Murder Case: ಹೆಂಡತಿಯ ಕೊಂದ ಗಂಡನ ಸುಳಿವಿಗೆ 3 ಕೋಟಿ ರೂ. ಬಹುಮಾನ! - Vistara News

ಕ್ರೈಂ

Murder Case: ಹೆಂಡತಿಯ ಕೊಂದ ಗಂಡನ ಸುಳಿವಿಗೆ 3 ಕೋಟಿ ರೂ. ಬಹುಮಾನ!

Murder case: ಗುಜರಾತ್‌ನ ಕಂತ್ರೋಡಿ ತಾಲೂಕಿನ ವಿರಾಮ್‌ಗಮ್‌ನ 34 ವರ್ಷದ ಭಾರತೀಯ ಮೂಲದ ಭದ್ರೇಶ್‌ಕುಮಾರ್ ಸಿ. ಪಟೇಲ್‌ 2015ರ ಏಪ್ರಿಲ್ 12ರಂದು ತನ್ನ ಹೆಂಡತಿಯನ್ನು ಕೊಂದು ಪರಾರಿಯಾಗಿದ್ದು, ಅವನ ಸುಳಿವು ನೀಡಿದವರಿಗೆ ಎಫ್ ಬಿಐ ಬಹುಮಾನ ಘೋಷಿಸಿದೆ.

VISTARANEWS.COM


on

murder-case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೇರಿಲ್ಯಾಂಡ್‌: ಕೊಲೆ ಪ್ರಕರಣದ (murder case) ಆರೋಪಿಯಾಗಿರುವ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಭದ್ರೇಶ್‌ಕುಮಾರ್ ಚೇತನ್‌ಭಾಯ್ ಪಟೇಲ್ ಅಲಿಯಾಸ್ ಭದ್ರೇಶ್‌ಕುಮಾರ್ ಸಿ. ಪಟೇಲ್‌ನ (Bhadreshkumar Chetanbhai Patel alias Bhadreshkumar C. Patel) ಸುಳಿವು ನೀಡಿದವರಿಗೆ 2,50,000 ಡಾಲರ್ (3 ಕೋಟಿ ರೂ.) ಬಹುಮಾನವನ್ನು ಯುನೈಟೆಡ್ ಸ್ಟೇಟ್ಸ್ ನ (United States) ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ನ (Federal Bureau of Investigation) ಅಧಿಕಾರಿಗಳು ಘೋಷಿಸಿದ್ದಾರೆ.

ಗುಜರಾತ್‌ನ (gujarat) ಕಂತ್ರೋಡಿ ತಾಲೂಕಿನ ವಿರಾಮ್‌ಗಮ್‌ನ 34 ವರ್ಷದ ಭಾರತೀಯ ಮೂಲದ ಭದ್ರೇಶ್‌ಕುಮಾರ್ ಸಿ. ಪಟೇಲ್‌ 2015ರ ಏಪ್ರಿಲ್ 12ರಂದು ತನ್ನ ಹೆಂಡತಿಯನ್ನು ಕೊಂದು ಪರಾರಿಯಾಗಿದ್ದಾನೆ.

ಯುನೈಟೆಡ್ ಸ್ಟೇಟ್ಸ್‌ನ ಮೇರಿಲ್ಯಾಂಡ್‌ನ ಹ್ಯಾನೋವರ್‌ನಲ್ಲಿರುವ ಭದ್ರೇಶ್‌ಕುಮಾರ್ ಸಿ. ಪಟೇಲ್‌ ಮತ್ತು ಆತನ ಪತ್ನಿ ಪಾಲಕ್ ಪಟೇಲ್ ಡೋನಟ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಟ್ರಯಲ್‌, ಇನ್ನಷ್ಟು ಭೀಕರ ಸ್ಫೋಟಗಳಿಗೆ ಸಿದ್ಧತೆ ಮಾಡಿದ್ದರು ಉಗ್ರರು!

2015ರ ಏಪ್ರಿಲ್ 13ರಂದು ಮೇರಿಲ್ಯಾಂಡ್‌ನ ಜಿಲ್ಲಾ ನ್ಯಾಯಾಲಯದಲ್ಲಿ ಹೊರಡಿಸಲಾದ ಬಂಧನ ವಾರಂಟ್ ಪ್ರಕಾರ ಪಟೇಲ್ ವಿರುದ್ಧ ಉದ್ದೇಶಪೂರ್ವಕವಾಗಿ ಹಲ್ಲೆ, ಕೊಲೆ ಮಾಡಿರುವ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಡಿಸ್ಟ್ರಿಕ್ಟ್ ಕೋರ್ಟ್, ಡಿಸ್ಟ್ರಿಕ್ಟ್ ಆಫ್ ಮೇರಿಲ್ಯಾಂಡ್, ಬಾಲ್ಟಿಮೋರ್, ಮೇರಿಲ್ಯಾಂಡ್ 2015 ರಂದು FBI ನ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭದ್ರೇಶ್‌ಕುಮಾರ್ ಸಿ. ಪಟೇಲ್‌ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ.
ನವವಿವಾಹಿತರಾದ ಭದ್ರೇಶಕುಮಾರ್ ಮತ್ತು ಪಾಲಕ್ ಪಟೇಲ್ ಕೊನೆಯ ಬಾರಿಗೆ ಜೊತೆಯಾಗಿ ಕಾಣಿಸಿಕೊಂಡಿದ್ದ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಲಭ್ಯವಾಗಿದೆ.


ಕೊಲೆ ಮಾಡಿ ಪರಾರಿಯಾಗಿದ್ದು ಹೇಗೆ?

