Water From Air: ಗಾಳಿಯಿಂದಲೇ ನೀರು ಉತ್ಪಾದನೆ! ಬೆಂಗಳೂರು ಸ್ಟಾರ್ಟಪ್‌ನ ಕ್ರಾಂತಿಕಾರಿ ಹೆಜ್ಜೆ! - Vistara News

Latest

Water From Air: ಗಾಳಿಯಿಂದಲೇ ನೀರು ಉತ್ಪಾದನೆ! ಬೆಂಗಳೂರು ಸ್ಟಾರ್ಟಪ್‌ನ ಕ್ರಾಂತಿಕಾರಿ ಹೆಜ್ಜೆ!

Water From Air: ಕುಡಿಯುವ ನೀರಿನ ಸಮಸ್ಯೆ ಈಗ ವಿಶ್ವವನ್ನೇ ಬಾಧಿಸುತ್ತಿದೆ. ಆದರೆ ಇದಕ್ಕೆ ಈಗ ಬೆಂಗಳೂರಿನ ಸ್ಟಾರ್ಟ್ ಅಪ್ ವೊಂದು ಪರಿಹಾರ ಕಂಡುಕೊಂಡಿದೆ. ಗಾಳಿಯಿಂದ ಶುದ್ಧ ಕುಡಿಯುವ ನೀರನ್ನು ಪಡೆಯುವ ಬಾಟಲಿಗಳನ್ನು ಇದು ಪರಿಚಯಿಸಿದೆ. ಇದು ನಡೆದು ಬಂದ ಹಾದಿ ಹೇಗಿತ್ತು ಗೊತ್ತೇ? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

Water From Air
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ಈಗ ವಿಶ್ವವನ್ನೇ ಕಾಡುತ್ತಿದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಇದೀಗ ಒಂದು ಆಶಾಕಿರಣ ಗೋಚರಿಸಿದೆ. ಅದೂ ನಮ್ಮ ಬೆಂಗಳೂರಿನಲ್ಲಿ. ನದಿ ಅಥವಾ ನೆಲದೊಳಗಿನ ಜಲ ಸಂಪನ್ಮೂಲ ಬಳಸಿಕೊಳ್ಳದೆ ಗಾಳಿಯಿಂದ ಶುದ್ಧ ಕುಡಿಯುವ ನೀರನ್ನು (Water From Air) ಉತ್ಪಾದಿಸುವ ವಿಶೇಷ ಬಾಟಲಿಗಳನ್ನು (Bottles) ಬೆಂಗಳೂರು ಸ್ಟಾರ್ಟ್‌ಅಪ್ (Bengaluru Startup) ಕಂಪನಿಯೊಂದು ಪರಿಚಯಿಸಿದೆ. ಜಾಗತಿಕವಾಗಿ ಕುಡಿಯುವ ನೀರಿನ ಸಮಸ್ಯೆಗೆ ಇದು ಸೂಕ್ತ ಪರಿಹಾರವಾಗುವ ಭರವಸೆ ಮೂಡಿಸಿದೆ.

ಬೆಂಗಳೂರಿನ ಉರವು ಲ್ಯಾಬ್ (Uravu Labs) ಗಾಳಿಯಿಂದ ನೀರನ್ನು ಉತ್ಪಾದಿಸುವ ವಿಶೇಷ ಬಾಟಲಿಗಳನ್ನು ಪರಿಚಯಿಸಿದ್ದು, ಈ ಕುರಿತು ಲ್ಯಾಬ್ಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕರಾದ ಸ್ವಪ್ನಿಲ್ ಶ್ರೀವಾಸ್ತವ್ ಸಂದರ್ಶನವೊಂದರಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗಾಳಿಯಿಂದ ನೀರಿನ ಉತ್ಪಾದನೆ ಹೇಗೆ?

ಉರವುನ ಕೋರ್ ತಂತ್ರಜ್ಞಾನವು ಶುಷ್ಕ ವಸ್ತುಗಳಿಂದ ಪ್ರೇರಿತವಾದ ವಿಶಿಷ್ಟ ಪ್ರಕ್ರಿಯೆಯನ್ನು ಬಳಸಿಕೊಂಡು ಗಾಳಿಯಿಂದ ನೀರನ್ನು ಹೊರತೆಗೆಯುತ್ತದೆ.

ಸುತ್ತಲಿನ ಗಾಳಿಯಿಂದ ತೇವಾಂಶವನ್ನು ಹೀರಿಕೊಳ್ಳುವ ವಸ್ತುವನ್ನು ಬಳಸಿ ಅದರಲ್ಲಿ ಸಂಗ್ರಹಿಸಿ ಆವಿಯನ್ನು ಬಿಡುಗಡೆ ಮಾಡಲು ಬಿಸಿ ಮಾಡಲಾಗುತ್ತದೆ. ಈ ಆವಿಯನ್ನು ಘನೀಕರಿಸಿ ನಿಯಂತ್ರಿತ ತಾಪಮಾನದಲ್ಲಿ ತಂಪಾಗಿಸಿ ಶುದ್ಧ ಕುಡಿಯುವ ನೀರನ್ನು ಪಡೆಯಲಾಗುತ್ತದೆ.

ಇದನ್ನೂ ಓದಿ: karnataka Weather : ಬೆಂಗಳೂರು ಸೇರಿ ಹಲವೆಡೆ ಸುಡುತ್ತಿದೆ ಉರಿ ಬಿಸಿಲು; ಮತ್ಯಾವಾಗ ಮಳೆ

ಯಾಕಾಗಿ ಈ ಯೋಜನೆ?

ಜನಸಂಖ್ಯೆಯ ಬೆಳವಣಿಗೆ, ಅಂತರ್ಜಲದ ಕೊರತೆ ಮತ್ತು ಹವಾಮಾನ ಬದಲಾವಣೆಯಿಂದ ಉಲ್ಬಣಗೊಂಡಿರುವ ನೀರಿನ ಕೊರತೆಯನ್ನು ನಿವಾರಿಸುವುದು ಈಗ ವಿಶ್ವಾದ್ಯಂತ ಇರುವ ಬಹುದೊಡ್ಡ ಸವಾಲು. ಅದರಲ್ಲೂ ಭಾರತದಲ್ಲಿ ನೀರಿನ ಬೇಡಿಕೆ ದಿನೇದಿನೇ ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ನೀರಿನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕಿದೆ. ಇದಕ್ಕಾಗಿ ಉರವು ತಂತ್ರಜ್ಞಾನ ಇದನ್ನು ಪ್ರಯೋಗ ಮಾಡಿದೆ.

ಹೇಗಿದೆ ಪ್ರಗತಿ?

