Samsung Solve for Tomorrow: ಸ್ಯಾಮ್‌ಸಂಗ್ ʼಸಾಲ್ವ್ ಫಾರ್ ಟುಮಾರೋʼ ಸೀಸನ್ 3 ಆರಂಭ; ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ - Vistara News

ಬೆಂಗಳೂರು

Samsung Solve for Tomorrow: ಸ್ಯಾಮ್‌ಸಂಗ್ ʼಸಾಲ್ವ್ ಫಾರ್ ಟುಮಾರೋʼ ಸೀಸನ್ 3 ಆರಂಭ; ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ

Samsung Solve for Tomorrow: ಸ್ಯಾಮ್‌ಸಂಗ್‌ನ ‘ಸಾಲ್ವ್ ಫಾರ್ ಟುಮಾರೋ’ ಕಾರ್ಯಕ್ರಮವು ವಿಭಿನ್ನ ವಯೋಮಾನದವರಿಗೆ ಎರಡು ಪ್ರತ್ಯೇಕ ಟ್ರ್ಯಾಕ್‌ (ವಿಭಾಗ)ಗಳ ಮೂಲಕ ನಡೆಯಲಿದೆ. ಅದರಲ್ಲಿ ಸ್ಕೂಲ್ ಟ್ರ್ಯಾಕ್ ‘ಸಮುದಾಯ ಮತ್ತು ನಾವೀನ್ಯತೆ’ ಎಂಬ ಥೀಮ್(ವಿಷಯ) ಹೊಂದಿದ್ದು, ಯೂತ್ ಟ್ರ್ಯಾಕ್ ‘ಪರಿಸರ ಮತ್ತು ಸುಸ್ಥಿರತೆ’ ಎಂಬ ಥೀಮ್ ನಲ್ಲಿ ಕಾರ್ಯ ನಿರ್ವಹಿಸಲಿದೆ. ಎನ್ವಿರಾನ್‌ಮೆಂಟ್ ಚಾಂಪಿಯನ್’ ಎಂದು ಕರೆಯಲ್ಪಡುವ ಯೂತ್ ಟ್ರ್ಯಾಕ್‌ನ ವಿಜೇತ ತಂಡವು ಇನ್‌ಕ್ಯುಬೇಶನ್‌ಗಾಗಿ 50 ಲಕ್ಷ ರೂ. ಅನುದಾನವನ್ನು ಪಡೆಯುತ್ತದೆ. ಬಹುಮಾನ ವಿಜೇತ ಸ್ಕೂಲ್ ಟ್ರ್ಯಾಕ್ ತಂಡವು ‘ಕಮ್ಯುನಿಟಿ ಚಾಂಪಿಯನ್’ ಎಂಬ ಮನ್ನಣೆ ಗಳಿಸಲಿದ್ದು, ಮೂಲಮಾದರಿಯ ಅಭಿವೃದ್ಧಿಗಾಗಿ 25 ಲಕ್ಷ ರೂ. ಅನುದಾನವನ್ನು ಸ್ವೀಕರಿಸಲಿದೆ. ಈ ಸ್ಪರ್ಧೆಗೆ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ.

VISTARANEWS.COM


on

Samsung Solve for Tomorrow
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ ದೆಹಲಿಯ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಟ್ರಾನ್ಸ್‌ಫರ್ (ಎಫ್ಐಟಿಟಿ) ಐಐಟಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಯುನೈಟೆಡ್ ನೇಷನ್ಸ್ ಇನ್ ಇಂಡಿಯಾ ಸಹಯೋಗದಲ್ಲಿ ತನ್ನ ಪ್ರಮುಖ ಸಿಎಸ್ಆರ್ ಉಪಕ್ರಮವಾದ ‘ಸಾಲ್ವ್ ಫಾರ್ ಟುಮಾರೋ’ (ನಾಳೆಗಾಗಿ ಪರಿಹಾರ)ದ (Samsung Solve for Tomorrow) 3ನೇ ಆವೃತ್ತಿಯನ್ನು ಪ್ರಾರಂಭಿಸಿದೆ. ಸಾಲ್ವ್ ಫಾರ್ ಟುಮಾರೋ ಕಾರ್ಯಕ್ರಮದ ಮೂಲಕ ಸ್ಯಾಮ್‌ಸಂಗ್ ದೇಶದ ಯುವಜನರಲ್ಲಿ ನವೀನ ಚಿಂತನೆ ಮತ್ತು ಸಮಸ್ಯೆ ಪರಿಹರಿಸುವ ಆಲೋಚನೆಗಳನ್ನು ಮೊಳೆಯಿಸುವ ಗುರಿಯನ್ನು ಹೊಂದಿದೆ.

ಸಾಲ್ವ್ ಫಾರ್ ಟುಮಾರೋ 2024 ಕಾರ್ಯಕ್ರಮವನ್ನು ಸ್ಯಾಮ್‌ಸಂಗ್ ಸೌತ್‌ವೆಸ್ಟ್ ಏಷ್ಯಾದ ಅಧ್ಯಕ್ಷ ಮತ್ತು ಸಿಇಒ ಜೆ.ಬಿ. ಪಾರ್ಕ್, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ವಿಜ್ಞಾನಿ “ಜಿ’’ ಮತ್ತು ಹಿರಿಯ ನಿರ್ದೇಶಕ ಡಾ. ಸಂದೀಪ್ ಚಟರ್ಜಿ ಮತ್ತು ಯುನೈಟೆಡ್ ನೇಷನ್ಸ್ ಇನ್ ಇಂಡಿಯಾದ ರೆಸಿಡೆಂಟ್ ಕೋ-ಆರ್ಡಿನೇಟರ್ ಶೊಂಬಿ ಶಾರ್ಪ್ ಇತರ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆ ಮಾಡಿದರು.

ಈ ಸಿಎಸ್ಆರ್ ಕಾರ್ಯಕ್ರಮವು ನವೀನ ಪರಿಹಾರ ಐಡಿಯಾಗಳ ಶಕ್ತಿಯನ್ನು ಮತ್ತು ಜೀವನವನ್ನು ಪರಿವರ್ತಿಸುವ ಸಾಮರ್ಥ್ಯವನ್ನು ಗುರುತಿಸುವ ಕೆಲಸ ಮಾಡುತ್ತದೆ, ದೃಢವಾದ ಸಾಮಾಜಿಕ ಪ್ರಭಾವವನ್ನು ಬೀರುತ್ತದೆ ಮತ್ತು ಸ್ಯಾಮ್‌ಸಂಗ್ ನ #TogetherforTomorrow #EnablingPeople ಎಂಬ ತತ್ವಕ್ಕೆ ಬಲ ತುಂಬುತ್ತದೆ.

ಈ ವರ್ಷ, ‘ಸಾಲ್ವ್ ಫಾರ್ ಟುಮಾರೊ’ ಕಾರ್ಯಕ್ರಮವು ಸ್ಕೂಲ್ ಟ್ರ್ಯಾಕ್ ಮತ್ತು ಯೂತ್ ಟ್ರ್ಯಾಕ್ ಎಂಬ ಎರಡು ವಿಭಿನ್ನ ವಿಭಾಗಗಳ ಮೂಲಕ ನಡೆಯಲಿದೆ. ಈ ಟ್ರ್ಯಾಕ್ ಗಳು ನಿರ್ದಿಷ್ಟ ಥೀಮ್ ಹೊಂದಿದೆ ಮತ್ತು ವಿವಿಧ ವಯೋಮಾನದವರನ್ನು ಗುರಿಯಾಗಿರಿಸಿಕೊಂಡಿದೆ. ಎರಡೂ ಟ್ರ್ಯಾಕ್‌ಗಳು ಏಕಕಾಲದಲ್ಲಿ ಕಾರ್ಯಾರಂಭ ಮಾಡುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಮತ್ತು ಒಂದೇ ರೀತಿಯ ಹಿನ್ನೆಲೆಯನ್ನು ಒದಗಿಸಲಾಗುತ್ತದೆ.

ಇದನ್ನೂ ಓದಿ | Ola Cabs : ಜಾಗತಿಕ ಮಟ್ಟದಲ್ಲಿ ಒಲಾ ಕ್ಯಾಬ್ ಸೇವೆ ಬಂದ್​; ಯಾಕೆ ಈ ನಿರ್ಧಾರ ?

ಸ್ಕೂಲ್ ಟ್ರ್ಯಾಕ್ 14-17 ವಯಸ್ಸಿನ ವಿದ್ಯಾರ್ಥಿಗಳಿಗೆ ಇರುವ ವಿಭಾಗವಾಗಿದ್ದು, “ಸಮುದಾಯ ಮತ್ತು ಒಳಗೊಳ್ಳುವಿಕೆ” ಎಂಬ ಥೀಮ್ ಅನ್ನು ಹೊಂದಿದೆ. ಸಾಮಾಜಿಕ ಆವಿಷ್ಕಾರಗಳ ಮೂಲಕ ಹಿಂದುಳಿದ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಿ ಅವರ ಬದುಕು ಸುಧಾರಿಸುವ ಮತ್ತು ಸಾಮಾಜಿಕವಾಗಿ ಒಳಗೊಳ್ಳುವಿಕೆಯ ಅವಕಾಶ ಒದಗಿಸುವ ಮೂಲಕ ಹೊಸ ಭಾರತಕ್ಕೆ ಪರಿಹಾರ ಒದಗಿಸುವ ಕಡೆಗೆ ಗಮನ ನೀಡಲಿದೆ.

ಯೂತ್ ಟ್ರ್ಯಾಕ್ 18-22 ವಯಸ್ಸಿನ ತರುಣರ ವಿಭಾಗವಾಗಿದ್ದು, “ಪರಿಸರ ಮತ್ತು ಸುಸ್ಥಿರತೆ” ವಿಷಯದ ಮೇಲೆ ಗಮನ ಕೇಂದ್ರೀಕರಿಸುತ್ತದೆ. ಈ ಟ್ರ್ಯಾಕ್ ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡಲು, ಪರಿಸರವನ್ನು ರಕ್ಷಿಸಲು ಮತ್ತು ಸುಸ್ಥಿರತೆಯನ್ನು ಉತ್ತೇಜಿಸಲು ನವೀನ ಪರಿಹಾರಗಳನ್ನು ಕಂಡು ಹಿಡಿಯಲಿದೆ ಮತ್ತು ಆ ಮೂಲಕ ಹೊಸ ಕಾಲಜ ಜಗತ್ತಿಗೆ ನೆರವು ನೀಡುವ ಕಾರ್ಯ ಮಾಡಲಿದೆ.

