EPF Accounts: ಇಪಿಎಫ್ ಖಾತೆಗಳ ಸ್ವಯಂಚಾಲಿತ ವರ್ಗಾವಣೆಗೂ ಇದೆ ಅವಕಾಶ; ಹೀಗೆ ಮಾಡಿ - Vistara News

ವಾಣಿಜ್ಯ

EPF Accounts: ಇಪಿಎಫ್ ಖಾತೆಗಳ ಸ್ವಯಂಚಾಲಿತ ವರ್ಗಾವಣೆಗೂ ಇದೆ ಅವಕಾಶ; ಹೀಗೆ ಮಾಡಿ

EPF Accounts: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ತನ್ನ ಸದಸ್ಯರಿಗೆ ಅನುಕೂಲವಾಗುವಂತೆ ಇಪಿಎಫ್ ಖಾತೆಗಳ ಸ್ವಯಂಚಾಲಿತ ವರ್ಗಾವಣೆ ಸೌಲಭ್ಯವನ್ನು ಪರಿಚಯಿಸಿದೆ. ಇದರಿಂದ ಉದ್ಯೋಗ ಬದಲಾದಾಗ ಇಪಿಎಫ್ ಖಾತೆಗಳ ಸ್ವಯಂಚಾಲಿತವಾಗಿ ವರ್ಗಾವಣೆಗೊಳ್ಳುತ್ತದೆ.

VISTARANEWS.COM


on

EPF Accounts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉದ್ಯೋಗ ಬದಲಾವಣೆ (switching jobs) ಸಂದರ್ಭದಲ್ಲಿ ಹಣಕಾಸಿಗೆ (money) ಸಂಬಂಧಪಟ್ಟ ಸಾಕಷ್ಟು ಜಂಜಾಟಗಳಿಂದಾಗಿಯೇ ಹೆಚ್ಚಿನವರು ಉದ್ಯೋಗ ಬದಲಾಯಿಸಲು ಆಸಕ್ತಿ ತೋರಿಸುವುದಿಲ್ಲ. ಇದರಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿಯೂ (EPF accounts) ಒಂದು. ಆದರೆ ಇನ್ನು ಉದ್ಯೋಗ ಬದಲಾವಣೆ ವೇಳೆ ಉದ್ಯೋಗಿಗಳ ಭವಿಷ್ಯ ನಿಧಿಯ ಬಗ್ಗೆ ಯಾವುದೇ ಚಿಂತೆ ಮಾಡಬೇಕಿಲ್ಲ. ಯಾಕೆಂದರೆ ಸ್ವಯಂಚಾಲಿತವಾಗಿ (Automatic Transfer ) ಉದ್ಯೋಗಿಗಳ ಭವಿಷ್ಯ ನಿಧಿಯನ್ನು ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ಬದಲಾಯಿಸಿಕೊಳ್ಳಬಹುದು.

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (Employees’ Provident Fund Organisation-EPFO) ತನ್ನ ಸದಸ್ಯರಿಗೆ ಅನುಕೂಲವಾಗುವಂತೆ ಇಪಿಎಫ್ ಖಾತೆಗಳ ಸ್ವಯಂಚಾಲಿತ ವರ್ಗಾವಣೆ ಸೌಲಭ್ಯವನ್ನು ಪರಿಚಯಿಸಿದೆ. ಇದರಿಂದ ಉದ್ಯೋಗ ಬದಲಾದಾಗ ಇಪಿಎಫ್ ಖಾತೆಗಳ ಸ್ವಯಂಚಾಲಿತ ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ವರ್ಗಾವಣೆಗೊಳ್ಳುತ್ತದೆ. ಇಪಿಎಫ್ ಖಾತೆಗಳ ಸ್ವಯಂಚಾಲಿತ ವರ್ಗಾವಣೆಯು ಸಾಕಷ್ಟು ಪ್ರಯೋಜನಗಳೊಂದಿಗೆ ಹಲವು ವಿಶೇಷತೆಗಳನ್ನು ಹೊಂದಿದೆ. ಅವುಗಳ ಕುರಿತು ಕಿರು ಮಾಹಿತಿ ಇಲ್ಲಿದೆ.


ಸ್ವಯಂಚಾಲಿತ ವರ್ಗಾವಣೆ ಎಂದರೇನು?

ಇಪಿಎಫ್ ಖಾತೆಗಳ ಸ್ವಯಂಚಾಲಿತ ವರ್ಗಾವಣೆ ವಿಶೇಷವೆಂದರೆ ಅಸ್ತಿತ್ವದಲ್ಲಿರುವ ಇಪಿಎಫ್ ಸದಸ್ಯರು ತಮ್ಮ ಹಳೆಯ ಉದ್ಯೋಗದಾತರಿಂದ ಯಾವುದೇ ಆನ್‌ಲೈನ್ ಅಥವಾ ಆಫ್‌ಲೈನ್ ವಿನಂತಿಗಳ ಅಗತ್ಯವಿಲ್ಲದೇ ತಮ್ಮ ಪಿಎಫ್ ಬ್ಯಾಲೆನ್ಸ್‌ಗಳನ್ನು ಸರಿಪಡಿಸಲು ಉದ್ಯೋಗ ಬದಲಾದಾಗ ಅವಕಾಶ ನೀಡುತ್ತದೆ ಮತ್ತು ಇದು ತನ್ನಿಂತಾನೇ ಸಕ್ರಿಯಗೊಳ್ಳುತ್ತದೆ. ಇದರರ್ಥ ಇಪಿಎಫ್ ಖಾತೆ ವರ್ಗಾವಣೆ ಸ್ವಯಂಚಾಲಿತವಾಗಿ ನಡೆಯುತ್ತದೆ. ಇದರಿಂದ ಉದ್ಯೋಗಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.

