Dr. Rajkumar:  ವರನಟ ರಾಜ್‌ಕುಮಾರ್‌ ನಮ್ಮನ್ನು ಅಗಲಿ ಇಂದಿಗೆ 18 ವರ್ಷ! - Vistara News

ಸ್ಯಾಂಡಲ್ ವುಡ್

Dr. Rajkumar:  ವರನಟ ರಾಜ್‌ಕುಮಾರ್‌ ನಮ್ಮನ್ನು ಅಗಲಿ ಇಂದಿಗೆ 18 ವರ್ಷ!

Dr. Rajkumar:  ಕನ್ನಡ ಚಿತ್ರರಂಗದ ಮಾಣಿಕ್ಯದಂತಿದ್ದ ರಾಜ್‌ ಅವರು 2006ರ ಏಪ್ರಿಲ್‌ 12ರಂದು ನಿಧನರಾದರು. ಅವರ ಮಕ್ಕಳಾದ ರಾಘವೇಂದ್ರ ರಾಜ್‌ಕುಮಾರ್‌, ಶಿವರಾಜ್‌ ಕುಮಾರ್‌, ಪುನೀತ್‌ ರಾಜ್‌ಕುಮಾರ್‌ ಕೂಡ ಕನ್ನಡ ಚಿತ್ರರಂಗದಲ್ಲಿ ಪ್ರಸಿದ್ಧ ನಟರಾಗಿ ಮಿಂಚಿದ್ದಾರೆ. ನಟಸಾರ್ವಭೌಮ ಅವರ 18ನೇ ಪುಣ್ಯತಿಥಿ ಪ್ರಯುಕ್ತ ದೊಡ್ಮನೆ ಕುಟುಂಬದವರು ಕಂಠೀರವ ಸ್ಟುಡಿಯೋದಲ್ಲಿರುವ ರಾಜ್‌ಕುಮಾರ್‌ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.

VISTARANEWS.COM


on

Dr. Rajkumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ (Dr. Rajkumar) ಕನ್ನಡ ಸಿನಿಮಾ ರಂಗದ ಅತ್ಯಮೂಲ್ಯ ರತ್ನ ಎಂದರೂ ತಪ್ಪಾಗದು. ಅತ್ಯದ್ಭುತ ಸಿನಿಮಾಗಳನ್ನು ಹಾಗೆಯೇ ಚಿತ್ರರಂಗದ ಪ್ರೀತಿಯ ದೊಡ್ಮನೆ ಕುಟುಂಬವನ್ನು ಕೊಟ್ಟವರು ಅವರು. ಕರ್ನಾಟಕಕ್ಕೆ ಸಿಕ್ಕ ವರನಟ ಎಂದೇ ಪ್ರಖ್ಯಾತರಾಗಿದ್ದ ಅವರು ನಮ್ಮನ್ನು ಅಗಲಿ ಇಂದಿಗೆ (ಏ.12) 18 ವರ್ಷಗಳು ಕಳೆದಿವೆ.

ನಟಸಾರ್ವಭೌಮ ಅವರ 18ನೇ ಪುಣ್ಯತಿಥಿ ಪ್ರಯುಕ್ತ ದೊಡ್ಮನೆ ಕುಟುಂಬದವರು ಕಂಠೀರವ ಸ್ಟುಡಿಯೋದಲ್ಲಿರುವ ರಾಜ್‌ಕುಮಾರ್‌ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.