ಸ್ಯಾಮ್‌ಸಂಗ್ ಸೌತ್‌ವೆಸ್ಟ್ ಏಷ್ಯಾದ ಅಧ್ಯಕ್ಷ ಮತ್ತು ಸಿಇಒ ಜೆಬಿ ಪಾರ್ಕ್, ” ಸ್ಯಾಮ್‌ಸಂಗ್‌ನಲ್ಲಿ, ನಾವು ನವೀನ ಆಲೋಚನೆಗಳು ಮತ್ತು ಪರಿವರ್ತಕ ತಂತ್ರಜ್ಞಾನಗಳ ಮೂಲಕ ಭವಿಷ್ಯವನ್ನು ರೂಪಿಸಲು ಮತ್ತು ಉತ್ತಮಗೊಳಿಸಲು ಪ್ರಯತ್ನಿಸುತ್ತೇವೆ. ಮುಂದಿನ ಪೀಳಿಗೆಯ ಹೊಸ ಆಲೋಚನೆ ಉಳ್ಳವರನ್ನು ಪೋಷಿಸುವುದು ಮತ್ತು ಸಾಮಾಜಿಕ ಬದಲಾವಣೆಗೆ ಉತ್ತೇಜಿಸುವುದು ನಮ್ಮ ಧ್ಯೇಯವಾಗಿದೆ. ಸಾಲ್ವ್ ಫಾರ್ ಟುಮಾರೊ ಕಾರ್ಯಕ್ರಮವು ನಿಜವಾಗಿಯೂ ಭಾರತದ ಯುವಕರಿಗೆ ಜನರ ಜೀವನವನ್ನು ಸುಧಾರಿಸುವ ಅರ್ಥಪೂರ್ಣ ಆವಿಷ್ಕಾರಗಳನ್ನು ಕಂಡು ಹಿಡಿಯಲು ಒಂದು ಅಪೂರ್ವ ವೇದಿಕೆಯಾಗಿ ರೂಪುಗೊಳ್ಳುತ್ತಿದೆ.

ಮೊದಲ ಎರಡು ಆವೃತ್ತಿಗಳಲ್ಲಿ, ಈ ಸಿಎಸ್‌ಆರ್ ಉಪಕ್ರಮವು ನಮ್ಮ ಮುಂದಿನ ಪೀಳಿಗೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದ್ದನ್ನು ನಾವು ಗಮನಿಸಿದ್ದೇವೆ. ಅವರು ಆ ಕಾರ್ಯಕ್ರಮದ ನಂತರ ತಮ್ಮ ಸಾಮಾಜಿಕ ಉದ್ಯಮಶೀಲತೆಯ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಅದರ ಮೂರನೇ ಆವೃತ್ತಿಯಲ್ಲಿ, ಎರಡು ಪ್ರತ್ಯೇಕ ಟ್ರ್ಯಾಕ್‌ಗಳನ್ನು ಪರಿಚಯಿಸಿದ್ದೇವೆ. ಆ ಮೂಲಕ ನಾವು ಭಾರತಕ್ಕೆ ಮತ್ತು ಜಗತ್ತಿಗೆ ಏಕಕಾಲದಲ್ಲಿ ಪರಿಹಾರ ಒದಗಿಸುವ ಗುರಿಯನ್ನು ಹೊಂದಿದ್ದೇವೆ. ಮುಖ್ಯವಾಗಿ, ಈ ಮಹತ್ವದ ಸಿಎಸ್ಆರ್ ಕಾರ್ಯಕ್ರಮದ ಮೂಲಕ, ನಾವು ದೇಶದಲ್ಲಿ ನಾವೀನ್ಯತೆಯ ಪರಿಸರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲು ಬಯಸುತ್ತೇವೆ” ಎಂದು ಹೇಳಿದರು.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (MeitY) ಹಿರಿಯ ನಿರ್ದೇಶಕ ಮತ್ತು ವಿಜ್ಞಾನಿ ‘ಜಿ’ ಡಾ.ಸಂದೀಪ್ ಚಟರ್ಜಿ ಮಾತನಾಡಿ, “ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿಯು ಭಾರತ ಸರ್ಕಾರದ ಆದ್ಯತೆಯ ಕಾರ್ಯಸೂಚಿಗಳಲ್ಲಿ ಒಂದಾಗಿದೆ. ಆರ್ಥಿಕ ಬೆಳವಣಿಗೆಯನ್ನು ತೀವ್ರಗೊಳಿಸಲು ಮಾನವ ಸಾಮರ್ಥ್ಯಗಳ ಜೊತೆಗೆ ತಂತ್ರಜ್ಞಾನವನ್ನು ಸಂಯೋಜಿಸಲು ಇದು ಸೂಕ್ತ ಸಮಯವಾಗಿದೆ. ಆಧುನಿಕ ಮನಸ್ಸು ಮತ್ತು ಕೌಶಲ್ಯಗಳನ್ನು ಹೊಂದಿರುವ ಭಾರತೀಯ ಯುವಕರು ಪರಿಸರದ ಕುರಿತು ಗಾಢವಾದ ಕಾಳಜಿ ವಹಿಸುತ್ತಾರೆ. ಆಧುನಿಕ ಸಮಗ್ರ ಆವಿಷ್ಕಾರಗಳನ್ನು ಬಳಸಿಕೊಂಡು, ವಿವಿಧ ಜಾಗತಿಕವಾದ ತಳಮಟ್ಟದ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಬಹುದು. ಯುವಕರ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಬೆಳವಣಿಗೆ ಸಾಧಿಸುವ ‘ನಾಳೆಗಾಗಿ ಪರಿಹಾರ (ಸಾಲ್ವ್ ಫಾರ್ ಟುಮಾರೋ)’ ನಂತಹ ಕಾರ್ಯಕ್ರಮಗಳು ಭಾರತ ಸರ್ಕಾರದ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಸಾಕ್ಷಿಯಂತೆ ಕಾರ್ಯ ನಿರ್ವಹಿಸುತ್ತದೆ” ಎಂದರು.

ಇದನ್ನೂ ಓದಿ | Money Guide: ಅಸಂಘಟಿತ ವಲಯದ ಕಾರ್ಮಿಕರಿಗೆ ನೆರವಾಗುವ ಇ-ಶ್ರಮ ಯೋಜನೆ; ಹೀಗೆ ಹೆಸರು ನೋಂದಾಯಿಸಿ

ಐಐಟಿ ದೆಹಲಿಯ ನಿರ್ದೇಶಕ ಪ್ರೊ. ರಂಗನ್ ಬ್ಯಾನರ್ಜಿ, ” ಸಾಲ್ವ್ ಫಾರ್ ಟುಮಾರೋ ಕಾರ್ಯಕ್ರಮದಲ್ಲಿ ಸ್ಯಾಮ್‌ಸಂಗ್‌ನ ಪ್ರಮುಖ ಪಾಲುದಾರರಾಗಿ ಮುಂದುವರಿಯಲು ನಮಗೆ ಹೆಮ್ಮೆ ಇದೆ. ಈ ಸಹಯೋಗವು ಹೊಸತನವನ್ನು ಉತ್ತೇಜಿಸುವ ಮತ್ತು ಯುವ ಮನಸ್ಸುಗಳನ್ನು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಸಶಕ್ತಗೊಳಿಸುವ ಕಾರ್ಯ ಮಾಡಲಿದೆ” ಎಂದು ಹೇಳಿದರು.

ಭಾರತದಲ್ಲಿನ ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ಶೊಂಬಿ ಶಾರ್ಪ್ ಅವರು ಮಾತನಾಡಿ, “ಸ್ಯಾಮ್‌ಸಂಗ್‌ನ ಸಾಲ್ವ್ ಫಾರ್ ಟುಮಾರೊ ಕಾರ್ಯಕ್ರಮದ ಮೂರನೇ ಆವೃತ್ತಿಯಲ್ಲಿ ಭಾಗವಹಿಸಿರುವುದು ನನಗೆ ಸಂತೋಷ ತಂದಿದೆ. ಇದು ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲು ಯುವಕರಿಗೆ ನಾವೀನ್ಯತೆ ತರಲು ಉತ್ತೇಜಿಸುವ ಉತ್ತೇಜಕ ಉಪಕ್ರಮವಾಗಿದೆ. ಭಾರತದಲ್ಲಿನ ಯುಎನ್ ವ್ಯವಸ್ಥೆಯು ಸಾಲ್ವ್ ಫಾರ್ ಟುಮಾರೊ ಕಾರ್ಯಕ್ರಮದಂತಹ ಯುವ ಜನರ ಮಹತ್ವಾಕಾಂಕ್ಷೆಗಳು ಮತ್ತು ನಾಯಕತ್ವವನ್ನು ಪ್ರೇರೇಪಿಸುವ ಖಾಸಗಿ ವಲಯದ ಉಪಕ್ರಮಗಳನ್ನು ಬೆಂಬಲಿಸುತ್ತದೆ ಮತ್ತು ಅವರೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಇತಿಹಾಸದಲ್ಲಿಯೇ ಶ್ರೇಷ್ಠ ಯುವ ಪೀಳಿಗೆಯ ಜೊತೆಗೆ ಭಾರತವು ಹಿಂದೆಂದಿಗಿಂತಲೂ ಹೆಚ್ಚು ಯುವ ಮನಸ್ಸುಗಳನ್ನು ಮತ್ತು ಅವರ ಹೊಸ ಆಲೋಚನೆಗಳನ್ನು ಜೊತೆಗೂಡಿಸುತ್ತದೆ! ಇದರರ್ಥ ಭಾರತೀಯ ಪರಿಹಾರಗಳು ಜಾಗತಿಕ ಪರಿಹಾರಗಳೂ ಆಗಿವೆ” ಎಂದು ಹೇಳಿದರು.

