IPL 2024 : ಅಪರೂಪಕ್ಕೆ ಧೋನಿಯನ್ನು ಹೊಗಳಿದ ಗೌತಮ್ ಗಂಭೀರ್​ - Vistara News

ಪ್ರಮುಖ ಸುದ್ದಿ

IPL 2024 : ಅಪರೂಪಕ್ಕೆ ಧೋನಿಯನ್ನು ಹೊಗಳಿದ ಗೌತಮ್ ಗಂಭೀರ್​

IPL 2024: ನಾನು ನಾಯಕನಾಗಿದ್ದಾಗ ಪ್ರತಿ ಬಾರಿಯೂ ಗೆಲ್ಲಲು ಬಯಸಿದ್ದೆ. ನನ್ನ ಮನಸ್ಸಿನಲ್ಲಿ ಬಹಳ ಸ್ಪಷ್ಟವಾಗಿತ್ತು. ನೀವು ಧೋನಿಯನ್ನು ಕೇಳಿದರೆ ಅವರೂ ಬಹುಶಃ ಅದೇ ಉತ್ತರವನ್ನು ನೀಡುತ್ತಾರೆ. ನಿಸ್ಸಂಶಯವಾಗಿ, ಎಂಎಸ್ ಧೋನಿ ಭಾರತ ಕಂಡ ಅತ್ಯಂತ ಯಶಸ್ವಿ ನಾಯಕ. 3 ಐಸಿಸಿ ಟ್ರೋಫಿಗಳನ್ನು ಗೆಲ್ಲುವ ಮೂಲಕ ಗರಿಷ್ಠ ಗೌರವ ಪಡೆದುಕೊಂಡಿದ್ದಾರೆ ,” ಎಂದು ಗಂಭೀರ್ ಸ್ಟಾರ್ ಸ್ಪೋಟ್ಸ್ಸ್​​ನ ಸಂದರ್ಶನದಲ್ಲಿ ಹೇಳಿದ್ದಾರೆ.

VISTARANEWS.COM


on

MS Dhoni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ, : ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಐಪಿಎಲ್​ 2024ರ ಪಂದ್ಯಕ್ಕೂ (IPL 2024 ) ಮುನ್ನ ಗೌತಮ್ ಗಂಭೀರ್ ಅವರು ಎಂಎಸ್ ಧೋನಿ ಅವರನ್ನು ಶ್ಲಾಘಿಸಿದ್ದಾರೆ. 2012 ಮತ್ತು 2014ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಪ್ರಶಸ್ತಿ ಗೆಲ್ಲಲು ಗಂಭೀರ್ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ್ದರು. ಅವರ ನಾಯಕತ್ವದ ಅವಧಿಯಲ್ಲಿ ಕೆಕೆಆರ್ () ತಂಡ ಧೋನಿ ನೇತೃತ್ವದ ಸಿಎಸ್​ಕೆ ವಿರುದ್ಧ ಮುಖಾಮುಖಿಯಾಗಿದ್ದಾಗ ಬಿಗ್ ಫೈಟ್​ ನಡೆಯುತ್ತಿದ್ದವು. ಸೋಮವಾರ ನಡೆಯಲಿರುವ ಪಂದ್ಯದ ವೇಳೆ ಭಾರತೀಯ ಕ್ರಿಕೆಟ್​​ನ ಇಬ್ಬರು ಐಕಾನ್​ಗಳು ತಮ್ಮ ತಂಡಗಳಿಗಾಗಿ ವಿಭಿನ್ನ ಪಾತ್ರಗಳನ್ನು ವಹಿಸಲಿದ್ದಾರೆ. ಏಕೆಂದರೆ ಗಂಭೀರ್ ಕೆಕೆಆರ್​​ಗೆ ಮೆಂಟರ್ ಆಗಿದ್ದರೆ ಆದರೆ ಧೋನಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಕೆಆರ್ ಪರ ಆಡಲಿದ್ದಾರೆ.

ನಾನು ನಾಯಕನಾಗಿದ್ದಾಗ ಪ್ರತಿ ಬಾರಿಯೂ ಗೆಲ್ಲಲು ಬಯಸಿದ್ದೆ. ನನ್ನ ಮನಸ್ಸಿನಲ್ಲಿ ಬಹಳ ಸ್ಪಷ್ಟವಾಗಿತ್ತು. ನೀವು ಧೋನಿಯನ್ನು ಕೇಳಿದರೆ ಅವರೂ ಬಹುಶಃ ಅದೇ ಉತ್ತರವನ್ನು ನೀಡುತ್ತಾರೆ. ನಿಸ್ಸಂಶಯವಾಗಿ, ಎಂಎಸ್ ಧೋನಿ ಭಾರತ ಕಂಡ ಅತ್ಯಂತ ಯಶಸ್ವಿ ನಾಯಕ. 3 ಐಸಿಸಿ ಟ್ರೋಫಿಗಳನ್ನು ಗೆಲ್ಲುವ ಮೂಲಕ ಗರಿಷ್ಠ ಗೌರವ ಪಡೆದುಕೊಂಡಿದ್ದಾರೆ ,” ಎಂದು ಗಂಭೀರ್ ಸ್ಟಾರ್ ಸ್ಪೋಟ್ಸ್ಸ್​​ನ ಸಂದರ್ಶನದಲ್ಲಿ ಹೇಳಿದ್ದಾರೆ.

ಉತ್ತಮ ಫಿನಿಶರ್​

42 ವರ್ಷದ ಗಂಭೀರ್ ಅವರು ತಮ್ಮ ಆಟದ ದಿನಗಳಲ್ಲಿ ಧೋನಿ ಮತ್ತು ಅವರ ತಂಡದ ವಿರುದ್ಧ ಆಡುವುದನ್ನು ಸಾಕಷ್ಟು ಇಷ್ಟಪಟ್ಟಿದ್ದೆ ಎಂಬುದಾಗಿ ಹೇಳಿದರು ಧೋನಿ (MS Dhoni) ಕ್ರೀಸ್​ನಲ್ಲಿ ಇರುವವರೆಗೂ ಚೆನ್ನೈಗೆ ಗೆಲ್ಲುವ ಅವಕಾಶ ಇರುತ್ತದೆ ಎಂಬುದು ತಿಳಿದಿರುವ ವಿಷಯ ಎಂದು ಗಂಭೀರ್ ಹೊಗಳಿದ್ದಾರೆ.

ಇದನ್ನೂ ಓದಿ: IPL 2024 : ಪಂಜಾಬ್​ ಕಿಂಗ್ಸ್​ ತಂಡಕ್ಕೆ ಇಕ್ಕಟ್ಟು ; ಹರಿಯಾಣ ಕೋರ್ಟ್​ನಲ್ಲಿ ಬಿತ್ತು ಕೇಸು

