Lok Sabha Election 2024: ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂದು ಎಚ್‌ಡಿಕೆ ಹೇಳಿಲ್ಲ; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಆಕ್ರೋಶ - Vistara News

Lok Sabha Election 2024

Lok Sabha Election 2024: ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂದು ಎಚ್‌ಡಿಕೆ ಹೇಳಿಲ್ಲ; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಆಕ್ರೋಶ

Lok Sabha Election 2024: ತುರುವೇಕೆರೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ. “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ, ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ? ಎಂದು ಕಾಂಗ್ರೆಸ್‌ಗೆ ಜೆಡಿಎಸ್‌ ತಿರುಗೇಟು ನೀಡಿದೆ.

VISTARANEWS.COM


on

HD Revanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ತುಮಕೂರಿನ ತುರವೇಕೆರೆಯಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಪ್ರಚಾರ ಭಾಷಣ ಮಾಡುವ ವೇಳೆ ಆಡಿದ ಮಾತುಗಳು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. “ಗ್ಯಾರಂಟಿಯಿಂದ (Congress Guarantee Scheme) ಹಳ್ಳಿಯ ತಾಯಂದಿರು ದಾರಿ ತಪ್ಪುತ್ತಿದ್ದಾರೆ” ಎಂಬ ಎಚ್‌ಡಿಕೆ ಹೇಳಿಕೆ ರಾಜ್ಯದಲ್ಲಿ ಸಂಚಲವನ್ನು ಸೃಷ್ಟಿಸಿದೆ. ಆದರೆ, ಇದರ ಬಗ್ಗೆ ಈಗ ಜೆಡಿಎಸ್‌ (JDS Karnataka) ಆಕ್ರೋಶವನ್ನು ಹೊರಹಾಕಿದ್ದು, ಇದೊಂದು ಸುಳ್ಳು ಸುದ್ದಿ. ಇಂತಹ ಹೇಳಿಕೆಯನ್ನು ಕುಮಾರಸ್ವಾಮಿ ನೀಡುತ್ತಾರೆಯೇ ಎಂದು ಪ್ರಶ್ನೆ ಮಾಡಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೆಡಿಎಸ್‌, ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆನ್ನಲಾದ ಹೇಳಿಕೆ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ. ಕುಮಾರಸ್ವಾಮಿ ಅವರು ಮಹಿಳೆಯರಿಗೆ ಸಾಕಷ್ಟು ಯೋಜನೆಗಳನ್ನು ಕೊಟ್ಟಿದ್ದಾರೆ ಎಂದು ಹೇಳಿದೆ.

ಜೆಡಿಎಸ್‌ ಪೋಸ್ಟ್‌ನಲ್ಲೇನಿದೆ?

• “ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ಕಾಂಗ್ರೆಸ್‌ ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರಿದಿದೆ.

• ತುರುವೇಕೆರೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ. “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ, ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ?

• 2018-19ರಲ್ಲಿ ಕಾಂಗ್ರೆಸ್‌ ಕರ್ನಾಟಕದ ವಿರೋಧ ಲೆಕ್ಕಿಸದೆ ರೈತರ 25,000 ಕೋಟಿ ರೂಪಾಯಿ ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ. ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ. ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸಿಗರೇ? ನಿಮಗೆ ನೆನಪಿಲ್ಲವೇ? ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ? ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ?

• ಕಾಂಗ್ರೆಸ್ ಮಾಡಿದ್ದೇನು? ಲಾಟರಿ ಕಿಂಗ್‌ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ಕಾಂಗ್ರೆಸ್‌ ಸರ್ಕಾರ. ಅಷ್ಟೇ ಏಕೆ? ಒಂದು ಕೈಯಲ್ಲಿ 2000 ರೂಪಾಯಿ ಕೊಟ್ಟು ಇನ್ನೊಂದು ಕೈಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಢೋಂಗಿ ಗ್ಯಾರಂಟಿ ಕಾಂಗ್ರೆಸ್ ಸರ್ಕಾರ! ಇಲ್ಲ ಎನ್ನಲು ಅವರಿಗೆ ಧೈರ್ಯ, ನೈತಿಕತೆ ಇದೆಯೇ?

• ಸ್ವಚ್ಛ ಮನಸ್ಸಿನ ಹಳ್ಳಿಗಳಲ್ಲಿ ಸುಪ್ರಭಾತದ ವೇಳೆಗೆ ದೇವಾಲಯದ ಘಂಟೆನಾದ ಮೊಳಗುತ್ತಿತ್ತು. ಉಷೋದಯಕ್ಕೆ ಮೊದಲೇ ಹಳ್ಳಿಗೆ ಹಳ್ಳಿಯೇ ಮಂಗಳಕರವಾಗಿ ಕಂಗೊಳಿಸುತ್ತಿತ್ತು. ತಾಯಂದಿರು ಮನೆಗಳ ಮುಂದೆ ರಂಗೋಲಿ ಬಿಡಿಸುತ್ತಿದ್ದರೆ, ಪುರುಷರು ಹೊಲ-ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಗ್ಯಾರಂಟಿಗಳು ಬಂದ ಮೇಲೆ ಏನಾಗಿದೆ? ತಾಯಂದಿರು ರಂಗೋಲಿ ಬಿಡಿಸುವ ಮುನ್ನವೇ ಕಿರಾಣಿ ಅಂಗಡಿಗಳಲ್ಲಿ, ಹಾದಿಬೀದಿಗಳ ಬಾರ್‌ಗಳಲ್ಲಿ ಮದ್ಯದ ಘಾಟು ಹೊಡೆಯುತ್ತಿದೆ. ತಾಯಂದಿರ ಸಬಲೀಕರಣ, ಆರ್ಥಿಕ ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಸೂರ್ಯೋದಕ್ಕೆ ಮೊದಲೇ ಮದ್ಯ ಮಾರಾಟ ಮಾಡುವುದೇ?

