Lok Sabha Election 2024: ಪಕ್ಷೇತರ ಸ್ಪರ್ಧೆ ಎಂದ ಜಿ.ಬಿ. ವಿನಯ್ ಕುಮಾರ್; ದಾವಣಗೆರೆ ಕಾಂಗ್ರೆಸ್‌ಗೆ ಬಂಡಾಯ ಬಿಸಿ - Vistara News

Lok Sabha Election 2024

Lok Sabha Election 2024: ಪಕ್ಷೇತರ ಸ್ಪರ್ಧೆ ಎಂದ ಜಿ.ಬಿ. ವಿನಯ್ ಕುಮಾರ್; ದಾವಣಗೆರೆ ಕಾಂಗ್ರೆಸ್‌ಗೆ ಬಂಡಾಯ ಬಿಸಿ

Lok Sabha Election 2024: ಇದು ಪೊಲಿಟಿಕಲ್ ಸೂಸೈಡ್ ಎನ್ನಿಸಬಹುದು. ಇದು ದಾವಣಗೆರೆಯಲ್ಲಿ ಕುಳಿತು ತೆಗೆದುಕೊಂಡ ನಿರ್ಧಾರ ಅಲ್ಲ. ಕ್ಷೇತ್ರದ ಗಡಿ ಭಾಗದ ಜನರ ನಿರ್ಧಾರಕ್ಕೆ ಬದ್ಧವಾಗಿ ನಿಲ್ಲಲು ಮಾಡಿದ ನಿರ್ಧಾರವಾಗಿದೆ. ನನ್ನ ಒಲವು ಎಲೆಕ್ಷನ್‌ನಲ್ಲಿ ಸ್ಪರ್ಧೆ ಮಾಡಬೇಕು ಎಂಬುದಾಗಿದೆ. ನನಗೆ ಬಿಜೆಪಿ ಹಾಗೂ ಕಾಂಗ್ರೆಸ್‌ನ ಅಭ್ಯರ್ಥಿಗಳಿಬ್ಬರೂ ಎದುರಾಳಿಗಳೇ ಆಗಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುತ್ತದೆ. ಹೀಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವುದು ಖಚಿತ ಎಂದು ಜಿ.ಬಿ. ವಿನಯ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

Lok Sabha Election 2024 GB Vinay Kumar rebels from Congress and contest as Independent
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಗೆ ಬಂಡಾಯದ ತಲೆಬಿಸಿ ಇನ್ನೂ ತಪ್ಪಿಲ್ಲ. ಕೆಲವು ಟಿಕೆಟ್‌ ವಂಚಿತರು ತಮ್ಮ ಅಸಮಾಧಾನವನ್ನು ಹೊರಹಾಕುತ್ತಲೇ ಬಂದಿದ್ದಾರೆ. ಈಗ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ (Davangere Lok Sabha constituency) ಕಾಂಗ್ರೆಸ್‌ಗೆ ಬಂಡಾಯದ ಬಿಸಿ ತಟ್ಟಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಜಿ.ಬಿ. ವಿನಯ್ ಕುಮಾರ್ (GB Vinay Kumar) ಘೋಷಿಸಿದ್ದಾರೆ. ಹೀಗಾಗಿ ಇದು ಕಾಂಗ್ರೆಸ್‌ ಪಾಲಿಗೆ ದೊಡ್ಡ ಹಿನ್ನಡೆ ಎಂದೇ ಹೇಳಲಾಗುತ್ತಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಹೇಳಿರುವ ಜಿ.ಬಿ. ವಿನಯ್ ಕುಮಾರ್, ತಮ್ಮ ಮನೆಯಲ್ಲಿ ನಡೆದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯ ಬಳಿಕ ಈ ನಿರ್ಣಯವನ್ನು ಪ್ರಕಟಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ವಿನಯ್‌ ಕುಮಾರ್‌, ನಿನ್ನೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ. ಆ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆ ಫೋಟೋ ನೋಡಿ ನನ್ನ ಬೆಂಬಲಿಗರು ಜನರು ವಿನಯ್ ಕುಮಾರ್ ಕಾಂಪ್ರಮೈಸ್ ಆದರಾ ಎಂದು ಆತಂಕಕ್ಕೆ ಒಳಗಾಗಿದ್ದರು. ಆದರೆ, ಅಂಥವನು ನಾನಲ್ಲ ಎಂದು ಇಂದು ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಕಳಕಳಿ ಇರುವ ವ್ಯಕ್ತಿ. ಎಲ್ಲಿ ಈ ಹುಡುಗ ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲ ಆಗುತ್ತಾನೆ ಅನ್ನೋ ಕಳಕಳಿಯಿಂದ ಹೇಳಿದ್ದರು ಎಂಬುದಾಗಿ ಸಿಎಂ ಭೇಟಿ ಬಗ್ಗೆ ವಿನಯ್‌ ಕುಮಾರ್‌ ಸ್ಪಷ್ಟನೆ ನೀಡಿದರು.