ಮದುವೆಯಾದ ಬಳಿಕ ಭದ್ರೇಶ್‌ಕುಮಾರ್ ಸಿ. ಪಟೇಲ್‌ ಪತ್ನಿಯೊಂದಿಗೆ ಯುನೈಟೆಡ್ ಸ್ಟೇಟ್ಸ್‌ನ ಮೇರಿಲ್ಯಾಂಡ್‌ನ ಹ್ಯಾನೋವರ್‌ನಲ್ಲಿ ನೆಲೆಸಿದ್ದರು. ಅಲ್ಲಿ ಅವರಿಬ್ಬರೂ ಡೋನಟ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಪಾಲಕ್ ಅವರು ಕುಟುಂಬ ಸದಸ್ಯರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಅವರು ಭಾರತಕ್ಕೆ ಮರಳಿ ಬರಲು ಬಯಸುವುದಾಗಿ ಹೇಳಿದ್ದಳು. ಬಳಿಕ ಪಾಲಕ್ ಮತ್ತು ಭದ್ರೇಶ್‌ಕುಮಾರ್ ಹಿಂದಿನ ಕೋಣೆಗೆ ತೆರಳಿದ್ದು, ಅಲ್ಲಿ ಅವಳನ್ನು ಆತ ಚಾಕುವಿನಿಂದ ಇರಿದು ಕೊಂದಿದ್ದ. ಬಳಿಕ ಆತ ಕೆಲವೇ ನಿಮಿಷದಲ್ಲಿ ಹೊರಗೆ ಹೋಗಿದ್ದ.
ಪತ್ನಿಯನ್ನು ಕೊಂದ ಅನಂತರ ಪಟೇಲ್ ಹತ್ತಿರದ ಅಪಾರ್ಟ್‌ಮೆಂಟ್‌ಗೆ ಹೋಗಿ ಬಟ್ಟೆ ಬದಲಿಸಿ, ಪಾಸ್‌ಪೋರ್ಟ್ ಮತ್ತು ಸ್ವಲ್ಪ ಹಣವನ್ನು ತೆಗೆದುಕೊಂಡು ನೆವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹೊಟೇಲ್ ಗೆ ಟ್ಯಾಕ್ಸಿಯಲ್ಲಿ ತೆರಳಿದ್ದಾನೆ. ಅಲ್ಲಿ ಆತ ಸುಮಾರು 3 ಗಂಟೆಗೆ ಹೊಟೇಲ್ ಗೆ ತೆರಳಿ ಮರುದಿನ ಅಲ್ಲಿಂದ 10 ಗಂಟೆ ಸುಮಾರಿಗೆ ಹೊಟೇಲ್ ನಿಂದ ಚೆಕ್ ಔಟ್ ಮಾಡಿದ್ದಾನೆ. ಅಲ್ಲಿಂದ ನೆವಾರ್ಕ್ ಪೆನ್ ನಿಲ್ದಾಣಕ್ಕೆ ಹೋಗಿದ್ದು, ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾನೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಾಗಲಕೋಟೆ

Dead Body Found : ಸೇತುವೆ ಸಮೀಪದಲ್ಲಿತ್ತು ಕೊಳೆತ ಮಹಿಳೆಯ ಶವ; ಹಂತಕರು ಯಾರು?

Dead Body Found : ಮಹಿಳೆಯೊಬ್ಬರ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ದುಷ್ಕರ್ಮಿಗಳು ಹತ್ಯೆ ಮಾಡಿ ಶವ ಬಿಸಾಡಿ ಹೋಗಿರಬಹುದೆಂದು ಅಂದಾಜಿಸಲಾಗಿದೆ.

VISTARANEWS.COM


on

By

Dead Body Found
Koo

ಬಾಗಲಕೋಟೆ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ (Dead Body Found) ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ರೊಳ್ಳಿ ಗ್ರಾಮದ ಎನ್‌ಎಚ್-218ರ ಸೇತುವೆ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ ಕೊಲೆ ಮಾಡಿ ಶವವನ್ನು ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಳ ಬಗ್ಗೆ ಯಾವುದೇ ಗುರುತು ಪತ್ತೆಯಾಗಿಲ್ಲ. ಮೃತ‌ದೇಹ ಡಿ-ಕಂಪೂಸ್ ಆಗಿದ್ದು, ನಾಪತ್ತೆ ಪ್ರಕರಣಗಳು ದಾಖಲಾಗಿರುವ ಪೊಲೀಸ್‌ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದೆ.

ಮೃತ ಯುವತಿ ನೆವಿ ಬ್ಲೂ ಟಾಪ್ ಮತ್ತು ರೆಡ್ ಲಗ್ಗಿನ್ಸ್ ಧರಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮಹಿಳೆ ಯಾವ ರೀತಿ ಮೃತಪಟ್ಟಿದ್ದಾಳೆ ಎಂಬುದು ತಿಳಿಯಲಿದೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Kannada New Movie: ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ “ಕ್ಯಾನ್ಬೆರಿ ಬೇಬೀಸ್”ಗೆ ಮುಹೂರ್ತ

ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಸ್ನೇಹಿತನ ಬರ್ತ್ ಡೇ ಪಾರ್ಟಿಗೆ (Birthday Party) ತೆರಳಿದ್ದ ಯುವಕನ ಬರ್ಬರ (Murder Case) ಹತ್ಯೆಯಾಗಿದೆ. ಬೆಳಗಾವಿ ಜಿಲ್ಲೆಯ (Belgavi News) ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ಬಸವರಾಜ ಮುದ್ದಣ್ಣವರ (23) ಎಂಬಾತನ ಹತ್ಯೆಯಾಗಿದೆ.

ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವರ, ನಿನ್ನೆ ಬುಧವಾರ ರಾತ್ರಿ ಸ್ನೇಹಿತ ಮಲ್ಲಿಕಾರ್ಜುನ ಎಂಬಾತನ ಬರ್ತ್ ಡೇ ಪಾರ್ಟಿಗೆ ತೆರಳಿದ್ದ. ಈ ವೇಳೆ ಬರ್ತ್ ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ಮಧ್ಯೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಸ್ನೇಹಿತರೇ ಬಸವರಾಜ ಮುದ್ದಣ್ಣವರಗೆ ಹೊಟ್ಟೆ, ಬೆನ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ತೀವ್ರ ಹಲ್ಲೆಗೊಳಾದ ಬಸೌರಾಜನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಕಲಾಗಿದೆ. ಬಸವರಾಜ ಮೃತದೇಹವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಹತ್ಯೆಗೈದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಬಸವರಾಜ ತಾಯಿ ಒತ್ತಾಯಿಸಿದ್ದಾರೆ. ನನ್ನ ಮಗ ಯಾರ ತಂಟೆಗೂ ಹೋಗುತ್ತಿರಲಿಲ್ಲ, ಕಾಲೇಜಿನಲ್ಲಿ ಚಿನ್ನದ ಪದಕ ಪಡೆದಿದ್ದ. ಬರ್ತ್ ಡೇ ಪಾರ್ಟಿಗೆ ಹೋಗುತ್ತೇನೆ ಎಂದರೆ ಕಳಿಸುತ್ತಿರಲಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಕಣ್ಣೀರಿಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Murder case : ಸ್ನೇಹಿತನ ಬರ್ತ್‌ ಡೇ ಪಾರ್ಟಿಗೆಂದು (Birthday Party) ಹೋದ ಯುವಕನೊಬ್ಬ ಕೊಲೆಯಾಗಿ ಹೋಗಿದ್ದಾನೆ. ಬರ್ತ್‌ ಡೇ ಪಾರ್ಟಿಯಲ್ಲಿ ಸಣ್ಣದೊಂದು ಕಿರಿಕ್‌ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಆಕ್ರೋಶಿಸಿದ್ದಾರೆ.

VISTARANEWS.COM


on

By

Murder Case
ಮೃತ ಬಸವರಾಜ
Koo

ಬೆಳಗಾವಿ: ಸ್ನೇಹಿತನ ಬರ್ತ್ ಡೇ ಪಾರ್ಟಿಗೆ (Birthday Party) ತೆರಳಿದ್ದ ಯುವಕನ ಬರ್ಬರ (Murder Case) ಹತ್ಯೆಯಾಗಿದೆ. ಬೆಳಗಾವಿ ಜಿಲ್ಲೆಯ (Belgavi News) ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ಬಸವರಾಜ ಮುದ್ದಣ್ಣವರ (23) ಎಂಬಾತನ ಹತ್ಯೆಯಾಗಿದೆ.

ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವರ, ನಿನ್ನೆ ಬುಧವಾರ ರಾತ್ರಿ ಸ್ನೇಹಿತ ಮಲ್ಲಿಕಾರ್ಜುನ ಎಂಬಾತನ ಬರ್ತ್ ಡೇ ಪಾರ್ಟಿಗೆ ತೆರಳಿದ್ದ. ಈ ವೇಳೆ ಬರ್ತ್ ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ಮಧ್ಯೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಸ್ನೇಹಿತರೇ ಬಸವರಾಜ ಮುದ್ದಣ್ಣವರಗೆ ಹೊಟ್ಟೆ, ಬೆನ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ತೀವ್ರ ಹಲ್ಲೆಗೊಳಾದ ಬಸೌರಾಜನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಕಲಾಗಿದೆ. ಬಸವರಾಜ ಮೃತದೇಹವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಹತ್ಯೆಗೈದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಬಸವರಾಜ ತಾಯಿ ಒತ್ತಾಯಿಸಿದ್ದಾರೆ. ನನ್ನ ಮಗ ಯಾರ ತಂಟೆಗೂ ಹೋಗುತ್ತಿರಲಿಲ್ಲ, ಕಾಲೇಜಿನಲ್ಲಿ ಚಿನ್ನದ ಪದಕ ಪಡೆದಿದ್ದ. ಬರ್ತ್ ಡೇ ಪಾರ್ಟಿಗೆ ಹೋಗುತ್ತೇನೆ ಎಂದರೆ ಕಳಿಸುತ್ತಿರಲಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ಕಣ್ಣೀರಿಟ್ಟರು.

ಇದನ್ನೂ ಓದಿ: Prajwal Revanna Case: ಬೆಡ್‌ಶೀಟ್‌ ಮೇಲಿರುವ `ಕಲೆಗಳ ಮಾಲಿಕ ನಾನಲ್ಲ…’ ಎನ್ನುತ್ತಿರುವ ಪ್ರಜ್ವಲ್!

ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಡಬಾರದು ಅನ್ನೋದು ಯಾಕೆ ಗೊತ್ತೇ?

ಭೂಮಿಯಲ್ಲಿ (earth) ಹುಟ್ಟಿದ ಮನುಷ್ಯ, ಪ್ರಾಣಿ, ಸಸ್ಯಗಳು ಸೇರಿ ಪ್ರತಿಯೊಂದು ಜೀವ ಜಂತುಗಳು ಒಂದಲ್ಲ ಒಂದು ದಿನ ಸಾಯಲೇಬೇಕು (death) ಎಂಬುದು ಜೀವನದ ಕಟು ಸತ್ಯ. ಜೀವನ ಮತ್ತು ಸಾವಿನ ಚಕ್ರವು ನಾವೆಲ್ಲರೂ ಒಪ್ಪಿಕೊಳ್ಳಬೇಕಾದ ಅನಿವಾರ್ಯ ಸತ್ಯವಾಗಿದೆ. ಹಿಂದೂ ಧರ್ಮದ ನಂಬಿಕೆ (Hinduism Beliefs) ಪ್ರಕಾರ ಸತ್ತ ವ್ಯಕ್ತಿಯ ದೇಹವನ್ನು (dead body) ಒಂಟಿಯಾಗಿ ಬಿಡಬಾರದು ಎನ್ನಲಾಗುತ್ತದೆ.

