Ather Halo Helmet : ಈ ಸ್ಮಾರ್ಟ್​ ಹೆಲ್ಮೆಟ್​ ಹಾಕೊಂಡ್ರೆ ಮ್ಯೂಸಿಕ್ ಕೇಳಬಹುದು; ಅದರಲ್ಲೇ ಮಾತನಾಡಬಹುದು - Vistara News

ಪ್ರಮುಖ ಸುದ್ದಿ

Ather Halo Helmet : ಈ ಸ್ಮಾರ್ಟ್​ ಹೆಲ್ಮೆಟ್​ ಹಾಕೊಂಡ್ರೆ ಮ್ಯೂಸಿಕ್ ಕೇಳಬಹುದು; ಅದರಲ್ಲೇ ಮಾತನಾಡಬಹುದು

Ather Halo Helmet: ಅಥೆರ್ ಎನರ್ಜಿ ತನ್ನ ಹೊಸ ಸರಣಿಯ ಸ್ಮಾರ್ಟ್ ಹೆಲ್ಮೆಟ್ ಗಳಿಗೆ ‘ಹ್ಯಾಲೋ’ ಎಂದು ಹೆಸರಿಟ್ಟಿದೆ. ತೆರೆದ ಮತ್ತು ಮುಚ್ಚಿದ ಸೇರಿದಂತೆ ಎರಡು ಮಾದರಿಯಲ್ಲಿ ಈ ಹೆಲ್ಮೆಟ್ ಲಭ್ಯವಿದೆ. ಹ್ಯಾಲೋ ಹೆಲ್ಮೆಟ್ ಪ್ರಯಾಣಿಕರನ್ನು ಕೇವಲ ಸುರಕ್ಷಿತವಾಗಿರಿಸುವ ಬದಲು ಸವಾರಿ ಅನುಭವವನ್ನು ಹೆಚ್ಚಿಸುತ್ತದೆ. ಹಾಡು ಕೇಳಿಕೊಂಡು, ಅಗತ್ಯ ಸಂದರ್ಭದಲ್ಲಿ ಮಾತನಾಡಿಕೊಂಡು ಹೋಗಬಹುದಾದ ಈ ಹೆಲ್ಮೆಟ್ ಅನ್ನು ಭವಿಷ್ಯದ ಹೆಲ್ಮೆಟ್ ಎಂದೇ ಕಂಪನಿ ಹೇಳಿಕೊಂಡಿದೆ.

VISTARANEWS.COM


on

Ather Halo Helmet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟೆಕ್ ಕಂಪನಿ ಅಥೆರ್ ಎನರ್ಜಿ ಹಲವಾರು ದಿನಗಳಿಂದ ಹೊಚ್ಚ ಹೊಸ ಟೆಕ್​ ಆಧಾರಿತ ಹೆಲ್ಮೆಟ್ (Ather Halo Helmet) ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಹಲವಾರು ಟೀಸರ್ ಗಳು ಮತ್ತು ಜಾಹೀರಾತುಗಳನ್ನು ಪ್ರಕಟಿಸಿತ್ತು. ಇದೀಗ ಆ ಹೆಲ್ಮೆಟ್ ಅನ್ನು ಮಾರಕಟ್ಟೆಗೆ ಇಳಿಸಿದೆ. ಬೆಂಗಳೂರಿನಲ್ಲಿ ನಡೆದ ಅಥೆರ್​ ಕಮ್ಯುನಿಟಿ ಡೇ ಕಾರ್ಯಕ್ರಮದಲ್ಲಿ ಈ ಹೆಲ್ಮೆಟ್​ ಬಿಡುಗಡೆಗೊಂಡಿದೆ.

ಅಥೆರ್ ಎನರ್ಜಿ ತನ್ನ ಹೊಸ ಸರಣಿಯ ಸ್ಮಾರ್ಟ್ ಹೆಲ್ಮೆಟ್ ಗಳಿಗೆ ‘ಹ್ಯಾಲೋ’ ಎಂದು ಹೆಸರಿಟ್ಟಿದೆ. ತೆರೆದ ಮತ್ತು ಮುಚ್ಚಿದ ಸೇರಿದಂತೆ ಎರಡು ಮಾದರಿಯಲ್ಲಿ ಈ ಹೆಲ್ಮೆಟ್ ಲಭ್ಯವಿದೆ. ಹ್ಯಾಲೋ ಹೆಲ್ಮೆಟ್ ಪ್ರಯಾಣಿಕರನ್ನು ಕೇವಲ ಸುರಕ್ಷಿತವಾಗಿರಿಸುವ ಬದಲು ಸವಾರಿ ಅನುಭವವನ್ನು ಹೆಚ್ಚಿಸುತ್ತದೆ. ಹಾಡು ಕೇಳಿಕೊಂಡು, ಅಗತ್ಯ ಸಂದರ್ಭದಲ್ಲಿ ಮಾತನಾಡಿಕೊಂಡು ಹೋಗಬಹುದಾದ ಈ ಹೆಲ್ಮೆಟ್ ಅನ್ನು ಭವಿಷ್ಯದ ಹೆಲ್ಮೆಟ್ ಎಂದೇ ಕಂಪನಿ ಹೇಳಿಕೊಂಡಿದೆ.