” ಹೌದು, ಐಪಿಎಲ್​ನಲ್ಲಿ ಎಂಎಸ್​ ಧೋನಿ ತಂತ್ರಗಾರಿಕೆಯ ಮನಸ್ಥಿತಿ ಹೊಂದಿರುತ್ತಾರೆ. ಹೀಗಾಗಿ ಅವರ ವಿರುದ್ಧ ಆಡವಾಗ ಖುಷಿ ಎನಿಸುತ್ತಿತ್ತು. ಅವರು ತಂತ್ರಗಾರಿಕೆಯಲ್ಲಿ ತುಂಬಾ ನಿಪುಣ. ಸ್ಪಿನ್ನರ್​ಗಳನ್ನು ಹೇಗೆ ನಿಯಂತ್ರಿಸಬೇಕು, ಅವರ ವಿರುದ್ಧ ಫೀಲ್ಡಿಂಗ್​ ಹೇಗೆ ಹೊಂದಿಸಬೇಕು ಎಂದು ತಿಳಿದಿತ್ತು . ಅವರು ಎಂದಿಗೂ ಅವಕಾಶ ಬಿಟ್ಟುಕೊಡುವುದಿಲ್ಲ. 6 ಅಥವಾ 7 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೂ ಆಟ ಮುಗಿಯುವ ತನಕ ಇರುತ್ತಿದ್ದರು. ಒಂದು ಓವರ್​ನಲ್ಲಿ 20 ರನ್​ಗಳ ಅಗತ್ಯವಿದ್ದರೂ, ಎಂಎಸ್ ಇದ್ದರೆ ಪಂದ್ಯ ಅವರ ಪರವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಅದೇ ಸಮಯದಲ್ಲಿ, ಸೂಪರ್ ಕಿಂಗ್ಸ್​​ ತಂಡಕ್ಕೆ ಸವಾಲೊಡ್ಡುವ ಬೌಲಿಂಗ್ ದಾಳಿಯನ್ನು ನಾನು ಹೊಂದಿದ್ದೇನೆ ಎಂದು ನನಗೆ ತಿಳಿದಿತ್ತು. ತಂತ್ರಗಾರಿಕೆಯು ಪ್ರತಿ ರಂಗದಲ್ಲೂ ಧೋನಿಗಿಂಥ ಉತ್ತಮವಾಗಿರಬೇಕು ಎಂದು ತಿಳಿದಿತ್ತು ಏಕೆಂದರೆ ಅವರು ಮೈದಾನದಲ್ಲಿ ಅಷ್ಟು ಆಕ್ರಮಣಕಾರಿಯಾಗಿಲ್ಲ, ಆದರೂ ಗೆಲುವು ಬಿಟ್ಟುಕೊಡುವುದಿಲ್ಲ ಎಂದು ತಿಳಿದಿತ್ತು. ಚೆನ್ನೈ ಆ ರೀತಿಯ ತಂಡವಾಗಿದೆ,. ಅವರ ವಿರುದ್ಧ ನೀವು ಕೊನೆಯ ಎಸೆತವನ್ನು ಎಸೆಯುವವರೆಗೂ ಗೆಲ್ಲುವುದಿಲ್ಲ ಎಂದು ಗಂಭೀರ್ ಧೋನಿಯನ್ನು ಕೊಂಡಾಡಿದರು.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣವು ಸೋಮವಾರ ಎರಡು ಯಶಸ್ವಿ ಫ್ರಾಂಚೈಸಿಗಳನ್ನು ಪರಸ್ಪರ ಮುಖಾಮುಖಿಯಾಗಲಿವೆ. ಐಪಿಎಲ್ 2024 ರಲ್ಲಿ ಕೆಕೆಆರ್ ತನ್ನ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಅಜೇಯವಾಗಿದ್ದರೆ, ತವರು ತಂಡವು ಸತತ ಎರಡು ಸೋಲುಗಳಿಂದ ಹೊರಬರಬೇಕಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

IND vs PAK :

VISTARANEWS.COM


on

IND vs PAK
Koo

ಬೆಂಗಳೂರು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಳಾ ಅವರು ಕ್ರಿಕೆಟ್ ಅಭಿಮಾನಿ. ಕ್ರಿಕೆಟ್​ ಪಂದ್ಯಗಳನ್ನು ತಪ್ಪದೇ ವೀಕ್ಷಿಸುತ್ತಾರೆ. ಅದರಲ್ಲೂ ಭಾರತದ ಪಂದ್ಯವಿದ್ದರೆ ಅವರಿಗೆ ಹಬ್ಬ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ಪುರುಷರ ಟಿ 20 ವಿಶ್ವಕಪ್ 2024 ರ ಪಂದ್ಯಕ್ಕೆ ಹಾಜರಾದ ದೊಡ್ಡ ಹೆಸರುಗಳಲ್ಲಿ ಅವರು ಇದ್ದರೂ. ಮೈಕ್ರೋಸಾಫ್ಟ್ ಸಿಇಒ ಭಾರತೀಯ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಉದ್ಯಮಿ ಗೌರವ್ ಜೈನ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ . ಈ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

“ಸೂಪರ್ ಅಭಿಮಾನಿ @satyanadella #PakvsInd #t20USA ತಂಡದೊಂದಿಗೆ ಟೀಮ್ ಇಂಡಿಯಾವನ್ನು ಹುರಿದುಂಬಿಸಲು ಉತ್ಸುಕನಾಗಿದ್ದೇನೆ” ಎಂದು ಜೈನ್ ಪೋಸ್ಟ್​​ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಈ ಚಿತ್ರವನ್ನು ಹೊಸದಾಗಿ ನಿರ್ಮಿಸಲಾದ ಕ್ರೀಡಾಂಗಣದ ಸ್ಟ್ಯಾಂಡ್​ಗಳ ಮೇಲಿನಿಂದ ತೆಗೆದುಕೊಳ್ಳಲಾಗಿದೆ.

ಭಾನುವಾರ ರಾತ್ರಿ ಪೋಸ್ಟ್​​ ಹಂಚಿಕೊಂಡಾಗಿನಿಂದ, (ಹಿಂದೆ ಟ್ವಿಟರ್) ನಲ್ಲಿ 2.7 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. “ಸಿಲಿಕಾನ್ ವ್ಯಾಲಿಯ ಅರ್ಧದಷ್ಟು ಭಾಗವು ಒಟ್ಟುಗೂಡಿದೆ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಮಹಾಕಾವ್ಯ !!” ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು “ಇದು ಅಮೆರಿಕದಲ್ಲಿರುವ ಭಾರತೀಯರಿಗೆ ಸೂಪರ್​ಬೌಲ್​ ಎಂದು ಹೇಳಿದ್ದಾರೆ. “ಅವರು ಜೆರ್ಸಿಯನ್ನು ನಿರೀಕ್ಷಿಸಿರಲಿಲ್ಲ” ಎಂದು ಎಕ್ಸ್ ಬಳಕೆದಾರರೊಬ್ಬರು ಹೇಳಿದರು.

ಟೂರ್ನಿಯ ಕೇಂದ್ರ ಬಿಂದು ಈ ಪಂದ್ಯ

ಕ್ರೀಡಾ ಜಗತ್ತಿನಲ್ಲಿ ಅತ್ಯಂತ ತೀವ್ರವಾದ ಭಾರತ-ಪಾಕಿಸ್ತಾನ ಕ್ರಿಕೆಟ್ ಪೈಪೋಟಿಯು ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ಎಂದಿಗೂ ವಿಫಲವಾಗುವುದಿಲ್ಲ. ಈ ಪಂದ್ಯವು ಇದಕ್ಕೆ ಹೊರತಾಗಿರಲಿಲ್ಲ, ಪ್ರಪಂಚದಾದ್ಯಂತದ ವೀಕ್ಷಕರನ್ನು ಸೆಳೆಯಿತು ಮತ್ತು ಕ್ರಿಕೆಟ್​​ನ ಉತ್ಸಾಹವನ್ನು ಪ್ರದರ್ಶಿಸಿತು. ಟಿ20 ವಿಶ್ವಕಪ್ ಟೂರ್ನಿಯಲ್ಲಿ 120 ರನ್​ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ಸೋತಿದೆ. ಆರಂಭದಲ್ಲಿ ಪಾಕಿಸ್ತಾನ ಉತ್ತಮವಾಗಿ ಆಡಿತು. ಕ್ರಮೇಣ ವಿಕೆಟ್​ಗಳನ್ನು ಕಳೆದುಕೊಂಡು ಆರು ರನ್​ಗಳಿಂದ ಸೋತಿತ. ಭಾರತದ ಪರ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 2 ವಿಕೆಟ್ ಪಡೆದರು.

