Kaatera  Movie: `ಕಾಟೇರ' ಸಿನಿಮಾಗೆ 100 ದಿನ: ಕೇಕ್‌ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ! - Vistara News

ಸ್ಯಾಂಡಲ್ ವುಡ್

Kaatera  Movie: `ಕಾಟೇರ’ ಸಿನಿಮಾಗೆ 100 ದಿನ: ಕೇಕ್‌ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ!

Kaatera  Movie: ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.ಒಟಿಟಿ ಮಾತ್ರವಲ್ಲದೇ ಕಿರುತೆರೆಯಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿದೆ. ಈ ಖುಷಿಗೆ ತರುಣ್ ಸುಧೀರ್ ತಮ್ಮ ಚಿತ್ರತಂಡ ಜತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

VISTARANEWS.COM


on

Kaatera  Movie 100 days of celebration
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ `ಕಾಟೇರ’ ಸಿನಿಮಾ (Kaatera Movie) ಬಾಕ್ಸಾಫೀಸ್‌ನಲ್ಲಿ 200 ಕೋಟಿ ರೂ.ಅಧಿಕ ಕಲೆಕ್ಷನ್ ಮಾಡಿದೆ. ಆದರೆ ಇಲ್ಲಿಯವರೆಗೆ ಸಿನಿಮಾ ತಂಡ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ಈ ಬಗ್ಗೆ ಟ್ರೇಡ್ ಎಕ್ಸ್‌ಪರ್ಟ್‌ಗಳ ಲೆಕ್ಕಾಚಾರ ಹೊರಬಿದ್ದಿತ್ತು. ಇದೀಗ ʻಕಾಟೇರʼ ಚಿತ್ರ ನೂರು ದಿನಗಳನ್ನು ಪೂರೈಸಿದೆ. ಒಟಿಟಿ ಮಾತ್ರವಲ್ಲದೇ ಕಿರುತೆರೆಯಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿದೆ. ಈ ಖುಷಿಗೆ ತರುಣ್ ಸುಧೀರ್ ತಮ್ಮ ಚಿತ್ರತಂಡ ಜತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.

ಈ ಸಂಭ್ರಮದಲ್ಲಿ ದರ್ಶನ್‌ ಭಾಗಿಯಾಗಿಲ್ಲ. ಇತ್ತೀಚೆಗಷ್ಟೇ ಕೈ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಕಾರಣಕ್ಕೆ ದರ್ಶನ್‌ ಭಾಗಿಯಾಗಿಲ್ಲ. ಉಳಿದಂತೆ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಹಾಗೂ ದರ್ಶನ್ ಅವರಿಗೆ ʻಮಿಸ್ಟರ್ ಐರಾವತʼ ಚಿತ್ರ ನಿರ್ದೇಶಿಸಿದ್ದ, ಧ್ರುವಾ ಸರ್ಜಾ ಅವರಿಗೆ ಮಾರ್ಟಿನ್ ಚಿತ್ರವನ್ನ ಸದ್ಯ ನಿರ್ದೇಶಿಸಿರುವ ಎ.ಪಿ.ಅರ್ಜುನ್, ʻಕಾಟೇರʼ ಚಿತ್ರದ ನೂರು ದಿನಗಳ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.

ಕನ್ನಡದಲ್ಲಿ ಮಾತ್ರ ʻಕಾಟೇರʼ ಸಿನಿಮಾ ರಿಲೀಸ್‌ ಆಗಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡಿದ್ದು ಹೆಮ್ಮೆಯ ವಿಚಾರ ಎನ್ನುತ್ತಿದ್ದಾರೆ ಫ್ಯಾನ್ಸ್‌. 72 ಮಲ್ಟಿಪ್ಲೆಕ್ಸ್‌ಗಳು ಹಾಗೂ 406 ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಒಂದು ವಾರಕ್ಕೆ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿತ್ತು.