ಉರವು ಲ್ಯಾಬ್ಸ್ ನಲ್ಲಿ ತಯಾರಿಸಲಾದ ಈ ಬಾಟಲುಗಳು ಗಾಜಿನದ್ದಾಗಿದೆ. ಇದರಲ್ಲಿರುವ ನವೀನ ರಿವರ್ಸ್ ಲಾಜಿಸ್ಟಿಕ್ಸ್ ಮಾದರಿಯು ಗಾಜಿನ ಬಾಟಲಿಗಳನ್ನು ಸ್ವಚ್ಛಗೊಳಿಸಲು, ಮರುಪೂರಣಗೊಳಿಸಲು ಮತ್ತು ಮರುಬಳಕೆಗಾಗಿ ಉಪಯುಕ್ತವಾಗಿದೆ. ಈ ಮಾದರಿಯ ಬಾಟಲಿಗಳನ್ನು ಕೋಕ್ ಅಥವಾ ಪೆಪ್ಸಿಯಂತಹ ಪಾನೀಯ ಕಂಪನಿಗಳು ಮಾತ್ರ ಬಳಸುತ್ತವೆ ಎಂದು ಶ್ರೀವಾಸ್ತವ್ ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಲಭ್ಯ

ಉತ್ತಮ ರುಚಿ ಮತ್ತು ಪರಿಸರ ಸ್ನೇಹಿ ಕಾಳಜಿಯನ್ನು ಹೊಂದಿರುವ ಉರವು ಈ ಬಾಟಲುಗಳಲ್ಲಿ ಗ್ರಾಹಕರಿಗೆ ಅವರ ಆಯ್ಕೆಯ ಭರವಸೆ ನೀಡುತ್ತಿದೆ. ಕಳೆದ 8 ತಿಂಗಳಿನಿಂದ ಬೆಂಗಳೂರಿನಲ್ಲಿ ಸುಮಾರು 3.5 ಲಕ್ಷ ಬಾಟಲಿಗಳನ್ನು ಮಾರಾಟ ಮಾಡಲಾಗಿದೆ. ಮಾರುಕಟ್ಟೆಗೆ ಇದನ್ನು ತರುವಾಗ, ವಿತರಣಾ ಜಾಲಗಳೊಂದಿಗೆ ಪಾಲುದಾರಿಕೆ ಮಾಡುವಾಗ ನೀರಿನ ಹೊರತೆಗೆಯುವಿಕೆ ಮತ್ತು ಪ್ಯಾಕೇಜಿಂಗ್‌ನ ಬ್ಯಾಕೆಂಡ್ ಕಾರ್ಯಾಚರಣೆಗಳ ಬಗ್ಗೆಯೂ ಸಂಪೂರ್ಣವಾಗಿ ವಿವರಿಸಲಾಗುತ್ತದೆ ಎಂದು ಹೇಳಿರುವ ಶ್ರೀವಾಸ್ತವ್, ಗ್ರಾಹಕರ ನಂಬಿಕೆಯನ್ನು ಗಳಿಸುವುದು ಮುಖ್ಯ ಎಂದಿದ್ದಾರೆ.

ಔಜಸ್ಯ ಎಂಬ ಲೇಬಲ್‌ನೊಂದಿಗೆ ‘ಫ್ರಮ್ ಏರ್’ ಟ್ರೇಡ್‌ಮಾರ್ಕ್ ಆಗಿ ಬರುವ ಬಾಟಲ್ ಗಳಲ್ಲಿ ಉರವು ಕಂಪನಿ ರಚಿಸಿದ್ದು ಎಂಬ ಉಲ್ಲೇಖವಿದೆ. ಈ ತಂತ್ರವು ಇಂಟೆಲ್‌ನಂತಹ ಪ್ರಸಿದ್ಧ ಬ್ರ್ಯಾಂಡ್‌ಗಳ ವಿಧಾನವನ್ನು ಹೋಲುತ್ತದೆ ಎಂದು ಅವರು ಹೇಳಿದರು.

ಉದ್ಯೋಗ ಭರವಸೆ

ಪ್ರಸ್ತುತ 70 ಮಂದಿ ಇದರಲ್ಲಿ ತೊಡಗಿಕೊಂಡಿದ್ದು, ಮುಂದೆ ಉರವು ಲ್ಯಾಬ್ಸ್, ವಿಸ್ತರಣೆ ಮತ್ತು ನಾವೀನ್ಯತೆಗಾಗಿ ಹೊಸ ಯೋಜನೆಗಳನ್ನು ಹಾಕಲಾಗುತ್ತಿದೆ. ಪ್ರಸ್ತುತ ಅಬುಧಾಬಿಯಲ್ಲಿ ಹೈಡ್ರೋಪೋನಿಕ್ಸ್ ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಉರವು, ಅಲ್ಲಿ ದೊಡ್ಡ ದೊಡ್ಡ ಫಾರ್ಮ್‌ಗಳಿಂದ ನೀರನ್ನು ಹೊರತೆಗೆಯುವ ತಂತ್ರಜ್ಞಾನವನ್ನು ತಮ್ಮ ದೈನಂದಿನ ಅಗತ್ಯಗಳಿಗಾಗಿ ಬಳಸಿಕೊಳ್ಳುವುದನ್ನು ಪರಿಚಯಿಸಲಾಗುತ್ತಿದೆ ಎಂದು ಶ್ರೀವಾಸ್ತವ್ ತಿಳಿಸಿದ್ದಾರೆ.

ಮುಂದೇನು?

ಉರವು ಡೇಟಾ ಸೆಂಟರ್‌ಗಳಿಗಾಗಿ ಅಪ್ಲಿಕೇಶನ್‌ಗಳನ್ನು ಅನ್ವೇಷಿಸುತ್ತಿದ್ದು, ಒಂದು ಮೆಗಾವ್ಯಾಟ್ ಡೇಟಾ ಸೆಂಟರ್‌ಗೆ ಸಾಮಾನ್ಯವಾಗಿ ದಿನಕ್ಕೆ ಸುಮಾರು 80,000 ಲೀಟರ್ ನೀರು ಬೇಕಾಗುತ್ತದೆ. ಉರವು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಡೇಟಾ ಕೇಂದ್ರಗಳು ತಮ್ಮ ನೀರಿನ ಬಳಕೆಯನ್ನು ಕಡಿಮೆ ಮಾಡಬಹುದು. ಇದರಿಂದ ಶೇ. 90ರಷ್ಟು, ಸಮುದಾಯದ ನೀರಿನ ಮೂಲಗಳು ಮತ್ತು ಅಂತರ್ಜಲ ಜಲಾಶಯಗಳ ಮೇಲಿನ ಒತ್ತಡವನ್ನು ಇದು ಕಡಿಮೆ ಮಾಡುತ್ತದೆ ಎಂದು ಹೇಳಿದರು.

ಗಾಳಿಯಿಂದ ನೀರಿನ ತಂತ್ರಜ್ಞಾನವನ್ನು ಕೈಗೆಟುಕುವಂತೆ ಮಾಡುವುದು ಉರವು ಕಂಪನಿಯ ಅಂತಿಮ ಉದ್ದೇಶವಾಗಿದೆ ಎಂದು ಹೇಳಿರುವ ಶ್ರೀವಾಸ್ತವ್, ನೀರು ಭೂಮಿಯ ಮೇಲೆ ಹೆಚ್ಚು ಬಳಸುವ ವಸ್ತು. ಇದು ಭೌತಿಕ ಪ್ರಮಾಣದಲ್ಲಿ ಮತ್ತು ಗುಣಮಟ್ಟದ ಅಂಶಗಳಲ್ಲಿ ವೇಗವಾಗಿ ಕಡಿಮೆಯಾಗುತ್ತಿದೆ ಎಂದು ಕಾಳಜಿ ವ್ಯಕ್ತಪಡಿಸಿದ್ದಾರೆ.

ಎಷ್ಟು ವೆಚ್ಚ?

ಸಾಮಾನ್ಯವಾಗಿ ಶುದ್ಧೀಕರಣ ಪ್ರಕ್ರಿಯೆಗಳು ಮತ್ತು ಮೂಲದ ಗುಣಮಟ್ಟವನ್ನು ಅವಲಂಬಿಸಿ ನೀರಿನ ವೆಚ್ಚವು ಲೀಟರ್‌ಗೆ 20ರಿಂದ 60 ಪೈಸೆಗಳವರೆಗೆ ಇರುತ್ತದೆ. ಉರವು ಲ್ಯಾಬ್‌ಗಳಲ್ಲಿ ನೀರಿನ ಉತ್ಪಾದನೆಯ ವೆಚ್ಚ ಪ್ರತಿ ಲೀಟರ್‌ಗೆ ಸುಮಾರು 4 ರಿಂದ 5 ರೂಪಾಯಿಗಳು ಎಂದು
ಶ್ರೀವಾಸ್ತವ್ ಮಾಹಿತಿ ನೀಡಿದ್ದಾರೆ.

