Varalaxmi Sarathkumar:‌ ನಟ ಶರತ್‌ಕುಮಾರ್ ಪುತ್ರಿಯನ್ನು ಭೇಟಿಯಾದ ಕಿಚ್ಚ ಸುದೀಪ್! - Vistara News

ಟಾಲಿವುಡ್

Varalaxmi Sarathkumar:‌ ನಟ ಶರತ್‌ಕುಮಾರ್ ಪುತ್ರಿಯನ್ನು ಭೇಟಿಯಾದ ಕಿಚ್ಚ ಸುದೀಪ್!

Varalaxmi Sarathkumar ಮೊದಲಿಂದ ಶರತ್‌ ಕುಮಾರ್‌ ಅವರು ಸುದೀಪ್ ಹಾಗೂ ಅವರ ಕುಟುಂಬಕ್ಕೆ ಆತ್ಮೀಯರು. ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆಗ ಕಿಚ್ಚ ಸುದೀಪ್‌ ಸಿಸಿಎಲ್ ಇದ್ದ ಕಾರಣ ಭಾಗಿಯಾಗಿರಲಿಲ್ಲ. ಈಗ ತಮ್ಮ ಗೆಳತಿ ವರಲಕ್ಷ್ಮೀ ಶರತ್ ಕುಮಾರ್‌ ಅವರನ್ನ ಭೇಟಿಯಾಗಿದ್ದಾರೆ.

VISTARANEWS.COM


on

Varalaxmi Sarathkumar met By kiccha sudeep Family
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆಗ ಕಿಚ್ಚ ಸುದೀಪ್‌ (kiccha sudeep) ಸಿಸಿಎಲ್ ಇದ್ದ ಕಾರಣ ಭಾಗಿಯಾಗಿರಲಿಲ್ಲ. ಈಗ ತಮ್ಮ ಗೆಳತಿ ವರಲಕ್ಷ್ಮೀ ಶರತ್ ಕುಮಾರ್‌ ಅವರನ್ನ ಭೇಟಿಯಾಗಿದ್ದಾರೆ. ಸದ್ಯದಲ್ಲಿಯೇ ಬದುಕಿನ ಹೊಸ ಅಧ್ಯಾಯವನ್ನ ಆರಂಭ ಮಾಡಲಿರುವ ನವ ಜೋಡಿಗೆ ಶುಭಾಶಯವನ್ನ ಕೋರಿದ್ದಾರೆ.

ಮೊದಲಿಂದ ಶರತ್‌ ಕುಮಾರ್‌ (Varalaxmi Sarathkumar) ಅವರು ಸುದೀಪ್ ಹಾಗೂ ಅವರ ಕುಟುಂಬಕ್ಕೆ ಆತ್ಮೀಯರು. ವರಲಕ್ಷ್ಮೀ ಶರತ್ ಕುಮಾರ್ ಅವರು ಸುದೀಪ್‌ ಅವರ ಜನುಮದಿನ ವಿಶ್‌ ಮಾಡದೇ ಇರಲ್ಲ. ಇಬ್ಬರೂ ತುಂಬ ಆತ್ಮಿಯರು. ಇದೀಗ ಸುದೀಪ್‌ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜತೆ ವರಲಕ್ಷ್ಮೀ ಹಾಗೂ ಅವರ ಭಾವಿ ಪತಿ ನಿಖೋಲಯ್ ಸಚ್‌ದೇವ್ ಅವರನ್ನ ಭೇಟಿ ಮಾಡಿ ಮಾಡಿದ್ದಾರೆ. ಅವರ ಜತೆ ಫೋಟೊಗಳನ್ನು ಕ್ಲಿಕಿಸಿಕೊಂಡಿದ್ದಾರೆ.

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Varalaxmi Sarathkumar: ʻಮಾಣಿಕ್ಯʼನಟಿಯ ಭಾವಿ ಪತಿಗೆ ಇದು 2ನೇ ಮದುವೆ? ಮೊದಲ ಪತ್ನಿ ಖ್ಯಾತ ಮಾಡೆಲ್!

