Viral News: ಚಪ್ಪಲಿ ಹಾರ ಹಾಕಿಕೊಂಡು ಮತಯಾಚಿಸುವ ಅಭ್ಯರ್ಥಿ; ವಿಶಿಷ್ಟ ಪ್ರಚಾರದ ಈ ವಿಡಿಯೊ ನೀವೂ ನೋಡಿ - Vistara News

ವೈರಲ್ ನ್ಯೂಸ್

Viral News: ಚಪ್ಪಲಿ ಹಾರ ಹಾಕಿಕೊಂಡು ಮತಯಾಚಿಸುವ ಅಭ್ಯರ್ಥಿ; ವಿಶಿಷ್ಟ ಪ್ರಚಾರದ ಈ ವಿಡಿಯೊ ನೀವೂ ನೋಡಿ

Viral News: ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಗಿದೆ. ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ಚುನಾವಣಾ ಪ್ರಚಾರ ತೊಡಗಿಸಿಕೊಂಡಿವೆ. ಮತದಾರರನ್ನು ಆಕರ್ಷಿಸಲು ನಾನಾ ಕಸರತ್ತು ನಡೆಸಲಾಗುತ್ತಿದೆ. ಈ ಪೈಕಿ ಉತ್ತರ ಪ್ರದೇಶದ ಅಭ್ಯರ್ಥಿಯೊಬ್ಬರು ತಮ್ಮ ವಿಶಿಷ್ಟ ಕಾರ್ಯ ವೈಖರಿಯಿಂದ ದೇಶದ ಗಮನ ಸೆಳೆದಿದ್ದಾರೆ. ಈ ವಿಡಿಯೊ ಸದ್ಯ ವೈರಲ್‌ ಆಗಿದೆ. ಆ ಕುರಿತಾದ ವಿವರ ಇಲ್ಲಿದೆ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಏರತೊಗಿದೆ. ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ಚುನಾವಣಾ ಪ್ರಚಾರ ತೊಡಗಿಸಿಕೊಂಡಿವೆ. ಮತದಾರರನ್ನು ಆಕರ್ಷಿಸಲು ನಾನಾ ಕಸರತ್ತು ನಡೆಸಲಾಗುತ್ತಿದೆ. ಪ್ರಣಾಳಿಕೆ, ವಿವಿಧ ಯೋಜನೆಗಳನ್ನು ಪ್ರಕಟಿಸಿ ಮತದಾರ ಪ್ರಭುಗಳ ಗಮನ ಸೆಳೆಯಲು ಪ್ರಯತ್ನಿಸಲಾಗುತ್ತಿದೆ. ಇದರ ಜತೆಗೆ ಕೆಲವರು ಚಿತ್ರ-ವಿಚಿತ್ರ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಈ ಪೈಕಿ ಉತ್ತರ ಪ್ರದೇಶದ ಅಭ್ಯರ್ಥಿಯೊಬ್ಬರು ತಮ್ಮ ವಿಶಿಷ್ಟ ಕಾರ್ಯ ವೈಖರಿಯಿಂದ ದೇಶದ ಗಮನ ಸೆಳೆದಿದ್ದಾರೆ. ಅದು ಹೇಗೆ ಎನ್ನುವ ವಿವರ ಇಲ್ಲಿದೆ (Viral News).

ಸಾಮಾನ್ಯವಾಗಿ ಯಾರ ಮೇಲಾದರೂ ಸಹಿಸಲಸಾಧ್ಯ ರೋಷ ಇದ್ದರೆ ಅವರ ಮೇಲೆ ಚಪ್ಪಲಿ ಎಸೆಯುವುದನ್ನು ನೋಡಿದ್ದೇವೆ. ಇನ್ನು ಕೆಲವೊಮ್ಮೆ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳ ಪ್ರತಿಕೃತಿಗೆ ಚಪ್ಪಲಿ ಹಾರ ತೊಡಿಸಿ ಪ್ರತಿಭಟನೆ ನಡೆಸುವುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬರು ತಮ್ಮ ಕೊರಳಿಗೆ ತಾವೇ ಚಪ್ಪಲಿ ಹಾರ ಹಾಕಿಕೊಂಡು ಮತಯಾಚಿಸುತ್ತಿದ್ದಾರೆ! ಅದಕ್ಕೆ ಕಾರಣ ಏನು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕಾರಣ ಏನು?

ಉತ್ತರ ಪ್ರದೇಶದ ಪಂಡಿತ್ ಕೇಶವ್ ದೇವ್ ಎನ್ನುವವವರೇ ಈ ವಿನೂತನ ಚುನಾವಣಾ ಪ್ರಚಾರ ನಡೆಸುತ್ತಿರುವವರು. ಪಂಡಿತ್ ಕೇಶವ್ ದೇವ್ ಅವರು ಅಲಿಘಡ್‌ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಚುನಾವಣಾ ಆಯೋಗವು ಅವರಿಗೆ ಚಪ್ಪಲಿ ಚಿಹ್ನೆಯನ್ನು ನೀಡಿದೆ. ಹೀಗಾಗಿ ಅವರು ಹೂವಿನೊಂದಿಗೆ ಚಪ್ಪಲಿ ಹಾರವನ್ನು ಕೊರಳಿಗೆ ಹಾಕಿಕೊಂಡು ವೈವಿಧ್ಯಮಯ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ದಾರಕ್ಕೆ ಏಳು ಚಪ್ಪಲಿಗಳನ್ನು ಪೋಣಿಸಿದ ಹಾರ ಧರಿಸಿಕೊಂಡು ಅವರು ಜನರ ಬಳಿ ಮತ ಯಾಚಿಸುತ್ತಿದ್ದಾರೆ. ಹೀಗೆ ದೇಶಾದ್ಯಂತ ಗಮನ ಸೆಳೆದಿದ್ದಾರೆ.

