2nd PUC Result: ಸ್ಕೋರ್‌ ಕಡಿಮೆಯಾಗಿದೆಯಾ? ಚಿಂತೆ ಬೇಡ; ಇನ್ನೆರಡು ಪರೀಕ್ಷೆ ಇದೆ! ಇಲ್ಲಿದೆ ವಿವರ - Vistara News

ಶಿಕ್ಷಣ

2nd PUC Result: ಸ್ಕೋರ್‌ ಕಡಿಮೆಯಾಗಿದೆಯಾ? ಚಿಂತೆ ಬೇಡ; ಇನ್ನೆರಡು ಪರೀಕ್ಷೆ ಇದೆ! ಇಲ್ಲಿದೆ ವಿವರ

2nd PUC Result: ದ್ವಿತೀಯ ಪಿಯು ಪರೀಕ್ಷೆ 2 ಬರೆಯಲು ಇಚ್ಛಿಸುವವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರೆ ಅದರ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಕೂಡಲೇ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆದರೆ, ಯಾವುದೇ ಸಂದರ್ಭದಲ್ಲಿ “ಕರ್ನಾಟಕ ಪ್ರಿ-ಯೂನಿವರ್ಸಿಟಿ ಕೋರ್ಸ್ ಎಸ್‌ಎಲ್‌ಪಿಇ 1997, 29 (ಎ)” ಪ್ರಕಾರ ಈ ಹಿಂದೆ ಗಳಿಸಿದ ಅಂಕಗಳನ್ನು ಮರುಮೌಲ್ಯಮಾಪನದ ನಂತರ ಮರುಸ್ಥಾಪಿಸಲು ಸಾಧ್ಯವಿಲ್ಲ. ಮರು ಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ-1ರ ಅಂಕಗಳೆಂದು ಪರಿಗಣಿಸಲಾಗುವುದು. ಇನ್ನು ಮರು ಮೌಲ್ಯಮಾಪಕರ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ಯಾವುದೇ ಮೇಲ್ಮನವಿಗಳಿಗೆ ಅವಕಾಶವಿಲ್ಲ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಪ್ರಕಟವಾಗಿದೆ. ಕೆಲವರು ಅನುತ್ತೀರ್ಣರಾಗಿದ್ದಾರೆ. ಮತ್ತೆ ಕೆಲವರಿಗೆ ಅಂಕಗಳು ನಿರೀಕ್ಷೆಯಂತೆ ಬಂದಿರುವುದಿಲ್ಲ. ಹಾಗಂತ ಚಿಂತೆ ಮಾಡುವ ಅವಶ್ಯಕತೆ ಇಲ್ಲ. ನಿಮಗಾಗಿ ಇನ್ನೂ 2 ಪರೀಕ್ಷೆ ಕಾಯುತ್ತಿದೆ. ಇನ್ನೆರಡು ಬಾರಿ ಪರೀಕ್ಷೆಯನ್ನು ಬರೆಯಬಹುದಾಗಿದ್ದು, ಚಿಂತೆ ಬಿಟ್ಟು ಪರೀಕ್ಷೆಯನ್ನು ಕಟ್ಟಿ. ಪರೀಕ್ಷೆ 2ಕ್ಕೆ ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದೆ.

ದ್ವಿತೀಯ ಪಿಯು ಪರೀಕ್ಷೆ 2 ಬರೆಯಲು ಇಚ್ಛಿಸುವವರು ಏಪ್ರಿಲ್ 10 ರಿಂದ 16 ರವರೆಗೆ ಅರ್ಜಿ ಸಲ್ಲಿಸಬಹುದು. ಕಾಲೇಜಿನಲ್ಲಿ ಪ್ರಾಂಶುಪಾಲರ ಸಹಾಯದೊಂದಿಗೆ ಅಥವಾ ವೆಬ್‌ಸೈಟ್‌ನಲ್ಲಿ ನೇರವಾಗಿ ಪರೀಕ್ಷೆ 2ಕ್ಕೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇದು ದಂಡ ರಹಿತ ಅವಕಾಶವಾಗಿದೆ. ಇನ್ನು ಇದರ ನಂತರ ದಂಡ ಸಹಿತವಾಗಿ ಏಪ್ರಿಲ್‌ 17 ಮತ್ತು 18ಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಮರು ಮೌಲ್ಯಮಾಪನ ಫಲಿತಾಂಶಕ್ಕೆ ಕಾಯಬೇಕಿಲ್ಲ