ಕನ್ನಡ ರಂಗಭೂಮಿಯ ಹೆಸರಾಂತ ಪ್ರತಿಭೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾಗಿ, ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿರುವ ದೊಡ್ಡ ಗಾಜನೂರಿನಲ್ಲಿ 1929ರ ಏಪ್ರಿಲ್ 24ರಂದು ರಾಜ್‌ಕುಮಾರ್ ಹುಟ್ಟಿದರು. ಅವರಿಗೆ ತಂದೆ ತಾಯಿ ಇಟ್ಟ ಹೆಸರು ಮುತ್ತುರಾಜು (ಮುತ್ತಣ್ಣ). ಬೇಡರ ಕಣ್ಣಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಸೇರಿದ ಅವರು ಮಾಡಿದ ಸಿನಿಮಾಗಳೆಲ್ಲವೂ ಹಿಟ್‌ ಸಿನಿಮಾಗಳೇ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಅವರ ಹಲವಾರು ಸಿನಿಮಾಗಳು ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ರಾಜ್‌ಕುಮಾರ್‌ ಅವರು ಕೊನೆಯದಾಗಿ 2000ನೇ ಇಸವಿಯಲ್ಲಿ ಶಬ್ದವೇಧಿ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದರು.

ಡಾ.ರಾಜ್​ಕುಮಾರ್ ಕನ್ನಡದ ಪ್ರಸಿದ್ಧ ಕಾದಂಬರಿಗಳನ್ನು ಆಧರಿಸಿ ಚಲನಚಿತ್ರಗಳನ್ನು ನಿರ್ಮಿಸಿದರು. ತಮ್ಮ ಸಹೋದರ ಎಸ್.ಪಿ.ವರದರಾಜು ಅವರೊಂದಿಗೆ ಸಮಾಲೋಚಿಸಿದ ನಂತರವೇ ಚಿತ್ರಗಳಿಗೆ ಸಹಿ ಹಾಕುತ್ತಿದ್ದರು.

ಇದನ್ನೂ ಓದಿ: Dr. Rajkumar : ವರನಟ ರಾಜ್‌ಕುಮಾರ್‌ ನಮ್ಮನ್ನು ಅಗಲಿ ಇಂದಿಗೆ 17 ವರ್ಷ; ಕಂಠೀರವ ಸ್ಟುಡಿಯೋದಲ್ಲಿ ಪೂಜೆ

ರಾಜ್‌ಕುಮಾರ್‌ ಅವರು ಕೇವಲ ನಟನಾಗಿ ಮಾತ್ರವಲ್ಲದೆ ಗಾಯಕರಾಗಿಯೂ ಗುರುತಿಸಿಕೊಂಡವರು. ಸಂಪತ್ತಿಗೆ ಸವಾಲ್‌ ಸಿನಿಮಾದಲ್ಲಿ ಅವರು ಹಾಡಿದ ʼಯಾರೇ ಕೂಗಾಡಲಿʼ ಹಾಡು ಇಂದಿಗೂ ಅನೇಕರ ಫೇವರಿಟ್‌ ಹಾಡು. ರಾಜ್‌ಕುಮಾರ್‌ ಅವರ ಧ್ವನಿಯಲ್ಲಿ ಬಂದ ಅನೇಕ ಭಕ್ತಿ ಗೀತೆಗಳ ಕ್ಯಾಸೆಟ್‌ಗಳೂ ಕೂಡ ಆ ಕಾಲದಲ್ಲಿ ಬಿಡುಗಡೆಯಾಗಿ ಭಾರೀ ಮೆಚ್ಚುಗೆ ಪಡೆದುಕೊಂಡಿದ್ದವು. ಕನ್ನಡ ಚಿತ್ರರಂಗದ ಮಾಣಿಕ್ಯದಂತಿದ್ದ ರಾಜ್‌ ಅವರು 2006ರ ಏಪ್ರಿಲ್‌ 12ರಂದು ನಿಧನರಾದರು. ಅವರ ಮಕ್ಕಳಾದ ರಾಘವೇಂದ್ರ ರಾಜ್‌ಕುಮಾರ್‌, ಶಿವರಾಜ್‌ ಕುಮಾರ್‌, ಪುನೀತ್‌ ರಾಜ್‌ಕುಮಾರ್‌ ಕೂಡ ಕನ್ನಡ ಚಿತ್ರರಂಗದಲ್ಲಿ ಪ್ರಸಿದ್ಧ ನಟರಾಗಿ ಮಿಂಚಿದ್ದಾರೆ. ಇದೀಗ ರಾಜ್‌ ಅವರ ಮೊಮ್ಮಕ್ಕಳು ಕೂಡ ಸಿನಿ ರಂಗಕ್ಕೆ ಪ್ರವೇಶಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