ʼʼತಮ್ಮ ಚುನಾವಣಾ ಚಿಹ್ನೆಯನ್ನು ಮತದಾರರು ಚೆನ್ನಾಗಿ ನೆನಪಿಟ್ಟುಕೊಳ್ಳಲು 7 ಚಪ್ಪಲಿಗಳ ಹಾರವನ್ನು ಕೊರಳಿಗೆ ಹಾಕಿಕೊಂಡಿದ್ದಾರೆʼʼ ಎಂದು ಅವರ ಬೆಂಬಲಿಗರು ಹೇಳುತ್ತಾರೆ. ಇದೀಗ ಮತದಾರರು ಈ ಹೊಸ ರೀತಿಯ ಪ್ರಚಾರವನ್ನು ಎಂಜಾಯ್‌ ಮಾಡುತ್ತಿದೆ. ಇದು ಎಷ್ಟರ ಮಟ್ಟಿಗೆ ಮತವಾಗಿ ಪರಿವರ್ತನೆಯಾಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಮೋದಿ ಮತ್ತೆ ಪಿಎಂ ಆಗಲೆಂದು 13 ಸಾವಿರ ಅಡಿಯಿಂದ ಸ್ಕೈ ಡೈವ್‌ ಮಾಡಿದ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಗೆದ್ದು, ನರೇಂದ್ರ ಮೋದಿ ಅವರೇ ಮತ್ತೆ ದೇಶದ ಪ್ರಧಾನಿಯಾಗಲಿ ಎಂದು ಬಿಜೆಪಿ ಕಾರ್ಯಕರ್ತರ ಜತೆಗೆ ಮೋದಿ ಅಭಿಮಾನಿಗಳು ಕೂಡ ದೇಶಾದ್ಯಂತ ಪ್ರಚಾರ, ಸೋಷಿಯಲ್‌ ಮೀಡಿಯಾ ಮೂಲಕ ಅಭಿಯಾನ ಕೈಗೊಳ್ಳುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ವಿಜಯಪುರದ ಅಭಿಮಾನಿಗಳು ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿಯಾಗಬೇಕು ಎಂದು ವಿದೇಶದಲ್ಲಿ 13 ಸಾವಿರ ಅಡಿಯಿಂದ ಸ್ಕೈ ಡೈವ್‌ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.

ಹೌದು, ವಿಜಯಪುರದ ಉದ್ಯಮಿ ರಾಜಶೇಖರ ಮುತ್ತಿನಪೆಂಡಿಮಠ ಅವರ ನೇತ್ರತ್ವದಲ್ಲಿ ಬ್ಯಾಂಕಾಕ್‌ನ ಖೋಯಾಯ್‌ ಎಂಬ ಪ್ರದೇಶದಲ್ಲಿ ಯುವಕರು 13 ಸಾವಿರ ಅಡಿಯಿಂದ ಸ್ಕೈ ಡೈವ್‌ ಮಾಡಿದ್ದಾರೆ. ಔರ್‌ ಏಕ್‌ ಬಾರ್‌ ಮೋದಿ ಸರ್ಕಾರ್‌ ಎಂದು ಘೋಷಣೆ ಕೂಗುತ್ತ, ಯುವಕರು ಸ್ಕೈ ಡೈವ್‌ ಮಾಡಿದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ನಮೋ ಸ್ಕೈ ಡೈವರ್ಸ್‌ ಎಂಬ ನಾಲ್ಕು ಯುವಕರ ತಂಡವು ವಿಭಿನ್ನ ಪ್ರಯತ್ನ ಮಾಡಿದೆ. ಅಲ್ಲದೆ, ನಮೋ ಎಂದು ಬರೆದ ಬ್ಯಾನರ್‌ಗಳನ್ನೂ ಅವರು ಆಗಸದಲ್ಲೇ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ: ಅಂದು ಮೋದಿ ಜತೆ ವೇದಿಕೆ ಏರಲು ನಿರಾಕರಿಸಿದ್ದ ನಿತೀಶ್ ಕುಮಾರ್ ಈಗ ಮೋದಿಯ ಕಾಲು ಮುಟ್ಟಿ ನಮಸ್ಕರಿಸಿದರು!