ದ್ವಿತೀಯ ಪಿಯು ಪರೀಕ್ಷೆ 2 ಬರೆಯಲು ಇಚ್ಛಿಸುವವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರೆ ಅದರ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಕೂಡಲೇ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆದರೆ, ಯಾವುದೇ ಸಂದರ್ಭದಲ್ಲಿ “ಕರ್ನಾಟಕ ಪ್ರಿ-ಯೂನಿವರ್ಸಿಟಿ ಕೋರ್ಸ್ ಎಸ್‌ಎಲ್‌ಪಿಇ 1997, 29 (ಎ)” ಪ್ರಕಾರ ಈ ಹಿಂದೆ ಗಳಿಸಿದ ಅಂಕಗಳನ್ನು ಮರುಮೌಲ್ಯಮಾಪನದ ನಂತರ ಮರುಸ್ಥಾಪಿಸಲು ಸಾಧ್ಯವಿಲ್ಲ. ಮರು ಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ-1ರ ಅಂಕಗಳೆಂದು ಪರಿಗಣಿಸಲಾಗುವುದು. ಇನ್ನು ಮರು ಮೌಲ್ಯಮಾಪಕರ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ಯಾವುದೇ ಮೇಲ್ಮನವಿಗಳಿಗೆ ಅವಕಾಶವಿಲ್ಲ.

ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ ಮೂಲಕ ನೋಡಿಕೊಳ್ಳಬಹುದು. ಇನ್ನು ಅಂಕಗಳ ಮರು ಎಣಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ.

2ನೇ ಪರೀಕ್ಷೆಗೆ ಎಷ್ಟು ಶುಲ್ಕ?

ಪರೀಕ್ಷೆ 2 ಅನ್ನು ಬರೆಯುವವರಿಗೆ ಒಂದು ವಿಷಯಕ್ಕೆ 140 ರೂಪಾಯಿ ಶುಲ್ಕವನ್ನು ನಿಗದಿ ಮಾಡಿದ್ದರೆ, ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಕ್ಕೆ 400 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ.

ಪರೀಕ್ಷೆ 2ರ ನಿಯಮಗಳೇನು?

  1. ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ದಿನಾಂಕ: 10-04-2024 ರಿಂದ 16-04-2024ರವರೆಗೆ ತಮ್ಮ ಕಾಲೇಜು ಅಥವಾ ಕೆಎಸ್‌ಇಎಬಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖಾಂತರ ನೋಂದಾಯಿಸಿಕೊಳ್ಳಬಹುದು.
  2. 2023ರ ನಂತರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ- 2ರ ಪರೀಕ್ಷೆಯನ್ನು ತೆಗೆದುಕೊಳ್ಳಲು, ಮಂಡಳಿಯು ಒದಗಿಸಿದ ಫಲಿತಾಂಶದ ಪಟ್ಟಿಯ ಆಧಾರದ ಮೇಲೆ ಶುಲ್ಕವನ್ನು ಭರಿಸಿಕೊಳ್ಳಬಹುದು.
  3. ಪ್ರಾಂಶುಪಾಲರು 2022ನೇ ಸಾಲಿನ ಅಥವಾ ಹಿಂದಿನ ವರ್ಷದ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿಯನ್ನು ‘MCA’ ಆಧಾರದ ಮೇಲೆ ಮಾತ್ರ ಸ್ವೀಕರಿಸಬೇಕು.
  4. ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ, ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.
  5. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಸಹಾಯವಾಣಿ ಸಂಖ್ಯೆಗಳು: 080- 233100 & 080-23310076ಕ್ಕೆ ಕರೆ ಮಾಡಿ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದು.

ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆಗೆ ಈಗಲೇ ಅರ್ಜಿ ಸಲ್ಲಿಸಿ!