Kannada New Movie : “ಪೌಡರ್”‌ ಚಿತ್ರವನ್ನು ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ನ ಸಹಯೋಗದಲ್ಲಿ ಮೂಡಿ ಬಂದಿರುವ ಮೊದಲ ಚಿತ್ರವಾಗಿದೆ. ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ವಿಭನ್ನ ಕಥಾವಸ್ತುವನ್ನು ಸಿನಿ ಪ್ರೇಕ್ಷಕರ ಮುಂದಿಡುವ ಗುರಿಯೊಂದಿಗೆ ಈಗಾಗಲೇ ಹಲವಾರು ಪ್ರಖ್ಯಾತ ಚಿತ್ರಗಳನ್ನು ನಿರ್ಮಿಸಿವೆ.

VISTARANEWS.COM


on

Kannada New Movie powder Teaser Out
Koo

ಬೆಂಗಳೂರು: ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ (Kannada New Movie) ಪಿಕ್ಚರ್ಸ್‌ನ ಚೊಚ್ಚಲ ಸಹಯೋಗ ಆಗಸ್ಟ್‌ ತಿಂಗಳಲ್ಲಿ ಕೆ.ಆರ್‌.ಜಿ ಮತ್ತು ಟಿ.ವಿ.ಎಫ್‌ ಘೋಷಿಸಿದ ಮೊದಲ ಚಿತ್ರವಾದ “ಪೌಡರ್”‌ ಇದೀಗ ಟೀಸರ್‌ ಬಿಡುಗಡೆ ಮಾಡಿದೆ.

ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್”‌ ಪ್ರಭಾವದಿಂದಾಗಿ ದಿಢೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”.‌ ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್”‌ ಹಿಂದಿನ “ಪವರ್”‌ ಅವರಿಗೆ ತಿಳಿಯುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಜುಲೈ 12 ಚಿತ್ರಮಂದಿರಗಳಲ್ಲಿ ಸಿಗಲಿದೆ. ಈಗಾಗಲೇ ತನ್ನ ಟೀಸರ್‌ ಮೂಲಕ “ಪೌಡರ್”‌ ಎಲ್ಲೆಡೆ ನಗೆ ಚಟಾಕಿ ಹತ್ತಿಸಿದ್ದು, ಚಿತ್ರ ಬಿಡುಗಡೆಯ ನಂತರ ಈ ಹಾಸ್ಯ, ನಗು ದುಪ್ಪಟ್ಟುಗೊಳ್ಳಲಿದೆ ಎಂದರೆ ಉತ್ಪ್ರೇಕ್ಷೆಯಲ್ಲ.

“ಪೌಡರ್”‌ ಚಿತ್ರವನ್ನು ಕೆ.ಆರ್‌.ಜಿ ಸ್ಟೂಡಿಯೋಸ್‌ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ನ ಸಹಯೋಗದಲ್ಲಿ ಮೂಡಿ ಬಂದಿರುವ ಮೊದಲ ಚಿತ್ರವಾಗಿದೆ. ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ವಿಭನ್ನ ಕಥಾವಸ್ತುವನ್ನು ಸಿನಿ ಪ್ರೇಕ್ಷಕರ ಮುಂದಿಡುವ ಗುರಿಯೊಂದಿಗೆ ಈಗಾಗಲೇ ಹಲವಾರು ಪ್ರಖ್ಯಾತ ಚಿತ್ರಗಳನ್ನು ನಿರ್ಮಿಸಿವೆ. ಇನ್ನು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ಹಲವಾರು ವೆಬ್‌ ಸೀರೀಸ್‌ ಗಳ ಮೂಲಕ ತನ್ನದೇ ಛಾಪನ್ನು ಮೂಡಿಸಿರುವ ಸಂಸ್ಥೆಯಾಗಿದ್ದು, ಇವರಿಬ್ಬರ ಸಹಯೋಗದಲ್ಲಿ ಮೂಡಿ ಬಂದಿರುವ “ಪೌಡರ್”‌ ಬಹುನಿರೀಕ್ಷಿತ ಚಿತ್ರವಾಗಿದೆ.