ಬೆಂಗಳೂರಿನ ರಾಹುಲ್ ಡಾಕ್ರೆ, ಅನುಭವ್ ಅಗರವಾಲ್ ಹಾಗೂ ಮಹಾರಾಷ್ಟ್ರದ ಹಿಮಾಂಶು ಸಾಬಳೆ ಅವರ ತಂಡದಿಂದ ಸ್ಕೈ ಡೈವ್‌ ಮಾಡಲಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಬೇಕು ಎಂದು ದೇಶಾದ್ಯಂತ ಯುವಕರು ಮದುವೆ ಆಮಂತ್ರಣ ಪತ್ರಿಕೆ ಮೇಲೆ ಮೋದಿಗೆ ಮತ ನೀಡಿ ಎಂದು ಬರೆಸಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಹಲವು ರೀತಿಯ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ವಿಜಯಪುರ ಉದ್ಯಮಿಯ ನೇತೃತ್ವದಲ್ಲಿ ಸ್ಕೈ ಡೈವ್‌ ಮೂಲಕ ವಿಭಿನ್ನವಾಗಿ ಮೋದಿ ಮೇಲಿನ ಅಭಿಮಾನವನ್ನು ಪ್ರದರ್ಶಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Wayanad Landslide: ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ

Wayanad Landslide: ವೈನಾಡಿನ ಚೂರಲ್‌ಮಲೆಯಲ್ಲಿ ನೆಲೆಸಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವರು ಪಾರಾದವರು. ಮೇಪ್ಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ.

VISTARANEWS.COM


on

wayanad landslide cow rescues family
Koo

ಚಾಮರಾಜನಗರ: ಕೇರಳದ ವೈನಾಡಿನಲ್ಲಿ ಸಂಭವಿಸಿದ ರುದ್ರಭಯಾನಕ ಭೂಕುಸಿತದಲ್ಲಿ (Wayanad landslide, Kerala Landslide) ಚಾಮರಾಜನಗರ ಮೂಲದ ಕುಟುಂಬವೊಂದನ್ನು ಅವರು ಸಾಕಿದ ಹಸು ವಿಚಿತ್ರ ರೀತಿಯಲ್ಲಿ ಪಾರು ಮಾಡಿದ ಘಟನೆ (Viral news) ನಡೆದಿದೆ.

ವೈನಾಡಿನ ಚೂರಲ್‌ಮಲೆಯಲ್ಲಿ ನೆಲೆಸಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವರು ಪಾರಾದವರು. ಮೇಪ್ಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ. ವಿನೋದ್ ಪತ್ನಿ ಬಾಣಂತಿಯಾದ ಕಾರಣ ಪ್ರವಿದಾ, ಅತ್ತೆ ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಮೇಪ್ಪಾಡಿಯಲ್ಲಿದ್ದರು. ವಿನೋದ್ ಮತ್ತು ನಾಲ್ವರು ಚೂರಲ್‌ಮಲೆಯಲ್ಲಿದ್ದರು. ಚೂರಲ್‌ಮಲೆಗೂ ಮೇಪ್ಪಾಡಿಗೂ 6 ಕಿಮೀ ದೂರವಿದ್ದು, ಭೂಕುಸಿತ ಉಂಟಾಗುವ ಕೆಲವು ಸಮಯಕ್ಕೆ ಮುನ್ನ ಇವರು ಪಾರಾಗಿ ಸುರಕ್ಷಿತ ಸ್ಥಳಕ್ಕೆ ಸೇರಿಕೊಂಡಿದ್ದಾರೆ.

ಅದು ಘಟಿಸಿದ್ದು ಹೀಗೆ. ಚೂರಲ್ ಮಲೆಯಲ್ಲಿ ವಿನೋದ್ ಕುಟುಂಬ ನಿದ್ರಿಸುತ್ತಿದ್ದಾಗ ಕೊಟ್ಟಿಗೆಯಲ್ಲಿದ್ದ ಹಸು ಚೀರಾಡಿ, ಅಳುವ ಸದ್ದು ಮಾಡಿದೆ. ಕೂಡಲೇ ಎಚ್ಚೆತ್ತ ವಿನೋದ್ ಕೊಟ್ಟಿಗೆಗೆ ತೆರಳಿ ನೋಡಿದಾಗ ನೀರು ತುಂಬಿಕೊಂಡಿದ್ದನ್ನು ಕಂಡಿದ್ದಾರೆ. ಕೂಡಲೇ ವಿನೋದ್ ಮನೆಯಲ್ಲಿದ್ದವರನ್ನು ಎಬ್ಬಿಸಿ ಗುಡ್ಡದ ಮೇಲಕ್ಕೆ ತೆರಳಿದ್ದಾರೆ. ನೋಡನೋಡುತ್ತಿದ್ದಂತೆ ಇವರು ಇದ್ದ ಮನೆ, ವಾಹನ ಎಲ್ಲವೂ ಮಾಯವಾದಂತೆ ಭೂಮಿಯಡಿ ಹುದುಗಿಹೋಗಿದೆ. ಮನೆಯ ಸಮೀಪವೇ ಇದ್ದ ಸೇತುವೆ ಕೂಡ ಎರಡು ಭಾಗವಾಗಿದೆ. ಕೂಡಲೇ ಮೇಪ್ಪಾಡಿಯಲ್ಲಿದ್ದ ಪತ್ನಿಗೂ ವಿಚಾರ ತಿಳಿಸಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ವಿನೋದ್ ಸೂಚಿಸಿದ್ದಾರೆ. ಪ್ರವಿದಾ, ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಸುರಕ್ಷಿತ ಸ್ಥಳಕ್ಕೆ ಬಂದು ಕಾರ್ ಮೂಲಕ ಚಾಮರಾಜನಗರಕ್ಕೆ ಮಂಗಳವಾರ ಸಂಜೆ ತಲುಪಿದ್ದಾರೆ.