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು (2nd PUC Result) ಬುಧವಾರ ಪ್ರಕಟವಾಗಿದೆ. ಅಧಿಕೃತ ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳ್ಳಬಹುದಾಗಿದೆ. ಇದೇ ವೇಳೆ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್‌ಲೋಡ್‌ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
  • ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
  • ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ದ್ವಿತೀಯ ಪಿಯುಸಿಯಲ್ಲಿ ಶೇ.84.59 ಮಂದಿ ಪಾಸ್;‌ ದ.ಕ, ಉಡುಪಿ ಮೊದಲೆರಡು ಸ್ಥಾನ

ಪರೀಕ್ಷೆ ಬರೆದವರಲ್ಲಿ ಒಟ್ಟಾರೆ ಶೇಕಡ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಹೊಸದಾಗಿ ಪರೀಕ್ಷೆ ಬರೆದವರು ಶೇ.84.59 ಫಲಿತಾಂಶ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಎಂದಿನಂತೆ ಮೊದಲ ಸ್ಥಾನದಲ್ಲಿದ್ದು, ಶೇ.97.37 ಫಲಿತಾಂಶ ಪಡೆದುಕೊಂಡಿದೆ. ನಂತರದ ಸ್ಥಾನದಲ್ಲಿ ಉಡುಪಿ ಇದ್ದು, ಶೇ.96.80 ಫಲಿತಾಂಶ ಗಳಿಸಿದೆ. ಮೂರನೇ ಹಾಗೂ ನಾಲ್ಕನೇ ಸ್ಥಾನಗಳಲ್ಲಿ ವಿಜಯಪುರ (ಶೇ.94.89) ಹಾಗೂ ಉತ್ತರ ಕನ್ನಡ (ಶೇ.92.51) ಇವೆ. ಕೊನೆಯ ಸ್ಥಾನದಲ್ಲಿ ಗದಗ (ಶೇ.72.86) ಪಡೆದಿದೆ. ಬೆಂಗಳೂರು ಉತ್ತರ ಶೇ.88.67 ಹಾಗೂ ಬೆಂಗಳೂರು ದಕ್ಷಿಣ ಶೇ.89.57 ಫಲಿತಾಂಶ ದಾಖಲಿಸಿವೆ.

ಇದನ್ನೂ ಓದಿ: 2nd PUC Result: ದ್ವಿತೀಯ ಪಿಯುಸಿಯಲ್ಲಿ ಶೇ.84.59 ಮಂದಿ ಪಾಸ್;‌ ದ.ಕ, ಉಡುಪಿ ಮೊದಲೆರಡು ಸ್ಥಾನ; ಫಲಿತಾಂಶ ಇಲ್ಲಿದೆ ನೋಡಿ

ಗಣಿತದಲ್ಲಿ 6960 ಮಂದಿ, ಜೀವಶಾಸ್ತ್ರದಲ್ಲಿ 5925 ಮಂದಿ, 2570 ಮಂದಿ ಕನ್ನಡದಲ್ಲಿ , 1499 ಮಂದಿ ಸಂಸ್ಕೃತದಲ್ಲಿ , ಅರ್ಥಶಾಸ್ತ್ರದಲ್ಲಿ 1403 ಮಂದಿ, ಗಣಕ ವಿಜ್ಞಾನದಲ್ಲಿ 2661 ಮಂದಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಮನಗರ

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

Govt School : ಶಾಲೆಗೆ ಬರುವ ಬಾಲಕಿಯರು ಎರಡು ಜಡೆ ಹಾಕಿಲ್ಲ ಎಂದು ಅತಿಥಿ ಶಿಕ್ಷಕರು ಮೂವರ ತಲೆಕೂದಲನ್ನೇ (Ramanagar News) ಕತ್ತರಿಸಿದ್ದಾರೆ. ಶಿಕ್ಷಕರ ಕಾರ್ಯಕ್ಕೆ ಪೋಷಕರು ಕಿಡಿಕಾರಿದ್ದಾರೆ. ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