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಟಾಲಿವುಡ್

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

Kajal Aggarwal: ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

VISTARANEWS.COM


on

Kajal Aggarwal Kannappa Movie Entry
Koo

ಬೆಂಗಳೂರು: ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ತೆಲುಗಿನ ʻಕಣ್ಣಪ್ಪʼ ಸಿನಿಮಾ. ಆಗೊಬ್ಬರು ಈಗೊಬ್ಬರು ಈ ಚಿತ್ರದ ತಾರಾಬಳಗ ಸೇರಿಕೊಳ್ಳುತ್ತಲೇ ಇದ್ದಾರೆ. ಇದೀಗ ಮತ್ತೊಬ್ಬರು ಸ್ಟಾರ್‌ ನಟಿ ಈ ತಂಡ ಸೇರಿಕೊಂಡಿದ್ದಾರೆ. ಅದು ಬೇರಾರು ಅಲ್ಲ, ನಟಿ ಕಾಜಲ್‌ ಅಗರ್‌ವಾಲ್! ವಿಷ್ಣು ಮಂಚು ಮತ್ತು ಕಾಜಲ್‌ ಅಗರ್‌ವಾಲ್‌ (Kajal Aggarwal) ಈ ಹಿಂದೆ ತೆಲುಗಿನ ʻಮೊಸಗಲ್ಲುʼ ಚಿತ್ರದಲ್ಲಿ ಸಹೋದರ ಮತ್ತು ಸಹೋದರಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಿಷ್ಣು ಮಂಚು ಅವರ ಬಹುನಿರೀಕ್ಷಿತ ಪ್ರಾಜೆಕ್ಟ್‌ ʻಕಣ್ಣಪ್ಪʼ ಚಿತ್ರಕ್ಕೂ ಆಗಮಿಸುವ ಮೂಲಕ ಎರಡನೇ ಸಲ ಒಂದಾಗುತ್ತಿದ್ದಾರೆ.

ಹಾಗಾದರೆ, ಕಾಜಲ್‌ ಅಗರ್‌ವಾಲ್‌ ಪಾತ್ರವೇನು? ಸದ್ಯಕ್ಕೆ ಆ ಬಗ್ಗೆ ಚಿತ್ರತಂಡ ರಿವೀಲ್‌ ಮಾಡಿಲ್ಲ. ಬದಲಿಗೆ ವಿಶೇಷವಾದ ಪಾತ್ರವೊಂದರಲ್ಲಿ ಕಾಜಲ್‌ ನಟಿಸುವ ಮೂಲಕ ಕಣ್ಣಪ್ಪ ಸಿನಿಮಾದ ಭಾಗವಾಗಲಿದ್ದಾರೆ. ಈ ಸಿನಿಮಾದ ಶೂಟಿಂಗ್‌ ಸಹ ಅಷ್ಟೇ ಬಿರುಸಾಗಿಯೇ ನಡೆಯುತ್ತಿದೆ.

ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

ಇದನ್ನೂ ಓದಿ: Kajal Aggarwal: ಸೆಲ್ಫಿ ನೆಪದಲ್ಲಿ ನಟಿ ಕಾಜಲ್ ಸೊಂಟ ಮುಟ್ಟಿದ ವ್ಯಕ್ತಿ: ವಿಡಿಯೊ ವೈರಲ್‌!


ಕಣ್ಣಪ್ಪ’ ಸಿನಿಮಾ ವ್ಯಕ್ತಿಯ ಅಚಲವಾದ ಭಕ್ತಿಯ ಮೇಲೆ ಬೆಳಕು ಚೆಲ್ಲುವ ಸಿನಿಮಾ ಆಗಿದೆ. ನಾಸ್ತಿಕನಾದ ಕಣ್ಣಪ್ಪ ಮಹಾನ್ ಶಿವನ ಆರಾಧಕನಾಗಿ ಬದಲಾದ ವಿಸ್ಮಯಕಾರಿ ಕತೆಯನ್ನು ಸಿನಿಮಾ ಒಳಗೊಂಡಿದೆ. ಈ ಚಿತ್ರವು ಶಿವನ ಭಕ್ತನಾಗಿದ್ದ ಭಕ್ತ ಕಣ್ಣಪ್ಪನ ಜೀವನವನ್ನು ಆಧರಿಸಿದೆ ಎಂದು ವರದಿಯಾಗಿದೆ.