ಗುಡ್ಡದ ಮೇಲೆ ಆಶ್ರಯ ಪಡೆದಿದ್ದ ವಿನೋದ್ ಹಾಗೂ ಮತ್ತಿತರರನ್ನು ರಕ್ಷಣಾ ಪಡೆ ಮಂಗಳವಾರ ಸಂಜೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಸಾಕಿದ್ದ ಹಸು ದೇವರಂತೆ ಅಪಾಯದ ಬಗ್ಗೆ ಕುಟುಂಬಕ್ಕೆ ಎಚ್ಚರಿಸಿ ಇಡೀ ಕುಟುಂಬವನ್ನು ಪಾರುಮಾಡಿದೆ. ಆದರೆ ಇವರನ್ನು ಕಾಪಾಡಿದ ಹಸು ಉಳಿದಿದೆಯೋ ಇಲ್ಲವೋ ತಿಳಿದುಬಂದಿಲ್ಲ.

ನಾಲ್ವರ ಶವ ಪತ್ತೆ, ಉಳಿದವರಿಗೆ ಶೋಧ ಮುಂದುವರಿಕೆ

ಚಾಮರಾಜನಗರ ಜಿಲ್ಲೆಯ ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಇವರ ಶವಗಳು ದೊರೆತಿವೆ. ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು. ಕೇರಳದ ಮುಂಡಕೈಯಲ್ಲಿ ಅನಿಲ್, ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್ ತಾಯಿ ಲೀಲಾವತಿ(55), ಪುತ್ರ ನಿಹಾಲ್(2.5) ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

Continue Reading

ವೈರಲ್ ನ್ಯೂಸ್

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

ರಸ್ತೆಬದಿಯಲ್ಲಿ ಮೊಸಳೆಯನ್ನು ನೋಡಿದ ಮಕ್ಕಳು ಪೋಷಕರನ್ನು ಕರೆಯುತ್ತಾರೆ. ಅವರು ಮಕ್ಕಳನ್ನು ಅದರ ಮುಂದೆ ನಿಂತು ಫೋಟೋಗೆ ಪೋಸ್ ನೀಡುವಂತೆ ಒತ್ತಾಯಿಸುತ್ತಾರೆ. ಮಕ್ಕಳು ಭಯದಿಂದಲೇ ಮೊಸಳೆಯ ಮುಂದೆ ನಿಂತು ಸಾಕಷ್ಟು ಫೋಟೋಗಳಿಗೆ ಪೋಸ್ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದ್ದು, ಸಾಕಷ್ಟು ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

By

Viral video
Koo

ತಂದೆ ತಾಯಿಗೆ ಮಕ್ಕಳೇ ಜೀವವಾಗಿರುತ್ತಾರೆ. ಎಷ್ಟೋ ಸಂದರ್ಭದಲ್ಲಿ ಅವರಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿರುವ ವಿಡಿಯೋವೊಂದು (Viral Video) ಈಗ ಎಲ್ಲ ಪೋಷಕರಲ್ಲೂ ಆತಂಕ ಉಂಟು ಮಾಡಿದೆ ಮಾತ್ರವಲ್ಲ ಸಾಕಷ್ಟು ಆಕ್ರೋಶವನ್ನೂ ಹುಟ್ಟು ಹಾಕಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ (Instagram) ವೈರಲ್ ಆಗಿರುವ ಈ ವಿಡಿಯೋದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಫೋಟೋಗಾಗಿ ಮೊಸಳೆಯ (photo pose with alligator) ಹತ್ತಿರ ನಿಲ್ಲುವಂತೆ ಪ್ರೋತ್ಸಾಹಿಸುತ್ತಿರುವುದನ್ನು ಕಾಣಬಹುದು. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಮಕ್ಕಳು ರಸ್ತೆಬದಿಯಲ್ಲಿ ಮೊಸಳೆಯನ್ನು ನೋಡಿ ಪೋಷಕರನ್ನು ಕರೆಯುತ್ತಾರೆ. ಅವರು ಮಕ್ಕಳನ್ನು ಅದರ ಮುಂದೆ ನಿಂತು ಫೋಟೋಗೆ ಪೋಸ್ ನೀಡುವಂತೆ ಒತ್ತಾಯಿಸುತ್ತಾರೆ. ಮಕ್ಕಳು ಭಯದಿಂದಲೇ ಮೊಸಳೆಯ ಮುಂದೆ ನಿಂತು ಸಾಕಷ್ಟು ಫೋಟೋಗಳಿಗೆ ಪೋಸ್ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಅಜಾಗರೂಕತೆಯ ಈ ದೃಶ್ಯದಲ್ಲಿ ಮೊಸಳೆ ಬಾಯ್ತೆರೆ ದು ನಿಂತಿತ್ತು. ಕೊಂಚ ಎಚ್ಚರ ತಪ್ಪಿದರೂ ಇದು ಬಹುದೊಡ್ಡ ಅನಾಹುತವನ್ನೇ ಉಂಟು ಮಾಡುತ್ತಿತ್ತು. ಆದರೆ ಈ ವಿಡಿಯೋದಲ್ಲಿ ಯಾರೊಬ್ಬರೂ ಅಪಾಯದ ಬಗ್ಗೆ ಯೋಚಿಸದಿರುವುದು ನೆಟ್ಟಿಗರನ್ನು ಕೆರಳಿಸಿದೆ.

