Assault Case: ಪುರಸಭೆ ಸದಸ್ಯೆಯ ಪತಿ, ರೌಡಿಶೀಟರ್‌ನಿಂದ ಮಾರಣಾಂತಿಕ ಹಲ್ಲೆ; ಕಾರಣವೇ ಇಲ್ಲ! - Vistara News

ಕ್ರೈಂ

Assault Case: ಪುರಸಭೆ ಸದಸ್ಯೆಯ ಪತಿ, ರೌಡಿಶೀಟರ್‌ನಿಂದ ಮಾರಣಾಂತಿಕ ಹಲ್ಲೆ; ಕಾರಣವೇ ಇಲ್ಲ!

Assault Case: ಆನೇಕಲ್ ಪಟ್ಟಣದ ಮಂಜುನಾಥ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ರೌಡಿ ಶೀಟರ್ ಶ್ರೀರಾಮ್ ಎಂಬಾತ ಹಾಗೂ ಆತನ ಗ್ಯಾಂಗ್‌ನಿಂದ ಹಲ್ಲೆ ನಡೆದಿದೆ. ರೌಡಿಶೀಟರ್‌ ಶ್ರೀರಾಮ್‌, ಪುರಸಭೆ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ. ಕಾಂಗ್ರೆಸ್‌ ಕಾರ್ಯಕರ್ತನೂ ಆಗಿದ್ದಾನೆ.

VISTARANEWS.COM


on

assault case anekal
ರೌಡಿಶೀಟರ್‌ ಶ್ರೀರಾಮ್‌, ಗಾಯಾಳು ವೆಂಕಟೇಶಪ್ಪ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ (Anekal) ಪಟ್ಟಣದಲ್ಲಿ ರೌಡಿಶೀಟರ್‌ಗಳ ದಾಂಧಲೆ (Crime News) ಮುಂದುವರಿದಿದೆ. ನಿನ್ನೆ ರಾತ್ರಿ ನಡುರಸ್ತೆಯಲ್ಲಿ ಕಾರಿನಲ್ಲಿ ಬಂದ ರೌಡಿಶೀಟರ್‌ (Rowdysheeter) ಒಬ್ಬಾತ ತನ್ನ ಗುಂಪುಸಹಿತ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿದ್ದಾನೆ.

ಆನೇಕಲ್ ಪಟ್ಟಣದ ಮಂಜುನಾಥ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ರೌಡಿ ಶೀಟರ್ ಶ್ರೀರಾಮ್ ಎಂಬಾತ ಹಾಗೂ ಆತನ ಗ್ಯಾಂಗ್‌ನಿಂದ ಹಲ್ಲೆ ನಡೆದಿದೆ. ರೌಡಿಶೀಟರ್‌ ಶ್ರೀರಾಮ್‌, ಪುರಸಭೆ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ. ಕಾಂಗ್ರೆಸ್‌ ಕಾರ್ಯಕರ್ತನೂ ಆಗಿದ್ದಾನೆ.

ಈತ ಬೈಕ್‌ನಲ್ಲಿ ಹೋಗುತ್ತಿದ್ದ ವೆಂಕಟೇಶಪ್ಪ (65) ಎಂಬವರ ಮೇಲೆ ವಿನಾಕಾರಣ ಕಾಲು ಕೆರೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಲಾಟೆ ತಡೆಯಲು ಬಂದ ಮಂಜುನಾಥ್ ಎಂಬಾತನ ಮೇಲೆಯೂ ದಾಳಿ ಮಾಡಿದ್ದಾನೆ. ವೆಂಕಟೇಶಪ್ಪ ತಮ್ಮ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದು, ಅದೇ ರಸ್ತೆಯಲ್ಲಿ ಶ್ರೀರಾಮ್ ಹಾಗೂ ತಂಡ ಕಾರಿನಲ್ಲಿ ಬಂದಿದೆ.