ದರ್ಶನ್ ಅವರಿಗೆ ಈ ಹಿಂದೆ ತರುಣ್​ ಸುಧೀರ್​ ರಾಬರ್ಟ್ ಸಿನಿಮಾ ನಿರ್ದೇಶಿಸಿದ್ದರು. ಇದೀಗ ಅವರು ಮತ್ತೊಮ್ಮೆ ದರ್ಶನ್ ಆ್ಯಕ್ಷನ್​ ಕಟ್ ಹೇಳಿದ್ದಾರೆ. ದರ್ಶನ್​ಗೆ ಜೋಡಿಯಾಗಿ ಹಿರಿಯ ನಟಿ ಮಾಲಾಶ್ರೀ ಮಗಳು ಆರಾಧನಾ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಶ್ರುತಿ ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ, ಜಗಪತಿ ಬಾಬು ಸೇರಿದಂತೆ ಇನ್ನೂ ಅನೇಕರು ಮಿಂಚಿದ್ದರು.

ಇದನ್ನೂ ಓದಿ: Kaatera  Movie: ʻಕಾಟೇರʼ ಒಟಿಟಿ ಎಂಟ್ರಿಗೆ ಮುಹೂರ್ತ ಫಿಕ್ಸ್‌!

ಡೆವಿಲ್‌ ಆಗಿ ದರ್ಶನ್‌

ಮುಂದೆ ದರ್ಶನ್‌ ಅವರು ಡೆವಿಲ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ʻಡೆವಿಲ್’ ಪಕ್ಕಾ ಆ್ಯಕ್ಷನ್ ಎಂಟರ್‌ಟೈನರ್ ಸಿನಿಮಾ ಎಂದು ನಿರ್ದೇಶಕರು ಈಗಾಗಲೇ ಹೇಳಿದ್ದಾರೆ. ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ ಈಗಾಗಲೇ ರಿಲೀಸ್‌ ಆಗಿದೆ. ಮಿಲನಾ ಪ್ರಕಾಶ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ. ‘ತಾರಕ್’ ಬಳಿಕ ದರ್ಶನ್- ಪ್ರಕಾಶ್ ಜೋಡಿಯ ಎರಡನೇ ಸಿನಿಮಾ ಇದು. ದರ್ಶನ್‌ ಕೂಡ ರಗಡ್‌ ಆಗಿ ಕಂಡಿದ್ದಾರೆ. ಡೆವಿಲ್’ ಚಿತ್ರಕ್ಕೆ ಕೆಲವು ತಿಂಗಳ ಹಿಂದೆ ಸ್ಕ್ರಿಪ್ಟ್ ಪೂಜೆ ನಡೆದಿತ್ತು. ಕೆಲವು ಎಡಿಟ್ ಮಾಡಿದ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಇದು ‘ಡೆವಿಲ್’ ಚಿತ್ರದ ಪೋಸ್ಟರ್ ಎಂದು ಹೇಳಲಾಗಿತ್ತು. ಆದರೆ, ಇದು ನಕಲಿ ಪೋಸ್ಟರ್ ಎಂದು ತಂಡ ಸ್ಪಷ್ಟನೆ ನೀಡಿತ್ತು.

ಶ್ರೀ ಜೈಮಾತಾ ಕಂಬೈನ್ಸ್ ಹಾಗೂ ವೈಷ್ಣೋ ಸ್ಟುಡಿಯೋ ಸಂಸ್ಥೆಗಳು ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ. ಇನ್ನು ನಾಯಕಿ ಯಾರು? ಬೇರೆ ಯಾರೆಲ್ಲಾ ತಾರಾಗಣದಲ್ಲಿ ಇರುತ್ತಾರೆ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಸಿಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

Kantara Movie: ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ ಮೊತ್ತಗೆ ಸೇಲ್‌ ಆಗಿರುವುದು ಮಹತ್ವದ ಸಂಗತಿಯಾಗಿದೆ.

VISTARANEWS.COM


on

Kantara Movie
Koo

ಬೆಂಗಳೂರು: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲಿ ಭರ್ಜರಿ ಹೆಸರು ಗಳಿಸಿದ ಬೆನ್ನಲ್ಲೇ ರಿಷಬ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್‌ 1‌ (Kantara Movie) (ಪ್ರಿಕ್ವೆಲ್) ಚಿತ್ರೀಕರಣಕ್ಕೆ ಇಳಿದಿದ್ದಾರೆ. ಹಾಗಾಗಿ, ಕಾಂತಾರ ಚಾಪ್ಟರ್‌ 1 ಕುತೂಹಲ ಹೆಚ್ಚಿಸಿದೆ. ಇದರ ಬೆನ್ನಲ್ಲೇ, ಕಾಂತಾರ ಸಿನಿಮಾದ ಡಿಜಿಟಲ್‌ ಹಕ್ಕುಗಳು (Digital Rights) ಅಮೆಜಾನ್‌ ಪ್ರೈಮ್‌ ಪಾಲಾಗಿದ್ದು, ಸುಮಾರು 125 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ, ಸಿನಿಮಾ ಬಿಡುಗಡೆಗೆ ಮೊದಲೇ ಕಾಂತಾರ ಭರ್ಜರಿ ಆದಾಯ ಗಳಿಸಿದಂತಾಗಿದೆ.

ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

Rishab Shetty

ಚಿತ್ರೀಕರಣ ಆರಂಭ

ಕೆಲ ದಿನಗಳ ಹಿಂದಷ್ಟೇ ರಿಷಬ್‌ ಶೆಟ್ಟಿ ಅವರು ಕಾಂತಾರ 2 ಚಿತ್ರೀಕರಣ ಆರಂಭವಾಗಿದೆ ಎಂದು ಹೇಳಿದ್ದರು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೆಯುತ್ತಿವೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದರು.

“ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತಾರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನೂ ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ” ಎಂದಿದ್ದರು.

ಕಾಂತಾರ ಶೂಟಿಂಗ್‌ಗಾಗಿ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Continue Reading

ಸಿನಿಮಾ

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

VISTARANEWS.COM


on

Kannada New Movie Sambavami Yuge Yuge 4K Motion Poster
Koo

ಬೆಂಗಳೂರು: ಶ್ರೀಕೃಷ್ಣ ಭಗವದ್ಗೀತೆಯಲ್ಲಿ “ಸಂಭವಾಮಿ ಯುಗೇಯುಗೇ” (Kannada New Movie) ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ.

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ‌. ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್ ಚಂದ್ರಶೇಖರ್ ಶೆಟ್ಟಿ ಅವರದೆ.

ಪಕ್ಕಾ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು.

ಇದನ್ನೂ ಓದಿ: Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.

“ಸಂಭಾವಮಿ ಯುಗೇಯಗೇ” ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಪುರಾನ್ ಶೆಟ್ಟಿಗಾರ್ ಸಂಗೀತ ನೀಡಿದ್ದಾರೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಿಶಾ ರಜಪೂತ್ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರಗೌಡ ಪ್ರಮುಖಪಾತ್ರದಲ್ಲಿದ್ದಾರೆ. ಅಭಯ್ ಪುನೀತ್, ಬಾಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಸ್ಯಾಂಡಲ್ ವುಡ್

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

IPL 2024: ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

VISTARANEWS.COM


on

IPL 2024 The people paid revenge for the controversial post ashwini Puneeth Rajkumar
Koo

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ (KKR), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (SRH) ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿವೆ. ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಇದೆಲ್ಲದರ ನಡುವೆ ಗಜಪಡೆ ಪೋಸ್ಟ್ ಟ್ರೆಂಡ್ ಆಗುತ್ತಿದೆ. ಟೂರ್ನಿ ಆರಂಭದಲ್ಲಿ ಆರ್‌ಸಿಬಿ ತಂಡ ಕಳಪೆ ಪ್ರದರ್ಶನ ತೋರಿತ್ತು. ಹಾಗಾಗಿ ಭಾರೀ ಟೀಕೆ, ಟ್ರೋಲ್ ಎದುರಿಸುವಂತಾಗಿತ್ತು. ಅಂತಹ ಸಮಯದಲ್ಲೇ ಕಿಡಿಗೇಡಿ ಒಬ್ಬ ಇದಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರು ಎಳೆದು ತಂಡ ಅವಹೇಳಕಾರಿ ಪೋಸ್ಟ್ ಮಾಡಿದ್ದ. ಇದೀಗ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ದೊಡ್ಮನೆಯ ಅದೃಷ್ಟ ದೇವತೆ ಎಂದು ಜನರು ಟ್ವೀಟ್‌ ಮಾಡುತ್ತಿದ್ದಾರೆ.

ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅತಿಥಿಯಾಗಿ ಹೋಗಿದ್ದರು. “ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದರಿಂದಲೇ ಆರ್‌ಸಿಬಿ ಪದೇ ಪದೆ ಸೋಲುತ್ತಿದೆ” ಎಂದು ಗಜಪಡೆ ಟ್ವಿಟರ್‌ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಸದ್ಯ ಆರ್‌ಸಿಬಿ ತಂಡ ಪ್ಲೇ ಆಫ್‌ಗೆ ಹೋಗುವುದು ಖಚಿತವಾಗುತ್ತಿದ್ದಂತೆ ಹಲವರು ಅವಹೇಳಕಾರಿ ಪೋಸ್ಟ್ ನೆನಪಿಸಿ ತಿರುಗೇಟು ನೀಡುತ್ತಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಏನಿದು ಘಟನೆ?

ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್‌ ಕಾನೂನು ಕ್ರಮ ಮುಂದಾಗಿದ್ದರು.

ಕೀಳುಮಟ್ಟದ ಟ್ವೀಟ್‌ ಬಗ್ಗೆ ಸಮಾಧಾನವಾಗಿಯೇ ಉತ್ತರ ಕೊಟ್ಟಿದ್ದ ದೊಡ್ಮನೆ ಸೊಸೆ!

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ʻʻಬೇರೆ ಆಯ್ಕೆ ಇಲ್ಲ.. ಜೀವನ ಅಂದುಕೊಂಡಷ್ಟು ಸುಲಭವಿಲ್ಲ, ಜೀವನ ಹೇಗೋ ನಡೆದುಕೊಂಡು ಹೋಗುತ್ತಿದೆ. ಕಷ್ಟ ಇದ್ದರೂ ಎಲ್ಲವನ್ನು ಸ್ವೀಕರಿಸಬೇಕುʼʼಎಂದು ಹೇಳಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

Kannada New Movie: ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

VISTARANEWS.COM


on

Kannada New Movie anartha cinema teaser Out
Koo

ಬೆಂಗಳೂರು: ’ಬಲಹೀನತೆಯಿಂದ ಕ್ರೂರತನ ಹುಟ್ಟುತ್ತದೆ’ ಎಂಬ ವಾಕ್ಯವನ್ನು ರೋಮ್ ಫಿಲಾಸಫರ್ ಅಂದೇ ಹೇಳಿದ್ದರು. ಇಂತಹುದೆ ಅಂಶಗಳನ್ನು ಹೆಕ್ಕಿಕೊಂಡು ’ಅನರ್ಥ’ (Kannada New Movie) ಎನ್ನುವ ಸಿನಿಮಾದ ಅಡಿಬರಹಕ್ಕೆ ಬಳಸಲಾಗಿದೆ. ಸೆನ್ಸಾರ್‌ನಿಂದ ಪ್ರಶಂಸೆ ಪಡೆದುಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಸಾಂಗ್, ರೇಣುಕಾಂಬ ಸ್ಟುಡಿಯೊದಲ್ಲಿ ಕಿಕ್ಕಿರಿದ ಜನರು ಎದುರು ಲೋಕಾರ್ಪಣೆಗೊಂಡಿತು. ನಿರ್ದೇಶಕರು ಮಾಧ್ಯಮಮಿತ್ರರನ್ನು ಮುಖ್ಯ ಅತಿಥಿ ಎಂದು ಪರಿಗಣಿಸಿದ್ದರಿಂದ, ಹಿರಿಯ ಪತ್ರಕರ್ತರಿಂದ ಟೀಸರ್ ಹಾಗೂ ಸಹ ನಿರ್ಮಾಪಕಿ ಜೆ.ಅಂಜಲಿ ಪುತ್ರಿಯರಾದ ಕುಮಾರಿ ಜಯಕೀರ್ತಿ ಮತ್ತು ಜಯಕನ್ನಿಕ ಜಂಟಿಯಾಗಿ ಹಾಡನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು ʻʻಅವಕಾಶ್-ಆಕೃತಿ ಎರಡು ಪಾತ್ರಗಳ ಸುತ್ತ ಚಿತ್ರವು ಸಾಗುತ್ತದೆ. ಇಬ್ಬರು ಒಂದು ಮಟ್ಟಕ್ಕೆ ಪ್ರೀತಿಸಿರುತ್ತಾರೆ. ನಾವುಗಳು ಬ್ರೇಕ್‌ಅಪ್ ಎನ್ನುವ ಪದವನ್ನು ನಮ್ಮ ಮನಸ್ಸಿನಿಂದ ಅಳಿಸಿ ಹಾಕಿದ ನಂತರ, ಅಮವ್ಯಾಸೆಯ ದಿನ ಯಮಗಂಡ ಕಾಲದಲ್ಲಿ ಮದುವೆಯಾಗಲು ನಿರ್ಧರಿಸಿ ಒಬ್ಬರನ್ನೊಬ್ಬರು ಅರಿತುಕೊಳ್ಳಲು ಒಂದು ಸ್ಥಳಕ್ಕೆ ಹೋಗುತ್ತಾರೆ. ಅಲ್ಲಿಗೆ ಹೋದಾಗ ಏನಾಗುತ್ತದೆ. ನೋಡುಗರಿಗೆ ಊಹಿಸಲಾಗದ ತಿರುವುಗಳಿವೆ. ಕ್ಲೈಮಾಕ್ಸ್‌ದಲ್ಲಿ ಹೀಗೂ ಆಗಬಹುದು ಎನ್ನುವಲ್ಲಿಗೆ ಶುಭಂ ಬರುತ್ತದೆ. ನಮ್ಮ ಚಿತ್ರವು ಎಲ್ಲಾ ಕಮರ್ಷಿಯಲ್ ಸಿನಿಮಾಗಳ ಅಂಶಗಳನ್ನು ಹೊಂದಿದ್ದರೂ, ಒಂದು ಅಂಶವು ಖಂಡಿತ ಭಿನ್ನವಾಗಿದೆ. ಅದನ್ನು ತಿಳಿಯಲು ನೀವುಗಳು ಚಿತ್ರಮಂದಿರಕ್ಕೆ ಬನ್ನಿರೆಂದುʼʼ ಕೋರಿದರು.