By

ramanagara news
Koo

ರಾಮನಗರ: ಸರ್ಕಾರಿ ಶಾಲೆಯಲ್ಲಿ (Ramanagar News) ಎರಡು ಜಡೆ ಹಾಕಿಲ್ಲವೆಂದು ಶಿಕ್ಷಕರಿಬ್ಬರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ್ದಾರೆ. ಶಿಕ್ಷಕರ ನಡೆಗೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲವೆಂದು ಸಿಟ್ಟಾದ ಇಬ್ಬರು ಶಿಕ್ಷಕರು ಮೂವರು ವಿದ್ಯಾರ್ಥಿನಿಯರಿಗೆ ಕೂದಲು ಕತ್ತರಿಸಿದ್ದಾರೆ. ಹೆಣ್ಮಕ್ಕಳ ತಲೆಗೂದಲು ಕಟ್ ಮಾಡುವುದು ಯಾವ ಸಂಸ್ಕೃತಿ ಸ್ವಾಮಿ ಎಂದು ಪೋಷಕರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಪವಿತ್ರ ಹಾಗೂ ಶಿವಕುಮಾರ್ ಎಂಬ ಶಿಕ್ಷಕರು ವಿದ್ಯಾರ್ಥಿನಿಯರ ಮೇಲೆ ದರ್ಪ ತೋರಿದ್ದಾರೆ. ವಿದ್ಯಾರ್ಥಿನಿಯರು ಪ್ರತಿನಿತ್ಯ ಒಂದು ಜಡೆ ಹಾಕಿಕೊಂಡು ಬರುತ್ತಿದ್ದರು. ಹಾಗಾಗಿ ಕೂದಲು ಕಟ್ ಮಾಡಿದ್ದವಿ ಎಂದು ಸಮಜಾಯಿಷಿಯನ್ನು ನೀಡಿದ್ದಾರೆ. ಪೋಷಕರ ಎದುರು ಘಟನೆ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Electric shock : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದವನಿಗೆ ಕರೆಂಟ್‌ ಶಾಕ್‌; ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣ

ಅತಿಥಿ ಶಿಕ್ಷಕರ ತಲೆದಂಡ

ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ್ದ ಅತಿಥಿ ಶಿಕ್ಷಕರಿಗೆ ತಲೆದಂಡವಾಗಿದೆ. ಇಬ್ಬರು ಶಿಕ್ಷಕರು ಅಮಾನತು ಮಾಡುವಂತೆ ಶಿಫಾರಸು ಮಾಡಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಮರಿಗೌಡ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಘಟನೆ ಬಗ್ಗೆ ಮೇಲಾಧಿಕಾರಿಗೆ ಪತ್ರ ಬರೆದು, ಅತಿಥಿ ಶಿಕ್ಷಕರಾದ ಶಿವಕುಮಾರ್ ಹಾಗೂ ಪವಿತ್ರ ಅವರಿಗೆ ಅಮಾನತು ಆದೇಶಕ್ಕೆ ರಾಮನಗರ ಜಿಲ್ಲಾ ಡಿಡಿಪಿಐ ಬಸವರಾಜೇಗೌಡಗೆ ವರದಿ ಸಲ್ಲಿಸಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ವಿವರಣೆ ಮೂಲಕ ವರದಿ ಸಲ್ಲಿಸಿದ್ದು, ಕೂಡಲೇ ಇಬ್ಬರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

UGCET 2024 ; ಮೊದಲೇ ಸುತ್ತಿನ ಸೀಟು ಹಂಚಿಕೆ ಚಟುವಟಿಕೆ ಶುರುವಾಗಿದ್ದು, ಯುಜಿಸಿಇಟಿ- 2024ರ ಆಪ್ಶನ್ ಎಂಟ್ರಿ ಮಾಡಲು 7 ದಿನಗಳ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ.