ಯಾರು ಈ ಸೌಲಭ್ಯ ಪಡೆಯಬಹುದು ?

ಇಪಿಎಫ್ ಖಾತೆಗಳ ಸ್ವಯಂಚಾಲಿತ ವರ್ಗಾವಣೆ ಸೌಲಭ್ಯವು ಇಪಿಎಫ್ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ಇಪಿಎಫ್ ಖಾತೆಗಳು, ಹಳೆಯ ಮತ್ತು ಹೊಸ ಎರಡೂ ಇಪಿಎಫ್‌ಒನಿಂದ ನಿರ್ವಹಿಸಲ್ಪಡುತ್ತವೆ. ವಿನಾಯಿತಿ ಪಡೆದ ಪಿಎಫ್ ಟ್ರಸ್ಟ್‌ಗಳು ಈ ಸ್ವಯಂಚಾಲಿತ ವರ್ಗಾವಣೆ ಯೋಜನೆಯ ಅಡಿಯಲ್ಲಿ ಒಳಗೊಂಡಿರುವುದಿಲ್ಲ.

EPF Accounts


ಏನು ಮಾಡಬೇಕು ?

ಸ್ವಯಂಚಾಲಿತ ಇಪಿಎಫ್ ಖಾತೆ ವರ್ಗಾವಣೆಯನ್ನು ಸುಲಭಗೊಳಿಸಲು ಇಪಿಎಫ್‌ಒ ಸೂಚಿಸಿರುವ ಕೆಲವೊಂದು ಅವಶ್ಯಕತೆಗಳನ್ನು ಮಾಡಬೇಕಾಗುತ್ತದೆ. ಮುಖ್ಯವಾಗಿ ಹೊಸ ಉದ್ಯೋಗದಾತರು ಒದಗಿಸಿದ ಯುಎಎನ್ (UAN) ಮತ್ತು ಆಧಾರ್ ಸಂಖ್ಯೆಗಳು ಯುಎಎನ್ ನೊಂದಿಗೆ ಲಭ್ಯವಿರುವ ವಿವರಗಳಿಗೆ ಹೊಂದಿಕೆಯಾಗಬೇಕು. ಇಪಿಎಫ್ ಸದಸ್ಯರ ಆಧಾರ್ ಸಂಖ್ಯೆಯನ್ನು ಹಿಂದಿನ ಉದ್ಯೋಗ ಸ್ಥಳದಲ್ಲಿ ಯುಎಎನ್ ಗೆ ಲಿಂಕ್ ಮಾಡಬೇಕು ಮತ್ತು ಪರಿಶೀಲಿಸಬೇಕು. ಸೇರುವ ದಿನಾಂಕ, ನಿರ್ಗಮನ ದಿನಾಂಕ ಮತ್ತು ನಿರ್ಗಮನದ ಕಾರಣದಂತಹ ವಿವರಗಳು ಹಳೆಯ ಉದ್ಯೋಗದಾತರಿಂದ ಪಡೆದು ನೀಡಬೇಕು. ಇಪಿಎಫ್ ಸದಸ್ಯರ ಯುಎಎನ್ ಅನ್ನು ಸಕ್ರಿಯಗೊಳಿಸಬೇಕು ಮತ್ತು ಮೊಬೈಲ್ ಸಂಖ್ಯೆಯನ್ನುನೀಡಬೇಕು.

ಇಪಿಎಫ್ ಬಡ್ಡಿ ದರ ಹೆಚ್ಚಳ

  • ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್‌ಒ 2023- 24ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.8.25ಕ್ಕೆ ಹೆಚ್ಚಿಸಿದ್ದು ಇದು ಮೂರು ವರ್ಷಗಳ ಗರಿಷ್ಠ ಮಟ್ಟವಾಗಿದೆ.
  • ಇಪಿಎಫ್ ಮೇಲಿನ ಬಡ್ಡಿದರವನ್ನು 2021-22ರಲ್ಲಿದ್ದ ಶೇ. 8.10ರಿಂದ 2022-23ರ ಆರ್ಥಿಕ ವರ್ಷಕ್ಕೆ ಶೇ. 8.15% ಇಪಿಎಫ್‌ಒ ಏರಿಸಿತ್ತು. ಮಾರ್ಚ್ 2023ರಲ್ಲಿ ಆ ಹೆಚ್ಚಳ ಮಾಡಿದ ನಂತರ ಈ ಕ್ರಮ ಬಂದಿದೆ. ​​
  • ಇಪಿಎಫ್ ಮೇಲಿನ ಬಡ್ಡಿ ದರವನ್ನು 2020-21ರಲ್ಲಿದ್ದ ಶೇ. 8.5ರಿಂದ 2021-22ರ ಹಣಕಾಸು ವರ್ಷಕ್ಕೆ ಶೇ.8.1ಕ್ಕೆ ಇಳಿಸಲಾಗಿತ್ತು. ಇದು EPFOದ ನಾಲ್ಕು ದಶಕಗಳ ಅತಿ ಕಡಿಮೆ ಬಡ್ಡಿದರವಾಗಿತ್ತು.
  • 2023-24ರ ಶೇ.8.25 ಬಡ್ಡಿ ದರವು ಇಪಿಎಫ್ ಒ​​ನ ಆರು ಕೋಟಿಗೂ ಹೆಚ್ಚು ಸದಸ್ಯರ ಪಾಲಿಗೆ ಧನಾತ್ಮಕ ಬೆಳವಣಿಗೆಯಾಗಿದೆ. 2020-21ರ ಇಪಿಎಫ್ ಮೇಲಿನ ಬಡ್ಡಿದರವನ್ನು ಮಾರ್ಚ್ 2021ರಲ್ಲಿ ಶೇ. 8.5ಗೆ ನಿಗದಿಪಡಿಸಲಾಗಿತ್ತು.

