Lok Sabha Election 2024: 47 ಮಂದಿಯ ಫೋನ್‌ ಕದ್ದಾಲಿಕೆ ಮಾಡಿರುವ ಎಚ್.ಡಿ. ಕುಮಾರಸ್ವಾಮಿ; ಮಾಗಡಿ ಬಾಲಕೃಷ್ಣ ಆರೋಪ - Vistara News

Lok Sabha Election 2024

Lok Sabha Election 2024: 47 ಮಂದಿಯ ಫೋನ್‌ ಕದ್ದಾಲಿಕೆ ಮಾಡಿರುವ ಎಚ್.ಡಿ. ಕುಮಾರಸ್ವಾಮಿ; ಮಾಗಡಿ ಬಾಲಕೃಷ್ಣ ಆರೋಪ

Lok Sabha Election 2024: ಫೋನ್ ಕದ್ದಾಲಿಕೆ ಮಾಡುವುದು ಕಾನೂನು ಬಾಹಿರವಾಗಿದೆ. ಪೊಲೀಸ್ ಇಲಾಖೆಯಿಂದ ಮಾತ್ರ ಪೋನ್ ಟ್ಯಾಪ್‌ ಮಾಡಲು ಅವಕಾಶ ಇರುತ್ತದೆ. ಕಾನೂನು ಬಾಹಿರ ಚಟುವಟಿಕೆ ಮೇಲೆ ನಿಗಾ ಇಡಲು ಕೆಲವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತದೆ. ಆದರೆ, ಆಗ ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಯಾರ ಕಡೆಯಿಂದ ಕದ್ದಾಲಿಕೆ ಮಾಡಿಸಿದ್ದಾರೆ? ಎಷ್ಟು ಜನರ ಪೋನ್ ಕದ್ದಾಲಿಕೆಯಾಗಿದೆ ಎಂಬ ಮಾಹಿತಿ ನನಗೆ ಗೊತ್ತಿದೆ ಎಂದು ಶಾಸಕ ಮಾಗಡಿ ಬಾಲಕೃಷ್ಣ ಆರೋಪ ಮಾಡಿದ್ದಾರೆ.

VISTARANEWS.COM


on

Lok Sabha Election 2024 HD Kumaraswamy taps phones of 47 people says Magadi Balakrishna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ರಾಜ್ಯ ರಾಜಕೀಯದಲ್ಲಿ ಈಗ ಒಕ್ಕಲಿಗ ಪಾಲಿಟಿಕ್ಸ್‌ ಬಹು ಚರ್ಚೆಯಾಗುತ್ತಿದೆ. ಎಚ್‌.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಅವರ ಟೆಲಿಫೋನ್‌ ಅನ್ನು ಕದ್ದಾಲಿಕೆ ಮಾಡಿದ್ದಾರೆ ಎಂದು ಸಚಿವ ಎನ್.‌ ಚಲುವರಾಯಸ್ವಾಮಿ ಆರೋಪವನ್ನು ಮಾಡಿದ್ದರು. ಇದಕ್ಕೆ ಈಗ ಶಾಸಕ ಮಾಗಡಿ ಬಾಲಕೃಷ್ಣ ಧ್ವನಿಗೂಡಿಸಿದ್ದು, ಒಟ್ಟು 47 ಜನರ ಪೋನ್ ಕದ್ದಾಲಿಕೆ ಮಾಡಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಮೂಲಕ ಫೋನ್‌ ಟ್ಯಾಪಿಂಗ್‌ ಗದ್ದಲ ಶುರುವಾದಂತಾಗಿದೆ.

ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಫೋನ್ ಕದ್ದಾಲಿಕೆ ಮಾಡುವುದು ಕಾನೂನು ಬಾಹಿರವಾಗಿದೆ. ಪೊಲೀಸ್ ಇಲಾಖೆಯಿಂದ ಮಾತ್ರ ಪೋನ್ ಟ್ಯಾಪ್‌ ಮಾಡಲು ಅವಕಾಶ ಇರುತ್ತದೆ. ಕಾನೂನು ಬಾಹಿರ ಚಟುವಟಿಕೆ ಮೇಲೆ ನಿಗಾ ಇಡಲು ಕೆಲವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತದೆ. ಆದರೆ, ಆಗ ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಯಾರ ಕಡೆಯಿಂದ ಕದ್ದಾಲಿಕೆ ಮಾಡಿಸಿದ್ದಾರೆ? ಎಷ್ಟು ಜನರ ಪೋನ್ ಕದ್ದಾಲಿಕೆಯಾಗಿದೆ ಎಂಬ ಮಾಹಿತಿ ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಒಂದು ಪ್ರತ್ಯೇಕ ರೂಮ್ ಮಾಡಿ, 47 ಜನರ ಪೋನ್‌ಗಳನ್ನು ಕದ್ದಾಲಿಕೆ ಮಾಡಿಸಿದ್ದಾರೆ. ಆ 47 ಜನ ಯಾರು ಎಂಬುದನ್ನು ಈಗ ಎಚ್.ಡಿ. ಕುಮಾರಸ್ವಾಮಿ ಹೇಳಲಿ. ಇಲ್ಲ ಅಂದರೆ ನಾವೇ ಹೇಳುತ್ತೇವೆ. ಪರಮ ಪೂಜ್ಯ ಸ್ವಾಮೀಜಿಯವರ ಪೋನ್ ಅನ್ನು ಕದ್ದಾಲಿಕೆ ಮಾಡಿದ್ದಾರೆ. ಒಂದು ವೇಳೆ ಮಾಡಿಸಿಲ್ಲ ಎಂದಾದರೆ ಕಾಲಭೈರವೇಶ್ವರನ ಮೇಲೆ ಆಣೆ ಮಾಡಿ ಹೇಳಲಿ. ನಾವು ತಲೆಬಾಗುತ್ತೇವೆ. ಕುಮಾರಸ್ವಾಮಿ ಅವರ ಕುಟುಂಬದವರದ್ದು ಸೇರಿ 47 ಜನ ಪೋನ್ ಟ್ಯಾಪ್‌ ಮಾಡಿಸಿದ್ದಾರೆ. ಯಾರು ಯಾವೆಲ್ಲ ಚಟುವಟಿಕೆಯನ್ನು ನಡೆಸುತ್ತಿದ್ದಾರೆ? ತಮ್ಮ ಹೆಸರನ್ನು ಹೇಳಿಕೊಂಡು ಯಾರು ಹಣ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಎಚ್‌ಡಿಕೆ ಪೋನ್ ಟ್ಯಾಪ್ ಮಾಡಿಸಿದ್ದಾರೆ ಎಂದು ಶಾಸಕ ಬಾಲಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಎಚ್‌.ಡಿ. ಕುಮಾರಸ್ವಾಮಿ ವಿಕೃತ ಮನಸ್ಸಿನ ನಾಯಕರು. ನಾನು ಸತ್ಯ ಹರಿಶ್ಚಂದ್ರ ಕಾಂಗ್ರೆಸ್‌ವರು ಕಳ್ಳರು. ಈ ಸಮಾಜಕ್ಕೆ ನಾನು ಕೊಡುಗೆ ಕೊಟ್ಟಿದ್ದೇನೆ. ಬೇರೆ ಯಾರೂ ಕೊಡುಗೆ ಕೊಟ್ಟಿಲ್ಲ ಎಂದು ಹೇಳಲು ಹೊರಟಿದ್ದಾರೆ ಎಂದು ಶಾಸಕ ಬಾಲಕೃಷ್ಣ ಆರೋಪ ಮಾಡಿದ್ದಾರೆ.

ನಿಮ್ಮ ರಾಜಕೀಯಕ್ಕೆ ನನ್ನ, ಮಠದ ಹೆಸರು ಬಳಸಬೇಡಿ: ನಿರ್ಮಲಾನಂದನಾಥ ಶ್ರೀ ಸೂಚನೆ

ಕಳೆದ 2 ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯನ್ನು ಗಮನಿಸುತ್ತಿರುವ ನಿರ್ಮಲಾನಂದನಾಥ ಶ್ರೀಗಳು, ಒಕ್ಕಲಿಗ ಹಿರಿಯ ನಾಯಕರಿಗೆ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದ್ದಾರೆ. ನಿಮ್ಮ ರಾಜಕೀಯಕ್ಕೆ ಮಠವನ್ನು ಬಳಸಿಕೊಳ್ಳಬೇಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಎನ್‌. ಚಲುವರಾಯಸ್ವಾಮಿಗೆ ಖಡಕ್ ಸಂದೇಶವನ್ನು ರವಾನೆ ಮಾಡಿದ್ದಾರೆ.

ನಿಮ್ಮ ವೈಯುಕ್ತಿಕ ಆರೋಪಗಳ ನಡುವೆ ಮಠವನ್ನು ಹಾಗೂ ತಮ್ಮ ಹೆಸರನ್ನು ಎಳೆದು ತರಬೇಡಿ. ನಿಮ್ಮ ಮಾತುಗಳಿಗೆ ಮಠದ ಹೆಸರನ್ನು ಏಕೆ ಬಳಕೆ ಮಾಡುತ್ತೀರಿ? ಮಠಕ್ಕೆ ಅದರದ್ದೇ ಆದ ಗೌರವ, ಘನತೆ ಇದೆ. ಹೀಗಾಗಿ ಇನ್ನು ಮುಂದೆ ಮಾತನಾಡುವಾಗ ಎಚ್ಚರಿಕೆ ವಹಿಸಿ ಎಂದು ತಾಕೀತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯ ತಿರುವು ಪಡೆದಿರುವ “ಒಕ್ಕಲಿಗ” ಪಾಲಿಟಿಕ್ಸ್‌