ಇದನ್ನೂ ಓದಿ :IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

ಭಾರತ-ಅಮೆರಿಕನ್ ಸಿಇಒ ಕ್ರಿಕೆಟ್ ಮೇಲಿನ ತಮ್ಮ ಪ್ರೀತಿಯ ಬಗ್ಗೆ ಆಗಾಗ ಹೇಳುತ್ತಿರುತ್ತಾರೆ. ಕ್ರೀಡೆಯು ಅವರಿಗೆ ಟೀಮ್​ ವರ್ಕ್​ ಮತ್ತು ನಾಯಕತ್ವ ಕಲಿಸಿದೆ. ಅದು ಕಾರ್ಪೊರೇಟ್ ಪ್ರಪಂಚ ಎದುರಿಸುವ ಅಚ್ಚರಿಗಳಿಂದ ಮೇಲಕ್ಕೇರಲು ಸಹಾಯ ಮಾಡಿತು ಎಂದು ಹೇಳಿದ್ದಾರೆ. “ಕ್ರಿಕೆಟ್ ನನಗೆ ತಂಡಗಳಲ್ಲಿ ಕೆಲಸ ಮಾಡುವ ಕುರಿತು ಮತ್ತು ವೃತ್ತಿಜೀವನದುದ್ದಕ್ಕೂ ನಾಯಕತ್ವದ ಬಗ್ಗೆ ನನಗೆ ಹೆಚ್ಚು ಕಲಿಸಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಮೈಕ್ರೋಸಾಫ್ಟ್ ಸಿಇಒ ಆಗಿ ನೇಮಕವಾದಾಗ ಹೇಳಿದ್ದರು.

Continue Reading

ಕ್ರೀಡೆ

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

IND vs PAK:

VISTARANEWS.COM


on

IND VS PAK
Koo

ನ್ಯೂಯಾರ್ಕ್: : ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ (T20 World Cup) ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು(IND vs PAK) ಮಣಿಸಿದೆ. ಇದರೊಂದಿಗೆ ಟಿ20 ವಿಶ್ವ ಕಪ್​ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು 8-1ರ ಮುನ್ನಡೆಗೆ ಕೊಂಡೊಯ್ದಿದೆ. ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್​​ ಇಳಿಯುವುದರೊಂದಿಗೆ ಆಟ ಪ್ರಾರಂಭವಾಯಿತು. ಮೊದಲ ಇನ್ನಿಂಗ್ಸ್ ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ಕೇವಲ 119 ರನ್ ಗಳಿಸಲಷ್ಟೇ ಶಕ್ತವಾಯಿತು. ಆದಾಗ್ಯೂ, ಮೆನ್ ಇನ್ ಬ್ಲೂ (Men In Blue) ತಂಡವು ಬೌಲಿಂಗ್​ ಸಾಮರ್ಥ್ಯವನ್ನು ಬಂಡವಾಳ ಮಾಡಿಕೊಂಡಿತು. ಒಂದು ಹಂತದಲ್ಲಿ ಕೈ ಜಾರುತ್ತಿರುವಂತೆ ಕಂಡುಬಂದರೂ ಭಾರತವು ಚೇತರಿಕೆಯ ನಂತರ ಅದನ್ನು ಮರಳಿ ತರುವಲ್ಲಿ ಯಶಸ್ವಿಯಾಯಿತು.

ಪಂದ್ಯದ ನಂತರ, ದೆಹಲಿ ಪೊಲೀಸರ ಅಧಿಕೃತ ಎಕ್ಸ್ ಹ್ಯಾಂಡಲ್ ತಮಾಷೆಯೊಂದನ್ನು ಮಾಡಿತು. ಪೊಲೀಸರ ಬಳಗ ಸಾಮಾಜಿಕ ಮಾಧ್ಯಮದ ಮೂಲಕ ನ್ಯೂಯಾರ್ಕ್​​ ಸಿಟಿ ಪೊಲೀಸರಿಗೆ ಸಂದೇಶವೊಂದನ್ನು ಟ್ಯಾಗ್ ಮಾಡಿತು “ಹೇ, @NYPDnews, ನಾವು ಎರಡು ದೊಡ್ಡ ಶಬ್ದಗಳನ್ನು ಕೇಳಿದ್ದೇವೆ. ಒಂದು “ಇಂಡಿಯಾ ಎ.. ಭಾರತ!” ಇನ್ನೊಂದು ಬಹುಶಃ ಮುರಿದ ಟಿವಿಗಳಾಗಿದ್ದರಬಹುದು. ದಯವಿಟ್ಟು ದೃಢೀಕರಿಸುವಿರಾ?” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪಂದ್ಯ ನಡೆದ ನ್ಯೂಯಾರ್ಕ್​ ಸಿಟಿಯ ನಸ್ಸೌ ಸ್ಟೇಡಿಯಮ್​ನಲ್ಲಿ ಸುಮಾರು 125 ಡೆಸಿಬಲ್​ನಷ್ಟು ಸದ್ದು ಭಾರತೀಯ ಕ್ರಿಕೆಟ್​ ಪ್ರೇಮಿಗಳಿಂದ ಕೇಳಿ ಬಂದಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ಸೋತ ಕಾರಣ ಯಥಾವತ್ ಅಲ್ಲಿನ ಪ್ರೇಕ್ಷಕರು ಟಿವಿ ಒಡೆದು ಹಾಕಿರಬಹುದು ಎಂದು ಡೆಲ್ಲಿ ಪೊಲೀಸರು ತಮಾಷೆ ಮಾಡಿದ್ದಾರೆ.

ಭಾರತಕ್ಕೆ ಸತತ ಎರಡನೇ ವಿಜಯ

ರೋಹಿತ್ ಶರ್ಮಾ 13 ಹಾಗೂ ವಿರಾಟ್ ಕೊಹ್ಲಿ 4 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ 20 ರನ್ ಗಳಿಸಿ ನಿರ್ಗಮಿಸಿದರೆ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಕ್ರಮವಾಗಿ ಕೇವಲ 7 ಮತ್ತು 3 ರನ್ ಸೇರಿಸಿದರು.

ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಗಳಿಸುವ ಮೂಲಕ ಭಾರತ ಇನ್ನಿಂಗ್ಸ್ ಅನ್ನು ಸ್ಥಿರಗೊಳಿಸಲು ಸಹಾಯ ಮಾಡಿದರು. ಅವರ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ ಒಟ್ಟು 119 ರನ್ ಗಳಿಸಲು ಸಹಾಯ ಮಾಡಿತು. ಪಾಕಿಸ್ತಾನದ ಪರ ನಸೀಮ್ ಶಾ ಹಾಗೂ ಹ್ಯಾರಿಸ್ ರವೂಫ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಭಾರತದ ಪರ ಮೊಹಮ್ಮದ್ ಅಮೀರ್ 2 ವಿಕೆಟ್ ಕಿತ್ತರೆ, ಶಾಹೀನ್ ಅಫ್ರಿದಿ 1 ವಿಕೆಟ್ ಪಡೆದರು.

ಇದನ್ನೂ ಓದಿ: T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

ಗುರಿ ಬೆನ್ನಟ್ಟಿದ ಪಾಕಿಸ್ತಾನ ಪರ ಆರಂಭಿಕ ಆಟಗಾರರಾದ ಬಾಬರ್ ಅಜಮ್ 13 ಮತ್ತು ಮೊಹಮ್ಮದ್ ರಿಜ್ವಾನ್ 31 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಉಸ್ಮಾನ್ ಖಾನ್, ಫಖರ್ ಜಮಾನ್ ಮತ್ತು ಇಮಾದ್ ವಾಸಿಮ್ ಕ್ರಮವಾಗಿ 13, 13 ಮತ್ತು 15 ರನ್ ಗಳಿಸಿದರು.

ಪಂದ್ಯದ ಒಂದು ಹಂತದಲ್ಲಿ, ಪಾಕಿಸ್ತಾನವು ಪ್ರತಿ ಎಸೆತಕ್ಕೆ ಒಂದು ರನ್ ಗಳಿಸಬೇಕಾಗಿತ್ತು. ಆದರೆ ನಂತರದಲ್ಲಿ ಭಾರತವು ಪಂದ್ಯದಲ್ಲಿಹಿಡಿದ ಸಾಧಿಸಿತು. ಭಾರತದ ಪರ ಜಸ್ಪ್ರೀತ್ ಬುಮ್ರಾ 3, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಅರ್ಷ್ದೀಪ್ ಸಿಂಗ್ ತಲಾ 1 ವಿಕೆಟ್ ಪಡೆದರು.