• ಕಾಂಗ್ರೆಸ್ ದಾರಿದ್ರ್ಯ ಎಲ್ಲಿಗೆ ಬಂದು ನಿಂತಿದೆ ನೋಡಿ.. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮದ್ಯಪಾನಕ್ಕೆ ಭಾರಿ ಪ್ರೋತ್ಸಾಹ ಕೊಡುವುದು ‘ಕಾಂಗ್ರೆಸ್ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ ಆಗಿದೆ. ಶ್ರೀಗಂಧ, ಸುಗಂಧದ ನಾಡಾಗಿರುವ ಕರ್ನಾಟಕವನ್ನು ಮದ್ಯದ ಬೀಡನ್ನಾಗಿಸುತ್ತಿದೆ. ಇದನ್ನು ಪ್ರಶ್ನಿಸಿದರೆ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಹಾಗೆಯೇ?

ಇದನ್ನೂ ಓದಿ: Lok Sabha Election 2024: ಲೋಕಸಭಾ ಚುನಾವಣೆಗಾಗಿ ರಾಜ್ಯಕ್ಕೆ ಬಿ.ಎಲ್. ಸಂತೋಷ್ ಎಂಟ್ರಿ; ಇಂದು ಮಂಗಳೂರಲ್ಲಿ ಸಭೆ?

ಕುಮಾರಸ್ವಾಮಿ ಅವರು ಹೇಳಿದ್ದು.. ಗ್ಯಾರಂಟಿಗಳಿಂದ ತಾಯಂದಿರನ್ನು ದಿಕ್ಕು ತಪ್ಪಿಸುತ್ತಿದೆ ಎಂದು. ಉಚಿತ ಆರೋಗ್ಯ, ಉಚಿತ ಶಿಕ್ಷಣ ನೀಡುವ ಬದಲು ಅಗ್ಗದ ರಾಜಕೀಯ ಲಾಭ ಮಾಡಿಕೊಳ್ಳುತ್ತಿದೆ ಎಂದು. ಕಾಂಗ್ರೆಸ್ ತನ್ನ ಪಾಪಗಳನ್ನು ಮುಚ್ಚಿಟ್ಟುಕೊಳ್ಳಲು ಸತ್ಯಕ್ಕೆ ಸುಳ್ಳಿನ ಮುಖವಾಡ ಹಾಕುತ್ತಿದೆ. ನಿಜಕ್ಕಾದರೆ, ದಾರಿ ತಪ್ಪುತ್ತಿರುವುದು ರಾಜ್ಯದ ಆರ್ಥಿಕತೆ, ಕರ್ನಾಟಕದ ಹೆಗ್ಗಳಿಕೆ, ಕರ್ನಾಟಕ ಪ್ರತಿಷ್ಠೆ.

ಹೆಚ್ಚುತ್ತಿರುವುದು ತಾಯಂದಿರ ಮೇಲಿನ ಸಾಲ. ಈ ವರ್ಷ 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಸಾಲ ಮಾಡುವ ಗುರಿ ಇಟ್ಟುಕೊಂಡಿದೆ ಈ ಸರ್ಕಾರ. ಆ ಸಾಲ ತೀರಿಸೋರು ಯಾರು? ಕಾಂಗ್ರೆಸ್ ತನ್ನ ಖಜಾನೆಯಿಂದ ತೀರಿಸುತ್ತದೆಯೇ?” ಎಂದು ಜೆಡಿಎಸ್‌ ಪ್ರಶ್ನೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Mallikarjun Kharge: ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಿದೆ ಎನ್ನುವ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ʼʼನಾವು ಇಲ್ಲಿಯ ತನಕ ಬುಲ್ಡೋಜರ್‌ ಬಳಸಿಲ್ಲ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಸ್ವತಃ ಪ್ರಧಾನಿಯೇ ನಿಯಮ ಉಲ್ಲಂಘಿಸುತ್ತಿದ್ದಾರೆ. ಅವರು ಜನರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

VISTARANEWS.COM


on

Mallikarjun Kharge
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕು ಹಂತದ ಮತದಾನ ಈಗಾಗಲೇ ಮುಗಿದಿದೆ. ಇನ್ನೂ ಮೂರು ಹಂತಗಳ ಮತದಾನ ಬಾಕಿ ಇದ್ದು, ನಾಯಕರ ಅಬ್ಬರದ ಪ್ರಚಾರ ಮುಂದುವರಿದಿದೆ. ಈ ಮಧ್ಯೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಿದೆ ಎನ್ನುವ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.