ಮೋಹನ್ ಬಾಬು ನಿರ್ಮಿಸುತ್ತಿರುವ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಅದೇ ರೀತಿ ಚಿತ್ರೀಕರಣದ ಮುಕ್ತಾಯದ ಹಂತಕ್ಕೂ ಬಂದು ನಿಂತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕವೂ ಘೋಷಣೆ ಆಗಲಿದೆ.

Continue Reading

South Cinema

Pavithra Jayaram: ಗೆಳೆಯ ಚಂದು ಜತೆ ಪವಿತ್ರ ಜಯರಾಮ್ ರೀಲ್ಸ್ ನೋಡಿದ್ರೆ ಕಣ್ಣು ಒದ್ದೆಯಾಗುತ್ತೆ!

Pavithra Jayaram: ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ‘ತ್ರಿನಯನಿ’ ನಟಿ ಸೀರೆಯನ್ನು ಧರಿಸಿ ಚಂದ್ರಕಾಂತ್‌ ಜತೆ ಪುಟ್ಟಮಲ್ಲಿ ಸಾಂಗ್‌ಗೆ ಹೆಜ್ಜೆ ಹಾಕಿದ್ದರು. ‘ತ್ರಿನಯನಿ’ಯಲ್ಲಿ ಸಹೋದರ ಪಾತ್ರ ನಿಭಾಯಿಸುತ್ತಿದ್ದರು ಚಂದ್ರಕಾಂತ್‌. ಚಂದ್ರಕಾಂತ್‌ ಕೊನೆಯ ಪೋಸ್ಟ್‌ನಲ್ಲಿ “ನನ್ನ ಪ್ರೀತಿ ಯಾವಾಗಲೂ ನಿನಗೆ. ಮಿಸ್ ಯೂ ಪಾಪಾʼʼ ಎಂದು ಬರೆಯಲಾಗಿತ್ತು. ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವಿಡಿಯೊ ಡಿಲಿಟ್‌ ಮಾಡಿದ್ದರು ನಟ.

VISTARANEWS.COM


on

Pavithra Jayaram Last Instagram post to chandrakanth
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಅವರ ಪ್ರಿಯತಮ, ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿಯ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆ, ಚಂದ್ರಕಾಂತ್‌ ಅವರು ಪವಿತ್ರ ಜಯರಾಮ್ ಜತೆ ರೀಲ್ಸ್‌ ಮಾಡಿರುವ ವಿಡಿಯೊಗಳು ವೈರಲ್‌ ಆಗುತ್ತಿವೆ.

ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ‘ತ್ರಿನಯನಿ’ ನಟಿ ಸೀರೆಯನ್ನು ಧರಿಸಿ ನಟ ಚಂದ್ರಕಾಂತ್‌ ಜತೆ ಪುಟ್ಟಮಲ್ಲಿ ಸಾಂಗ್‌ಗೆ ಹೆಜ್ಜೆ ಹಾಕಿದ್ದರು. ‘ತ್ರಿನಯನಿ’ಯಲ್ಲಿ ಸಹೋದರ ಪಾತ್ರ ನಿಭಾಯಿಸುತ್ತಿದ್ದರು ಚಂದ್ರಕಾಂತ್‌. ಚಂದ್ರಕಾಂತ್‌ ಕೊನೆಯ ಪೋಸ್ಟ್‌ನಲ್ಲಿ “ನನ್ನ ಪ್ರೀತಿ ಯಾವಾಗಲೂ ನಿನಗೆ. ಮಿಸ್ ಯೂ ಪಾಪಾʼʼ ಎಂದು ಬರೆಯಲಾಗಿತ್ತು. ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವಿಡಿಯೊ ಡಿಲಿಟ್‌ ಮಾಡಿದ್ದರು ನಟ.