ನೀರಿನ ಕೊರತೆ ಇದ್ದಾಗ ಜನರು ನೀರಿಗಾಗಿ ಹೆಚ್ಚು ಬೆಲೆ ಕೊಡುತ್ತಾರೆ. ಆದರೆ ಗಾಳಿಯಿಂದ ನೀರಿನಂತಹ ಸ್ಥಿರ ತಂತ್ರಜ್ಞಾನದಲ್ಲಿ ಪ್ರತಿ ಲೀಟರ್‌ ನೀರಿಗೆ ಆರಂಭದಲ್ಲಿ ದುಬಾರಿಯಂತೆ ಕಂಡರೂ ನೀರಿನ ಬಿಕ್ಕಟ್ಟಿನ ಸಮಯದಲ್ಲಿ ದುಬಾರಿಯಾಗುವ ನೀರಿನ ಮೌಲ್ಯವನ್ನು ಗಮನಿಸಿದರೆ ಇದು ದುಬಾರಿಯಲ್ಲ. ಈ ತಂತ್ರಜ್ಞಾನ ಸರಳವಾದಂತೆ ಈ ಮಾದರಿಯ ನೀರು ಉತ್ಪಾದನೆ ವೆಚ್ಚವೂ ಕಡಿಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Irfan Pathan : ಕಹಿ ನೆನಪು; ಬುರ್ಖಾ ಧರಿಸದ ಪತ್ನಿ ಜತೆ ಫೋಟೋ ತೆಗಿಸಿಕೊಳ್ಳಲು ಒಪ್ಪದ ಇರ್ಫಾನ್ ಪಠಾಣ್​​

Irfan Pathan: ಫೆಬ್ರವರಿ 2024 ರಲ್ಲಿ, ದಂಪತಿ ತಮ್ಮ 8 ನೇ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದರು. ಆ ಸಮಯದಲ್ಲಿ ಇರ್ಫಾನ್ ಪಠಾಣ್ ತಮ್ಮ ಹೆಂಡತಿಯ ಮುಖವನ್ನು ಮೊದಲ ಬಾರಿಗೆ ಅನಾವರಣಗೊಳಿಸಿದ್ದರು. ಈ ಕ್ರಮವು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ವ್ಯಕ್ತಿಗಳಿಂದ ಗಮನಾರ್ಹ ಟೀಕೆಗೆ ಗುರಿಯಾಯಿತು. ಕೆಲವರು ಅವರನ್ನು ಅನಗತ್ಯವಾಗಿ ಟೀಕೆ ಮಾಡಿದ್ದರು.

VISTARANEWS.COM


on

Irfan Pathan
Koo

ಬೆಂಗಳೂರು: ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಮತ್ತು ಸ್ವಿಂಗ್ ಬೌಲರ್ ಇರ್ಫಾನ್ ಪಠಾಣ್ (Irfan Pathan) ತಮ್ಮ ಪತ್ನಿ ಸಫಾ ಬೇಗ್ ಅವರೊಂದಿಗೆ ಮುಂಬೈನ ಬಾಂದ್ರಾದಲ್ಲಿ ಕಾಣಿಸಿಕೊಂಡಿದ್ದರು. ಆದಾಗ್ಯೂ ಅವರು ಪರ್ದಾ (ಬುರ್ಖಾ) ಇಲ್ಲದೆ ಅವರೊಂದಗಿಎ ಫೋಟೋಗಳನ್ನು ತೆಗೆದುಕೊಳ್ಳಲು ಇರ್ಫಾನ್​ ಪಠಾಣ್​ ಪಾಪರಾಜಿಗಳಿಗೆ (ಫೋಟೊಗ್ರಾಫರ್​ಗಳಿಗೆ) ನಿರಾಕರಿಸಿದ ಪ್ರಸಂಗ ನಡೆಯಿತು. ಸಾಮಾನ್ಯವಾಗಿ ಪಠಾಣ್ ಪತ್ನಿ ಸಫಾ ಬುರ್ಖಾ ಧರಿಸಿಕೊಂಡಿರುತ್ತಾರೆ. ಆದರೆ ಈ ಬಾರಿ ಕರಿ ವರ್ಣದ ಬಟ್ಟೆಯಲ್ಲಿದ್ದರು. ಹಿಂದೊಮ್ಮೆ ಅವರು ಮುಖವನ್ನು ಮುಚ್ಚದೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಬಳಿಕ ಆನ್ ಲೈನ್ ನಲ್ಲಿ ಟೀಕೆ ಮತ್ತು ಟ್ರೋಲ್ ಗಳನ್ನು ಎದುರಿಸಬೇಕಾಯಿತು.

ಫೆಬ್ರವರಿ 2024 ರಲ್ಲಿ, ದಂಪತಿ ತಮ್ಮ 8 ನೇ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದರು. ಆ ಸಮಯದಲ್ಲಿ ಇರ್ಫಾನ್ ಪಠಾಣ್ ತಮ್ಮ ಹೆಂಡತಿಯ ಮುಖವನ್ನು ಮೊದಲ ಬಾರಿಗೆ ಅನಾವರಣಗೊಳಿಸಿದ್ದರು. ಈ ಕ್ರಮವು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ವ್ಯಕ್ತಿಗಳಿಂದ ಗಮನಾರ್ಹ ಟೀಕೆಗೆ ಗುರಿಯಾಯಿತು. ಕೆಲವರು ಅವರನ್ನು ಅನಗತ್ಯವಾಗಿ ಟೀಕೆ ಮಾಡಿದ್ದರು.

ಕೆಲವು ವರ್ಷಗಳ ಹಿಂದೆ ಇರ್ಫಾನ್ ಪಠಾಣ್ ತಮ್ಮ ಪತ್ನಿ ಸಫಾ ಬೇಗ್ ಅವರ ಮುಖವನ್ನು ತೋರಿಸದೇ ಇದ್ದಿದ್ದಕ್ಕೆ ಟ್ರೋಲ್ ಎದುರಿಸಿದ್ದರು. ಆದಾಗ್ಯೂ, ಸಫಾ ಬೇಗ್ ತನ್ನ ಪತಿಯನ್ನು ಬೆಂಬಲಿಸಿದ್ದರು. ಅವೆಲ್ಲವೂ ನಮ್ಮ ಆಯ್ಕೆ ಎಂದು ಹೇಳಿದ್ದರು.

ಇದನ್ನೂ ಓದಿ: Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

ಫೋಟೋ ಭಯ

ಇರ್ಫಾನ್ ಪಠಾಣ್ ತಮ್ಮ ಪತ್ನಿ ಸಫಾ ಮತ್ತು ಮಗನೊಂದಿಗೆ ಬಾಂದ್ರಾದ ಕೆಫೆಯಲ್ಲಿ ವಿಹಾರಿಸುತ್ತಿದ್ದರು. ಪಾಪರಾಜಿಗಳ ಗುಂಪು ಪಠಾಣ್ ಅವರನ್ನು ಹಿಂಬಾಲಿಸಿ ಅವರ ಕುಟುಂಬದ ಫೋಟೋಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸಿತು. ಆದರೆ ಸಫಾ ಅವರಿಂದ ಆತುರದಿಂದ ಹೊರಟುಹೋದರು. ಇದರಿಂದ ಸಿಟ್ಟಿಗೆದ್ದ ಇರ್ಫಾನ್ ಪಠಾಣ್ ತಮ್ಮ ಪತ್ನಿಯ ಫೋಟೋ ತೆಗೆಯದಂತೆ ಪಾಪರಾಜಿಗಳಿಗೆ ಮನವಿ ಮಾಡಿದರು.