ʼʼನಾವು ಇಲ್ಲಿಯ ತನಕ ಬುಲ್ಡೋಜರ್‌ ಬಳಸಿಲ್ಲ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಸ್ವತಃ ಪ್ರಧಾನಿಯೇ ನಿಯಮ ಉಲ್ಲಂಘಿಸುತ್ತಿದ್ದಾರೆ. ಅವರು ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ಸರ್ಕಾರ ಬಂದ ನಂತರ, ನಮ್ಮ ಸಂವಿಧಾನದ ಪ್ರಕಾರ ಎಲ್ಲವನ್ನೂ ಸಂರಕ್ಷಿಸಲಾಗುವುದು, ನಾವು ಸಂವಿಧಾನವನ್ನು ಅನುಸರಿಸುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.

ಎನ್‌ಸಿಪಿ-ಎಸ್‌ಪಿ ನಾಯಕ ಶರದ್ ಪವಾರ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಮುಂಬೈಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ಮಹಾರಾಷ್ಟ್ರದಲ್ಲಿ ʼನಿಜವಾದ ಪಕ್ಷಗಳʼ ಬದಲು ಬಿಜೆಪಿಯನ್ನು ಬೆಂಬಲಿಸುವ ಬಣಗಳಿಗೆ ಪಕ್ಷದ ಚಿಹ್ನೆಗಳನ್ನು ನೀಡಿದ ಚುನಾವಣಾ ಆಯೋಗದ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

“ದ್ರೋಹ ಮತ್ತು ಪಿತೂರಿಯ ಆಧಾರದ ಮೇಲೆ ಮಹಾರಾಷ್ಟ್ರದ ಅಕ್ರಮ ‘ಮಹಾಯುತಿ’ ಸರ್ಕಾರವನ್ನು ರಚಿಸಲಾಗಿದೆ ಮತ್ತು ಸ್ವತಃ ಪ್ರಧಾನಿಯೇ ಅದನ್ನು ಬೆಂಬಲಿಸುತ್ತಿದ್ದಾರೆ. ಅವರು ಹೋದಲ್ಲೆಲ್ಲ ಜನರ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಾರೆ” ಎಂದು ಅವರು ಆರೋಪಿಸಿದ್ದಾರೆ. ”ನಿಜವಾದ ಪಕ್ಷಗಳಿಂದ ಚಿಹ್ನೆಯನ್ನು ಕಸಿದುಕೊಂಡು ಬಿಜೆಪಿ ಬೆಂಬಲಿತರಿಗೆ ನೀಡಲಾಗಿದೆ. ಇದು ಕೋರ್ಟ್‌ ಮತ್ತು ಚುನಾವಣಾ ಆಯೋಗದ ನಿರ್ಧಾರವಾಗಿದ್ದರೂ ಅವರಿಗೆ ಹೀಗೆ ಮಾಡಿ ಎನ್ನುವ ಸಲಹೆಯನ್ನು ಮೋದಿ ನೀಡುತ್ತಿದ್ದಾರೆʼʼ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ʼಇಂಡಿಯಾʼ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಖರ್ಗೆ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಮಹಾರಾಷ್ಟ್ರದ 48 ಕ್ಷೇತ್ರಗಳ ಪೈಕಿ ʼಇಂಡಿಯಾʼ ಮೈತ್ರಿಕೂಟ 46ರಲ್ಲಿ ಜಯ ದಾಖಲಿಸಲಿದೆ. ಇದನ್ನು ನಾವು ಹೇಳುತ್ತಿಲ್ಲ; ಬದಲಿಗೆ ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯನ್ನು ಸೋಲಿಸಿ ನಮ್ಮ ಮೈತ್ರಿಕೂಟ ಗೆಲುವಿನ ನಗೆ ಬೀರಲಿದೆʼʼ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷ ಒಂದಾಗಿ ಹೋರಾಟ ನಡೆಸುತ್ತಿದ್ದರೆ ಪಂಜಾಬ್‌ನಲ್ಲಿ ಕಾಂಗ್ರೆಸ್‌ ಮತ್ತು ಆಪ್‌ ಪರಸ್ಪರ ವಿರುದ್ಧವಾಗಿ ಸೆಣಸುತ್ತಿದೆ. ಈ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಕಾಂಗ್ರೆಸ್‌ ಅಧ್ಯಕ್ಷರು, “ಇದು ಪ್ರಜಾಪ್ರಭುತ್ವ, ಇದು ನಿರಂಕುಶ ಪ್ರಭುತ್ವವಲ್ಲ. ಬಿಜೆಪಿಯನ್ನು ಸೋಲಿಸಲು ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

ಮಹಾರಾಷ್ಟ್ರದ ಧುಲೆ, ದಿಂಡೊರಿ, ನಾಸಿಕ್‌, ಕಲ್ಯಾಣ್‌, ಪಲ್ಘರ್‌, ಭಿವಾಂಡಿ ಮತ್ತು ಥಾಣೆ ಸೇರಿದಂತೆ ಇತರ ರಾಜ್ಯಗಳ ಹಲವು ಕ್ಷೇತ್ರಗಳಲ್ಲಿ ಮೇ 20ರಂದು 5ನೇ ಹಂತದ ಮತದಾನ ನಡೆಯಲಿದೆ.