ಇದನ್ನೂ ಓದಿ: Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

ಇದೀ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿ (Andhra Pradesh) ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದ ರಂಗಾರೆಡ್ಡಿ ಜಿಲ್ಲೆ ನರಸಿಂಗ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅಲ್ಕಾಪುರ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಪವಿತ್ರಾ ಜಯರಾಮ್‌ ಅವರು ಕಾರು ಅಪಘಾತದಲ್ಲಿ ಮೇ 12ರಂದು ಮೃತಪಟ್ಟಿದ್ದರು. ಅದೇ ಕಾರಿನಲ್ಲಿ ಚಂದ್ರಕಾಂತ್‌ ಅವರು ಕೂಡ ತೆರಳುತ್ತಿದ್ದಾರೆ. ಘಟನೆಯ ಬಳಿಕ ನೊಂದಿದ್ದ ಅವರು ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಟಿಯ ಅಗಲಿಕೆಯ ನೋವು ತಾಳದೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

ದುರಂತ ಸಾವು

ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಚಂದ್ರಕಾಂತ್‌ ಕೂಡ ನಟರಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿಶ್ಚಯಿಸಿದ್ದರು. ಆದರೆ, ಒಂದೇ ವಾರದಲ್ಲಿ ಇಬ್ಬರೂ ದುರಂತ ಸಾವು ಕಂಡಿದ್ದಾರೆ.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

Continue Reading

ಟಾಲಿವುಡ್

Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Pushpa 2: ಅನಸೂಯಾ ಅವರ ಹುಟ್ಟುಹಬ್ಬಕ್ಕೆ (ಮೇ 15) ದಾಕ್ಷಾಯಿಣಿ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಅಭಿಮಾನಿಗಳು ಫಸ್ಟ್ ಲುಕ್‌ಗೆ ಫಿದಾ ಆಗಿದ್ದಾರೆ. ಜಬರ್ದಸ್ತ್ ಲುಕ್‌ನಲ್ಲಿ ಮಾಸ್ ಆಗಿ ಕಂಡಿದ್ದಾರೆ. ಅನಸೂಯಾ ಸೀರೆಯುಟ್ಟು ಮೈ ತುಂಬಾ ಆಭರಣ ಧರಿಸಿ ಖಡಕ್ ಆಗಿ ಪೋಸ್ ಕೊಟ್ಟಿದ್ದಾರೆ.

VISTARANEWS.COM


on

Pushpa 2 Allu Arjun anasuya bharadwaj poster look out
Koo

ಬೆಂಗಳೂರು: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಅಭಿಮಾನಿಗಳು ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದ ನಡುವೆ ಪುಷ್ಪ 2 ಮುಂದೂಡಲ್ಪಡಬಹುದು (Pushpa 2) ಎಂಬ ವದಂತಿಗಳು ಅವರನ್ನು ಬೇಸರಕ್ಕೆ ತಳ್ಳಿತ್ತು. ಆದರೆ ತಯಾರಕರು ಅಂತಿಮವಾಗಿ ಅದು ನಿಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಒಂದಾದ ಅನಸೂಯಾ ಭಾರದ್ವಾಜ್ ಅವರ ಜನ್ಮದಿನದಂದು ತಂಡ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಅನಸೂಯಾ ಅವರ ಹುಟ್ಟುಹಬ್ಬದ ಗೌರವಾರ್ಥವಾಗಿ, ಚಿತ್ರ ನಿರ್ಮಾಪಕರು ಅವರ ಫಸ್ಟ್‌ ಲುಕ್‌ ಅನಾವರಣಗೊಳಿಸಿದ್ದಾರೆ.

