2nd PUC Result: ದ್ವಿತೀಯ ಪಿಯು ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಫಿಕ್ಸ್;‌ ಈಗಲೇ ಅರ್ಜಿ ಸಲ್ಲಿಸಿ! - Vistara News

ಶಿಕ್ಷಣ

2nd PUC Result: ದ್ವಿತೀಯ ಪಿಯು ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಫಿಕ್ಸ್;‌ ಈಗಲೇ ಅರ್ಜಿ ಸಲ್ಲಿಸಿ!

2nd PUC Result: ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

2nd PUC Result answer sheet download and re evaluation and re counting date fixed Apply now
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು (2nd PUC Result) ಬುಧವಾರ ಪ್ರಕಟವಾಗಿದೆ. ಅಧಿಕೃತ ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳ್ಳಬಹುದಾಗಿದೆ. ಇದೇ ವೇಳೆ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್‌ಲೋಡ್‌ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.

ರಾಜ್ಯಾದ್ಯಂತ 2024ರ ದ್ವಿತೀಯ ಪಿಯುಸಿಗೆ 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದಾರೆ. ರಾಜ್ಯಾದ್ಯಂತ ಪಿಯುಸಿ ಪರೀಕ್ಷೆಯು 1,124 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. 2023-24ನೇ ಸಾಲಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಕ್ರಮದಲ್ಲಿ 80+20 ಮಾದರಿಯಂತೆ (80 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ) ಅಂಕಗಳನ್ನು ನೀಡಲಾಗಿರುತ್ತದೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
  • ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
  • ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ದ್ವಿತೀಯ ಪಿಯುಸಿಯಲ್ಲಿ ಶೇ.84.59 ಮಂದಿ ಪಾಸ್;‌ ದ.ಕ, ಉಡುಪಿ ಮೊದಲೆರಡು ಸ್ಥಾನ

ಪರೀಕ್ಷೆ ಬರೆದವರಲ್ಲಿ ಒಟ್ಟಾರೆ ಶೇಕಡ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಹೊಸದಾಗಿ ಪರೀಕ್ಷೆ ಬರೆದವರು ಶೇ.84.59 ಫಲಿತಾಂಶ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಎಂದಿನಂತೆ ಮೊದಲ ಸ್ಥಾನದಲ್ಲಿದ್ದು, ಶೇ.97.37 ಫಲಿತಾಂಶ ಪಡೆದುಕೊಂಡಿದೆ. ನಂತರದ ಸ್ಥಾನದಲ್ಲಿ ಉಡುಪಿ ಇದ್ದು, ಶೇ.96.80 ಫಲಿತಾಂಶ ಗಳಿಸಿದೆ. ಮೂರನೇ ಹಾಗೂ ನಾಲ್ಕನೇ ಸ್ಥಾನಗಳಲ್ಲಿ ವಿಜಯಪುರ (ಶೇ.94.89) ಹಾಗೂ ಉತ್ತರ ಕನ್ನಡ (ಶೇ.92.51) ಇವೆ. ಕೊನೆಯ ಸ್ಥಾನದಲ್ಲಿ ಗದಗ (ಶೇ.72.86) ಪಡೆದಿದೆ. ಬೆಂಗಳೂರು ಉತ್ತರ ಶೇ.88.67 ಹಾಗೂ ಬೆಂಗಳೂರು ದಕ್ಷಿಣ ಶೇ.89.57 ಫಲಿತಾಂಶ ದಾಖಲಿಸಿವೆ.

ಇದನ್ನೂ ಓದಿ: 2nd PUC Result: ದ್ವಿತೀಯ ಪಿಯುಸಿಯಲ್ಲಿ ಶೇ.84.59 ಮಂದಿ ಪಾಸ್;‌ ದ.ಕ, ಉಡುಪಿ ಮೊದಲೆರಡು ಸ್ಥಾನ; ಫಲಿತಾಂಶ ಇಲ್ಲಿದೆ ನೋಡಿ

