Lok Sabha Election 2024: ಏಪ್ರಿಲ್‌ 17ಕ್ಕೆ ರಾಯಚೂರಲ್ಲಿ ಪವನ್‌ ಕಲ್ಯಾಣ್‌ ರೋಡ್‌ ಶೋ! ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲೂ ಹವಾ - Vistara News

Lok Sabha Election 2024

Lok Sabha Election 2024: ಏಪ್ರಿಲ್‌ 17ಕ್ಕೆ ರಾಯಚೂರಲ್ಲಿ ಪವನ್‌ ಕಲ್ಯಾಣ್‌ ರೋಡ್‌ ಶೋ! ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲೂ ಹವಾ

Lok Sabha Election 2024: ಪವನ್‌ ಕಲ್ಯಾಣ್‌ ನಟ ಮಾತ್ರವಲ್ಲದೆ, ರಾಜಕಾರಣಿಯೂ ಹೌದು. ಅವರು ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಪರ ಸಾಕಷ್ಟು ಒಲವು ಹೊಂದಿದ್ದಾರೆ. ಹೀಗಾಗಿ ಅವರು ಎನ್‌ಡಿಎ ಜತೆ ಕೈಜೋಡಿಸಿದ್ದಾರೆ. ಪವನ್‌ ಕಲ್ಯಾಣ್‌ ಅವರನ್ನು ರಾಯಚೂರು ಮಾತ್ರವಲ್ಲದೆ, ತೆಲುಗು ಪ್ರಾಬಲ್ಯ ಇರುವ ಬಳ್ಳಾರಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜತೆಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿಯೂ ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

VISTARANEWS.COM


on

Lok Sabha Election 2024 Pawan Kalyan roadshow in Raichur on April 17
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ರಾಜ್ಯ ರಾಜಕೀಯದಲ್ಲಿ ಸ್ಟಾರ್‌ ಪ್ರಚಾರಕರ ಹವಾ ಜೋರಾಗಲಿದೆ. ಆಯಾ ಕ್ಷೇತ್ರಗಳ ಅಭ್ಯರ್ಥಿಗಳು ಸ್ಟಾರ್‌ ನಟರನ್ನು ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ರಾಯಚೂರು ಲೋಕಸಭಾ ಕ್ಷೇತ್ರದ (Raichur Lok Sabha constituency) ಬಿಜೆಪಿ ಅಭ್ಯರ್ಥಿ ಪರ ತೆಲುಗು ನಟ ಪವನ್ ಕಲ್ಯಾಣ್ (Pawan Kalyan) ಪ್ರಚಾರ ಮಾಡಲಿದ್ದು, ರೋಡ್‌ ಶೋ ಮೂಲಕ ಅಬ್ಬರಿಸಲಿದ್ದಾರೆ. ಇದರ ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿಯೂ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ‌ನಾಯಕ ಪರ ಸ್ಟಾರ್ ನಟ ಪವನ್‌ ಕಲ್ಯಾಣ್‌ ಪ್ರಚಾರ ಮಾಡಲಿದ್ದಾರೆ. ಪವನ್‌ ಕಲ್ಯಾಣ್‌ ಮಾಸ್‌ ಹೀರೋ ಆಗಿದ್ದು, ಸಹೋದರ ಚಿರಂಜೀವಿ ಅವರಂತೆ ಭಾರಿ ಜನಪ್ರಿಯತೆಯುಳ್ಳ ವ್ಯಕ್ತಿಯಾಗಿದ್ದಾರೆ. ಅವರ ನಟನೆಯ ಬಹುತೇಕ ಸಿನಿಮಾಗಳು ಕರ್ನಾಟಕದಲ್ಲಿಯೂ ಭರ್ಜರಿ ಪ್ರದರ್ಶನ ಕಾಣುತ್ತದೆ. ಅವರಿಗೆ ಕನ್ನಡಿಗ ಅಭಿಮಾನಿಗಳೂ ಇದ್ದಾರೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಕ್ಯಾಂಪೇನ್‌ ಮಾಡಲು ಅವರನ್ನು ಕರೆಸಿಕೊಳ್ಳಲಾಗುತ್ತಿದೆ.