ಡಾಟ್ 2 ಮತ್ತು ಐಎಸ್ಐ ಸುರಕ್ಷತಾ ರೇಟಿಂಗ್ಸ್​ಗಳೊಂದಿಎ ಫುಲ್-ಫೇಸ್ ಅಥೆರ್ ಹ್ಯಾಲೋ ಹೆಲ್ಮೆಟ್ 14,999 ರೂ. ಬೆಲೆಗೆ ಮಾರಾಟ‘ವಾಗಲಿದೆ. ಅದೇ ರೀತಿ ಮೊದಲ 1000 ಯುನಿಟ್​ಗಳು ರಿಯಾಯಿತಿಯೊಂದಿಗೆ 12,999 ರೂ.ಗೆ ಲಭ್ಯವಿರುತ್ತವೆ. ಅಂದ ಹಾಗೆ ಇದೇ ಹೆಲ್ಮೆಟ್ ಅನ್ನು ಕಮ್ಯುನಿಟಿ ಡೇ ಈವೆಂಟ್​ನಲ್ಲಿ ಶೇಕಡಾ 50ರ ರಿಯಾಯಿತಿಯೊಂದಿಗೂ ನೀಡಿದೆ. ಓಪನ್-ಫೇಸ್ ಹೆಲ್ಮೆಟ್​​ಗಳಿಗೆ ಹ್ಯಾಲೋ ಬಿಟ್ ಎಂದು ಕರೆಯಲಾಗಿದ್ದು. 4,999 ರೂ.ಗಳಿಗೆ ಲಭ್ಯವಿದೆ.

ಹ್ಯಾಲೋ ಎಂದರೇನು?

ಅಥೆರ್ ಹ್ಯಾಲೋ ಹೆಲ್ಮೆಟ್ ಬೇರೆ ಯಾವುದೇ ಹೆಲ್ಮೆಟ್​ಗಳ ಮಾದರಿಯನ್ನು ಆಧರಿಸಿಲ್ಲ ಅಥವಾ ಬೇರೆ ಯಾವುದೇ ಕಂಪನಿಯಿಂದ ವಿನ್ಯಾಸಗೊಳಿಸಲಾಗಿಲ್ಲ. ಇದನ್ನು ಸಂಪೂರ್ಣವಾಗಿ ಅಥೆರ್ ಆಂತರಿಕವಾಗಿ ಅಭಿವೃದ್ಧಿಪಡಿಸಿದೆ. ಪ್ಯಾಡಿಂಗ್ ನಿಂದ ಚಿಪ್​ನವರೆಗೆ ಇಲ್ಲೇ ತಯಾರಾಗಿದೆ. ಇದನ್ನು ಹೆಚ್ಚು ಆಧುನಿಕ ಮತ್ತು ಭವಿಷ್ಯದ ಹೆಲ್ಮೆಟ್​ ಎಂದು ಹೇಳಿದೆ. ಅದರಲ್ಲಿ ಹ್ಯಾಲೋ ತಂತ್ರಜ್ಞಾನವಾಗಿರುವ ಕಾರಣ ಅದಕ್ಕೆ ಅದೇ ಹೆಸರು ಇಡಲಾಗಿದೆ. ಆಡಿಯೊ ಹರ್ಮನ್ ಕಾರ್ಡನ್ ತಾಂತ್ರಿಕತೆಯನ್ನು ಬಳಸಲಾಗಿದೆ.

ಇದನ್ನೂ ಓದಿ: Ather Rizta : ದೊಡ್ಡ ಸ್ಟೋರೇಜ್​, ಕಡಿಮೆ ಬೆಲೆ; ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ಹೊಸ ಅಥೆರ್​ ರಿಶ್ತಾ

ಆಧುನಿಕ ಸ್ಮಾರ್ಟ್ಫೋನ್ ಯುಗವನ್ನು ಪರಿಗಣಿಸಿ, ಹ್ಯಾಲೋ ಟೆಕ್ ಅನ್ನು ನಮ್ಮ ದೈನಂದಿನ ಜೀವನದಲ್ಲಿ ಸುಲಭವಾಗಿ ಸಂಯೋಜಿಸಲು ವಿನ್ಯಾಸಗೊಳಿಸಲಾಗಿದೆ. ಅದನ್ನು ಧರಿಸಿದ ಕ್ಷಣದಿಂದಲೇ ಹ್ಯಾಲೋ ಹೆಲ್ಮೆಟ್ ಸ್ವಯಂಚಾಲಿತವಾಗಿ ಸ್ವಿಚ್ ಆನ್ ಆಗುತ್ತದೆ ಮತ್ತು ಬ್ಲೂಟೂತ್ ಮೂಲಕ ಅಥೆರ್ ಸ್ಕೂಟರ್ ಮತ್ತು ನಿಮ್ಮ ಫೋನ್ ಗೆ ಸಂಪರ್ಕ ಸಾಧಿಸುತ್ತದೆ. ಸ್ಪೀಕರ್​ಗಳು ಮತ್ತು ಸಂವೇದಕಗಳನ್ನು ಬಳಸಿ ನಾಯ್ಸ್​ ಕ್ಯಾನ್ಸಲೇಷನ್​ ವ್ಯವಸ್ಥೆ ಮಾಡಲಾಗಿದೆ. ಸಂಗೀತ ಪ್ಲೇಬ್ಯಾಕ್ ಮತ್ತು ವಾಯ್ಸ್​ ರಿಟರ್ನ್​​ ಕಾಲ್​​ಗಳನ್ನು ಮಾಡಬಹುದು.