ನಾನು ಸೋಲುವುದಕ್ಕೂ ಸಿದ್ಧ

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ವಿಚಾರವಾಗಿ ನಾನು ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬಳಿ ಕೇಳಿಕೊಂಡಿದ್ದೆ. ಈಗಲೂ ಕಾಲ ಮಿಂಚಿಲ್ಲ ದೊಡ್ಡ ಮನಸ್ಸು ಮಾಡಿ ಟಿಕೆಟ್ ನೀಡಿ ಎಂದು ಕೋರಿದ್ದೆ. ಆಗಲ್ಲ ಎಂದು ಅವರು ಹೇಳಿಲ್ಲ. ಯೋಚಿಸುತ್ತೇನೆ ಎಂದಿದ್ದಾರೆ. ರಾಜಕೀಯ ಹಿನ್ನೆಲೆ ಇಲ್ಲದೆ ಇರುವ ನನ್ನನ್ನು ಸಾಮಾನ್ಯ ಜನರು ಇಷ್ಟ ಪಟ್ಟಿದ್ದಾರೆ. ನೀವು ಗಟ್ಟಿಯಾಗಿ ನಿಲ್ಲಿ, ನಿಮ್ಮ ಜತೆ ನಾವು ಇರುತ್ತೇವೆ ಎಂದು ವಿಶ್ವಾಸ ಇಟ್ಟುಕೊಂಡಿದ್ದಾರೆ. ನಾನು ಸೋಲುವುದಕ್ಕೂ ಸಿದ್ಧ. ಆದರೆ, ಗೆಲ್ಲಲು ಚುನಾವಣೆಗೆ ಬಂದಿದ್ದೇನೆ ಎಂದು ವಿನಯ್‌ ಕುಮಾರ್‌ ಹೇಳಿದರು.

ವಾಸ್ತವದ ಹೋರಾಟ ಇದು

ಇಲ್ಲಿ ಯಾವುದೇ ಕುಟುಂಬ ಜನಾಂಗದ ವಿರುದ್ಧ ಹೋರಾಡುತ್ತಿಲ್ಲ. ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹೊಸ ನಾಯಕತ್ವ ಹಿನ್ನೆಲೆಯಲ್ಲಿ ಆದರ್ಶದ ಹೋರಾಟ ನನ್ನದು. ವಾಸ್ತವದ ಹೋರಾಟ ಇದಾಗಿದ್ದು, ಜನರ ಅಭಿಲಾಷೆ ಮೇರೆಗೆ ಚುನಾವಣೆಗೆ ಸ್ಪರ್ಧೆ ಮಾಡುವ ನಿರ್ಧಾರ ಮಾಡಿದ್ದೇನೆ. ಇಲ್ಲಿ ಗೆಲ್ಲುವ ಮೂಲಕ ಹೊಸ ಅಧ್ಯಾಯ ಬರೆಯೋಣ ಎಂದು ವಿನಯ್ ಕುಮಾರ್ ಹೇಳಿದರು.

ಇದನ್ನೂ ಓದಿ: Lok Sabha Election 2024: ಹಾಸನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಜೈ ಎಂದ ಪ್ರೀತಂ ಗೌಡ ಅತ್ಯಾಪ್ತರು; ಪ್ರಜ್ವಲ್‌ ರೇವಣ್ಣಗೆ ಶಾಕ್!

ಇದು ದುಡುಕಿನ ನಿರ್ಧಾರ ಅಲ್ಲ

ಎರಡು ಪ್ರಬಲ ಕುಟುಂಬಗಳು ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವುದರಿಂದ ಜನರು ಬೇಸತ್ತು ಹೋಗಿದ್ದಾರೆ. ಎರಡು ಕುಟುಂಬಗಳ ವಿರುದ್ಧ ಲಕ್ಷಕ್ಕೂ ಅಧಿಕ ಮತ ಪಡೆದು ಗೆಲ್ಲುತ್ತೇನೆ. ನಿನ್ನೆ ನಡೆದ ಸಭೆಯಲ್ಲಿ ನನಗೆ ಸಿಎಂ ಸಿದ್ದರಾಮಯ್ಯ ಅವರು ಹೂಮಾಲೆ ಹಾಕಿದ್ದಾರೆ. ಅದು ವಿಜಯದ ಮಾಲೆ ಅಂದುಕೊಳ್ಳುವೆ. ನಿಮ್ಮ ಮೇಲೆ ಪ್ರೀತಿ ಗೌರವ ಉಳ್ಳವನು ನಾನು. ಇದು ದುಡುಕಿನ ನಿರ್ಧಾರ ಅಲ್ಲ. ಜನರ ನಿರ್ಧಾರವಾಗಿದೆ ಎಂದು ವಿನಯ್‌ ಕುಮಾರ್‌ ಹೇಳಿದರು.

ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವುದು ಖಚಿತ

ಇದು ಪೊಲಿಟಿಕಲ್ ಸೂಸೈಡ್ ಎನ್ನಿಸಬಹುದು. ಇದು ದಾವಣಗೆರೆಯಲ್ಲಿ ಕುಳಿತು ತೆಗೆದುಕೊಂಡ ನಿರ್ಧಾರ ಅಲ್ಲ. ಕ್ಷೇತ್ರದ ಗಡಿ ಭಾಗದ ಜನರ ನಿರ್ಧಾರಕ್ಕೆ ಬದ್ಧವಾಗಿ ನಿಲ್ಲಲು ಮಾಡಿದ ನಿರ್ಧಾರವಾಗಿದೆ. ನನ್ನ ಒಲವು ಎಲೆಕ್ಷನ್‌ನಲ್ಲಿ ಸ್ಪರ್ಧೆ ಮಾಡಬೇಕು ಎಂಬುದಾಗಿದೆ. ನನಗೆ ಬಿಜೆಪಿ ಹಾಗೂ ಕಾಂಗ್ರೆಸ್‌ನ ಅಭ್ಯರ್ಥಿಗಳಿಬ್ಬರೂ ಎದುರಾಳಿಗಳೇ ಆಗಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುತ್ತದೆ. ಹೀಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವುದು ಖಚಿತ ಎಂದು ಜಿ.ಬಿ. ವಿನಯ್ ಕುಮಾರ್ ಸ್ಪಷ್ಟಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election : ಬಿಜೆಪಿ 305 ಸೀಟ್ ಗೆಲ್ಲೋದು ಗ್ಯಾರಂಟಿ; ಅಮೆರಿಕದ ರಾಜಕೀಯ ಪಂಡಿತನ ಭವಿಷ್ಯ