ಏನಿದು ಸ್ಯಾಮ್‌ಸಂಗ್ ʼಸಾಲ್ವ್ ಫಾರ್ ಟುಮಾರೋʼ ಕಾರ್ಯಕ್ರಮ, ಯಾರು ಭಾಗವಹಿಸಬಹುದು

ಸ್ಕೂಲ್ ಟ್ರ್ಯಾಕ್‌ನಲ್ಲಿ 14-17 ವರ್ಷ ವಯಸ್ಸಿನವರು -ವೈಯಕ್ತಿಕವಾಗಿ ಅಥವಾ 5 ಸದಸ್ಯರ ತಂಡಗಳಲ್ಲಿ ಭಾಗವಹಿಸಬಹುದು. ಅವರು “ಸಮುದಾಯ ಮತ್ತು ಒಳಗೊಳ್ಳುವಿಕೆ (ಕಮ್ಯುನಿಟಿ ಆಂಡ್ ಇನ್ ಕ್ಲೂಷನ್)” ಥೀಮ್‌ನಲ್ಲಿ ತಮ್ಮ ಆಲೋಚನೆಗಳನ್ನು ಪ್ರಸ್ತುತ ಪಡಿಸಬಹುದು. ಯೂತ್ ಟ್ರ್ಯಾಕ್‌ನಲ್ಲಿ 18-22 ವರ್ಷ ವಯಸ್ಸಿನವರು -ವೈಯಕ್ತಿಕವಾಗಿ ಅಥವಾ 5 ಸದಸ್ಯರ ತಂಡಗಳಲ್ಲಿ ಭಾಗವಹಿಸಬಹುದಾಗಿದ್ದು, ಅವರು “ಪರಿಸರ ಮತ್ತು ಸುಸ್ಥಿರತೆ”(ಎನ್ವಿರಾನ್ಮೆಂಟ್ ಆಂಡ್ ಸಸ್ಟೇನೇಬಲಿಟಿ) ಥೀಮ್‌ನಲ್ಲಿ ತಮ್ಮ ಆಲೋಚನೆಗಳನ್ನು ಸಲ್ಲಿಸಬಹುದು.

ಸ್ಪರ್ಧೆಯ ವಿಚಾರಗಳು

ಸ್ಕೂಲ್ ಟ್ರ್ಯಾಕ್ ಗೆ “ಸಮುದಾಯ ಮತ್ತು ಒಳಗೊಳ್ಳುವಿಕೆ” ಥೀಮ್ ಇದ್ದು, ಹಿಂದುಳಿದ ವರ್ಗಕ್ಕೆ ಆರೋಗ್ಯ ಸೇವೆ ಲಭ್ಯತೆ ಸುಧಾರಿಸುವುದು, ಕಲಿಕಾ ವಿಧಾನಗಳು ಮತ್ತು ಶಿಕ್ಷಣ ಲಭ್ಯತೆಯನ್ನು ಸುಲಭಗೊಳಿಸುವುದು ಮತ್ತು ಎಲ್ಲರಿಗೂ ಸಾಮಾಜಿಕ ಒಳಗೊಳ್ಳುವಿಕೆಯ ಅವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ.

ಯೂತ್ ಟ್ರ್ಯಾಕ್ ಗೆ “ಪರಿಸರ ಮತ್ತು ಸುಸ್ಥಿರತೆ” ಥೀಮ್ ಇದ್ದು, ಈ ತಂಡ ಪರಿಸರ ಸಂರಕ್ಷಣೆ, ಇಂಗಾಲದ ಹೆಜ್ಜೆಗುರುತುಗಳನ್ನು ಕಡಿಮೆ ಮಾಡುವುದು ಮತ್ತು ಸುಸ್ಥಿರತೆಯನ್ನು ಪ್ರೇರೇಪಿಸುವ ಕೆಲಸ ಮಾಡಲಿದೆ.

ವಿಜೇತರಿಗೆ ಏನು ಸಿಗುತ್ತದೆ?

ಸ್ಯಾಮ್ ಸಂಗ್, MeitY, ಐಐಟಿ ದೆಹಲಿ ಒಳಗೊಂಡು ಹಲವಾರು ವಿವಿಧ ಉದ್ಯಮ ತಜ್ಞರಿಂದ ತರಬೇತಿ ದೊರೆಯಲಿದೆ ಮತ್ತು ಭಾರತದಲ್ಲಿರುವ ವಿಶ್ವಸಂಸ್ಥೆ ತಂಡದಿಂದ ತಾಂತ್ರಿಕ ಬೆಂಬಲ ಲಭ್ಯವಾಗಲಿದೆ. ಹೆಚ್ಚುವರಿಯಾಗಿ, ಭಾಗವಹಿಸುವವರು ಮೂಲಮಾದರಿಗಳ ಕುರಿತ ತಮ್ಮ ಆಲೋಚನೆಗಳನ್ನು ಹೆಚ್ಚು ಸ್ಪಷ್ಟಗೊಳಿಸಲು ವಿಶೇಷ ಮಾರ್ಗದರ್ಶನ ಮತ್ತು ತರಬೇತಿಯನ್ನು ಪಡೆಯುತ್ತಾರೆ. ಸ್ಯಾಮ್‌ಸಂಗ್ ನಾಯಕರೊಂದಿಗೆ ಸಂವಾದದಲ್ಲಿ ಭಾವಹಿಸುವ ಅವಕಾಶ ಹೊಂದುತ್ತಾರೆ ಮತ್ತು ಮೂಲಮಾದರಿ ಅಭಿವೃದ್ಧಿ ಮತ್ತು ವರ್ಧನೆಗಾಗಿ ಆಕರ್ಷಕ ಅನುದಾನವನ್ನು ಪಡೆಯುತ್ತಾರೆ.

ಸ್ಕೂಲ್ ಟ್ರ್ಯಾಕ್: ಸೆಮಿ-ಫೈನಲ್ ಹಂತಕ್ಕೆ ತಲುಪಿದ 10 ತಂಡಗಳು ಮೂಲಮಾದರಿ ಅಭಿವೃದ್ಧಿಗೆ 20,000 ರೂ. ಅನುದಾನವನ್ನು ಮತ್ತು ಸ್ಯಾಮ್ ಸಂಗ್ ಗ್ಯಾಲಕ್ಸಿ ಟ್ಯಾಬ್‌ಗಳನ್ನು ಪಡೆಯುತ್ತಾರೆ. ಫೈನಲ್ ಹಂತ ತಲುಪಿದ 5 ತಂಡಗಳು ಮೂಲಮಾದರಿ ಬೆಳವಣಿಗೆಗೆ ತಲಾ ರೂ. 1 ಲಕ್ಷ ಅನುದಾನವನ್ನು ಮತ್ತು ಸ್ಯಾಮ್ ಸಂಗ್ ಗ್ಯಾಲಕ್ಸಿ ವಾಚ್ ಗಳನ್ನು ಪಡೆಯುತ್ತವೆ.

ಯೂತ್ ಟ್ರ್ಯಾಕ್: ಸೆಮಿ-ಫೈನಲ್ ಹಂತಕ್ಕೆ ತಲುಪಿದ 10 ತಂಡಗಳು ಮೂಲಮಾದರಿ ಅಭಿವೃದ್ಧಿಗೆ ರೂ. 20,000 ಅನುದಾನವನ್ನು ಮತ್ತು ಸ್ಯಾಮ್ ಸಂಗ್ ಗ್ಯಾಲಕ್ಸಿ ಲ್ಯಾಪ್‌ಟಾಪ್ ಗಳನ್ನು ಪಡೆಯುತ್ತಾರೆ. ಫೈನಲ್ ಹಂತ ತಲುಪಿದ 5 ತಂಡಗಳು ಮೂಲಮಾದರಿ ಹೆಚ್ಚಳಕ್ಕೆ ತಲಾ ರೂ. 1 ಲಕ್ಷ ಅನುದಾನವನ್ನು ಮತ್ತು ಸ್ಯಾಮ್ ಸಂಗ್ ಝಡ್ ಫ್ಲಿಪ್ ಸ್ಮಾರ್ಟ್ ಫೋನ್ ಗಳನ್ನು ಪಡೆಯುತ್ತವೆ.

    ವಿಜೇತರು ಏನು ಪಡೆಯುತ್ತಾರೆ?

    ಸ್ಕೂಲ್ ಟ್ರ್ಯಾಕ್: ವಿಜೇತ ತಂಡವನ್ನು ಸಾಲ್ವ್ ಫಾರ್ ಟುಮಾರೋ 2024ರ “ಕಮ್ಯುನಿಟಿ ಚಾಂಪಿಯನ್” ಎಂದು ಘೋಷಿಸಲಾಗುತ್ತದೆ ಮತ್ತು ಮೂಲಮಾದರಿ ಅಭಿವೃದ್ಧಿಗಾದಿ 25 ಲಕ್ಷ ರೂ. ಅನುದಾನವನ್ನು ನೀಡಲಾಗುತ್ತದೆ. ವಿಜೇತ ತಂಡಗಳ ಶಾಲೆಗಳಿಗೆ ಶೈಕ್ಷಣಿಕ ಪ್ರಗತಿ ಸಾಧಿಸಲು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮಕ್ಕಳ ಮನಸ್ಥಿತಿ ಉತ್ತೇಜಿಸಲು ಸ್ಯಾಮ್ ಸಂಗ್ ಉತ್ಪನ್ನಗಳನ್ನು ನೀಡಲಾಗುತ್ತದೆ.

    ಯೂತ್ ಟ್ರ್ಯಾಕ್: ವಿಜೇತ ತಂಡವನ್ನು ಸಾಲ್ವ್ ಫಾರ್ ಟುಮಾರೋ 2024ರ “ಪರಿಸರ ಚಾಂಪಿಯನ್” ಎಂದು ಘೋಷಿಸಲಾಗುತ್ತದೆ ಮತ್ತು ಐಐಟಿ-ದೆಹಲಿಯಲ್ಲಿ ಇನ್ ಕ್ಯುಬೇಷನ್‌ಗಾಗಿ ರೂ. 50 ಲಕ್ಷದ ಅನುದಾನವನ್ನು ಪಡೆಯುತ್ತದೆ. ವಿಜೇತ ತಂಡಗಳ ಕಾಲೇಜುಗಳಿಗೆ ತಮ್ಮ ಶೈಕ್ಷಣಿಕ ಬೆಳವಣಿಗೆ ಸಾಧಿಸಲು, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಉದ್ಯಮಶೀಲತಾ ಮನೋಭಾವ ಉತ್ತೇಜಿಸಲು ಸ್ಯಾಮ್‌ಸಂಗ್ ಉತ್ಪನ್ನಗಳನ್ನು ನೀಡಲಾಗುತ್ತದೆ.

