Lok Sabha Election 2024: ಬಿಜೆಪಿ ಪ್ರಣಾಳಿಕೆ ನಾಳೆ ಬಿಡುಗಡೆ; ನಿರೀಕ್ಷೆಗಳೇನು? - Vistara News

Lok Sabha Election 2024

Lok Sabha Election 2024: ಬಿಜೆಪಿ ಪ್ರಣಾಳಿಕೆ ನಾಳೆ ಬಿಡುಗಡೆ; ನಿರೀಕ್ಷೆಗಳೇನು?

Lok Sabha Election 2024: 7 ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನಕ್ಕೆ ಏಪ್ರಿಲ್‌ 19ರಂದು ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ಬಿಜೆಪಿ ನಾಳೆ (ಏಪ್ರಿಲ್ 14) ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಪ್ರಣಾಳಿಕೆ ಬಿಡುಗಡೆ ವೇಳೆ ಹಾಜರಿರಲಿದ್ದಾರೆ.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024) ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಏಪ್ರಿಲ್‌ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ಭಾರತೀಯ ಜನತಾ ಪಕ್ಷ (BJP) 2024ರ ಲೋಕಸಭಾ ಚುನಾವಣೆಗೆ ತನ್ನ ಪ್ರಣಾಳಿಕೆ (Manifesto) ಅಥವಾ ‘ಸಂಕಲ್ಪ ಪತ್ರ’ (Sankalp Patra)ವನ್ನು ನಾಳೆ (ಏಪ್ರಿಲ್ 14) ಬಿಡುಗಡೆ ಮಾಡಲು ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸಮ್ಮುಖದಲ್ಲಿ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರಾಣಾಳಿಕೆಯಲ್ಲಿ ಏನಿರಲಿದೆ?

ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಇದೀಗ ಬಿಜೆಪಿ ಪ್ರಣಾಳಿಕೆಯಲ್ಲಿ ಏನಿರಬಹುದು ಎನ್ನುವ ಕುತೂಹಲ ಮೂಡಿದೆ. ಬಿಜೆಪಿಯ ಪ್ರಣಾಳಿಕೆಯು ದೇಶದ ಎಲ್ಲ ವರ್ಗಗಳ ಅಭಿವೃದ್ಧಿಯನ್ನು ಕೇಂದ್ರೀಕರಿಸುವ ಸಾಧ್ಯತೆಯಿದೆ. ಇದು ಭಾರತದ ಆರ್ಥಿಕ ಅಭಿವೃದ್ಧಿ ಮತ್ತು ಮಹಿಳೆಯರು, ಯುವಕರು, ಬಡವರು ಮತ್ತು ರೈತರ ಬಗ್ಗೆ ಒತ್ತು ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ʼʼಈಡೇರಿಸಬಹುದಾದ ಭರವಸೆಗಳನ್ನು ಮಾತ್ರ ಪಕ್ಷದ ಪ್ರಣಾಳಿಕೆಯಲ್ಲಿ ಅಳವಡಿಸಲಾಗಿದೆʼʼ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಸಾಂಸ್ಕೃತಿಕ ರಾಷ್ಟ್ರೀಯತೆಯನ್ನು ಕೇಂದ್ರೀಕರಿಸಿ ಪ್ರಣಾಳಿಕೆ ʼಮೋದಿ ಅವರ ಗ್ಯಾರಂಟಿ: 2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶʼ ಎಂಬ ಅಂಶವನ್ನು ಪ್ರಧಾನವಾಗಿರಿಸಿಕೊಂಡಿದೆ ಎಂದು ವರದಿ ತಿಳಿಸಿದೆ.

ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ

ʼʼವಿಶೇಷ ಎಂದರೆ ನಾಳೆ ದಲಿತ ಸಮುದಾಯದ ಶ್ರೇಷ್ಠ ನಾಯಕ ಮತ್ತು ಭಾರತೀಯ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನವೂ ಹೌದು. ಪ್ರಣಾಳಿಕೆ ಬಿಡುಗಡೆ ವೇಳೆ ಪ್ರಧಾನಿ ನರೇಂದ್ರ ಮೋದಿ ಜತೆಗೆ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆʼʼ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಮಿತಿಯಲ್ಲಿ ಯಾರಿದ್ದಾರೆ?