VISTARANEWS.COM


on

By

UGCET 2024 seat allotment process begins Only a few days left for the option to enter
Koo

ಬೆಂಗಳೂರು: ಯುಜಿಸಿಇಟಿ-24ರ (UGCET 2024) ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಏಳು ದಿನ ಅವಕಾಶ ನೀಡಿತ್ತು. ಅದರಲ್ಲಿ ಐದು ದಿನಗಳು ಈಗಾಗಲೇ ಮುಗಿದಿದ್ದು, ಆಪ್ಶನ್ ಎಂಟ್ರಿ ಮಾಡಲು ಇನ್ನೂ ಎರಡು ದಿನಗಳು ಮಾತ್ರ ಬಾಕಿ ಇದೆ. ಜು.29 ಕೊನೆಯ ದಿನ.

ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೆ ಆಪ್ಶನ್ (ಆಯ್ಕೆ) ಗಳನ್ನು ದಾಖಲಿಸಲು ಜುಲೈ 23ರಿಂದ ಪ್ರಕ್ರಿಯೆ ಪ್ರಾರಂಭಿಸಲಾಗಿತ್ತು. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಇಚ್ಛೆಗಳನ್ನು ದಾಖಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದರು.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿತ್ತು. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬಹುದಾಗಿದೆ.

ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್ ನೀಡಲಾಗಿದ್ದು, ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಆಯ್ಕೆ/ಇಚ್ಛೆಗಳ ದಾಖಲೆಗೆ ನಿಗದಿಪಡಿಸಿದ ಕೊನೆ ದಿನದ ನಂತರ ಮೂರು ದಿನಗಳ ಬಳಿಕ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಅದರ ನಂತರ ಮೂರು ದಿನ ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ‌ ನೀಡಲಾಗುತ್ತದೆ. ಮೂರು ದಿನಗಳ ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ
-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಇಂದಿಗೆ ಐದು ದಿನಗಳು ಮುಗಿದಿದ್ದು, ಇನ್ನೆರಡು ದಿನಗಳು ಮಾತ್ರ ಬಾಕಿ ಇವೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ವೈದ್ಯಕೀಯ ಕೋರ್ಸುಗಳು:

ರಾಷ್ಟ್ರೀಯ ವೈದ್ಯಕೀಯ ಮಂಡಳಿಯು ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಅದರಂತೆ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಆಪ್ಶನ್‌ಗಳನ್ನು ಸೇರಿಸುವ ಬಗ್ಗೆ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಆನ್‌ಲೈನ್‌ ವೆರಿಫಿಕೇಶನ್‌

ಯುಜಿಸಿಇಟಿ-2024ಕ್ಕೆ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿಯಲ್ಲಿ ನಮೂದಿಸಿದ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್‌ ಮೂಲಕ ಪರಿಶೀಲನೆ ಮಾಡಿ, ಪ್ರಾಧಿಕಾರದ ವೆಬ್‌ಸೈಟ್‌ನ ಲಿಂಕ್‌ನಲ್ಲಿ ಪರಿಶೀಲಿಸಿಕೊಳ್ಳಲು ಜು.29ರಂದು ಅಭ್ಯರ್ಥಿಗಳಿಗೆ ಸೂಚಿಸಲಾಗಿತ್ತು. ಜತೆಗೆ ಅರ್ಜಿಯಲ್ಲಿನ ವಿವರಗಳು ತಪ್ಪಾಗಿದ್ದಲ್ಲಿ ಸರಿಪಡಿಸಿಕೊಳ್ಳಲು ಅಂತಿಮ ಅವಕಾಶ ನೀಡಿ ಆಫ್‌ಲೈನ್‌ ದಾಖಲೆಗಳ ಪರಿಶೀಲನೆಗೆ ಕಳೆದ ಜು.4ರಿಂದ 6ವರೆಗೆ ಅವಕಾಶ ನೀಡಲಾಗಿತ್ತು. ಬಳಿಕ ಜು.18ರಂದು ವೆರಿಫಿಕೇಶನ್‌ ಸ್ಲಿಪ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಿಂಕ್‌ ನೀಡಲಾಗಿತ್ತು. ಇದನ್ನೂ ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಇಂದೇ ಕೊನೆ ದಿನ

ಡಿಸಿಇಟಿ-2024 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಅಛಿ ಆಯ್ಕೆಗೆ, ಚಲನ್ ಡೌನ್‌ಲೋಡ್, ಶುಲ್ಕ ಪಾವತಿ ಮತ್ತು ಕಾಲೇಜಿನಲ್ಲಿ ಪ್ರವೇಶ ಪಡೆಯಲು ದಿನಾಂಕವನ್ನು ವಿಸ್ತರಿಸಲಾಗಿತ್ತು. ಜತೆಗೆ ದಿನಾಂಕಗಳನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿತ್ತು.