    ಇಲ್ಲಿ ಅರ್ಜಿ ಸಲ್ಲಿಸಬಹುದು: www.samsung.com/in/solvefortomorrow

    ಯಾವಾಗಿನಿಂದ ಅರ್ಜಿ ಸಲ್ಲಿಕೆ: ಏಪ್ರಿಲ್ 9ರಿಂದ ಆರಂಭ

    ಕೊನೆಯ ದಿನಾಂಕ: ಮೇ 31ರಂದು ಸಂಜೆ 5 ಗಂಟೆವರೆಗೆ

    ಕಾರ್ಯಕ್ರಮದ ವಿವರಗಳು

    ಸ್ಕೂಲ್ ಟ್ರ್ಯಾಕ್: ಸಾಲ್ವಿಂಗ್ ಫಾರ್ ಇಂಡಿಯಾ (ಭಾರತಕ್ಕಾಗಿ ಪರಿಹಾರ)ಸ್ಕೂಲ್ ಟ್ರ್ಯಾಕ್‌ ವಿಭಾಗದಲ್ಲಿ ಐದು ಸದಸ್ಯರ ತಂಡಗಳನ್ನು ರಚಿಸಲು ಆಹ್ವಾನಿಸಲಾಗುತ್ತದೆ ಮತ್ತು ‘ಸಮುದಾಯ ಮತ್ತು ನಾವೀನ್ಯತೆ’ ಥೀಮ್ ಅಡಿಯಲ್ಲಿ ತಮ್ಮ ನವೀನ ಆಲೋಚನೆಗಳನ್ನು ಸಲ್ಲಿಸಲು ವಿದ್ಯಾರ್ಥಿಗಳಿಗೆ ಸೂಚಿಸಲಾಗುತ್ತದೆ. ಕಾರ್ಯಕ್ರಮವು ಅಪ್ಲಿಕೇಶನ್ ವಿಂಡೋ, ಪ್ರಾದೇಶಿಕ ಸುತ್ತುಗಳು, ನಾವೀನ್ಯತೆ ನಡಿಗೆ ಮತ್ತು ಗ್ರ್ಯಾಂಡ್ ಫಿನಾಲೆ ಎಂಬ ನಾಲ್ಕು ಹಂತಗಳ ಮೂಲಕ ನಡೆಯುತ್ತದೆ.

    ಅಪ್ಲಿಕೇಶನ್ ವಿಂಡೋದ ಹಂತದಲ್ಲಿ ಭಾಗವಹಿಸುವ ತಂಡಗಳು ಸ್ವೀಕೃತಿಯ ಡಿಜಿಟಲ್ ಪ್ರಮಾಣಪತ್ರಗಳನ್ನು ಸ್ವೀಕರಿಸುತ್ತವೆ. ಮೊದಲ ಶಾರ್ಟ್‌ಲಿಸ್ಟ್ ಪ್ರಾದೇಶಿಕ ಹಂತದಲ್ಲಿ ನಡೆಯುತ್ತದೆ, ಅಲ್ಲಿ 50 ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ನಂತರ ನಡೆಯುವ ಪ್ರಾದೇಶಿಕ ಹಂತದ ಸುತ್ತುಗಳಲ್ಲಿ, ಈ 50 ತಂಡಗಳು ತಮ್ಮ ಆಲೋಚನೆಗಳನ್ನು ಅಥವಾ ಐಡಿಯಾಗಳನ್ನು ತೀರ್ಪುಗಾರರಿಗೆ ಸಲ್ಲಿಸುತ್ತವೆ. ಇಲ್ಲಿಂದ, 10 ತಂಡಗಳು ಸೆಮಿ ಫೈನಲ್ ಹಂತಕ್ಕೆ ಹೋಗಿ ಅಲ್ಲಿ ನಾವೀನ್ಯತೆ ನಡಿಗೆ ಹಂತದಲ್ಲಿ ಭಾಗವಹಿಸುತ್ತವೆ. ಅಲ್ಲಿ ಅವರು ಸ್ಯಾಮ್‌ಸಂಗ್‌ನ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಮತ್ತು ಪ್ರಾದೇಶಿಕ ಪ್ರಧಾನ ಕಚೇರಿಗಳಲ್ಲಿ ನಡೆಯುವ ಕಾರ್ಯಾಗಾರಗಳಿಗೆ ಹಾಜರಾಗುತ್ತಾರೆ. ನಂತರ ರಾಷ್ಟ್ರ ಮಟ್ಟದಲ್ಲಿ ಐಐಟಿ ದೆಹಲಿಯಲ್ಲಿ ಈ 10 ಸೆಮಿ-ಫೈನಲಿಸ್ಟ್‌ಗಳು ತಮ್ಮ ಆಲೋಚನೆಗಳನ್ನು ತೀರ್ಪುಗಾರರಿಗೆ ಸಲ್ಲಿಸುತ್ತಾರೆ. ಬಹುಮಾನವಾಗಿ, ಪ್ರತಿ ತಂಡವು ಮೂಲಮಾದರಿ ಅಭಿವೃದ್ಧಿಗೆ ರೂ. ಅನುದಾನವನ್ನು ಮತ್ತು ಇತ್ತೀಚಿನ ಸ್ಯಾಮ್ ಸಂಗ್ ಗ್ಯಾಲಕ್ಸಿ ಟ್ಯಾಬ್ ಗಳನ್ನು ಪಡೆಯುತ್ತದೆ. ರಾಷ್ಟ್ರೀಯ ಪಿಚ್ ಈವೆಂಟ್‌ನಲ್ಲಿ ಆಯ್ಕೆಯಾಗುವ 5 ತಂಡಗಳು ಫೈನಲ್ ಪ್ರವೇಶಿಸುತ್ತವೆ. ಅಲ್ಲಿ ಪ್ರತೀ ತಂಡಗಳು ತರಬೇತಿಗೆ ಒಳಗಾಗುತ್ತವೆ ಮತ್ತು ಅವರ ಪರಿಹಾರ ಐಡಿಯಾಗಳನ್ನು ಫೈನಲ್ ತೀರ್ಪುಗಾರರಿಗೆ ಸಲ್ಲಿಸುತ್ತವೆ. ಫೈನಲ್ ನಲ್ಲಿ ಭಾಗವಹಿಸುವ ಪ್ರತಿ ತಂಡದ ಎಲ್ಲಾ ಭಾಗವಹಿಸುವವರು ಇತ್ತೀಚಿನ ಗ್ಯಾಲಕ್ಸಿ ವಾಚ್ ಪಡೆಯುತ್ತಾರೆ. ಜೊತೆಗೆ ಮೂಲಮಾದರಿಯ ಪ್ರಗತಿಗಾಗಿ 1 ಲಕ್ಷ ರೂ. ಅನುದಾನವನ್ನು ತಂಡ ಪಡೆಯುತ್ತದೆ. ಗ್ರ್ಯಾಂಡ್ ಫಿನಾಲೆಯಲ್ಲಿ ವಿಜೇತ ತಂಡವನ್ನು ಸಾಲ್ವ್ ಫಾರ್ ಟುಮಾರೋ 2024ರ “ಕಮ್ಯುನಿಟಿ ಚಾಂಪಿಯನ್” ಎಂದು ಘೋಷಿಸಲಾಗುತ್ತದೆ ಮತ್ತು ಅವರ ಮೂಲಮಾದರಿಯ ಪ್ರಗತಿಗೆ 25 ಲಕ್ಷ ರೂ. ಅನುದಾನವನ್ನು ಮತ್ತು ಅವರ ಶಾಲೆಗೆ ಅತ್ಯಾಕರ್ಷಕ ಸ್ಯಾಮ್ ಸಂಗ್ ಗ್ಯಾಲಕ್ಸಿ ಉತ್ಪನ್ನಗಳನ್ನು ನೀಡಲಾಗುತ್ತದೆ.

    ಯೂತ್ ಟ್ರ್ಯಾಕ್: ಸಾಲ್ವಿಂಗ್ ಫಾರ್ ದಿ ವರ್ಲ್ಡ್ (ಜಗತ್ತಿಗಾಗಿ ಪರಿಹಾರ)