Lok Sabha Election 2024 Pawan Kalyan roadshow in Raichur on April 17

ಏಪ್ರಿಲ್ 17ರಂದು ರಾಯಚೂರಿಗೆ ಭೇಟಿ ನೀಡಲಿರುವ ಪವನ್ ಕಲ್ಯಾಣ್, ಬೆಳಗ್ಗೆ 11ರಿಂದ 12 ಗಂಟೆವರೆಗೆ ಪ್ರಚಾರ ನಡೆಸಲಿದ್ದಾರೆ. ನಗರದ ಗಂಜ್ ವೃತ್ತದಿಂದ ಆರ್‌ಟಿಒ ಕಚೇರಿವರೆಗೆ ಪವನ್ ಕಲ್ಯಾಣ್ ರೋಡ್ ಶೋವನ್ನು ಹಮ್ಮಿಕೊಳ್ಳಲಾಗಿದೆ.

ಪವನ್‌ ಕಲ್ಯಾಣ್‌ ರೋಡ್‌ ಶೋ ರೂಟ್‌ಮ್ಯಾಪ್‌

ಈಗಾಗಲೇ ಪವನ್‌ ಕಲ್ಯಾಣ್‌ ರೋಡ್‌ ಶೋ ರೂಟ್‌ಮ್ಯಾಪ್‌ ಅನ್ನು ಸಹ ಬಿಜೆಪಿ ಸಿದ್ಧಪಡಿಸಿದೆ. ಗಂಜ್ ಸರ್ಕಲ್, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ರೈಲ್ವೆ ನಿಲ್ದಾಣ ಮಾರ್ಗವಾಗಿ ಆರ್‌ಟಿಒ ಸರ್ಕಲ್‌ವರೆಗೂ ನಟ ಪವನ್ ಕಲ್ಯಾಣ್ ರೋಡ್ ಶೋವನ್ನು ಆಯೋಜನೆ ಮಾಡಲಾಗಿದೆ. ರಾಯಚೂರು ನಗರದಲ್ಲಿ ಒಟ್ಟು 5 ಕಿ.ಮೀ.ವರೆಗೆ ಪವನ್ ಕಲ್ಯಾಣ್ ರೋಡ್ ‌ಶೋ ನಡೆಸಲಿದ್ದಾರೆ. ಈ ಮೂಲಕ ಜನರನ್ನು ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ

ಪವನ್‌ ಕಲ್ಯಾಣ್‌ ನಟ ಮಾತ್ರವಲ್ಲದೆ, ರಾಜಕಾರಣಿಯೂ ಹೌದು. ಅವರು ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಪರ ಸಾಕಷ್ಟು ಒಲವು ಹೊಂದಿದ್ದಾರೆ. ಹೀಗಾಗಿ ಅವರು ಎನ್‌ಡಿಎ ಜತೆ ಕೈಜೋಡಿಸಿದ್ದಾರೆ. ಪವನ್‌ ಕಲ್ಯಾಣ್‌ ಅವರನ್ನು ರಾಯಚೂರು ಮಾತ್ರವಲ್ಲದೆ, ತೆಲುಗು ಪ್ರಾಬಲ್ಯ ಇರುವ ಬಳ್ಳಾರಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜತೆಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿಯೂ ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Lok Sabha Election 2024 Pawan Kalyan roadshow in Raichur on April 17

ಏ. 14ರಂದು ಮೋದಿ ಬೆಂಗಳೂರು ಕಾರ್ಯಕ್ರಮ ರದ್ದು; ಮೈಸೂರಲ್ಲಿ ಸಮಾವೇಶ, ಮಂಗಳೂರಲ್ಲಿ ರೋಡ್‌ ಶೋ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಏಪ್ರಿಲ್ 14ರಂದು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಮೊದಲು ಅವರು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ರೋಡ್ ಶೋ (Modi Road Show) ನಡೆಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಬೆಂಗಳೂರಿನ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಲಾಗಿದ್ದು, ಅಂದು ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಪ್ಲ್ಯಾನ್‌ ಮಾಡಲಾಗಿದೆ. ಜತೆಗೆ ಮಂಗಳೂರಿನಲ್ಲಿ ರೋಡ್‌ ಶೋ ನಡೆಸಲು ಪ್ರಧಾನಿ ಕಾರ್ಯಾಲಯದಿಂದ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಚುನಾವಣೆ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಅಂದರೆ ಏ. 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಮೈಸೂರು ಮಹಾರಾಜ ಮೈದಾನದಲ್ಲಿ ಬೃಹತ್‌ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಕೊಡಗು – ಮೈಸೂರು, ಚಾಮರಾಜನಗರ, ಮಂಡ್ಯ ಲೋಕಸಭಾ ಕ್ಷೇತ್ರಗಳ ಜನರನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇದೆ.