ಗಣಿತದಲ್ಲಿ 6960 ಮಂದಿ, ಜೀವಶಾಸ್ತ್ರದಲ್ಲಿ 5925 ಮಂದಿ, 2570 ಮಂದಿ ಕನ್ನಡದಲ್ಲಿ , 1499 ಮಂದಿ ಸಂಸ್ಕೃತದಲ್ಲಿ , ಅರ್ಥಶಾಸ್ತ್ರದಲ್ಲಿ 1403 ಮಂದಿ, ಗಣಕ ವಿಜ್ಞಾನದಲ್ಲಿ 2661 ಮಂದಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

UPSC: ಕೇಂದ್ರ ಲೋಕ ಸೇವಾ ಆಯೋಗವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

UPSC
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC)ವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (Indian Economic Service-IES) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (Indian Statistical Service Examination-ISSE)ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ಯಾವಾಗ, ಯಾವ ಪರೀಕ್ಷೆ?

ಯುಪಿಎಸ್‌ಸಿ ಐಇಎಸ್ / ಐಎಸ್ಎಸ್ಇ 2024 ಪರೀಕ್ಷೆಗಳು ಜೂನ್ 21ರಂದು ಆರಂಭವಾಗಲಿದ್ದು, 22, 23ರಂದು ನಡೆಯಲಿದೆ. ಈ ಪರೀಕ್ಷೆ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅಧ್ಯಯನ, ಸಾಮಾನ್ಯ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಭಾರತೀಯ ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಲ್ಲಿ ನಡೆಯಲಿದೆ. ಆರ್ಥಿಕ ಮತ್ತು ಸಂಖ್ಯಾಶಾಸ್ತ್ರೀಯ ಕ್ಷೇತ್ರಗಳಲ್ಲಿ ವೃತ್ತಿ ಜೀವನದ ನಡೆಸಲು ಬಯಸುವವರು ಈ ಪ್ರತಿಷ್ಠಿತ ಪರೀಕ್ಷೆಯ ವೇಳಾಪಟ್ಟಿಯನ್ನು ಎಚ್ಚರಿಕೆಯಿಂದ ಗಮನಿಸುವಂತೆ ಪ್ರಕಟಣೆ ತಿಳಿಸಿದೆ. ಪ್ರಶ್ನೆ ಪತ್ರಿಕೆ ವಸ್ತುನಿಷ್ಠ ಪ್ರಶ್ನೆಗಳು ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಜೂನ್‌ 21ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಇಂಗ್ಲಿಷ್‌ ಮತ್ತು ಅಪರಾಹ್ನ 2.30ಕ್ಕೆ ಸಾಮಾನ್ಯ ಅಧ್ಯಯನ ಪರೀಕ್ಷೆ ನಡೆಯಲಿದೆ. ಜೂನ್‌ 22ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಅರ್ಥಶಾಸ್ತ್ರ-I, ಸ್ಟ್ಯಾಟಿಸ್ಟಿಕ್ಸ್‌-I ಮತ್ತು ಅಪರಾಹ್ನ 2.30ರಿಂದ ಸಾಮಾನ್ಯ ಅರ್ಥಶಾಸ್ತ್ರ-II ಹಾಗೂ ಸ್ಟ್ಯಾಟಿಸ್ಟಿಕ್ಸ್‌-II ಎಕ್ಸಾಂ ಆಯೋಜಿಸಲಾಗಿದೆ. ಇನ್ನು ಜೂನ್‌ 23ರಂದು ಬೆಳಿಗ್ಗೆ 9 ಗಂಟೆಯಿಂದ ಸಾಮಾನ್ಯ ಅರ್ಥಶಾಸ್ತ್ರ-III ಮತ್ತು ಸ್ಟ್ಯಾಟಿಸ್ಟಿಕ್ಸ್‌-III ಹಾಗೂ ಅಪರಾಹ್ನ 2.30ರಿಂದ ಭಾರತೀಯ ಅರ್ಥಶಾಸ್ತ್ರ ಹಾಗೂ ಸ್ಟ್ಯಾಟಿಸ್ಟಿಕ್ಸ್‌-IV ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ವೀಕ್ಷಿಸಲು ಹೀಗೆ ಮಾಡಿ

  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ಗೆ ಭೇಟಿ ನೀಡಿ.
  • ಬಲಭಾಗದಲ್ಲಿ ಕಾಣಿಸುವ What’s New ಆಯ್ಕೆಯ ಕೆಳಗೆ ಕಂಡು ಬರುವ Examination Time Table: Indian Economic Service – Indian Statistical Service Examination, 2024 ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿನ Document ಆಪ್ಶನ್‌ ಆಯ್ಕೆ ಮಾಡಿದರೆ ವೇಳಾಪಟ್ಟಿ ತೆರೆದುಕೊಳ್ಳುತ್ತದೆ.