Lok Sabha Election: ಜಾಗತಿಕವಾಗಿ ಅಗಾಧ ಪ್ರಮಾಣದ ರಾಜಕೀಯ ಅನಿಶ್ಚಿತತೆ ಸೃಷ್ಟಿಯಾಗಿದೆ. ಜಾಗತೀಕರಣದ ಭವಿಷ್ಯವು ಕಂಪನಿಗಳು ಬಯಸಿದ ರೀತಿಯಲ್ಲಿ ಹೋಗುತ್ತಿಲ್ಲ. ರಾಜಕೀಯವು ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಮೂಗು ತೂರಿಸುತ್ತಿದೆ. ಯುದ್ಧಗಳು, ಯುಎಸ್-ಚೀನಾ ಸಂಬಂಧಗಳು ಮತ್ತು ಯುಎಸ್ ಚುನಾವಣೆ ಎಲ್ಲವೂ ಅದರ ದೊಡ್ಡ ಭಾಗವಾಗಿದೆ ಎಂದು ಇಯಾನ್ ಬ್ರೆಮ್ಮರ್​ ಹೇಳಿದರು.

VISTARANEWS.COM


on

lok sabha election
Koo

ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಿಜೆಪಿ 305 ಸ್ಥಾನಗಳನ್ನು (ಹೆಚ್ಚು ಕಡಿಮೆ) ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ಪಂಡಿತ ಇಯಾನ್ ಬ್ರೆಮ್ಮರ್ ಮಂಗಳವಾರ ಭವಿಷ್ಯ ನುಡಿದಿದ್ದಾರೆ. ಎನ್​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಕುರಿತು ಮಾತನಾಡುತ್ತಾ ಬಿಜೆಪಿಗೆ ಮತ್ತೆ ಬಹುಮತ ಖಾತರಿ ಎಂದು ಹೇಳಿದ್ದಾರೆ. ಸಂಶೋಧನಾ ಸಲಹಾ ಸಂಸ್ಥೆಯಾದ ಯುರೇಷಿಯಾ ಗ್ರೂಪ್ನ ಸ್ಥಾಪಕರಾಗಿರುವ ಬ್ರೆಮ್ಮರ್, ಜಾಗತಿಕ ರಾಜಕೀಯ ದೃಷ್ಟಿಕೋನದಿಂದ ಭಾರತೀಯ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆ ಸ್ಥಿರವಾಗಿದೆ. ನವೆಂಬರ್ ನಲ್ಲಿ ನಡೆಯಲಿರುವ ಅಮೆರಿಕದ ಚುನಾವಣೆಗಿಂತಲೂ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಾಗತಿಕವಾಗಿ ಅಗಾಧ ಪ್ರಮಾಣದ ರಾಜಕೀಯ ಅನಿಶ್ಚಿತತೆ ಸೃಷ್ಟಿಯಾಗಿದೆ. ಜಾಗತೀಕರಣದ ಭವಿಷ್ಯವು ಕಂಪನಿಗಳು ಬಯಸಿದ ರೀತಿಯಲ್ಲಿ ಹೋಗುತ್ತಿಲ್ಲ. ರಾಜಕೀಯವು ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಮೂಗು ತೂರಿಸುತ್ತಿದೆ. ಯುದ್ಧಗಳು, ಯುಎಸ್-ಚೀನಾ ಸಂಬಂಧಗಳು ಮತ್ತು ಯುಎಸ್ ಚುನಾವಣೆ ಎಲ್ಲವೂ ಅದರ ದೊಡ್ಡ ಭಾಗವಾಗಿದೆ. ಎಲ್ಲವನ್ನೂ ಸರಿಯಾಗಿ ನಿರ್ವಹಿಸಲಾಗುತ್ತಿಲ್ಲ ಮತ್ತು ಹೆಚ್ಚು ನಕಾರಾತ್ಮಕವಾಗಿವೆ. ಜಗತ್ತಿನಲ್ಲಿ ರಾಜಕೀಯವಾಗಿ ಸ್ಥಿರವಾಗಿ ಕಾಣುವ ಏಕೈಕ ವಿಷಯವೆಂದರೆ ಭಾರತದ ಚುನಾವಣೆ. ಉಳಿದೆಲ್ಲವೂ ಸಮಸ್ಯಾತ್ಮಕ ಕಾಣುತ್ತದೆ ಎಂದು ಬ್ರೆಮ್ಮರ್​ ಹೇಳಿದ್ದಾರೆ.

ಏಪ್ರಿಲ್ 19 ರಂದು ಪ್ರಾರಂಭವಾದ ಏಳು ಹಂತಗಳಲ್ಲಿ ಭಾರತೀಯ ಚುನಾವಣೆಯ ಬಗ್ಗೆ ಅವರ ಭವಿಷ್ಯವಾಣಿಯ ಬಗ್ಗೆ ಕೇಳಿದಾಗ, ಯುರೇಷಿಯಾ ಗ್ರೂಪ್ ಸಂಶೋಧನೆಯ ಪ್ರಕಾರ ಬಿಜೆಪಿ 295ರಿಂದ 315 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 2014 ರ ಚುನಾವಣೆಯಲ್ಲಿ 282 ಸ್ಥಾನಗಳೊಂದಿಗೆ (ಅದರ ಎನ್ಡಿಎ ಪಾಲುದಾರರೊಂದಿಗೆ ಸೇರಿಕೊಂಟ್ಟು ಒಟ್ಟು 336 ಸ್ಥಾನ ) ಮತ್ತು 2019 ರಲ್ಲಿ 303 (ಎನ್​ಡಿ ಮಿತ್ರಪಕ್ಷಗಳೊಂದಿಗೆ 353) ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ ಈ ಬಾರಿ ಹ್ಯಾಟ್ರಿಕ್ ಸಾಧನೆ ಮಾಡುವ ನಿರೀಕ್ಷೆಯಿದೆ.