Continue Reading

ಪ್ರಮುಖ ಸುದ್ದಿ

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದು ಸಂಭವಿಸಿದೆ. ಎನ್‌ಎಸ್‌ಇ ನಿಫ್ಟಿ 50 ತಾಜಾ ಗರಿಷ್ಠ 23,411.90 ಕ್ಕೆ ಏರಿತು ಮತ್ತು ಸೆನ್ಸೆಕ್ಸ್ ಜೀವಿತಾವಧಿಯ ದಾಖಲೆ 77,079.04 ಕ್ಕೆ ಏರಿತು.

VISTARANEWS.COM


on

Narendra Modi And stock market news
Koo

ಮುಂಬಯಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಐತಿಹಾಸಿಕ ಮೂರನೇ ಅವಧಿಗೆ ಪ್ರಮಾಣ ವಚನ (Oath taking) ಸ್ವೀಕರಿಸಿದ ನಂತರ ಬೆಂಚ್‌ಮಾರ್ಕ್ ಷೇರು ಮಾರುಕಟ್ಟೆ (Stock Market News) ಸೂಚ್ಯಂಕಗಳು ಸೋಮವಾರ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದವು. ಸೆನ್ಸೆಕ್ಸ್ (Sensex) ಮೊದಲ ಬಾರಿಗೆ ದಾಖಲೆ 77,000 ಗಡಿಯನ್ನು ಮೀರಿದೆ. ನಿಫ್ಟಿ 50 (Nifty 50) ಸಹ ಹೊಸ ಶಿಖರವನ್ನು ತಲುಪಿತು.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ನೇತೃತ್ವದಲ್ಲಿ ಷೇರುಗಳ ಬೆಲೆಗಳು ಇಂದು ಮುಂಜಾನೆಯಿಂದ ಮುನ್ನುಗ್ಗಿ ಸೂಚ್ಯಂಕಗಳು ಹೊಸ ಗರಿಷ್ಠ ಮಟ್ಟವನ್ನು ತಲುಪಿದವು. ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದು ಸಂಭವಿಸಿದೆ. ಎನ್‌ಎಸ್‌ಇ ನಿಫ್ಟಿ 50 ತಾಜಾ ಗರಿಷ್ಠ 23,411.90 ಕ್ಕೆ ಏರಿತು ಮತ್ತು ಸೆನ್ಸೆಕ್ಸ್ ಜೀವಿತಾವಧಿಯ ದಾಖಲೆ 77,079.04 ಕ್ಕೆ ಏರಿತು.

ನಿಫ್ಟಿಯಲ್ಲಿ ಅದಾನಿ ಪೋರ್ಟ್ಸ್, ಪವರ್ ಗ್ರಿಡ್ ಕಾರ್ಪ್, ಬಜಾಜ್ ಆಟೋ, ಕೋಲ್ ಇಂಡಿಯಾ ಮತ್ತು ಶ್ರೀರಾಮ್ ಫೈನಾನ್ಸ್ ಪ್ರಮುಖ ಲಾಭ ಗಳಿಸಿದವು. ನಿಫ್ಟಿಯಲ್ಲಿ ಟೆಕ್ ಮಹೀಂದ್ರಾ, ಇನ್ಫೋಸಿಸ್, ಡಾ ರೆಡ್ಡೀಸ್ ಲ್ಯಾಬ್ಸ್, ಎಲ್‌ಟಿಐಮಿಂಡ್‌ಟ್ರೀ ಮತ್ತು ಹಿಂಡಾಲ್ಕೊ ಅತಿ ಹೆಚ್ಚು ನಷ್ಟ ಅನುಭವಿಸಿದವು.

ಐಟಿ ಮತ್ತು ಲೋಹವನ್ನು ಹೊರತುಪಡಿಸಿ ಎಲ್ಲಾ ವಲಯದ ಸೂಚ್ಯಂಕಗಳು ಏರಿಕೆಯ ಬೆಲೆಗಳಲ್ಲಿ ವಹಿವಾಟಾಗುತ್ತಿವೆ. ಶುಕ್ರವಾರದಂದು (ಜೂನ್ 7), 30-ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 1,720.8 ಪಾಯಿಂಟ್‌ಗಳು ಅಥವಾ 2.29 ಶೇಕಡಾ ಜಿಗಿದು 76,795.31 ರ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದವು.

ಯುರೋಪಿಯನ್ ಪಾರ್ಲಿಮೆಂಟ್ ಚುನಾವಣೆಗಳ ನಂತರ ಕೌಂಟಿಯಲ್ಲಿ ಕ್ಷಿಪ್ರ ಚುನಾವಣೆಯನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಕರೆದಿದ್ದರಿಂದ ಯುರೋ ತುಸು ದುರ್ಬಲವಾಗಿದೆ. ಚೀನಾ, ಹಾಂಗ್ ಕಾಂಗ್, ತೈವಾನ್ ಮತ್ತು ಆಸ್ಟ್ರೇಲಿಯಾದ ಮಾರುಕಟ್ಟೆಗಳು ಸೋಮವಾರ ಮುಚ್ಚಲ್ಪಟ್ಟಿವೆ. US ಉದ್ಯೋಗಗಳ ವರದಿಯು ಫೆಡರಲ್ ರಿಸರ್ವ್ ಬಡ್ಡಿದರ ಕಡಿತದ ಬಗ್ಗೆ ಮರುಚಿಂತನೆಗೆ ಮುಂದಾದ ನಂತರ ಮಾರುಕಟ್ಟೆಯಲ್ಲಿ ಇಳಿಕೆ ಉಂಟಾಗಿದೆ. ಹೂಡಿಕೆದಾರರು ಪ್ರಮುಖ ಉದ್ಯಮ ವರದಿಗಳು ಮತ್ತು ಫೆಡ್‌ನ ದರ ನಿರ್ಧಾರವನ್ನು ಎದುರು ನೋಡುವುದರಿಂದ, ಒಂದು ವಾರದಿಂದ ತೈಲ ದರ ಕುಸಿಯುತ್ತಾ ಹೋಗಿ ಇಂದು ಸ್ಥಿರವಾಗಿದೆ.

ಇಂದು ನರೇಂದ್ರ ಮೋದಿ ಹೊಸ ಸಂಪುಟದ ಮೊದಲ ಸಭೆ

ಹೊಸದಿಲ್ಲಿ: ಇಂದು ಸಂಜೆ 5 ಗಂಟೆಗೆ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅವಧಿಯ ಸರ್ಕಾರದ (Modi 3.0) ಮೊದಲ ಸಂಪುಟ ಸಭೆ (Cabinet meeting) ನಡೆಯಲಿದೆ. ಪ್ರಧಾನಿಯವರ ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಸಭೆ ಆಯೋಜನೆಗೊಂಡಿದೆ.

ನಿನ್ನೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಪ್ರಧಾನಿಯಾಗಿ ಮೋದಿ ಇನ್ನಿತರ 72 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಕರ್ನಾಟಕದ ಐವರೂ ಸೇರಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರೊಂದಿಗೆ ಇಂದು ಮೋದಿ ಸಭೆ ನಡೆಸಲಿದ್ದಾರೆ.

ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.

ಬಿಹಾರದ ನಿತೀಶ್‌ ಕುಮಾರ್‌ ಅವರು ಜೆಡಿಯುಗೆ ಕೃಷಿ ಖಾತೆ ನೀಡುವಂತೆ ಡಿಮ್ಯಾಂಡ್‌ ಮಾಡಿದ್ದಾರೆ. ಆದರೆ ಕರ್ನಾಟಕದ ಎಚ್‌.ಡಿ ಕುಮಾರಸ್ವಾಮಿ ಅವರೂ ಕೃಷಿ ಖಾತೆ ನೀಡಿದರೆ ನಿರ್ವಹಿಸಲು ತಾನು ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ತೆಲುಗು ದೇಶಂನ ಚಂದ್ರಬಾಬು ನಾಯ್ಡು ಅವರೂ ಮಹತ್ವದ ಖಾತೆಗಳನ್ನು ಕೇಳಿದ್ದಾರೆ.