ಇದನ್ನೂ ಓದಿ: Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

ಕೆ.ಆರ್‌.ಜಿ ಸ್ಟೂಡಿಯೋಸ್‌ನ ಮಾಲಿಕ ಕಾರ್ತಿಕ್‌ ಗೌಡ ಮತ್ತು ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ನ ಮಾಲಿಕ ಅರುನಭ್‌ ಕುಮಾರ್‌ ಮಾತನಾಡಿ, “ಯುವಕರಿಗೆ, ಸಿನಿ ಪ್ರೇಕ್ಷಕರಿಗೆ ಹೊಸ ರೀತಿಯ ಕಥೆಗಳನ್ನು, ವಿಭಿನ್ನ ಕಥಾ ಹಂದರವನ್ನು ಹೊಂದಿರುವ ಚಿತ್ರಗಳನ್ನು ನೀಡುವುದು ನಮ್ಮ ಮುಖ್ಯ ಗುರಿಯಾಗಿದ್ದು, ಈ ನಿಟ್ಟಿನಲ್ಲಿ “ಪೌಡರ್”‌ ನಮ್ಮ ಸಹಯೋಗದ ಚೊಚ್ಚಲ ಪ್ರಯತ್ನ. ʼಮಡ್ಗಾನ್‌ ಎಕ್ಸ್‌ ಪ್ರೆಸ್‌ʼ , ʼಫುಕ್ರೇ” ,ʼಗೋ ಗೋವಾ ಗಾನ್‌ʼ, ʼಡೆಲ್ಲಿ ಬೆಲ್ಲಿʼ ನಂತಹ ಹಾಸ್ಯ ಚಿತ್ರಗಳ ಅಭಿಮಾನಿಗಳಾಗಿ ಕನ್ನಡದಲ್ಲಿ ಅಂತಹದ್ದೇ ನಗೆ ಚಟಾಕಿಯನ್ನು ಹತ್ತಿಸುವ ಚಿತ್ರವನ್ನು ನಿರ್ಮಿಸಿದ್ದೇವೆ ಎಂದು ನಂಬಿದ್ದೇವೆ. ಚಿತ್ರವನ್ನು ನೋಡಿ ಪ್ರೇಕ್ಷಕರು ತಮ್ಮ ಹೊಟ್ಟೆ ಹುಣ್ಣಾಗುವಂತೆ ನಗುತ್ತಾರೆ ಎಂಬ ಭರವಸೆ ನಮಗಿದೆ. ಮುಂಬರುವ ದಿನಗಳಲ್ಲಿ ಇದೇ ರೀತಿಯ ಇನ್ನಷ್ಟು ವಿಭಿನ್ನ ಕಥೆಗಳನ್ನು ಈ ಸಹಯೋಗದ ಮೂಲಕ ಮುಂದಿಡಲು ಬಯಸುತ್ತೇವೆʼʼಎಂದರು.

