. ನೀವು ಎಲ್ಲಿ ಧರ್ಮ ರಕ್ಷಣೆ ಮಾಡಿದ್ದೀರಿ ಎಂದು ತೋರಿಸಿʼʼ ಎಂದು ತಿಮರೋಡಿ ಸವಾಲು ಹಾಕಿದರು.
ಇದನ್ನೂ ಓದಿ| ‌Praveen Nettaru | ಅಂತಿಮಯಾತ್ರೆ ವೇಳೆ ಲಾಠಿ ಚಾರ್ಜ್‌ ಮಾಡಿದ್ದ ಪಿಎಸ್‌ಐಗಳ ವರ್ಗಾವಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

K Raghupathi Bhat: ಬಂಡಾಯ ಸ್ಪರ್ಧೆ; ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

K Raghupathi Bhat: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿರುವ ಹಿನ್ನೆಲೆಯಲ್ಲಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದೆ.

VISTARANEWS.COM


on

K Raghupathi Bhat
Koo

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿರುವ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ (K Raghupathi Bhat) ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ರಘುಪತಿ ಭಟ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯುವಂತೆ ಸೂಚಿಸಿದರೂ ಸ್ಪರ್ಧೆಗೆ ಮುಂದಾಗಿರುವುದರಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಜಿಲ್ಲಾ ಬಿಜೆಪಿ ಸೂಚಿಸಿತ್ತು. ಹಾಗೆಯೇ ಬಿಜೆಪಿ ಹಿರಿಯ ನಾಯಕರಿಂದಲೂ ಕೂಡ ಮನವರಿಸುವ ಯತ್ನ ನಡೆದಿತ್ತು. ಆದರೆ, ನಾಮಪತ್ರ ಹಿಂದೆ ತೆಗೆದುಕೊಳ್ಳದೆ ಸ್ಪರ್ಧೆಗೆ ರಘುಪತಿ ಭಟ್ ಇಳಿದಿದ್ದಾರೆ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಘುಪತಿ ಭಟ್ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಮನವಿ ಮಾಡಿತ್ತು. 24 ಗಂಟೆ ಒಳಗೆ ಪಕ್ಷದ ಪ್ರಮುಖರಿಗೆ ಉತ್ತರಿಸುವಂತೆ ತಿಳಿಸಲಾಗಿತ್ತು. ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಪಕ್ಷದಿಂದ ರಘಪತಿ ಭಟ್ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ.

ಈ ಬಗ್ಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ಆದೇಶ ಹೊರಡಿಸಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನ ಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಮಾಜಿ ಶಾಸಕ ರಘುಪತಿ ಭಟ್‌ ಅವರಿಗೆ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | Bengaluru News: ಇದು ಎಷ್ಟು ಪರ್ಸೆಂಟ್ ಸರ್ಕಾರ? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

2023ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್​ ಅವರಿಗೆ ಉಡುಪಿ ವಿಧಾನಸಭಾ ಚುನಾವಣೆ ಟಿಕೆಟ್ ಕೈತಪ್ಪಿತ್ತು. ಇದರ ಬೆನ್ನಲ್ಲೇ ಎಂಎಲ್‌ಸಿ ಟಿಕೆಟ್ ಕೂಡ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾಗಿದ್ದ ರಘುಪತಿ ಭಟ್ ಅವರನ್ನು ಉಚ್ಚಾಟನೆ ಮಾಡಲಾಗಿದೆ.