ಇರ್ಫಾನ್ ಪಠಾಣ್ ವೃತ್ತಿಜೀವನ

ಕ್ರಿಕೆಟ್​ನಿಂದ ನಿವೃತ್ತಿಯಾದ ನಂತರ, ಬಹು-ಪ್ರತಿಭಾವಂತ ಇರ್ಫಾನ್ ಪಠಾಣ್ ವಿವಿಧ ಅನ್ವೇಷಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರು ಆಟದ ಬಗ್ಗೆ ಆಳವಾದ ತಿಳುವಳಿಕೆಯೊಂದಿಗೆ ಕ್ರಿಕೆಟ್ ವಿಶ್ಲೇಷಕ ಮತ್ತು ವೀಕ್ಷಕವಿವರಣೆಗಾರರಾಗಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಪೋಷಿಸುವ ಗುರಿಯೊಂದಿಗೆ ಅವರು ತಮ್ಮ ಸಹೋದರನೊಂದಿಗೆ ಕ್ರಿಕೆಟ್ ಅಕಾಡೆಮಿ ಆಫ್ ಪಠಾಣ್ಸ್ ಅನ್ನು ಸ್ಥಾಪಿಸಿದ್ದಾರೆ. ವಿಶೇಷವೆಂದರೆ 2015 ರಲ್ಲಿ, ಅವರು ನೃತ್ಯ ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನು ಪ್ರದರ್ಶಿಸಿದ್ದರು.

ತೀರಾ ಇತ್ತೀಚೆಗೆ ಅವರು ಬಹರಾಂಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು. ಲೋಕಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ತಮ್ಮ ಸಹೋದರ ಯೂಸುಫ್ ಪಠಾಣ್ ಅವರನ್ನು ಬೆಂಬಲಿಸಿ ಮತಯಾಚಿಸಿದರು.

Continue Reading

ದೇಶ

Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

ತತ್ಕಾಲ್ ಸೇವೆಯ ವ್ಯವಸ್ಥೆಯನ್ನು ಬಳಸಿಕೊಂಡು ತಕ್ಷಣದ ಪ್ರಯಾಣದ ಯೋಜನೆಗಳಿಗೆ ಟಿಕೇಟ್‌ಗಳನ್ನು ಬುಕ್ ಮಾಡಬಹುದು. ಎಲ್ಲಾ ರೈಲುಗಳ ಕಾಯ್ದಿರಿಸಿದ ಕೋಚ್ ಗಳಲ್ಲಿ ಭಾರತೀಯ ರೈಲ್ವೇಯು ರೈಲು ಟಿಕೆಟ್‌ಗಳ ತತ್ಕಾಲ್ ಬುಕಿಂಗ್ (Tatkal Tickets) ಅನ್ನು ಅನುಮತಿಸುತ್ತದೆ. ತತ್ಕಾಲ್‌ ಟಿಕೆಟ್‌ ಪಡೆಯುವ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Tatkal Tickets
Koo

ಕೊನೆ ಘಳಿಗೆಯಲ್ಲಿ ಪ್ರವಾಸ (travel) ಹೊರಡುವ ಯೋಜನೆಯೇ ಅಥವಾ ತುರ್ತಾಗಿ ಬೇರೆ ನಗರಕ್ಕೆ ಹೋಗಬೇಕಿದೆಯೇ? ಆದರೆ ಇನ್ನೂ ರೈಲ್ವೇ ಟಿಕೇಟ್ ಕಾದಿರಿಸಿಲ್ಲ ಎಂಬ ಚಿಂತೆ ಬೇಡ. ಐಆರ್‌ಸಿಟಿಸಿಯ (IRCTC) ತತ್ಕಾಲ್ ಸೇವೆಯು (Tatkal Tickets) ಪ್ರಯಾಣಿಕರಿಗೆ ಹೊರಡುವ ಒಂದು ದಿನದ ಮುಂಚಿತವಾಗಿ ರೈಲು ಸೀಟುಗಳನ್ನು ಕಾಯ್ದಿರಿಸಲು ಅನುವು ಮಾಡಿಕೊಡುತ್ತದೆ.

ತತ್ಕಾಲ್ ಸೇವೆಯ ವ್ಯವಸ್ಥೆಯನ್ನು ಬಳಸಿಕೊಂಡು ತಕ್ಷಣದ ಪ್ರಯಾಣದ ಯೋಜನೆಗಳಿಗೆ ಟಿಕೇಟ್‌ಗಳನ್ನು ಬುಕ್ ಮಾಡಬಹುದು. ಎಲ್ಲಾ ರೈಲುಗಳ ಕಾಯ್ದಿರಿಸಿದ ಕೋಚ್‌ಗಳಲ್ಲಿ ಭಾರತೀಯ ರೈಲ್ವೇಯು ರೈಲು ಟಿಕೆಟ್‌ಗಳ ತತ್ಕಾಲ್ ಬುಕಿಂಗ್ ಅನ್ನು ಅನುಮತಿಸುತ್ತದೆ. ಆದ್ದರಿಂದ ನೀವು ಕೊನೆಯ ನಿಮಿಷದಲ್ಲಿ ಸ್ಲೀಪರ್, 3AC, 2AC, ಅಥವಾ 1AC ಯ ಟಿಕೆಟ್ ಖರೀದಿಸಬಹುದು.

ತತ್ಕಾಲ್ ಟಿಕೆಟ್ ಶುಲ್ಕ

ಐಆರ್‌ಸಿಟಿಸಿ ಬುಕಿಂಗ್‌ಗಳಿಗೆ ಹೆಚ್ಚುವರಿ ದರವನ್ನು ವಿಧಿಸುತ್ತದೆ. ಏಕೆಂದರೆ ಅದು ತತ್ಕಾಲ್ ಯೋಜನೆಗೆ ಸೀಟುಗಳನ್ನು ಕಾಯ್ದಿರಿಸಬೇಕು. ಉದಾಹರಣೆಗೆ ತತ್ಕಾಲ್ ಟಿಕೆಟ್‌ನ ಬೆಲೆ ಅಂದಾಜು 1,300 ರೂ. ಆಗಿರುತ್ತದೆ ಎಂದರೆ, ಸಾಮಾನ್ಯ ಟಿಕೆಟ್‌ಗಳ ಬೆಲೆ 900 ರೂ. ಆಗಿರುತ್ತದೆ. ಎರಡನೇ ದರ್ಜೆಯ (ಕುಳಿತುಕೊಳ್ಳುವಿಕೆ) ಹೊರತುಪಡಿಸಿ, ಐಆರ್‌ಸಿಟಿಸಿ ಎಲ್ಲಾ ಪ್ರಯಾಣಿಕರಿಗೆ ಮೂಲ ದರದ ಶೇ. 30 ಹೆಚ್ಚು ಶುಲ್ಕ ವಿಧಿಸುತ್ತದೆ.

