Weight Loss Exercises: ಈ ಸರಳ ವ್ಯಾಯಾಮಗಳಿಂದ ನೀವೂ ತೂಕ ಇಳಿಸಿಕೊಳ್ಳಬಹುದು! - Vistara News

ಆರೋಗ್ಯ

Weight Loss Exercises: ಈ ಸರಳ ವ್ಯಾಯಾಮಗಳಿಂದ ನೀವೂ ತೂಕ ಇಳಿಸಿಕೊಳ್ಳಬಹುದು!

ವ್ಯಾಯಾಮವನ್ನು ನಿಯಮಿತವಾಗಿ ಮಾಡಿದರೆ ತೂಕ ಇಳಿಕೆ ಮಾತ್ರವೇ ಅಲ್ಲ, ಇನ್ನೂ ಬಹಳಷ್ಟು ಲಾಭಗಳಿವೆ ನಮ್ಮ ದೇಹಕ್ಕೆ. ವ್ಯಾಯಾಮ ಎನ್ನುತ್ತಿದ್ದಂತೆ ರಸ್ತೆ ಮೇಲೆ ಅಂಗೈಯಲ್ಲಿ ಜೀವ ಹಿಡಿದು ಓಡುವವರೊ, ಅಥವಾ ಜಿಮ್‌ನಲ್ಲಿ ಬೆವರಿಳಿಸುವವರೊ ನೆನಪಾಗಿ- ʻಅವೆಲ್ಲಾ ನನ್ಕೈಯಲ್ಲಾಗಲ್ಲ!ʼ (Weight Loss Exercises) ಎಂದು ಮನಸ್ಸು ಹಿಂಜರಿಯುತ್ತದೆ. ವ್ಯಾಯಾಮಗಳು ಸರಳವಾಗಿಯೂ ಇರಬಹುದಲ್ಲ? ಈ ಲೇಖನ ಓದಿ.

VISTARANEWS.COM


on

Weight Loss Exercises
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ʻಚೆನ್ನಾಗಿ ಬೆವರಿದರೆ ತೂಕ ಇಳಿಯುತ್ತದೆʼ, (Weight Loss Exercises) ʻಊಟ ಬಿಟ್ರೆ ಹೊಟ್ಟೆಯ ಕೊಬ್ಬೆಲ್ಲ ಇಳಿಯತ್ತೆʼ, ʻಒಂದು ತಿಂಗಳಲ್ಲಿ ತೂಕ ಇಳಿಸುವ (Weight Loss) ಪ್ರೋಗಾಂ ಸೇರಿದ್ದೇನೆʼ ಮುಂತಾದ ಎಷ್ಟೋ ಮಾತುಗಳನ್ನು ಕೇಳಿರುತ್ತೇವೆ, ನಮ್ಮಲ್ಲೇ ಕೆಲವರು ಇದನ್ನು ಮಾಡಲೂ ಯತ್ನಿಸಿರುತ್ತೇವೆ. ತೂಕ ಇಳಿಸುವ ಮರೀಚಿಕೆಯನ್ನು ಹಿಡಿಯುವುದಕ್ಕೆ ಇಡೀ ಲೋಕವೇ ಓಡುತ್ತಿದೆ ಎಂದೇನಾದರೂ ಭಾಸವಾದರೆ ಅತಿಶಯ ಅಲ್ಲ. ಆದರೆ ಹಾಗೆ ಏನಕ್ಕೇನೋ ಮಾಡಿದರೆ ತೂಕ ಇಳಿಯದು, ಇಳಿದರೂ ಅದು ತತ್ಕಾಲಿಕ. ತೂಕ ಇಳಿಸುವುದಕ್ಕೆ (Weight Loss) ಗಮನಿಸಬೇಕಾದ್ದು ಒಂದು ವ್ಯಾಯಾಮ, ಇನ್ನೊಂದು ಆಹಾರ. ಒಂದನ್ನು ಬಿಟ್ಟು ಇನ್ನೊಂದಿಲ್ಲ. ಅಂದರೆ, ಬಕೆಟ್‌ಗಟ್ಟಲೆ ಬೆವರು ಬರುವಂತೆ ವ್ಯಾಯಾಮ ಮಾಡಿ, ಬೇಕಾಬಿಟ್ಟಿ ತಿಂದರೆ ಅಥವಾ ಊಟದಲ್ಲಿ ಚೆನ್ನಾಗಿ ಪಥ್ಯ ಮಾಡಿ ಜಡವಾಗಿ ಬಿದ್ದುಕೊಂಡರೆ ಶರೀರ ವಿಚಿತ್ರವಾಗಿ ವರ್ತಿಸಲಾರಂಭಿಸುತ್ತದೆ. ಊಟದಲ್ಲಿ ಸಮತೋಲನ ಕಾಪಾಡಿಕೊಂಡು, ವ್ಯಾಯಾಮ ಮಾಡಿದರೆ (Weight Loss Exercises) ಆರೋಗ್ಯಪೂರ್ಣವಾದ ಶರೀರ ನಮ್ಮದಾಗುತ್ತದೆ. ಅಂದಹಾಗೆ, ಸಿಕ್ಕಾಪಟ್ಟೆ ಬೆವರಿದರೆ ತೂಕ ಇಳಿಯುತ್ತದೆಂದಲ್ಲ. ಬೆವರಿಗೂ ತೂಕ ಇಳಿಕೆಗೂ ನೇರ ಸಂಬಂಧವಿಲ್ಲ. ಉಷ್ಣತೆಯನ್ನು ಕಾಪಾಡಿಕೊಳ್ಳುವುದಕ್ಕೆ ದೇಹ ಬೆವರುತ್ತದೆಯಷ್ಟೇ. ವ್ಯಾಯಾಮ ಮಾಡುವಾಗ ಬೆವರಿದರೆ ತೂಕ ಇಳಿಯುವುದು ವ್ಯಾಯಾಮದಿಂದಲೇ ಹೊರತು ಬೆವರಿನಿಂದಲ್ಲ. ಜೊತೆಗೆ, ಒಂದು ವಾರದಲ್ಲಿ ತೂಕ ಇಳಿಸಲಾಗದು. ಏನೇನೋ ಚುಟುಕು ಡಯೆಟ್‌ಗಳು ಆರೋಗ್ಯಕ್ಕೆ ತೊಂದರೆ ತರಬಹುದು. ತೂಕ ಇಳಿಸುವುದು ಸುಸ್ಥಿರವಾದಾಗ ಮಾತ್ರ ಆರೋಗ್ಯಕ್ಕೆ ತೊಂದರೆ ಆಗುವುದಿಲ್ಲ. ವ್ಯಾಯಾಮ ಮತ್ತು ಆಹಾರ ನಿರ್ವಹಣೆಯಿಂದ ಇದು ಸಾಧ್ಯ. ಇದಕ್ಕಾಗಿ ಮನೆಯಲ್ಲಿ ಮಾಡುವಂಥ ಕೆಲವು ಸರಳ ತೂಕ ಇಳಿಸುವ ವ್ಯಾಯಾಮಗಳನ್ನು (Weight Loss Exercises) ಇಲ್ಲಿ ಹೇಳಲಾಗಿದೆ.