Continue Reading

ಮಳೆ

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

Karnataka Rain : ರಾಜ್ಯಾದ್ಯಂತ ಮಳೆಯು ಚುರುಕುಗೊಂಡಿದ್ದು ಸಾಕಷ್ಟು ಅವಾಂತರವನ್ನು ಸೃಷ್ಟಿಸಿದೆ. ಮಂಗಳೂರಲ್ಲಿ ಭಾರಿ ಮಳೆಗೆ ರಾಜಕಾಲುವೆ ತುಂಬಿ ಹರಿದಿದ್ದು, ರಸ್ತೆ ಕಾಣದೆ ಆಟೋ ಚಾಲಕ ಕಾಲುವೆಗೆ ಉರುಳಿ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮನೆಯ ಚಾವಣಿ ಕುಸಿದು ಬಿದ್ದರೆ, ನಂಜನಗೂಡಲ್ಲಿ ಮನೆಗಳು ಜಲಾವೃತಗೊಂಡಿದೆ. ತುಮಕೂರಿನಲ್ಲಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

VISTARANEWS.COM


on

By

Karnataka Rain
Koo

ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ಭಾರಿ ಮಳೆಗೆ (Karnataka Rain) ರಾಜಕಾಲುವೆಗೆ ಆಟೋ ಉರುಳಿದ್ದು, ಚಾಲಕ ದಾರುಣವಾಗಿ ಮೃತಪಟ್ಟಿದ್ದಾರೆ. ಚಾಲಕ ದೀಪಕ್ (40) ದುರ್ಮರಣ ಹೊಂದಿದವರು. ಶುಕ್ರವಾರ ರಾತ್ರಿ ಸುರಿದ ಮಳೆಗೆ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿತ್ತು. ರಾತ್ರಿ ವೇಳೆ ಅದೇ ರಸ್ತೆಯಲ್ಲಿ ಬಂದ ಚಾಲಕ ದೀಪಕ್‌ ಆಟೋ ಸಮೇತ ರಾಜಕಾಲುವೆ ಉರುಳಿ ಬಿದ್ದಿದ್ದಾರೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿದ್ದ ಕಾರಣ ಈ ಅವಘಡ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ದೀಪಕ್‌ ಬಲಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಜಕಾಲುವೆಗೆ ತಡೆಗೋಡೆ ನಿರ್ಮಿಸದೇ ಇರುವುದೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಮಳೆಗೆ ನೆಲಕ್ಕೆ ಬಿದ್ದ ಮನೆಯ ಚಾವಣಿ

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಸಮೀಪದ ನರಗನಹಳ್ಳಿಯಲ್ಲಿ ರಾತ್ರಿ ಸುರಿದ ಮಳೆಗೆ ಏಕಾಏಕಿ ಮನೆ ಚಾವಣಿ ನೆಲಕ್ಕೆ ಬಿದ್ದಿತ್ತು. ಅದೃಷ್ಟವಶಾತ್ ತಾಯಿ-ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗುಡುಗು ಸಹಿತ ಮಳೆಯ ರಭಸಕ್ಕೆ ಸೀಟು ಪುಡಿ ಪುಡಿಯಾಗಿದೆ. ತಾಯಿ-ಮಗು ಮಲಗಿದ್ದ ಪಕ್ಕದಲ್ಲೇ ಮನೆ ಮೇಲಿನ ಸೀಟು ಬಿದ್ದಿದೆ. ಆನಂದಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದು ಬಿದ್ದಿದ್ದು, ರಾತ್ರಿಯಿಡೀ ಪಕ್ಕದ ಮನೆಯಲ್ಲಿ ವಾಸ ಮಾಡುವಂತಾಯಿತು. ಮನೆ ಕಳೆದುಕೊಂಡ ಕುಟುಂಬ ಕಂಗಲಾಗಿತ್ತು. ಇತ್ತ ಮನೆ ಕುಸಿದರೂ ಸ್ಥಳಕ್ಕೆ ಬಾರದ ಪಂಚಾಯಿತಿ ಸಿಬ್ಬಂದಿ ತಾಲೂಕು ಆಡಳಿತದ ವಿರುದ್ದ ಸ್ಥಳೀಯರು ಕಿಡಿಕಾರಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮಳೆಯ ಅವಾಂತರಕ್ಕೆ 16 ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ತೂಬಗೆರೆ ಹೋಬಳಿಯಲ್ಲಿ ಸಾಕಷ್ಟು ಹಾನಿಯಾಗಿದೆ. ಬುಡ ಸಮೇತ ಮರಗಳು ರಸ್ತೆಗೆ ಬಿದ್ದಿವೆ. ಅಮದಾಜು 80ಕ್ಕೂ ಹೆಚ್ಚು ಮರಗಳು ಧರಗೆ ಉರುಳಿವೆ. ತೂಬಗೆರೆ ಹೋಬಳಿಯಲ್ಲಿ ವಿದ್ಯುತ್ ಕಂಬ ಬಿದ್ದ ಕಾರಣ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಬೆಸ್ಕಾಂ ಸಿಬ್ಬಂದಿ ಬೆಳಗ್ಗೆಯಿಂದಲೂ ಕಂಬಗಳನ್ನು ಸರಿಪಡಿಸುತ್ತಿದ್ದಾರೆ. ಮಳೆಯ ಅವಾಂತರಕ್ಕೆ ವಿದ್ಯುತ್ ಇಲ್ಲದೆ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಇಷ್ಟೆಲ್ಲಾ ಆದರೂ ಕೂಡ ತಾಲೂಕು ಆಡಳಿತ ಸ್ಪಂದಿಸುತ್ತಿಲ್ಲ. ತಹಸೀಲ್ದಾರ್, ಇಓ ಯಾರೂ ಕೂಡ ಭೇಟಿ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆ

ಚಿಕ್ಕಮಗಳೂರಿನ ತರೀಕೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ಕಲ್ಲತ್ತಿಗರಿ ಜಲಪಾತ ಮೈದುಂಬಿ ಹರಿಯುತ್ತಿದೆ. ಮೊನ್ನೆವರೆಗೂ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು. ರಾತ್ರಿ ಸುರಿದ ಒಂದೇ ಮಳೆಗೆ ಕಲ್ಲತ್ತಿಗರಿ ಜಲಪಾತ ಧುಮ್ಮಿಕ್ಕುತ್ತಿದೆ. ಕೆಮ್ಮಣ್ಣುಗುಂಡಿ ಗುಡ್ಡಗಾಡು ತಪ್ಪಲ್ಲಿನಲ್ಲಿ ಭಾರೀ ಮಳೆ ಹಿನ್ನೆಲೆ ಜಲಪಾತ ನೋಡಲು ಪ್ರವಾಸಿಗರ ದಂಡು ಬರುತ್ತಿದೆ.

ತರೀಕೆರೆ ತಾಲೂಕಿನ ತ್ಯಾಗದಬಾಗಿ ಗ್ರಾಮದಲ್ಲಿ ಇದ್ದಕ್ಕಿದ್ದಂತೆ ಹಳ್ಳ ಬಂದಿದ್ದರಿಂದ ಇಟಾಚಿ ಮುಳುಗಿದೆ. ತ್ಯಾಗದ ಬಾಗಿ ಗ್ರಾಮದಲ್ಲಿ ಸೇತುವೆ ಇಕ್ಕೆಲಗಳನ್ನು ಕ್ಲೀನ್ ಮಾಡುವಾಗ ಈ ಘಟನೆ ನಡೆದಿದೆ. ಕೆಮ್ಮಣ್ಣುಗುಂಡಿ-ಕಲ್ಲತ್ತಿಗರಿ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಇದ್ದಕ್ಕಿದ್ದಂತೆ ಹಳ್ಳದಲ್ಲಿ ನೀರು ಹೆಚ್ಚಾಗಿ ಇಟಾಚಿ ಮುಳುಗಿದೆ. ಕಾರ್ಮಿಕರಿದ್ದರು ಇಟಾಚಿ ಮೇಲೆ ತರಲು ಸಾಧ್ಯವಾಗಿಲ್ಲ. ಇಟಾಚಿ ಬಿಟ್ಡು ಮೇಲೆ ಬಂದು ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ. ಮಳೆ ಕಡಿಮೆ ಆಗುವವರೆಗೂ ಹಳ್ಳದಲ್ಲೇ ಇಟಾಚಿ ಲಾಕ್ ಆಗಲಿದೆ.