Indian Economic Service – Indian Statistical Service Examinationನ ಟೈಮ್‌ ಟೇಬಲ್‌ ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹಾಲ್‌ ಟಿಕೆಟ್‌ ಯಾವಾಗ?

ಈ ಪರೀಕ್ಷೆಗೆ 2024ರ ಏಪ್ರಿಲ್ 10ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಲಿಖಿತ ಪರೀಕ್ಷೆಯು ಗರಿಷ್ಠ 1,000 ಅಂಕಗಳನ್ನು ಹೊಂದಿದೆ. ಪ್ರವೇಶ ಪತ್ರ (Hall Ticket)ವನ್ನು ಪರೀಕ್ಷೆಯ ಏಳು ದಿನಗಳ ಮೊದಲು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಬಹುದು. ಈ ಪರೀಕ್ಷೆಯ ಮೂಲಕ ಆಯ್ಕೆಯಾದ ಅಧಿಕಾರಿಗಳನ್ನು ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಮತ್ತು ಸರ್ಕಾರದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಲು ನೇಮಿಸಲಾಗುತ್ತದೆ.

ಇದನ್ನೂ ಓದಿ: UPSC EXAM-2023: ಯುಪಿಎಸ್‌ಸಿ ಟಾಪರ್ ವಾಸಿಸುತ್ತಿದ್ದುದು ಮನೆಯಲ್ಲಲ್ಲ, ಈ ಜೋಪಡಿಯಲ್ಲಿ!

Continue Reading

ಕರ್ನಾಟಕ

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

Meta: ಮೆಟಾ ಸಂಸ್ಥೆಯಿಂದ ಮಂಗಳವಾರ ಬೆಂಗಳೂರು ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’(ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮ ಜರುಗಿತು. ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು.

VISTARANEWS.COM


on

Talking Digital Safety for Teens programme by Meta in Bengaluru
Koo

ಬೆಂಗಳೂರು: ಯುವಜನರ ಯೋಗಕ್ಷೇಮದ ಕುರಿತು ಮೆಟಾ (Meta) ಸಂಸ್ಥೆಯಿಂದ ಮಂಗಳವಾರ ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’ (ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು. ಮೆಟಾದ ಪ್ಲಾಟ್ ಫಾರ್ಮ್‌ಗಳನ್ನು ಒಳಗೊಂಡಂತೆ ಹದಿಹರೆಯದ ಮಕ್ಕಳ ಸ್ಮಾರ್ಟ್‌ಫೋನ್‌ ಮತ್ತು ಸಾಧನಗಳ ಬಳಕೆಯನ್ನು ಆತ್ಮವಿಶ್ವಾಸದಿಂದ ನಿರ್ವಹಣೆ ಮಾಡಲು ಸಾಧ್ಯವಾಗುವಂತೆ ಪೋಷಕರನ್ನು ಸಜ್ಜುಗೊಳಿಸುವ ಅನೇಕ ವಿಧಾನಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಕಾರ್ಯಕ್ರಮದಲ್ಲಿ ಹದಿಹರೆಯದ ಮಕ್ಕಳ ಸಾಮಾಜಿಕ ಮಾಧ್ಯಮಗಳ ಬಳಕೆ ಮತ್ತು ಇತರ ಆನ್‌ಲೈನ್ ಟ್ರೆಂಡ್‌ಗಳ ಬಳಕೆ ಕುರಿತು ಪೋಷಕರು ಮತ್ತು ಶಿಕ್ಷಕರ ಒಳನೋಟಗಳನ್ನು ಈ ವೇಳೆ ಸಂಗ್ರಹಿಸಲಾಯಿತು. ಡಿಜಿಟಲ್ ಸುರಕ್ಷತಾ ಉಪಕ್ರಮಗಳ ಕುರಿತು ಹೆಚ್ಚು ತಿಳಿದುಕೊಳ್ಳಲು ಮತ್ತು ಅವರ ಹದಿಹರೆಯದ ಮಕ್ಕಳ ಸಾಮಾಜಿಕ ಜಾಲತಾಣಗಳ ಪ್ರಯಾಣದ ಅನುಭವಗಳ ಕುರಿತು ಚರ್ಚಿಸಲು ನಗರದ ಆಯ್ದ 10-15 ಶಾಲೆಗಳ ಆಯ್ದ ಶಿಕ್ಷಕರು ಮತ್ತು ಪೋಷಕರು ಪಾಲ್ಗೊಂಡಿದ್ದರು.