ವ್ಯಕ್ತಿಯ ಕರ್ಮಗಳ ಪ್ರಕಾರ ಒಬ್ಬನು ಸ್ವರ್ಗ ಅಥವಾ ನರಕಕ್ಕೆ ಹೋಗುತ್ತಾನೆ ಎಂದು ಹೇಳಲಾಗುತ್ತದೆ. ಗರುಡ ಪುರಾಣವು ಹುಟ್ಟಿನಿಂದ ಸಾವಿನವರೆಗೆ ಎಲ್ಲವನ್ನೂ ವಿವರಿಸುವ ಒಂದು ಪಠ್ಯವಾಗಿದೆ. ಅದರೊಂದಿಗೆ, ಒಬ್ಬ ವ್ಯಕ್ತಿಯು ತನ್ನ ಮರಣದ ಅನಂತರ ಯಾವ ನೋವುಗಳು ಮತ್ತು ಫಲಿತಾಂಶಗಳನ್ನು ಪಡೆಯಬೇಕು ಎಂಬುದರ ಕುರಿತು ಸಹ ವಿವರಿಸಲಾಗಿದೆ.

ಇಲ್ಲಿ ಗಮನಿಸಬೇಕಾದ ಒಂದು ವಿಷಯವೆಂದರೆ ಒಬ್ಬ ವ್ಯಕ್ತಿ ಸತ್ತಾಗ ಅಂತ್ಯಕ್ರಿಯೆ ನಡೆಯುವವರೆಗೆ ಆತನ ದೇಹವನ್ನು ಒಂಟಿಯಾಗಿ ಇರಲು ಬಿಡುವುದಿಲ್ಲ.

ಸನಾತನ ಧರ್ಮದ ನಿಯಮದ ಪ್ರಕಾರ ವ್ಯಕ್ತಿಯನ್ನು ಸಾಯಂಕಾಲ ಅಥವಾ ರಾತ್ರಿ ಶವಸಂಸ್ಕಾರ ಮಾಡುವಂತಿಲ್ಲ. ಒಬ್ಬ ವ್ಯಕ್ತಿ ರಾತ್ರಿಯಲ್ಲಿ ಸತ್ತಾಗ, ವ್ಯಕ್ತಿಯ ಮೃತ ದೇಹವನ್ನು ರಾತ್ರಿಯಿಡೀ ಮನೆಯಲ್ಲಿ ಇಡಲಾಗುತ್ತದೆ. ಪಂಚಕಾಲದಲ್ಲಿ ಅಂದರೆ ಧನಿಷ್ಠ, ಶತಭಿಷ, ಪೂರ್ವಭಾದ್ರ, ಉತ್ತರಾಭಾದ್ರ ನಕ್ಷತ್ರಗಳಲ್ಲಿ ವ್ಯಕ್ತಿ ಸತ್ತರೆ ಪಂಚಕ ವಿಧಿಯನ್ನು ನಡೆಸಿಯೇ ಮೃತ ವ್ಯಕ್ತಿಯ ದೇಹವನ್ನು ಸುಡಬೇಕಾಗುತ್ತದೆ.

ಒಬ್ಬ ವ್ಯಕ್ತಿ ಸತ್ತಾಗ ಆತನ ಮಕ್ಕಳು ಹತ್ತಿರದಲ್ಲಿಲ್ಲದಿದ್ದರೆ ಅವರು ಬರುವವರೆಗೂ ಶವವನ್ನು ಮನೆಯಲ್ಲಿ ಇಡಲಾಗುತ್ತದೆ. ಆದರೆ ಯಾವುದೇ ಸಂದರ್ಭಗಳಲ್ಲಿ ಮೃತ ದೇಹವನ್ನು ಮಾತ್ರ ಒಂಟಿಯಾಗಿ ಬಿಡುವುದಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಗರುಡ ಪುರಾಣದಲ್ಲಿ ವಿವರವಾಗಿ ವಿವರಿಸುತ್ತದೆ.

ಮೃತ ದೇಹವನ್ನು ಏಕಾಂಗಿಯಾಗಿ ಏಕೆ ಬಿಡುವುದಿಲ್ಲ?

ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಸತ್ತ ವ್ಯಕ್ತಿಯ ದೇಹದ ಸುತ್ತಲೂ ದುಷ್ಟಶಕ್ತಿಗಳು ಸುತ್ತಾಡುತ್ತಲೇ ಇರುತ್ತವೆ. ಮೃತ ದೇಹವನ್ನು ಏಕಾಂಗಿಯಾಗಿ ಬಿಟ್ಟರೆ ಸತ್ತ ವ್ಯಕ್ತಿಯ ದೇಹವನ್ನು ದುಷ್ಟಶಕ್ತಿಗಳು ಪ್ರವೇಶಿಸಬಹುದು ಎಂದು ನಂಬಲಾಗಿದೆ.

ಮೃತದೇಹವನ್ನು ಮಾತ್ರ ಬಿಟ್ಟು ಹೋಗುವುದು ಅಪಾಯಕಾರಿ ಎನ್ನಲಾಗುತ್ತದೆ. ಕುಟುಂಬ ಸದಸ್ಯರಿಗೆ ಕೆಟ್ಟದನ್ನು ಉಂಟು ಮಾಡಬಹುದು ಎನ್ನಲಾಗುತ್ತದೆ. ಆದ್ದರಿಂದ, ಸತ್ತ ವ್ಯಕ್ತಿಯ ಮೃತ ದೇಹವನ್ನು ಎಂದಿಗೂ ಒಂಟಿಯಾಗಿ ಬಿಡುವುದಿಲ್ಲ.