ಭಾರತದಲ್ಲಿ ರಾಜಕೀಯ ಅನಿಶ್ಚಿತತೆ ಇಲ್ಲ

ವಿಶ್ವದ ಎಲ್ಲಾ ಚುನಾವಣೆಗಳಲ್ಲಿ (ಯುರೋಪಿಯನ್ ಒಕ್ಕೂಟದ ಚುನಾವಣೆಗಳು ಮತ್ತು ಬಹುಶಃ, ಯುನೈಟೆಡ್ ಕಿಂಗ್ಡಮ್​ನ ರಾಷ್ಟ್ರೀಯ ಚುನಾವಣೆ ಸೇರಿದಂತೆ) ಅತಿದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ಭಾರತವು ಸುಗಮ ಚುನಾಣೆಯನ್ನು ಹೊಂದಿದೆ. ಭಾರತೀಯ ರಾಜಕೀಯ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಅನಿಶ್ಚಿತತೆ ಇಲ್ಲ” ಎಂದು ಇಯಾನ್ ಬ್ರೆಮ್ಮರ್​ ಹೇಳಿದರು.

ಇದನ್ನೂ ಓದಿ: Other Backward Classes: 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣಪತ್ರಗಳನ್ನು ರದ್ದು ಮಾಡಿದ ಕೋಲ್ಕೊತಾ ಹೈಕೋರ್ಟ್​​

ಬ್ರೆಮ್ಮರ್ ಅವರು “ಮುಕ್ತ ಮತ್ತು ನ್ಯಾಯಸಮ್ಮತ ಮತ್ತು ಪಾರದರ್ಶಕ” ಭಾರತೀಯ ಚುನಾವಣಾ ಪ್ರಕ್ರಿಯೆಯನ್ನು ಶ್ಲಾಘಿಸಿದರು. “ಬಲವಾದ ಆರ್ಥಿಕ ಕಾರ್ಯಕ್ಷಮತೆ ಮತ್ತು ಸ್ಥಿರ ಸುಧಾರಣೆಯ ಹಿನ್ನೆಲೆಯಲ್ಲಿ ಮೋದಿ ಮೂರನೇ ಅವಧಿಗೆ ಗೆಲ್ಲುವುದು ಬಹುತೇಕ ಖಚಿತ ಎಂದು ಅವರು ಹೇಳಿದರು.

ಭಾರತದ ಆರ್ಥಿಕ ಭವಿಷ್ಯದ ಬಗ್ಗೆ ಮಾತನಾಡಿದ ಬ್ರೆಮ್ಮರ್, “ಭಾರತವು ದಶಕಗಳಿಂದ ಕಳಪೆ ಸಾಧನೆ ಮಾಡಿರುವುದನ್ನು ಜಗತ್ತು ನೋಡಿದೆ. ಭಾರತವು ನಂಬಲಾಗದ ಮಾನವ ಸಂಪನ್ಮೂಲ ಮತ್ತು ಬಲವಾದ ಬೌದ್ಧಿಕ ಬಂಡವಾಳ ಹೊಂದಿದೆ. ಅಮೆರಿಕದ ಅನೇಕ ಸಿಇಒಗಳು ಭಾರತದಿಂದ ಬರುತ್ತಾರೆ. ಆದರೂ ಭಾರತವು ಆರ್ಥಿಕತೆಯಾಗಿ ಕಳಪೆ ಸಾಧನೆ ಮಾಡಿದೆ ಎಂಬುದಾಗಿ ವಿಶ್ಲೇಷಣೆ ಮಾಡಿದರು.

ಈಗ ನಾವು ಬೆಳವಣಿಗೆಯನ್ನು ನೋಡುತ್ತಿದ್ದೇವೆ. ಭಾರತವು ಮುಂದಿನ ವರ್ಷ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು ಬಹುಶಃ 2028 ರ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ನಾವು ನಂಬಿದ್ದೇವೆ. ಆದರೆ ವಿಶ್ವದ ಇತರ ಭಾಗಗಳೊಂದಿಗಿನ ಸ್ನೇಹವನ್ನು ವ್ಯಾಖ್ಯಾನಿಸುವ ವಿಷಯದಲ್ಲಿ ಭಾರತವು ಹೆಚ್ಚು ಶಕ್ತಿಶಾಲಿಯಾಗುತ್ತಿರುವುದನ್ನು ನಾವು ನೋಡುತ್ತೇವೆ ಎಂದು ಅವರು ಹೇಳಿದರು.

