Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ! - Vistara News

ಪ್ರಮುಖ ಸುದ್ದಿ

Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

Right To Sleep: ಮಹಾರಾಷ್ಟ್ರದಲ್ಲಿ ಇ.ಡಿ ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ತಡೆ (PMLA) ಕಾಯ್ದೆ ಅಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿ, ರಾತ್ರಿಯಿಡೀ ವಿಚಾರಣೆ ನಡೆಸಿದ್ದರು. ನನ್ನ ನಿದ್ದೆಗೆ ಭಂಗವುಂಟಾಗಿದೆ, ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂಬುದಾಗಿ ಆರೋಪಿಯು ಕೋರ್ಟ್‌ ಮೊರೆ ಹೋಗಿದ್ದರು. ಹಾಗಾಗಿ ನ್ಯಾಯಾಲಯವು, ನಿದ್ದೆಯ ಮಹತ್ವವನ್ನು ತಿಳಿಸಿ, ವಿಚಾರಣೆ, ದಾಳಿಗೆ ಸಮಯ ನಿಗದಿ ಮಾಡಿಕೊಳ್ಳಿ ಎಂಬುದಾಗಿ ಇ.ಡಿ ಅಧಿಕಾರಿಗಳಿಗೆ ಸೂಚಿಸಿದೆ. ಕೋರ್ಟ್‌ ಸೂಚನೆಯ ಸಾರಾಂಶ ಇಲ್ಲಿದೆ.

VISTARANEWS.COM


on

Right To Sleep
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ‘ನಿದ್ದೆಯೇ ಬುದ್ಧಿಯ ಮೂಲ’ ಎನ್ನುತ್ತಾರೆ. ಬೆಳಗ್ಗೆ 2 ಗಂಟೆ ಬೇಗ ಎದ್ದರೆ ದಿನವಿಡೀ ಆಕಳಿಕೆ, ಬೇಸರ, ಕೆಲಸದಲ್ಲಿ ನಿರಾಸಕ್ತಿ ಮೂಡುತ್ತದೆ. ಸತತವಾಗಿ ನಿದ್ದೆ (Sleeping) ಇಲ್ಲದಿದ್ದರೆ ಮನುಷ್ಯ ಹುಚ್ಚನಾಗುತ್ತಾನೆ ಎಂದು ಕೂಡ ಹೇಳುತ್ತಾರೆ. ಈಗ ಬಾಂಬೆ ಹೈಕೋರ್ಟ್‌ (Bombay High Court) ಕೂಡ ಇದನ್ನೇ ಉಚ್ಚರಿಸಿದೆ. “ನಿದ್ದೆ ಮನುಷ್ಯನ ಹಕ್ಕು (Right To Sleep) ಹಾಗೂ ಮೂಲಭೂತ ಅವಶ್ಯಕತೆಯಾಗಿದೆ. ಯಾರೂ ಇದನ್ನು ಕಸಿಯಬಾರದು” ಎಂಬುದಾಗಿ ಅರ್ಜಿಯೊಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಯೊಬ್ಬರನ್ನು ರಾತ್ರಿಯಿಡೀ ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ರೇವತಿ ಮೊಹಿತೆ ಹಾಗೂ ಮಂಜೂಷ ದೇಶಪಾಂಡೆ ಅವರು ಈ ಮೇಲಿನಂತೆ ಆದೇಶ ಹೊರಡಿಸಿದ್ದಾರೆ. “ಇ.ಡಿ ಅಧಿಕಾರಿಗಳು ಯಾರನ್ನೇ ಆಗಲಿ ವಿಚಾರಣೆ ನಡೆಸಲು, ಸಮನ್ಸ್‌ ನೀಡಲು, ಅವರ ಮನೆಗೆ ದಾಳಿ ನಡೆಸಿ ಪರಿಶೀಲನೆ ಮಾಡಲು, ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ನಿಯಮಿತ ಸಮಯವನ್ನು ನಿಗದಿಪಡಿಸಿಕೊಳ್ಳಬೇಕು” ಎಂದು ಕೂಡ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