ಅನಸೂಯಾ ಅವರ ಹುಟ್ಟುಹಬ್ಬಕ್ಕೆ (ಮೇ 15) ದಾಕ್ಷಾಯಿಣಿ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಅಭಿಮಾನಿಗಳು ಫಸ್ಟ್ ಲುಕ್‌ಗೆ ಫಿದಾ ಆಗಿದ್ದಾರೆ. ಜಬರ್ದಸ್ತ್ ಲುಕ್‌ನಲ್ಲಿ ಮಾಸ್ ಆಗಿ ಕಂಡಿದ್ದಾರೆ. ಅನಸೂಯಾ ಸೀರೆಯುಟ್ಟು ಮೈ ತುಂಬಾ ಆಭರಣ ಧರಿಸಿ ಖಡಕ್ ಆಗಿ ಪೋಸ್ ಕೊಟ್ಟಿದ್ದಾರೆ.

ಹೀರೋ ಅಲ್ಲು ಅರ್ಜುನ್‌ಗೆ (Allu Arjun) ಅನಸೂಯಾ ಖಡಕ್ ವಿಲನ್ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

ಇದನ್ನೂ ಓದಿ: Allu Arjun: ʻಪುಷ್ಪ 2ʼ ಸಿನಿಮಾಗೆ ಹೆದರಿತಾ ʻಸಿಂಗಂʼ? ಅಜಯ್ ದೇವಗನ್ ಸಿನಿಮಾ ಮುಂದೂಡಿಕೆ!

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಟಾಲಿವುಡ್

Anushka Shetty: ಕನ್ನಡ ನಿರ್ಮಾಪಕನ ಜತೆ ʻಟಾಲಿವುಡ್‌ ಸ್ವೀಟಿʼ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆ ನಿರ್ಮಾಪಕನಿಗೂ 42 ವರ್ಷ ಎಂದು ವರದಿಗಳಾಗಿವೆ. ಅನುಷ್ಕಾ ಶೆಟ್ಟಿ ಕನ್ನಡದ ನಟಿಯೇ ಆಗಿದ್ದರೂ, ತೆಲುಗು ಸಿನಿಮಾಗಳಿಂದ ವೃತ್ತಿ ಬದುಕನ್ನು ಆರಂಭಿಸಿದ್ದರು.ಇದೀಗ ತೆಲುಗು ಮಾಧ್ಯಮಗಳು ಅನುಷ್ಕಾ ಶೆಟ್ಟಿ ಶೀಘ್ರದಲ್ಲಿಯೇ ಮದುವೆ ಆಗಲಿದ್ದಾರೆ ಎಂದು ವರದಿ ಮಾಡಿವೆ.

VISTARANEWS.COM


on

Anushka Shetty producer marriage news viral
Koo

ಬೆಂಗಳೂರು: ನಟಿ ಅನುಷ್ಕಾ ಶೆಟ್ಟಿ (Anushka Shetty) ಮದುವೆ ವದಂತಿಗಳು ಹೊಸದೇನಲ್ಲ. ಹಲವು ಬಾರಿ ಪ್ರಭಾಸ್  ಜತೆ ನಟಿಯ ಹೆಸರು ತುಳುಕು ಹಾಕಿಕೊಂಡಿತ್ತು. ಕಳೆದ ಕೆಲವು ವರ್ಷಗಳಿಂದ ಜೋಡಿ ರಿಲೇಶನ್‌ಶಿಪ್‌ನಲ್ಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಬಳಿಕ ತಾವು ಉತ್ತಮ ಸ್ನೇಹಿತರು ಎಂದು ಹೇಳಿಕೊಂಡಿದ್ದರು. ಇದೀಗ ತೆಲುಗು ಮಾಧ್ಯಮಗಳು ಅನುಷ್ಕಾ ಶೆಟ್ಟಿ ಶೀಘ್ರದಲ್ಲಿಯೇ ಮದುವೆ ಆಗಲಿದ್ದಾರೆ ಎಂದು ವರದಿ ಮಾಡಿವೆ.

ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆ ನಿರ್ಮಾಪಕನಿಗೂ 42 ವರ್ಷ ಎಂದು ವರದಿಗಳಾಗಿವೆ. ಅನುಷ್ಕಾ ಶೆಟ್ಟಿ ಕನ್ನಡದ ನಟಿಯೇ ಆಗಿದ್ದರೂ, ತೆಲುಗು ಸಿನಿಮಾಗಳಿಂದ ವೃತ್ತಿ ಬದುಕನ್ನು ಆರಂಭಿಸಿದ್ದರು. ಅಕ್ಕಿನೇನಿ ನಾಗಾರ್ಜುನ ನಟಿಸಿದ್ದ ‘ಸೂಪರ್’ ಸಿನಿಮಾ ಮೂಲಕ ಟಾಲಿವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು.’ಅರುಂಧತಿ’, ‘ಬಾಹುಬಲಿ’ ಅಂತಹ ಸಿನಿಮಾ ಅನುಷ್ಕಾ ಶೆಟ್ಟಿ ವೃತ್ತಿ ಬದುಕಿಗೆ ಹೊಸ ತಿರುವನ್ನು ಕೊಟ್ಟಿತ್ತು. ಅದರಲ್ಲೂ ‘ಬಾಹುಬಲಿ’ ಸಿನಿಮಾ ಜಗತ್ತಿನಾದ್ಯಂತ ಸದ್ದು ಮಾಡಿತ್ತು.

ಇದನ್ನೂ ಓದಿ: Anushka Shetty: ಬಿಜೆಪಿ ಬೆಂಬಲಿತ ಪವನ್ ಕಲ್ಯಾಣ್ ಪಕ್ಷ ಸೇರಲಿದ್ದಾರಂತೆ ನಟಿ ಅನುಷ್ಕಾ ಶೆಟ್ಟಿ!

ಕೆಲ ದಿನಗಳ ಹಿಂದೆ ನಿರ್ದೇಶಕ ಕ್ರಿಶ್ ಅವರು ಅನುಷ್ಕಾ ಶೆಟ್ಟಿ (Anushka Shetty) ಜತೆ ಗುಟ್ಟಾಗಿ ಹೊಸ ಸಿನಿಮಾ ಶುರು ಮಾಡಿದ್ದಾರೆ ಎಂದು ವರದಿ ಆಗಿದ್ದವು. ಯುವಿ ಕ್ರಿಯೇಷನ್ಸ್ ಈ ಚಿತ್ರ ಮಹಿಳಾ ಪ್ರಧಾನ ಸಿನಿಮಾವಾಗಿದೆ. 14 ವರ್ಷಗಳ ಹಿಂದೆ ಬಂದಿದ್ದ ‘ವೇದಂ’ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ವೇಶ್ಯೆಯ ಪಾತ್ರದಲ್ಲಿ ನಟಿಸಿದ್ದರು. ಆ ಚಿತ್ರಕ್ಕೆ ಕ್ರಿಶ್ ಆ್ಯಕ್ಷನ್ ಕಟ್ ಹೇಳಿದ್ದರು. ಅದೇ ಕಾಂಬಿನೇಷನ್‌ನಲ್ಲಿ ಹೊಸದೊಂದು ಸಿನಿಮಾ ಮೂಡಿ ಬರುತ್ತಿದೆ. ಇದೀಗ ಆ ಚಿತ್ರದ ಟೈಟಲ್ ರಿವೀಲ್ ಆಗಿದೆ. ‘ಘಾಟಿ’ ಎನ್ನುವ ಟೈಟಲ್ (Ghaati Title) (UV Creations) ಫೈನಲ್ ಮಾಡಲಾಗಿದೆ. ಇದು ತೆಲುಗು ಸಿನಿಮಾ. ಅಷ್ಟೇ ಅಲ್ಲ ಪೋಸ್ಟ್ ಥ್ರಿಯೇಟ್ರಿಕಲ್ ಒಟಿಟಿ ಪಾರ್ಟ್‌ನರ್‌ ಕೂಡ ಫಿಕ್ಸ್ ಆಗಿದ್ದಾರೆ. ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಚಿತ್ರದ ನಂತರ ಈಗ ಮತ್ತೆ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನುಷ್ಕಾ.