Aerobic exercises

ಏರೋಬಿಕ್‌ ವ್ಯಾಯಾಮಗಳು

ನಡಿಗೆ ಇದರಲ್ಲಿ ಪ್ರಧಾನವಾದುದು. ತ್ವರಿತವಾಗಿ ನಡೆಯುವುದು ತೂಕ ಇಳಿಸುವುದಕ್ಕೆ ಪ್ರಶಸ್ತವಾದ ವ್ಯಾಯಾಮ. ದೇಹದ ಕೀಲುಗಳ ಮೇಲೆ ಕಡಿಮೆ ಒತ್ತಡ ಹಾಕುವ, ಹೆಚ್ಚಿನದಾದ ಯಾವುದೇ ಸೌಲಭ್ಯ ಬೇಡದ ಸರಳ ವ್ಯಾಯಾಮವಿದು. ವಾರದಲ್ಲಿ ಐದು ದಿನ, ದಿನಕ್ಕೆ 40 ನಿಮಿಷಗಳಂತೆ ತ್ವರಿತವಾಗಿ ನಡೆದರೆ ಒಂದು ತಿಂಗಳಲ್ಲಿ ದೇಹದ ತೂಕದಲ್ಲಿ ವ್ಯತ್ಯಾಸ ಕಾಣಲು ಆರಂಭಿಸುತ್ತದೆ. ಜೊತೆಗೆ ಆಹಾರದಲ್ಲಿ ಮಾರ್ಪಾಡೂ ಇರಬೇಕು. ಜಾಗಿಂಗ್‌, ಓಡುವುದು, ಸೈಕಲ್‌ ಹೊಡೆಯುವುದು, ನೃತ್ಯ, ಈಜು ಇತ್ಯಾದಿಗಳೆಲ್ಲಾ ಇನ್ನೂ ಒಳ್ಳೆಯದು, ಆದರೆ ಎಲ್ಲರಿಗೂ ಇದು ಆಗದಿರಬಹುದು.

Image Of Yoga Poses to Boost Lung Health

ಯೋಗ

ಇದಲ್ಲದೆ, ಯೋಗ, ಪಿಲಾಟೆ ಮುಂತಾದ ಕೆಲವು ವ್ಯಾಯಾಮ ಪದ್ಧತಿಗಳನ್ನು ಸರಿಯಾದ ಮಾರ್ಗದರ್ಶನದಲ್ಲಿ ಕಲಿತರೆ ದೇಹದಲ್ಲಿ ಜಮೆಯಾದ ಕೊಬ್ಬು ಕರಗಿಸಿ, ಬಲವೃದ್ಧಿ ಮಾಡುವುದಕ್ಕೆ ಸಾಧ್ಯವಿದೆ. ಇಂಥ ಯಾವ ತರಬೇತಿಗಳಿಗೆ ಅಗತ್ಯವಾಗುವ ವಸ್ತುಗಳೆಂದರೆ ಕಲಿಯುವವರ ಶ್ರಮ ಮತ್ತು ಕಲಿಸುವವರ ಸೂಕ್ತ ಮಾರ್ಗದರ್ಶನ ಮಾತ್ರ.

It also strengthens arms and upper body Skipping Benefits

ಸ್ಕಿಪ್ಪಿಂಗ್

ಇದನ್ನು ಇಡೀ ದೇಹಕ್ಕೆ ಆಗುವಂಥ ವ್ಯಾಯಾಮ. ಕಡಿಮೆ ಸಮಯದಲ್ಲಿ ಹೆಚ್ಚು ಕ್ಯಾಲರಿಯನ್ನು ಬೂದಿ ಮಾಡುವುದೇ ಅಲ್ಲದೆ, ಸ್ನಾಯುಗಳನ್ನು ಸದೃಢಗೊಳಿಸುತ್ತದೆ. ದೇಹದ ಚಯಾಪಚಯವನ್ನೂ ಹೆಚ್ಚಿಸುತ್ತದೆ. ಹೃದಯ ಮತ್ತು ಶ್ವಾಸಕೋಶಗಳ ಬಲಹೆಚ್ಚಿಸಿ, ಅವುಗಳ ಕಾರ್ಯಕ್ಷಮತೆಯನ್ನು ಏರಿಸುತ್ತದೆ. ಮೊದಲಿಗೆ 50-100ರ ಲೆಕ್ಕದಲ್ಲಿ ಹಗ್ಗದಾಟವನ್ನು ಆರಂಭಿಸಿ, ಕ್ರಮೇಣ ಏರಿಸುತ್ತಾ ಸಾವಿರ ದಾಟಿಸಬಹುದು.

Lunges

ಲಂಜಸ್‌

ಜನಪ್ರಿಯವಾಗಿ ಬಳಕೆಯಲ್ಲಿರುವ ಸ್ಟ್ರೆಂಥ್‌ ತರಬೇತಿಯ ವ್ಯಾಯಾಮಗಳಿವು. ಬೆನ್ನು, ಪೃಷ್ಠ ಮತ್ತು ಕಾಲುಗಳ ಬಲವರ್ಧನೆಗೆ ಇವು ಅತಿ ಉಪಯುಕ್ತವಾದವು. ದೇಹದ ಈ ಭಾಗಗಳ ಕೊಬ್ಬನ್ನು ಕರಗಿಸಲು ಮತ್ತು ಸ್ನಾಯುಗಳನ್ನು ಹುರಿಗಟ್ಟಿಸಲು ಇವು ಪರಿಣಾಮಕಾರಿಯಾಗಿವೆ. ದೇಹದ ಚಲನೆ, ಸಮತೋಲನ ಮತ್ತು ಸಮನ್ವಯ ವೃದ್ಧಿಯೂ ಇವುಗಳಿಂದ ಸಾಧ್ಯ.