ಎರಡನೆಯದಾಗಿ ಸತ್ತ ವ್ಯಕ್ತಿಯ ದೇಹವನ್ನು ಏಕಾಂಗಿಯಾಗಿ ಬಿಟ್ಟರೆ ಕೆಂಪು ಇರುವೆಗಳು ಅಥವಾ ಪ್ರಾಣಿಗಳಂತಹ ಹತ್ತಿರದ ನರಭಕ್ಷಕ ಜೀವಿಗಳು ದೇಹವನ್ನು ಹಾನಿಗೊಳಿಸಬಹುದು ಎಂಬುದೂ ಒಂದು ಕಾರಣವಾಗಿದೆ. ಆದ್ದರಿಂದ ಸತ್ತ ವ್ಯಕ್ತಿಯ ದೇಹವನ್ನು ಸುಡುವವರೆಗೆ ಅದನ್ನು ಸುಮ್ಮನೆ ಬಿಡುವುದಿಲ್ಲ. ಒಂಟಿಯಾಗಿ ಬಿಟ್ಟರೆ ಸತ್ತ ಆತ್ಮವೂ ಯಮಲೋಕಕ್ಕೆ ಹೋಗುವ ದಾರಿಯಲ್ಲಿ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆ ಎನ್ನಲಾಗುತ್ತದೆ.

ಇದಲ್ಲದೇ ಮೃತದೇಹವನ್ನು ಸುದೀರ್ಘ ಕಾಲ ಒಂಟಿಯಾಗಿ ಬಿಟ್ಟರೆ ದುರ್ವಾಸನೆ ಬರಲಾರಂಭಿಸುತ್ತದೆ ಎನ್ನುವುದೂ ಒಂದು ಕಾರಣವಾಗಿದೆ. ಹಾಗಾಗಿ ಯಾರಾದರೂ ಅಲ್ಲಿ ಕುಳಿತುಕೊಂಡು ಮೃತದೇಹದ ಸುತ್ತಲೂ ಅಗರಬತ್ತಿಗಳನ್ನು ಉರಿಸಬೇಕು. ಇದರಿಂದ ಮೃತದೇಹದಿಂದ ಬರುವ ದುರ್ವಾಸನೆಯು ಸುತ್ತಲೂ ಹರಡುವುದಿಲ್ಲ.

ಇದನ್ನೂ ಓದಿ: Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಮೃತ ವ್ಯಕ್ತಿಯ ಆತ್ಮವು ಅಂತ್ಯಕ್ರಿಯೆ ನಡೆಯುವವರೆಗೆ ಕುಟುಂಬದೊಂದಿಗೆ ಸಂಪರ್ಕದಲ್ಲಿರುತ್ತದೆ. ಕುಟುಂಬ ಸದಸ್ಯರು ಮೃತದೇಹವನ್ನು ಬಿಟ್ಟು ಹೋದರೆ ಸತ್ತ ವ್ಯಕ್ತಿಯ ಆತ್ಮವು ಪರಿತ್ಯಕ್ತಗೊಂಡಾಗ ದುಃಖಿತ ಆಗುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ಮೃತ ದೇಹವನ್ನು ಎಂದಿಗೂ ಒಂಟಿಯಾಗಿ ಬಿಡಬಾರದು.

ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ ಅನಂತರ ಯಾರಾದರೂ ಸತ್ತರೆ ಅವರ ದೇಹವನ್ನು ರಾತ್ರಿಯಿಡೀ ಮನೆಯಲ್ಲಿ ಇರಿಸಲಾಗುತ್ತದೆ ಮತ್ತು ಮರುದಿನ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ. ರಾತ್ರಿ ವೇಳೆ ಶವ ಸಂಸ್ಕಾರ ಮಾಡಿದರೆ ಮೋಕ್ಷ ಸಿಗುವುದಿಲ್ಲ ಎಂಬುದು ಇದರ ಹಿಂದಿನ ನಂಬಿಕೆ. ಹೀಗೆ ಮಾಡಿದರೆ ಅಂತಹ ಆತ್ಮವು ರಾಕ್ಷಸ, ದೆವ್ವ ಅಥವಾ ಪಿಶಾಚಿಯ ಗರ್ಭದ ಮೂಲಕ ಜನಿಸುತ್ತದೆ ಎಂಬ ಉಲ್ಲೇಖ ಗರುಡ ಪುರಾಣದಲ್ಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಬೆಡ್‌ಶೀಟ್‌ ಮೇಲಿರುವ `ಕಲೆಗಳ ಮಾಲಿಕ ನಾನಲ್ಲ…’ ಎನ್ನುತ್ತಿರುವ ಪ್ರಜ್ವಲ್!

Prajwal Revanna Case: ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿತ್ತು. ಈ ಬೆಡ್‌ಸ್ಪ್ರೆಡ್‌ ಅನ್ನು ಪ್ರಜ್ವಲ್‌ ಮುಂದೆ ಹಿಡಿದು ಪ್ರಶ್ನಿಸಿದಾಗ, ಸಕಾರಾತ್ಮಕ ಉತ್ತರ ದೊರೆತಿಲ್ಲ. ಈ ನಡುವೆ, ಅಶ್ಲೀಲ ವಿಡಿಯೋ ಮಾಡಿಕೊಂಡಿರಬಹುದಾದ ಮೊಬೈಲ್‌ ಕೂಡ ಪ್ರಜ್ವಲ್‌ ಬಳಿ ದೊರೆತಿಲ್ಲ.