ಇದನ್ನೂ ಓದಿ: Money Guide: ಹೋಮ್‌ ಲೋನ್‌ ಇಎಂಐ ಕಡಿಮೆ ಮಾಡಬೇಕೆ? ಚಿಂತೆ ಬಿಟ್ಟು ಈ ಟಿಪ್ಸ್‌ ಫಾಲೋ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Gold Rate Today:ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ಅಕ್ಷಯ ತದಿಗೆಯ ಬಳಿಕ ಚಿನ್ನದ ಮಾರುಕಟ್ಟೆಯಲ್ಲಿ ದಿನೇ ದಿನೆ ಏರಿಳಿಕೆ ಸಾಮಾನ್ಯವಾಗಿದೆ. ನಿನ್ನೆ ದರ ಏರಿಕೆ ಆಗಿತ್ತು. ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ನಿನ್ನೆ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹80 ಹಾಗೂ ₹87 ಏರಿಕೆಯಾಗಿತ್ತು. ಇಂದು ನಿನ್ನೆಯಷ್ಟೇ ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹89, ಎಂಟು ಗ್ರಾಂ ₹712 ಮತ್ತು 10 ಗ್ರಾಂ ₹890ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,900 ಮತ್ತು 1 ಕಿಲೋಗ್ರಾಂಗೆ ₹89,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,55074,770
ಮುಂಬಯಿ68,40074,620
ಬೆಂಗಳೂರು68,40074,620
ಚೆನ್ನೈ68,50074,730

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಮನಿ-ಗೈಡ್

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Money Guide: ಪಡಿತರ ಚೀಟಿ ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಡಿತರ ಚೀಟಿ (Ration Card) ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಜತೆಗೆ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪ್ಯಾನ್ ಕಾರ್ಡ್‌, ಚಾಲಕರ ಪರವಾನಗಿ ಇತ್ಯಾದಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಇದನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ‌ ವಿತರಿಸುತ್ತದೆ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ (Money Guide).

ಅಗತ್ಯ ದಾಖಲೆಗಳು

ಗ್ರಾಮಾಂತರ ಪ್ರದೇಶ

  • ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
  • ಈಗ ವಾಸ ಮಾಡುತ್ತಿರುವ ಮನೆ ವಿಳಾಸ
  • ಮನೆಯ ಆಸ್ತಿ ಸಂಖ್ಯೆ ವಿವರ
  • ಮನೆಯ ವಿದ್ಯುತ್‌ ಸಂಪರ್ಕದ ಬಿಲ್‌ ಪ್ರತಿ
  • ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.

ನಗರ / ಪಟ್ಟಣ ಪ್ರದೇಶ

  • ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
  • ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ (ಇದನ್ನು ಸುಲಭವಾಗಿ ತಿಳಿಯಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯವರನ್ನು ಸಂಪರ್ಕಿಸಿ, ಇಲ್ಲವೇ ನಿಮ್ಮ ನೆರೆಹೊರೆಯವರಲ್ಲಿ ಈಗಾಗಲೇ ಲಭ್ಯವಿರುವ ಪಡಿತರ ಚೀಟಿಯನ್ನು ನೋಡಿ ತಿಳಿಯಿರಿ)
  • ನಿಮ್ಮ ಮನೆಯ ವಿದ್ಯುತ್ ಬಿಲ್
  • ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್‌ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ
  • ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
  • ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
  • ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ
  • ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ

ಅರ್ಜಿ ಸಲ್ಲಿಸುವುದು ಹೇಗೆ?

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಇ-ಸರ್ವಿಸ್‌ (ಇ-ಸೇವೆ) ಮೇಲೆ ಕ್ಲಿಕ್‌ ಮಾಡಬೇಕು. ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ. ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್‌ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ. ಅಲ್ಲಿ ಎಪಿಎಲ್‌ ಹಾಗೂ ಬಿಪಿಎಲ್‌ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.

ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

Continue Reading

ದೇಶ

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Reliance Jio: ಜಿಯೋದಿಂದ ದೇಶದಾದ್ಯಂತ ಇರುವ ಕ್ರೀಡಾ ಉತ್ಸಾಹಿಗಳಿಗೆ ಹೊಸ ಹಾಗೂ ರೋಮಾಂಚಕ ಡಿಜಿಟಲ್ ಅನುಭವವನ್ನು ಪರಿಚಯಿಸಲಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಹಾಗೂ ಜಿಯೋ ಮೊಬಿಲಿಟಿ ಪ್ರೀಪ್ರೇಯ್ಡ್ ಗ್ರಾಹಕರು ಇದೀಗ ‘ಫ್ಯಾನ್ ಕೋಡ್’ಎಂಬ ಪ್ರೀಮಿಯಂ ಕ್ರೀಡಾ ಒಟಿಟಿ ಅಪ್ಲಿಕೇಷನ್‌ಗೆ ಕಾಂಪ್ಲಿಮೆಂಟರಿ ಸಬ್‌ಸ್ಕ್ರಿಪ್ಷನ್ ಪಡೆಯಬಹುದಾಗಿದೆ. ಇದರಲ್ಲಿ ಫ್ಯಾನ್ ಕೋಡ್‌ನ ಎಕ್ಸ್‌ಕ್ಲೂಸಿವ್‌ ಫಾರ್ಮುಲಾ ಒನ್ ಪ್ರಸಾರದ ಕಂಟೆಂಟ್ ಸಂಪರ್ಕ ಸಹ ಪಡೆಯಬಹುದಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಮತ್ತು ಜಿಯೋ ಮೊಬಿಲಿಟಿಯ ಆಯ್ದ ಅರ್ಹ ಗ್ರಾಹಕರಿಗೆ ಮಾತ್ರ ಈ ಕಾಂಪ್ಲಿಮೆಂಟರಿ ಪ್ಲಾನ್ ಅನ್ವಯಿಸುತ್ತವೆ.