ಟಿ.ವಿ.ಎಫ್‌ ಮೋಷನ್‌ ಪಿಕ್ಚರ್ಸ್‌ ಕುರಿತು

ಸಂಸ್ಥೆಯ ಸಂಸ್ಥಾಪಕ ಅರುನಭ್‌ ಕುಮಾರ್‌ ಸಾರಥ್ಯದಲ್ಲಿ, ಆರಂಭದ ದಿನದಿಂದಲೂ, ಉತ್ತಮ ಗುಣ ಮಟ್ಟದ ಕಥೆಗಳ ಮೂಲಕ ಟಿ.ವಿ.ಎಫ್‌ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿದೆ. ತನ್ನ 1೦ ವರ್ಷಗಳ ಪಯಣದಲ್ಲಿ, ಹಲವಾರು “ಸ್ಟೀರಿಯೋ ಟೈಪ್”ಗಳನ್ನು ಭೇದಿಸಿದೆ. “ದಿ ವೈರಲ್‌ ಫೀವರ್” ಎಂಬ ಶೀರ್ಷಿಕೆಯೊಂದಿಗೆ ಸಾವಿರಾರು ಪ್ರೇಕ್ಷಕರ ಮನಮುಟ್ಟಿದೆ. ಈ ನಡುವೆ ಹಲವಾರು ನಿರ್ಮಾಣ ಸಂಸ್ಥೆಗಳು ಉಗಮವಾಗಿದ್ದರೂ, ಟಿ.ವಿ.ಎಫ್‌ ವೆಬ್‌ ಕಂಟೆಂಟ್‌ ಮೂಲಕ ತನ್ನದೇ ಆದ ಛಾಪನ್ನು ಮೂಡಿಸಿದೆ.

ಕೆ.ಆರ್.ಜಿ ಸ್ಟೂಡಿಯೋಸ್‌ ಕುರಿತು

ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಸಾರಥ್ಯದಲ್ಲಿ 7 ವರ್ಷಗಳ ಹಿಂದೆ ಆರಂಭಗೊಂಡ ಈ ಸಂಸ್ಥೆ ವಿಭಿನ್ನ ಕಥಾವಸ್ತುವನ್ನು ಹೊಂದಿರುವ ಚಿತ್ರಗಳನ್ನು ಕನ್ನಡ ಪ್ರೇಕ್ಷಕರಿಗೆ ಕೊಡುಗೆಯಾಗಿ ನೀಡುತ್ತಾ ಬಂದಿದೆ. ತನ್ನ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಹಾಗೂ ಸಿನಿ ಪ್ರೇಕ್ಷಕರ ಮನದಲ್ಲಿ ಮನೆ ಮಾಡಿದೆ, ಮತ್ತು ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಇದೀಗ ಇಂತಹ ಅರ್ಥಪೂರ್ಣ ಸಹಯೋಗಗಳ ಮೂಲಕ ಕನ್ನಡ ಚಿತ್ರರಂಗವನ್ನು ಇನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಹೊಂದಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Kannada New Movie: ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.  “ದ ಜಡ್ಜ್ ಮೆಂಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೈಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

VISTARANEWS.COM


on

Kannada New Movie The judgement Trailer Out Kannada
Koo

ಬೆಂಗಳೂರು: ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (Kannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ.  “ದ ಜಡ್ಜ್ ಮೆಂಟ್” ಚಿತ್ರದ ಟ್ರೈಲರ್‌ ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೈಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

ನಿರ್ದೇಶಕ ಗುರುರಾಜ ಕುಲಕರ್ಣಿ ಮಾತನಾಡಿ ʻ ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ಚಿತ್ರ. “ಯದ್ದಕಾಂಡ” ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಅವರ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ, ಮೇಘನಾ ಗಾಂವ್ಕರ್, ರಂಗಾಯಣ ರಘು, ಪ್ರಕಾಶ್ ಬೆಳವಾಡಿ ಅವರನ್ನು ಒಳಗೊಂಡ ಬಹು ದೊಡ್ಡ ತಾರಾಗಣ ಈ ಚಿತ್ರದಲ್ಲಿದೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಮೇ 24 ಚಿತ್ರರಂದು ಕರ್ನಾಟಕ ಮಾತ್ರವಲ್ಲದೆ, ಡೆಲ್ಲಿ, ಮುಂಬೈ, ಲಕ್ನೋ, ಗೋವಾ, ಆಂದ್ರಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆ ಪ್ರತಿಷ್ಠಿತ ರಿಲಯನ್ಸ್ ಎಂಟರ್ ಟೈನ್ಮೆಂಟ್ ಸಂಸ್ಥೆ ಮೂಲಕ ಬಿಡುಗಡೆಯಾಗಲಿದೆʼʼ ಎಂದರು.