ಶ್ರೀರಾಮ್‌ ಏಕಾಏಕಿ ವೆಂಕಟೇಶಪ್ಪನವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ ಶುರುಮಾಡಿದ್ದಾನೆ. ಯಾಕಪ್ಪ ಬೈತಿದ್ದೀಯ ಎಂದು ವೆಂಕಟೇಶಪ್ಪ ಪ್ರಶ್ನೆ ಮಾಡಿದ್ದಕ್ಕೆ ಕಾರಿನಿಂದ ಇಳಿದು ಥಳಿಸಿದ್ದಾನೆ. ಅಷ್ಟಕ್ಕೇ ನಿಲ್ಲದೆ ಕಲ್ಲು ತೆಗೆದುಕೊಂಡು ವೆಂಕಟೇಶಪ್ಪನವರ ಮೇಲೆ ಗುದ್ದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಶ್ರೀರಾಮ್ ಮತ್ತು ಆತನ ಪಟಾಲಂ ಯದ್ವಾತದ್ವಾ ಹಲ್ಲೆ ನಡೆಸಿದೆ. ವೆಂಕಟೇಶಪ್ಪನವರ ಹಲ್ಲುಗಳು ಮುರಿದಿದ್ದು, ಮೈಯ ಮೇಲೆ ಗಾಯಗಳಾಗಿವೆ.

ಗಾಯಾಳುವಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರೌಡಿಶೀಟರ್‌ ಶ್ರೀರಾಮ್‌, ತಾನು ರಾಜಕೀಯವಾಗಿ ಪ್ರಭಾವಿ ಎಂಬ ದರ್ಪದಿಂದ ಈ ಪರಿಸರದಲ್ಲಿ ವರ್ತಿಸುತ್ತಿದ್ದು, ದುರ್ಬಲರನ್ನು ಪೀಡಿಸುವುದು ಸಾಮಾನ್ಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈತನ ಮೇಲೆ ಹಲ್ಲೆ, ಕೊಲೆ ಬೆದರಿಕೆ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳಿವೆ. ಈತನನ್ನು ಬಂಧಿಸಿ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಯುವಕನ ಕಿರುಕುಳ ತಾಳದೆ ಬಾಲಕಿ ಆತ್ಮಹತ್ಯೆ

ಕೊಪ್ಪಳ: ಫೋನ್‌ನಲ್ಲಿ‌ ಯುವಕ ನೀಡುತ್ತಿದ್ದ ಕಿರುಕುಳ‌ ತಾಳಲಾರದೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಚ್ಚಲಕುಂಟ ಗ್ರಾಮದಲ್ಲಿ ನಡೆದಿದೆ. ಆರೋಪಿ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಶವವಿಟ್ಟು ಬಾಲಕಿತ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಪೂಜಾ ಯಡ್ಡೋಣಿ(16) ಆತ್ಮಹತ್ಯೆ ಮಾಡಿಕೊಂಡ‌ ಬಾಲಕಿ. ಪುರಷೋತ್ತಮ ಎನ್ನುವ ಯುವಕ ಪೂಜಾಳ‌ ಮನೆಯ ಮೊಬೈಲ್‌ಗೆ ಕರೆ ಮಾಡುತ್ತಿದ್ದ. ಬೇರೊಂದು ನಂಬರ್ ಮೂಲಕ‌‌ ಕಾನ್ಫರೆನ್ಸ್ ಕಾಲ್ ಮಾಡಿ ಕಿರುಕುಳ‌ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಯುವಕನ ಕಿರುಕುಳ‌ ತಾಳಲಾರದೆ ಏ.7 ರಂದು ವಿಷ ಸೇವಿಸಿದ್ದ ಪೂಜಾ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾಳೆ.

ಈ ಹಿನ್ನೆಲೆಯಲ್ಲಿ ಉಚ್ಚಲಕುಂಟ ಗ್ರಾಮಸ್ಥರು, ಆರೋಪಿ ಪುರಷೋತ್ತಮ ಬಂಧನಕ್ಕೆ‌ ಆಗ್ರಹಿಸಿ ಬೇವೂರು ಪೊಲೀಸ್ ಠಾಣೆ ಎದುರು ಪೂಜಾ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಆರೋಪಿ ಬಂಧನ ಮಾಡುವರೆಗೂ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Crime News: ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು; ರೈಲಿಗೆ ಸಿಲುಕಿ ದಂಪತಿ ದುರ್ಮರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Murder case : ಮನೆ ಓನರ್ ಕೊಲೆ ಕೇಸ್; ಇದು ಕಳ್ಳಿ ಕೊಲೆಗಾರ್ತಿಯಾದ ಕಥೆ