ಜನರ ಸಲಹೆಗಳನ್ನು ಪಡೆಯಲು ದೇಶಾದ್ಯಂತ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಅಭಿಯಾನ ನಡೆಸಲಾಗಿತ್ತು. ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಪ್ರಣಾಳಿಕೆ ಸಮಿತಿಯನ್ನು ರಚಿಸಲಾಗಿತ್ತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಮಿತಿಯ ಸಂಚಾಲಕಿಯಾಗಿದ್ದಾರೆ. ಪಿಯೂಷ್‌ ಗೋಯಲ್‌ ಅವರು ಸಹ ಸಂಚಾಲಕರಾಗಿದ್ದಾರೆ. ಇನ್ನುಳಿದಂತೆ ಅರ್ಜುನ್‌ ಮುಂಡಾ, ಭೂಪೇಂದರ್‌ ಯಾದವ್‌, ಕಿರಣ್‌ ರಿಜಿಜು, ಅಶ್ವಿನಿ ವೈಷ್ಣವ್‌, ಕಿರಣ್‌ ರಿಜಿಜು, ಹಿಮಂತ ಬಿಸ್ವಾ ಶರ್ಮಾ, ಸ್ಮೃತಿ ಇರಾನಿ, ವಸುಂಧರಾ ರಾಜೆ, ರವಿಶಂಕರ್‌ ಪ್ರಸಾದ್‌, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್‌ ಚಂದ್ರಶೇಖರ್‌ ಸೇರಿ ಹಲವರು ಸಮಿತಿಯ ಸದಸ್ಯರಾಗಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ರಾಮಮಂದಿರ, 370ನೇ ವಿಧಿ ರದ್ದುಗೊಳಿಸುವುದು ಸೇರಿ ಹಲವು ಪ್ರಮುಖ ವಿಷಯಗಳನ್ನು ಸೇರಿಸಿತ್ತು. ಆ ಭರವಸೆಗಳನ್ನು ಈಡೇರಿಸಿದ ಕಾರಣ ಹೊಸ ಅಂಶಗಳು ಏನಿರಲಿವೆ ಎಂಬ ಕುತೂಹಲ ಇದೆ. ಒಟ್ಟು ಏಳು ಹಂತದಲ್ಲಿ ಮತದಾನ ನಡೆದು ಜೂನ್‌ 4ರಂದು ಫಲಿತಾಂಶ ಹೊರ ಬೀಳಲಿದೆ.

ಇದನ್ನೂ ಓದಿ: Congress Manifesto: ಕಾಂಗ್ರೆಸ್‌ ಪ್ರಣಾಳಿಕೆ; ಅಲ್ಪಸಂಖ್ಯಾತರಿಗೆ ವಿಶೇಷ ಕೊಡುಗೆ ಘೋಷಣೆ, ಇಲ್ಲಿದೆ ಪಟ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Varanasi: ವಾರಾಣಸಿಯಲ್ಲಿ ನರೇಂದ್ರ ಮೋದಿ ಅವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಸ್ಪರ್ಧೆ ತೀವ್ರವಾದರೂ ಜನ ಮಾತ್ರ ಮೋದಿ ಅವರಿಗೇ ಬೆಂಬಲ ಎನ್ನುತ್ತಿದ್ದಾರೆ. ಅದರಲ್ಲೂ, ಕನ್ನಡಿಗರು ಏನೆಂದರು ಎಂಬ ಕುರಿತು ವಿಸ್ತಾರ ನ್ಯೂಸ್‌ ಗ್ರೌಂಡ್‌ ರಿಪೋರ್ಟ್‌ ಇಲ್ಲಿದೆ.