“ನಿದ್ದೆ ಮನುಷ್ಯನ ಹಕ್ಕಾಗಿದೆ. ಅದೊಂದು ಸಾಮಾನ್ಯ ಅವಶ್ಯಕತೆಯಾಗಿದೆ. ಯಾರಾದರೂ ಮನುಷ್ಯನ ನಿದ್ದೆಯ ಹಕ್ಕನ್ನು ಕಸಿದುಕೊಂಡರೆ, ಆತನ ನಿದ್ದೆಗೆ ಭಂಗ ಮಾಡಿದರೆ ಅದು ಮನುಷ್ಯನ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅದರಲ್ಲೂ, ಇ.ಡಿ ಅಧಿಕಾರಿಗಳು ಹೊತ್ತಲ್ಲದ ಹೊತ್ತಲ್ಲಿ ದಾಳಿ ನಡೆಸಿ, ವಿಚಾರಣೆ ಮಾಡಿದರೆ ಖಂಡಿತವಾಗಿಯೂ ಅವರ ನಿದ್ದೆಗೆ ಭಂಗವುಂಟಾಗುತ್ತದೆ. ಯಾವುದೇ ವ್ಯಕ್ತಿಗೆ ಸರಿಯಾದ ನಿದ್ದೆ ಇಲ್ಲದಿದ್ದರೆ ಆತನ ಮಾನಸಿಕ, ದೈಹಿಕ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ” ಎಂದು ನ್ಯಾಯಾಲಯವು ಸ್ಪಷ್ಟಪಡಿಸಿತು.

ಏನಿದು ಪ್ರಕರಣ?

ಮಹಾರಾಷ್ಟ್ರದ ಗಾಂಧಿಧಾಮ ನಿವಾಸಿಯಾದ ರಾಮ್‌ ಕೋಟುಮಲ್‌ (64) ಎಂಬುವರನ್ನು ಇ.ಡಿ ಅಧಿಕಾರಿಗಳು 2023ರ ಆಗಸ್ಟ್‌ನಲ್ಲಿ ಬಂಧಿಸಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಅವರನ್ನು ಬಂಧಿಸಿದ್ದರು. ಇ.ಡಿ ಅಧಿಕಾರಿಗಳು ರಾತ್ರಿಯಿಡೀ ಅವರನ್ನು ವಿಚಾರಣೆ ನಡೆಸಿದ್ದರು. ಆರೋಪಿಯು ಶೌಚಾಲಯಕ್ಕೆ ಹೋದರೆ, ಅಲ್ಲಿಯೂ ಅವರಿಗೆ ತೊಂದರೆ ಕೊಟ್ಟಿದ್ದರು. ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವ ರಾಮ್‌ ಕೋಟುಮಲ್‌ ಅವರ ಬಂಧನವೇ ಕಾನೂನುಬಾಹಿರವಾಗಿದೆ ಎಂಬುದಾಗಿ ಅವರ ಪರ ವಕೀಲರು ಕೋರ್ಟ್‌ನಲ್ಲಿ ವಾದ ಮಂಡಿಸಿದರು. ಆಗ ನ್ಯಾಯಾಲಯವು ಇ.ಡಿ ಅಧಿಕಾರಿಗಳಿಗೆ ಸಮಯ ನಿಗದಿಪಡಿಸಿಕೊಳ್ಳುವಂತೆ ಸೂಚಿಸಿತ್ತು.

ಇದನ್ನೂ ಓದಿ: Robbery Case : ನಿದ್ದೆಗೆ ಜಾರಿದ ಮಾಲೀಕನ ಕೈ-ಕಾಲು ಕಟ್ಟಿ, ಮನೆಯನ್ನೇ ಲೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Sunil Chhetri: 2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

VISTARANEWS.COM


on

Sunil Chhetri
Koo

ಮುಂಬಯಿ: ಭಾರತದ ಖ್ಯಾತ ಫುಟ್ಬಾಲ್(Indian football icon)​ ಆಟಗಾರ ಸುನೀಲ್‌ ಚೆಟ್ರಿ(Sunil Chhetri) ಅವರು ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಜೂನ್ 6 ರಂದು ಕುವೈತ್(Kuwait) ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯದ ನಂತರ ಚೆಟ್ರಿ ಅಂತಾರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದಲಿದ್ದಾರೆ. ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡುವ ಮೂಲಕ ಚೆಟ್ರಿ ತಮ್ಮ ನಿವೃತ್ತಿಯ ವಿಚಾರವನ್ನು ತಿಳಿಸಿದ್ದಾರೆ. ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ.