Continue Reading

ದೇಶ

PM Narendra Modi: “ನನ್ನನ್ನು ದೇವರೇ ಈ ಭೂಮಿಗೆ ಕಳಿಸಿದ್ದಾನೆ..”; ಭಾರೀ ಸದ್ದು ಮಾಡ್ತಿದೆ ಮೋದಿಯ ಈ ವಿಡಿಯೊ

PM Narendra Modi: ಇತ್ತೀಚೆಗೆ ಪತ್ರಕರ್ತೆ ರುಬಿಕಾ ಲಿಯಾಖತ್‌ ಅವರ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಹೀಗೆ ಮಾತನಾಡುತ್ತಾ ನಾನು ಸಾಮಾನ್ಯರಂತೆ ಹುಟ್ಟಿಲ್ಲ. ದೇವರೇ ನನ್ನನ್ನು ಭೂಮಿಗೆ ಜನರ ಸೇವೆಗಾಗಿ ಕಳುಹಿಸಿದ್ದಾನೆ ಎಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಅಲ್ಲದೇ ಇದೇ ಕಾರಣದಿಂದಾಗಿ ನನ್ನಲ್ಲಿ ಇಷ್ಟೊಂದು ಶಕ್ತಿ ಸಾಮರ್ಥ್ಯ ಇದೆ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024)ಯ ಗುಂಗಿನಲ್ಲಿರುವ ರಾಜಕೀಯ ಮುಖಂಡರು ಪರ – ವಿರೋಧ ಹೇಳಿಕೆ, ವಿವಾದಾತ್ಮಕ ಮಾತುಗಳ ಮೂಲಕ ಸುದ್ದಿಯಾಗುವುದು ಸಹಜ. ತಾವು ನೀಡಿರುವ ಹೇಳಿಕೆಗಳಿಂದಲೇ ಹಲವು ದಿನಗಳ ಕಾಲ ಟ್ರೋಲ್‌ ಆಗೋದೂ ಇದೆ. ಇದೀಗ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌(Viral Video) ಆಗುತ್ತಿದ್ದು, ಹಲವರು ಹಲವು ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಮೋದಿ ಹೇಳಿದ್ದೇನು?

ಇತ್ತೀಚೆಗೆ ಪತ್ರಕರ್ತೆ ರುಬಿಕಾ ಲಿಯಾಖತ್‌ ಅವರ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಹೀಗೆ ಮಾತನಾಡುತ್ತಾ “”ನಾನು ಸಾಮಾನ್ಯರಂತೆ ಹುಟ್ಟಿಲ್ಲ. ದೇವರೇ ನನ್ನನ್ನು ಈ ಭೂಮಿಗೆ ಜನರ ಸೇವೆಗಾಗಿ ಕಳುಹಿಸಿದ್ದಾನೆ ಎಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಅಲ್ಲದೇ ಇದೇ ಕಾರಣದಿಂದಾಗಿ ನನ್ನಲ್ಲಿ ಇಷ್ಟೊಂದು ಶಕ್ತಿ ಸಾಮರ್ಥ್ಯ ಇದೆ ಎಂದು ಅನಿಸುತ್ತಿದೆʼʼ ಎಂದು ಹೇಳಿದ್ದಾರೆ.

ಸಂದರ್ಶನದ ನಡುವೆ ರುಬಿಕಾ ಅವರು ನಿಮಗೆ ಸುಸ್ತು ಅನ್ನೋದೇ ಆಗೋದಿಲ್ವಾ ಎಂದು ಪ್ರಶ್ನೆ ಕೇಳಿದ್ದಾರೆ. ಆಗ ಆ ಪ್ರಶ್ನೆಗೆ ಉತ್ತರಿಸುತ್ತಾ, “”ನಾನು ಎಲ್ಲರಂತೆ ಸಾಮಾನ್ಯವಾಗಿ ಹುಟ್ಟಿದ್ದೇನೆಂದು ಭಾವಿಸುವ ಬದಲಾಗಿ ದೇವರ ಕಾರ್ಯವನ್ನು ಪೂರೈಸಲು ಜನಿಸಿದ್ದೇನೆ ಎಂದು ಭಾವಿಸುತ್ತೇನೆ. ನನಗೆ ಗೊತ್ತಿಲ್ಲ, ನಾನು ಅಂದುಕೊಂಡಿದ್ದೂ ತಪ್ಪು ಕಲ್ಪನೆಯೂ ಆಗಿರಬಹುದು. ಅಥವಾ ನನ್ನ ಹೇಳಿಕೆಗೆ ಟೀಕೆಯೂ ವ್ಯಕ್ತವಾಗಬಹುದು. ಆದರೆ ನಾನು ಯಾವಾಗಲೂ ಹಾಗೆಯೇ ಭಾವಿಸುತ್ತೇನೆʼʼ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದಿರುವ ಈ ಸಂದರ್ಶನದ ಕ್ಲಿಪಿಂಗ್ಸ್‌ ಅನ್ನು ಸ್ವತಃ ರುಬಿಕಾ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಪ್ರಧಾನಮಂತ್ರಿಗಳೇ ನಿಮಗೆ ಆಯಾಸ ಆಗುವುದಿಲ್ಲವೇ” ಎಂದ್ ಕ್ಯಾಪ್ಶನ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ರುಬಿಕಾ ಬದಲಾಗಿ ಬೇರೆ ಪತ್ರಕರ್ತರು ಆ ಜಾಗದಲ್ಲಿ ಇರುತ್ತಿದ್ದರೆ ಆ ರೀತಿ ಪ್ರಶ್ನೆ ಕೇಳುತ್ತಿರಲಿಲ್ಲ ಎಂದು ಒಬ್ಬರು ಕಮೆಂಟ್‌ ಮಾಡಿದರೆ, ಪ್ರಧಾನಿಗೆ ಆಯಾಸ ಹೇಗೆ ಆಗಲು ಸಾಧ್ಯ? ಅವರ ಬಳಿ ಕಾರು, ಬಂಗಲೆ ಆಳು-ಕಾಳು ಜೊತೆಗಿರುವಾಗ ಎಂದು ಮತ್ತೊಬ್ಬರು ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ರುಬಿಕಾ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ. ಬಹಳಷ್ಟು ಮಂದಿ, “”ಹೌದು. ಮೋದಿಯನ್ನು ಭಗವಂತನೇ ಈ ಭೂಮಿಗೆ ಕಳುಹಿಸಿದ್ದಾನೆ. ಏನೀಗ? ಮೋದಿ ಅವರು ನಿಸ್ವಾರ್ಥವಾಗಿ ಜನ ಸೇವೆ ಮಾಡುತ್ತಿಲ್ಲವೇʼʼ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