ಆದರೆ ಈಗ ಪ್ರಮಾಣ ವಚನ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ನೋಡಿದರೆ, ಕ್ಯಾಬಿನೆಟ್‌ ದರ್ಜೆಯ 11 ಸ್ಥಾನಗಳನ್ನು ಬಿಜೆಪಿ ತನ್ನ ಜೊತೆಗೇ ಇಟ್ಟುಕೊಂಡಿದೆ. ಟಿಡಿಪಿಗೆ 2, ಜೆಡಿಯುಗೆ 2, ಜೆಡಿಎಸ್‌, ಶಿವಸೇನೆ, ಎಲ್‌ಜೆಪಿ, ಆರ್‌ಎಲ್‌ಡಿ ಮುಂತಾದ ಪಕ್ಷಗಳಿಗೆ ತಲಾ ಒಂದೊಂದು ಸ್ಥಾನಗಳನ್ನು ನೀಡಿದೆ. ಈಗ ಯಾವ ಖಾತೆ ಯಾರಿಗೆ ಎಂಬ ನಿರ್ಣಯ ಇನ್ನು ಆಗಬೇಕಿದೆ. ಮಿತ್ರಪಕ್ಷಗಳು ಮಹತ್ವದ ಖಾತೆಗಾಗಿ ಪಟ್ಟು ಹಿಡಿಯುತ್ತವೆಯೇ ಅಥವಾ ಕೊಟ್ಟದ್ದಕ್ಕೆ ತೃಪ್ತವಾಗುತ್ತವೆಯೇ ಎಂದು ನೋಡಬೇಕಿದೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

Continue Reading

ಪ್ರಮುಖ ಸುದ್ದಿ

Personality Development: ಈ 10 ಸೂತ್ರ ಪಾಲಿಸಿದರೆ ನೆಮ್ಮದಿಯ ಬದುಕು ಗ್ಯಾರಂಟಿ!

ಯಾವ ರೀತಿ ಕುದಿಯುವ ನೀರಿನಲ್ಲಿ ನಮ್ಮ ಮುಖ ನಮಗೆ ಕಾಣುವುದಿಲ್ಲವೋ ಹಾಗೆಯೇ ಸಿಟ್ಟಿನಲ್ಲಿದ್ದಾಗ ಮನುಷ್ಯ ತನ್ನ ತಪ್ಪನ್ನು ಅರಿತುಕೊಳ್ಳುವುದಿಲ್ಲ. ಶಾಂತವಾದ ಮತ್ತು ಶುದ್ಧವಾದ ಪರಿಸರದಲ್ಲಿ ತನ್ನ ತನು, ಮನಗಳನ್ನು ಶುದ್ಧೀಕರಿಸಿಕೊಳ್ಳಲು ಆ ಮೂಲಕ ತನ್ನನ್ನು ತಾನು ತಿದ್ದಿಕೊಳ್ಳಲು ಈ ಕೆಲವು ವಿಷಯಗಳು ಮನುಷ್ಯನಿಗೆ ಸಹಾಯಕವಾಗುತ್ತವೆ. ನಮ್ಮ ವ್ಯಕ್ತಿತ್ವ ವಿಕಸನಗೊಳಿಸುವ (Personality Development) ಹತ್ತು ಸೂತ್ರಗಳು ಇಲ್ಲಿವೆ.

VISTARANEWS.COM


on

Personality Development
Koo
Veena Hemant Gowda Patil Mundaragi, Gadag

-ವೀಣಾ ಹೇಮಂತ್ ಗೌಡ ಪಾಟೀಲ್ ಮುಂಡರಗಿ, ಗದಗ
ನಮ್ಮ ದೇಹವು (Personality Development) ಪಂಚಭೂತಗಳಾದ ಪೃಥ್ವಿ, ಆಕಾಶ, ವಾಯು, ಜಲ ಮತ್ತು ಅಗ್ನಿ ತತ್ವಗಳಿಂದ ಕೂಡಿದೆ. ಹುಟ್ಟಿದಾಗ ನಾವು ಪರಿಶುದ್ಧರಾಗಿಯೇ ಇದ್ದು ಜೀವಿತಾವಧಿಯಲ್ಲಿ ಸಿಟ್ಟು ಸೆಡವು ಕೋಪ ತಾಪ ದ್ವೇಷ ಅಸೂಯೆ, ಸುಖ ಸಂತೋಷ ನೆಮ್ಮದಿ ರಾಗ ಮುಂತಾದ ಎಲ್ಲಾ ರೀತಿಯ ಭಾವಗಳಿಗೆ ಸ್ಪಂದಿಸುತ್ತ ಬೆಳೆಯುತ್ತೇವೆ. ಒಟ್ಟಿನಲ್ಲಿ ಮನುಷ್ಯ ಜೀವಿ ಕಾರ್ಕೋಟಕ ವಿಷಕ್ಕಿಂತಲೂ ಕಡೆ ಎಂದು ಭಾವಿಸುವಂತೆ ತನ್ನ ಜೀವಿತಾವಧಿಯನ್ನು ಮನುಷ್ಯ ಕಳೆಯುತ್ತಾನೆ. ಯಾವ ರೀತಿ ಅಗರ ಬತ್ತಿಯು ತನ್ನನ್ನು ತಾನು ಸುಟ್ಟು ಕೊಳ್ಳುವುದೋ ಹಾಗೆಯೇ ನಮ್ಮಲ್ಲಿ ಉಂಟಾಗುವ ದ್ವೇಷ, ಅಸೂಯೆ, ಮದ, ಮತ್ಸರಗಳು ನಮ್ಮನ್ನು ನಮಗರಿವಿಲ್ಲದೆಯೇ ಸುಟ್ಟು ಹಾಕುತ್ತವೆ. ಯಾವ ರೀತಿ ಕುದಿಯುವ ನೀರಿನಲ್ಲಿ ನಮ್ಮ ಮುಖ ನಮಗೆ ಕಾಣುವುದಿಲ್ಲವೋ ಹಾಗೆಯೇ ಸಿಟ್ಟಿನಲ್ಲಿದ್ದಾಗ ಮನುಷ್ಯ ತನ್ನ ತಪ್ಪನ್ನು ಅರಿತುಕೊಳ್ಳುವುದಿಲ್ಲ. ಶಾಂತವಾದ ಮತ್ತು ಶುದ್ಧವಾದ ಪರಿಸರದಲ್ಲಿ ತನ್ನ ತನು, ಮನಗಳನ್ನು ಶುದ್ಧೀಕರಿಸಿಕೊಳ್ಳಲು ಆ ಮೂಲಕ ತನ್ನನ್ನು ತಾನು ತಿದ್ದಿಕೊಳ್ಳಲು ಈ ಕೆಲವು ವಿಷಯಗಳು ಮನುಷ್ಯನಿಗೆ ಸಹಾಯಕವಾಗುತ್ತವೆ. ನೀರಿನ ಸೇವನೆಯಿಂದ….. ದೇಹವು ಶುದ್ದವಾಗುತ್ತದೆ. ಹೆಚ್ಚು ನೀರು ಸೇವನೆ ಮಾಡುವುದರಿಂದ ಮನುಷ್ಯನ ದೇಹದಲ್ಲಿರುವ ಕಶ್ಮಲಗಳು ಮೂತ್ರ, ಮಲ ಮತ್ತು ಬೆವರಿನ ರೂಪದಲ್ಲಿ ಹೊರಹಾಕಲ್ಪಡುತ್ತದೆ. ಯೋಗಾಸನವನ್ನು ಮಾಡುವುದರಿಂದ ಮನುಷ್ಯ ತನ್ನ ಆಂತರಿಕ ಮತ್ತು ಮಾನಸಿಕ ಕಶ್ಮಲಗಳನ್ನು ಹೊರ ಹಾಕುತ್ತಾನೆ, ಇದರಿಂದ ಮನಸ್ಸು ಪ್ರಶಾಂತವಾಗಿ ಪ್ರಪುಲಿತವಾಗಿರುತ್ತದೆ. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶವಿರುವುದಿಲ್ಲ.

Pranayama Yoga Poses For Bright And Glowing Skin

ಪ್ರಾಣಾಯಾಮ ಸೂಕ್ತ

ಪ್ರಾಣಾಯಾಮ ಮಾಡುವುದರಿಂದ ಉಸಿರಾಟ ಶುದ್ಧವಾಗುತ್ತದೆ. ಪ್ರತಿನಿತ್ಯ ಪ್ರಾಣಾಯಾಮದ ಅಭ್ಯಾಸ ಮಾಡುವುದು ಅನೇಕ ಮನೋ ದೈಹಿಕ ಕಾಯಿಲೆಗಳಿಗೆ ರಾಮಬಾಣದಂತೆ. ಕನಿಷ್ಠ ಮೂರು ನಿಮಿಷದಿಂದ ಗರಿಷ್ಠ ಮುಕ್ಕಾಲು ಗಂಟೆಯವರೆಗೆ ಪ್ರಾಣಾಯಾಮದ ಅಭ್ಯಾಸ ಮಾಡಿದಾಗ ಮನಸ್ಸು ಸಂಪೂರ್ಣ ನಿರಾಳವಾಗಿ ಜಂಜಡಗಳಿಂದ ಮುಕ್ತವಾಗುತ್ತದೆ. ಯಾವುದೇ ರೀತಿಯ ಆತಂಕ ಭಯಗಳಿಂದ ಮುಕ್ತವಾಗುತ್ತದೆ. ಸತತವಾಗಿ ಪ್ರಾಣಾಯಾಮದ ಅಭ್ಯಾಸ ಮಾಡುವುದರಿಂದ ವ್ಯಕ್ತಿಯು ಮಾನಸಿಕ ಒತ್ತಡ, ರಕ್ತದೊತ್ತಡ,
ಹೃದ್ರೋಗ ಮುಂತಾದ ಕಾಯಿಲೆಗಳಿಂದ ಮುಕ್ತನಾಗುತ್ತಾನೆ.

Meditation Yoga Poses For Bright And Glowing Skin

ಧ್ಯಾನ ಉತ್ತಮ ಅಭ್ಯಾಸ

ಧ್ಯಾನ ಮಾಡುವುದರಿಂದ ಮನಸ್ಸು ಶುದ್ದವಾಗುತ್ತದೆ. ಧ್ಯಾನವು ಮನಸ್ಸನ್ನು ಒಂದು ನಿಶ್ಚಿತ ಏಕಾಗ್ರತೆಯತ್ತ ಕೊಂಡೊಯ್ಯುವ ಸಾಧನ. ಸರಳವಾದ ಬಟ್ಟೆಯನ್ನು ತೊಟ್ಟು ಅನುಕೂಲಕರ ಆಸನದಲ್ಲಿ ಕುಳಿತು ಕತ್ತು, ಬೆನ್ನು ಮತ್ತು ತಲೆಯನ್ನು ನೇರವಾಗಿ ಇಟ್ಟುಕೊಂಡು ಕಣ್ಣು ಮುಚ್ಚಿ ಧ್ಯಾನಮಗ್ನ ರಾಗುವ ವ್ಯಕ್ತಿಗಳಿಗೆ ಅಪಾರವಾದ ಮಾನಸಿಕ ಶಾಂತಿ ಮತ್ತು ತನ್ಮೂಲಕ ಸ್ಥಿತಪ್ರಜ್ಞತೆ ಲಭಿಸುತ್ತದೆ. ಇಂದಿನ ಒತ್ತಡಭರಿತ ದೈನಂದಿನ ಜೀವನದಲ್ಲಿ ಧ್ಯಾನವನ್ನು ಅಭ್ಯಾಸ ಮಾಡುವುದು ಅತ್ಯಂತ ಸೂಕ್ತವಾದದ್ದು.

ಜ್ಞಾನ ಸಂಪಾದಿಸುವುದರಿಂದ…

ಇದರಿಂದ ಜಾಣ್ಮೆ, ಉನ್ನತ ವಿಚಾರಧಾರೆಗಳ ಹರಿವು ಹೆಚ್ಚುತ್ತದೆ. ಜ್ಞಾನ ಸಂಪಾದನೆಯು ಎಲ್ಲಾ ಚಟುವಟಿಕೆಗಳಲ್ಲಿಯೇ ಮಹತ್ತರವಾದ ಕ್ರಿಯೆ. ತಿಳಿದವರಿಂದ, ಪಂಡಿತರಿಂದ, ಜ್ಞಾನಿಗಳಿಂದ ಪುಸ್ತಕಗಳಿಂದ ಅನುಭವಗಳಿಂದ ಸಂಪಾದಿಸುವ ಜ್ಞಾನ ನಮ್ಮ ಜೀವಿತದ ಕೊನೆಯವರೆಗೂ ನಮ್ಮೊಂದಿಗೆ ಇರುತ್ತದೆ ಯಾರು ಕದಿಯಲಾರದ ವಿದ್ಯೆ ಜ್ಞಾನ. ಅರಿವಿನ ಕೊರತೆ ನಮ್ಮ ಎಷ್ಟೋ ಸಮಸ್ಯೆಗಳಿಗೆ ಮೂಲ ಕಾರಣವಾಗಿರುತ್ತದೆ ಅಂತಹ ಸಮಯದಲ್ಲಿ ಸೂಕ್ತವಾದ ಪ್ರಾಪಂಚಿಕ ಜ್ಞಾನವು ಕೂಡ ಎಷ್ಟೋ ಸಮಸ್ಯೆಗಳನ್ನು ನಿವಾರಿಸುತ್ತದೆ. ಐಹಿಕ ಜೀವನದ ಎಷ್ಟೋ ತೊಂದರೆಗಳಿಗೆ ಆಧ್ಯಾತ್ಮದಲ್ಲಿ ಉತ್ತರವಿದೆ.

Personality development activities

ಚಿಂತನ ಮಂಥನದಿಂದ

ಇದರಿಂದ ಅಜ್ಞಾನ ತೊಲಗಿ ಸುಜ್ಞಾನ ದೊರೆಯುತ್ತದೆ. ಸರಿ-ತಪ್ಪು,
ಒಳಿತು-ಕೆಡುಕು, ಧರ್ಮ-ಅಧರ್ಮ ಇವುಗಳ ಕುರಿತು ಸೂಕ್ತವಾದ ಚಿಂತನೆ ಮಾಡಿ ವಿಚಾರವೆಂಬ ಕಡೆಗೋಲಿನಿಂದ ಮಂಥನ ಮಾಡಿ ಒಳ್ಳೆಯ ನಿರ್ಧಾರಕ್ಕೆ ಬರುವುದು ಕೂಡ ಅತ್ಯಂತ ಒಳ್ಳೆಯ ಕಾರ್ಯ. ಸರಿ ತಪ್ಪುಗಳ ಪರಾಮರ್ಶೆಯಿಂದ ಮನುಷ್ಯ ತಪ್ಪು ವಿಷಯಗಳಿಂದ ದೂರ ಸರಿದು ಒಳ್ಳೆಯ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಾನೆ. ಚಿಂತನೆ ಮಾಡಿದರೆ ಕಾರ್ಯಾಕಾರ್ಯಗಳ ಅರಿವು ಆಗುವುದಿಲ್ಲ. *ಸರಿ ತಪ್ಪುಗಳ ಮೊಸರನ್ನು ಅರಿವು ಮತ್ತು ವಿಮರ್ಶೆಗಳ ಮಂಥನದ ಮೂಲಕ ಕಡೆದು ಉತ್ತಮ ವಿಚಾರಗಳ ಬೆಣ್ಣೆ ತೆಗೆದು ಉತ್ತಮ ವ್ಯಕ್ತಿತ್ವವೆಂಬ ಕಾಯಿಸಿದ ತುಪ್ಪವನ್ನು ಈ ಸಮಾಜಕ್ಕೆ ಬಡಿಸುವುದು ಸಮಾಜ ಜೀವಿಯಾಗಿ ನಮ್ಮ ಕರ್ತವ್ಯ.