Murder case : ಚಿನ್ನದ ಸರಕ್ಕಾಗಿ ಮನೆ ಮಾಲಕಿಯನ್ನೇ ಕತ್ತು ಹಿಸುಕಿ ಕೊಂದಿದ್ದ ರೀಲ್ಸ್‌ ಸ್ಟಾರ್‌ ಮೋನಿಕಾ ವಿಚಾರಣೆ ವೇಳೆ ಬಿಕ್ಕಿ ಬಿಕ್ಕಿ ಅತ್ತಿದ್ದಾಳೆ. ಬೇಕಂತ ಕೊಲೆ ಮಾಡಿಲ್ಲ ಸರ್..‌
ಪ್ರಿಯತಮನಿಗೆ ವಾಹನ ಖರೀದಿಸಿ ಕೊಡಲು ಚಿನ್ನದ ಸರವನ್ನು ಕದಿಯಲು ಹೋಗಿದ್ದೆ. ಆದರೆ ನನಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ ಎಂದಿದ್ದಾಳೆ.

VISTARANEWS.COM


on

By

Murder case in Bengaluru
ರೀಲ್ಸ್‌ ಸ್ಟಾರ್‌ ಮೋನಿಕಾ ಅರೆಸ್ಟ್‌
Koo

ಬೆಂಗಳೂರು: ಕೆಂಗೇರಿಯಲ್ಲಿ ಮನೆ ಓನರ್ ದಿವ್ಯಾಳನ್ನು ಕೊಂದ ಪ್ರಕರಣಕ್ಕೆ (Murder case) ಸಂಬಂಧಿಸಿದಂತೆ ಆರೋಪಿ ಮೋನಿಕಾಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ರೀಲ್ಸ್ ಸ್ಟಾರ್ ಮೋನಿಕಾ ಬಿಕ್ಕಿ ಬಿಕ್ಕಿ ಅತ್ತಿದ್ದು, ಬೇಕಂತ ಕೊಲೆ ಮಾಡಿಲ್ಲ ಸರ್ ಎಂದಿದ್ದಾಳೆ.

ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಳು. ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಎಂಬುವವರನ್ನು ಮೋನಿಕಾ (24) ಎಂಬಾಕೆ ಹತ್ಯೆ ಮಾಡಿದ್ದಳು.

ಕೊಲೆ ಕೇಸ್‌ನಲ್ಲಿ ಬಂಧಿಯಾಗಿರುವ ಮೋನಿಕಾ, ನನಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ. ಬದಲಿಗೆ ದಿವ್ಯಾ ಹಾಕಿದ್ದ ಚಿನ್ನದ ಸರವನ್ನು ಮಾತ್ರ ಕಸಿದುಕೊಳ್ಳಲು ಹೋಗಿದ್ದೆ ಎಂದಿದ್ದಾಳೆ.

ಕೊಲೆ ಮಾಡುವ ಮೊದಲು ಎರಡ್ಮೂರು ಬಾರಿ ದಿವ್ಯಾ ಮನೇಲಿ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ್ದಳು. ಆದರೆ ಮೋನಿಕಾ ಪ್ರಯತ್ನ ವಿಫಲವಾಗಿತ್ತು. ಮೋನಿಕಾ ಗ್ರೌಂಡ್ ಪ್ಲೋರ್‌ನಲ್ಲಿ ವಾಸವಿದ್ದಳು. ದಿವ್ಯಾಳ ಮಗುವನ್ನು ನೋಡಿಕೊಳ್ಳುವ ನೆಪದಲ್ಲಿ ಮನೆಯೊಳಗೆ ಗಮನಿಸುತ್ತಿದ್ದಳು.