ಮಂಗಳೂರು ರೋಡ್‌ ಶೋಗೆ ರೂಟ್‌ ಮ್ಯಾಪ್‌ ಸಿದ್ಧ

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ರೂಟ್ ಮ್ಯಾಪ್ ಸಿದ್ಧಪಡಿಸಲಾಗಿದೆ. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆವರೆಗೆ ಮೆಗಾ ರೋಡ್ ಶೋವನ್ನು ಆಯೋಜನೆ ಮಾಡಲಾಗಿದೆ. ಅಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಆರಂಭವಾಗಲಿದೆ. ನಾರಾಯಣ ಗುರು ಸರ್ಕಲ್ ಬಳಿ ಮೋದಿ ಆಗಮಿಸಿ, ಅಲ್ಲಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ರೋಡ್ ಶೋವನ್ನು ಆರಂಭಿಸಲಿದ್ದಾರೆ.

ಲೇಡಿಹಿಲ್ ನಾರಾಯಣ ಗುರು ಸರ್ಕಲ್‌ನಿಂದ ಲಾಲ್‌ಬಾಗ್‌ನ ಮಂಗಳೂರು ಪಾಲಿಕೆ ಕಚೇರಿ ಎದುರು ತಲುಪಲಿರುವ ರೋಡ್ ಶೋ, ಅಲ್ಲಿಂದ ಬಳ್ಳಾಲ್‌ಬಾಗ್ ದಾಟಿ ಎಂ.ಜಿ. ರಸ್ತೆ ಮೂಲಕ ಸಾಗಿ ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ನವಭಾರತ್ ಸರ್ಕಲ್ ತಲುಪಲಿದೆ. ಬಳಿಕ ಕೆ.ಎಸ್. ರಾವ್ ರಸ್ತೆ ಮೂಲಕ ಸಾಗಿ ಹಂಪನಕಟ್ಟೆ ಸಿಗ್ನಲ್ ಬಳಿ ರೋಡ್ ಶೋ ಅಂತ್ಯವಾಗಲಿದೆ. ಸುಮಾರು 2.5 ಕಿ.ಮೀ. ರೋಡ್‌ ಶೋ ಸಾಗಲಿದೆ.

ಈ ಮೊದಲು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ಸಮಾವೇಶ ರದ್ದುಪಡಿಸಿ ರೋಡ್ ಶೋ ನಡೆಸಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಮೈಸೂರಲ್ಲಿ ಸಮಾವೇಶ

ಹಳೇ ಮೈಸೂರು, ಕರಾವಳಿ ಮೇಲೆ ಬಿಜೆಪಿ ಕಣ್ಣಿಟ್ಟಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೋಡಿ ಮಾಡಿಸಲು ಮುಂದಾಗಿದೆ. ಹೀಗಾಗಿ ಮೈಸೂರಿ‌ನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು- ಕೊಡಗು ಸೇರಿದಂತೆ ಕ್ಲಸ್ಟರ್ ಹಂತದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಮೈಸೂರಲ್ಲಿ ಶಕ್ತಿ ಪ್ರದರ್ಶನಕ್ಕೆ ತಯಾರಿ ನಡೆಸಲಾಗಿದೆ.

ಏಪ್ರಿಲ್ 19ರಂದು ಬೆಂಗಳೂರಿಗೆ ಮೋದಿ?