ಇದನ್ನೂ ಓದಿ: Kannada New Movie: ಒಟಿಟಿಗೆ ಲಗ್ಗೆ ಇಟ್ಟ ತನುಷ್ ಶಿವಣ್ಣ ಅಭಿನಯದ ಕ್ರೈಮ್-ಆ್ಯಕ್ಷನ್ ಸಿನಿಮಾ ʻMr ನಟ್ವರ್ ಲಾಲ್ʼ!

ʻʻನಿರ್ದೇಶಕರು ಬಂದು ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಲು ಒಪ್ಪಿಕೊಂಡೆ. ಈ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ಸಾಮಾನ್ಯವಾಗಿ ನನ್ನ ಸಿನಿಮಾ‌ ಹಾಡುಗಳ ಮೂಲಕ ಜನಪ್ರಿಯ.‌ ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ. ಈ ಚಿತ್ರದ ಹೆಸರು “ಜಡ್ಜ್ ಮೆಂಟ್”. ಆದರೆ ನಮ್ಮ ಸಿನಮಾ ನೋಡಿ ಪ್ರೇಕ್ಷಕ ನೀಡುವ ” ಜಡ್ಜ್ ಮೆಂಟ್ ” ಅಂತಿಮʼʼ ಎನ್ನುತ್ತಾರೆ ನಟ ರವಿಚಂದ್ರನ್.

ಚಿತ್ರದಲ್ಲಿ ಅಭಿನಯಿಸಿರುವ ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ರವಿಶಂಕರ್ ಗೌಡ, ರಾಜೇಂದ್ರ ಕಾರಂತ್, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಗಿ, ನವಿಲ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್, ಚಿತ್ರಕಥೆ ಬರೆದಿರುವ ವಾಸುದೇವ ಮೂರ್ತಿ ಸೇರಿದಂತೆ ಅನೇಕ ತಂತ್ರಜ್ಞರು “ದ ಜಡ್ಜ್ ಮೆಂಟ್” ಚಿತ್ರದ ಕುರಿತು ಮಾತನಾಡಿದರು.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Dhruva Sarja: ‘ಸಿ’ ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ!

Dhruva Sarja: ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್‌ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ.

VISTARANEWS.COM


on

dhruva sarja support C Cinema Kanda Kanda Video Song Release
Koo

ಬೆಂಗಳೂರು: `ಸಿ’..ಅಂದ್ರೆ ಇಲ್ನೋಡಿ ಅಂತಲ್ಲ, ಹಾಗಂತ ಸಮುದ್ರದ ಬಗ್ಗೆ ಹೇಳ್ತಾ ಇದ್ದೇವೆ ಅಂತನೂ (Dhruva Sarja) ಅಂದ್ಕೊಬೇಡಿ… ‘ಸಿ’ ಸ್ಯಾಂಡಲ್ ವುಡ್‌ನಲ್ಲಿ ರಿಲೀಸ್‌ಗೆ ಸಿದ್ಧವಾಗಿರುವ ಹೊಸ ಸಿನಿಮಾ. ಈಗಾಲೇ ಚಂದನವನದಲ್ಲಿ ʻಶ್ʼ..ʻಸೈʼ..ʻಎʼ..ʻಓಂʼ…ಹೀಗೆ ಒಂದೇ ಅಕ್ಷರದ ಹೆಸರಿನ ಹಲವು ಸಿನಿಮಾಗಳು ಬಂದು ಹೋದವು. ಇದೀಗ ಅದೇ ಸಾಲಿಗೆ ‘ಸಿ’ ಎನ್ನುವ ಮತ್ತೊಂದು ಸಿನಿಮಾ ಕೂಡ ಸೇರಿಕೊಳ್ಳುತ್ತಿರುವುದು ವಿಶೇಷ..

ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್‌ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡಿನಲ್ಲಿ ಕಿರಣ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ಈ ಸುಂದರ ಹಾಡನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಿಲೀಸ್ ಮಾಡಿರುವುದು ವಿಶೇಷ. ಮುದ್ದು ಮಗಳ ಜತೆ ಸಂಭ್ರಮಿಸುತ್ತಿರುವ ಧ್ರುವ ಸಿ ಸಿನಿಮಾದ ಸುಂದರ ಹಾಡನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಅಂದಹಾಗೆ ʻಕಂದಾ…ಕಂದಾʼ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡನ್ನು ಹೃದಯ ಶಿವ ಬರೆದಿದ್ದು, ಗಾಯಕ ವಾಸುಕಿ ವೈಭವ್ ಹಾಡಿದ್ದಾರೆ.

ಇದನ್ನೂ ಓದಿ: Dhruva Sarja: ವಿಮಾನ ದುರಂತ: ಕೂದಲೆಳೆ ಅಂತರದಿಂದ ಪಾರಾದ ಧ್ರುವ ಸರ್ಜಾ!

ಈ ಬಗ್ಗೆ ನಟ ಧ್ರುವ ಸರ್ಜಾ ಮಾತನಾಡಿ ʻʻಸಿ ಎಂದರೆ ಕ್ರೈಂ. ಹೊಸ ತಂಡ ಸೇರಿ ಒಳ್ಳೆಯ ಸಿನಿಮಾ ಮಾಡಿದೆ. ಹೊಸಬರಿಗೆ ಸಪೋರ್ಟ್‌ ಮಾಡಿ. ಚಿತ್ರತಂಡಕ್ಕೆ ಶುಭವಾಗಲಿʼʼಎಂದರು.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ʻಸಿʼ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವಾತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ಒಟಿಟಿಗೆ ಲಗ್ಗೆ ಇಟ್ಟ ತನುಷ್ ಶಿವಣ್ಣ ಅಭಿನಯದ ಕ್ರೈಮ್-ಆ್ಯಕ್ಷನ್ ಸಿನಿಮಾ ʻMr ನಟ್ವರ್ ಲಾಲ್ʼ!

Kannada New Movie: `ನಟ್ವರ್ ಲಾಲ್’ ಚಿತ್ರ ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ನಿರ್ಮಾಣವಾಗಿತ್ತು. ಇದೊಂದು ಕ್ರೈಂ ಥ್ರಿಲ್ಲರ್ ಹಾಗೂ ಆಕ್ಷನ್ ಜಾನರ್ ಚಿತ್ರ. ನಮ್ಮ ಸುತ್ತಮುತ್ತ ನಡೆಯುವ ನೈಜ ಘಟನೆಗಳನ್ನೇ ಆಧರಿಸಿದ ಕಥೆ ಇತ್ತು. ಬೆಂಗಳೂರು, ಮೈಸೂರು ಸಕಲೇಶಪುರ, ಮಂಗಳೂರು, ಸುತ್ತಮುತ್ತ 95 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ.

VISTARANEWS.COM


on

Kannada New Movie tanush shivannas mr natwarlal In OTT
Koo

ಬೆಂಗಳೂರು: ತನುಷ್ ಸಿನಿಮಾಸ್ ಲಾಂಛನದಲ್ಲಿ (Kannada New Movie) ತನುಷ್ ಶಿವಣ್ಣ ನಿರ್ಮಿಸಿರುವ, ತನುಷ್ ಶಿವಣ್ಣ, ಸೋನಾಲ್ ಮೊಂಥೆರೋ ಜೋಡಿಯ “Mr ನಟ್ವರ್ ಲಾಲ್” ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ. ʻಅಯೋಧ್ಯಾಪುರʼ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ. ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ‘ನಟ್ವರ್ ಲಾಲ್’ ಚಿತ್ರ ಅಮೆಜಾನ್ ಪ್ರೈಮ್‌ನಲ್ಲಿ ಲಭ್ಯವಿದೆ.