VISTARANEWS.COM


on

Fan Code OTT Subscription Now for Jio AirFiber JioFiber Jio Mobility Customers
Koo

ಮುಂಬೈ: ದೇಶದಾದ್ಯಂತ ಇರುವ ಕ್ರೀಡಾ ಉತ್ಸಾಹಿಗಳಿಗೆ ಜಿಯೋದಿಂದ ಹೊಸ ಹಾಗೂ ರೋಮಾಂಚಕ ಡಿಜಿಟಲ್ ಅನುಭವವನ್ನು ಪರಿಚಯಿಸಲಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಹಾಗೂ ಜಿಯೋ ಮೊಬಿಲಿಟಿ (Reliance Jio) ಪ್ರೀಪ್ರೇಯ್ಡ್ ಗ್ರಾಹಕರು ಇದೀಗ ‘ಫ್ಯಾನ್ ಕೋಡ್’ ಎಂಬ ಪ್ರೀಮಿಯಂ ಕ್ರೀಡಾ ಒಟಿಟಿ ಅಪ್ಲಿಕೇಷನ್‌ಗೆ ಕಾಂಪ್ಲಿಮೆಂಟರಿ ಸಬ್‌ಸ್ಕ್ರಿಪ್ಷನ್ ಪಡೆಯಬಹುದಾಗಿದೆ.

ಈ ಆಫರ್ ಮೂಲಕ ಜಿಯೋ ಗ್ರಾಹಕರು ರೋಮಾಂಚಕವಾದ ಮತ್ತು ಕ್ರೀಡೆಯಲ್ಲಿಯೇ ಅತ್ಯುತ್ತಮವಾದ ನೇರಪ್ರಸಾರದ ಅನುಭವವನ್ನು ಪಡೆಯಬಹುದು. ಇದರಲ್ಲಿ ಫ್ಯಾನ್ ಕೋಡ್‌ನ ಎಕ್ಸ್‌ಕ್ಲೂಸಿವ್‌ ಫಾರ್ಮುಲಾ ಒನ್ ಪ್ರಸಾರದ ಕಂಟೆಂಟ್ ಸಂಪರ್ಕ ಸಹ ಪಡೆಯಬಹುದಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಮತ್ತು ಜಿಯೋ ಮೊಬಿಲಿಟಿಯ ಆಯ್ದ ಅರ್ಹ ಗ್ರಾಹಕರಿಗೆ ಮಾತ್ರ ಈ ಕಾಂಪ್ಲಿಮೆಂಟರಿ ಪ್ಲಾನ್ ಅನ್ವಯಿಸುತ್ತವೆ.

ಜಿಯೋ ಏರ್‌ಫೈಬರ್ ಮತ್ತು ಜಿಯೋಫೈಬರ್ ಗ್ರಾಹಕರು 1199 ರೂಪಾಯಿ ಮತ್ತು ಮೇಲ್ಪಟ್ಟ ಪ್ಲಾನ್‌ಗೆ ಸಬ್‌ಸ್ಕ್ರಿಪ್ಷನ್ ಪಡೆದಾಗ ಕಾಂಪ್ಲಿಮೆಂಟರಿ ಆಗಿ ಫ್ಯಾನ್ ಕೋಡ್ ಪಡೆಯುವುದಕ್ಕೆ ಅರ್ಹರು. ಅದೇ ರೀತಿ ಜಿಯೋ ಮೊಬಿಲಿಟಿ ಪ್ರಿಪೇಯ್ಡ್ ಗ್ರಾಹಕರು ತಮ್ಮ ಈಗಿರುವ ರೂ. 398, ರೂ. 1198, ರೂ. 4498 ಪ್ಲಾನ್‌ಗಳ ಮೂಲಕ ಅಥವಾ ಹೊಚ್ಚ ಹೊಸದಾದ 3333 ರೂಪಾಯಿಯ ವಾರ್ಷಿಕ ಪ್ಲಾನ್ ಬಳಸುತ್ತಿದ್ದಲ್ಲಿ ಈ ಕಾಂಪ್ಲಿಮೆಂಟರಿ ಫ್ಯಾನ್ ಕೋಡ್ ಪಡೆಯಬಹುದು. ಯಾವುದೇ ಹೆಚ್ಚುವರಿಯಾದ ಶುಲ್ಕ ಇಲ್ಲದೆ ಈ ಕಾಂಪ್ಲಿಮೆಂಟರಿ ಯೋಜನೆ ಸೇರ್ಪಡೆ ಆಗುತ್ತದೆ. ಹೊಸ ಹಾಗೂ ಈಗಾಗಲೇ ಗ್ರಾಹಕರಾದವರಿಗೆ ಈ ಪ್ಲಾನ್ ದೊರೆಯುತ್ತದೆ.

ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

ಫ್ಯಾನ್ ಕೋಡ್ ಎಂಬುದು ಪ್ರಮುಖ ಕ್ರೀಡಾ ಸ್ಟ್ರೀಮಿಂಗ್ ಪ್ಲಾಟ್ ಫಾರ್ಮ್. ಇದು ಇಂಟರ್ ಆಕ್ಟಿವ್ ನೇರ ಪ್ರಸಾರವನ್ನು ತರುತ್ತದೆ. ಪ್ರೀಮಿಯರ್ ಕ್ರಿಕೆಟ್ ಪಂದ್ಯಾವಳಿಗಳು, ಮಹಿಳಾ ಕ್ರಿಕೆಟ್, ಫುಟ್‌ಬಾಲ್ ನೇರಪ್ರಸಾರ, ಬ್ಯಾಸ್ಕೆಟ್ ಬಾಲ್, ಬೇಸ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್ ಮತ್ತು ಇತರ ಪ್ರಮುಖ ಕ್ರೀಡಾ ಕಾರ್ಯಕ್ರಮಗಳು ಪ್ರಸಾರ ಆಗುತ್ತವೆ. ಫಾರ್ಮುಲಾ 1 ಉತ್ಸಾಹಿಗಳ ಮಧ್ಯೆ ಇದು ಬಹಳ ಖ್ಯಾತಿಯನ್ನು ಪಡೆದಿದೆ. 2024 ಮತ್ತು 2025ನೇ ಇಸವಿಗೆ ಫಾರ್ಮುಲಾ 1 ಭಾರತದ ಪ್ರಸಾರ ಹಕ್ಕುಗಳನ್ನು ತನ್ನದಾಗಿಸಿಕೊಂಡಿದೆ. ಬಳಕೆದಾರರು ನೈಜ ಸಮಯದ ಪಂದ್ಯದ ಮುಖ್ಯಾಂಶಗಳು, ಸಂಪೂರ್ಣ ಮ್ಯಾಚ್ ವಿಡಿಯೋಗಳು, ಭಾರತೀಯ ಕ್ರಿಕೆಟ್ ಪ್ರಮುಖಾಂಶಗಳು, ದತ್ತಾಂಶ, ಅಂಕಿ-ಅಂಶಗಳು, ಗಹನವಾದ ವಿಶ್ಲೇಷಣೆ, ಫ್ಯಾಂಟಸಿ ಸ್ಪೋರ್ಟ್ಸ್ ಒಳನೋಟಗಳು, ಮತ್ತು ವಿಶ್ವ ಮಟ್ಟದ ಕ್ರೀಡೆಗೆ ಸಂಬಂಧಿಸಿದ ಬ್ರೇಕಿಂಗ್ ಸುದ್ದಿ ಇವೆಲ್ಲವೂ ದೊರೆಯುತ್ತವೆ.

ಕಾಂಪ್ಲಿಮೆಂಟರಿ ಸಂಪರ್ಕದಿಂದ ಏನೇನು ದೊರೆಯಲಿದೆ?

ಪ್ರೀಮಿಯಂ ಫ್ಯಾನ್ ಕೋಡ್ ಕಂಟೆಂಟ್

ಫ್ಯಾನ್ ಕೋಡ್‌ನ ಎಕ್ಸ್‌ಕ್ಲೂಸಿವ್ ಆದ ಕ್ರೀಡಾ ಕಂಟೆಂಟ್‌ಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಜಿಯೋಟಿವಿ+ ಅಥವಾ ಜಿಯೋಟಿವಿ ಅಪ್ಲಿಕೇಷನ್ ಮೂಲಕ ವೀಕ್ಷಣೆ ಮಾಡಬಹುದು.

ಇದನ್ನೂ ಓದಿ: Delhi Airport: ಹಾರುತ್ತಿದ್ದ ವಿಮಾನದಲ್ಲಿ ಅಗ್ನಿ ಅವಘಡ; ದೆಹಲಿ ಏರ್‌ಪೋರ್ಟ್‌ನಲ್ಲಿ ಎಮರ್ಜನ್ಸಿ ಘೋಷಣೆ!

ಎಫ್1 ಸಂಪರ್ಕ

2024 ಮತ್ತು 2025ನೇ ಋತುವಿಗೆ ಫಾರ್ಮುಲಾ 1 ಭಾರತದ ಪ್ರಸಾರ ಹಕ್ಕುಗಳನ್ನು ಫ್ಯಾನ್ ಕೋಡ್ ತನ್ನದಾಗಿಸಿಕೊಂಡಿದೆ. ಭಾರತೀಯ ಅಭಿಮಾನಿಗಳು ರೇಸ್‌ಗಳನ್ನು ಫ್ಯಾನ್ ಕೋಡ್ ಮೂಲಕ ಸ್ಮಾರ್ಟ್ ಟೀವಿಗಳು, ಮೊಬೈಲ್ ಫೋನ್ ಮತ್ತು ಟ್ಯಾಬ್ಲೆಟ್ ಗಳಲ್ಲಿ ವೀಕ್ಷಿಸಬಹುದು. ಇನ್ನು ಕವರೇಜ್‌ನಲ್ಲಿ ಅಭ್ಯಾಸ, ಅರ್ಹತಾ ಸೆಷನ್‌ಗಳು, ಸ್ಪ್ರಿಂಟ್ ರೇಸ್‌ಗಳು ಹಾಗೂ ಗ್ರಾಂಡ್ ಪ್ರಿಕ್ಸ್ ಒಳಗೊಂಡಿರುತ್ತದೆ.

ವಿಸ್ತೃತವಾದ ಕವರೇಜ್

ಪ್ರಮುಖ ಕ್ರೀಡಾ ಪಂದ್ಯಾವಳಿಗಳ ನೇರಪ್ರಸಾರ, ಆಳವಾದ ವಿಶ್ಲೇಷಣೆ ಮತ್ತು ರಿಯಲ್ ಟೈಮ್ ವಿಶ್ಲೇಷಣೆ ಇರುತ್ತದೆ.

ಸಮಗ್ರವಾದ ಸ್ಪೋರ್ಟ್ಸ್ ಲೈಬ್ರರಿ

ಪಂದ್ಯಾವಳಿಯ ಪ್ರಮುಖಾಂಶಗಳು, ಸಂಪೂರ್ಣವಾದ ಅಂಕಿ- ಅಂಶ, ಮತ್ತು ಕ್ರೀಡಾ ಒಳನೋಟಕ್ಕೆ ಸಂಪರ್ಕ ದೊರೆಯುತ್ತದೆ.