ಅಥೆರ್ ಹ್ಯಾಲೋವನ್ನು ತಂತ್ರಜ್ಞಾನದ ಆವೃತ್ತಿಯಾಗಿ ಇರಿಸುತ್ತಿದೆ, ಇದು ಕಾರಿನಂತಹ ಅನುಭವವನ್ನು ನೀಡುತ್ತದೆ, ವಿಶೇಷವಾಗಿ ಅದರ ಅಥೆರ್ ಚಿಟ್ಚಾಟ್ ಕಾರ್ಯದೊಂದಿಗೆ. ಇದು ಸವಾರ ಮತ್ತು ಹಿಂಬದಿ ಸವಾರನಿಗೆ ಸುತ್ತಮುತ್ತಲಿನ ಶಬ್ದದಿಂದ ಯಾವುದೇ ಹಸ್ತಕ್ಷೇಪವಿಲ್ಲದೆ ಹೆಲ್ಮೆಟ್ ಮೂಲಕ ಪರಸ್ಪರ ಮಾತನಾಡಲು ಅನುವು ಮಾಡಿಕೊಡುತ್ತದೆ.

ಹ್ಯಾಲೋ ಹೆಲ್ಮೆಟ್ ಒಂದೇ ಚಾರ್ಜ್​ನಲ್ಲಿ ಸರಿಸುಮಾರು 10 ದಿನಗಳ ಬ್ಯಾಟರಿ ಬಾಳಿಕೆ ಪಡೆಯುತ್ತದೆ. ಹ್ಯಾಲೋ ಹೆಲ್ಮೆಟ್​​ಗಳನ್ನು ಧರಿಸಿದ್ದರೆ ಸವಾರ ಮತ್ತು ಹಿಂಬದಿ ಸವಾರ ಒಂದೇ ಸಂಗೀತವನ್ನು ಕೇಳಬಹುದು ಎಂದು ಅಥೆರ್ ಹೇಳಿಕೊಂಡಿದೆ.

ಅಥೆರ್ ನ ಹೊಸ ಹ್ಯಾಲೋ ಸರಣಿಯ ಹೆಲ್ಮೆಟ್ ಗಳನ್ನು ಮೊದಲು ಬೆಂಗಳೂರಿನಲ್ಲಿ ನಡೆದ ಅಥೆರ್ ಕಮ್ಯುನಿಟಿ ಡೇ 2024 ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಗಿದೆ. ಅದಕ್ಕಿಂತ ಮೊದಲು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ ರಿಶ್ತಾ ಬಿಡುಗಡೆ ಮಾಡಿತು. ತನ್ನ ಹೊಸ ಅಥೆರ್ ಸ್ಟಾಕ್ 6 ಸಾಫ್ಟ್ ವೇರ್ ಅನ್ನು ಬಿಡುಗಡೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

Robert Vadra: ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾದ್ರಾ ಅವರು ಅಮೇಥಿ ಅಥವಾ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಅವರೀಗ ರಾಜಕೀಯ ಪ್ರವೇಶಿಸುವ ಕುರಿತು ಸ್ಪಷ್ಟನೆ ನೀಡಿದ್ದಾರೆ. “ನಾನು ರಾಜಕೀಯಕ್ಕೆ ಬರುವುದಾದರೆ, ನನ್ನ ಹೆಸರು ಬಳಸಿಕೊಂಡು ಬರುತ್ತೇನೆ. ಗಾಂಧಿ ಕುಟುಂಬದ ಹೆಸರಿನಲ್ಲಿ ರಾಜಕೀಯ ಮಾಡಲ್ಲ” ಎಂದಿದ್ದಾರೆ.

VISTARANEWS.COM


on

Robert Vadra
Koo

ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯು (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ ಐದು ಹಂತದ ಮತದಾನ ಮುಕ್ತಾಯಗೊಂಡಿದ್ದು, ಇನ್ನೂ ಎರಡು ಹಂತದ ಮತದಾನ ಬಾಕಿ ಇದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆಯೇ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರ ಪತಿ ರಾಬರ್ಟ್‌ ವಾದ್ರಾ (Robert Vadra) ಅವರು ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, “ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ (Gandhi Family) ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ” ಎಂದಿದ್ದಾರೆ.

ಎಎನ್‌ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. “ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ” ಎಂದು ಹೇಳಿದರು.

“ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ” ಎಂದು ಸಂದರ್ಶನದ ವೇಳೆ ಹೇಳಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಕೂಡ ರಾಬರ್ಟ್‌ ವಾದ್ರಾ ವಾಗ್ದಾಳಿ ನಡೆಸಿದರು. “ಕಳೆದ 10 ವರ್ಷಗಳಿಂದ ದೇಶದ ರಾಜಕೀಯ ವ್ಯವಸ್ಥೆಯನ್ನು ಜನ ನೋಡಿದ್ದಾರೆ. ಅಭಿವೃದ್ಧಿ ಹೊರತುಪಡಿಸಿ, ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುತ್ತಿದೆ. ನಾನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಿಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇ.ಡಿ ದಾಳಿ ನಡೆಯುತ್ತದೆ. ಆದರೆ, ಇದೆಲ್ಲದರ ಮಧ್ಯೆ ನಾನು ಸೇವೆ ಮುಂದುವರಿಸಿದ್ದೇನೆ. ನಾನು ರಾಜಕೀಯಕ್ಕೆ ಬಂದ ತಕ್ಷಣ ಎಲ್ಲವೂ ಬದಲಾಗಲಿದೆ ಎಂದು ಹೇಳುವುದಿಲ್ಲ. ಸೇವೆಗಾಗಿ ನಾನು ರಾಜಕೀಯ ಪ್ರವೇಶಿಸಲು ಬಯಸುತ್ತೇನೆ” ಎಂದು ಹೇಳಿದರು. ರಾಬರ್ಟ್‌ ವಾದ್ರಾ ಅವರು ಅಮೇಥಿ ಅಥವಾ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Continue Reading

ಕ್ರೀಡೆ

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

IPL 2024: 11ನೇ ಓವರ್​ನಲ್ಲಿ ಕ್ಲಾಸೆನ್ ಔಟಾದಾಗ ಎಸ್ಆರ್​ಎಚ್​ 5 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತ್ತು. ಇನ್ನೂ ಒಂಬತ್ತು ಓವರ್​ಗಳು ಬಾಕಿ ಇರುವಾಗ ಮತ್ತು ಮಧ್ಯದಲ್ಲಿ ರಾಹುಲ್ ತ್ರಿಪಾಠಿ ಉತ್ತಮವಾಗಿ ಸೆಟ್ ಆಗಿರುವುದರಿಂದ, ಎಸ್ಆರ್​ಎಚ್​​ ಉತ್ತಮ ಮೊತ್ತ ದಾಖಲಿಸಲು ಸಜ್ಜಾಗಿತ್ತು. ಆದಾಗ್ಯೂ, 14 ನೇ ಓವರ್​ನಲ್ಲಿ ತ್ರಿಪಾಠಿ ಮತ್ತು ಅಬ್ದುಲ್ ಸಮದ್ ನಡುವಿನ ತಪ್ಪು ಸಂವಹನವು ವಿಕೆಟ್​ ಪತನಕ್ಕೆ ಕಾರಣವಾಯಿತು.

VISTARANEWS.COM


on

IPL 2024
Koo

ಅಹಮದಾಬಾದ್​​: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್​​ ಹೈದರಾಬಾದ್​ (Sunrisers Hyderabad) ತಂಡಗಳ ನಡುವಿನ ಐಪಿಎಲ್ 2024 ರ (IPL 2024) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಹುಲ್ ತ್ರಿಪಾಠಿ ರನೌಟ್ ಆದ ವೇಳೆ ಎಸ್​ಆರ್​ಎಚ್​ ತಂಡದೊಳಗೆ ತಲ್ಲಣಗಳೇ ಉಂಟಾಯಿತು. ತಂಡದ ಮಾಲಕಿ ಕಾವ್ಯಾ ಮಾರನ್ ಸಿಟ್ಟಿಗೆದ್ದು ಕೂಗಾಡಿದರೆ, ರನ್​ಔಟ್​ ಆದ ರಾಹುಲ್ ತ್ರಿಪಾಠಿ ಕಣ್ಣೀರು ಹಾಕಿದರು. ತ್ರಿಪಾಠಿ ಔಟ್ ಆಗಿರುವುದು ಎಸ್​ಆರ್​ಎಚ್​ ತಂಡದ ಕುಸಿತಕ್ಕೆ ಕಾರಣವಾಯಿತು.

ಬಲಗೈ ಬ್ಯಾಟರ್​ ಹೋರಾಟದ ಅರ್ಧಶತಕವನ್ನು ಗಳಿಸಿದ್ದರು ಮತ್ತು 14 ನೇ ಓವರ್​ನಲ್ಲಿ ಅವರ ಭರವಸೆಗಳು ಭಗ್ನಗೊಳ್ಳುವ ಮೊದಲು ಎಸ್ಆರ್​​ಎಚ್​ ತಂಡವನ್ನು ದೊಡ್ಡ ಮೊತ್ತಕ್ಕೆ ಏರಿಸುವ ಗುರಿ ಹೊಂದಿದ್ದರು. ಮಿಚೆಲ್ ಸ್ಟಾರ್ಕ್ ಟ್ರಾವಿಸ್ ಹೆಡ್ ಅವರನ್ನು ಡಕ್ ಔಟ್ ಮಾಡಿದ ನಂತರ ರಾಹುಲ್ ತ್ರಿಪಾಠಿ ಮೊದಲ ಓವರ್​ನಲ್ಲಿ ಬ್ಯಾಟಿಂಗ್​ಗೆ ಇಳಿದಿದ್ದರು. ಎರಡನೇ ಓವರ್​ನಲ್ಲಿ ವೈಭವ್ ಅರೋರಾ ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡುವ ಮೂಲಕ ಎಸ್ಆರ್​ಎಚ್​​ 2 ವಿಕೆಟ್ ನಷ್ಟಕ್ಕೆ 13 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು.