VISTARANEWS.COM


on

prajwal revanna case bedsheet
Koo

ಬೆಂಗಳೂರು: ಅತ್ಯಾಚಾರ (Physical Abuse) ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ (‌Prajwal Revanna Case) ಪ್ರಕರಣದಲ್ಲಿ ಎಸ್‌ಐಟಿ (SIT) ತನಿಖೆ ತೀವ್ರಗೊಳಿಸಿದ್ದು, ಪ್ರಜ್ವಲ್‌ ಮನೆಯಲ್ಲಿ ವಶಪಡಿಸಿಕೊಳ್ಳಲಾದ ʼಸಂಶಯಾಸ್ಪದʼ ಕಲೆಗಳುಳ್ಳ ಬೆಡ್‌ಶೀಟ್‌ ಬಗ್ಗೆ ಪ್ರಶ್ನಿಸಿದೆ. ಈ ಸಂದರ್ಭದಲ್ಲಿ ಆ ಕಲೆಗಳಿಗೂ ತನಗೂ ಸಂಬಂಧವೇ ಇಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಮೇ 29ರಂದು ಬಸವನಗುಡಿಯಲ್ಲಿರುವ ಪ್ರಜ್ವಲ್ ಮನೆಯನ್ನು ಕೋರ್ಟ್‌ನಲ್ಲಿ ಸರ್ಚ್ ವಾರೆಂಟ್ ಪಡೆದು ಎಸ್ಐಟಿ ಶೋಧಕ್ಕೊಳಪಡಿಸಿತ್ತು. ಪ್ರಜ್ವಲ್‌ ಆಗಮನಕ್ಕೂ ಒಂದು ದಿನ ಮೊದಲೇ ನಡೆಸಲಾದ ಈ ತಪಾಸಣೆಯ ವೇಳೆ ಅನುಮಾನದ ಹಿನ್ನೆಲೆಯಲ್ಲಿ ಹಾಗೂ ಹೆಚ್ಚಿನ ಪರೀಕ್ಷೆಗಾಗಿ ಕೆಲವು ವಸ್ತುಗಳನ್ನು ಕೊಂಡೊಯ್ಯಲಾಗಿದೆ. ಶೋಧದ ವೇಳೆ ಪತ್ತೆಯಾದ ವಸ್ತುಗಳ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿತ್ತು. ಈ ಬೆಡ್‌ಸ್ಪ್ರೆಡ್‌ ಅನ್ನು ಪ್ರಜ್ವಲ್‌ ಮುಂದೆ ಹಿಡಿದು ಪ್ರಶ್ನಿಸಿದಾಗ, ಸಕಾರಾತ್ಮಕ ಉತ್ತರ ದೊರೆತಿಲ್ಲ.

ಸಿಂಗಲ್ ಕಾಟ್ ಹಾಸಿಗೆ ಮೇಲೆಯೂ ಅಲ್ಲಲ್ಲಿ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಮೇಲ್ವಾಸು ಕಂಡುಬಂದಿದೆ. ಜೊತೆಗೆ ಒಂದು ಗ್ರೇ ಕಲರ್ ಅದರ ಮೇಲೆ ಸಿಲ್ವರ್ ಕಲರ್ ಡಿಜೈನ್ ಉಳ್ಳ ವಾಲ್ ಪೇಪರ್ ತುಂಡು ದೊರೆತಿದೆ. ಸದ್ಯ ಎಸ್ಐಟಿ ಅಧಿಕಾರಿಗಳು ಈ ಸೊತ್ತುಗಳನ್ನ ವಶಪಡಿಸಿಕೊಂಡು ಜಪ್ತಿ ಮಾಡಿದ್ದಾರೆ. ಜಪ್ತಿಪಡಿಸಿದ ವಸ್ತುಗಳನ್ನು ತಜ್ಞರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ನಡುವೆ, ಅಶ್ಲೀಲ ವಿಡಿಯೋ ಮಾಡಿಕೊಂಡಿರಬಹುದಾದ ಮೊಬೈಲ್‌ ಕೂಡ ಪ್ರಜ್ವಲ್‌ ಬಳಿ ದೊರೆತಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ, ಅದು ಒಂದು ವರ್ಷದ ಹಿಂದೆಯೇ ನಾಪತ್ತೆಯಾಗಿದೆ. ಈ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ ಎಂದು ತಿಳಿಸಿದ್ದಾರೆ ಪ್ರಜ್ವಲ್.‌ ಈ ಬಗ್ಗೆಯೂ ಹೆಚ್ಚಿನ ತನಿಖೆ ನಡೆಯಬೇಕಿದೆ.

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂಬಂಧ ಮಹತ್ವದ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ‌ ಪಾಲ್ಗೊಂಡಿರಬಹುದಾದ ಕೃತ್ಯದ ಸಂಬಂಧ ತಾಂತ್ರಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಸಂಗ್ರಹ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಮೊದಲ ಆರೋಪಿಯಾಗಿದ್ದು, ಜೈಲಿಗೆ ಹೋಗಿ ಈಗ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಪ್ರಕರಣದಲ್ಲಿ ಬೇಕಾಗಿರುವ ಭವಾನಿ ರೇವಣ್ಣ (Bhavani Revanna) ಇನ್ನೂ ಎಸ್‌ಐಟಿ ಕೈಗೆ ಸಿಕ್ಕಿಲ್ಲ.

ಪುರುಷತ್ವ ಪರೀಕ್ಷೆಗೆ ಕೋರ್ಟ್‌ ಸಮ್ಮತಿ

ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna case ) ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ ನೀಡಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸಿದ್ದಾರೆ.

ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ ಕಾದಿದ್ದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಪೊಲೀಸರ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ತನಿಖೆಗೆ ಅಸಹಕಾರ ನೀಡುತ್ತಿದ್ದರು. ಹೀಗಾಗಿ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ನಡೆಯುತ್ತಿರಲಿಲ್ಲ. ಮಂಗಳವಾರ ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಪ್ರಜ್ವಲ್​ಗೆ ಹಾಸನದ ಜನರು ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಅದೇ ರೀತಿ ಪ್ರಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Bhavani Revanna: ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣರನ್ನು ಮರೆತೇ ಬಿಟ್ಟ ಎಸ್‌ಐಟಿ!