ವಿಡಿಯೋದ ಸ್ಥಳ ಮತ್ತು ದಿನಾಂಕವನ್ನು ಪತ್ತೆ ಮಾಡಲಾಗಲಿಲ್ಲ. ಆದರೂ ಇದು ಸುಮಾರು 8 ತಿಂಗಳ ಹಿಂದಿನದ್ದು ಎಂದು ತಿಳಿದು ಬಂದಿದ್ದು, ಎಜೆ ಎಲ್ಲಿಸ್ ಎಂಬ ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಸುಮಾರು 1.6 ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ. ಕಾಮೆಂಟ್ ವಿಭಾಗದಲ್ಲಿ ನೆಟ್ಟಿಗರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.


ಒಬ್ಬ ಬಳಕೆದಾರರು , ಪೋಷಕರು ಇದನ್ನು ಹೇಗೆ ಅನುಮತಿಸಬಹುದು? ಎಂದು ಪ್ರಶ್ನಿಸಿದ್ದರೆ ಇನ್ನೊಬ್ಬರು ಖಂಡಿತವಾಗಿ, ಪೋಷಕರು ಮೊಸಳೆಯೊಂದಿಗೆ ಮಕ್ಕಳನ್ನು ಸ್ನೇಹಶೀಲವಾಗಿರಲು ಬಿಡುವುದು ಅದ್ಭುತ ಕ್ರಮವಾಗಿದೆ ಎಂದು ಹೇಳಿದ್ದಾರೆ.

ಇನ್ನೊಬ್ಬರು ಇದು ಹುಚ್ಚುತನ. ಮೊಸಳೆಗಳು ಕೆಲವೇ ಸೆಕೆಂಡುಗಳಲ್ಲಿ ದಾಳಿ ನಡೆಸಿದ್ದನ್ನು ನಾನು ನೋಡಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

ಪೋಷಕರಿಗೆ ಇದು ತಮಾಷೆಯಾದರೆ ಮಕ್ಕಳಿಗೆ ಇದು ಭಯವನ್ನು ಉಂಟು ಮಾಡಿದೆ ಎಂದು ಇನ್ನೊಬ್ಬರು ಕಾಮೆಂಟ್ ವಿಭಾಗದಲ್ಲಿ ಹೇಳಿದ್ದಾರೆ.

ಮತ್ತೊಬ್ಬರು ಜನರಿಗೆ ಇದು ನಿಜವಾಗಿಯೂ ಅರ್ಥವಾಗುವುದಿಲ್ಲ. ಮೊಸಳೆಗಳು ನೀರು, ಭೂಮಿಯಲ್ಲಿ ಎಷ್ಟು ವೇಗವಾಗಿ ಇರುತ್ತದೆ ಎಂದು ಯಾರೂ ಯೋಚಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನೊಬ್ಬ ಬಳಕೆದಾರರು, ಮೊಸಳೆಯದ್ದು ಆಕಳಿಕೆ ಅಲ್ಲ. ಅದು ಅಲ್ಲಿರುವ ಜನರಲ್ಲಿ ಒಬ್ಬರು ತನ್ನ ಬಾಯಿಗೆ ಹೊಂದಿಕೊಳ್ಳುತ್ತಾರೆಯೇ ಎಂದು ಯೋಚಿಸುತ್ತಿದೆ ಎಂದು ತಿಳಿಸಿದ್ದಾರೆ.

Continue Reading

ದೇಶ

Vande Bharat Express: ಮತ್ತೆ ಸುದ್ದಿಯಾದ ವಂದೇ ಭಾರತ್‌ ರೈಲು; ಮಾಂಸಾಹಾರ ಸರ್ವ್‌ ಮಾಡಿದ ಸಿಬ್ಬಂದಿಗೆ ಕಪಾಳಮೋಕ್ಷ

Vande Bharat Express: ಊಟದ ಪ್ಯಾಕೆಟ್‌ನಲ್ಲಿನ ಲೇಬಲ್ ಅನ್ನು ಗಮನಿಸದ ಹಿರಿಯ ವ್ಯಕ್ತಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾರೆ. ತಿಂದ ನಂತರ ಮಾಂಸಾಹಾರವೆಂದು ಗೊತ್ತಾಗಿದ್ದು, ಇದರಿಂದ ಕುಪಿತಗೊಂಡ ಅವರು ಆಹಾರ ವಿತರಿಸಿದ ಸಿಬ್ಬಂದಿಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