ಇನ್ನು ಏಪ್ರಿಲ್‌ 14ರಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ಬೆಂಗಳೂರು ಕಾರ್ಯಕ್ರಮವನ್ನು ಪ್ರಧಾನಿ ಕಾರ್ಯಾಲಯದಿಂದ ರದ್ದು ಮಾಡಲಾಗಿದೆ. ಆದರೆ, ಇದೇ ಏಪ್ರಿಲ್‌ 19ರಂದು ಬೆಂಗಳೂರಿಗೆ ಮೋದಿ ಆಗಮಿಸಲಿದ್ದಾರೆ ಎನ್ನಲಾಗಿದೆ. ಅಂದು ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Narendra Modi: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ ಎಂದು ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra modi
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕು ಹಂತದ ಮತದಾನ ಮುಗಿದರೂ ಚುನಾವಣೆ ಅಬ್ಬರ ಮಾತ್ರ ಮುಗಿದಿಲ್ಲ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವುದರಿಂದ ರಾಜಕೀಯ ನಾಯಕರು ತೀಕ್ಷ್ಣ ಹೇಳಿಕೆ, ವಾಗ್ದಾಳಿ, ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಮಂದಿರ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಳ ವಿರುದ್ಧ ವಾಗ್ಬಾಣ ಬಿಡುತ್ತಿದ್ದಾರೆ. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು (Ram Mandir) ನೆಲಸಮಗೊಳಿಸುತ್ತಾರೆ” ಎಂದು ಶುಕ್ರವಾರ (ಮೇ 17) ವಾಗ್ದಾಳಿ ನಡೆಸಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ಮಾತನಾಡಿದರು. “ದೇಶದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ಅವರು ರಾಮಲಲ್ಲಾನನ್ನು ಮತ್ತೆ ಟೆಂಟ್‌ಗೆ ಕಳುಹಿಸುತ್ತಾರೆ. ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ” ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟವನ್ನು ಉಲ್ಲೇಖಿಸಿ ಮೋದಿ ಕಾಂಗ್ರೆಸ್‌ಗೆ ಕುಟುಕಿದರು. “ದೇಶಾದ್ಯಂತ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯುವಾಗ ದೇಶವನ್ನು ವಿಭಜನೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬಂತು. ಆಗ ಇಡೀ ದೇಶ ಅಚ್ಚರಿಗೀಡಾಯಿತು. ದೇಶವನ್ನು ವಿಭಜನೆ ಮಾಡಲಾಗುತ್ತದೆಯೇ ಎಂಬ ಆತಂಕ ಮೂಡಿತು. ಆದರೆ, ಕಾಂಗ್ರೆಸಿಗರು ದೇಶವನ್ನು ಇಬ್ಭಾಗ ಮಾಡಿದರು. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಕಾಂಗ್ರೆಸಿಗರಿಗೆ ದೇಶ ಮುಖ್ಯವಲ್ಲ. ಅವರಿಗೆ ತಮ್ಮ ಕುಟುಂಬ ಮುಖ್ಯ, ಅಧಿಕಾರ ಮುಖ್ಯ” ಎಂದು ಟೀಕಿಸಿದರು.

ಬೀಗ ಜಡಿಯುತ್ತಾರೆ ಎಂದಿದ್ದ ಮೋದಿ

ಕೆಲ ದಿನಗಳ ಹಿಂದೆಯೂ ಮೋದಿ ಅವರು ರಾಮಮಂದಿರ ಹಾಗೂ ಕಾಂಗ್ರೆಸ್‌ ಬಗ್ಗೆ ಮಾತನಾಡಿದ್ದರು. “ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂದಿದ್ದರು.