Plank

ಪ್ಲಾಂಕ್

ದೇಹದ ಹಲವಾರು ದೊಡ್ಡ ಸ್ನಾಯುಗಳನ್ನು ಹುರಿಗಟ್ಟಿಸುವುದಕ್ಕೆ ಈ ವ್ಯಾಯಾಮ ಉಪಯುಕ್ತ. ಭುಜ, ತೋಳು, ಎದೆ, ಹೊಟ್ಟೆ, ಬೆನ್ನು, ಪೃಷ್ಠ ಮತ್ತು ತೊಡೆಯ ಸ್ನಾಯುಗಳಿಗೆ ಇದು ಬಲ ನೀಡುತ್ತದೆ. ಮಾತ್ರವಲ್ಲ, ಈ ಭಾಗಗಳಲ್ಲಿರುವ ಬೊಜ್ಜು ಕರಗಿಸಲು ಅತ್ಯಂತ ಪರಿಣಾಮಕಾರಿಯಾದ ವ್ಯಾಯಾಮವಿದು. ನೋಡುವುದಕ್ಕೆ ಸರಳವಾದರೂ, ಎರಡು ನಿಮಿಷ ಪ್ಲಾಂಕ್‌ ಭಂಗಿಯಲ್ಲಿ ದೇಹವನ್ನು ಹಿಡಿಯುವಷ್ಟರಲ್ಲಿ ʻಉಶ್ಶಪ್ಪಾʼ ಎನಿಸುವ ವ್ಯಾಯಾಮವಿದು. ಇದರಲ್ಲೂ ಹಲವು ಭಿನ್ನ ಭಂಗಿಗಳಿದ್ದು, ಒಂದೊಂದೂ ಒಂದೊಂದು ಸ್ನಾಯುಗಳಿಗೆ ಕೆಲಸ ನೀಡುತ್ತದೆ. ಮೊದಲಿಗೆ ಅರ್ಧ ನಿಮಿಷದಿಂದ ಆರಂಭಿಸಿ, ಕ್ರಮೇಣ ಹಲವು ನಿಮಷಗಳವರೆಗೆ ಈ ಭಂಗಿಯ ತೀವ್ರತೆಯನ್ನು ಹೆಚ್ಚಿಸಬಹುದು.

Push up

ಪುಶ್‌ ಅಪ್‌

ಇದರಲ್ಲೂ ಹಲವಾರು ಭಿನ್ನತೆಗಳಿದ್ದು, ಒಂದೊಂದು ವ್ಯಾಯಾಮದ ತೀವ್ರತೆಯೂ ಬೇರೆಯೇ ಇದೆ. ಇಂಥ ಬಹಳಷ್ಟು ವ್ಯಾಯಾಮಗಳು ಬೇಡುವುದು ಒಂದು ಯೋಗ ಮ್ಯಾಟ್‌ ಮಾತ್ರ. ನೆಲಕ್ಕೆ ಸಮಾನಾಂತರವಾಗಿ ದೇಹವನ್ನು ನಿಲ್ಲಿಸಿ, ಶರೀರವನ್ನು ಏರಿಳಿಸುವ ಈ ಕ್ರಿಯೆಯಲ್ಲಿ ಎದೆ, ಭುಜ, ರಟ್ಟೆ, ಹೊಟ್ಟೆ ಮತ್ತು ಬೆನ್ನುಗಳನ್ನು ಹುರಿಗಟ್ಟಿಸಬಹುದು.

Squat This exercise from the waist to the lower body i e from the lower back to the feet increases the range of motion in the body

ಸ್ಕ್ವಾಟ್

ಇವೆಲ್ಲ ಒಂದು ರೀತಿಯಲ್ಲಿ ಅರೆಮಂಡಿಯ ಭಂಗಿಗಳು. ಕಟಿಯಿಂದ ಕೆಳ ಭಾಗಕ್ಕೆ ಬಲ ತುಂಬುವ ಭಂಗಿಗಳಿವು. ಸೊಂಟ ಮತ್ತು ತೊಡೆಗಳಲ್ಲಿ ಹೆಚ್ಚಿರುವ ಸುತ್ತಳತೆಯನ್ನು ಕರಗಿಸಲು ಈ ವ್ಯಾಯಾಮಗಳು ಉಪಯುಕ್ತ. ದೇಹದ ಸಮತೋಲನ ಮತ್ತು ಚುರುಕುತನವನ್ನು ಹೆಚ್ಚಿಸಲೂ ಇವು ಬಳಕೆಯಾಗುತ್ತವೆ. ಆರಂಭದಲ್ಲಿ ಯಾವುದಾದರೊಂದು ರೀತಿಯ ಸ್ಕ್ವಾಟ್‌ ವ್ಯಾಯಾಮವನ್ನು 25-50ರಂತೆ ಪ್ರಾರಂಭಿಸಿ, ದಿನ ಕಳೆದಂತೆ ಸಂಖ್ಯೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ: One Meal A Day: ಟ್ರೆಂಡ್‌ನಲ್ಲಿರುವ ಡಯಟ್‌ ʻವನ್‌ ಮೀಲ್‌ ಅ ಡೇʼ ಒಳ್ಳೆಯದೋ ಕೆಟ್ಟದ್ದೋ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

Cholera: ಗ್ರಾಮದಲ್ಲಿ 12 ಕೈ ಪಂಪ್‌ಗಳಿದ್ದು, ನಾಲ್ಕು ಕೈಪಂಪ್‌ಗಳ ನೀರು ಕುಡಿಯಲು ಯೋಗ್ಯವಿಲ್ಲ. ಆತಂಕಕಾರಿ ವರದಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ, ಕಲುಷಿತ ನೀರು ಸೇವಿಸಿ ನೂರಾರು ಜನ ಅಸ್ವಸ್ಥರಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರಿದ್ದಾರೆ.

VISTARANEWS.COM


on

Cholera
Koo

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿಧಾನಸಭೆ ಕ್ಷೇತ್ರವಾದ ವರುಣದಲ್ಲಿ (Varuna) ಶುದ್ಧ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದ್ದು, ತಗಡೂರು ಗ್ರಾಮದಲ್ಲಿ ಇದರಿಂದ ಜನ ಕಾಲರಾಗೆ ತುತ್ತಾಗುತ್ತಿದ್ದಾರೆ. ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ, ಕಲುಷಿತ ನೀರು ಸೇವಿಸಿದ ಕಾರಣ 25 ಗ್ರಾಮಸ್ಥರು ಸೇರಿ 114 ಮಂದಿ ಕಾಲರಾ (Cholera) ಕಾಯಿಲೆಯಿಂದ ಬಳಲುತ್ತಿದ್ದಾರೆ. ವಾಂತಿ-ಭೇದಿಯಿಂದ ಜನ ತತ್ತರಿಸಿ ಹೋಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ತಗಡೂರು ಗ್ರಾಮವು ನಂಜನಗೂಡು ತಾಲೂಕಿಗೆ ಸೇರಿದರೂ ವರುಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ತಗಡೂರು ಗ್ರಾಮ ಪಂಚಾಯಿತಿಯ 1, 2 ಹಾಗೂ 3ನೇ ವಾಸಿಸುತ್ತಿರುವ ಜನರು ಕಾಲರಾಗೆ ತುತ್ತಾಗಿದ್ದಾರೆ. 114 ರೋಗಿಗಳಲ್ಲಿ ಐವರ ಸ್ಥಿತಿ ಗಂಭೀರವಾದ ಕಾರಣ ಅವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಮಧ್ಯೆಯೇ, ಕಾಲರಾ ಹರಡಲು ಅಧಿಕಾರಿಗಳ ನಿರ್ಲಕ್ಷ್ಯವೇ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