ಈ ವೇಳೆ ಇನ್‌ಸ್ಟಾಗ್ರಾಮ್‌ನ ಭಾರತದ ಸಾರ್ವಜನಿಕ ನೀತಿಯ ನಿರ್ದೇಶಕಿ ನತಾಶಾ ಜೋಗ್ ಮಾತನಾಡಿ, ನಮ್ಮ ಯುವ ಬಳಕೆದಾರರು ಆನ್‌ಲೈನ್‌ನಲ್ಲಿ ಅರ್ಥಪೂರ್ಣವಾಗಿ ಸಮಯವನ್ನು ಕಳೆಯುವುದರ ಜತೆಗೆ ವಿಶೇಷವಾಗಿ ಅವರು ಇಷ್ಟಪಡುವ ಎಲ್ಲಾ ಕೆಲಸಗಳನ್ನು ಮಾಡುತ್ತಲೇ ಸುರಕ್ಷಿತವಾಗಿರುವ ಅಗತ್ಯವನ್ನು ನಾವು ಗಮನಿಸಿದ್ದೇವೆ.

ಭಾರತದಾದ್ಯಂತ ಈ ಚರ್ಚಾ ಸರಣಿಯ ಮೂಲಕ ನಾವು ಶಿಕ್ಷಕರೊಂದಿಗೆ ಸಂವಹನ ನಡೆಸುತ್ತಲೇ, ಕುಟುಂಬದ ಆನ್‌ಲೈನ್ ಅಭ್ಯಾಸಗಳನ್ನು ನಿರ್ವಹಿಸಲು ಪೋಷಕರನ್ನು ಸಜ್ಜುಗೊಳಿಸುವ ದಾರಿಗಳನ್ನು ಹುಡುಕುತ್ತಿದ್ದೇವೆ. ಆ ಮೂಲಕ ಅವರ ಪಾಲಿಗೆ ಉತ್ತಮ ಎನಿಸುವ ರಕ್ಷಣಾ ವಿಧಾನ ಒದಗಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಬಳಕೆದಾರರ ಸುರಕ್ಷತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಮೆಟಾ ಕಳೆದ ವರ್ಷ ‘ಡಿಜಿಟಲ್ ಸುರಕ್ಷಾ ಶೃಂಗಸಭೆ’ ಅನ್ನು ನಡೆಸಿತ್ತು. ಆ ಮೂಲಕ ಯುವಜನತೆ ಮತ್ತು ಮಹಿಳೆಯರಿಗೆ ಸುರಕ್ಷಿತ ಮತ್ತು ಸಮತೋಲಿತ ಆನ್‌ಲೈನ್ ಅನುಭವವನ್ನು ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಇದರ ಜತೆಗೆ ಮೆಟಾ, ಆನ್‌ಲೈನ್ ಸುರಕ್ಷತೆ ಮತ್ತು ಡಿಜಿಟಲ್ ಪೌರತ್ವ ಕುರಿತು ಮಾಹಿತಿ, ಜ್ಞಾನ ಮತ್ತು ಶಿಕ್ಷಣದ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ (ಐಟಿಬಿಟಿ) ಇಲಾಖೆಯೊಂದಿಗೆ ಎರಡು ವರ್ಷಗಳ ಪಾಲುದಾರಿಕೆಯನ್ನು ಪ್ರಕಟಿಸಿದೆ.