Murder case in Bengaluru
ಕೊಲೆಯಾದ ದಿವ್ಯಾ ಹಾಗೂ ಆರೋಪಿ ಮೋನಿಕಾ

ದಿವ್ಯಾಳ ಪತಿ ಹಾಗೂ ಅತ್ತೆ-ಮಾವ ಎಲ್ಲರೂ ಕೆಲಸಕ್ಕೆ ಹೋದ ನಂತರ ಮೋನಿಕಾ ಮನೆಗೆ ಬರುತ್ತಿದ್ದಳು. ದಿವ್ಯಾಳನ್ನು ಅಕ್ಕ ಅಕ್ಕ ಅಂತಿದ್ದವಳು, ಮಗು ನಿದ್ರೆಗೆ ಜಾರಿದಾಗ ದಿವ್ಯಾಳ ಕತ್ತು ಹಿಸುಕಿ ಕೊಂದಿದ್ದಳು.

ಇದನ್ನೂ ಓದಿ: Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಪ್ರಿಯತಮನಿಗಾಗಿ ಮಾಡಿದ್ದಳು ಸಾಲ

ಮೋನಿಕಾ ವಿಚಾರಣೆ ವೇಳೆ ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿದೆ. ಪ್ರಿಯತಮನಿಗಾಗಿ ಮಾಡಿದ್ದ ಸಾಲ ತೀರಿಸಲು ಕಳ್ಳತನಕ್ಕೆ ಇಳಿದಿದ್ದಳು ಆದರೆ ಅದು ವಿಫಲವಾಗಿತ್ತು. ಇತ್ತೀಚೆಗೆ ಕೆಲಸ ಬಿಟ್ಟಿದ್ದ ಮೋನಿಕಾ ಎರಡು ತಿಂಗಳು ಮನೆ ಬಾಡಿಗೆ ಕಟ್ಟಿರಲಿಲ್ಲ. ದಿವ್ಯಾ ಕುಟುಂಬಸ್ಥರು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಹೊಸ ಮನೆ ಗೃಹಪ್ರವೇಶ ಮಾಡಿದ್ದರು. ಆ ಹೊಸ ಮನೆಗೆ ಬಾಡಿಗೆಗೆ ಮೋನಿಕಾ ಪಡೆದಿದ್ದಳು.

ಕೆಲಸ ಬಿಟ್ಟಿದ್ದರೂ ಪ್ರಿಯತಮ ಟಾಟಾ ಏಸ್ ವಾಹನ ಖರೀದಿಗೆ ಸಾಲ ಮಾಡಿ ಹಣ ಕೊಟ್ಟಿದ್ದಳು. ಆದರೆ ಸಾಲ ಕೊಟ್ಟವರು ಮೋನಿಕಾ ಹಿಂದೆ ಬಿದ್ದಿದ್ದರು. ಇತ್ತ ಸಾಲ ಪಡೆದ ಪ್ರಿಯತಮ ಕೂಡ ಹಣ ವಾಪಸ್ ಕೊಟ್ಟಿರಲಿಲ್ಲ. ಹೀಗಾಗಿ ದಿವ್ಯಾ ಸ್ನಾನಕ್ಕೆ ಹೋದಾಗ ಮಾಂಗಲ್ಯ ಸರ ಎಗರಿಸೋಣ ಎಂದು ಸ್ಕೆಚ್ ಹಾಕಿದ್ದಳು. ಮಗುವನ್ನು ನೋಡಿಕೊಳ್ಳುವ ನೆಪದಲ್ಲಿ ಹೋಗಿ ಮಾಂಗಲ್ಯ ಸರವನ್ನು ಕಳವು ಮಾಡಲು ಯೋಜಿಸಿದ್ದಳು. ಆದರೆ ದಿವ್ಯಾ ಮೋನಿಕಾ ಮುಂದೆ ಮಾಂಗಲ್ಯ ಸರವನ್ನು ತೆಗೆದಿಡಲಿಲ್ಲ.