12 ಕೈ ಪಂಪ್‌ಗಳಿದ್ದರೂ ಪ್ರಯೋಜನ ಇಲ್ಲ

ಗ್ರಾಮದಲ್ಲಿ 12 ಕೈ ಪಂಪ್‌ಗಳಿದ್ದು, ನಾಲ್ಕು ಕೈಪಂಪ್‌ಗಳ ನೀರು ಕುಡಿಯಲು ಯೋಗ್ಯವಿಲ್ಲ. ಆತಂಕಕಾರಿ ವರದಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ, ಕಲುಷಿತ ನೀರು ಸೇವಿಸಿ ನೂರಾರು ಜನ ಅಸ್ವಸ್ಥರಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಜನಾಕ್ರೋಶದ ಬಳಿಕ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು.

ದಿಢೀರ್‌ ಕ್ರಮಕ್ಕೆ ಮುಂದಾದ ಅಧಿಕಾರಿಗಳು

ಗ್ರಾಮದಲ್ಲಿ ನೂರಾರು ಜನ ಕಾಲರಾಗೆ ತುತ್ತಾಗಿರುವ ಸುದ್ದಿ ತಿಳಿಯುತ್ತಲೇ ಅಧಿಕಾರಿಗಳ ದಂಡೇ ಗ್ರಾಮಕ್ಕೆ ತೆರಳಿದೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕುಮಾರಸ್ವಾಮಿ, ನಂಜನಗೂಡು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಜಿಲ್ಲಾ ಕಾಲರಾ ವೈದ್ಯಾಧಿಕಾರಿ ಡಾ. ಪುಟ್ಟತಾಯಮ್ಮ, ತಾಲೂಕು ವೈದ್ಯಾಧಿಕಾರಿ ಡಾ. ಈಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಗ್ರಾಮದಲ್ಲಿರುವ ಸಾರ್ವಜನಿಕರಿಗೆ ಕೂಡ ಪ್ರತಿರೋಧಕ ಚುಚ್ಚುಮದ್ದು ನೀಡಲಾಗುತ್ತಿದೆ. ಪ್ರತಿ ಮನೆ ಮನೆಗೆ ಒಆರ್‌ಎಸ್ ಪೌಡರ್ ವಿತರಣೆ ಮಾಡಲಾಗಿದೆ. ಮನೆಯಲ್ಲಿ ಬಿಸಿ ನೀರು ಸೇವನೆ ಮಾಡಲು ಪ್ರತ್ಯೇಕವಾಗಿ ಕುಡಿಯುವ ನೀರಿನ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ.

ಗ್ರಾಮದಲ್ಲಿ ಅಧಿಕಾರಿಗಳು ಬೀಡು ಬಿಟ್ಟಿದ್ದು, ದಿನಕ್ಕೆ ಮೂರು ಬಾರಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಜತೆಗೂಡಿ ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಷ್ಟಾದರೂ ಪಿಡಿಒ ದಿವಾಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ನಾಪತ್ತೆಯಾಗಿದ್ದು, ಸಂಬಂಧಪಟ್ಟ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Continue Reading

ಆರೋಗ್ಯ

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

Tips for Mothers: ಕೆಲಸದ ಧಾವಂತದಲ್ಲಿ, ಗಡಿಬಿಡಿಯಲ್ಲಿ ಇಂಥ ಅಮ್ಮಂದಿರು ಮನೆಯವರಿಗೆ ಬೇಕಾದ್ದೆಲ್ಲವನ್ನೂ ಮಾಡಿ ಕೊಟ್ಟರೂ ತಮ್ಮ ಆಹಾರ, ಕಾಳಜಿಯ ಬಗ್ಗೆ ಅತ್ಯಂತ ಕಡಿಮೆ ಗಮನ ಹರಿಸುತ್ತಾರೆ. ಎಲ್ಲರ ಬೇಕು ಬೇಡಗಳ ಬಗ್ಗೆ ಗಮನ ಹರಿಸುವುದರಲ್ಲೇ ಅವರ ದಿನ ಕಳೆದು ಹೋಗುತ್ತದೆ. ಆದರೆ ದುಡಿಯುವ ತಾಯಂದಿರು ತಮ್ಮ ಆಹಾರ, ಆರೋಗ್ಯದ ಕಾಳಜಿಯನ್ನು ಮೊದಲು ಮಾಡಿಕೊಳ್ಳಬೇಕು. ಯಾಕೆಂದರೆ ಅವರು ಆರೋಗ್ಯವಾಗಿದ್ದರೆ ಮಾತ್ರ ಮನೆ ಮಂದಿ ಎಲ್ಲ ಆರೋಗ್ಯ ಚೆನ್ನಾಗಿರಲು ಸಾಧ್ಯ.

VISTARANEWS.COM


on

By

Tips for Mothers
Koo

ದುಡಿಯುವ ಅಮ್ಮಂದಿರಿಗೆ (Tips for Mothers) ತಮ್ಮ ವೃತ್ತಿಯನ್ನೂ ಮಕ್ಕಳನ್ನೂ (children) ಸಂಸಾರವನ್ನೂ (family) ತೂಗಿಸಿಕೊಂಡು ಹೋಗುವುದೇ ದೊಡ್ಡ ಸವಾಲು. ಕೆಲಸದ (work) ಧಾವಂತದಲ್ಲಿ, ಗಡಿಬಿಡಿಯಲ್ಲಿ ಇಂಥ ಅಮ್ಮಂದಿರು ಮನೆಯವರಿಗೆ ಬೇಕಾದ್ದೆಲ್ಲವನ್ನೂ ಮಾಡಿ ಕೊಟ್ಟರೂ ತಮ್ಮ ಆಹಾರ, ಕಾಳಜಿಯ ಬಗ್ಗೆ ಅತ್ಯಂತ ಕಡಿಮೆ ಗಮನ ಹರಿಸುತ್ತಾರೆ.