ಬುಕ್ಕಿಂಗ್ ಸಮಯ

ತತ್ಕಾಲ್ ಟಿಕೆಟ್ ಬುಕ್ಕಿಂಗ್ ವಿಂಡೋವನ್ನು ಐಆರ್‌ಸಿಟಿಸಿಯಿಂದ ರೈಲು ಪ್ರಾರಂಭವಾಗುವ ನಿಲ್ದಾಣದಿಂದ ಹೊರಡುವ ಒಂದು ದಿನ ಮೊದಲು ತೆರೆಯಲಾಗುತ್ತದೆ. ಉದಾಹರಣೆಗೆ, ನೀವು ಕೋಲ್ಕತ್ತಾದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರೆ, ಕೋಲ್ಕತ್ತಾದಲ್ಲಿ ರಾಜಧಾನಿ ಎಕ್ಸ್‌ಪ್ರೆಸ್‌ ಪ್ರಯಾಣ ಪ್ರಾರಂಭಿಸಿಸುವ ಹಿಂದಿನ ದಿನದಿಂದ ಶುರುವಾಗುತ್ತದೆ. ಹೆಚ್ಚುವರಿಯಾಗಿ ಎಸಿ ವರ್ಗದ ಟಿಕೆಟ್‌ಗಳಿಗಾಗಿ (2A/3A/CC/EC/3E) ಖರೀದಿ ವಿಂಡೋ ಬೆಳಗ್ಗೆ 10 ಗಂಟೆಗೆ ತೆರೆಯುತ್ತದೆ. ಈ ಮಧ್ಯೆ ಎಸಿ ಅಲ್ಲದ ವರ್ಗ (SL/FC/2S) ತತ್ಕಾಲ್ ಟಿಕೆಟ್‌ಗಳು ಬೆಳಗ್ಗೆ 11 ಗಂಟೆಗೆ ಮಾರಾಟವಾಗುತ್ತವೆ.

ಬುಕ್ ಮಾಡುವುದು ಹೇಗೆ?

ಐಆರ್‌ಸಿಟಿಸಿಯ ವೆಬ್‌ಸೈಟ್ irctc.co.in ಗೆ ಹೋಗಿ ಲಾಗ್ ಇನ್ ಮಾಡಲು ನಿಮ್ಮ ಐಆರ್‌ಸಿಟಿಸಿ ಬಳಕೆದಾರ ಐಡಿ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ. “ಸೈನ್ ಅಪ್” ಬಟನ್ ಅನ್ನು ಕ್ಲಿಕ್ ಮಾಡುವ ಮೂಲಕ ಮತ್ತು ನೀವು ಈಗಾಗಲೇ ಒಂದನ್ನು ಹೊಂದಿಲ್ಲದಿದ್ದರೆ ಸೂಚನೆಗಳನ್ನು ಅನುಸರಿಸುವ ಮೂಲಕ ನೀವು ಐಆರ್ ಸಿಟಿಸಿ ಖಾತೆಯನ್ನು ರಚಿಸಬಹುದು. ಲಾಗ್ ಇನ್ ಮಾಡಿದ ಅನಂತರ “ಬುಕ್ ಟಿಕೆಟ್” ಕ್ಲಿಕ್ ಮಾಡಿ.


“ತತ್ಕಾಲ್” ಬುಕ್ಕಿಂಗ್ ಆಯ್ಕೆಯನ್ನು ಆರಿಸಿ ಮತ್ತು ಪ್ರಯಾಣದ ದಿನಾಂಕ, ಮೂಲ ಮತ್ತು ಗಮ್ಯಸ್ಥಾನದ ನಿಲ್ದಾಣಗಳಂತಹ ಎಲ್ಲಾ ಅಗತ್ಯ ಮಾಹಿತಿಯನ್ನು ನಮೂದಿಸಿ. ನಿಮ್ಮ ಪ್ರಯಾಣಕ್ಕಾಗಿ ನೀವು ಬಯಸುವ ರೈಲು ಮತ್ತು ವರ್ಗವನ್ನು ಆಯ್ಕೆಮಾಡಿ. ಮುಂದೆ ಪ್ರಯಾಣಿಕರ ಮಾಹಿತಿಯನ್ನು ನಮೂದಿಸಿ. ಹೆಚ್ಚುವರಿಯಾಗಿ, ನಿಮ್ಮ ಆದ್ಯತೆಯ ಬರ್ತ್ ಅನ್ನು ನೀವು ಆಯ್ಕೆ ಮಾಡಬಹುದು. ಆದಾಗ್ಯೂ, ನಿಮಗೆ ಬರ್ತ್ ಆಸನವನ್ನು ನಿಯೋಜಿಸಲಾಗುವುದು ಎಂದು ನೀವು ಖಾತರಿಪಡಿಸದಿರಬಹುದು.

ಶುಲ್ಕ ಮತ್ತು ಹೆಚ್ಚುವರಿ ಮಾಹಿತಿಯನ್ನು ಪರಿಶೀಲಿಸಿದ ಅನಂತರ, “ಪಾವತಿಗೆ ಮುಂದುವರಿಯಿರಿ” ಕ್ಲಿಕ್ ಮಾಡಿ. ಕ್ರೆಡಿಟ್ ಕಾರ್ಡ್‌ಗಳು, ಡೆಬಿಟ್ ಕಾರ್ಡ್‌ಗಳು, ನೆಟ್ ಬ್ಯಾಂಕಿಂಗ್, ಯುಪಿಐ ಮತ್ತು ಇತರ ಪರ್ಯಾಯ ವಿಧಾನಗಳು ನೀವು ವಹಿವಾಟಿಗೆ ಪಾವತಿಸಬಹುದಾದ ಮಾರ್ಗಗಳಾಗಿವೆ. ಮೀಸಲಾತಿಯನ್ನು ಪರಿಶೀಲಿಸಿ. ಎಲೆಕ್ಟ್ರಾನಿಕ್ ಟಿಕೆಟ್ ಪಡೆಯಿರಿ.

ಇದನ್ನೂ ಓದಿ: Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

ಐಆರ್‌ಸಿಟಿಸಿ ಅಪ್ಲಿಕೇಶನ್ ಬಳಸುವುದು ಹೇಗೆ?

ಐಆರ್‌ಸಿಟಿಸಿ ಅಪ್ಲಿಕೇಶನ್ ಅನ್ನು ರನ್ ಮಾಡಲು ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಹೊಂದಿಸಿ. ಅಪ್ಲಿಕೇಶನ್ ಅನ್ನು ಪ್ರಾರಂಭಿಸಿ ಮತ್ತು ನಿಮ್ಮ ಐಆರ್ ಸಿಟಿಸಿ ರುಜುವಾತುಗಳೊಂದಿಗೆ ಸೈನ್ ಇನ್ ಮಾಡಿ. ಈ ಹಂತದಲ್ಲಿ “ತತ್ಕಾಲ್ ಬುಕಿಂಗ್” ಆಯ್ಕೆ ಮಾಡಿ. ನೀವು ಟಿಕೇಟ್‌ಗಳನ್ನು ಕಾಯ್ದಿರಿಸಿದ್ದರೂ ಹಲವು ಬಾರಿ ಅವುಗಳನ್ನು ದೃಢೀಕರಿಸಲಾಗುವುದಿಲ್ಲ.

ಜನರು ತಮ್ಮ ರೈಲು ಟಿಕೆಟ್ ದೃಢೀಕರಿಸದಿರುವಾಗ ಅಥವಾ ಅವರು ಈಗಿನಿಂದಲೇ ತಮ್ಮ ಪ್ರಯಾಣದ ಯೋಜನೆಗಳನ್ನು ಮಾಡಿದರೆ ತತ್ಕಾಲ್ ಟಿಕೆಟ್ ಅಥವಾ ಪ್ರೀಮಿಯಂ ತತ್ಕಾಲ್ ಅನ್ನು ಆಯ್ಕೆ ಮಾಡುತ್ತಾರೆ. ತತ್ಕಾಲ್ ಮತ್ತು ಪ್ರೀಮಿಯಂ ತತ್ಕಾಲ್ ಸ್ವಲ್ಪ ಹೆಚ್ಚಿನ ಶುಲ್ಕವನ್ನು ಹೊಂದಿದ್ದರೂ ವೇಗವಾಗಿ ಸೀಟ್ ಲಭ್ಯವಾಗುವುದು.