ಕಳೆದ ಮೂರು ವರ್ಷಗಳಲ್ಲಿ, ಆನ್‌ಲೈನ್ ಸುರಕ್ಷತೆಯನ್ನು ಉತ್ತೇಜಿಸಲು ಮೆಟಾ 50ಕ್ಕೂ ಹೆಚ್ಚು ಸುರಕ್ಷತಾ ಪರಿಕರಗಳು ಮತ್ತು ಫೀಚರ್‌ಗಳನ್ನು ಬಿಡುಗಡೆ ಮಾಡಿದೆ. ಹದಿಹರೆಯದವರ ಸುರಕ್ಷತೆಗಾಗಿ ‘ನೈಟ್ ನಡ್ಜಸ್’ ಎಂಬ ಫೀಚರನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಇದು ತಡರಾತ್ರಿಯಲ್ಲಿ ಇನ್ ಸ್ಟಾಗ್ರಾಮ್ ಆಪ್ ಬಳಸುವಾಗ ಆ ಆಪ್ ಅನ್ನು ಷಟ್‌ಡೌನ್ ಮಾಡಲು ಬಳಕೆದಾರರಿಗೆ ಸೂಚಿಸುತ್ತದೆ. ಜತೆಗೆ ‘ಕ್ವೈಟ್ ಮೋಡ್’ ಫೀಚರ್ ಕೂಡ ಇದ್ದು, ಇದು ಹದಿಹರೆಯದ ಬಳಕೆದಾರರಿಗೆ ತಾವು ಆಪ್‌ನಲ್ಲಿ ಕಳೆಯುವ ಸಮಯದ ಮೇಲೆ ಮತ್ತು ಅವರು ಏನು ನೋಡುತ್ತಾರೆ ಎಂಬುದರ ಮೇಲೆ ಹೆಚ್ಚಿನ ನಿಯಂತ್ರಣವನ್ನು ಹೊಂದಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಇದಲ್ಲದೆ, ಇನ್ಸ್ಟಾಗ್ರಾಮ್‌ನ ಪೇರೆಂಟಲ್ ಸೂಪರ್ ವಿಷನ್ ಫೀಚರ್ (ಪೋಷಕರ ಮೇಲ್ವಿಚಾರಣಾ ವೈಶಿಷ್ಟ್ಯ) ಮೂಲಕ ಪೋಷಕರು ತಮ್ಮ ಮಕ್ಕಳು ಫಾಲೋ ಮಾಡುವ ಖಾತೆಗಳು, ಅವರ ಮಕ್ಕಳನ್ನು ಫಾಲೋ ಮಾಡುವ ಖಾತೆಗಳನ್ನು ವೀಕ್ಷಿಸಬಹುದು ಮತ್ತು ಅವರ ಆನ್‌ಲೈನ್ ಬಳಕೆಯಲ್ಲಿ ತಮ್ಮನ್ನೂ ಹೆಚ್ಚು ತೊಡಗಿಸಿಕೊಳ್ಳಬಹುದು. ಮೆಟಾದ ‘ಫ್ಯಾಮಿಲಿ ಸೆಂಟರ್’ ಫೀಚರ್ ಪ್ಲಾಟ್‌ಫಾರ್ಮ್‌ಗಳನ್ನು ಸುರಕ್ಷಿತವಾಗಿ ಬಳಸುವುದು ಹೇಗೆ ಎಂಬ ಮಾಹಿತಿಯನ್ನು ಹುಡುಕಲು ಪೋಷಕರು ಮತ್ತು ಹದಿಹರೆಯದವರಿಗೆ ಸಹ ಮಾಹಿತಿ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ಬೆಂಗಳೂರು

2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

2nd Puc Exam : ದ್ವಿತೀಯ ಪರೀಕ್ಷೆ 2ರ ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು, ಮರು ಮೌಲ್ಯಮಾಪನ, ಮರು ಎಣಿಕೆಗೆ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕಾಗಿ ದಿನಾಂಕಗಳನ್ನು ಪ್ರಕಟಿಸಲಾಗಿದೆ.