2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

ಕೆಲವು ದಿನಗಳ ಹಿಂದೆಯೇ ಸುನೀಲ್‌ ಚೆಟ್ರಿ ಅವರ ನಿವೃತ್ತಿಯ ವಿಚಾರ ಮುನ್ನಕೆಗೆ ಬಂದಿತ್ತು. ಈ ವಿಚಾರವನ್ನು ಕೋಚ್‌ ಐಗರ್‌ ಸ್ಟಿಮ್ಯಾಕ್‌ ಹೇಳಿದ್ದರು. “ಸುನೀಲ್‌ ಚೆಟ್ರಿ ಅವರಿಗೆ ಈಗ 38 ವಯಸ್ಸಾಗಿದೆ. ಇದು ಅವರಿಗೂ ಅರಿವಿಗೂ ಬಂದಿದೆ. ಇಷ್ಟು ವಯಸ್ಸಿನಲ್ಲಿ ಅವರಿಗೆ 90 ನಿಮಿಷಗಳ ಆಟ ಆಡಲು ದೇಹ ಸ್ಪಂದಿಸುವುದು ಕೂಡ ಕಷ್ಟಕರ. ಅವರು ಭಾರತ ಕಂಡ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ನನ್ನ ಪ್ರಕಾರ ಈ ಬಾರಿ ಏಷ್ಯಾ ಕಪ್​ ಅವರ ವಿದಾಯದ ಋತು ಆಗಿರುವ ಸಾಧ್ಯತೆಯೇ ಹೆಚ್ಚು ಎಂಬುದಾಗಿ ಸ್ಟಿಮ್ಯಾಕ್‌ ಹೇಳಿದ್ದರು. ಇದೀಗ ಅಂತಿಮವಾಗಿ ಚೆಟ್ರಿ ತಮ್ಮ ನಿವೃತ್ತಿ ನಿರ್ಧಾರವನ್ನು ಕೈಗೊಂಡಿದ್ದಾರೆ.

“ನಾನು ಎಂದಿಗೂ ಮರೆಯದ ಮತ್ತು ಆಗಾಗ ನೆನಪಿಸಿಕೊಳ್ಳುವ ಒಂದು ದಿನವಿದೆ, ಅದು ನಾನು ನನ್ನ ದೇಶಕ್ಕಾಗಿ ಆಡಿದ ಮೊದಲ ಪಂದ್ಯ. ಅದು ನಂಬಲಸಾಧ್ಯವಾಗಿತ್ತು. ಆ ದಿನವನ್ನು ನಾನು ಎಂದಿಗೂ ಮರೆಯುವುದಿಲ್ಲ ಮತ್ತು ನನ್ನ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ” ಎಂದು ಚೆಟ್ರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ನಾನು ದೆಹಲಿಯಲ್ಲಿ ಸುಬ್ರೊಟೊ ಕಪ್ ಆಡುವಾಗ, ದೇಶಕ್ಕಾಗಿ ಆಡುತ್ತೇನೆ ಎಂದು ನಾನು ಭಾವಿಸಿರಲಿಲ್ಲ ಅಥವಾ ಕನಸು ಕಾಣಲಿಲ್ಲ. ಕ್ಲಬ್‌ಗಾಗಿ ಆಡುವ ವೃತ್ತಿಪರ ಸೆಟಪ್ ತುಂಬಾ ದೂರವಾಗಿತ್ತು. ಏಕೆಣದರೆ ಆ ದಿನಗಳಲ್ಲಿ ಅದು ಬಹಳ ಕಷ್ಟಕರವಾಗಿತ್ತು. ಹಾಗಾಗಿ ನಾನು ಆಡುವ ಕನಸು ಕಾಣಲಿಲ್ಲ. ಆದರೆ ದೇವರ ದಯೆಯಿಂದ ನನಗೆ ಈ ಅವಕಾಶ ಒದಗಿ ಬಂತು. ದೇಶವನ್ನು ಪ್ರತಿನಿಧಿಸುವ ಪ್ರತಿ ಕ್ಷಣವೂ ಕೂಡ ವಿಶೇಷ” ಎಂದರು.

ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

“ಕಳೆದ 19 ವರ್ಷಗಳಲ್ಲಿ ನಾನು ನೆನಪಿಸಿಕೊಳ್ಳುವ ಭಾವನೆಯು ಕರ್ತವ್ಯದ ಒತ್ತಡ ಮತ್ತು ಅಪಾರ ಸಂತೋಷದ ನಡುವಿನ ಉತ್ತಮ ಸಂಯೋಜನೆಯಾಗಿದೆ ಎಂದು ನಿಮಗೆ ತಿಳಿದಿದೆ. ನಾನು ವೈಯಕ್ತಿಕವಾಗಿ ಎಂದಿಗೂ ಯೋಚಿಸಲಿಲ್ಲ, ಇವು ದೇಶಕ್ಕಾಗಿ ನಾನು ಆಡಿದ ಹಲವಾರು ಆಟಗಳಾಗಿವೆ” ಎಂದರು.