VISTARANEWS.COM


on

Varanasi
Koo

ಪ್ರತ್ಯಕ್ಷದರ್ಶಿ ವರದಿ: ವಿಕ್ರಮ್

ವಾರಾಣಸಿ: ಲೋಕಸಭೆ ಚುನಾವಣೆಯು (Lok Sabha Election 2024) ಕೊನೆಯ ಹಂತ ತಲುಪಿದೆ. ಜೂನ್‌ 1ರಂದು ಏಳನೇ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆಗೆ ತೆರೆ ಬೀಳಲಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಉತ್ತರ ಪ್ರದೇಶದ ವಾರಾಣಸಿಯಿಂದ (Varanasi) ಸ್ಪರ್ಧಿಸಿದ್ದು, ಸುಮಾರು 7 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಲ್ಲೂ, ವಾರಾಣಸಿಯಲ್ಲಿ ನೆಲೆಸಿರುವ ಕನ್ನಡಿಗರಂತೂ ಮೋದಿ ಗೆಲುವು ನಿಶ್ಚಿತ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಹೇಳಿದ್ದೇನು? ಇಲ್ಲಿದೆ ‌‘ವಿಸ್ತಾರ ನ್ಯೂಸ್‌’ ಗ್ರೌಂಡ್‌ ರಿಪೋರ್ಟ್.‌

“ನಾವು ಬೆಂಗಳೂರಿನಿಂದ ಕಾಶಿಗೆ ಬಂದು ನೆಲೆಸಿದ್ದೇವೆ. 2012ರ ಕೊನೆಯಲ್ಲಿ ನಾವು ಇಲ್ಲಿಗೆ ಬಂದೆವು. ನಾವು ಇಲ್ಲಿಗೆ ಬಂದಾಗ ಸಮಾಜವಾದಿ ಪಕ್ಷ ಅಧಿಕಾರದಲ್ಲಿತ್ತು. ನಾವು ಎರಡೂ ಸರ್ಕಾರಗಳನ್ನು ನೋಡಿದ ಕಾರಣ ನಮಗೆ ನಿಜವಾದ ವ್ಯತ್ಯಾಸ ಗೊತ್ತು. ಮೊದಲಿಗೆ ಇಲ್ಲಿ ವಿದ್ಯುತ್‌ ವೋಲ್ಟೇಜ್‌ ಇರಲಿಲ್ಲ. ಈಗ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಗಂಗೆಯು ಶುದ್ಧಗೊಂಡಿದ್ದಾಳೆ. ಇಲ್ಲಿ ಗಲಭೆಗಳು ಸಂಪೂರ್ಣವಾಗಿ ನಿಂತಹೋಗಿವೆ. ಒಂದೇ ಒಂದು ಗಲಾಟೆ ನಡೆಯುವುದಿಲ್ಲ. ಕಳೆದ 10 ವರ್ಷಗಳಲ್ಲಿ ಅಪಾರ ಅಭಿವೃದ್ಧಿಯಾಗಿದೆ” ಎಂಬುದಾಗಿ ಕನ್ನಡಿಗರೊಬ್ಬರು ಮಾಹಿತಿ ನೀಡಿದ್ದಾರೆ.

“ಸಮಾಜದಲ್ಲಿ ಧರ್ಮ ಇದ್ದಾಗಲೇ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಇದೇ ಕಾರಣಕ್ಕಾಗಿಯೇ, ನರೇಂದ್ರ ಮೋದಿ ಅವರು ಯಾವುದೇ ಗಲಾಟೆ, ಗದ್ದಲ ಇಲ್ಲದೆ, 150 ಎಕರೆ ಜಾಗವನ್ನು ಪಡೆದುಕೊಂಡು, ಕಾಶಿ ವಿಶ್ವನಾಥ ಕಾರಿಡಾರ್‌ ನಿರ್ಮಿಸಿದ್ದಾರೆ. ಹಾಗಾಗಿ, ಮೋದಿ ಅವರು ಲಕ್ಷಾಂತರ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ” ಎಂಬುದಾಗಿ ಹೇಳಿದ್ದಾರೆ. ಇನ್ನೊಬ್ಬ ಕನ್ನಡಿಗ ಮಾತನಾಡಿ, “ನಾನು ಮೊದಲ ಬಾರಿಗೆ ಮತ ಚಲಾವಣೆ ಮಾಡುತ್ತಿದ್ದೇನೆ. ನನ್ನ ಮೊದಲ ವೋಟು ಮೋದಿ ಅವರಿಗೆ” ಎಂದು ಯುವಕ ಹೇಳಿದ್ದಾರೆ.