ಡಿ.ಕೆ. ಶಿವಕುಮಾರ್‌ ಹೇಳಿಕೆ ಬಳಿಕ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ‌ (N Chaluvarayaswamy) ಗಂಭೀರ ಆರೋಪವನ್ನು ಮಾಡಿದ್ದರು. ಹಳೇ ವಿಷಯವನ್ನು ಮತ್ತೆ ಕೆದಕಿ, ಎಚ್‌ಡಿಕೆ ಅಧಿಕಾರದಲ್ಲಿದ್ದಾಗ ನಿರ್ಮಲಾನಂದನಾಥ ಶ್ರೀಗಳ ಫೋನ್‌ ಟ್ಯಾಪ್‌ (Tap phone) ಮಾಡಿಸಿದ್ದರು ಎಂದು ಆರೋಪ ಮಾಡಿದ್ದರು.

ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಆದಿಚುಂಚನಗಿರಿ ಪೀಠದ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್‌ ಟ್ಯಾಪ್‌ ಮಾಡಿಸಿದ್ದರು. ಈಗ ಅವರ ಬಳಿಗೇ ಹೋಗಿ ಹೇಗೆ ಆಶೀರ್ವಾದವನ್ನು ಕೇಳುತ್ತಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಅವರು ಎಚ್‌ಡಿಕೆ ವಿರುದ್ಧ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಂಭೀರ ಆರೋಪ ಮಾಡಿದ್ದರು.

ಸ್ವಾಮೀಜಿಯಾದವರು ಯಾರ ಪರ ಅಥವಾ ಯಾವ ಪಕ್ಷದ ಪರವೂ ಪ್ರಚಾರವನ್ನು ಮಾಡಲು ಆಗುವುದಿಲ್ಲ. ಚುಂಚನಗಿರಿ ಮಠವು ಒಕ್ಕಲಿಗ ಸಮುದಾಯದ ಮಠವಾಗಿದ್ದರೂ ಎಲ್ಲ ಜಾತಿಯವರನ್ನೂ ಒಳಗೂಡಿಸಿಕೊಂಡು ಹೋಗುತ್ತಿರುವ ಮಠವಾಗಿದೆ. ಇದು ಜಾತ್ಯತೀತ ಮಠ ಎಂಬ ಹೆಸರನ್ನು ಗಳಿಸಿದೆ. ಬಾಲಗಂಗಾಧರನಾಥ ಶ್ರೀಗಳು ಎಲ್ಲ ಜಾತಿಯವರನ್ನು ಬೆಳೆಸಿದ್ದಾರೆ. ಜೆಡಿಎಸ್‌ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು ಕಿರುಕುಳ‌ ಕೊಟ್ಟಿದ್ದರು ಎಂಬುದು ಗೊತ್ತಿರುವ ಸಂಗತಿಯಾಗಿದೆ. ನಾವು ಸಹ ಜೆಎಸ್‌ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದವನ್ನು ಪಡೆದುಕೊಂಡಿದ್ದೇವೆ. ಚುನಾವಣೆ ಸಮಯದಲ್ಲಿ ಇಂತಹ ಭೇಟಿ ಮಾಮೂಲಿ ಎಂದು ಹೇಳಿದ್ದರು.

ತಿರುಗೇಟು ನೀಡಿದ್ದ ಎಚ್‌ಡಿಕೆ

ಇದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದು, ನಾನು ಫೋನ್ ಟ್ಯಾಪಿಂಗ್ ಮಾಡುತ್ತಿದ್ದರೆ ನನ್ನ ಸರ್ಕಾರವನ್ನು ಏಕೆ ಬೀಳಿಸಿಕೊಳ್ಳುತ್ತಿದ್ದೆ ಎಂದು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ, ಬೇಕಿದ್ದರೆ ಮತ್ತೆ ತನಿಖೆ ಮಾಡಿಸಿಕೊಳ್ಳಲಿ ಎಂದು ಸವಾಲನ್ನು ಸಹ ಹಾಕಿದ್ದರು.

ಹಾಸನ ಜಿಲ್ಲೆಯ ಅರಕಲಗೂಡಿನ ರಾಮನಾಥಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಎಚ್.ಡಿ. ಕುಮಾರಸ್ವಾಮಿ, ನಾನು ಫೋನ್ ಟ್ಯಾಪಿಂಗ್ ಮಾಡಿಕೊಳ್ಳುತ್ತಿದ್ದರೆ ನನ್ನ ಸರ್ಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ? ಅವರು ತನಿಖೆ ಮಾಡಿಕೊಳ್ಳಲಿ, ಈವರೆಗೆ ತನಿಖೆ ಮಾಡಿದರಲ್ಲ, ಅದು ಏನಾಯಿತು? ಎಂದು ತರಾಟೆಗೆ ತೆಗೆದುಕೊಂಡಿದ್ದರು.