ಇದನ್ನೂ ಓದಿ: Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

ಮಳೆಗೆ ಸೋರುತಿಹುದು ಕೆಎಸ್‌ಆರ್‌ಟಿಸಿ ಬಸ್ಸಿನ ಮಾಳಿಗೆ

ಕೊಡಗು ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು, ಕೆಎಸ್‌ಆರ್‌ಟಿಸಿ ಬಸ್ಸಿನ ಮಾಳಿಗೆ ಸೋರುತ್ತಿದೆ. ಮಳೆಯಿಂದಾಗಿ ಬಸ್‌‌ನೊಳಗೆ ಇರುವ ಪ್ರಯಾಣಿಕರ ಮೇಲೆ ನೀರು ಬೀಳುವ ವಿಡಿಯೊ ವೈರಲ್‌ ಆಗಿದೆ. ಮೈಸೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಬಸ್ ಇದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಯಾವ ಡಿಪೋ ಬಸ್ ಎಂಬ ಬಗ್ಗೆ ಮಾಹಿತಿ‌ ಲಭ್ಯವಿಲ್ಲ.

ಧಾರಾಕಾರ ಮಳೆಗೆ ಜಲಾವೃತಗೊಂಡು ನಂಜನಗೂಡು ಮನೆಗಳು

ಮೈಸೂರು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು, ನಂಜನಗೂಡಿನಲ್ಲಿ ಮನೆಗಳು ಜಲಾವೃತಗೊಂಡಿವೆ. ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ದಿನಸಿ, ಗೃಹೋಪಯೋಗಿ ವಸ್ತುಗಳು ನಾಶವಾಗಿವೆ. ನಂಜನಗೂಡಿನ ಅಶೋಕಪುರಂ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ ಮನೆಗಳಿಗೆ ಕಲುಷಿತ ನೀರು ನುಗ್ಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ತುಮಕೂರಿನಲ್ಲಿ ಧರೆಗುರುಳಿದ ಮರಗಳು, ವಿದ್ಯುತ್‌ ಕಂಬಗಳು

ಗಾಳಿ ಮಳೆ ಅಬ್ಬರಕ್ಕೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ. ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತಗೊಳಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಇನ್ನೂ ರಸ್ತೆಗೆ ಮರ ಬಿದ್ದು ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಕೊರಟಗೆರೆ ಮುಖ್ಯರಸ್ತೆಗೆ ಮರ ಬಿದ್ದ ಹಿನ್ನೆಲೆ ಸಂಚಾರಕ್ಕೆ ತೊಂದರೆಯಾಗಿದ್ದು, ಬಳಿಕ ಜೆಸಿಬಿ ಸಹಾಯದಿಂದ ಮರವನ್ನು ತೆರವುಗೊಳಿಸಲಾಯಿತು.

ಯಾದಗಿರಿಯಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ಮನೆ

ತಡರಾತ್ರಿ ಬಿರುಗಾಳಿ ಸಹಿತ ಮಳೆ ಆಗಿದ್ದು, ಸಿಡಿಲು ಬಡಿದು ಮನೆಯೊಂದು ಹೊತ್ತಿ ಉರಿದಿದೆ. ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಸಿಂಗನಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪತ್ರಾಸ್ ಮನೆಗೆ ಸಿಡಿಲು ಹೊಡೆದು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದರು. ಅಂದಾಜು ಐದು ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ, ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಳಿ ಮಳೆಗೆ ಎರಡು ದಿನದಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕರೆಂಟ್ ಸಮಸ್ಯೆಯಿಂದ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಯಾದಗಿರಿಯ ಹೊಸಳ್ಳಿ, ಹೊಸಳ್ಳಿ ತಾಂಡಾ ಹಾಗೂ ತಡಿಬಿಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಕಳೆದ ಎರಡು ದಿನಗಳಿಂದ ಕರೆಂಟ್ ಸಮಸ್ಯೆಯಿಂದ ಬೋರ್‌ವೆಲ್‌ಗಳಲ್ಲಿ ನೀರು ಬಂದಿಲ್ಲ. ಇದರಿಂದಾಗಿ ಗ್ರಾಮದ ಸಮೀಪದ ಪೆಟ್ರೋಲ್ ಬಂಕ್ ಬಳಿಯ ಬೋರ್‌ವೆಲ್‌ನಿಂದ ನೀರನ್ನು ತಂದು ಬಳಸುತ್ತಿದ್ದಾರೆ. ಸರತಿ ಸಾಲಿನಲ್ಲಿ ಬಿಂದಿಗೆಯಿಟ್ಟು ನೀರಿಗಾಗಿ ಕಾದು ಕೂರುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

ಮಂಡ್ಯದಲ್ಲಿ ಧಾರಾಕಾರ ಮಳೆ ಕರೆಂಟ್‌ ಕಟ್‌

ಮಂಡ್ಯ ಜಿಲ್ಲೆ ಕೆಆರ್‌ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಧಾರಾಕಾರ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿದೆ. ವರುಣನ ಅಬ್ಬರಕ್ಕೆ ವಿದ್ಯುತ್ ತಂತಿ ಹಾಗೂ ಮರಗಳು ಧರೆಗುರುಳಿವೆ. ಹೆಗ್ಗಡಹಳ್ಳಿ ಗ್ರಾಮದಲ್ಲಿ 5ಕ್ಕೂ ಹೆಚ್ಚು ಮನೆಗಳಲ್ಲಿ ಚಾವಣಿ ಹಾರಿಹೋಗಿವೆ. ಬಿರುಗಾಳಿಗೆ ಮನೆಗಳ ಮೇಲೆ ವಿದ್ಯುತ್ ಕಂಬ ಉರುಳಿದ್ದು, ಬೇರು ಸಮೇತ ಮರ ಧರೆಗುರುಳಿದ ಪರಿಣಾಮ ಗ್ರಾಮದ ಸಂಚಾರ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದ ಕಾರಣ ವಿದ್ಯುತ್ ಇಲ್ಲದೆ ಜನರು ಕಂಗಾಲಾಗಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರ ಮನವಿ ಮಾಡಿದ್ದಾರೆ.

ಕೋಡಿ ಬಿದ್ದ ಮಲ್ಲಾಪುರ ಕೆರೆ

ಚಿತ್ರದುರ್ಗದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮಲ್ಲಾಪುರ ಕೆರೆ ಕೋಡಿ ಬಿದ್ದಿದೆ. ಕೋಡಿ ಬಿದ್ದ ಪರಿಣಾಮ ಕೆಲ ಮನೆಗಳಿಗೆ ನೀರು ನುಗ್ಗಿದೆ. ನಗರಸಭೆ ಅಧಿಕಾರಿಗಳು ಕೆರೆಯಲ್ಲಿದ್ದ ಕಸ ತೆಗೆಯುತ್ತಿದ್ದಾರೆ. ಕಸದಿಂದ ಸೇತುವೆ ಕೆಳಗೆ ಕೆರೆ ನೀರು ನಿಂತಿದೆ. ಹಂತ ಹಂತವಾಗಿ ಕಸ ತೆರವು ಮಾಡುತ್ತಿದ್ದರೆ ಇತ್ತ ಕೆರೆ ನೀರಿನಲ್ಲಿ ಮೀನು ಹಿಡಿಯಲು ಸ್ಥಳೀಯರು ಮುಂದಾದರು.

