Elephant Death: ಕ್ಯೂಟ್‌ ಆಗಿ ಆಟವಾಡುತ್ತಿದ್ದ ತಬ್ಬಲಿ ಮರಿಯಾನೆಗೆ ಕೊನೆಗೂ ಸಿಗಲಿಲ್ಲ ತಾಯಿ - Vistara News

ಕೊಡಗು

Elephant Death: ಕ್ಯೂಟ್‌ ಆಗಿ ಆಟವಾಡುತ್ತಿದ್ದ ತಬ್ಬಲಿ ಮರಿಯಾನೆಗೆ ಕೊನೆಗೂ ಸಿಗಲಿಲ್ಲ ತಾಯಿ

Elephant Death: ಕೊಡಗಿನ ಕಾಫಿ ತೋಟಕ್ಕೆ ದಾಳಿ ಮಾಡಿದ್ದ ಆನೆ ಹಿಂಡನ್ನು ಓಡಿಸುತ್ತಿದ್ದಾಗ, ಮರಿಯಾನೆ ಅದರ ತಾಯಿಯಿಂದ ಬೇರ್ಪಟ್ಟಿತ್ತು. ತಾಯಿಯಿಂದ ಬೇರ್ಪಟ್ಟು ಅಲೆದಾಡುತ್ತಿದ್ದ ಈ ಆನೆಯನ್ನು ಅದರ ತಾಯಿಯೊಂದಿಗೆ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಸಾಕಷ್ಟು ಪ್ರಯತ್ನ ಪಟ್ಟಿದ್ದರು.

VISTARANEWS.COM


on

elephant death in dubare camp
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಡಗು: ತಾಯಿ ಕಾಡಾನೆಯಿಂದ ಬೇರ್ಪಟ್ಟು ತಬ್ಬಲಿಯಾಗಿದ್ದ ಮರಿಯಾನೆ (Elephant cub) ಕೊನೆಗೂ ತಾಯಿಯನ್ನು ಕಾಣದೆ ಸಾವು (Elephant Death) ಕಂಡಿದೆ. ಕೊಡಗು ಜಿಲ್ಲೆಯ ದುಬಾರೆ (Dubare) ಸಾಕಾನೆ ಶಿಬಿರದಲ್ಲಿ (Elephant camp) ಘಟನೆ ನಡೆದಿದೆ.

ಕೊಡಗಿನ ಕಾಫಿ ತೋಟಕ್ಕೆ ದಾಳಿ ಮಾಡಿದ್ದ ಆನೆ ಹಿಂಡನ್ನು ಓಡಿಸುತ್ತಿದ್ದಾಗ, ಮರಿಯಾನೆ ಅದರ ತಾಯಿಯಿಂದ ಬೇರ್ಪಟ್ಟಿತ್ತು. ತಾಯಿಯಿಂದ ಬೇರ್ಪಟ್ಟು ಅಲೆದಾಡುತ್ತಿದ್ದ ಈ ಆನೆಯನ್ನು ಅದರ ತಾಯಿಯೊಂದಿಗೆ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಸಾಕಷ್ಟು ಪ್ರಯತ್ನ ಪಟ್ಟಿದ್ದರು.

ತಾಯಿಗಾಗಿ ಅಲೆದು ನಿತ್ರಾಣಗೊಂಡಿದ್ದ 5 ತಿಂಗಳ ಮರಿಯಾನೆಯನ್ನು ರಕ್ಷಿಸಿ ದುಬಾರೆ ಶಿಬಿರಕ್ಕೆ ಶಿಫ್ಟ್ ಮಾಡಲಾಗಿತ್ತು. ಗಂಜಿ ಹಾಲು ನೀಡಿ ಆರೈಕೆ ಮಾಡಲು ಯತ್ನಿಸಲಾಗಿತ್ತು. ವನ್ಯಜೀವಿ ವೈದ್ಯ ಡಾ. ಚೆಟ್ಟಿಯಪ್ಪ ಚಿಕಿತ್ಸೆ ನೀಡುತ್ತಿದ್ದರು. ಕಳೆದ ಕೆಲವು ದಿನಗಳಿಂದ ಕೊಂಚ ಚೇತರಿಸಿಕೊಂಡಿದ್ದ ಮರಿ ಆನೆ ಇದಿಗ ದಿಢೀರ್ ಸಾವು ಕಂಡಿದೆ.

ಅರಣ್ಯ ಇಲಾಖೆಯಿಂದ ಮೃತ ಆನೆ ಮರಿಯ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ. 25 ದಿನಗಳಿಂದ ಮರಿಯಾನೆ ತಾಯಿಗಾಗಿ ಕಾಡು- ಊರು ಅಲೆದಿತ್ತು. ಎಲ್ಲಿಯೂ ತಾಯಿ ಸಿಗದ ಹಿನ್ನೆಲೆಯಲ್ಲಿ ಒಂಟಿಯಾಗಿದ್ದ ಮರಿ ಆನೆ ಆಹಾರ ಸೇವಿಸುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ರಕ್ಷಣೆಯಾದರೂ ಕೂಡ ಬದುಕುಳಿಯದ ಮರಿ‌ ಆನೆ ದುರಂತ ಅಂತ್ಯ ಕಂಡಿದೆ. ದುಬಾರೆ ಶಿಬಿರದ ಸಿಬ್ಬಂದಿ ಮರಿಯಾನೆಗಾಗಿ ಕಣ್ಣೀರು ಮಿಡಿದಿದ್ದಾರೆ.