VISTARANEWS.COM


on

Vande Bharat Express
Koo

ನವದೆಹಲಿ: ವಂದೇ ಭಾರತ್‌ ರೈಲು(Vande Bharat Express) ಶುರುವಾದ ನಂತರ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇದೆ. ಕೆಲವೊಮ್ಮೆ ರೈಲಿನ ಮೇಲೆ ಕಲ್ಲೆಸೆತ, ಇನ್ನು ಕೆಲವೊಮ್ಮೆ ರೈಲಿನಲ್ಲಿ ಸಿಗುವ ಕಳಪೆ ಊಟ ಹೀಗೆ ಸದಾ ಯಾವುದಾದರೂ ವಿವಾದಗಳು ಕೇಳಿ ಬರುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಹಿರಿಯ ಪ್ರಯಾಣಿಕರೊಬ್ಬರು (Elderly Passenger), ತಾವು ಕೇಳಿದ ಸಸ್ಯಾಹಾರದ (Vegetarian) ಬದಲಿಗೆ ಮಾಂಸಾಹಾರವನ್ನು (Non-Vegetarian Meal) ನೀಡಿದ್ದಾನೆಂದು ಆಹಾರ ವಿತರಕ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಘಟನೆ ವಿವರ:

ಹೌರಾದಿಂದ ರಾಂಚಿಗೆ (Ranchi) ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಜುಲೈ 26 ರಂದು ನಡೆದ ಈ ಘಟನೆಯನ್ನು ಸಹ-ಪ್ರಯಾಣಿಕ ಕುನಾಲ್ ವರ್ಮಾ ಅವರು ವಿಡಿಯೋ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಊಟದ ಪ್ಯಾಕೆಟ್‌ನಲ್ಲಿನ ಲೇಬಲ್ ಅನ್ನು ಗಮನಿಸದ ಹಿರಿಯ ವ್ಯಕ್ತಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾರೆ. ತಿಂದ ನಂತರ ಮಾಂಸಾಹಾರವೆಂದು ಗೊತ್ತಾಗಿದ್ದು, ಇದರಿಂದ ಕುಪಿತಗೊಂಡ ಅವರು ಆಹಾರ ವಿತರಿಸಿದ ಸಿಬ್ಬಂದಿಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಇದು ಇತರ ಪ್ರಯಾಣಿಕರಿಗೆ ಹಿಡಿಸಲಿಲ್ಲ, ಮಧ್ಯಪ್ರವೇಶಿಸಿದ ಪ್ರಯಾಣಿಕರು ಹಿರಿಯ ಪ್ರಯಾಣಿಕ ಆಹಾರ ವಿತರಕ ಸಿಬ್ಬಂದಿಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿರಿಯ ಪ್ರಯಾಣಿಕನ ವರ್ತನೆಗೆ ಅಸಮಾಧಾನಗೊಂಡಿರುವ ಸಹ ಪ್ರಯಾಣಿಕರು ಆತನ ವಿರುದ್ಧ ಹರಿಹಾಯ್ದಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ನೀವು ಏಕೆ ಅವರಿಗೆ ಹೊಡೆಯತ್ತಿದ್ದೀರಿ? ನಿಮ್ಮ ವಯಸ್ಸನ್ನು ನೋಡಿ. ವಯಸ್ಸಿಗೆ ತಕ್ಕಂತೆ ವರ್ತಿಸಿ ಎಂದು ಹೇಳಿದ್ದಾರೆ ಈ ವೇಳೆ ಆಹಾರ ವಿತರಿಸಿದ ಸಿಬ್ಬಂದಿ ಪದೇ ಪದೇ ಕ್ಷಮೆಯಾಚಿಸುವುದನ್ನು ಕಾಣಬಹುದು. ಇತರ ಪ್ರಯಾಣಿಕರು ಹಿರಿಯ ವ್ಯಕ್ತಿಯನ್ನು ಕ್ಷಮೆಯಾಚಿಸಿ ಎಂದು ಹೇಳುತ್ತಾರೆ.

ಇನ್ನು ಘಟನೆಯ ಬಗ್ಗೆ ಪೂರ್ವ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಾಶ್ ಚರಣ್ ಪ್ರತಿಕ್ರಿಯಿಸಿದ್ದು, ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಅದನ್ನು ಬಗೆಹರಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ವೃದ್ಧನ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Continue Reading

Latest

Viral Video: ಮಲಗಿದ್ದ ಮಹಿಳೆಯ ತಲೆಕೂದಲಿನಲ್ಲಿ ಹರಿದಾಡಿದ ಹಾವು!