ಪವರ್ ಪ್ಲೇ ಅಂತ್ಯಗೊಳ್ಳುವ ಮುನ್ನ ಎಸ್ ಆರ್ ಎಚ್ ಇನ್ನೂ ಎರಡು ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಸ್ಟಾರ್ಕ್ ನಿತೀಶ್ ರೆಡ್ಡಿ ಮತ್ತು ಶಹಬಾಜ್ ಅಹ್ಮದ್ ಅವರನ್ನು ಸತತ ಎಸೆತಗಳಲ್ಲಿ ಔಟ್ ಮಾಡಿ ಹೈದರಾಬಾದ್ ಮೂಲದ ತಂಡವನ್ನು 4 ವಿಕೆಟ್ ನಷ್ಟಕ್ಕೆ 39 ಕ್ಕೆ ಇಳಿಸಿದರು. ನಂತರ ರಾಹುಲ್ ತ್ರಿಪಾಠಿ ಮತ್ತು ಹೆನ್ರಿಚ್​ ಕ್ಲಾಸೆನ್ ಐದನೇ ವಿಕೆಟ್​ಗೆ 62 ರನ್​ಗಳನ್ನು ಸೇರಿಸುವ ಮೂಲಕ ಉತ್ತಮ ಮೊತ್ತಕ್ಕೆ ಅಡಿಪಾಯ ಹಾಕಿದರು.

11ನೇ ಓವರ್​ನಲ್ಲಿ ಕ್ಲಾಸೆನ್ ಔಟಾದಾಗ ಎಸ್ಆರ್​ಎಚ್​ 5 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತ್ತು. ಇನ್ನೂ ಒಂಬತ್ತು ಓವರ್​ಗಳು ಬಾಕಿ ಇರುವಾಗ ಮತ್ತು ಮಧ್ಯದಲ್ಲಿ ರಾಹುಲ್ ತ್ರಿಪಾಠಿ ಉತ್ತಮವಾಗಿ ಸೆಟ್ ಆಗಿರುವುದರಿಂದ, ಎಸ್ಆರ್​ಎಚ್​​ ಉತ್ತಮ ಮೊತ್ತ ದಾಖಲಿಸಲು ಸಜ್ಜಾಗಿತ್ತು. ಆದಾಗ್ಯೂ, 14 ನೇ ಓವರ್​ನಲ್ಲಿ ತ್ರಿಪಾಠಿ ಮತ್ತು ಅಬ್ದುಲ್ ಸಮದ್ ನಡುವಿನ ತಪ್ಪು ಸಂವಹನವು ವಿಕೆಟ್​ ಪತನಕ್ಕೆ ಕಾರಣವಾಯಿತು.

ಸುನಿಲ್ ನರೈನ್ ಎಸೆದ ಓವರ್​ನ ಎರಡನೇ ಎಸೆತದಲ್ಲಿ ಸಮದ್ ಆಂಡ್ರೆ ರಸೆಲ್ ಅವರ ಕಡೆಗೆ ಚೆಂಡನ್ನು ಹೊಡೆದರು. ಕೆಕೆಆರ್ ಆಲ್ರೌಂಡರ್ ಉತ್ತಮ ಡೈವಿಂಗ್ ಮಾಡಿ ಚೆಂಡು ತಡೆದರು. ತ್ರಿಪಾಠಿ ಚೆಂಡನ್ನು ನೋಡುತ್ತಿರುವಾಗ ಸಮದ್ ಏಕಾಂಗಿಯಾಗಿ ಹೊರಟರು. ರಸೆಲ್ ಎದ್ದು ನಿಂತು ವಿಕೆಟ್ ಕೀಪರ್ ರಹಮಾನುಲ್ಲಾ ಗುರ್ಬಾಜ್ ಗೆ ಚೆಂಡನ್ನು ಎಸೆದಾಗ ತ್ರಿಪಾಠಿ ಪಿಚ್ ನ ಮಧ್ಯದಲ್ಲಿ ಸಿಲುಕಿಕೊಂಡರು. ಎಸ್ ಆರ್ ಎಚ್ ಸಿಇಒ ಕಾವ್ಯಾ ಮಾರನ್ ಅವರು ತ್ರಿಪಾಠಿ ಅವರ ರನ್ ಔಟ್ ಅನ್ನು ನೋಡಿ ಕೋಪಗೊಂಡರು.

ಇದನ್ನೂ ಓದಿ: IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

ಬಲಗೈ ಬ್ಯಾಟ್ಸ್ಮನ್ ತಮ್ಮ ಮಾಜಿ ತಂಡದ ವಿರುದ್ಧ 35 ಎಸೆತಗಳಲ್ಲಿ 55 ರನ್ ಗಳಿಸಿದ ನಂತರ ನಿರ್ಗಮಿಸಿದರು. ಔಟಾದ ನಂತರ, ಬೇಸರಗೊಂಡ ರಾಹುಲ್ ಮೆಟ್ಟಿಲುಗಳ ಬಳಿ ಮೊಣಕಾಲಿನ ಮೇಲೆ ತಲೆಯಿಟ್ಟು ಕುಳಿತು, ತನ್ನ ವಜಾದ ಬಗ್ಗೆ ಅಳುತ್ತಿರುವುದು ಕಂಡುಬಂದಿದೆ.