“ನಾನು ನನ್ನ ತಾಯಿ, ತಂದೆ ಮತ್ತು ನನ್ನ ಹೆಂಡತಿ, ಕುಟುಂಬ ಮತ್ತು ಸಹ ಆಟಗಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಏಕೆಂದರೆ ನಾನು ಒತ್ತಡದಲ್ಲಿದ್ದ ವೇಳೆ ಇವರೆಲ್ಲ ನನ್ನ ಜತೆಗಿದ್ದು ನನ್ನನು ಬೆಂಬಲಿಸಿದ್ದಾರೆ. ದೇಶಕ್ಕಾಗಿ ಒಷ್ಟು ವರ್ಷ ಆಡಿದ್ದು ನಿಜಕ್ಕೂ ಹೆಮ್ಮೆಯ ಸಂಗತಿ” ಎಂದರು.

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ (KPSC Group B (RPC) Recruitment 2024). ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading

ಪ್ರಮುಖ ಸುದ್ದಿ

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Robert Fico: ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

VISTARANEWS.COM


on

Slovakian PM Robert Fico critical after assassination attempt
Koo

ಹೊಸದಿಲ್ಲಿ: ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ (Slovakia Prime minister Robert Fico) ಹತ್ಯೆ ಯತ್ನ (Assassination attempt) ಬುಧವಾರ ನಡೆದಿದೆ. ದುಷ್ಕರ್ಮಿಯೊಬ್ಬ ಅವರತ್ತ ಗುಂಡು ಹಾರಿಸಿದ್ದು, ರಾಬರ್ಟ್‌ ಫಿಕೊ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುದ್ದಿ ದೂರದರ್ಶನ ಕೇಂದ್ರ TA3 ಪ್ರಕಾರ, ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

“ಇಂದು ಹ್ಯಾಂಡ್ಲೋವಾದಲ್ಲಿ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಹತ್ಯೆ ಪ್ರಯತ್ನ ನಡೆದಿದೆ. ಗಾಯಗೊಂಡ ಅವರನ್ನು ಹೆಲಿಕಾಪ್ಟರ್ ಮೂಲಕ ಬನ್ಸ್ಕಾ ಬೈಸ್ಟ್ರಿಕಾಗೆ ಸಾಗಿಸಲಾಗುತ್ತಿದೆ. ಅವರಿಗೆ ತೀವ್ರವಾದ ಶಸ್ತ್ರಕ್ರಿಯೆಯ ಅಗತ್ಯವಿದೆ” ಎಂದು ಎಂದು ಸರ್ಕಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ಲೊವಾಕಿಯಾ ಸಂಸತ್ತಿನ ಉಪ ಸ್ಪೀಕರ್ ಲುಬೊಸ್ ಬ್ಲಾಹಾ ಅವರು ಸಂಸತ್ತಿನ ಅಧಿವೇಶನದಲ್ಲಿ ರಾಬರ್ಟ್ ಫಿಕೊ ಮೇಲಿನ ದಾಳಿಯನ್ನು ದೃಢಪಡಿಸಿದರು. ಸ್ಲೋವಾಕಿಯಾದ ಅಧ್ಯಕ್ಷ ಜುಝಾನಾ ಕ್ಯಾಪುಟೋವಾ ಈ ದಾಳಿಯನ್ನು ಖಂಡಿಸಿದ್ದು, ಇದು ಪ್ರಧಾನ ಮಂತ್ರಿಯವರ ಮೇಲಿನ “ಕ್ರೂರ ಮತ್ತು ನಿರ್ದಯ” ದಾಳಿ ಎಂದು ಕರೆದರು. “ನಾನು ಆಘಾತಕ್ಕೊಳಗಾಗಿದ್ದೇನೆ. ಈ ನಿರ್ಣಾಯಕ ಕ್ಷಣದಲ್ಲಿ ರಾಬರ್ಟ್ ಫಿಕೊಗೆ ಹೆಚ್ಚಿನ ಶಕ್ತಿ ಮತ್ತು ಚೇತರಿಕೆ ದೊರೆಯಲಿ ಎಂದು ಹಾರೈಸುತ್ತೇನೆ” ಎಂದರು.

ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿರುವ ರಾಬರ್ಟ್ ಫಿಕೊ ಮತ್ತು ಅವರ ಎಡಪಂಥೀಯ ಸ್ಮರ್ (ದಿಕ್ಕು) ಪಕ್ಷವು ಸ್ಲೋವಾಕಿಯಾದಲ್ಲಿ ಸೆಪ್ಟೆಂಬರ್ 30ರಂದು ನಡೆದ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿತು. ಈ ಗೆಲುವು ಫಿಕೊ ಅವರ ರಾಜಕೀಯ ಪುನರಾಗಮನಕ್ಕೆ ದಾರಿಯಾಗಿದೆ. ಅವರು ರಷ್ಯಾದ ಪರ ಮತ್ತು ಅಮೇರಿಕನ್ ವಿರೋಧಿ ನಿಲುವನ್ನು ಹೊಂದಿದ್ದಾರೆ. ಫಿಕೊ ನೀತಿಗಳನ್ನು ಪ್ರತಿಭಟಿಸಲು ಸಾವಿರಾರು ಜನರು ರಾಜಧಾನಿಯಲ್ಲಿ ಮತ್ತು ಸ್ಲೋವಾಕಿಯಾದಾದ್ಯಂತ ಪದೇ ಪದೆ ರ್ಯಾಲಿ, ಪ್ರತಿಭಟನೆ ಮಾಡಿದ್ದಾರೆ.

ರಾಬರ್ಟ್ ಫಿಕೊ ಹತ್ಯೆಯ ಯತ್ನದ ಬಗ್ಗೆ ವಿಶ್ವದಾದ್ಯಂತ ಹಲವಾರು ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. Xನಲ್ಲಿನ ಪೋಸ್ಟ್‌ನಲ್ಲಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ʼಯುರೋಪಿಯನ್ ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಳವಿಲ್ಲʼ ಎಂದು ಹೇಳಿದರು.

ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರು, “ನಮ್ಮ ಪ್ರಜಾಪ್ರಭುತ್ವಗಳಲ್ಲಿ ದ್ವೇಷ ಮತ್ತು ಹಿಂಸಾಚಾರಕ್ಕೆ ಆಸ್ಪದ ಕೊಡಬಾರದು. ಅತ್ಯಂತ ನಿರ್ಣಯದಿಂದ ಇದರ ವಿರುದ್ಧ ಹೋರಾಡಬೇಕು” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Continue Reading

ಕರ್ನಾಟಕ

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

Karnataka Weather: ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

VISTARANEWS.COM


on

Koo

ಬೆಂಗಳೂರು: ಮೇ 16 ರಂದು ರಾಜ್ಯದ ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (50-60 ಕಿ.ಮೀ) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುರುವಾರ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ (Karnataka Weather) ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ.

ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ, ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading
Advertisement
Cannes 2024 Urvashi Rautela pink gown remind Deepika Padukone
ಬಾಲಿವುಡ್3 mins ago

Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

Sanju Samson
ಕ್ರೀಡೆ13 mins ago

Sanju Samson: ಸತತ 4 ಸೋಲು; ಬೇಸರ ಹೊರಹಾಕಿದ ನಾಯಕ ಸಂಜು ಸ್ಯಾಮ್ಸನ್

Suspicious Case in Bengaluru
ಬೆಂಗಳೂರು49 mins ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Star Suvarna HuAnthiya UhuuAnthiya new celebrity game show
ಕಿರುತೆರೆ53 mins ago

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Hepatitis-A
ದೇಶ53 mins ago

Hepatitis-A: ಅಲರ್ಟ್‌..ಅಲರ್ಟ್‌! ಜನರ ನಿದ್ದೆಗೆಡಿಸ್ತಿದೆ ಮತ್ತೊಂದು ಡೆಡ್ಲಿ ವೈರಸ್‌

Anita Goyal
ದೇಶ54 mins ago

Anita Goyal: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಪತ್ನಿ ಅನಿತಾ ಗೋಯಲ್‌ ನಿಧನ

hunsur road accident
ಕ್ರೈಂ1 hour ago

Road Accident: ಸರಣಿ ಅಪಘಾತ, ಬೈಕ್ ಸವಾರ ಸಾವು; ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

A Movie Re-ReleaseActress Chandni relives memories
ಸ್ಯಾಂಡಲ್ ವುಡ್1 hour ago

A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

Sunil Chhetri
ಕ್ರೀಡೆ1 hour ago

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Aishwarya Rai Injured heads to Cannes Film Festival with daughter
ಬಾಲಿವುಡ್2 hours ago

Cannes 2024: ಐಶ್ವರ್ಯಾ ರೈ ಕೈಗೆ ಪೆಟ್ಟು: ಮಗಳ ಜತೆ ಕಾನ್ ಫಿಲ್ಮ್ ಫೆಸ್ಟಿವಲ್‌ನತ್ತ ಹೊರಟ ನಟಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