ಮಕ್ಕಳಿಗೆ ಬೇಕಾದ ಆಹಾರವನ್ನು, ಅವರ ಬೇಕು ಬೇಡಗಳನ್ನು ಗಮನ ಹರಿಸುವುದರಲ್ಲೇ ದಿನ ಕಳೆದು ಹೋಗಿ ತಮ್ಮ ಆಹಾರದ, ಆರೋಗ್ಯದ ಕಾಳಜಿಯನ್ನು ಮಾಡುವುದು ಗೌಣವಾಗುತ್ತದೆ. ಆದರೆ, ಮಹಿಳೆಯರ ಅತ್ಯಂತ ಅಗತ್ಯವಿರುವ ಇಂಥ ನಡುವಯಸ್ಸಿನಲ್ಲಿಯೇ ಬೇಕಾದ ಅಗತ್ಯ ಪೋಷಕಾಂಶಗಳು ಮಹಿಳೆಯರಿಗೆ ದಕ್ಕದೆ, ಹಲವಾರು ಆರೋಗ್ಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾಗಿ, ಈ ಸುಲಭ ಅಭ್ಯಾಸಗಳನ್ನಾದರೂ ಬೆಳೆಸಿಕೊಳ್ಳುವ ಮೂಲಕ ದುಡಿಯುವ ಮಹಿಳೆಯರು ತಮ್ಮ ಆರೋಗ್ಯದ ಕಾಳಜಿಯನ್ನು ವಹಿಸಿಕೊಳ್ಳಬಗಹುದು. ಅವು ಯಾವುವು ಎಂಬುದನ್ನು ನೋಡೋಣ.

ಬಾದಾಮಿ ಗೆಳೆಯನಾಗಲಿ

ಬಾದಾಮಿ ನಿಮ್ಮ ಗೆಳೆಯನಾಗಲಿ. ಕಚೇರಿಗೆ ಹೋಗುವಾಗ ಒಂದಿಷ್ಟು ಬಾದಾಮಿ ನಿಮ್ಮ ಬ್ಯಾಗ್‌ನಲ್ಲಿರಲಿ. ಇದು ನಿಮ್ಮ ಆಪತ್ಬಾಂಧವನಾಗಿ, ಗೆಳೆಯನಾಗಿ ಸದಾ ನಿಮಮ ಸಹಾಯಕ್ಕೆ ಬರುತ್ತದೆ. ಪ್ರೊಟೀನ್‌, ಆರೋಗ್ಯಯುತ ಕೊಬ್ಬು, ನಾರಿನಂಶ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಬಾದಾಮಿಯನ್ನು ಕಚೇರಿಯ ಬಿಡುವಿನಲ್ಲಿ ಹೊಟ್ಟೆಗಿಳಿಸಬಹುದು. ಆಗ, ಏನೋ ಸಿಕ್ಕಿದ್ದನ್ನು ತಿನ್ನುವ ಅಭ್ಯಾಸಕ್ಕೆ ಕಡಿವಾಣ ಬೀಳುತ್ತದೆ. ಮಹಿಳೆಯರ ದೇಹಕ್ಕೆ ಅಗತ್ಯ ಪೋಷಕಾಂಶಗಳೂ ದಕ್ಕುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಚರ್ಮ, ಕೂದಲ ಆರೋಗ್ಯವೂ ಇಮ್ಮಡಿಗೊಳ್ಳುತ್ತದೆ.

ಸಮಯ ಮೀಸಲಿಡಿ

ವಾರಾಂತ್ಯದಲ್ಲಿ ಒಂದಿಷ್ಟು ಸಮಯ ಕೇವಲ ನಿಮಗಾಗಿ ಮೀಸಲಿಡಿ. ಆ ವಾರವಿಡೀ, ಕಚೇರಿಯಲ್ಲಿ ನೀವು ತಿನ್ನಬಹುದಾದ ಆರೋಗ್ಯಯುತ ಆಹಾರಗಳ ಸೇವನೆಗಾಗಿ ಪಟ್ಟಿ ತಯಾರಿಸಿ. ಮುಂಚಿತವಾಗಿ ಪಟ್ಟಿ ರೆಡಿ ಮಾಡುವುದರಿಂದ ಪ್ರತಿ ದಿನ ಯಾವ ಸ್ನ್ಯಾಕ್ಸ್‌ ತಾನು ತಿನ್ನಬೇಕೆಂಬ ಮುಂಚಿತ ಅರಿವು ಇರುತ್ತದೆ.

ಸರಳ ಆಹಾರ ತಯಾರಿಸಿ

ಸುಲಭ ಹಾಗೂ ಸರಳವಾದ ಆಹಾರ ತಯಾರಿಸಿ. ವಾರಾಂತ್ಯದಲ್ಲೇ, ಈ ಬಗ್ಗೆ ತಯಾರಿ ನಡೆಸಿ, ಒಂದಿಷ್ಟು ಅಡುಗೆಗೆ ಪೂರಕ ತಯಾರಿಯನ್ನು ಮಾಡಿಡಬಹುದು. ಉದಾಹರಣೆಗೆ ಮಾರುಕಟ್ಟೆಯ ಕೆಚಪ್‌ ಪದೇ ಪದೇ ಬಳಸುವ ಮೊದಲು ಟೊಮೇಟೋ ಚಟ್ನಿ ತಯಾರಿಸಿ ಇಟ್ಟುಕೊಳ್ಳಬಹದು. ಒಂದಿಷ್ಟು ಚಟ್ನಿಪುಡಿಗಳು, ತರಕಾರಿ ಕತ್ತರಿಸಿಡುವುದು, ಹಿಟ್ಟು ಮೊದಲೇ ರೆಡಿ ಮಾಡಿಡುವುದು ಇತ್ಯಾದಿ ಕೆಲಸಗಳನ್ನು ಮಾಡಿದರೆ, ಕೆಲಸ ಸುಲಭವಾಗುತ್ತದೆ.


ಆರೋಗ್ಯಕರ ಸ್ನ್ಯಾಕ್

ಕಚೇರಿಗೆ ಒಯ್ಯುವಾಗ ಆರೋಗ್ಯಕರ ಸ್ನ್ಯಾಕ್‌ ತೆಗೆದುಕೊಂಡು ಹೋಗಿ. ಉದಾಹರಣೆ, ಒಂದು ಹಣ್ಣು, ಒಂದಿಷ್ಟು ಬಾದಾಮಿ ಅಥವಾ ಬೀಜಗಳು, ಒಣ ಹಣ್ಣುಗಳು, ಮೊಳಕೆಕಾಳು ಹಸಿ ತರಕಾರಿಗಳು, ಸಲಾಡ್‌ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಬಹುದು.

ಇದನ್ನೂ ಓದಿ: Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

ಪೋಷಕಾಂಶಗಳ ಆಹಾರ

ಆಹಾರದ ಆಯ್ಕೆ ಮಾಡುವಾಗ ಪೋಷಕಾಂಶಗಳಿಂದ ಸಮೃದ್ಧವಾದ್ದನ್ನೇ ಆಯ್ಕೆ ಮಾಡಿ. ಸಂಪೂರ್ಣ ಆಹಾರದತ್ತ ಗಮನ ಇರಲಿ. ನಿತ್ಯವೂ ಬಗೆಬಗೆಯ ಪೋಷಕಾಂಶಗಳ ವೆರೈಟಿ ಆಹಾರಗಳು ಹೊಟ್ಟೆ ಸೇರಲಿ. ಒಂದೇ ಬಗೆಯ ನೀರಸ ಆಹಾರಗಳ ಅಭ್ಯಾಸವಿದ್ದರೆ ಬಿಟ್ಟುಬಿಡಿ.