Viral Video: ಹಾವೆಂದರೆ ಎಲ್ಲರೂ ಬೆಚ್ಚಿಬೀಳುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆಯ ತಲೆಯಿಂದ ಹಾವು ನಿಧಾನಕ್ಕೆ ತೆವಳುತ್ತ ಹೋಗುತ್ತಿರುವ ವಿಡಿಯೊವೊಂದು ಎಲ್ಲೆಡೆ ವೈರಲ್ ಆಗಿದೆ.ಮಲಗಿದ್ದ ಮಹಿಳೆಯ ಕೂದಲಿನ ಮೂಲಕ ಹಾವು ನಿಧಾನಕ್ಕೆ ತೆವಳಿ, ಆಕೆಯ ಕೂದಲನ್ನು ಸುತ್ತಿ, ಅವಳ ತಲೆಯ ಹಿಂಭಾಗಕ್ಕೆ ಹೋಗಿದೆ. ಮಹಿಳೆಗೆ ಪರಿಸ್ಥಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ತೋರುತ್ತದೆ.. ಇದು ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
Koo


ನವದೆಹಲಿ: ಹಾವು ಮನೆಯ ಹಿತ್ತಲಿನಲ್ಲಿ, ರಸ್ತೆಯ ಬದಿಯಲ್ಲಿ ಹರಿದಾಡುವುದನ್ನು ನಾವು ನೋಡಿರುತ್ತೇವೆ. ಹಾಗೇ ಕೆಲವೊಮ್ಮೆ ಹಾವು ಮನೆಯೊಳಗೆ ಅಡುಗೆ ಮನೆಯಲ್ಲಿ, ಶೌಚಾಲಯದಲ್ಲಿ ಹರಿದಾಡುತ್ತವೆ. ಅದರಲ್ಲೂ ಮಹಿಳೆಯರು ಹಾವನ್ನು ನೋಡಿದರೆ ಭಯಭೀತರಾಗುತ್ತಾರೆ. ಆದರೆ ಇಲ್ಲೊಂದು ಹಾವು ಮಲಗಿದ್ದ ಮಹಿಳೆಯ ತಲೆಯ ಕೂದಲಿನಲ್ಲಿ ಹರಿದಾಡುತ್ತಿರುವುದು ಕಂಡುಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಮಲಗಿದ್ದ ಮಹಿಳೆಯ ಕೂದಲಿನ ಮೂಲಕ ಹಾವು ತೆವಳುತ್ತಿದೆ. ಹಾವು ಆಕೆಯ ಕೂದಲನ್ನು ಸುತ್ತಿ, ಅವಳ ತಲೆಯ ಹಿಂಭಾಗಕ್ಕೆ ಹೋಗಿದೆ. ಮಹಿಳೆಗೆ ಪರಿಸ್ಥಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ತೋರುತ್ತದೆ. @kashikyatra ಎಂಬ ಇನ್ಸ್ಟಾಗ್ರಾಮ್ ಬಳಕೆದಾರರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದು ಸಖತ್ ವೈರಲ್ ಆಗಿದೆ. ಈ ವೈರಲ್ ವಿಡಿಯೊಗೆ “ಲೇಹ್ ಲಡಾಖ್ ಬೈಕ್ ರೈಡ್ ಟೂರ್ ಪ್ಯಾಕೇಜ್” ಎಂದು ಶೀರ್ಷಿಕೆ ನೀಡಲಾಗಿದೆ.

ಸುಮಾರು 2.1 ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ಬಳಕೆದಾರರು ತನ್ನ ಖಾತೆಯಲ್ಲಿ ಇಂತಹ ಅನೇಕ ಭಯಾನಕ ಹಾವಿನ ವಿಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಇದು ಒಂದು. ಈ ವಿಡಿಯೊ ಅನೇಕರ ಗಮನವನ್ನು ಸೆಳೆದಿದೆ ಮತ್ತು ಹಲವಾರು ನೆಟ್ಟಿಗರು ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಈ ವಿಡಿಯೊವನ್ನು 226 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ ಮತ್ತು 128 ಸಾವಿರ ಜನರು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ಗೆ ಸುಮಾರು 2,098 ಜನರು ಕಾಮೆಂಟ್ ಮಾಡಿದ್ದಾರೆ. ಇದನ್ನು ವೀಕ್ಷಿಸಿದವರಲ್ಲಿ ಹೆಚ್ಚಿನವರು ಆಘಾತಕ್ಕೊಳಗಾಗಿದ್ದಾರೆ ಮತ್ತು ಎಮೋಜಿಗಳ ಮೂಲಕ ಅದನ್ನು ವ್ಯಕ್ತಪಡಿಸಿದ್ದಾರೆ.

ಹಾವು ಮಹಿಳೆಯ ಕೂದಲನ್ನು ಸುರಕ್ಷಿತ ಮತ್ತು ಬೆಚ್ಚಗಿನ ಸ್ಥಳವೆಂದು ತಪ್ಪಾಗಿ ಭಾವಿಸಿರಬಹುದು ಎಂದು ಊಹಿಸಲಾಗಿದೆ. ಒಬ್ಬ ಬಳಕೆದಾರರು “ಹರ್ ಹರ್ ಮಹಾದೇವ್” ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬರು ಹಾವನ್ನು ಬಫ್ ಪಟ್ಟಿಯ ಕೀಲ್ಬ್ಯಾಕ್ ಎಂದು ಗುರುತಿಸಿದ್ದಾರೆ, ಬಿಹಾರದಲ್ಲಿ ಇದೇ ರೀತಿಯ ಹಾವುಗಳೊಂದಿಗೆ ಆಡಿದ ಬಾಲ್ಯದ ನೆನಪುಗಳನ್ನು ನೆನಪಿಸಿಕೊಂಡಿದ್ದಾರೆ. ಈ ರೀತಿಯ ಹಾವು ಹಾನಿಕಾರಕವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