Continue Reading

ರಾಜಕೀಯ

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನ ಮಂತ್ರಿ (Prime Minister Of India) ಸ್ಥಾನವನ್ನು ಅಲಂಕರಿಸಿದ್ದಾರೆ. ಅವರಲ್ಲಿ ಕೆಲವರು ಮಾತ್ರ ಸುದೀರ್ಘಾವಧಿಗೆ ಪ್ರಧಾನಿಯಾಗಿದ್ದರು. ಯಾರು ಎಷ್ಟು ಅವಧಿಗೆ ಪ್ರಧಾನಮಂತ್ರಿಯಾಗಿದ್ದರು? ಈ ಕುರಿತ ದಾಖಲೆ ಇಲ್ಲಿದೆ.

VISTARANEWS.COM


on

By

Prime Minister of India
Koo

ಪ್ರತಿ ಬಾರಿಯೂ ಲೋಕಸಭಾ ಚುನಾವಣೆ (Lok sabha election) ಘೋಷಣೆಯಾದ ಬಳಿಕ ಮುಂದಿನ ಪ್ರಧಾನಿ (Prime Minister Of India) ಯಾರಾಗಬಹುದು ಎನ್ನುವ ಕುತೂಹಲವಂತೂ ಇದ್ದೇ ಇರುತ್ತದೆ.

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರೆಂದರೆ ಜವಾಹರ್ ಲಾಲ್ ನೆಹರೂ (Jawaharlal Nehru) , ಲಾಲ್ ಬಹಾದ್ದೂರ್ ಶಾಸ್ತ್ರೀ (Lal Bahadur Shastri), ಇಂದಿರಾ ಗಾಂಧಿ (Indira gandhi), ಮೊರಾರ್ಜಿ ದೇಸಾಯಿ (morarji desai), ಚರಣ್ ಸಿಂಗ್ (charan singh), ರಾಜೀವ್ ಗಾಂಧಿ (rajiv gandhi), ವಿಶ್ವನಾಥ್ ಪ್ರತಾಪ್ ಸಿಂಗ್ (vishwanath pratap singh), ಚಂದ್ರಶೇಖರ್ (chandra shekhar) , ಪಿ.ವಿ. ನರಸಿಂಹ ರಾವ್ (p.v. narasimha rao), ಅಟಲ್ ಬಿಹಾರಿ ವಾಜಪೇಯಿ (atal bihari vajpayee), ಎಚ್.ಡಿ. ದೇವೇಗೌಡ (h.d. deve gowda), ಇಂದರ್ ಕುಮಾರ್ ಗುಜ್ರಾಲ್ (inder kumar gujral), ಮನ್ ಮೋಹನ್ ಸಿಂಗ್ (manmohan singh), ನರೇಂದ್ರ ಮೋದಿ (narendra modi). ಇವರಲ್ಲಿ ಕೆಲವರು ಮಾತ್ರ ದೀರ್ಘಾವಧಿಗೆ ಪ್ರಧಾನಿ ಯಾಗಿದ್ದರು. ಅವರು ಯಾರು? ಇಲ್ಲಿದೆ ಮಾಹಿತಿ.


ಇಂದಿರಾ ಗಾಂಧಿ (1966ರಿಂದ1977, 1980ರಿಂದ1984)

ಜವಾಹರಲಾಲ್ ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಒಟ್ಟು 15 ವರ್ಷ 350 ದಿನಗಳ ಕಾಲ ಪ್ರಧಾನಿಯಾಗಿದ್ದರು. 1975ರಲ್ಲಿ ತುರ್ತುಪರಿಸ್ಥಿತಿಯ ಜಾರಿ, ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆ ಸೇರಿದಂತೆ ಹಲವು ದಿಟ್ಟ ಮತ್ತು ವಿವಾದಾತ್ಮಕ ನಿರ್ಧಾರಗಳಿಗೆ ಹೆಸರುವಾಸಿಯಾಗಿದ್ದರು. ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದು ಇಂದಿರಾ ಗಾಂಧಿ 1977ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಹೀನಾಯ ಹಿನ್ನಡೆ ಕಂಡು ಅಧಿಕಾರ ತ್ಯಜಿಸಬೇಕಾಯಿತು. ಆದರೆ 1980ರಲ್ಲಿ ಅವರು ಮತ್ತೆ ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಮರಳಿದರು. ಆದರೆ 1984ರಲ್ಲಿ ಸಿಖ್‌ ಭಯೋತ್ಪಾದನೆಗೆ ಬಲಿಯಾದರು.