ತೆಲುಗು ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಕ್ರಿಶ್ ಒಬ್ಬರು. ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಅವರದ್ದು ವೇಶ್ಯೆ ಪಾತ್ರ ಎಂದು ಹೇಳಲಾಗುತ್ತಿದೆ. ಅನುಷ್ಕಾ ಶೆಟ್ಟಿ ಜತೆ ಈ ಚಿತ್ರಕ್ಕೆ ಕ್ರಿಶ್ ಈ ಸಿನಿಮಾ ಮಾಡಿದ ಬಳಿಕ ಪವನ್‌ ಕಲ್ಯಾಣ್‌ ಜತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.

ಅಮೆಜಾನ್ ಪ್ರೈಂ ಸಂಸ್ಥೆ ಮುಂದಿನ 2 ವರ್ಷಗಳಲ್ಲಿ ಸ್ಟ್ರೀಮಿಂಗ್ ಮಾಡುವ ಸಿನಿಮಾ ಹಾಗೂ ವೆಬ್‌ ಸೀರಿಸ್ ಲಿಸ್ಟ್ ಬಿಡುಗಡೆ ಮಾಡಿದೆ. ಆ ಲಿಸ್ಟ್‌ನಲ್ಲಿ ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾ ಕೂಡ ಇದೆ. ಇನ್ನು ಯುವಿ ಕ್ರಿಯೇಷನ್ಸ್ ಜತೆಗೆ ಫಸ್ಟ್ ಫ್ರೇಮ್ಸ್ ಎಂಟರ್‌ಟ್ರೈನ್‌ಮೆಂಟ್ಸ್ ಸಂಸ್ಥೆ ಕೂಡ ಸಿನಿಮಾ ನಿರ್ಮಾಣಕ್ಕೆ ಕೈಜೋಡಿಸಿದೆ.

ಚಿಂತಕಿಂಡಿ ಶ್ರೀನಿವಾಸ್ ರಾವ್, ಕ್ರಿಶ್ ಹಾಗೂ ಸಾಯಿಮಾಧವ ಬುರ್ರಾ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಆಂಧ್ರ ಮತ್ತು ಒಡಿಶಾ ಗಡಿಯಲ್ಲಿ ‘ಘಾಟಿ’ ಚಿತ್ರದ ಬಹುತೇಕ ಚಿತ್ರೀಕರಣ ನಡೆಯುತ್ತಿದೆ. ಇತ್ತೀಚೆಗೆ ರಮ್ಯಾ ಕೃಷ್ಣನ್ ಛತ್ತೀಸ್‌ಗಢದ ತಿರತ್‌ಗಢದಲ್ಲಿ ನಡೆದ ಚಿತ್ರೀಕರಣದಲ್ಲಿ ಕೂಡ ಭಾಗಿ ಆಗಿದ್ದರು.

Continue Reading
Advertisement
Kangana Ranaut
ದೇಶ45 mins ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ49 mins ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Lorry Accident
ಕರ್ನಾಟಕ51 mins ago

Lorry Accident: ಕಾರ್ಕಳದಲ್ಲಿ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವು

RCB vs CSK
ಕ್ರೀಡೆ1 hour ago

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

Road Accident
ಕರ್ನಾಟಕ2 hours ago

Road Accident: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

Russia Tourism
ಪ್ರವಾಸ2 hours ago

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Constitution
ದೇಶ2 hours ago

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Rain News Boy dies after being struck by lightning in Banavasi Heavy rains lash Chikkamagaluru and Hassan
ಮಳೆ2 hours ago

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Election Icon
Lok Sabha Election 20242 hours ago

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

Virat Kohli
ಕ್ರೀಡೆ2 hours ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