ತಾಜಾ ಸುದ್ದಿ ಬಗ್ಗೆ ಅಪ್‌ಡೇಟ್

ಭಾರತೀಯ ಕ್ರಿಕೆಟ್ ಮತ್ತು ಜಾಗತಿಕ ಕ್ರೀಡೆಗಳ ತಾಜಾ ಸುದ್ದಿ ಬಗ್ಗೆ ಅಪ್‌ಡೇಟ್ ದೊರೆಯುತ್ತದೆ.

ಹೊಸ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್

ಜಿಯೋದಿಂದ ಹೊಸದಾಗಿ 3333 ರೂ. ಪ್ಲಾನ್ ಇದ್ದು, ಇದರಲ್ಲಿ 2.5 ಜಿಬಿ/ದಿನಕ್ಕೆ ನೀಡುತ್ತಿದೆ, ಈ ಪ್ಲ್ಯಾನ್ ಜತೆಗೆ ಕಾಂಪ್ಲಿಮೆಂಟರಿ ಆಗಿ ಫ್ಯಾನ್‌ಕೋಡ್ ಚಂದಾದಾರಿಕೆ ದೊರೆಯುತ್ತದೆ.

ಇದನ್ನೂ ಓದಿ: SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಜಿಯೋ ಏರ್‌ಫೈಬರ್, ಜಿಯೋಫೈಬರ್ ಮತ್ತು ಮತ್ತು ಪ್ರಿಪೇಯ್ಡ್ ಮೊಬಿಲಿಟಿ ಪ್ಲಾನ್ ಬಳಕೆದಾರರು ಅರ್ಹ ಯೋಜನೆಗಳನ್ನು ಹೊಂದಿದ್ದಲ್ಲಿ ಈಗ ಕ್ರೀಡಾ ಜಗತ್ತಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದು, ಅದರಲ್ಲೂ ವಿಶೇಷವಾಗಿ ಎಫ್ 1ಗೆ ಸಂಬಂಧಿಸಿದಂತೆ ಈ ಹಿಂದೆಂದಿಗಿಂತಲೂ ಹೆಚ್ಚು ತೊಡಗಿಸಿಕೊಳ್ಳಬಹುದು. ಈ ಕೊಡುಗೆಯು ಜಿಯೋ ಬಳಕೆದಾರರಿಗೆ ಹೆಚ್ಚಿನ ಗುಣಮಟ್ಟದ ಕ್ರೀಡಾ ಕಂಟೆಂಟ್‌ಗೆ ಸಂಪರ್ಕ ಹೊಂದಿದ್ದು, ಮನರಂಜನೆ, ಸುದ್ದಿ, ಆಧ್ಯಾತ್ಮಿಕ ಇತ್ಯಾದಿ ಕಂಟೆಂಟ್‌ಗಳು ಸಹ ಇದ್ದು, ಇತರ ಪ್ರಕಾರಗಳಲ್ಲಿ ಕಂಟೆಂಟ್‌ನ ವಿಶಾಲವಾದ ಲೈಬ್ರರಿಯನ್ನು ಹೊಂದಿದೆ ಎಂದು ಖಚಿತಪಡಿಸುತ್ತದೆ. ಇದರಿಂದಾಗಿ ಬಳಕೆದಾರರ ವೀಕ್ಷಣೆಯ ಅನುಭವವನ್ನು ಹೆಚ್ಚಿಸುತ್ತದೆ ಮತ್ತು ಅವರ ನೆಚ್ಚಿನ ಆನ್-ಡಿಮಾಂಡ್ ವಿಡಿಯೋಗಳೊಂದಿಗೆ ಯಾವಾಗಲೂ ಸಂಪರ್ಕದಲ್ಲಿ ಇರಿಸುತ್ತದೆ ಎಂದು ತಿಳಿಸಿದೆ.

Continue Reading

ಮನಿ ಗೈಡ್

Retirement Plan: ನಿವೃತ್ತಿ ನಂತರ ನೆಮ್ಮದಿ ಜೀವನ ನಡೆಸಬೇಕೆ? ಈ 5 ಯೋಜನೆಗಳನ್ನು ಮರೆಯಬೇಡಿ

ನಿವೃತ್ತಿಗಾಗಿ ಯೋಜಿಸುತ್ತಿದ್ದರೆ ಮತ್ತು ಪ್ರತಿ ತಿಂಗಳು ಪಿಂಚಣಿ ಪಡೆಯಲು ಬಯಸಿದರೆ ಉತ್ತಮ ಆದಾಯವನ್ನು ನೀಡುವ ಯೋಜನೆಗಳಲ್ಲಿ (Retirement Plan) ಹೂಡಿಕೆ ಮಾಡುವುದು ಒಳ್ಳೆಯದು. ಐದು ನಿವೃತ್ತಿ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Retirement Plan
Koo

ಉದ್ಯೋಗ (job) ಆರಂಭಿಸುವಾಗಲೇ ನಿವೃತ್ತಿ ಯೋಜನೆಯನ್ನು (Retirement Plan) ರೂಪಿಸಬೇಕು. ಇಲ್ಲವಾದರೆ ವಯಸ್ಸು ಜಾರಿದ್ದು ಗೊತ್ತೇ ಆಗುವುದಿಲ್ಲ. ನಿವೃತ್ತಿ ಸಮೀಪಿಸಿದಾಗ ಕೈಯಲ್ಲಿ ಬಿಡಿಗಾಸೂ ಇಲ್ಲದೆ ಕಷ್ಟ ಪಡಬೇಕಾಗಬಹುದು. ಇಲ್ಲವಾದರೆ ಅವರಿವರ ಮುಂದೆ ಕೈಚಾಚಿಕೊಂಡು ನಿಲ್ಲುವಂತಹ ಸಂದರ್ಭ ಬರಬಹುದು.