Continue Reading

ಬೆಂಗಳೂರು

Electric Airport Taxi : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇನ್ಮುಂದೆ ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

Electric Airport Taxi : ಪರಿಸರಕ್ಕೆ ಪೂರಕವಾಗುವ ದೃಷ್ಟಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳಿಗೆ ಚಾಲನೆ ನೀಡಲಾಗಿದೆ. ಎರಡು ಬಣ್ಣದ ಟ್ಯಾಕ್ಸಿಗಳಲ್ಲಿ ಒಂದು ಗುಲಾಬಿ ಟ್ಯಾಕ್ಸಿಯು ವಿಶೇಷವಾಗಿ ಮಹಿಳೆಯರಿಗಾಗಿಯೇ ಮೀಸಲಿಡಲಾಗಿದೆ. ಈ ಟ್ಯಾಕ್ಸಿಗಳನ್ನು ಮಹಿಳಾ ಚಾಲಕಿಯರೇ ಚಲಾಯಿಸಲಿದ್ದಾರೆ.

VISTARANEWS.COM


on

By

Electric airport taxis introduced at Kempegowda International Airport
Koo

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ರಿಫೆಕ್ಸ್‌ ಇವೀಲ್ಜ್‌ (Refex eVeelz) ಸಹಯೋಹದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದ ಪ್ರಯುಕ್ತ ನೂತನವಾಗಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳನ್ನು (Electric Airport Taxi) ಪರಿಚಯಿಸಲಾಗಿದೆ.

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಒಟ್ಟು 75 ಕಾಂಪ್ಯಾಕ್ಟ್‌ SUV ಎಲೆಕ್ಟ್ರಿಕ್‌ ಟ್ಯಾಕ್ಸಿಗಳಿಗೆ ವಿಮಾನ ನಿಲ್ದಾಣದ ಆವರಣದಲ್ಲಿ ಬಿಐಎಎಲ್‌ನ ಸಿಇಒ ಹರಿ ಮರಾರ್, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಚಾಲನೆ ನೀಡಿದರು.

ಬಳಿಕ ಮಾತನಾಡಿದ ಬಿಐಎಎಲ್‌ನ ಸಿಇಒ ಹರಿ ಮರಾರ್, ಏರ್‌ಪೋರ್ಟ್‌ನಲ್ಲಿ ಪರಿಸರಯುಕ್ತ ವಾತಾವರಣ ನಿರ್ಮಾಣ ಮಾಡಲು ಈ ಪರಿಸರ ದಿನದಂದೇ ಬಹುತೇಕ ಇಂಧನಯುಕ್ತ ಟ್ಯಾಕ್ಸಿಗಳನ್ನು ಎಲೆಕ್ಟ್ರಿಕ್‌ ಟ್ಯಾಕ್ಸಿಗಳಾಗಿ ಪರಿವರ್ತಿಸಲಾಗಿದೆ. ಇದೀಗ 75 ಕಾಂಪ್ಯಾಕ್ಟ್‌ SUV ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಸೇರಿದಂತೆ ಶೇ.50 ಟ್ಯಾಕ್ಸಿಗಳು ಎಲೆಕ್ಟ್ರಿಕ್‌ ವಾಹನಗಳಾಗಿ ಪರಿವರ್ತಿಸಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲಿದ್ದೇವೆ ಎಂದರು.

ರಿಫೆಕ್ಸ್ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಜೈನ್ ಮಾತನಾಡಿ, ರಿಫೆಕ್ಸ್‌ನ ಗ್ರೀನ್, ರಿಫೆಕ್ಸ್ ಇವೀಲ಼್ ಮೂಲಕ ಏರ್‌ಪೋರ್ಟ್‌ನಲ್ಲಿ ಇವಿ ಟ್ಯಾಕ್ಸಿ ಒದಗಿಸುವ ಅವಕಾಶ ನಮಗೆ ದೊರೆತಿದೆ. ಈ ನೂತನ EV ಏರ್‌ಪೋರ್ಟ್‌ ಟ್ಯಾಕ್ಸಿಗಳನ್ನು ಪ್ರಯಾಣಿಕರು ಸುಲಭವಾಗಿ ಬುಕ್ ಮಾಡಬಹುದು. ವಿಮಾನ ನಿಲ್ದಾಣದ ಟ್ಯಾಕ್ಸಿ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಲ್ಲಿ ಹಾಗೂ ಬಳಕೆದಾರ ಸ್ನೇಹಿ BLR ಪಲ್ಸ್ ಮೊಬೈಲ್ ಅಪ್ಲಿಕೇಶನ್ ಮೂಲಕವೂ ಬುಕ್‌ ಮಾಡಬಹುದು.

Electric airport taxi

ಇದನ್ನೂ ಓದಿ: Aishwarya Arjun: ಅರ್ಜುನ್ ಸರ್ಜಾ ಪುತ್ರಿ ವಿವಾಹ; ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ

ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

ಇನ್ನು, ಮರುವಿನ್ಯಾಸಗೊಳಿಸಲಾದ EV ಟ್ಯಾಕ್ಸಿಗಳು ತಿಳಿನೀಲಿ ಬಣ್ಣ ಹಾಗೂ ಗುಲಾಬಿ ಬಣ್ಣ ಈ ಎರಡು ವಿಶಿಷ್ಟ ಬಣ್ಣಗಳಲ್ಲಿ ಇರಲಿವೆ. ತಿಳಿನೀಲಿ ಬಣ್ಣದ ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಎಲ್ಲರೂ ಬಳಸಬಹುದಾಗಿದ್ದು, ಈ ಬಣ್ಣವು ಸುಸ್ಥಿರತೆಯನ್ನು ಒತ್ತಿ ಹೇಳುತ್ತದೆ. ಇನ್ನು, ಗುಲಾಬಿ ಬಣ್ಣದ ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಮಹಿಳೆಯರಿಗಾಗಿ ಮೀಸಲಿಟ್ಟಿದ್ದು, ಈ ಟ್ಯಾಕ್ಸಿಗಳನ್ನು ಮಹಿಳಾ ಚಾಲಕಿಯರೇ ಚಲಾಯಿಸಲಿರುವುದು ವಿಶೇಷವಾಗಿದೆ.