ಮೈಂಡ್‌ಫುಲ್‌ ಈಟಿಂಗ್‌

ಮೈಂಡ್‌ಫುಲ್‌ ಈಟಿಂಗ್‌ ಬಗ್ಗೆ ಗಮನ ಹರಿಸಿ. ಅಂದರೆ ಪ್ರತಿ ತುತ್ತನ್ನೂ ಅನುಭವಿಸಿ ತಿನ್ನಿ. ನಿಧಾನವಾಗಿ ತಿನ್ನಲು ಅಭ್ಯಾಸ ಮಾಡಿ. ಊಟ ಮಾಡುವಾಗ ಬೇರೆ ಕೆಲಸಗಳ ಮೇಲೆ ಗಮನ ಹರಿಸಬೇಡಿ. ಊಟವನ್ನು ಅನುಭವಿಸಿ ಚೆನ್ನಾಗಿ ಜಗಿದು ನಿಧಾನವಾಗಿ ತಿನ್ನಿ. ನಿಧಾನವಾಗಿ ತಿನ್ನುವುದರಿಂದ ಹೆಚ್ಚು ತಿನ್ನುವ ಬಯಕೆಯಾಗುವುದಿಲ್ಲ. ಅಗತ್ಯಕ್ಕಿಂದ ಹೆಚ್ಚು ಉಣ್ಣುವುದು ತಪ್ಪುತ್ತದೆ. ಸರಿಯಾಗಿ ನಮ್ಮ ದೇಹಕ್ಕೆ ಎಷ್ಟು ಬೇಕೋ ಅಷ್ಟೇ ಆಹಾರ ಸೇರುತ್ತದೆ.

Continue Reading

ಆರೋಗ್ಯ

Health Tips in Kannada: ಕಾಮಕಸ್ತೂರಿ ಬೀಜದ ಪಾನಕ ಕುಡಿದರೆ ಆರೋಗ್ಯ ವೃದ್ಧಿ ಪಕ್ಕಾ!

ರಾತ್ರಿ ಮಲಗುವಾಗ (Health Tips in Kannada) ಒಂದು ಗ್ಲಾಸ್‌ ನೀರಿಗೆ ಒಂದು ಚಮಚ ತುಂಬಾ ಕಾಮಕಸ್ತೂರಿ ಬೀಜಗಳನ್ನು ಹಾಕಿಟ್ಟರೆ ಬೆಳಗಿನ ಹೊತ್ತಿಗೆ ಚೆನ್ನಾಗಿ ನೆನೆದ ಬೀಜಗಳು ಸೇವನೆಗೆ ಸಿದ್ಧವಾಗಿರುತ್ತವೆ. ಜೆಲ್‌ನಂತೆ ಕಾಣುವ ಇದಕ್ಕೆ ಹಾಲು ಅಥವಾ ಇನ್ನಷ್ಟು ನೀರು ಇಲ್ಲವೇ ನಿಂಬೆರಸ… ಹೀಗೆ ನಿಮ್ಮಿಷ್ಟದ ಯಾವುದನ್ನಾದರೂ ಸೇರಿಸಿಕೊಂಡು ಕುಡಿದರೆ ಆರೋಗ್ಯಕರ ಲಾಭಗಳು ದೊರೆಯುವುದು ನಿಶ್ಚಿತ.

VISTARANEWS.COM


on

By

Health Tips in Kannada
Koo

ಹಲವು ಪ್ರಶ್ನೆಗಳಿಗೆ ಒಂದೇ (Health Tips in Kannada) ಉತ್ತರ ನೀಡುವ ಒಗಟನ್ನು ಚಿಕ್ಕಂದಿನಲ್ಲಿ ಆಡಿರಬಹುದು. ಆದರೆ ಆರೋಗ್ಯದ (health) ವಿಷಯದಲ್ಲಿ ಇಂಥ ಒಗಟುಗಳು ಕಡಿಮೆ. ಹಲವು ಸಮಸ್ಯೆಗಳಿಗೆ ಒಂದೇ ಮದ್ದು ಹುಡುಕುವುದು ಕೊಂಚ ಕಷ್ಟವೇ. ಆದರೂ ಸಬ್ಜ (sabja seeds) ಅಥವಾ ಕಾಮಕಸ್ತೂರಿ ಬೀಜಗಳು ಇಂಥ ಕೆಲಸವನ್ನು ಮಾಡಬಲ್ಲವು. ಅದರಲ್ಲೂ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು ಅನುಕೂಲಗಳನ್ನು ಒದಗಿಸಬಲ್ಲದು. ಈ ಬಗೆಗಿನ ವಿವರಗಳು ಇಲ್ಲಿವೆ.

ರಾತ್ರಿ (night) ಮಲಗುವಾಗ ಒಂದು ಗ್ಲಾಸ್‌ ನೀರಿಗೆ ಒಂದು ಚಮಚ ತುಂಬಾ ಕಾಮಕಸ್ತೂರಿ ಬೀಜಗಳನ್ನು ಹಾಕಿಟ್ಟರೆ ಕೆಲಸ ಮುಗಿಯಿತು. ಬೆಳಗಿನ ಹೊತ್ತಿಗೆ ಚೆನ್ನಾಗಿ ನೆನೆದ ಬೀಜಗಳು ಸೇವನೆಗೆ ಸಿದ್ಧವಾಗಿರುತ್ತವೆ. ಜೆಲ್‌ನಂತೆ ಕಾಣುವ ಇದಕ್ಕೆ ಹಾಲು ಹಾಕಿ ಸೇವಿಸಬಹುದು, ಇನ್ನಷ್ಟು ನೀರು, ನಿಂಬೆರಸ ಹಾಕಿ ಕುಡಿಯಬಹುದು. ಅಂತೂ ನಿಮ್ಮಿಷ್ಟದ ಯಾವುದನ್ನೂ ಇದಕ್ಕೆ ಸೇರಿಸಿಕೊಂಡು ಕುಡಿದರೆ ಆರೋಗ್ಯಕರ ಲಾಭಗಳು ದೊರೆಯುವುದು ನಿಶ್ಚಿತ.