ನಿವೃತ್ತಿಗಾಗಿ ಯೋಜಿಸುತ್ತಿದ್ದರೆ ಮತ್ತು ಪ್ರತಿ ತಿಂಗಳು ಪಿಂಚಣಿ (pension ) ಪಡೆಯಲು ಬಯಸಿದರೆ ಉತ್ತಮ ಆದಾಯವನ್ನು (regular income) ನೀಡುವ ಯೋಜನೆಗಳಲ್ಲಿ ಹೂಡಿಕೆ (investment) ಮಾಡುವುದು ಒಳ್ಳೆಯದು. ನಿಯಮಿತ ಆದಾಯದ ಮೂಲವನ್ನು ನಮ್ಮನು ಸುರಕ್ಷಿತಗೊಳಿಸುತ್ತದೆ ಮತ್ತು ಆರಾಮದಾಯಕ ವೃದ್ಧಾಪ್ಯವನ್ನು ಖಚಿತಪಡಿಸಿಕೊಳ್ಳಲು ಗಮನಾರ್ಹವಾದ ಒಟ್ಟು ಮೊತ್ತವನ್ನು ಸಂಗ್ರಹಿಸುತ್ತದೆ. ಒಂದು ದೊಡ್ಡ ಮೊತ್ತವು ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಆದರೆ ಮಾಸಿಕ ಆದಾಯವು ದೈನಂದಿನ ಖರ್ಚುಗಳನ್ನು ಒಳಗೊಂಡಿರುತ್ತದೆ.

ವಿಶ್ವಾಸಾರ್ಹ ಮಾಸಿಕ ಪಿಂಚಣಿಯನ್ನು ನೀಡುವ ಐದು ಯೋಜನೆಗಳು ಇಲ್ಲಿವೆ. ಇದರಲ್ಲಿ ಹೂಡಿಕೆ ಮಾಡಿದರೆ ನಿವೃತ್ತಿ ಬಳಿಕ ಯಾರನ್ನೂ ಅವಲಂಬಿಸಬೇಕಿಲ್ಲ.

1. ಅಟಲ್ ಪಿಂಚಣಿ ಯೋಜನೆ

ತೆರಿಗೆದಾರರಲ್ಲದಿದ್ದರೆ ಅಟಲ್ ಪಿಂಚಣಿ ಯೋಜನೆ ಮೂಲಕ ನಿಮ್ಮ ವೃದ್ಧಾಪ್ಯದಲ್ಲಿ ನಿಯಮಿತ ಆದಾಯಕ್ಕೆ ವ್ಯವಸ್ಥೆ ಮಾಡಬಹುದು. ಈ ಯೋಜನೆಯು 18ರಿಂದ 40 ವರ್ಷ ವಯಸ್ಸಿನ ವ್ಯಕ್ತಿಗಳಿಗೆ ಲಭ್ಯವಿರುತ್ತದೆ. ಭಾಗವಹಿಸುವವರು 60 ವರ್ಷವನ್ನು ತಲುಪುವವರೆಗೆ ಸಣ್ಣ ಮಾಸಿಕ ಕೊಡುಗೆಗಳನ್ನು ನೀಡಬೇಕು. ಅನಂತರ ಅವರು ತಮ್ಮ ಕೊಡುಗೆಗಳ ಆಧಾರದ ಮೇಲೆ 1,000 ರಿಂದ ರೂ 5,000 ರವರೆಗಿನ ಮಾಸಿಕ ಪಿಂಚಣಿಯನ್ನು ಪಡೆಯುತ್ತಾರೆ.

2. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS)

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯು ಮಾಸಿಕ ಪಿಂಚಣಿ ಪಡೆಯಲು ಮತ್ತೊಂದು ಕಾರ್ಯಸಾಧ್ಯವಾದ ಆಯ್ಕೆಯಾಗಿದೆ. 18 ರಿಂದ 70 ವರ್ಷ ವಯಸ್ಸಿನ ಯಾವುದೇ ಭಾರತೀಯ ನಾಗರಿಕರು ನೋಂದಾಯಿಸಿಕೊಳ್ಳಬಹುದು. NPS 60 ವರ್ಷ ವಯಸ್ಸಿನವರೆಗೆ ಹೂಡಿಕೆಯ ಅಗತ್ಯವಿರುವ ಮಾರುಕಟ್ಟೆ-ಸಂಯೋಜಿತ ಸರ್ಕಾರಿ ಯೋಜನೆಯಾಗಿದೆ. ತುರ್ತು ಸಂದರ್ಭದಲ್ಲಿ ನಿಮ್ಮ ಕೊಡುಗೆಗಳ ಶೇ. 60ರಷ್ಟನ್ನು ಹಿಂಪಡೆಯಬಹುದು, ಶೇ. 40 ಪಿಂಚಣಿಗೆ ನಿಗದಿಪಡಿಸಲಾಗಿದೆ. ಇದು ನಿಮ್ಮ ಪಿಂಚಣಿ ಮೊತ್ತವನ್ನು ನಿರ್ಧರಿಸುತ್ತದೆ. ವರ್ಷಾಶನವು ದೊಡ್ಡದಾಗಿದ್ದರೆ ಪಿಂಚಣಿ ಮೊತ್ತವೂ ಹೆಚ್ಚಾಗುತ್ತದೆ.