ಸೇವೆ ಮಾಡುವುದರಿಂದ

ಇದರಿಂದ ಅಹಮ್ಮಿಗೆ ಸಂತೃಪ್ತಿ ದೊರೆಯುತ್ತದೆ. ಎಷ್ಟೋ ಜನ ಶ್ರೀಮಂತರು ಅಲ್ಲಲ್ಲಿ ನಡೆಯುವ ಪ್ರಸಾದ ಸೇವಾ ಕಾರ್ಯಗಳಲ್ಲಿ ಪ್ರವಾಹ, ಸುನಾಮಿ ಚಂಡಮಾರುತ ಮುಂತಾದ ಪ್ರಾಕೃತಿಕ ವಿಕೋಪಗಳಿಂದ ಸಂತ್ರಸ್ತರಾದ ಜನರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ. ಹೀಗೆ ತೊಡಗಿಸಿಕೊಳ್ಳುವ ಮೂಲಕ ಅವರು ನಾನು ಶ್ರೀಮಂತ, ಉನ್ನತ ವರ್ಗದವನು ಎಲ್ಲರಿಗಿಂತ ಮೇಲು ಎಂಬ ಮೇಲರಿಮೆಯನ್ನು ತೊಡೆದು ಕೊಳ್ಳುತ್ತಾರೆ. ನಮ್ಮದೇ ಅಹಮ್ಮಿನ ಕೋಟೆಯೊಳಗೆ ಬಂಧಿಯಾದಾಗ ಇತರರ ಸಂಕಟಗಳು ನಮಗೆ ಕಾಣುವುದಿಲ್ಲ. ಆದರೆ ಸೇವೆಯ ಮೂಲಕ ಮನುಷ್ಯ ತನ್ನನ್ನು ಸಮಾಜಕ್ಕೆ ಅರ್ಪಿಸಿಕೊಳ್ಳುವ ಮನುಷ್ಯ ಪರಿಶುದ್ಧನಾಗುತ್ತಾನೆ. ಅಹಮ್ಮಿನ ಸಂತೃಪ್ತಿಗೆ ಕಾರಣವಾಗುತ್ತಾನೆ. ಎನಗಿಂತ ಕಿರಿಯರಿಲ್ಲ ಶಿವ ಭಕ್ತರಿಗಿಂತ ಹಿರಿಯರಿಲ್ಲ ಎಂಬ ಬಸವಣ್ಣನವರ ಉಕ್ತಿ ಸದಾ ಸರ್ವದ ನಮ್ಮ ಮನದಲ್ಲಿ ನೆಲೆ ಮಾಡಿರಬೇಕು.

Photo of Man Wearing Hooded Jacket in Front of Body of Water

ಮೌನದಿಂದ…

ಇದರಿಂದ ನಾನು ಮತ್ತು ನನ್ನದು ಎಂಬ ವೈಯಕ್ತಿಕತೆ ಸ್ವಾರ್ಥತೆಯು ಶುದ್ಧವಾಗುತ್ತದೆ. ಪ್ರಶಾಂತವಾಗಿರುವ ಮೌನವೆಂಬ ಕೊಳದಲ್ಲಿ ಒಂದೇ ಸಮನೆ ನಿರರ್ಥಕವಾದ ಒಣ ಮಾತುಗಳನ್ನಾಡಿ ಬಗ್ಗಡ ಮಾಡುವುದಕ್ಕಿಂತ ಹಿತವಾದ ಮೌನ ಲೇಸು. ಮೌನವು ನಮಗೆ ಆತ್ಮ ಚಿಂತನೆಗೆ ದಾರಿ ಮಾಡಿಕೊಡುತ್ತದೆ. ಸರಿ ತಪ್ಪುಗಳ ವಿಮರ್ಶೆ, ಒಳಿತು ಕೆಡುಕುಗಳ ಪರಾಮರ್ಶೆಯನ್ನು ನಾವು ಮೌನಾನುಸಂಧಾನದಲ್ಲಿ ಪಡೆಯಬಹುದು. ಮೌನದ ಶಕ್ತಿ ಅಪಾರ. ಮಾತು ನಮ್ಮನ್ನು ಹಗುರಗೊಳಿಸಿದರೆ ಮೌನವು ನಮ್ಮನ್ನು ಆಂತರಿಕವಾಗಿ ಬಲಿಷ್ಠವಾಗಿಸುತ್ತದೆ. ಆದ್ದರಿಂದಲೇ ಋಷಿ ಮುನಿಗಳು, ಜ್ಞಾನಿಗಳು ಸದಾ ಮೌನದ ಮೊರೆ ಹೋಗುತ್ತಾರೆ. ಇನ್ನು ಹಲವು ಜನ ಸಂತರು ವಾರಕ್ಕೊಂದು ದಿನ, ಪ್ರತಿದಿನ ಸ್ನಾನ ಪೂಜೆ ಮುಗಿಯುವವರೆಗೆ ಮತ್ತೆ ಹಲವಾರು ದಿನಗಳ ಕಾಲದ ಮೌನಾನುಷ್ಠಾನವನ್ನು ಮಾಡುತ್ತಾರೆ. ಮೌನವು ನಮ್ಮ ಆಂತರಿಕ ಶಕ್ತಿಯನ್ನು ಹೆಚ್ಚಿಸಿ ಮಾನಸಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಗಟ್ಟಿಗೊಳಿಸುತ್ತದೆ.

ಉನ್ನತ ಆಲೋಚನೆಗಳಿಂದ…

ಇದರಿಂದ ತಿನ್ನುವ ಆಹಾರ ಸಾತ್ವಿಕವಾಗುತ್ತದೆ. ಒಳ್ಳೆಯ ವಿಚಾರಗಳು, ಒಳ್ಳೆಯ ಕಾರ್ಯಗಳು, ಒಳ್ಳೆಯ ದುಡಿಮೆಯನ್ನು ಪ್ರೋತ್ಸಾಹಿಸುತ್ತದೆ. ಒಳ್ಳೆಯ ಮತ್ತು ಉನ್ನತ ವಿಚಾರಧಾರೆಗಳು ನಮ್ಮ ಆಹಾರದ ಮೇಲೂ ಪರಿಣಾಮ ಬೀರುತ್ತವೆ. ನಾವು ಆಹಾರವನ್ನು ತಯಾರಿಸುವಾಗ ಒಳ್ಳೆಯ ಆಲೋಚನೆ ಮಾಡಬೇಕು.ಸ್ವಚ್ಛ,ಶುದ್ಧವಾದ ಪ್ರಶಾಂತ ಪರಿಸರದಲ್ಲಿ ಅಡುಗೆಯನ್ನು ಮಾಡುವುದರ ಹಿಂದಿನ ಗುಟ್ಟು ಇದೇ. ವ್ಯವಹಾರವೇ ಮುಖ್ಯವಾಗಿರುವ ಹೋಟೆಲ್, ರೆಸ್ಟೋರೆಂಟ್ ಮುಂತಾದವುಗಳಲ್ಲಿ ನಾವು ಸೇವಿಸುವ ಆಹಾರ ತಾಮಸಿಕ ಮತ್ತು ರಾಜಸಿಕ ಗುಣವನ್ನು ಹೊಂದಿದ್ದು ಅಂತಹ ಆಹಾರವನ್ನು ಸೇವಿಸಿದಾಗ ನಮಗೆ ಅಜೀರ್ಣ, ಹುಳಿತೇಗು ಹೊಟ್ಟೆ ಉಬ್ಬರ ಮುಂತಾದ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಆದರೆ ಸೇವೆಯೇ ಪ್ರಧಾನವಾಗಿರುವ ದೇವಸ್ಥಾನಗಳಲ್ಲಿ, ಮಠಗಳಲ್ಲಿ, ಸೇವಾ ಸದನಗಳಲ್ಲಿ ತಯಾರಿಸುವ ಆಹಾರಗಳಲ್ಲಿ ಸಾತ್ವಿಕ ಗುಣವೇ ತುಂಬಿದ್ದು ಮನಸ್ಸನ್ನು ಅರಳಿಸುವ ಮತ್ತು ಚೇತನ ಕೊಡುವ ಶಕ್ತಿ ಇರುತ್ತದೆ. ಒಳ್ಳೆಯ ಆಹಾರ ಸೇವನೆ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬಡಿದೆಬ್ಬಿಸಿ ನಮ್ಮನ್ನು ಉತ್ತಮ ಕಾರ್ಯಗಳತ್ತ ಪ್ರೇರೇಪಿಸುತ್ತದೆ.