    ಯೂತ್ ಟ್ರ್ಯಾಕ್‌ನಲ್ಲಿ, ಆಕಾಂಕ್ಷಿಗಳು ಐದು ಸದಸ್ಯರು ಇರುವ ತಂಡವನ್ನು ರಚಿಸುತ್ತಾರೆ ಮತ್ತು “ಪರಿಸರ ಮತ್ತು ಸುಸ್ಥಿರತೆ” ಎಂಬ ವಿಷಯದ ಅಡಿಯಲ್ಲಿ ತಮ್ಮ ನವೀನ ಆಲೋಚನೆಗಳನ್ನು ಸಲ್ಲಿಸುತ್ತಾರೆ. ಮೊದಲ ಶಾರ್ಟ್‌ಲಿಸ್ಟ್ ಪ್ರಾದೇಶಿಕ ಹಂತದಲ್ಲಿ ನಡೆಯಲಿದ್ದು, ಅಲ್ಲಿ 50 ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ನಂತರದ ಪ್ರಾದೇಶಿಕ ಸುತ್ತುಗಳಲ್ಲಿ , ಈ 50 ತಂಡಗಳು ತಮ್ಮ ಹೊಸ ಆಲೋಚನೆಗಳನ್ನು ತೀರ್ಪುಗಾರರಿಗೆ ಸಲ್ಲಿಸುತ್ತವೆ. ಇಲ್ಲಿಂದ, 10 ಸೆಮಿ-ಫೈನಲ್ ಹಂತಕ್ಕೆ ತಲುಪಿದ ತಂಡಗಳು ನಾವೀನ್ಯತೆ ನಡಿಗೆ ಹಂತಕ್ಕೆ ಸಾಗುತ್ತವೆ. ಅಲ್ಲಿ ಅವರು ಸ್ಯಾಮ್‌ಸಂಗ್‌ನ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಮತ್ತು ಪ್ರಾದೇಶಿಕ ಪ್ರಧಾನ ಕಚೇರಿಗಳಲ್ಲಿ ಕಾರ್ಯಾಗಾರಗಳಿಗೆ ಹಾಜರಾಗುತ್ತಾರೆ. ನಂತರ ರಾಷ್ಟ್ರೀಯ ಪಿಚ್ ಈವೆಂಟ್ ನಲ್ಲಿ ಈ 10 ಸೆಮಿ-ಫೈನಲಿಸ್ಟ್‌ಗಳು ತಮ್ಮ ಆಲೋಚನೆಗಳನ್ನು ಐಐಟಿ ದೆಹಲಿಯ ತೀರ್ಪುಗಾರರಿಗೆ ತಿಳಿಸುತ್ತಾರೆ. ಬಹುಮಾನವಾಗಿ, ಪ್ರತಿ ತಂಡವು ಮೂಲಮಾದರಿ ಅಭಿವೃದ್ಧಿಗೆ ರೂ. 20,000 ಅನುದಾನವನ್ನು ಮತ್ತು ಇತ್ತೀಚಿನ ಸ್ಯಾಮ್ ಸಂಗ್ ಗ್ಯಾಲಕ್ಸಿ ಲ್ಯಾಪ್‌ಟಾಪ್‌ಗಳನ್ನು ಪಡೆಯುತ್ತಾರೆ. ರಾಷ್ಟ್ರೀಯ ಪಿಚ್ ಈವೆಂಟ್‌ನಲ್ಲಿ ಆಯ್ಕೆ ಮಾಡಲಾದ 5 ಅಂತಿಮ ತಂಡಗಳು ತರಬೇತಿಗೆ ಒಳಪಡುತ್ತಾರೆ ಮತ್ತು ಅವರ ಪರಿಹಾರ ಐಡಿಯಾಗಳನ್ನು ಫೈನಲ್ ತೀರ್ಪುಗಾರರಿಗೆ ಸಲ್ಲಿಸುತ್ತಾರೆ. ಇಲ್ಲಿ ಭಾಗವಹಿಸಿದ ಎಲ್ಲರಿಗೂ ಗೊಸ ಗ್ಯಾಲಕ್ಸಿ ಝಡ್ ಫ್ಲಿಪ್ ಸ್ಮಾರ್ಟ್‌ಫೋನ್ ಪಡೆಯುತ್ತಾರೆ. ಜೊತೆಗೆ ತಂಡಕ್ಕೆ ಮೂಲಮಾದರಿಯ ಅಭಿವೃದ್ಧಿಗೆ ರೂ. 1 ಲಕ್ಷದ ಅನುದಾನವನ್ನು ನೀಡಲಾಗುತ್ತದೆ. ಗ್ರ್ಯಾಂಡ್ ಫಿನಾಲೆಯಲ್ಲಿ ವಿಜೇತ ತಂಡವನ್ನು ಸಾಲ್ವ್ ಫಾರ್ ಟುಮಾರೋ 2024 “ಪರಿಸರ ಚಾಂಪಿಯನ್” ಎಂದು ಘೋಷಿಸಲಾಗುತ್ತದೆ ಮತ್ತು ಇನ್ ಕ್ಯುಬೇಷನ್ ಗೆ ರೂ. 50 ಲಕ್ಷದ ಅನುದಾನವನ್ನು ಮತ್ತು ಅವರ ಕಾಲೇಜಿಗೆ ಅತ್ಯಾಕರ್ಷಕ ಸ್ಯಾಮ್ ಸಂಗ್ ಗ್ಯಾಲಕ್ಸಿ ಉತ್ಪನ್ನಗಳನ್ನು ನೀಡಲಾಗುತ್ತದೆ.

    ಎರಡು ಟ್ರ್ಯಾಕ್‌ಗಳು ಅಥವಾ ವಿಭಾಗಗಳು ಪರಸ್ಪರ ಸ್ಪರ್ಧಿಸುವುದಿಲ್ಲ ಮತ್ತು ಪ್ರತಿ ಟ್ರ್ಯಾಕ್‌ಗಳು ವಿಭಿನ್ನ ಥೀಮ್‌ಗಳು ಮತ್ತು ವಯಸ್ಸಿನ ಗುಂಪುಗಳ ಪ್ರಕಾರವೇ ಪ್ರತ್ಯೇಕ ತರಬೇತಿ, ಮಾರ್ಗದರ್ಶನ ಮತ್ತು ಕಲಿಕೆಯ ಅವಕಾಶಗಳನ್ನು ಪಡೆಯುತ್ತವೆ. ಮುಖ್ಯ ಸ್ಪರ್ಧೆಯ ಜೊತೆಗೆ, ಭಾಗವಹಿಸುವವರು ‘ಸೋಷಿಯಲ್ ಮೀಡಿಯಾ ಚಾಂಪಿಯನ್ ಅವಾರ್ಡ್’ ಮತ್ತು ‘ಗುಡ್ವಿಲ್ ಅವಾರ್ಡ್’ ನಂತಹ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಸ್ಪರ್ಧಿಸುವ ಅವಕಾಶವನ್ನು ಹೊಂದಿರುತ್ತಾರೆ. ‘ ಸೋಷಿಯಲ್ ಮೀಡಿಯಾ ಚಾಂಪಿಯನ್ ಅವಾರ್ಡ್’ ನಲ್ಲಿ ಪ್ರತಿ ಟ್ರ್ಯಾಕ್‌ನ ಸಾಮಾಜಿಕ ಮಾಧ್ಯಮ ಚಾಂಪಿಯನ್‌ಗಳು ರೂ. 50000 ಬಹುಮಾನವನ್ನು ಪಡೆಯುತ್ತಾರೆ. ನಾವೀನ್ಯತೆ ನಡಿಗೆ ಸುತ್ತಿನಲ್ಲಿ ಘೋಷಿಸಲಾಗುತ್ತದೆ. ‘ಗುಡ್‌ವಿಲ್ ಅವಾರ್ಡ್’ ಪ್ರಶಸ್ತಿ ಅಡಿಯಲ್ಲಿ ಪ್ರತೀ ಟ್ರ್ಯಾಕ್ ನ ವಿಜೇತರು ವ್ಯೂವರ್ಸ್ ಚಾಯ್ಸ್ ಐಡಿಯಾಗಾಗಿ ರೂ. 1 ಲಕ್ಷದ ಬಹುಮಾನ ಪಡೆಯುತ್ತಾರೆ. ಈ ಪ್ರಶಸ್ತಿಯನ್ನು ಗ್ರ್ಯಾಂಡ್ ಫಿನಾಲೆಯಲ್ಲಿ ಘೋಷಿಸಲಾಗುತ್ತದೆ.

    ಹೆಚ್ಚಿನ ಮಾಹಿತಿ ಪಡೆಯಲು ಮತ್ತು ಭಾರತದಲ್ಲಿ ಸ್ಪರ್ಧೆಗೆ ಹೆಸರು ನೋಂದಾಯಿಸಲು, www.samsung.com/in/solvefortomorrow ಗೆ ಭೇಟಿ ನೀಡಿ. ಅರ್ಜಿ ಸಲ್ಲಿಕೆಯ ಅವಕಾಶ ಮೇ 31, 202ರಂದು ಸಂಜೆ 5 ಗಂಟೆಗೆ ಮುಗಿಯಲಿದೆ.

    ಸಾಲ್ವ್ ಫಾರ್ ಟುಮಾರೋ ಕಾರ್ಯಕ್ರಮವನ್ನು 2010 ರಲ್ಲಿ ಯುಎಸ್ ನಲ್ಲಿ ಮೊದಲು ಪ್ರಾರಂಭಿಸಲಾಯಿತು. ಪ್ರಸ್ತುತ ಈ ಕಾರ್ಯಕ್ರಮವು ಜಾಗತಿಕವಾಗಿ 63 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಈಗಾಗಲೇ ಪ್ರಪಂಚದಾದ್ಯಂತ 2.3 ಮಿಲಿಯನ್ ಯುವಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

    ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್‌ನ ಜಾಗತಿಕ ಸಿಎಸ್‌ಆರ್ ತತ್ತ್ವವಾದ ‘ಟುಗೆದರ್ ಫಾರ್ ಟುಮಾರೋ! ಎನೇಬಲಿಂಗ್ ಪೀಪಲ್’ ನಾಳಿನ ನಾಯಕರನ್ನು ಸಶಕ್ತಗೊಳಿಸಲು ಪ್ರಪಂಚದಾದ್ಯಂತದ ಯುವಜನರಿಗೆ ಶಿಕ್ಷಣವನ್ನು ಒದಗಿಸುವ ಉದ್ದೇಶ ಹೊಂದಿದೆ. ನಮ್ಮ ಸಿಎಸ್ಆರ್ ವೆಬ್‌ಪುಟ http://csr.samsung.com ದಲ್ಲಿ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್ ನ ಸಿಎಸ್ಆರ್ ಪ್ರಯತ್ನಗಳ ಕುರಿತು ಹೆಚ್ಚಿನ ಮಾಹಿತಿ ತಿಳಿಯಿರಿ.

    ಇದನ್ನೂ ಓದಿ | Money Guide: ಎಚ್‌ಡಿಎಫ್‌ಸಿಯಿಂದ ಎಸ್‌ಬಿಐವರೆಗೆ; ಫಿಕ್ಸೆಡ್‌ ಡೆಪಾಸಿಟ್‌ಗೆ ಶೇ. 7ಕ್ಕಿಂತ ಅಧಿಕ ಬಡ್ಡಿ ನೀಡುವ ಬ್ಯಾಂಕ್‌ಗಳಿವು

    ಸ್ಯಾಮ್ ಸಂಗ್ ಇಂಡಿಯಾ ಕುರಿತು ಇತ್ತೀಚಿನ ಸುದ್ದಿಗಳಿಗಾಗಿ, ದಯವಿಟ್ಟು http://news.samsung.com/in ನಲ್ಲಿ ಸ್ಯಾಮ್ ಸಂಗ್ ಇಂಡಿಯಾ ನ್ಯೂಸ್ ರೂಮ್ ಗೆ ಭೇಟಿ ನೀಡಿ. ಹಿಂದಿಗಾಗಿ, https://news.samsung.com/bharat ನಲ್ಲಿ ಸ್ಯಾಮ್ ಸಂಗ್ ನ್ಯೂಸ್‌ರೂಮ್ ಭಾರತ್‌ಗೆ ಲಾಗ್ ಇನ್ ಮಾಡಿ. ನೀವು ಟ್ವಿಟ್ಟರ್ ನಲ್ಲಿ @SamsungNewsIN ನಲ್ಲಿಯೂ ನಮ್ಮನ್ನು ಫಾಲ್ ಮಾಡಬಹುದು.