`ನಟ್ವರ್ ಲಾಲ್’ ಚಿತ್ರ ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ನಿರ್ಮಾಣವಾಗಿತ್ತು. ಇದೊಂದು ಕ್ರೈಂ ಥ್ರಿಲ್ಲರ್ ಹಾಗೂ ಆಕ್ಷನ್ ಜಾನರ್ ಚಿತ್ರ. ನಮ್ಮ ಸುತ್ತಮುತ್ತ ನಡೆಯುವ ನೈಜ ಘಟನೆಗಳನ್ನೇ ಆಧರಿಸಿದ ಕಥೆ ಇತ್ತು. ಬೆಂಗಳೂರು, ಮೈಸೂರು ಸಕಲೇಶಪುರ, ಮಂಗಳೂರು, ಸುತ್ತಮುತ್ತ 95 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು.

‘ನಟ್ವರ್‌ಲಾಲ್ (1912-2009) ಎಂದೂ ಕರೆಯಲ್ಪಡುವ ಕುಖ್ಯಾತ ಮಿಥಿಲೇಶ್ ಕುಮಾರ್ ಶ್ರೀವಾಸ್ತವ್ ಅವರ ಸುತ್ತ ಸುತ್ತುತ್ತದೆ. ತಾಜ್ ಮಹಲ್, ಕೆಂಪು ಕೋಟೆ, ರಾಷ್ಟ್ರಪತಿ ಭವನ ಮತ್ತು ಭಾರತದ ಸಂಸತ್ ಭವನದಂತಹ ಐತಿಹಾಸಿಕ ಕಟ್ಟಡಗಳ ಮಾರಾಟವನ್ನು ಒಳಗೊಂಡಂತೆ, ನಟ್ವರ್‌ಲಾಲ್ ಇತರೆ ಹಗರಣಗಳಿಗೆ ಹೆಸರಾದ ಭಾರತೀಯ ವಂಚಕ. ಆತನ ಜೀವನದ ಅಂಶಗಳನ್ನು ನಿರೂಪಣೆಯಲ್ಲಿ ಹೆಣೆದಿದ್ದೇವೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿತ್ತು.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ನಾಗಭೂಷಣ್, ರಾಜೇಶ್ ನಟರಂಗ, ಕಾಕ್ರೋಚ್ ಸುದೀ, ಯಶ್ ಶೆಟ್ಟಿ, ರಾಜೇಂದ್ರ ಕಾರಂತ್, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಸೇರಿದಂತೆ ಹಲವು ಮಂದಿ ನಟಿಸಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಸಿನಿಮಾದ ಅಚ್ಚಚ್ಚೋ ಅಚ್ಚು ಮೆಚ್ಚಿವಳು..’ ಅನ್ನೋ ರೊಮ್ಯಾಂಟಿಕ್ ಸಾಂಗ್ ಪ್ರೇಕ್ಷಕರಿಗೆ ಕಿಕ್ ಕೊಟ್ಟಿತ್ತು. ವಿಶೇಷ ಅಂದರೆ, ಈ ಹಾಡನ್ನು ‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ಸಾಂಗ್ ‘ವರಾಹ ರೂಪಂ’ ಹಾಡಿರುವ ಸಾಯಿ ವಿಘ್ನೇಶ್ ಹಾಡಿದ್ದರು. ಈ ರೊಮ್ಯಾಂಟಿಕ್ ಹಾಡಿಗೆ ನಿರ್ದೇಶಕ ‘ಭರ್ಜರಿ’ ಚೇತನ್ ಸಾಹಿತ್ಯ ರಚಿಸಿದ್ದು, ಧರ್ಮ ವಿಷ್ ಸಂಗೀತ ನೀಡಿದ್ದರು.

Continue Reading
Advertisement
ipl 2024
ಪ್ರಮುಖ ಸುದ್ದಿ1 hour ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ1 hour ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ2 hours ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು2 hours ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ2 hours ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ2 hours ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ3 hours ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Virat Kohli
ಕ್ರೀಡೆ3 hours ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ3 hours ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ5 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ19 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ21 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