VISTARANEWS.COM


on

By

2nd Pux Exam
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಏಪ್ರಿಲ್ 29 ರಿಂದ ಮೇ 16ರವರೆಗೆ ನಡೆದಿದ್ದ 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ (2nd Puc Exam) ಫಲಿತಾಂಶ ಪ್ರಕಟಗೊಂಡಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ 2ರ ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು, ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಗಾಗಿ ಮೇ 21ರಿಂದ 23ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಡ್ಡಾಯವಾಗಿ ಸ್ಕ್ಯಾನಿಂಗ್‌ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಮರುಮೌಲ್ಯಮಾಪನ ಹಾಗೂ ಮರುಎಣಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅಂತಹವರು ಮೇ 22ರಿಂದ 25ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಯನ್ನು Kseab.karnataka.gov.in ವೆಬ್‌ಸೈಟ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಡೌನ್‌ಲೋಡ್‌ ಮಾಡಿಕೊಳ್ಳಲು ಮೇ 22ರಿಂದ 24ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನಿಂಗ್‌ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಶುಲ್ಕ ನಿಗದಿ ಮಾಡಲಾಗಿದೆ. ಮರು ಮೌಲ್ಯಮಾಪನದ ಶುಲ್ಕದ ಪ್ರತಿ ವಿಷಯಕ್ಕೆ 1,670 ರೂ. ಇದೆ. ಇನ್ನೂ ಯಾವುದೇ ಅಭ್ಯರ್ಥಿಗಳು ಪರೀಕ್ಷೆ 3ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ. ಮರು ಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ 2ರ ಅಂತಿಮ ಅಂಕಗಳೆಂದು ಪರಿಗಣಿಸಲಾಗುತ್ತದೆ. ಇನ್ನೂ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಯ ಫಲಿತಾಂಶವನ್ನು , ಮಂಡಲಿಯ ವೆಬ್‌ಸೈಟ್‌ Kseab.karnataka.gov.in ಪ್ರಕಟಿಸಲಾಗುತ್ತದೆ. ಅಂಕಗಳ ಮರುಎಣಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: 2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ; ನೋಂದಣಿಗೂ ಡೇಟ್‌ ಫಿಕ್ಸ್‌

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (2nd PUC Exam) 3ನೇ ಪೂರಕ ಪರೀಕ್ಷೆಯು ನಡೆಯಲಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್‌ 24ರಿಂದ ಜುಲೈ 5ರವರೆಗೆ ಪರೀಕ್ಷೆಯು ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ


ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಪರೀಕ್ಷೆ -3ಕ್ಕೆ ನೋಂದಾಯಿಸಿಕೊಳ್ಳಲು ಹೀಗೆ ಮಾಡಿ

2023-24ನೇ ಸಾಲಿನ ಫಲಿತಾಂಶ ಪೂರ್ಣಗೊಂಡಿರದ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹೊಸಬರು ಮತ್ತು ಖಾಸಗಿಯಾಗಿ ನೋಂದಾವಣೆಯಾದ ವಿದ್ಯಾರ್ಥಿಗಳು ಮಂಡಲಿಯ ವೆಬ್‌ಸೈಟ್‌ ಮೂಲಕ ನೇರವಾಗಿ ಪರೀಕ್ಷೆ 3ಕ್ಕೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಮೇ 23ರಿಂದ 28ರವರಗೆ ದಂಡ ರಹಿತ ನೋಂದಣಿ ಮಾಡಿಕೊಳ್ಳಬಹುದು. ಒಂದು ವೇಳೆ ಮೇ 28ರೊಳಗೆ ಅರ್ಜಿ ಸಲ್ಲಿಸದೇ ಹೋದರೆ ಮೇ 29ರಿಂದ 30ರವರೆಗೆ ದಂಡ ಸಹಿತ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಕೆಎಸ್‌ಇಎಬಿ ತಂತ್ರಾಂಶದಲ್ಲಿ ಸಲ್ಲಿಸಬೇಕು. ಮೇ 23ರಿಂದ ಮ28ರ ಒಳಗಾಗಿ ಇಂದೀಕರಿಸಬೇಕು. ಕೊನೆ ದಿನವನ್ನು ಮೀರಿದರೆ ದಂಡ ಸಹಿತ ಮೇ 29ರಿಂದ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.