ಆದಿಚುಂಚನಗಿರಿ ಮಠಕ್ಕೆ ಪರ್ಯಾಯವಾಗಿ ಮಠ ಮಾಡಿದರು ಎನ್ನುವ ಬಗ್ಗೆ ಕೇಳಲಾದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ್ದ ಎಚ್‌ಡಿಕೆ, ಬೇರೆ ಸಮುದಾಯಗಳಲ್ಲೂ ಎಷ್ಟು ಮಠಗಳಿಲ್ಲ? ನಮ್ಮ ಸಮುದಾಯದಲ್ಲೂ ಅಂಥ ಬೆಳವಣಿಗೆ ಆಗಲಿ ಎಂದು ಇನ್ನೊಬ್ಬರಿಗೂ ಸಹಾಯ ಮಾಡಿದ್ದೇವೆ. ಅದರಲ್ಲಿ ಏನಿದೆ? ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಕಾ? ಎಂದು ಕೇಳಿದ್ದರು.

ಸ್ವಾಮೀಜಿ ಭೇಟಿ ರಾಜಕೀಯವೇ?

ಸ್ವಾಮೀಜಿ ಅವರನ್ನು ಭೇಟಿ ಮಾಡುವುದಕ್ಕೆ ಕಾಂಗ್ರೆಸ್‌ನವರು ಎಷ್ಟು ಜನ ಹೋಗಿದ್ದರು? ಎಲ್ಲ ಟಿವಿಗಳಲ್ಲಿ ಈ ಬಗ್ಗೆ ವಿಡಿಯೊ ಬಂದಿದೆಯಲ್ಲ. ಇವರು ಏನು ಬೇಕಾದರೂ ಮಾಡಬಹುದು, ನಾವು ಮಾಡುವ ಹಾಗಿಲ್ಲವೇ? ಅದು ಕೂಡ ಒಂದು ದೊಡ್ಡ ರಾಜಕೀಯನಾ? ವರ್ಷದ ಮೊದಲ ದಿನ ನಮ್ಮ ಸಮುದಾಯದ ಗುರು ಹಿರಿಯರ ಆಶೀರ್ವಾದ ಪಡೆಯುತ್ತೇವೆ. ಅದೇನು ಮಹಾ ಅಪರಾಧವಾ? ಜ್ವರ ಬಂದಾಗ ಆಸ್ಪತ್ರೆಗೆ ಹೋಗದೆ ಇನ್ನೆಲ್ಲಿಗೆ ಹೋಗಲು ಸಾಧ್ಯ? ನಾನು 140 ಮಠಗಳಿಗೆ ಅನುದಾನ ನೀಡಿದ್ದೆ. ಮಠಗಳು ಮಾಡುತ್ತಿರುವ ಒಳ್ಳೆಯ ಕೆಲಸಗಳಿಗೆ ಸಹಕಾರ ನೀಡಿದ್ದೆ. ಇದೇನು ಹೊಸದಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದರು.

ಇದನ್ನೂ ಓದಿ: Lok Sabha Election 2024: ಸೋಲಿಸಿದರೆ ಸಮಸ್ಯೆಗಳಿಗೆ ನೀವೇ ಕಾರಣರಾಗುತ್ತೀರಿ; ಅಪಾರ್ಟ್‌ಮೆಂಟ್‌ನಲ್ಲಿ ಡಿಕೆಶಿ ಮತಯಾಚನೆ

ಒಂದು ವರ್ಷದೊಳಗೆ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕಾದು ನೋಡಿ. ರಾಜಕೀಯ ಎಂದರೆ ಅದು ಹರಿಯುವ ನೀರು. ಯಾವಾಗ ಏನೇನಾಗುತ್ತದೆಯೋ ನಮಗೂ ಗೊತ್ತಾಗಲ್ಲ. ಅವರಿಗೂ ಗೊತ್ತಾಗೋದಿಲ್ಲ. ಸಚಿವರೇ ಹೇಳುತ್ತಿದ್ದಾರೆ, ಕಾಂಗ್ರೆಸ್ ನಾಯಕರೇ ದಿನ ಬೆಳಗಾದರೆ ಹೇಳುತ್ತಿದ್ದಾರಲ್ಲ, ನೀವು ಅವರನ್ನೇ ಕೇಳಿ ಎಂದು ಮಾಧ್ಯಮಗಳಿಗೆ ಹೇಳಿದ್ದರು.