Continue Reading

ಕ್ರಿಕೆಟ್

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Dubbing Premier League: ಕಳೆದ ಎರಡು ಆವೃತ್ತಿಯ ಯಶಸ್ಸಿನ ಹಿನ್ನೆಲೆಯಲ್ಲಿ ಕಲಾವಿದರೇ ಜತೆಯಾಗಿ ಸೇರಿಕೊಂಡು ಈ ಟೂರ್ನಿಯನ್ನು ಅಯೋಜಿಸಿದ್ದಾರೆ. ಕರ್ನಾಟಕದ ಜನಪ್ರಿಯ ಸುದ್ದಿವಾಹಿನಿ ‘ವಿಸ್ತಾರ ನ್ಯೂಸ್​’ ಈ ಟೂರ್ನಿಗೆ ಮಾಧ್ಯಮ ಸಹಯೋಗ ನೀಡಿದೆ. ಅದೇ ರೀತಿ ಎಮ್​ ಸ್ಪೋರ್ಟ್​​ ಯೂಟ್ಯೂಬ್ ಚಾನೆಲ್​ನಲ್ಲಿ ಪಂದ್ಯದ ಕ್ಷಣಗಳು ನೇರ ಪ್ರಸಾರವಾಗಲಿದ್ದು https://cricheroes.com/ ನಲ್ಲಿ ಲೈವ್ ಸ್ಕೋರ್ ಅಪ್​ಡೇಟ್​ ಸಿಗಲಿದೆ.

VISTARANEWS.COM


on

Dubbing Premier League
Koo

ಬೆಂಗಳೂರು: ಕನ್ನಡ ಸಿನಿಮಾ ಹಾಗೂ ಕಿರುತೆರೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಸಂಖ್ಯಾತ ಡಬ್ಬಿಂಗ್ ಕಲಾವಿದರು ಹಾಗೂ ಕಲಾವಿದರ ಸಮಾಗಮದೊಂದಿಗೆ ಆಯೋಜಿಸಲಾಗುತ್ತಿರುವ ಡಬ್ಬಿಂಗ್​ ಪ್ರೀಮಿಯರ್ ಲೀಗ್ (Dubbing Premier League)​ ಕ್ರಿಕೆಟ್​ ಟೂರ್ನಿಯ ಮೂರನೇ ಆವೃತ್ತಿ ಶನಿವಾರ (ಮೇ 18) ಹಾಗೂ ಭಾನುವಾರ (ಮೇ 19)ರಂದು ನಡೆಯಲಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಗ್ಲೋಬಲ್​ ಅಕಾಡೆಮಿ ಆಫ್​ ಟೆಕ್ನಾಲಜಿಯ ಮೈದಾನದಲ್ಲಿ ಈ ಟೂರ್ನಿಯು ಪಂದ್ಯಗಳು ಅಯೋಜನೆಗೊಂಡಿದೆ. ಈ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಸಿನಿ ಹಾಗೂ ಕಿರುತೆರೆ ಕ್ಷೇತ್ರದ ಹೆಸರಾಂತ ಕಲಾವಿದರು ಹಾಗೂ ಸೆಲೆಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ. ಅವರೆಲ್ಲರೂ ಒಂದೆಡೆ ಸೇರಿ “ಜಂಟಲ್​ಮ್ಯಾನ್ಸ್​ ಸ್ಪೋರ್ಟ್”​​ ಎಂದೇ ಕರೆಯವ ಕ್ರಿಕೆಟ್​ ಆಡಿ ಸಂಭ್ರಮಿಸಲಿದ್ದಾರೆ.

ಕಳೆದ ಎರಡು ಆವೃತ್ತಿಯ ಯಶಸ್ಸಿನ ಹಿನ್ನೆಲೆಯಲ್ಲಿ ಕಲಾವಿದರೇ ಜತೆಯಾಗಿ ಸೇರಿಕೊಂಡು ಈ ಟೂರ್ನಿಯನ್ನು ಅಯೋಜಿಸಿದ್ದಾರೆ. ಕರ್ನಾಟಕದ ಜನಪ್ರಿಯ ಸುದ್ದಿವಾಹಿನಿ ‘ವಿಸ್ತಾರ ನ್ಯೂಸ್​’ ಈ ಟೂರ್ನಿಗೆ ಮಾಧ್ಯಮ ಸಹಯೋಗ ನೀಡಿದೆ. ಅದೇ ರೀತಿ ಎಮ್​ ಸ್ಪೋರ್ಟ್​​ ಯೂಟ್ಯೂಬ್ ಚಾನೆಲ್​ನಲ್ಲಿ ಪಂದ್ಯದ ಕ್ಷಣಗಳು ನೇರ ಪ್ರಸಾರವಾಗಲಿದ್ದು https://cricheroes.com/ ನಲ್ಲಿ ಲೈವ್ ಸ್ಕೋರ್ ಅಪ್​ಡೇಟ್​ ಸಿಗಲಿದೆ.

ಶನಿವಾರ ಬೆಳಗ್ಗೆ 7.30ಕ್ಕೆ ಮೊದಲ ಪಂದ್ಯ ನಡೆಯಲಿದೆ. ಅದಕ್ಕಿಂತ ಮೊದಲು ಟೂರ್ನಿಯ ಉದ್ಘಾಟನಾ ಕಾರ್ಯಕ್ರಮ ಅಯೋಜನೆಗೊಂಡಿದೆ. ಟೂರ್ನಿಯಲ್ಲಿ 9 ತಂಡಗಳು ಪ್ರಶಸ್ತಿಗಾಗಿ ಹೋರಾಡಲಿವೆ. ನಿರಂಜನ್ ಸ್ಟುಡಿಯೋಸ್, ಧ್ವನಿ ಸಂಗಮ ಸ್ಟುಡಿಯೋಸ್, ಆರ್​ಸಿಬಿ, ಹರಿವು ಹುಡುಗರು, ಸೌಂಡ್ ಮ್ಯಾಪ್ ರಾಯಲ್ಸ್ ರಾಯಲ್ ಎಡಿಟರ್ಸ್, ಲಗಾನಾ ಬಾಯ್ಸ್, ಕನ್ನಡ ಕಂಠಗಳು, ಭಜರಂಗಿ ಬಾಯ್ಸ್ ಕ್ರಿಕೆಟರ್ಸ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ತಂಡಗಳಾಗಿವೆ. ಎರಡು ದಿನಗಳ ಅವಧಿಯಲ್ಲಿ 10 ಲೀಗ್ ಪಂದ್ಯಗಳು ಹಾಗೂ ಎರಡು ಸೆಮಿ ಫೈನಲ್ ಹಾಗೂ ಫೈನಲ್ ಸೇರಿ ಒಟ್ಟು 13 ಪಂದ್ಯಗಳು ನಡೆಯಲಿವೆ.