ಪ್ರೊಟೀನ್‌ಗಳ ಖಣಜ

ಬೆಸಿಲ್‌ ಬೀಜಗಳೆಂದೂ ಕರೆಸಿಕೊಳ್ಳುವ ಇವುಗಳ ಬಳಕೆ ಇಂದು-ನಿನ್ನೆಯದಲ್ಲ. ಶತಮಾನಗಳಿಂದ ಚಾಲ್ತಿಯಲ್ಲಿ ಇರುವಂಥದ್ದು. ನೋಡುವುದಕ್ಕೆ ಚಿಯಾ ಬೀಜಗಳ ಸೋದರ ಸಂಬಂಧಿಯಂತೆ ಕಾಣುವ ಈ ಬೀಜಗಳು ಪ್ರೊಟೀನ್‌ಗಳ ಪುಟ್ಟ ಪೊಟ್ಟಣವಿದ್ದಂತೆ. ಜೊತೆಗೆ ಅಗತ್ಯವಾದ ನಾರು, ಖನಿಜಗಳು ಮತ್ತು ಜೀವಸತ್ವಗಳಿಂದ ಭರಿತವಾಗಿವೆ. ಇದರಿಂದ ಮೂಳೆಗಳು ಬಲವಾಗುವುದಲ್ಲದೆ, ಜೀರ್ಣಾಂಗಗಳ ಕ್ಷಮತೆಯೂ ಹೆಚ್ಚುತ್ತದೆ.

ಸತ್ವಗಳೇನಿವೆ?

ಪ್ರೊಟೀನ್‌ ಪರಿಪೂರ್ಣವಾಗುವಂಥ ಎಲ್ಲ ಅಮೈನೊ ಆಮ್ಲಗಳು ಮತ್ತು ಕೊಬ್ಬಿನಾಮ್ಲಗಳು ಇದರಲ್ಲಿವೆ. ಜೊತೆಗೆ ಹೇರಳವಾಗಿ ನಾರು, ಕ್ಯಾಲ್ಸಿಯಂ, ಮೆಗ್ನೀಶಿಯಂ, ಕಬ್ಬಿಣ ಮುಂತಾದ ಖನಿಜಗಳು ಮತ್ತು ವಿಟಮಿನ್‌ಗಳು ತುಂಬಿವೆ. ಈ ಸತ್ವಭರಿತ ಸಬ್ಜ ಬೀಜಗಳನ್ನು ಬೆಳಗಿನ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದಿನವಿಡೀ ದೇಹದ ಶಕ್ತಿ ಕುಂದದಂತೆ ಕಾಪಾಡಿಕೊಳ್ಳಬಹುದು.


ಜೀರ್ಣಾಂಗಗಳ ಕ್ಷಮತೆ ಹೆಚ್ಚಳ

ಇದರಲ್ಲಿ ನಾರು ಅಧಿಕ ಪ್ರಮಾಣದಲ್ಲಿದೆ. ಹಾಗಾಗಿ ಮಲಬದ್ಧತೆಯನ್ನು ನಿವಾರಿಸುವಲ್ಲಿ ಇದು ಪ್ರಧಾನವಾಗಬಲ್ಲದು. ದಿನವೂ ಬೆಳಗಿನ ಹೊತ್ತು ಇದನ್ನು ಸೇವಿಸುವ ಅಭ್ಯಾಸ ಮಾಡಿಕೊಂಡರೆ, ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡುವುದರ ಜೊತೆಗೆ ನಿಯಮಿತವಾಗಿ ವಿರೇಚನದ ಕೆಲಸವನ್ನೂ ನಿರ್ವಹಿಸುತ್ತದೆ. ಹಾಗಾಗಿ ಹೊಟ್ಟೆಯುಬ್ಬರ, ಅಜೀರ್ಣದಂಥ ತೊಂದರೆಗಳನ್ನೂ ನಿವಾರಿಸಬಲ್ಲದು.

ತೂಕ ನಿರ್ವಹಣೆ

ನೆನೆದು ಜೆಲ್‌ನಂತಾಗುವ ಕಾಮಕಸ್ತೂರಿ ಬೀಜಗಳು ತೂಕ ನಿರ್ವಹಣೆಯಲ್ಲೂ ನೆರವಾಗಬಲ್ಲವು. ಇದರಲ್ಲಿರುವ ಅಧಿಕ ನಾರು ಮತ್ತು ಪ್ರೊಟೀನ್‌ ಅಂಶಗಳು ಹೆಚ್ಚು ಸಮಯ ಹೊಟ್ಟೆ ತುಂಬಿರುವ ಅನುಭವ ನೀಡಿ, ಕಳ್ಳ ಹಸಿವೆಯನ್ನು ನಿವಾರಿಸುತ್ತವೆ. ಜೊತೆಗೆ ಕಡಿಮೆ ಕ್ಯಾಲರಿಯನ್ನು ಹೊಂದಿರುವ ಈ ಬೀಜಗಳು ಅಧಿಕ ಪೋಷಕ ಸತ್ವಗಳನ್ನು ನೀಡುತ್ತವೆ. ಈ ಮೂಲಕ ತೂಕ ಇಳಿಸುವವರಿಗೆ ಉಪಯುಕ್ತ ಎನಿಸಿವೆ.

ಮಧುಮೇಹಿಗಳಿಗೆ ಸೂಕ್ತ

ದೇಹದಲ್ಲಿ ಪಿಷ್ಟವನ್ನು ದಿಢೀರನೆ ಹೀರಿಕೊಂಡು ರಕ್ತಕ್ಕೆ ಗ್ಲೂಕೋಸ್‌ ಬಿಡುಗಡೆ ಒಮ್ಮೆಲೆ ಆಗುವುದನ್ನು ಸಬ್ಜ ಬೀಜಗಳು ತಡೆಯುತ್ತವೆ. ಹಾಗಾಗಿ ರಕ್ತದಲ್ಲಿ ಸಕ್ಕರೆಯಂಶ ಏರಿಳಿತ ಆಗುವುದನ್ನು ತಡೆಯಬಹುದು. ಹಾಗಾಗಿ ಬೆಳಗಿನ ಹೊತ್ತು ಕಾಮಕಸ್ತೂರಿ ಬೀಜವನ್ನು ಕುಡಿಯುವುದು ಮಧುಮೇಹಿಗಳಿಗೆ ಒಳ್ಳೆಯ ಫಲಿತಾಂಶ ನೀಡಬಹುದು.

ಇದನ್ನೂ ಓದಿ: Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

ಡಿಟಾಕ್ಸ್‌

ದೇಹದಲ್ಲಿ ಬೇಡದ ಅಂಶವನ್ನು ಹೊರಹಾಕುವಲ್ಲಿ ಕಾಮಕಸ್ತೂರಿ ಬೀಜಗಳು ಪ್ರಯೋಜನಕಾರಿ. ಬೆಳಗಿನ ಹೊತ್ತು ನೆನೆದು ಜೆಲ್‌ನಂತಾದ ಬೀಜಗಳನ್ನು ದೊಡ್ಡ ಗ್ಲಾಸ್‌ ನೀರಿಗೆ ಬೆರಸಿ, ಜೊತೆಗೆ ಕೆಲವು ಹನಿ ನಿಂಬೆರಸ ಸೇರಿಸಿ ಕುಡಿಯುವುದರಿಂದ ಡಿಟಾಕ್ಸ್‌ ಮಾಡುವುದಕ್ಕೆ ಅನುಕೂಲ. ಇದರಿಂದ ದೇಹದ ಚಯಾಪಚಯ ಕ್ರಿಯೆ ಸುಧಾರಿಸಿ, ಜೀರ್ಣಾಂಗಗಳು ಶುದ್ಧಗೊಂಡು, ದೇಹದ ಸ್ವಾಸ್ಥ್ಯ ಹೆಚ್ಚುತ್ತದೆ.