ಹಾಸನದಲ್ಲಿ ಮಳೆಗೆ ಬೆಳೆ ಹಾನಿ

ಹಾಸನ ಜಿಲ್ಲೆಯಲ್ಲಿ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಬೇಲೂರು ತಾಲೂಕಿನ ಹಳೆಬೀಡು ಹೋಬಳಿಯಲ್ಲಿ ಗಾಳಿ ಮಳೆಗೆ ಬೆಳೆಯು ನಾಶವಾಗಿದೆ. ಬಾಳೆ, ಅಡಿಕೆ, ತೆಂಗು ಬೆಳೆ ‌ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಕ್ಯಾತಲಾಪುರ ಗ್ರಾಮದಲ್ಲಿ ಬಾಳೆ, ಅಡಿಕೆ, ತೆಂಗು ಬೆಳೆ ಧರೆಗುರುಳಿದೆ. ಫಸಲಿಗೆ ಬಂದಿದ್ದ ತೆಂಗು, ಬಾಳೆ, ಅಡಿಕೆ ಬೆಳೆ ಸಂಪೂರ್ಣ ನಾಶವಾಗಿದ್ದು, ಸೂಕ್ತ ಪರಿಹಾರಕ್ಕಾಗಿ ಗ್ರಾಮದ ರೈತ ಶಿವಮೂರ್ತಿ ಒತ್ತಾಯಿಸಿದ್ದಾರೆ.

ಇತ್ತ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಸಮೀಪದ ಸೂಪ್ಪನಹಳ್ಳಿ ಗ್ರಾಮದಲ್ಲಿ ಗಾಳಿ- ಮಳೆಗೆ ವಾಸದ ಮನೆಯ ಚಾವಣಿ ಕುಸಿದಿದೆ. ಸೂಪ್ಪನಹಳ್ಳಿ ಗ್ರಾಮದ ರುದ್ರೇಶ್ ಎಂಬುವವರಿಗೆ ಸೇರಿದ ಮನೆಯು ಭಾರಿ ಗಾಳಿಗೆ ಮನೆಯ ಚಾವಣಿ ಶೀಟ್‌ ಹಾರಿ ಹೋಗಿದೆ. 200 ಮೀಟರ್ ದೂರಕ್ಕೆ ಹಾರಿ ಬಿದ್ದಿದ್ದು, ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳೆಲ್ಲವೂ ನೀರುಪಾಲಾಗಿದೆ. ಸೂಕ್ತ ಪರಿಹಾರಕ್ಕೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

Udupi Gang War: ಉಡುಪಿಯಲ್ಲಿ ಗ್ಯಾಂಗ್ ವಾರ್ ದೃಶ್ಯಗಳು ವೈರಲ್ ಆದ ಬಳಿಕ ಸಾರ್ವಜನಿಕರು ಭಯಭೀತರಾಗಿದ್ದು, ಜನರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ.

VISTARANEWS.COM


on

Udupi Gang War
Koo

ಉಡುಪಿ: ತಡರಾತ್ರಿ ವೇಳೆ ನಡೆದಿರುವ ಗ್ಯಾಂಗ್ ವಾರ್ (Udupi Gang War) ನಗರವನ್ನು ಬೆಚ್ಚಿಬೀಳಿಸಿದೆ. ಎರಡು ಕಾರುಗಳಲ್ಲಿ ಬಂದ ಯುವಕರ ನಡುವೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಎರಡು ತಂಡಗಳ 6 ಯುವಕರು ಪರಸ್ಪರ ಕಾರುಗಳಿಂದ ಡಿಕ್ಕಿ ಹೊಡೆದುಕೊಂಡು, ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 18 ರಂದು ತಡರಾತ್ರಿ ನಡೆದ ಘರ್ಷಣೆಯ ವಿಡಿಯೊ ಸದ್ಯ ವೈರಲ್ ಆಗಿದೆ. ಉಡುಪಿಯ ಶಾರದಾ ಕಲ್ಯಾಣ ಮಂಟಪಕ್ಕೆ ತೆರಳುವ ರಸ್ತೆಯ ಬಳಿ ಎರಡು ಕಾರುಗಳಲ್ಲಿ ಬಂದ ಯುವಕರ ನಡುವೆ ನಡುರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಒಂದು ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದ್ದು, ಈ ವೇಳೆ ಅಡ್ಡ ಬಂದ ತಂಡದ ಒಬ್ಬ ಸದಸ್ಯನಿಗೂ ಕಾರು ಗುದ್ದಿದೆ. ಕಾಪು ಮೂಲದ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಯುವಕರ ಮಾರಾಮಾರಿಯನ್ನು ಹತ್ತಿರದ ಕಟ್ಟಡ ಮೇಲಿಂದ ಸ್ಥಳೀಯರು ವಿಡಿಯೊ ಚಿತ್ರೀಕರಣ ಮಾಡಿದ್ದಾರೆ.