ಮೈಸೂರಿನವರಾದ, 1984ರಲ್ಲಿಯೇ ವಾರಾಣಸಿಗೆ ತೆರಳಿದ, ಸ್ವಾಮೀಜಿ ಆಗಿರುವ ಮತ್ತೊಬ್ಬ ಕನ್ನಡಿಗ ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ್ದಾರೆ. “ಕಳೆದ 40 ವರ್ಷಗಳಿಂದ ಕಾಶಿಯಲ್ಲಿಯೇ ನೆಲೆಸಿದ್ದೇನೆ. ಮೊದಲು ಸ್ವಚ್ಛತೆ, ಅಭಿವೃದ್ಧಿಯಾಗಿರಲಿಲ್ಲ. ಕಾಶಿಗೆ ಶೇ.90ರಷ್ಟು ಜನ ಬರುವುದು ದಕ್ಷಿಣ ಭಾರತದಿಂದಲೇ. ಈಗ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಘಾಟ್‌ಗಳನ್ನು ಸ್ವಚ್ಛಗೊಳಿಸಿ, ಭಕ್ತರಿಗೆ ಅನುಕೂಲ ಮಾಡಲಾಗಿದೆ. ಮೋದಿ ಅವರಿರದಿದ್ದರೆ ವಾರಾಣಸಿ ನಾಶವಾಗುತ್ತಿತ್ತು” ಎಂದಿದ್ದಾರೆ. ಕನ್ನಡಿಗರು ಮಾತ್ರವಲ್ಲ, ಕಾಶಿಯ ಬಹುತೇಕ ನಾಗರಿಕರು ಕೂಡ ಮೋದಿ ಅವರ ಆಡಳಿತವನ್ನು ಮೆಚ್ಚಿದ್ದಾರೆ.

ಮೋದಿ ವಿರುದ್ಧ ಕಣಕ್ಕಿಳಿದ ನಾಯಕರಿವರು

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಇದನ್ನೂ ಓದಿ: Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Continue Reading

ದೇಶ

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Phalodi Satta Pazar: ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ.

VISTARANEWS.COM


on

Phalody Satta Bazar
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) 6 ಹಂತದ ಮತದಾನ ಮುಕ್ತಾಯಗೊಂಡಿದೆ. ಏಳನೇ ಅಥವಾ ಕೊನೆಯ ಹಂತದ ಮತದಾನವು ಜೂನ್‌ 1ರಂದು ನಡೆಯಲಿದೆ. ಇದಕ್ಕಾಗಿ ಚುನಾವಣೆ ಆಯೋಗ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಫಲೋಡಿ ಸಟ್ಟಾ ಬಜಾರ್‌ ಮಾರ್ಕೆಟ್‌ (Phalodi Satta Bazar) ಸಂಸ್ಥೆಯು ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಲೇಟೆಸ್ಟ್ ಸಮೀಕ್ಷಾ ವರದಿ ಪ್ರಕಟಿಸಿದೆ. ನೂತನ ಸಮೀಕ್ಷಾ ವರದಿ ಪ್ರಕಾರ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ 325-330 ಸೀಟುಗಳು ಲಭಿಸುವುದು ನಿಶ್ಚಿತ ಎಂದು ತಿಳಿಸಿದೆ.

ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

SP-Congress seat sharing final in Uttar Pradesh and INDIA Bloc intact

ಯಾವ ರಾಜ್ಯದಲ್ಲಿ ಬಿಜೆಪಿಗೆ ಎಷ್ಟು ಕ್ಷೇತ್ರ?

ರಾಮಮಂದಿರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 63-65 ಕ್ಷೇತ್ರಗಳು ಲಭಿಸಲಿವೆ ಎಂಬುದಾಗಿ ಸಮೀಕ್ಷೆ ತಿಳಿಸಿದೆ. ಇನ್ನು, ಗುಜರಾತ್‌ 25, ಮಧ್ಯಪ್ರದೇಶ 28-29, ದೆಹಲಿ 5-6, ಪಂಜಾಬ್‌ 2-3, ಹಿಮಾಚಲ ಪ್ರದೇಶ 4, ಛತ್ತೀಸ್‌ಗಢ 10-11, ಉತ್ತರಾಖಂಡ 5, ಬಿಹಾರ 28-29, ತೆಲಂಗಾಣ 8-9, ಜಾರ್ಖಂಡ್‌ 10-11 ಸೀಟುಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಕಳೆದ ಬಾರಿಗಿಂತ ಹೆಚ್ಚಿನ ಕ್ಷೇತ್ರಗಳು ಬರಲಿವೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ ಎಂದು ವರದಿ ತಿಳಿಸಿದೆ.