ಚರ್ಮದ ಕಾಂತಿ

ಇದರಲ್ಲಿರುವ ಉತ್ಕರ್ಷಣ ನಿರೋಧಕಗಳಿಂದಾಗಿ ಕೂದಲು ಮತ್ತು ಚರ್ಮದ ಆರೋಗ್ಯ ಸುಧಾರಿಸುತ್ತದೆ. ಚರ್ಮದ ಮೇಲಿನ ಸುಕ್ಕುಗಳು ಕಡಿಮೆಯಾಗಿ, ಕಾಂತಿ ಹೆಚ್ಚುತ್ತದೆ. ಮೊಡವೆ ಮತ್ತು ಕಪ್ಪು ಕಲೆಗಳು ಮಾಯವಾಗಿ ವಯಸ್ಸಾಗುವುದನ್ನು ಮುಂದೂಡುತ್ತದೆ. ದೇಹಕ್ಕೆ ಬೇಕಾದ ಸೂಕ್ಷ್ಮ ಸತ್ವಗಳು ದೊರೆಯುತ್ತಿದ್ದಂತೆ ಕೂದಲಿನ ಸಮಸ್ಯೆಗಳು ಕಡಿಮೆಯಾಗಿ, ಕೇಶರಾಶಿ ನಳನಳಿಸಬಹುದು.

Continue Reading

ಉತ್ತರ ಕನ್ನಡ

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

Uttara Kannada News: ಪ್ರಸಕ್ತ ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಮಳೆಗಾಲದಲ್ಲಿ ಕಂಡುಬರಬಹುದಾದ ಡೆಂಗ್ಯು, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಿ, ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸುವಂತೆ ಅವರು ಸೂಚಿಸಿದ್ದಾರೆ.

VISTARANEWS.COM


on

Uttara Kannada News Take precautionary measures to prevent the spread of infectious diseases in the district says DC Gangubai manakar
Koo

ಕಾರವಾರ: ಪ್ರಸಕ್ತ ಮಳೆಗಾಲದ (Rain) ಅವಧಿಯಲ್ಲಿ ಜಿಲ್ಲೆಯಲ್ಲಿ (Uttara Kannada News) ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮಿತಿಯ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

ಮಳೆಗಾಲದಲ್ಲಿ ಕಂಡುಬರಬಹುದಾದ ಡೆಂಗ್ಯು, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಿ, ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸಿ ಎಂದ ಅವರು, ಎಲ್ಲಾ ಸಾಂಕ್ರಾಮಿಕ ರೋಗಗಳಿಗೆ ಅಗತ್ಯವಿರುವ ಚುಚ್ಚುಮದ್ದು ಮತ್ತು ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಇದುವರೆಗೆ 1 ಮಲೇರಿಯಾ, 1 ಚಿಕನ್ ಗುನ್ಯಾ, 46 ಡೆಂಗಿ ಪ್ರಕರಣಗಳು ವರದಿಯಾಗಿರುವ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಡೆಂಗ್ಯು ಪ್ರಕರಣಗಳು ಹೆಚ್ಚಾಗದಂತೆ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸೋಂಕಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ, ತಕ್ಷಣ ಚಿಕಿತ್ಸೆ ನೀಡುವುದರ ಮೂಲಕ ರೋಗ ಹರಡದಂತೆ ನೋಡಿಕೊಳ್ಳಿ. ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ಜಿಲ್ಲೆಯಲ್ಲಿ ಈ ಬಾರಿ ಮಂಗನ ಕಾಯಿಲೆಯ 106 ಪ್ರಕರಣಗಳು ಕಂಡು ಬಂದಿದ್ದು, 9 ಸಾವುಗಳು ಸಂಭವಿಸಿದ್ದು, ಮಂಗನ ಕಾಯಿಲೆಯ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ ಎಂದರು.

ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಚರಂಡಿಗಳಲ್ಲಿ ಮಳೆ ನೀರು ನಿಲ್ಲದೇ ಸರಾಗವಾಗಿ ಹರಿದು ಹೋಗುವಂತೆ ಮಾಡಲು ತಕ್ಷಣದಿಂದಲೇ ಸ್ವಚ್ಚತಾ ಕ್ರಮಗಳನ್ನು ಕೈಗೊಂಡು, ಚರಂಡಿಯಲ್ಲಿ ತುಂಬಿರುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ತಾಲೂಕುಗಳಲ್ಲಿ 108 ಸೇರಿದಂತೆ ಎಲ್ಲಾ ಆಂಬ್ಯುಲೆನ್ಸ್ ಗಳು ಸುಸ್ಥಿತಿಯಲ್ಲಿರಬೇಕು. ತುರ್ತು ಸಂದರ್ಭದಲ್ಲಿ ತಕ್ಷಣವೇ ಸಾರ್ವಜನಿಕರ ಸೇವೆಗೆ ಲಭ್ಯವಿರಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕುದಿಸಿ, ಆರಿಸಿದ ಕುಡಿಯುವ ನೀರು ಬಳಕೆ, ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಸೇರಿದಂತೆ‌, ತೆಗೆದುಕೊಳ್ಳಬೇಕಾದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಮಾಹಿತಿಯನ್ನು ಜಿಲ್ಲೆಯ ಎಲ್ಲಾ ಮನೆ ಮನೆಗಳಿಗೆ ತಲುಪಿಸಬೇಕು ಹಾಗೂ ಸೋಷಿಯಲ್ ಮೀಡಿಯಾಗಳ ಮೂಲಕ ಕೂಡಾ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅರ್ಚನಾ ನಾಯಕ್, ಆರ್.ಸಿ.ಎಚ್ ಅಧಿಕಾರಿ ಡಾ. ನಟರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ್ ರಾವ್, ನಗರಸಭೆ ಪೌರಾಯುಕ್ತ ರವಿಕುಮಾರ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Prajwal Revanna Case
ಕರ್ನಾಟಕ6 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ14 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ17 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ18 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ25 mins ago

British Journalist: “ವವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ25 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್49 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ1 hour ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Viral News
ವೈರಲ್ ನ್ಯೂಸ್2 hours ago

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ25 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