3. ವ್ಯವಸ್ಥಿತ ಹಿಂತೆಗೆದುಕೊಳ್ಳುವ ಯೋಜನೆ (SWP)

ವ್ಯವಸ್ಥಿತ ಹಿಂತೆಗೆದುಕೊಳ್ಳುವ ಯೋಜನೆಯು ಹೂಡಿಕೆದಾರರಿಗೆ ಮ್ಯೂಚುಯಲ್ ಫಂಡ್ ಯೋಜನೆಯಿಂದ ನಿಗದಿತ ಮಾಸಿಕ ಮೊತ್ತವನ್ನು ಪಡೆಯಲು ಅನುಮತಿಸುತ್ತದೆ. ಇದರಿಂದ ಲಾಭ ಪಡೆಯಲು ನಿಮ್ಮ ಕೆಲಸದ ವರ್ಷಗಳಲ್ಲಿ ವ್ಯವಸ್ಥಿತ ಹೂಡಿಕೆ ಯೋಜನೆ (SIP) ಅಥವಾ ಇತರ ಯೋಜನೆಗಳ ಮೂಲಕ ನೀವು ಗಣನೀಯ ಪ್ರಮಾಣದ ಹಣವನ್ನು ಹೂಡಿಕೆ ಮಾಡಿರಬೇಕು. ನೀವು SWP ಗಾಗಿ ನಿಮ್ಮ ನಿವೃತ್ತಿ ನಿಧಿಯನ್ನು ಬಳಸಬಹುದು, ಅಲ್ಲಿ ನೀವು ಮ್ಯೂಚುಯಲ್ ಫಂಡ್ ಘಟಕಗಳನ್ನು ಮಾರಾಟ ಮಾಡುವ ಮೂಲಕ ಮಾಸಿಕ ಪಾವತಿಗಳನ್ನು ಸ್ವೀಕರಿಸುತ್ತೀರಿ. ನಿಧಿಯು ಖಾಲಿಯಾದ ಅನಂತರ SWP ನಿಲ್ಲುತ್ತದೆ. ನೀವು ವಾಪಸಾತಿ ಆವರ್ತನವನ್ನು ನಿರ್ದಿಷ್ಟಪಡಿಸಬೇಕು ಮತ್ತು SWP ಅನ್ನು ಸಕ್ರಿಯಗೊಳಿಸಲು ಅಗತ್ಯ ವಿವರಗಳನ್ನು ಒದಗಿಸಬೇಕು.

ಇದನ್ನೂ ಓದಿ: Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

4. ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO)

ಸಂಬಳ ಪಡೆಯುವ ಉದ್ಯೋಗಿಯಾಗಿದ್ದರೆ ಮತ್ತು ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆಗೆ (ಇಪಿಎಫ್‌ಒ) ಕೊಡುಗೆ ನೀಡುತ್ತಿದ್ದರೆ ನೀವು ಉದ್ಯೋಗಿ ಪಿಂಚಣಿ ಯೋಜನೆ (ಇಪಿಎಸ್) ಬಗ್ಗೆ ತಿಳಿದಿರಬಹುದು. ಈ ಯೋಜನೆಯು ಖಾಸಗಿ ವಲಯದ ಉದ್ಯೋಗಿಗಳಿಗೆ ನಿವೃತ್ತಿಯ ಅನಂತರ ಸಾಮಾಜಿಕ ಭದ್ರತೆಯನ್ನು ಒದಗಿಸುತ್ತದೆ. EPFO ನಿಂದ ಪಿಂಚಣಿ ಪಡೆಯಲು ಅರ್ಹರಾಗಲು, ನೀವು ಕನಿಷ್ಠ 10 ವರ್ಷಗಳ ಕಾಲ EPS ಗೆ ಕೊಡುಗೆ ನೀಡಿರಬೇಕು. ಪಿಂಚಣಿ ಮೊತ್ತವು ನಿಮ್ಮ ಕೊಡುಗೆಗಳನ್ನು ಅವಲಂಬಿಸಿರುತ್ತದೆ ಮತ್ತು ನಿವೃತ್ತಿಯ ನಂತರ ಲಭ್ಯವಿರುತ್ತದೆ.

5. ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (POMIS)

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯು ಮಾಸಿಕ ಆದಾಯವನ್ನು ಗಳಿಸಲು ಸರ್ಕಾರ-ಖಾತ್ರಿಪಡಿಸಿದ ಠೇವಣಿ ಆಯ್ಕೆಯನ್ನು ನೀಡುತ್ತದೆ. ನೀವು ಏಕ ಅಥವಾ ಜಂಟಿ ಖಾತೆಗಳನ್ನು ತೆರೆಯಬಹುದು, ಏಕ ಖಾತೆಗಳಿಗೆ ಗರಿಷ್ಠ 9 ಲಕ್ಷ ರೂ. ಮತ್ತು ಜಂಟಿ ಖಾತೆಗಳಿಗೆ 15 ಲಕ್ಷ ರೂ. ಠೇವಣಿ ಅವಧಿಯು ಐದು ವರ್ಷಗಳು ಮತ್ತು ನಿಮ್ಮ ಅಸಲು ಮೊತ್ತದ ಸುರಕ್ಷತೆಯನ್ನು ಖಾತರಿಪಡಿಸುವ ಮೂಲಕ ನೀವು ಬಡ್ಡಿಯನ್ನು ಗಳಿಸುತ್ತೀರಿ. ಪ್ರಸ್ತುತ ಶೇ.7.4 ಬಡ್ಡಿದರದಲ್ಲಿ ಜಂಟಿ ಖಾತೆಯು ತಿಂಗಳಿಗೆ 9,250 ರೂ. ವರೆಗೆ ಗಳಿಸಬಹುದು. ಐದು ವರ್ಷಗಳ ಅನಂತರ ನೀವು ಹೊಸ ಖಾತೆಯನ್ನು ತೆರೆಯುವ ಮೂಲಕ ಯೋಜನೆಯನ್ನು ನವೀಕರಿಸಬಹುದು.

Continue Reading
Advertisement
Prajwal Revanna Case
ಕರ್ನಾಟಕ8 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ16 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ19 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ20 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ27 mins ago

British Journalist: “ವವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ27 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್50 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ1 hour ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Viral News
ವೈರಲ್ ನ್ಯೂಸ್2 hours ago

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ27 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