ಅದರಂತೆ ಅಛಿ ಗಳನ್ನು ಆಯ್ಕೆ ಮಾಡಲು ನಿನ್ನೆ 26ರ ಮಧ್ಯಾಹ್ನ 1ರ ವರೆಗೆ ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಳ್ಳಲು 2 ರವರೆಗೆ, ಶುಲ್ಕ ಪಾವತಿ ಮಾಡಲು ಸಂಜೆ 4 ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ದಿನ ಅಂದರೆ 27ರ ಮಧ್ಯಾಹ್ನ 1ರ ವರೆಗೆ ಅಛಿ-1 ಆಯ್ಕೆ ಮಾಡಿ, ಶುಲ್ಕ ಪಾವತಿಸಿ ಮತ್ತು ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಸಂಬಂಧಿಸಿದ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಂಜೆ 4.30 ರವರೆಗೆ ಅವಕಾಶವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News: ಸ್ಕಾಯ್ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಿದ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ

Bengaluru News: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು ಪರಿಚಯಿಸಿದೆ.

VISTARANEWS.COM


on

Apollo International Public School introduced Sqay samara kale as part of the syllabus
Koo

ಬೆಂಗಳೂರು: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು (Bengaluru News) ಪರಿಚಯಿಸಿದೆ.

ಗುರುವಾರ ಹಮ್ಮಿಕೊಳ್ಳಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಶ್ಮೀರ ಮೂಲದ ಈ ಸಮರ ಕಲೆಗೆ ಚಾಲನೆ ನೀಡಲಾಯಿತು.

ಶಾಲೆಯ ಪ್ರಾಚಾರ್ಯೆ ಡಾ. ವೇದವತಿ ಬಿ.ಎ. ಮಾತನಾಡಿ, ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ನೆರವಾಗುವ ಈ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಲಾಗಿದೆ. ಸ್ಕಾಯ್ ಸಮರ ಕಲೆಯ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಅವರಲ್ಲಿ ಹೆಮ್ಮೆ, ಶಿಸ್ತು ಹಾಗೂ ಸ್ವಯಂ ಜಾಗೃತಿಯನ್ನು ಮೂಡಿಸುವುದು ಇದರ ಮೂಲ ಉದ್ದೇಶ. ಈ ಪುರಾತನ ಸಮರ ಕಲೆಗೆ ಪ್ರೋತ್ಸಾಹ ನೀಡುವ ಮೂಲಕ ನಮ್ಮ ಶಾಲೆಯ ಮತ್ತು ಮಕ್ಕಳ ಬೆಳವಣಿಗೆ ಸಹಕಾರಿಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರ್ಯಕ್ರಮದಲ್ಲಿ ಭಾರತೀಯ ಸ್ಕಾಯ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಮೊಹಮದ್ ಅಲಿ, ಅಪೋಲೋ ನ್ಯಾಷನಲ್ ಪಬ್ಲಿಕ್ ಶಾಲೆಯ ಉಪಾಧ್ಯಕ್ಷೆ ಐಶ್ವರ್ಯ ಡಿಕೆಎಸ್ ಹೆಗ್ಡೆ, ಅಂತಾರಾಷ್ಟ್ರೀಯ ಸ್ವರ್ಣ ಪದಕ ವಿಜೇತೆ ಸಾನಿಯಾ ಸುಭಾಷ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಈ ವೇಳೆ ಸ್ಕಾಯ್ ಪಟುಗಳಾದ ಸಾನಿಯಾ ಸುಭಾಷ್ ಹಾಗೂ ದಿವ್ಯಾ ಅವರು ಈ ಕಲೆಯ ಕೌಶಲ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ರಂಜಿಸಿದರು.