ವಸತಿ ಸಚಿವರ ಆಗಮನ ನಿರೀಕ್ಷೆ

ಕರ್ನಾಟಕ ಸರ್ಕಾರದ ವಸತಿ ಸಚಿವರಾದ ಬಿ. ಝಡ್​ ಜಮೀರ್​ ಅಹಮದ್ ಅವರು ಆಗಮಿಸಿ ಪಂದ್ಯವನ್ನು ವೀಕ್ಷಿಸುವುದಾಗಿ ಹೇಳಿದ್ದಾರೆ ಎಂಬುದಾಗಿ ಆಯೋಜಕರು ತಿಳಿಸಿದ್ದಾರೆ. ಅದೇ ರೀತಿ ಕಲಾವಿದರ ಈ ಸಂಗಮಕ್ಕೆ ಸಿನಿಮಾ ಹಾಗೂ ಕಿರುತೆರೆ ಕ್ಷೇತ್ರದ ಹಲವಾರು ಕಲಾವಿದರು ಆಗಮಿಸುವ ನಿರೀಕ್ಷೆಯಿದೆ. ಚಲನಚಿತ್ರ ಕಲಾವಿದ ಮತ್ತು ನಿರ್ದೇಶಕ, ನಾಗೇಂದ್ರ ಅರಸ್, ಸಿನಿಮಾ ಕಲಾವಿದ ರಮೇಶ್ ಪಂಡಿತ್, ಜೀ ಟಿವಿ ಮಹಾನಟಿ ಸೀರಿಯಲ್​ ನ ಆಶಿಕಾ ಶರ್ಮಾ, ಟಿವಿ ಕಲಾವಿದರಾದ ಪುನೀತ್ ಬಾಬು, ಧನಂಜಯ. ಸುಹಾಸ್ ಆತ್ರೇಯಸ್, ಕಾರ್ತಿಕ್ ವೈಭವ್,ಆಯುಷ್ ಜೆ ಶೆಟ್ಟಿ, ವಲ್ಲಭ ಸೂರಿ, ಮಧುಸೂದನ್, ಸಿನಿ ಕಲಾವಿದರಾದ ಹರ್ಷಿಲ್ ಕೌಶಿಕ್, ಶಕ್ತಿ ರಾಜ್, ವಿಕಾಸ್ ವಸಿಷ್ಠ, ರಿಚಾ ಶಾಸ್ತ್ರಿ, ಸಿಲ್ಲಿ ಲಲ್ಲಿ ಆನಂದ್, ಚೇತನ್ ಗಂಧರ್ವ, ಯಶವಂತ್ ಬಿಜೂರ್, ನರೇಶ್ ಗಾಂಧಿ, ಗೀತರಚನೆಕಾರ ಪ್ರಮೋದ್ ಮರವಂತೆ, ಟಿವಿ ಕಲಾವಿದೆ ಪುಷ್ಪಾ ಅನಿಲ್, ಗಾಯಕರಾದ ಕರಿಬಸವ ಅವರು ಟೂರ್ನಿಯಲ್ಲಿ ಪಾಲ್ಗಳ್ಳಲಿದ್ದಾರೆ.

ಇದನ್ನೂ ಓದಿ: IPL 2024 : ಆರ್​ಸಿಬಿ ವಿರುದ್ಧ ವೇಗದ ಬೌಲರ್​ ಕಣಕ್ಕೆ; ಚೆನ್ನೈ ತಂಡದಲ್ಲಿ ಸಂಭ್ರಮ

ಎರಡು ಆವೃತ್ತಿಗಳ ಯಶಸ್ಸು

ಸಿನಿಮಾ ಹಾಗೂ ಕಿರುತೆರೆಯಲ್ಲಿ ಹಲವಾರು ಡಬ್ಬಿಂಗ್ ಕಲಾವಿದರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿ ಬದುಕಿನ ಜಂಜಾಟ ಹಾಗೂ ಇನ್ನೂ ಅನೇಕ ಕಾರಣಗಳಿಂದಾಗಿ ಅವರೆಲ್ಲರೂ ಪರಸ್ಪರ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎರಡು ವರ್ಷಗಳ ಹಿಂದೆ ಡಬ್ಬಿಂಗ್​ ಆರ್ಟಿಸ್ಟ್​​ಗಳು ಹಾಗೂ ಇನ್ನಿತರ ಕಲಾವಿರ ಸಮಾಗಮದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆರಂಭಿಸಲಾಗಿತ್ತು. ಕಳೆದ ಎರಡು ವರ್ಷದ ಟೂರ್ನಿ ಅತ್ಯಂತ ಯಶಸ್ಸು ಕಂಡಿತ್ತು. ಕಲಾವಿದರು ಎರಡು ದಿನಗಳ ಕಾಲ ಜತೆಯಾಗಿ ಸೇರಿಕೊಂಡು ಕ್ರಿಕೆಟ್ ಆಡಿ ಸಂಭ್ರಮಿಸಿದ್ದರು. ಟ್ರೋಫಿ ಗೆದ್ದಿದ್ದರು. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮೂರನೇ ಆವೃತ್ತಿಯನ್ನು ಆಯೋಜಿಸಲಾಗಿದೆ. ಶನಿವಾರ ಹಾಗೂ ಭಾನುವಾರ ಕ್ರಿಕೆಟ್​ ಪ್ರೇಮಿ ಕಲಾವಿದರು ಈ ಟೂರ್ನಿಯಲ್ಲಿ ಆಡಿ ಸಂಭ್ರಮಿಸಲಿದ್ದಾರೆ ಎಂಬುದಾಗಿ ಅಯೋಜಕರು ಮಾಹಿತಿ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

ಕಾನ್‌ ಫಿಲ್ಮ್ ಫೆಸ್ಟಿವಲ್‌ನ 3ನೇ ದಿನದಂದು (Canne Film Festival 2024) ಬಾಲಿವುಡ್ ನಟಿ ಅಥಿಯಾ ಶೆಟ್ಟಿಯ ಶಿಮ್ಮರ್ ಜಂಪ್‌ಸೂಟ್‌ನಲ್ಲಿ ಶೋಭಿತಾ ಕಾಣಿಸಿಕೊಂಡರೆ; ಊರ್ವಶಿ ರೌತೆಲಾ ಆಕರ್ಷಕ ರೆಡ್ ಗೌನ್‌ನಲ್ಲಿ ಕಣ್ಮನ ಸೆಳೆದರು. ಇನ್ನುಳಿದವರು ಹೇಗೆಲ್ಲಾ ಕಂಡರು? ಇದಕ್ಕಾಗಿ ಹೇಗೆಲ್ಲಾ ಸಿದ್ಧಗೊಂಡಿರುತ್ತಾರೆ ಎಂಬುದರ ಬಗ್ಗೆ ಫ್ಯಾಷನ್ ವಿಮರ್ಶಕರು ಇಲ್ಲಿ ವಿವರಿಸಿದ್ದಾರೆ.

VISTARANEWS.COM


on

Canne Film Festival 2024
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು
ಕಾನ್‌ ಫಿಲ್ಮ್ ಫೆಸ್ಟಿವಲ್ 2024ರ ರೆಡ್‌ ಕಾರ್ಪೆಟ್‌ (Canne Film Festival 2024) ಮೇಲೆ ಒಂದೊಂದು ದಿನವೂ ಒಂದೊಂದು ಬಗೆಯ ವಿಶೇಷವಾದ ಡಿಸೈನರ್‌ವೇರ್‌ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್ ನಟಿಯರು ಹಾಗೂ ಸೆಲೆಬ್ರೆಟಿಗಳು 3ನೇ ದಿನವೂ ಕೂಡ ಆಫ್ ಶೋಲ್ಡರ್ ಡಿಸೈನರ್‌ವೇರ್‌ಗಳಿಗೆ ಪ್ರಾಮುಖ್ಯತೆ ನೀಡಿದ್ದರು. ಅಂದಹಾಗೆ, ಬಾಲಿವುಡ್ ನಟಿ ಶೋಭಿತಾ, ಕಳೆದ ಬಾರಿ ನಟಿ ಅಥಿಯಾ ಶೆಟ್ಟಿ ಲ್ಯಾಕ್ಮೆ ಫ್ಯಾಷನ್ ವೀಕ್‌ನಲ್ಲಿ ಡಿಸೈನರ್ ನಮ್ರತಾ ವಿನ್ಯಾಸಗೊಳಿಸಿ, ಧರಿಸಿದ್ದ ಶಿಮ್ಮರ್ ಪರ್ಪಲ್ ಜಂಪ್‌ಸೂಟ್‌ನಲ್ಲಿ ಕಾಣಿಸಿಕೊಂಡರು. ಹಳೆಯ ಡಿಸೈನ್ ಮತ್ತೊಮ್ಮೆ ರಿಪೀಟ್ ಮಾಡಿದರು.