ಅಟಲ್ ಬಿಹಾರಿ ವಾಜಪೇಯಿ (1996, 1998-2004)

ನುರಿತ ವಾಗ್ಮಿ ಮತ್ತು ದೂರದೃಷ್ಟಿಯ ನಾಯಕ, ಅಟಲ್ ಬಿಹಾರಿ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಒಮ್ಮೆ 13 ದಿನ, ಮತ್ತೊಮ್ಮೆ 13 ತಿಂಗಳಷ್ಟೇ ಅವರು ಪ್ರಧಾನಿಯಾಗಿದ್ದರು. ಆದರೆ 1998ರಿಂದ 2004ರ ಅವರು ಪೂರ್ಣಾವಧಿ ಪ್ರಧಾನಿಯಾಗಿದ್ದರು. ಒಂದೆಡೆ ಪರಮಾಣು ಪರೀಕ್ಷೆಯ ದಿಟ್ಟತನ ಮತ್ತು ಇನ್ನೊಂದೆಡೆ ಪಾಕಿಸ್ತಾನದೊಂದಿಗೆ ಶಾಂತಿಯನ್ನು ಬೆಳೆಸುವ, ಸಂದರ್ಭ ಬಂದಾಗ ಅದಕ್ಕೆ ಬುದ್ಧಿ ಕಲಿಸುವ ಅವರ ಉಪಕ್ರಮಗಳಿಗಾಗಿ ವಾಜಪೇಯಿ ಸದಾ ನೆನಪಿನಲ್ಲಿರುತ್ತಾರೆ. ಹೆದ್ದಾರಿ ನಿರ್ಮಾಣದ ಕ್ರಾಂತಿ ನಡೆದಿದ್ದು ಅವರ ಕಾಲದಲ್ಲಿ.


ಮನಮೋಹನ್ ಸಿಂಗ್ (2004-2014)

ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು ಒಟ್ಟು 10 ವರ್ಷಗಳ ಕಾಲ ಪ್ರಧಾನಿಯಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯು ಗಮನಾರ್ಹ ಆರ್ಥಿಕ ಸುಧಾರಣೆಗಳು ಮತ್ತು ಉದಾರೀಕರಣದ ಉಪಕ್ರಮಗಳಿಂದ ಗುರುತಿಸಲ್ಪಟ್ಟಿದೆ.


ನರೇಂದ್ರ ಮೋದಿ (2014ರಿಂದ ಈಗಿನವರೆಗೆ)

ಪ್ರಸ್ತುತ ಭಾರತದ ಪ್ರಧಾನಮಂತ್ರಿ ಆಗಿರುವ ನರೇಂದ್ರ ಮೋದಿ ಅವರು ಸತತ ಎರಡನೇ ಅವಧಿಯಲ್ಲಿದ್ದಾರೆ. ವರ್ಚಸ್ವಿ ನಾಯಕತ್ವಕ್ಕೆ ಹೆಸರುವಾಸಿಯಾದ ಅವರು ದೇಶದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದಾರೆ. ಇದೇ ವೇಳೆ ಅವರನ್ನು ವಿರೋಧಿಸುವವರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಪಾಕಿಸ್ತಾನಕ್ಕೆ ನಡುವ ಹುಟ್ಟಿಸಿದ ಕೀರ್ತಿ ಖ್ಯಾತಿ ಇವರಿಗಿದೆ. ನೋಟ್‌ ಬ್ಯಾನ್‌, ಜಿಎಸ್‌ಟಿ ಜಾರಿಯಂಥ ಆರ್ಥಿಕ ಸುಧಾರಣೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದೇಶಿ ನಾಯಕರೊಂದಿಗೆ ಮಾತುಕತೆ ನಡೆಸಿ ಶಾಂತಿ ನೆಲೆಸುವ ಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಎರಡನೇ ಅವಧಿಯು 2019ರಲ್ಲಿ ಪ್ರಾರಂಭವಾಯಿತು. ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳಿವೆ. ಆದರೆ ಮೋದಿ ಅವರು ಮೂರನೇ ಅವಧಿಯಲ್ಲಿ ಪ್ರಧಾನಿಯಾಗಿ ಪೂರ್ಣಾವಧಿ ಮುಗಿಸಿದರೂ ನೆಹರೂ ಮತ್ತು ಇಂದಿರಾ ಗಾಂಧಿ ಅವರ ಸುದೀರ್ಘ ಆಡಳಿತ ಅವಧಿಯ ದಾಖಲೆ ಹಾಗೆಯೇ ಮುಂದುವರಿಯುತ್ತದೆ. ಈ ದಾಖಲೆ ಮುರಿಯಬೇಕೆಂದರೆ ಮೋದಿ ನಾಲ್ಕನೇ ಬಾರಿಯೂ ಪ್ರಧಾನಿ ಆಗಬೇಕಾಗುತ್ತದೆ!

Continue Reading

Lok Sabha Election 2024

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Nitin Gadkari: ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ‍್ಯಾಲಿಯಲ್ಲಿ ಅವರು ಮಾತನಾಡಿದರು.