ಡಿಕೆಶಿ ವಿರುದ್ಧ ಕಿಡಿ

ಜೆಡಿಎಸ್ ಎಲ್ಲಿದೆ ಎನ್ನುವ ದುರಹಂಕಾರದ ಮಾತುಗಳನ್ನು ‌ಡಿಸಿಎಂ ಡಿ.ಕೆ. ಶಿವಕುಮಾರ್ ಆಡುತ್ತಿದ್ದಾರೆ. ಇವರ ಸಹವಾಸ ಮಾಡಿದ್ದಕ್ಕೆ ಈಗ ಜೆಡಿಎಸ್ ಈ ಹಂತಕ್ಕೆ ಬಂದಿದೆ. ಐದು ವರ್ಷ ಅಧಿಕಾರ ಮಾಡಿ ಅಂತ ಕೊಟ್ಟು ಬುಡ ಸಮೇತ ತೆಗೆಯೋಕೆ ಹೊರಟರಲ್ಲ, ಅದಕ್ಕೆ‌ ಮರು ಜೀವ ಕೊಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇನೆ. ಪಕ್ಕದಲ್ಲಿಯೇ ಕುಳಿತು ಹಳ್ಳ ತೋಡಿದರಲ್ಲ, ಎಲ್ಲವೂ ನೆನಪಿದೆ ನನಗೆ ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Prashant Kishor: ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ಪ್ರಶಾಂತ್‌ ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದು ಹಂತಗಳ ಮತದಾನ ಮುಕ್ತಾಯಗೊಂಡಿದೆ. ಐದು ಹಂತಗಳಲ್ಲಿಯೇ ಬಿಜೆಪಿಗೆ 300 ಸೀಟುಗಳು ಬರಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅತ್ತ, ಇಂಡಿಯಾ ಒಕ್ಕೂಟವೂ ಗೆಲುವು ನಮ್ಮದೇ ಎಂದು ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ, ಚುನಾವಣೆ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲೆ ಜನ ಸಿಟ್ಟಾಗಿದ್ದಾರೆ ಎಂಬುದು ಎಲ್ಲೂ ಕೇಳಿಲ್ಲ, ನೋಡಿಲ್ಲ. ಹಾಗಾಗಿ, ಅವರೇ ಪ್ರಧಾನಿಯಾಗುವುದು ನಿಶ್ಚಿತ” ಎಂದಿದ್ದಾರೆ.

ಬರ್ಖಾ ದತ್‌ ಅವರೊಂದಿಗೆ ನಡೆದ ಮಾತುಕತೆ ವೇಳೆ ಪ್ರಶಾಂತ್‌ ಕಿಶೋರ್‌ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. “ಚುನಾವಣೆ ಫಲಿತಾಂಶದ ಕುರಿತು ನಾವು ಮಾತನಾಡುವಾಗ ಸಾಮಾನ್ಯ ಸಂಗತಿಗಳನ್ನು ಪರಿಗಣಿಸಿದರೆ ಸಾಕು ಒಂದು ಅಂದಾಜು ಸಿಗುತ್ತದೆ. ಕೇಂದ್ರ ಸರ್ಕಾರದ ವಿರುದ್ಧ ಅಂತಹ ಅಲೆ ಇಲ್ಲ. ನರೇಂದ್ರ ಮೋದಿ ಅವರ ಬಗ್ಗೆ ಜನರಿಗೆ ಈಗಲೂ ವಿಶ್ವಾಸವಿದೆ. ಜನರು ಮೋದಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರಬಹುದು, ಒಂದಷ್ಟು ಭರವಸೆಗಳು ಈಡೇರಿದೆ ಇರಬಹುದು. ಆದರೆ, ಮೋದಿ ಜನರಿಗೆ ಖಂಡಿತವಾಗಿಯೂ ಸಿಟ್ಟಿಲ್ಲ” ಎಂದಿದ್ದಾರೆ.

ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

Continue Reading

ದೇಶ

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

Abhijit Gangopadhyay: ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

VISTARANEWS.COM


on

Abhijit Gangopadhyay
Koo

ನವದೆಹಲಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಹೈಕೋರ್ಟ್ ನ್ಯಾಯಾಧೀಶ ಮತ್ತು ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ(Abhijit Gangopadhyay) ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಕ್ಕೆ ಚುನಾವಣಾ ಆಯೋಗ(Election Commission of India) ತಡೆಯೊಡ್ಡಿದೆ. ಒಬ್ಬ ವ್ಯಕ್ತಿಯ ವೈಯಕ್ತಿಕ ಬದುಕಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗ ಈ ಹಿಂದೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೇ ಮೇ 20ರೊಳಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿತ್ತು.

ಇಸಿ ತನ್ನ ನೋಟಿಸ್‌ನಲ್ಲಿ ಗಂಗೋಪಾಧ್ಯಾಯ ಅವರ ಹೇಳಿಕೆಯು ಅಸಮರ್ಪಕ, ನ್ಯಾಯಸಮ್ಮತವಲ್ಲ. ಘನತೆಯನ್ನು ಮೀರಿ, ಕೆಟ್ಟ ಅಭಿರುಚಿಯಿಂದ ಹೇಳಿಕೆ ನೀಡಲಾಗಿದೆ ಮತ್ತು ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಇಸಿ ಹೇಳಿತ್ತು.

ಗಂಗೋಪಾಧ್ಯಾಯ ಅವರು ತಮ್ಮ ತೀರ್ಪುಗಳಿಂದ ಜನಪ್ರಿಯರಾದವರು. ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಮೇ 25 ರಂದು ಮತದಾನ ನಡೆಯಲಿರುವ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಂಗೋಪಾಧ್ಯಾಯ ಅವರನ್ನು ಕಣಕ್ಕಿಳಿಸಲಾಗಿದೆ.