ಫಲೋಡಿ ಸಟ್ಟಾ ಮಾರುಕಟ್ಟೆ ಇತಿಹಾಸವೇನು?

ಚುನಾವಣಾ ಫಲಿತಾಂಶದ ಭವಿಷ್ಯವಾಣಿಗಾಗಿ ರಾಜಸ್ಥಾನ ಮೂಲಕ ಫಲೋಡಿ ಸಟ್ಟಾ ಬಜಾರ್‌ನತ್ತ ಎಲ್ಲರೂ ಮುಖಮಾಡಿದ್ದಾರೆ. ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು. ಕಾನೂನೂ ಬಾಹಿರವಾಗಿದ್ದರೂ ಕ್ರಿಕೆಟ್‌, ಐಪಿಎಲ್‌ ಸಂದರ್ಭದಲ್ಲಿ ಇಲ್ಲಿ ಅತಿ ಹೆಚ್ಚಾಗಿ ಬೆಟ್ಟಿಂಗ್‌ ನಡೆಯುತ್ತದೆ ಎಂಬ ಆರೋಪ ಕೇಳಿಬರುತ್ತದೆ.

ಇದನ್ನೂ ಓದಿ: Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Continue Reading

ದೇಶ

Wagah Border: ಕಾಂಗ್ರೆಸ್‌ ಗೆದ್ದರೆ ಭಾರತ-ಪಾಕ್ ಗಡಿ ಓಪನ್‌ ಎಂದ ಪಂಜಾಬ್‌ ಮಾಜಿ ಸಿಎಂ ಚನ್ನಿ; Video ವೈರಲ್

Wagah Border: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಭಾರತ ಹಾಗೂ ಪಾಕಿಸ್ತಾನ ನಡುವಿನ, ಅಮೃತಸರದಲ್ಲಿರುವ ವಾಘಾ ಗಡಿಯನ್ನು ಓಪನ್‌ ಮಾಡಲಾಗುವುದು ಎಂದು ಪಂಜಾಬ್‌ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಹಿರಿಯ ನಾಯಕ ಚರಣ್‌ಜೀತ್‌ ಸಿಂಗ್‌ ಚನ್ನಿ ಹೇಳಿದ್ದಾರೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Wagah Border
Koo

ಚಂಡೀಗಢ: ಲೋಕಸಭೆ ಚುನಾವಣೆಯ (Lok Sabha Election 2024) 6ನೇ ಹಂತದ ಮತದಾನ ಮುಗಿದು, ಚುನಾವಣೆ ಕೊನೆಯ ಹಂತಕ್ಕೆ ಬಂದರೂ ರಾಜಕೀಯ ನಾಯಕರ ಹೇಳಿಕೆಗಳು ಮಾತ್ರ ತಣ್ಣಗಾಗಿಲ್ಲ. ಜಾತಿ, ಧರ್ಮ, ಪಾಕಿಸ್ತಾನ ಸೇರಿ ಹಲವು ವಿಷಯಗಳ ಕುರಿತು ರಾಜಕೀಯ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಾರೆ. ಇದರ ಬೆನ್ನಲ್ಲೇ, ಪಂಜಾಬ್‌ ಮಾಜಿ ಮುಖ್ಯಮಂತ್ರಿ, ಜಲಂಧರ್‌ ಕಾಂಗ್ರೆಸ್‌ ಅಭ್ಯರ್ಥಿ ಚರಣ್‌ಜೀತ್‌ ಸಿಂಗ್‌ ಚನ್ನಿ (Charanjit Singh Channi) ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. “ದೇಶದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ-ಪಾಕಿಸ್ತಾನ ನಡುವಿನ ವಾಘಾ ಗಡಿಯನ್ನು (Wagah Border) ಸಂಚಾರಕ್ಕೆ ಮುಕ್ತಗೊಳಿಸಲಾಗುವುದು” ಎಂಬುದಾಗಿ ಅವರು ಹೇಳಿದ್ದಾರೆ.