ಮತ್ತೊಂದೆಡೆ ಒಡಿಶಾದಲ್ಲಿರುವ ಐತಿಹಾಸಿಕ ಪುರಿ ಜಗನ್ನಾಥನೇ ಪ್ರಧಾನಿ ನರೇಂದ್ರ ಮೋದಿ ಅವರ ಭಕ್ತ ಎಂಬುದಾಗಿ ಬಿಜೆಪಿ ನಾಯಕ, ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ವಿವಾದ ಉಂಟಾದ ಬೆನ್ನಲ್ಲೇ, ಸಂಬಿತ್‌ ಪಾತ್ರಾ ಅವರು ತಮ್ಮ ಹೇಳಿಕೆ ಕುರಿತಂತೆ ಕ್ಷಮೆ ಕೇಳಿದ್ದಾರೆ. ಹಾಗೆಯೇ, ಅಂತಹ ಹೇಳಿಕೆ ನೀಡಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಕೂಡ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

Continue Reading

Lok Sabha Election 2024

Hemant Soren: ಹೇಮಂತ್‌ ಸೊರೆನ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Hemant Soren: ಅಕ್ರಮವಾಗಿ ಹಣ ವರ್ಗಾವಣೆ, ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ಬುಧವಾರ (ಮೇ 22) ನಿರಾಕರಿಸಿದೆ.

VISTARANEWS.COM


on

Hemant Soren
Koo

ನವದೆಹಲಿ: ಅಕ್ರಮವಾಗಿ ಹಣ ವರ್ಗಾವಣೆ, ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್‌ (Hemant Soren) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮತ್ತೊಮ್ಮೆ ಹಿನ್ನಡೆಯಾಗಿದೆ. ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ಬುಧವಾರ (ಮೇ 22) ನಿರಾಕರಿಸಿದೆ. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ್ದ ಕೋರ್ಟ್‌ ಮಂಗಳವಾರ ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿತ್ತು. ಜಾರ್ಖಂಡ್‌ನಲ್ಲಿ ಮೇ 25 ಮತ್ತು ಜೂನ್ 1ರಂದು ಚುನಾವಣೆ ನಡೆಯಲಿದ್ದು, ಪ್ರಚಾರ ನಡೆಸಲು ಜಾಮೀನು ನೀಡಬೇಕೆಂದು ಕೋರಿ ಸೊರೆನ್‌ ಮನವಿ ಸಲ್ಲಿಸಿದ್ದರು.

ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಪ್ರಚಾರಕ್ಕಾಗಿ ಮೇ 10ರಂದು ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಹೀಗಾಗಿ ಇದೇ ಮಾದರಿಯಲ್ಲಿ ಸೊರೆನ್‌ ಕೂಡ ಅರ್ಜಿ ಸಲ್ಲಿಸಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಅವರಿಗಿಂತ ಹೇಮಂತ್ ಸೊರೆನ್ ಅವರ ಪ್ರಕರಣವನ್ನು ಭಿನ್ನ ಎಂದಿರುವ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಮೇ 10ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದಾಗ, ಅವರು ವಿಚಾರಣಾ ನ್ಯಾಯಾಲಯದಿಂದ ನಿಯಮಿತ ಜಾಮೀನು ಕೋರಿರಲಿಲ್ಲ ಮತ್ತು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅವರ ವಿರುದ್ಧ ಯಾವುದೇ ನ್ಯಾಯಾಂಗ ಆದೇಶವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: Hemant Soren: ಹೇಮಂತ್‌ ಸೊರೆನ್‌ ಬಂಧನಕ್ಕಿಲ್ಲ ತಡೆ, 5 ದಿನ ಕಸ್ಟಡಿಗೆ; ಚಂಪಯಿ ಪದಗ್ರಹಣ

ಅಕ್ರಮವಾಗಿ ಹಣ ವರ್ಗಾವಣೆ, ಭೂ ಅವ್ಯವಹಾರ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರಿಗೆ 9 ಬಾರಿ ಸಮನ್ಸ್‌ ಜಾರಿಗೊಳಿಸಿದ್ದರು. ಆದರೆ ಹೇಮಂತ್‌ ಸೊರೆನ್‌ ಅವರು ಪ್ರತಿ ಬಾರಿ ಸಮನ್ಸ್‌ ನೀಡಿದಾಗಲೂ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇ.ಡಿ ಅಧಿಕಾರಿಗಳು ಮನೆಗೆ ಲಗ್ಗೆ ಇಡುತ್ತಾರೆ ಎಂಬುದನ್ನು ಅರಿತಿದ್ದ ಅವರು ದೆಹಲಿಗೆ ತೆರಳಿ, ಗೌಪ್ಯ ಸ್ಥಳದಲ್ಲಿದ್ದರು. ಆದರೆ ಇ.ಡಿ ಅಧಿಕಾರಿಗಳು ಕೊನೆಗೂ ಹೇಮಂತ್‌ ಸೊರೆನ್‌ ಅವರನ್ನು ಈ ವರ್ಷದ ಜನವರಿ 31ರಂದು ಬಂಧಿಸಿದ್ದರು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೆನ್‌ ಅವರು ರಾಜೀನಾಮೆ ನೀಡಿದ್ದರು.