ಊರ್ವಶಿ ರೌತೆಲಾ ಆಕರ್ಷಕ ರೆಡ್ ಗೌನ್: ಇನ್ನು ಬಾಲಿವುಡ್ ನಟಿ ಊರ್ವಶಿ ರೌತೆಲಾ, ತುನೇಸಿಯನ್ ಡಿಸೈನರ್‌ನ ಆಫ್ ಶೋಲ್ಡರ್ ಕೇಪ್ ಶೈಲಿಯ ಬಲೂನ್ ಸ್ಲೀವ್‌ನ ಆಕರ್ಷಕ ರೆಡ್ ಗೌನ್‌ನಲ್ಲಿ ಯೂರೋಪಿಯನ್ ಕ್ವೀನ್ ಲುಕ್‌ ಮೂಲಕ ಕಣ್ಮನ ಸೆಳೆದರು.

ಇದನ್ನೂ ಓದಿ: Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

ದೀಪ್ತಿ – ನಮಿತಾ ತಾಪರ್ ಡಿಸೈನರ್‌ವೇರ್ಸ್: ಇನ್ನು, ದೀಪ್ತಿ ಯೆಲ್ಲೋ & ಗೋಲ್ಡ್ ಫಿಶ್ಟೇಲ್ ರಫಲ್ ಗೌನ್‌ನಲ್ಲಿ ಕಾಣಿಸಿಕೊಂಡರೆ, ನಮಿತಾ ರಾಯಲ್ ಬ್ಲ್ಯೂ ಸ್ಯಾಟೀನ್ ಗೌನ್‌ನಲ್ಲಿ ಪೋಸ್ ನೀಡಿದರು.

ಸೆಲೆಬ್ರೆಟಿಗಳ ರೆಡ್‌ಕಾರ್ಪೆಟ್‌ ಸ್ಟೈಲಿಂಗ್ ಬದಲಾವಣೆ: ಮೊದಲ ದಿನ ಬಹುತೇಕ ಸೆಲೆಬ್ರೆಟಿಗಳು ತಮ್ಮ ಡಿಸೈನರ್‌ವೇರ್‌ಗಳು ಎಕ್ಸ್ಕ್ಲೂಸಿವ್ ಡಿಸೈನ್ ಹೊಂದಿವೆ ಎಂದು ಭಾವಿಸಿಯೇ ರೆಡ್ ಕಾರ್ಪೆಟ್‌ ಮೇಲೆ ವಾಕ್ ಮಾಡಿದರೆ, ತದನಂತರ ಕೊಂಚ ಜಾಗರೂಕರಾಗಿ ಸ್ಟೈಲಿಂಗ್‌ನಲ್ಲಿ ಬದಲಾವಣೆ ತಂದಿರುವುದು ಕಂಡು ಬಂದಿತು.

ಡಿಸೈನರ್‌ವೇರ್‌ ಬದಲಿಸಲಾಗದು!

ಹಾಗೆಂದು ಇದ್ದಕ್ಕಿದ್ದಂತೆ ಯಾವ ಸೆಲೆಬ್ರೆಟಿಗೂ ಕೂಡ ಡಿಸೈನರ್ವೇರ್ ಮತ್ತೊಬ್ಬರ ದಿರಸಿನಂತೆ ಇದೆ ಎಂದು ಅರಿವಾದಾಕ್ಷಣ ಬದಲಿಸಲು ಆಗುವುದಿಲ್ಲ! ಯಾಕೆಂದರೇ, ಅವರು ಧರಿಸುವ ಒಂದೊಂದು ಉಡುಪು ಲಕ್ಷಗಟ್ಟಲೆ ರೂ. ಬೆಲೆ ಬಾಳುತ್ತವೆ. ಅಲ್ಲದೇ, ತಿಂಗಳಾನುಗಟ್ಟಲೇ ಮೊದಲೇ ಯಾವುದನ್ನು ಧರಿಸಬೇಕೆಂಬುದು ನಿರ್ಧರಿತವಾಗಿರುತ್ತದೆ. ಇದಕ್ಕಾಗಿ ಸ್ಟಾರ್ಗಳ ಡಿಸೈನರ್‌ಗಳು ಕೂಡ ತಿಂಗಳಾನುಗಟ್ಟಲೇ ಹೋಮ್‌ ವರ್ಕ್‌ ಮಾಡಿರುತ್ತಾರೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ವಿಶೇಷ ದಿರಸನ್ನು ಸಿದ್ಧಪಡಿಸಲು ಸಾಕಷ್ಟು ಕಷ್ಟಪಟ್ಟಿರುತ್ತಾರೆ. ಕೆಲವು ಯಾರೂ ಧರಿಸದ ಹೊಸ ಡಿಸೈನರ್‌ಗಳಾಗಿ ಹಿಟ್ ಲಿಸ್ಟ್‌ಗೆ ಸೇರಿದರೇ, ಮತ್ತೆ ಕೆಲವು ಸೇಮ್ ಟು ಸೇಮ್ ಅಥವಾ ಕಾಪಿಕ್ಯಾಟ್ ಆಗಿ ನಗೆಪಾಟಲೀಗಿಡಾಗುತ್ತವೆ ಎನ್ನುತ್ತಾರೆ ಫ್ಯಾಷನಿಸ್ಟಾ ರಾಕ್.

(ಲೇಖಕಿ ಫ್ಯಾಷನ್ ಪತ್ರಕರ್ತೆ)

Continue Reading
Advertisement
Irfan Pathan
ಕ್ರೀಡೆ8 seconds ago

Irfan Pathan : ಕಹಿ ನೆನಪು; ಬುರ್ಖಾ ಧರಿಸದ ಪತ್ನಿ ಜತೆ ಫೋಟೋ ತೆಗಿಸಿಕೊಳ್ಳಲು ಒಪ್ಪದ ಇರ್ಫಾನ್ ಪಠಾಣ್​​

Tatkal Tickets
ದೇಶ16 mins ago

Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

Prajwal Revanna Case DK Shivakumar offers Rs 100 crore to get involved in pen drive case Devaraje Gowda allegations
ಕ್ರೈಂ19 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

Delhi Airport
ದೇಶ22 mins ago

Delhi Airport: ಹಾರುತ್ತಿದ್ದ ವಿಮಾನದಲ್ಲಿ ಅಗ್ನಿ ಅವಘಡ; ದೆಹಲಿ ಏರ್‌ಪೋರ್ಟ್‌ನಲ್ಲಿ ಎಮರ್ಜನ್ಸಿ ಘೋಷಣೆ!

water aerator
ಬೆಂಗಳೂರು27 mins ago

Water Aerator : ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ರೆ 10 ನಿಮಿಷದಲ್ಲಿ ಮನೆ ತಲುಪುತ್ತದೆ ವಾಟರ್ ಏರಿಯೇಟರ್​

Holenarasipura sexual assault case lot of confusion in the victim statement against HD Revanna Case
ಕ್ರೈಂ59 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

Bhatkal News
ಕರ್ನಾಟಕ1 hour ago

Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Dubbing Premier League
ಕ್ರಿಕೆಟ್1 hour ago

Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

Uttar Pradesh
ದೇಶ1 hour ago

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Prajwal Revanna Case
ಕರ್ನಾಟಕ1 hour ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ14 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