Continue Reading

ಪ್ರಮುಖ ಸುದ್ದಿ

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

IPL 2024: ಮುಂಬೈ ಇಂಡಿಯನ್ಸ್​ ದೊಡ್ಡ ಬಳಗವನ್ನು ಹೊಂದಿದೆ. ನಾನು ಆ ತಂಡಕ್ಕೆ ಆಡಿದ್ದೇನೆ. ಮ್ಯಾನೇಜ್ಮೆಂಟ್ ಉತ್ತಮವಾಗಿದೆ. ತಂಡವನ್ನು ಉತ್ತಮವಾಗಿ ನಡೆಸುತ್ತದೆ. ಆದರೆ ಈ ನಿರ್ಧಾರವು ಹಿನ್ನಡೆಯನ್ನುಂಟು ಮಾಡಿದೆ. ಬಹುಶಃ ಭವಿಷ್ಯವನ್ನು ಹುಡುಕುವ ಆಲೋಚನೆ ಇತ್ತು. ಅವರು ಒಗ್ಗಟ್ಟಾಗಿ ಕಾಣದ ಕಾರಣ ಅದು ತಂಡದೊಂದಿಗೆ ಸರಿಯಾಗಿ ಕೆಲಸ ಮಾಡಲಿಲ್ಲ ಎಂದು ತೋರುತ್ತದೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರಲ್ಲಿ ಮುಂಬೈ ಇಂಡಿಯನ್ಸ್ ತಂಡ ನೀರಸ ಪ್ರದರ್ಶನ ತೋರಿದೆ. ಆಡಿರುವ 14 ಪಂದ್ಯಗಳಲ್ಲಿ ಕೇವಲ 4ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ. ಐದು ಬಾರಿಯ ಚಾಂಪಿಯನ್ ತಂಡದ ನಿರಾಶಾದಾಯಕ ಪ್ರದರ್ಶನದ ಬಗ್ಗೆ ಜೋರು ಚರ್ಚೆಗಳು ನಡೆದಿವೆ. ಫ್ರಾಂಚೈಸಿಯ ಅಭಿಮಾನಿಗಳು ಮತ್ತು ಕೆಲವು ಪಂಡಿತರು ಎಂಐ ನಾಯಕ ಹಾರ್ದಿಕ್ ಪಾಂಡ್ಯ ಅವರ ಸಾಮಾನ್ಯ ನಾಯಕತ್ವದ ಕೌಶಲ್ಯಕ್ಕಾಗಿ ಅವರನ್ನು ಟೀಕಿಸಿದ್ದಾರೆ. ಅವರ ಹುಂಬತನದಿಂದಾಗಿ ತಂಡ ಸೋತಿದೆ ಎಂಬುದಾಗಿ ಎಲ್ಲರೂ ಹೇಳಿಕೆ ನೀಡಿದ್ದಾರೆ. ಇದೀಗ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಬೇರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಾಂಡ್ಯ ಬೆಂಬಲಕ್ಕೆ ನಿಂತ ಅವರು ಸೋಲಿಗೆ ರೋಹಿತ್​ ಶರ್ಮಾ ಕಾರಣ ಎಂದು ಹೇಳಿದ್ದಾರೆ.

ಐಪಿಎಲ್ 2024 ಕ್ಕೆ ಮುಂಚಿತವಾಗಿ ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯಿಂದ ಮುಂಬೈ ಇಂಡಿಯನ್ಸ್ ದಾಖಲೆಯ ಒಪ್ಪಂದಕ್ಕೆ ಖರೀದಿಸಿತ್ತು. ನಂತರ, ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಮುಂಬೈ ನಾಯಕನನ್ನಾಗಿ ಮಾಡಲಾಯಿತು. ಈ ವೇಳೆ ಅಭಿಮಾನಿಗಳಿಂದ ಕೆಟ್ಟ ಪ್ರತಿಕ್ರಿಯೆ ವ್ಯಕ್ತಗೊಂಡಿತು. ಈ ಕುರಿತ ಕೋಲಾಹಲ ಉಂಟಾಯಿತು. ಅದಕ್ಕೆ ತಕ್ಕ ಹಾಗೆ ತಂಡ ಕೆಟ್ಟದಾಗಿ ಸೋತಿತು. ಎಂಐ ಶಿಬಿರದ ಭಾಗವಾಗಿದ್ದ ಹರ್ಭಜನ್ ಸಿಂಗ್ ಈ ಕುರಿತು ಮಾತನಾಡಿದ್ದು, ಮುಂದಿನ ಋತುವಿನಲ್ಲಿ ಬಲವಾಗಿ ಪುಟಿದೇಳಲು ಪಾಂಡ್ಯ ಮತ್ತು ಮ್ಯಾನೇಜ್ಮೆಂಟ್ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದೇ ವೇಳೆ ರೋಹಿತ್ ಶರ್ಮಾ ಗೆಲುವಿನ ಕೆಚ್ಚು ತೋರಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದಾರೆ.