2024ರ ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕವನ್ನು ನಿಗಧಿಸಲಾಗಿದೆ. ಒಂದು ವಿಷಯಕ್ಕೆ 140 ರೂ ಹಾಗೂ ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400 ರೂ. ನಿಗದಿ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ 3ಕ್ಕೆ ಮೇ 24ರಿಂದ 28ರವರೆಗೆ ತಮ್ಮ ಕಾಲೇಜು ಅಥವಾ KSEAB ಪೋರ್ಟಲ್‌ನಲ್ಲಿ ಆನ್‌ಲೈನ್‌ ಮುಖಾಂತರ ನೋಂದಾಯಿಸಿಕೊಳ್ಳಬಹುದು. ಇನ್ನೂ ಫಲಿತಾಂಶ ತಿರಸ್ಕರಣಾ ಪದ್ಧತಿಯನ್ನು ರದ್ದುಪಡಿಸಲಾಗಿದೆ. 2023ರ ನಂತರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ 3ರಲ್ಲಿ ಹಾಜರಾಗಬೇಕಾದರೆ ಮಂಡಲಿಯು ಒದಗಿಸಿದ ಫಲಿತಾಂಶದ ಪಟ್ಟಿಯ ಆಧಾರದ ಮೇಲೆ ಶುಲ್ಕವನ್ನು ಭರಿಸಬೇಕಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

2nd PUC Exam : ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ; ನೋಂದಣಿಗೂ ಡೇಟ್‌ ಫಿಕ್ಸ್‌

2nd PUC Exam : ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶದ ಬೆನ್ನಲ್ಲೇ ಪರೀಕ್ಷೆ 3ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್‌ 24ರಿಂದ ಜುಲೈ 5ರವರಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷೆ 3ಕ್ಕೆ ಮೇ 24ರಿಂದ 28ರವರೆಗೆ ತಮ್ಮ ಕಾಲೇಜು ಅಥವಾ KSEAB ಪೋರ್ಟಲ್‌ನಲ್ಲಿ ಆನ್‌ಲೈನ್‌ ಮುಖಾಂತರ ನೋಂದಾಯಿಸಿಕೊಳ್ಳಬಹುದು.

VISTARANEWS.COM


on

By

2nd Puc Exam
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (2nd PUC Exam) 3ನೇ ಪೂರಕ ಪರೀಕ್ಷೆಯು ನಡೆಯಲಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್‌ 24ರಿಂದ ಜುಲೈ 5ರವರೆಗೆ ಪರೀಕ್ಷೆಯು ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ


ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಇದನ್ನೂ ಓದಿ: 2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

ಪರೀಕ್ಷೆ -3ಕ್ಕೆ ನೋಂದಾಯಿಸಿಕೊಳ್ಳಲು ಹೀಗೆ ಮಾಡಿ

2023-24ನೇ ಸಾಲಿನ ಫಲಿತಾಂಶ ಪೂರ್ಣಗೊಂಡಿರದ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹೊಸಬರು ಮತ್ತು ಖಾಸಗಿಯಾಗಿ ನೋಂದಾವಣೆಯಾದ ವಿದ್ಯಾರ್ಥಿಗಳು ಮಂಡಲಿಯ ವೆಬ್‌ಸೈಟ್‌ ಮೂಲಕ ನೇರವಾಗಿ ಪರೀಕ್ಷೆ 3ಕ್ಕೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಮೇ 23ರಿಂದ 28ರವರಗೆ ದಂಡ ರಹಿತ ನೋಂದಣಿ ಮಾಡಿಕೊಳ್ಳಬಹುದು. ಒಂದು ವೇಳೆ ಮೇ 28ರೊಳಗೆ ಅರ್ಜಿ ಸಲ್ಲಿಸದೇ ಹೋದರೆ ಮೇ 29ರಿಂದ 30ರವರೆಗೆ ದಂಡ ಸಹಿತ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಕೆಎಸ್‌ಇಎಬಿ ತಂತ್ರಾಂಶದಲ್ಲಿ ಸಲ್ಲಿಸಬೇಕು. ಮೇ 23ರಿಂದ ಮ28ರ ಒಳಗಾಗಿ ಇಂದೀಕರಿಸಬೇಕು. ಕೊನೆ ದಿನವನ್ನು ಮೀರಿದರೆ ದಂಡ ಸಹಿತ ಮೇ 29ರಿಂದ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.