ನಕಲಿ ವಿಡಿಯೋ ಎಂದ ಬಿಜೆಪಿ

ಇನ್ನು ಈ ತೃಣಮೂಲ ಕಾಂಗ್ರೆಸ್‌ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಬಿಜೆಪಿ ಇದೊಂದು ನಕಲಿ ವಿಡಿಯೋ ಎಂದು ಹೇಳಿದೆ. ಪಕ್ಷದ ಘನತೆಗೆ ಚ್ಯುತಿ ತರುವ ಉದ್ದೇಶದಿಂದ ಟಿಎಂಸಿ ಈ ರೀತಿ ನಕಲಿ ವಿಡಿಯೋ ಬಿಡುಗಡೆ ಮಾಡಿದೆ. ಇದರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ವಕ್ತಾರ ಸಾಮಿಕ್‌ ಭಟ್ಟಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ:Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!!

Continue Reading

ರಾಜಕೀಯ

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

‌DK Shivakumar: ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳಿದರೆ ಹೇಗೆ? ಬಿಳಿ‌ ಜುಬ್ಬಾ, ಬಿಳಿ‌ ಕಾರು ತೆಗೆದುಕೊಂಡು ಬಂದು ಸ್ಥಾನಗಳನ್ನು ಕೇಳುವುದಲ್ಲ. ಮೊದಲು ಸಂಘಟನೆ ‌ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ. ನಾವು ಹೊಸ ‌ನಾಯಕತ್ವವನ್ನು ಬೆಳೆಸುತ್ತೇವೆ ಎಂದು ಡಿ.ಕೆ. ಶಿವಕುಮಾರ್‌ ಖಡಕ್‌ ಆಗಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷದ ಪೂರೈಕೆ ಹಿನ್ನೆಲೆಯಲ್ಲಿ ಕೆಪಿಸಿಸಿ ಘಟಕದಿಂದ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪಕ್ಷದ ಪರವಾಗಿ ಕೆಲಸ ಮಾಡಿ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ.

VISTARANEWS.COM


on

DK Shivakumar statement in KPCC. no leadership if the booth lead is not given DK Shivakumar warns leaders
Koo

ಬೆಂಗಳೂರು: ನಾನು ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ. ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ, ಅದು ಮುಖ್ಯ. ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳುತ್ತೀರಾ? ಮೊದಲು ನಿಮ್ಮ ಬೂತ್‌ನಲ್ಲಿ ಸಂಘಟನೆ ಮಾಡಿ. ಬೂತ್ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ. ಇಲ್ಲದೆ ಹೋದರೆ ನಾಯಕತ್ವ ಕೊಡಲ್ಲ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷದ ಪೂರೈಕೆ ಹಿನ್ನೆಲೆಯಲ್ಲಿ ಕೆಪಿಸಿಸಿ ಘಟಕದಿಂದ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳಿದರೆ ಹೇಗೆ? ಬಿಳಿ‌ ಜುಬ್ಬಾ, ಬಿಳಿ‌ ಕಾರು ತೆಗೆದುಕೊಂಡು ಬಂದು ಸ್ಥಾನಗಳನ್ನು ಕೇಳುವುದಲ್ಲ. ಮೊದಲು ಸಂಘಟನೆ ‌ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ. ನಾವು ಹೊಸ ‌ನಾಯಕತ್ವವನ್ನು ಬೆಳೆಸುತ್ತೇವೆ ಎಂದು ಹೇಳಿದರು.

ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಇನ್ನೂ ಎಷ್ಟು ದಿನ ಈ ಸ್ಥಾನದಲ್ಲಿ ಇರುತ್ತೇನೋ, ಇಲ್ಲವೋ ಅನ್ನುವುದು ಗೊತ್ತಿಲ್ಲ. ನಮ್ಮ ಪಕ್ಷದ ನಾಯಕತ್ವ ಬುನಾದಿ ಗಟ್ಟಿ ಮಾಡಬೇಕು. ಬೂತ್ ಮಟ್ಟದಲ್ಲಿ ಗಟ್ಟಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ರಾಜೀವ್‌ ಗಾಂಧಿ ಪ್ರತಿಮೆ ಬದಲಿಸಿದ್ದೇನೆ