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    Lok Sabha Election 2024

    DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

    DK Shivakumar: ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಈಗ ಇಲ್ಲಿಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದು, ಚುನಾವಣಾ ಕಾರ್ಯತಂತ್ರಗಳಲ್ಲಿ ತೊಡಗಿದ್ದಾರೆ.

    VISTARANEWS.COM


    on

    DK Shivakumar in Uttar Pradesh and Strategy in Amethi and Rae Bareli
    Koo

    ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿ 5ನೇ ಹಂತಕ್ಕೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿವೆ. ಇತ್ತ ಟ್ರಬಲ್‌ ಶೂಟರ್‌ ಖ್ಯಾತಿಯ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅಂತಾರಾಜ್ಯಗಳಲ್ಲಿ ಪ್ರಚಾರಕ್ಕೆ ಜೈ ಎಂದಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಆಂಧ್ರಪ್ರದೇಶದ ಕಡಪ ಪ್ರಚಾರಕ್ಕೆ ಹೋಗಿದ್ದ ಡಿಕೆಶಿ ಈಗ ಉತ್ತರ ಪ್ರದೇಶ ತಲುಪಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಚಾರಕ್ಕೆ ಮುಂದಾಗಿದ್ದು, ತಂತ್ರಗಾರಿಕೆಯಲ್ಲಿ ತೊಡಗಲಿದ್ದಾರೆ ಎಂದು ತಿಳಿದುಬಂದಿದೆ.

    ಈ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆನ್ನಿಗೆ ಡಿ.ಕೆ. ಶಿವಕುಮಾರ್‌ ನಿಂತಿದ್ದಾರೆ. ಕಳೆದ ಬಾರಿ ಅಮೇಥಿಯಲ್ಲಾದ ಸೋಲಿನ ಕಹಿಯನ್ನು ಮರೆಸಲು ಪಣ ತೊಟ್ಟಿರುವ ಡಿಕೆಶಿ ಈಗ ಆ ನಿಟ್ಟಿನಲ್ಲಿ ಪ್ರಚಾರಕ್ಕೆ ಮುನ್ನಡಿ ಬರೆಯಲು ಹೊರಟಿದ್ದಾರೆ. ಅಲ್ಲಿ ಯಾವ ರೀತಿ ತಂತ್ರಗಾರಿಕೆ ಮಾಡಲಿದ್ದಾರೆ? ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಫಲಿತಾಂಶ ಬಂದ ಮೇಲಷ್ಟೆ ತಿಳಿಯಬಹುದಾಗಿದೆ.

    ಕಾಂಗ್ರೆಸ್‌ಗೆ ಅಮೇಥಿ ಮತ್ತು ರಾಯ್‌ ಬರೇಲಿ ಏಕೆ ಮುಖ್ಯ?

    ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಶತಾಯಗತಾಯ ಗೆಲ್ಲಲೇ ಬೇಕಿರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲದಿದ್ದರೆ ಅವರ ನಾಯಕತ್ವದ ಮೇಲೆ ಮತ್ತೊಮ್ಮೆ ಪ್ರಶ್ನೆಗಳು ಏಳುತ್ತವೆ. ಹೀಗಾಗಿ ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಹೆಚ್ಚಿನ ಒತ್ತನ್ನು ನೀಡಿದೆ. ಇದಕ್ಕಾಗಿಯೇ ಡಿ.ಕೆ. ಶಿವಕುಮಾರ್‌ ಅಲ್ಲಿ ತಮ್ಮ ದೃಷ್ಟಿಯನ್ನು ನೆಟ್ಟಿದ್ದಾರೆ ಎನ್ನಲಾಗಿದೆ.

    ಅಮೇಥಿ ವಾಪಸ್‌ಗೆ ತಂತ್ರ

    ಇನ್ನು ಅಮೇಥಿ ಲೋಕಸಭಾ ಕ್ಷೇತ್ರ ಸಹ ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿತ್ತು. 1980ರಲ್ಲಿ ಸಂಜಯ್‌ ಗಾಂಧಿ ಮೊದಲ ಬಾರಿಗೆ ಇಲ್ಲಿಂದ ಸ್ಪರ್ಧಿಸಿದ್ದರು. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸ್ಪರ್ಧೆ ಮಾಡಿದ್ದರು. ಅವರು 1981 ರಿಂದ 1991ರವರೆಗೆ 4 ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 1998ರಲ್ಲಿ ಸೋನಿಯಾ ಗಾಂಧಿ, 2004ರಿಂದ 2014ರ ವರೆಗೆ ರಾಹುಲ್‌ ಗಾಂಧಿ ಇಲ್ಲಿಂದಲೇ ಚುನಾಯಿತರಾಗುತ್ತಾ ಬರುತ್ತಿದ್ದರು. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಿ ಬರೋಬ್ಬರಿ 55,120 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇಲ್ಲಿ ರಾಹುಲ್‌ ಗಾಂಧಿಗೆ ಮುಖಭಂಗವಾಗಿತ್ತು. ಆದರೆ, ರಾಹುಲ್‌ ಕೇರಳದ ವಯನಾಡಿನಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಒಂದರಲ್ಲಿ ಹೋದ ಮಾನ, ಇನ್ನೊಂದರಲ್ಲಿ ಬಂತು ಎಂಬಂತೆ ಆಗಿತ್ತು. ಈ ಬಾರಿಯೂ ರಾಹುಲ್‌ ವಯನಾಡು ಹಾಗೂ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಇನ್ನು ಅಮೇಥಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಎದುರಾಳಿಯಾಗಿ ಕಿಶೋರ್‌ ಲಾಲ್‌ ಶರ್ಮಾ ಸ್ಪರ್ಧೆ ಮಾಡಿದ್ದಾರೆ.

    ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

    ಗಾಂಧಿ ಕುಟುಂಬದ ಅತ್ಯಾಪ್ತನಿಗೆ ಟಿಕೆಟ್‌

    ಕಿಶೋರ್‌ ಲಾಲ್‌ ಶರ್ಮಾ ಅವರು ರಾಯ್‌ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಅಘೋಷಿತ ಉಸ್ತುವಾರಿಯಂತೆ ಇದ್ದರು. ಇಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸುವಾಗ ಹೆಚ್ಚಿನ ಹೊಣೆ ಇವರ ಮೇಲೆಯೇ ಇತ್ತು. ಹೀಗಾಗಿ ಇಲ್ಲಿ ಪಕ್ಷದ ಚಟುವಟಿಕೆಯಲ್ಲಿ ನಿರತರಾಗುತ್ತಿದ್ದರಿಂದ ಅವರಿಗೆ ಕ್ಷೇತ್ರ ಪರಿಚಯದ ಜತೆಗೆ ಸ್ಥಳೀಯ ನಾಯಕರ ಒಡನಾಟವೂ ಇದೆ. ಜತೆಗೆ ಗಾಂಧಿ ಕುಟುಂಬ ಅತ್ಯಾಪ್ತರೂ ಆಗಿದ್ದರಿಂದ ಅವರಿಗೆ ಈ ಬಾರಿ ಅಮೇಥಿಯಿಂದ ಟಿಕೆಟ್‌ ನೀಡಲಾಗಿದೆ. ಈ ಎಲ್ಲ ಕಾರಣಗಳಿಂದ ಅಮೇಥಿಯನ್ನು ಗೆದ್ದು ಬೀಗುವ ಮೂಲಕ ಜಿದ್ದು ಸಾಧಿಸುವ ತವಕದಲ್ಲಿ ಕಾಂಗ್ರೆಸ್‌ ಇದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಈ ಎರಡೂ ಕ್ಷೇತ್ರಗಳ ಮೇಲೆ ಫೋಕಸ್‌ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕೆಲವು ದಿನ ವಾಸ್ತವ್ಯ ಹೂಡಿ ತಂತ್ರಗಾರಿಕೆ ಹೆಣೆಯಲಿದ್ದಾರೆ.

    Continue Reading

    ಕ್ರೈಂ

    Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

    Prajwal Revanna Case: ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಮೇಲೆ ಬಂಧಿತನಾಗಿರುವ 2ನೇ ಆರೋಪಿ ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಇನ್ನೊಬ್ಬ A6 ಆರೋಪಿ ಕೀರ್ತಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಪ್ರಕರಣದ ಮೊದಲ ಆರೋಪಿ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.

    VISTARANEWS.COM


    on

    Prajwal Revanna Case KR Nagar victim kidnapping case Satish sent to judicial custody
    Koo

    ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಮೇಲೆ ಬಂಧಿತನಾಗಿರುವ 2ನೇ ಆರೋಪಿ ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಇನ್ನೊಬ್ಬ A6 ಆರೋಪಿ ಕೀರ್ತಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

    42ನೇ ಎಸಿಎಂಎಂ ಕೋರ್ಟ್‌ನಲ್ಲಿ ಗುರುವಾರ ಮಧ್ಯಾಹ್ನ ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಜಾಮೀನು (Bail) ವಿಚಾರಣೆ ನಡೆಯುತ್ತಿದ್ದ ವೇಳೆಯೇ ಇಬ್ಬರು ಆರೋಪಿಗಳನ್ನು ಕೋರ್ಟ್‌ ಎದುರು ಹಾಜರುಪಡಿಸಲಾಗಿತ್ತು.

    ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯವು A2 ಸತೀಶ್ ಬಾಬುಗೆ ನ್ಯಾಯಾಂಗ ಬಂಧನ ವಿಧಿಸಿದರೆ, ಮತ್ತೊಬ್ಬ ಆರೋಪಿ ಹೊಸೂರು ಕೀರ್ತಿಯನ್ನು 3 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ವಹಿಸಿದೆ.

    ಏನಿದು ಕೇಸ್‌?