VISTARANEWS.COM


on

Nitin Gadkari
Koo

ಮುಂಬೈ: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಜೋರಾಗಿದೆ. ಈಗಾಗಲೇ 4 ಹಂತಗಳ ಮತದಾನ ಮುಗಿದಿದೆ. ಮೇ 20ರಂದು 5ನೇ ಹಂತದ ಮತದಾನ ನಡೆಯಲಿದೆ. ಈ ಮಧ್ಯೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಉತ್ತರಿಸಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ʼʼಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವನ್ನು ಯಾವ ಸರ್ಕಾರದಿಂದಲೂ ಬದಲಾಯಿಸಲು ಸಾಧ್ಯವಾಗದು. ಅದರಲ್ಲಿನ ಸೆಕ್ಷನ್‌ಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ತರಬಹುದಷ್ಟೆ. ಕಾಂಗ್ರೆಸ್ ಸಂವಿಧಾನವನ್ನು 80 ಬಾರಿ ತಿದ್ದುಪಡಿ ಮಾಡಿದೆ. ಅದರ ಹೊರತಾಗಿಯೂ, ನಾವು (ಬಿಜೆಪಿ) ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಕಾಂಗ್ರೆಸ್‌ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದು ಗಡ್ಕರಿ ವಾಗ್ದಾಳಿ ನಡೆಸಿದ್ದಾರೆ.

ʼʼಸಬ್‌ ಕ ಸಾಥ್‌, ಸಬ್‌ ಕ ವಿಕಾಸ್‌ʼ ಎನ್ನುವುದು ನರೆಂದ್ರ ಮೋದಿ ನೇತೃತ್ವದ ಸರ್ಕಾರದ ಧ್ಯೇಯ ವಾಕ್ಯ. ಅದರಂತೆ ಕೇಂದ್ರ ಸರ್ಕಾರ ಸಮಾಜದ ಪ್ರತಿಯೊಬ್ಬರಿಗೂ ಯೋಜನೆ ತಲುಪಿಸುವ ಕೆಲಸ ಮಾಡುತ್ತಿದೆ. ಬಡವರು, ಶೋಷಿತರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ಅವರಿಗಾಗಿ ವಿವಿಧ ಯೋಜನೆಗಳನ್ನೂ ಪ್ರಕಟಿಸಲಾಗಿದೆʼʼ ಎಂದು ವಿವರಿಸಿದ್ದಾರೆ.

ʼʼನಾಸಿಕ್‌ನ ಎರಡು ಪ್ರಮುಖ ಬೆಳೆಗಳಾದ ಈರುಳ್ಳಿ ಮತ್ತು ದ್ರಾಕ್ಷಿಯ ಸಂಗ್ರಹಣೆ ಮತ್ತು ಸಂಸ್ಕರಣೆಗೆ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆʼʼ ಎಂದೂ ಸಚಿವರು ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಆರೋಪ ಹೊರಿಸಿದ್ದ ಖರ್ಗೆ

ಕೆಲವು ದಿನಗಳ ಹಿಂದೆ ಮಾಧ್ಯಮಗಳ ಜತೆ ಮಾತನಾಡಿದ್ದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಈ ಹಿಂದೆ ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನದಲ್ಲಿ ಬದಲಾವಣೆಗಳನ್ನು ತರುವುದಾಗಿ ಘೋಷಿಸಿದ್ದರು. ಜತೆಗೆ ಅನೇಕ ಬಿಜೆಪಿ ನಾಯಕರು ಇದೇ ರೀತಿಯ ಮಾತುಗಳನ್ನು ಆಡಿದ್ದಾರೆ. ಈ ಎಲ್ಲದರ ಬಗ್ಗೆ ಪ್ರಧಾನಿ ಮೌನವಾಗಿದ್ದಾರೆʼʼ ಎಂದಿದ್ದರು. ಜತೆಗೆ ʼʼಸಂವಿಧಾನ ಬದಲಾವಣೆ ನಿಜವಾಗಿಯೂ ನಿಮ್ಮ ಉದ್ದೇಶವಲ್ಲದಿದ್ದರೆ, ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವವರ ವಿರುದ್ಧ ನೀವು ಏಕೆ ಕ್ರಮ ಕೈಗೊಳ್ಳಬಾರದು?” ಎಂದು ಮೋದಿ ಅವರನ್ನು ಪ್ರಶ್ನಿಸಿದ್ದರು. ʼʼನೀವು (ಮೋದಿ) ನಿಮ್ಮ 56 ಇಂಚಿನ ಎದೆಯ ಬಗ್ಗೆ ಪದೇ ಪದೆ ಮಾತನಾಡುತ್ತೀರಿ. ಆದರೆ ಸಂವಿಧಾನದ ವಿರುದ್ಧವಾಗಿ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಯಾಕೆ?ʼʼ ಎಂದು ಕೇಳಿದ್ದರು.