ಉಡುಪಿಯಲ್ಲಿ ಗ್ಯಾಂಗ್ ವಾರ್ ದೃಶ್ಯಗಳು ವೈರಲ್ ಆದ ಬಳಿಕ ಸಾರ್ವಜನಿಕರು ಭಯಭೀತರಾಗಿದ್ದು, ಜನರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ.

ಇಬ್ಬರನ್ನು ಬಂಧಿಸಿದ ಉಡುಪಿ ಪೊಲೀಸರು

ಉಡುಪಿ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಕಾಪು ಮೂಲದ ಗರುಡ ಗ್ಯಾಂಗ್‌ನ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕಾಪು ಮೂಲದ ಆಶಿಕ್ ಮತ್ತು ಗುಜ್ಜರಬೆಟ್ಟು ಮೂಲದ ರಾಕೀಬ್ ಬಂಧಿತರು. ಕೃತ್ಯದಲ್ಲಿ ಭಾಗಿಯಾದ ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಪ್ರಕರಣದಲ್ಲಿ ಬಳಸಲಾದ ಎರಡು ಕಾರು, ಬೈಕ್, ತಲವಾರ್ ಮತ್ತು ಡ್ಯಾಗರ್ ವಶಕ್ಕೆ ಪಡೆಯಲಾಗಿದೆ. ವಿಡಿಯೊ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಉಡುಪಿ ಪೊಲೀಸರು, ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ | Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಬಾಲಕನ ಅಜ್ಜನೂ ಪೊಲೀಸ್‌ ವಶಕ್ಕೆ

ಒಂದೇ ಗ್ಯಾಂಗಿನ ಎರಡು ಗುಂಪುಗಳ ನಡುವೆ ಗಲಾಟೆ: ಪೊಲೀಸ್ ವರಿಷ್ಠಾಧಿಕಾರಿ

ಎರಡು ತಂಡಗಳ ನಡುವೆ ಮಾರಾಮಾರಿ ವಿಚಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಪ್ರತಿಕ್ರಿಯಿಸಿ, ಉಡುಪಿ ನಗರದಲ್ಲಿ ಪ್ರಕರಣ ನಡೆದಿದೆ. ಒಂದೇ ಗ್ಯಾಂಗಿನ ಎರಡು ಗುಂಪುಗಳು ಗಲಾಟೆ ಮಾಡಿಕೊಂಡಿವೆ. ಈ ದೃಶ್ಯಾವಳಿ ಈಗ ವೈರಲ್ ಆಗಿದೆ. ಮೇ 20ಕ್ಕೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಇಬ್ಬರು ಆರೋಪಿಗಳ ಬಂಧನವಾಗಿದೆ. ಸ್ವಿಫ್ಟ್ ಕಾರು, ದ್ವಿಚಕ್ರ ವಾಹನಗಳು, ಚಾಕು ತಲವಾರ್ ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ. ಪರಾರಿ ಆದವರನ್ನು ಶೀಘ್ರ ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್: ಬಿಜೆಪಿ ಟೀಕೆ

ಉಡುಪಿ ಗ್ಯಾಂಗ್‌ ವಾರ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಇದು ಕರ್ನಾಟಕ ಮಾಡೆಲ್! ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ.