ಕುಡಿಯಲು ನೀರು ಸಿಗದೆ ಕಾಡಾನೆಗಳು ಸಾವು

ರಾಮನಗರ: ಕನಕಪುರ ತಾಲೂಕಿನ ಯಲವನತ್ತ ಅರಣ್ಯಪ್ರದೇಶ ಹಾಗೂ ಬೆಟ್ಟಹಳ್ಳಿ ಬೀಟ್‌ನಲ್ಲಿ ಕಾಡಾನೆಗಳು (Elephants Death) ಮೃತಪಟ್ಟಿವೆ. 35 ಹಾಗೂ 14 ವರ್ಷದ ಎರಡು ಕಾಡಾನೆಗಳು ಉಸಿರು ನಿಲ್ಲಿಸಿದೆ. ಬಿಸಿಲಿನ ಬೇಗೆ ತಾಳಲಾರದೆ ಕಾಡಾನೆಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಮನಗರದ ಕನಕಪುರ ವಲಯದ ಬೆಟ್ಟಹಳ್ಳಿ ಬೀಟ್‌ನಲ್ಲಿ ಘಟನೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ 14 ವರ್ಷದ ಒಂಟಿ ಸಲಗ ನಿತ್ರಾಣಗೊಂಡಿತ್ತು. ನಿತ್ರಾಣಗೊಂಡಿದ್ದ ಕಾಡಾನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಿದ್ದರು. ಆದರೆ ಇದೀಗ ಕಾಡಂಚಿನಲ್ಲಿ ಕೊನೆಯುಸಿರೆಳೆದಿದೆ.

ಸ್ಥಳಕ್ಕೆ ಡಿಎಫ್‌ಓ ರಾಮಕೃಷ್ಣಪ್ಪ, ಕನಕಪುರ ಎಸಿಎಫ್ ಗಣೇಶ್ ಹಾಗು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕಾಡಾನೆ ಸಾವಿನ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ.

elephants Death in Ramanagara

ಕಾಡಿನಲ್ಲಿ ಕುಡಿಯಲು ನೀರು ಸಿಗದೆ ಪರದಾಡಿ ನಿತ್ರಾಣಗೊಂಡು ಮೃತಪಟ್ಟಿರುವ ಶಂಕೆ ಇದೆ. 14 ವರ್ಷದ ಕಾಡಾನೆ ಕಳೆದ ಮೂರು ದಿನಗಳ ಹಿಂದೆ ನಿತ್ರಾಣಗೊಂಡಿತ್ತು. ಇದೀಗ ನಿತ್ರಾಣಗೊಂಡಿದ್ದ ಕಾಡಾನೆ ಸೇರಿ ಮತ್ತೊಂದು 35 ವರ್ಷದ ಕಾಡಾನೆಯೂ ಮೃತಪಟ್ಟಿದೆ. ಕನಕಪುರ -ತಮಿಳುನಾಡು ಗಡಿಭಾಗ ಯಲವನತ್ತ ಕಾಡಂಚಿನಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Elephant Attack: ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿ ಮೇಲೆರಗಿ ಕೊಂದುಹಾಕಿದ ಒಂಟಿ ಸಲಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Coastal Weather: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22 ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆಯಿದೆ.

VISTARANEWS.COM


on

Karnataka weather Forecast
Koo

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ಗುಡುಗು ಸಹಿತ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ (Coastal Weather) ನಿರೀಕ್ಷೆಯಿದೆ.

ಹಲವೆಡೆ ಉತ್ತಮ ಮಳೆ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ಬೆಳಗ್ಗೆ ಮತ್ತು ಸಂಜೆ ಉತ್ತಮ ಮಳೆ ಸುರಿದಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣದಿಂದ ಕೂಡಿತ್ತು. ಮಂಗಳೂರಿನಲ್ಲಿ ಭಾನುವಾರ 32.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಕಡಿಮೆ ಇತ್ತು. 24.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಕಡಿಮೆ ಇತ್ತು.

ಉಡುಪಿಯಲ್ಲಿ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ಭಾನುವಾರ ಬೆಳಗಿನಜಾವದವರೆಗೂ ನಿರಂತರ ಮಳೆ ಸುರಿದಿದೆ. ಇನ್ನು ಉಡುಪಿ, ಮಣಿಪಾಲ, ಮಲ್ಪೆ, ಬ್ರಹ್ಮಾವರ, ಕೋಟ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಕಾಪು, ಶಿರ್ವ, ಪಡುಬಿದ್ರಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಹಲವೆಡೆ ಗಾಳಿ-ಮಳೆಗೆ ಮನೆಗಳಿಗೆ ಹಾನಿ ಸಂಭವಿಸಿದೆ. ವಿದ್ಯುತ್‌ ಕಂಬ, ತಂತಿಗಳಿಗೆ ಹಾನಿ ಸಂಭವಿಸಿದೆ.

ಕೊಡಗಿನಲ್ಲಿ ಉತ್ತಮ ಮಳೆ

ಕೊಡಗಿನ ವಿವಿಧೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ 23ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Bengaluru Rain : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ಜತೆಗೆ ಬಿಸಿಲಿನಿಂದ ತತ್ತರಿಸಿದ್ದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ4 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ4 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20245 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ5 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ5 hours ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ6 hours ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ6 hours ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ7 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ7 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ7 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