    ಪ್ರಜ್ವಲ್‌ ರೇವಣ್ಣ ಅವರು ಅತ್ಯಾಚಾರ ನಡೆಸಿದ್ದಾರೆನ್ನಲಾದ ಮಹಿಳೆ ಮೈಸೂರಿನ ಕೆ.ಆರ್.‌ ನಗರ ನಿವಾಸಿಯಾಗಿದ್ದಾರೆ. ಆದರೆ, ಇವರನ್ನು ಸಾಕ್ಷಿ ನಾಶಕ್ಕಾಗಿ ಎಚ್‌.ಡಿ. ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬು ಅಪಹರಣ ಮಾಡಿದ್ದಾರೆ ಎಂದು ಕೆ.ಆರ್. ನಗರದಲ್ಲಿ ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಇದರ ಬೆನ್ನಲ್ಲೇ ಸಂತ್ರಸ್ತೆಯ ವಿಡಿಯೊ ರಿಲೀಸ್‌ ಆಗಿದೆ. ಇದರಲ್ಲಿ ಮಹಿಳೆಯು ಅಪಹರಣ ಪ್ರಕರಣಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

    ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಮುಗಿದಿಲ್ಲ ಟೆನ್ಶನ್‌!

    ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಮಧ್ಯಂತರ ಜಾಮೀನು (Bail) ನೀಡಲಾಗಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ರೇವಣ್ಣ ಅವರು ಇನ್ನೂ ನಿಟ್ಟುಸಿರು ಬಿಡುವಂತೆ ಇಲ್ಲ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

    ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ಈಗ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ.

    ವಾದ – ಪ್ರತಿವಾದ

    ಗುರುವಾರ (ಮೇ 16) ಬೆಳಗ್ಗೆ 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಎಚ್.ಡಿ. ರೇವಣ್ಣ ಪರ ವಕೀಲರ ವಾದವನ್ನು ಆಲಿಸಿದರು. ಬಳಿಕ ಎಸ್ಐಟಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು‌ ಸೂಚಿಸಿದ ನ್ಯಾಯಾಧೀಶೆ ಪ್ರೀತ್ ಜೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಿದ್ದರು.

    ಜಾಮೀನು ನೀಡದಂತೆ ಜಯ್ನಾ ಕೊಠಾರಿ ಮನವಿ

    ಈ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್‌ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

    ಆಗ ಮಧ್ಯಪ್ರವೇಶ ಮಾಡಿದ ಜಡ್ಜ್‌, ಎಸ್ಐಟಿ ವಾದಕ್ಕೂ ಅವಕಾಶ ನೀಡೋಣ ಎಂದು ಹೇಳಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು.

    ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ, ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಆರಂಭಿಸಿದರು. ಈ ವೇಲೆ ಎಚ್.ಡಿ. ರೇವಣ್ಣ ಪರ ವಕೀಲರು ಮಧ್ಯ ಪ್ರವೇಶ ಮಾಡಿ, ಸೀನಿಯರ್ ವಕೀಲರು ಬರ್ತಾರೆ. ಹೀಗಾಗಿ ನಾಳೆಯವರೆಗೂ (ಮೇ 17) ಸಮಯ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಿ, ಹೊಳೆನರಸೀಪುರ ಕೇಸಲ್ಲಿ ವಿಚಾರಣೆಗೆ ಬರುವುದಾಗಿ ಹೇಳಿದ್ದಾರೆ. ಇನ್ನೂ ವಿಚಾರಣೆಗೆ ಬಂದಿಲ್ಲ. ಈಗಲೇ ವಿಚಾರಣೆ ನಡೆಯಲಿ. ಅಥವಾ ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

    ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಯ್ನಾ ಕೋಠಾರಿ, ಆರೋಪಿಯು ಪೊಲೀಸರ ಮುಂದೆ ಶರಣಾಗಲಿ ಅಥವಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿ. ಆರೋಪಿ ತುಂಬಾ ಪ್ರಭಾವಿ ಆಗಿದ್ದಾರೆ. ಹೀಗಾಗಿ ಆರೋಪಿಯೇ ಸ್ವ – ಇಚ್ಛೆಯಿಂದ ಬಂದು ಶರಣಾಗಲಿ ಎಂದು ವಾದಿಸಿದರು.

    ಆಗ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್‌, ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಇನ್ನು ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

    ಇದನ್ನೂ ಓದಿ: Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

    ರೇವಣ್ಣ ಹಾಜರಾಗಲು ಜಡ್ಜ್‌ ಸೂಚನೆ

    ಪುನಃ ವಾದ ಮಂಡಿಸಿದ ಜಯ್ನಾ ಕೊಠಾರಿ, ಆರೋಪಿ ಬೆಳಗ್ಗೆ ಶರಣಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈಗ ಕೋರ್ಟ್‌ಗೆ ಶರಣಾಗಲು ಸಿದ್ಧರಿಲ್ಲ. ಸದ್ಯ ಇಲ್ಲೇ ಎಲ್ಲಿಯೋ ಕಾರಿನಲ್ಲಿ ಕುಳಿತಿರಬಹುದು ಎಂದು ಹೇಳಿದರು. ಈ ವೇಳೆ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ ಎಚ್‌.ಡಿ. ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.

    ರೇವಣ್ಣ ಟೆಂಪಲ್‌ ರನ್‌ ಹೀಗಿತ್ತು

    ಇಂದು ಮುಂಜಾನೆ ತಾವು ಉಳಿದುಕೊಂಡಿದ್ದ ದೇವೇಗೌಡರ ಮನೆಯಿಂದ ಹೊರಟ ರೇವಣ್ಣ ಅವರು ವೈದ್ಯ ಸಿಎನ್ ಮಂಜುನಾಥ್ ಅವರ ನಿವಾಸಕ್ಕೆ ಬಂದು, ಅಲ್ಲಿಂದ ಟೆಂಪಲ್ ರನ್ ಶುರು ಮಾಡಿದರು. ಬೆಳಗ್ಗೆ 8:26ಕ್ಕೆ ಜಯನಗರ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ, 8:50ಕ್ಕೆ ಗವಿಗಂಗಾಧರೇಶ್ವರ ದೇವಸ್ಥಾನ, 9:10ಕ್ಕೆ ಶ್ರೀ ಶೃಂಗೇರಿ ಶಂಕರ ಮಠ, 10:31ಕ್ಕೆ ಬಸವನಗುಡಿಯ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿ ನಂತರ ಕೋರ್ಟ್‌ಗೆ ಹಾಜರಾದರು.

    Continue Reading

    ದೇಶ

    Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

    Reliance Retail: ಬ್ರಿಟನ್‌ನ ಪ್ರಮುಖ ಆನ್‌ಲೈನ್‌ ಫ್ಯಾಷನ್‌ ಕಂಪನಿ ಎಎಸ್‌ಒಎಸ್‌ ನ (ಎಸೋಸ್‌) ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡಲು ರಿಲಯನ್ಸ್‌ ರಿಟೇಲ್‌ ಕಂಪನಿಯು ದೀರ್ಘಾವಧಿಯ ಪಾಲುದಾರಿಕೆ ಮಾಡಿಕೊಂಡಿದ್ದು, ಈ ಒಪ್ಪಂದದ ಪ್ರಕಾರ ರಿಲಯನ್ಸ್‌ ರಿಟೇಲ್‌ ಕಂಪನಿಯು ಭಾರತದಲ್ಲಿ ತನ್ನ ಆನ್‌ಲೈನ್‌ ಮತ್ತು ಆಫ್‌ಲೈನ್‌ ಪ್ಲಾಟ್‌ಫಾರಂಗಳಲ್ಲಿ (ASOS) ಎಎಸ್‌ಒಎಸ್‌ನ ಉತ್ಪನ್ನಗಳು ಲಭ್ಯವಾಗುವಂತೆ ಮಾಡಲಿದೆ. ಎಎಸ್‌ಒಎಸ್‌ ಕಂಪನಿಯು ಜಗತ್ತಿನಾದ್ಯಂತ ಯುವ ಪೀಳಿಗೆಯಲ್ಲಿ ಜನಪ್ರಿಯವಾಗಿದ್ದು, 200ಕ್ಕೂ ಅಧಿಕ ಮಾರುಕಟ್ಟೆಗಳಲ್ಲಿ ಕಂಪನಿಯ ಉತ್ಪನ್ನಗಳು ಲಭ್ಯವಿವೆ.

    VISTARANEWS.COM


    on

    ASOS brand products are available at Reliance Retail
    Koo

    ನವದೆಹಲಿ: ಬ್ರಿಟನ್‌ನ ಪ್ರಮುಖ ಆನ್‌ಲೈನ್‌ ಫ್ಯಾಷನ್‌ ಕಂಪನಿ ಎಎಸ್‌ಒಎಸ್‌ ನ (ಎಸೋಸ್‌) ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡಲು ರಿಲಯನ್ಸ್‌ ರಿಟೇಲ್‌ (Reliance Retail) ಕಂಪನಿಯು ದೀರ್ಘಾವಧಿಯ ಪಾಲುದಾರಿಕೆ ಮಾಡಿಕೊಂಡಿದ್ದು, ಈ ಒಪ್ಪಂದದ ಪ್ರಕಾರ, ರಿಲಯನ್ಸ್‌ ರಿಟೇಲ್‌ ಕಂಪನಿಯು ಭಾರತದಲ್ಲಿ ತನ್ನ ಆನ್‌ಲೈನ್‌ ಮತ್ತು ಆಫ್‌ಲೈನ್‌ ಪ್ಲಾಟ್‌ಫಾರಂಗಳಲ್ಲಿ (ASOS) ಎಎಸ್‌ಒಎಸ್‌ನ ಉತ್ಪನ್ನಗಳು ಲಭ್ಯವಾಗುವಂತೆ ಮಾಡಲಿದೆ.

    ಎಎಸ್‌ಒಎಸ್‌ ಕಂಪನಿಯು ಜಗತ್ತಿನಾದ್ಯಂತ ಯುವ ಪೀಳಿಗೆಯಲ್ಲಿ ಜನಪ್ರಿಯವಾಗಿದ್ದು, 200ಕ್ಕೂ ಅಧಿಕ ಮಾರುಕಟ್ಟೆಗಳಲ್ಲಿ ಕಂಪನಿಯ ಉತ್ಪನ್ನಗಳು ಲಭ್ಯವಿವೆ.

    ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

    ಈ ಕುರಿತು ರಿಲಿಯನ್ಸ್‌ ರಿಟೇಲ್‌ ವೆಂಚರ್ಸ್‌ನ ನಿರ್ದೇಶಕಿ ಇಶಾ ಅಂಬಾನಿ ಮಾತನಾಡಿ, ನಮ್ಮ ಫ್ಯಾಷನ್‌ ಕುಟುಂಬಕ್ಕೆ ಎಎಸ್‌ಒಎಸ್‌ ಅನ್ನು ಸ್ವಾಗತಿಸುತ್ತೇವೆ. ಜಾಗತಿಕ ಫ್ಯಾಷನ್‌ ಅನ್ನು ಭಾರತದ ಮಾರುಕಟ್ಟೆಗೆ ತರುವ ನಿಟ್ಟಿನಲ್ಲಿ ಇದೊಂದು ಮಹತ್ವದ ಮೈಲಿಗಲ್ಲು. ಭಾರತದ ರಿಟೇಲ್‌ ಮಾರುಕಟ್ಟೆಯಲ್ಲಿ ನಮಗಿರುವ ಸ್ಥಾನವನ್ನು ಈ ಪಾಲುದಾರಿಕೆಯು ಸೂಚಿಸುತ್ತದೆ. ಅಲ್ಲದೆ, ನಮ್ಮ ಗ್ರಾಹಕರು ಬಯಸುವ ಫ್ಯಾಷನ್‌ ಉತ್ಪನ್ನಗಳನ್ನು ಅವರಿಗೆ ಒದಗಿಸುವ ಖಾತರಿಯನ್ನೂ ನೀಡುತ್ತದೆ ಎಂದು ತಿಳಿಸಿದರು.

    ಈ ಬಗ್ಗೆ ಎಎಸ್‌ಒಎಸ್‌ (ASOS) ನ ಸಿಇಒ ಜೋಸ್‌ ಆಂಟೋನಿಯೋ ಮಾತನಾಡಿ, ರಿಲಯನ್ಸ್‌ ರಿಟೇಲ್‌ ಜತೆಗೂಡಿ ನಮ್ಮ ಫ್ಯಾಷನ್‌ ಬ್ರ್ಯಾಂಡ್‌ಗಳಲ್ಲಿ ಕೆಲವೊಂದನ್ನು ನಾವು ಭಾರತದ ಗ್ರಾಹಕರಿಗೆ ನೀಡಲು ಉತ್ಸುಕರಾಗಿದ್ದೇವೆ. ಮುಖ್ಯವಾಗಿ ಜಗತ್ತಿನಲ್ಲಿಯೇ ಬ್ರಿಟಿಷ್‌ ಫ್ಯಾಷನ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಎಎಸ್‌ಒಎಸ್‌ ವಿನ್ಯಾಸವನ್ನು ನೀಡಲು ಕಾತುರರಾಗಿದ್ದೇವೆ ಎಂದು ಹೇಳಿದರು.

    ಇದನ್ನೂ ಓದಿ: Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

    ಆರ್‌ಐಎಲ್‌ (ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌) ಸಮೂಹದ ಎಲ್ಲಾ ರೀಟೇಲ್‌ ಕಂಪನಿಗಳನ್ನು ಒಳಗೊಂಡಿರುವ ಕಂಪನಿಯೇ ರಿಲಿಯನ್ಸ್‌ ರಿಟೇಲ್‌ ವೆಂಚರ್ಸ್‌ ಲಿಮಿಟೆಡ್‌ (ರಿಲಯನ್ಸ್‌ ರಿಟೇಲ್‌). ರಿಲಯನ್ಸ್‌ ರಿಟೇಲ್‌ 18,836ಕ್ಕೂ ಅಧಿಕ ಮಳಿಗೆಗಳು ಮತ್ತು ಡಿಜಿಟಲ್‌ ಇ-ಕಾಮರ್ಸ್‌ ಮೂಲಕ ಕಾರ್ಯಾಚರಿಸುತ್ತದೆ. ರಿಲಯನ್ಸ್‌ ರಿಟೇಲ್‌ ಕಂಪನಿಯು ತನ್ನ ಹೊಸ ವಾಣಿಜ್ಯ ಯೋಜನೆಯ ಭಾಗವಾಗಿ 30 ಲಕ್ಷಕ್ಕೂ ಅಧಿಕ ವ್ಯಾಪಾರಿಗಳೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ.

    Continue Reading

    ಬೆಂಗಳೂರು

    KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

    CET Exam : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ ಮಾಡಿಕೊಂಡಿದ್ದ ಕೆಇಎ (KEA) ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಎತ್ತಂಗಡಿ ಆಗಿದ್ದಾರೆ. ಅವರ ಜಾಗಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರಸನ್ನ ಅವರನ್ನು ನೇಮಕ ಮಾಡಲಾಗಿದೆ.

    VISTARANEWS.COM


    on

    By

    KEA Department of Technical Education Director Prasanna has been appointed as the Executive Director of KEA
    Koo

    ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ನಡೆದಿದ್ದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಮಹಾ ಎಡವಟ್ಟು ಆಗಿತ್ತು. ನಾಲ್ಕು ವಿಷಯಗಳಿಂದ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಬಂದಿತ್ತು. ಇದರಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಉಪನ್ಯಾಸಕರಿಂದಲ್ಲೂ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟಿಸಿದ್ದವು. ಇದರ ಬೆನ್ನಲ್ಲೇ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ (ಐಎಎಸ್‌) ಅವರನ್ನೇ ತಲೆದಂಡ ಮಾಡಲಾಗಿದೆ.

    ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದವನ್ನು ರಮ್ಯಾ ಅವರು ಎಳೆದುಕೊಂಡಿದ್ದರು. ಇದೀಗ ರಾಜ್ಯ ಸರ್ಕಾರವು ರಮ್ಯಾರನ್ನು ಎತ್ತಂಗಡಿ ಮಾಡಿ, ಅವರ ಜಾಗಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

    ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

    ಸಿಇಟಿ ಪರೀಕ್ಷೆಯಲ್ಲಿ ಏನಿದು ಔಟ್‌ ಆಫ್‌ ಸಿಲಬಸ್‌ ಗೊಂದಲ?

    ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಬಾರಿಯ ಪರೀಕ್ಷೆಯಲ್ಲಿ 4 ವಿಷಯಗಳಿಂದ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳು ಕೇಳಲಾಗಿತ್ತು. Out of Syllabus ಪ್ರಶ್ನೆಗಳಿಂದ ಪ್ರಾಮಾಣಿಕವಾಗಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳಿಗೆ ಭಾರಿ ಮೋಸವಾಗುತ್ತದೆ. ರಾಜ್ಯದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಎಬಿವಿಪಿ ಸಂಘಟನೆ ಪ್ರತಿಭಟಿಸಿತು. ಈ ಗೊಂದಲದಿಂದ ಶಿಕ್ಷಣ ಇಲಾಖೆಗೂ ಮತ್ತು ಪ್ರಾಧಿಕಾರಕ್ಕೂ ಯಾವುದೇ ತಾಳ-ಮೇಳ ಇಲ್ಲ ಎನ್ನವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕಿಡಿಕಾರಿದರು.

    ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಭಿ ಮತ್ತು ಹಸ್ತಕ್ಷೇಪ ಶಿಕ್ಷಣ ಇಲಾಖೆ ಮತ್ತು ಪ್ರಾಧಿಕಾರಗಳಲ್ಲಿ ಇರುವುದರಿಂದ ಈ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದು ಎವಿಬಿಪಿ ಕಿಡಿಕಾರಿತ್ತು. ಅಲ್ಲದೇ ಸಮಸ್ಯೆಗೆ ಕಾರಣವಾಗಿರುವವರನ್ನು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತ್ತು. ರಾಜ್ಯದಲ್ಲಿ ಮತ್ತೊಮ್ಮೆ ಸಿ.ಇ.ಟಿ – 2024 ಪರೀಕ್ಷೆಗಳನ್ನು ನಡೆಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿತ್ತು.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading
    Advertisement
    Lady Constable
    ದೇಶ10 mins ago

    ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

    DK Shivakumar in Uttar Pradesh and Strategy in Amethi and Rae Bareli
    Lok Sabha Election 202427 mins ago

    DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

    IPL 2024
    ಪ್ರಮುಖ ಸುದ್ದಿ34 mins ago

    IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

    Virat kohli
    ಪ್ರಮುಖ ಸುದ್ದಿ55 mins ago

    Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

    Shah Rukh Khan
    ದೇಶ1 hour ago

    ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

    Rajat Patidar
    ಪ್ರಮುಖ ಸುದ್ದಿ1 hour ago

    Rajat Patidar : ರಜತ್ ಪಾಟೀದಾರ್​ ಮುಂದಿನ ಆವೃತ್ತಿಗೆ ಆರ್​ಸಿಬಿಯಲ್ಲೇ ಇರಬೇಕು; ಮಾಜಿ ಆಟಗಾರನ ಸಲಹೆ

    ASI who was injured in a road accident died in kunigal
    ಕರ್ನಾಟಕ2 hours ago

    Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

    IPL 2024
    ಕ್ರಿಕೆಟ್2 hours ago

    IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

    Prajwal Revanna Case KR Nagar victim kidnapping case Satish sent to judicial custody
    ಕ್ರೈಂ2 hours ago

    Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

    Pay attention to childrens safety during holidays Minister Lakshmi Hebbalkar appeals to parents
    ಬೆಳಗಾವಿ2 hours ago

    Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

    Sharmitha Gowda in bikini
    ಕಿರುತೆರೆ7 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ7 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ7 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ6 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ8 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ5 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ6 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Karnataka Weather Forecast
    ಮಳೆ5 hours ago

    Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

    Drowned in water
    ಹಾಸನ8 hours ago

    Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

    Suspicious Case
    ಬೆಂಗಳೂರು11 hours ago

    Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

    Prajwal Revanna Case
    ಕರ್ನಾಟಕ2 days ago

    Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

    Dina Bhavishya
    ಭವಿಷ್ಯ2 days ago

    Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

    HD Revanna Released first reaction after release will be acquitted of all charges
    ರಾಜಕೀಯ2 days ago

    HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

    CM Siddaramaiah says Our government is stable for 5 years BJP will disintegrate
    Lok Sabha Election 20242 days ago

    CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

    I dont want to go to other states for Lok Sabha Election 2024 campaign for Congress says CM Siddaramaiah
    Lok Sabha Election 20242 days ago

    CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

    HD Revanna Bail I am not happy that Revanna has been released says HD Kumaraswamy
    ರಾಜಕೀಯ2 days ago

    HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

    karnataka Rain Effected
    ಬೆಂಗಳೂರು2 days ago

    Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

    ಟ್ರೆಂಡಿಂಗ್‌