ಮುಂಬೈ ಇಂಡಿಯನ್ಸ್​ ದೊಡ್ಡ ಬಳಗವನ್ನು ಹೊಂದಿದೆ. ನಾನು ಆ ತಂಡಕ್ಕೆ ಆಡಿದ್ದೇನೆ. ಮ್ಯಾನೇಜ್ಮೆಂಟ್ ಉತ್ತಮವಾಗಿದೆ. ತಂಡವನ್ನು ಉತ್ತಮವಾಗಿ ನಡೆಸುತ್ತದೆ. ಆದರೆ ಈ ನಿರ್ಧಾರವು ಹಿನ್ನಡೆಯನ್ನುಂಟು ಮಾಡಿದೆ. ಬಹುಶಃ ಭವಿಷ್ಯವನ್ನು ಹುಡುಕುವ ಆಲೋಚನೆ ಇತ್ತು. ಅವರು ಒಗ್ಗಟ್ಟಾಗಿ ಕಾಣದ ಕಾರಣ ಅದು ತಂಡದೊಂದಿಗೆ ಸರಿಯಾಗಿ ಕೆಲಸ ಮಾಡಲಿಲ್ಲ ಎಂದು ತೋರುತ್ತದೆ. ಇಷ್ಟು ದೊಡ್ಡ ತಂಡವಾಗಿದ್ದು ನನ್ನ ಹಳೆಯ ತಂಡವು ಇಂತಹ ಕಳಪೆ ಫಲಿತಾಂಶಗಳನ್ನು ಎದುರಿಸುತ್ತಿರುವುದನ್ನು ನೋಡಿ ನನಗೆ ನೋವಾಗುತ್ತದೆ ಎಂದು ಹರ್ಭಜನ್ ಹೇಳಿದ್ದಾರೆ.

ಇದನ್ನೂ ಓದಿ: Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

ಬಹುಶಃ ನಿರ್ಧಾರದ ಸಮಯ ಸರಿಯಾಗಿರಲಿಲ್ಲ. ಒಂದು ವರ್ಷದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದರೆ ಉತ್ತಮವಾಗುತ್ತಿತ್ತು. ಇದು ಹಾರ್ದಿಕ್ ಅವರ ತಪ್ಪಲ್ಲ, ಅವರು ಜಿಟಿಯಲ್ಲಿ ನಿಜವಾಗಿಯೂ ಉತ್ತಮವಾಗಿ ನಾಯಕರಾಗಿದ್ದರು. ನಾಯಕ ಯಾರೇ ಆಗಿರಲಿ ಆಟಗಾರರನ್ನು ಒಗ್ಗಟ್ಟಾಗಿಡುವುದು ಹಿರಿಯ ಆಟಗಾರರ ಕರ್ತವ್ಯ. ಕ್ಯಾಪ್ಟನ್ ಗಳು ಬರುತ್ತಾರೆ ಮತ್ತು ಹೋಗುತ್ತಾರೆ. ಆದರೆ ಅವರು ಒಂದು ತಂಡದಂತೆ ಆಡಲಿಲ್ಲ, “ಎಂದು ಸಿಂಗ್ ಹೇಳಿದರು.

2024ರ ಟಿ20 ವಿಶ್ವಕಪ್ ಕಡೆಗೆ ಗಮನ

ಐಪಿಎಲ್ 2024 ತನ್ನ ಟೂರ್ನಿಯ ಅಂತ್ಯವನ್ನು ತಲುಪಿದ್ದು, ಪ್ಲೇಆಫ್ ಹಂತಗಳು ಸಮೀಪಿಸುತ್ತಿರುವುದರಿಂದ, ಗಮನವು ಶೀಘ್ರದಲ್ಲೇ ಐಸಿಸಿ ಟಿ 20 ವಿಶ್ವಕಪ್ 2024 ರತ್ತ ತಿರುಗುತ್ತದೆ. ಜೂನ್ 2ರಿಂದ ಟೂರ್ನಿ ಆರಂಭವಾಗಲಿದ್ದು, ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಪಾಂಡ್ಯ ಉಪನಾಯಕರಾಗಿದ್ದಾರೆ. ಶುಬ್ಮನ್ ಗಿಲ್ ಮತ್ತು ರಿಂಕು ಸಿಂಗ್ ಅವರಂತಹ ಆಟಗಾರರು 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರಿಂದ ಕೆಲವೊಂದು ಪ್ರಶ್ನೆಗಳು ಉಳಿದುಕೊಂಡಿವೆ.

Continue Reading

ದೇಶ

Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Narendra Modi: ವಾರಾಣಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಇದಕ್ಕಾಗಿ ಮಹಿಳೆಯರು ಕೈಜೋಡಿಸಬೇಕು. ಮತದಾನ ನಡೆಯುವ ದಿನ ಸುಮಾರು 20-25 ಮಹಿಳೆಯರು ಒಗ್ಗೂಡಿ ಮತಗಟ್ಟೆಗಳ ಬಳಿ ತೆರಳಿ. ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸಿ, ಹಾಡು ಹಾಡಿ ಎಂಬುದಾಗಿ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಜೂನ್‌ 1ರಂದು ವಾರಾಣಸಿಯಲ್ಲಿ ಮತದಾನ ನಡೆಯಲಿದೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆಯ (Lok Sabha Election 2024) 5 ಹಂತದ ಮತದಾನ ಮುಕ್ತಾಯವಾಗಿದೆ. ಇದರೊಂದಿಗೆ ದೇಶಾದ್ಯಂತ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯವಾದಂತಾಗಿದೆ. ಇನ್ನೂ ಎರಡು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ಎಲ್ಲ ಪಕ್ಷಗಳ ಪ್ರಮುಖ ನಾಯಕರು, ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ, ಮತದಾನ ಪ್ರಮಾಣ ಹೆಚ್ಚಿಸಲು ಮಹಿಳೆಯರಿಗೆ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. “ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸುವ ಮೂಲಕ ಮತದಾನ ಹೆಚ್ಚಿಸಿ” ಎಂದು ವಾರಾಣಸಿ (Varanasi) ಮಹಿಳೆಯರಿಗೆ ಮೋದಿ ಸಲಹೆ ನೀಡಿದ್ದಾರೆ.

“ವಾರಾಣಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಇದಕ್ಕಾಗಿ ಮಹಿಳೆಯರು ಕೈಜೋಡಿಸಬೇಕು. ಮತದಾನ ನಡೆಯುವ ದಿನ ಸುಮಾರು 20-25 ಮಹಿಳೆಯರು ಒಗ್ಗೂಡಿ ಮತಗಟ್ಟೆಗಳ ಬಳಿ ತೆರಳಿ. ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸಿ, ಹಾಡು ಹಾಡಿ. ಬೆಳಗ್ಗೆ 10 ಗಂಟೆಯೊಳಗೆ ಮತಗಟ್ಟೆಯ ಬಳಿ ಹೀಗೆ ಮಾಡಿದರೆ ಖಂಡಿತವಾಗಿಯೂ ಹೆಚ್ಚಿನ ಪ್ರಮಾಣದ ಮತದಾನ ದಾಖಲಾಗುತ್ತದೆ. ಪ್ರತಿಯೊಂದು ಮತಗಟ್ಟೆಗಳಲ್ಲೂ ಹೆಣ್ಣುಮಕ್ಕಳು ಹೀಗೆ ಮಾಡುವ ಮೂಲಕ ಮತದಾನದ ಜಾಗೃತಿ ಮೂಡಿಸಬೇಕು” ಎಂದು ವಾರಾಣಸಿಯಲ್ಲಿ ಮಹಿಳೆಯರಿಗೆ ಮೋದಿ ಕರೆ ನೀಡಿದ್ದಾರೆ.

ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ

ವಾರಾಣಸಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ಅವರು ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದರು. “ಇಂಡಿಯಾ ಒಕ್ಕೂಟವು ಎಂದಿಗೂ ಮಹಿಳಾ ವಿರೋಧಿ ಮನಸ್ಥಿತಿ ಹೊಂದಿದೆ. ಅವರು ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ವಿರೋಧಿಸಿದರು. ಇಂಡಿಯಾ ಒಕ್ಕೂಟದ ಯಾವುದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೇ ಹೆಚ್ಚು ತೊಂದರೆಯಾಗುತ್ತದೆ. ಹೆಣ್ಣುಮಕ್ಕಳಿಗೆ ತೊಂದರೆಯಾದರೆ, ಹುಡುಗರು ಎಂದ ಮೇಲೆ ತಪ್ಪು ಮಾಡುತ್ತಾರೆ ಎಂದು ಹೇಳುತ್ತಾರೆ. ಆದರೆ, ಯೋಗಿ ಆದಿತ್ಯನಾಥ್‌ ಅವರು ಸಿಎಂ ಆದ ಮೇಲೆ ತಪ್ಪು ಮಾಡುವ ಹುಡುಗರಿಗೆ ತಕ್ಕ ಪಾಠ ಕಲಿಸಿದ್ದಾರೆ. ಇದರಿಂದ ನಮ್ಮ ಸಹೋದರ-ಸಹೋದರಿಯರು ಸುರಕ್ಷಿತವಾಗಿದ್ದಾರೆ” ಎಂದರು.

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಇದನ್ನೂ ಓದಿ: Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Continue Reading
Advertisement
Robert Vadra
ದೇಶ3 mins ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ22 mins ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ33 mins ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ36 mins ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Artificially ripened fruits
ಕರ್ನಾಟಕ36 mins ago

Artificially Ripened Fruits: ಬಾಳೆ, ಮಾವಿನ ಹಣ್ಣಿನಿಂದ ಕ್ಯಾನ್ಸರ್: ದೂರು ಸಲ್ಲಿಕೆ

Legal action if drought relief money is credited to farmers loans says Dr Sushila
ಯಾದಗಿರಿ37 mins ago

Yadgiri News: ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ: ಡಿಸಿ

Shree Bevinalamma Devi Jaladhi Mahotsav celebration in koratagere taluk
ತುಮಕೂರು40 mins ago

Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

udupi Shree Bhandarakeri math annual award programme in bengaluru
ಕರ್ನಾಟಕ42 mins ago

Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

5 foreign coins found in anjanadri temple hundi counting
ಕರ್ನಾಟಕ44 mins ago

Koppala News: ಅಂಜನಾದ್ರಿ ದೇಗುಲ ಹುಂಡಿ ಎಣಿಕೆ; 5‌ ವಿದೇಶಿ ನಾಣ್ಯಗಳು ಪತ್ತೆ

IPL 2024
ಪ್ರಮುಖ ಸುದ್ದಿ1 hour ago

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು10 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು11 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