ಇದನ್ನೂ ಓದಿ: Lok Sabha Election 2024: ಮೋದಿ ಮತ್ತೆ ಪ್ರಧಾನಿ, ಎನ್‌ಡಿಗೆ 400: ನಿತಿನ್‌ ಗಡ್ಕರಿ; 2026ರಲ್ಲಿ ಬುಲೆಟ್‌ ಟ್ರೇನ್:‌ ಅಶ್ವಿನಿ ವೈಷ್ಣವ್

ಪ್ರಸ್ತುತ ನಡೆಯುತ್ತಿರುವ ಚುನಾವಣೆಯು ಸಿದ್ಧಾಂತಗಳ ನಡುವಿನ ಕದನ ಎಂದಿದ್ದ ಖರ್ಗೆ, ʼʼಒಂದು ಬಣ ಬಡವರಿಗಾಗಿ ಹೋರಾಟ ನಡೆಸುತ್ತಿದ್ದರೆ ಇನ್ನೊಂದು ಬಣ ಧರ್ಮದ ಆಧಾರದಲ್ಲಿ ತಮ್ಮ ಶ್ರೀಮಂತ ಗೆಳೆಯರಿಗಾಗಿ ಕಣ್ಣಕ್ಕಿಳಿದಿದೆ. ಶ್ರೀಮಂತ ಮತ್ತು ಬಡವರ ನಡುವಿನ ಅಂತರ ಕಡಿಮೆ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆʼʼ ಎಂದು ಹೇಳಿದ್ದರು.

Continue Reading

Lok Sabha Election 2024

JP Nadda: ಬಿಜೆಪಿ ಈಗ ಬೆಳೆದಿದೆ, ಸಶಕ್ತವಾಗಿದೆ; ಆರ್‌ಎಸ್‌ಎಸ್ ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

JP Nadda: ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ʼʼಆರಂಭದಲ್ಲಿ, ನಾವು ಕಡಿಮೆ ಸಾಮರ್ಥ್ಯವನ್ನು ಹೊಂದಿದ್ದೆವು ಮತ್ತು ಆಗ ಆರ್‌ಎಸ್‌ಎಸ್‌ನ ಅಗತ್ಯವಿತ್ತು. ಇಂದು ನಾವು ಬೆಳೆದಿದ್ದೇವೆ ಮತ್ತು ನಾವು ಸಮರ್ಥರಾಗಿದ್ದೇವೆ. ಬಿಜೆಪಿ ತನ್ನಷ್ಟಕ್ಕೆ ತಾನೇ ಜವಾಬ್ದಾರಿ ತೆಗೆದುಕೊಳ್ಳುತ್ತಿದೆ. ಅದೇ ವ್ಯತ್ಯಾಸʼʼ ಎಂದು ತಿಳಿಸಿದ್ದಾರೆ.

VISTARANEWS.COM


on

JP Nadda
Koo

ನವದೆಹಲಿ: ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ (RSS) ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಹೇಳಿದ್ದಾರೆ. ಆರ್‌ಎಸ್‌ಎಸ್‌ ಸೈದ್ಧಾಂತಿಕ ನಿಲುವಾಗಿದ್ದು, ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಾಜಿ ಪ್ರದಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲಕ್ಕೆ ಹೋಲಿಸಿದರೆ ಪ್ರಸ್ತುರ ಆರ್‌ಎಸ್‌ಎಸ್‌ನ ಉಪಸ್ಥಿತಿ ಬಿಜೆಪಿಯಲ್ಲಿ ಹೇಗೆ ಬದಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ನಡ್ಡಾ ಅವರು, ʼʼಆರಂಭದಲ್ಲಿ, ನಾವು ಕಡಿಮೆ ಸಾಮರ್ಥ್ಯವನ್ನು ಹೊಂದಿದ್ದೆವು ಮತ್ತು ಆಗ ಆರ್‌ಎಸ್‌ಎಸ್‌ನ ಅಗತ್ಯವಿತ್ತು. ಇಂದು ನಾವು ಬೆಳೆದಿದ್ದೇವೆ ಮತ್ತು ನಾವು ಸಮರ್ಥರಾಗಿದ್ದೇವೆ. ಬಿಜೆಪಿ ತನ್ನಷ್ಟಕ್ಕೆ ತಾನೇ ಜವಾಬ್ದಾರಿ ತೆಗೆದುಕೊಳ್ಳುತ್ತಿದೆ. ಅದೇ ವ್ಯತ್ಯಾಸʼʼ ಎಂದು ಹೇಳಿದ್ದಾರೆ.