ರಾಜೀವ್ ಗಾಂಧಿಯವರ ಪ್ರಾಣ ಎಲ್ಲಿ ಹೋಯಿತೋ ಅಲ್ಲಿ ಕನಕಪುರದ ಕಲ್ಲು ಹಾಕಿದ್ದೇನೆ. ಸೋನಿಯಾ ಗಾಂಧಿ ಸೂಚನೆ ಮೇರೆಗೆ ಹಾಕಿದ್ದೇನೆ. ನನಗೆ ಕನಕಪುರ ಬಂಡೆ ಅಂತಾರಲ್ಲ. ನಮ್ಮೂರ ಬಂಡೆಯ ಕಲ್ಲು ಅಲ್ಲಿ ತೆಗೆದುಕೊಂಡು ಹೋಗಿ ಹಾಕಿದ್ದೇನೆ. ಅಲ್ಲಿ ಹೋದಾಗ ನೋಡಿ. ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಪ್ರತಿಮೆಯನ್ನು ಬದಲಾವಣೆ ಮಾಡಿದ್ದೇವೆ. ನಾನು ಬೆಂಗಳೂರು ಉಸ್ತುವಾರಿ ಸಚಿವನಾದ ಮೇಲೆ ಮೊದಲು ಅನುದಾನ ಬಿಡುಗಡೆ ‌ಮಾಡಿದ್ದು, ಸಹ ಇದಕ್ಕೇ ಆಗಿದೆ. ಅದರಂತೆ ರಾಜೀವ್ ಗಾಂಧಿ ಪ್ರತಿಮೆ ಬದಲಾವಣೆ ಮಾಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ಮಾಡಿದರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಶ್ಲೇಷಕರ ಅಭಿಪ್ರಾಯದ ಮಧ್ಯೆ ಕಿಶೋರ್‌ ಮಾತು

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Continue Reading

ಪ್ರಮುಖ ಸುದ್ದಿ

CM Siddaramaiah: ಖರ್ಗೆಯೂ ಪಿಎಂ ಆಗಲ್ಲ! ಸಿದ್ದರಾಮಯ್ಯ ಯಾಕಿಂಥಾ ಮಾತಾಡಿದ್ರು?

CM Siddaramaiah: ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ರಾಜ್ಯದಿಂದ ಯಾರೂ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ. ನಾನು ಪಿಎಂ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅಲ್ಲ , ನಮ್ಮ ರಾಜ್ಯದಲ್ಲಿ ಯಾರೂ ಸಹ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ” ಎಂದು ಹೇಳಿದ್ದಾರೆ. ಇದರ ಮೂಲಕ, ಖರ್ಗೆ ಕೂಡ ಪಿಎಂ ಆಗುವುದಿಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

VISTARANEWS.COM


on

Mallikarjuna Kharge siddaramaiah
Koo

ಬೆಂಗಳೂರು: ಈ ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದಲ್ಲಿ ಕಾಂಗ್ರೆಸ್ (congress) ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun Kharge) ಪ್ರಧಾನ ಮಂತ್ರಿ (Prime minister) ಆಗಬಹುದು ಎಂಬ ಒಂದು ಸಣ್ಣ ಆಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಚಿವುಟಿ ಹಾಕಿದ್ದಾರೆ. “ರಾಜ್ಯದ ಯಾವ ನಾಯಕನೂ ಪಿಎಂ ಆಗಲ್ಲ” ಎನ್ನುವ ಮೂಲಕ ಅವರು ಈ ಚರ್ಚೆಗೆ ತೆರೆ ಎಳೆದಿದ್ದಾರೆ.

ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ರಾಜ್ಯದಿಂದ ಯಾರೂ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ. ನಾನು ಪಿಎಂ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅಲ್ಲ , ನಮ್ಮ ರಾಜ್ಯದಲ್ಲಿ ಯಾರೂ ಸಹ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ” ಎಂದು ಹೇಳಿದ್ದಾರೆ. ಇದರ ಮೂಲಕ, ಖರ್ಗೆ ಕೂಡ ಪಿಎಂ ಆಗುವುದಿಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

ಹಾಗಾದರೆ ರಾಜ್ಯದಿಂದ ಪಿಎಂ ಸ್ಥಾನದ ಅರ್ಹರು, ಆಕಾಂಕ್ಷಿಗಳು ಕಾಂಗ್ರೆಸ್‌ನಲ್ಲಿ ಯಾರು ಇಲ್ಲವೇ? ಸ್ವತಃ ಎಐಸಿಸಿ ಅಧ್ಯಕ್ಷರೇ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಬಾರಿ ಕಾಂಗ್ರೆಸ್ ಲೋಕಸಭಾ ಚುನಾವಣೆ ಎದುರಿಸಿದೆ. ಕಾಂಗ್ರೆಸ್ ಒಕ್ಕೂಟ ಅಧಿಕ ಸ್ಥಾನ ಗೆದ್ದರೆ ಪಿಎಂ ರೇಸ್‌ನಲ್ಲಿ‌‌ ಖರ್ಗೆಯೂ ಪರಿಗಣನೆಗೆ ಒಳಗಾಗುವವರೇ. ರೇಸ್‌ನಲ್ಲಿ ನಾನಿಲ್ಲ ಎಂದು ಅವರು ಹೇಳಿಲ್ಲ. ಆದರೆ ರಾಹುಲ್‌ ಗಾಂಧಿಯವರನ್ನು ಓವರ್‌ಟೇಕ್‌ ಮಾಡಿ ಮುಂದೆ ಹೋಗಲು ಸ್ವತಃ ಖರ್ಗೆಯವರೇ ತಯಾರಿಲ್ಲ.