ಇದನ್ನೂ ಓದಿ: ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ದೇಶ

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ ಎಂದು ಎಚ್ಚರಿಸಿದ್ದ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರಿಗೆ ಯೋಗಿ ಆದಿತ್ಯನಾಥ್‌ ತಿರುಗೇಟು ನೀಡಿದ್ದರು. “ನಾವೇನೂ ಅಣುಬಾಂಬ್‌ಗಳನ್ನು ಫ್ರಿಡ್ಜ್‌ನಲ್ಲಿ ಇರಿಸಲು ತಯಾರಿಸಿಲ್ಲ. ಇದು ಹೊಸ ಭಾರತ. ನಮ್ಮ ತಂಟೆಗೆ ಬಂದರೆ ಯಾರನ್ನೂ ನಾವು ಬಿಡುವುದಿಲ್ಲ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ಭಾರತ ಕಳೆದ 10 ವರ್ಷಗಳಲ್ಲಿ ಕಂಡುಕೊಂಡಿದೆ” ಎಂದು ಹೇಳಿದ್ದರು. ಈಗ ಮೋದಿ ಕೂಡ ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: “ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ಅದರ ಬಳಿ ಅಣು ಬಾಂಬ್‌ಗಳು ಇವೆ. ಹಾಗಾಗಿ, ಪಾಕಿಸ್ತಾನಕ್ಕೆ ಭಾರತ ಗೌರವ ನೀಡಬೇಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನದ ಬಳಿ ಅಣು ಬಾಂಬ್‌ ಇವೆ ಎಂಬುದಾಗಿ ಕಾಂಗ್ರೆಸ್‌ (Congress) ಹೇಳುತ್ತದೆ. ಆದರೆ, ಅವುಗಳನ್ನು ನಿರ್ವಹಣೆ ಮಾಡುವಷ್ಟು ಹಣವೇ ಪಾಕಿಸ್ತಾನದ ಬಳಿ ಇಲ್ಲ” ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ನರೇಂದ್ರ ಮೋದಿ ಮಾತನಾಡಿದರು. “ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ನಾಯಕರನ್ನು ಜನ ಯಾವುದೇ ಕಾರಣಕ್ಕೂ ನಂಬಬಾರದು. ಅವರು ವೋಟ್‌ ಜಿಹಾದ್‌ಗೆ ಕರೆ ನೀಡುತ್ತಾರೆ. ಸಮಾಜವನ್ನು ಒಡೆಯುವುದು ಅವರ ಉದ್ದೇಶವಾಗಿದೆ. ಮಾಫಿಯಾವನ್ನು ಸಮಾಜವಾದಿ ಪಕ್ಷವು ಈಗಲೂ ಬೆಂಬಲಿಸುತ್ತದೆ. ಇನ್ನು, ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡುತ್ತಲೇ ಬಂದಿತು. ಆದರೆ, ಕಾಂಗ್ರೆಸ್‌ ದಾಳಿ ಮಾಡಿದವರಿಗೇ ಕ್ಲೀನ್‌ಚಿಟ್‌ ನೀಡುವ ಮೂಲಕ ತನ್ನ ನಿಲುವು ಯಾರ ಪರ ಎಂಬುದನ್ನು ಸಾಬೀತುಪಡಿಸಿತು” ಎಂದು ಮೋದಿ ಹೇಳಿದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Continue Reading

ದೇಶ

Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Narendra Modi: ದೇಶದ ಸಂವಿಧಾನಕ್ಕೆ ಮೊದಲು ತಿದ್ದುಪಡಿ ತಂದಿದ್ದು ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು ಅವರು. ಸಂವಿಧಾನಕ್ಕೆ ಧಕ್ಕೆ ತಂದವರು ಯಾರು ಎಂಬ ಪ್ರಶ್ನೆಯನ್ನು ಅವರಿಗೆ ಮೊದಲು ಕೇಳಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲು ತಿದ್ದುಪಡಿ ಮಾಡಿದರು. ಇದಾದ ಬಳಿಕ ಎಲ್ಲ ಪೀಳಿಗೆಗಳ ಕುಟುಂಬಸ್ಥರು ಹಲವು ರೀತಿಯಲ್ಲಿ ಸಂವಿಧಾನಕ್ಕೆ ಧಕ್ಕೆ ತಂದರು ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳುವ ಜತೆಗೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಸಂವಿಧಾನ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಗಾಂಧಿ ಕುಟುಂಬಸ್ಥರ ವಿರುದ್ಧ ನರೇಂದ್ರ ಮೋದಿ ಟೀಕಿಸಿದ್ದಾರೆ. “ನೆಹರು ಅವರಿಂದ ಹಿಡಿದು ರಾಹುಲ್‌ ಗಾಂಧಿವರೆಗೆ ನಾಲ್ಕು ಪೀಳಿಗೆಗಳು (Gandhi Family) ಸಂವಿಧಾನಕ್ಕೆ ಧಕ್ಕೆ ತಂದಿವೆ” ಎಂದು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದ ವೇಳೆ ಪ್ರಸ್ತಾಪಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 400ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದರೆ ಸಂವಿಧಾನ ಬದಲಾಯಿಸುತ್ತದೆ ಎಂಬುದಾಗಿ ಪ್ರತಿಪಕ್ಷಗಳು ಆರೋಪಿಸುತ್ತಿವೆ ಎಂಬ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ದೇಶದ ಸಂವಿಧಾನಕ್ಕೆ ಮೊದಲು ತಿದ್ದುಪಡಿ ತಂದಿದ್ದು ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು ಅವರು. ಸಂವಿಧಾನಕ್ಕೆ ಧಕ್ಕೆ ತಂದವರು ಯಾರು ಎಂಬ ಪ್ರಶ್ನೆಯನ್ನು ಅವರಿಗೆ ಮೊದಲು ಕೇಳಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲು ತಿದ್ದುಪಡಿ ಮಾಡಿದರು. ಇದಾದ ಬಳಿಕ ಎಲ್ಲ ಪೀಳಿಗೆಗಳ ಕುಟುಂಬಸ್ಥರು ಹಲವು ರೀತಿಯಲ್ಲಿ ಸಂವಿಧಾನದ ಆಶಯಕ್ಕೆ ಧಕ್ಕೆ ತಂದರು” ಎಂದು ಹೇಳಿದರು.