ಪಂಜಾಬ್‌ನ ಜಲಂಧರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಚರಣ್‌ಜೀತ್‌ ಸಿಂಗ್‌ ಚನ್ನಿ ಮಾತನಾಡಿದರು. “ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಯಾದರೆ, ವಾಘಾ ಗಡಿಯನ್ನು ಓಪನ್‌ ಮಾಡುತ್ತೇವೆ. ಇದರಿಂದ ಪಾಕಿಸ್ತಾನದ ನಾಗರಿಕರು ಪಂಜಾಬ್‌ಗೆ ಬಂದು ವೈದ್ಯಕೀಯ ಚಿಕಿತ್ಸೆ ಪಡೆದುಕೊಂಡು ಹೋಗಬಹುದಾಗಿದೆ. ಇದರಿಂದ ಜಲಂಧರ್‌ ಮೆಡಿಕಲ್‌ ಟೂರಿಸಂ ತಾಣವನ್ನಾಗಿ ಬದಲಾಯಿಸಲು ಸಾಧ್ಯವಾಗುತ್ತದೆ” ಎಂಬುದಾಗಿ ಹೇಳಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಚರಣ್‌ಜೀತ್‌ ಸಿಂಗ್‌ ಚನ್ನಿ ಅವರು ಪಾಕಿಸ್ತಾನ ಗಡಿ ಕುರಿತು ಮಾತನಾಡುವ ಒಂದು ದಿನ ಮೊದಲು ಪಂಜಾಬ್‌ನಲ್ಲಿ ನರೇಂದ್ರ ಮೋದಿ ರ‍್ಯಾಲಿ ನಡೆಸಿದ್ದರು. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಉಗ್ರವಾದವನ್ನು ಪೋಷಣೆ ಮಾಡುವ, ಭಾರತದ ಮೇಲೆ ದಾಳಿ ನಡೆಸುವ ಪಾಕಿಸ್ತಾನಕ್ಕೆ ಸ್ನೇಹದ ಸಂದೇಶಗಳನ್ನು ರವಾನಿಸುತ್ತದೆ. ಆದರೆ, ನಾವು ಮಾತ್ರ ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ನೀಡಿದ್ದೇವೆ. ಆ ಮೂಲಕ ದೇಶದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸಿದೇವೆ” ಎಂಬುದಾಗಿ ಮೋದಿ ಹೇಳಿದ್ದರು.

ಕೆಲ ದಿನಗಳ ಹಿಂದಷ್ಟೇ ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಪ್ರತಿಕ್ರಿಯಿಸಿದ್ದ ಅವರು, “ಇದು ಬಿಜೆಪಿಯ ಚುನಾವಣಾ ಸ್ಟಂಟ್”‌ ಎಂದು ಆರೋಪಿಸಿದ್ದರು. ಮೇ 4ರಂದು ಪೂಂಚ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ವಾಯುಪಡೆಯ ಒಬ್ಬ ಯೋಧ ಹುತಾತ್ಮರಾಗಿದ್ದರು. “ಚುನಾವಣೆ ಸಮೀಪಿಸುತ್ತಲೇ ಬಿಜೆಪಿಯು ಜನರ ಜೀವನದ ಜತೆ ಆಟವಾಡುತ್ತದೆ. ಉಗ್ರರ ದಾಳಿ ಪ್ರಕರಣಗಳು ಬಿಜೆಪಿಯ ಕುತಂತ್ರದ ಭಾಗವಾಗಿವೆ” ಎಂದಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಚರಣ್‌ಜೀತ್‌ ಸಿಂಗ್‌ ಚನ್ನಿ ಅವರಿಗೆ ಚುನಾವಣೆ ಆಯೋಗವೂ ಖಡಕ್‌ ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: Parliament Flashback: 1996ರ ಬಳಿಕ ರಾಜ್ಯದ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ

Continue Reading

Lok Sabha Election 2024

Liquor ban : ಐದು ದಿನ ಮದ್ಯ ಮಾರಾಟಕ್ಕೆ ಬ್ರೇಕ್! ಜೂನ್‌ 1ರಿಂದ ಸಿಗಲ್ಲ ಎಣ್ಣೆ

Liquor ban: ಬೆಂಗಳೂರಿನಲ್ಲಿ ಜೂನ್‌ ಮೊದಲ ವಾರ ಎಣ್ಣೆ (ಮದ್ಯ) ಬೇಕು ಸಿಗುವುದಿಲ್ಲ. ಯಾಕೆಂದರೆ ಜೂ. 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೀಗಾಗಿ ಐದು ದಿನ ಮೊದಲೇ ಎಣ್ಣೆ ಪ್ರಿಯರು ಮದ್ಯ ಖರೀದಿಸಿ ಸ್ಟಾಕ್‌ ಮಾಡಲು (Dry day order) ಮುಂದಾಗಿದ್ದಾರೆ.

VISTARANEWS.COM


on

By

Liquor ban Dry day
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೊನ್ನೆ ಬೆಂಗಳೂರು ಜಿಲ್ಲಾಡಳಿತದ ಅದೊಂದು ಆದೇಶಕ್ಕೆ ಮದ್ಯ ಪ್ರಿಯರು ಮದ್ಯದಂಗಡಿಗಳಿಗೆ ಮುಗಿಬೀಳುತ್ತಿದ್ದಾರೆ. 5 ದಿನಗಳ ಕಾಲ ಮದ್ಯದಂಗಡಿಗಳು ಕ್ಲೋಸ್‌‌ (Liquor ban) ಆಗುವ ಕಹಿ ಸುದ್ದಿಯನ್ನು ಕೇಳಿದ್ದೆ ತಡ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳಲು ಮುಂದಾಗುತ್ತಿದ್ದಾರೆ.

ಅಂದಹಾಗೇ ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ರಾಜಧಾನಿ ಬೆಂಗಳೂರಲ್ಲಿ ಒಂದು ವಾರದ ಕಾಲ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಮತ ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧ (Liquor Bandh) ಮಾಡಿ ಮದ್ಯ ಮಾರಾಟ ರಹಿತ ದಿನಗಳೆಂದು (Dry day) ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯಲಿದೆ. ಹೀಗಾಗಿ ಜೂನ್ 1ರ ಸಂಜೆ 4 ಗಂಟೆಯಿಂದ ಜೂನ್ 3 ರವರೆಗೆ ಬಾರ್ ಬಂದ್ ಬಂದ್‌ ಆಗಲಿದೆ. ಅದೇ ರೀತಿ, ಜೂನ್ 4 ರಂದು ದೇಶದಾದ್ಯಂತ ನಡೆದಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಇದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಇನ್ನು ಜೂನ್ 6 ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಆ ದಿನವು ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ. ಹೀಗಾಗಿ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳೋಕೆ ಮುಗಿಬೀಳುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Snake
ಕರ್ನಾಟಕ4 hours ago

Snake: ಸ್ಟ್ಯಾಂಡ್‌ನಲ್ಲಿಟ್ಟಿದ್ದ ಚಪ್ಪಲಿಯೊಳಗೆ ಕೂತಿದ್ದ ಬುಸ್‌ ಬುಸ್‌ ನಾಗಪ್ಪ; ಸ್ವಲ್ಪ ಹುಷಾರಾಗಿರ‍್ರಪ್ಪ! Video ಇಲ್ಲಿದೆ

Varanasi
ದೇಶ5 hours ago

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Virat kohli
ಕ್ರೀಡೆ5 hours ago

Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

IPL 2024 Final
ಪ್ರಮುಖ ಸುದ್ದಿ6 hours ago

IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

The Kapil Sharma Show
ದೇಶ6 hours ago

Physical Abuse: ಕಪಿಲ್‌ ಶರ್ಮಾ ಶೋನಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

IPL 2024
ಕ್ರೀಡೆ6 hours ago

IPL 2024 Final : ಐಪಿಎಲ್ ಫೈನಲ್​​ನಲ್ಲಿ ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​

Hardik Pandya
ಕ್ರೀಡೆ7 hours ago

Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

Rain News
ಕರ್ನಾಟಕ7 hours ago

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Phalody Satta Bazar
ದೇಶ7 hours ago

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Shivamogga News
ಕರ್ನಾಟಕ8 hours ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು12 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