ಹೀಗಾಗಿ ಬೇರೆ ದಾರಿ ಕಾಣದೇ ದಿವ್ಯಾಳ ಕತ್ತು ಹಿಸುಕಿ 36 ಗ್ರಾಂ ಚಿನ್ನಾಭರಣದ ಜತೆ ಮೋನಿಕಾ ಎಸ್ಕೇಪ್ ಹಾಕಿದ್ದಳು. ಕದ್ದ ಸರವನ್ನು ಅಡವಿಟ್ಟು ಆರಾಮಾಗಿ ತನಗೇನು ಗೊತ್ತಿಲ್ಲದಂತೆ ವಾಪಸ್ ಬಂದಿದ್ದಳು. ಆದರೆ ಪೊಲೀಸರ ವಿಚಾರಣೆ ವೇಳೆ ನನ್ನ ಮನೆಯಲ್ಲೂ 60 ಸಾವಿರ ಕಳುವಾಗಿದೆ ಎಂದಿದ್ದಳು. ಇತ್ತ ದಿವ್ಯಾ ಕುತ್ತಿಗೆಯಲ್ಲಿದ್ದ ಗಾಯದ ಗುರುತು ಕೊಲೆ ಎನ್ನುವುದು ಸ್ಪಷ್ಟವಾಗಿತ್ತು.

ಘಟನೆ ದಿನ ಇಡೀ ಕಟ್ಟಡದಲ್ಲಿ ದಿವ್ಯಾ ಮತ್ತು ಅವರ ಮಗು ಹಾಗೂ ಮೋನಿಕಾ ಹೊರತಾಗಿ ಯಾರು ಇರಲಿಲ್ಲ. ಅಲ್ಲದೇ ಮೋನಿಕಾ ಕಳೆದ ಎರಡು ತಿಂಗಳಿನಿಂದ ಬಾಡಿಗೆ ಕಟ್ಟಿಲ್ಲ ಎನ್ನುವ ವಿಚಾರ ಗೊತ್ತಾಗಿತ್ತು. 60 ಸಾವಿರ ಹಣ ಮನೆಯಲ್ಲಿದರೆ ಎರಡು ತಿಂಗಳ ಬಾಡಿಗೆ ಯಾಕೆ ಕಟ್ಟಿಲ್ಲ ಎಂಬ ಸಂಶಯ ಪೊಲೀಸರಿಗೆ ಕಾಡಿತ್ತು.

ಮೃತಳ ಕತ್ತಿನಲ್ಲಿದ್ದ ಚಿನ್ನ ಕಳುವಾಗಿದ್ದರಿಂದ ಪೊಲೀಸರು ಹತ್ತಿರದ ಜ್ಯುವೆಲ್ಲರಿ ಶಾಪ್‌ನಲ್ಲಿ ವಿಚಾರಿಸಿದ್ದಳು. ಈ ವೇಳೆ ಮೋನಿಕಾ ದಿವ್ಯಾಳ ಮಾಂಗಲ್ಯಸರ ಅಡವಿಟ್ಟಿರುವುದು ಪತ್ತೆಯಾಗಿದೆ. ಕೂಡಲೇ ಮೋನಿಕಾಳನ್ನು ವಶಕ್ಕೆ ಪಡೆದಾಗ ಕೊಲೆ ರಹಸ್ಯ ಹೊರಗೆ ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Suspicious Case : ಬೆಂಗಳೂರಿನಲ್ಲಿ ಕಾಲೇಜು ಹುಡುಗಿಯೊಬ್ಬಳು ಅನುಮಾನಾಸ್ಪದ‌ವಾಗಿ ಮೃತಪಟ್ಟಿದ್ದಾಳೆ. ಮನೆಯ ಬಾತ್‌ ರೂಮಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Suspicious Case
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಿನ (Bengaluru News) ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಡುಗಿಯೊಬ್ಬಳು ಅನುಮಾನಾಸ್ಪದ‌ವಾಗಿ (Suspicious Case) ಮೃತಪಟ್ಟಿದ್ದಾಳೆ. ಪ್ರಭುಧ್ಯಾ(21) ಮೃತ ದುರ್ದೈವಿ.

ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುದ್ಯಾ, ಮನೆಯ ಮನೆಯ ಬಾತ್‌ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

Suspicious Case in Bengaluru

ಬುಧವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಭುಧ್ಯಾಳ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ, ಕೊಲೆಯೋ ಹೀಗೆ ಎಲ್ಲ‌ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ: Road Accident: ಸರಣಿ ಅಪಘಾತ, ಬೈಕ್ ಸವಾರ ಸಾವು; ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್‌ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ (Video Call) ಮಾಡಿ ಹೆದರಿಸಲು ಹೋದ ಜಿಮ್‌ ಟ್ರೈನರ್‌ (Gym Trainer), ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು (hanging) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ (Self Harming) ಮಾಡಿಕೊಂಡ ದುರ್ದೈವಿ.

ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್‌ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.

ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.

ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್‌ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್‌ ಅಲ್ಲೇ ಮೃತಪಟ್ಟಿದ್ದಾನೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident: ಸರಣಿ ಅಪಘಾತ, ಬೈಕ್ ಸವಾರ ಸಾವು; ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

ಹುಣಸೂರು ಹಾಗೂ ದಾವಣಗೆರೆಯ ಚನ್ನಗಿರಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ (Road Accident) ಇಬ್ಬರು ಮೃತಪಟ್ಟಿದ್ದಾರೆ. ಚನ್ನಗಿರಿಯಲ್ಲಿ ಸ್ಥಳಿಯರು ರಸ್ತೆ ತಡೆ ನಡೆಸಿದ್ದಾರೆ.

VISTARANEWS.COM


on

hunsur road accident
Koo

ಮೈಸೂರು: ಹುಣಸೂರು ತಾಲೂಕಿನ (Mysore news) ಅರಸು ಕಲ್ಲಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ (Road Accident) ಬೈಕ್‌ ಸವಾರರೊಬ್ಬರು (Bike rider) ಸಾವಿಗೀಡಾಗಿದ್ದಾರೆ ಎರಡು ಬಸ್, ಎರಡು ಕಾರುಗಳಿಗೆ ಜಖಂ ಆಗಿದೆ.

ಮೈಸೂರು- ಬಂಟ್ವಾಳ ಹೆದ್ದಾರಿ- 275ರ ಅರಸು ಕಲ್ಲಹಳ್ಳಿ ಗೇಟ್ ಬಳಿಯಲ್ಲಿ ಘಟನೆ ನಡೆದಿದೆ. ಮೈಸೂರು ತಾಲೂಕಿನ ಹೂಟಗಳ್ಳಿಯ ಎಸ್‌ಆರ್‌ಎಸ್ ಕಾಲೋನಿಯ ಲೇಟ್ ಭೈರಪ್ಪ ಪುತ್ರ, ಕೂಲಿ ಕಾರ್ಮಿಕ ಕರಿಯಪ್ಪ (40) ಮೃತರು. ಗ್ರಾಮದ ಹಬ್ಬ ಮುಗಿಸಿ ವಾಪಸ್ ಆಗುವ ವೇಳೆ ನಡೆದ ಅವಘಡದಲ್ಲಿ ಕರಿಯಪ್ಪ ಸ್ಥಳದಲ್ಲೇ ಸಾವಿಗೀಡಾದರು. ಸರಣಿ ಅಪಘಾತದಲ್ಲಿ ಎರಡು ಬಸ್‌ಗಳು ಹಾಗೂ ಎರಡು ಕಾರುಗಳಿಗೆ ಜಖಂ ಆಗಿದ್ದು, ಕೆಲವರಿಗೆ ತರಚಿದ ಗಾಯಗಳಾಗಿವೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿಯಾಗಿ ಪಾದಚಾರಿ ಮೃತ್ಯು, ಸ್ಥಳಿಯರಿಂದ ರಸ್ತೆ ತಡೆ

ದಾವಣಗೆರೆ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ (Car hit) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. (Davanagere news) ಚನ್ನಗಿರಿ ತಾಲೂಕಿನ ಗೆದ್ದಲಹಟ್ಟಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ರಾಜೇಶ್ (45) ಮೃತ ದುರ್ದೈವಿ.