Continue Reading

ದೇಶ

NEET UG 2024: ಕೊನೆಗೂ ನೀಟ್‌ ಫೈನಲ್ ಫಲಿತಾಂಶ ಪ್ರಕಟ; ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆ, ಇಲ್ಲಿದೆ ಪಟ್ಟಿ

NEET UG 2024: ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶ ಹೇಗೆ ನೋಡುವುದು ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

NEET UG 2024
Koo

ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಶುಕ್ರವಾರ (ಜುಲೈ 26) ನೀಟ್‌ ಯುಜಿ 2024 (NEET UG 2024) ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಕೊನೆಗೂ ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ನೀಟ್‌ ಕೌನ್ಸೆಲಿಂಗ್‌ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದುಬಂದಿದೆ.

ಇನ್ನು ಪರಿಷ್ಕೃತ ಫಲಿತಾಂಶದ ಬಳಿಕ ದೇಶದ ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆಯಾಗಿದೆ. ಜೂನ್‌ 4ರಂದು ಪ್ರಕಟವಾದ ಫಲಿತಾಂಶದಲ್ಲಿ 67 ಮಂದಿ ಟಾಪ್‌ ಎನಿಸಿದ್ದರು. ಮೃದುಲ್‌ ಮಾನ್ಯ ಆನಂದ್‌, ಆಯುಷ್‌ ನೌಗ್ರೈಯಾ, ಮಜೀನ್‌ ಮಂಜೂರ್‌, ಪ್ರಚಿತಾ, ಸೌರವ್‌, ದಿವ್ಯಾಂಶ್‌, ಗನ್ಮಯ್‌ ಗಾರ್ಗ್‌, ಅರ್ಘ್ಯದೀಪ್‌ ದತ್ತ, ಶುಭಂ ಸೇನ್‌ಗುಪ್ತಾ, ಆರ್ಯನ್‌ ಯಾದವ್‌, ಪಾಲಾಂಶ ಅಗರ್ವಾಲ್‌, ರಜನೀಶ್‌ ಪಿ., ಶ್ರೀನಂದ್‌ ಶಮೀಲ್, ಮಾನೆ ನೇಹಾ ಕುಲದೀಪ್‌, ತೈಜಸ್‌ ಸಿಂಗ್‌ ಹಾಗೂ ದೇವೇಶ್‌ ಜೋಶಿ ಅವರು ಈ ಬಾರಿ ಟಾಪ್‌ ಬಂದಿದ್ದಾರೆ.

ನೀಟ್‌ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

  • ನೀಟ್‌ ಅಧಿಕೃತ ವೆಬ್‌ಸೈಟ್‌ exams.nta.ac.in. ಗೆ ಭೇಟಿ ನೀಡಿ
  • NEET UG 2024 revised result ಎಂಬ ನೋಟಿಫಿಕೇಶನ್‌ ಮೇಲೆ ಕ್ಲಿಕ್‌ ಮಾಡಿ
  • ಇದಾದ ಬಳಿಕ ಹೊಸ ವಿಂಡೋ ಓಪನ್‌ ಆಗಲಿದ್ದು, ಲಾಗಿನ್‌ ಮಾಹಿತಿ ಸೇರಿ ಹಲವು ಮಾಹಿತಿ ಒದಗಿಸಿ
  • ಆಗ ನಿಮ್ಮ ಸ್ಕ್ರೀನ್‌ ಮೇಲೆ ನೀಟ್‌ ಯುಜಿ ಫಲಿತಾಂಶ ಗೋಚರವಾಗಲಿದೆ
  • ಭವಿಷ್ಯದ ರೆಫರೆನ್ಸ್‌ಗಳಿಗಾಗಿ ನೀಟ್‌ ಪರೀಕ್ಷೆಯ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಳ್ಳಿ

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Assembly session: ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ; ಉಭಯ ಸದನಗಳಲ್ಲೂ ಅಂಗೀಕಾರ

Continue Reading
Advertisement
Vaccin for Hiv
ಆರೋಗ್ಯ32 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ40 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ55 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ58 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ58 mins ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ2 hours ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