The concept of sharing

ದಾನ ಮಾಡುವುದರಿಂದ…

ಇದರಿಂದ ಸಂಪತ್ತಿನ ಸದ್ವಿನಿಯೋಗವಾಗುವುದು. ಕೊಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ ಎಂದು ಹೇಳುತ್ತಾರಲ್ಲವೇ. ಕೊಡುವುದರ ಮೂಲಕ ವ್ಯಕ್ತಿ ತನ್ನೊಳಗಿನ ಎಲ್ಲ ನಕಾರಾತ್ಮಕ ಚಿಂತನೆಗಳನ್ನು ಕಳೆದುಕೊಳ್ಳುತ್ತಾನೆ. ದಾನ ನೀಡುವ ಮೂಲಕ ತನ್ನಲ್ಲಿರುವ ಸಿಟ್ಟು ಸೆಡವು ಹಟಗಳನ್ನು ಕಳೆದುಕೊಳ್ಳುತ್ತಾನೆ. ಬೇಡುವ ಕೈಗಳಿಗಿಂತ ಕೊಡುವ ಕೈಗಳು ಶ್ರೇಷ್ಠ ಎಂದು ಹಿರಿಯರು ಹೇಳಿರುವುದು ಇದಕ್ಕೆ ಇರಬಹುದು. ದಾನಮಾಡುವ ಶಕ್ತಿಯನ್ನು ನೀಡಿರುವ ಆ ದೇವರಿಗೆ ಕೃತಾರ್ಥರಾಗಿರೋಣ.

ಇದನ್ನೂ ಓದಿ: Eating Style: ಉಣ್ಣುವ ರೀತಿ ನಾವು ಎಂಥವರು ಎನ್ನುವುದನ್ನು ಬಯಲು ಮಾಡುತ್ತದೆ! ಅದು ಹೇಗೆ?

ಪ್ರೀತಿ ಮತ್ತು ಸಮರ್ಪಣಾ ಭಾವದಿಂದ

ಇದರಿಂದ ಭಾವನೆಗಳು ಶುದ್ಧವಾಗುತ್ತವೆ. ವ್ಯಕ್ತಿಯನ್ನು ಆತನ ದೈಹಿಕ,ಮಾನಸಿಕ ಮತ್ತು ಇತರ ಒಳಿತು ಮತ್ತು ಕೆಡುಕುಗಳೊಂದಿಗೆ ಪ್ರೀತಿಸುವುದು ನಿಜವಾದ ಪ್ರೀತಿ. ಅಂತಹ ಪ್ರೀತಿಯಲ್ಲಿ ಯಾವುದೇ ಸ್ವಾರ್ಥ, ಆಕಾಂಕ್ಷೆಗಳು ಇರುವುದಿಲ್ಲ. ನೀನು ಹೀಗಿದ್ದರೆ ಮಾತ್ರ ನಾನು ನಿನ್ನನ್ನು ಪ್ರೀತಿಸಬಲ್ಲೆ ಎಂಬ ಶರತ್ತುಬದ್ಧ ಪ್ರೀತಿ ಸ್ವಾರ್ಥ ಎಂದೆನಿಸಿಕೊಳ್ಳುತ್ತದೆ. ಪ್ರೀತಿಗೆ ಬೇಕಾಗಿರುವುದು ಶುದ್ಧ ಅಂತಃಕರಣ ಮತ್ತು ಸಮರ್ಪಣಾ ಮನೋಭಾವ ಮಾತ್ರ. ಆದ್ದರಿಂದಲೇ ನಿಸ್ವಾರ್ಥವಾದ, ಕಲ್ಮಶವಿಲ್ಲದ ಮಾತೆಯ ಮಮತೆಯನ್ನು ಎಲ್ಲರೂ ಕೊಂಡಾಡುತ್ತಾರೆ. ಶುದ್ಧವಾದ ಪ್ರೀತಿ ವ್ಯಕ್ತಿಯ ಅಂದ ಚಂದಗಳನ್ನು ನೋಡದೆ ತನ್ನ ಎದುರಿರುವ ವ್ಯಕ್ತಿಯನ್ನು ಅವನಿರುವ ಹಾಗೆಯೇ ಅಂಗೀಕರಿಸುತ್ತದೆ.

ಮೇಲಿನ ದಶಗುಣಗಳನ್ನು ನಮ್ಮಲ್ಲಿ ನಾವು ಅಳವಡಿಸಿಕೊಳ್ಳುವ ಮೂಲಕ ನಮ್ಮಲ್ಲಿರುವ ಕೋಪ,ಅಸಹನೆ,ಉದ್ರೇಕ ಮುಂತಾದ ಗುಣಗಳನ್ನು ಕಳೆದುಕೊಂಡು ಪ್ರೀತಿ ವಿಶ್ವಾಸ ಭ್ರಾತೃತ್ವ, ಸಹನೆ, ಒಳ್ಳೆಯತನ ಮುಂತಾದ ಉನ್ನತ ಗುಣಗಳನ್ನು ಆವಾಹಿಸಿಕೊಳ್ಳುತ್ತಾ ವಿಶ್ವಮಾನವರಾಗುವ ಮೂಲಕ ರಾಷ್ಟ್ರಕವಿ ಕುವೆಂಪುರವರ ವಿಶ್ವಮಾನವ ಸಂದೇಶವನ್ನು ಜಗತ್ತಿನಲ್ಲಿ ಬಿತ್ತರಿಸೋಣ ಎಂಬ ಆಶಯದೊಂದಿಗೆ

Continue Reading
Advertisement
IND vs PAK
ಕ್ರೀಡೆ7 mins ago

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

karnataka Rain
ಬೆಳಗಾವಿ8 mins ago

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Nandamuri Balakrishna BB4 new film announced
ಟಾಲಿವುಡ್21 mins ago

Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

IND VS PAK
ಕ್ರೀಡೆ30 mins ago

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

HSRP Number Plate
ಬೆಂಗಳೂರು34 mins ago

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

Narendra Modi And stock market news
ಪ್ರಮುಖ ಸುದ್ದಿ36 mins ago

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

Anirudh Jatkar again rise on voice jote joteyali serial issue
ಸ್ಯಾಂಡಲ್ ವುಡ್50 mins ago

Anirudh Jatkar: ʻಜೊತೆ ಜೊತೆಯಲಿ’ ಧಾರಾವಾಹಿಯ ವಿವಾದದ ಬಗ್ಗೆ ಬೇಸರ ಹೊರ ಹಾಕಿದ ಅನಿರುದ್ಧ್!

NEET UG
ಪ್ರೇಮಿಗಳ ದಿನಾಚರಣೆ1 hour ago

NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

Personality Development
ಪ್ರಮುಖ ಸುದ್ದಿ1 hour ago

Personality Development: ಈ 10 ಸೂತ್ರ ಪಾಲಿಸಿದರೆ ನೆಮ್ಮದಿಯ ಬದುಕು ಗ್ಯಾರಂಟಿ!

reasi terror attack
ಪ್ರಮುಖ ಸುದ್ದಿ1 hour ago

Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