ಇನ್ನು ಸಿದ್ದರಾಮಯ್ಯ. ಸ್ವತಃ ಅವರು ರಾಜ್ಯದ ರಾಜಕಾರಣ ಬಿಟ್ಟು ಹೋಗಲು ತಯಾರಿಲ್ಲ. ಬೇರೆ ರಾಜ್ಯಗಳಿಗೆ ಚುನಾವಣಾ ಪ್ರಚಾರಕ್ಕೆ ಹೋಗುವುದು ಕೂಡ ನನ್ನಿಂದ ಸಾಧ್ಯವಿಲ್ಲ ಎಂದು ಅವರು ಇತ್ತೀಚೆಗೆ ಹೇಳಿದ್ದರು. ಸ್ವತಃ ರಾಜ್ಯದ ಕಾಂಗ್ರೆಸ್‌ ನಾಯಕತ್ವವನ್ನು ಗಟ್ಟಿಯಾಗಿ ಹಿಡಿದಿರುವ ಸಿದ್ದರಾಮಯ್ಯ, ಅದನ್ನು ಸುತರಾಂ ಬಿಟ್ಟುಕೊಡಲು ಸಿದ್ಧರಿಲ್ಲ. ಇದನ್ನೇ ಅವರು ʼನಾನು ಪಿಎಂ ಸ್ಥಾನ ಆಕಾಂಕ್ಷಿಯಲ್ಲʼ ಎನ್ನುವ ಮೂಲಕ ತಿಳಿಸಿದ್ದಾರೆ.

ಸಿದ್ದು ಹೇಳಿಕೆ ಮಲ್ಲಿಕಾರ್ಜುನ ಖರ್ಗೆಯವರಿಗೆ ನೀಡಿದ ಚೆಕ್‌ಮೇಟ್‌ ಕೂಡ ಎಂದು ವಿಶ್ಲೇಷಿಸಲಾಗುತ್ತಿದೆ. ಪಿಎಂ ಸ್ಥಾನಕ್ಕೆ ಹೋಗಬಹುದಾದ ಖರ್ಗೆಯವರನ್ನು ಹೆಸರಿಸಿ, ಆ ಮೂಲಕ ಇನ್ನೊಂದು ಶಕ್ತಿ ಕೇಂದ್ರವನ್ನು ಪಕ್ಷದೊಳಗೆ ಬೆಂಬಲಿಸಲು ಸಿದ್ದು ಸಿದ್ಧರಿಲ್ಲ. ಹಾಗೆಯೇ ಅವರು ಈ ಮಾತು ರಾಹುಲ್ ಗಾಂಧಿಗೆ ಬೆಂಬಲ ಕೂಡ ಇರಬಹುದು ಅಂತಿದಾರೆ ವಿಶ್ಲೇಷಕರು. ಯಾಕೆಂದರೆ ಸದ್ಯ ಕಾಂಗ್ರೆಸ್‌ನಲ್ಲಿ ರಾಷ್ಟ್ರಮಟ್ಟದ ಹಲವು ನಾಯಕರು ರಾಹುಲ್‌ ಅವರನ್ನೇ ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Continue Reading
Advertisement
Cauvery Dispute
ಕರ್ನಾಟಕ2 mins ago

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Brand Bangalore and BJP Slams DK Shivakumar and Congress Government
ರಾಜಕೀಯ4 mins ago

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Eye Care Tips
ಆರೋಗ್ಯ8 mins ago

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

Turbulence
ಪ್ರಮುಖ ಸುದ್ದಿ20 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Used Car Sale
ಪ್ರಮುಖ ಸುದ್ದಿ31 mins ago

Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

Summer Star Fashion
ಫ್ಯಾಷನ್38 mins ago

Summer Star Fashion: ಏನಿದು ನಟಿ ಅದಿತಿ ರಾವ್‌ ಹೈದರಿಯ ಕೋ-ಆರ್ಡ್ ಕೊಸ್ಟಾ ಪ್ಯಾಂಟ್‌ ಟ್ರೆಂಡ್‌?

Lok Sabha Elections 2024 7 celebs who didn’t vote in Lok Sabha Elections
ಬಾಲಿವುಡ್40 mins ago

Lok Sabha Elections 2024: ಈ ಬಾಲಿವುಡ್‌ ಸ್ಟಾರ್ಸ್‌ಗಳು ಈ ಬಾರಿ ವೋಟ್‌ ಹಾಕಲೇ ಇಲ್ಲ!

RR vs RCB
ಕ್ರೀಡೆ48 mins ago

RCB vs RR: ಆರ್​ಸಿಬಿ-ರಾಜಸ್ಥಾನ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Mangalore Tour
ಪ್ರವಾಸ52 mins ago

Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

2nd Pux Exam
ಬೆಂಗಳೂರು60 mins ago

2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