2024ರ ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕವನ್ನು ನಿಗಧಿಸಲಾಗಿದೆ. ಒಂದು ವಿಷಯಕ್ಕೆ 140 ರೂ ಹಾಗೂ ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಗಳಿಗೆ 400 ರೂ. ನಿಗದಿ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ 3ಕ್ಕೆ ಮೇ 24ರಿಂದ 28ರವರೆಗೆ ತಮ್ಮ ಕಾಲೇಜು ಅಥವಾ KSEAB ಪೋರ್ಟಲ್‌ನಲ್ಲಿ ಆನ್‌ಲೈನ್‌ ಮುಖಾಂತರ ನೋಂದಾಯಿಸಿಕೊಳ್ಳಬಹುದು. ಇನ್ನೂ ಫಲಿತಾಂಶ ತಿರಸ್ಕರಣಾ ಪದ್ಧತಿಯನ್ನು ರದ್ದುಪಡಿಸಲಾಗಿದೆ. 2023ರ ನಂತರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ 3ರಲ್ಲಿ ಹಾಜರಾಗಬೇಕಾದರೆ ಮಂಡಲಿಯು ಒದಗಿಸಿದ ಫಲಿತಾಂಶದ ಪಟ್ಟಿಯ ಆಧಾರದ ಮೇಲೆ ಶುಲ್ಕವನ್ನು ಭರಿಸಬೇಕಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bomb Threat
ಪ್ರಮುಖ ಸುದ್ದಿ17 mins ago

Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕರ್ನಾಟಕ24 mins ago

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

IPL 2024
ಕ್ರಿಕೆಟ್39 mins ago

IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

Star Cricket Theam Fashion
ಫ್ಯಾಷನ್46 mins ago

Star Cricket Theme Fashion: ಕ್ರಿಕೆಟ್‌ ಥೀಮ್‌ನಲ್ಲಿ ಬೆರಗುಗೊಳಿಸಿದ ನಟಿ ಜಾಹ್ನವಿ ಕಪೂರ್ ಫ್ಯಾಷನ್‌!

Harish Poonja Govt responsible for disaster if MLA Harish Poonja is arrested says BY Vijayendra
ರಾಜಕೀಯ47 mins ago

Harish Poonja: ಶಾಸಕ ಹರೀಶ್‌ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಗುಡುಗಿದ ವಿಜಯೇಂದ್ರ

Virat kohli
ಕ್ರೀಡೆ1 hour ago

IPL 2024 : ಕೊಹ್ಲಿಯನ್ನು ಹೊಗಳಿ ಆರ್​​ಸಿಬಿಗೆ ವಿದಾಯ ಹೇಳಿದ ವಿಜಯ್​ ಮಲ್ಯ

WhatsApp Update
ತಂತ್ರಜ್ಞಾನ1 hour ago

WhatsApp Update: ವಾಟ್ಸ್ ಆಪ್ ಬಳಕೆದಾರರಿಗೆ ಸಂತಸದ ಸುದ್ದಿ; ಮೆಸೆಜ್‌ಗೆ ಸಂಬಂಧಿಸಿ ಮಹತ್ವದ ಅಪ್‌ಡೇಟ್‌!

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!
ಆರೋಗ್ಯ1 hour ago

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

Blink Movie in half centuru with good in OTT
ಸ್ಯಾಂಡಲ್ ವುಡ್1 hour ago

Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Money Guide
ಮನಿ-ಗೈಡ್1 hour ago

Money Guide: ಜನಪ್ರಿಯವಾಗುತ್ತಿದೆ ʼಈಗ ಖರೀದಿಸಿ, ನಂತರ ಪಾವತಿಸಿʼ ಆಯ್ಕೆ: ಏನಿದು ಬಿಎನ್‌ಪಿಎಲ್‌? ಬಳಕೆ ಹೇಗೆ? ಇಲ್ಲಿದೆ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