Continue Reading

ದೇಶ

Prashant Kishor: 3ನೇ ಅವಧಿಯ ಮೋದಿ ಸರ್ಕಾರದಿಂದ ಈ 4 ಕ್ರಾಂತಿಕಾರಕ ಬದಲಾವಣೆ; ಪ್ರಶಾಂತ್‌ ಕಿಶೋರ್‌ ಭವಿಷ್ಯ

Prashant Kishor: ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಗದ್ದುಗೆ ಏರುವುದು ಖಚಿತ. ಆದರೆ ಮೂರನೇ ಬಾರಿಯ ಆಡಳಿತದಲ್ಲಿ ಕನಿಷ್ಠ ನಾಲ್ಕು ಬದಲಾವಣೆಗಳನ್ನೂ ಪ್ರಧಾನಿ ಮೋದಿ ತಂದೇ ತರುತ್ತಾರೆ. ಭ್ರಷ್ಟಾಚಾರ ನಿಗ್ರಹಕ್ಕೆ ಹೆಚ್ಚಿನ ಒತ್ತು ನೀಡುವ ಮೋದಿ ಸರ್ಕಾರ, ರಚನಾತ್ಮಕ ಮತ್ತು ಕಾರ್ಯಾತ್ಮಕ ಬದಲಾವಣೆಗಳನ್ನು ತರಲಿದೆ ಎಂದು ಹೇಳಿದ್ದಾರೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024) ಫಲಿತಾಂಶದ ಬಗ್ಗೆ ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಚುನಾವಣೆ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಇದೀಗ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರ ಮೂವನೆ ಅವಧಿ ಆಡಳಿತದ ಬಗ್ಗೆ ಮಾತನಾಡಿದ್ದಾರೆ. ಮೂರನೇ ಅವಧಿಯ ಮೋದಿ ಸರ್ಕಾರದಲ್ಲಿ ಒಟ್ಟು ನಾಲ್ಕು ಬದಲಾವಣೆಗಳಾಗಲಿವೆ ಎಂದು ಹೇಳಿಕೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಗದ್ದುಗೆ ಏರುವುದು ಖಚಿತ. ಆದರೆ ಮೂರನೇ ಬಾರಿಯ ಆಡಳಿತದಲ್ಲಿ ಕನಿಷ್ಠ ನಾಲ್ಕು ಬದಲಾವಣೆಗಳನ್ನೂ ಪ್ರಧಾನಿ ಮೋದಿ ತಂದೇ ತರುತ್ತಾರೆ. ಭ್ರಷ್ಟಾಚಾರ ನಿಗ್ರಹಕ್ಕೆ ಹೆಚ್ಚಿನ ಒತ್ತು ನೀಡುವ ಮೋದಿ ಸರ್ಕಾರ, ರಚನಾತ್ಮಕ ಮತ್ತು ಕಾರ್ಯಾತ್ಮಕ ಬದಲಾವಣೆಗಳನ್ನು ತರಲಿದೆ ಎಂದು ಹೇಳಿದ್ದಾರೆ.

ನನ್ನ ಊಹೆಯ ಪ್ರಕಾರ ಪ್ರಧಾನಿ ಮೋದಿ ನೇತೃತ್ವದ 3.0 ಸರ್ಕಾರ ಬಹಳಷ್ಟು ಸದ್ದು ಮಾಡಲಿದೆ. ಕೇಂದ್ರದಲ್ಲಿ ಅಧಿಕಾರ ಮತ್ತು ಸಂಪನ್ಮೂಲ ಎರಡಕ್ಕೂ ಹೆಚ್ಚಿನ ಒತ್ತು ನೀಡಲಾಗುತ್ತದೆ. ರಾಜ್ಯಗಳ ಆರ್ಥಿಕ ಸ್ವಾವಲಂಬನೆಯನ್ನು ಮೊಟಕುಗೊಳಿಸುವ ಸಾಧ್ಯತೆ ಇದೆ. ಅಲ್ಲದೇ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ಅಡಿಯಲ್ಲಿ ತಂದರೂ ಅಚ್ಚರಿ ಇಲ್ಲ ಎಂದು ಹೇಳುವ ಮೂಲಕ ಶಾಕ್‌ ಕೊಟ್ಟಿದ್ದಾರೆ.

ಪ್ರಸ್ತುತ ಪೆಟ್ರೋಲ್‌, ಡೀಸೆಲ್‌, ATF ಮತ್ತು ನೈಸರ್ಗಿಕ ಅನಿಲಗಳು ಜಿಎಸ್‌ಟಿ ಅಡಿಯಲ್ಲಿ ಬರುತ್ತಿರಲಿಲ್ಲ. ಅವುಗಳಿಗೆ ವ್ಯಾಟ್‌, ಕೇಂದ್ರ ತೆರಿಗೆ ಮತ್ತು ಅಬಕಾರಿ ಟ್ಯಾಕ್ಸ್‌ ವಿಧಿಸಲಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಯಡಿಯಲ್ಲಿ ತರಬೇಕೆಂಬುದು ಕೈಗಾರಿಕೆಗಳ ಬಹುದಿನದ ಬೇಡಿಕೆ ಆಗಿದೆ. ಹೀಗಾಗಿ ಕೇಂದ್ರ ಸರ್ಕಾರ ಈ ಬಾರಿ ಈ ಬೇಡಿಕೆ ಪೂರೈಸುವ ಸಾಧ್ಯತೆ ಇದ್ದು, ಇದರಿಂದ ರಾಜ್ಯ ಸರ್ಕಾರಗಳ ಆದಾಯಕ್ಕೆ ಬಹುದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗುವ ಸಾಧ್ಯತೆ ಇದೆ. ಅದೂ ಅಲ್ಲದೇ ಈ ನೀತಿಯಿಂದ ಕೇಂದ್ರದ ಮೇಲೆ ರಾಜ್ಯ ಸರ್ಕಾರಗಳು ಇನ್ನು ಹೆಚ್ಚಾಗಿ ಅವಲಂಬನೆ ಆಗುವ ಸಾಧ್ಯತೆ ಇದೆ.