ನಾಯಕನಾಗಬೇಕೆಂದು ಆಸೆ ಪಟ್ಟಿದ್ದೆ. ಉದ್ಯಮದಲ್ಲಿ ಯಶಸ್ಸು ಕಂಡು, ಈಗ ತೇಜಸ್ ಸಿನಿ ಕ್ರಿಯೇಶನ್ಸ್ ಮೂಲಕ ನಿರ್ಮಾಪಕನಾಗಿದ್ದೇನೆ ಎನ್ನುತ್ತಾರೆ ಶ್ರೀಧರ್.ಎನ್.ಸಿ.ಹೊಸಮನೆ. ನಟ ಮಂಡ್ಯರಮೇಶ್ ಬಳಿ ತರಭೇತಿ ಪಡೆದುಕೊಂಡಿರುವ ವಿಶಾಲ್ ಮಣ್ಣೂರು ನಾಯಕ. ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮಂಡ್ಯದ ವಿಹಾನಿ, ಕಿರುಚಿತ್ರಗಳಲ್ಲಿ ನಟಿಸಿ, ಈಗ ನಾಯಕಿಯಾಗಿ ಬಡ್ತಿಗೊಂಡಿದ್ದಾರೆ. ಉಳಿದಂತೆ ಸಿ.ವಿಜಯ್‌ಕುಮಾರ್, ರಕ್ಷಿತ್, ಗಣೇಶ್, ಪ್ರಸನ್ನ ಬಾಗೀನ, ಅರ್ಪಿತ ಮುಂತಾದವರು ನಟಿಸಿದ್ದಾರೆ.

ಸಾಹಿತ್ಯ-ಸಂಗೀತ ಡಾ.ವಿ.ನಾಗೇಂದ್ರಪ್ರಸಾದ್, ಛಾಯಾಗ್ರಹಣ ಕುಮಾರ್‌ಗೌಡನಾಗವಾರ, ಸಂಕಲನ ನಿಷಿತ್‌ಪೂಜಾರಿ-ವಿನಯ್, ಹಿನ್ನಲೆ ಶಬ್ದ ನಿತಿನ್, ಸಾಹಸ ಕುಂಗು ಫು ಚಂದ್ರು ಅವರದಾಗಿದೆ. ವಿತರಕ ಎಂ.ರಮೇಶ್ ಒಡೆತನದ ಅಕ್ಷರ ಫಿಲಿಂಸ್ ಮುಖಾಂತರ ಚಿತ್ರವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

Continue Reading
Advertisement
actor Chetan Kumar Ahimsa
ಸಿನಿಮಾ29 mins ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ47 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್51 mins ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್53 mins ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್1 hour ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ1 hour ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ2 hours ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ2 hours ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ21 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