ಹಾಗಾದರೆ ಪ್ರಸ್ತುತ ಬಿಜೆಪಿಗೆ ಆರ್‌ಎಸ್‌ಎಸ್‌ನ ಬೆಂಬಲದ ಅಗತ್ಯವಿಲ್ಲವೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನೋಡಿ, ಪಕ್ಷ ಬೆಳೆದಿದೆ ಮತ್ತು ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿಗಳನ್ನು ಹೊಂದಿದ್ದಾರೆ. ಆರ್‌ಎಸ್‌ಎಸ್‌ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಮತ್ತು ನಮ್ಮದು ರಾಜಕೀಯ ಸಂಘಟನೆ. ಹೀಗಾಗಿ ಇಲ್ಲಿ ಅಗತ್ಯದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ಸೈದ್ಧಾಂತಿಕ ರಂಗ. ನಾವು ನಮ್ಮ ವ್ಯವಹಾರಗಳನ್ನು ನಮ್ಮದೇ ಆದ ರೀತಿಯಲ್ಲಿ ನಿರ್ವಹಿಸುತ್ತಿದ್ದೇವೆ. ರಾಜಕೀಯ ಪಕ್ಷಗಳು ಅದನ್ನೇ ಮಾಡಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಥುರಾ ಮತ್ತು ಕಾಶಿಯ ವಿವಾದಿತ ಸ್ಥಳಗಳಲ್ಲಿ ದೇವಾಲಯಗಳನ್ನು ನಿರ್ಮಿಸುವ ಯಾವುದೇ ಯೋಜನೆಯನ್ನು ಬಿಜೆಪಿ ಹೊಂದಿಲ್ಲ ಎಂದು ನಡ್ಡಾ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಬಿಜೆಪಿಗೆ ಅಂತಹ ಯಾವುದೇ ಆಲೋಚನೆ, ಯೋಜನೆ ಅಥವಾ ಬಯಕೆ ಇಲ್ಲ. ಈ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಬಡವರು, ಶೋಷಿತರು, ದಲಿತರು, ಮಹಿಳೆಯರು, ಯುವಕರು, ರೈತರತ್ತ ಗಮನ ಕೇಂದ್ರೀಕರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ಈ ವಿಭಾಗಗಳನ್ನು ಮುಖ್ಯವಾಹಿನಿಗೆ ತರಬೇಕು ಮತ್ತು ಸಬಲೀಕರಣಗೊಳಿಸಬೇಕು. ನಾವು ಅವರನ್ನು ಬಲಪಡಿಸಲು ಯತ್ನಿಸುತ್ತಿದ್ದೇವೆ” ಎಂದು ನಡ್ಡಾ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

ಯೋಗಿ ಆದಿತ್ಯನಾಥ್ ಮತ್ತು ಹಿಮಂತ ಬಿಸ್ವ ಶರ್ಮಾ ಅವರಂತಹ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಕಾಶಿ ಮತ್ತು ಮಥುರಾದಲ್ಲಿನ ದೇವಾಲಯಗಳ ಬಗ್ಗೆ ಮಾತನಾಡಿದ್ದಾರೆ ಎಂಬುದನ್ನು ನೆನಪಿಸಿದಾಗ, “ಬಿಜೆಪಿ ತನ್ನ ಪಾಲಂಪುರ್ ನಿರ್ಣಯದಲ್ಲಿ (ಜೂನ್ 1989) ರಾಮ ಮಂದಿರದ ಬೇಡಿಕೆಯನ್ನು ಸೇರಿಸಿತ್ತು. ಸುದೀರ್ಘ ಹೋರಾಟದ ನಂತರ ದೇವಾಲಯ ನಿರ್ಮಾಣದ ಕನಸು ನನಸಾಯಿತು. ರಾಮ ಮಂದಿರ ನಮ್ಮ ಕಾರ್ಯಸೂಚಿಯಲ್ಲಿತ್ತುʼʼ ಎಂದ ನಡ್ಡಾ ಅವರು, ʼʼನಮ್ಮದು ದೊಡ್ಡ ಪಕ್ಷ ಮತ್ತು ಪ್ರತಿಯೊಬ್ಬ ನಾಯಕರಿಗೂ ಅವರದ್ದೇ ಆದ ಭಾಷಣ ಶೈಲಿ ಇರುತ್ತದೆ. ಇದರ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲʼʼ ಎಂದು ತಿಳಿಸಿದ್ದಾರೆ.

Continue Reading
Advertisement
Uttara Kannada News Take precautionary measures to prevent the spread of infectious diseases in the district says DC Gangubai manakar
ಉತ್ತರ ಕನ್ನಡ1 min ago

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

BJP State President B Y Vijayendra latest statement in bengaluru
ಕರ್ನಾಟಕ3 mins ago

BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

Shed houses electric poles damaged due to heavy rain and wind in Karatagi
ಕೊಪ್ಪಳ6 mins ago

Heavy Rain: ಕಾರಟಗಿಯಲ್ಲಿ ಭಾರೀ ಮಳೆ ಗಾಳಿಗೆ ಅಪಾರ ಹಾನಿ; ಸಚಿವ ಶಿವರಾಜ ತಂಗಡಗಿ ಪರಿಶೀಲನೆ

cylinder explosion in Kunigal 6 people seriously injured, Kunigal MLA Dr Ranganath visit victoria Hospital in bengaluru
ತುಮಕೂರು9 mins ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; ಮನೆಯ ಮೂವರಲ್ಲದೆ, ಪಕ್ಕದ ಮನೆಯ ಮೂವರಿಗೂ ಗಂಭೀರ ಗಾಯ

RCB vs CSK
ಕ್ರೀಡೆ20 mins ago

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

Prajwal Revanna Case
ಪ್ರಮುಖ ಸುದ್ದಿ32 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

Virat Kohli
ಕ್ರೀಡೆ55 mins ago

Virat Kohli: ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಐಪಿಎಲ್​ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ಕೊಹ್ಲಿ

Girish's mother
ಕರ್ನಾಟಕ1 hour ago

Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

HD Deve Gowda
ಕರ್ನಾಟಕ1 hour ago

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Viral Video
ದೇಶ1 hour ago

Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ23 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