“ಜವಾಹರ ಲಾಲ್‌ ನೆಹರು ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟುಮಾಡಿದರು. ನೆಹರು ಅವರ ಪುತ್ರಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ನ್ಯಾಯಾಲಯದ ಆದೇಶವನ್ನೇ ಹಿಂದಕ್ಕೆ ತಳ್ಳಿದರು. ಇಂದಿರಾ ಗಾಂಧಿ ಅವರ ಪುತ್ರ ರಾಜೀವ್‌ ಗಾಂಧಿ ಅವರು ಶಾ ಬಾನೋ ಪ್ರಕರಣದಲ್ಲಿ ಕೋರ್ಟ್‌ ತೀರ್ಮಾನವನ್ನೇ ಬದಲಿಸಿದರು. ಇದಕ್ಕಾಗಿ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದರು. ಇನ್ನು ರಾಹುಲ್‌ ಗಾಂಧಿ ಅವರು ಮನಮೋಹನ್‌ ಸಿಂಗ್‌ ಸರ್ಕಾರವು 2013ರಲ್ಲಿ ಹೊರಡಿಸಿದ್ದ ಸುಗ್ರೀವಾಜ್ಞೆಯ ಪ್ರತಿಯನ್ನೇ ಹರಿದುಹಾಕಿದರು. ಇದೆಲ್ಲ ಸಂವಿಧಾನಕ್ಕೆ ಗಾಂಧಿ ಕುಟುಂಬಸ್ಥರು ತಂದ ಧಕ್ಕೆಯಾಗಿದೆ” ಎಂದು ಮೋದಿ ವಾಗ್ದಾಳಿ ನಡೆಸಿದರು.

“ಹೀಗೆ ಜವಾಹರ ಲಾಲ್‌ ನೆಹರು ಅವರಿಂದ ಹಿಡಿದು ರಾಹುಲ್‌ ಗಾಂಧಿವರೆಗೆ ನಾಲ್ಕೂ ಪೀಳಿಗೆಗಳ ನಾಯಕರು ಸಂವಿಧಾನವನ್ನು ಒಂದಲ್ಲ ಒಂದು ರೀತಿಯಲ್ಲಿ ಹಾಳು ಮಾಡಿದ್ದಾರೆ. ಆದರೆ, ನಮ್ಮ ಸರ್ಕಾರವು ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆ ತರುವುದಿಲ್ಲ. ಇದೇ ಕಾರಣಕ್ಕಾಗಿಯೇ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ನಾನು ಬಿಡುವುದಿಲ್ಲ ಎಂಬುದಾಗಿ ಹೇಳುತ್ತಿದ್ದೇನೆ” ಎಂದು ತಿಳಿಸಿದರು. “ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತಾರೆ. ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ” ಎಂಬುದು ಕಾಂಗ್ರೆಸ್‌ ನಾಯಕರ ಆರೋಪವಾಗಿದೆ.

ಇದನ್ನೂ ಓದಿ: PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Continue Reading
Advertisement
Road Accident
ಪ್ರಮುಖ ಸುದ್ದಿ2 mins ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Virat Kohli
ಕ್ರೀಡೆ21 mins ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ27 mins ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

ಕರ್ನಾಟಕ59 mins ago

Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ

dilip Kumar
ಪ್ರಮುಖ ಸುದ್ದಿ1 hour ago

Milind Kumar : ಆರ್​ಸಿಬಿಯ ಮಾಜಿ ಆಟಗಾರ ಕ್ರಿಕೆಟ್​ನಿಂದ ನಿವೃತ್ತಿ

Fan Code OTT Subscription Now for Jio AirFiber JioFiber Jio Mobility Customers
ದೇಶ1 hour ago

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Gopi Hinduja
ವಿದೇಶ1 hour ago

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

AC visited Gandabommanahalli Goshala and inspected
ವಿಜಯನಗರ2 hours ago

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Application Invited for TTTI and Toyota Skill Courses from Toyota Technical Training Institute
ಕರ್ನಾಟಕ2 hours ago

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

SSLC Exam 2024
ಕರ್ನಾಟಕ2 hours ago

SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ3 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ16 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