ಉಗ್ರರು, ಮತಾಂಧರು, ಪುಂಡರು, ಕಿಡಿಗೇಡಿಗಳು ರೌಡಿಗಳಿಗೆ ಸಿದ್ದರಾಮಯ್ಯ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟು ಪೊಲೀಸರನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮವೇ ಇಂದು ಅರಾಜಕತೆ ಸೃಷ್ಟಿಯಾಗಿದೆ. ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್ ಎಂದು ಟೀಕಿಸಿದೆ.

ಕ್ರಿಮಿನಲ್‌ಗಳಿಗೆ ಸರ್ಕಾರದ ಭಯವಿಲ್ಲದಂತಾಗಿದೆ: ಸುನೀಲ್‌ ಕುಮಾರ್

ಉಡುಪಿ ಗ್ಯಾಂಗ್‌ ವಾರ್‌ ಬಗ್ಗೆ ರಾಜ್ಯ ಸರ್ಕಾರವನ್ನು ಮಾಜಿ ಸಚಿವ ಸುನೀಲ್‌ ಕುಮಾರ್‌ ತರಾಟೆಗೆ ತೆಗೆದುಕೊಂಡಿದ್ದಾರೆ. ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್‌ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್‌ಗಳು ವಿಜೃಂಭಿಸುವಂತಾಗಿದೆ. ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ.

ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ನಿಮಗೆ ಸ್ವಾಗತ. ಆದರೆ ಇಲ್ಲಿಂದ ಹೊರಡುವುದಕ್ಕೆ ಮೊದಲು ಕೆಲ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿ.

  • ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಎಂದು ರಾಜೀನಾಮೆ ಪಡೆಯುತ್ತೀರಿ ?
  • ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ ?
  • ಕ್ರಿಮಿನಲ್ ಗಳಿಗೂ ನಿಮ್ಮ ಸರ್ಕಾರಕ್ಕೂ ಒಳ ಒಪ್ಪಂದ ಏರ್ಪಟ್ಟಿದ್ದರೆ ಮಾಸಿಕ ಹಫ್ತಾ ಎಷ್ಟು ನಿಗದಿ ಮಾಡಿದ್ದೀರಿ ?
  • ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ ?
  • ಜನರ ಶಾಂತಿ- ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ ?
  • ಕ್ರಿಮಿನಲ್ ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ ?
  • ಸಿದ್ದರಾಮಯ್ಯನವರೇ ನಿಮಗೊಂದು ನೇರ ಸವಾಲು ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟಾರ್ ಗಳನ್ನು ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ ? ಸಣ್ಣ ಕಾರಣಕ್ಕೆ ಶಾಸಕರನ್ನು ಬಂಧಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಪ್ರಶ್ನಿಸಿದ್ದಾರೆ.
Continue Reading

ಮಳೆ

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಮೇ 25ರಂದು ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ (Rain News) ಇದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Fire Accident
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

election commission
ಪ್ರಮುಖ ಸುದ್ದಿ2 hours ago

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Fire Accident
ಪ್ರಮುಖ ಸುದ್ದಿ2 hours ago

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Virat kohli
ಪ್ರಮುಖ ಸುದ್ದಿ3 hours ago

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Union Minister Pralhad Joshi latest statement about channagiri case
ಕರ್ನಾಟಕ3 hours ago

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

childrens summer camp closing ceremony at yallapur
ಉತ್ತರ ಕನ್ನಡ4 hours ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ4 hours ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Siddaramaiah
ಕರ್ನಾಟಕ4 hours ago

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Shikhar Dhawan
ಪ್ರಮುಖ ಸುದ್ದಿ4 hours ago

Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

Union Minister Pralhad Joshi statement about Prajwal revanna case
ಕರ್ನಾಟಕ4 hours ago

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