Electric airport taxi

ತುರ್ತು ಸಂಪರ್ಕಕ್ಕೆ ಪಿಂಕ್‌ ಕಾರ್ಡ್‌

ಇನ್ನು, ಪ್ರತಿ ಪ್ರಯಾಣಿಕರಿಗೆ ಡ್ಯೂಟಿ ಮ್ಯಾನೇಜರ್, ಸ್ಥಳೀಯ ಪೊಲೀಸ್ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ತುರ್ತು ಸಂಪರ್ಕ ಸಂಖ್ಯೆಗಳನ್ನು ಒಳಗೊಂಡಿರುವ ಪೂರಕ “ಪಿಂಕ್ ಕಾರ್ಡ್” ಅನ್ನು ಸಹ ಒದಗಿಸಲಾಗುತ್ತದೆ. ಇದರಿಂದ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಂತಾಗಿದೆ. ಅರೆ-ರೊಬೊಟಿಕ್ ವಿಮಾನ ಟೋಯಿಂಗ್ ವಾಹನಗಳು ಮತ್ತು EV ವಾಹನಗಳನ್ನು ಏರ್‌ಸೈಡ್ ಮತ್ತು ಲ್ಯಾಂಡ್‌ಸೈಡ್ ಎರಡೂ ಕಡೆಯಲ್ಲೂ ಅನುಷ್ಠಾನಗೊಳಿಸಲಾಗಿದೆ. ಹೀಗಾಗಿ BLR ಏರ್‌ಪೋರ್ಟ್‌ನಲ್ಲಿರುವ ಎಲ್ಲಾ ವಾಹನಗಳನ್ನು ಸಮರ್ಥನೀಯ ಆಯ್ಕೆಗಳಿಗೆ ಪರಿವರ್ತಿಸುವ ದೀರ್ಘಾವಧಿಯ ದೃಷ್ಟಿಯೊಂದಿಗೆ BIAL ಹೊಂದಾಣಿಕೆಯನ್ನು ಮುಂದುವರೆಸಿದೆ. ಕಾರ್ಯಕ್ರಮದಲ್ಲಿ ವಿಶ್ವ ಪರಿಸರ ದಿನದ ನೆನಪಿನಾರ್ಹ, ವಿಮಾನ ನಿಲ್ದಾಣದ ಕ್ಯಾಂಪಸ್‌ನಲ್ಲಿ 100 ಸಸಿಗಳನ್ನು ನೆಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
uttarakhand Trekking Tragedy
ಪ್ರಮುಖ ಸುದ್ದಿ4 mins ago

Trekking Tragedy: ಸಾವಿನ ಕಣಿವೆಯಾದ ಸಹಸ್ತ್ರತಾಲ್; ಬೆಂಗಳೂರಿನ 9 ಚಾರಣಿಗರು ಬಲಿಯಾದದ್ದು ಹೇಗೆ?

India vs Ireland
ಕ್ರಿಕೆಟ್5 mins ago

India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

Dead Body Found
ಬಾಗಲಕೋಟೆ7 mins ago

Dead Body Found : ಸೇತುವೆ ಸಮೀಪದಲ್ಲಿತ್ತು ಕೊಳೆತ ಮಹಿಳೆಯ ಶವ; ಹಂತಕರು ಯಾರು?

Kannada New Movie cranberry babies movie On set
ಸ್ಯಾಂಡಲ್ ವುಡ್26 mins ago

Kannada New Movie: ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ “ಕ್ಯಾನ್ಬೆರಿ ಬೇಬೀಸ್”ಗೆ ಮುಹೂರ್ತ

Murder Case
ಬೆಳಗಾವಿ31 mins ago

Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Jasprit Bumrah
ಕ್ರೀಡೆ54 mins ago

Jasprit Bumrah: ಭುವನೇಶ್ವರ್​ ಕುಮಾರ್​ ವಿಶ್ವ ದಾಖಲೆ ಮುರಿದ ಜಸ್​ಪ್ರೀತ್​ ಬುಮ್ರಾ

prajwal revanna case bedsheet
ಕ್ರೈಂ59 mins ago

Prajwal Revanna Case: ಬೆಡ್‌ಶೀಟ್‌ ಮೇಲಿರುವ `ಕಲೆಗಳ ಮಾಲಿಕ ನಾನಲ್ಲ…’ ಎನ್ನುತ್ತಿರುವ ಪ್ರಜ್ವಲ್!

Electric airport taxis introduced at Kempegowda International Airport
ಬೆಂಗಳೂರು1 hour ago

Electric Airport Taxi : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇನ್ಮುಂದೆ ಮಹಿಳೆಯರಿಗಾಗಿ ಗುಲಾಬಿ ಟ್ಯಾಕ್ಸಿ

Chandrababu Naidu
ದೇಶ1 hour ago

Chandrababu Naidu: ಆಂಧ್ರ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

Rishta Laboni Shimana passes away
ಸಿನಿಮಾ2 hours ago

Rishta Laboni Shimana: ಚಿಕಿತ್ಸೆ ಫಲಕಾರಿಯಾಗದೆ ಖ್ಯಾತ ನಟಿ ರಿಶ್ತಾ ನಿಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 weeks ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