ವೈರಲ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಜನರ ಗಮನವನ್ನು ಸೆಳೆದಿದೆ, ಇದು ವನ್ಯಜೀವಿಗಳು ಮಾನವರೊಂದಿಗೆ ಸಂವಹನ ನಡೆಸುವ ಅನಿರೀಕ್ಷಿತ ವಿಧಾನವಾಗಿದೆ ಎನ್ನಲಾಗಿದೆ. ಒಬ್ಬ ವ್ಯಕ್ತಿಗೆ ತುಂಬಾ ಹತ್ತಿರದಲ್ಲಿ ಹಾವನ್ನು ನೋಡುವುದು ಭಯವನ್ನು ಹುಟ್ಟಿಸಿದರೂ ನಮ್ಮ ಪರಿಸರದೊಂದಿಗೆ ನಾವು ಹಂಚಿಕೊಳ್ಳುವ ಜೀವಿಗಳನ್ನು ಗೌರವಿಸುವ ಮತ್ತು ಅರ್ಥಮಾಡಿಕೊಳ್ಳುವ ಮಹತ್ವವನ್ನು ಇದು ಎತ್ತಿ ತೋರಿಸುತ್ತದೆ.

Continue Reading
Advertisement
wayanad landslide cow rescues family
ವೈರಲ್ ನ್ಯೂಸ್6 mins ago

Wayanad Landslide: ಭಯಾನಕ ಸಾವಿನಿಂದ ರಕ್ಷಿಸಿತು ಸಾಕಿದ ಹಸು! ಕನ್ನಡಿಗ ಕುಟುಂಬದ ಅನುಭವ

Ismail Haniyeh
ವಿದೇಶ8 mins ago

Ismail Haniyeh: ಇಸ್ರೇಲ್‌ನಿಂದ ಪ್ರತೀಕಾರದ ಎಚ್ಚರಿಕೆ ಬೆನ್ನಲ್ಲೇ ಹಮಾಸ್‌ ನಾಯಕ ಇಸ್ಮಾಯಿಲ್ ಹನಿಯೆಹ್ ಬರ್ಬರ ಹತ್ಯೆ

Puri Jagannath Temple
ದೇಶ34 mins ago

Puri Jagannath Temple: ಪುರಿ ಜಗನ್ನಾಥ ಮಂದಿರದ ನಕಲಿ ಕೀ ಪತ್ತೆ; ಅಪಾರ ಪ್ರಮಾಣದ ಬಂಗಾರ ಕಳವು?

Nabha Natesh in red gown Darling movie review
ಟಾಲಿವುಡ್45 mins ago

Nabha Natesh: ರೆಡ್ ಗೌನ್‌ನಲ್ಲಿ ‘ಪಟಾಕ’ ಮಿಂಚಿಂಗ್; ಟಾಲಿವುಡ್‌ನಲ್ಲಿ ನಭಾ ನಟೇಶ್ ಧಮಾಕ!

winning tips ರಾಜಮಾರ್ಗ ಅಂಕಣ
ಅಂಕಣ55 mins ago

ರಾಜಮಾರ್ಗ ಅಂಕಣ: ಸಾಧನೆಯ ಹಾದಿಯ 25 ಮೈಲಿಗಲ್ಲುಗಳು

Actor Darshan Chethan Kumar on Darshan Case
ಸ್ಯಾಂಡಲ್ ವುಡ್1 hour ago

Actor Darshan: ಜೈಲಿನ ಊಟ ನಂಗಂತೂ ಸಖತ್‌ ಇಷ್ಟ ಆಗಿತ್ತು , ದರ್ಶನ್‌ಗೆ ಯಾಕೆ ಕಷ್ಟ ಆಗ್ತಿದೆ ಎಂದ ಚೇತನ್‌ ಅಹಿಂಸಾ!

Narayana Murthy
ದೇಶ1 hour ago

Narayana Murthy: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ: ನಾರಾಯಣಮೂರ್ತಿ ಹೊಸ ವಾದ!

drowned kalaburagi
ಕ್ರೈಂ1 hour ago

Drowned: ಆತ್ಮಹತ್ಯೆಗಾಗಿ ನದಿಗೆ ಹಾರಿದ ಮಹಿಳೆ ರಕ್ಷಣೆ, ಬದುಕಿಸಲು ಹೋದ ಗಂಡ- ಬಂಧು ಜಲಸಮಾಧಿ

ITR Filing
ದೇಶ2 hours ago

ITR Filing: ಐಟಿ ರಿಟರ್ನ್ಸ್ ಫೈಲ್‌ಗೆ ಇಂದು ಅಂತಿಮ ದಿನ; ಗಡುವು ವಿಸ್ತರಣೆಗೆ ಕಾದರೆ ದಂಡ ಕಟ್ಟಬೇಕಾದೀತು!

wayanad landslide bandipur checkpost
ಪ್ರಮುಖ ಸುದ್ದಿ2 hours ago

Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ17 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ21 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