davanagere road accident

ದಾವಣಗೆರೆ ಹಾಗೂ ಬೀರೂರು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ರಾಜ್ಯ ಹೆದ್ದಾರಿ ಇದ್ದರೂ ಗ್ರಾಮದಲ್ಲಿ ಸ್ಪೀಡ್ ಬ್ರೇಕರ್ಸ್( ಹಂಪ್ಸ್) ಗಳನ್ನು ಹಾಕದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆಕ್ರೋಶಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಾಣಹಾನಿ ಆಗಿದೆ ಎಂದು ಸಿಟ್ಟಿಗೆದ್ದಿರುವ ಜನರು, ರಸ್ತೆ ತಡೆ ನಡೆಸಿ ಸಾವಿಗೆ ನ್ಯಾಯ ಒದಗಿಸಿ ಎಂದು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲೇ ನೂರಾರು ಜನರ ಜಮಾವಣೆಯಾಗಿದ್ದು, ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಲಾರಿ ಟಯರ್‌ ಸ್ಫೋಟ, ಬೆಂಕಿಗೆ ತುತ್ತು

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ (divider) ಗುದ್ದಿದ ಲಾರಿ ಪಲ್ಟಿಯಾಗಿ ಬೆಂಕಿಗೆ ತುತ್ತಾಗಿ ಭಸ್ಮವಾಗಿದೆ. (Vijayanagar news) ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ (national highway) 50ರ ಕಮಲಾಪೂರ ಕ್ರಾಸ್ ಬಳಿ ಅಪಘಾತ ನಡೆದಿದೆ.

vijayanagara road accident

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಗೆ ಬರುತ್ತಿದ್ದ ಲಾರಿಯ ಚಕ್ರಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡಿವೆ. ಸ್ಪೋಟವಾಗಿ ಡಿವೈಡರ್‌ಗೆ ಗುದ್ದಿದ ಪರಿಣಾಮ ಲಾರಿಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಲಾರಿ ಡ್ರೈವರ್, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಮಲಾಪುರ ಬಳಿ ಘಟನೆಯಿಂದಾಗಿ ಟ್ರಾಫಿಕ್‌ ಜಾಮ್ ಆಗಿದ್ದು, ಘಟನಾ ಸ್ಥಳಕ್ಕೆ NH ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲಿಸಿದ್ದಾರೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

ದಾವಣಗೆರೆ: ಕೆರೆಯಲ್ಲಿ 1 ಲಕ್ಷಕ್ಕೂ ಅಧಿಕ ಮೀನುಗಳ ಮಾರಣ ಹೋಮವಾಗಿರುವ ಘಟನೆ ದಾವಣಗೆರೆ (Davanagere News) ಸಮೀಪದ ಎಲೆಬೇತೂರಿನ ಕೆರೆಯಲ್ಲಿ ನಡೆದಿದೆ. ಅಧಿಕ ಬಿಸಿಲಿನ ತಾಪಕ್ಕೆ ಮೀನುಗಳು ಮೃತಪಟ್ಟಿರಬಹುದಾ ಅಥವಾ ಹಳೇ ವೈಷಮ್ಯದಿಂದ ಯಾರಾದರೂ ಕೆರೆಗೆ ವಿಷ ಬೆರೆಸಿದ್ದರಿಂದ ಮೀನುಗಳು ಸಾವಿಗೀಡಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ.

ಕೆರೆಯಲ್ಲಿ 1.50 ಲಕ್ಷ ಮೀನುಗಳನ್ನು ಸಾಕಲಾಗಿತ್ತು. ಅದರಲ್ಲಿ 40 ಸಾವಿರ ಮೀನು ಹಿಡಿದು ಮಾರಲಾಗಿತ್ತು. ಇನ್ನುಳಿದ ಸುಮಾರು ಲಕ್ಷಕ್ಕೂ ಅಧಿಕ ಮೀನುಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಬರೋಬ್ಬರಿ 5ರಿಂದ 10 ಕೆಜಿ ಇರುವ ಮೀನುಗಳು ಮೃತಪಟ್ಟು, ಕೆರೆಯಲ್ಲಿ ತೇಲುತ್ತಿವೆ. ಸತ್ತ ಮೀನುಗಳನ್ನು ನೋಡಿ ಮೀನು ಸಾಕಾಣಿಕೆದಾರರು ಕಂಗಾಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Continue Reading

ಕ್ರೈಂ

Self Harming: ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್‌ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ

Self Harming: ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್‌ ಅಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

self harming gym trainer
Koo

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ (Video Call) ಮಾಡಿ ಹೆದರಿಸಲು ಹೋದ ಜಿಮ್‌ ಟ್ರೈನರ್‌ (Gym Trainer), ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು (hanging) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ (Self Harming) ಮಾಡಿಕೊಂಡ ದುರ್ದೈವಿ.

ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್‌ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.

ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.

ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್‌ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್‌ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್‌ ಅಲ್ಲೇ ಮೃತಪಟ್ಟಿದ್ದಾನೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ತನ್ನ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಅಂಜಲಿ ಎಂಬಾಕೆಯನ್ನು ಇರಿದು ಬರ್ಬರವಾಗಿ ಕೊಲೆ (Anjali Murder Case) ಮಾಡಿದ ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಹುಬ್ಬಳ್ಳಿ: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ (Anjali Murder Case) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

ಕೊಲೆ ಪ್ರಕರಣಕ್ಕೂ ಮೊದಲೇ ಅಂಜಲಿ ಅಜ್ಜಿ, ಬೆಂಡಿಗೇರಿ ಪೊಲೀಸ್ ಠಾಣೆಗೆ ಬಂದು ಬೆದರಿಕೆ ಇದೆ ಎಂದು ದೂರು ನೀಡಿದ್ದರು. ದೂರು ನೀಡಿದರೂ ಪೊಲೀಸರು ನಿರ್ಲಕ್ಷ್ಯ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಚಂದ್ರಶೇಖರ್‌ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಅವರನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಅಮಾನತು ಮಾಡಿದ್ದಾರೆ.

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ. ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ | B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Continue Reading
Advertisement
gold rate today priyamani
ಚಿನ್ನದ ದರ8 mins ago

Gold Rate Today: ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ, ಮತ್ತೆ ಚಿನ್ನದ ಮಾರುಕಟ್ಟೆಯಲ್ಲಿ ತುರುಸು; ದರಗಳು ಹೀಗಿವೆ

Swati maliwal
ದೇಶ12 mins ago

Swati Maliwal: ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆಆರೋಪಿ ಕೇಜ್ರಿವಾಲ್‌ ಜೊತೆ ಏರ್‌ಪೋರ್ಟ್‌ನಲ್ಲಿ ಪ್ರತ್ಯಕ್ಷ

Murder case in Bengaluru
ಬೆಂಗಳೂರು14 mins ago

Murder case : ಮನೆ ಓನರ್ ಕೊಲೆ ಕೇಸ್; ಇದು ಕಳ್ಳಿ ಕೊಲೆಗಾರ್ತಿಯಾದ ಕಥೆ

Cannes 2024 Urvashi Rautela pink gown remind Deepika Padukone
ಬಾಲಿವುಡ್26 mins ago

Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

Sanju Samson
ಕ್ರೀಡೆ36 mins ago

Sanju Samson: ಸತತ 4 ಸೋಲು; ಬೇಸರ ಹೊರಹಾಕಿದ ನಾಯಕ ಸಂಜು ಸ್ಯಾಮ್ಸನ್

Suspicious Case
ಬೆಂಗಳೂರು1 hour ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Star Suvarna HuAnthiya UhuuAnthiya new celebrity game show
ಕಿರುತೆರೆ1 hour ago

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Hepatitis-A
ದೇಶ1 hour ago

Hepatitis-A: ಅಲರ್ಟ್‌..ಅಲರ್ಟ್‌! ಜನರ ನಿದ್ದೆಗೆಡಿಸ್ತಿದೆ ಮತ್ತೊಂದು ಡೆಡ್ಲಿ ವೈರಸ್‌

Anita Goyal
ದೇಶ1 hour ago

Anita Goyal: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಪತ್ನಿ ಅನಿತಾ ಗೋಯಲ್‌ ನಿಧನ

hunsur road accident
ಕ್ರೈಂ1 hour ago

Road Accident: ಸರಣಿ ಅಪಘಾತ, ಬೈಕ್ ಸವಾರ ಸಾವು; ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