ಇನ್ನು ಕೇಂದ್ರವು ಸಂಪನ್ಮೂಲಗಳ ವಿಕೇಂದ್ರೀಕರಣವನ್ನು ವಿಳಂಬಗೊಳಿಸಬಹುದು ಮತ್ತು ರಾಜ್ಯಗಳ ಬಜೆಟ್ ಸಾಲವನ್ನು ಕಠಿಣಗೊಳಿಸಬಹುದು ಎಂದು ಕಿಶೋರ್ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಜಾಗತಿಕ ಮಟ್ಟದಲ್ಲಿ, ದೇಶಗಳೊಂದಿಗೆ ವ್ಯವಹರಿಸುವಾಗ ಭಾರತದ ದೃಢತೆ ಹೆಚ್ಚಾಗುತ್ತದೆ ಅವರು ಹೇಳಿದರು.

ನಿನ್ನೆ ಪತ್ರಕರ್ತೆ ಬರ್ಖಾ ದತ್‌ ಜೊತೆ ಮಾತನಾಡಿದ್ದ ಪ್ರಶಾಂತ್‌ ಕಿಶೋರ್‌, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲೆ ಜನ ಸಿಟ್ಟಾಗಿದ್ದಾರೆ ಎಂಬುದು ಎಲ್ಲೂ ಕೇಳಿಲ್ಲ, ನೋಡಿಲ್ಲ. ಹಾಗಾಗಿ, ಅವರೇ ಪ್ರಧಾನಿಯಾಗುವುದು ನಿಶ್ಚಿತ ಎಂದಿದ್ದರು. ಅಲ್ಲದೇ ದೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಂತಹ ಅಲೆ ಇಲ್ಲ. ನರೇಂದ್ರ ಮೋದಿ ಅವರ ಬಗ್ಗೆ ಜನರಿಗೆ ಈಗಲೂ ವಿಶ್ವಾಸವಿದೆ. ಜನರು ಮೋದಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರಬಹುದು, ಒಂದಷ್ಟು ಭರವಸೆಗಳು ಈಡೇರಿದೆ ಇರಬಹುದು. ಆದರೆ, ಮೋದಿ ಜನರಿಗೆ ಖಂಡಿತವಾಗಿಯೂ ಸಿಟ್ಟಿಲ್ಲ ಎಂದಿದ್ದರು.

ಇದನ್ನೂ ಓದಿ:Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

ಇನ್ನು ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading
Advertisement
road rage bangalore
ಕ್ರೈಂ8 mins ago

Road Rage: ರಾಜಧಾನಿಯಲ್ಲಿ ಹೆಚ್ಚುತ್ತಿದೆ ರೋಡ್‌ ರೇಜ್‌, ಮತ್ತೊಂದು ಹಲ್ಲೆ

Viral Video
ವೈರಲ್ ನ್ಯೂಸ್15 mins ago

Viral Video: ಛೇ…ಇವರೆಂಥಾ ರಾಕ್ಷಸರು! ಕೈ ಕಾಲು ಕಟ್ಟಿ ಚೆನ್ನಾಗಿ ಥಳಿಸಿ ಯುವಕನ ಹತ್ಯೆ-ವಿಡಿಯೋ ನೋಡಿ

Indian 2
ಸಿನಿಮಾ28 mins ago

Indian 2: ಕಮಲ್‌ ಹಾಸನ್‌ ಅಭಿನಯದ ʼಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌; ಕುದುರೆ ಏರಿ ಬಂದ ಉಳಗನಾಯಗನ್‌

dhavala dharini column buddha ಧವಳ ಧಾರಿಣಿ
ಅಂಕಣ51 mins ago

ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

Karnataka Weather
ಕರ್ನಾಟಕ2 hours ago

Karnataka Weather: ಇಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Brain Tumour In Kids
ಆರೋಗ್ಯ2 hours ago

Brain Tumour In Kids: ಮಕ್ಕಳ ಜೀವ ಹಿಂಡುವ ಮೆದುಳಿನ ಟ್ಯೂಮರ್‌ನ ಲಕ್ಷಣಗಳಿವು

Buddha Purnima
ಧಾರ್ಮಿಕ2 hours ago

Buddha Purnima: ಇಂದು ಬುದ್ಧ ಪೂರ್ಣಿಮೆ; ಬುದ್ಧನ ಬೋಧನೆಯನ್ನು ಸ್ಮರಿಸಿಕೊಳ್ಳುವ ದಿನ

Health Benefits Of Okra
ಆರೋಗ್ಯ3 hours ago

Health Benefits Of Okra: ಬೆಂಡೆಕಾಯಿ ತಿನ್ನುತ್ತೀರಿ ನಿಜ; ಅದರಿಂದಾಗುವ ಪ್ರಯೋಜನಗಳೇನು ಗೊತ್ತಿದೆಯಾ?

dina bhavishya read your daily horoscope predictions for May 23 2024
ಭವಿಷ್ಯ3 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

IPL 2024
ಕ್ರೀಡೆ8 hours ago

IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ3 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